ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಕರ್ನಾಟಕ

Ishant Sharma: ಅಂಜನಾದ್ರಿ ಬೆಟ್ಟಕ್ಕೆ ಕ್ರಿಕೆಟಿಗ ಇಶಾಂತ್‌ ಶರ್ಮಾ ಭೇಟಿ

ಅಂಜನಾದ್ರಿ ಬೆಟ್ಟಕ್ಕೆ ಕ್ರಿಕೆಟಿಗ ಇಶಾಂತ್‌ ಶರ್ಮಾ ಭೇಟಿ

ಗೆಳೆಯನ ಜೊತೆಗೆ ಬಂದಿದ್ದ ಇಶಾಂತ್ ಶರ್ಮಾ ಅವರು 575 ಮೆಟ್ಟಿಲುಗಳನ್ನು ಏರುವ ಮೂಲಕ ಹನುಮನ ದರ್ಶನ ಪಡೆದುಕೊಂಡು ವಿಶೇಷ ಪೂಜೆಯನ್ನು ಸಲ್ಲಿಸಿದರು. ನಂತರ ಬೆಟ್ಟದ ಮೇಲಿಂದ ಹಂಪಿಯ ಸೌಂದರ್ಯ ಹಾಗೂ ಬೆಟ್ಟಗಳ ಸಾಲುಗಳ ಪರಿಸರವನ್ನು ಕಣ್ತುಂಬಿಕೊಂಡು ಫೋಟೋ ಕ್ಲಿಕ್ಕಿಸಿಕೊಂಡರು. ಅಭಿಮಾನಿಗಳು ಸಹ ಇಶಾಂತ್ ಶರ್ಮಾ ಅವರ ಜೊತೆಗೆ ಸೆಲ್ಫಿ ಕ್ಲಿಕ್ಕಿಸಿಕೊಂಡರು.

Harassment: ಯುವತಿಯನ್ನು ತಬ್ಬಿ ಅಸಭ್ಯವಾಗಿ ವರ್ತಿಸಿದ ಡೆಲಿವರಿ ಬಾಯ್‌ ಬಂಧನ

ಯುವತಿಯನ್ನು ತಬ್ಬಿ ಅಸಭ್ಯವಾಗಿ ವರ್ತಿಸಿದ ಡೆಲಿವರಿ ಬಾಯ್‌ ಬಂಧನ

ಪಶ್ಚಿಮ ಬಂಗಾಳ (West Bengal) ಮೂಲದ ಆರೋಪಿ ಮುನಿರುದ್ದೀನ್ ಖಾನ್‌ ಎಂಬಾತ ಆರೋಪಿ. ಈತ ಡೆಲಿವರಿ ಬಾಯ್‌ ಕೆಲಸ ಮಾಡುತ್ತಿದ್ದ. ಬೆಂಗಳೂರಿನ ಬೀದಿಯಲ್ಲಿ ಯುವತಿಯ ಮುಂದೆ ಅಸಭ್ಯವಾಗಿ ವರ್ತಿಸಿ ಬಾ ಎಂದು ಕರೆದಿದ್ದಾನೆ. ಅಷ್ಟಕ್ಕೆ ಸುಮ್ಮನಾಗದೆ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವತಿಯನ್ನು ಹಿಂದಿನಿಂದ ತಬ್ಬಿಕೊಂಡಿದ್ದಾನೆ. ಇದಕ್ಕೆ ಪ್ರತಿರೋಧಿಸಿದ್ದಕ್ಕೆ ಯುವತಿಯ ಕೆನ್ನೆಗೆ ಹೊಡೆದಿದ್ದಾನೆ.

Hate Speech Bill: 19 ವಿಧೇಯಕಗಳಿಗೆ ರಾಜ್ಯಪಾಲರ ಸಹಿ, ದ್ವೇಷ ಭಾಷಣ ಬಿಲ್‌ಗೆ ಅಂಕಿತವಿಲ್ಲ

19 ವಿಧೇಯಕಗಳಿಗೆ ರಾಜ್ಯಪಾಲರ ಸಹಿ, ದ್ವೇಷ ಭಾಷಣ ಬಿಲ್‌ ಪೆಂಡಿಂಗ್

ಕಳೆದ ಬೆಳಗಾವಿ ಅಧಿವೇಶನದಲ್ಲಿ ರಾಜ್ಯ ಸರ್ಕಾರ ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ (ಪ್ರತಿಬಂಧಕ) ವಿಧೇಯಕ- 2025 ಅನ್ನು ಅಂಗೀಕರಿಸಿತ್ತು. ವಿಧೇಯಕಕ್ಕೆ ಬಿಜೆಪಿ ವಿರೋಧ ವ್ಯಕ್ತಪಡಿಸಿತ್ತು. ವಿಪಕ್ಷಗಳ ವಿರೋಧದ ನಡುವೆ ಸರ್ಕಾರ ದ್ವೇಷ ಭಾಷಣ ಬಿಲ್​ ಅಂಗೀಕರಿಸಿತ್ತು. ಇದೀಗ ರಾಜ್ಯಪಾಲರು ಈ ವಿಧೇಯಕವನ್ನು ತಮ್ಮ ಬಳಿಯೇ ಇಟ್ಟುಕೊಂಡಿದ್ದಾರೆ.

Asha Raghu no more: ಕನ್ನಡ ಸಾಹಿತಿ, ಪ್ರಕಾಶಕಿ ಆಶಾ ರಘು ಇನ್ನಿಲ್ಲ

Asha Raghu: ಕನ್ನಡ ಸಾಹಿತಿ, ಪ್ರಕಾಶಕಿ ಆಶಾ ರಘು ಇನ್ನಿಲ್ಲ

ಆಶಾ ರಘು ಅವರು ಕನ್ನಡ ಕಾದಂಬರಿಕಾರರಾಗಿದ್ದರಲ್ಲದೆ ರಂಗಭೂಮಿ, ಕಿರುತೆರೆ, ಬೆಳ್ಳಿತೆರೆಗಳಲ್ಲಿಯೂ ಕಲಾವಿದೆಯಾಗಿ, ಸಂಭಾಷಣೆಕಾರರಾಗಿ, ಸಹಾಯಕ ನಿರ್ದೇಶಕರಾಗಿ ಕೂಡ ಕಾರ್ಯ ನಿರ್ವಹಿಸಿದ್ದಾರೆ. ಇತ್ತೀಚೆಗೆ ಉಪಾಸನಾ ಎಂಬ ಪ್ರಕಾಶನವನ್ನೂ ಆರಂಭಿಸಿ ಯುವ ಲೇಖಕ/ಕಿಯರ ಪುಸ್ತಕಗಳನ್ನು ಪ್ರಕಟಿಸಿದ್ದರು. ಅವರ ಪತಿ ಖ್ಯಾತ ಆಹಾರ ತಜ್ಞ, ಲೇಖಕ ಕೆ.ಸಿ. ರಘು ಎರಡು ವರ್ಷ ಹಿಂದೆ ಮೃತಪಟ್ಟಿದ್ದರು.

Ballari Firing: ಬಳ್ಳಾರಿ ಗಲಭೆ ಪ್ರಕರಣ ತನಿಖೆ ಸಿಐಡಿಗೆ ವಹಿಸಿ ರಾಜ್ಯ ಸರ್ಕಾರ ಆದೇಶ

ಬಳ್ಳಾರಿ ಗಲಭೆ ಪ್ರಕರಣ ತನಿಖೆ ಸಿಐಡಿಗೆ ವಹಿಸಿ ರಾಜ್ಯ ಸರ್ಕಾರ ಆದೇಶ

ಬಳ್ಳಾರಿ ಪ್ರಕರಣ ಸಿಐಡಿಗೆ ವಹಿಸುವ ವಿಚಾರ ಸಂಬಂಧ ಇಂದೇ ಸಿಎಂ ಸಿದ್ದರಾಮಯ್ಯ ಭೇಟಿ ಮಾಡಿ ಚರ್ಚೆ ಮಾಡ್ತೇನೆ ಎಂದು ಗೃಹ ಸಚಿವ ಪರಮೇಶ್ವರ್​​ ಹೇಳಿದ್ದರು. ಆ ಬೆನ್ನಲ್ಲೇ ಆದೇಶ ಹೊರಬಿದ್ದಿದೆ. ಬ್ಯಾನರ್​​ ಗಲಾಟೆ ಪ್ರಕರಣದ ಕೇಸ್​​ ತನಿಖೆ ಸಿಐಡಿಗೆ ವಹಿಸುವ ವಿಚಾರ ಸಂಬಂಧ ಈ ಹಿಂದೆಯೂ ಗೃಹ ಸಚಿವ ಪರಮೇಶ್ವರ್​​ ಸುಳಿವು ನೀಡಿದ್ದರು.

Navabrindavana: ನವಬೃಂದಾವನ ನಿಜವಾದ ಅರ್ಥದಲ್ಲಿ ಧರ್ಮಕ್ಷೇತ್ರವಾಗಬೇಕೆಂದರೆ ಏನಾಗಬೇಕು ?

ನಿಜವಾದ ಅರ್ಥದಲ್ಲಿ ಧರ್ಮಕ್ಷೇತ್ರವಾಗಬೇಕೆಂದರೆ ಏನಾಗಬೇಕು ?

ಶ್ರೀ ರಾಮಜನ್ಮಭೂಮಿ ವಿವಾದವನೊಳ್ಳಗೊಂಡಂತೆ ಹಲವು ವಿಷಯಗಳು ಕಾನೂನಾತ್ಮಕವಾಗಿ ಅಥವಾ ರಾಜಿ /ಹೊಂದಾಣಿಕೆಗಳ ಮೂಲಕ ತಾರ್ಕಿಕ ಅಂತ್ಯ ಕಾಣುವ ಹಂತದಲ್ಲಿರುವುದು ಕಾಲದ ವಿಶೇಷ. ಇದೇ ಸಾಲಿನಲ್ಲಿ ನಿಲ್ಲುವ ಮತ್ತೊಂದು ವಿವಾದವೇ ಹಂಪಿ/ಆನೆಗೊಂದಿ ಪರಿಸರದಲ್ಲಿ ಮಧ್ವ ಪರಂಪರೆಗೆ ಸೇರಿದ ಮೂಲ ಯತಿಗಳು ಬೃಂದಾವನಸ್ಥರಾಗಿ ನೆಲೆಸಿರುವ ನವಬೃಂದಾವನ ಕ್ಷೇತ್ರದ ವಿವಾದ.

MLA KH. Puttaswamy Gowda: ಮಧ್ಯವರ್ತಿಗಳ ಹಾವಳಿಗೆ ಕಡಿವಾಣ ಹಾಕಲು ಪ್ರತಿ ತಿಂಗಳು ಇ ಖಾತಾ ವಿತರಣೆಗೆ ಕ್ರಮ : ಶಾಸಕ ಪುಟ್ಟಸ್ವಾಮಿಗೌಡ

ಮಧ್ಯವರ್ತಿಗಳ ಹಾವಳಿಗೆ ಕಡಿವಾಣ ಹಾಕಲು ಇ ಖಾತಾ ವಿತರಣೆಗೆ ಕ್ರಮ

ಆಸ್ತಿ ಕಣಜದಲ್ಲಿನ ಮಾಹಿತಿ ಆಧಾರದ ಮೇಲೆ ಕರಡು ಇ- ಖಾತಾವನ್ನು ಪ್ರಕಟಿಸಲಾಗಿದ್ದು, ಸಾರ್ವ ಜನಿಕರು ಈ ಮಾಹಿತಿಗಳನ್ನು ನೇರವಾಗಿ ವೀಕ್ಷಿಸಬಹುದು.ಸದರಿ ಮಾಹಿತಿಗಳ ಆಧಾರದ ಬಗ್ಗೆ ತಕರಾರಿದ್ದಲ್ಲಿ ಸಾರ್ವಜನಿಕರು ಇ-ಆಸ್ತಿ ತಂತ್ರಾಂಶದಲ್ಲಿ ಹೆಚ್ಚಿನ ಮಾಹಿತಿಯನ್ನು ನೇರವಾಗಿ ನಮೂದಿಸಬಹುದು,ನಮೂದಿಸಿದ ಮಾಹಿತಿ ನಿಖರತೆಯನ್ನು ಪರಿಶೀಲಿಸಿ ಅನುಮೋದಿಸಲಾಗು ವುದು.

Indira Kit: ನ್ಯಾಯಬೆಲೆ ಅಂಗಡಿಗಳ ಮೂಲಕ ಇಂದಿರಾ ಕಿಟ್ ಯುಗಾದಿಗೆ ವಿತರಣೆ ಆಗಲಿದೆ : ಯಲುವಳ್ಳಿ ಎನ್.ರಮೇಶ್ ಘೋಷಣೆ

ನ್ಯಾಯಬೆಲೆ ಅಂಗಡಿಗಳ ಮೂಲಕ ಇಂದಿರಾ ಕಿಟ್ ಯುಗಾದಿಗೆ ವಿತರಣೆ ಆಗಲಿದೆ

ಒಬ್ಬ ವ್ಯಕ್ತಿಗೆ 10 ಕೆ.ಜಿ. ಅಕ್ಕಿಯನ್ನು ಕೊಟ್ಟರೆ ಒಂದು ಕುಟುಂಬಕ್ಕೆ 30 ರಿಂದ 40 ಕೆ.ಜಿ. ಅಕ್ಕಿ ಮಾಸಿಕ ಸಿಗುವುದರಿಂದ ಅಷ್ಟು ಪ್ರಮಾಣದ ಅಕ್ಕಿಯನ್ನು ಜನರು ಸದುಪಯೋಗ ಪಡಿಸಿ ಕೊಳ್ಳುತ್ತಿಲ್ಲ. ಇದರಿಂದಾಗಿ ದುರ್ಬಳಕೆಗೆ ಅವಕಾಶವಾಗುತ್ತದೆ ಇದನ್ನು ತಪ್ಪಿಸಲು ಇಂದಿರಾಕಿಟ್ ವಿತರಣೆಗೆ ಅವಕಾಶ ಕಲ್ಪಿಸಲಾಗುತ್ತಿದೆ

ಕೆಡಿಪಿ ಸಭೆಗೆ ಗೈರಾದ ಅಧಿಕಾರಿಗಳಿಗೆ ನೋಟೀಸ್ ನೀಡುವಂತೆ ಅಧ್ಯಕ್ಷೆ ಅನುರಾಧ ರಮೇಶ್‌ಬಾಬು ಖಡಕ್ ಆದೇಶ.

ಕೆಡಿಪಿ ಸಭೆಗೆ ಗೈರಾದ ಅಧಿಕಾರಿಗಳಿಗೆ ನೋಟಿಸು

ಈ ಬಾರಿ ಎಸ್‌ಎಸ್‌ಎಲ್‌ಸಿ ಫಲಿತಾಂಶ ಉತ್ತಮವಾಗಿ ಬರಬೇಕು ಎಂಬ ನಿಟ್ಟಿನಲ್ಲಿ ನಮ್ಮ ಶಿಕ್ಷಣ ಇಲಾಖೆಯು ರಾಜ್ಯ ಮಟ್ಟದ ೩ ಪ್ರಿಪರೇಟರಿ ಪರೀಕ್ಷೆಗಳನ್ನು ನಡೆಸಬೇಕು ಎಂದು ಇಲಾಖೆ ಕಡ್ಡಾಯ ಮಾಡಿರುವುದರಿಂದ ಈಗಾಗಲೇ ಮೊದಲ ಪರೀಕ್ಷೆಯು ಮುಗಿಯುವ ಹಂತದಲ್ಲಿದೆ 2 ಹಾಗೂ 3ನೇ ಪರೀಕ್ಷೆಗಳನ್ನು ಫೆಬ್ರವರಿಯೊಳಗೆ ಮುಗಿಸಬೇಕು ಎಂಬ ಆದೇಶದ ಹಿನ್ನಲೆಯಲ್ಲಿ ನಾವು ಕೆಲಸ ಮಾಡುತ್ತಿದ್ದೇವೆ.

ಡ್ರೀಮ್ X40 ಅಲ್ಟ್ರಾ ರೋಬೋಟಿಕ್ ವ್ಯಾಕ್ಯೂಮ್

ಡ್ರೀಮ್ X40 ಅಲ್ಟ್ರಾ ರೋಬೋಟಿಕ್ ವ್ಯಾಕ್ಯೂಮ್

ತಲುಪಲು ಕಷ್ಟವಾದ ಸ್ಥಳಗಳಿಗಾಗಿ, ಈ ವ್ಯಾಕ್ಯೂಮ್‌ನಲ್ಲಿ ಎತ್ತಬಹುದಾದ ಮತ್ತು ವಿಸ್ತರಿಸ ಬಹುದಾದ ಬ್ರಷ್ ಇದ್ದು, ಗೋಡೆಗಳ ಅಂಚುಗಳು, ಮೂಲೆಗಳು ಮತ್ತು ಫರ್ನಿಚರ್ ಕಾಲುಗಳನ್ನು ನಿಖರವಾಗಿ ಸ್ವಚ್ಛಗೊಳಿಸುತ್ತದೆ. ಕಾರ್ಪೆಟ್‌ಗಳನ್ನು ರಕ್ಷಿಸಲು, ರೋಬೋಟ್ ಸ್ವಯಂಚಾಲಿತವಾಗಿ ತನ್ನ ಮಾಪ್ ಅನ್ನು ತೆಗೆದುಹಾಕುತ್ತದೆ ಅಥವಾ 10.5 ಮಿಮೀ ವರೆಗೆ ಎತ್ತುತ್ತದೆ, ಇದರಿಂದ ರಗ್‌ಗಳು ಒದ್ದೆಯಾಗುವು ದನ್ನು ತಡೆಯಲಾಗುತ್ತದೆ ಮತ್ತು ವೆಟ್-ಡ್ರೈ ಮಿಶ್ರಣ ತಪ್ಪುತ್ತದೆ

ಮಹಿಳೆಯರ ಆರ್ಥಿಕ ಸ್ಥಿತಿ ಸುಧಾರಣೆಗೆ ಗೃಹಲಕ್ಷ್ಮಿ ಡಿಜಿಟಲ್ ಮಾರ್ಕೆಟಿಂಗ್ ಅನುಕೂಲ: ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷ್ಮಿ‌ ಡಿಜಿಟಲ್ ಮಾರ್ಕೆಟಿಂಗ್‌ಗೆ ಸಚಿವೆ ಹೆಬ್ಬಾಳ್ಕರ್ ಚಾಲನೆ

Laxmi Hebbalkar: ಮಹಿಳಾ ಸಬಲೀಕರಣಕ್ಕಾಗಿ ಕರ್ಮಣಿ ಉತ್ಸವ, ಗೃಹಲಕ್ಷ್ಮಿ ಡಿಜಿಟಲ್ ಅನಾವರಣ ಮಾಡಲಾಗಿದೆ. ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ನಮ್ಮ ಸರ್ಕಾರ ಎಲ್ಲಾ ರೀತಿಯ ಕೆಲಸ ಮಾಡುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.

ಸತ್ಯಕ್ಕೆ ಮತ್ತೊಂದು ಜಯ; ಧರ್ಮಸ್ಥಳ ಸಂಸ್ಥೆ ವಿರುದ್ಧದ ದೂರು ವಜಾ: ಹೈಕೋರ್ಟ್‌ನಿಂದ ಮಹತ್ವದ ತೀರ್ಪು

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ ಹೈಕೋರ್ಟ್ ಕ್ಲೀನ್ ಚಿಟ್

SKDRDP: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿರುದ್ಧದ ದೂರು ಅರ್ಜಿ ತಿರಸ್ಕೃತವಾಗಿದ್ದು, ಹೈಕೋರ್ಟ್‌ ಮಹತ್ವದ ಆದೇಶ ಹೊರಡಿಸಿದೆ. 2016ರಲ್ಲಿ ರಂಜನ್ ರಾವ್ ಸಲ್ಲಿಸಿದ್ದ ಹಣಕಾಸು ವ್ಯವಹಾರ ನಿಯಮ ಉಲ್ಲಂಘನೆ ಹಾಗೂ ಅಕ್ರಮ ಬಡ್ಡಿ ಆಧಾರಿತ ಸಾಲ ಆರೋಪದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದ್ದು, SKDRDP ಸಂಸ್ಥೆ ವಿಶ್ವಾಸಾರ್ಹವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.

ಮಲಯಾಳಂ ಭಾಷಾ ಮಸೂದೆಗೆ ನಮ್ಮ ವಿರೋಧವಿದೆ: ಕೇರಳ ಸಿಎಂ ಪಿಣರಾಯಿ ವಿಜಯನ್‌ಗೆ ಸಿದ್ದರಾಮಯ್ಯ ಪತ್ರ

ಮಲಯಾಳಂ ಭಾಷಾ ಮಸೂದೆ ವಿರೋಧಿಸಿ ಕೇರಳ ಸಿಎಂಗೆ ಸಿದ್ದರಾಮಯ್ಯ ಪತ್ರ

Malayalam Language Bill: ಕೇರಳ ಸರ್ಕಾರವು ಮಳಯಾಳಂ ಭಾಷಾ ಮಸೂದೆಯನ್ನು ಮರು ಪರಿಶೀಲಿಸಬೇಕು. ಒಂದು ವೇಳೆ ಈ ವಿಧೇಯಕ ಅಂಗೀಕಾರಗೊಂಡರೆ, ಕರ್ನಾಟಕವು ಲಭ್ಯವಿರುವ ಪ್ರತಿ ಸಾಂವಿಧಾನಿಕ ಹಕ್ಕನ್ನು ಬಳಸಿಕೊಂಡು ಭಾಷಾ ಅಲ್ಪಸಂಖ್ಯಾತರ ರಕ್ಷಣೆಗಾಗಿ ಮತ್ತು ನಮ್ಮ ಒಕ್ಕೂಟ ವ್ಯವಸ್ಥೆಯ ಬಹುತ್ವ ಚಿಂತನೆಯನ್ನು ಕಾಪಾಡಲು ವಿರೋಧಿಸಲಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

Tumkur News: ಸರ್ಕಾರಿ ಹೊರಗುತ್ತಿಗೆ ನೌಕರರಿಗೆ ಕನಿಷ್ಠ ವೇತನ ನೀಡಿ: ರಾಜ್ಯಾಧ್ಯಕ್ಷ ಸುಧಾಕರ್ ಆಗ್ರಹ

ಸರ್ಕಾರಿ ಹೊರಗುತ್ತಿಗೆ ನೌಕರರಿಗೆ ಕನಿಷ್ಠ ವೇತನ ನೀಡಲು ಆಗ್ರಹ

Tumkur News: ರಾಜ್ಯದಾದ್ಯಂತ ಸರ್ಕಾರಿ ಇಲಾಖೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹೊರ ಗುತ್ತಿಗೆ ನೌಕರರಿಗೆ ಅಂಬೇಡ್ಕರ್ ಅಭಿವೃದ್ದಿ ನಿಗಮದಲ್ಲಿ ಹೆಚ್ಚಳ ಮಾಡಿರುವಂತೆ ಎಲ್ಲಾ ಇಲಾಖೆಗಳಲ್ಲೂ ಕನಿಷ್ಠ ವೇತನ ನೀಡಬೇಕು ಎಂದು ಸರ್ಕಾರಿ ಹೊರಗುತ್ತಿಗೆ ನೌಕರರ ಸಂಘದ ರಾಜ್ಯಾಧ್ಯಕ್ಷ ಸುಧಾಕರ್ ಒತ್ತಾಯಿಸಿದ್ದಾರೆ.

ಹುಬ್ಬಳ್ಳಿ ಮಹಿಳೆ ವಿವಸ್ತ್ರ ಪ್ರಕರಣದ ನ್ಯಾಯಾಂಗ ತನಿಖೆಗೆ ಆರ್‌. ಅಶೋಕ್‌ ಒತ್ತಾಯ

ಹುಬ್ಬಳ್ಳಿ ಮಹಿಳೆ ವಿವಸ್ತ್ರ ಪ್ರಕರಣದ ನ್ಯಾಯಾಂಗ ತನಿಖೆಯಾಗಲಿ: ಅಶೋಕ್‌

R Ashok: ಹುಬ್ಬಳ್ಳಿಯಲ್ಲಿ ಮಹಿಳೆ ವಿವಸ್ತ್ರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳಾ ಪರ ವಾದ ಮಾಡಬೇಕಾದ ರಾಜ್ಯ ಮಹಿಳಾ ಆಯೋಗದವರು ಏನೂ ಆಗಿಲ್ಲವೆಂದು ಬೆಂಗಳೂರಿನಲ್ಲೇ ಹೇಳಿಕೆ ಕೊಟ್ಟಿದ್ದಾರೆ. ರಾಷ್ಟ್ರೀಯ ಮಹಿಳಾ ಆಯೋಗ ನೋಟಿಸ್ ಕೊಟ್ಟಿದೆ. ತನಿಖೆ ಮಾಡದೇ ನೀವು ಕ್ಲೀನ್ ಚಿಟ್ ಕೊಟ್ಟಿದ್ದು ಹೇಗೆ ಎಂದು ಸರ್ಕಾರ, ಪೊಲೀಸ್ ಇಲಾಖೆಯು ಉತ್ತರಿಸಲಿ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಆಗ್ರಹಿಸಿದ್ದಾರೆ.

Bengaluru Power Cut: ಬೆಂಗಳೂರಿನ ಈ ಪ್ರದೇಶಗಳಲ್ಲಿ ನಾಳೆ, ನಾಡಿದ್ದು ಕರೆಂಟ್‌ ಇರಲ್ಲ

ಬೆಂಗಳೂರಿನ ಈ ಪ್ರದೇಶಗಳಲ್ಲಿ ನಾಳೆ, ನಾಡಿದ್ದು ಕರೆಂಟ್‌ ಇರಲ್ಲ

BESCOM News: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಾಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ 66/11 ಕೆ.ವಿ ಸೋಲದೇವನಹಳ್ಳಿ (66 ಸ್ಥಾವರ (ಪುಟ್ಟೇನಹಳ್ಳಿ) ಪೀಣ್ಯ 1 2 ಲೈನ್) ಉಪಕೇಂದ್ರ ವ್ಯಾಪ್ತಿಯ ಹಲವೆಡೆ ಜ.10ರಂದು ಶನಿವಾರ ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಮತ್ತು ಜ.11 ರಂದು ಭಾನುವಾರ ಬೆಳಗ್ಗೆ 8 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ.

ವಿಜಯಪುರದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ: ಸಿಎಂ ಭರವಸೆ

ವಿಜಯಪುರದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ: ಸಿಎಂ ಭರವಸೆ

CM Siddaramaiah: ದೇವರಾಜ ಅರಸು ಅವರ 7 ವರ್ಷ 239 ದಿನಗಳ ಸುದೀರ್ಘ ಅವಧಿಗೆ ಮುಖ್ಯಮಂತ್ರಿ ಆಗಿದ್ದ ದಾಖಲೆಯನ್ನು ಮುರಿದು ಕರ್ನಾಟಕದ ದೀರ್ಘಾವಧಿ ಮುಖ್ಯಮಂತ್ರಿ ಎಂಬ ದಾಖಲೆ ಮಾಡಲು ಸಾಧ್ಯವಾಗಿದ್ದು ಜನರ ಆಶೀರ್ವಾದದಿಂದ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

SC Internal Reservation Bill: ಎಸ್‌ಸಿ ಒಳಮೀಸಲಾತಿ ಮಸೂದೆಗೆ ಅಂಕಿತ ಹಾಕದೆ ವಾಪಸ್ ಕಳುಹಿಸಿದ ಗವರ್ನರ್‌

ಎಸ್‌ಸಿ ಒಳಮೀಸಲಾತಿ ಮಸೂದೆಯನ್ನು ವಾಪಸ್ ಕಳುಹಿಸಿದ ಗವರ್ನರ್‌

ಬೆಳಗಾವಿಯಲ್ಲಿ ನಡೆದ ಚಳಿಗಾಲದ ಅಧಿವೇಶನದಲ್ಲಿ ಉಭಯ ಸದನಗಳಲ್ಲಿ ರಾಜ್ಯ ಸರ್ಕಾರವು ಎಸ್‌ಸಿ ಒಳಮೀಸಲಾತಿ ಮಸೂದೆ (ಕರ್ನಾಟಕ ಅನುಸೂಚಿತ ಜಾತಿಗಳ (ಉಪವರ್ಗೀಕರಣ) ವಿಧೇಯಕ 2025) ಮಂಡಿಸಿ ಅಂಗೀಕಾರ ಪಡೆದಿತ್ತು. ಆದರೆ, ಇದೀಗ ಮಸೂದೆಗೆ ರಾಜ್ಯಪಾಲರು ಅಂಕಿತ ಹಾಕದೇ ವಾಪಸ್‌ ಕಳುಹಿಸಿದ್ದಾರೆ.

ಕೃಷ್ಣಾ ಮೇಲ್ದಂಡೆ ಯೋಜನೆ; ಭೂಮಿ ಮುಳುಗಡೆ ಸಂತ್ರಸ್ತ ರೈತರಿಗೆ ಎಕರೆಗೆ 35-40 ಲಕ್ಷ ಪರಿಹಾರ ಎಂದ ಡಿಸಿಎಂ

ಯುಕೆಪಿ ಭೂಮಿ ಮುಳುಗಡೆ ಸಂತ್ರಸ್ತ ರೈತರಿಗೆ ಎಕರೆಗೆ 35-40 ಲಕ್ಷ ಪರಿಹಾರ

ವಿಜಯಪುರ ಭಾಗದ ನಮ್ಮ ಶಾಸಕರ ಒತ್ತಡದ ಮೇರೆಗೆ ನಾನು ಹಾಗೂ ಮುಖ್ಯಮಂತ್ರಿಗಳು ಸಚಿವ ಸಂಪುಟದಲ್ಲಿ ಚರ್ಚೆ ಮಾಡಿ, ಯುಕೆಪಿ ಯೋಜನೆ ಮುಳುಗಡೆ ಸಂತ್ರಸ್ತರಿಗೆ ಪರಿಹಾರ ಘೋಷಿಸಿದ್ದೇವೆ. ಯುಕೆಪಿ ಯೋಜನೆಯಿಂದ 1,33,867 ಎಕರೆ ಮುಳುಗಡೆಯಾಗಲಿದ್ದು, ನಮ್ಮ ಸರ್ಕಾರ ಪ್ರತಿ ಎಕರೆಗೆ 30-40 ಲಕ್ಷ ಪರಿಹಾರ ನೀಡಲು ತೀರ್ಮಾನಿಸಲಾಗಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ.

Bomb Threat: ಬೆಂಗಳೂರಿನ ಕೇಂದ್ರೀಯ ವಿದ್ಯಾಲಯಕ್ಕೆ ಬಾಂಬ್‌ ಬೆದರಿಕೆ; ಸ್ಥಳದಲ್ಲಿ ಆತಂಕ

ಬೆಂಗಳೂರಿನ ಕೇಂದ್ರೀಯ ವಿದ್ಯಾಲಯಕ್ಕೆ ಬಾಂಬ್‌ ಬೆದರಿಕೆ; ಪೊಲೀಸರಿಂದ ತಪಾಸಣೆ

ಬೆಂಗಳೂರಿನ ಹೆಬ್ಬಾಳದ ಕೇಂದ್ರಿಯ ವಿದ್ಯಾಲಯಕ್ಕೆ ಬಾಂಬ್ ಬೆದರಿಕೆ ಇ-ಮೇಲ್‌ ಬಂದಿದೆ. ಈ ಬಗ್ಗೆ​ಪ್ರಾಂಶುಪಾಲರು ಬೆಂಗಳೂರಿನ ಸದಾಶಿವನಗರ ಠಾಣೆಗೆ ದೂರು ನೀಡಿದ್ದಾರೆ. ಸ್ಥಳಕ್ಕೆ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಇತ್ತೀಚೆಗೆ ರಾಜ್ಯದ ಹಲವು ಸರ್ಕಾರಿ ಕಚೇರಿಗಳು, ಕೋರ್ಟ್‌ಗಳಿಗೂ ಬಾಂಬ್‌ ಬೆದರಿಕೆ ಸಂದೇಶಗಳು ಬಂದಿದ್ದವು.

Sainik School Recruitment: ವಿಜಯಪುರ ಸೈನಿಕ ಶಾಲೆಯಲ್ಲಿದೆ ಉದ್ಯೋಗಾವಕಾಶ; ಅರ್ಜಿ ಸಲ್ಲಿಕೆಯ ಮಾಹಿತಿ ಇಲ್ಲಿದೆ

ಸೈನಿಕ ವಸತಿ ಸ್ಕೂಲ್‌ನಲ್ಲಿದೆ ಉದ್ಯೋಗಾವಕಾಶ

ನೀವು ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೊಮಾ ಹಾಗೂ 10ನೇ ತರಗತಿ ಉತ್ತೀರ್ಣರಾಗಿದ್ದು, ಆಕರ್ಷಕ ಸಂಬಳದ ಉದ್ಯೋಗಾವಕಾಶಕ್ಕಾಗಿ ಹುಡುಕಾಡುತ್ತಿದ್ದರೆ ಇಲ್ಲಿದೆ ಸುವರ್ಣವಾಕಾಶ. ವಿಜಯಪುರ ಸೈನಿಕ ವಸತಿ ಶಾಲೆಯಲ್ಲಿನ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಸಂದರ್ಶನ, ಸ್ಕ್ರೀನಿಂಗ್ ಟೆಸ್ಟ್‌ ಮೂಲಕ ಈ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಜನವರಿ 16.

Ballari Clash Case: ಬಳ್ಳಾರಿ ಗಲಭೆ ಪ್ರಕರಣದ 25 ಆರೋಪಿಗಳಿಗೆ ಜಾಮೀನು ನೀಡಿದ ಕೋರ್ಟ್‌

ಬಳ್ಳಾರಿ ಗಲಭೆ ಪ್ರಕರಣದ 25 ಆರೋಪಿಗಳಿಗೆ ಜಾಮೀನು ನೀಡಿದ ಕೋರ್ಟ್‌

ಶಾಸಕ ಜನಾರ್ದನ ರೆಡ್ಡಿ ಮನೆ ಮುಂದೆ ವಾಲ್ಮೀಕಿ ಪುತ್ಥಳಿ ಉದ್ಘಾಟನಾ ಬ್ಯಾನರ್ ಕಟ್ಟುವ ವಿಚಾರವಾಗಿ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ ಆಗಿತ್ತು. ಈ ವೇಳೆ ಖಾಸಗಿ ಗನ್ ಮ್ಯಾನ್ ಹಾರಿಸಿದ ಗುಂಡು ತಗುಲಿ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್‌ ಮೃತಪಟ್ಟಿದ್ದ ಎಂಬ ಆರೋಪ ಕೇಳಿಬಂದಿದೆ. ಈ ಪ್ರಕರಣದಲ್ಲಿ ಬಂಧನವಾಗಿದ್ದ 25 ಆರೋಪಿಗಳಿಗೆ ಜಾಮೀನು ಮಂಜೂರು ಆಗಿದೆ.

ನಮ್ಮಿಬ್ಬರ ಆಡಳಿತಾನುಭವದ ಬಗ್ಗೆ ನೀವು ಹೇಳೋದಲ್ಲ, ಜನರನ್ನೇ ಕೇಳಿ: ಡಿಕೆಶಿಗೆ ಎಚ್‌.ಡಿ.ಕುಮಾರಸ್ವಾಮಿ ತಿರುಗೇಟು

ಆಡಳಿತಾನುಭವದ ಬಗ್ಗೆ ಜನರನ್ನೇ ಕೇಳಿ: ಡಿಕೆಶಿಗೆ ಎಚ್‌ಡಿಕೆ ತಿರುಗೇಟು

ಕೊಳ್ಳೆ, ಸುಲಿಗೆ, ಬೇಲಿ, ಚದರಡಿ, ಕಮಿಷನ್, ಫಿಕ್ಸಿಂಗ್, ಒದ್ದು ಕಿತ್ತುಕೊಳ್ಳುವುದು ನನ್ನ ಎಕ್ಸ್ ಪೀರಿಯನ್ಸ್ ಅಲ್ಲಾ ಡಿಕೆಶಿರವರೇ.., ಏನೋ.. ಜನರ ಆಶೀರ್ವಾದ ಮತ್ತು ದೇವರ ದಯೆಯಿಂದ ಸಿಕ್ಕಿದ ಅವಕಾಶದಲ್ಲಿ ಜನರಿಗೆ ಕೈಲಾದ ಸಹಾಯ ಮಾಡುವ ಹುಲು ರಾಜಕಾರಣಿ ನಾನಷ್ಟೇ ಎಂದು ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಮನರೇಗಾ ಯೋಜನೆ ಬಗ್ಗೆ ಪ್ರಲ್ಹಾದ್‌ ಜೋಶಿ ಸಾರ್ವಜನಿಕ ಚರ್ಚೆಗೆ ಬರಲಿ: ಡಿ.ಕೆ. ಶಿವಕುಮಾರ್ ಸವಾಲು

ಮನರೇಗಾ ಬಗ್ಗೆ ಪ್ರಲ್ಹಾದ್‌ ಜೋಶಿ ಸಾರ್ವಜನಿಕ ಚರ್ಚೆಗೆ ಬರಲಿ: ಡಿಕೆಶಿ

DK Shivakumar: ಯುಪಿಎ ಸರ್ಕಾರದ ಅವಧಿಯ ಮನರೇಗಾ ಯೋಜನೆಯಲ್ಲಿ 11 ಲಕ್ಷ ಕೋಟಿ ಅವ್ಯವಹಾರ ನಡೆದಿದೆ ಎಂಬ ಪ್ರಲ್ಹಾದ್‌ ಜೋಶಿ ಅವರ ಹೇಳಿಕೆಗೆ ಡಿಸಿಎಂ ಡಿ.ಕೆ. ಶಿವಕುಮಾರ್‌ ಪ್ರತಿಕ್ರಿಯಿಸಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷರು, ವಿರೋಧ ಪಕ್ಷದ ನಾಯಕರು ಅಥವಾ ಕೇಂದ್ರ ಸಚಿವರು, ಈ ಮೂವರಲ್ಲಿ ಯಾರಾದರೂ ಒಬ್ಬರು ಮಾಧ್ಯಮ ವೇದಿಕೆ ಮೇಲೆ ಚರ್ಚೆಗೆ ಬರಲಿ. ನಾನು ಈ ವಿಚಾರವಾಗಿ ಚರ್ಚೆ ಮಾಡಲು ಸಿದ್ಧನಿದ್ದೇನೆ. ಅದು ಎಷ್ಟೇ ಕೋಟಿ ಅವ್ಯವಹಾರವಾದರೂ ತಾಕತ್ತಿದ್ದರೆ ತನಿಖೆ ಮಾಡಿಸಲಿ ಎಂದು ಸವಾಲು ಹಾಕಿದ್ದಾರೆ.

Loading...