ಬಿಗ್​ಬಾಸ್ ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಕರ್ನಾಟಕ

Minister Dr. M.C. Sudhakar: ಜಾತಿ ಪದ್ದತಿ ಮತ್ತು ಅಸಮಾನತೆಯ ವಿರುದ್ಧ ಸಮರ ಸಾರಿದ್ಧ ಕ್ರಾಂತಿಕಾರಿ ಯುಗಪುರುಷ ಕನಕದಾಸ : ಡಾ.ಎಂ.ಸಿ.ಸುಧಾಕರ್

ಅಸಮಾನತೆಯ ವಿರುದ್ಧ ಸಮರ ಸಾರಿದ್ಧ ಕ್ರಾಂತಿಕಾರಿ ಯುಗಪುರುಷ

ಜಾತಿ ಅಸಮಾನತೆ ಮತ್ತು ಕರ್ಮಠ ಆಚರಣೆಗಳ ವಿರುದ್ಧ ಬಹುದೊಡ್ಡ ಕ್ರಾಂತಿ ಮಾಡಿದ ಅವರು ಕೀರ್ತನ ಸಾಹಿತ್ಯದ ಅಶ್ವಿನಿ ದೇವತೆಗಳಲ್ಲಿ ಒಬ್ಬರಾಗಿದ್ದಾರೆ. ಇಂತಹ ಮಹಾನ್ ಚೇತನ ತಿಪ್ಪೇನಹಳ್ಳಿ ಬಳಿಯ ರಂಗಸ್ಥಳದ ರಂಗನಾಥ ಸ್ವಾಮಿಯ ದರ್ಶನ ಮಾಡಿದ್ದಲ್ಲದೆ ರಂಗನಾಥಸ್ವಾಮಿಯ ಬಗ್ಗೆ ಹತ್ತಾರು ಕೀರ್ತನೆಗಳನ್ನು ರಚಿಸಿದ್ದಾರೆ.

Pradeep Easwar: ತಿಮಿಂಗಿಲಗಳ ನಡುವೆ ಈಜುತ್ತಿದ್ದೇನೆ ಸಾಧ್ಯವಾದಲ್ಲಿ ಕಾಪಾಡಿಕೊಳ್ಳಿ: ಪ್ರದೀಪ್ ಈಶ್ವರ್

ತಿಮಿಂಗಿಲಗಳ ನಡುವೆ ಈಜುತ್ತಿದ್ದೇನೆ ಸಾಧ್ಯವಾದಲ್ಲಿ ಕಾಪಾಡಿಕೊಳ್ಳಿ

ನಾನು ಎಂ.ಎಲ್.ಎ ಆಗುವವರೆಗೆ ಈ ಕ್ಷೇತ್ರದ ಮತದಾರರು ಬೆಂಗಳೂರಿಗೆ ಹೋಗಿ ಅವರು ಬಂದು ದರ್ಶನ ನೀಡುವವರೆಗೆ ಕಾಯಬೇಕಿತ್ತು. ಆದರೆ ನಾನು ಅವರು ಎದ್ದು ಸೂರ್ಯನ ಮುಖ ನೋಡುವಷ್ಟರಲ್ಲಿಯೇ ಅವರ ಮನೆಬಾಗಿಲಿಗೆ ಬಂದು ಅವರ ಕಷ್ಟಗಳನ್ನು ಕೇಳುತ್ತಿದ್ದೇನೆ. ರಾಜಕಾರಣದಲ್ಲಿ ನಾನು ತಿಮಿಂಗಿಲಗಳ ನಡುವೆ ಈಜುತ್ತಿದ್ದೇನೆ.

MLA Subbareddy: ಕನಕದಾಸರ ವಚನಗಳು ಸರ್ವಕಾಲಿಕವಾದುದು, ಜೀವನದಲ್ಲಿ ಪ್ರತಿಯೊಬ್ಬರೂ ಅಳವಡಿಸಿಕೊಳ್ಳಿ: ಶಾಸಕ ಸುಬ್ಬಾರೆಡ್ಡಿ

ಕನಕದಾಸರ ವಚನಗಳು ಸರ್ವಕಾಲಿಕ

ನಾಡಿನ 250ಕ್ಕೂ ಹೆಚ್ಚಿನ ದಾಸರ ಪೈಕಿ ಶ್ರೇಷ್ಠರಾದವರು ಕನಕದಾಸರು. ಸರಳ ಭಾಷೆಯಲ್ಲಿ ಜನ ಸಾಮಾನ್ಯರಿಗೆ ಅರ್ಥವಾಗುವ ರೀತಿಯಲ್ಲಿ ವಚನಗಳನ್ನು ರಚಿಸಿ, ಮುಗ್ದ ಜನರಲ್ಲಿ ಜ್ಞಾನ ತುಂಬುತ್ತಿದ್ದರು. ಬಸವಣ್ಣನವರ ನಂತರ ಕನಕದಾಸರು ಜಾತಿಪದ್ದತಿ ಕುರಿತಂತೆ ಹೋರಾಟ ನಡೆಸಿದ ಮಹಾನ್ ವ್ಯಕ್ತಿಯಾಗಿದ್ದಾರೆ.

Chikkaballapur News: ವಿದ್ಯೆಯು ವಿನಯ, ಉತ್ತಮ ನಡತೆ ಕೊಡಬೇಕು: ಸದ್ಗುರು ಶ್ರೀ ಮಧುಸೂದನ ಸಾಯಿ

ವಿದ್ಯೆಯು ವಿನಯ, ಉತ್ತಮ ನಡತೆ ಕೊಡಬೇಕು

ವಿಶ್ವ ಸಾಂಸ್ಕೃತಿಕ ಮಹೋತ್ಸವಕ್ಕೆ ಬರುತ್ತಿರುವ ಸಾಧಕರು ತಮ್ಮ ಸಾಧನೆಯಿಂದ ಜಗತ್ತಿನ ಗಮನ ಸೆಳೆದಿದ್ದರೂ ವಿನಯವಂತಿಕೆಗೂ ಮಾದರಿ ಎನ್ನುವಂತೆ ವರ್ತಿಸುತ್ತಾರೆ. ಇವರೆಲ್ಲರ ನಡವಳಿಕೆಯು ಮಕ್ಕಳಿಗೆ ಅತ್ಯುತ್ತಮ ಉದಾಹರಣೆಯಾಗುತ್ತದೆ. ಲಾಭದ ಅಪೇಕ್ಷೆಯಿಲ್ಲದೆ ಉದ್ಯಮಗಳನ್ನು ನಡೆಸಲು ಆಗುವುದಿಲ್ಲ. ಆದರೆ ಆ ಲಾಭವನ್ನು ಸಮಾಜದ ಅಭಿವೃದ್ಧಿಗೆ ಮರಳಿ ಕೊಡುವುದು ಅವರ ವಿಶಿಷ್ಟ ಸೇವೆಯಾಗುತ್ತದೆ

Karnataka State 4th Mini Games: ಕರ್ನಾಟಕ ರಾಜ್ಯ 4ನೇ ಮಿನಿ ಗೇಮ್ಸ್ 2025 ನಲ್ಲಿ ಕುದುರೆ ಸವಾರಿ ಆಯೋಜಿಸಿದ ಎಂಬೆಸ್ಸಿ ಇಂಟರ್‍ನ್ಯಾಷನಲ್ ರೈಡಿಂಗ್ ಸ್ಕೂಲ್

ಕರ್ನಾಟಕ ರಾಜ್ಯ 4ನೇ ಮಿನಿ ಗೇಮ್ಸ್ 2025 ನಲ್ಲಿ ಕುದುರೆ ಸವಾರಿ

10 ರಿಂದ 14 ವರ್ಷ ವಯಸ್ಸಿನ ಸವಾರರಿಗಾಗಿ ನಡೆದ ಕರ್ನಾಟಕ ರಾಜ್ಯ 4ನೇ ಮಿನಿ ಗೇಮ್ಸ್ 2025 ರಲ್ಲಿ ಈಕ್ವೆಸ್ಟ್ರಿಯನ್ (ಕುದುರೆ ಸವಾರಿ) ಸ್ಪರ್ಧೆಗಳನ್ನು ಆಯೋಜಿಸಿದ ಹೆಮ್ಮೆಗೆ ಎಂಬೆಸ್ಸಿ ಇಂಟರ್‍ನ್ಯಾಷನಲ್ ರೈಡಿಂಗ್ ಸ್ಕೂಲ್ ಪಾತ್ರವಾಗಿದೆ. ಇದರೊಂದಿಗೆ ರಾಜ್ಯ ಮಿನಿ ಗೇಮ್ಸ್‌ ನಲ್ಲಿ ಈಕ್ವೆಸ್ಟ್ರಿಯನ್ ಸ್ಪರ್ಧೆಯನ್ನು ಮೊದಲ ಬಾರಿಗೆ ಸೇರಿಸಿಕೊಂಡಂತಾಗಿದೆ.

JDS in Chikkaballapur: ಚಿಕ್ಕಬಳ್ಳಾಪುರ ಜೆಡಿಎಸ್ ಚಟುವಟಿಕೆ ಚುರುಕು –ಜಿಲ್ಲಾಧ್ಯಕ್ಷ ಮುಕ್ತ ಮುನಿಯಪ್ಪ ಪ್ರೇರಣೆ

ಚಿಕ್ಕಬಳ್ಳಾಪುರ ಜೆಡಿಎಸ್ ಚಟುವಟಿಕೆ ಚುರುಕು

ಚಿಕ್ಕಬಳ್ಳಾಪುರದಲ್ಲಿ ಜೆಡಿಎಸ್ ಬಲಿಷ್ಠವಾಗಿದೆ. ಈ ಕ್ಷೇತ್ರದಲ್ಲಿ ಹಿಂದೆ ಪಕ್ಷದ ಅಭ್ಯರ್ಥಿ ಗೆಲುವು ಸಾಧಿಸಿದ್ದರಿಂದ ಪಕ್ಷದ ನೆಲೆ ಬಲವಾಗಿದೆ.ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಈ ಕ್ಷೇತ್ರ ದಿಂದ ಜೆಡಿಎಸ್ ಅಭ್ಯರ್ಥಿ ಸ್ಪರ್ಧಿಸಬೇಕೆಂಬ ಮನವಿಯನ್ನು ನಿಖಿಲ್ ಕುಮಾರಸ್ವಾಮಿ ಅವರ ಗಮನಕ್ಕೆ ತರಲಾಗಿದೆ.ಅವರು ಪಕ್ಷವನ್ನು ಇನ್ನಷ್ಟು ಸಂಘಟಿಸಿ ಬಲಪಡಿಸುವ ಕುರಿತು ಸ್ಪಷ್ಟ ಮಾರ್ಗದರ್ಶನ ನೀಡಿದ್ದಾರೆ

Bangalore News: ಎರಡು ದಿನಗಳ ಉಪಕುಲಪತಿಗಳ ರಾಷ್ಟ್ರೀಯ ಸಮ್ಮೇಳನ: ಶಿಕ್ಷಣದಲ್ಲಿ ಅತ್ಯಾಧುನಿಕ ತಂತ್ರಜ್ಞಾನ ಅಳವಡಿಕೆಗೆ ನಿರ್ಧಾರ

ಎರಡು ದಿನಗಳ ಉಪಕುಲಪತಿಗಳ ರಾಷ್ಟ್ರೀಯ ಸಮ್ಮೇಳನ

ಎಐಎಂಎ ನಿರ್ದೇಶಕ ಡಾ. ರೋಹಿತ್ ಸಿಂಗ್ ಮಾತನಾಡಿ, ಅತ್ಯುತ್ತಮ ಶಿಕ್ಷಣ ನೀಡುವುದು ಸಮ್ಮೇಳನದ ಗುರಿಯಾಗಿದೆ. ಭವಿಷ್ಯದ ಶಿಕ್ಷಣ ವ್ಯವಸ್ಥೆಗೆ ಈ ಸಮ್ಮೇಳನ ಬುನಾದಿಯಾಗಿದೆ. ಭಾರತೀಯ ಜ್ಞಾನ ವ್ಯವಸ್ಥೆಯ ಚೌಕಟ್ಟನ್ನು ಮುನ್ನಡೆಸುವಲ್ಲಿ ನಿರಂತರ ಸಹಯೋಗದ ಅಗತ್ಯವಿದೆ ಎಂದರು

S Suresh Kumar: ವೋಟ್ ಚೋರಿ ಕಲ್ಪನೆಯ ಜನಕ ಯಾರು?: ಮಾಜಿ ಸಚಿವ ಎಸ್. ಸುರೇಶ್ ಕುಮಾರ್ ಪ್ರಶ್ನೆ

ವೋಟ್ ಚೋರಿ ಕಲ್ಪನೆಯ ಜನಕ ಯಾರೆಂದು ಸುರೇಶ್ ಕುಮಾರ್ ಪ್ರಶ್ನೆ

S Suresh Kumar Slams Congress Party: ಗೊಬೆಲ್ಸ್ ವಂಶದವರು ಭಾರತದಲ್ಲಿ ಇದ್ದರೆ ಅದು ಕಾಂಗ್ರೆಸ್ಸಿನಲ್ಲಿದ್ದಾರೆ. ಹಿಂದೆ ನಮ್ಮ ಪಕ್ಷದ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿದ್ದಾಗ ಶೇ. 40 ಕಮಿಷನ್ ಸರ್ಕಾರ ಎಂದು ಹೇಳುತ್ತ ಬಂದಿದ್ದರು. ಈ ಸರ್ಕಾರ ಬಂದ ಬಳಿಕ ನಾಗಮೋಹನ್ ದಾಸ್ ಆಯೋಗವನ್ನೂ ರಚಿಸಿದರು. ಈಗ ನನಗೆ ಗೊತ್ತಿರುವಂತೆ ಆ ಆಯೋಗ ಮುಂದುವರಿಯುತ್ತಿಲ್ಲ. ಪೇ ಸಿಎಂ ಎಂದು ಪೋಸ್ಟರ್ ಅಂಟಿಸಿದರು. ಅದರ ಮುಂದುವರಿದ ಭಾಗವೇ ಮತಗಳ್ಳತನದ ಅಪಪ್ರಚಾರ ಎಂದು ಮಾಜಿ ಸಚಿವ ಮತ್ತು ಶಾಸಕ ಎಸ್. ಸುರೇಶ್ ಕುಮಾರ್ ಆರೋಪಿಸಿದ್ದಾರೆ.

Anakru Award: ನಾಳೆ ಬೆಂಗಳೂರಿನಲ್ಲಿ ಪ್ರೊ. ಎಲ್.ವಿ. ಶಾಂತಕುಮಾರಿ, ಶತಾವಧಾನಿ ಡಾ.ಆರ್. ಗಣೇಶ್‌ಗೆ ಅನಕೃ ಪ್ರಶಸ್ತಿ ಪ್ರದಾನ

ನಾಳೆ ಎಲ್.ವಿ. ಶಾಂತಕುಮಾರಿ, ಆರ್. ಗಣೇಶ್‌ಗೆ ಅನಕೃ ಪ್ರಶಸ್ತಿ ಪ್ರದಾನ

ಅನಕೃ ಪ್ರತಿಷ್ಠಾನವು ಕೊಡಮಾಡುವ ಅನಕೃ ಪ್ರಶಸ್ತಿಗೆ 2024ನೇ ಸಾಲಿನಲ್ಲಿ ಪ್ರೊ.ಎಲ್.ವಿ. ಶಾಂತಕುಮಾರಿ ಮತ್ತು 2025ನೇ ಸಾಲಿನಲ್ಲಿ ಶತಾವಧಾನಿ ಡಾ. ಆರ್. ಗಣೇಶ್ ಆಯ್ಕೆಯಾಗಿದ್ದಾರೆ. ಬೆಂಗಳೂರಿನ ಕೆಂಪೇಗೌಡ ನಗರದಲ್ಲಿರುವ ಕೇಶವಶಿಲ್ಪ ಸಭಾಂಗಣದಲ್ಲಿ ನವೆಂಬರ್ 9ರಂದು ಸಂಜೆ 5 ಗಂಟೆಗೆ ಅನಕೃ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.

Chikkanayakanahalli News: ಮಹಿಳಾ ದಿನಾಚರಣೆ ಅನುದಾನ ದುರ್ಬಳಕೆ; ಪುರಸಭಾ ಸದಸ್ಯರಿಂದಲೇ ಮೈಸೂರು ಪ್ರವಾಸ!

ಅನುದಾನ ದುರ್ಬಳಕೆ; ಪುರಸಭಾ ಸದಸ್ಯರಿಂದಲೇ ಮೈಸೂರು ಪ್ರವಾಸ!

Chikkanayakanahalli Town Municipal Council: ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಪುರಸಭೆಯು 78 ಸಾವಿರ ರೂ. ಹಣವನ್ನು ಮಹಿಳಾ ಸಬಲೀಕರಣ ಕಾರ್ಯಕ್ರಮಗಳಿಗೆ ಬಿಡುಗಡೆ ಮಾಡಲಾಗಿತ್ತು. ಆದರೆ ಈ ಅನುದಾನವನ್ನು ಬಳಸಿ ಪುರಸಭಾ ಸದಸ್ಯರು ನ. 2 ರಂದು ಮೈಸೂರು ಪ್ರವಾಸ ಕೈಗೊಂಡಿದ್ದರು ಎಂಬ ಆರೋಪ ಕೇಳಿಬಂದಿದೆ.

HD Kumaraswamy: ರಾಜ್ಯದಲ್ಲಿ ವೋಟ್ ಚೋರಿ ಮೂಲಕವೇ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ: ಎಚ್.ಡಿ. ಕುಮಾರಸ್ವಾಮಿ ಆರೋಪ

ರಾಜ್ಯದಲ್ಲಿ ವೋಟ್ ಚೋರಿ ಮೂಲಕವೇ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ: ಎಚ್‌ಡಿಕೆ

Vote theft Case : ಸಿಎಂ, ಡಿಸಿಎಂ ಜಂಟಿ ಪತ್ರಿಕಾಗೋಷ್ಠಿ ಅಂತ ಯಾರೋ ಹೇಳಿದರು. ನಾನೇನೋ ಯಾವುದೋ ಭಾರೀ ವಿಷಯ ಇರಬೇಕು ಎಂದುಕೊಂಡಿದ್ದೆ. ಆದರೆ ಸತ್ಯವಲ್ಲದ ವೋಟ್ ಚೋರಿ ಬಗ್ಗೆ ಇವರಿಬ್ಬರೂ ಮಾಧ್ಯಮಗೋಷ್ಠಿ ನಡೆಸಿರುವುದು ಸಣ್ಣತನ ಅಷ್ಟೇ. ಸಿಎಂ,‌ ಡಿಸಿಎಂ ಸಣ್ಣತನವನ್ನು ರಾಜ್ಯದ ಜನರು ನೋಡಿದ್ದಾರೆ. ರಾಜ್ಯದ ಜನತೆಯ ದಿಕ್ಕು ತಪ್ಪಿಸುವ ನಿಟ್ಟಿನಲ್ಲಿ ‌ಇಂತಹ ವಿಷಯ ಇಟ್ಟುಕೊಂಡು ಹೋಗ್ತಾ ಇದ್ದಾರೆ. ಕಾಂಗ್ರೆಸ್‌ನವರನ್ನು ನಾಡಿನ ಜನ ಶಾಶ್ವತವಾಗಿ ಮನೆಗೆ ‌ಕಳಿಸುವ ದಿನ ದೂರ ಉಳಿದಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಕಿಡಿಕಾರಿದ್ದಾರೆ.

Pralhad Joshi: ಗ್ಯಾರಂಟಿಗಳಿಗಾಗಿ ಈ ಸರ್ಕಾರ ಯಾವುದನ್ನೂ ಬಿಟ್ಟಿಲ್ಲ: ಪ್ರಲ್ಹಾದ್‌ ಜೋಶಿ ಕಿಡಿ

ಗ್ಯಾರಂಟಿಗಳಿಗಾಗಿ ಈ ಸರ್ಕಾರ ಯಾವುದನ್ನೂ ಬಿಟ್ಟಿಲ್ಲ: ಜೋಶಿ

State Congress Government: ರಾಜ್ಯ ಕಾಂಗ್ರೆಸ್‌ ಸರ್ಕಾರ ʼWater supply & Lifting chargeʼ ಎಂದು ಈಗ ಪ್ರತಿ ಸಕ್ಕರೆ ಕಾರ್ಖಾನೆಗಳಿಂದ ವರ್ಷಕ್ಕೆ ಬರೋಬ್ಬರಿ ₹1 ಕೋಟಿ ಸಂಗ್ರಹಿಸುತ್ತಿದೆ. ಕಳೆದ ಸರ್ಕಾರದಲ್ಲಿ ಇದು ಕೇವಲ ₹5 ಲಕ್ಷ ಶುಲ್ಕವಿತ್ತು. ಇದಿಂದು ಎಲ್ಲಿಂದ-ಎಲ್ಲಿಗೆ ಏರಿಕೆಯಾಗಿದೆ ನೋಡಿ! ಇದೂ ಸಾಲದೆಂಬಂತೆ ಕಳೆದ ತಿಂಗಳಿಂದ ಪ್ರತಿ ಯುನಿಟ್ ವಿದ್ಯುತ್‌ಗೆ 60 ಪೈಸೆ ʼಎನರ್ಜಿ ಸೆಸ್ʼ ಬೇರೆ ಹೇರಿದೆ ಎಂದು ರಾಜ್ಯ ಸರ್ಕಾರವನ್ನು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ತರಾಟೆಗೆ ತೆಗೆದುಕೊಂಡಿದ್ದಾರೆ.

Vijayanagara News: ನಾಳೆ ಕೂಡ್ಲಿಗಿಯಲ್ಲಿ 1250 ಕೋಟಿ ರೂ.ಗಳ ಅಭಿವೃದ್ಧಿ ಯೋಜನೆಗಳಿಗೆ ಸಿಎಂ ಶಂಕುಸ್ಥಾಪನೆ; ಭರದ ಸಿದ್ಧತೆ

ಕೂಡ್ಲಿಗಿಯಲ್ಲಿ ನಾಳೆ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಸಿಎಂ ಶಂಕುಸ್ಥಾಪನೆ

CM's Programme in Kudligi: ಕೂಡ್ಲಿಗಿ ಪಟ್ಟಣದಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಶಂಕುಸ್ಥಾಪನೆ ಕಾರ್ಯಕ್ರಮಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಮಾಡಲಾಗಿದ್ದು, ಶಾಸಕ ಡಾ.ಎನ್.ಟಿ. ಶ್ರೀನಿವಾಸ್ ಅವರು ಅಂತಿಮ ಹಂತದ ಸಿದ್ಧತೆ ಪರಿಶೀಲಿಸಿದರು. ಕಾರ್ಯಕ್ರಮಕ್ಕೆ ಅಂದಾಜು 50 ಸಾವಿರ ಜನರು ಸೇರುವ ನಿರೀಕ್ಷೆ ಇದೆ.

Bengaluru News: ಬೆಂಗಳೂರಿನಲ್ಲಿ ಯುವತಿ ತೊಡೆ ಸವರಿ ಬೈಕ್‌ ಟ್ಯಾಕ್ಸಿ ಚಾಲಕನ ದುರ್ವರ್ತನೆ; ಕೇಸ್‌ ದಾಖಲು

ಬೆಂಗಳೂರಿನಲ್ಲಿ ಯುವತಿ ತೊಡೆ ಸವರಿ ಬೈಕ್‌ ಟ್ಯಾಕ್ಸಿ ಚಾಲಕನ ದುರ್ವರ್ತನೆ

Rapido Bike Taxi Rider: ನವೆಂಬರ್ 6 ರಂದು ನಡೆದ ಘಟನೆಯ ಕುರಿತು ಸಂತ್ರಸ್ಥ ಯುವತಿ, ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ವಿಡಿಯೊ ಹಂಚಿಕೊಂಡಿದ್ದಾರೆ. ಅಲ್ಲದೇ ಬೈಕ್ ಟ್ಯಾಕ್ಸಿ ಸವಾರನ ವಿರುದ್ಧ ಯುವತಿ ದೂರು ದಾಖಲಿಸಿದ್ದಾಳೆ. ಈ ಹಿನ್ನೆಲೆ ವಿಲ್ಸನ್ ಗಾರ್ಡನ್ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

Karnataka Weather: ಮುಂದಿನ 2 ದಿನ ಬೆಂಗಳೂರಿನಲ್ಲಿ ಮುಂಜಾನೆ ದಟ್ಟ ಮಂಜು, ಉಳಿದೆಡೆ ಒಣ ಹವೆ

ಮುಂದಿನ 2 ದಿನ ಬೆಂಗಳೂರಿನಲ್ಲಿ ಮುಂಜಾನೆ ದಟ್ಟ ಮಂಜು, ಉಳಿದೆಡೆ ಒಣ ಹವೆ

ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳವರೆಗೆ ಮುಖ್ಯವಾಗಿ ನಿರ್ಮಲ ಆಕಾಶವಿರಲಿದೆ. ಕೆಲವು ಕಡೆಗಳಲ್ಲಿ ಮುಂಜಾನೆಯ ಸಮಯದಲ್ಲಿ ಮಂಜು (Karnataka Weather Forecast) ಇರುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 29° C ಮತ್ತು 19° C ಆಗಿರಬಹುದು.

Vote Theft Case: ಮತಗಳ್ಳತನ ವಿರುದ್ಧ ರಾಜ್ಯದಲ್ಲಿ 1,12,40,000 ಸಹಿ ಸಂಗ್ರಹ; ನ.10ರಂದು ದೆಹಲಿಗೆ ರವಾನೆ ಎಂದ ಡಿಕೆಶಿ

ಮತಗಳ್ಳತನ ವಿರುದ್ಧ ರಾಜ್ಯದಲ್ಲಿ 1,12,40,000 ಸಹಿ ಸಂಗ್ರಹ: ಡಿಕೆಶಿ

DK Shivakumar Statement: ರಾಜ್ಯದ ಎಲ್ಲಾ ವಿಧಾನಸಭಾ ಕ್ಷೇತ್ರಗಳು ಹಾಗೂ ನಮ್ಮ ಪಕ್ಷ ರಾಜಕೀಯವಾಗಿ ವಿಭಾಗಿಸಿಕೊಂಡಿರುವ 40 ಜಿಲ್ಲೆಗಳಿಂದ ಸಹಿ ಸಂಗ್ರಹ ಮಾಡಲಾಗಿದೆ. ನಮ್ಮ ಕಾರ್ಯಕರ್ತರು ಬಹಳ ಪ್ರಾಮಾಣಿಕವಾಗಿ ಈ ಅಭಿಯಾನದಲ್ಲಿ ಕೆಲಸ ಮಾಡಿದ್ದಾರೆ. 8-10 ಕಡೆ ಹೊರತು ಪಡಿಸಿ, ಉಳಿದ ಎಲ್ಲಾ ಕಡೆಗಳಲ್ಲಿ ಚೆನ್ನಾಗಿ ಸಹಿ ಸಂಗ್ರಹಿಸಲಾಗಿದೆ. ಬೂತ್ ವಾರು ಸಹಿ ಸಂಗ್ರಹಿಸಲಾಗಿದ್ದು, ಜನರಲ್ಲಿ ಮತಗಳ್ಳತನದ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದ್ದೇವೆ ಎಂದು ತಿಳಿಸಿದ ಡಿಸಿಎಂ ಡಿ.ಕೆ. ಶಿವಕುಮಾರ್‌, ಈ ಸಹಿ ಸಂಗ್ರಹದ ಅರ್ಜಿಗಳನ್ನು ಇದೇ ತಿಂಗಳು 10ರಂದು ದೆಹಲಿಗೆ ರವಾನಿಸಲು ತೀರ್ಮಾನಿಸಲಾಗಿದೆ ಎಂದು ಹೇಳಿದ್ದಾರೆ.

Karnataka Sugarcane Price: ಪ್ರತಿ ಟನ್‌ ಕಬ್ಬಿನ ದರ 100 ರೂ. ಹೆಚ್ಚಿಸಿ ಸರ್ಕಾರ ಅಧಿಕೃತ ಆದೇಶ

ಪ್ರತಿ ಟನ್‌ ಕಬ್ಬಿನ ದರ 100 ರೂ. ಹೆಚ್ಚಿಸಿ ಸರ್ಕಾರ ಅಧಿಕೃತ ಆದೇಶ

Sugarcane Farmers Protest: ಕಬ್ಬು ಬೆಳೆಗಾರರ ಪ್ರತಿಭಟನೆಗೆ ರಾಜ್ಯ ಸರ್ಕಾರ ಸ್ಪಂದಿಸಿದೆ. ರಾಜ್ಯದ ಸಕ್ಕರೆ ಕಾರ್ಖಾನೆಗಳಿಗೆ ಕಬ್ಬು ಸರಬರಾಜು ಮಾಡಿದ ರೈತರಿಗೆ ಸಂಬಂಧಿಸಿದ ಸಕ್ಕರೆ ಕಾರ್ಖಾನೆಗಳು ಪಾವತಿಸಬೇಕಾದ ಕನಿಷ್ಠ ಹೆಚ್ಚುವರಿ ಕಬ್ಬು ಬೆಲೆಯನ್ನು ನಿಗದಿಪಡಿಸಲು ಹಾಗೂ ರಾಜ್ಯದ ಸಕ್ಕರೆ ಕಾರ್ಖಾನೆಗಳಿಗೆ ಕಬ್ಬು ಸರಬರಾಜು ಮಾಡಿದ ರೈತರಿಗೆ ರಾಜ್ಯ ಸರ್ಕಾರದಿಂದ ಆರ್ಥಿಕ ನೆರವನ್ನು ಒಂದು ಬಾರಿಯ ಕ್ರಮವಾಗಿ ನಿಗದಿಪಡಿಸಿ ಆದೇಶಿಸಲಾಗಿದೆ.

Road Potholes: ರಸ್ತೆ ಗುಂಡಿ ಮುಚ್ಚಲು ಆಗ್ರಹ; ಆರ್. ಅಶೋಕ್ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಪ್ರತಿಭಟನೆ

ರಸ್ತೆ ಗುಂಡಿ ಮುಚ್ಚಲು ಆಗ್ರಹ; ಬಿಜೆಪಿ ವತಿಯಿಂದ ಪ್ರತಿಭಟನೆ

BJP protest: ಬೆಂಗಳೂರಿನ ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದಲ್ಲಿ ಶನಿವಾರ ರಸ್ತೆ ಗುಂಡಿ ಮುಚ್ಚಲು ಆಗ್ರಹಿಸಿ, ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರ ನೇತೃತ್ವದಲ್ಲಿ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ರಾಜ್ಯ ಸರ್ಕಾರವು ಕೂಡಲೇ ಕಾರ್ಯಪ್ರವೃತ್ತವಾಗಿ ರಸ್ತೆಗುಂಡಿಗಳನ್ನು ಮುಚ್ಚಬೇಕು ಎಂದು ಆಗ್ರಹಿಸಿದರು. ಅಪಘಾತಕ್ಕೆ ಕಾರಣವಾಗುವ ಹಾಗೂ ಜನರ ಜೀವ ಹಾನಿಗೆ ಎಡೆಮಾಡಿಕೊಡುವ ರಸ್ತೆ ಗುಂಡಿಗಳ ವಿಚಾರದಲ್ಲಿ ರಾಜ್ಯದ ಕಾಂಗ್ರೆಸ್ ಸರ್ಕಾರದ ನಿರ್ಲಕ್ಷ್ಯ ಧೋರಣೆ ಖಂಡನೀಯ ಎಂದು ಮುಖಂಡರು ಟೀಕಿಸಿದರು.

Kanakadasa Jayanthi 2025: ಕನಕದಾಸರು ಕೇವಲ ದಾಸಶ್ರೇಷ್ಠ ವ್ಯಕ್ತಿಯಲ್ಲ; ಒಂದು ಮಹೋನ್ನತ ಪರಂಪರೆ: ಕೆ.ವಿ. ಪ್ರಭಾಕರ್

ಕನಕದಾಸರು ಕೇವಲ ದಾಸಶ್ರೇಷ್ಠ ವ್ಯಕ್ತಿಯಲ್ಲ; ಒಂದು ಮಹೋನ್ನತ ಪರಂಪರೆ: ಕೆವಿಪಿ

KV Prabhakar: ಕನಕದಾಸರ ಹೆಸರನ್ನು ನಾವು ಕರೆಯುವಾಗ ಇವರ ಜತೆಗೆ ಬುದ್ದ, ಬಸವ, ಕನಕ ಎಂದು ಕರೆಯುತ್ತೇವೆ. ಅಂದರೆ ಬುದ್ದನಿಂದ ಶುರುವಾಗುವ ಮಹೋನ್ನತ ಪರಂಪರೆಯ ಭಾಗವಾಗಿ ಕನಕರನ್ನು ನಾವು ಆರಾಧಿಸುತ್ತೇವೆ. ಆದ್ದರಿಂದ ಕನಕ ಜಯಂತಿಯಂದು ನಾವು ನಮ್ಮ ಪರಂಪರೆಯ ಬೇರುಗಳಿಗೆ ಚೈತನ್ಯ ತುಂಬುವಂತಾಗಬೇಕು ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ್ ತಿಳಿಸಿದ್ದಾರೆ.

Bangalore Central Jail: ಭಯೋತ್ಪಾದಕರಿಗೂ ಸ್ವರ್ಗವಾಯ್ತಾ ಪರಪ್ಪನ ಅಗ್ರಹಾರ ಜೈಲು?; ಐಸಿಸ್‌ ಉಗ್ರನಿಗೆ ರಾಜಾತಿಥ್ಯ!

ಪರಪ್ಪನ ಅಗ್ರಹಾರ ಜೈಲಿನಲ್ಲಿ ಉಗ್ರನಿಗೆ ರಾಜಾತಿಥ್ಯ!

Parappana Agrahara jail in Bengaluru: ಬೆಂಗಳೂರಿನ ತಿಲಕ್‌ನಗರದವನಾದ ಜುಹಾದ್‌ ಹಮೀದ್‌ ಶಕೀಲ್‌ ಮೂಲಭೂತವಾದಿ ಮನಸ್ಥಿತಿಯುಳ್ಳ ಮುಸ್ಲಿಂ ಯುವಕರನ್ನು ಐಸಿಸ್‌ಗೆ ನೇಮಕ ಮಾಡುತ್ತಿದ್ದ. ಸಿರಿಯಾದ ಐಸಿಸ್ ಉಗ್ರರ ಜತೆ ನಿರಂತರವಾಗಿ ಸಂಪರ್ಕ ಹೊಂದಿದ್ದ ಶಕೀಲ್‌ನನ್ನು 2020ರಲ್ಲಿ ಸೌದಿ ಅರೇಬಿಯಾದಲ್ಲಿ ಬಂಧಿಸಲಾಗಿತ್ತು. 2022ರಲ್ಲಿ ಸೌದಿಯಿಂದ ಭಾರತಕ್ಕೆ ಗಡೀಪಾರಾಗಿದ್ದ. ಸದ್ಯ ಕಳೆದ ಮೂರು ವರ್ಷಗಳಿಂದ ಪರಪ್ಪನ ಅಗ್ರಹಾರ ಜೈಲಲ್ಲಿ ಶಕೀಲ್‌ ಶಿಕ್ಷೆ ಅನುಭವಿಸುತ್ತಿದ್ದಾನೆ.

CM Siddaramaiah: ಕನಕದಾಸರು ಕೇವಲ ಭಕ್ತರಾಗಿರದೇ ಒಬ್ಬ ದಾರ್ಶನಿಕ ವ್ಯಕ್ತಿಯಾಗಿದ್ದರು; ಮುಖ್ಯಮಂತ್ರಿ ಸಿದ್ದರಾಮಯ್ಯ

ಕನಕದಾಸರು ಕೇವಲ ಭಕ್ತರಾಗಿರದೇ ಒಬ್ಬ ದಾರ್ಶನಿಕ ವ್ಯಕ್ತಿಯಾಗಿದ್ದರು; CM

ನಾಡಿನಾದ್ಯಂತ ಕನಕದಾಸ ಜಯಂತಿಯನ್ನು (KanakaDasa Jayanti) ಆಚರಿಸಲಾಗುತ್ತಿದೆ. ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕನಕದಾಸರ ಜಯಂತಿಯ ಅಂಗವಾಗಿ ಬೆಂಗಳೂರಿನ‌ ಶಾಸಕರ ಭವನದ ಆವರಣದಲ್ಲಿರುವ ಕನಕದಾಸರ ಪ್ರತಿಮೆಯ ಮುಂಭಾಗ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಮಾಧ್ಯಮದವರೊಂದಿಗೆ ಮಾತನಾಡಿದರು.

Sugar Cane Farmers Protest: ಬೆಳಗಾವಿ ಪ್ರತಿಭಟನೆ ವೇಳೆ ಪೊಲೀಸರ ಮೇಲೆ ಕಲ್ಲು ತೂರಾಟ; 11 ಮಂದಿ ವಿರುದ್ಧ FIR

ಬೆಳಗಾವಿಯಲ್ಲಿ ಪೊಲೀಸರ ಮೇಲೆ ಕಲ್ಲು ತೂರಾಟ; 11 ಮಂದಿ ಮೇಲೆ FIR

ಬೆಳಗಾವಿಯಲ್ಲಿ (Belagavi) ನಡೆಯುತ್ತಿದ್ದ ಕಬ್ಬು ಬೆಳಗಾರರ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡು ಕಲ್ಲು ತೂರಾಟಕ್ಕೆ ಕಾರಣವಾಗಿತ್ತು. ಇದೀಗ ಕಲ್ಲು ತೂರಾಟ ನಡೆಸಿದವರ ಮೇಲೆ ಕಠಿಣ ಕ್ರಮ ಕೈಗೊಳ್ಳಲು ಸರ್ಕಾರ ಮುಂದಾಗಿದೆ. ಹತ್ತರಗಿ ಗ್ರಾಮದಲ್ಲಿ ಕಲ್ಲುತೂರಾಟ ನಡೆಸಿದ 11 ಆರೋಪಿಗಳ ವಿರುದ್ಧ ಇದೀಗ ಎಫ್ ಐ ಆರ್ ದಾಖಲಾಗಿದೆ.

Rukmini Vasanth: ಕಾಂತಾರ ನಟಿ ರುಕ್ಮಿಣಿ ವಸಂತ್ ಹೆಸರಿನಲ್ಲಿ ಚೀಟಿಂಗ್‌! ಸೈಬರ್‌ ವಂಚನೆ ಬಗ್ಗೆ ಕನಕವತಿ ಎಚ್ಚರಿಕೆ

ಕಾಂತಾರ ನಟಿ ರುಕ್ಮಿಣಿ ವಸಂತ್ ಹೆಸರಿನಲ್ಲಿ ಸೈಬರ್‌ ವಂಚನೆ

Kantara Actress Rukmini Vasanth: ನಟಿ ರುಕ್ಮಿಣಿ ವಸಂತ್ ಅವರು, ಇತ್ತೀಚೆಗೆ ತಮ್ಮ ಹೆಸರಿನಲ್ಲಿ ನಡೆಯುತ್ತಿರುವ ವಂಚನೆ ಬಗ್ಗೆ ಅಭಿಮಾನಿಗಳಿಗೆ ಎಚ್ಚರಿಕೆ ನೀಡಿದ್ದಾರೆ. ಯಾರೋ ಅಜ್ಞಾತ ವ್ಯಕ್ತಿ ಅವರ ಹೆಸರಿನಲ್ಲಿ ನಕಲಿ ಮೊಬೈಲ್ ನಂಬರನ್ನು ಬಳಸಿಕೊಂಡು ಜನರನ್ನು ಸಂಪರ್ಕಿಸುತ್ತಿದ್ದಾನೆ ಎಂದು ರುಕ್ಮಿಣಿ ತಿಳಿಸಿದ್ದಾರೆ. ಆ ನಂಬರಿಗೆ ಹಾಗೂ ತಮಗೆ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

Gold price today on 8th November 2025: ಚಿನ್ನದ ದರದಲ್ಲಿ ಯಥಾಸ್ಥಿತಿ; ಸ್ವರ್ಣಪ್ರಿಯರಿಗೆ ಕೊಂಚ ನಿರಾಳ

ಚಿನ್ನದ ದರದಲ್ಲಿ ಯಥಾಸ್ಥಿತಿ- ಇಂದಿನ ರೇಟ್‌ ಚೆಕ್‌ ಮಾಡಿ

Gold and silver rate: ಇಂದು 22ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 11,175 ರೂ. ಇದೆ. 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ 12,191 ರೂ ಇದೆ. 22 ಕ್ಯಾರಟ್‌ನ 8 ಗ್ರಾಂ ಚಿನ್ನ 89,400 ರೂ. ಬಾಳಿದರೆ, 10 ಗ್ರಾಂಗೆ ನೀವು 1,11,750 ಹಾಗೂ 100 ಗ್ರಾಂಗೆ 11,17,500 ರೂ., ನೀಡಬೇಕಾಗುತ್ತದೆ. 24 ಕ್ಯಾರಟ್‌ನ 8 ಗ್ರಾಂ ಚಿನ್ನಕ್ಕೆ 97,528 ರೂ. ಆದರೆ, 10 ಗ್ರಾಂಗೆ ನೀವು 1,21,910 ರೂ. ಹಾಗೂ 100 ಗ್ರಾಂಗೆ 12,19,100 ರೂ. ಪಾವತಿಸಬೇಕಾಗುತ್ತದೆ.

Loading...