ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ
ಕರ್ನಾಟಕ
Cabinet Meeting: ಬೆಂಗಳೂರು ಗ್ರಾಮಾಂತರ ಇನ್ನುಮುಂದೆ ʼಬೆಂ. ಉತ್ತರ ಜಿಲ್ಲೆʼ, ಭಾಗ್ಯನಗರ ಆಗಲಿದೆ ಬಾಗೇಪಲ್ಲಿ; ಸಚಿವ ಸಂಪುಟ ತೀರ್ಮಾನ

ಬೆಂ.ಗ್ರಾಮಾಂತರ ಜಿಲ್ಲೆ, ಬಾಗೇಪಲ್ಲಿ ಹೆಸರು ಬದಲಿಸಲು ಸಚಿವ ಸಂಪುಟ ಒಪ್ಪಿಗೆ

Cabinet Meeting: 1986ರಲ್ಲಿ ಬೆಂಗಳೂರು ನಗರ ಜಿಲ್ಲೆಯಿಂದ ಪ್ರತ್ಯೇಕಿಸಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ರಚಿಸಲಾಗಿತ್ತು. ಇದೀಗ ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನು ಬೆಂಗಳೂರು ಉತ್ತರ ಜಿಲ್ಲೆ ಎಂದು ಹೆಸರು ಬದಲಿಸಲು ಅನುಮೋದನೆ ನೀಡಲಾಗಿದೆ. ಅದೇ ರೀತಿ ಬಾಗೇಪಲ್ಲಿ ಪಟ್ಟಣಕ್ಕೆ ಭಾಗ್ಯನಗರ ಎಂದು ಮರುನಾಮಕರಣ ಮಾಡಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ.

Actress Ramya: ದೇವನಹಳ್ಳಿ ರೈತರ ಹೋರಾಟಕ್ಕೆ ನಟಿ ರಮ್ಯಾ ಬೆಂಬಲ; ಸಿಎಂ ಕರುಣೆ ತೋರಲಿ ಎಂದು ಟ್ವೀಟ್‌

ದೇವನಹಳ್ಳಿ ರೈತರ ಹೋರಾಟಕ್ಕೆ ನಟಿ ರಮ್ಯಾ ಬೆಂಬಲ

Actress Ramya: ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯ 13 ಹಳ್ಳಿಗಳ ರೈತರ ಫಲವತ್ತಾದ 1777 ಎಕರೆ ಕೃಷಿ ಭೂಮಿಯನ್ನು ಸರ್ಕಾರವು ಕೈಗಾರಿಕಾ ಉದ್ದೇಶಕ್ಕೆ ಸ್ವಾಧೀನಪಡಿಸಿಕೊಳ್ಳಲು ಮುಂದಾಗಿದೆ. ಇದನ್ನು ವಿರೋಧಿಸಿ ಅನಿರ್ದಿಷ್ಟಾವಧಿ ಪ್ರತಿಭಟನೆಯನ್ನು ರೈತರು ನಡೆಸುತ್ತಿದ್ದಾರೆ.

BY Vijayendra: ಸಿಎಂ ರಾಜೀನಾಮೆ ಪಡೆಯಲು ಭೂಮಿಕೆ ಸಿದ್ಧತೆಗೆ ಸುರ್ಜೇವಾಲಾ ಭೇಟಿ- ಬಿ.ವೈ.ವಿಜಯೇಂದ್ರ ಆರೋಪ

ಸಿಎಂ ರಾಜೀನಾಮೆ ಪಡೆಯಲು ಭೂಮಿಕೆ ಸಿದ್ಧತೆಗೆ ಸುರ್ಜೇವಾಲಾ ಭೇಟಿ: ಬಿವೈವಿ

BY Vijayendra: ರಾಜ್ಯದಲ್ಲಿ ಪರಿಸ್ಥಿತಿ ದಿನೇ ದಿನೇ ಕೈಮೀರಿ ಹೋಗುತ್ತಿದೆ. ಆಡಳಿತ ಯಂತ್ರವು ಸಂಪೂರ್ಣವಾಗಿ ಕುಸಿದುಬಿದ್ದಿದೆ. ಆಡಳಿತ ಪಕ್ಷದಲ್ಲಿ ಶಾಸಕರ ನಡುವೆ ಪೈಪೋಟಿ ಆರಂಭವಾಗಿದೆ. ಮುಖ್ಯಮಂತ್ರಿ ಕುರ್ಚಿಗಾಗಿ ಪೈಪೋಟಿ ದಿನೇ ದಿನೇ ಹೆಚ್ಚಾಗಿದೆ. ಇದರ ಪರಿಣಾಮವಾಗಿ ಅಭಿವೃದ್ಧಿ ಕೆಲಸ ಕಾರ್ಯಗಳು ಏನೂ ನಡೆಯುತ್ತಿಲ್ಲ. ರಾಜ್ಯ ಸರ್ಕಾರ ರೈತರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಆರೋಪಿಸಿದ್ದಾರೆ.

Karnataka SC survey: ಆನ್‌ಲೈನ್‌ನಲ್ಲೂ ಪರಿಶಿಷ್ಟ ಜಾತಿ ಸಮೀಕ್ಷೆಗೆ ಮಾಹಿತಿ ನೀಡಬಹುದು: ಸಿಎಂ

ಆನ್‌ಲೈನ್‌ನಲ್ಲೂ ಪರಿಶಿಷ್ಟ ಜಾತಿ ಸಮೀಕ್ಷೆಗೆ ಮಾಹಿತಿ ನೀಡಬಹುದು: ಸಿಎಂ

Karnataka SC survey: ನಂದಿ ಬೆಟ್ಟದಲ್ಲಿ ಸುದ್ದಿಗಾರರೊಂದಿಗೆ ಸಿಎಂ ಸಿದ್ದರಾಮಯ್ಯ ಮಾತನಾಡಿದ್ದಾರೆ. ಸಮೀಕ್ಷೆ ಮಾಡುವವರು ಮನೆಗೆ ಬಂದಾಗ ಅಥವಾ ಶಿಬಿರದಲ್ಲಿ, ಯಾವುದಾದರೂ ಒಂದು ವಿಧಾನದಲ್ಲಿ ಪರಿಶಿಷ್ಟರ ಜಾತಿ/ ವರ್ಗ ಹೇಳಿಕೊಳ್ಳಬೇಕು ಎಂದು ಸಲಹೆ ನೀಡಿದ್ದಾರೆ.

Recording videos: ಶೌಚಾಲಯದಲ್ಲಿ ಮಹಿಳಾ ಉದ್ಯೋಗಿಗಳ ವಿಡಿಯೋ ಚಿತ್ರೀಕರಣ; ಬೆಂಗಳೂರಿನಲ್ಲಿ ಇನ್ಫೋಸಿಸ್‌ ನೌಕರ ಅರೆಸ್ಟ್

ಶೌಚಾಲಯದಲ್ಲಿ ಮಹಿಳೆಯರ ವಿಡಿಯೋ ಚಿತ್ರೀಕರಣ; ಇನ್ಫೋಸಿಸ್ ನೌಕರ ಅರೆಸ್ಟ್‌

Recording videos: ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಇನ್ಫೋಸಿಸ್ ಕಂಪನಿಯಲ್ಲಿ ಈ ಘಟನೆ ನಡೆದಿದೆ. ಎಚ್.ಆರ್. ಪರಿಶೀಲನೆ ವೇಳೆ ಕೃತ್ಯ ಬೆಳಕಿಗೆ ಬಂದಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಆರೋಪಿಯ ಮೊಬೈಲ್‌ನಲ್ಲಿ ಹಲವು ಮಹಿಳೆಯರ ಅಶ್ಲೀಲ ವಿಡಿಯೋ ಪತ್ತೆಯಾಗಿದ್ದು,

Kannada New Movie: ಯಶೋಧರ ನಿರ್ದೇಶನದ ನೂತನ ಚಿತ್ರದ ಟೈಟಲ್‌ ರಿಲೀಸ್‌

ಯಶೋಧರ ನಿರ್ದೇಶನದ ನೂತನ ಚಿತ್ರದ ಟೈಟಲ್‌ ರಿಲೀಸ್‌

Kannada New Movie: ಯಶೋಧರ ಅವರು ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶಿಸಿರುವ ಹಾಗೂ ಅಭಿಮನ್ಯು ನಾಯಕನಾಗಿ ನಟಿಸಿರುವ ವಿಭಿನ್ನ ಕಥೆ ಹೊಂದಿರುವ ನೂತನ ಚಿತ್ರದ ಶೀರ್ಷಿಕೆ ಇತ್ತೀಚೆಗೆ ಅನಾವರಣಗೊಂಡಿದೆ. ಚಿತ್ರಕ್ಕೆ ʼಹಚ್ಚೆʼ ಎಂದು ಹೆಸರಿಡಲಾಗಿದೆ. ಅಭಿಮನ್ಯು ಅವರಿಗೆ ನಾಯಕಿಯಾಗಿ ಅದ್ಯಾ ಪ್ರಿಯಾ ನಟಿಸಿದ್ದಾರೆ.

ಶ್ವಾಸನಾಳದಲ್ಲಿ ಸಿಲುಕಿದ ಕಡಲೆಕಾಯಿ! ಉಬ್ಬಸದಿಂದ ಬಳಲುತ್ತಿದ್ದ ವ್ಯಕ್ತಿಗೆ ಯಶಸ್ವಿ ಚಿಕಿತ್ಸೆ

ಉಬ್ಬಸದಿಂದ ಬಳಲುತ್ತಿದ್ದ ವ್ಯಕ್ತಿಗೆ ಯಶಸ್ವಿ ಚಿಕಿತ್ಸೆ

ಅಸ್ತಮಾ ಅಥವಾ ಯಾವುದೇ ಅಲರ್ಜಿಯ ಲಕ್ಷಣ ಹೊಂದಿರದ ವ್ಯಕ್ತಿ ರಮೇಶ್‌ 6 ತಿಂಗಳಿನಿಂದ ಉಬ್ಬಸ ಸಮಸ್ಯೆಯಿಂದ ಬಳಲುತ್ತಿದ್ದರು. ಉಬ್ಬಸ ಸಮಸ್ಯೆಯನ್ನು ಅಸ್ತಮಾ ಎಂದು ತಿಳಿದು ಸಾಕಷ್ಟು ಕಡೆ ಚಿಕಿತ್ಸೆ, ಬ್ರೊಂಕೊಡೈಲೇಟರ್‍‌ ಥೆರಪಿ ಪಡೆದರೂ ಸಮಸ್ಯೆಯಲ್ಲಿ ಯಾವುದೇ ಸುಧಾರಣೆ ಕಂಡುಬಂದಿರ ಲಿಲ್ಲ

Raghavendra swamy statue: ರಾಘವೇಂದ್ರ ಸ್ವಾಮಿ ಪ್ರತಿಮೆ ಹೆಸರಲ್ಲಿ 1.15 ಲಕ್ಷ ದೇಣಿಗೆ ಪಡೆದು ವಂಚನೆ; ಮಂತ್ರಾಲಯ ಮಠದ ಸ್ಪಷ್ಟನೆ ಏನು?

ರಾಘವೇಂದ್ರ ಸ್ವಾಮಿ ಪ್ರತಿಮೆ ಹೆಸರಲ್ಲಿ 1.15 ಲಕ್ಷ ದೇಣಿಗೆ ಪಡೆದು ವಂಚನೆ

Raghavendra swamy statue: ರಾಮನಗರದಲ್ಲಿ ರಾಘವೇಂದ್ರ ಸ್ವಾಮಿ ಪ್ರತಿಮೆ ನಿರ್ಮಾಣಕ್ಕಾಗಿ ಭಕ್ತರೊಬ್ಬರು ವಾಟ್ಸ್‌ಆ್ಯಪ್‌ ಮೂಲಕ 1,15,000 ರೂ.ಗಳನ್ನು ಕೆ. ಸುರೇಶ್ ಎಂಬುವವರ ಖಾತೆಗೆ ವರ್ಗಾಯಿಸಿದ್ದಾರೆ. ಹಣ ಪಡೆದ ನಂತರ ಆ ವ್ಯಕ್ತಿ ಪ್ರತಿಕ್ರಿಯಿಸುತ್ತಿಲ್ಲ ಎಂಬ ಆರೋಪ ಕೇಳಿಬಂದಿದೆ.

CM Siddaramaiah: 5 ವರ್ಷ ನಾನೇ ಮುಖ್ಯಮಂತ್ರಿ: ಗೊಂದಲಗಳಿಗೆ ತೆರೆ ಎಳೆದ ಸಿಎಂ ಸಿದ್ದರಾಮಯ್ಯ

5 ವರ್ಷ ನಾನೇ ಮುಖ್ಯಮಂತ್ರಿ: ಗೊಂದಲಗಳಿಗೆ ತೆರೆ ಎಳೆದ ಸಿಎಂ ಸಿದ್ದರಾಮಯ್ಯ

CM Siddaramaiah: ನಮ್ಮ ಸರ್ಕಾರ ಬಂಡೆಯ ರೀತಿ 5 ವರ್ಷಗಳ ಕಾಲ ಇರಲಿದೆ. ಭಾರತೀಯ ಜನತಾ ಪಕ್ಷದವರು ಹಗಲು ಕನಸು ಕಾಣುತ್ತಿದ್ದಾರೆ. ಬಿಜೆಪಿಯವರು ಯಾವುದೇ ಅಭಿವೃದ್ಧಿ ಕೆಲಸಗಳನ್ನು ಮಾಡಿಲ್ಲ. ಬಿಜೆಪಿಯವರು ಜನರನ್ನು ತಪ್ಪುದಾರಿಗೆ ಎಳೆಯುತ್ತಿದ್ದಾರೆ. ನಾನೇ ಐದು ವರ್ಷಗಳ ಕಾಲ ಸಿಎಂ ಆಗಿರುತ್ತೇನೆ ಎಂದಿದ್ದಾರೆ ಸಿದ್ದರಾಮಯ್ಯ.

Monkey Massacre: ಹುಲಿ ಹತ್ಯೆ ಬಳಿಕ ಗುಂಡ್ಲುಪೇಟೆಯಲ್ಲಿ 20ಕ್ಕೂ ಅಧಿಕ ಕೋತಿಗಳ ಮಾರಣಹೋಮ

ಹುಲಿ ಹತ್ಯೆ ಬಳಿಕ ಗುಂಡ್ಲುಪೇಟೆಯಲ್ಲಿ 20ಕ್ಕೂ ಅಧಿಕ ಕೋತಿಗಳ ಮಾರಣಹೋಮ

Monkey Massacre: ದಾರಿಹೋಕರು ಚೀಲವನ್ನು ಬಿಚ್ಚಿ ನೋಡಿದ ವೇಳೆ 20ಕ್ಕೂ ಅಧಿಕ ಕೋತಿಗಳ ಕಳೇಬರಗಳು ಪತ್ತೆಯಾಗಿವೆ. ಮೇಲ್ನೋಟಕ್ಕೆ ವಿಷಪ್ರಾಶನ ಮಾಡಿರುವ, ಇಲ್ಲವೇ ಹೊಡೆದು ಕೊಂದಿರುವ ಶಂಕೆ ವ್ಯಕ್ತವಾಗಿದೆ. ಕೋತಿಗಳ ಮೃತದೇಹಗಳು ಸಿಕ್ಕ ಪ್ರದೇಶ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಬಫರ್ ವಲಯದ ವ್ಯಾಪ್ತಿಗೆ ಬರುತ್ತದೆ.

Kodi Mutt Swamiji: ʼಈ ನಾಯಕನಿಗೆ ಮುಖ್ಯಮಂತ್ರಿಯಾಗುವ ಯೋಗವಿದೆʼ ಎಂದ ಕೋಡಿಮಠ ಸ್ವಾಮೀಜಿ

ʼಈ ನಾಯಕನಿಗೆ ಮುಖ್ಯಮಂತ್ರಿಯಾಗುವ ಯೋಗವಿದೆʼ ಎಂದ ಕೋಡಿಮಠ ಸ್ವಾಮೀಜಿ

ವಿಜಯಪುರ‌ ಜಿಲ್ಲೆಯ ಆಲಮೇಲ ತಾಲೂಕಿನ ಕಡನಿ ಗ್ರಾಮದಲ್ಲಿ ನಡೆದ ಸಾಮೂಹಿಕ ವಿವಾಹ ಕಾರ್ಯಕ್ರಮದ ಸಂದರ್ಭದಲ್ಲಿ ಕೋಡಿಮಠ ಸಂಸ್ಥಾನದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ (Kodi Mutt Swamiji) ಮಹತ್ವದ ಹೇಳಿಕೆ ನೀಡಿದ್ದಾರೆ. ಸದ್ಯ ರಾಜ್ಯದಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಬೆನ್ನಲ್ಲೇ ಈ ಹೇಳಿಕೆ ವೈರಲ್‌ ಆಗಿದೆ.

Gold Price Today: ಚಿನ್ನದ ದರದಲ್ಲಿ ಭಾರೀ ಏರಿಕೆ; ಇಂದಿನ  ರೇಟ್‌ ಎಷ್ಟಿದೆ?

ಇಂದು ಚಿನ್ನದ ದರ ಎಷ್ಟಿದೆ? ಇಲ್ಲಿ ಚೆಕ್‌ ಮಾಡಿ

Gold Price Today on July 2nd June 2025: ಇಂದು 22 ಕ್ಯಾರಟ್‌ನ 8 ಗ್ರಾಂ ಚಿನ್ನ 72,520 ರೂ. ಬೆಲೆ ಬಾಳಿದರೆ, 10 ಗ್ರಾಂಗೆ ನೀವು 90,650 ರೂ. ಮತ್ತು 100 ಗ್ರಾಂಗೆ 9,06,500 ರೂ. ನೀಡಬೇಕಾಗುತ್ತದೆ. 24 ಕ್ಯಾರಟ್‌ನ 8 ಗ್ರಾಂ ಚಿನ್ನ 79,112 ರೂ. ಬೆಲೆ ಬಾಳಿದರೆ, 10 ಗ್ರಾಂಗೆ ನೀವು 98,890 ರೂ. ಮತ್ತು 100 ಗ್ರಾಂಗೆ 9,88,900 ರೂ. ಪಾವತಿಸಬೇಕಾಗುತ್ತದೆ.

Bengaluru Blast: ಬೆಂಗಳೂರು ಬಿಜೆಪಿ ಕಚೇರಿ ಬಳಿ ಬಾಂಬ್‌ ಸ್ಫೋಟಿಸಿದ ಶಂಕಿತ ಉಗ್ರ ಆಂಧ್ರಪ್ರದೇಶದಲ್ಲಿ ಸೆರೆ

ಬೆಂಗಳೂರು ಬಿಜೆಪಿ ಕಚೇರಿ ಬಳಿ ಬಾಂಬ್‌ ಸ್ಫೋಟಿಸಿದ ಶಂಕಿತ ಉಗ್ರ ಸೆರೆ

Bengaluru Blast: ಏಪ್ರಿಲ್ 17, 2013ರಂದು ಬಿಜೆಪಿ ಕಚೇರಿಯ ಹೊರಗೆ ಬಾಂಬ್ ಸ್ಫೋಟಗೊಂಡು ಕನಿಷ್ಠ 16 ಜನರು ಗಾಯಗೊಂಡಿದ್ದರು. ರಾಜ್ಯದಲ್ಲಿ ವಿಧಾನಸಭೆ ಚುನಾವಣೆಗೆ ಮೂರು ವಾರಗಳ ಮೊದಲು ಈ ಸ್ಫೋಟ ನಡೆದಿತ್ತು. ಶಂಕಿತ ಉಗ್ರ ನಾಗೂರ್ ಅಬುಬಕ್ಕರ್ ಸಿದ್ದಿಕ್‌ ಕಳೆದ 30 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಎಂದು ಆತನನ್ನು ಬಂಧಿಸಿದ ಅಧಿಕಾರಿ ಹೇಳಿದರು.

BR Patil: ಸಿಎಂ ಸಿದ್ದರಾಮಯ್ಯ ಮತ್ತು ನನ್ನ ಸಂಬಂಧ ಹಾಳು ಮಾಡಲು ಪ್ರಯತ್ನ: ಬಿಆರ್‌ ಪಾಟೀಲ್

ಸಿದ್ದರಾಮಯ್ಯ ಮತ್ತು ನನ್ನ ಸಂಬಂಧ ಹಾಳು ಮಾಡಲು ಪ್ರಯತ್ನ: ಬಿಆರ್‌ ಪಾಟೀಲ್

ʼನಾನು ಆಡಿದ ಮಾತುಗಳನ್ನು ತಿರುಚಿ ವರದಿ ಮಾಡಲಾಗುತ್ತಿದೆ. ಕೆಆರ್‌ ಪೇಟೆಯಲ್ಲಿ ಮಿತ್ರರ ಜೊತೆ ಮಾತನಾಡುವಾಗ ಅವರ ಬಗ್ಗೆ ಕೆಲವು ಮಾತುಗಳನ್ನು ಆಡಿದ್ದೆ. ಅವರು ಲಕ್ಕಿ ಲಾಟರಿಯಲ್ಲಿ ಗೆದ್ದು ಸಿಎಂ ಆದರು ಅಂತ ಹೇಳಿದ್ದೆʼ ಎಂದು ಶಾಸಕ ಬಿಆರ್‌ ಪಾಟೀಲ್‌ (BR Patil) ಹೇಳಿದ್ದಾರೆ.

Heart Attack: ನಿನ್ನೆ ಒಂದೇ ದಿನದಲ್ಲಿ ರಾಜ್ಯದಲ್ಲಿ ಹೃದಯಾಘಾತದಿಂದ 6 ಜನ ಸಾವು

ನಿನ್ನೆ ಒಂದೇ ದಿನದಲ್ಲಿ ರಾಜ್ಯದಲ್ಲಿ ಹೃದಯಾಘಾತದಿಂದ 6 ಜನ ಸಾವು

Heart Attack: ಹೃದಯಸ್ತಂಭನದಿಂದ ಏಕಾಏಕಿ ಕುಸಿದುಬಿದ್ದು ಸಾವನ್ನು ಕಾಣುತ್ತಿರುವ ಪ್ರಕರಣಗಳು ರಾಜ್ಯದಲ್ಲಿ ಹೆಚ್ಚು ಹೆಚ್ಚು ವರದಿಯಾಗುತ್ತಿವೆ. ಹಾಸನದಲ್ಲಿ ಅತಿ ಹೆಚ್ಚು ಪ್ರಕರಣಗಳು ವರದಿಯಾಗಿದ್ದು. ಚಿಕ್ಕಮಗಳೂರಿನಲ್ಲೂ ಇವು ಕಂಡುಬಂದಿವೆ. ರಾಜ್ಯ ಸರಕಾರ ಇದರ ಅಧ್ಯಯನಕ್ಕೆ ಸಮಿತಿಯನ್ನು ರಚಿಸಿದೆ.

Randeep Surjewala: ರಾಜ್ಯದಲ್ಲಿ ಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಚರ್ಚೆಯಿಲ್ಲ: ಸುರ್ಜೇವಾಲ

ಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಚರ್ಚೆಯಿಲ್ಲ: ಸುರ್ಜೇವಾಲ

Randeep Surjewala: ಶಾಸಕರೊಂದಿಗಿನ ಸಭೆಯಲ್ಲಿ ಪಕ್ಷದ ಸಂಘಟನೆ ಮತ್ತು ಆಡಳಿತ ಕುರಿತ ವೈಯಕ್ತಿಕ ಅಭಿಪ್ರಾಯವನ್ನಷ್ಟೇ ಪಡೆಯಲಾಗುತ್ತಿದೆ. ಶಾಸಕರ ರಿಪೋರ್ಟ್‌ ಕಾರ್ಡ್‌ ಪಡೆಯುತ್ತಿದ್ದೇನೆ. ಶಾಸಕರ ಆಕಾಂಕ್ಷೆಗಳು, ಬೇಡಿಕೆಗಳ ಬಗ್ಗೆ ಮಾಹಿತಿ ಪಡೆದುಕೊಳ್ಳುತ್ತಿದ್ದೇನೆ. ಅದನ್ನು ರಾಜ್ಯ ಸರ್ಕಾರದ ಗಮನಕ್ಕೂ ತರುತ್ತೇನೆ ಎಂದಿದ್ದಾರೆ ಸುರ್ಜೇವಾಲ.

Heart Attack: ಹೃದಯಾಘಾತದ ಸುದ್ದಿಗಳಿಂದಲೇ ಆತಂಕ, ಆಸ್ಪತ್ರೆಗಳಿಗೆ ಧಾವಿಸಿದ ಜನ

ಹೃದಯಾಘಾತದ ಸುದ್ದಿಗಳಿಂದಲೇ ಆತಂಕ, ಆಸ್ಪತ್ರೆಗಳಿಗೆ ಧಾವಿಸಿದ ಜನ

Heart Attack: ಬೆಂಗಳೂರಿನ ಜಯದೇವ ಅಸ್ಪತ್ರೆಯಲ್ಲಿ ಮಂಗಳವಾರ ಸಾಮಾನ್ಯ ದಿನಗಳಿಗಿಂತ ಶೇ.20ರಷ್ಟು ಹೆಚ್ಚಿನ ಜನತೆ ಹೃದಯ ತಪಾಸಣೆ ಮಾಡಿಸಿಕೊಂಡಿದ್ದಾರೆ. ಜನತೆಯಲ್ಲಿ ಹೃದಯಾಘಾತ, ಹೃದಯ ಸ್ತಂಭನ ಆತಂಕ ಆವರಿಸಿದ್ದು ಹೆಚ್ಚಾಗಿ ಯುವಕರು, ಮಧ್ಯವಯಸ್ಕರು ತಪಾಸಣೆಗೆ ಬಂದಿದ್ದರು.

Star Fashion 2025: ಇಂಗ್ಲೀಷ್‌ ಕಲರ್‌ನ ಕಾರ್ಸೆಟ್‌ ಸೂಟ್‌ನಲ್ಲಿ ನಟಿ ಕೃತಿ ಕರಬಂಧ ಪಾಶ್‌ ಲುಕ್‌!

ಇಂಗ್ಲೀಷ್‌ ಕಲರ್‌ನ ಕಾರ್ಸೆಟ್‌ ಸೂಟ್‌ನಲ್ಲಿ ನಟಿ ಕೃತಿ ಕರಬಂಧ ಪಾಶ್‌ ಲುಕ್‌!

Star Fashion 2025: ಬಹುಭಾಷಾ ತಾರೆ ಕೃತಿ ಕರಬಂಧ ಇತ್ತೀಚೆಗೆ ಟ್ರೆಂಡಿಯಾಗಿರುವ ಆಕಾಶ ನೀಲಿ ವರ್ಣದ ಪಾಸ್ಟೆಲ್‌ ಶೇಡ್‌ನ ಇಂಗ್ಲೀಷ್‌ ಕಲರ್‌ನ ಆಫ್‌ ಶೋಲ್ಡರ್‌ ಕಾರ್ಸೆಟ್‌ ಸೂಟ್‌ನಲ್ಲಿ ಪಾಶ್‌ ಲುಕ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಅಲ್ಲದೇ, ಕಾರ್ಸೆಟ್‌ ಪ್ರಿಯರಿಗೆ ಒಂದಿಷ್ಟು ಸ್ಟೈಲಿಂಗ್‌ ಟಿಪ್ಸ್ ಕೂಡ ನೀಡಿದ್ದಾರೆ.

Bike Taxi Service: ಬೈಕ್‌ ಟ್ಯಾಕ್ಸಿ ಸೇವೆಗೆ ಕೇಂದ್ರ ಅಸ್ತು, ರಾಜ್ಯದಲ್ಲಿ ಈಗೇನಾಗುತ್ತೆ?

ಬೈಕ್‌ ಟ್ಯಾಕ್ಸಿ ಸೇವೆಗೆ ಕೇಂದ್ರ ಅಸ್ತು, ರಾಜ್ಯದಲ್ಲಿ ಈಗೇನಾಗುತ್ತೆ?

Bike Taxi Service: ಕೇಂದ್ರ ಸಾರಿಗೆ ಸಚಿವಾಲಯ ಮೋಟಾರು ವಾಹನ ಕಾಯ್ದೆ 1988ರ ಅಡಿಯ ಮೋಟಾರ್ ವಾಹನಗಳ ಅಗ್ರಿಗೇಟರ್ ಮಾರ್ಗಸೂಚಿ 2025 ಬಿಡುಗಡೆ ಮಾಡಿದ್ದು, ರಾಜ್ಯ ಸರ್ಕಾರಗಳು ಖಾಸಗಿ ಬೈಕುಗಳನ್ನು ಪ್ರಯಾಣಿಕರ ಸಂಚಾರಕ್ಕೆ ಬಳಸಲು ಅಗ್ರಿಗೇಟರುಗಳಿಗೆ ಅನುಮತಿ ಕೊಡಬಹುದು ಎಂದು ಹೇಳಿದೆ.

Karnataka Weather: ಹವಾಮಾನ ವರದಿ; ಇಂದು ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಆರ್ಭಟಿಸಲಿದೆ ಮಳೆ!

ಹವಾಮಾನ ವರದಿ; ಇಂದು ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಆರ್ಭಟಿಸಲಿದೆ ಮಳೆ!

Karnataka Rains: ಬೆಂಗಳೂರು ಸೇರಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 30°C ಮತ್ತು 20°C ಇರುವ ಸಾಧ್ಯತೆ ಇದೆ.

ವಿಶೇಷ ಸಚಿವ ಸಂಪುಟ ಸಭೆಯ ಸ್ಥಳ ಪರಿಶೀಲನೆ ನಡೆಸಿದ ಸಚಿವ ಡಾ.ಎಂ.ಸಿ.ಸುಧಾಕರ್

ವಿಶೇಷ ಸಚಿವ ಸಂಪುಟ ಸಭೆಯ ಸ್ಥಳ ಪರಿಶೀಲನೆ ನಡೆಸಿದ ಸಚಿವ

ಗುಲಬರ್ಗಾ, ಚಾಮರಾಜನಗರ ಜಿಲ್ಲೆಗಳಲ್ಲಿ ಸಚಿವ ಸಂಪುಟ ಸಭೆ ನಡೆದ ನಂತರ ಚಿಕ್ಕಬಳ್ಳಾಪುರ ಜಿಲ್ಲೆಯ ಐತಿಹಾಸಿಕ ನಂದಿಗಿರಿಧಾಮದಲ್ಲಿಯೂ ಸಚಿವ ಸಂಪುಟ ಸಭೆ ನಡೆಸಬೇಕು ಎಂದು ಮುಖ್ಯ ಮಂತ್ರಿಗಳಿಗೆ ಕೋಲಾರ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಉಸ್ತುವಾರಿ ಸಚಿವರೆಲ್ಲರೂ ಮನವಿ ಮಾಡಿದ್ದೆವು.

Guarantee Scheme: ಜಿಲ್ಲೆಯಲ್ಲಿ ಪಂಚ ಗ್ಯಾರಂಟಿ ಯೋಜನೆಗಳು ಶೇ 100ರಷ್ಟು ಗುರಿ ಸಾಧಿಸಲು ಎಲ್ಲ ಇಲಾಖೆಗಳ ಸಹಕಾರ ಬೇಕು: ಯಲುವಳ್ಳಿ ಎನ್.ರಮೇಶ್

ಗ್ಯಾರಂಟಿ ಯೋಜನೆಗಳು ಶೇ ೧೦೦ ರಷ್ಟು ಗುರಿ ಸಾಧಿಸಲು ಸಹಕಾರ ಬೇಕು

ಗೃಹಲಕ್ಷ್ಮಿ, ಗೃಹಜ್ಯೋತಿ, ಶಕ್ತಿ, ಅನ್ನಭಾಗ್ಯ, ಯುವನಿಧಿ ಸೇರಿದಂತೆ ಪಂಚ ಗ್ಯಾರಂಟಿ ಯೋಜನೆ ಗಳು ಯಶಸ್ವಿಯಾಗಿ ಮುಂದುವರೆದಿವೆ. ಸರ್ಕಾರ ನೀಡಿದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದೆ. ಈ ಐದೂ ಯೋಜನೆಗಳು  ಮಹಿಳೆಯರು, ಬಡವರು ಮತ್ತು ಮಧ್ಯಮ ವರ್ಗದ ಕುಟುಂಬಗಳ ಆರ್ಥಿಕ ಸಬಲೀಕರಣದಲ್ಲಿ ಮಹತ್ತರ ಪಾತ್ರ ವಹಿಸುತ್ತಿವೆ.

Chikkaballapur News: ಜಂಗಮಕೋಟೆ ಹೋಬಳಿ ಕೈಗಾರಿಕಾ ಪ್ರಸ್ತಾಪ ಕೈಬಿಟ್ಟು ಅಧಿಸೂಚನೆ ರದ್ಧುಪಡಿಸಿ: ಕೋಡಿಹಳ್ಳಿ ಚಂದ್ರಶೇಖರ್ ಆಗ್ರಹ

ಜಂಗಮಕೋಟೆ ಹೋಬಳಿ ಕೈಗಾರಿಕಾ ಪ್ರಸ್ತಾಪ ಕೈ ಬಿಟ್ಟು ಅಧಿಸೂಚನೆ ರದ್ಧುಪಡಿಸಿ

ಜಂಗಮ ಕೋಟೆ ಹೋಬಳಿಯಲ್ಲಿಯ ಭೂಮಿ ನೂರಕ್ಕೆ ನೂರರಷ್ಟು ಕೃಷಿ ಯೋಗ್ಯ ಭೂಮಿ ಯಾಗಿದ್ದು ಇಲ್ಲಿನ ರೈತರು ಚಿನ್ನದಂತಹ ಬೆಳೆಯನ್ನು ಬೆಳೆಯುತ್ತಿದ್ದಾರೆ. ಇಂತಹ ಫಲವತ್ತಾದ ಭೂಮಿಯನ್ನು ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯು ಕೈಗಾರಿಕೆ ಸ್ಥಾಪನೆ ಹೆಸರಿನಲ್ಲಿ ವಶಪಡಿಸಿಕೊಳ್ಳಲು ಮುಂದಾಗಿರುವುದು ಸರ್ವಥಾ ಸರಿಯಲ್ಲ

ಇಎಸ್ಐಸಿ ಆಸ್ಪತ್ರೆಯಲ್ಲಿ ವೈದ್ಯರ ದಿನಾಚರಣೆ

ಇಎಸ್ಐಸಿ ಆಸ್ಪತ್ರೆಯಲ್ಲಿ ವೈದ್ಯರ ದಿನಾಚರಣೆ

ಡಾ ಬಿ ಸಿ ರಾಯ್ ರವರು ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದವರು ಹಾಗೂ ಮಹಾತ್ಮ ಗಾಂಧೀಜಿ ಯವರಿಗೆ ವೈದ್ಯಕೀಯ ಸಲಹೆಗಾರರಾಗಿದ್ದರು. 16 ವರ್ಷಗಳ ಕಾಲ ಬೆಂಗಾಳದ ಮುಖ್ಯ ಮಂತ್ರಿಯಾಗಿ ಸೇವೆ ಸಲ್ಲಿಸಿದ್ದ ಇವರ ಸೇವೆಯನ್ನು ಪರಿಗಣಿಸಿ ಕೇಂದ್ರ ಸರಕಾರವು ಭಾರತ ರತ್ನ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ.