ಪದವೀಧರರ ಧ್ವನಿಯಾಗಿ ಮೇಲ್ಮನೆಯಲ್ಲಿರುವೆ: ಬಿಜೆಪಿ ಮುಖಂಡ ವಸಂತಕುಮಾರ್
Karnataka Politics: ಕಳೆದ 20 ವರ್ಷಗಳಿಂದ ಬಿಜೆಪಿ ಪಕ್ಷದಲ್ಲಿ ನಿಷ್ಠಾವಂತ ಕಾರ್ಯಕರ್ತನಾಗಿ ಪಕ್ಷದ ಏಳಿಗೆಗಾಗಿ ದುಡಿದಿರುವ ನನ್ನ ನಿಷ್ಠೆಯನ್ನು ಪರಿಗಣಿಸಿ, ಆಗ್ನೇಯ ಪದವೀಧರ ಕ್ಷೇತ್ರದ ವ್ಯಾಪ್ತಿಯಲ್ಲಿ ಪಕ್ಷ ಸಂಘಟನೆಯಲ್ಲಿ ತೋಡಗಿಕೊಳ್ಳುವಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರಿಂದ ಸೂಚನೆ ಬಂದಿದೆ ಎಂದು ಹಿರಿಯ ವಕೀಲ ಹಾಗೂ ಬಿಜೆಪಿ ಮುಖಂಡ ವಸಂತಕುಮಾರ್ ತಿಳಿಸಿದ್ದಾರೆ.