ಅನ್ಯಕೋಮಿನ ಬಾಲಕರಿಂದ ಎಸ್ಎಸ್ಎಲ್ಸಿ ವಿದ್ಯಾರ್ಥಿಯ ಹತ್ಯೆ; ಆಗಿದ್ದೇನು?
ಗೆಳೆಯನ ರಕ್ಷಣೆಗೆ ಹೋದ ಎಸ್ಎಸ್ಎಲ್ಸಿ ವಿದ್ಯಾರ್ಥಿ ಕೊಲೆಯಾಗಿದ್ದಾನೆ. ಬಾಲಕನ ಕೊಲೆಯ ನಂತರ, ಶಿವಮೊಗ್ಗ ನಗರದಲ್ಲಿ ಕೋಮು ಗಲಭೆ ಆಗದಂತೆ ಜಿಲ್ಲಾ ಪೊಲೀಸರು ಎಲ್ಲ ರೀತಿಯ ಮುಂಜಾಗ್ರತೆ ವಹಿಸಿದ್ದಾರೆ. ಘಟನಾ ಸ್ಥಳ, ಮೆಗ್ಗಾನ್ ಜಿಲ್ಲಾಸ್ಪತ್ರೆ ಸೇರಿದಂತೆ ನಗರದಲ್ಲಿ ಪೊಲೀಸರು ಹೈಅಲರ್ಟ್ ಆಗಿದ್ದಾರೆ. ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.