ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಕರ್ನಾಟಕ

DA Hike: ರಾಜ್ಯ ಸರ್ಕಾರಿ ನೌಕರರಿಗೆ ಗುಡ್‌ ನ್ಯೂಸ್;‌ ತುಟ್ಟಿಭತ್ಯೆ ಶೇ.15.75ಕ್ಕೆ ಹೆಚ್ಚಳ ಮಾಡಿ ಸರ್ಕಾರ ಆದೇಶ

ರಾಜ್ಯ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆ ಶೇ.15.75ಕ್ಕೆ ಹೆಚ್ಚಳ

2024ರ ಪರಿಷ್ಕೃತ ವೇತನ ಶ್ರೇಣಿಯಲ್ಲಿ ವೇತನ ಪಡೆಯುತ್ತಿರುವ ರಾಜ್ಯ ಸರ್ಕಾರಿ ನೌಕರರು, ನಿವೃತ್ತಿ ವೇತನದಾರರು/ಕುಟುಂಬ ನಿವೃತ್ತಿ ವೇತನದಾರರು, ಅನುದಾನಿತ ಶಿಕ್ಷಣ ಸಂಸ್ಥೆಗಳ ನೌಕರರು ಹಾಗೂ ಯುಜಿಸಿ/ಎಐಸಿಟಿಇ/ಐಸಿಎಆರ್ ವೇತನ ಶ್ರೇಣಿಯ ನಿವೃತ್ತ ನೌಕರರಿಗೆ ಈ ತುಟ್ಟಿ ಭತ್ಯೆ ಪರಿಷ್ಕರಣೆ ಅನ್ವಯವಾಗಲಿದೆ.

2026ರಲ್ಲಿ ಅಮೆಜಾನ್‌ ಆಶ್ರಯ್ ಕೇಂದ್ರಗಳ ಸಂಖ್ಯೆ 250ಕ್ಕೆ ಹೆಚ್ಚಳ

2026ರಲ್ಲಿ ಅಮೆಜಾನ್‌ ಆಶ್ರಯ್ ಕೇಂದ್ರಗಳ ಸಂಖ್ಯೆ 250ಕ್ಕೆ ಹೆಚ್ಚಳ

ಆಶ್ರಯ್ ಎಂಬುದು ಅಮೆಜಾನ್ ಜಾಲದ ಹೊರಗಿರುವ ಚಾಲಕರು ಸೇರಿದಂತೆ ಎಲ್ಲಾ ಡೆಲಿವರಿ ಚಾಲಕರಿಗಾಗಿ ಮೀಸಲಾದ ವಿಶ್ರಾಂತಿ ಕೇಂದ್ರಗಳ ಜಾಲವಾಗಿದೆ. ಈ ಕೇಂದ್ರ ಗಳಲ್ಲಿ ಹವಾ ನಿಯಂತ್ರಿತ ಆಸನಗಳು, ಕುಡಿಯುವ ನೀರು, ಎಲೆಕ್ಟ್ರೋಲೈಟ್‌ ಗಳು, ಮೊಬೈಲ್ ಚಾರ್ಜಿಂಗ್ ಪಾಯಿಂಟ್‌ ಗಳು, ಸ್ವಚ್ಛ ಶೌಚಾಲಯಗಳು, ಪ್ರಥಮ ಚಿಕಿತ್ಸಾ ಕಿಟ್‌ ಗಳು ಮತ್ತು ಆರಾಮ ದಾಯಕ ವಿಶ್ರಾಂತಿ ಸ್ಥಳಗಳನ್ನು ಒದಗಿಸಲಾಗುತ್ತಿದೆ.

22 ಸಾವಿರ ವಿದ್ಯಾರ್ಥಿಗಳು, 24 ಗಂಟೆಗಳ ಕಠಿಣ ಸವಾಲು: ಕಾಗ್ನಿಜೆಂಟ್ ಹ್ಯಾಕಥಾನ್‌ನಲ್ಲಿ ಪ್ರಥಮ ಬಹುಮಾನ ಗೆದ್ದ ಚೆನ್ನೈ ತಂಡ

ಕಾಗ್ನಿಜೆಂಟ್ ಹ್ಯಾಕಥಾನ್‌ನಲ್ಲಿ ಪ್ರಥಮ ಬಹುಮಾನ ಗೆದ್ದ ಚೆನ್ನೈ ತಂಡ

ಕೋಲ್ಕತ್ತಾದ 'ಟೆಕ್ನೋ ಮೈನ್ ಸಾಲ್ಟ್ ಲೇಕ್' ಕಾಲೇಜಿನ 'ಟೀಮ್ ಆಲ್ಗೊರಿದಮ್ಸ್‌' ದ್ವಿತೀಯ ಸ್ಥಾನ ಪಡೆದು 2,00,000 ರೂ. ನಗದು ಬಹುಮಾನ ಪಡೆದರೆ, ಕೊಯಮತ್ತೂರಿನ 'ಕಾರುಣ್ಯ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಅಂಡ್ ಸೈನ್ಸಸ್'ನ 'ಟೀಮ್ ದೇವ್‌ಟ್ರಾನಿಕ್ಸ್' ತೃತೀಯ ಸ್ಥಾನ ದೊಂದಿಗೆ 1 ಲಕ್ಷ ರೂ. ನಗದು ಬಹುಮಾನವನ್ನು ತನ್ನದಾಗಿಸಿಕೊಂಡಿತು.

ಅಪ್ರಾಪ್ತ ವಯಸ್ಸಿನ ಅಪರಾಧ ಕೃತ್ಯಕ್ಕೆ ವಯಸ್ಕನಾದಾಗ ಬಂಧನ ಸಲ್ಲ; ಹೈಕೋರ್ಟ್‌

ವಯಸ್ಕನಾದಾಗ ಬಂಧನ ಸಲ್ಲ; ಹೈಕೋರ್ಟ್‌

ಅಪ್ರಾಪ್ತ ವಯಸ್ಸಿನಲ್ಲಿದ್ದಾಗ ಎಸಗಿರುವ ಅಪರಾಧಗಳನ್ನು ಆಧಾರವಾಗಿಟ್ಟುಕೊಂಡು ವಯಸ್ಕನಾದ ನಂತರ ಗೂಂಡಾ ಕಾಯಿದೆಯಡಿ ಮುನ್ನೆಚ್ಚರಿಕಾ ಕ್ರಮವಾಗಿ ಬಂಧನ ಆದೇಶ ಹೊರಡಿಸಲು ಅಧಿಕಾರವಿಲ್ಲ ಎಂದು ಹೈಕೋರ್ಟ್‌ ತನ್ನ ಆದೇಶದಲ್ಲಿ ತಿಳಿಸಿದೆ. ಆದೇಶಕ್ಕೆ ಅನುಗುಣವಾಗಿ ಬಳ್ಳಾರಿ ಕೇಂದ್ರ ಕಾರಾಗೃಹದಲ್ಲಿರುವ ಅಭಿಚೆರ್ಲಿ ಅಲಿಯಾಸ್‌ ಅಭಿ ಎಂಬುವವರನ್ನು ತಕ್ಷಣ ಬಿಡುಗಡೆ ಮಾಡಬೇಕೆಂದು ಸರಕಾರಕ್ಕೆ ಸೂಚನೆ ನೀಡಿದೆ.

ಕರಾವಳಿಯಲ್ಲಿ ಭಾರೀ ಮಳೆ ಎಚ್ಚರಿಕೆ; ಹವಾಮಾನ ಇಲಾಖೆ ಕೊಟ್ಟ ಸೂಚನೆಯೇನು?

ಕರಾವಳಿಯಲ್ಲಿ ಭಾರೀ ಮಳೆ ಎಚ್ಚರಿಕೆ

ರಾಜ್ಯದ ಹಲವೆಡೆ ಮಳೆಯಾಗುವ ಮುನ್ಸೂಚನೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕೊಡಗು, ಶಿವಮೊಗ್ಗ ಸೇರಿದಂತೆ ದಕ್ಷಿಣ ಒಳನಾಡಿನ ಹಲವೆಡೆ ಇಂದು ಭಾರೀ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಮುಂದಿನ ಎರಡು ದಿನಗಳ ಕಾಲ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಪ್ರೇಯಸಿ ಜತೆ ಪರಾರಿ ಆಗಿದ್ದ ಯುವಕನ ಅಣ್ಣನ ಕಿಡ್ನಾಪ್‌ ಕೇಸ್ ಗೆ ಟ್ವಿಸ್ಟ್ : ವಿಚಾರಣೆ ಸತ್ಯ ಬಯಲು

ಪ್ರೇಯಸಿ ಜತೆ ಪರಾರಿ ಆಗಿದ್ದ ಯುವಕನ ಅಣ್ಣನ ಕಿಡ್ನಾಪ್‌ ಕೇಸ್ ಗೆ ಟ್ವಿಸ್ಟ್

ಯುವಕನೊಬ್ಬ ತಾನು ಪ್ರೀತಿಸಿದ ಯುವತಿಯನ್ನು ಕರೆದೊಯ್ದಿರುವ ಕಾರಣಕ್ಕೆ ಯುವಕನ ಸಹೋದರನನ್ನು ಯುವತಿಯ ಪೋಷಕರು ಅಪಹರಿಸಿ ಕೈಕಾಲು ಕಟ್ಟಿ ಹಾಕಿ ಹಲ್ಲೆ ನಡೆಸಿರುವ ವಿಡಿಯೋ ವೈರಲ್ ಆಗಿದ್ದ ಪ್ರಕರಣಕ್ಕೆ ಇದೀಗ ಟ್ವಿಸ್ಟ್‌ ಸಿಕ್ಕಿದೆ. ಯುವತಿಯ ಪೋಷಕರೇ ಪ್ಲಾನ್‌ ಮಾಡಿ ಈ ರೀತಿಯ ವಿಡಿಯೋ ಮಾಡಿ ಹರಿಬಿಟ್ಟಿರುವುದು ಬೆಳಕಿಗೆ ಬಂದಿದೆ.

ಸರ್ಕಾರಿ ಗೌರವದೊಂದಿಗೆ ಚಳ್ಳಕೆರೆಯಲ್ಲಿ ಇಂದು ಸಚಿವ ಸುಧಾಕರ್‌ ಅಂತ್ಯಕ್ರಿಯೆ

ಚಳ್ಳಕೆರೆಯಲ್ಲಿ ಇಂದು ಸಚಿವ ಸುಧಾಕರ್‌ ಅಂತ್ಯಕ್ರಿಯೆ

ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಹಾಗೂ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ. ಸುಧಾಕರ್ (62) ಚಿಕಿತ್ಸೆ ಫಲಕಾರಿಯಾಗದೆ ಬೆಂಗಳೂರಿನ ಕಿಮ್ಸ್‌ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು. ಇಂದು ಅವರ ಹುಟ್ಟುರಾದ ಚಿತ್ರದುರ್ಗದಲ್ಲಿ ಅಂತಿಮ ಸಂಸ್ಕಾರ ನಡೆಯಲಿದೆ. ಮೃತರ ಅಂತಿಮ ಸಂಸ್ಕಾರ ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಸಲು ಸರ್ಕಾರ ಸೂಚನೆ ನೀಡಿದೆ.

BSY's celebration: ಬಿಎಸ್‌ʼವೈ ಅಭಿಮಾನೋತ್ಸವ ಲಾಭ, ನಷ್ಟ ಲೆಕ್ಕದಲ್ಲಿ ಬಿಜೆಪಿ

ಬಿಎಸ್‌ʼವೈ ಅಭಿಮಾನೋತ್ಸವ ಲಾಭ, ನಷ್ಟ ಲೆಕ್ಕದಲ್ಲಿ ಬಿಜೆಪಿ

ಯಡಿಯೂರಪ್ಪ ಅವರ ರಾಜಕೀಯ ಜೀವನದ ಸುವರ್ಣ ಸಂಭ್ರಮದಲ್ಲಿ ಅಭಿಮಾನ ಪ್ರವಾಹವಿದ್ದ ಜನ ಸಾಗರವನ್ನು ರಾಜಕೀಯವಾಗಿ ಬಳಸಿಕೊಳ್ಳಲಾಗಿದೆಯೇ ? ಇದನ್ನು ಸರಕಾರದ ವಿರುದ್ಧ ಸಮರ ಸಾರಲು ಬಳಸಿಕೊಳ್ಳಬಹುದಿತ್ತಲ್ಲವೇ? ಹಾಗಾದರೆ ಇದರಿಂದ ಯಾರಿಗೆ ಲಾಭವಾಗಿದೆ? ಎಂಬ ಇತ್ಯಾದಿ ಪ್ರಶ್ನೆಗಳೊಂದಿಗೆ ಪಕ್ಷದ ನಾಯಕರಲ್ಲೇ ಚರ್ಚೆಯಾಗಿದೆ ಎನ್ನಲಾಗಿದೆ.

Chinthamani News: ಮಕ್ಕಳಲ್ಲಿ ಆತ್ಮಸ್ಥೈರ್ಯ ತುಂಬಲು ಈಜು ಕಲೆ ಅಗತ್ಯ: ಕೇಶವ ಅಕಾಡೆಮಿ ಸಂಸ್ಥಾಪಕ  ಅಧ್ಯಕ್ಷ ಕೇಶವ

ಮಕ್ಕಳಲ್ಲಿ ಆತ್ಮಸ್ಥೈರ್ಯ ತುಂಬಲು ಈಜು ಕಲೆ ಅಗತ್ಯ

ಈಜು ತರಬೇತಿಯ ಜೊತೆಗೆ,ಕೇಶವ ಅವರು ಮಕ್ಕಳಿಗೆ ಅಂಡರ್ ವಾಟರ್ ಸ್ವಿಮ್ಮಿಂಗ್, ಶವಾಸನ, ಚಕ್ರಾಸನ ಸೇರಿದಂತೆ ವಿವಿಧ ಯೋಗಾಸನಗಳನ್ನು ನೀರಿನಲ್ಲೇ ಮಾಡುವ ಕಲೆಗಳನ್ನು ಕಲಿಸಿ ಕೊಡುತ್ತಿದ್ದಾರೆ. ಒಂದು ತಿಂಗಳ ಈ ವಿಶೇಷ ಶಿಬಿರದಲ್ಲಿ ಸುಮಾರು 60 ರಿಂದ 100ಕ್ಕೂ ಹೆಚ್ಚು ಮಕ್ಕಳು ಭಾಗವಹಿಸುತ್ತಿದ್ದು,ಬೆಂಗಳೂರು ಮತ್ತು ಕೋಲಾರ ಜಿಲ್ಲೆಯ ವಿವಿಧ ಭಾಗಗಳಿಂದಲೂ ಮಕ್ಕಳು ಆಗಮಿಸುತ್ತಿರುವುದು ವಿಶೇಷವಾಗಿದೆ.

ರಾಜ್ಯ ಪೊಲೀಸ್‌ ಇಲಾಖೆಗೆ ಮೇಜರ್‌ ಸರ್ಜರಿ; 293 ಇನ್ಸ್‌ಪೆಕ್ಟರ್, 74 ಡಿವೈಎಸ್‌ಪಿಗಳ ವರ್ಗಾವಣೆ

ರಾಜ್ಯದ 293 ಇನ್ಸ್‌ಪೆಕ್ಟರ್, 74 ಡಿವೈಎಸ್‌ಪಿಗಳ ವರ್ಗಾವಣೆ

ಮೇ 10ರಂದು ನಡೆದ ಪೊಲೀಸ್ ಸಿಬ್ಬಂದಿ ಮಂಡಳಿಯ ಸಭೆಯಲ್ಲಿ ಕೈಗೊಂಡ ತೀರ್ಮಾನದಂತೆ ಈ ವರ್ಗಾವಣೆ ಆದೇಶವನ್ನು ಹೊರಡಿಸಲಾಗಿದೆ. ಆಡಳಿತಾತ್ಮಕ ಹಿತದೃಷ್ಟಿಯಿಂದ ಹಾಗೂ ಸಾರ್ವಜನಿಕ ಸೇವೆಯ ದಕ್ಷತೆಯನ್ನು ಹೆಚ್ಚಿಸುವ ಉದ್ದೇಶದಿಂದ ಪೊಲೀಸ್‌ ಅಧಿಕಾರಿಗಳ ವರ್ಗಾವಣೆ ಮಾಡಲಾಗಿದೆ.

“ಜನರಿಗೆ ನೀರೇ ಇಲ್ಲ… ಅಭಿವೃದ್ಧಿ ಎಲ್ಲಿದೆ?” ನಗರಸಭೆ ವಿರುದ್ಧ ಸಾರ್ವಜನಿಕರ ಆಕ್ರೋಶ

ಲಕ್ಷಾಂತರ ವೆಚ್ಚದ ನೀರಿನ ಘಟಕಗಳು ಬಂದ್: ನಗರಸಭೆ ವಿರುದ್ಧ ಜನರ ಕಿಡಿ

ನಗರದ ಕೋಟೆ ವೃತ್ತದಲ್ಲಿರುವ ನಗರಸಭೆ ಸಮುದಾಯ ಭವನದ ಆವರಣದಲ್ಲಿ ನಿರ್ಮಿಸಿದ್ದ ನೀರಿನ ಘಟಕ ಕಳೆದ ನಾಲ್ಕು ವರ್ಷಗಳಿಂದ ಸಮರ್ಪಕವಾಗಿ ಕಾರ್ಯ ನಿರ್ವಹಿಸುತ್ತಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಸಾರ್ವಜನಿಕರಿಗೆ ಅನುಕೂಲ ವಾಗಬೇಕಿದ್ದ ನೀರಿನ ಟ್ಯಾಂಕ್ ಹಾಗೂ ಸರಬರಾಜು ವ್ಯವಸ್ಥೆ ನಿರ್ವಹಣೆ ಕೊರತೆಯಿಂದ ಸಂಪೂರ್ಣ ನಿರ್ಲಕ್ಷ್ಯಕ್ಕೊಳಗಾಗಿದೆ ಎನ್ನಲಾಗಿದೆ.

Gudibande News: ಗುಡಿಬಂಡೆಯಲ್ಲಿ ಮೂಕಪ್ರಾಣಿಗಳಿಗೆ ಹಣ್ಣು-ಹಂಪಲು ವಿತರಣೆ

ಗುಡಿಬಂಡೆಯಲ್ಲಿ ಮೂಕಪ್ರಾಣಿಗಳಿಗೆ ಹಣ್ಣು-ಹಂಪಲು ವಿತರಣೆ

ಬಿಸಿಲಿನ ತಾಪಕ್ಕೆ ನಲುಗಿ ಮೂಕಪ್ರಾಣಿಗಳು ಪ್ರಾಣ ಕಳೆದುಕೊಳ್ಳುತ್ತಿವೆ. ಆದ್ದರಿಂದ ಸಾರ್ವ ಜನಿಕರು ಪ್ರಾಣಿಗಳ ಮೇಲೆ ದಯೆ ತೋರಬೇಕು. ಪ್ರತಿಯೊಬ್ಬರೂ ತಮ್ಮ ಮನೆಯ ಮಹಡಿಯ ಮೇಲೆ ಮಣ್ಣಿನ ಗಡಿಗೆಯಲ್ಲಿ ನೀರು ಮತ್ತು ಅಕ್ಕಿಯನ್ನು ಇಡುವ ಮೂಲಕ ಅವುಗಳ ಜೀವ ಉಳಿಸಲು ಮುಂದಾಗಬೇಕು. ಹೆಚ್ಚೆಚ್ಚು ಗಿಡಮರಗಳನ್ನು ಬೆಳೆಸಿ ಪ್ರಾಣಿ-ಪಕ್ಷಿಗಳಿಗೆ ಆಶ್ರಯ ನೀಡಿದಾಗ ಮಾತ್ರ ನಮ್ಮ ಬದುಕು ಸಾರ್ಥಕವಾಗುತ್ತದೆ

ಪುಂಡಾಟ ಮೆರೆದ ವಿದ್ಯಾರ್ಥಿಗಳ ಮೇಲೆ ದೂರು ದಾಖಲು : ಹುಡುಗರ ಪತ್ತೆಗೆ ಮುಂದಾದ ಪೊಲೀಸರು

ಪುಂಡಾಟ ಮೆರೆದ ವಿದ್ಯಾರ್ಥಿಗಳ ಮೇಲೆ ದೂರು ದಾಖಲು

ಬೈಕ್ ಕರ್ಕಶ ಶಬ್ಧ ಮಾಡುತ್ತಿದ್ದ ವಿದ್ಯಾರ್ಥಿಗಳಿಗೆ ಎಎಸ್‌ಐ ಗಂಗರಾಜು ಸೈಲೆಂಟ್ ಆಗಿ ಹೋಗಿ ಎಂದು ತಿಳಿ ಹೇಳಿದ್ದರಂತೆ. ಈ ವೇಳೆ ಪೊಲೀಸರ ಎಚ್ಚರಿಕೆಗೆ ಕ್ಯಾರೆ ಎನ್ನದೇ ಒಬ್ಬ ವಿದ್ಯಾರ್ಥಿ ಬೈಕ್ ಜೋರು ಸೌಂಡ್ ಮಾಡಿದ್ದಾನೆ. ಬೇರೆ ವಿದ್ಯಾರ್ಥಿಗಳು ಬೇಡ ಅಂದ್ರೂ ಅವನೊಬ್ಬ ಪೊಲೀಸ್ ಏನು? ಮಾಡ್ತಾನೆ? ಎಂದು ಮತ್ತೆ ಶಬ್ಧ ಮಾಡಿದ್ದಾನೆ. ಈ ವೇಳೆ ಕೆರಳಿದ ಎಎಸ್‌ಐ ಗಂಗರಾಜು ವಿದ್ಯಾರ್ಥಿಯ ಮೇಲೆ ಲಾಠಿ ಬೀಸಿದ್ದು, ವಿದ್ಯಾರ್ಥಿಗೆ ಗಾಯವಾಗಿ ರಕ್ತ ಬಂದಿದೆ ಎನ್ನಲಾಗಿದೆ.

Chikkaballapur News: ಮೊಬೈಲ್ ಮೋಹದಿಂದ ಮಕ್ಕಳು ಹಾದಿ ತಪ್ಪುವುದನ್ನು ತಡೆಯಬೇಕಿದೆ: ವಕೀಲ ಆರ್.ಮಟಮಪ್ಪ

ಮೊಬೈಲ್ ಮೋಹದಿಂದ ಮಕ್ಕಳು ಹಾದಿ ತಪ್ಪುವುದನ್ನು ತಡೆಯಬೇಕಿದೆ

ಮೊಬೈಲ್ ಹೆಚ್ಚೆಚ್ಚು ಬಳಕೆಯಿಂದಾಗಿ ಮಕ್ಕಳು ದಾರಿ ತಪ್ಪುತ್ತಿರುವ ಬಗ್ಗೆ ಅನೇಕ ವರದಿ ಗಳನ್ನು ನಾವು ನೋಡುತ್ತಿರುತ್ತೇವೆ. ಒಂದು ವೇಳೆ ಜ್ಞಾನದ ಅವಶ್ಯಕತೆಗೆ ಮಾತ್ರ ಮೊಬೈಲ್ ನೀಡಿದರು ತಂದೆ ತಾಯಿಗಳು ಮಕ್ಕಳ ಬಳಿಯೇ ಇದ್ದು ಗಮನಿಸಬೇಕು. ಇಲ್ಲದಿದ್ದರೆ ಮಕ್ಕಳ ಆರೋಗ್ಯಕ್ಕೆ ಮಾನಸಿಕವಾಗಿ ದೈಹಿಕವಾಗಿ ಜೊತೆಗೆ ಮುಂದಿನ ಭವಿಷ್ಯತ್ತಿಗೆ ತೊಂದರೆ ಯಾಗಲಿದೆ ಎಂದು ತಿಳಿಸಿದರು.

Chinthamani News: ಶಿಷ್ಯನಾದವನು ಭಕ್ತಿಯಿಂದ ಶರಣಾಗತನಾದರೆ ಗುರು ಶಿಷ್ಯರ ಭಾರ ಹೊರುತ್ತಾನೆ : ಧರ್ಮಾಧಿಕಾರಿ ಎಂ.ಆರ್.ಜಯರಾಮ್

ಶಿಷ್ಯನಾದವನು ಭಕ್ತಿಯಿಂದ ಶರಣಾಗತನಾದರೆ ಗುರು ಶಿಷ್ಯರ ಭಾರ ಹೊರುತ್ತಾನೆ

ಸದ್ಗುರು ಶ್ರೀಯೋಗಿನಾರೇಯಣ ತಾತಯ್ಯನವರ ತತ್ವಬೋಧನೆಗಳಿಗೆ ಭಾವಾನುವಾದ, ತಾತ್ಪರ್ಯಗಳನ್ನು ರಚಿಸಿ ಅಪಾರ ಕೊಡುಗೆಯನ್ನು ನೀಡಿದ್ದ ದಿವಂಗತ ಶ್ರೀಕೈಪು ಲಕ್ಷ್ಮೀ ನರಸಿಂಹಶಾಸ್ತ್ರಿಗಳಿಗೆ ಮರಣೋತ್ತರವಾಗಿ 1 ಲಕ್ಷ ನಗದು ಬಹುಮಾನವನ್ನು ಅವರ ಧರ್ಮ ಪತ್ನಿ ನಾಗಮಣಿ ಲಕ್ಷ್ಮೀನರಸಿಂಹಶಾಸ್ತ್ರಿಗಳಿಗೆ ಕೈವಾರ ಕ್ಷೇತ್ರದ ಧರ್ಮಾಧಿಕಾರಿ ಡಾ||ಎಂ.ಆರ್.ಜಯರಾಮ್ ಪ್ರದಾನ ಮಾಡಿ ಮಾತನಾಡಿದರು.

D Sudhakar Death: ಆತ್ಮೀಯ ಸ್ನೇಹಿತನಿಗೆ ಕಣ್ಣೀರ ವಿದಾಯ; ಡಿ.ಸುಧಾಕರ್ ಅಂತಿಮ ದರ್ಶನದ ವೇಳೆ ಬಿಕ್ಕಿ ಬಿಕ್ಕಿ ಅತ್ತ ಡಿಸಿಎಂ ಡಿಕೆಶಿ

ಡಿ.ಸುಧಾಕರ್ ಅಂತಿಮ ದರ್ಶನದ ವೇಳೆ ಬಿಕ್ಕಿ ಬಿಕ್ಕಿ ಅತ್ತ ಡಿಸಿಎಂ ಡಿಕೆಶಿ

D Sudhakar Death: ಅನಾರೋಗ್ಯದಿಂದ ಚಿಕಿತ್ಸೆ ಪಡೆಯುತ್ತಿದ್ದ ನಮ್ಮ ಸಂಪುಟ ಸಹೋದ್ಯೋಗಿ, ನನ್ನ ಆತ್ಮೀಯ ಸ್ನೇಹಿತ ಡಿ. ಸುಧಾಕರ್ ಅವರು ಇಂದು ಕೊನೆಯುಸಿರೆಳೆದ ಸುದ್ದಿ ಅತೀವ ದುಃಖವನ್ನುಂಟು ಮಾಡಿದೆ. ಅವರ ಕುಟುಂಬಕ್ಕೆ ಈ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ.

ಸಚಿವ ಡಿ.ಸುಧಾಕರ್ ನಿಧನದ ಹಿನ್ನೆಲೆ ರಾಜ್ಯದಲ್ಲಿ 3 ದಿನ ಶೋಕಾಚರಣೆ; ನಾಳೆ ಚಿತ್ರದುರ್ಗ ಜಿಲ್ಲೆಗೆ ರಜೆ ಘೋಷಣೆ

ಸಚಿವ ಡಿ.ಸುಧಾಕರ್ ನಿಧನದ ಹಿನ್ನೆಲೆ ನಾಳೆ ಚಿತ್ರದುರ್ಗ ಜಿಲ್ಲೆಗೆ ರಜೆ ಘೋಷಣೆ

Minister D Sudhakar Death: ಬೆಂಗಳೂರಿನ ಸದಾಶಿವ ನಗರದ ನಿವಾಸದಲ್ಲಿ ಸಚಿವ ಡಿ.ಸುಧಾಕರ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನವನ್ನು ಸಿಎಂ ಸಿದ್ದರಾಮಯ್ಯ ಪಡೆದು, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಈ ವೇಳೆ ರಾಜ್ಯದಲ್ಲಿ ಮೂರು ದಿನಗಳ ಕಾಲ ಶೋಕಾಚರಣೆ ಮಾಡುತ್ತಿದ್ದು, ಚಿತ್ರದುರ್ಗದಲ್ಲಿ ಸೋಮವಾರ ರಜೆ ಘೋಷಣೆ ಮಾಡಲಾಗಿದೆ ಎಂದು ಘೋಷಿಸಿದ್ದಾರೆ.

ಕೊಳ್ಳಂಗಿಯ ಜಂಪ ಮಹೋತ್ಸವ

ಕೊಳ್ಳಂಗಿಯ ಜಂಪ ಮಹೋತ್ಸವ

ಧರ್ಮದೇವತೆಯ ಸಾಕ್ಷಿಯಾಗಿ ನಡೆಯುತ್ತಿದ್ದ ಈ ತೀರ್ಪುಗಳಿಗೆ ಎಲ್ಲರೂ ತಲೆಬಾಗು ತ್ತಿದ್ದರು. ಈ ಸಹಬಾಳ್ವೆ ಮತ್ತು ಬುದ್ಧಿವಂತಿಕೆಯ ಫಲವಾಗಿಯೇ ಕೊಳ್ಳಂಗಿಗೆ ಕಟ್ಟೆಮನೆ ಎಂಬ ಗೌರವ ಯುತ ಹೆಸರು ಬಂದಿದೆ. ಇದು ಕೇವಲ ಒಂದು ಜನಾಂಗಕ್ಕೆ ಸೀಮಿತವಾಗದೆ, ಇಡೀ ಪ್ರಾಂತ್ಯದ ಜನರಿಗೆ ಭರವಸೆಯ ತಾಣವಾಗಿತ್ತು.

Pravasi Prapancha: ನಾಡು ಕಂಡ ಮಾಸ್‌ ಲೀಡರ್‌ ಬಿಎಸ್‌ವೈ ಅಭಿಮಾನೋತ್ಸವ

ಮಾಸ್‌ ಲೀಡರ್‌ ಬಿಎಸ್‌ವೈ ಅಭಿಮಾನೋತ್ಸವ

BSY Abhimanotsava: ರಾಜಕಾರಣಕ್ಕೆ ಬರುವ ಹಾದಿ ಕಷ್ಟವಲ್ಲ. ಆದರೆ ಬಂದ ಬಳಿಕ ಆ ಹಾದಿಯಲ್ಲಿ ಅಭಿವೃದ್ಧಿ ಮಾಡುತ್ತಾ, ಜನರ ಪ್ರೀತಿ ಹಾಗೂ ನಂಬಿಕೆ ಗಳಿಸಿ ಎಷ್ಟು ದೂರ ಕ್ರಮಿಸಲು ಸಾಧ್ಯವೆನ್ನುವುದೇ ಸವಾಲು. ಈ ಸವಾಲನ್ನು ಮೆಟ್ಟಿನಿಂತು, ರಾಜ್ಯವೇ ಮೆಚ್ಚುವಂತೆ ಜನಪರ ಧ್ವನಿಯಾಗಿ ಕರ್ನಾಟಕದ ʼಮಾಸ್ ಲೀಡರ್ʼ ಎಂಬ ಹೆಸರು ಪಡೆದ ಬೂಕನಕೆರೆ ಸಿದ್ದಲಿಂಗಯ್ಯ ಯಡಿಯೂರಪ್ಪ (ಬಿ.ಎಸ್. ಯಡಿಯೂರಪ್ಪ) ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದಾರೆ. ರಾಜ್ಯದ ಪ್ರವಾಸೋದ್ಯಮಕ್ಕೂ ದಾರಿದೀಪದಂತಿದ್ದ ಅವರ ದೂರದೃಷ್ಟಿ ಈಗಲೂ ಪ್ರಸ್ತುತ.

ಮಲೆ ಮಹದೇಶ್ವರ ಬೆಟ್ಟದಲ್ಲಿ ಪೋಷಕರ ಕಣ್ಣೆದುರೇ ಬಾಲಕನನ್ನು ಎಳೆದೊಯ್ದು ಕೊಂದ ಚಿರತೆ!

ಮಲೆ ಮಹದೇಶ್ವರ ಬೆಟ್ಟದಲ್ಲಿ ಬಾಲಕನನ್ನು ಎಳೆದೊಯ್ದು ಕೊಂದ ಚಿರತೆ!

leopard attack in male mahadeshwara hills: ಮಲೆ ಮಹದೇಶ್ವರನ 77 ಮಲೆಗಳಲ್ಲಿ ಒಂದಾದ ನಾಗಮಲೆಗೆ ಪಾದಯಾತ್ರೆಯಲ್ಲಿ ತೆರಳುತ್ತಿದ್ದಾಗ ಬಾಲಕನ ಮೇಲೆ ಚಿರತೆ ದಾಳಿ ಮಾಡಿ ಕೊಂದಿದೆ. ಕುಟುಂಬಸ್ಥರ ಕಣ್ಣೆದುರೇ ಬಾಲಕನನ್ನು ಚಿರತೆ ಎಳೆದೊಯ್ದಿದೆ.

ಪುಟ್ಟ ಕೈಗಳಲ್ಲಿ ಅರಳಿದ ಅನಿಮೇಷನ್ ಲೋಕ; ಪರಮ್ ಬೇಸಿಗೆ ಶಿಬಿರಕ್ಕೆ ಅದ್ಧೂರಿ ತೆರೆ

ಜಯನಗರದಲ್ಲಿ ಪರಮ್ ಬೇಸಿಗೆ ಶಿಬಿರಕ್ಕೆ ಅದ್ಧೂರಿ ತೆರೆ

ಬೆಂಗಳೂರಿನ ಜಯನಗರದಲ್ಲಿ ಪರಮ್ ಫೌಂಡೇಶನ್ ಆಯೋಜಿಸಿದ್ದ ‘ಸ್ಟಾಪ್ ಮೋಷನ್ ಅನಿಮೇಷನ್’ ಬೇಸಿಗೆ ಶಿಬಿರವು ಅದ್ಧೂರಿಯಾಗಿ ಮುಕ್ತಾಯವಾಗಿದೆ. ಏಪ್ರಿಲ್ 20ರಂದು ಆರಂಭವಾದ ಈ ಶಿಬಿರವು ಒಟ್ಟು ಮೂರು ವಾರಗಳ ಕಾಲ ಯಶಸ್ವಿಯಾಗಿ ನಡೆದಿದೆ. ಸಮಾರೋಪ ಸಮಾರಂಭದಲ್ಲಿ ಮಕ್ಕಳಿಗೆ ಪ್ರಮಾಣಪತ್ರ ವಿತರಣೆ ಮಾಡಲಾಯಿತು.

Art of Living Dhyan Mandir: ಬೆಂಗಳೂರಿನಲ್ಲಿ ಆರ್ಟ್‌ ಆಫ್‌ ಲಿವಿಂಗ್‌ನ ಧ್ಯಾನ ಮಂದಿರ ಉದ್ಘಾಟಿಸಿದ ಪ್ರಧಾನಿ ಮೋದಿ

ಆರ್ಟ್‌ ಆಫ್‌ ಲಿವಿಂಗ್‌ನ ಧ್ಯಾನ ಮಂದಿರ ಉದ್ಘಾಟಿಸಿದ ಪ್ರಧಾನಿ ಮೋದಿ

PM Modi in Bengaluru: ಬೆಂಗಳೂರಿನ ಕನಕಪುರ ರಸ್ತೆಯಲ್ಲಿನ ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ 45ನೇ ವಾರ್ಷಿಕೋತ್ಸವ ಮತ್ತು ಗುರುದೇವ್ ಶ್ರೀ ಶ್ರೀ ರವಿಶಂಕರ್ ಅವರ 70 ನೇ ಜನ್ಮದಿನದ ಆಚರಣೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭಾನುವಾರ ಭಾಗವಹಿಸಿದ್ದಾರೆ.

PM Modi in Bengaluru: ಪ್ರಧಾನಿ ಮೋದಿ ಸಂಚರಿಸಿದ ಮಾರ್ಗದಲ್ಲೇ ಜಿಲೆಟಿನ್ ಕಡ್ಡಿಗಳು ಪತ್ತೆ; ಶಂಕಾಸ್ಪದವಾಗಿ ಓಡಾಡುತ್ತಿದ್ದ ವ್ಯಕ್ತಿ ವಶಕ್ಕೆ

ಪ್ರಧಾನಿ ಮೋದಿ ಸಂಚರಿಸಿದ ಮಾರ್ಗದಲ್ಲೇ ಜಿಲೆಟಿನ್ ಕಡ್ಡಿ ಪತ್ತೆ

ಬೆಂಗಳೂರು ಹೊರವಲಯದ ಕಗ್ಗಲೀಪುರ ವ್ಯಾಪ್ತಿಯ ತಾತಗುಣಿ ಅಗರ ಕೆರೆ ಬಳಿ ರಸ್ತೆಬದಿಯ ಕಸದ ರಾಶಿಯಲ್ಲಿ ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿವೆ. ಪ್ರಧಾನಿ ಮೋದಿ ಅವರು ಸಂಚರಿಸುವ ಮಾರ್ಗದ ಅತ್ಯಂತ ಸಮೀಪದಲ್ಲೇ ಸ್ಫೋಟಕಗಳು ಪತ್ತೆಯಾಗಿರುವುದು ಆತಂಕಕ್ಕೆ ಕಾರಣವಾಗಿದೆ.

ಡಿ. ಸುಧಾಕರ್  ಸ್ಮರಣೆಗೆ ನೀರಾವರಿ ಯೋಜನೆಗೆ ಅವರ ಹೆಸರಿಡಲು ಆಲೋಚನೆ: ಡಿ.ಕೆ. ಶಿವಕುಮಾರ್

ನೀರಾವರಿ ಯೋಜನೆಗೆ ಸುಧಾಕರ್ ಹೆಸರಿಡಲು ಆಲೋಚನೆ: ಡಿ.ಕೆ. ಶಿವಕುಮಾರ್

ಜಿಲ್ಲಾ ಉಸ್ತುವಾರಿ ಹಾಗೂ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ. ಸುಧಾಕರ್ (62) ಅವರು ಇಂದು ಮುಂಜಾನೆ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ. ಇದೀಗ ಡಿಸಿಎಂ ಡಿ.ಕೆ. ಶಿವಕುಮಾರ್ ಸುಧಾಕರ್‌ ಕುರಿತು ಮಾತನಾಡಿ, "ಸಚಿವರಾಗಿದ್ದ ಡಿ. ಸುಧಾಕರ್ ಅವರು ಭದ್ರ ಮೇಲ್ದಂಡೆ ಯೋಜನೆ ಜಾರಿಗೆ ಹೋರಾಟ ಮಾಡಿದ್ದರು. ಅವರ ಸ್ಮರಣಾರ್ಥ ನೀರಾವರಿ ಯೋಜನೆಗೆ ಸುಧಾಕರ್ ಅವರ ಹೆಸರಿಡಲು ಆಲೋಚನೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.

Loading...