ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಕರ್ನಾಟಕ

ನೀರಿನ ಕೊರತೆ ನೀಗಿಸಲು ಸಮಸ್ಯಾತ್ಮಕ ಹೋಬಳಿಗೆ ಜಿಲ್ಲಾ ಮಟ್ಟದ ಅಧಿಕಾರಿ ನೇಮಕ: ಜಿ ಪ್ರಭು

ನೀರಿನ ಕೊರತೆ ನೀಗಿಸಲು ಜಿಲ್ಲಾ ಮಟ್ಟದ ಅಧಿಕಾರಿ ನೇಮಕ

ಜಿಲ್ಲೆಯ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿನ ಕುಡಿಯುವ ನೀರು ಪೂರೈಕೆ, ಜಾನುವಾರುಗಳ ಮೇವಿನ ಸ್ಥಿತಿಗತಿ, ಕೃಷಿ ಚಟುವಟಿಕೆಗಳ ಸಿದ್ಧತೆಗಳಿಗೆ ಸಂಬಂಧಿಸಿದಂತೆ ನಿಗಾ ಹಾಗೂ ಪರಿಶೀಲನೆ ಮಾಡಲು ಜಿಲ್ಲೆಯ 8 ತಾಲ್ಲೂಕುಗಳಲ್ಲಿನ ಎಲ್ಲಾ 26 ಹೋಬಳಿಗಳಿಗೆ  ಒಬ್ಬ ಜಿಲ್ಲಾ ಮಟ್ಟದ ಅಧಿಕಾರಿಯನ್ನು ನೋಡಲ್ ಅಧಿಕಾರಿಯನ್ನಾಗಿ ನೇಮಕ ಮಾಡಲಾಗಿದೆ

Law Student Hospitalized: ಕೆಎಸ್‌ಆರ್‌ಟಿಸಿ ಬಸ್ ಹರಿದು ಕಾನೂನು ವಿದ್ಯಾರ್ಥಿನಿ ಆಸ್ಪತ್ರೆ ಪಾಲು: ವಿದ್ಯಾರ್ಥಿಗಳಿಂದ ಬಾರೀ ಪ್ರತಿಭಟನೆ

ಕೆಎಸ್‌ಆರ್‌ಟಿಸಿ ಬಸ್ ಹರಿದು ಕಾನೂನು ವಿದ್ಯಾರ್ಥಿನಿ ಆಸ್ಪತ್ರೆ ಪಾಲು

ಕೆಎಸ್‌ಆರ್‌ಟಿಸಿ ಬಸ್ ಹರಿದು ನಾಲ್ಕನೇ ಸೆಮಿಸ್ಟರ್ ಕಾನೂನು ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯೊಬ್ಬರು ಬಸ್ ಹತ್ತುವಾಗ ಆಯತಪ್ಪಿ ಕೆಳಗೆ ಬಿದ್ದ ಕೂಡಲೇ ಬಸ್ ಆಕೆಯ ಕಾಲಿನ ಮೇಲೆ ಹರಿದ ಪರಿಣಾಮ ಗಂಭೀರ ಗಾಯಗೊಂಡು ಸಾವು ಬದುಕಿನ ನಡುವೆ ಹೋರಾಟ ನಡೆಸು ವಂತಾದ ಘಟನೆ ಎಸ್‌ಜೆಸಿಐಟಿ ಕಾಲೇಜು ಮುಂಭಾಗ ನಡೆದಿದೆ.

Soumya Reddy: ಬಿಜೆಪಿ ಹುನ್ನಾರದಿಂದಾಗಿ ನಾರೀ ವಂದನಾ ಮಸೂದೆಗೆ ಸೋಲಾಗಿದೆ ಕಾಂಗ್ರೆಸ್‌ನಿಂದಲ್ಲ: ಸೌಮ್ಯ ರೆಡ್ಡಿ ಹೇಳಿಕೆ

ಬಿಜೆಪಿ ಹುನ್ನಾರದಿಂದಾಗಿ ನಾರೀ ವಂದನಾ ಮಸೂದೆಗೆ ಸೋಲು

ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಈ 13 ವರ್ಷಗಳಲ್ಲಿ ನಿರಂತರವಾಗಿ ಕಾಂಗ್ರೆಸ್ ಪಕ್ಷವನ್ನು ಟೀಕಿಸಿಸುವುದು, ಇಲ್ಲಸಲ್ಲದ ಆರೋಪಗಳನ್ನು ಮಾಡಿ ಜನರ ಮನಸ್ಸಿನಲ್ಲಿ ವಿಷತುಂಬುವ ಕೆಲಸ ಮಾಡಲಾಗುತ್ತಿದೆ.ಕಾಂಗ್ರೆಸ್ ಎಂದೂ ಕೂಡ ಮಹಿಳಾ ಮೀಸಲಾತಿ ವಿರೋದಿ ಅಲ್ಲವೇ ಅಲ್ಲ,ಇದು ಜನತೆಗೆ ಗೊತ್ತಿದೆ. ಬಿಜೆಪಿ ಹೇಳಿಕೆ ಹಾಸ್ಯಾಸ್ಪದದಿಂದ ಕೂಡಿದೆ

ಒಳ ಮೀಸಲು ಜಾರಿ ನಮ್ಮ ದಶಕಗಳ ಹೋರಾಟಕ್ಕೆ ಸಿಕ್ಕ ಪ್ರತಿಫಲ: ಡಾ.ನರಸಿಂಹಪ್ಪ ಕಾಳೇನಹಳ್ಳಿ

ಒಳ ಮೀಸಲು ಜಾರಿ ನಮ್ಮ ದಶಕಗಳ ಹೋರಾಟಕ್ಕೆ ಸಿಕ್ಕ ಪ್ರತಿಫಲ: ಡಾ.ನರಸಿಂಹಪ್ಪ

Madhugiri News: ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಕೊಡಿಗೇನಹಳ್ಳಿ ಹೋಬಳಿಯ ಗುಂಡಗಲ್ಲು ಗ್ರಾಮದಲ್ಲಿ ಸ್ನೇಹಜೀವಿ ಗೆಳೆಯರ ಬಳಗದ ವತಿಯಿಂದ ಡಾ.ಬಿ.ಆರ್. ಅಂಬೇಡ್ಕರ್, ಬಾಬು ಜಗಜೀವನ್ ರಾಮ್ ಹಾಗೂ ಬಸವೇಶ್ವರ ಜಯಂತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಪ್ರಗತಿಪರ ಚಿಂತಕ ಡಾ.ನರಸಿಂಹಪ್ಪ ಕಾಳೇನಹಳ್ಳಿ ಮಾತನಾಡಿದ್ದಾರೆ.

ಮೀಸಲಾತಿ ವಿರೋಧಿಸಿ 'ಮಹಿಳಾ ಪರ' ಎಂದು ಬೊಗಳೆ ಬಿಡುತ್ತಿದೆ ಕಾಂಗ್ರೆಸ್: ಪ್ರಲ್ಹಾದ್‌ ಜೋಶಿ ವಾಗ್ದಾಳಿ

ಮೀಸಲಾತಿ ವಿರೋಧಿಸಿ 'ಮಹಿಳಾ ಪರ' ಎಂದು ಬೊಗಳೆ ಬಿಡುತ್ತಿದೆ ಕಾಂಗ್ರೆಸ್: ಜೋಶಿ

ಜವಾಹರಲಾಲ್ ನೆಹರು ಎಸ್ಸಿ, ಎಸ್ಟಿ ಮೀಸಲಾತಿ, ರಾಜೀವ ಗಾಂಧಿ ಒಬಿಸಿ ಮೀಸಲಾತಿ ವಿರೋಧಿಸಿದ್ದರೆ, ಇದೀಗ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಮಹಿಳಾ ಮೀಸಲಾತಿಯನ್ನು ಧಿಕ್ಕರಿಸಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹದ್‌ ಜೋಶಿ ಆರೋಪಿಸಿದ್ದಾರೆ.

ಸಾರ್ವಜನಿಕ ಸ್ಥಳದಲ್ಲಿ ಎಲ್ಲರೆದುರೇ ಯುವಕ-ಯುವತಿಯ ರೊಮ್ಯಾನ್ಸ್; ಮಣಿಪಾಲದಲ್ಲಿ ಕಂಡುಬಂದ ದೃಶ್ಯಕ್ಕೆ ನೆಟ್ಟಿಗರು ಕಿಡಿಕಿಡಿ

ಸಾರ್ವಜನಿಕ ಸ್ಥಳದಲ್ಲೇ ಯುವಕ-ಯುವತಿಯ ರೊಮ್ಯಾನ್ಸ್: ವಿಡಿಯೊ ವೈರಲ್‌

Viral Video: ಕೆಲ ಯುವಕ-ಯುವತಿಯರು ಸಾರ್ವಜನಿಕ ಸ್ಥಳಗಳಲ್ಲಿ ಅಸಭ್ಯವಾಗಿ ವರ್ತಿಸುತ್ತಿದ್ದಾರೆ. ಬಸ್ಸಿನಲ್ಲಿ ಪ್ರೇಮಿಗಳು ಮೈಮರೆತು ಚುಂಬಿಸುವುದು, ರೈಲಿನಲ್ಲಿ ಪರಸ್ವರ ಅಪ್ಪಿಕೊಳ್ಳುವುದು ಹೀಗೆ ನಾನಾ ವಿಡಿಯೊಗಳು ವೈರಲ್ ಆಗುತ್ತವೆ. ಇದಕ್ಕೆ ಸಾಕ್ಷಿ ಎಂಬಂತೆ ಉಡುಪಿಯ ಮಣಿಪಾಲದಲ್ಲಿ ಯುವ ಜೋಡಿಯೊಂದು ಸಾರ್ವಜನಿಕವಾಗಿಯೇ ರೊಮ್ಯಾನ್ಸ್‌ ಮಾಡಿದೆ.

‘ಸ್ಕೋರ್–2026’: ಕಾರ್ಡಿಯೊಥೊರಾಸಿಕ್ ಯುವ ಶಸ್ತ್ರವೈದ್ಯರಿಗೆ ಜಾಗತಿಕ ತಜ್ಞರ ಮಾರ್ಗದರ್ಶನ

‘ಸ್ಕೋರ್–2026’: ಹೃದಯ ಶಸ್ತ್ರವೈದ್ಯರಿಗೆ ಎರಡು ದಿನಗಳ ವಿಶೇಷ ತರಬೇತಿ

ಮುದ್ದೇನಹಳ್ಳಿಯ ಸತ್ಯಸಾಯಿ ಗ್ರಾಮದಲ್ಲಿರುವ (Sathya Sai Grama) ಭಾರತದ ಮೊದಲ ಉಚಿತ ಗ್ರಾಮೀಣ ವೈದ್ಯಕೀಯ ಕಾಲೇಜಿನಲ್ಲಿ ಜಾಗತಿಕ ಕಾರ್ಡಿಯೊಥೊರಾಸಿಕ್ ತಜ್ಞರು ಒಂದೇ ವೇದಿಕೆಯಲ್ಲಿ ಸೇರಿ, ಮುಂದಿನ ತಲೆಮಾರಿನ ಹೃದಯ ಶಸ್ತ್ರವೈದ್ಯರಿಗೆ ಎರಡು ದಿನಗಳ ವಿಶೇಷ ತರಬೇತಿ ನೀಡುವ ‘ಸ್ಕೋರ್–2026’ ಕಾರ್ಯಕ್ರಮ ಶನಿವಾರ ಆರಂಭವಾಯಿತು.

ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ 'ಬೆಂಗಳೂರಿನ ಆತ್ಮ' ಕಲಾತ್ಮಕ ಶಿಲ್ಪ ಅನಾವರಣ; ಟರ್ಮಿನಲ್-2ರ ಸೌಂದರ್ಯಕ್ಕೆ ಹೊಸ ಮೆರುಗು

ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ 'ಬೆಂಗಳೂರಿನ ಆತ್ಮ' ಕಲಾತ್ಮಕ ಶಿಲ್ಪ ಅನಾವರಣ

Kempegowda International Airport: ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 'ಬೆಂಗಳೂರಿನ ಆತ್ಮ' ಹೆಸರಿನ ಸುಂದರ ಹಾಗೂ ಬೃಹತ್ ಕಲಾತ್ಮಕ ಶಿಲ್ಪವನ್ನು ಲೋಕಾರ್ಪಣೆ ಮಾಡಲಾಗಿದೆ. ಬಯೊಕಾನ್ ಫೌಂಡೇಷನ್ ಮತ್ತು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಲಿಮಿಟೆಡ್ (ಬಿಐಎಎಲ್‌) ಸಹಯೋಗದಲ್ಲಿ ಈ ಕಲಾಕೃತಿಯನ್ನು ಟರ್ಮಿನಲ್-2ರ ಮುಂಭಾಗದಲ್ಲಿ ಸ್ಥಾಪಿಸಲಾಗಿದೆ.

Farmers Protest: ಸಮರ್ಪಕ ವಿದ್ಯುತ್ ಪೂರೈಕೆಗೆ ಆಗ್ರಹ; ರೈತರಿಂದ ಬೆಸ್ಕಾಂ ಕಚೇರಿಗೆ ಮುತ್ತಿಗೆ

ಸಮರ್ಪಕ ವಿದ್ಯುತ್ ಪೂರೈಕೆಗೆ ಆಗ್ರಹ; ರೈತರಿಂದ ಬೆಸ್ಕಾಂ ಕಚೇರಿಗೆ ಮುತ್ತಿಗೆ

Tiptur News: ಅಸಮರ್ಪಕ ವಿದ್ಯುತ್ ಪೂರೈಕೆಯಿಂದ ರೋಸಿ ಹೋದ ಹಾಲ್ಕುರಿಕೆ ಮತ್ತು ಸುತ್ತಮುತ್ತಲಿನ ಗ್ರಾಮಗಳ ನೂರಾರು ರೈತರು, ಹಾಲ್ಕುರಿಕೆ ಪವರ್ ಸ್ಟೇಷನ್‌ಗೆ ಮುತ್ತಿಗೆ ಹಾಕಿದ್ದು, ಕಳೆದ ಎರಡು ತಿಂಗಳಿನಿಂದ ಸಮರ್ಪಕ ವಿದ್ಯುತ್‌ ನೀಡದೆ ರೈತರ ಬೆಳೆಗಳ ಜತೆ ಚೆಲ್ಲಾಟವಾಡುತ್ತಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ.

Actor Chetan Ahimsa: ಡಾ. ರಾಜ್‌ಕುಮಾರ್‌ ಅಭಿಮಾನಿಗಳಿಂದ ಮುತ್ತಿಗೆ; ಕ್ಷಮೆಯಾಚಿಸಿದ ನಟ ಚೇತನ್‌

ಡಾ. ರಾಜ್‌ಕುಮಾರ್‌ ಸಮಾಧಿ ಕುರಿತ ಹೇಳಿಕೆಗೆ ನಟ ಚೇತನ್‌ ಕ್ಷಮೆಯಾಚನೆ

Dr. Rajkumar's memorial: ವರನಟ ಡಾ.ರಾಜ್​ಕುಮಾರ್ ಅವರ ಸಮಾಧಿಗೆ ಸರ್ಕಾರ ಜಾಗ ನೀಡಿರವ ನಿರ್ಧಾರವನ್ನು ನಟ ಚೇತನ್ ಅಹಿಂಸಾ ಟೀಕಿಸಿದ್ದರು. ಈ ಹಿನ್ನೆಲೆಯಲ್ಲಿ ಅವರ ವಿರುದ್ಧ ರಾಜ್​ಕುಮಾರ್ ಅಭಿಮಾನಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಅಲ್ಲದೆ ಇಂದು ರಾಜ್‌ಕುಮಾರ್‌ ಅವರ ಅಭಿಮಾನಿಗಳು ಮನೆಗೆ ಮುತ್ತಿಗೆ ಹಾಕಿ, ಆಕ್ರೋಶ ಹೊರಹಾಕಿದ್ದರಿಂದ ನಟ ಚೇತನ್‌ ಬಹಿರಂಗವಾಗಿ ಕ್ಷಮೆ ಕೇಳಿದ್ದಾರೆ.

Gubbi News: ಸಂವಿಧಾನದ ಮೂಲಕ ನ್ಯಾಯ ಒದಗಿಸಿಕೊಟ್ಟ ಮಹಾನ್ ನಾಯಕ ಡಾ.ಬಿ.ಆರ್.ಅಂಬೇಡ್ಕರ್*

ಸಂವಿಧಾನದ ಮೂಲಕ ನ್ಯಾಯ ಒದಗಿಸಿಕೊಟ್ಟ ನಾಯಕ ಡಾ.ಅಂಬೇಡ್ಕರ್*

ಬೆಸ್ಕಾಂ ಎಸ್ಓ ಎಂಎನ್ ಕೋಟೆ ಜಯರಾಮ್ ಮಾತನಾಡಿ ಅಂಬೇಡ್ಕರ್ ಪಟ್ಟಂತ ಶ್ರಮ ಇವತ್ತು ದಲಿತರು ಸ್ವಾಭಿಮಾನಿಗಳಾಗಿ ಬದುಕಲು ದಾರಿದೀಪವಾಗಿದೆ. ಅವರ ಆದರ್ಶವನ್ನು ಎಲ್ಲರೂ ಪಾಲಿಸಬೇಕು ಎಂದರು. ಗ್ರಾಪಂ ಮಾಜಿ ಉಪಾಧ್ಯಕ್ಷ ದಿಲೀಪ್ ಮಾತನಾಡಿ ಎಲ್ಲಾ ವರ್ಗದ ಜನರಿಗೆ ಸಂವಿ ಧಾನದ ಮೂಲಕ ನ್ಯಾಯ ಒದಗಿಸಿಕೊಟ್ಟ ಮಹಾನ್ ನಾಯಕ ಡಾ. ಬಿ ಆರ್ ಅಂಬೇಡ್ಕರ್ ಎಂದು ತಿಳಿಸಿದರು.

ಎಂಟಿಆರ್‌ ಸಂಸ್ಥೆಯ ವಾರ್ಷಿಕ ಸಾಂಸ್ಕೃತಿಕ ಮತ್ತು ಆಹಾರ ಹಬ್ಬ ಎಂಟಿಆರ್ ಕರುನಾಡು ಸ್ವಾದ 2026 ಅದ್ದೂರಿ ಆರಂಭ

ಎಂಟಿಆರ್ ಕರುನಾಡು ಸ್ವಾದ 2026 ಅದ್ದೂರಿ ಆರಂಭ

ಪಾಕವಿಧಾನದ ಹಿಂದಿನ ಕಥೆ ಎಂಬ ವಿಷಯದ ಸುತ್ತ ಈ ಬಾರಿಯ ಕರುನಾಡು ಸ್ವಾದ ಆಹಾರ ಮೇಳ ಆಯೋಜಿತವಾಗಿದೆ. ಈ ವರ್ಷದ ಎಂಟಿಆರ್ ಕರುನಾಡು ಸ್ವಾದವು ಕರ್ನಾಟಕದ ಸ್ಥಳೀಯ ಪದಾರ್ಥ ಗಳ ಮಹತ್ವವನ್ನು ಎತ್ತಿ ತೋರಿಸಲಿದೆ. ಉದ್ಘಾಟನಾ ದಿನದ ರಾತ್ರಿಯಂದು ಕರ್ನಾಟಕದ ಪ್ರಮುಖ ಆರು ಪ್ರದೇಶಗಳಾದ ಉತ್ತರ ಕರ್ನಾಟಕ, ಕಲ್ಯಾಣ ಕರ್ನಾಟಕ, ಕೊಡಗು, ದಕ್ಷಿಣ ಕನ್ನಡ, ಉಡುಪಿ ಮತ್ತು ಹಳೇ ಮೈಸೂರು ಪ್ರಾಂತ್ಯಗಳ ವೈವಿಧ್ಯಮಯ ಆಹಾರ ಪದ್ಧತಿಯನ್ನು ಪ್ರದರ್ಶಿಸ ಲಾಯಿತು.

Actor Chetan Ahimsa: ರಾಜ್​​ಕುಮಾರ್ ಸಮಾಧಿ ಬಗ್ಗೆ ಪ್ರಶ್ನೆ; ನಟ ಚೇತನ್‌ ವಿರುದ್ಧ ಡಾ. ರಾಜ್‌ ಅಭಿಮಾನಿಗಳ ಆಕ್ರೋಶ, ದೂರು ದಾಖಲು

ರಾಜ್​​ಕುಮಾರ್ ಸಮಾಧಿ ಬಗ್ಗೆ ಪ್ರಶ್ನೆ; ಚೇತನ್‌ ಅಹಿಂಸಾ ವಿರುದ್ಧ ದೂರು

ಡಾ. ರಾಜಕುಮಾರ್ ಅವರ ಸಮಾಧಿಗಾಗಿ ಬೆಂಗಳೂರು ನಗರದ ಮಧ್ಯದಲ್ಲಿ 2.5 ಎಕರೆ ಭೂಮಿಯನ್ನು ನೀಡುವುದು ತಿಳಿವಳಿಕೆಯ ನಿರ್ಧಾರವಾಗಿತ್ತೇ ಎಂಬುದನ್ನು ಪ್ರಶ್ನಿಸಬೇಕಾಗಿದೆ ಎಂದು ಫೇಸ್‌ಬುಕ್‌ನಲ್ಲಿ ನಟ ಚೇತನ್‌ ಪೋಸ್ಟ್‌ ಮಾಡಿದ್ದರು. ಈ ಬಗ್ಗೆ ಡಾ.ರಾಜ್‌ ಕುಮಾರ್‌ ಅಭಿಮಾನಿಗಳು ಆಕ್ರೋಶ ಹೊರಹಾಕಿದ್ದು, ನಟನ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ದೂರು ನೀಡಿದ್ದಾರೆ.

ಭಾರತದಲ್ಲಿ ಉದ್ಯಮಕ್ಕಾಗಿ ಪ್ರತಿಭೆಗಳ ನಿರ್ಮಾಣ: UNSW ಮತ್ತು ಡೆಲಾಯ್ಟ್ ಸಹಯೋಗ

ಭಾರತದಲ್ಲಿ ಉದ್ಯಮಕ್ಕಾಗಿ ಪ್ರತಿಭೆಗಳ ನಿರ್ಮಾಣ

ಭಾರತದಲ್ಲಿ AI ಮತ್ತು ನಾವೀನ್ಯತೆಯಲ್ಲಿ ಮುಂಚೂಣಿಯಲ್ಲಿರುವ ಜಾಗತಿಕ ಟಾಪ್ 20 ವಿಶ್ವ ವಿದ್ಯಾ ಲಯವನ್ನು ಒಟ್ಟುಗೂಡಿಸುವ ಈ ಸಹಯೋಗವು, ಭಾರತದ ವಿಕಸನಗೊಳ್ಳುತ್ತಿರುವ ಆರ್ಥಿಕತೆಗೆ ಸಹಕಾರವಾಗಿ ಭವಿಷ್ಯದ ಪ್ರತಿಭೆಗಳಿಗೆ ವೇಗ ನೀಡಲು, ಶೈಕ್ಷಣಿಕ, ವಿದ್ಯಾರ್ಥಿಗಳು ಮತ್ತು ಉದ್ಯಮವನ್ನು ಸಂಪರ್ಕಿಸುವ ಗುರಿಯನ್ನು ಹೊಂದಿದೆ.

Kodi Mutt Swamiji: ದೇಶದಲ್ಲಿ ಆಹಾರ, ನೀರಿಗೆ ಹಾಹಾಕಾರ ಉಂಟಾಗುತ್ತೆ, ಅಪಮೃತ್ಯುಗಳ ಸಂಖ್ಯೆ ಹೆಚ್ಚುತ್ತೆ: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ!

ಆಹಾರ, ನೀರಿಗೆ ಹಾಹಾಕಾರ ಉಂಟಾಗುತ್ತೆ: ಕೋಡಿಮಠ ಶ್ರೀ ಭವಿಷ್ಯ!

Mandya News: ಮದ್ದೂರು ತಾಲೂಕಿನ ಚಾಮನಹಳ್ಳಿ ಗ್ರಾಮದಲ್ಲಿ ಶನಿವಾರ ನಡೆದ ಶ್ರೀ ಬಂಡೆ ಶನೇಶ್ವರಸ್ವಾಮಿಯ ಜಾತ್ರಾ ಮಹೋತ್ಸವ ಹಾಗೂ ಮಹಾ ರಾಜಗೋಪುರ ಉದ್ಘಾಟನಾ ಸಮಾರಂಭದಲ್ಲಿ ಕೋಡಿಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ.

Summer Trend 2026: ಬಿಸಿಲ ಝಳ ಹೆಚ್ಚಳ; ಉದ್ಯಾನನಗರಿಯಲ್ಲಿ ಪೂಲ್ ಪಾರ್ಟಿಗಳ ಅಬ್ಬರ!

ಬಿಸಿಲ ಝಳ ಹೆಚ್ಚಳ; ಬೆಂಗಳೂರಿನಲ್ಲಿ ಪೂಲ್ ಪಾರ್ಟಿಗಳ ಅಬ್ಬರ!

ದಶಕಗಳ ಹಿಂದೆ ಉದ್ಯಾನನಗರಿಗೆ ಲಗ್ಗೆ ಇಟ್ಟಿದ್ದ ಪೂಲ್ ಪಾರ್ಟಿ ಕಾನ್ಸೆಪ್ಟ್‌ನ ಅಬ್ಬರ ಈ ಸೀಸನ್‌ನಲ್ಲಿ ಜೋರಾಗಿದೆ. ಬಿಸಿಲ ಝಳಕ್ಕೆ ಜೆನ್ ಜಿ ಹೈಕಳು ಇಂತಹ ಪಾರ್ಟಿಗಳತ್ತ ಮುಖ ಮಾಡುತ್ತಿದ್ದಾರೆ. ಈ ಕುರಿತಂತೆ ಇಲ್ಲಿದೆ ವರದಿ.

ನ್ಯಾ. ನಾಗಮೋಹನ್‍ದಾಸ್ ವರದಿ ಅವೈಜ್ಞಾನಿಕ ಎಂದು ತಿರಸ್ಕರಿಸಿದ್ದೀರಾ? : ಸಿಎಂಗೆ ಕಾರಜೋಳ ಪ್ರಶ್ನೆ

ನ್ಯಾ.ನಾಗಮೋಹನ್‍ದಾಸ್ ವರದಿ ಅವೈಜ್ಞಾನಿಕ ಎಂದು ತಿರಸ್ಕರಿಸಿದ್ದೀರಾ?: ಕಾರಜೋಳ

Govind Karjol: ನ್ಯಾ. ನಾಗಮೋಹನ್‍ದಾಸ್ ಅವರ ವರದಿಯಲ್ಲಿ ಶೇ.17 ಎಂದಿದ್ದರೂ ಶೇ.15ಕ್ಕೆ ಸೀಮಿತ ಮಾಡಿ ಕೊಡಬಹುದಾಗಿತ್ತು. ಯಾಕೆ ಕೊಟ್ಟಿಲ್ಲ. ನಿನ್ನೆ ದಿನ ಬೆಟ್ಟ ಅಗೆದು ಇಲಿ ಹುಡುಕಿದಂತೆ ಸಿದ್ದರಾಮಯ್ಯ ಅವರು ಒಳ ಮೀಸಲಾತಿಯನ್ನು ಜಾರಿ ನಿರ್ಧಾರ ಪ್ರಕಟಿಸಿ ತಮ್ಮ ಬೆನ್ನನ್ನು ತಾವೇ ಚಪ್ಪರಿಸಿಕೊಂಡಿದ್ದಾರೆ ಎಂದು ಮಾಜಿ ಉಪ ಮುಖ್ಯಮಂತ್ರಿ ಮತ್ತು ಸಂಸದ ಗೋವಿಂದ ಕಾರಜೋಳ ಟೀಕಿಸಿದ್ದಾರೆ.

Tiptur News: ಏಪ್ರಿಲ್‌ 29ರಂದು ತಿಪಟೂರಿನ ಕೆಐಟಿ ಕಾಲೇಜಿನಲ್ಲಿ ʼಸಿಸ್ಕೋ ಎಕ್ಸಲೆನ್ಸ್ ಸೆಂಟರ್ʼ ಉದ್ಘಾಟನೆ

ಏ.29ರಂದು ಕೆಐಟಿ ಕಾಲೇಜಿನಲ್ಲಿ ʼಸಿಸ್ಕೋ ಎಕ್ಸಲೆನ್ಸ್ ಸೆಂಟರ್ʼ ಉದ್ಘಾಟನೆ

Tiptur News: ʼಸಿಸ್ಕೋʼ (Cisco) ಮತ್ತು ಕಲ್ಪತರು ತಾಂತ್ರಿಕ ಮಹಾವಿದ್ಯಾಲಯದ ಸಹಯೋಗದಲ್ಲಿ ನಿರ್ಮಾಣವಾಗಿರುವ ʼಸಿಸ್ಕೋ ಎಕ್ಸಲೆನ್ಸ್ ಸೆಂಟರ್ʼ ಏಪ್ರಿಲ್ 29ರಂದು ಲೋಕಾರ್ಪಣೆಗೊಳ್ಳಲಿದೆ ಎಂದು ಸಂಸ್ಥೆಯ ಖಜಾಂಚಿ ಶಿವಪ್ರಸಾದ್ ತಿಳಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

Liquor Price Hike: ಮದ್ಯಪ್ರಿಯರಿಗೆ ಮತ್ತೆ ಶಾಕ್‌ ಕೊಟ್ಟ ಸರ್ಕಾರ; ರಾಜ್ಯದಲ್ಲಿ ಮೇ 1ರಿಂದ ಮದ್ಯದ ಬೆಲೆ ಏರಿಕೆ ಸಾಧ್ಯತೆ!

ಮದ್ಯಪ್ರಿಯರಿಗೆ ಮತ್ತೆ ಶಾಕ್‌; ಮೇ 1ರಿಂದ ಮದ್ಯದ ಬೆಲೆ ಏರಿಕೆ ಸಾಧ್ಯತೆ!

ರಾಜ್ಯದ ಮದ್ಯ ಅಬಕಾರಿ ತೆರಿಗೆ ವ್ಯವಸ್ಥೆಯನ್ನು ಪರಿಶೀಲಿಸಲು ಕರ್ನಾಟಕ ಸರ್ಕಾರ ರಚಿಸಿದ್ದ ಸಂಪನ್ಮೂಲ ಸಂಗ್ರಹ ಸಮಿತಿ ಇತ್ತೀಚೆಗೆ ತನ್ನ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದೆ. ಈ ವರದಿಯಲ್ಲಿ ಮದ್ಯದ ಅಂಶದ ಆಧಾರದ ಮೇಲೆ ತೆರಿಗೆ ವಿಧಿಸಲು ಶಿಫಾರಸು ಮಾಡಲಾಗಿತ್ತು. ಹೀಗಾಗಿ ಶೀಘ್ರದಲ್ಲೇ ಅಬಕಾರಿ ತೆರಿಗೆ ಪರಿಷ್ಕರಣೆಯಾಗಲಿದ್ದು, ಮದ್ಯದ ದರ ಏರಿಕೆ ಸಾಧ್ಯತೆ ಇದೆ.

Kalaburagi News: ಆಟೋ ಪಕ್ಕಕ್ಕೆ ಹಾಕು ಎಂದಿದ್ದಕ್ಕೆ ಸಹೋದರರ ಮೇಲೆ ಮಾರಣಾಂತಿಕ ಹಲ್ಲೆ

ಆಟೋ ಪಕ್ಕಕ್ಕೆ ಹಾಕು ಎಂದಿದ್ದಕ್ಕೆ ಸಹೋದರರ ಮೇಲೆ ಹಲ್ಲೆ

ಕಲಬುರಗಿ ತಾಲೂಕಿನ ಭೀಮಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಚಿತ್ತಾಪುರ ತಾಲೂಕಿನ ನಾಲವಾರ ಗ್ರಾಮದ ನಿವಾಸಿಗಳಾದ ತೋಟೆಂದ್ರ ಮತ್ತು ಸುನೀಲ್ ಎಂಬುವವರ ಮೇಲೆ ಹಲ್ಲೆ ನಡೆದಿದೆ. ರಸ್ತೆ ಮಧ್ಯೆ ನಿಲ್ಲಿಸಿದ್ದ ಆಟೋ ತೆಗೆಯಲು ಹೇಳಿದ್ದಕ್ಕೆ ಸಹೋದರರ ಮೇಲೆ ದಾಳಿ ನಡೆದಿದೆ.

Dakshina Kannada: ದೈವದ ಭಂಡಾರ ಮೆರವಣಿಗೆ ವೇಳೆ ಕುಸಿದ ಕಾಲು ಸಂಕ: 8 ಮಂದಿಗೆ ತೀವ್ರ ಗಾಯ

ದೈವದ ಭಂಡಾರ ಮೆರವಣಿಗೆ ವೇಳೆ ಕುಸಿದ ಕಾಲು ಸಂಕ: 8 ಮಂದಿಗೆ ತೀವ್ರ ಗಾಯ

ದೈವದ ಭಂಡಾರವನ್ನು ತಾಕೋಡೆ ಬರ್ಕೆ ಧರ್ಮನೇಮಕ್ಕೆ ಕೊಂಡೊಯ್ಯುತ್ತಿದ್ದರು. ಭಂಡಾರವನ್ನು ಪಲ್ಲಕ್ಕಿಯಲ್ಲಿ ಹೊತ್ತು ಮೆರವಣಿಗೆ ಸಾಗುತ್ತಿದ್ದಾಗ ಕಾಲು ಸಂಕ ಏಕಾಏಕಿ ಕುಸಿದು ಪಲ್ಲಕ್ಕಿ ಉರುಳಿ ಬಿದ್ದು ಅವಘಡ ಸಂಭವಿಸಿದೆ. ಘಟನೆಯಲ್ಲಿ ಎಂಟು ಮಂದಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

Janivara row: ಜನಿವಾರ ತೆಗೆಸಿದ ಕಾಲೇಜು ಲೈಸೆನ್ಸ್‌ ರದ್ದು, 25 ಲಕ್ಷ ರೂ. ದಂಡ: ಸಿಎಂಗೆ ಪತ್ರ ಬರೆದು ಬ್ರಾಹ್ಮಣ ಮಹಾಸಭಾ ಒತ್ತಾಯ

ಜನಿವಾರ ತೆಗೆಸಿದ ಕಾಲೇಜು ಲೈಸೆನ್ಸ್‌ ರದ್ದು, ದಂಡ: ಬ್ರಾಹ್ಮಣ ಸಭಾ ಆಗ್ರಹ

ಜನಿವಾರ ತೆಗೆಸಿದ ಪರಿಣಾಮ ವಿದ್ಯಾರ್ಥಿಗಳು ಮತ್ತು ಪೋಷಕರು ಮಾನಸಿಕವಾಗಿ ನೊಂದಿದ್ದಾರೆ. ಕಳೆದ ವರ್ಷವೂ ಇಂತಹ ಘಟನೆ ನಡೆದಾಗ ಮಹಾಸಭಾ ಕರ್ನಾಟಕ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿತ್ತು ಎಂದು ಬ್ರಾಹ್ಮಣ ಮಹಾಸಭಾ ಅಧ್ಯಕ್ಷ ಎಸ್ ರಘುನಾಥ್ ತಿಳಿಸಿದ್ದಾರೆ.

ಬೆಂಗಳೂರು ಉತ್ತರ ನಗರ ಪಾಲಿಕೆಯಿಂದ ಬಜೆಟ್ ಟು ಆಕ್ಷನ್ ಪ್ಲಾನ್; ಅನುದಾನದ ಪರಿಣಾಮಕಾರಿ ಬಳಕೆಗೆ ಕಾರ್ಯಾಗಾರ

ಬೆಂಗಳೂರು ಉತ್ತರ ನಗರ ಪಾಲಿಕೆಯಿಂದ ಬಜೆಟ್ ಟು ಆಕ್ಷನ್ ಪ್ಲಾನ್

ಬೆಂಗಳೂರು ಉತ್ತರ ನಗರ ಪಾಲಿಕೆಯ 2026–27ನೇ ಸಾಲಿನ ಬಜೆಟ್ ಗೆ ಮಂಜೂರಾದ 4344 ರೂ. ಕೋಟಿ ಅನುದಾನವನ್ನು ಸಮರ್ಪಕವಾಗಿ ಹಾಗೂ ಪರಿಣಾಮಕಾರಿಯಾಗಿ ಬಳಸುವ ಉದ್ದೇಶದಿಂದ, ಏ. 24 ರಂದು ಇನ್ಫ್ಯಾನ್ಟ್ರಿ ರಸ್ತೆಯ ಐಎಎಸ್ ಅಧಿಕಾರಿಗಳ ಸಂಘದ ಸಭಾಂಗಣದಲ್ಲಿ ‘ಬಜೆಟ್ ಟು ಆಕ್ಷನ್ ಪ್ಲಾನ್’ ಕಾರ್ಯಾಗಾರವನ್ನು ಆಯೋಜಿಸಲಾಯಿತು.

Vinay Kulakarni: ಶಾಸಕ ಸ್ಥಾನ ಉಳಿಸಿಕೊಳ್ಳಲು ಮುಂದಾದ ವಿನಯ್‌ ಕುಲಕರ್ಣಿ, ಜೀವಾವಧಿ ಶಿಕ್ಷೆಗೆ ತಡೆ ಕೋರಿ ಹೈಕೋರ್ಟ್‌ಗೆ ಮೇಲ್ಮನವಿ

ಜೀವಾವಧಿ ಶಿಕ್ಷೆಗೆ ತಡೆ ಕೋರಿ ವಿನಯ್‌ ಕುಲಕರ್ಣಿ ಹೈಕೋರ್ಟ್‌ಗೆ ಮೇಲ್ಮನವಿ

ಕೆಳಹಂತದ ನ್ಯಾಯಾಲಯ ನೀಡಿದ ತೀರ್ಪಿಗೆ ತಡೆ ನೀಡಬೇಕು ಮತ್ತು ತಮಗೆ ವಿಧಿಸಲಾದ ಶಿಕ್ಷೆಯನ್ನು ರದ್ದುಗೊಳಿಸಬೇಕು ಎಂದು ವಿನಯ್‌ ಹೈಕೋರ್ಟ್‌ಗೆ ನೀಡಿದ ಅರ್ಜಿಯ ಮುಖ್ಯ ಉದ್ದೇಶವಾಗಿದೆ. ಮೇಲ್ಮನವಿ ಇತ್ಯರ್ಥವಾಗುವವರೆಗೆ ತಮಗೆ ಮಧ್ಯಂತರ ಜಾಮೀನು ನೀಡಬೇಕು ಎಂಬ ವಿನಂತಿಯನ್ನೂ ಅವರು ನ್ಯಾಯಾಲಯದ ಮುಂದೆ ಇಡುವ ಸಾಧ್ಯತೆಯಿದೆ.

Loading...