ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಕರ್ನಾಟಕ

Karnataka Winter Session: ಬೆಳಗಾವಿಯ ಸುವರ್ಣಸೌಧದಲ್ಲಿ ಜಗತ್ತಿನ 2ನೇ ಅತಿ ದೊಡ್ಡ ಖಾದಿ ತ್ರಿವರ್ಣ ಧ್ವಜ ಅನಾವರಣ

ಸುವರ್ಣಸೌಧದಲ್ಲಿ ಜಗತ್ತಿನ 2ನೇ ಅತಿ ದೊಡ್ಡ ಖಾದಿ ತ್ರಿವರ್ಣ ಧ್ವಜ ಅನಾವರಣ

world's 2nd largest Khadi tricolor flag: ಬೆಳಗಾವಿಯ ಸುವರ್ಣಸೌಧದ ಪಶ್ಚಿಮ ದಿಕ್ಕಿನ ಮೆಟ್ಟಿಲುಗಳ ಮೇಲೆ ಜಗತ್ತಿನ ಎರಡನೇ ಅತಿ ದೊಡ್ಡ ಖಾದಿ ತ್ರಿವರ್ಣ ಧ್ವಜ ಅನಾವರಣ ಮಾಡಲಾಗಿದೆ. ಈ ವೇಳೆ ಮಾತನಾಡಿರುವ ಸಿಎಂ ಸಿದ್ದರಾಮಯ್ಯ ಅವರು, ತ್ರಿವರ್ಣ ಧ್ವಜ ಕೇವಲ ಖಾದಿ ವಸ್ತ್ರವಲ್ಲ, ಇದು ಭಾರತದ ಹೆಮ್ಮೆ ಮತ್ತು ಸ್ವಾಭಿಮಾನದ ಸಂಕೇತ ಎಂದು ತಿಳಿಸಿದ್ದಾರೆ.

BJP protest: ರೈತರೊಂದಿಗೆ ಸುವರ್ಣ ಸೌಧ ಮುತ್ತಿಗೆಗೆ ಯತ್ನ, ಬಿಜೆಪಿ ನಾಯಕರ ಬಂಧನ

ರೈತರೊಂದಿಗೆ ಸುವರ್ಣ ಸೌಧ ಮುತ್ತಿಗೆಗೆ ಯತ್ನ, ಬಿಜೆಪಿ ನಾಯಕರ ಬಂಧನ

ರೈತರ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಬೆಳಗಾವಿಯಲ್ಲಿ ಬಿಜೆಪಿ ನಾಯಕರು (BJP protest) ಪ್ರತಿಭಟನೆ ನಡೆಸುತ್ತಿದ್ದು, ರೈತರೊಂದಿಗೆ ಸುವರ್ಣ ಸೌಧ ಮುತ್ತಿಗೆಗೆ ಯತ್ನಿಸಿದ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ಸಿಟಿ ರವಿ ಸೇರಿ ಹಲವು ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹಲಗಾ ಗ್ರಾಮದ ಬಳಿ ಬ್ಯಾರಿಕೇಡ್ ಹಾಕಿ ಪ್ರತಿಭಟನಾಕಾರರನ್ನು ಪೊಲೀಸರು ತಡೆದಿದ್ದು, ಈ ವೇಳೆ ತಳ್ಳಾಟ, ನೂಕಾಟ ನಡೆದಿದೆ.

Menstrual Leave: ಮಹಿಳಾ ನೌಕರರಿಗೆ ಮುಟ್ಟಿನ ರಜೆ: ರಾಜ್ಯ ಸರ್ಕಾರದ ಆದೇಶಕ್ಕೆ ಹೈಕೋರ್ಟ್‌ನಲ್ಲಿ ಹಿನ್ನಡೆ

ಮಹಿಳೆಯರಿಗೆ ಮುಟ್ಟಿನ ರಜೆ: ಸರ್ಕಾರದ ಆದೇಶಕ್ಕೆ ಹೈಕೋರ್ಟ್‌ನಲ್ಲಿ ಹಿನ್ನಡೆ

ರ್ನಾಟಕ ಸರ್ಕಾರ ನವೆಂಬರ್ 12ರಂದು ವೇತನ ಸಹಿತ ಮುಟ್ಟಿನ ರಜೆ ಕಡ್ಡಾಯಗೊಳಿಸುವ ನಿರ್ಧಾರ ತೆಗೆದುಕೊಂಡಿತ್ತು. ಹಲವಾರು ಕಾರ್ಮಿಕ ಕಾನೂನುಗಳ ವ್ಯಾಪ್ತಿಗೆ ಬರುವ ಸಂಸ್ಥೆಗಳು ಪ್ರತಿ ತಿಂಗಳು ಒಂದು ದಿನ ವೇತನ ಸಹಿತ ಮುಟ್ಟಿನ ರಜೆಯನ್ನು (Menstrual leave) ಒದಗಿಸುವಂತೆ ಆದೇಶವನ್ನು ಹೊರಡಿಸಿತ್ತು. ಈ ಆದೇಶ ಮಾಡುವ ಮುನ್ನ ನಮ್ಮನ್ನು ಕರೆದು ಸರ್ಕಾರ ಚರ್ಚೆಯೇ ಮಾಡಿಲ್ಲ ಎಂದು ಬೆಂಗಳೂರು ಹೋಟೆಲ್ ಮಾಲೀಕರ ಸಂಘ ವಾದಿಸಿತ್ತು.

CM Siddaramaiah: ಅನಗತ್ಯ ಹೇಳಿಕೆ ಬೇಡ: ಪುತ್ರನಿಗೆ ಸಿಎಂ ಎಚ್ಚರಿಕೆ; ಡಿಕೆ ಶಿವಕುಮಾರ್‌, ಜಮೀರ್ ಹೇಳಿದ್ದೇನು?

ಅನಗತ್ಯ ಹೇಳಿಕೆ ಬೇಡ: ಪುತ್ರನಿಗೆ ಸಿಎಂ ಎಚ್ಚರಿಕೆ; ಜಮೀರ್ ಹೇಳಿದ್ದೇನು?

ನಿನ್ನೆ ಯತೀಂದ್ರ ಸಿದ್ದರಾಮಯ್ಯ (Yathindra Siddaramaiah) ಅವರು ಸದ್ಯಕ್ಕೆ ರಾಜ್ಯದಲ್ಲಿ ಸಿಎಂ ಬದಲಾವಣೆ ಆಗಲ್ಲ. ಐದು ವರ್ಷಗಳ ಕಾಲ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರೆಯುತ್ತಾರೆ. ಹೈಕಮಾಂಡ್ ಹೇಳಿದಂತೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಅವರ ಮಾತಿಗೆ ಬದ್ಧ ಅಂತ ಹೇಳಿದ್ದಾರೆ. ಹಾಗಾಗಿ ಸದ್ಯಕ್ಕೆ ಸಿಎಂ ಬದಲಾವಣೆ ಅಪ್ರಸ್ತುತ ಎಂದು ಹೇಳಿದ್ದರು.

MLA Vinay Kulkarni: ಯೋಗೀಶ್‌ ಗೌಡ ಹತ್ಯೆ ಪ್ರಕರಣದಲ್ಲಿ ಶಾಸಕ ವಿನಯ್‌ ಕುಲಕರ್ಣಿ ಜಾಮೀನು ಅರ್ಜಿ ವಜಾ, ಜೈಲೇ ಗತಿ

ಶಾಸಕ ವಿನಯ್‌ ಕುಲಕರ್ಣಿ ಜಾಮೀನು ಅರ್ಜಿ ವಜಾ, ಜೈಲೇ ಗತಿ

ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಪ್ರಕರಣದ ಪ್ರಮುಖ ಸಾಕ್ಷಿಗಳ ವಿಚಾರಣೆ ಮುಗಿದ ಹಿನ್ನಲೆಯಲ್ಲಿ ಜಾಮೀನು ಕೋರಿ ವಿನಯ್ ಕುಲಕರ್ಣಿ (MLA Vinay Kulkarni) ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲದಲ್ಲಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ಕುರಿತು ಕೋರ್ಟ್ ವಾದ ಪ್ರತಿವಾದ ಆಲಿಸಿ ಆದೇಶ ಕಾಯ್ದಿರಿಸಿತ್ತು. ಇನ್ನೊಂದೆಡೆ ವಿನಯ್ ಕುಲಕರ್ಣಿ ಸಹ ಈಗ ಜಾಮೀನು ಸಿಕ್ಕರೆ ಈ ಬಾರಿ ಸಂಪುಟ ಪುನಾರಚನೆ ವೇಳೆ ಸಚಿವರಾಗಬೇಕೆಂಬ ಕನಸು ಕಂಡಿದ್ದರು.

Bengaluru News: ಬೆಂಗಳೂರಿನಲ್ಲೊಂದು ಘೋರ ದುರಂತ: ಸಾಲದಿಂದ ತತ್ತರಿಸಿ ಮಗಳು, ಮೊಮ್ಮಗ ಆತ್ಮಹತ್ಯೆ, ಹೃದಯಾಘಾತದಿಂದ ಅಜ್ಜಿ ಸಾವು

ಸಾಲದಿಂದ ತತ್ತರಿಸಿ ಮಗಳು, ಮೊಮ್ಮಗ ಆತ್ಮಹತ್ಯೆ, ಹೃದಯಾಘಾತದಿಂದ ಅಜ್ಜಿ ಸಾವು

ಮೃತ ಸುಧಾ ಬಿರಿಯಾನಿ ಸೆಂಟರ್, ಚಿಪ್ಸ್‌ ಶಾಪ್ ಹಾಗೂ ಮಿಲ್ಕ್ ಪಾರ್ಲರ್ ನಡೆಸಿ, ಅಪಾರ ನಷ್ಟಕ್ಕೆ ಸಿಲುಕಿದ್ದರು. ಇದರಿಂದ ಮೈತುಂಬ ಸಾಲ ಮಾಡಿಕೊಂಡಿದ್ದರು. ಹೀಗಾಗಿ ಕಳೆದ ಮೂರು ತಿಂಗಳ ಹಿಂದೆಯಷ್ಟೇ ಬಿರಿಯಾನಿ ಹಾಗೂ ಚಿಪ್ಸ್ ಸೆಂಟರನ್ನು ಬೇರೆಯವರಿಗೆ ಕೊಟ್ಟಿದ್ದರು. ಅಂಗಡಿ ಪಡೆದವನು ಮೂರು ತಿಂಗಳಾದರೂ ಕೂಡ ಹಣ ಕೊಟ್ಟಿರಲಿಲ್ಲ. ಇತ್ತ ಸಾಲ ಪಡೆದಿದ್ದ ಸುಧಾಗೆ ಸಾಲದ ಕಾಟ ಶುರುವಾಗಿತ್ತು.

Indigo Flights: ಇಂದು ಕೂಡ ಬೆಂಗಳೂರಿನಲ್ಲಿ 121 ಇಂಡಿಗೋ ವಿಮಾನ ರದ್ದು, ಹೋಟೆಲ್‌ಗಳ ದರ ಏರಿಕೆ

ಇಂದು ಕೂಡ ಬೆಂಗಳೂರಿನಲ್ಲಿ 121 ಇಂಡಿಗೋ ವಿಮಾನ ರದ್ದು, ಹೋಟೆಲ್‌ಗಳ ದರ ಏರಿಕೆ

ಕಳೆದ ಒಂದು ವಾರದಿಂದ ಇಂಡಿಗೋ ವಿಮಾನಯಾನ ಸಂಸ್ಥೆ (Indigo Flights) ಸಾವಿರಾರು ಫ್ಲೈಟ್‌ಗಳು ರದ್ದು, ವಿಳಂಬ, ಮಾರ್ಗ ಬದಲಾವಣೆಯಾಗುತ್ತಿರುವುದು ಕಂಡು ಬರುತ್ತಿದೆ. ಈ ಸಮಸ್ಯೆಯಿಂದ ಲಕ್ಷಾಂತರ ಪ್ರಯಾಣಿಕರು ದೇಶದಾದ್ಯಂತ ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿದೆ. ಲಕ್ಷಾಂತರ ಪ್ರಯಾಣಿಕರು ದೆಹಲಿ, ಮುಂಬೈ, ಬೆಂಗಳೂರು, ಹೈದರಾಬಾದ್, ಚೆನ್ನೈ ನಗರಗಳಲ್ಲಿ ಸಿಲುಕಿಕೊಂಡಿದ್ದಾರೆ.

Gas Geyser Leak: ಗ್ಯಾಸ್‌ ಗೀಸರ್‌ ಸೋರಿಕೆಯಿಂದ ತಾಯಿ- ಮಗು ಸಾವು

ಗ್ಯಾಸ್‌ ಗೀಸರ್‌ ಸೋರಿಕೆಯಿಂದ ತಾಯಿ- ಮಗು ಸಾವು

ಗ್ಯಾಸ್‌ ಗೀಸರ್‌ಗಳ ಅವೈಜ್ಞಾನಿಕ ಬಳಕೆ ಅಥವಾ ಸೋರಿಕೆ (Gas Geyser Leak) ಹಲವು ಕಡೆ ಸಾವುಗಳಿಗೆ ಕಾರಣವಾಗುತ್ತಿದೆ. ಇತ್ತೀಚೆಗೆ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣದ ಬೆಟ್ಟದಪುರ ಎಂಬಲ್ಲಿ ಸ್ನಾನಕ್ಕೆ ಇಳಿದ ಅಕ್ಕ- ತಂಗಿ ಗ್ಯಾಸ್ ಗೀಸರ್‌ ಸೋರಿಕೆಯಿಂದ ಮೃತಪಟ್ಟಿದ್ದರು. ಇದೀಗ ಬೆಂಗಳೂರಿನ ಗೋವಿಂದರಾಜ ನಗರದಲ್ಲಿ ತಾಯಿ ಹಾಗೂ ಮಗು ಇದರಿಂದಾಗಿ ಮೃತಪಟ್ಟಿದ್ದಾರೆ.

Belagavi Assembly Session: ಇಂದು ರೈತರ ಜೊತೆಗೆ ಬೆಳಗಾವಿ ಸುವರ್ಣ ಸೌಧಕ್ಕೆ ಬಿಜೆಪಿ ಮುತ್ತಿಗೆ

ಇಂದು ರೈತರ ಜೊತೆಗೆ ಬೆಳಗಾವಿ ಸುವರ್ಣ ಸೌಧಕ್ಕೆ ಬಿಜೆಪಿ ಮುತ್ತಿಗೆ

ಕಾಂಗ್ರೆಸ್ ಸರ್ಕಾರದ ರೈತವಿರೋಧಿ ನೀತಿಯನ್ನು ಖಂಡಿಸಿ ಮುತ್ತಿಗೆ ನಡೆಸಲಾಗುತ್ತಿದೆ. ಬೆಳಗಾವಿ ಜಿಲ್ಲೆಯ ಶಾಸಕರು, ವಿಧಾನಪರಿಷತ್ ಸದಸ್ಯರು, ಬೆಳಗಾವಿ, ಅಕ್ಕಪಕ್ಕದ ಜಿಲ್ಲೆಗಳ ರೈತರು ಭಾಗವಹಿಸುತ್ತಾರೆ. ಪ್ರತಿಭಟನೆಯಲ್ಲಿ ಕನಿಷ್ಠ 20-25 ಸಾವಿರ ಜನರು ಸೇರುತ್ತಾರೆ ಎಂದು ಬಿಜೆಪಿ (BJP) ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ (BY Vijayendra) ಅವರು ತಿಳಿಸಿದರು.

Karnataka Weather: ಬೀದರ್‌ನಲ್ಲಿ ಮುಂದಿನ 4 ದಿನ ಶೀತ ಗಾಳಿ ಎಚ್ಚರಿಕೆ, ಉಳಿದೆಡೆ ಒಣ ಹವೆ

ಬೀದರ್‌ನಲ್ಲಿ ಮುಂದಿನ 4 ದಿನ ಶೀತ ಗಾಳಿ ಎಚ್ಚರಿಕೆ, ಉಳಿದೆಡೆ ಒಣ ಹವೆ

ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಇಂದು ಸ್ಪಷ್ಟ ಆಕಾಶ ಇರಲಿದ್ದು, ಕೆಲವು ಪ್ರದೇಶಗಳಲ್ಲಿ ಬೆಳಗಿನ ಜಾವದಲ್ಲಿ ದಟ್ಟ ಮಂಜು /ಮಂಜು ಕವಿಯಲಿದ್ದು, ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 28 ಡಿಗ್ರಿ ಸೆ. ಮತ್ತು 17 ಡಿಗ್ರಿ ಸೆ. ಇರುವ ಸಾಧ್ಯತೆ ಇದೆ.

ಒಂದೇ ತಿಂಗಳಲ್ಲಿ ಅತಿ ಹೆಚ್ಚು ಸೌರ ಕೃಷಿ ಪಂಪ್‌ಗಳ ಸ್ಥಾಪಿಸಿ ವಿಶ್ವ ದಾಖಲೆ ಸೃಷ್ಟಿ

ಅತಿ ಹೆಚ್ಚು ಸೌರ ಕೃಷಿ ಪಂಪ್‌ಗಳ ಸ್ಥಾಪಿಸಿ ವಿಶ್ವ ದಾಖಲೆ ಸೃಷ್ಟಿ

ಪಿಎಂ-ಕುಸುಮ್ (ಘಟಕ ಬಿ) ಮತ್ತು ಮಗೆಲ್ ತ್ಯಾಲಾ ಸೌರ್ ಕೃಷಿ ಪಂಪ್ ಯೋಜನೆ (MTSKPY) ಯೋಜನೆಗಳ ಪರಿಣಾಮಕಾರಿ ಅನುಷ್ಠಾನದ ಮೂಲಕ ಭಾರತದ ಶುದ್ಧ ಇಂಧನ ಪರಿವರ್ತನೆಯನ್ನು ವೇಗಗೊಳಿಸುವ, ರೈತರ ಜೀವನೋಪಾಯವನ್ನು ಸುಧಾರಿಸುವ ಮತ್ತು ಸುಸ್ಥಿರ ನೀರಾವರಿಗೆ ಬೆಂಬಲ ನೀಡುವ MSEDCL ನ ಬದ್ಧತೆಯನ್ನು ಈ ಸಾಧನೆ ಪ್ರತಿಬಿಂಬಿಸುತ್ತದೆ.

ಕಾಯಿನ್‌ಸ್ವಿಚ್ ಇಂದ ಭಾರತದ ಪ್ರಥಮ ಸಮಗ್ರ VDA ಕೈಪಿಡಿಯನ್ನು ಪೊಲೀಸರು ಮತ್ತು ಕಾನೂನು ಜಾರಿ ಏಜೆನ್ಸಿಗಳಿಗಾಗಿ ಬಿಡುಗಡೆ

ಕಾಯಿನ್‌ಸ್ವಿಚ್ ಇಂದ ಭಾರತದ ಪ್ರಥಮ ಸಮಗ್ರ VDA ಕೈಪಿಡಿ ಬಿಡುಗಡೆ

ಭಾರತದಾದ್ಯಂತ ಕ್ರಿಪ್ಟೋ ಅಳವಡಿಕೆ ಹೆಚ್ಚಾಗುತ್ತಿರುವುದರಿಂದ, ಪೊಲೀಸರು ಮತ್ತು ಸೈಬರ್ ಕ್ರೈಮ್ ಘಟಕಗಳು ಡಿಜಿಟಲ್ ಆಸ್ತಿಗಳನ್ನು ಒಳಗೊಂಡ ಸಂಕೀರ್ಣ ಪ್ರಕರಣಗಳನ್ನು ಎದುರಿಸು ತ್ತಿವೆ. ಈ ತುರ್ತು ಅಗತ್ಯವನ್ನು ಮನಗಂಡು, VDA ಪರಿಕಲ್ಪನೆಗಳನ್ನು ಸರಳಗೊಳಿಸಲು ಮತ್ತು ತನಿಖೆಗಳಿಗೆ ಪ್ರಾಯೋಗಿಕ ಮಾರ್ಗದರ್ಶನ ನೀಡಲು ಕಾಯಿನ್‌ಸ್ವಿಚ್ ಈ ಕೈಪಿಡಿಯನ್ನು ಅಭಿವೃದ್ಧಿ ಪಡಿಸಿದೆ.

Chikkaballapur News: ಯುವಶಕ್ತಿಗೆ ದೊರೆತಿರುವ ರಾಷ್ಟ್ರಮಟ್ಟದ ಅವಕಾಶ ಸದುಪಯೋಗವಾಗಲಿ: ಭಾನು ಚೈತನ್ಯ ವರ್ಮಾ

ಯುವಶಕ್ತಿಗೆ ದೊರೆತಿರುವ ರಾಷ್ಟ್ರಮಟ್ಟದ ಅವಕಾಶ ಸದುಪಯೋಗವಾಗಲಿ

ದೇಶಾದ್ಯಂತ ಲಕ್ಷಾಂತರ ಮಂದಿ ಯುವಜನತೆ ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್ ಕಾರ್ಯಕ್ರಮ ದಲ್ಲಿ ಭಾಗವಹಿಸುತ್ತಿದ್ದಾರೆ. ನಮ್ಮ ಸಂಸ್ಥೆಗೆ ದೇಶದ ೧೧ ರಾಜ್ಯಗಳಿಂದ ೧೨೦ ವಿದ್ಯಾರ್ಥಿಗಳು ಬಂದಿದ್ದು, ಇಂಜಿನಿಯರಿಂಗ್‌ ವಿದ್ಯಾರ್ಥಿಗಳಿಗೆ ಇದೊಂದು ಸದಾವಕಾಶ. ಎಲ್ಲರೂ ಇದರ ಸದುಪಯೋಗಪಡಿಸಿ ಕೊಳ್ಳಬೇಕು.

ಗೌನಿಪಲ್ಲಿ ಗ್ರಾಮವನ್ನು ಪಟ್ಟಣ ಪಂಚಾಯಿತಿ ಮಾಡಲು ಪೌರಾಡಳಿತ ಸಚಿವರಿಗೆ ಮನವಿ

3 ನೇ ಬಾರಿ ಪಾದಯಾತ್ರೆ ನಡೆಸಿ ಸರ್ಕಾರದ ಗಮನ ಸೆಳೆದ ಅಮ್ಜದ್

18 ದಿನಗಳ ಪಾದಯಾತ್ರೆ ಮೂಲಕ ತಮ್ಮ ಗ್ರಾಮದಿಂದ ಬೆಳಗಾವಿ ಸುವರ್ಣ ಸೌಧದ ವರಿವಿಗೂ ಹೋಗಿ ಶ್ರೀನಿವಾಸಪುರ ಕ್ಷೇತ್ರದ ಶಾಸಕರಾದ ವೆಂಕಟಶಿವಾರೆಡ್ಡಿ ರವರ ಸಮ್ಮುಖದಲ್ಲಿ ಪೌರಾಡಳಿತ ಸಚಿವ ರಾದ ರಹೀಮ್ ಖಾನ್ ರವರಿಗೆ, ಗೌನಿಪಲ್ಲಿ ಗ್ರಾಮವನ್ನು ಪಟ್ಟಣ ಪಂಚಾಯತಿ ಕೂಡಲೆ ಪಟ್ಟಣ ಪಂಚಾಯತಿ ಮಾಡುವಂತೆ ಮನವಿ ಪತ್ರವನ್ನು ಸಲ್ಲಿಸಿದರು

Bagepally News: ಡಿ.12 ರಿಂದ ಹೆಲ್ಮೆಟ್ ಕಡ್ಡಾಯ

Bagepally News: ಡಿ.12 ರಿಂದ ಹೆಲ್ಮೆಟ್ ಕಡ್ಡಾಯ

ಮುಖ್ಯ ರಸ್ತೆಯ ಪೊಲೀಸ್ ಠಾಣೆ ಮುಂಭಾಗದಲ್ಲಿ ಪೊಲೀಸ್ ಇನ್ಸ್ಪೆಕ್ಟರ್ ಅವರ ನೇತೃತ್ವದಲ್ಲಿ ದ್ವಿಚಕ್ರ ವಾಹನಗಳನ್ನು ತಡೆದು ಹೆಲ್ಮೆಟ್ ಧರಿಸದೆ ಚಾಲನೆ ಮಾಡುತ್ತಿದ್ದ ದ್ವಿಚಕ್ರ ವಾಹನ ಸವಾರರು ವಾಹನ ಚಾಲನೆ ಮಾಡುವಾಗ ಕಡ್ಡಾಯವಾಗಿ ತಮ್ಮ ಪ್ರಾಣ ಹಾನಿ ತಪ್ಪಿಸುವ ಸಲುವಾಗಿ ಹೆಲ್ಮೆಟ್ ಧರಿಸಿ ದ್ವಿಚಕ್ರ ವಾಹನವನ್ನು ಚಾಲನೆ ಮಾಡಬೇಕು

BJP Protest: ನಾಳೆ ಬೆಳಗಾವಿಯಲ್ಲಿ ಬಿಜೆಪಿಯಿಂದ ಬೃಹತ್‌ ಪ್ರತಿಭಟನೆ; ರೈತರೊಂದಿಗೆ ಸುವರ್ಣ ಸೌಧಕ್ಕೆ ಮುತ್ತಿಗೆ

ನಾಳೆ ಬೆಳಗಾವಿಯಲ್ಲಿ ಬಿಜೆಪಿ ಪ್ರತಿಭಟನೆ; ಸುವರ್ಣ ಸೌಧಕ್ಕೆ ಮುತ್ತಿಗೆ

ಬೆಳಗಾವಿ ಅಧಿವೇಶನ ವೇಳೆ ಈ ಬಾರಿ ಸಾಲು, ಸಾಲು ಪ್ರತಿಭಟನೆಗಳು ನಡೆಯಲಿವೆ. ಈಗಾಗಲೇ ಸುಮಾರು 50ಕ್ಕೂ ಅಧಿಕ ಸಂಘಟನೆಗಳು ಪ್ರತಿಭಟನೆಗೆ ಅನುಮತಿ ಕೋರಿ ನಗರದ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಹೆಸರು ನೊಂದಾಯಿಸಿವೆ. ಈ ನಡುವೆ ನಾಳೆ ರೈತರ ಪರವಾಗಿ ಪ್ರತಿಭಟನೆ ನಡೆಸಲು ಬಿಜೆಪಿ ಮುಂದಾಗಿದೆ.

Karnataka Winter Session: ಕನ್ನಡ ಮಾಧ್ಯಮದ ಯಾವುದೇ ಶಾಲೆಯನ್ನು ಮುಚ್ಚಲ್ಲ: ಮಧು ಬಂಗಾರಪ್ಪ

ಒಂದೇ ಒಂದು ಕನ್ನಡ ಶಾಲೆಯನ್ನೂ ಮುಚ್ಚಲ್ಲ: ಮಧು ಬಂಗಾರಪ್ಪ

ಕೆಪಿಎಸ್ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳಿಗೆ ಅತಿಥಿ ಶಿಕ್ಷಕರನ್ನು ನೇಮಕ ಮಾಡಲಾಗಿದೆ. ಶಿಕ್ಷಕರ ಕೋರಿಕೆ ವರ್ಗಾವಣೆ ಪ್ರಕ್ರಿಯೆ ಚಾಲ್ತಿಯಲ್ಲಿದ್ದು, ವರ್ಗಾವಣೆ ಪ್ರಕ್ರಿಯೆ ಪೂರ್ಣಗೊಂಡ ನಂತರ ಆದ್ಯತೆ ಮೇರೆಗೆ ಶಿಕ್ಷಕರ ಖಾಲಿ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

BJP Protest: ರೈತರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ; ನೆಲಮಂಗಲದಲ್ಲಿ ಬಿಜೆಪಿ ರೈತ ಮೋರ್ಚಾದಿಂದ ಬೃಹತ್ ಪ್ರತಿಭಟನೆ

ನೆಲಮಂಗಲದಲ್ಲಿ ಬಿಜೆಪಿ ರೈತ ಮೋರ್ಚಾದಿಂದ ಬೃಹತ್ ಪ್ರತಿಭಟನೆ

Nelamangala News: ರೈತರ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ರಾಜ್ಯ ಸರ್ಕಾರವನ್ನು ಆಗ್ರಹಿಸಿ, ಭಾರತೀಯ ಜನತಾ ಪಕ್ಷದ ರೈತ ಮೋರ್ಚಾ ವತಿಯಿಂದ ನೆಲಮಂಗಲದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ಬೆಂಗಳೂರು ಗ್ರಾಮಾಂತರ ಬಿಜೆಪಿ ರೈತ ಮೋರ್ಚಾ ಜಿಲ್ಲಾಧ್ಯಕ್ಷ ಕೆ.ಪಿ. ಭೃಂಗೀಶ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗಿದೆ.

Sirsi News: ಮಹಿಳಾ ಆಯೋಗ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಹಾಕುವ ಬಿಸ್ಕೆಟ್ ಗೆ ಸೀಮಿತವಾಗಿದೆ

ಮಹಿಳಾ ಆಯೋಗ ಕಾಂಗ್ರೆಸ್ ಹಾಕುವ ಬಿಸ್ಕೆಟ್ ಗೆ ಸೀಮಿತವಾಗಿದೆ

ರಾಜ್ಯ ಸರ್ಕಾರ ವಸತಿ ನಿಲಯಗಳ ಬಗ್ಗೆ ಸಂಪೂರ್ಣ ನಿರ್ಲಕ್ಷ್ಯ ವಹಿಸಿದ್ದರ ಪರಿಣಾಮ ಈ ರೀತಿ ಆಗು ತ್ತಿದೆ. ಕೆಲವೆಡೆ ವಾರ್ಡನ್‌ಗಳೂ ಸಹ ಇಂತಹ ಘಟನೆಗಳಿಗೆ ಸಹಕಾರ ನೀಡುತ್ತಿದ್ದಾರೆ. ದುರುಳರ ಈ ಕೆಲಸಕ್ಕೆ ಏನೂ ಅರಿಯದ ಮುಗ್ದ ಬಾಲಕಿಯರು ಬಲಿಯಾಗುತ್ತಿದ್ದರೂ ರಾಜ್ಯದ ನಾಯಕರು ಇತ್ತ ಲಕ್ಷ್ಯ ವಹಿಸು ತ್ತಿಲ್ಲ.

Telangana Rising Global Summit-2025: ಹೈದರಾಬಾದ್‌, ಬೆಂಗಳೂರು ಪರಸ್ಪರ ಸ್ಪರ್ಧಿಗಳಲ್ಲ: ಡಿ.ಕೆ.ಶಿವಕುಮಾರ್‌

ಹೈದರಾಬಾದ್‌, ಬೆಂಗಳೂರು ಪರಸ್ಪರ ಸ್ಪರ್ಧಿಗಳಲ್ಲ: ಡಿ.ಕೆ.ಶಿವಕುಮಾರ್‌

ನಾವು ಬೆಂಗಳೂರು, ಹೈದರಾಬಾದ್‌ ನಗರಗಳನ್ನು ಬಿಟ್ಟು ಭಾರತದ ತಂತ್ರಜ್ಞಾನ ಕ್ಷೇತ್ರದ ಬಗ್ಗೆ ಮಾತನಾಡಲು ಸಾಧ್ಯವಿಲ್ಲ. ನಾವು ಸ್ಪರ್ಧಿಗಳಲ್ಲ, ಪರಸ್ಪರ ಸ್ನೇಹ, ಸಹಕಾರದಿಂದ ಒಟ್ಟಾಗಿ ಅಭಿವೃದ್ಧಿ ಪಥದಲ್ಲಿ ಸಾಗುವ ಮೂಲಕ ದೇಶದ ಪ್ರಗತಿಗೆ ಕೈಜೋಡಿಸಬೇಕು ಎಂದು ತೆಲಂಗಾಣ ರೈಸಿಂಗ್‌ ಜಾಗತಿಕ ಶೃಂಗಸಭೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಕರೆ ನೀಡಿದ್ದಾರೆ.

Jewel Fashion 2025: ಕೈಗಳ ಅಂದ ಹೆಚ್ಚಿಸುವ ಬ್ರೇಸ್ಲೆಟ್ ಆಗಿ ಬದಲಾದ ಕರಿಮಣಿ ಸರ

ಬ್ರೇಸ್ಲೆಟ್ ಆಗಿ ಬದಲಾದ ಮಾನಿನಿಯರ ಕರಿಮಣಿ ಸರ

ವಿವಾಹಿತೆಯ ಕತ್ತನ್ನು ಸಿಂಗರಿಸುತ್ತಿದ್ದ ಮಾಂಗಲ್ಯದ ಕರಿಮಣಿ ಸರಗಳೀಗ ಕೈಗಳ ಬ್ರೇಸ್ಲೆಟ್ ರೂಪ ಪಡೆದುಕೊಂಡಿವೆ. ಹವಳದ ಜತೆ, ಮುತ್ತಿನ ಜತೆ, ಒಂದೆಳೆ, ಎರಡೆಳೆ ಅಷ್ಟೇಕೆ! ಗೊಂಚಲಿನಂತಹ ಕರಿಮಣಿ ಚೈನ್‌ಗಳು ಬ್ರೇಸ್ಲೆಟ್ ಡಿಸೈನ್‌ನಲ್ಲಿ ಆಗಮಿಸಿವೆ. ಈ ಕುರಿತ ಡಿಟೇಲ್ಸ್ ಇಲ್ಲಿದೆ.

ಕೊಲ್ಲಾಪುರದಲ್ಲಿ ಕರ್ನಾಟಕ ಸಾರಿಗೆ ಬಸ್‌ಗೆ ʼಜೈ ಮಹಾರಾಷ್ಟ್ರʼ ಸ್ಟಿಕ್ಕರ್‌ ಅಂಟಿಸಿ ಶಿವಸೇನೆ ಕಾರ್ಯಕರ್ತರ ಪುಂಡಾಟ

ಕರ್ನಾಟಕ ಸಾರಿಗೆ ಬಸ್‌ ತಡೆದು ಶಿವಸೇನೆ ಕಾರ್ಯಕರ್ತರ ಪುಂಡಾಟ

Belagavi News: ಒಂದೆಡೆ ಕೊಲ್ಲಾಪುರದಲ್ಲಿ ಕರ್ನಾಟಕ ಬಸ್‌ಗಳನ್ನು ತಡೆದು ಶಿವಸೇನೆ ಪ್ರತಿಭಟಿಸಿದ್ದರೆ, ಮತ್ತೊಂದೆಡೆ ಎಂಇಎಸ್ ಕಾರ್ಯಕರ್ತರ ಪುಂಡಾಟ ಖಂಡಿಸಿ ಕರವೇ ಕಾರ್ಯಕರ್ತರು ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿ ಮಹಾರಾಷ್ಟ್ರ ಬಸ್‌ಗಳನ್ನು ತಡೆದು ಪ್ರತಿಭಟನೆ ನಡೆಸಿ, ಆಕ್ರೋಶ ಹೊರಹಾಕಿದ್ದಾರೆ.

ಮಕ್ಕಳಿಗೆ ಭಗವದ್ಗೀತೆ ಕಲಿಸಿ ಅನ್ನೋದು ಮಹಾನ್ ಅಪರಾಧವೇ?; ಸಿಎಂ, ಸಚಿವ ಮಹದೇವಪ್ಪಗೆ ಕುಮಾರಸ್ವಾಮಿ ಪ್ರಶ್ನೆ

ಮಕ್ಕಳಿಗೆ ಭಗವದ್ಗೀತೆ ಕಲಿಸಿ ಅನ್ನೋದು ಮಹಾನ್ ಅಪರಾಧವೇ?: ಎಚ್‌ಡಿಕೆ

Bhagavad Gita in school syllabus: ಸಮಾಜ ಯಾವ ದಿಕ್ಕಿಗೆ ಹೋಗುತ್ತಿದೆ ಎಂಬುದನ್ನು ನಾವು ನಿತ್ಯವೂ ನೋಡುತ್ತಿದ್ದೇವೆ. ಒಳ್ಳೆಯ ಸಮಾಜ ನಿರ್ಮಿಸುವ ಉದ್ದೇಶದಿಂದ ಮಕ್ಕಳಿಗೆ ಚಿಕ್ಕಂದಿನಿಂದಲೇ ಭಗವದ್ಗೀತೆ ಕಲಿಸಬೇಕು ಎಂಬುದು ನನ್ನ ಅಭಿಪ್ರಾಯ ಎಂದು ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

Laxmi Hebbalkar: ಮಠಗಳ ಸೇವಾ ಕಾರ್ಯ ಸರ್ಕಾರಕ್ಕೆ ಸ್ಫೂರ್ತಿ: ಲಕ್ಷ್ಮಿ ಹೆಬ್ಬಾಳ್ಕರ್

ಮಠಗಳ ಸೇವಾ ಕಾರ್ಯ ಸರ್ಕಾರಕ್ಕೆ ಸ್ಫೂರ್ತಿ: ಲಕ್ಷ್ಮಿ ಹೆಬ್ಬಾಳ್ಕರ್

ಸರ್ಕಾರಕ್ಕೆ ಸಮಾನವಾಗಿ ಸಾಮಾಜಿಕ ಕೆಲಸ ಕಾರ್ಯಗಳನ್ನು ನಮ್ಮ ಶ್ರೀಮಠಗಳು ಮಾಡುತ್ತಿವೆ. ಅಕ್ಷರ ದಾಸೋಹ, ಅನ್ನ, ಆರೋಗ್ಯ ದಾಸೋಹಗಳನ್ನು ಸರ್ಕಾರ ಕಾಪಿ ಮಾಡುತ್ತಿವೆ. ಮಠಗಳ ಕೆಲಸವೇ ಸರ್ಕಾರಕ್ಕೆ ಸ್ಫೂರ್ತಿಯಾಗಿದೆ‌ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.

Loading...