ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ
ಕರ್ನಾಟಕ
Bandi Devara Utsava: ಜೂ.25ರಿಂದ ಮೂರು ದಿನ ಬೆಂಗಳೂರು ಬಂಡಿದೇವರ ಉತ್ಸವ

ಜೂ.25ರಿಂದ ಮೂರು ದಿನ ಬೆಂಗಳೂರು ಬಂಡಿದೇವರ ಉತ್ಸವ

Bengaluru News: ನಾಡಪ್ರಭು ಕೆಂಪೇಗೌಡರ ಜಯಂತಿ ಪ್ರಯುಕ್ತ ಜೂ.25ರಿಂದ 27 ವರೆಗೆ ಮೂರು ದಿನಗಳ ಕಾಲ ಬಂಡಿ ದೇವರ ಉತ್ಸವವನ್ನು ನಗರದಲ್ಲಿ ಕೈಗೊಳ್ಳಲಾಗುವುದು ಎಂದು ಬೆಂಗಳೂರು ಬಂಡಿದೇವರ ಉತ್ಸವ ಸಮಿತಿಯ ಅಧ್ಯಕ್ಷ ಡಾ. ತಲಕಾಡು ಚಿಕ್ಕರಂಗೇಗೌಡ ತಿಳಿಸಿದ್ದಾರೆ.

Green Ammonia: ಹಸಿರು ಅಮೋನಿಯಾ ಉತ್ಪಾದನೆ ಗುರಿ ಸಾಧನೆಯತ್ತ ಭಾರತ; ಟೆಂಡರ್‌ಗೆ ಸಿದ್ಧತೆ

ಹಸಿರು ಅಮೋನಿಯಾ ಉತ್ಪಾದನೆ ಗುರಿ ಸಾಧನೆಯತ್ತ ಭಾರತ

Green Ammonia: 2070ರ ವೇಳೆಗೆ ನಿವ್ವಳ-ಶೂನ್ಯ ಇಂಗಾಲ ಹೊರಸೂಸುವಿಕೆ ಗುರಿ ಸಾಧನೆಯತ್ತ ಸಾಗಿರುವ ಕೇಂದ್ರ ಸರ್ಕಾರ, ಹಸಿರು ಅಮೋನಿಯಾ ಹೊರತೆಗೆಯಲು ಮಹತ್ವದ ಟೆಂಡರ್ ಸಹ ಬಿಡುಗಡೆ ಮಾಡಿದೆ. ಭಾರತದ ರಸಗೊಬ್ಬರ ವಲಯವನ್ನು ಇಂಗಾಲ ಮುಕ್ತಗೊಳಿಸಲು ಭಾರತೀಯ ಸೌರಶಕ್ತಿ ನಿಗಮ ಲಿಮಿಟೆಡ್ (SECI) ಗ್ರೀನ್ ಅಮೋನಿಯಾ ಟೆಂಡರ್ ಸಿದ್ಧಪಡಿಸಿದೆ.

Karnataka Rains: ನಾಳೆ ಕರಾವಳಿ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್;‌ ಕಾವೇರಿ ನದಿ ಪಾತ್ರದಲ್ಲಿ ಪ್ರವಾಹ ಎಚ್ಚರಿಕೆ!

ನಾಳೆ ಕರಾವಳಿ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್;‌ ಭಾರಿ ಮಳೆ ಸಾಧ್ಯತೆ

Karnataka Rains: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 28°C ಮತ್ತು 21°C ಇರುವ ಸಾಧ್ಯತೆ ಇದೆ.

Self Harming: ರೀಲ್ಸ್ ವಿಚಾರಕ್ಕೆ ಪ್ರೇಮಿಗಳ ಜಗಳ; ನೇಣಿಗೆ ಶರಣಾದ ಯುವತಿ!

ರೀಲ್ಸ್ ವಿಚಾರಕ್ಕೆ ಪ್ರೇಮಿಗಳ ಜಗಳ; ನೇಣಿಗೆ ಶರಣಾದ ಯುವತಿ

Self Harming: ಇನ್‌ಸ್ಟಾಗ್ರಾಮ್ ರೀಲ್ಸ್‌ ವಿಚಾರ ಆರಂಭವಾದ ಪ್ರೇಮಿಗಳ ಜಗಳ ಯುವತಿಯ ಆತ್ಮಹತ್ಯೆಯಲ್ಲಿ ಅಂತ್ಯವಾಗಿದೆ. ತುಮಕೂರಿನಲ್ಲಿ ಯುವತಿ ನೇಣಿಗೆ ಶರಣಾಗಿದ್ದಾಳೆ. ಈ ಸಂಬಂಧ ‌ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕೇಸ್‌ ದಾಖಲಿಸಲಾಗಿದ್ದು, ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

CM Siddaramaiah: ನಿರ್ಮಲಾ ಸೀತಾರಾಮನ್‌ ಭೇಟಿಯಾದ ಸಿಎಂ ಸಿದ್ದರಾಮಯ್ಯ; ರಾಜ್ಯಗಳ ಬೆಳವಣಿಗೆಗೆ ಪೂರಕವಾಗಿ ತೆರಿಗೆ ಹಂಚಿಕೆ ಮಾಡುವಂತೆ ಮನವಿ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಭೇಟಿಯಾದ ಸಿಎಂ ಸಿದ್ದರಾಮಯ್ಯ

CM Siddaramaiah: 15 ನೇ ಹಣಕಾಸು ಆಯೋಗವು ತನ್ನ ಶಿಫಾರಸಿನಲ್ಲಿ ಕರ್ನಾಟಕದ ತೆರಿಗೆ ಪಾಲನ್ನು ಶೇ. 4.713 ರಿಂದ ಶೇ.3.647 ಕ್ಕೆ ಇಳಿಕೆ ಮಾಡಿದ್ದರಿಂದ ರಾಜ್ಯದ ತೆರಿಗೆ ಪಾಲು 14ನೇ ಹಣಕಾಸು ಆಯೋಗಕ್ಕೆ ಹೋಲಿಸಿದರೆ 15ನೇ ಹಣಕಾಸು ಆಯೋಗದ ಅವಧಿಯಲ್ಲಿ ಶೇ.23ರಷ್ಟು ಕಡಿಮೆಯಾಗಿರುವುದರ ಕುರಿತು ಮುಖ್ಯಮಂತ್ರಿಗಳು ಕೇಂದ್ರ ಹಣಕಾಸು ಸಚಿವರಿಗೆ ವಿವರಿಸಿದ್ದಾರೆ.

HD Kumaraswamy: ಮಾವು ಬೆಳೆಗಾರರ ನೆರವಿಗೆ ಧಾವಿಸಿ: ಕೇಂದ್ರ ಕೃಷಿ ಸಚಿವರಿಗೆ ಎಚ್.ಡಿ.ಕುಮಾರಸ್ವಾಮಿ ಪತ್ರ

ಮಾವು ಬೆಳೆಗಾರರ ನೆರವಿಗೆ ಧಾವಿಸಿ: ಕೇಂದ್ರ ಕೃಷಿ ಸಚಿವರಿಗೆ ಎಚ್‌ಡಿಕೆ ಪತ್ರ

HD Kumaraswamy: ಬೆಲೆ ಕುಸಿತದಿಂದ ತೀವ್ರ ಕಂಗಾಲಾಗಿರುವ ರಾಜ್ಯದ ಮಾವು ಬೆಳೆಗಾರರ ನೆರವಾಗಬೇಕು. ಸದ್ಯಕ್ಕೆ ಕೇಂದ್ರ ಸರ್ಕಾರ ನೆರವಿಗೆ ಬಾರದಿದ್ದರೆ ಬೆಳೆಗಾರರಿಗೆ ಬೇರೆ ನೆರವಿನ ಖಾತರಿ ಇಲ್ಲ ಎಂದು ಕೇಂದ್ರ ಕೃಷಿ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್‌ ಅವರಿಗೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಪತ್ರ ಬರೆದಿದ್ದಾರೆ.

Bengaluru Power Cut: ಜೂ.25, 26ರಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ಕರೆಂಟ್‌ ಇರಲ್ಲ

ಜೂ.25, 26ರಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ಕರೆಂಟ್‌ ಇರಲ್ಲ

Bengaluru Power Cut: ಆಡುಗೋಡಿ ಮತ್ತು ಆಸ್ಟೀನ್ ಟೌನ್ ಉಪಕೇಂದ್ರದಲ್ಲಿ ನಿರ್ವಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ ಜೂ.25 ರಂದು ಬುಧವಾರ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ. ಈ ಕುರಿತ ವಿವರ ಇಲ್ಲಿದೆ.

Jamun Fruit: ಜಾಗತಿಕ ಮಾರುಕಟ್ಟೆಗೆ ಲಗ್ಗೆ ಇಟ್ಟ ಕರ್ನಾಟಕದ ನೇರಳೆ ಹಣ್ಣು; ಲಂಡನ್‌ಗೆ ರಫ್ತು

ಜಾಗತಿಕ ಮಾರುಕಟ್ಟೆಗೆ ಲಗ್ಗೆ ಇಟ್ಟ ಕರ್ನಾಟಕದ ನೇರಳೆ ಹಣ್ಣು!

Jamun Fruit: ನೇರಳೆ ಹಣ್ಣು ರಫ್ತು ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿ, ಮೊದಲ ಬಾರಿಗೆ ರಾಜ್ಯದ ನೇರಳೆ ಹಣ್ಣುಗಳು ಲಂಡನ್‌ಗೆ ರಫ್ತಾಗುತ್ತಿವೆ. ಇದು ರಾಜ್ಯದ ರೈತರಿಗೆ ಹೆಮ್ಮೆಯ ಮೈಲುಗಲ್ಲಾಗಿದ್ದು, ರೈತರ ಆದಾಯ ದ್ವಿಗುಣಗೊಳ್ಳಲು ನೆರವಾಗಲಿದೆ ಎಂದು ತಿಳಿಸಿದ್ದಾರೆ.

KR Puram railway station: ರೈಲಿನಡಿ ಬೀಳುತ್ತಿದ್ದ ಪ್ರಯಾಣಿಕನನ್ನು ದೇವರಂತೆ ಬಂದು ರಕ್ಷಿಸಿದ ರೈಲ್ವೆ ಸಿಬ್ಬಂದಿ, ಮಾಜಿ ಸೈನಿಕ!; ವಿಡಿಯೋ ವೈರಲ್‌

ರೈಲಿನಡಿ ಬೀಳುತ್ತಿದ್ದ ವ್ಯಕ್ತಿಯನ್ನು ದೇವರಂತೆ ಬಂದು ರಕ್ಷಿಸಿದ ಸಿಬ್ಬಂದಿ!

KR Puram railway station: ಬೆಂಗಳೂರಿನ ಕೆ.ಆರ.ಪುರಂ ರೈಲ್ವೆ ನಿಲ್ದಾಣದ ಪ್ಲಾಟ್ ಫಾರ್ಮ್ 2 ರಲ್ಲಿ ಸೋಮವಾರ ರಾತ್ರಿ ಘಟನೆ ನಡೆದಿದೆ. ರೈಲಿನಡಿ ಸಿಲುಕುವಷ್ಟರಲ್ಲಿ ಸ್ಥಳದಲ್ಲಿದ್ದ ಮಾಜಿ ಸೈನಿಕ ಮತ್ತು ರೈಲ್ವೆ ಇಲಾಖೆಯ ಸಿಬ್ಬಂದಿಯೊಬ್ಬರು ಪ್ರಯಾಣಿಕನನ್ನು ಪ್ಲಾಟ್‌ಫಾರ್ಮ್‌ನತ್ತ ಎಳೆದು ರಕ್ಷಣೆ ಮಾಡಿದ್ದಾರೆ.

Denta Water Groups: ಡೆಂಟಾ ವಾಟರ್‌ ಸಿಎಸ್ಆರ್ ಫಂಡ್‌ನಿಂದ ನಿರ್ಮಿತ ಶಾಲಾ ಕಟ್ಟಡ ಉದ್ಘಾಟಿಸಿದ ಸಚಿವ ಚಲುವರಾಯಸ್ವಾಮಿ

ಮಂಡ್ಯದಲ್ಲಿ ಶಾಲಾ ಕಟ್ಟಡ ಉದ್ಘಾಟಿಸಿದ ಸಚಿವ ಚಲುವರಾಯಸ್ವಾಮಿ

ತಾಲೂಕಿನ ಸಂತೆಬಾಚಹಳ್ಳಿ ಗ್ರಾಮದಲ್ಲಿ ಡೆಂಟಾ ವಾಟರ್ ಇನ್ಫ್ರಾ ಸೆಲ್ಯೂಷನ್ ಲಿಮಿಟೆಡ್ ಕಂಪನಿಯು ತನ್ನ ಸಿಎಸ್ ಆರ್ ಫಂಡ್ ಮೂಲಕ 1.13 ಕೋಟಿ ರೂ ವೆಚ್ಚದಲ್ಲಿ ನಿರ್ಮಿಸಿರುವ ಪದವಿ ಪೂರ್ವ ಕಾಲೇಜಿನ ಹೆಚ್ಚುವರಿ ಕಟ್ಟಡ ವನ್ನು ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯ ಸ್ವಾಮಿ ಅವರು ಉದ್ಘಾಟಿಸಿದರು.

Rupesh Rajanna: ಕನ್ನಡಪರ ಹೋರಾಟಗಾರ ರೂಪೇಶ್ ರಾಜಣ್ಣ ವಿರುದ್ಧ ಬ್ಲ್ಯಾಕ್‌ ಮೇಲ್‌ ಆರೋಪ; ಸಚಿವರ ನಿವಾಸಕ್ಕೆ ಮುತ್ತಿಗೆ ವೇಳೆ ವಶಕ್ಕೆ

ಸಚಿವ ಜಮೀರ್‌ ಅಹ್ಮದ್‌ ನಿವಾಸಕ್ಕೆ ಮುತ್ತಿಗೆ; ರೂಪೇಶ್ ರಾಜಣ್ಣ ವಶಕ್ಕೆ

Rupesh Rajanna: ಬೆಂಗಳೂರಿನ ಗಾಲ್ಫ್ ಕೋರ್ಸ್ ರಸ್ತೆಯ ಸಚಿವ ಜಮೀರ್‌ ಅಹ್ಮದ್‌ ಅವರ ಸರ್ಕಾರಿ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದಾಗ ಕನ್ನಡಪರ ಹೋರಾಟಗಾರ ರೂಪೇಶ್ ರಾಜಣ್ಣ ಹಾಗೂ ಬೆಂಬಲಿಗರನ್ನು ಪೊಲೀಸರು ಮಂಗಳವಾರ ವಶಕ್ಕೆ ಪಡೆದಿದ್ದಾರೆ.

Chit Fund Scam: ಚೀಟಿ ಹೆಸರಲ್ಲಿ ಬರೋಬ್ಬರಿ 10 ಕೋಟಿ ವಂಚಿಸಿದ ಮಹಿಳೆ; ಕೇಸ್‌ ಬೆನ್ನಲ್ಲೇ ಪರಾರಿ

ಚೀಟಿ ಹೆಸರಲ್ಲಿ ಬರೋಬ್ಬರಿ 10 ಕೋಟಿ ವಂಚಿಸಿದ ಮಹಿಳೆ!

Chit Fund Scam: ವಂಚನೆ ಸಂಬಂಧ ಬೆಂಗಳೂರಿನ ಜೆ.ಪಿ.ನಗರದ ಮಹಿಳೆಯೊಬ್ಬರು ನೀಡಿದ ದೂರಿನ ಮೇರೆಗೆ ನಾಲ್ವರು ಆರೋಪಿಗಳ ವಿರುದ್ಧ ಪುಟ್ಟೇನಹಳ್ಳಿ ಠಾಣೆ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ. ಇನ್ನು ಈ ಪ್ರಕರಣವನ್ನು ಸಿಐಡಿಗೆ ವರ್ಗಾವಣೆ ಮಾಡುವಂತೆ ಕೋರಲಾಗಿದೆ.

Bomb Threats: ಸಹೋದ್ಯೋಗಿ ಮದುವೆಯಾಗಲು ನಿರಾಕರಿಸಿದ್ದಕ್ಕೆ 11 ರಾಜ್ಯಗಳ ಶಾಲೆ, ಆಸ್ಪತ್ರೆ, ಏರ್‌ಪೋರ್ಟ್‌ಗಳಿಗೆ ಬಾಂಬ್‌ ಬೆದರಿಕೆ; ಯುವತಿ ಅರೆಸ್ಟ್!

ಶಾಲೆ, ಆಸ್ಪತ್ರೆಗಳಿಗೆ ಬಾಂಬ್‌ ಬೆದರಿಕೆ ಸಂದೇಶ ಕಳುಹಿಸಿದ್ದ ಯುವತಿ ಬಂಧನ

Bomb Threats: ಆರೋಪಿ ಯುವತಿ ಉಡುಪಿಯ ವಿದ್ಯೋದಯ ಪಬ್ಲಿಕ್ ಸ್ಕೂಲ್​ಗೂ ಇ-ಮೇಲ್ ಮೂಲಕ ಬಾಂಬ್ ಬೆದರಿಕೆಯೊಡ್ಡಿದ್ದಳು. ಹೀಗಾಗಿ ತನಿಖೆಗಾಗಿ ಆರೋಪಿಯನ್ನು ಅಹಮದಾಬಾದ್ ಪೊಲೀಸರಿಂದ ಉಡುಪಿ ಪೊಲೀಸರು ಕಸ್ಟಡಿಗೆ ಪಡೆಯುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

Chikkaballapur News: ರಾಶ್ಚೇರುವು ಗ್ರಾಮ ಪಂಚಾಯತಿ ಅಧ್ಯಕ್ಷರ ವಿರುದ್ದ ಸಲ್ಲಿಸಲಾಗಿದ್ದ ಅವಿಶ್ವಾಸ ಗೊತ್ತುವಳಿ ಮಂಡನೆ ಸಭೆ

ಅಧ್ಯಕ್ಷರ ವಿರುದ್ದ ಸಲ್ಲಿಸಲಾಗಿದ್ದ ಅವಿಶ್ವಾಸ  ಗೊತ್ತುವಳಿ ಮಂಡನೆ ಸಭೆ

ವಿಧಾನ ಪರಿಷತ್ ಚುನಾವಣೆ ಸಮಯದಲ್ಲಿ ಎಂಎಲ್‌ಸಿ ಅನಿಲ್ ಕುಮಾರ್, ಶಾಸಕ ಎಸ್.ಎನ್.ಸುಬ್ಬಾ ರೆಡ್ಡಿ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡು ಗ್ರಾ.ಪಂ. ಅಧ್ಯಕ್ಷೆ ಸ್ಥಾನವನ್ನು ಗಿಟ್ಟಿಸಿ ಕೊಂಡಿದ್ದ ಕಾಂಗ್ರೆಸ್ ಬೆಂಬಲಿತ ಅದ್ಯಕ್ಷೆ ರೇವತಿ ಶ್ರೀನಿವಾಸ್‌ರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಸಲು ಕಾಂಗ್ರೆಸ್ ಪಕ್ಷದ ಬೆಂಬಲಿತ ಸದಸ್ಯರ ಒಂದು ಬಣ ಹಾಗೂ ಎನ್‌ಡಿಎ ಬೆಂಬಲಿತ ಸದಸ್ಯರ ಬಣ ಸೇರಿ ೧೦ ಸದಸ್ಯರು ಹಾಲಿ ಅದ್ಯಕ್ಷರ ವಿರುದ್ದ ಅವಿಶ್ವಾಸ ಮಂಡನೆಗೆ ಮುಂದಾಗಿದ್ದಾರೆ,

Chikkaballapur News: ಉಪ್ಪಾರ ಸಮುದಾಯ ಶೈಕ್ಷಣಿವಾಗಿ ಮುಂದೆ ಬರಬೇಕಿದೆ: ತಾಲೂಕು ಉಪ್ಪಾರರ ಸಂಘದ ಅಧ್ಯಕ್ಷ ಸಜ್ಜಗಂಟರಾಯಪ್ಪ

ಉಪ್ಪಾರ ಸಮುದಾಯ ಶೈಕ್ಷಣಿವಾಗಿ ಮುಂದೆ ಬರಬೇಕಿದೆ

ಸಮುದಾಯದ ಮುಖಂಡರು ನಮ್ಮ ಸಮಾಜದ ಅಭಿವೃದ್ಧಿಗೆ ಕೈಜೋಡಿಸಬೇಕು, ಶೈಕ್ಷಣಿಕವಾಗಿ ವಂಚಿತರಾದವರಿಗೆ ಸಂಘದ ಕಡೆಯಿಂದ ಸಹಾಯ ಹಸ್ತ ನೀಡಬೇಕು ಮುಂದಿನ ದಿನಗಳಲ್ಲಿ ನಮ್ಮ ಸಮುದಾಯವು ಮುಂಚೂಣಿಗೆ ಬರಲು ಶಿಕ್ಷಣ ಕಡ್ಡಾಯ ಶಿಕ್ಷಣ ಹೊಂದಿದ್ದರೆ ಎಲ್ಲಾ ರೀತಿಯ ಅಭಿವೃದ್ಧಿಯಲ್ಲಿ ಮುಂಚೂಣಿಗೆ ಬರಲು ಸಹಕಾರಿಯಾಗುತ್ತೆ ಎಂದರು.

Chikkaballapur News: ವಿಧವೆಯರನ್ನು ಇತರೆ ಮಹಿಳೆಯರಂತೆ ಗೌರವಿಸಿ : ಸಂಪಂಗಿ ಶ್ರೀನಿವಾಸ್

ವಿಧವೆಯರನ್ನು ಇತರೆ ಮಹಿಳೆಯರಂತೆ ಗೌರವಿಸಿ

ವಿಧವೆಯರು ಎದುರಾಗಿ ಬಂದರೆ ಅಪಶಕುನವೆಂದು, ಮುಂಜಾನೆ ಎದ್ದು ವಿಧವೆಯರನ್ನು ನೋಡ ಬಾರದೆಂಬ ಮೂಢ ನಂಬಿಕೆಗಳನ್ನು ಬಿಟ್ಟು, ವಿಧವೆಯರನ್ನು ಸಹಾ ಮಹಿಳೆಯರಾಗಿ ಗೌರವಿಸಿ ಎಂದು ಕರೆ ನೀಡಿದರು.ಈ ತಾಲೂಕಿನಲ್ಲಿ ಸುಮಾರು ಇಪ್ಪತೆಂಟು ಸಾವಿರ ವಿಧವೆಯರಿದ್ದಾರೆ. ರಾಜ್ಯದಲ್ಲಿ ವಿಧವೆಯರಿಗೆ ಕೇವಲ ಎಂಟು ನೂರು ರೂಪಾಯಿಗಳ ಪೆನ್‌ಷನ್ ನೀಡುತ್ತಿದ್ದಾರೆ.

CM Siddaramaiah: ನಟ ಆಮೀರ್‌ ಖಾನ್‌ ಭೇಟಿಯಾದ ಸಿಎಂ ಸಿದ್ದರಾಮಯ್ಯ

ನಟ ಆಮೀರ್‌ ಖಾನ್‌ ಭೇಟಿಯಾದ ಸಿಎಂ ಸಿದ್ದರಾಮಯ್ಯ

ರಾಷ್ಟ್ರಪತಿ ಭವನದಲ್ಲಿ ಇಂದು ಬಾಲಿವುಡ್‌ ನಟ ಆಮೀರ್‌ ಖಾನ್‌ (Actor Aamir Khan) ಅವರನ್ನು ಸಿಎಂ ಸಿದ್ದರಾಮಯ್ಯ (cm siddaramaiah) ಭೇಟಿಯಾದರು. ಸಿಎಂ ಈ ಸಂದರ್ಭದಲ್ಲಿ ಆಮೀರ್‌ ಖಾನ್‌ ಅವರ ನೂತನ ಸಿನಿಮಾ ʼಸಿತಾರೇ ಜಮೀನ್‌ ಪರ್‌ʼ ಕುರಿತು ವಿಚಾರಿಸಿಕೊಂಡು, ಅದಕ್ಕೆ ಶುಭ ಹಾರೈಸಿದರು.

Chikkaballapur Crime: ಅನಧಿಕೃತವಾಗಿ ಬಳಸುತ್ತಿದ್ದ ಸಿಲಿಂಡರ್ ಗಳ ವಶಕ್ಕೆ ಪಡೆದ ಆಹಾರ ಇಲಾಖೆ

ಅನಧಿಕೃತವಾಗಿ ಬಳಸುತ್ತಿದ್ದ ಸಿಲಿಂಡರ್ ಗಳ ವಶಕ್ಕೆ ಪಡೆದ ಆಹಾರ ಇಲಾಖೆ

ಆಹಾರ ಶಿರಸ್ತೆದಾರರಾದ ಎ ಎನ್ ನಟರಾಜ ರೆಡ್ಡಿ ಹಾಗೂ ಆಹಾರ ನಿರೀಕ್ಷಕರು ದಾಳಿ ನಡೆಸಿ ಚಿಂತಾ ಮಣಿ ತಾಲ್ಲೂಕಿನ ಬುರುಡಗುಂಟೆ. ಏನಿಗದೆಲೆ, ಮಿಂಚಿಲಹಳ್ಳಿ ಕ್ರಾಸ್ ಕೆಂಚಾರಹಳ್ಳಿ ಗ್ರಾಮಗಳ ವಿವಿಧ ಅಂಗಡಿಗಳ ಮೇಲೆ ದಾಳಿ ನಡೆಸಿ 15 ಸಿಲೆಂಡರ್ ಗಳನ್ನು ವಶಪಡಿಸಿಕೊಂಡು ಕಾನೂನು ರೀತಿಯಲ್ಲಿ ಕ್ರಮ ಜರುಗಿಸಿದ್ದಾರೆ.

ಬಂಜೆತನ ಎದುರಿಸುತ್ತಿರುವವರಿಗೆ ಫಲವತ್ತತೆ ಕುರಿತು ಮಾರ್ಗದರ್ಶನ ನೀಡಲು ಉಚಿತ ಟೋಲ್-ಫ್ರೀ ಸಂಖ್ಯೆ ಆರಂಭ

ಬಂಜೆತನ ಸಮಸ್ಯೆ: ಮಾರ್ಗದರ್ಶನಕ್ಕೆ ಉಚಿತ ಟೋಲ್-ಫ್ರೀ ಸಂಖ್ಯೆ ಆರಂಭ

ಒತ್ತಡದ ಬದುಕಿನಿಂದಾಗಿ ಸಾಕಷ್ಟು ಜನರು ಇಂದು ಗರ್ಭಧಾರಣೆ ಸಮಸ್ಯೆ ಎದುರಿಸುತ್ತಿದ್ದಾರೆ. ಫಲವತ್ತತೆ ಹೊಂದದೇ ಇರಲು ಕಾರಣವೇನು ಎಂಬುದರ ಬಗ್ಗೆಯೂ ಸಾಕಷ್ಟು ಜನರಿಗೆ ಸ್ಪಷ್ಟತೆ ಇರುವುದಿಲ್ಲ ಅಷ್ಟೇ ಅಲ್ಲದೆ, ಸಾಕಷ್ಟು ಗೊಂದಲ ಹಾಗೂ ಹತಾಶೆ ಹೊಂದಿರುತ್ತಾರೆ. ಮುಂದೆ ಏನು ಮಾಡಬೇಕು ಎಂಬ ಅರಿವಿನ ಕೊರತೆಯಲ್ಲೂ ಇರುತ್ತಾರೆ.

Harassment: ಯುವತಿಗೆ ಕಿರಿಕ್‌ ಮಾಡಿದ ಗಾಂಜಾ ಗ್ಯಾಂಗ್:‌ ಐವರ ಬಂಧನ

ಯುವತಿಗೆ ಕಿರಿಕ್‌ ಮಾಡಿದ ಗಾಂಜಾ ಗ್ಯಾಂಗ್:‌ ಐವರ ಬಂಧನ

Harassment: ಹಾಡಹಗಲೇ ಗಾಂಜಾದ ನಶೆ ಏರಿಸಿಕೊಂಡು ತೂರಾಡುತ್ತಿದ್ದ ಯುವಕರು ನಡುಬೀದಿಯಲ್ಲಿ ಅಟ್ಟಹಾಸ ಮೆರೆದಿದ್ದರು. ಅಂಗಡಿಗೆ ಹೋಗುತ್ತಿದ್ದ ಯುವತಿಯನ್ನು ಅಡ್ಡಗಟ್ಟಿ ಹಲ್ಲೆ ಮಾಡಿದ್ದರು. ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಮೈಲಸಂದ್ರ ಬಳಿಯ ರೇಣುಕಾ ಯಲ್ಲಮ್ಮ ಬಡಾವಣೆಯಲ್ಲಿ ಈ ಕೃತ್ಯ ನಡೆದಿತ್ತು.

Gold Price Today: ಚಿನ್ನದ ದರದಲ್ಲಿ ಮತ್ತೆ ಇಳಿಕೆ; ಇಂದಿನ ರೇಟ್‌ ಚೆಕ್‌ ಮಾಡಿ

ಇಂದು ಚಿನ್ನದ ದರ ಎಷ್ಟಿದೆ? ಇಲ್ಲಿ ಚೆಕ್‌ ಮಾಡಿ

Gold Price Today on 24th June 2025: ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 75 ರೂ. ಇಳಿಕೆಯಾಗಿ 9,155 ರೂ.ಗೆ ಬಂದು ತಲುಪಿದೆ. ಇನ್ನು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರದಲ್ಲಿ 82 ರೂ. ಕಡಿಮೆಯಾಗಿದ್ದು, 9,987 ರೂ.ಗೆ ಬಂದು ನಿಂತಿದೆ. 22 ಕ್ಯಾರಟ್‌ನ 8 ಗ್ರಾಂ ಚಿನ್ನ 73,240 ರೂ. ಬೆಲೆ ಬಾಳಿದರೆ, 10 ಗ್ರಾಂಗೆ ನೀವು 91,550 ರೂ. ಮತ್ತು 100 ಗ್ರಾಂಗೆ 9,15,500 ರೂ. ನೀಡಬೇಕಾಗುತ್ತದೆ.

Mangaluru Airport: ಇರಾನ್‌ ದಾಳಿ: ಮಂಗಳೂರು- ಗಲ್ಫ್‌ ದೇಶಗಳ ವಿಮಾನ ಹಾರಾಟದಲ್ಲಿ ವ್ಯತ್ಯಾಸ

ಇರಾನ್‌ ದಾಳಿ: ಮಂಗಳೂರು- ಗಲ್ಫ್‌ ದೇಶಗಳ ವಿಮಾನ ಹಾರಾಟದಲ್ಲಿ ವ್ಯತ್ಯಾಸ

ಇರಾನ್ ಕ್ಷಿಪಣಿ ದಾಳಿ ಮಾಡಿದ ಕಾರಣ ಮಧ್ಯಪ್ರಾಚ್ಯದ ದೇಶಗಳು ವಾಯುಮಾರ್ಗಗಳನ್ನು ಬಂದ್ ಮಾಡಿವೆ. ಅಲ್ಲಿನ ವಿಮಾನಯಾನ ವಲಯ ಮುಚ್ಚಲ್ಪಟ್ಟ ಕಾರಣ ವಿಮಾನಗಳು ಮಂಗಳೂರಿಗೆ (Mangaluru Airport) ವಾಪಸಾಗಿವೆ. ಮಂಗಳೂರಿನಿಂದ ಅಂತಾರಾಷ್ಟ್ರೀಯ ವಿಮಾನಗಳ ಹಾರಾಟದಲ್ಲಿ ವ್ಯತ್ಯಯವಾಗಿರುವ ಬಗ್ಗೆ ಏರ್​ಪೋರ್ಟ್ ಆಡಳಿತ ಮಾಹಿತಿ ನೀಡಿದೆ.

Bengaluru Stampede: ಚಿನ್ನಸ್ವಾಮಿ ಕಾಲ್ತುಳಿತ ಕುರಿತು ಕೇಂದ್ರಕ್ಕೆ ರಾಜ್ಯ ವರದಿ; ʼಇದೇ ಕಾರಣʼ ಎಂದ ಸರಕಾರ

ಚಿನ್ನಸ್ವಾಮಿ ಕಾಲ್ತುಳಿತ ಕುರಿತು ಕೇಂದ್ರಕ್ಕೆ ರಾಜ್ಯ ವರದಿ

Bengaluru Stampede: ಮೂವರು ಐಪಿಎಸ್ ಅಧಿಕಾರಿಗಳ ನಿರ್ಲಕ್ಷ್ಯವೇ ಘಟನೆಗೆ ಕಾರಣ ಎಂದು ಸರ್ಕಾರ ವರದಿ ನೀಡಿದೆ. ಇದೇ ಕಾರಣಕ್ಕೆ ಮೂವರು ಐಪಿಎಸ್ ಅಧಿಕಾರಿಗಳ ಅಮಾನತ್ತು ಮಾಡಲಾಗಿದೆ ಎಂದು ವರದಿಯಲ್ಲಿ ತಿಳಿಸಿದ್ದಾರೆ. ಆಡಳಿತ ಸುಧಾರಣ ಇಲಾಖೆ ಮೂಲಕ ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಕೆ ಆಗಿದೆ.

Anantkumar Hegde: ಮಾಜಿ ಸಂಸದ ಅನಂತ್‌ ಕುಮಾರ್‌ ಹೆಗಡೆ ಗನ್‌ಮ್ಯಾನ್, ಚಾಲಕನಿಂದ ಗೂಂಡಾಗಿರಿ: ದೂರು ದಾಖಲು

ಅನಂತ್‌ ಕುಮಾರ್‌ ಹೆಗಡೆ ಗನ್‌ಮ್ಯಾನ್, ಚಾಲಕನಿಂದ ಗೂಂಡಾಗಿರಿ: ದೂರು ದಾಖಲು

ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ (Nelamangala) ತಾಲೂಕಿನ ಹಳೇ ನಿಜಗಲ್ ಬಳಿ ಇನ್ನೋವಾ ಕಾರಿನಲ್ಲಿದ್ದ ನಾಲ್ವರ ಮೇಲೆ ಹಲ್ಲೆ, ಗೂಂಡಾಗಿರಿ ನಡೆಸಿದ ಆರೋಪದಲ್ಲಿ ಅನಂತ ಕುಮಾರ್ ಹೆಗಡೆ (Anantkumar Hegde), ಅವರ ಕಾರು ಚಾಲಕ ಹಾಗೂ ಗನ್​ಮ್ಯಾನ್ ಮೇಲೆ ಎಫ್​ಐಆರ್ ದಾಖಲಾಗಿದೆ.