ಫೋಟೋ ಗ್ಯಾಲರಿ ಬಜೆಟ್​ T20 ವಿಶ್ವಕಪ್​ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಕ್ರೈಂ ಧಾರ್ಮಿಕ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಕರ್ನಾಟಕ

ಜ್ಯೋತಿಷಿ ಹೇಳಿದ ಭವಿಷ್ಯಕ್ಕೆ ಹೆದರಿ ಮದುವೆ ನಿಶ್ಚಯವಾಗಿದ್ದ ಟೆಕ್ಕಿ ಯುವತಿ ಆತ್ಮಹತ್ಯೆ!

ಬೆಂಗಳೂರಿನಲ್ಲಿ ಜ್ಯೋತಿಷಿ ಭವಿಷ್ಯಕ್ಕೆ ಹೆದರಿ ಟೆಕ್ಕಿ ಯುವತಿ ಆತ್ಮಹತ್ಯೆ!

Bengaluru News: ಬೆಂಗಳೂರು ಹೊರವಲಯದ ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯ ಎಂಇಐ ಲೇಔಟ್‌ನಲ್ಲಿ ಘಟನೆ ನಡೆದಿದೆ. ಖಾಸಗಿ ಕಂಪನಿಯಲ್ಲಿ ಉದ್ಯೋಗಿಯಾಗಿದ್ದ ಯುವತಿಯು ಜ್ಯೋತಿಷಿ ಹೇಳಿದ್ದ ಭವಿಷ್ಯದಿಂದ ಹೆದರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Gold Rate Today 28th February 2026: ಮತ್ತೆ ಗ್ರಾಹಕರ ನಿದ್ದೆಗೆಡಿಸಿದ ಬಂಗಾರ; ದರದಲ್ಲಿ ಭಾರಿ ಏರಿಕೆ

ಮತ್ತೆ ಗ್ರಾಹಕರ ನಿದ್ದೆಗೆಡಿಸಿದ ಬಂಗಾರ

Gold Silver Rate Today: ಶನಿವಾರ (ಫೆಬ್ರವರಿ 28) ಆಭರಣಪ್ರಿಯರ ನಿದ್ದೆಗೆಡಿಸಿ ಚಿನ್ನದ ಬೆಲೆ ಭಾರಿ ಹೆಚ್ಚಳ ಕಂಡಿದೆ. ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನಕ್ಕೆ 290 ರುಪಾಯಿ ಏರಿಕೆಯಾಗಿ 15,100 ರುಪಾಯಿಗೆ ಬಂದು ತಲುಪಿದೆ. ಇನ್ನು 24 ಕ್ಯಾರಟ್‌ನ 1 ಗ್ರಾಂ ಚಿನ್ನ 316 ಅಧಿಕವಾಗಿದ್ದು, 16,473 ರುಪಾಯಿ ಇದೆ.

Heart Attack: ಪರೀಕ್ಷೆಗೆ ಮುನ್ನವೇ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಹೃದಯಾಘಾತಕ್ಕೆ ಬಲಿ

ಪರೀಕ್ಷೆಗೆ ಮುನ್ನವೇ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಹೃದಯಾಘಾತಕ್ಕೆ ಬಲಿ

ಸ್ನಾನ ಮುಗಿಸಿ ಮನೆಯಿಂದ ಹೊರಬರುತ್ತಿದ್ದ ಸನ್ನಿವೇಶದಲ್ಲಿ ಆಕೆಗೆ ದಿಢೀರ್ ಆಗಿ ಎದೆನೋವು ಕಾಣಿಸಿಕೊಂಡು ಕುಸಿದು ಬಿದ್ದಿದ್ದಾಳೆ. ತಕ್ಷಣವೇ ಆತಂಕಗೊಂಡ ಪೋಷಕರು ಆಕೆಯನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯುವ ಪ್ರಯತ್ನ ಮಾಡಿದರು. ಆದರೆ, ದುರದೃಷ್ಟವಶಾತ್ ಆಸ್ಪತ್ರೆಗೆ ತಲುಪುವ ಮಾರ್ಗಮಧ್ಯೆಯೇ ಭೂಮಿಕಾ ಕೊನೆಯುಸಿರೆಳೆದಿದ್ದಾಳೆ.

Dr.M.C.Sudhakar: ಶ್ರವಣ ಸಾಧನಗಳ ವಿತರಣೆ ಮಾನವೀಯ ಕಾರ್ಯ: ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್

ಶ್ರವಣ ಸಾಧನಗಳ ವಿತರಣೆ ಮಾನವೀಯ ಕಾರ್ಯ

ರಾಷ್ಟ್ರೀಯ ಬಾಲ ಸ್ವಾಸ್ಥ್ಯ (ಆರ್.ಬಿ.ಎಸ್.ಕೆ) ಕಾರ್ಯಕ್ರಮದಡಿ ಅಂಗನವಾಡಿ ಮಕ್ಕಳಿಗೆ ವರ್ಷಕ್ಕೆ ನಾಲ್ಕು ಬಾರಿ ಹಾಗೂ ಶಾಲಾ ಮಕ್ಕಳಿಗೆ ಎರಡು ಬಾರಿ ಉಚಿತ ಆರೋಗ್ಯ ತಪಾಸಣೆ ಮಾಡಿ ಶ್ರವಣ ದೋಷವಿರುವವರಿಗೆ ಶ್ರವಣ ಸಾಧನ, ದೃಷ್ಠಿ ದೋಷವುಳ್ಳವರಿಗೆ ಕನ್ನಡಕ ಸೇರಿದಂತೆ ಹೆಚ್ಚಿನ ಶಸ್ತ್ರಚಿಕಿತ್ಸೆ ಅಗತ್ಯವಿರುವವರಿಗೆ ಉಚಿತ ಶಸ್ತ್ರಚಿಕಿತ್ಸೆಯನ್ನು ಮಾಡಿಸು ವಂತಹ ಕಾರ್ಯ ಜಿಲ್ಲಾಡಳಿತ ದಿಂದ ಮಾಡಲಾಗುತ್ತಿದೆ.

ಅಮೆಜಾನ್ ಬಜಾರ್‌ನಲ್ಲಿ ₹299 ಕ್ಕಿಂತ ಕಡಿಮೆ ಬೆಲೆಯಲ್ಲಿ ಹೋಳಿ ಹಬ್ಬದ ಅಗತ್ಯ ವಸ್ತುಗಳೊಂದಿಗೆ ಬಣ್ಣಗಳ ಹಬ್ಬ ಆಚರಿಸಿ

ಕಡಿಮೆ ಬೆಲೆಯಲ್ಲಿ ಅಗತ್ಯ ವಸ್ತುಗಳೊಂದಿಗೆ ಬಣ್ಣಗಳ ಹಬ್ಬ ಆಚರಿಸಿ

ಗ್ರಾಹಕರು ಹೋಳಿ ಹಬ್ಬದ ವಿವಿಧ ಅಗತ್ಯ ವಸ್ತುಗಳನ್ನು ಅತ್ಯಂತ ಕಡಿಮೆ ಬೆಲೆಯಲ್ಲಿ ಖರೀದಿಸಬಹುದು. ಗ್ರಾಹಕರು ₹299 ಕ್ಕಿಂತ ಕಡಿಮೆ ಬೆಲೆಯಲ್ಲಿ ಹೋಳಿ ಉತ್ಪನ್ನಗಳನ್ನು ಪಡೆಯಬಹುದು, ಜೊತೆಗೆ ಎಲ್ಲಾ ಆರ್ಡರ್‌ಗಳ ಮೇಲೆ ಹೆಚ್ಚುವರಿ ಕ್ಯಾಶ್‌ಬ್ಯಾಕ್ ಮತ್ತು ಉಚಿತ ಡೆಲಿವರಿ ಸೌಲಭ್ಯವನ್ನು ಪಡೆಯಬಹುದು ಹಾಗೂ ಬೃಹತ್ ರಿಯಾಯಿತಿಗಳನ್ನು ಅನ್ಲಾಕ್ ಮಾಡಬಹುದು.

Sirsi News: 'ನೀ ಹೂ ಅಂದ್ರ ಗಿಚ್ಚ ಆಕ್ಕೇನಿ ಇಲ್ಲಂದ್ರ ಹುಚ್ಚಕ್ಕೇನಿ' ಆರಂಭ

'ನೀ ಹೂ ಅಂದ್ರ ಗಿಚ್ಚ ಆಕ್ಕೇನಿ ಇಲ್ಲಂದ್ರ ಹುಚ್ಚಕ್ಕೇನಿ' ಆರಂಭ

​ಕಂಪನಿಯು ಈ ಬಾರಿ ಅತ್ಯಂತ ಜನಪ್ರಿಯ ಹಾಗೂ ವಿಭಿನ್ನ ಶೀರ್ಷಿಕೆಯ 'ನೀ ಹೂ ಅಂದ್ರ ಗಿಚ್ಚ ಆಕ್ಕೇನಿ ಇಲ್ಲಂದ್ರ ಹುಚ್ಚಕ್ಕೇನಿ' ಎಂಬ ಸಾಮಾಜಿಕ ನಾಟಕವನ್ನು ವೇದಿಕೆಗೆ ತಂದಿದೆ. ಹಾಸ್ಯ, ಭಾವನಾತ್ಮಕ ಸನ್ನಿವೇಶಗಳು ಮತ್ತು ಅದ್ಭುತ ಸಂಭಾಷಣೆಗಳನ್ನು ಒಳಗೊಂಡ ಈ ನಾಟಕವು ಪ್ರೇಕ್ಷಕರನ್ನು ರಂಜಿಸುವಲ್ಲಿ ಯಶಸ್ವಿಯಾಗಿದೆ.

Body Found: ಬೆಂಗಳೂರಿನ ಮನೆಯೊಳಗೆ ವ್ಯಕ್ತಿಯ ಕೊಳೆತ ಶವ ಪತ್ತೆ; ಹತ್ಯೆ ಎಸಗಿ ಮನೆಗೆ ಲಾಕ್‌ ಮಾಡಿದ ದುಷ್ಟರು

ಬೆಂಗಳೂರಿನ ಮನೆಯೊಳಗೆ ಕೊಳೆತ ಶವ ಪತ್ತೆ; ಹತ್ಯೆಯೆಸಗಿ ಮನೆಗೆ ಲಾಕ್‌

ನಾಗರಾಜ್ ಎಂಬವರಿಗೆ ಸೇರಿದ ಮನೆಯಲ್ಲಿ ಶವ ಪತ್ತೆಯಾಗಿದೆ. 4 ದಿನದ ಹಿಂದೆ ಕೊಲೆ ಮಾಡಲಾಗಿದೆ ಎಂದು ಶಂಕಿಸಲಾಗಿದೆ. ಮನೆಗೆ ಬೀಗ ಹಾಕಲಾಗಿತ್ತು ಹಾಗೂ ಸುತ್ತಮುತ್ತ ಕೆಟ್ಟ ವಾಸನೆ ಬರುತ್ತಿತ್ತು. ಮನೆ ಮಾಲೀಕ ನಾಗರಾಜ್‌ಗೆ ಸ್ಥಳೀಯರು ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಾಗಲಗುಂಟೆ ಪೊಲೀಸರು ಬಂದಿದ್ದು, ಈ ವೇಳೆ ಗುರುತು ಸಿಗದ ಬೆತ್ತಲೆ ಕೊಳೆತ ಮೃತದೇಹ ಕಂಡು ಶಾಕ್ ಆಗಿದ್ದಾರೆ.

Raichur News: ರಾಯಚೂರಿನಲ್ಲಿ ಬೈಕ್‌ಗೆ ಟ್ರಕ್‌ ಡಿಕ್ಕಿ, ಮೂವರು ಸ್ಥಳದಲ್ಲೇ ಸಾವು

ರಾಯಚೂರಿನಲ್ಲಿ ಬೈಕ್‌ಗೆ ಟ್ರಕ್‌ ಡಿಕ್ಕಿ, ಮೂವರು ಸ್ಥಳದಲ್ಲೇ ಸಾವು

ಮೃತರೆಲ್ಲಾ ನಗರದ ಸುಖಾಣಿ ಕಾಲೋನಿ ನಿವಾಸಿಗಳು ಎಂದು ಗುರುತಿಸಲಾಗಿದೆ. ಗಂಜ್ ವೃತ್ತದಿಂದ ಬರುತ್ತಿದ್ದ ಟ್ರಕ್ ಲಿಂಗಸುಗೂರು ರಸ್ತೆಯಿಂದ ಬರುತ್ತಿದ್ದ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೂವರು ಸವಾರರು ಸಾವನ್ನಪ್ಪಿದ್ದಾರೆ. ಪ್ರಕರಣ ಸಂಬಂಧ ರಾಯಚೂರು ನಗರ ಸಂಚಾರ ಪೊಲೀಸ್ ಠಾಣೆಯಲ್ಲಿ (Raichur City Traffic Police) ಎಫ್‌ಐಆರ್‌ ದಾಖಲಾಗಿದೆ.

Bengaluru Crime: ಬೆಂಗಳೂರಿನಲ್ಲಿ ಭೀಕರ ಅತ್ಯಾಚಾರ ದಂಧೆ, ಡ್ರಗ್ಸ್‌ ನೀಡಿ 19 ಕಾಲೇಜು ಯುವತಿಯರ ಮೇಲೆ ದೌರ್ಜನ್ಯ

ಭೀಕರ ಅತ್ಯಾಚಾರ ದಂಧೆ, ಡ್ರಗ್ಸ್‌ ನೀಡಿ 19 ಕಾಲೇಜು ಯುವತಿಯರ ಮೇಲೆ ದೌರ್ಜನ್ಯ

ತನಿಖೆಯ ವೇಳೆ ಪೊಲೀಸರಿಗೆ ಆಘಾತಕಾರಿ ವಿಷಯವೊಂದು ತಿಳಿದುಬಂದಿದೆ. ಈ ಪಾರ್ಟಿಗಳು ನಡೆಯುತ್ತಿದ್ದ ಜಕ್ಕೂರು ಸಮೀಪದ ವಿಲ್ಲಾ ಒಬ್ಬ ಹಿರಿಯ ಐಪಿಎಸ್ ಅಧಿಕಾರಿಗೆ ಸೇರಿದ್ದೆನ್ನಲಾಗಿದೆ. ಈ ಬಗ್ಗೆ ಪೊಲೀಸರು ತೀವ್ರ ಪರಿಶೀಲನೆ ನಡೆಸುತ್ತಿದ್ದಾರೆ. ಇನ್ನು ನಿಕಿಲ್ ಬಂಧನವಾಗುತ್ತಿದ್ದಂತೆಯೇ ಕೆಲವು ಪ್ರಭಾವಿಗಳು ಪೊಲೀಸರ ಮೇಲೆ ಒತ್ತಡ ಹೇರಿದ್ದರು ಎಂದೂ ಗೊತ್ತಾಗಿದೆ.

Assault case: ಕೊಡಗಿನಲ್ಲಿ ಹಿಂದೂ ಕಾರ್ಯಕರ್ತನ ಮೇಲೆ ಹಲ್ಲೆ, ಒಬ್ಬನ ಬಂಧನ

ಕೊಡಗಿನಲ್ಲಿ ಹಿಂದೂ ಕಾರ್ಯಕರ್ತನ ಮೇಲೆ ಹಲ್ಲೆ, ಒಬ್ಬನ ಬಂಧನ

ಆರೋಪಿಗಳ ಶೀಘ್ರ ಬಂಧನಕ್ಕೆ ಹಿಂದೂ ಪರ ಸಂಘಟನೆಗಳು (Hindu Organizations) ಆಗ್ರಹಿಸಿವೆ. ರಾಶೀದ್ ಸಿದ್ದಿಕ್, ಸುಹೇಲ್ ಹಾಗೂ ನಾಫಿ ಎಂಬವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ನಾಲ್ವರ ಪೈಕಿ ಸುಹೇಲ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸದ್ಯ ಸ್ಥಳದಲ್ಲಿ ಬಿಗುವಿನ ವಾತಾವರಣವಿದ್ದು, ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿದೆ.

Minister Krishna Byre Gowda: ಕಂದಾಯ ಸೇವೆಗಳ ಸಮರ್ಪಣ ಮಹಾವೇದಿಕೆಯಲ್ಲಿ ಜಿಲ್ಲೆಯ 25 ಸಾವಿರ ಕಂದಾಯ ಸೇವೆಗಳ ವಿತರಣೆ

ಕಂದಾಯ ಇಲಾಖೆಯಲ್ಲಿ ಬದಲಾವಣೆಯ ಬಿರುಗಾಳಿ

ಸಾರ್ವಜನಿಕರ ಜೀವನದೊಂದಿಗೆ ನಿಕಟ ಸಂಬಂಧ ಹೊಂದಿರುವ ಇಲಾಖೆಗಳ ಪೈಕಿ ಕಂದಾಯ ಇಲಾಖೆಗೆ ಅಗ್ರಸ್ಥಾನವಿದೆ. ಇಲ್ಲಿ ಎಲ್ಲವೂ ಸರಿಯಾಗಿದ್ದರೆ ನಾಗರೀಕರ ಬದುಕಲ್ಲ ಸಂತೋಷ ವಿರಲಿದೆ. ಇಲ್ಲಿ ತಪ್ಪಾದರೆ ಜೀವನ ಪರ್ಯಂತ ರೈತರು ಕೋರ್ಟು ಕಛೇರಿ ತಾಲೂಕು ಆಫೀಸು ಎಸಿ, ಆಫೀಸು, ಡಿ.ಸಿ.ಆಫೀಸು ಎಂದೆಲ್ಲಾ ಅಲೆಯುತ್ತಲೇ ತಮ್ಮ ಬದುಕನ್ನು ಕೊನೆಗಾಣಿಸಿ ಕೊಳ್ಳುತ್ತಾರೆ.

ಕಾಂಗ್ರೆಸ್ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಅವರಿಗೆ 'ಬಿಗ್ ರಿಲೀಫ್': ಬಾಗೇಪಲ್ಲಿಯಲ್ಲಿ ಕೈ ಕಾರ್ಯಕರ್ತರ ಭರ್ಜರಿ ವಿಜಯೋತ್ಸವ

ಕಾಂಗ್ರೆಸ್ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಅವರಿಗೆ 'ಬಿಗ್ ರಿಲೀಫ್'

ಸುಪ್ರೀಂ ಕೋರ್ಟ್ ತಡೆ ನೀಡುತ್ತಿದ್ದಂತೆ ಬಾಗೇಪಲ್ಲಿಯ ಕಾಂಗ್ರೆಸ್ ಪಾಳಯದಲ್ಲಿ ಸಂತಸ ಮೇರೆ ಮೀರಿತು. ಈ ಸಿಹಿ ಸುದ್ದಿ ಹೊರ ಬೀಳು ತ್ತಿದ್ದಂತೆ ತಾಲೂಕು ಕಚೇರಿ ಹಾಗೂ ಎಸ್. ಎನ್. ಸುಬ್ಬಾರೆಡ್ಡಿ ಚಾರಿಟಬಲ್ ಟ್ರಸ್ಟ್ ಮುಂಭಾಗದ ಮುಖ್ಯರಸ್ತೆಯಲ್ಲಿ ಜಮಾಯಿಸಿದ ನೂರಾರು ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಸಹಿ ಹಂಚಿ, ಪಟಾಕಿ ಸಿಡಿಸಿ, ಅದ್ದೂರಿ ವಿಜಯೋತ್ಸವ ಆಚರಿಸಿದರು

ಕೈ ನಾಯಕರಿಂದ ಬಾಗೇಪಲ್ಲಿ ಕ್ಷೇತ್ರಕ್ಕೆ ಮೋಸ: ಸಿಪಿಐ(ಎಂ) ಮುಖಂಡ ಡಾ.ಅನಿಲ್ ಕುಮಾರ್ ಆವುಲಪ್ಪ ಬೇಸರ

ಕೈ ನಾಯಕರಿಂದ ಬಾಗೇಪಲ್ಲಿ ಕ್ಷೇತ್ರಕ್ಕೆ ಮೋಸ

ಸಾರಾಯಿ ಮಾರಾಟ ಹಾಗೂ ರೈತರ ಜಮೀನುಗಳನ್ನು ಖರೀದಿಸಿ ರೀಯಲ್ ಎಸ್ಟೇಟ್ ನಡೆಸುವ ಮೂಲಕ ಸಂಪಾಧಿಸಿದ ಹಣ ಹಂಚಿ ಶಾಸಕರಾಗಿ ಅಯ್ಕೆಗೊಂಡವರು ಎಂದಿಗೂ ಬಡವರಿಗೆ, ಕೃಷಿಕರಿಗೆ, ಕೂಲಿ ಕಾರ್ಮಿಕರಿಗೆ ನ್ಯಾಯ ಓದಗಿಸಲು ಸಾಧ್ಯವಿಲ್ಲ. ಚುನಾವಣೆ ಸಮಯದಲ್ಲಿ ಹಾಕಿರುವ ಬಂಡವಾಳವನ್ನು ವಾಪಸ್ಸು ಪಡೆಯಲು ಭ್ರಷ್ಟಾಚಾರದ ಆಡಳಿತ ನಡೆಸಿರುವ ಸುಬ್ಬಾರೆಡ್ಡಿಯ ಭ್ರಷ್ಟಾಚಾರ ದಾಖಲೆ ಸಮೇತ ಕರ್ನಾಟಕ ಹೈ ಕೋರ್ಟ್ನಲ್ಲಿ ಸಾಬೀತಾಗಿದೆ

ಮಾರ್ಚ್ 1ರಂದು ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ

ಮಾರ್ಚ್ 1ರಂದು ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ

ಜಗದ್ಗುರು ಶ್ರೀ ರೇಣುಕಾಚಾರ್ಯರು ಮಹಾನ್ ಶರಣರು, ಗುರುಶೇಷ್ಠರು. ಕನ್ನಡ ಭಾಷೆಯಲ್ಲಿ ಬದುಕು ಮತ್ತು ಪುರಾಣ ತತ್ವ ಸಿದ್ದಾಂತಗಳ ಹಲವು ಪುರಾಣ, ಗ್ರಂಥಗಳು ಇದೆ. ರಾಜ್ಯ ಸರ್ಕಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಜಗದ್ದುರು ಶ್ರೀ ರೇಣುಕಾಚಾರ್ಯ ಜಯಂತಿ ಯನ್ವು ಅಚರಿಸುತ್ತಿದ್ದಾರೆ.

ವಚನ ಗ್ಲೋಬಲ್ ವಿಶ್ವವಿದ್ಯಾಲಯ ಸ್ಥಾಪನೆಗೆ ಭೂಮಿ, ಅನುದಾನ ಕಲ್ಪಿಸಿ: ಸಿಎಂಗೆ ಲಿಂಗಾಯತ ಮಠಾಧಿಪತಿಗಳ ಒಕ್ಕೂಟ ಮನವಿ

ವಚನ ಗ್ಲೋಬಲ್ ವಿಶ್ವವಿದ್ಯಾಲಯ ಸ್ಥಾಪನೆಗೆ ನೆರವು ನೀಡಲು ಸಿಎಂಗೆ ಮನವಿ

Vachana Global University: ಬಸವ ತತ್ವವನ್ನು ಅನುಷ್ಠಾನಕ್ಕೆ ತರುವ ನಿಟ್ಟಿನಲ್ಲಿ ವಚನ ಗ್ಲೋಬಲ್ ವಿಶ್ವವಿದ್ಯಾಲಯವನ್ನು ಸಾರ್ವಜನಿಕ ದತ್ತಿಯ ಅಡಿಯಲ್ಲಿ ಸ್ಥಾಪನೆ ಮಾಡಲು ಭಾಲ್ಕಿಯ ಹಿರೇಮಠ ಸಂಸ್ಥಾನ ವಿದ್ಯಾಪೀಠ ಟ್ರಸ್ಟ್ ಮುಂದಾಗಿದೆ. ಇದಕ್ಕಾಗಿ ಅಗತ್ಯ ಅನುದಾನ ಮತ್ತು ಭೂಮಿ ಮಂಜೂರು ಮಾಡಲು ಕೋರಿ ಸಿಎಂ ಸಿದ್ದರಾಮಯ್ಯ ಅವರಿಗೆ ಲಿಂಗಾಯತ ಮಠಾಧಿಪತಿಗಳ ಒಕ್ಕೂಟ ಮನವಿ ಮಾಡಿದೆ.

ವಿಕಲಚೇತನರಿಗೆ ನೆರವು: ಮಾರ್ಚ್ 1 ರಂದು ಬೆಂಗಳೂರಿನಲ್ಲಿ ನಾರಾಯಣ ಸೇವಾ ಸಂಸ್ಥಾನದಿಂದ ಉಚಿತ ಕೃತಕ ಕಾಲು ಅಳವಡಿಕಾ ಶಿಬಿರ ಆಯೋಜನೆ

ಸುಮಾರು 640 ವಿಕಲಚೇತನರಿಗೆ ಕೃತಕ ಕಾಲು ಹಾಗೂ ಕ್ಯಾಲಿಪರ್‌ ಗಳ ವಿತರಣೆ

ಶಿಬಿರದಲ್ಲಿ ಸುಮಾರು 640 ವಿಕಲಚೇತನರಿಗೆ ಉಚಿತವಾದಿ ಕೃತಕ ಕಾಲು ಮತ್ತು ಕ್ಯಾಲಿಪರ್‌ ಗಳನ್ನು ಅಳವಡಿಸಲಾಗುತ್ತಿದ್ದು, ಇದು ಈ ಭಾಗದ ಅತಿದೊಡ್ಡ ನೆರವು ಯೋಜನೆಗಳಲ್ಲಿ ಒಂದಾಗಿದೆ. ಸುಮಾರು 550 ಫಲಾನುಭವಿಗಳಿಗೆ ಸುಧಾರಿತ ಅತ್ಯಾಧುನಿಕ 'ನಾರಾಯಣ ಕೃತಕ ಕಾಲು' ಗಳನ್ನು ಹಾಗೂ ಸುಮಾರು 50 ಜನರಿಗೆ ಕ್ಯಾಲಿಪರ್‌ ಗಳನ್ನು ನೀಡಲಾಗುವುದು

AI ಚಾಲಿತ Amazon.in ನ 'ಹೋಳಿ ಸ್ಟೋರ್' ಈಗ ಲೈವ್...

AI ಚಾಲಿತ Amazon.in ನ 'ಹೋಳಿ ಸ್ಟೋರ್' ಈಗ ಲೈವ್...

Amazon AI-ಚಾಲಿತ ಪರಿಕರಗಳೊಂದಿಗೆ ಹೋಳಿ ಶಾಪಿಂಗ್ ಅನ್ನು ಸರಳ ಮತ್ತು ಸುಲಭ ಗೊಳಿಸುತ್ತಿದೆ. ಅಮೆಜಾನ್‌ನ AI-ಚಾಲಿತ ಶಾಪಿಂಗ್ ಅಸಿಸ್ಟೆಂಟ್ ಆದ ರೂಫಸ್ ನೊಂದಿಗೆ, ಗ್ರಾಹಕರು ಉತ್ಪನ್ನಗಳನ್ನು ಅನ್ವೇಷಿಸಬಹುದು ಮತ್ತು ವೈಯಕ್ತಿಕಗೊಳಿಸಿದ ಶಿಫಾರಸುಗಳನ್ನು ಪಡೆಯಬಹುದು, ಇದು ಅವರ ಶಾಪಿಂಗ್ ಅನುಭವವನ್ನು ಹೆಚ್ಚು ವೈಯಕ್ತಿಕ ಮತ್ತು ಅನುಕೂಲಕರವಾಗಿಸುತ್ತದೆ.

ಉದ್ಯೋಗಾಕಾಂಕ್ಷಿಗಳ ಕಿವಿಗೆ ಚೆಂಡು ಹೂವು; ಸಿಎಂ, ಸಚಿವರ ರಾಜೀನಾಮೆಗೆ ಎ.ನಾರಾಯಣಸ್ವಾಮಿ ಆಗ್ರಹ

ಸಿಎಂ, ಸಚಿವರ ರಾಜೀನಾಮೆಗೆ ಎ.ನಾರಾಯಣಸ್ವಾಮಿ ಆಗ್ರಹ

ತಮಿಳುನಾಡು ರಾಜ್ಯದಲ್ಲಿ ಮೀಸಲಾತಿ ಹೆಚ್ಚಳವನ್ನು ಸಂವಿಧಾನದ 9ನೇ ಅನುಸೂಚಿಗೆ ಸೇರ್ಪಡೆ ಮಾಡಿ, ಶೇ.69 ಮೀಸಲಾತಿ ಕೊಡುತ್ತಿದೆ. ನಿಮಗೆ ಒಳ ಮೀಸಲಾತಿ ಬಗ್ಗೆ ಹೈಕೋರ್ಟ್, ಸುಪ್ರೀಂ ಕೋರ್ಟಿನಲ್ಲಿ ಹೇಗೆ ವಾದ ಮಾಡಬೇಕೆಂದು ಗೊತ್ತಿದೆ. ಆದರೆ, ನಿಮಗೆ ಅದರ ಬಗ್ಗೆ ಆಸಕ್ತಿ ಇಲ್ಲ ಎಂದು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಬೆಂಗಳೂರು ಗ್ಯಾಂಗ್‌ ರೇಪ್‌ ಕೇಸ್‌; ಆರೋಪಿಗಳಾದ ನಿಖಿಲ್, ಡಿಕ್ಸನ್‌ನಿಂದ 19 ಯುವತಿಯರ ಮೇಲೆ ಲೈಂಗಿಕ ದೌರ್ಜನ್ಯ!

ಡ್ರಗ್ಸ್‌, ಮದ್ಯ ಕುಡಿಸಿ 19 ಯುವತಿಯರ ಮೇಲೆ ಲೈಂಗಿಕ ದೌರ್ಜನ್ಯ!

ಬೆಂಗಳೂರು ಕಾಲೇಜು ಯುವತಿಯ ಮೇಲೆ ನಡೆದಿದ್ದ ಸಾಮೂಹಿಕ ಅತ್ಯಾಚಾರ ಪ್ರಕರಣದ ತನಿಖೆ ವೇಳೆ ಬೆಚ್ಚಿಬೀಳಿಸುವ ಅಂಶಗಳು ಬಯಲಾಗಿವೆ. ಆರೋಪಿಗಳಾದ ನಿಖಿಲ್‌ ಮತ್ತು ಡಿಕ್ಸನ್‌ ಗ್ಯಾಂಗ್‌, ಇನ್‌ಸ್ಟಾಗ್ರಾಮ್ ಮೂಲಕ ಯುವತಿಯರ ಜತೆ ಸ್ನೇಹ ಬೆಳೆಸುತ್ತಿದ್ದರು. ಗೆಳೆತನ ಗಾಢವಾದ ಮೇಲೆ, ಜಕ್ಕೂರು ಬಳಿಯ ವಿಲ್ಲಾದಲ್ಲಿ ದೊಡ್ಡ ಪಾರ್ಟಿ ಇದೆ ಎಂದು ಕರೆದೊಯ್ದು ಸುಮಾರು 19 ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

DK Shivakumar: ನನ್ನ ಪರವಾಗಿ ಯಾರೂ ದೆಹಲಿಗೆ ಹೋಗುವುದು ಬೇಡ: ಡಿ.ಕೆ. ಶಿವಕುಮಾರ್

ನನ್ನ ಪರವಾಗಿ ಯಾರೂ ದೆಹಲಿಗೆ ಹೋಗುವುದು ಬೇಡ: ಡಿ.ಕೆ.ಶಿವಕುಮಾರ್‌

DK Shivakumar: ನಾನು, ಪರಮೇಶ್ವರ್, ಎಚ್.ಕೆ. ಪಾಟೀಲ್, ಮಹದೇವಪ್ಪ, ಸಿದ್ದರಾಮಯ್ಯ ಸೇರಿದಂತೆ ನಾವು ಈಗ ಹಳಬರಾದೆವು. ಚಿಕ್ಕ ವಯಸ್ಸಿನಲ್ಲೇ ಮಂತ್ರಿಯಾದವರು. ಈಗ ಹೊಸಬರು ಮಂತ್ರಿ ಆಗಬೇಕು ಎಂಬ ಆಸೆ ವ್ಯಕ್ತಪಡಿಸುತ್ತಿದ್ದಾರೆ. ನೋಡೋಣ, ನಾನು ಈ ವಿಚಾರವನ್ನು ದೆಹಲಿ ಅವರ ಗಮನಕ್ಕೆ ತರುತ್ತೇನೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ತಿಳಿಸಿದ್ದಾರೆ.

ಮೇ ತಿಂಗಳಲ್ಲಿ ಚಿತ್ರದುರ್ಗದಲ್ಲಿ ಯಡಿಯೂರಪ್ಪರಿಗೆ ಅಭಿನಂದನಾ ಕಾರ್ಯಕ್ರಮ: ಗೋವಿಂದ ಕಾರಜೋಳ

ಮೇ ತಿಂಗಳಲ್ಲಿ ಬಿ.ಎಸ್‌.ಯಡಿಯೂರಪ್ಪ ಅವರಿಗೆ ಅಭಿನಂದನೆ ಕಾರ್ಯಕ್ರಮ

Govind Karajol: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ನಾಡಿನ ಗಣ್ಯರೆಲ್ಲಾ ಸೇರಿ ಮೇ ತಿಂಗಳಲ್ಲಿ ಅಭಿನಂದನಾ ಕಾರ್ಯಕ್ರಮ ಮಾಡಲು ನಿರ್ಧರಿಸಲಾಗಿದೆ ಎಂದು ಮಾಜಿ ಉಪ ಮುಖ್ಯಮಂತ್ರಿ ಮತ್ತು ಸಂಸದ ಗೋವಿಂದ ಕಾರಜೋಳ ತಿಳಿಸಿದ್ದಾರೆ.

Sourabha 2026: ನಾಳೆ ಸೌರಭ 2026 ಅಂತರ ಕಾಲೇಜು ರಂಗ ಸ್ಪರ್ಧೆಯ ಬಹುಮಾನ ವಿತರಣೆ, ಸಮಾರೋಪ ಸಮಾರಂಭ

ನಾಳೆ ಸೌರಭ 2026 ರಂಗ ಸ್ಪರ್ಧೆಯ ಬಹುಮಾನ ವಿತರಣೆ, ಸಮಾರೋಪ

ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದ ಆವರಣದ ಸಂಸ ಬಯಲು ರಂಗ ಮಂದಿರದಲ್ಲಿ ಫೆ.28ರ ಸಂಜೆ 5.30ಕ್ಕೆ ಸೌರಭ 2026 ರಾಜ್ಯಮಟ್ಟದ ಅಂತರ ಕಾಲೇಜು ರಂಗ ಸ್ಪರ್ಧೆಯ ಬಹುಮಾನ ವಿತರಣೆ ಹಾಗೂ ಸಮಾರೋಪ ಸಮಾರಂಭವನ್ನು ಆಯೋಜಿಸಲಾಗಿದೆ. ಕಾರ್ಯಕ್ರಮದ ಕುರಿತಾದ ಮಾಹಿತಿ ಇಲ್ಲಿದೆ.

Kichcha Sudeep: ಚಿಕ್ಕನಾಯಕನಹಳ್ಳಿಗೆ ಶನಿವಾರ ‘ಕಿಚ್ಚ’ನ ಲಗ್ಗೆ; ಹೊಸ ಚಿತ್ರದ ಟೈಟಲ್ ಟೀಸರ್ ಲಾಂಚ್

ಚಿಕ್ಕನಾಯಕನಹಳ್ಳಿಗೆ ಶನಿವಾರ ನಟ ಕಿಚ್ಚ ಸುದೀಪ್‌ ಭೇಟಿ

ನಟ ಸುದೀಪ್ ಅವರ ಆಗಮನದ ಸುದ್ದಿ ತಿಳಿಯುತ್ತಿದ್ದಂತೆಯೇ ಇಡೀ ಚಿಕ್ಕನಾಯಕನಹಳ್ಳಿ ಪಟ್ಟಣದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದೆ. ಡಿವಿಪಿ ಶಾಲಾ ಮೈದಾನದಲ್ಲಿ ಚಿತ್ರತಂಡದಿಂದ ಬೃಹತ್ ವೇದಿಕೆ ನಿರ್ಮಾಣವಾಗುತ್ತಿದ್ದು, ಕಿಚ್ಚನ ಅಭಿಮಾನಿಗಳು ತಮ್ಮ ನೆಚ್ಚಿನ ನಟನನ್ನು ನೋಡಲು ಕಾತುರದಿಂದ ಕಾಯುತ್ತಿದ್ದಾರೆ.

GAFX Bengaluru 2026: 2028ರ ವೇಳೆಗೆ ಸುಮಾರು 50 ಸಾವಿರ ವಿದ್ಯಾರ್ಥಿಗಳಿಗೆ ಎವಿಜಿಸಿ- ಎಕ್ಸ್‌ಆರ್ ತರಬೇತಿ ಗುರಿ: ಡಿ.ಕೆ. ಶಿವಕುಮಾರ್

50 ಸಾವಿರ ವಿದ್ಯಾರ್ಥಿಗಳಿಗೆ ಎವಿಜಿಸಿ- ಎಕ್ಸ್‌ಆರ್ ತರಬೇತಿ: ಡಿಕೆಶಿ

DK Shivakumar: ಎವಿಜಿಸಿ- ಎಕ್ಸ್ ಆರ್ ವಿಭಾಗದಲ್ಲಿ 2028ರ ವೇಳೆಗೆ ಸುಮಾರು 50,000 ವಿದ್ಯಾರ್ಥಿಗಳಿಗೆ ತರಬೇತಿ ನೀಡುವ ಗುರಿ ಹೊಂದಲಾಗಿದೆ. ಸುಮಾರು 70% ಉದ್ಯೋಗಿಗಳು ಸೃಜನಶೀಲ ವೃತ್ತಿಪರರಾಗಿದ್ದಾರೆ. ಈ ಮೂಲಕ, 2028ರ ವೇಳೆಗೆ 30,000ಕ್ಕೂ ಹೆಚ್ಚು ಉತ್ತಮ ಗುಣಮಟ್ಟದ ಉದ್ಯೋಗಗಳನ್ನು ಸೃಷ್ಟಿಸುವ ಗುರಿ ಹೊಂದಲಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

Loading...