ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಕರ್ನಾಟಕ

Akasa Air Flight: ಬೆಂಗಳೂರು-ದೆಹಲಿ ವಿಮಾನದಲ್ಲಿ ನಾಟಕೀಯ ಬೆಳವಣಿಗೆ; ಕಂಠಪೂರ್ತಿ ಕುಡಿದುಬಂದ ಪ್ರಯಾಣಿಕನಿಂದ ಗಲಾಟೆ

ಕಂಠಪೂರ್ತಿ ಕುಡಿದುಬಂದ ಪ್ರಯಾಣಿಕನಿಂದ ವಿಮಾನದಲ್ಲಿ ಗಲಾಟೆ

Bengaluru-Delhi Flight: ಬೆಂಗಳೂರು-ದೆಹಲಿ ವಿಮಾನದಲ್ಲಿ ಕಂಠಪೂರ್ತಿ ಮದ್ಯ ಸೇವಿಸಿದ ವ್ಯಕ್ತಿಯೊಬ್ಬ ತನ್ನ ಸೀಟ್‌ನಲ್ಲಿ ಕುಳಿತುಕೊಳ್ಳಲು ನಿರಾಕರಿಸಿ ಗಲಾಟೆ ಸೃಷ್ಟಿಸಿರುವ ಘಟನೆ ಅಕ್ಟೋಬರ್‌ 20ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಸದ್ಯ ಘಟನೆಯ ವಿಡಿಯೊ ಸೋಶಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿದೆ.

ಬೆಂಗಳೂರಿನ ಎನ್.ಜಿ.ಒ.ಗಳಾದ ಎಪಿಡಿ ಮತ್ತು ಎಸ್.ಆರ್.ಎಫ್.ಗೆ ಬ್ರಿಡ್ಜ್ ಸ್ಟೋನ್ ಇಂಡಿಯಾದ ಮೊಬಿಲಿಟಿ ಸೋಷಿಯಲ್ ಇಂಪ್ಯಾಕ್ಟ್ ಅವಾರ್ಡ್ಸ್ 2025 ಪುರಸ್ಕಾರ

ಬೆಂಗಳೂರಿನ ಎನ್.ಜಿ.ಒ.ಗಳಾದ ಎಪಿಡಿ ಮತ್ತು ಎಸ್.ಆರ್.ಎಫ್.ಗೆ ಪುರಸ್ಕಾರ

ಬೆಂಗಳೂರಿನ ದಿ ಅಸೋಸಿಯೇಷನ್ ಆಫ್ ಪೀಪಲ್ ವಿಥ್ ಡಿಸೆಬಿಲಿಟಿ (ಎಪಿಡಿ) ಯನ್ನು ಅವರ “ರಿಹ್ಯಾಬ್ ಆನ್ ವ್ಹೀಲ್ಸ್” ಉಪಕ್ರಮಕ್ಕೆ “ಎಂಪವರ್ಮೆಂಟ್ ಆಫ್ ವಲ್ನೆರಬಲ್ ಕಮ್ಯುನಿಟೀಸ್” ವಿಭಾಗದಲ್ಲಿ ನೀಡಲಾಗಿದೆ. ಬೆಂಗಳೂರಿನ ಸೇಫ್ಟಿ ರೀಸರ್ಚ್ ಫೌಂಡೇಷನ್ ರೋಡ್ ಸೇಫ್ಟಿ ಇನ್ನೊ ವೇಷನ್ ಅಂಡ್ ಎಕ್ಸೆಲೆನ್ಸ್ ವಿಭಾಗದಲ್ಲಿ `ಬ್ರೇಸ್’ ಯೋಜನೆಗೆ ತೀರ್ಪುಗಾರರ ವಿಶೇಷ ಶಿಫಾರಸು ಪಡೆದಿದೆ

Hasanamba Utsava 2025: ಹಾಸನಾಂಬ ಉತ್ಸವದಲ್ಲಿ ಕೆಂಡ ಹಾಯ್ದು ಗಮನ ಸೆಳೆದ ಡಿಸಿ ಲತಾಕುಮಾರಿ

ಹಾಸನಾಂಬ ಉತ್ಸವದಲ್ಲಿ ಕೆಂಡ ಹಾಯ್ದು ಗಮನ ಸೆಳೆದ ಡಿಸಿ ಲತಾಕುಮಾರಿ

Hasanamba temple: ಪ್ರಸಿದ್ಧ ಹಾಸನಾಂಬ ದೇವಿಯ ಉತ್ಸವದ ಸಾರ್ವಜನಿಕ ದರ್ಶನ ಅಕ್ಟೋಬರ್ 22ರಂದು ಕೊನೆಗೊಂಡಿದೆ. ಇಂದು, ಅಕ್ಟೋಬರ್ 23ರ ಮಧ್ಯಾಹ್ನ ದೇಗುಲದ ಗರ್ಭಗುಡಿಯ ಬಾಗಿಲು ಮುಚ್ಚಲಾಗಿದೆ. ಕಳೆದ 13 ದಿನಗಳಲ್ಲಿ ಲಕ್ಷಾಂತರ ಭಕ್ತರು ದೇವಿಯ ದರ್ಶನ ಪಡೆದಿದ್ದಾರೆ.

ಡೇಟಿಂಗ್‌ ಆಪ್‌ನಲ್ಲಿ ನಕಲಿ ಪ್ರೊಫೈಲ್‌ ತಪ್ಪಿಸಲು "ಫೇಸ್‌ಚೆಕ್‌" ಲಾಗಿನ್‌ ಪರಿಚಯಿಸಿದ "ಟಿಂಡರ್‌"

ನಕಲಿ ಪ್ರೊಫೈಲ್‌ ತಪ್ಪಿಸಲು "ಫೇಸ್‌ಚೆಕ್‌" ಲಾಗಿನ್‌ ಪರಿಚಯಿಸಿದ "ಟಿಂಡರ್‌"

ಇಂದು ನಕಲಿ ಪ್ರೋಫೈಲ್ ಹಾವಳಿ ಹೆಚ್ಚಾಗುತ್ತಿದ್ದು, ಬೇರೊಬ್ಬರ ಹೆಸರಿನಲ್ಲಿ ವಂಚನೆಗಳು ನಡೆಯು ತ್ತಿವೆ. ಹೀಗಾಗಿ ಫೇಸ್‌ಚೆಕ್‌ ಲಾಗಿನ್‌ ಮೂಲಕ ಬಳಕೆದಾರರಷ್ಟೇ ತಮ್ಮ ಪ್ರೋಪೈಲ್‌ ನಿರ್ಮಿಸಿ, ಅದನ್ನು ನಿರ್ವಹಣೆ ಮಾಡಲುಸಾಧ್ಯವಾಗುತ್ತದೆ. ಅತಿ ಹೆಚ್ಚು ಯುವಕರೇಇರುವ ಭಾರತದಲ್ಲಿ ಇಂತಹ ಆಪ್ಷನ್‌ ಹೆಚ್ಚು ಅವಶ್ಯಕವಾಗಿತ್ತು

Haveri News: ದೀಪಾವಳಿ ಹಬ್ಬದ ನಡುವೆ ದುರಂತ, ಕೊಬ್ಬರಿ ಹೋರಿ ತಿವಿತಕ್ಕೆ ಮೂವರು ಬಲಿ

ದೀಪಾವಳಿ ಹಬ್ಬದ ನಡುವೆ ದುರಂತ, ಕೊಬ್ಬರಿ ಹೋರಿ ತಿವಿತಕ್ಕೆ ಮೂವರು ಬಲಿ

Deepavali Festival: ದೀಪಾವಳಿ ಹಬ್ಬದ ಸಂದರ್ಭ ಕೆಲವರ ಪಾಲಿಗೆ ಸೂತಕವಾಗಿದೆ. ಹೋರಿ ಹಬ್ಬದ ವೇಳೆ ಹೋರಿ ತವಿತದಿಂದ ಮೂವರು ಮೃತಪಟ್ಟಿದ್ದಾರೆ. ಹೋರಿ‌ ಓಟದ ವೇಳೆ ಇನ್ನೂ ಇಬ್ಬರಿಗೆ ಗಂಭೀರ ಗಾಯವಾಗಿದೆ. ಈ ಕುರಿತು ಪ್ರಕರಣಗಳು ಹಾವೇರಿ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿದೆ.

Gold price today on 23rd Oct 2025: ಚಿನ್ನದ ದರದಲ್ಲಿ ಮತ್ತೆ ಇಳಿಕೆ; ಇಂದಿನ ರೇಟ್‌ ಚೆಕ್‌ ಮಾಡಿ

ಚಿನ್ನದ ದರದಲ್ಲಿ ಮತ್ತೆ ಇಳಿಕೆ; ಇಂದಿನ ರೇಟ್‌ ಚೆಕ್‌ ಮಾಡಿ

Gold and silver rate in Bengaluru: ಇಂದು 22ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆಯಲ್ಲಿ 75 ರೂ. ಇಳಿಕೆ ಕಂಡು ಬಂದಿದ್ದು, 11,465 ರೂ. ಗೆ ತಲುಪಿದೆ. 24 ಕ್ಯಾರಟ್‌ 1 (Gold Price) ಗ್ರಾಂ ಚಿನ್ನದ ದರದಲ್ಲಿ 81 ರೂ. ಇಳಿಕೆಯಾಗಿ, 12,508 ರೂ ಆಗಿದೆ.

Foeticide: ಮೈಸೂರಿನಲ್ಲಿ ಭ್ರೂಣ ಲಿಂಗ ಪತ್ತೆ ಗ್ಯಾಂಗ್, ಮಹಿಳೆ ಸೇರಿ ಮೂವರು ಆರೆಸ್ಟ್

ಮೈಸೂರಿನಲ್ಲಿ ಭ್ರೂಣ ಲಿಂಗ ಪತ್ತೆ ಗ್ಯಾಂಗ್, ಮಹಿಳೆ ಸೇರಿ ಮೂವರು ಆರೆಸ್ಟ್

Mysuru Crime News: ಮೈಸೂರು ತಾಲೂಕಿನ ಹುನಗನಹಳ್ಳಿಯಲ್ಲಿರುವ ತೋಟದ ಮನೆಯಲ್ಲಿ ಕಾನೂನು ಬಾಹಿರವಾಗಿ ಸ್ಕ್ಯಾನಿಂಗ್ ಮಾಡಲಾಗುತ್ತಿತ್ತು. ಹೆಣ್ಣು ಭ್ರೂಣ ಲಿಂಗ ಪತ್ತೆಯಾದರೆ ಭ್ರೂಣವನ್ನು ಹತ್ಯೆ ಮಾಡುತ್ತಿದ್ದರು. ಗ್ರಾಮೀಣ ಭಾಗದ ಮಹಿಳೆಯರನ್ನೇ ಟಾರ್ಗೆಟ್ ಮಾಡಿ ಸ್ಕ್ಯಾನಿಂಗ್ ಮಾಡುತ್ತಿದ್ದರು.

Physical Abuse: ಬೆಂಗಳೂರಿನಲ್ಲಿ ಮಹಿಳೆ ಮೇಲೆ ಎರಗಿದ ಮೂವರು ಕಾಮುಕರ ಸೆರೆ

ಬೆಂಗಳೂರಿನಲ್ಲಿ ಮಹಿಳೆ ಮೇಲೆ ಎರಗಿದ ಮೂವರು ಕಾಮುಕರ ಸೆರೆ

Robbery Case: ಸಂತ್ರಸ್ತೆ ವಾಸವಿದ್ದ ಮನೆಗೆ ನುಗ್ಗಿದ ಐವರು ಆರೋಪಿಗಳ ಗ್ಯಾಂಗ್‌, ತಾವು 'ಪೀಣ್ಯ ಪೊಲೀಸರ ಇನ್ಫಾರ್ಮರ್ಸ್' (ಮಾಹಿತಿದಾರರು) ಎಂದು ಹೇಳಿಕೊಂಡಿದ್ದಾರೆ. "ನಿಮ್ಮ ಮನೆಯಲ್ಲಿ ಗಾಂಜಾ ಮತ್ತು ವೇಶ್ಯವಾಟಿಕೆ ನಡೆಸುತ್ತಿದ್ದೀರಾ" ಎಂದು ಆರೋಪಿಸಿದ್ದಾರೆ. ನಂತರ ಮಾರಕಾಸ್ತ್ರಗಳನ್ನು ತೋರಿಸಿ ಮನೆಯಲ್ಲಿದ್ದವರ ಮೇಲೆ ಹಲ್ಲೆ ನಡೆಸಿದ್ದಾರೆ.

Karnataka Weather: ಇಂದಿನ ಹವಾಮಾನ; ರಾಜ್ಯದ ಈ ಜಿಲ್ಲೆಗಳಲ್ಲಿ ಭರ್ಜರಿ ಮಳೆ ನಿರೀಕ್ಷೆ

ಇಂದಿನ ಹವಾಮಾನ; ರಾಜ್ಯದ ಈ ಜಿಲ್ಲೆಗಳಲ್ಲಿ ಭರ್ಜರಿ ಮಳೆ ನಿರೀಕ್ಷೆ

ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಹಗುರದಿಂದ ಮಧ್ಯಮ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 26°C ಮತ್ತು 21°C ಇರುವ ಸಾಧ್ಯತೆ ಇದೆ.

Hasanamba Devi: ಶಕ್ತಿದೇವತೆ ಹಾಸನಾಂಬೆ ದೇಗುಲ ಗರ್ಭಗುಡಿಗೆ ಇಂದು ತೆರೆ, ಈ ವರ್ಷ 26 ಲಕ್ಷ ಮಂದಿ ದರ್ಶನ

ಇಂದು ಹಾಸನಾಂಬೆ ದೇಗುಲ ಗರ್ಭಗುಡಿಗೆ ತೆರೆ, ಈ ವರ್ಷ 26 ಲಕ್ಷ ಮಂದಿ ದರ್ಶನ

ಕಳೆದ 13 ದಿನಗಳಿಂದ ಇದುವರೆಗೂ 26 ಲಕ್ಷ ಭಕ್ತರು ಹಾಸನಾಂಬೆ ದರ್ಶನ ಪಡೆದುಕೊಂಡಿದ್ದಾರೆ. ಅಲ್ಲದೆ ಈ ವರ್ಷ ದಾಖಲೆ 22 ಕೋಟಿಗೂ ಹೆಚ್ಚು ಆದಾಯ ಸಂಗ್ರಹವಾಗಿದೆ. ಕಳೆದ 13 ದಿನಗಳಿಂದ ಅನೇಕ ರಾಜಕೀಯ ನಾಯಕರು, ಸಿನಿಮಾ ತಾರೆಯರು ಸೇರಿದಂತೆ ಹಲವರು ದೇವರ ದರ್ಶನ ಪಡೆದಿದ್ದಾರೆ.

Deepavali Festival: ಕತ್ತಲಾದ ದೀಪಾವಳಿ, ಪಟಾಕಿ ಸಿಡಿಸುವಾಗ 190ಕ್ಕೂ ಅಧಿಕ ಮಂದಿಗೆ ಗಾಯ, ಕಣ್ಣೇ ಕಳೆದುಕೊಂಡ 8  ಮಂದಿ

ಪಟಾಕಿ ಸಿಡಿಸುವಾಗ 190ಕ್ಕೂ ಅಧಿಕ ಮಂದಿಗೆ ಗಾಯ, ಕಣ್ಣೇ ಕಳೆದುಕೊಂಡ 8 ಮಂದಿ

Fire crackers: ಬೆಂಗಳೂರಿನ ವಾಯು ಗುಣಮಟ್ಟ ದೀಪಾವಳಿ ಪಟಾಕಿಯಿಂದಾಗಿ ಮತ್ತಷ್ಟು ಹದಗೆಟ್ಟಿದೆ. BWSSB ಕಾಡುಬೀಸನಹಳ್ಳಿಯಲ್ಲಿ AQI ಅಂದ್ರೆ ಏರ್‌ ಕ್ವಾಲಿಟಿ ಇಂಡೆಕ್ಸ್‌ ಅರ್ಥಾತ್‌ ಗಾಳಿಯ ಗುಣಮಟ್ಟ 140 ಆಗಿದೆ. ಅಂದ್ರೆ ಇಲ್ಲೇ ಹೆಚ್ಚು ಮಾಲಿನ್ಯ ಆಗಿರುವುದು ಕಂಡುಬಂದಿದೆ.

MP Dr. K. Sudhakar: ತಂದೆ ತಾಯಿಯನ್ನು ಕಳೆದುಕೊಂಡ ಮಕ್ಕಳೊಂದಿಗೆ ಹಬ್ಬ ಆಚರಿಸಿದ ಸಂಸದ ಡಾ.ಕೆ.ಸುಧಾಕರ್

ಮಕ್ಕಳೊಂದಿಗೆ ಹಬ್ಬ ಆಚರಿಸಿದ ಸಂಸದ ಡಾ.ಕೆ.ಸುಧಾಕರ್

ದೀಪಾವಳಿ ಹಬ್ಬ ಎಂದರೆ ಇಡೀ ಕುಟುಂಬಕ್ಕೆ ಸಡಗರ ಹಾಗೂ ಸಂಭ್ರಮ. ಕೋವಿಡ್ ಸಮಯದಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಹತ್ತು ಮಕ್ಕಳು ತಂದೆ ತಾಯಿಯನ್ನು ಕಳೆದುಕೊಂಡಿದ್ದರು. ಆಗ ಸಚಿವ ನಾಗಿದ್ದ ನಾನು, ಆ ಮಕ್ಕಳನ್ನು ದತ್ತು ಪಡೆದು, ಅವರ ಹೆಸರಿನಲ್ಲಿ ಠೇವಣಿ ಮಾಡಿ ಸಂಪೂರ್ಣ ಶೈಕ್ಷಣಿಕ ನೆರವು ನೀಡುತ್ತಿದ್ದೇನೆ.

Gudibande News: ಗುಡಿಬಂಡೆಯಲ್ಲಿ ಸಂಭ್ರಮದ ದೀಪಾವಳಿ ಹಬ್ಬ ಆಚರಣೆ

ಗುಡಿಬಂಡೆಯಲ್ಲಿ ಸಂಭ್ರಮದ ದೀಪಾವಳಿ ಹಬ್ಬ ಆಚರಣೆ

ಪಟ್ಟಣ ಸೇರಿದಂತೆ ತಾಲೂಕಿನ ಎಲ್ಲಾ ಗ್ರಾಮಗಳಲ್ಲಿ ಶ್ರದ್ದಾ ಭಕ್ತಿಯಿಂದ ಮಹಿಳೆಯರು ಬಾಗಿನ ದಲ್ಲಿ ಪಂಚ ಕಜ್ಜಾಯಗಳು, ಹೂ, ಹಣ್ಣು ಹಂಪಲುಗಳು, ನೋಮುಗಳನ್ನು ವ್ರತವನ್ನು ಆಚರಿಸುವ ಕೇದಾರೇ ಶ್ವರ ಸ್ವಾಮಿಯನ್ನು ಪ್ರತಿಷ್ಟಾಪಿಸಿರುವ ಸ್ಥಳಕ್ಕೆ ಮೊರ ಅಥವಾ ತಟ್ಟೆಗಳಲ್ಲಿ ಬಾಳೆ ಎಲೆ ಹಾಕಿ 21 ಜೋಡಿ ಅಥವಾ 48 ಜೋಡಿ, ಕೆಲವರು ರಾಶಿ ಮೂಲಕ ಕಜ್ಜಾಯಗಳನ್ನು ತುಂಬಿಸಿರುತ್ತಾರೆ.

Gubbi News: ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅ.27 ರಂದು ಪೂರ್ವಭಾವಿ ಸಭೆ

ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅ.27 ರಂದು ಪೂರ್ವಭಾವಿ ಸಭೆ

ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಆಯೋಜಿಸುವ 6 ನೇ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನ ವನ್ನು ಡಿಸೆಂಬರ್ 22 ರಂದು ನಡೆಸಲು ದಿನಾಂಕ ನಿಗದಿಯಾಗಿದ್ದು ಸಮ್ಮೇಳನ ತಯಾರಿ ಕುರಿತು ಚರ್ಚಿಸಲು ತಾಲ್ಲೂಕು ಕಛೇರಿ ಸಭಾಂಗಣದಲ್ಲಿ ಇದೇ ತಿಂಗಳ 27 ರಂದು ಬೆಳಿಗ್ಗೆ 11 ಗಂಟೆಗೆ ಪೂರ್ವ ಭಾವಿ ಸಭೆ ಆಯೋಜಿಸಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ತಾಲ್ಲೂಕು ಅಧ್ಯಕ್ಷ ಎಚ್.ಸಿ.ಯತೀಶ್ ತಿಳಿಸಿದರು.

Gubbi News: ಸರ್ಕಾರಿ ಶಾಲೆಗೆ ಕಾಂಪೌಂಡ್ ನಿರ್ಮಾಣಕ್ಕೆ ಒತ್ತಾಯಿಸಿ ಗುಬ್ಬಿ ಹಿತ ರಕ್ಷಣಾ ಸಮಿತಿ ಧರಣಿ

ಕಾಂಪೌಂಡ್ ನಿರ್ಮಾಣಕ್ಕೆ ಒತ್ತಾಯಿಸಿ ಗುಬ್ಬಿ ಹಿತ ರಕ್ಷಣಾ ಸಮಿತಿ ಧರಣಿ

1952 ರಲ್ಲಿ ಮೈಸೂರು ಅರಸರಿಂದ ಆರಂಭವಾದ ಸರ್ಕಾರಿ ಈ ಶಾಲೆ ಸಾವಿರಾರು ವಿದ್ಯಾರ್ಥಿಗಳ ಶೈಕ್ಷಣಿಕ ಹಿತ ಕಾದಿದೆ. ಆದರೆ ಮೂಲಭೂತ ಅವಶ್ಯಕತೆಗಳ ಪೈಕಿ ಕಾಂಪೌಂಡ್ ಇಲ್ಲದೆ ಶಾಲಾ ಕಟ್ಟಡ ಹಾಳು ಸುರಿದಿದೆ. ಈ ತಡೆಗೋಡೆಗೆ ಹಲವು ಬಾರಿ ಸಾರ್ವಜನಿಕರು ಬೇಡಿಕೆ ಸಲ್ಲಿಸಿದ್ದರೂ ನಿರ್ಮಾಣ ಮಾಡಿಲ್ಲ

Gubbi News: ಗುಬ್ಬಿಯಲ್ಲಿ ಆರ್‌ಎಸ್ಎಸ್ ಪಥ ಸಂಚಲನ

ಗುಬ್ಬಿಯಲ್ಲಿ ಆರ್‌ಎಸ್ಎಸ್ ಪಥ ಸಂಚಲನ

ಪಟ್ಟಣದ ಜೂನಿಯರ್ ಕಾಲೇಜು ಮೈದಾನ ಸಮಾವೇಶಗೊಂಡ ಗಣ ವೇಷಧಾರಿಗಳು ಪಟ್ಟಣದ ವಿನಾಯಕನಗರ ಮೊದಲ ಕ್ರಾಸ್ ಮೂಲಕ ಎಂಜಿ ರಸ್ತೆ, ಗುಬ್ಬಿ ವೀರಣ್ಣ ಸರ್ಕಲ್, ಹೆದ್ದಾರಿ ಮೂಲಕ ಬಸ್ ನಿಲ್ದಾಣ, ಮಾರ್ಕೆಟ್ ರಸ್ತೆ, ಕಾಯಿಪೇಟೆ ಹೀಗೆ ಎಲ್ಲಡೆ ಸಂಚರಿಸಿ ಮೆರವಣಿಗೆ ಮತ್ತೇ ಜೂನಿಯರ್ ಕಾಲೇಜು ಮೈದಾನ ಸೇರಿತು.

Haveri News: ಹಾವೇರಿಯ ರಾಘವೇಂದ್ರ ಮಠದಲ್ಲಿ 10.67 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಆಭರಣ ಕಳವು

ಹಾವೇರಿಯ ರಾಘವೇಂದ್ರ ಮಠದಲ್ಲಿ 10.67 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

Theft Case: ಕಳ್ಳರು ಮಠದ ಬಾಗಿಲು ಬೀಗ ಮುರಿದು ಒಳಗೆ ನುಗ್ಗಿ ಅಪಾರ ಪ್ರಮಾಣದ ಚಿನ್ನಾಭರಣಗಳನ್ನು ಕದ್ದು ಪರಾರಿಯಾಗಿದ್ದಾರೆ. ಕಳ್ಳತನಕ್ಕೆ ಸಂಬಂಧಿಸಿ ಹಾವೇರಿ ಶಹರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಖದೀಮರ ಪತ್ತೆಗಾಗಿ ಪೊಲೀಸ್ ಇಲಾಖೆ ಕಾರ್ಯನ್ಮೋಖವಾಗಿದೆ.

Karnataka Weather: ನಾಳೆ ಉಡುಪಿ, ಉತ್ತರ ಕನ್ನಡ ಜಿಲ್ಲೆಗೆ ಆರೆಂಜ್‌ ಅಲರ್ಟ್;‌ ಬಿರುಸಿನ ಮಳೆ ಸಾಧ್ಯತೆ!

ನಾಳೆ ಉಡುಪಿ, ಉ.ಕನ್ನಡ ಜಿಲ್ಲೆಗೆ ಆರೆಂಜ್‌ ಅಲರ್ಟ್; ಭಾರಿ ಮಳೆ ಸಾಧ್ಯತೆ

ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಹಗುರದಿಂದ ಮಧ್ಯಮ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 26°C ಮತ್ತು 21°C ಇರುವ ಸಾಧ್ಯತೆ ಇದೆ.

First Salary Short Film: ಪವನ್ ವೆಂಕಟೇಶ್ ನಿರ್ದೇಶನದ ʼಫಸ್ಟ್ ಸ್ಯಾಲರಿʼ ಕಿರುಚಿತ್ರದ ಪೋಸ್ಟರ್ ರಿಲೀಸ್‌

ʼಫಸ್ಟ್ ಸ್ಯಾಲರಿʼ ಕಿರುಚಿತ್ರದ ಪೋಸ್ಟರ್ ರಿಲೀಸ್‌

Sandalwood News: ಶ್ರೀ ರಾಘವೇಂದ್ರ ಚಿತ್ರವಾಣಿ ಸಂಸ್ಥೆ ಮುನ್ನೆಡೆಸುತ್ತಿರುವ ಹಿರಿಯ ಸಿನಿಮಾ ಪ್ರಚಾರಕರ್ತ ಸುಧೀಂದ್ರ ವೆಂಕಟೇಶ್ ಈಗ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ತಮ್ಮ ಪುತ್ರ ಪವನ್ ವೆಂಕಟೇಶ್ ಆಕ್ಷನ್ ಕಟ್ ಹೇಳಿರುವ ʼಫಸ್ಟ್ ಸ್ಯಾಲರಿʼ ಕಿರುಚಿತ್ರಕ್ಕೆ ಬಂಡವಾಳ ಹಾಕಿದ್ದಾರೆ. ಶೀರ್ಷಿಕೆ ಕೆಳಗೆ ಕನಸುಗಳ ಹಾದಿ ಎನ್ನುವ ಅಡಿಬರಹವಿದೆ. ʼಫಸ್ಟ್ ಸ್ಯಾಲರಿʼ ಕಿರುಚಿತ್ರದ ಪೋಸ್ಟರ್ ದೀಪಾವಳಿ ಸಂದರ್ಭದಲ್ಲಿ ಬಿಡುಗಡೆಯಾಗಿದೆ.

Physical Abuse Case: ಬೆಂಗಳೂರು ಇನ್ಸ್​ಪೆಕ್ಟರ್ ವಿರುದ್ಧ ಅತ್ಯಾಚಾರ, ವಂಚನೆ ಆರೋಪ; ಮುಸ್ಲಿಂ ಮಹಿಳೆ ದೂರು

ಇನ್ಸ್​ಪೆಕ್ಟರ್ ವಿರುದ್ಧ ಅತ್ಯಾಚಾರ ಆರೋಪ; ಮುಸ್ಲಿಂ ಮಹಿಳೆ ದೂರು

Bengaluru News: ಮದುವೆ ಆಗುವುದಾಗಿ ನಂಬಿಸಿ ಲೈಂಗಿಕವಾಗಿ ದುರ್ಬಳಕೆ ಮಾಡಿದ್ದಾರೆ. ಅಲ್ಲದೇ ಖಾಸಗಿ ಫೋಟೊ, ವಿಡಿಯೊ ಇಟ್ಟುಕೊಂಡಿದ್ದು, ನಮ್ಮ ವಿಚಾರ ಯಾರಿಗಾದರೂ ಹೇಳಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಡಿ.ಜೆ.ಹಳ್ಳಿ ಠಾಣೆ ಇನ್ಸ್​ಪೆಕ್ಟರ್​ ಸುನೀಲ್​ ವಿರುದ್ಧ ಮುಸ್ಲಿಂ ಮಹಿಳೆಯರೊಬ್ಬರು ಗಂಭೀರ ಆರೋಪ ಮಾಡಿದ್ದಾರೆ.

Next CM of Karnataka: ಸಿದ್ದರಾಮಯ್ಯ ನಂತರ ಸತೀಶ್ ಜಾರಕಿಹೊಳಿ ಸಿಎಂ; ಯತೀಂದ್ರ ಹೊಸ ಬಾಂಬ್!

ಸಿದ್ದರಾಮಯ್ಯ ನಂತರ ಸತೀಶ್ ಜಾರಕಿಹೊಳಿ ಸಿಎಂ; ಯತೀಂದ್ರ ಹೊಸ ಬಾಂಬ್!

Karnataka Politics: ರಾಜ್ಯದಲ್ಲಿ ಅಧಿಕಾರ ಹಂಚಿಕೆ ಬಗ್ಗೆ ಚರ್ಚೆ ನಡೆಯುತ್ತಿರುವ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಮಹತ್ವದ ಹೇಳಿಕೆ ನೀಡಿದ್ದಾರೆ. ರಾಜ್ಯ ಕಾಂಗ್ರೆಸ್‌ನಲ್ಲಿ ಸಿದ್ದರಾಮಯ್ಯ ಅವರ ನಂತರ ಎಂತಹವರು ನೇತೃತ್ವ ವಹಿಸಬೇಕು ಎಂದು ಯತೀಂದ್ರ ಸಿದ್ದರಾಮಯ್ಯ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

Physical Abuse: ಬೆಂಗಳೂರಿನಲ್ಲಿ ಮನೆಗೆ ನುಗ್ಗಿ ಮಹಿಳೆ ಮೇಲೆ ಮೂವರಿಂದ ಅತ್ಯಾಚಾರ

ಬೆಂಗಳೂರಿನಲ್ಲಿ ಮನೆಗೆ ನುಗ್ಗಿ ಮಹಿಳೆ ಮೇಲೆ ಮೂವರಿಂದ ಅತ್ಯಾಚಾರ

Harassment: ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಆರೋಪಿಗಳು ಅಪರಾಧ ಎಸಗುವ ಮುನ್ನ ಮದ್ಯಪಾನ ಮಾಡಿದ್ದರು ಎನ್ನಲಾಗಿದೆ. ಪಶ್ಚಿಮ ಬಂಗಾಳ ಮೂಲದ ಮಹಿಳೆ ಇಲ್ಲಿ ಬಾಡಿಗೆ ಮನೆಯಲ್ಲಿದ್ದರು.

Police Firing: ಗೋಪೂಜೆ ದಿನವೇ ಅಕ್ರಮ ಗೋ ಸಾಗಾಟಗಾರನ ಕಾಲಿಗೆ ಗುಂಡು

ಗೋಪೂಜೆ ದಿನವೇ ಅಕ್ರಮ ಗೋ ಸಾಗಾಟಗಾರನ ಕಾಲಿಗೆ ಗುಂಡು

Cow trafficking: ಪೊಲೀಸರು ಲಾರಿಯನ್ನು ಅಡ್ಡಗಟ್ಟಿದ್ದಾರೆ. ಆದರೂ ನಿಲ್ಲದ ಚಾಲಕ ಪೊಲೀಸರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದ್ದಾನೆ. ಬಳಿಕ ಪಿಎಸ್‌ಐ ಆರೋಪಿಯ ಮೇಲೆ ಎರಡು ಸುತ್ತು ಗುಂಡುಗಳನ್ನು ಫೈಯರ್ ಮಾಡಿದ್ದಾರೆ. ಇದರಿಂದ ಒಂದು ಗುಂಡು ವಾಹನದ ಮೇಲೆ ಹಾಗೂ ಮತ್ತೊಂದು ಆರೋಪಿಯ ಕಾಲಿಗೆ ಬಿದ್ದಿದೆ.

Green Movie: ರಾಜ್ ವಿಜಯ್ ನಿರ್ದೇಶನದ ‘ಗ್ರೀನ್’ ಚಿತ್ರ ಈ ವಾರ ತೆರೆಗೆ

ರಾಜ್ ವಿಜಯ್ ನಿರ್ದೇಶನದ ‘ಗ್ರೀನ್’ ಚಿತ್ರ ಈ ವಾರ ತೆರೆಗೆ

Sandalwood News: ರಾಜ್ ವಿಜಯ್ ನಿರ್ದೇಶನದ ವಿಭಿನ್ನ ಕಥಾಹಂದರ ಹೊಂದಿರುವ ʼಗ್ರೀನ್ʼ ಚಿತ್ರ (Green Movie) ಈ ವಾರ ತೆರೆಗೆ ಬರುತ್ತಿದೆ. ಈಗಾಗಲೇ ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಗಳಲ್ಲಿ ಪ್ರದರ್ಶನಗೊಂಡು ಹಲವು ಪ್ರಶಸ್ತಿಗಳ ಜತೆಗೆ ಪ್ರಶಂಸೆಯನ್ನು ಈ ಚಿತ್ರ ಪಡೆದುಕೊಂಡಿದೆ.

Loading...