ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಕರ್ನಾಟಕ

ಸರ್ಕಾರಕ್ಕೆ ನಿಧಿ ಹಸ್ತಾಂತರಿಸಿದ್ದ ಲಕ್ಕುಂಡಿಯ ಪ್ರಜ್ವಲ್‌ ರಿತ್ತಿ ಕುಟುಂಬಕ್ಕೆ ಸೈಟ್‌ ಘೋಷಣೆ

ಸರ್ಕಾರಕ್ಕೆ ನಿಧಿ ಒಪ್ಪಿಸಿದ್ದ ಲಕ್ಕುಂಡಿಯ ರಿತ್ತಿ ಕುಟುಂಬಕ್ಕೆ ಸೈಟ್‌

ಮನೆಗೆ ಪಾಯ ಅಗೆಯುವಾಗ ಸಿಕ್ಕಿದ್ದ ನಿಧಿಯನ್ನು ರಾಜ್ಯ ಸರ್ಕಾರಕ್ಕೆ ಹಸ್ತಾಂತಿಸಿದ್ದ ರಿತ್ತಿ ‌ಕುಟುಂಬಕ್ಕೆ 30*40 ಸೈಟ್ ನೀಡುವ ನಿರ್ಣಯವನ್ನು ಗ್ರಾಮ ಪಂಚಾಯಿತಿ ಪಾಸ್ ಮಾಡಿದೆ. ಮಾನವೀಯ ಮತ್ತು ಸಾಮಾಜಿಕ ನ್ಯಾಯದ ದೃಷ್ಟಿಯಿಂದ ವಿಶೇಷ ಪ್ರಕರಣ ಎಂದು ಪರಿಗಣಿಸಿ ಗ್ರಾಮ ಪಂಚಾಯಿತಿ ಸೈಟ್‌ ನೀಡುವ ನಿರ್ಧಾರ ತೆಗೆದುಕೊಂಡಿದೆ.

Karnataka Govt Vs Governor: ರಾಜ್ಯಪಾಲರ ವಿರುದ್ಧ ಸುಪ್ರೀಂ ಕೋರ್ಟ್‌ ಮೊರೆ ಹೋಗಲು ನಿರ್ಧಾರ: ಸಿಎಂ

ರಾಜ್ಯಪಾಲರ ವಿರುದ್ಧ ಸುಪ್ರೀಂ ಮೊರೆ ಹೋಗಲು ನಿರ್ಧಾರ: ಸಿಎಂ

ವಿಧಾನಮಂಡಲ ಜಂಟಿ ಅಧಿವೇಶನದಲ್ಲಿ ಸಚಿವ ಸಂಪುಟ ಸಿದ್ಧಪಡಿಸಿದ ಭಾಷಣ ಓದದೆ, ತಾವೇ ಸಿದ್ಧಪಡಿಸಿದ ಭಾಷಣ ಓದುವ ಮೂಲಕ ಸಂವಿಧಾನಾತ್ಮಕ ನಿಯಮಗಳಿಗೆ ವಿರುದ್ಧವಾಗಿ ನಡೆದುಕೊಂಡಿರುವ ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌ ಅವರ ನಡೆಯ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.

Blackmail Case: ರಾಜ್ಯದ ಖ್ಯಾತ ಸ್ವಾಮೀಜಿಗೆ ಬ್ಲ್ಯಾಕ್‌ಮೇಲ್; 1 ಕೋಟಿ ನೀಡುವಂತೆ ಬೇಡಿಕೆ ಇಟ್ಟಿದ್ದ ಮಹಿಳೆ ಅರೆಸ್ಟ್

ರಾಜ್ಯದ ಖ್ಯಾತ ಸ್ವಾಮೀಜಿಗೆ ಬ್ಲ್ಯಾಕ್‌ಮೇಲ್; ಮಹಿಳೆ ಅರೆಸ್ಟ್

ಸ್ವಾಮೀಜಿ ಬೆಂಗಳೂರಿಗೆ ಬಂದಿದ್ದಾಗ ಅವರಿಂದ 4.5 ಲಕ್ಷ ರೂ. ಪಡೆದುಕೊಂಡಿದ್ದ ಮಹಿಳೆ, ಮತ್ತೆ 1 ಕೋಟಿ ರೂ. ಕೊಡಬೇಕೆಂದು ಬೇಡಿಕೆ ಇಟ್ಟಿದ್ದಳು. ಹಣ ಕೊಡದಿದ್ದರೆ ಮಾನಹಾನಿ ಮಾಡುವುದಾಗಿ ಬೆದರಿಕೆ ಹಾಕಿದ್ದಳು ಎನ್ನಲಾಗಿದೆ. ಹೀಗಾಗಿ ಆರೋಪಿ ಮಹಿಳೆಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರಿನಲ್ಲಿ ಅತ್ಯಂತ ವೇಗವಾಗಿ ಬೆಳವಣಿಗೆ ಹೊಂದುತ್ತಿರುವ ಹುದ್ದೆ ಎಐ ಎಂಜಿನಿಯರ್: ಲಿಂಕ್ಡ್‌ ಇನ್ 'ಜಾಬ್ಸ್ ಆನ್ ದಿ ರೈಸ್ 2026' ವರದಿ ಬಿಡುಗಡೆ

ವೇಗವಾಗಿ ಬೆಳವಣಿಗೆ ಹೊಂದುತ್ತಿರುವ ಹುದ್ದೆ ಎಐ ಎಂಜಿನಿಯರ್

ಶೇಕಡ 72ರಷ್ಟು ಜನರು 2026ರಲ್ಲಿ ಹೊಸ ಉದ್ಯೋಗದ ಹುಡುಕಾಟದಲ್ಲಿದ್ದಾರೆ. ಆದರೆ ತಂತ್ರಜ್ಞಾನದ ವೇಗದ ಬದಲಾವಣೆಗೆ ತಕ್ಕಂತೆ ಬೇಕಾದ ಕೌಶಲ್ಯಗಳ ಕೊರತೆ (38%) ಮತ್ತು ಇಂದಿನ ಹೆಚ್ಚುತ್ತಿರುವ ಪೈಪೋಟಿಯ ನಡುವೆ ತಾವು ಹೇಗೆ ಎದ್ದು ಕಾಣಬಹುದು (37%) ಎಂಬುದರ ಬಗ್ಗೆ ಮೂರನೇ ಒಂದ ಕ್ಕಿಂತ ಹೆಚ್ಚು ಮಂದಿ ತಾವು ಸಿದ್ಧರಾಗಿಲ್ಲ ಎಂಬ ಭಾವನೆ ಹೊಂದಿದ್ದಾರೆ

ಅಮೆಜಾನ್ ಗ್ರೇಟ್ ರಿಪಬ್ಲಿಕ್ ಡೇ ಸೇಲ್: B2B ಗ್ರಾಹಕರಿಗೆ ಭರ್ಜರಿ ಡೀಲ್‌ಗಳು ಮತ್ತು ಬಲ್ಕ್ ಖರೀದಿ ಪ್ರಯೋಜನಗಳನ್ನು ತಂದ ಅಮೆಜಾನ್ ಬಿಸಿನೆಸ್

ಅಮೆಜಾನ್ ಗ್ರೇಟ್ ರಿಪಬ್ಲಿಕ್ ಡೇ ಸೇಲ್

ಅಮೆಜಾನ್ ಗ್ರೇಟ್ ರಿಪಬ್ಲಿಕ್ ಡೇ ಸೇಲ್ 2026 ರ ಸಮಯದಲ್ಲಿ ಭಾರತೀಯ ವ್ಯವಹಾರಗಳು ವಿವಿಧ ವರ್ಗಗಳಲ್ಲಿ ಗಣನೀಯ ಉಳಿತಾಯವನ್ನು ಮಾಡಲು ಅಮೆಜಾನ್ ಬಿಸಿನೆಸ್ ವೇದಿಕೆ ಕಲ್ಪಿಸುತ್ತಿದೆ. ವ್ಯಾಪಾರಸ್ಥರು ಮತ್ತು ಕಾರ್ಪೊರೇಟ್ ಗ್ರಾಹಕರು ಲ್ಯಾಪ್‌ಟಾಪ್‌ ಗಳು, ಮಾನಿಟರ್‌ಗಳು, ಆಫೀಸ್ ಫರ್ನಿಚರ್, ಕೈಗಾರಿಕಾ ಉಪಕರಣಗಳು ಮತ್ತು ಪ್ಯಾಕೇಜಿಂಗ್ ಸಾಮಗ್ರಿಗಳ ಮೇಲೆ ಅದ್ಭುತ ಡೀಲ್‌ ಗಳನ್ನು ಪಡೆಯಬಹುದು

ತೊಗರಿಗೆ ಕನಿಷ್ಠ ಬೆಂಬಲ ಬೆಲೆ ಹೆಚ್ಚಳ, ಬೆಳೆ ನಷ್ಟ ಪರಿಹಾರಕ್ಕೆ ಆಗ್ರಹ; ಕಲಬುರಗಿಯಲ್ಲಿ ರೈತರ ಪ್ರತಿಭಟನೆ

ತೊಗರಿಗೆ ಕನಿಷ್ಠ ಬೆಂಬಲ ಬೆಲೆ ಹೆಚ್ಚಳಕ್ಕೆ ಆಗ್ರಹಿಸಿ ರೈತರ ಪ್ರತಿಭಟನೆ

Kalaburagi News: ಡಾ. ಸ್ವಾಮಿನಾಥನ್ ಆಯೋಗದ ವರದಿ ಅನ್ವಯ C2 ವೆಚ್ಚಕ್ಕೆ ಶೇ.50 ಲಾಭ ಸೇರಿಸಿ ಕನಿಷ್ಠ ಬೆಂಬಲ ಬೆಲೆ (MSP) ಕಾನೂನು ಜಾರಿಗೆ ಆಗ್ರಹಿಸಿ, ಸಂಯುಕ್ತ ಹೋರಾಟ ಕರ್ನಾಟಕದ ವತಿಯಿಂದ ಗುರುವಾರ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಅಹೊರಾತ್ರಿ ಧರಣಿ ಸತ್ಯಾಗ್ರಹ ಪ್ರಾರಂಭಿಸಿದೆ.

ಮತ್ತೊಂದು ಕೆಟ್ಟ ದಾಖಲೆ ಬರೆದ ಬೆಂಗಳೂರು; ವಿಶ್ವದಲ್ಲೇ 2ನೇ ಅತಿ ಕೆಟ್ಟ ಟ್ರಾಫಿಕ್‌: ವರ್ಷಕ್ಕೆ 7 ದಿನ ರಸ್ತೆಯಲ್ಲೇ ಕಳೆಯುತ್ತಿದ್ದಾರೆ ಜನ

ಟ್ರಾಫಿಕ್ ಜಾಮ್‌ನಲ್ಲಿ ಬೆಂಗಳೂರಿಗೆ ದೇಶದಲ್ಲೇ ಅಗ್ರಸ್ಥಾನ

ಟಾಮ್‌ಟಾಮ್ ಟ್ರಾಫಿಕ್ ಇಂಡೆಕ್ಸ್ ವರದಿ ಪ್ರಕಾರ, ಬೆಂಗಳೂರು ವಿಶ್ವದ ಎರಡನೇ ಅತಿ ಹೆಚ್ಚು ಸಂಚಾರ ದಟ್ಟಣೆಯ ನಗರವಾಗಿ ಗುರುತಿಸಿಕೊಂಡಿದೆ. ನಗರದ ಸರಾಸರಿ ಟ್ರಾಫಿಕ್ ದಟ್ಟಣೆ ಶೇ. 74.4ರಷ್ಟಿದ್ದು ಕಳೆದ ವರ್ಷಕ್ಕಿಂತ ಶೇ. 1.7ರಷ್ಟು ಹೆಚ್ಚಳವಾಗಿದೆ. ಮೆಕ್ಸಿಕೋ ಸಿಟಿ ಮೊದಲ ಸ್ಥಾನದಲ್ಲಿದ್ದರೆ, ಐರ್ಲೆಂಡ್‌ನ ಡಬ್ಲಿನ್ ಮೂರನೇ ಸ್ಥಾನ ಪಡೆದಿದೆ.

ಲಗೇಜ್ ಪರಿಶೀಲಿಸುವ ನೆಪದಲ್ಲಿ ಕೊರಿಯನ್ ಯುವತಿಗೆ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಲೈಂಗಿಕ ಕಿರುಕುಳ; ಸಿಬ್ಬಂದಿ ಅರೆಸ್ಟ್

ಲಗೇಜ್ ಪರಿಶೀಲಿಸುವ ನೆಪದಲ್ಲಿ ಕೊರಿಯನ್ ಯುವತಿಗೆ ಲೈಂಗಿಕ ಕಿರುಕುಳ

physical assault: ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲಗೇಜ್ ಪರಿಶೀಲಿಸುವ ನೆಪದಲ್ಲಿ ಕೊರಿಯನ್ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಘಟನೆ ಬೆಳಕಿಗೆ ಬಂದಿದೆ. ವಲಸೆ ಪ್ರಕ್ರಿಯೆ ಪೂರ್ಣಗೊಳಿಸಿದ ಬಳಿಕ ಆರೋಪಿಯನ್ನು ಭದ್ರತಾ ಸಿಬ್ಬಂದಿಯೊಬ್ಬರು ಟಿಕೆಟ್ ಮತ್ತು ಲಗೇಜುಗಳನ್ನು ಪರಿಶೀಲಿಸುವ ನೆಪದಲ್ಲಿ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಲಾಗಿದೆ.

ಸದನದಲ್ಲಿ ಭಾರೀ ಹೈಡ್ರಾಮಾ; ಸರ್ಕಾರ ನೀಡಿದ ಭಾಷಣ ಓದದೆ ತೆರಳಿದ ಗವರ್ನರ್‌ ಗೆಹ್ಲೋಟ್

ಸರ್ಕಾರ ನೀಡಿದ ಭಾಷಣ ಓದದೆ ತೆರಳಿದ ಗವರ್ನರ್‌

Governor Gehlot: ಇಂದಿನಿಂದ ಆರಂಭವಾಗ್ತಿರುವ ರಾಜ್ಯ ವಿಧಾನಸಭೆ–ವಿಧಾನಪರಿಷತ್ ಜಂಟಿ ವಿಶೇಷ ಅಧಿವೇಶನದಲ್ಲಿ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಹಾಜರಾಗಿದ್ದರು. ಆದರೆ ಸರ್ಕಾರದ ಭಾಷಣಕ್ಕೆ ರಾಜ್ಯಪಾಲರು ವಿರೋಧ ವ್ಯಕ್ತ ಪಡಿಸಿದ್ದು, ಕೇವಲ ಎರಡೇ ಸಾಲಿನಲ್ಲಿ ಭಾಷಣ ಮುಗಿಸಿ ಅಧಿವೇಶನದಿಂದ ಹೊರ ನಡೆದಿದ್ದಾರೆ.

ಅಲೆಂಬಿಕ್ ನಗರದಲ್ಲಿ 2.4 ಮಿಲಿಯನ್ ಚದರ ಅಡಿ ಕಚೇರಿ ಸ್ಥಳವನ್ನು ಗುತ್ತಿಗೆಗೆ ಪಡೆದ ಜಾಗತಿಕ ತಂತ್ರಜ್ಞಾನ ದೈತ್ಯ

ಕ್ಲೌಡ್ ಫಾರೆಸ್ಟ್” ನ ಆರಂಭವು ಪ್ರಕೃತಿ-ಮೊದಲ ಜೀವನವನ್ನು ಪರಿಚಯಿಸುತ್ತದೆ

ವಿಶ್ವದ ಪ್ರಮುಖ ತಂತ್ರಜ್ಞಾನ ಕಂಪನಿ ಅಲೆಂಬಿಕ್ ಸಿಟಿಯನ್ನು ಸ್ವಾಗತಿಸಲು ನಾವು ಹೆಮ್ಮೆ ಪಡುತ್ತೇವೆ" ಎಂದು ಶ್ರೆನೋ ಲಿಮಿಟೆಡ್‌ನ ನಿರ್ದೇಶಕ ಉದಿತ್ ಅಮೀನ್ ಹೇಳಿದರು. ಈ ನಿರ್ಧಾರವು ಮುಂದಿನ ಪೀಳಿಗೆಯ ತಂತ್ರಜ್ಞಾನ ಕ್ಯಾಂಪಸ್‌ಗಳ ಕಡೆಗೆ ವಿಶಾಲವಾದ ಬದಲಾವಣೆ ಯನ್ನು ಪ್ರತಿಬಿಂಬಿಸುತ್ತದೆ, ಅವು ಡಿಜಿಟಲ್ ರೂಪದಲ್ಲಿ ಮುಂದುವರಿದಿರುವುದು ಮಾತ್ರವಲ್ಲದೆ ಸುಸ್ಥಿರತೆ, ಯೋಗಕ್ಷೇಮ ಮತ್ತು ದೀರ್ಘಕಾಲೀನ ಹೊಣೆಗಾರಿಕೆಯಲ್ಲಿ ಆಳವಾಗಿ ಬೇರೂರಿವೆ.

ಉಡುಪಿ ಕೇಸರಿ ಧ್ವಜ ವಿವಾದ: ಯಾವುದೇ ರಾಜಕೀಯ ಉದ್ದೇಶವಿರಲಿಲ್ಲ ಎಂದ ಜಿಲ್ಲಾಧಿಕಾರಿ, ಕ್ರಮ ಜರುಗಿಸಲು ಕಾಂಗ್ರೆಸ್‌ ಒತ್ತಾಯ

ಉಡುಪಿ ಕೇಸರಿ ಧ್ವಜ ವಿವಾದ: ಜಿಲ್ಲಾಧಿಕಾರಿ ಹೇಳಿದ್ದೇನು?

ಕೃಷ್ಣಮಠದ ಪರ್ಯಾಯದ ಮೆರವಣಿಗೆ ವೇಳೆ ಕೇಸರಿ ಧ್ವಜ ಪ್ರದರ್ಶಿಸಿದ ವಿಚಾರ ಇದೀಗ ವಿವಾದಕ್ಕೀಡಾಗಿದ್ದು, ಉಡುಪಿ ಜಿಲ್ಲಾಧಿಕಾರಿ ಟಿಕೆ ಸ್ವರೂಪಾ ಅವರು ತಮ್ಮ ಅಧಿಕೃತ ಕರ್ತವ್ಯದ ಭಾಗವಾಗಿ ಈ ಕಾರ್ಯಕ್ರಮಕ್ಕೆ ಹಾಜರಾಗಿದ್ದೆ ಮತ್ತು ಇದರ ಹಿಂದೆ ಯಾವುದೇ ರಾಜಕೀಯ ಉದ್ದೇಶವಿರಲಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಶೇ.90 ರಷ್ಟು ಕ್ರಿಪ್ಟೋ ಹೂಡಿಕೆದಾರರಿಗೆ ತೆರಿಗೆಯ ಬಗ್ಗೆ ಅರಿವಿದೆ, ಶೇ. 66 ರಷ್ಟು ಮಂದಿ ಇದು ಅನ್ಯಾಯವೆಂದು ಭಾವಿಸಿದ್ದಾರೆ: ಕಾಯಿನ್‌ಸ್ವಿಚ್ ಸಮೀಕ್ಷೆ

ಶೇ.90 ರಷ್ಟು ಹೂಡಿಕೆದಾರರಿಗೆ ತೆರಿಗೆಯ ಅರಿವಿದೆ, ಆದರೆ...?

ಭಾರತದ ಪ್ರಸ್ತುತ ಕ್ರಿಪ್ಟೋ ತೆರಿಗೆ ಚೌಕಟ್ಟಿನ ಬಗ್ಗೆ ಹೂಡಿಕೆದಾರರಲ್ಲಿ ಹೆಚ್ಚಿನ ಮಟ್ಟದ ಅರಿವು ಇರುವು ದನ್ನು ಈ ಸಮೀಕ್ಷೆ ಸೂಚಿಸುತ್ತದೆ. ಲಾಭದ ಮೇಲೆ ಶೇ. 30 ರಷ್ಟು ತೆರಿಗೆ, ನಷ್ಟವನ್ನು ಸರಿದೂಗಿಸಲು ಅಥವಾ ಮುಂದಕ್ಕೆ ಕೊಂಡೊಯ್ಯಲು ಅವಕಾಶವಿಲ್ಲದಿರುವುದು ಮತ್ತು ವಹಿವಾಟುಗಳ ಮೇಲೆ ಶೇ. 1 ರಷ್ಟು ಟಿಡಿಎಸ್ (TDS) ಸೇರಿದಂತೆ ಪ್ರಮುಖ ನಿಬಂಧನೆಗಳ ಬಗ್ಗೆ ಸುಮಾರು ಶೇ. 90 ರಷ್ಟು ಜನರು ತಮಗೆ ತಿಳಿದಿದೆ

ಶ್ರೀ ಸಾಯಿ ಗೋಲ್ಡ್ ಪ್ಯಾಲೇಸ್‌ನ  8ನೇ ಶಾಖೆ ಉದ್ಘಾಟನೆ ನಾಳೆ; ಹಲವು ಗಣ್ಯರು ಭಾಗಿ

ಶ್ರೀ ಸಾಯಿ ಗೋಲ್ಡ್ ಪ್ಯಾಲೇಸ್‌ನ 8ನೇ ಶಾಖೆ ಉದ್ಘಾಟನೆ ನಾಳೆ

ನಗರದ ಹೆಸರಾಂತ ಹಾಗೂ ವಿಶ್ವಾಸಾರ್ಹ ಚಿನ್ನಾಭರಣ ಸಂಸ್ಥೆಯಾದ ಶ್ರೀ ಸಾಯಿ ಗೋಲ್ಡ್ ಪ್ಯಾಲೇಸ್ ತನ್ನ 8ನೇ ಶಾಖೆಯನ್ನು ಕನಕಪುರ ರಸ್ತೆ, ರಘುವನಹಳ್ಳಿ ಪ್ರದೇಶದಲ್ಲಿ ಜನವರಿ 23ರಂದು ಬೆಳಿಗ್ಗೆ 11 ಗಂಟೆಗೆ ಭವ್ಯವಾಗಿ ಉದ್ಘಾಟನೆಯಾಗಲಿದೆ. ಮಾಜಿ ಪ್ರಧಾನಮಂತ್ರಿ ಶ್ರೀ ಹೆಚ್.ಡಿ. ದೇವೇಗೌಡರು & ಶ್ರೀಮತಿ ಚೆನ್ನಮ್ಮ ಶ್ರೀ ಹೆಚ್.ಡಿ. ದೇವೇಗೌಡರುಆಶೀರ್ವಾದದಿಂದ ಹಾಗೂ ದಿವ್ಯ ಸಾನಿಧ್ಯ ಅವಧೂತ ವಿನಯ್ ಗುರೂಜಿರವರ ಉಪಸ್ಥಿತಿಯಲ್ಲಿ ಈ ಸಮಾರಂಭ ನಡೆಯಲಿದೆ.

ಖಾಸಗಿ ಸ್ಲೀಪರ್ ಬಸ್‌ಗಳಲ್ಲಿ ಈ 8 ನಿಯಮಗಳ ಪಾಲನೆ ಕಡ್ಡಾಯ; ಸಾರಿಗೆ ಸಚಿವರಿಂದ ಖಡಕ್‌ ಸೂಚನೆ

ಖಾಸಗಿ ಸ್ಲೀಪರ್ ಬಸ್‌ಗಳಲ್ಲಿ ಈ 8 ನಿಯಮಗಳ ಪಾಲನೆ ಕಡ್ಡಾಯ

ಚಿತ್ರದುರ್ಗ ಖಾಸಗಿ ಬಸ್ ಅಗ್ನಿದುರಂತದ ಬಳಿಕ ಎಚ್ಚೆತ್ತಿರುವ ರಾಜ್ಯ ಸರ್ಕಾರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಸೂಚನೆ ಹಿನ್ನೆಲೆಯಲ್ಲಿ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಅವರು ಮಹತ್ವದ ಸಭೆ ನಡೆಸಿದ್ದಾರೆ. ರಾಜ್ಯದ ಖಾಸಗಿ ಬಸ್ ಮಾಲೀಕರು,ಬಸ್ ಕೋಚ್ ನಿರ್ಮಾಣ ಕಂಪನಿಗಳ ಮಾಲೀಕರು ಮತ್ತು ಸಾರಿಗೆ ಇಲಾಖೆಯ ಅಧಿಕಾರಿಗಳ ಜತೆ ಸಭೆ ನಡೆಸಲಾಗಿದೆ.

ಒತ್ತುವರಿ ತೆರವುಗೊಳಿಸಲು ಅಡ್ಡಿಪಡಿಸಿದ ಹಿನ್ನೆಲೆ ವಾಪಸ್ ಆದ ಅಧಿಕಾರಿಗಳು

ದಾರಿ ಬಿಡಿಸುವ ವಿಚಾರ ಕೈ ಕೈ ಮಿಲಾಯಿಸುವ ಹಂತಕ್ಕೆ ಗಲಾಟೆ

ಕೆಲ ರೈತರ ಜಮೀನುಗಳಲ್ಲಿ ಒತ್ತುವರಿ ತೆರವುಗೊಳಿಸಿಕೊಂಡು ಬಂದು ನಾರಾಯಣಸ್ವಾಮಿ ಎಂಬುವರ ಜಮೀನಿನಲ್ಲಿ ಒತ್ತುವರಿ ತೆರವುಗೊಳಿಸಲು ಬಂದಾಗ ಸದರಿ ಜಮೀನಿನವರು ಒತ್ತುವರಿಯನ್ನು ತೆರವು ಗೊಳಿಸಲು ಅವಕಾಶ ಕಲ್ಪಿಸಿ ಕೊಡದೆ ಜೆಸಿಬಿ ಮುಂದೆ ಕೂತು ಒತ್ತುವರಿ ತೆರವು ಕಾರ್ಯಕ್ಕೆ ಅಡ್ಡಿಪಡಿಸಿ ದ್ದಲ್ಲದೆ ಗ್ರಾಮದಿಂದ ಒತ್ತುವರಿಯನ್ನು ತೆರವು ಮಾಡಿಕೊಂಡು ಬನ್ನಿ ಹಾಗೂ ಸೂಕ್ತ ರೀತಿಯಲ್ಲಿ ಸರ್ವೆ ಕಾರ್ಯ ನಡೆದಿಲ್ಲ ಎಂದು ಪಟ್ಟು ಹಿಡಿದರು

ಬಾರ್ ಕೌನ್ಸಿಲ್ ಚುನಾವಣೆಯಲ್ಲಿ ಎಸ್‌ಸಿ, ಎಸ್‌ಟಿ ಅಭ್ಯರ್ಥಿ ಗೆಲ್ಲಿಸಿ: ಹಿರಿಯ ನ್ಯಾ. ಎಂ. ಮುನಿಯಪ್ಪ

ಬಾರ್ ಕೌನ್ಸಿಲ್ ಚುನಾವಣೆ; ಎಸ್‌ಸಿ, ಎಸ್‌ಟಿ ಅಭ್ಯರ್ಥಿ ಗೆಲ್ಲಿಸಿ

ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಗಳ ವಕೀಲರ ಸಂಘದ ರಾಜ್ಯಮಟ್ಟದ ಸಮಾವೇಶ ಹಾಗೂ 2ನೇ ವರ್ಷದ ವಾರ್ಷಿಕೋತ್ಸವ ಕುರಿತು ಚರ್ಚಿಸಲು ಬೆಂಗಳೂರಿನ ಗಾಂಧಿ ನಗರದ ಖಾಸಗಿ ಹೋಟೆಲ್‌ನಲ್ಲಿ ಬುಧವಾರ ಪೂರ್ವಭಾವಿ ಸಭೆ ಜರುಗಿತು. ಈ ಕುರಿತ ವಿವರ ಇಲ್ಲಿದೆ.

ಜಂಟಿ ಅಧಿವೇಶನದ ರಾಜ್ಯಪಾಲರ ಭಾಷಣದ 11 ಪ್ಯಾರಾದಲ್ಲಿ 7 ಅಂಶ ತಿದ್ದುಪಡಿ ಮಾಡಲು ತೀರ್ಮಾನ: ಸಚಿವ ಎಚ್.ಕೆ ಪಾಟೀಲ್

ರಾಜ್ಯಪಾಲರ ಭಾಷಣದ 11 ಪ್ಯಾರಾದಲ್ಲಿ 7 ಅಂಶ ತಿದ್ದುಪಡಿ: ಎಚ್.ಕೆ ಪಾಟೀಲ್

Karnataka assembly Session: ಗುರುವಾರದ ವಿಧಾನಮಂಡಲದ ಜಂಟಿ ಅಧಿವೇಶನದ ರಾಜ್ಯಪಾಲರ ಭಾಷಣದಲ್ಲಿನ 11 ಪ್ಯಾರಾದಲ್ಲಿ 7 ಅಂಶಗಳನ್ನು ತಿದ್ದುಪಡಿ ಮಾಡಲು ತೀರ್ಮಾನಿಸಲಾಗಿದೆ. 11 ಪ್ಯಾರಾಗಳನ್ನು ಸಂಪೂರ್ಣವಾಗಿ ಕೈಬಿಡದೇ ಇರಲು ಸರ್ಕಾರ ನಿರ್ಧರಿಸಿದೆ ಎಂದು ಸಚಿವ ಎಚ್‌.ಕೆ.ಪಾಟೀಲ್‌ ತಿಳಿಸಿದ್ದಾರೆ.

Gauribidanur News: ಕೆಎಚ್ಪಿ ಬಣದ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ

ಕೆಎಚ್ಪಿ ಬಣದ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ

ತೊಂಡೇಭಾವಿ-ಮಂಚೇನಹಳ್ಳಿ ಕ್ಷೇತ್ರಕ್ಕೆ ಜೆ.ಕಾಂತರಾಜು, ಗೌರಿಬಿದನೂರು ಹಾಲು ಉತ್ಪಾದಕರ ನಿರ್ದೇಶಕರ ಸಾಮಾನ್ಯ ಕ್ಷೇತ್ರಕ್ಕೆ ಡಿ.ಎನ್.ವೆಂಕಟರೆಡ್ಡಿರವರು ಹಾಗೂ ಮಹಿಳಾ ಮೀಸಲು ಕ್ಷೇತ್ರಕ್ಕೆ ಬೊಮ್ಮಶೆಟ್ಟಹಳ್ಳಿಯ ಸುಧಾ ಅವರುಗಳು ನಗರದ ಸುಮಂಗಲಿ ಕಲ್ಯಾಣ ಮಂಟಪದಿಂದ ಶಾಸಕ ಕೆಎಚ್.ಪುಟ್ಟಸ್ವಾಮಿಗೌಡರ ನೇತೃತ್ವದಲ್ಲಿ ತಮ್ಮ ಅಪಾರ ಬೆಂಬಲಿಗರೊಂದಿಗೆ ಚಿಕ್ಕಬಳ್ಳಾಪುರಕ್ಕೆ ತೆರಳಿ ಅಪರ ಜಿಲ್ಲಾಧಿಕಾರಿ ಭಾಸ್ಕರ್ ಅವರಿಗೆ ನಾಮಪತ್ರ ಸಲ್ಲಿಸಿದರು.

Haveri News: ಮನೆಗೆ ನುಗ್ಗಿ 13 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ಕಳವು: ಆರೋಪಿ ಬಂಧನ

ಮನೆಗೆ ನುಗ್ಗಿ 13 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ಕಳವು: ಆರೋಪಿ ಬಂಧನ

ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಸೋಮಾಪುರ ಗ್ರಾಮದ ಬಸವರಾಜ ಗೂಳ್ಳಪ್ಪ ಪೂಜಾರ ಎಂಬುವವರ ಮನೆಗೆ ನುಗ್ಗಿ 112 ಗ್ರಾಂ ಚಿನ್ನ ಹಾಗೂ 310 ಗ್ರಾಂ ಬೆಳ್ಳಿ ಒಟ್ಟು 13,69,000 ರೂ. ಮೌಲ್ಯದ ಆಭರಣಗಳನ್ನು ಕದ್ದು ಪರಾರಿಯಾಗಿದ್ದ ಆರೋಪಿಯನ್ನು ಆಡೂರ ಪೊಲೀಸ್ ಠಾಣೆಯ ವಿಶೇಷ ತಂಡ ಬಂಧಿಸಿದೆ.

Yadgir News: ವಡಗೇರಾ ಸರಕಾರಿ ಶಾಲೆ ಆವರಣದಲ್ಲಿಯೇ ವಿದ್ಯಾರ್ಥಿ ಆತ್ಯಹತ್ಯೆ; ಮುಗಿಲು ಮುಟ್ಟಿದ ಕುಟುಂಸ್ಥರ ಆಕ್ರಂದನ

ವಡಗೇರಾ ಸರಕಾರಿ ಶಾಲೆ ಆವರಣದಲ್ಲಿಯೇ ವಿದ್ಯಾರ್ಥಿ ಆತ್ಯಹತ್ಯೆ

ಯಾದಗಿರಿ ಜಿಲ್ಲೆಯ ವಡಗೇರಾ ಪಟ್ಟಣದ ಸರಕಾರಿ ಶಾಲೆಯ ಆವರಣದಲ್ಲಿ ಘಟನೆ ನಡೆದಿದೆ. ಮರಕ್ಕೆ ನೇಣು ಬಿಗಿದುಕೊಂಡು ಸ್ಥಿತಿಯಲ್ಲಿ ವಿದ್ಯಾರ್ಥಿ ಶವ ಪತ್ತೆಯಾಗಿದೆ. ಸ್ಥಳಕ್ಕೆ ವಡಗೇರಾ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ. ವಿದ್ಯಾರ್ಥಿಯ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

Chikkaballapur News: ಶರಣರಿಂದ ಲಿಂಗ ಸಮಾನತೆ ಸಾಧ್ಯವಾಯಿತು: ತಹಸೀಲ್ದಾರ್ ರಶ್ಮಿ ಅಭಿಮತ

ಶರಣರಿಂದ ಲಿಂಗ ಸಮಾನತೆ ಸಾಧ್ಯವಾಯಿತು: ತಹಸೀಲ್ದಾರ್ ರಶ್ಮಿ ಅಭಿಮತ

ಶಿಕ್ಷಣವು ಸರಿ ಯಾವುದು, ತಪ್ಪು ಯಾವುದು ಎಂಬುದನ್ನು ತಿಳಿಸಿಕೊಟ್ಟರೆ. ಶರಣರು ತಿಳಿಸಿ ಕೊಟ್ಟಿರುವ ಮೌಲ್ಯಗಳು ಎಷ್ಟೇ ಸಂಕಷ್ಟ ಬಂದರೂ ಸರಿ ದಾರಿಯಲ್ಲೇ ನಡೆಯುವಂತೆ ಮಾಡುತ್ತವೆ. ಅಂತಹ ಮೌಲ್ಯಗಳನ್ನು ನಾವೆಲ್ಲರೂ ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಅಂಬಿಗರು ಕನ್ನಡ ಸಾಹಿತ್ಯ ವನ್ನು ವಿಶ್ವ ಮಟ್ಟಕ್ಕೆ ಪಸರಿಸಿ ವಚನ ಸಾಹಿತ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ.

Chikkaballapur News: ವಾರದ ಒಳಗೆ ದಾಖಲೆ ರಹಿತ ಜನ ವಸತಿಗಳನ್ನು ಗುರ್ತಿಸಿ: ಜಿಲ್ಲಾಧಿಕಾರಿ ಜಿ. ಪ್ರಭು

ವಾರದ ಒಳಗೆ ದಾಖಲೆ ರಹಿತ ಜನ ವಸತಿಗಳನ್ನು ಗುರ್ತಿಸಿ

ಸ್ವಾತಂತ್ರ್ಯ ಬಂದು 79 ವರ್ಷಗಳು ಕಳೆದರೂ ಕೂಡ ಕೆಲವು ಕುಟುಂಬಗಳು ಈವರೆಗೂ ಶಾಶ್ವತ ನೆಲೆ ಇಲ್ಲದ ಹಾಗೆ ಜೀವನ ಸಾಗಿಸುತ್ತಿವೆ. ಆ ಹಿನ್ನೆಲೆಯಲ್ಲಿ ಸರ್ಕಾರ “ಕಂದಾಯ ಗ್ರಾಮ ಅಭಿಯಾನ” ವನ್ನು ಕೈಗೆತ್ತಿಗೊಂಡು ದಾಖಲೆ ರಹಿತ ಜನವಸತಿಗಳ ನಿವಾಸಿಗಳಿಗೆ ಹಕ್ಕುಪತ್ರಗಳನ್ನು ನೀಡಲು ಮುಂದಾಗಿದೆ.

ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರ ಚಿಕ್ಕಬಳ್ಳಾಪುರ ಜಿಲ್ಲಾ ಪ್ರವಾಸ

ಆಯೋಗದ ಅಧ್ಯಕ್ಷರ ಚಿಕ್ಕಬಳ್ಳಾಪುರ ಜಿಲ್ಲಾ ಪ್ರವಾಸ

ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ(Karnataka State Commission for Protection of Child Rights)ದ ಅಧ್ಯಕ್ಷರಾದ ಶಶಿಧರ್ ಕೋಸಂಬೆರವರು ಬುಧವಾರ ನಗರದ ಸರ್.ಎಂ.ವಿಶ್ವೇಶ್ವರಯ್ಯ ಪ್ರೌಢ ಶಾಲೆಯಲ್ಲಿ ನಡೆದ ಶಾಲಾ ಮಕ್ಕಳು, ಪೋಷಕರು ಹಾಗೂ ಶಾಲಾ ಭಿವೃದ್ದಿ ಮತ್ತು ಮೇಲುಸ್ತುವಾರಿ ಸಮಿತಿಯ ಸದಸ್ಯರು ಗಳೊಂದಿಗೆ ಅಹವಾಲುಗಳನ್ನು ಸ್ವೀಕರಿಸಿದರು

AU Jewellers robbery case: ಎಯು ಜ್ಯೂಯೆಲ್ಲರ್ಸ್ ದರೋಡೆ ಪ್ರಕರಣ ಭೇದಿಸಿದ ಪೊಲೀಸರು: ಆರೋಪಿಗಳ ಬಂಧನ

ದರೋಡೆ ಪ್ರಕರಣ ಭೇದಿಸಿದ ಪೊಲೀಸರು: ಆರೋಪಿಗಳ ಬಂಧನ

ಚಿಕ್ಕಬಳ್ಳಾಪುರ ನಗರದ ಬಿ ಬಿ ರಸ್ತೆಯಲ್ಲಿನ ಎ ಯು ಜ್ಯೂಯೆಲ್ಲರಿ ಅಂಗಡಿಯಲ್ಲಿ ಡಿಸೆಂಬರ್ 22 ರ ರಾತ್ರಿ 139 ಕೆ.ಜಿ. ಬೆಳ್ಳಿ ಕಳ್ಳತನವಾಗಿತ್ತು. ದರೋಡೆಗೆ ಸಂಬಂಧಿಸಿದಂತೆ ಚಿಕ್ಕಬಳ್ಳಾಪುರ ನಗರ ಠಾಣೆ ಯಲ್ಲಿ ಎಯು ಜ್ಯೂಯೆಲ್ಲರಿ ಮಾಲೀಕ ಜಗದೀಶ್ ನೀಡಿದ ದೂರಿನ ಮೇರೆಗೆ ನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಸಿ ಸಿ ಕ್ಯಾಮೆರಾಗಳನ್ನು ಮುರಿದು ಒಳನುಗ್ಗಿದ್ದ ಕಳ್ಳರ ಸುಳಿವು ಪಕ್ಕದ ಜ್ಯೂಯೆಲ್ಲರಿ ಅಂಗಡಿ ಸಿ ಸಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು

Loading...