ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ
ಕರ್ನಾಟಕ
Vishnuvardhan: ತಮಿಳು ಯುಟ್ಯೂಬರ್‌ನಿಂದ ಸಾಹಸಸಿಂಹ ವಿಷ್ಣು ಗೇಲಿ, ಕನ್ನಡಿಗರ ಆಕ್ರೋಶ

ತಮಿಳು ಯುಟ್ಯೂಬರ್‌ನಿಂದ ಸಾಹಸಸಿಂಹ ವಿಷ್ಣು ಗೇಲಿ, ಕನ್ನಡಿಗರ ಆಕ್ರೋಶ

Vishnuvardhan: ʼಕೋಟಿಗೊಬ್ಬʼ ಚಿತ್ರದಲ್ಲಿ ನಟ ವಿಷ್ಣುವರ್ಧನ್ ಅಭಿನಯವನ್ನು ತಮಿಳಿನ ಯೂಟ್ಯೂಬರ್ ಹೀಯಾಳಿಸಿದ್ದಾನೆ. ಈ ಸಿನಿಮಾದಲ್ಲಿ ಕಾಲಿನಿಂದ ವಿಲನ್‌ನನ್ನು ಹಗ್ಗದಿಂದ ಕಟ್ಟಿ ಹಾಕುವ ದೃಶ್ಯ ಮತ್ತು ಸಿಂಹ ವಿಷ್ಣು ರೂಪ ಪಡೆಯುವ ಗ್ರಾಫಿಕ್ಸ್ ಅನ್ನು ಈತ ಟೀಕಿಸಿದ್ದಾನೆ.

Fire Accident: ಚಲಿಸುತ್ತಿದ್ದ ರೈಲಿನಲ್ಲಿ ಬೆಂಕಿ, ಬೆಂಗಳೂರಿನಲ್ಲಿ ತಪ್ಪಿದ ಭಾರಿ ಅನಾಹುತ

ಚಲಿಸುತ್ತಿದ್ದ ರೈಲಿನಲ್ಲಿ ಬೆಂಕಿ, ಬೆಂಗಳೂರಿನಲ್ಲಿ ತಪ್ಪಿದ ಭಾರಿ ಅನಾಹುತ

Fire Accident: ಬೆಂಗಳೂರು ದಕ್ಷಿಣ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ವಂದಾರಗುಪ್ಪೆ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಉದಯಪುರ ಎಕ್ಸ್‌ಪ್ರೆಸ್ ರೈಲಿನ ಇಂಜಿನ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಮೈಸೂರಿನಿಂದ ಬೆಂಗಳೂರಿಗೆ ಈ ಎಕ್ಸ್‌ಪ್ರೆಸ್ ರೈಲು ತೆರಳುತ್ತಿತ್ತು. ಸದ್ಯ ಭಾರಿ ಅನಾಹುತ ತಪ್ಪಿದೆ.‌

Om Prakash Murder: ಕೊಲೆಯಾದ ನಿವೃತ್ತ ಡಿಜಿ ಓಂಪ್ರಕಾಶ್‌ ಪುತ್ರಿಯಿಂದ ನಂದಿನಿ ಬೂತ್‌ನಲ್ಲಿ ರಂಪಾಟ

ನಿವೃತ್ತ ಡಿಜಿ ಓಂ ಪ್ರಕಾಶ್‌ ಪುತ್ರಿಯಿಂದ ನಂದಿನಿ ಬೂತ್‌ನಲ್ಲಿ ರಂಪಾಟ

Om Prakash Murder case: ಓಂಪ್ರಕಾಶ್‌ ಪತ್ನಿ ಹಾಗೂ ಪುತ್ರಿ ಇಬ್ಬರೂ ಮಾನಸಿಕವಾಗಿ ಅಸ್ಥಿರರಾಗಿರುವುದು ಕಂಡುಬಂದಿದೆ. ಪತ್ನಿ ಈಗಾಗಲೇ ಓಂಪ್ರಕಾಶ್‌ ಕೊಲೆ ಆರೋಪಿಯಾಗಿದ್ದು ಜೈಲುಪಾಲಾಗಿದ್ದಾರೆ. ಕೃತಿಯ ಅತಿಯಾದ ವರ್ತನೆಯಿಂದ ಬೇಸತ್ತು ಬಂಧುಬಳಗದವರು, ಸ್ನೇಹಿತರು ಆಕೆಯಿಂದ ದೂರವಾಗಿದ್ದಾರೆ.

Road Accident: ಯೋಗ ಗುರು ವಚನಾನಂದ ಶ್ರೀಗಳ ಸಹೋದರ ರಸ್ತೆ ಅಪಘಾತದಲ್ಲಿ ಸಾವು

ಯೋಗ ಗುರು ವಚನಾನಂದ ಶ್ರೀಗಳ ಸಹೋದರ ರಸ್ತೆ ಅಪಘಾತದಲ್ಲಿ ಸಾವು

Road Accident: ಅಶೋಕ ಅವರು ಚಲಾಯಿಸುತ್ತಿದ್ದ ಬೈಕ್‌ಗೆ ನಾಯಿ ದಿಡೀರನೆ ಅಡ್ಡಬಂದ ಪರಿಣಾಮ ಘಟನೆ ಸಂಭವಿಸಿದೆ. ಬೈಕ್‌ ಪಲ್ಟಿಯಾಗಿ ಅಶೋಕ ಅವರು ರಸ್ತೆಗೆ ಚಿಮ್ಮಿಬಿದ್ದಿದ್ದು, ಮೃತಪಟ್ಟಿದ್ದಾರೆ. ಮೃತ ಅಶೋಕ ತಾಯಿ, ಮಡದಿ, ಮೂವರು ಹೆಣ್ಣುಮಕ್ಕಳು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Gold Price Today: ಚಿನ್ನದ ದರದಲ್ಲಿ ಮತ್ತೆ ಏರಿಕೆ; ಇಂದಿನ ರೇಟ್‌ ಚೆಕ್‌ ಮಾಡಿ

ಇಂದು ಚಿನ್ನದ ದರ ಎಷ್ಟಿದೆ? ಇಲ್ಲಿ ಚೆಕ್‌ ಮಾಡಿ

Gold Price Today on 03 july 2025: 24 ಕ್ಯಾರಟ್‌ 1 ಗ್ರಾಂ ಚಿನ್ನದ ದರದಲ್ಲಿ 44 ರೂ. ಏರಿಕೆಯಾಗಿದ್ದು, 9,933 ರೂ.ಗೆ ಬಂದು ನಿಂತಿತ್ತು. ಇಂದು 22 ಕ್ಯಾರಟ್‌ನ 8 ಗ್ರಾಂ ಚಿನ್ನ 72,840 ರೂ. ಬೆಲೆ ಬಾಳಿದರೆ, 10 ಗ್ರಾಂಗೆ ನೀವು 91,050 ರೂ. ಮತ್ತು 100 ಗ್ರಾಂಗೆ 9,10,500 ರೂ. ನೀಡಬೇಕಾಗುತ್ತದೆ. 24 ಕ್ಯಾರಟ್‌ನ 8 ಗ್ರಾಂ ಚಿನ್ನ 79,464 ರೂ. ಬೆಲೆ ಬಾಳಿದರೆ, 10 ಗ್ರಾಂಗೆ ನೀವು 99,330 ರೂ. ಮತ್ತು 100 ಗ್ರಾಂಗೆ 9,93,300 ರೂ. ಪಾವತಿಸಬೇಕಾಗುತ್ತದೆ.

Road Accident: ಕಾರು ಮರಕ್ಕೆ ಡಿಕ್ಕಿ, ಗರ್ಭಿಣಿ ರುಂಡ ಕತ್ತರಿಸಿ ಸಾವು

ಕಾರು ಮರಕ್ಕೆ ಡಿಕ್ಕಿ, ಗರ್ಭಿಣಿ ರುಂಡ ಕತ್ತರಿಸಿ ಸಾವು

Road Accident: ಅರ್ಚನಾ ಅವರ ಗ್ರಾಮ ಕೊರಚನೂರಿಗೆ ಕರೆದುಕೊಂಡು ಹೋಗುತ್ತಿದ್ದ ವೇಳೆ ಎದುರಿಗೆ ವೇಗವಾಗಿ ಬಂದ ಲಾರಿ ತಪ್ಪಿಸಲು ಹೋಗಿ ಮರಕ್ಕೆ ಕಾರು ಡಿಕ್ಕಿ ಹೊಡೆದಿದೆ. ಪರಿಣಾಮ ಕಾರಿನಲ್ಲಿದ್ದ ಅರ್ಚನಾ ದೇಹದಿಂದ ರುಂಡ ಹಾಗೂ ಎಡಗೈ ಭಾಗ ಪ್ರತ್ಯೇಕವಾಗಿದೆ. ಪರಿಣಾಮ ಸ್ಥಳದಲ್ಲೇ ಮಹಿಳೆ ಸಾವನ್ನಪ್ಪಿದ್ದಾರೆ.

Toll hike: ಬೆಂಗಳೂರು- ನೆಲಮಂಗಲ ಟೋಲ್‌ಗೂ ದರ ಏರಿಕೆ, ನೈಸ್‌ ರಸ್ತೆಯೂ ದುಬಾರಿ

ಬೆಂಗಳೂರು- ನೆಲಮಂಗಲ ಟೋಲ್‌ಗೂ ದರ ಏರಿಕೆ, ನೈಸ್‌ ರಸ್ತೆಯೂ ದುಬಾರಿ

Toll hike: ರಾಜಧಾನಿಯನ್ನು ಸುತ್ತುವರಿದಿರುವ ನೈಸ್‌ ರಸ್ತೆಯಲ್ಲಿ, ಅತ್ತಿಬೆಲೆ- ಎಲೆಕ್ಟ್ರಾನಿಕ್‌ ಸಿಟಿ ಎಲಿವೇಟೆಡ್‌ ಕಾರಿಡಾರ್‌ಗಳಲ್ಲಿ ನಿನ್ನೆ ಟೋಲ್‌ ದರ ಏರಿಕೆ ಮಾಡಲಾಗಿತ್ತು. ಇದೀಗ ನೆಲಮಂಗಲ ಫ್ಲೈಓವರ್‌ನಲ್ಲೂ ಟೋಲ್‌ ಏರಿಕೆಯಾಗಿದೆ. ಜುಲೈ 1ರಿಂದ ಜಾರಿಗೆ ಬಂದಿರುವ ಒಟ್ಟಾರೆ ಎಲ್ಲ ಎಲಿವೇಟೆಡ್‌ ರಸ್ತೆ ಹಾಗೂ ನೈಸ್‌ ರಸ್ತೆಗಳ ದರ ವಿವರ ಇಲ್ಲಿದೆ.

Jewel Fashion 2025: ಸೀಸನ್‌ನಲ್ಲಿ ಟ್ರೆಂಡಿಯಾದ ವೈವಿಧ್ಯಮಯ ಪರ್ಲ್ ನೆಕ್ಲೇಸ್‌ಗಳಿವು

ಸೀಸನ್‌ನಲ್ಲಿ ಟ್ರೆಂಡಿಯಾದ ವೈವಿಧ್ಯಮಯ ಪರ್ಲ್ ನೆಕ್ಲೇಸ್‌ಗಳಿವು

Jewel Fashion 2025: ಆಭರಣ ಲೋಕದಲ್ಲಿ ನಾನಾ ಬಗೆಯ ಪರ್ಲ್ ನೆಕ್ಲೇಸ್‌ಗಳು ಆಗಮಿಸಿವೆ. ಅವುಗಳಲ್ಲಿ 4 ವಿನ್ಯಾಸದ ಪರ್ಲ್ ಆಭರಣಗಳು ಅತಿ ಹೆಚ್ಚು ಟ್ರೆಂಡ್‌ನಲ್ಲಿವೆ. ಅವು ಯಾವುವು? ಸ್ಟೈಲಿಂಗ್ ಹೇಗೆ? ಈ ಕುರಿತಂತೆ ಜ್ಯುವೆಲರಿ ಡಿಸೈನರ್‌ಗಳು ವಿವರಿಸಿದ್ದಾರೆ.

N Ravikumar: ಸಿಎಸ್‌ ಬಗ್ಗೆ ಅವಹೇಳನದ ಮಾತು, ಬಿಜೆಪಿಯ ರವಿಕುಮಾರ್‌ ಮೇಲೆ ಕೇಸ್‌

ಸಿಎಸ್‌ ಬಗ್ಗೆ ಅವಹೇಳನದ ಮಾತು, ಬಿಜೆಪಿಯ ರವಿಕುಮಾರ್‌ ಮೇಲೆ ಕೇಸ್‌

N Ravikumar: ವಿಧಾನಸೌಧದಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವಿಧಾನಪರಿಷತ್​ ವಿಪಕ್ಷ ಮುಖ್ಯ ಸಚೇತಕ ಎನ್​ ರವಿಕುಮಾರ್ ಅವರು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂದು ಸುದ್ದಿಯಾಗಿತ್ತು.

Heart Attack: ಹೃದಯಾಘಾತಕ್ಕೆ ಮತ್ತೊಂದು ಯುವಜೀವ ಬಲಿ, ಕ್ಲಾಸಿನಲ್ಲೇ ವಿದ್ಯಾರ್ಥಿ ಸಾವು

ಹೃದಯಾಘಾತಕ್ಕೆ ಮತ್ತೊಂದು ಯುವಜೀವ ಬಲಿ, ಕ್ಲಾಸಿನಲ್ಲೇ ವಿದ್ಯಾರ್ಥಿ ಸಾವು

Heart Attack: ರಾಜ್ಯದಲ್ಲಿ ಹಠಾತ್‌ ಹೃದಯಾಘಾತಕ್ಕೆ ಬಲಿಯಾಗುವವರ ಸಂಖ್ಯೆ ಹೆಚ್ಚಾಗುತ್ತಿದ್ದು, ಬುಧವಾರ ಹಾವೇರಿಯಲ್ಲಿ ಇಬ್ಬರು, ಹಾಸನ, ಹುಬ್ಬಳ್ಳಿ, ಚಾಮರಾಜನಗರ, ಬೆಂಗಳೂರು ಹೊರವಲಯದ ಹೊಸಕೋಟೆಯಲ್ಲಿ ತಲಾ ಒಬ್ಬರು ಸೇರಿ 6 ಮಂದಿ ಮೃತಪಟ್ಟಿದ್ದಾರೆ. ಹುಬ್ಬಳ್ಳಿಯಲ್ಲಿ ವಿದ್ಯಾರ್ಥಿ ಸಾವಿಗೀಡಾಗಿದ್ದಾನೆ.

Heart Attack: ಹೆಚ್ಚುತ್ತಿರುವ ಹೃದಯಾಘಾತಗಳಿಗೂ ಕೋವಿಡ್‌ ಲಸಿಕೆಗೂ ಸಂಬಂಧವಿಲ್ಲ: ಕೇಂದ್ರ ಸ್ಪಷ್ಟನೆ

ಹೃದಯಾಘಾತಗಳಿಗೂ ಕೋವಿಡ್‌ ಲಸಿಕೆಗೂ ಸಂಬಂಧವಿಲ್ಲ: ಕೇಂದ್ರ ಸ್ಪಷ್ಟನೆ

Heart Attack: ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಪತ್ರಿಕಾ ಪ್ರಕಟಣೆಯ ಪ್ರಕಾರ, ಹಠಾತ್ ವಿವರಿಸಲಾಗದ ಸಾವುಗಳ ವಿಷಯವನ್ನು ದೇಶದ ಹಲವಾರು ಸಂಸ್ಥೆಗಳ ಮೂಲಕ ತನಿಖೆ ಮಾಡಲಾಗಿದೆ. COVID-19 ಲಸಿಕೆ ಮತ್ತು ದೇಶದಲ್ಲಿನ ಹಠಾತ್ ಸಾವುಗಳ ವರದಿಗಳ ನಡುವೆ ಯಾವುದೇ ನೇರ ಸಂಬಂಧವಿಲ್ಲ ಎಂದು ಈ ಅಧ್ಯಯನಗಳು ತಿಳಿಸಿವೆ ಎಂದಿದೆ.

Star Saree Fashion 2025: ಕಲಾಂಕಾರಿ ಸೀರೆಯಲ್ಲಿ ನಟಿ ಮೌನ ಗುಡ್ಡೆಮನೆಯ ರೆಟ್ರೊ ಲುಕ್‌

ಕಲಾಂಕಾರಿ ಸೀರೆಯಲ್ಲಿ ನಟಿ ಮೌನ ಗುಡ್ಡೆಮನೆಯ ರೆಟ್ರೊ ಲುಕ್‌

Star Saree Fashion 2025: ರಾಮಾಚಾರಿ ಸೀರಿಯಲ್‌ ಖ್ಯಾತಿಯ ನಟಿ ಮೌನ ಗುಡ್ಡೆಮನೆ ಉಟ್ಟಿರುವ ಕಲಾಂಕಾರಿ ಪ್ರಿಂಟೆಡ್‌ ಸೀರೆಯಲ್ಲಿನ ರೆಟ್ರೊ ಲುಕ್‌ ಎಲ್ಲರ ಮನ ಗೆದ್ದಿದೆ. ಅವರ ಈ ಲುಕ್‌ ಬಗ್ಗೆ ಫ್ಯಾಷನ್‌ ವಿಮರ್ಶಕರು ಏನು ಹೇಳಿದ್ದಾರೆ? ಈ ಲುಕ್‌ ಪಡೆಯುವವರು ಯಾವ ರೀತಿ ಸ್ಟೈಲಿಂಗ್‌ ಮಾಡಬಹುದು ಇಲ್ಲಿದೆ ವಿವರ.

Karnataka Weather: ಇಂದಿನ ಹವಾಮಾನ; ಕರಾವಳಿ ಸೇರಿ ಈ ಜಿಲ್ಲೆಗಳಲ್ಲಿ ಬಿರುಸಿನ ಮಳೆ ಸಾಧ್ಯತೆ!

ಇಂದಿನ ಹವಾಮಾನ; ಕರಾವಳಿ ಸೇರಿ ಈ ಜಿಲ್ಲೆಗಳಲ್ಲಿ ಭಾರಿ ಮಳೆ!

Karnataka Weather: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಬಿರುಗಾಳಿ ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 29°C ಮತ್ತು 20°C ಇರುವ ಸಾಧ್ಯತೆ ಇದೆ.

Chikkaballapur News: ಹೆಚ್.ಎನ್.ವ್ಯಾಲಿ ೩ನೇ ಹಂತದ ಶುದ್ಧೀಕರಣ ರೈತರಿಂದ ಕೂಗು ಬಂದರೆ ಮಾಡುವ ಭರವಸೆ

ಸಫಲವಾದ ನಂದಿಬೆಟ್ಟದ ಸಚಿವ ಸಂಪುಟ ಸಭೆ :  ಜಿಲ್ಲೆಗೆ ಬಂದ 700 ಕೋಟಿ ಅನುದಾನ

ಎತ್ತಿನಹೊಳೆ ಯೋಜನೆಗೆ ಒಟ್ಟು ೨೩೨೫೧ ಕೋಟಿ ಪರಿಷ್ಕೃತ ಅಂದಾಜು ಮಾಡಲಾಗಿದ್ದು, ಇಲ್ಲಿಯ ವರೆಗೂ ೧೭೧೪೭ ಕೋಟಿ ಖರ್ಚು ಮಾಡಲಾಗಿದ್ದು ಇಲ್ಲಿ ಲಭ್ಯವಿರುವ ೨೪.೧ ಟಿಎಂಸಿ ನೀರಿನಲ್ಲಿ ಕುಡಿಯಲು ಮಾತ್ರ ೧೪ ಟಿಎಂಸಿ ನೀರು ಬಳಕೆಯಾಗಲಿದೆ. ಉಳಿದ ೮ ಟಿಎಂಸಿ ಕೃಷಿಗೆ ಒದಗಿಸಲಾಗು ವುದು.

50 ಕೋಟಿ ವೆಚ್ಚದ ನೂತನ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಶಂಕುಸ್ಥಾಪನೆ ನೆರವೇರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಇತಿಹಾಸ ಪ್ರಸಿದ್ಧ ನಂದಿ ಬೆಟ್ಟದ ಮೇಲೆ ಪ್ರವಾಸೋದ್ಯಮ ಇಲಾಖೆ ನಿರ್ಮಿಸಿದ್ದ ಮಯೂರ ಫೈನ್ ಟಾಫ್ ಸನ್ ರೈಸ್  ರೆಸ್ಟೋರೆಂಟ್ ಕಟ್ಟಡವನ್ನು ನೆಲಸಮಗೊಳಿಸಿ ಅದೇ ಜಾಗದಲ್ಲಿ 50 ಕೋಟಿ ವೆಚ್ಚದ ನೂತನ ರೆಸ್ಟೋರೆಂಟ್ ನಿರ್ಮಾಣಕ್ಕೆ ಮುಖ್ಯಮಂತ್ರಿ ಸಿದ್ದರಾ ಮಯ್ಯ ಭೂಮಿ ಪೂಜೆ ನೆರವೇರಿಸಿದರು.

Bengaluru City University: ಬೆಂಗಳೂರು ನಗರ ವಿವಿಗೆ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಹೆಸರು; ಕ್ಯಾಬಿನೆಟ್‌ ಸಭೆಯಲ್ಲಿ ಅನುಮೋದನೆ

ಬೆಂಗಳೂರು ನಗರ ವಿವಿಗೆ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಹೆಸರು

Bengaluru City University: ದೇಶದ ಪ್ರಧಾನಿಗಳಾಗಿ ಬೆಂಗಳೂರು ನಗರದ ಅಭಿವೃದ್ಧಿಗೆ ಸಾಕಷ್ಟು ಯೋಜನೆ ಮತ್ತು ಕೊಡುಗೆಗಳನ್ನು ನೀಡಿದ್ದ ಆರ್ಥಿಕ ತಜ್ಞ ಡಾ. ಮನಮೋಹನ್‌ ಸಿಂಗ್‌ ಅವರನ್ನು ಸ್ಮರಿಸಿ, ಗೌರವಿಸುವ ಕೆಲಸವನ್ನು ಮಾಡುವುದು ಒಂದು ಸರ್ಕಾರವಾಗಿ ಮಾತ್ರವಲ್ಲ, ಕನ್ನಡಿಗನಾಗಿಯೂ ನನ್ನ ಕರ್ತವ್ಯ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

Karnataka Rains: ಜುಲೈ 6ರವರೆಗೆ ರಾಜ್ಯದಲ್ಲಿ ವ್ಯಾಪಕ ಮಳೆ ಸಾಧ್ಯತೆ; ಯೆಲ್ಲೋ ಅಲರ್ಟ್‌ ಘೋಷಣೆ

ಜುಲೈ 6ರವರೆಗೆ ರಾಜ್ಯದಲ್ಲಿ ವ್ಯಾಪಕ ಮಳೆ ಸಾಧ್ಯತೆ; ಯೆಲ್ಲೋ ಅಲರ್ಟ್‌

Weather Report: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಬಿರುಗಾಳಿ ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 29°C ಮತ್ತು 20°C ಇರುವ ಸಾಧ್ಯತೆ ಇದೆ.

DK Shivakumar: ಶಿಡ್ಲಘಟ್ಟ, ಚಿಂತಾಮಣಿಯ 164 ಕೆರೆಗಳಿಗೆ ಸಂಸ್ಕರಿಸಿದ ನೀರು ತುಂಬಿಸಲು 237 ಕೋಟಿ ರೂ. ಮೊತ್ತದ ಯೋಜನೆಗೆ ಅನುಮೋದನೆ: ಡಿ.ಕೆ.ಶಿವಕುಮಾರ್

164 ಕೆರೆಗಳಿಗೆ ಸಂಸ್ಕರಿಸಿದ ನೀರು ತುಂಬಿಸುವ ಯೋಜನೆಗೆ ಅನುಮೋದನೆ: ಡಿಕೆಶಿ

DK Shivakumar: ಶಿಡ್ಲಘಟ್ಟದ 45 ಕೆರೆಗಳಿಗೆ, ಚಿಂತಾಮಣಿ ತಾಲೂಕಿನ 119 ಕೆರೆಗಳಿಗೆ ಸೇರಿದಂತೆ ಒಟ್ಟು 164 ಕೆರೆಗಳಿಗೆ ಸಂಸ್ಕರಿಸಿದ ನೀರನ್ನು ತುಂಬಿಸಲು ರೂ.237 ಕೋಟಿ ಮೊತ್ತದ ಯೋಜನೆಗೆ ಅನುಮೋದನೆ ನೀಡಲಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

Illegal Mining: ಅಕ್ರಮ ಗಣಿಗಾರಿಕೆ ಪ್ರಕರಣಗಳ ಪರಿಶೀಲನೆಗೆ ಎಚ್.ಕೆ. ಪಾಟೀಲ್ ಅಧ್ಯಕ್ಷತೆಯಲ್ಲಿ ಸಂಪುಟ ಉಪ ಸಮಿತಿ

ಅಕ್ರಮ ಗಣಿಗಾರಿಕೆ ಪ್ರಕರಣಗಳ ಪರಿಶೀಲನೆಗೆ ಸಂಪುಟ ಉಪ ಸಮಿತಿ ರಚನೆ

Illegal Mining: ರಾಜ್ಯದಲ್ಲಿ ಅಕ್ರಮ ಗಣಿಗಾರಿಕೆ ಪ್ರಕರಣಗಳನ್ನು ತಾರ್ಕಿಕ ಘಟ್ಟಕ್ಕೆ ಕೊಂಡೊಯ್ಯುವಲ್ಲಿ ಆಡಳಿತ ವ್ಯವಸ್ಥೆ ನಿರ್ಲಕ್ಷ್ಯದ ಬಗ್ಗೆ ಕಳವಳ ವ್ಯಕ್ತಪಡಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಾನೂನು ಸಚಿವ ಎಚ್.ಕೆ. ಪಾಟೀಲ್ ಅವರು ಇತೀಚೆಗೆ ಪತ್ರ ಬರೆದಿದ್ದರು. ಇದರ ಬೆನ್ನಲ್ಲೇ ಅಕ್ರಮ ಗಣಿಗಾರಿಕೆ ಪರಿಶೀಲನೆಗೆ ಸಂಪುಟ ಉಪ ಸಮಿತಿಯನ್ನು ರಚಿಸಲು ಕ್ಯಾಬಿನೆಟ್‌ ಸಭೆಯಲ್ಲಿ ನಿರ್ಣಯ ಮಾಡಲಾಗಿದೆ.

B Sriramulu: ವಾಲ್ಮೀಕಿ ನಿಗಮದ ಹಗರಣ: ಬಳ್ಳಾರಿ ಸಂಸದ, 4 ಶಾಸಕರ ರಾಜೀನಾಮೆಗೆ ಬಿ.ಶ್ರೀರಾಮುಲು ಆಗ್ರಹ

ಬಳ್ಳಾರಿ ಸಂಸದ, 4 ಶಾಸಕರ ರಾಜೀನಾಮೆಗೆ ಬಿ.ಶ್ರೀರಾಮುಲು ಆಗ್ರಹ

B Sriramulu: ವಾಲ್ಮೀಕಿ ನಿಗಮದ ಹಗರಣದ ತನಿಖೆಯನ್ನು ರಾಜ್ಯ ಹೈಕೋರ್ಟ್ ಸಿಬಿಐಗೆ ನೀಡಿದೆ. ಹೀಗಾಗಿ ಬಳ್ಳಾರಿ ಸಂಸದರು ರಾಜೀನಾಮೆ ನೀಡಲಿ. ನಾಗೇಂದ್ರ, ಗಣೇಶ್, ಡಾ. ಶ್ರೀನಿವಾಸ್, ಭರತ್ ರೆಡ್ಡಿ ಎಲ್ಲರೂ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು ಎಂದು ಮಾಜಿ ಸಚಿವ ಬಿ. ಶ್ರೀರಾಮುಲು ಆಗ್ರಹಿಸಿದ್ದಾರೆ.

Hamsalekha: ಓಂ ಪ್ರಕಾಶ್ ರಾವ್ ನಿರ್ದೇಶನದ ʼಫೀನಿಕ್ಸ್ʼ, ʼಗೆರಿಲ್ಲಾ ವಾರ್ʼ ಚಿತ್ರಗಳಿಗೆ ಹಂಸಲೇಖ ಸಂಗೀತ ಸಂಯೋಜನೆ

ʼಫೀನಿಕ್ಸ್ʼ, ʼಗೆರಿಲ್ಲಾ ವಾರ್ʼ ಚಿತ್ರಗಳಿಗೆ ಹಂಸಲೇಖ ಸಂಗೀತ ಸಂಯೋಜನೆ

Hamsalekha: ಓಂ ಪ್ರಕಾಶ್ ರಾವ್ ನಿರ್ದೇಶನದ ʼಫೀನಿಕ್ಸ್ʼ ಹಾಗೂ ʼಗೆರಿಲ್ಲಾ ವಾರ್ʼ ಚಿತ್ರಗಳಿಗೆ ಕನ್ನಡ ಚಿತ್ರರಂಗದ ಲೆಜೆಂಡ್ ಸಂಗೀತ ನಿರ್ದೇಶಕ ಹಂಸಲೇಖ ಅವರು ಸಂಗೀತ ನೀಡಲಿದ್ದಾರೆ. ಇದು ಓಂ ಪ್ರಕಾಶ್ ರಾವ್ ನಿರ್ದೇಶನದ 49 ಹಾಗೂ 50ನೇ ಚಿತ್ರಗಳಾಗಿದೆ. ಈ ಕುರಿತ ವಿವರ ಇಲ್ಲಿದೆ.

High-tech flower market: ಚಿಕ್ಕಬಳ್ಳಾಪುರದಲ್ಲಿ 151.5 ಕೋಟಿ ವೆಚ್ಚದಲ್ಲಿ ಅಂತಾರಾಷ್ಟ್ರೀಯ ಪುಷ್ಪ ಹರಾಜು ಕೇಂದ್ರ, ಹೈಟೆಕ್ ಹೂವಿನ ಮಾರುಕಟ್ಟೆ ನಿರ್ಮಾಣಕ್ಕೆ ಸಚಿವ ಸಂಪುಟ ಅಸ್ತು

ಚಿಕ್ಕಬಳ್ಳಾಪುರದಲ್ಲಿ ಪುಷ್ಪ ಹರಾಜು ಕೇಂದ್ರ, ಹೈಟೆಕ್ ಹೂವಿನ ಮಾರ್ಕೆಟ್‌

High-tech flower market: ಚಿಕ್ಕಬಳ್ಳಾಪುರದಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ಅಂತಾರಾಷ್ಟ್ರೀಯ ಪುಷ್ಪ ಹರಾಜು ಕೇಂದ್ರ ಮತ್ತು 141.5 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ಹೂವಿನ ಮಾರುಕಟ್ಟೆ ಸ್ಥಾಪಿಸಲು ಕ್ಯಾಬಿನೆಟ್‌ನಿಂದ ಅನುಮೋದನೆ ದೊರಕಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ನಂದಿ ಬೆಟ್ಟದಲ್ಲಿ ಬುಧವಾರ ನಡೆದ ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ.

Cabinet Meeting: ಸಚಿವ ಸಂಪುಟ ಸಭೆಯಲ್ಲಿ 48 ವಿಷಯಗಳ ಬಗ್ಗೆ ಚರ್ಚೆ, 3400 ಕೋಟಿ ಮಂಜೂರು: ಸಿಎಂ

ಸಚಿವ ಸಂಪುಟ ಸಭೆಯಲ್ಲಿ 48 ವಿಷಯಗಳ ಬಗ್ಗೆ ಚರ್ಚೆ, 3400 ಕೋಟಿ ಮಂಜೂರು

Cabinet Meeting: ನಂದಿ ಬೆಟ್ಟದಲ್ಲಿ ನಡೆದ ಈ ಸಚಿವ ಸಂಪುಟ ಸಭೆಯು ಈ ವರ್ಷದ 14ನೇ ಸಭೆಯಾಗಿದೆ. ನಾವು ಆಡಳಿತವನ್ನು ಬೆಂಗಳೂರು ಕೇಂದ್ರಿತ ಎಂಬುದನ್ನು ತಪ್ಪಿಸಿ ವಿಕೇಂದ್ರೀಕರಣ ಮಾಡುವುದಕ್ಕಾಗಿಯೆ ಆಯಾ ಭಾಗದ ಸಮಸ್ಯೆಗಳ ಮೇಲೆ ಗಮನ ಹರಿಸಿ ಅವುಗಳಿಗೆ ಚಿಕಿತ್ಸಕ ಪರಿಹಾರ ನೀಡುವ ಉದ್ದೇಶದಿಂದ ಸಚಿವ ಸಂಪುಟ ಸಭೆಗಳನ್ನು ರಾಜ್ಯದ ಬೇರೆ ಬೇರೆ ಭಾಗಗಳಲ್ಲಿ ನಡೆಸುತ್ತಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

Cabinet Meeting: ಬೆಂಗಳೂರು ಗ್ರಾಮಾಂತರ ಇನ್ನುಮುಂದೆ ʼಬೆಂ. ಉತ್ತರ ಜಿಲ್ಲೆʼ, ಭಾಗ್ಯನಗರ ಆಗಲಿದೆ ಬಾಗೇಪಲ್ಲಿ; ಸಚಿವ ಸಂಪುಟ ತೀರ್ಮಾನ

ಬೆಂ.ಗ್ರಾಮಾಂತರ ಜಿಲ್ಲೆ, ಬಾಗೇಪಲ್ಲಿ ಹೆಸರು ಬದಲಿಸಲು ಸಚಿವ ಸಂಪುಟ ಒಪ್ಪಿಗೆ

Cabinet Meeting: 1986ರಲ್ಲಿ ಬೆಂಗಳೂರು ನಗರ ಜಿಲ್ಲೆಯಿಂದ ಪ್ರತ್ಯೇಕಿಸಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ರಚಿಸಲಾಗಿತ್ತು. ಇದೀಗ ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನು ಬೆಂಗಳೂರು ಉತ್ತರ ಜಿಲ್ಲೆ ಎಂದು ಹೆಸರು ಬದಲಿಸಲು ಅನುಮೋದನೆ ನೀಡಲಾಗಿದೆ. ಅದೇ ರೀತಿ ಬಾಗೇಪಲ್ಲಿ ಪಟ್ಟಣಕ್ಕೆ ಭಾಗ್ಯನಗರ ಎಂದು ಮರುನಾಮಕರಣ ಮಾಡಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ.