ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ
ಕರ್ನಾಟಕ
ಬೆಂಗಳೂರಲ್ಲಿ ಡೆಂಘೀ ಗಣನೀಯ ಇಳಿಕೆ

ಬೆಂಗಳೂರಲ್ಲಿ ಡೆಂಘೀ ಗಣನೀಯ ಇಳಿಕೆ

ಮಳೆಗಾಲದ ಆರಂಭದಲ್ಲಿಯೇ ಡೆಂಘೀ ಪ್ರಕರಣಗಳು ಬೆಳಕಿಗೆ ಬರುತ್ತಿದ್ದಂತೆಯೇ ಅಧಿಕಾರಿಗಳು ನಿಯಂತ್ರಿಸಲು ಕ್ರಮ ಕೈಗೊಂಡಿದ್ದರಿಂದ ಡೆಂಘೀ ಪ್ರಕರಣಗಳಲ್ಲಿ ಇಳಿಕೆ ಕಂಡಿದ್ದು, ಶೇ.50ರಷ್ಟು ಪ್ರಕರಣಗಳು ಕಡಿಮೆಯಾಗಿದೆ. ಜನವರಿ 1 ರಿಂದ ಜುಲೈ 23 ರವರೆಗೆ ನಗರದಲ್ಲಿ ಕೇವಲ 1676 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ.

Street Dog attack: ಬೆಂಗಳೂರಿನಲ್ಲಿ ಬೀದಿನಾಯಿಗಳ ಬರ್ಬರ ದಾಳಿಗೆ ವೃದ್ಧ ಬಲಿ

ಬೆಂಗಳೂರಿನಲ್ಲಿ ಬೀದಿನಾಯಿಗಳ ಬರ್ಬರ ದಾಳಿಗೆ ವೃದ್ಧ ಬಲಿ

Bengaluru News: ನಿನ್ನೆ ಬೆಳಿಗ್ಗೆ ವಾಕಿಂಗ್ ಹೋಗುತ್ತಿದ್ದಾಗ ಸೀತಪ್ಪ ಅವರ ಮೇಲೆ ಬೀದಿ ನಾಯಿಗಳು ದಾಳಿ ಮಾಡಿವೆ. ಓಡಲಾಗದೆ ಬಿದ್ದ ವೃದ್ಧ ಸೀತಪ್ಪ ಅವರ ಕೈ ಕಾಲು ಮತ್ತು ಮುಖಕ್ಕೆ ಬೀದಿ ನಾಯಿಗಳು ಕಚ್ಚಿ ಗಂಭೀರವಾಗಿ ಗಾಯಗೊಳಿಸಿದ್ದವು. ಚಿಕಿತ್ಸೆಗಾಗಿ ಅವರನ್ನು ಆಸ್ಪತ್ರೆಗೆ ಒಯ್ಯಲಾಗಿತ್ತು. ಇದೀಗ ಚಿಕಿತ್ಸೆ ಫಲಕಾರಿ ಆಗದೆ ಸೀತಪ್ಪ ಕೊನೆಯುಸಿರೆಳೆದಿದ್ದಾರೆ.

Gold Price Today:ಚಿನ್ನದ ದರದಲ್ಲಿ ಕೊಂಚ ಇಳಿಕೆ; ಇಂದಿನ ರೇಟ್‌ ಚೆಕ್‌ ಮಾಡಿ

ಇಂದು ಚಿನ್ನದ ದರ ಎಷ್ಟಿದೆ? ಇಲ್ಲಿ ಚೆಕ್‌ ಮಾಡಿ

Gold Price Today on 29th July 2025: ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆಯಲ್ಲಿ 10 ರೂ. ಇಳಿಕೆ ಕಂಡು ಬಂದಿದೆ. ಆ ಮೂಲಕ ಆ ಮೂಲಕ 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ 9,150 ರೂ ಗೆ ಬಂದು ನಿಂತಿದೆ. 24 ಕ್ಯಾರಟ್‌ 1 ಗ್ರಾಂ ಚಿನ್ನ 11 ರೂ ಇಳಿಕೆ ಕಂಡಿದ್ದು, 9,982 ರೂ. ಆಗಿದೆ.

Raichur news: ಕಾಂಗ್ರೆಸ್‌ ಕಾರ್ಯಕ್ರಮದ ಬ್ಯಾನರ್‌ನಲ್ಲಿ ಸಿಎಂ, ಡಿಸಿಎಂ ಫೋಟೋ ಮಾಯ; ʼಕ್ಷಮಿಸಿʼ ಎಂದ ಸೌಮ್ಯಾ ರೆಡ್ಡಿ

ಕಾಂಗ್ರೆಸ್‌ ಕಾರ್ಯಕ್ರಮದ ಬ್ಯಾನರ್‌ನಲ್ಲಿ ಸಿಎಂ, ಡಿಸಿಎಂ ಫೋಟೋ ಮಾಯ!

Women Congress: ರಾಯಚೂರಿನಲ್ಲಿ ನಡೆದ ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಾವೇಶದಲ್ಲಿ ಈ ಘಟನೆ ನಡೆದಿದೆ. ರಾಜ್ಯ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಸೌಮ್ಯಾ ರೆಡ್ಡಿ ನೇತೃತ್ವದಲ್ಲಿ ಈ ಕಾರ್ಯಕ್ರಮ ನಡೆದಿತ್ತು. ಕಾರ್ಯಕ್ರಮದ ಬ್ಯಾನರ್‌ನಲ್ಲಿ ರಾಷ್ಟ್ರ, ರಾಜ್ಯ, ಜಿಲ್ಲೆ ಹಾಗೂ ಸ್ಥಳೀಯ ಮಟ್ಟದ ನಾಯಕರ ಫೋಟೋಗಳು ಕಂಡುಬಂದವಾದರೂ, ಸಿಎಂ, ಡಿಸಿಎಂ ಚಿತ್ರಗಳು ಕಾಣಿಸಲಿಲ್ಲ.

Federal Bank: ಫೆಡರಲ್ ಬ್ಯಾಂಕ್‌ನಿಂದ ಇಕಾಮ್‌ ಕಾರ್ಡ್ ವಹಿವಾಟುಗಳಿಗೆ ಬಯೊಮೆಟ್ರಿಕ್‌ ವ್ಯವಸ್ಥೆ - ಭಾರತದಲ್ಲಿ ಇದೇ ಮೊದಲು

ಫೆಡರಲ್ ಬ್ಯಾಂಕ್‌ನಿಂದ ಹೊಸ ಪ್ರಯತ್ನ

ಪ್ರಮುಖ ಖಾಸಗಿ ಬ್ಯಾಂಕ್ ಆಗಿರುವ ಫೆಡರಲ್ ಬ್ಯಾಂಕ್ ಫಿನ್‌ಟೆಕ್‌ ಪಾಲುದಾರರಾದ M2P ಮತ್ತು ಮಿಂಕಾಸುಪೇ (MinkasuPay) ಜೊತೆಗೂಡಿ ಭಾರದತದಲ್ಲಿ ಮೊದಲ ಬಾರಿಗೆ ಇ ಕಾಮರ್ಸ್ ಕಾರ್ಡ್ ವಹಿವಾಟುಗಳಿಗೆ ಬಯೊಮೆಟ್ರಿಕ್‌ ದೃಢೀಕರಣ ವ್ಯವಸ್ಥೆಯನ್ನು ಪರಿಚಯಿಸಿದೆ. ಈ ಬಯೊಮೆಟ್ರಿಕ್ ವ್ಯವಸ್ಥೆಯನ್ನು ಒಟಿಪಿ ವ್ಯವಸ್ಥೆಗೆ ಬದಲಿಯಾಗಿ ಸೃಷ್ಟಿಸಲಾಗಿದ್ದು ವಹಿವಾಟಿನ ಸಮಯವನ್ನು 3- 4 ಸೆಕೆಂಡ್‌ಗೆ ತಗ್ಗಿಸಿದೆ.

CM Siddaramaiah: ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿರುವುದು 5 ವರ್ಷಕ್ಕೆ: ಬಸವರಾಜ ರಾಯರೆಡ್ಡಿ

ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿರುವುದು 5 ವರ್ಷಕ್ಕೆ: ಬಸವರಾಜ ರಾಯರೆಡ್ಡಿ

CM Siddaramaiah: ಯಾರು ಬೇಕಾದ್ರೂ ಸಿಎಂ ಆಗಬಹುದು, ಅದರಲ್ಲಿ ತಪ್ಪಿಲ್ಲ. ಆದರೆ ಈಗ ಆ ಸಂದರ್ಭ ಬಂದಿಲ್ಲ ಅಂತ ಹೇಳಿದ್ದೇನೆ. ಮಲ್ಲಿಕಾರ್ಜುನ್ ಖರ್ಗೆ ಮುಖ್ಯಮಂತ್ರಿ ಆಗುವುದಕ್ಕೆ ಅರ್ಹ ವ್ಯಕ್ತಿ. ಮಲ್ಲಿಕಾರ್ಜುನ್ ಖರ್ಗೆ ಪ್ರಧಾನಿ ಆಗಲಿ ಅಂತ ವಿಶ್ ಮಾಡ್ತೀನಿ ಎಂದು ಬಸವರಾಜ ರಾಯರೆಡ್ಡಿ ಹೇಳಿದ್ದಾರೆ.

A Khata: ಲಂಚ ಕೊಡಬೇಡಿ, ಸದ್ಯದಲ್ಲೇ ಎ- ಖಾತಾ ವ್ಯವಸ್ಥೆ ಆನ್‌ಲೈನ್‌

ಲಂಚ ಕೊಡಬೇಡಿ, ಸದ್ಯದಲ್ಲೇ ಎ- ಖಾತಾ ವ್ಯವಸ್ಥೆ ಆನ್‌ಲೈನ್‌

A Khata: ಎ ಖಾತಾ ಮಾಡಿಸಿಕೊಳ್ಳಲು ಯಾವುದೇ ಬಿಬಿಎಂಪಿ ಕಚೇರಿಗೆ ಹೋಗಬೇಡಿ ಮತ್ತು ಯಾವುದೇ ಮಧ್ಯವರ್ತಿಗಳನ್ನು ಸಂಪರ್ಕಿಸಬೇಡಿ. ಯಾರಿಗೂ ಲಂಚ ನೀಡಬೇಡಿ. ಆನ್‌ಲೈನ್ ವ್ಯವಸ್ಥೆಯನ್ನು ಶೀಘ್ರದಲ್ಲೇ ಪ್ರಾರಂಭಿಸಲಾಗುವುದು ಎಂದು ಬಿಬಿಎಂಪಿ ಆಯುಕ್ತ ಎಂ ಮಹೇಶ್ವರ ರಾವ್ ತಿಳಿಸಿದ್ದಾರೆ.

Dharmasthala: ಧರ್ಮಸ್ಥಳದ ಕಾಡಿನಲ್ಲಿ ಶವ ಹೂಳಿದ ಜಾಗಗಳನ್ನು ತೋರಿಸಿದ ಮುಸುಕುಧಾರಿ

ಧರ್ಮಸ್ಥಳದ ಕಾಡಿನಲ್ಲಿ ಶವ ಹೂಳಿದ ಜಾಗಗಳನ್ನು ತೋರಿಸಿದ ಮುಸುಕುಧಾರಿ

Mass burial case: ಧರ್ಮಸ್ಥಳದ ನೇತ್ರಾವತಿ ನದಿ ಸ್ನಾನಘಟ್ಟದ ಪಕ್ಕದ ಕಾಡಿನಲ್ಲಿ ಈಗಾಗಲೇ ತಾನು ತಲೆಬುರುಡೆಯನ್ನು ತಂದ ಸ್ಥಳ, ಶವ ಹೂಳಲಾಗಿದ್ದ ಸ್ಥಳದಲ್ಲಿ ಇನ್ನಷ್ಟು ಮೂಳೆಗಳು ಹಾಗೂ ಇನೂ ಕೆಲವು ಸಮಾಧಿ ಸ್ಥಳಗಳನ್ನು ಎಸ್‌ಐಟಿಗೆ ತೋರಿಸಿದ್ದಾನೆ. ಅದರ ಆಧಾರದ ಮೇಲೆ ಅರಣ್ಯದ ಒಳಭಾಗದಲ್ಲಿ ಸಮಾಧಿಗಳ ಮೇಲೆ ಗುರುತು ಮಾಡಲಾಗಿದೆ.

Lokayukta Raid: ಚಿತ್ರದುರ್ಗ, ಚಿಕ್ಕಬಳ್ಳಾಪುರದಲ್ಲಿ ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ದಾಳಿ

ಚಿತ್ರದುರ್ಗ, ಚಿಕ್ಕಬಳ್ಳಾಪುರದಲ್ಲಿ ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ದಾಳಿ

Chitradurga: ಇಬ್ಬರು ಅಧಿಕಾರಿಗಳ ವಿರುದ್ಧ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಸಂಪಾದನೆ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ಲೋಕಾಯುಕ್ತ ಪೊಲೀಸರು ತೀವ್ರ ತನಿಖೆ ನಡೆಸುತ್ತಿದ್ದಾರೆ. ದಾಖಲೆಗಳ ಪರಿಶೀಲನೆ ಮುಂದುವರಿದಿದ್ದು, ಮುಂದಿನ ಕಾನೂನು ಕ್ರಮಕ್ಕಾಗಿ ವರದಿ ಸಿದ್ಧಪಡಿಸಲಾಗುತ್ತಿದೆ. ಚಿತ್ರದುರ್ಗ, ಚಿಕ್ಕಬಳ್ಳಾಪುರದಲ್ಲಿ ದಾಳಿಗಳು ನಡೆದಿವೆ.

Himavad Gopalaswamy Betta: ಹಿಮವದ್‌ ಗೋಪಾಲಸ್ವಾಮಿ ಬೆಟ್ಟ ಎರಡು ದಿನ ಪ್ರವಾಸಿಗರಿಗೆ ಬಂದ್‌

ಹಿಮವದ್‌ ಗೋಪಾಲಸ್ವಾಮಿ ಬೆಟ್ಟ ಎರಡು ದಿನ ಪ್ರವಾಸಿಗರಿಗೆ ಬಂದ್‌

Chamarajanagara: ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ತೆರಳುವ ರಸ್ತೆ ಕುಸಿದಿದೆ. ಭಾರಿ ಮಳೆಯಿಂದ ಹಲೆವೆಡೆ ಕುಸಿತ ಸಂಭವಿಸಿದೆ. ಈ ಪೈಕಿ ಬೆಟ್ಟದ ರಸ್ತೆಯ ಪ್ಯಾರಪಿಟ್ ವಾಲ್ (ಅಡ್ಡಗೋಡೆ) ಕುಸಿದಿರುವ ಕಾರಣ ವಾಹನಗಳಿಗೆ ಸಾಗಲು ಸಾಧ್ಯವಾಗುತ್ತಿಲ್ಲ. ದುರಸ್ತಿ ಕಾರ್ಯಗಳಿಗಾಗಿ ರಸ್ತೆಯನ್ನು ಎರಡು ದಿನ ಮುಚ್ಚಲಾಗುತ್ತಿದೆ.

Drugs Factory: ಮೈಸೂರಿನಲ್ಲಿ ಡ್ರಗ್ಸ್‌ ಫ್ಯಾಕ್ಟರಿ ಪತ್ತೆ, ₹390 ಕೋಟಿಯ ಮಾದಕ ವಸ್ತು ವಶ‌

ಮೈಸೂರಿನಲ್ಲಿ ಡ್ರಗ್ಸ್‌ ಫ್ಯಾಕ್ಟರಿ ಪತ್ತೆ, ₹390 ಕೋಟಿಯ ಮಾದಕ ವಸ್ತು ವಶ‌

ಮೈಸೂರು ರಿಂಗ್‌ ರಸ್ತೆಯ ಕಟ್ಟಡದ ಮುಂಭಾಗವು ಹೋಟೆಲ್ ಮತ್ತು ಗ್ಯಾರೇಜ್‌ನಂತೆ ಕಾಣುತ್ತಿತ್ತು. ಆದರೆ, ಅದನ್ನು ಪ್ರವೇಶಿಸಿದಾಗ, ನಮಗೆ ಮೆಫೆಡ್ರೋನ್ ಉತ್ಪಾದನಾ ಘಟಕ ಸಿಕ್ಕಿತು. ಇಲ್ಲಿಂದ ಅಕ್ರಮವಾಗಿ ಮುಂಬೈ ಮತ್ತು ಪಕ್ಕದ ಜಿಲ್ಲೆಗಳಿಗೆ ಸರಬರಾಜು ಮಾಡಲಾಗುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

Karnataka Weather: ಇಂದು ಕರಾವಳಿ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್; ವ್ಯಾಪಕ ಮಳೆ ನಿರೀಕ್ಷೆ!

ಇಂದು ಕರಾವಳಿ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್; ವ್ಯಾಪಕ ಮಳೆ ನಿರೀಕ್ಷೆ!

weather Forecast: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳು ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಹಗುರ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 28°C ಮತ್ತು 20°C ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು ವಿಮಾನ ನಿಲ್ದಾಣ ಸೇವಾ ನಿಯಮಿತ ವತಿಯಿಂದ ತಿರುಚಿನಾಪಳ್ಳಿ ವಿಮಾನ ನಿಲ್ದಾಣದಲ್ಲಿ ಓ’ವೆಟ್ರಾ ಲೌಂಜ್ ಪ್ರಾರಂಭ

ತಿರುಚಿನಾಪಳ್ಳಿ ವಿಮಾನ ನಿಲ್ದಾಣದಲ್ಲಿ ಓ’ವೆಟ್ರಾ ಲೌಂಜ್ ಪ್ರಾರಂಭ

ಸೌಕರ್ಯ, ಸಂಸ್ಕೃತಿ ಮತ್ತು ಅನುಕೂಲತೆಯ ಸಮ್ಮಿಶ್ರಣವನ್ನು ಒದಗಿಸುವಂತೆ ವಿನ್ಯಾಸಗೊಳಿಸ ಲಾದ ಓ’ವೆಟ್ರಾ, ತಿರುಚಿರಾಪಳ್ಳಿ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಅನುಭವವನ್ನು ಹೆಚ್ಚಿಸಲು ಸಜ್ಜಾಗಿದೆ. ಪ್ರಯಾಣಿಕರು ತಮ್ಮ ಪ್ರಯಾಣದ ಮೊದಲು ವಿಶ್ರಾಂತಿ, ಊಟ ಮತ್ತು ಅತ್ಯುತ್ತಮ ಅನುಭವ ಪಡೆಯುವ ವಿಧಾನವನ್ನು ಈ ಸೌಲಭ್ಯವನ್ನು ಒದಗಿಸಲಿದೆ.

94ಸಿ ಅಡಿಯಲ್ಲಿ ನಿವೇಶನ ನೋಂದಣಿಗಾಗಿ ಹೋರಾಟ: ಮಾಜಿ ಸಚಿವೆ ಬಿ.ಟಿ.ಲಲಿತಾ ನಾಯಕ್

ಹಿಂದುಳಿದ ವರ್ಗ ಮತ್ತು ಅಲ್ಪ ಸಂಖ್ಯಾತರ ಕ್ಷೇಮಾಭಿವೃದ್ಧಿ ಸಂಘದಿಂದ ಸಮಾವೇಶ

ರಾಜ್ಯ ಸರ್ಕಾರ ದಾಸರಹಳ್ಳಿ ವಿಧಾನ ಸಭಾ ಕ್ಷೇತ್ರದ ಮಹಾಲಕ್ಷ್ಮಿ ನಗರ, ಮಂಜುನಾಥ ನಗರದಲ್ಲಿ 94ಸಿ ಅಡಿಯಲ್ಲಿ ನಿವೇಶನ ನೋಂದಣಿ ಮಾಡದೇ ನಿರ್ಲಕ್ಷ್ಯ ವಹಿಸು ತ್ತಿರುವ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಮಾಜಿ ಸಚಿವೆ ಬಿ.ಟಿ. ಲಲಿತಾ ನಾಯಕ್, ಕೂಡಲೇ ಬಡವರಿಗೆ ನಿವೇಶನಗಳ ಹಕ್ಕು ಗಳನ್ನು ಕಲ್ಪಿಸಿ ಕೊಡಬೇಕು ಎಂದು ಆಗ್ರಹಿಸಿದ್ದಾರೆ.

ಕರ್ನಾಟಕಕ್ಕೆ ಫ್ರೆಂಚ್ ರುಚಿ ತಂದಿರುವ ಕ್ರೊನೆನ್ ಬರ್ಗ್ 1664 ಬ್ಲಾಂಕ್

ಕರ್ನಾಟಕಕ್ಕೆ ಫ್ರೆಂಚ್ ರುಚಿಯನ್ನು ತಂದಿರುವ ಕ್ರೊನೆನ್ ಬರ್ಗ್ 1664 ಬ್ಲಾಂಕ್

ಫ್ರೆಂಚ್ ಸೂಕ್ಷ್ಮತೆಯೊಂದಿಗೆ ರೂಪಿಸಲಾದ 1664 ಬ್ಲಾಂಕ್ ಸೂಕ್ಷ್ಮವಾಗಿ ಸಮತೋಲನಗೊಳಿಸಿದ ರುಚಿಯನ್ನು ನೀಡುತ್ತದೆ. ಎಬಿವಿ ಶೇ.5ಕ್ಕಿಂತ ಕಡಿಮೆ ಇರುವ ಈ ಬಿಯರ್ ಹಗುರ ಮತ್ತು ಮೃದು ವಾಗಿದ್ದು ಸಿಟ್ರಸ್, ವಿಶೇಷ ಹಣ್ಣುಗಳು, ಕೊತ್ತಂಬರಿ ಮತ್ತು ಬಿಳಿ ಪೀಚ್ ಹಣ್ಣಿನ ಸೂಕ್ಷ್ಮ ರುಚಿ ನೀಡು ತ್ತದೆ. ಇದರ ತಾಜಾ ಗುಣವು ಫೈನ್ ಹಾಪ್ಸ್ ರುಚಿಯೊಂದಿಗೆ ಬೆರೆತು ವಿಶಿಷ್ಟವಾಗಿ ಆನಂದಿಸಬಲ್ಲ ಪಾನೀಯದ ಅನುಭವ ನೀಡುತ್ತದೆ

Cancer Day Care Centre: ದಕ್ಷಿಣ ಕನ್ನಡ ಜಿಲ್ಲೆಗೆ ಕ್ಯಾನ್ಸರ್ ಡೇ ಕೇರ್ ಸೆಂಟರ್ ಮಂಜೂರು ಮಾಡಿದ ಕೇಂದ್ರ ಸರ್ಕಾರ

ದಕ್ಷಿಣ ಕನ್ನಡ ಜಿಲ್ಲೆಗೆ ಕ್ಯಾನ್ಸರ್ ಡೇ ಕೇರ್ ಸೆಂಟರ್ ಮಂಜೂರು

Cancer Day Care Centre: ದೇಶದಲ್ಲಿ 200 ಕ್ಯಾನ್ಸರ್ ಡೇ ಕೇರ್ ಸೆಂಟರ್‌ಗಳನ್ನು ಸ್ಥಾಪಿಸಲು ಕೇಂದ್ರ ಮುಂದಾಗಿದ್ದು, ರಾಷ್ಟ್ರೀಯ ಕ್ಯಾನ್ಸರ್ ನೋಂದಣಿ ದತ್ತಾಂಶ ಮತ್ತು ರಾಜ್ಯ ಸರ್ಕಾರ ಸಲ್ಲಿಸಿದ ಪ್ರಸ್ತಾವನೆಗಳ ಆಧಾರದ ಮೇಲೆ ದಕ್ಷಿಣ ಕನ್ನಡ ಸೇರಿ ಕರ್ನಾಟಕದ 16 ಜಿಲ್ಲೆಗಳನ್ನು ಆಯ್ಕೆ ಮಾಡಲಾಗಿದೆ.

Actress Ramya: ದರ್ಶನ್‌ ಫ್ಯಾನ್ಸ್‌ ವಿರುದ್ಧ ರಮ್ಯಾ ಕಾನೂನು ಸಮರ; ಬೆಂಗಳೂರು ಪೊಲೀಸ್ ಕಮಿಷನರ್‌ಗೆ ದೂರು

ದರ್ಶನ್‌ ಫ್ಯಾನ್ಸ್‌ ವಿರುದ್ಧ ರಮ್ಯಾ ಕಾನೂನು ಸಮರ; ಕಮಿಷನರ್‌ಗೆ ದೂರು

Darshan Fans: ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗಬೇಕು ಎಂದಿದ್ದ ತಮಗೆ ಅಶ್ಲೀಲ ಸಂದೇಶ ಕಳುಹಿಸುವವರ ವಿರುದ್ಧ ರಮ್ಯಾ ಕಾನೂನು ಸಮರಕ್ಕೆ ಮುಂದಾಗಿದ್ದಾರೆ. ದರ್ಶನ್ ಫ್ಯಾನ್ಸ್ ವಿರುದ್ಧ ಬೆಂಗಳೂರು ಪೊಲೀಸ್ ಕಮಿಷನರ್ ಕಚೇರಿಗೆ ಆಗಮಿಸಿ ದೂರು ನೀಡಿದರು.

Pralhad Joshi: ರಾಜ್ಯಕ್ಕೆ ಅಧಿಕ ರಸಗೊಬ್ಬರ ಪೂರೈಕೆ ಮಾಡಿ; ಜೋಶಿ ನೇತೃತ್ವದಲ್ಲಿ ಬಿಜೆಪಿ ಸಂಸದರಿಂದ ಜೆ.ಪಿ.ನಡ್ಡಾಗೆ ಮನವಿ

ರಾಜ್ಯಕ್ಕೆ ಅಧಿಕ ರಸಗೊಬ್ಬರ ಪೂರೈಕೆಗೆ ಜೆ.ಪಿ. ನಡ್ಡಾಗೆ ಮನವಿ

Pralhad Joshi: ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್‌ ಜೋಶಿ ಅವರ ನೇತೃತ್ವದಲ್ಲಿ ರಾಜ್ಯ ಬಿಜೆಪಿ ಸಂಸದರೆಲ್ಲ ಒಟ್ಟಾಗಿ ಸೇರಿ ಕೇಂದ್ರ ರಾಸಾಯನಿಕ ಹಾಗೂ ರಸಗೊಬ್ಬರ ಇಲಾಖೆ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾಗಿ ರೈತರ ಹಿತದೃಷ್ಟಿಯಿಂದ ರಾಜ್ಯಕ್ಕೆ ಮತ್ತಷ್ಟು ಅಧಿಕ ಪ್ರಮಾಣದಲ್ಲಿ ರಸಗೊಬ್ಬರ ಪೂರೈಸುವಂತೆ ಮನವಿ ಸಲ್ಲಿಸಿದ್ದಾರೆ.

Wedding Package: ಕಡಿಮೆ ಖರ್ಚಿನಲ್ಲಿ ಮದುವೆಯಾಗುವವರಿಗೆ ವಿಶೇಷ ʼವೆಡ್ಡಿಂಗ್‌ ಪ್ಯಾಕೇಜ್ʼ; ಕೇವಲ 1.50 ಲಕ್ಷ ಇದ್ರೆ ಸಾಕು!

ಕೇವಲ 1.5 ಲಕ್ಷ ವೆಚ್ಚದಲ್ಲಿ ಮದುವೆಯಾಗಬಹುದು; ಇಲ್ಲಿದೆ ವಿಶೇಷ ಪ್ಯಾಕೇಜ್‌!

Wedding Package: ಇವೆಂಟ್‌ ಆರ್ಗನೈಸರ್‌ ಮೈಸೂರು ಮನೀಶ್ ಅವರು ಈ ವಿಶೇಷ ಮದುವೆ ಪ್ಯಾಕೇಜ್‌ ಪರಿಚಯಿಸಿದ್ದಾರೆ. ಮದುವೆ ಕಾರ್ಯಕ್ರಮವನ್ನು ಕೇವಲ 1.5 ಲಕ್ಷ ರೂ.ಗಳಲ್ಲಿ ಸಂಪೂರ್ಣವಾಗಿ ನಾವೇ ವಹಿಸಿಕೊಂಡು ಮಾಡಿಕೊಡುತ್ತೇವೆ ಎಂದು ತಿಳಿಸಿದ್ದಾರೆ. ಮದುವೆ ಪ್ಯಾಕೇಜ್‌ನಲ್ಲಿ ಏನೆಲ್ಲಾ ವ್ಯವಸ್ಥೆ ಇರಲಿದೆ ಎಂಬ ಕುರಿತ ಮಾಹಿತಿ ಇಲ್ಲಿದೆ.

Bengaluru stampede: ಕಾಲ್ತುಳಿತ  ಪ್ರಕರಣ; ನಾಲ್ವರು ಪೊಲೀಸ್‌ ಅಧಿಕಾರಿಗಳ ಅಮಾನತು ಆದೇಶ ಹಿಂಪಡೆದ ರಾಜ್ಯ ಸರ್ಕಾರ

ನಾಲ್ವರು ಪೊಲೀಸ್‌ ಅಧಿಕಾರಿಗಳ ಅಮಾನತು ಆದೇಶ ಹಿಂಪಡೆದ ರಾಜ್ಯ ಸರ್ಕಾರ

Chinnaswamy stampede: ಕಾಲ್ತುಳಿದ ಪ್ರಕರಣದಲ್ಲಿ ಕರ್ತವ್ಯ ಲೋಪ ಹಿನ್ನೆಲೆಯಲ್ಲಿ ಬೆಂಗಳೂರು ಪೊಲೀಸ್ ಕಮಿಷನರ್ ಬಿ.ದಯಾನಂದ್‌, ಡಿಸಿಪಿ ಶೇಖರ್ ಎಚ್.ಟಿ., ಕಬ್ಬನ್ ಪಾರ್ಕ್ ಪೊಲೀಸ್ ಠಾಣೆ ಎಎಸ್‌ಐ ಬಾಲಕೃಷ್ಣ ಹಾಗೂ ಇನ್ಸ್‌ಪೆಕ್ಟರ್​ ಗಿರೀಶ್​ ಅವರನ್ನು ಅಮಾನತು ಮಾಡಲಾಗಿತ್ತು. ಇದೀಗ ಈ ಅಧಿಕಾರಿಗಳ ಅಮಾನತು ಆದೇಶ ಹಿಂಪಡೆಯಲಾಗಿದೆ.

Bengaluru Power Cut: ಜು.30ರಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ಕರೆಂಟ್‌ ಇರಲ್ಲ

ಜು.30ರಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ಕರೆಂಟ್‌ ಇರಲ್ಲ

Bengaluru Power Cut: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ 220/66/11 ಕೆವಿ ಹೆಬ್ಬಾಳ ಉಪಕೇಂದ್ರ ವ್ಯಾಪ್ತಿಯ ಹಲವೆಡೆ ಜು.30ರಂದು ಬುಧವಾರ ಬೆಳಗ್ಗೆ 11 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ. ಈ ಕುರಿತ ವಿವರ ಇಲ್ಲಿದೆ.

DK Shivakumar: ನನಗೆ ಕನಕಪುರದಷ್ಟೇ ಮಂಡ್ಯದ ಏಳೂ ಕ್ಷೇತ್ರಗಳು ಮುಖ್ಯ: ಡಿ.ಕೆ.ಶಿವಕುಮಾರ್

ನನಗೆ ಕನಕಪುರದಷ್ಟೇ ಮಂಡ್ಯದ ಏಳೂ ಕ್ಷೇತ್ರಗಳು ಮುಖ್ಯ: ಡಿ.ಕೆ.ಶಿವಕುಮಾರ್

DK Shivakumar: ನನಗೆ ಕನಕಪುರ ಕ್ಷೇತ್ರ ಎಷ್ಟು ಮುಖ್ಯವೋ, ಅದೇ ರೀತಿ ಮಂಡ್ಯ ಜಿಲ್ಲೆಯ ಪ್ರತಿಯೊಂದು ಕ್ಷೇತ್ರವೂ ಮುಖ್ಯ. ದೇವರು ವರ ಹಾಗೂ ಶಾಪ ನೀಡುವುದಿಲ್ಲ. ಕೇವಲ ಅವಕಾಶ ಮಾತ್ರ ನೀಡುತ್ತಾನೆ. ನಮಗೆ ಸಿಕ್ಕ ಅವಕಾಶದಲ್ಲಿ ನಾವು ಕೆಲಸ ಮಾಡುತ್ತಿದ್ದೇವೆ. ಮೋದಿ ಅವರು ಅಧಿಕಾರಕ್ಕೆ ಬರುವ ಮುನ್ನ ಅಚ್ಛೇದಿನ ಬರುತ್ತದೆ ಎಂದಿದ್ದರು. ಅವರು ಹೇಳಿದ್ದ ಅಚ್ಛೇದಿನ, ಖಾತೆಗೆ 15 ಲಕ್ಷದ ವಿಚಾರ ಏನಾಯ್ತು ಎಂದು ನೀವೆಲ್ಲರೂ ಬಿಜೆಪಿ ಹಾಗೂ ಕುಮಾರಸ್ವಾಮಿ ಅವರನ್ನು ಕೇಳಬೇಕು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ಹೇಳಿದ್ದಾರೆ.

Karnataka Rains: ತುಂಗಭದ್ರಾ ಡ್ಯಾಂನಿಂದ 1.20 ಲಕ್ಷ ಕ್ಯುಸೆಕ್ ನೀರು ಬಿಡುಗಡೆ; ಸೇತುವೆ ಮುಳುಗಿ ಕಂಪ್ಲಿ-ಗಂಗಾವತಿ ಸಂಪರ್ಕ ಕಡಿತ

ತುಂಗಭದ್ರಾ ಡ್ಯಾಂನಿಂದ ನೀರು ಬಿಡುಗಡೆ; ಮುಳುಗಿದ ಕಂಪ್ಲಿ-ಗಂಗಾವತಿ ಸೇತುವೆ

Tungabhadra dam: ರಾಜ್ಯದ ನಾಲ್ಕು ಜಿಲ್ಲೆಗಳ ರೈತರ ಜೀವನಾಡಿಯಾದ ತುಂಗಭದ್ರಾ ಜಲಾಶಯದಿಂದ 1.20 ಲಕ್ಷ ಕ್ಯುಸೆಕ್ ನೀರನ್ನು ಕ್ರಸ್ಟ್ ಗೇಟ್‌ಗಳ ಮೂಲಕ ನದಿಗೆ ಬಿಡುಗಡೆ ಮಾಡಲಾಗಿದೆ. ತುಂಗಭದ್ರಾ ನದಿ ಧುಮ್ಮಿಕ್ಕಿ ಹರಿಯುವ ದೃಶ್ಯ ವೈಭವ ನೋಡುಗರನ್ನು ಸೆಳೆಯುತ್ತಿದೆ.

Theft Case: ಬೆಂಗಳೂರಿನ ಟೆಕ್ಕಿ ಮನೆಯಲ್ಲಿ 1 ಕೆಜಿ ಚಿನ್ನ, 4 ಲಕ್ಷ ಹಣ ಕಳ್ಳತನ; ದೂರು ದಾಖಲು

ಬೆಂಗಳೂರಿನ ಟೆಕ್ಕಿ ಮನೆಯಲ್ಲಿ 1 ಕೆಜಿ ಚಿನ್ನ, 4 ಲಕ್ಷ ಹಣ ಕಳ್ಳತನ!

Bengaluru News: ಬೆಂಗಳೂರು ನಗರದ ಜ್ಞಾನಭಾರತಿಯ ಮಲ್ಲತ್ತಹಳ್ಳಿಯಲ್ಲಿ ಕಳ್ಳತನ ನಡೆದಿದೆ. ಟೆಕ್ಕಿಯೊಬ್ಬರ ಮನೆಯಲ್ಲಿ 1 ಕೆಜಿ ಚಿನ್ನ, 4 ಲಕ್ಷ ರೂ. ನಗದು ಕಳ್ಳರು ಕದ್ದಿದ್ದಾರೆ. ಈ ಸಂಬಂಧ ಟೆಕ್ಕಿ, ಜ್ಞಾನಭಾರತಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

Loading...