ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಕರ್ನಾಟಕ

ಬೆಂಗಳೂರಿನಲ್ಲಿ ರೂಮ್ ಹುಡುಕುತ್ತಿದ್ದ ಯುವಕನಿಗೆ ಶಾಕ್: ಮನೆ ಒಳಗಡೆ ಇರಬೇಕಾದ್ರೆ ಈ 'ವಿಚಿತ್ರ' ಕಂಡಿಷನ್ ಗೆ ಒಪ್ಪಬೇಕು ಎಂದ ಮಾಲಕ

ಬೆಂಗಳೂರಿನಲ್ಲಿ ಬಾಡಿಗೆ ನೀಡಲು ವಿಚಿತ್ರ ಷರತ್ತು ವಿಧಿಸಿದ ಮಾಲಕ

Viral News: ಇಲ್ಲೊಬ್ಬ ಯುವಕನಿಗೆ ಬೆಂಗಳೂರಿನಲ್ಲಿ ಮನೆ ಹುಡುಕಾಟದಲ್ಲಿದ್ದಾಗ ವಿಚಿತ್ರ ಅನುಭವವೊಂದು ಎದುರಾಗಿದೆ. ಕೊರಮಂಗಲದಲ್ಲಿ ಫ್ಲಾಟ್ ಹುಡುಕುತ್ತಿದ್ದ ಪ್ರಣವ್ ಎಂಬವರು ತಮಗೆ ಎದುರಾದ ವಿಚಿತ್ರ ಸಂದೇಶದ ಸ್ಕ್ರೀನ್ ಶಾಟ್ ಶೇರ್ ಮಾಡಿಕೊಂಡಿದ್ದಾರೆ. ಈ ಪೋಸ್ಟ್ ಅನೇಕ ಸೋಷಿಯಲ್ ಮೀಡಿಯಾ ಬಳಕೆದಾರರನ್ನು ಗೊಂದಲಕ್ಕೀಡು ಮಾಡಿದೆ.

ಪ್ರಧಾನಿ ನರೇಂದ್ರ ಮೋದಿಗೆ ಬಸವಣ್ಣ ಸ್ಮರಣಿಕೆ ನೀಡಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌; ರಾಜ್ಯದ ಅಭಿವೃದ್ಧಿ ಬಗ್ಗೆ ಚರ್ಚೆ

ಪ್ರಧಾನಿ ನರೇಂದ್ರ ಮೋದಿ ಜತೆ ಡಿ.ಕೆ. ಶಿವಕುಮಾರ್‌ ಸಮಾಲೋಚನೆ

DK Shivakumar: ದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಗುರುವಾರ (ಜೂನ್‌ 11) ರಾಷ್ಟ್ರಪತಿ ಭವನದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಅಹವಾಲು ಸಲ್ಲಿಸಿ, ಸಮಾಲೋಚನೆ ನಡೆಸಿದರು. ಪ್ರಧಾನಿ ಭೇಟಿಯ ಫೋಟೊಗಳನ್ನು ಡಿಕೆಶಿ ತಮ್ಮ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಆಕಾಶ ಏರ್‌ನಿಂದ ಪ್ರಯಾಣಿಕರಿಗಾಗಿ ಆರೋಗ್ಯಪೂರ್ಣ ಯೋಗ ಡೇ ಸ್ಪೆಷಲ್ ಮೀಲ್ ಬಿಡುಗಡೆ; ಬುಕ್ಕಿಂಗ್‌ ಮಾಡುವ ವಿಧಾನ ಇಲ್ಲಿದೆ

ಆಕಾಶ ಏರ್‌ನಿಂದ ಯೋಗ ಡೇ ಸ್ಪೆಷಲ್ ಮೀಲ್ ಬಿಡುಗಡೆ

Akasa Air: ವಿಮಾನಯಾನ ಸಂಸ್ಥೆ ಆಕಾಶ ಏರ್ ಅಂತಾರಾಷ್ಟ್ರೀಯ ಯೋಗ ದಿನವನ್ನು ವಿಶಿಷ್ಟವಾಗಿ ಆಚರಿಸಲು ಮುಂದಾಗಿದೆ. ಈ ನಿಟ್ಟಿನಲ್ಲಿ ಸಂಸ್ಥೆಯ ಆನ್‌ಬೋರ್ಡ್ ಆಹಾರ ಸೇವೆಯಾದ ಕೆಫೆ ಆಕಾಶ ಸತತ ನಾಲ್ಕನೇ ಆವೃತ್ತಿಯ ಯೋಗ ಡೇ ಸ್ಪೆಷಲ್ ಮೀಲ್ ಪರಿಚಯಿಸಿದೆ. ಅದನ್ನು ಬುಕ್ಕಿಂಗ್‌ ಮಅಡೋದು ಹೇಗೆ ಎನ್ನುವ ವಿವರ ಇಲ್ಲಿದೆ.

ಬೆಂಗಳೂರು ಏರ್‌ಪೋರ್ಟ್ ಸಿಟಿಯಲ್ಲಿ ತಲೆ ಎತ್ತಲಿದೆ ಬೃಹತ್ ಕನ್ವೆನ್ಷನ್ ಸೆಂಟರ್: ಪ್ರೆಸ್ಟೀಜ್ ಗ್ರೂಪ್‌ನೊಂದಿಗೆ BACL ಒಪ್ಪಂದ

ಬೆಂಗಳೂರು ಏರ್‌ಪೋರ್ಟ್ ಸಿಟಿಯಲ್ಲಿ ಬೃಹತ್ ಕನ್ವೆನ್ಷನ್ ಸೆಂಟರ್

ಬೆಂಗಳೂರು ಏರ್‌ಪೋರ್ಟ್ ಸಿಟಿಯ ಆವರಣದಲ್ಲಿ ಅತ್ಯಾಧುನಿಕ ಸಮಗ್ರ ತಾಣವೊಂದು ತಲೆ ಎತ್ತಲಿದೆ. ಅಂತಾರಾಷ್ಟ್ರೀಯ ಗುಣಮಟ್ಟದ ಸಮಾವೇಶ ಕೇಂದ್ರ ಹಾಗೂ ಪ್ರದರ್ಶನ ವೇದಿಕೆಗಳನ್ನು ಒಳಗೊಂಡ ಈ ತಾಣವನ್ನು ಸಹಭಾಗಿತ್ವದಲ್ಲಿ ನಿರ್ಮಿಸುವುದಾಗಿ ಪ್ರೆಸ್ಟೀಜ್ ಗ್ರೂಪ್ ಹಾಗೂ ಬೆಂಗಳೂರು ಏರ್‌ಪೋರ್ಟ್ ಸಿಟಿ ಲಿ. (ಬಿಎಸಿಎಲ್‌) ಗುರುವಾರ ಘೋಷಿಸಿವೆ.

ಪರಿಶಿಷ್ಟ ಪಂಗಡಕ್ಕೆ ಮೀಸಲಿಟ್ಟ ಅನುದಾನ ತೆಲಂಗಾಣಕ್ಕೆ ಸಾಗಿಸಿದ ಕಾಂಗ್ರೆಸ್‌; ಏನಿದು ಗಂಭೀರ ಆರೋಪ?

ಅಭಿವೃದ್ಧಿ ಶೂನ್ಯ ಕಾಂಗ್ರೆಸ್ ಸರ್ಕಾರ: ಬಿ.ವೈ. ವಿಜಯೇಂದ್ರ

BY Vijayendra: 3 ವರ್ಷಗಳಲ್ಲಿ ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯ ನಡೆದಿಲ್ಲ. ಪರಿಶಿಷ್ಟ ಪಂಗಡಕ್ಕೆ ಮೀಸಲಿಟ್ಟ ಹಣವನ್ನೂ ತೆಲಂಗಾಣಕ್ಕೆ ತೆಗೆದುಕೊಂಡು ಹೋಗಿ ದುರ್ಬಳಕೆ ಮಾಡಿದ್ದು ರಾಜ್ಯದ ಜನರ ಮುಂದಿದೆ. ಅಭಿವೃದ್ಧಿ ಶೂನ್ಯ ಕಾಂಗ್ರೆಸ್ ಸರ್ಕಾರವಿದ್ದು, ಇವರ ವೈಫಲ್ಯ ಮುಚ್ಚಿಹಾಕಲು ಕೇಂದ್ರ ಸರ್ಕಾರ ದೂರುವ ಕೆಲಸ ಮಾಡುತ್ತಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಆರೋಪಿಸಿದ್ದಾರೆ.

Sringeri News: 300ಕ್ಕೂ ಹೆಚ್ಚು ಮಂದಿಗೆ ಆರೋಗ್ಯ ಸೇವೆ: ಶ್ರೀ ಅಭಿನವ ವಿದ್ಯಾತೀರ್ಥ ಮೊಬೈಲ್ ಆಸ್ಪತ್ರೆ ಶಿಬಿರಕ್ಕೆ ಉತ್ತಮ ಸ್ಪಂದನೆ

ಶ್ರೀ ಅಭಿನವ ವಿದ್ಯಾತೀರ್ಥ ಮೊಬೈಲ್ ಆಸ್ಪತ್ರೆ ಶಿಬಿರಕ್ಕೆ ಉತ್ತಮ ಸ್ಪಂದನೆ

ಶ್ರೀ ಜೆಸಿಬಿಎಂ ಕಾಲೇಜು ಆವರಣದಲ್ಲಿ ನಡೆದ ಶಿಬಿರದಲ್ಲಿ ಸುಮಾರು 300ಕ್ಕೂ ಹೆಚ್ಚು ಮಂದಿ ಭಾಗವಹಿಸಿ ವಿವಿಧ ಆರೋಗ್ಯ ತಪಾಸಣೆ ಹಾಗೂ ತಜ್ಞ ವೈದ್ಯರ ಸಲಹೆಯ ಪ್ರಯೋಜನ ಪಡೆದರು. ಶ್ರೀ ಅಭಿನವ ವಿದ್ಯಾತೀರ್ಥ ಮೊಬೈಲ್ ಆಸ್ಪತ್ರೆಯ ಮೂಲಕ ಆರೋಗ್ಯ ಸೇವೆ ಗಳನ್ನು ಒಂದೇ ಸೂರಿನಡಿ ಒದಗಿಸಲಾಯಿತು.

ʼʼಫಲಾನುಭವಿಗಳ ಸಂಖ್ಯೆ ಕಡಿಮೆ ಮಾಡಲು ಗೃಹಲಕ್ಷ್ಮಿ ಯೋಜನೆಗೆ ಸರ್ಕಾರದಿಂದ ಕಂಡಿಷನ್ʼʼ: ಸಿ.ಟಿ. ರವಿ ವಾಗ್ದಾಳಿ

ಗೃಹಲಕ್ಷ್ಮಿ ಯೋಜನೆಗೆ ಈಗ ಕಂಡಿಷನ್ ಯಾಕೆ?: ಸಿ.ಟಿ. ರವಿ

CT Ravi: ಗೃಹಲಕ್ಷ್ಮಿ ಯೋಜನೆಗೆ ಈಗ ಕಂಡಿಷನ್ ಯಾಕೆ? ಎಂದು ಪ್ರಶ್ನಿಸಿರುವ ಬಿಜೆಪಿ ರಾಷ್ಟ್ರೀಯ ಮಾಜಿ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ, ಫಲಾನುಭವಿ ಜನರನ್ನು ಕಡಿಮೆ ಮಾಡಲು ಕಂಡಿಷನ್ ಹಾಕುತ್ತೀರಿ. ನಿಮ್ಮ ಹಳೆ ಭಾಷಣವನ್ನು ಜನರು ಕೇಳಿಸಿಕೊಳ್ಳುತ್ತಾರೆ. ಇದಕ್ಕೆ ಸೂಕ್ತ ಸಮಯದಲ್ಲಿ ಜನರು ಉತ್ತರ ಕೊಡುತ್ತಾರೆ ಎಂದು ಹೇಳಿದ್ದಾರೆ.

ಕೆಲಸದ ಜೊತೆಯಲ್ಲೇ ಬಿಟ್ಸ್‌ ಪಿಲಾನಿಯಿಂದ ಎಂಬಿಎ! AM/NS Indiaದ ಚೊಚ್ಚಲ ಬ್ಯಾಚ್‌ಗೆ ಪದವಿ ಪ್ರದಾನ

AM/NS Indiaದ ಚೊಚ್ಚಲ ಬ್ಯಾಚ್‌ಗೆ ಪದವಿ ಪ್ರದಾನ

ಉದ್ಯೋಗಿಗಳು ತಮ್ಮ ಕೆಲಸವನ್ನು ಬಿಡದೆಯೇ ಹೊಸ ಕೌಶಲ್ಯಗಳನ್ನು ಕಲಿಯಲು 'ವರ್ಕ್ ಇಂಟಿಗ್ರೇಟೆಡ್ ಲರ್ನಿಂಗ್ ಪ್ರೋಗ್ರಾಮ್' ಸಹಾಯ ಮಾಡುತ್ತದೆ. ಈಗಾಗಲೇ ಬಿಟ್ಸ್ ಪಿಲಾನಿ ಜೊತೆ ಸೇರಿ 'ಬಿ.ಟೆಕ್ ಪ್ರೊಸೆಸ್ ಎಂಜಿನಿಯರಿಂಗ್' ಕೋರ್ಸ್ ಅನ್ನು ಯಶಸ್ವಿಯಾಗಿ ನಡೆಸಿದ್ದ ಕಂಪನಿ, ಭವಿಷ್ಯದ ಲೀಡರ್‌ಗಳನ್ನು ಸೃಷ್ಟಿಸುವ ಉದ್ದೇಶದಿಂದ 'ಮ್ಯಾನು ಫ್ಯಾಕ್ಚರಿಂಗ್ ಮ್ಯಾನೇಜ್‌ಮೆಂಟ್ ಎಂಬಿಎ' ಕೋರ್ಸ್ ಅನ್ನು ಆರಂಭಿಸಿತ್ತು.

10 ಕೋಟಿ ರುಪಾಯಿಗೂ ಅಧಿಕ ರಾಯಧನ ಬಾಕಿ: ಶಾಸಕ ವೆಂಕಟೇಶ್ ಒಡೆತನದ ಕಲ್ಲುಗಣಿ ಗುತ್ತಿಗೆ ರದ್ದು

ಪಾವಗಡ ಶಾಸಕ ವೆಂಕಟೇಶ್ ಒಡೆತನದ ಕಲ್ಲುಗಣಿ ಗುತ್ತಿಗೆ ರದ್ದು

Pavagada MLA Venkatesh: ಸರ್ಕಾರಿ ನಿಯಮ ಉಲ್ಲಂಘಿಸಿ 10 ಕೋಟಿ ರುಪಾಯಿಗೂ ಅಧಿಕ ರಾಯಧನ ಬಾಕಿ ಪಾವತಿಸದ ಹಿನ್ನೆಲೆಯಲ್ಲಿ ಪಾವಗಡ ತಾಲೂಕಿನ ತಿಪ್ಪಯ್ಯನದುರ್ಗದಲ್ಲಿರುವ ಪಾವಗಡ ಕಾಂಗ್ರೆಸ್ ಶಾಸಕ ವೆಂಕಟೇಶ್, ಪತ್ನಿ ಶಶಿಕಲಾ ಒಡೆತನದ ವೆಂಕಟೇಶ್ವರ ಕಲ್ಲುಗಣಿ ಗುತ್ತಿಗೆ ರದ್ದುಪಡಿಸಿ ಇಲಾಖೆ ಆದೇಶಿಸಿದೆ.

ಗ್ರಾಮಗಳತ್ತ ಲಕ್ಷ್ಮೀ ಹೆಬ್ಬಾಳ್ಕರ್ ಹೆಜ್ಜೆ; ಜನರ ಸಮಸ್ಯೆಗಳಿಗೆ ಸ್ಥಳದಲ್ಲೇ ಸ್ಪಂದನೆ

ಗ್ರಾಮಗಳಿಗೆ ಮಾಜಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೇಟಿ, ಪರಿಶೀಲನೆ

Laxmi Hebbalkar: ಮಾಜಿ ಸಚಿವೆ ಹಾಗೂ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್, ತಮ್ಮ ಕ್ಷೇತ್ರದ ವಿವಿಧ ಗ್ರಾಮಗಳಿಗೆ ಖುದ್ದಾಗಿ ಭೇಟಿ ನೀಡಿ ಜನರ ಸಮಸ್ಯೆಗಳನ್ನು ಆಲಿಸಿದರು. ಗೃಹ ಕಚೇರಿಯಲ್ಲಿ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸುವುದರ ಜತೆಗೆ ತಾವೇ ಗ್ರಾಮಗಳಿಗೆ ತೆರಳಿ ಅಲ್ಲಿನ ವಾಸ್ತವ ಸ್ಥಿತಿಗತಿಗಳನ್ನು ಪರಿಶೀಲಿಸುತ್ತಿದ್ದು, ಜನರ ಅಗತ್ಯಗಳು ಹಾಗೂ ಮೂಲಸೌಕರ್ಯ ಸಮಸ್ಯೆಗಳ ಬಗ್ಗೆ ನೇರವಾಗಿ ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ ಸೇರಿ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧ ಆಯ್ಕೆ

ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧ ಆಯ್ಕೆ

Rajya Sabha: ಕರ್ನಾಟಕ ವಿಧಾನಸಭೆಯಿಂದ ರಾಜ್ಯಸಭೆಯ ನಾಲ್ವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಚುನಾವಣಾ ಕಣದಲ್ಲಿ ಯಾವುದೇ ಸ್ಪರ್ಧಿಗಳಿಲ್ಲದ ಕಾರಣ ಮೂವರು ಕಾಂಗ್ರೆಸ್ ಅಭ್ಯರ್ಥಿಗಳಾದ ಮಲ್ಲಿಕಾರ್ಜುನ ಖರ್ಗೆ, ಮನ್ಸೂರ್ ಅಲಿಖಾನ್, ಪವನ್ ಖೇರಾ ಹಾಗೂ ಬಿಜೆಪಿಯ ಪ್ರೊ. ಎಂ. ನಾಗರಾಜು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಜಮೀರ್ ಅಹ್ಮದ್‌ ಖಾನ್‌ಗೆ ಸಚಿವ ಸ್ಥಾನ ಸಿಗದಿರಲು ಸಿದ್ದರಾಮಯ್ಯ ಅಸಮಾಧಾನವೇ ಕಾರಣ?

ಆಪ್ತ ಜಮೀರ್ ಅಹ್ಮದ್‌ ವಿರುದ್ಧವೇ ಸಿದ್ದರಾಮಯ್ಯ ಗರಂ

Zameer Ahmed Khan: ಡಿ.ಕೆ. ಶಿವಕುಮಾರ್‌ ಸಚಿವ ಸಂಪುಟದಲ್ಲಿ ಜಮೀರ್ ಅಹ್ಮದ್‌ ಖಾನ್ ಅವರಿಗೆ ಸ್ಥಾನ ಸಿಕ್ಕಿಲ್ಲ. ಇದಕ್ಕೆ ಸಿದ್ದರಾಮಯ್ಯ ಅವರ ಅಸಮಾಧಾನವೇ ಕಾರಣ ಎನ್ನಲಾಗಿದೆ. ʼʼದಾವಣಗೆರೆ ದಕ್ಷಿಣ ಉಪಚುನಾವಣೆಯಲ್ಲಿ ನನ್ನ ವಿರುದ್ಧವೇ ಕೆಲಸ ಮಾಡಿದ್ದಾರೆʼʼ ಎಂದು ಜಮೀರ್‌ ವಿರುದ್ಧ ಸಿದ್ದರಾಮಯ್ಯ ಕೋಪ ಬಹಿರಂಗಪಡಿಸಿದ್ದಾರೆ ಎನ್ನಲಾಗಿದೆ.

ʼʼಹಗರಣದ ಆರೋಪ ಮಾಡುವ ಬಿಜೆಪಿ ಸೂಕ್ತ ದಾಖಲೆ ಒದಗಿಸಲಿʼʼ: ಪ್ರಿಯಾಂಕ್‌ ಖರ್ಗೆ ಸವಾಲು

ಬಿಜೆಪಿಗೆ ಪ್ರಿಯಾಂಕ್‌ ಖರ್ಗೆ ಸವಾಲು

Bengaluru Waste Scam Row: ಬೆಂಗಳೂರು ಘನತ್ಯಾಜ್ಯ ವಿಲೇವಾರಿ ಹೆಸರಿನಲ್ಲಿ 39,000 ಕೋಟಿ ರುಪಾಯಿ ಹಗರಣ ನಡೆದಿರುವುದಾಗಿ ಆರೋಪಿಸಿರುವ ಬಿಜೆಪಿ ನಾಯಕ ಆರ್‌. ಅಶೋಕ್‌ ಅವರಿಗೆ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಇದನ್ನು ಸಾಬೀತುಪಡಿಸುವಂತೆ ಸವಾಲು ಹಾಕಿದ್ದಾರೆ. ʼʼನಿಮ್ಮಲ್ಲಿರುವ ಸಾಕ್ಷ್ಯಗಳನ್ನು ಜನರಿಗೆ ತೋರಿಸಿʼʼ ಎನನುವ ಮೂಲಕ ಪಂಥಾಹ್ವಾನ ನೀಡಿದ್ದಾರೆ.

ನೀತಿ ಆಯೋಗದ ಸಭೆಯಲ್ಲಿ ಡಿಕೆಶಿ ಭಾಗಿ; ಮೋದಿ ಭೇಟಿ ಮಾಡಲಿರುವ ಸಿಎಂ

ನೀತಿ ಆಯೋಗದ ಸಭೆಯಲ್ಲಿ ಡಿಕೆಶಿ ಭಾಗಿ

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ನಡೆಯುತ್ತಿರುವ ಸಿಎಂ ಡಿಕೆ ಶಿವಕುಮಾರ್‌ ಭಾಗವಹಿಸಿದ್ದಾರೆ. ಈ ಸಭೆಯಲ್ಲಿ ರಾಜ್ಯಗಳ ಆರ್ಥಿಕತೆ ಮತ್ತು ಅಭಿವೃದ್ಧಿಗೆ ಸಂಬಂಧಿಸಿದ ಪ್ರಮುಖ ವಿಷಯಗಳ ಕುರಿತು ಚರ್ಚೆಯಾಗುವ ನಿರೀಕ್ಷೆಯಿದೆ. ಸಭೆ ಬಳಿಕ ಡಿಕೆ ಶಿವಕುಮಾರ್‌, ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಧಿಕೃತವಾಗಿ ಭೇಟಿ ಮಾಡಲಿದ್ದಾರೆ.

Bharani Venkatesh 52nd Birthday: ಅಭಿಮಾನಿಗಳ ಸಮ್ಮುಖದಲ್ಲಿ ಸರಳವಾಗಿ ಜನ್ಮದಿನ ಆಚರಿಸಿಕೊಂಡ ಚಿಮುಲ್ ನಿರ್ದೇಶಕ ಭರಣಿ ವೆಂಕಟೇಶ್

ಸರಳವಾಗಿ ಜನ್ಮದಿನ ಆಚರಿಸಿಕೊಂಡ ಚಿಮುಲ್ ನಿರ್ದೇಶಕ ಭರಣಿ ವೆಂಕಟೇಶ್

ಹುಟ್ಟುಹಬ್ಬವನ್ನು ಆಡಂಬರ ದಿಂದ ಆಚರಿಸುವ ಬದಲು ಸೇವಾ ಮನೋಭಾವದಿಂದ ಸರಳವಾಗಿ ಆಚರಿಸಬೇಕು ಎಂಬುದು ತಮ್ಮ ಆಶಯವಾಗಿದೆ .ಆದರೂ ತಮ್ಮ ಮೇಲಿನ ಪ್ರೀತಿ ಮತ್ತು ಅಭಿಮಾನ ದಿಂದ ಬಾಲಕುಂಟಹಳ್ಳಿ ಗ್ರಾಮದ ಗ್ರಾಮ ಪಂಚಾಯಿತಿ ಸದಸ್ಯ ನಾಗರಾಜ್ ಅವರು ಚಿತ್ರದುರ್ಗದಿಂದ ಮಾಡಿಸಿ ತಂದಿದ್ದ ನಾಣ್ಯಗಳಿಂದ ತಯಾರಿಸಿದ ಹಾರವನ್ನು ಅರ್ಪಿಸಿರುವುದು ಸಂತಸ ತಂದಿದೆ

ಕೆರೆಮನೆ ಶಿವಾನಂದ ಹೆಗಡೆಗೆ ಕೇಂದ್ರ ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ

ಕೆರೆಮನೆ ಶಿವಾನಂದ ಹೆಗಡೆಗೆ ಕೇಂದ್ರ ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ

ಖ್ಯಾತ ಯಕ್ಷಗಾನ ಕಲಾವಿದ ಹಾಗೂ ಶ್ರೀ ಇಡಗುಂಜಿ ಮಹಾಗಣಪತಿ ಯಕ್ಷಗಾನ ಮಂಡಳಿಯ ನಿರ್ದೇಶಕರಾದ ಕೆರೆಮನೆ ಶಿವಾನಂದ ಹೆಗಡೆಯವರಿಗೆ ಕೇಂದ್ರ ಸಂಗೀತ ನಾಟಕ ಅಕಾಡೆಮಿಯ ಪ್ರಶಸ್ತಿ ಲಭಿಸಿದೆ. ಕೆರೆಮನೆ ಮಹಾಬಲ ಹೆಗಡೆ ಮೊಮ್ಮಗ ಹಾಗೂ ಶಂಭು ಹೆಗಡೆ ಅವರ ಪುತ್ರನಾದ ಇವರು ತಮ್ಮ 12 ನೇ ವಯಸ್ಸಿನಿಂದಲೇ ಯಕ್ಷಗಾನ ಅಭ್ಯಾಸ ಶುರು ಮಾಡಿದ್ದರು.

ನರೇಂದ್ರ ಮೋದಿ ದೇಶ ಕಂಡ ಯಶಸ್ವಿ ಪ್ರಧಾನಿ ಹಾಗೂ ದೂರ ದೃಷ್ಠಿಯ ನೇತಾರ : ಬಿಜೆಪಿ ತಾಲೂಕು ಅಧ್ಯಕ್ಷ ಕೋಡಿರ್ಲಪ್ಪ

ನರೇಂದ್ರ ಮೋದಿ ದೇಶ ಕಂಡ ಯಶಸ್ವಿ ಪ್ರಧಾನಿ ಹಾಗೂ ದೂರ ದೃಷ್ಠಿಯ ನೇತಾರ

ವಿದೇಶಿ ಪ್ರವಾಸದ ಮೂಲಕ ರಾಜತಾಂತ್ರಿಕ ಸಂಬಂಧಗಳನ್ನು ಗಟ್ಟಿಗೊಳಿಸುವ ಕೆಲಸ ಮಾಡಿ ದ್ದಾರೆ. ವಿವಿಧ ಒಪ್ಪಂದಗಳ ಮೂಲಕ ಬಂಡವಾಳ ತಂದು ದೇಶದ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ. ಮೇಕ್ ಇನ್ ಇಂಡಿಯಾ ಅಭಿಯಾನ(Make in India Campaign)ವು 2047ರೊಳಗೆ ಅಭಿವೃದ್ಧಿ ಶೀಲ ಭಾರತ ನಿರ್ಮಾಣದ ಅವರ ಸ್ಪಷ್ಟ ದೃಷ್ಟಿಕೋನ ಮತ್ತು ಕಾರ್ಯಪಥವನ್ನು ಪ್ರತಿಬಿಂಬಿಸು ತ್ತದೆ ಎಂದರು.

Shidlaghatta News: ದೇಶದ ಅಭಿವೃದ್ಧಿಗೆ ಮೋದಿ ಕೊಡುಗೆ ಸ್ಮರಣೀಯ: ಬಿಜೆಪಿ ಜಿಲ್ಲಾಧ್ಯಕ್ಷ ಸೀಕಲ್ ರಾಮಚಂದ್ರಗೌಡ ಅಭಿಮತ

ಪ್ರಧಾನಿಯಾಗಿ 12 ವರ್ಷ: ದೇವಾಲಯದಲ್ಲಿ ವಿಶೇಷ ಪೂಜೆ, ಸ್ವಚ್ಛತಾ ಕಾರ್ಯ

ಕೇಂದ್ರ ಸರ್ಕಾರ ಜಾರಿಗೊಳಿಸಿರುವ ವಿವಿಧ ಜನಪರ ಯೋಜನೆಗಳು ಹಾಗೂ ಅಭಿವೃದ್ಧಿ ಕಾರ್ಯ ಕ್ರಮಗಳು ದೇಶದ ಪ್ರತಿಯೊಂದು ವರ್ಗದ ಜನರ ಬದುಕಿನಲ್ಲಿ ಬದಲಾವಣೆ ತಂದಿವೆ. ಸಂಸತ್ತಿನಲ್ಲಿ ದೇಶದ ಅಭಿವೃದ್ಧಿಗೆ ಪೂರಕವಾದ ಹಲವು ಐತಿಹಾಸಿಕ ಮಸೂದೆಗಳು ಮತ್ತು ಕಾನೂನುಗಳು ಮೋದಿ ಅವರ ನೇತೃತ್ವದಲ್ಲಿ ಅಂಗೀಕಾರಗೊಂಡಿವೆ

ಪ್ರಧಾನಿ ಮೋದಿ ದೀರ್ಘಾವಧಿ ಆಡಳಿತಕ್ಕೆ ಗುಬ್ಬಿಯಲ್ಲಿ ವಿಶೇಷ ಪೂಜೆ

ಪ್ರಧಾನಿ ಮೋದಿ ದೀರ್ಘಾವಧಿ ಆಡಳಿತಕ್ಕೆ ಗುಬ್ಬಿಯಲ್ಲಿ ವಿಶೇಷ ಪೂಜೆ

ಅತ್ಯಧಿಕ ಅವಧಿಯ ಚುನಾಯಿತ ಪ್ರಧಾನಿಯಾಗಿ ಇಡೀ ವಿಶ್ವ ಮೆಚ್ಚಿದ ಪ್ರಧಾನಿ ನರೇಂದ್ರ ಮೋದಿ (Prime Minister Narendra Modi) ಅವರ ಹನ್ನೆರಡು ವರ್ಷದ ಅಧಿಕಾರ ವಿಶ್ವಕ್ಕೆ ಮಾದರಿಯಾಗಿದೆ. ಜಾಗತಿಕ ಮಟ್ಟದಲ್ಲಿ ವಿಶೇಷ ಹೆಗ್ಗುರುತು ಹಚ್ಚಿದ ಮೋದಿ ಅವರ ಸ್ವಚ್ಛ ಆಡಳಿತ ಸರ್ವಧರ್ಮ ಸಾಕಾರ ಹಾಗೂ ಅಭಿವೃದ್ದಿಯ ಹರಿಕಾರ ಎಂದೆನಿಸಿದ್ದಾರೆ.

Gubbi News: ಹೇಮಾವತಿ ಲಿಂಕ್ ಕೆನಾಲ್ ನಿಲ್ಲಲೇಬೇಕು: ರೈತ ಸಂಘ ಜಿಲ್ಲಾಧ್ಯಕ್ಷ ಎ.ಗೋವಿಂದರಾಜು

ಹೇಮಾವತಿ ಲಿಂಕ್ ಕೆನಾಲ್ ನಿಲ್ಲಲೇಬೇಕು

ಜಿಲ್ಲೆಯ ಏಳು ತಾಲ್ಲೂಕಿಗೆ ಜೀವನದಿಯಾದ ಹೇಮಾವತಿ ಅವೈಜ್ಞಾನಿಕವಾಗಿ ಲಿಂಕ್ ಕೆನಾಲ್ ಮೂಲಕ ಕುಣಿಗಲ್ ಹೆಸರಲ್ಲಿ ಮಾಗಡಿ ರಾಮನಗರಕ್ಕೆ ಹರಿಸುವ ಕಾಮಗಾರಿಯನ್ನು ಸರ್ಕಾರ ಕೈ ಬಿಡಬೇಕು. ಇಲ್ಲವಾದಲ್ಲಿ ಉಗ್ರ ಹೋರಾಟ ರೈತರಿಂದ ನಡೆಯಲಿದೆ. ಈ ಬಗ್ಗೆ ಪೂರ್ವ ಭಾವಿ ಸಭೆಯನ್ನು ಗುಬ್ಬಿಯಲ್ಲಿ ಜೂ.11ರಂದು ನಡೆಸಲಾಗುತ್ತಿದೆ ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಎ.ಗೋವಿಂದರಾಜು ತಿಳಿಸಿದರು.

ಸತ್ಯಸಾಯಿ ಸಂಸ್ಥೆಯ ಉಚಿತ ಆರೋಗ್ಯ ಸೇವೆಯನ್ನು ಮುಕ್ತಕಂಠದಿಂದ ಕೊಂಡಾಡಿದ ಶಾಸಕ

2 ಕೋಟಿ ವೆಚ್ಚದ ಸಿಸಿ ರಸ್ತೆ ಕಾಮಗಾರಿಗೆ ಚಾಲನೆ ನೀಡಿದ ಶಾಸಕ ಪದೀಪ್ ಈಶ್ವರ್

ತಿರ‍್ನಹಳ್ಳಿ ಗ್ರಾಮದಿಂದ ಮುದ್ದೇನಹಳ್ಳಿ ಗ್ರಾಮದವರೆಗಿನ ರಸ್ತೆ ಅಭಿವೃದ್ದಿಪಡಿಸಿ ಕೊಡುವಂತೆ ನಾಗರೀಕ ರಿಂದ ಒತ್ತಾಯವಿತ್ತು. ಕಾರಣ ಈ ರಸ್ತೆಯು ಸತ್ಯಸಾಯಿ ಗ್ರಾಮಕ್ಕೆ ಭೇಟಿಕೊಡುವ ಪ್ರಮುಖ ರಸ್ತೆ ಯಾಗಿದೆ. ಈ ಮಾರ್ಗದ ಮೂಲಕವೇ ಸತ್ಯಸಾಯಿ ಸರಳ ಮೆಮೋರಿಯಲ್ ಆಸ್ಪತ್ರೆಗೆ ನಿತ್ಯವೂ ನೂರಾರು ಮಂದಿ ಸಂಚರಿಸುತ್ತಾರೆ. ದೇಶ ವಿದೇಶಗಳ ಮಂದಿ ಇಲ್ಲಿಗೆ ಭೇಟಿ ಕೊಡುತ್ತಾರೆ

Chikkaballapur News: ವೈಭವ ಮತ್ತು ಲವಲವಿಕೆಯಿಂದ 91ನೇ ಹುಟ್ಟುಹಬ್ಬ ಆಚರಿಸಿಕೊಂಡ ಜಿ.ಪಂ.ಮಾಜಿ ಅಧ್ಯಕ್ಷ ಪಿ.ಎನ್.ಕೇಶವರೆಡ್ಡಿ

ಭೂರೀ ಭೋಜನದ ವ್ಯವಸ್ಥೆಗೆ ಸಂತೃಪ್ತಗೊಂಡ ನಾಗರೀಕರು

50 ವರ್ಷಗಳಷ್ಟು ಸುಧೀರ್ಘ ರಾಜಕೀಯ ಅನುಭವ ಹೊಂದಿರುವ ಮುತ್ಸದ್ದಿ ರಾಜಕಾರಣಿ ಪಿ.ಎನ್. ಕೇಶವರೆಡ್ಡಿ ಜನ್ಮದಿನದ ಅಂಗವಾಗಿ ಬೆಳಗಿನಿಂದಲೇ ಅಭಿಮಾನಿಗಳು ಕಾರ್ಯಕರ್ತರು, ಬಂದು ಬಳಗವೇ ನೆರೆದಿದ್ದು ಬಂದವರಿಗೆ ಪುಷ್ಕಳ ಭೋಜನದ ಊಟೋಪಚಾರದ ವ್ಯವಸ್ಥೆಯನ್ನು ಅಚ್ಚು ಕಟ್ಟಾಗಿ ಮಾಡಿದ್ದು, ಊಟ ಸವಿದ ಪ್ರತಿಯೊಬ್ಬರೂ ಶುಭ ಹಾರೈಸಿ ಮುನ್ನಡೆಯುತ್ತಿದ್ದ ದೃಶ್ಯಗಳು ಸಾಮಾನ್ಯವಾಗಿದ್ದವು.

Bengaluru theft case: ಬೆಂಗಳೂರಿನ ಕಾಂಟ್ರಾಕ್ಟರ್ ಮನೆಯಲ್ಲಿ 25 ಲಕ್ಷ ರೂ. ಕಳ್ಳತನ; ನೇಪಾಳ ಮೂಲದ ಚಾಲಾಕಿ ದಂಪತಿ ಅರೆಸ್ಟ್

ಬೆಂಗಳೂರಿನ ಕಾಂಟ್ರಾಕ್ಟರ್ ಮನೆಯಲ್ಲಿ 25 ಲಕ್ಷ ಕಳ್ಳತನ; ದಂಪತಿ ಅರೆಸ್ಟ್

ಬೆಂಗಳೂರಿನ ಅಮೃತಹಳ್ಳಿಯ ಅರ್ಕಾವತಿ ಲೇಔಟ್‌ನ ಕಾಂಟ್ರಾಕ್ಟರ್ ಮನೆಯಲ್ಲಿ 25 ಲಕ್ಷ ನಗದು ಕಳ್ಳತನವಾಗಿತ್ತು. ಮನೆಕೆಲಸಕ್ಕೆ ಸೇರಿದವರೇ ಕೃತ್ಯ ಎಸಗಿದ್ದು, ಪರಾರಿಯಾಗಲು ಯತ್ನಿಸುತ್ತಿದ್ದ ನೇಪಾಳ ಮೂಲದ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ ನಗದು ವಶಕ್ಕೆ ಪಡೆಯಲಾಗಿದೆ.

World Day Against Child Labor: ಕನ್ನಡ ಭವನದಲ್ಲಿ ಜೂ.12ರಂದು ವಿಶ್ವಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ

ಕನ್ನಡ ಭವನದಲ್ಲಿ ವಿಶ್ವಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ, ವಕೀಲರ ಸಂಘ ಹಾಗೂ ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸಂಘ, ಚಿಕ್ಕಬಳ್ಳಾಪುರ ಇವರ ಸಂಯುಕ್ತಾ ಶ್ರಯದಲ್ಲಿ ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾ ಚರಣೆ(World Day Against Child Labor)ಯನ್ನು ಜೂ.12ರಂದು ಬೆಳಗ್ಗೆ 11 ಗಂಟೆಗೆ ನಗರದ ಕನ್ನಡ ಭವನದಲ್ಲಿ ಆಯೋಜಿಸಲಾಗಿದೆ.

Loading...