ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಕರ್ನಾಟಕ

ಸರ್ಕಾರಿ ಶಾಲೆಗಳ ಎಲ್‌ಕೆಜಿ, ಯುಕೆಜಿ ಮಕ್ಕಳಿಗೆ ಸಮವಸ್ತ್ರ ವಿತರಣೆಗೆ ಕ್ರಮ: ಎಂಎಲ್‌ಸಿ ಆರ್. ರಾಜೇಂದ್ರ

ಎಲ್‌ಕೆಜಿ, ಯುಕೆಜಿ ಮಕ್ಕಳಿಗೆ ಸಮವಸ್ತ್ರ ವಿತರಣೆಗೆ ಕ್ರಮ: ಆರ್. ರಾಜೇಂದ್ರ

Madhugiri News: ಮಧುಗಿರಿ ಪಟ್ಟಣದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಸಮುದಾಯ ಭವನದಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರು ಹಾಗೂ ಅಕ್ಷರ ದಾಸೋಹ ಸಿಬ್ಬಂದಿ ಮಕ್ಕಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ವಿಧಾನ ಪರಿಷತ್ ಸದಸ್ಯ ಆರ್. ರಾಜೇಂದ್ರ ರಾಜಣ್ಣ ಉದ್ಘಾಟಿಸಿದರು.

Pradeep Eshwar: ಖಬರ್ದಾರ್‌ ಕುಮಾರಣ್ಣ, ತಾಕತ್ತಿದ್ರೆ ಚಿಕ್ಕಬಳ್ಳಾಪುರದಲ್ಲಿ ಬಂದು ನಿಂತ್ಕೋ: ಎಚ್‌ಡಿಕೆಗೆ ಪ್ರದೀಪ್‌ ಈಶ್ವರ್‌ ಸವಾಲು

ಖಬರ್ದಾರ್‌ ಕುಮಾರಣ್ಣ, ನಿಮ್ಮ ಚೇಲಾಗಳಿಗೆ ನಾನು ಹೆದರಲ್ಲ

ನಾನು ಶೋಷಿತ ವರ್ಗದ ಶಾಸಕ, ನನ್ನನ್ನು, ನನ್ನ ಕುಟುಂಬವನ್ನು ಅವಮಾನ ಮಾಡಿದ್ದೀರಿ. ನಮ್ಮ ಸಮುದಾಯದ ಜಯಂತಿಗಳಲ್ಲಿ ನಿಮ್ಮನ್ನು ಅವಮಾನ ಮಾಡಿದ್ದೀವಾ? ನಾನು ತುಂಬಾ ತಾಳ್ಮೆಯಿಂದ ಇದ್ದೇನೆ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್‌ ಈಶ್ವರ್‌ ಕಿಡಿಕಾರಿದ್ದಾರೆ.

Gudibande News: ದಲಿತ ರೈತರ ವಿರುದ್ಧ ಅರಣ್ಯ ಇಲಾಖೆ ದೌರ್ಜನ್ಯ ಖಂಡಿಸಿ ಜೂ.29ರಂದು ಜಿಲ್ಲಾದ್ಯಂತ ಪ್ರತಿಭಟನೆ: ದಸಂಸ

ದಲಿತ ರೈತರ ವಿರುದ್ಧ ದೌರ್ಜನ್ಯ ಖಂಡಿಸಿ ಜೂ.29ರಂದು ಪ್ರತಿಭಟನೆ

ಅರಣ್ಯ ಇಲಾಖೆಯ ಕ್ರಮವನ್ನು ಖಂಡಿಸಿ ಕಳೆದ ಹತ್ತು ದಿನಗಳಿಂದ ಜಿಲ್ಲಾ ಉಪ ಅರಣ್ಯ ಸಂರಕ್ಷಣಾ ಧಿಕಾರಿಗಳ ಕಚೇರಿ ಎದುರು ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ನಡೆಸಲಾಗುತ್ತಿದ್ದರೂ, ಸ್ಥಳೀಯ ತಹಶೀಲ್ದಾರ್ ಅಥವಾ ಶಾಸಕರು ಸ್ಥಳಕ್ಕೆ ಭೇಟಿ ನೀಡಿ ಸಮಸ್ಯೆ ಪರಿಹರಿಸುವ ಪ್ರಯತ್ನ ಮಾಡಿಲ್ಲ. ಅರಣ್ಯ ಇಲಾಖೆ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳ ನಡುವಿನ ಸಮನ್ವಯದ ಕೊರತೆ ಯಿಂದಾಗಿ ಬಡ ದಲಿತ ರೈತ ಕುಟುಂಬಗಳು ಸಂಕಷ್ಟಕ್ಕೆ ಸಿಲುಕುತ್ತಿವೆ

ಪ್ರೈಡ್ ಮಾಸ: ಆರೋಗ್ಯ, ಕಣ್ಣಿನ ಆರೈಕೆ ಮತ್ತು ಜೀವನೋಪಾಯದ ಅವಕಾಶಗಳ ಮೂಲಕ 1,000 ಎಲ್ಜಿಬಿಟಿಕ್ಯುಐಎ+ ಜನರಿಗೆ ಬೆಂಬಲ ನೀಡಲು ಯೋಜನೆ ಪ್ರಾರಂಭ

ಯೋಗಕ್ಷೇಮ ಸುಧಾರಿಸಲು ಪ್ರಾಜೆಕ್ಟ್ ಸ್ಪಾರ್ಷ್ ಪ್ರಾರಂಭ

ಎಲ್ಜಿಬಿಟಿಕ್ಯುಐಎ+ ಸಮುದಾಯಕ್ಕೆ ಬೆಂಗಳೂರು ಭಾರತದ ಅತ್ಯಂತ ಪ್ರಗತಿಪರ ಮತ್ತು ಗೋಚರ ಕೇಂದ್ರಗಳಲ್ಲಿ ಒಂದೆಂದು ವ್ಯಾಪಕವಾಗಿ ಪರಿಗಣಿಸಲ್ಪಟ್ಟಿದ್ದರೂ, ಅದರೊಳಗಿನ ಅನೇಕರು, ವಿಶೇಷ ವಾಗಿ ಟ್ರಾನ್ಸ್ಜೆಂಡರ್ ವ್ಯಕ್ತಿಗಳು ಮತ್ತು ಕಡಿಮೆ ಆದಾಯದ ಹಿನ್ನೆಲೆಯ ಕ್ವೀರ್ ಯುವಕರು, ಆರೋಗ್ಯ ರಕ್ಷಣೆ, ಜೀವನೋಪಾಯ ಅವಕಾಶಗಳು, ಸಾಮಾಜಿಕ ರಕ್ಷಣೆ ಮತ್ತು ಯೋಗ್ಯ ಉದ್ಯೋಗಗಳನ್ನು ಪ್ರವೇಶಿಸುವಲ್ಲಿ ಅಡೆತಡೆಗಳನ್ನು ಎದುರಿಸುತ್ತಿದ್ದಾರೆ

Chikkaballapur News: ಶಿಕ್ಷಣ ಉದ್ಯೋಗಕ್ಕಷ್ಟೇ ಅಲ್ಲ, ಉತ್ತಮ ವ್ಯಕ್ತಿತ್ವ ನಿರ್ಮಾಣಕ್ಕೂ ಅಗತ್ಯ: ಚುಂಚಶ್ರೀ ಡಾ.ನಿರ್ಮಲಾನಂದನಾಥ ಮಹಾಸ್ವಾಮೀಜಿ

ಶಿಕ್ಷಣ ಉದ್ಯೋಗಕ್ಕಷ್ಟೇ ಅಲ್ಲ, ಉತ್ತಮ ವ್ಯಕ್ತಿತ್ವ ನಿರ್ಮಾಣಕ್ಕೂ ಅಗತ್ಯ

ನಾಲ್ಕು ವರ್ಷಗಳ ಪದವಿ ಶಿಕ್ಷಣವು ಜೀವನದ ಅಂತ್ಯವಲ್ಲ, ಹೊಸ ಕಲಿಕೆಯ ಆರಂಭವಾಗಿದೆ. ನಿರಂತರ ವಾಗಿ ಜ್ಞಾನ ಮತ್ತು ಕೌಶಲ್ಯಗಳನ್ನು ವೃದ್ಧಿಸಿಕೊಳ್ಳುವ ಮೂಲಕ ಸಮಾಜಕ್ಕೆ ಮಾದರಿ ಯಾಗಬೇಕು. ಪೋಷಕರು ಮತ್ತು ಶಿಕ್ಷಕರ ತ್ಯಾಗವನ್ನು ಸ್ಮರಿಸಿಕೊಂಡು ಸಮಾಜದ ಋಣ ತೀರಿಸುವ ಮನೋಭಾವ ಬೆಳೆಸಿಕೊಳ್ಳಬೇಕು

Gubbi News: ಧರ್ಮಸ್ಥಳ ಸಂಘದ ಸದಸ್ಯರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ

ಧರ್ಮಸ್ಥಳ ಸಂಘದ ಸದಸ್ಯರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ

ತಾಲೂಕಿನ ಹೊಸಕೆರೆ ವಲಯದ ಹಾಗಲವಾಡಿ ಕಾರ್ಯಕ್ಷೇತ್ರದಲ್ಲಿ ಉಚಿತ ಅರೋಗ್ಯ ತಪಾಸಣಾ ಶಿಬಿರ ಕಾರ್ಯಕ್ರಮ ವನ್ನು ಉದ್ಘಾಟಿಸಿ ಮಾತನಾಡಿದ ಅವರು ಮಹಿಳೆಯರಲ್ಲಿ ಆರ್ಥಿಕ ಸ್ವಾವಲಂಬಿ ತನ ಸೃಷ್ಟಿಸಿ ಧಾರ್ಮಿಕ ಕ್ಷೇತ್ರ ಅಭಿವೃದ್ಧಿ, ಕೆರೆಕಟ್ಟೆಯ ಅಭಿವೃದ್ದಿ ಹಾಗೂ ಬಡವರಿಗೆ ಸೂರು, ಮಾಸಾಶನ ಹೀಗೆ ಅನೇಕ ಸಾಮಾಜಿಕ ಸೇವೆ ನಡೆಸಿ ಮನೆಮಾತಾಗಿದೆ

Chikkaballapur News: ಅಂತ:ಕರಣದ ನಾಯಕತ್ವಕ್ಕೆ ಬಹುದೊಡ್ಡ ಮಾದರಿ ನಾಡು ಪ್ರಭು ಕೆಂಪೇಗೌಡ : ಜಿಲ್ಲಾಧಿಕಾರಿ ಜಿ.ಪ್ರಭು

ಅಂತ:ಕರಣದ ನಾಯಕತ್ವಕ್ಕೆ ಬಹುದೊಡ್ಡ ಮಾದರಿ ನಾಡು ಪ್ರಭು ಕೆಂಪೇಗೌಡ

ಸರ್ಕಾರಿ ಶಾಲೆಗಳ 20 ಮಕ್ಕಳಿಗೆ, ಕೃಷಿ ಕ್ಷೇತ್ರ, ಸಮಾಜದ ವಿವಿಧ ಕ್ಷೇತ್ರಗಳ ಸಾಧಕರಿಗೆ ಗೌರವ ಸಲ್ಲಿಸ ಬೇಕಿದೆ. ಯಾವುದೋ ನೆಪವಿಟ್ಟುಕೊಂಡು ಕಾರ್ಯಕ್ರಮದ ಘನತೆ ಗೌರವಕ್ಕೆ ಕುಂದು ತರಬಾರದು ಎಂದು ಮನವಿ ಮಾಡಿದ ಅವರು ಗಾಂಧೀಜಿಯಂತಹ ದಿಟ್ಟ ನಾಯಕತ್ವವೇ ದೇಶದ ಸ್ವಾತಂತ್ರ‍್ಯಕ್ಕಾಗಿ ಎಲ್ಲರನ್ನೂ ಒಗ್ಗೂಡಿಸುವ ಕೆಲಸ ಮಾಡಿತು.ಅಂತೆಯೇ ಕೆಂಪೇಗೌಡರ ಜಯಂತಿ ಕೂಡ ಸಮುದಾಯ ವನ್ನು ಬೆಸೆಯುವ ಕೆಲಸ ಮಾಡಬೇಕು

ಆರ್​ಎಸ್​ಎಸ್​​​​​ ವಿರುದ್ಧ ಅವಹೇಳನಕಾರಿ ಪೋಸ್ಟ್​; ಗೃಹ ಸಚಿವ ಪ್ರಿಯಾಂಕ್‌ ಖರ್ಗೆ, ನಲಪಾಡ್‌ಗೆ ಕೋರ್ಟ್‌ ನೋಟಿಸ್‌

RSS ವಿರುದ್ಧ ಪೋಸ್ಟ್; ಪ್ರಿಯಾಂಕ್‌ ಖರ್ಗೆಗೆ ಕೋರ್ಟ್ ನೋಟಿಸ್‌

ಆರ್​ಎಸ್​ಎಸ್​ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತು ಕಾಂಗ್ರೆಸ್​ ಮುಖಂಡ ಮೊಹಮ್ಮದ್‌ ನಲಪಾಡ್ ವಿರುದ್ಧ ಆರ್​ಎಸ್​ಎಸ್​ ಕಾರ್ಯಕರ್ತ ಎ. ತೇಜಸ್ ಎಂಬುವರು ಕೋರ್ಟ್‌ಗೆ ಖಾಸಗಿ ದೂರು ನೀಡಿದ್ದರು. ಇದಕ್ಕೆ ಸಂಬಂಧಿಸಿ ನ್ಯಾಯಾಲಯವು ನೋಟಿಸ್‌ ಜಾರಿ ಮಾಡಿದೆ.

Kempegowda Jayanti: ನಾಡು, ನಗರಗಳ ನಿರ್ಮಾಣದಲ್ಲಿ ನಾಡಪ್ರಭು ಕೆಂಪೇಗೌಡರ ದೂರದರ್ಶಿತ್ವ ಅಪ್ರತಿಮ: ತಹಸೀಲ್ದಾರ್ ಮಮತಾ

ಚಿಕ್ಕನಾಯಕನಹಳ್ಳಿಯಲ್ಲಿ ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆ

Chikkanayakanahalli News: ಚಿಕ್ಕನಾಯಕನಹಳ್ಳಿ ತಾಲೂಕು ಕಚೇರಿಯಲ್ಲಿ ಶನಿವಾರ ಆಯೋಜಿಸಿದ್ದ ನಾಡಪ್ರಭು ಕೆಂಪೇಗೌಡರ ಜಯಂತಿಯಲ್ಲಿ ತಹಸೀಲ್ದಾರ್ ಮಮತಾ ಅವರು ಮಾತನಾಡಿದ್ದಾರೆ. ಈ ವೇಳೆ ಬೆಂಗಳೂರಿನ ನಿರ್ಮಾಣದಲ್ಲಿ ಕೆಂಪೇಗೌಡರ ದೂರದೃಷ್ಟಿ, ಕೊಡುಗೆಗಳ ಬಗ್ಗೆ ತಹಸೀಲ್ದಾರ್‌ ಅವರು ಸ್ಮರಿಸಿದ್ದಾರೆ.

ಭೂ ಮಾಲೀಕರ ತ್ಯಾಗ ಸ್ಮರಣೆಗೆ ವಾಲ್ ಆಫ್ ಗ್ರ್ಯಾಟಿಟ್ಯೂಡ್: ಸಿಎಂ ಡಿ.ಕೆ. ಶಿವಕುಮಾರ್ ಘೋಷಣೆ

ಭೂ ಮಾಲೀಕರ ತ್ಯಾಗ ಸ್ಮರಣೆಗೆ ವಾಲ್ ಆಫ್ ಗ್ರ್ಯಾಟಿಟ್ಯೂಡ್: ಸಿಎಂ

CM DK Shivakumar: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ನೂತನವಾಗಿ ನಿರ್ಮಿಸುತ್ತಿರುವ ಕೆಂಪೇಗೌಡ ಬಡಾವಣೆಯಲ್ಲಿ ಶನಿವಾರ ನಡೆದ 517 ನೇ ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಸಿಎಂ ಡಿ.ಕೆ.ಶಿವಕುಮಾರ್‌ ಅವರು ಮಾತನಾಡಿದ್ದು, ಅಭಿವೃದ್ಧಿ ಕಾರ್ಯಗಳಿಗೆ ಜಮೀನು ನೀಡಿದವರ ಹೆಸರನ್ನು ಶಾಶ್ವತವಾಗಿ ಉಳಿಸುವ ಕೆಲಸವನ್ನು ಕರ್ನಾಟಕ ಸರ್ಕಾರ ಮಾಡಲಿದೆ ಎಂದು ತಿಳಿಸಿದ್ದಾರೆ.

Pravasi Prapancha: ಬಂಗಾರ ಅಡವಿಟ್ಟು 30 ಕೋಟಿ ರುಪಾಯಿ ಸಾಮ್ರಾಜ್ಯ ಕಟ್ಟಿದ ಕಥೆ

ಬಂಗಾರ ಅಡವಿಟ್ಟು 30 ಕೋಟಿ ರು.ಯ ಚಹಾ ಸಾಮ್ರಾಜ್ಯ ಕಟ್ಟಿದ ಕಥೆ

Malgudi Amrutha Chaha: 2020ರಲ್ಲಿ ಇಡೀ ಜಗತ್ತನ್ನೇ ಕೋವಿಡ್ ಆವರಿಸಿದಾಗ ಶಿವರಾಜಕುಮಾರ್ ಅವರ ಬದುಕು ತಲ್ಲಣಿಸಿತು. ಕಂಪೆನಿಯಲ್ಲಿ ಉಂಟಾದ ಸ್ಟ್ರೈಕ್ ಹಾಗೂ ಲಾಕ್‌ಡೌನ್‌ನಿಂದಾಗಿ ತೀವ್ರ ಆರ್ಥಿಕ ಸಂಕಷ್ಟ ಎದುರಾಯಿತು. ಒಂದು ಹಂತದಲ್ಲಿ ಬೆಂಗಳೂರಿನಲ್ಲಿ ಬಾಡಿಗೆ ಕಟ್ಟಲು ಮತ್ತು ಮನೆಗೆ ರೇಷನ್ ತರಲೂ ಹಣವಿಲ್ಲದ ಪರಿಸ್ಥಿತಿ ನಿರ್ಮಾಣವಾಯಿತು. ಕಣ್ಣೆದುರೇ ಕತ್ತಲು ಆವರಿಸಿದಾಗ ಅವರು ತಮ್ಮ ಬದುಕಿನ ಅತ್ಯಂತ ದೊಡ್ಡ ನಿರ್ಧಾರ ಕೈಗೊಂಡರು. ಮನೆಯಲ್ಲಿದ್ದ ಚಿನ್ನದ ಒಡವೆಯನ್ನು ಅಡವಿಟ್ಟರು. ಆ ಹಣವನ್ನು ಬಂಡವಾಳವಾಗಿಸಿ, ಚಹಾ ಉದ್ಯಮಕ್ಕೆ ಕೈಹಾಕಿದರು.

Pavagada News: ಪ್ರಸಾದ ಸೇವಿಸಿ 40ಕ್ಕೂ ಹೆಚ್ಚು ಜನ ಅಸ್ವಸ್ಥ; ಪಾವಗಡ ಸರ್ಕಾರಿ ಆಸ್ಪತ್ರೆಗೆ ದಾಖಲು

ಪಾವಗಡದಲ್ಲಿ ಪ್ರಸಾದ ಸೇವಿಸಿ 40ಕ್ಕೂ ಹೆಚ್ಚು ಜನ ಅಸ್ವಸ್ಥ

ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಕೆ. ಸೇವಾಲಾಲ್ ಪುರ ತಾಂಡಾದಲ್ಲಿ ದೇವರಪೂಜೆಯಲ್ಲಿ ಪ್ರಸಾದ ಸೇವಿಸಿದ ಬಳಿಕ 40ಕ್ಕೂ ಹೆಚ್ಚು ಜನರಿಗೆ ವಾಂತಿ ಮತ್ತು ಭೇದಿ ಕಾಣಿಸಿಕೊಂಡು, ಅಸ್ವಸ್ಥಗೊಂಡ ಘಟನೆ ಶನಿವಾರ ನಡೆದಿದೆ. ಅಸ್ವಸ್ಥಗೊಂಡವರನ್ನು ಪಾವಗಡ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ.

Bomb threat: ಹಾವೇರಿ, ಧಾರವಾಡ ಸೇರಿ ಹಲವು ಜಿಲ್ಲಾ ನ್ಯಾಯಾಲಯಗಳಿಗೆ ಬಾಂಬ್‌ ಬೆದರಿಕೆ ಸಂದೇಶ; ಆತಂಕದ ಸ್ಥಿತಿ ನಿರ್ಮಾಣ

ಹಾವೇರಿ ಸೇರಿ ಹಲವು ಜಿಲ್ಲಾ ನ್ಯಾಯಾಲಯಗಳಿಗೆ ಬಾಂಬ್‌ ಬೆದರಿಕೆ

ಹಾವೇರಿ ಜಿಲ್ಲಾ ನ್ಯಾಯಾಲಯಕ್ಕೆ ಇದು ಎರಡನೇ ಬಾರಿಗೆ ಬಾಂಬ್ ಬೆದರಿಕೆ ಕರೆ ಬಂದಿದೆ. ಕರೆ ಬಂದ ವಿಷಯ ತಿಳಿಯುತ್ತಿದ್ದಂತೆಯೇ ನ್ಯಾಯಾಲಯದ ಕಲಾಪಗಳನ್ನು ತಕ್ಷಣವೇ ಸ್ಥಗಿತಗೊಳಿಸಲಾಯಿತು. ಆತಂಕಗೊಂಡ ವಕೀಲರು, ಕಕ್ಷಿದಾರರು ಹಾಗೂ ನ್ಯಾಯಾಲಯದ ಸಿಬ್ಬಂದಿ ಒಮ್ಮೆಲೇ ಕಟ್ಟಡದಿಂದ ಹೊರಗೆ ಓಡಿ ಬಂದಿದ್ದಾರೆ.

MLC Election: ಅಡ್ಡ ಮತದಾನ; ಬಿಜೆಪಿ ರಾಜ್ಯಾಧ್ಯಕ್ಷರಿಗೆ ಆಂತರಿಕ ತನಿಖಾ ವರದಿ ಸಲ್ಲಿಸಿದ ಸಿ.ಟಿ.ರವಿ

ಅಡ್ಡ ಮತದಾನ; ಬಿಜೆಪಿ ರಾಜ್ಯಾಧ್ಯಕ್ಷರಿಗೆ ತನಿಖಾ ವರದಿ ಸಲ್ಲಿಸಿದ ಸಿ.ಟಿ.ರವಿ

Cross voting: ಅಡ್ಡ ಮತದಾನ ಆಗಿರುವುದು ಕಾಂಗ್ರೆಸ್ ಮೇಲಿನ ಅಭಿಮಾನಕ್ಕೆ ಅಂತ ಕಾಂಗ್ರೆಸ್ ನಾಯಕರು ಭಾವಿಸಬಾರದು. ಬೇರೆ ರಾಜ್ಯಗಳಲ್ಲಿ ಅಡ್ಡಮತದಾನ ಆದಾಗ ಕಾಂಗ್ರೆಸ್‍ನವರು ಪ್ರಜಾಪ್ರಭುತ್ವದ ಮೌಲ್ಯಗಳಿಗೆ ವಿರುದ್ಧ ಅಂತ ಉಪದೇಶ ಮಾಡ್ತಾರೆ. ಆದರೆ ಈಗ ಅಡ್ಡಮತದಾನದ ಮೂಲಕ ಪ್ರಜಾಪ್ರಭುತ್ವವನ್ನು ಅಪಮೌಲ್ಯಗೊಳಿಸಿದ್ದಾರೆ. ಅವರಿಗೆ ಅಡ್ಡ ಮತದಾನ ಆದರೆ ಪ್ರಶ್ನಿಸುವ ಯಾವುದೇ ನೈತಿಕತೆ ಇಲ್ಲ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಟೀಕಿಸಿದ್ದಾರೆ.

Tumkur News: ಪ್ರೇಯಸಿಯ ಜತೆ ಗಲಾಟೆ; ಕಾರಿನಲ್ಲೇ ಪೆಟ್ರೋಲ್‌ ಬಾಂಬ್‌ ಸ್ಫೋಟಿಸಿಕೊಂಡು ಯುವಕ ಆತ್ಮಹತ್ಯೆ!

ಕಾರಿನಲ್ಲೇ ಪೆಟ್ರೋಲ್‌ ಬಾಂಬ್‌ ಸ್ಫೋಟಿಸಿಕೊಂಡು ಯುವಕ ಆತ್ಮಹತ್ಯೆ!

ತುಮಕೂರು ಜಿಲ್ಲೆ ಶಿರಾ ತಾಲೂಕಿನ ಜೋಗಿಹಳ್ಳಿ ಬಳಿ ಅವಘಡ ನಡೆದಿದೆ. ಯುವಕ ಮತ್ತು ಯುವತಿ ಕಾರಿನಲ್ಲಿ ಬೆಂಗಳೂರಿನಿಂದ ಅಂಕೋಲಗೆ ತೆರಳುತ್ತಿದ್ದರು. ಈ ವೇಳೆ ಇಬ್ಬರ ಮಧ್ಯೆ ಗಲಾಟೆ ನಡೆದಿದ್ದು, ಈ ವೇಳೆ ಯುವಕ ಪೆಟ್ರೋಲ್‌ ಬಾಂಬ್‌ ಸ್ಫೋಟಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂಬ ಶಂಕೆ ವ್ಯಕ್ತವಾಗಿದೆ. ಘಟನೆಗೆ ನಿಖರ ಕಾರಣ ತಿಳಿಯಲು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಬೆಂಗಳೂರಿನಲ್ಲಿ ಅಘಾತಕಾರಿ ಘಟನೆ: ಬೈಕ್ ಸವಾರಿ ಮಾಡುವಾಗ ಮರದ ಕೊಂಬೆ ಬಿದ್ದು ಗಂಭೀರ ಗಾಯಗೊಂಡ ವ್ಯಕ್ತಿ!

ಮರದ ಕೊಂಬೆ ಬಿದ್ದು ಬೈಕ್ ಸವಾರ ಗಂಭೀರ: ಸಿಸಿಟಿವಿ ದೃಶ್ಯ ವೈರಲ್!

Viral Video: ಮರದ ಕೊಂಬೆಯೊಂದು ಬಿದ್ದ ಪರಿಣಾಮ 53 ವರ್ಷದ ವ್ಯಕ್ತಿ ತೀವ್ರವಾಗಿ ಗಾಯಗೊಂಡಿದ್ದು ಕೋಮಾ ಸ್ಥಿತಿಗೆ ತಲುಪಿದ್ದಾರೆ. ಇವರು ಖಾಸಗಿ ಹಣಕಾಸು ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಸಾಲದ ಕಂತುಗಳನ್ನು ವಸೂಲಿ ಮಾಡುವುದ್ದಕ್ಕಾಗಿ ಸಂಜೆ 5 ಗಂಟೆಯ ಸುಮಾರಿಗೆ ಬೈಕ್‌ನಲ್ಲಿ ಹೋಗುತ್ತಿದ್ದರು. ಆದರೆ ಹೆಲ್ಮೆಟ್ ಧರಿಸಿರಿಲಿಲ್ಲ‌. ಈ ವೇಳೆ ರಸ್ತೆ ಬದಿಯ ಮರದಿಂದ ಬೃಹತ್ ಗಾತ್ರದ ಒಣಗಿದ ಕೊಂಬೆ ದಿಢೀರನೆ ಮುರಿದು ನೇರವಾಗಿ ಅವರ ತಲೆಯ ಮೇಲೆಯೇ ಬಿದ್ದಿದೆ...

Koppal Accident: ಕೊಪ್ಪಳದಲ್ಲಿ ಭೀಕರ ಅಪಘಾತ; ಓಮ್ನಿ ಕಾರಿಗೆ ಲಾರಿ ಡಿಕ್ಕಿ, ಮಂತ್ರಾಲಯಕ್ಕೆ ತೆರಳುತ್ತಿದ್ದ ಐವರು ದುರ್ಮರಣ

ಕೊಪ್ಪಳದಲ್ಲಿ ಭೀಕರ ಅಪಘಾತ; ಮಂತ್ರಾಲಯಕ್ಕೆ ಹೋಗುತ್ತಿದ್ದ ಐವರ ಸಾವು

ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಭಾನಾಪುರ ಬಳಿಯ ರಾಷ್ಟ್ರೀಯ ಹೆದ್ದಾರಿ 63ರಲ್ಲಿ ರಸ್ತೆ ಅಪಘಾತ ನಡೆದಿದೆ. ಸರಕು ತುಂಬಿದ ಲಾರಿ ರಸ್ತೆ ವಿಭಜಕ ದಾಟಿ ಓಮಿನಿ ವಾಹನಕ್ಕೆ ಡಿಕ್ಕಿ ಹೊಡೆದಿದ್ದರಿಂದ ದುರಂತ ಸಂಭವಿಸಿದೆ. ಘಟನೆಯಲ್ಲಿ ಐವರು ಮೃತಪಟ್ಟು, ನಾಲ್ವರು ಗಾಯಗೊಂಡಿದ್ದಾರೆ.

ನಿರ್ಮಾಪಕ ಭಾ.ಮಾ. ಹರೀಶ್‌ ಪುತ್ರ ಹೃದಯಾಘಾತದಿಂದ ನಿಧನ; ಟ್ರೆಕ್ಕಿಂಗ್‌ ವೇಳೆ ಕೊಡಚಾದ್ರಿಯಲ್ಲಿ ಅವಘಡ

ನಿರ್ಮಾಪಕ ಭಾ.ಮಾ. ಹರೀಶ್‌ ಪುತ್ರ ಹೃದಯಾಘಾತದಿಂದ ನಿಧನ

Ullas Gowda Passed Away: ಸ್ಯಾಂಡಲ್‌ವುಡ್‌ಗೆ ಮತ್ತೊಂದು ಆಘಾತ ಎದುರಾಗಿದೆ. ಹಿರಿಯ ನಿರ್ಮಾಪಕ ಭಾ.ಮಾ. ಹರೀಶ್‌ ಅವರ ಪುತ್ರ ಉಲ್ಲಾಸ್‌ ಗೌಡ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಅವರಿಗೆ 30 ವರ್ಷ ವಯಸ್ಸಾಗಿತ್ತು. ಶಿವಮೊಗ್ಗ ಜಿಲ್ಲೆಯ ಕೊಡಚಾದ್ರಿ ಬೆಟ್ಟಕ್ಕೆ ಟ್ರೆಕ್ಕಿಂಗ್‌ ಹೋದ ವೇಳೆ ಹೃದಯಘಾತವಾಗಿದೆ ಎಂದು ಮೂಲಗಳು ತಿಳಿಸಿವೆ.

Gold Price Today On 27th June 2026: ಗ್ರಾಹಕರ ಕೈ ಸುಟ್ಟ ಚಿನ್ನ; ಬೆಲೆಯಲ್ಲಿ ಮತ್ತೆ ಭಾರಿ ಏರಿಕೆ

ಆಭರಣ ಗ್ರಾಹಕರ ಪಾಲಿಗೆ ಕಹಿ ವೀಕೆಂಡ್‌; ಚಿನ್ನದ ದರದಲ್ಲಿ ಭಾರಿ ಹೆಚ್ಚಳ

Gold Silver Price Today: ಚಿನ್ನದ ದರ ಶನಿವಾರ (ಜೂನ್‌ 27) ಮತ್ತೆ ಭಾರಿ ಹೆಚ್ಚಾಗಿದೆ. ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನಕ್ಕೆ 110 ರುಪಾಯಿ ಏರಿಕೆಯಾಗಿದ್ದು, 13,195 ರುಪಾಯಿಗೆ ಬಂದು ತಲುಪಿದೆ. 24 ಕ್ಯಾರಟ್‌ನ 1 ಗ್ರಾಂ ಚಿನ್ನ 120 ರುಪಾಯಿ ಹೆಚ್ಚಾಗಿದ್ದು, 14,395 ರುಪಾಯಿ ಆಗಿದೆ.

Vishwavani Impact: ಪಿಡಿಒ ಅಮಾನತು: ನೀರು ಪೂರೈಕೆಗೆ ಕ್ರಮ

ಪಿಡಿಒ ಅಮಾನತು: ನೀರು ಪೂರೈಕೆಗೆ ಕ್ರಮ

ಬೀರನೂರು ಗ್ರಾಮದಲ್ಲಿ ಕಲುಷಿತ ನೀರು ಸೇವನೆಯಿಂದ 80ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಕಚೇರಿ ಸ್ಪಂದಿಸಿದೆ. ಜೂ.15ರಂದು ಬೀರನೂರು ಗ್ರಾಮದಲ್ಲಿ ಕಲುಷಿತ ನೀರು ಸೇವನೆಯಿಂದ 80ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿದ್ದ ಕುರಿತು ಜೂ.18ರಂದು ವಿಶ್ವವಾಣಿ ಪತ್ರಿಕೆಯಲ್ಲಿ ಸುದ್ದಿ ಪ್ರಕಟಗೊಂಡಿತ್ತು

International Pineapple Day: ಇಂದು ಅಂತಾರಾಷ್ಟ್ರೀಯ ಅನಾನಸ್ ದಿನ

ಇಂದು ಅಂತಾರಾಷ್ಟ್ರೀಯ ಅನಾನಸ್ ದಿನ

ಪ್ರತಿವರ್ಷ ಜೂ.27ರಂದು ಆಚರಿಸಲಾಗುವ ‘ಅಂತಾರಾಷ್ಟ್ರೀಯ ಅನಾನಸ್ ದಿನ"ವು ಈ ಜನಪ್ರಿಯ ಹಣ್ಣಿನ ಸಾಂಸ್ಕೃತಿಕ, ಆರ್ಥಿಕ ಮತ್ತು ಪೌಷ್ಟಿಕಾಂಶದ ಮಹತ್ವವನ್ನು ಸಾರುವ ವಿಶೇಷ ದಿನವಾಗಿದೆ. ಕೇವಲ ಸಿಹಿ ಮತ್ತು ಹುಳಿಯ ಸಮತೋಲನ ಹೊಂದಿರುವ ರುಚಿಕರ ಹಣ್ಣು ಮಾತ್ರವಲ್ಲದೆ, ಆರೋಗ್ಯದ ದೃಷ್ಟಿಯಿಂದಲೂ ಅನಾನಸ್ ಅಪಾರ ಪ್ರಯೋಜನಗಳನ್ನು ಹೊಂದಿದೆ. ಈ ಹಣ್ಣಿನ ಮೂಲ ದಕ್ಷಿಣ ಅಮೆರಿಕಾಗಳಾಗಿದ್ದು, ಅಲ್ಲಿಂದ ಇದು ಜಗತ್ತಿನಾದ್ಯಂತ ಹರಡಿ, ಉಷ್ಣವಲಯದ ದೇಶಗಳಲ್ಲಿ ಪ್ರಮುಖ ವಾಣಿಜ್ಯ ಬೆಳೆಯಾಗಿ ಬೆಳೆದಿದೆ.

Kartavya App: ನೌಕರರಿಗೆ ತಲೆನೋವಾದ 'ಕರ್ತವ್ಯ App'

ನೌಕರರಿಗೆ ತಲೆನೋವಾದ 'ಕರ್ತವ್ಯ App'

ಸರಕಾರದ ಅಧೀನದ ಇಲಾಖೆಗಳು ಮತ್ತು ನಿಗಮ ಮಂಡಳಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರು, ಮೊಬೈಲ್ ಮೂಲಕ ಹಾಜರಾತಿ ದಾಖಲಿಸುವ ವ್ಯವಸ್ಥೆ ಮೇ 1 ಜಾರಿಗೆ ಬಂದಿದೆ. ಅದರನ್ವಯ ಅಧಿಕಾರಿ ಮತ್ತು ಸಿಬ್ಬಂದಿ ಪ್ರತಿನಿತ್ಯ ಬೆಳಗ್ಗೆ 10 ಗಂಟೆಗೆ ಬಂದಾಗ ಚೆಕ್‌ಇನ್‌ನಲ್ಲಿ ಹಾಗೂ ಸಂಜೆ ಕಚೇರಿಯಿಂದ ತೆರಳುವಾಗ ಚೆಕ್‌ಔಟ್‌ನಲ್ಲಿ ತಪ್ಪದೆ ಹಾಜರಾತಿ ದಾಖಲಿಸಬೇಕು. ಆದರೆ, ಹೊಸ ವ್ಯವಸ್ಥೆಗೆ ಮೊದಲು ಪೊಲೀಸ್ ಇಲಾಖೆಯಿಂದ ಅಪಸ್ವರ ವ್ಯಕ್ತವಾಯಿತು.

ಭರವಸೆಯಲ್ಲೇ ಉಳಿದ ಹಲಗೆವಡೇರಹಳ್ಳಿ ಕೆರೆ ಅಭಿವೃದ್ಧಿ

ಭರವಸೆಯಲ್ಲೇ ಉಳಿದ ಹಲಗೆವಡೇರಹಳ್ಳಿ ಕೆರೆ ಅಭಿವೃದ್ಧಿ

ನಗರೀಕರಣದ ಒತ್ತಡದಿಂದ ಬೆಂಗಳೂರಿನ ಅನೇಕ ಕೆರೆಗಳು ಕಣ್ಮರೆಯಾಗುತ್ತಿರುವ ಸಂದರ್ಭದಲ್ಲಿ ಉಳಿದಿರುವ ಕೆರೆಗಳ ಸಂರಕ್ಷಣೆ ಮತ್ತು ಅಭಿವೃದ್ಧಿಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಮುಂದಾ ಗಿದ್ದರು. ರಾಜರಾಜೇಶ್ವರಿ ನಗರದ ಹಲಗೆವಡೇರಹಳ್ಳಿ ಕೆರೆಯ ಅಭಿವೃದ್ಧಿ ಮಾತ್ರ ಅಧಿಕಾರಿಗಳ ನಿರ್ಲಕ್ಷ್ಯ ಹಾಗೂ ವಿಳಂಬದಿಂದ ಸ್ಥಗಿತಗೊಂಡಂತಾಗಿದೆ ಎಂದು ಸ್ಥಳೀಯರು ಆರೋಪಿಸುತ್ತಿದ್ದಾರೆ.

Shidlaghatta Crime: ಅಕ್ರಮವಾಗಿ ಸಾಗಿಸುತ್ತಿದ್ದ ಗೋಧಿ ಕ್ಯಾಂಟರ್ ಸೆರೆ; ಇಬ್ಬರ ವಿರುದ್ಧ ಪ್ರಕರಣ ದಾಖಲು

ಅಕ್ರಮವಾಗಿ ಸಾಗಿಸುತ್ತಿದ್ದ ಗೋಧಿ ಕ್ಯಾಂಟರ್ ಸೆರೆ

ತಾಲೂಕಿನ ಜಂಗಮಕೋಟೆ ಸಮೀಪ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 250ಕ್ಕೂ ಅಧಿಕ ಗೋಧಿ ಚೀಲಗಳನ್ನು ತುಂಬಿದ್ದ ಕ್ಯಾಂಟರ್ ವಾಹನವನ್ನು ಶಿಡ್ಲಘಟ್ಟ ಗ್ರಾಮಾಂತರ ಪೊಲೀಸರು ದಿಢೀರ್ ದಾಳಿ ನಡೆಸಿ ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

Loading...