ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಕರ್ನಾಟಕ

Karnataka Weather: ಬಿಸಿಲಿನ ಬೇಗೆ ತಣಿಸಲು ಬರಲಿದೆ ಮಳೆ, ಹಲವೆಡೆ ಯೆಲ್ಲೋ ಅಲರ್ಟ್

ಬಿಸಿಲಿನ ಬೇಗೆ ತಣಿಸಲು ಬರಲಿದೆ ಮಳೆ, ಹಲವೆಡೆ ಯೆಲ್ಲೋ ಅಲರ್ಟ್

ಹವಾಮಾನ ಇಲಾಖೆಯ ವರದಿಯ ಪ್ರಕಾರ, ಮುಂದಿನ 7 ದಿನಗಳ ಕಾಲ ರಾಜ್ಯದ ಹಲವು ಭಾಗಗಳಲ್ಲಿ ಗುಡುಗು ಮತ್ತು ಮಿಂಚು ಸಹಿತ ಹಗುರ ಮಳೆಯಾಗಲಿದೆ. ವಿಶೇಷವಾಗಿ ಕರಾವಳಿ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮಳೆ ಮಾತ್ರವಲ್ಲದೆ, ಪ್ರತಿ ಗಂಟೆಗೆ 30 ರಿಂದ 40 ಕಿಮೀ ವೇಗದಲ್ಲಿ ಬಲವಾದ ಗಾಳಿ ಬೀಸಲಿದೆ.

Cyber alert: ಆ್ಯಂಡ್ರಾಯ್ಡ್‌ ಬಳಕೆದಾರರೇ ಎಚ್ಚರ! ಯಾಮಾರಿದರೆ ನಿಮ್ಮ ಬ್ಯಾಂಕ್‌ ಖಾತೆ ಖಾಲಿಯಾದೀತು!

ಆ್ಯಂಡ್ರಾಯ್ಡ್‌ ಬಳಕೆದಾರರೇ, ನಕಲಿ ಬ್ಯಾಂಕಿಂಗ್ ಆ್ಯಪ್‌ಗಳ ಬಗ್ಗೆ ಎಚ್ಚರ!

ಹೊಸ ಬಗೆಯ ಅಪಾಯಕಾರಿ ಸಾಫ್ಟ್‌ವೇರ್‌ಗಳು (ಮಾಲ್‌ವೇರ್) ಬಂದಿದ್ದು, ‌ಇವು ಸಾಮಾನ್ಯ ಆ್ಯಪ್‌ಗಳ ಮುಖವಾಡ ಧರಿಸಿ ನಿಮ್ಮ ಫೋನ್‌ಗೆ ಪ್ರವೇಶಿಸುತ್ತದೆ. ಇದು ಬ್ಯಾಂಕಿಂಗ್ ಆ್ಯಪ್‌ಗಳು ಅಥವಾ ಕಸ್ಟಮರ್ ಸರ್ವಿಸ್ ಟೂಲ್‌ಗಳಂತೆ ಕಾಣಿಸಿಕೊಳ್ಳುತ್ತದೆ. ಒಮ್ಮೆ ಇನ್‌ಸ್ಟಾಲ್ ಆದರೆ, ನಿಮ್ಮ ಫೋನ್‌ನ ಸಂಪೂರ್ಣ ನಿಯಂತ್ರಣವನ್ನು ಸೈಬರ್ ಕಳ್ಳರ ಕೈಗೆ ನೀಡುತ್ತದೆ.

Dinesh Gundu Rao: ಗುಡ್ ನ್ಯೂಸ್, ಇನ್ನು ಸರ್ಕಾರಿ ಆಸ್ಪತ್ರೆಗಳಲ್ಲೇ ಮೊಣಕಾಲು, ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆ ಲಭ್ಯ

ಇನ್ನು ಸರ್ಕಾರಿ ಆಸ್ಪತ್ರೆಗಳಲ್ಲೇ ಮೊಣಕಾಲು, ಸೊಂಟದ ಕೀಲು ಶಸ್ತ್ರಚಿಕಿತ್ಸೆ

2023-24ರಲ್ಲಿ ಕೇವಲ 633 ಇದ್ದ ಶಸ್ತ್ರಚಿಕಿತ್ಸೆಗಳ ಸಂಖ್ಯೆ, 2025-26ರ ಆರ್ಥಿಕ ವರ್ಷದಲ್ಲಿ 1,119ಕ್ಕೆ ಏರಿಕೆಯಾಗಿದೆ. ಸರ್ಕಾರಿ ಆಸ್ಪತ್ರೆಗಳ ಪಾಲು ಶೇ. 35 ರಿಂದ ಶೇ. 99ಕ್ಕೆ ಏರಿದೆ. ಪರಿಣಿತ ಮೂಳೆ ಶಸ್ತ್ರಚಿಕಿತ್ಸಕರನ್ನು ನಿಯೋಜಿಸಲಾಗಿದೆ ಮತ್ತು ಅಲ್ಲಿನ ವೈದ್ಯರಿಗೆ ವಿಶೇಷ ತರಬೇತಿ ನೀಡಲಾಗುತ್ತಿದೆ ಎಂದು ಆರೋಗ್ಯ ಸಚಿವರು ತಿಳಿಸಿದ್ದಾರೆ.

D Sudhakar: ಸಚಿವ ಡಿ ಸುಧಾಕರ್‌ ಆರೋಗ್ಯ ಸ್ಥಿತಿ ಗಂಭೀರ, ಶ್ವಾಸಕೋಶ ಕಸಿ ಚಿಕಿತ್ಸೆಗೆ ಸಿದ್ಧತೆ

ಸಚಿವ ಡಿ ಸುಧಾಕರ್‌ ಆರೋಗ್ಯ ಗಂಭೀರ, ಶ್ವಾಸಕೋಶ ಕಸಿ ಚಿಕಿತ್ಸೆಗೆ ಸಿದ್ಧತೆ

ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಡಿ ಸುಧಾಕರ್ ಮೊಣಕಾಲಿನ ಆಪರೇಶನ್‌ಗೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಕಳೆದ ಹಲವು ದಿನಗಳಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಡಿ ಸುಧಾಕರ್ ಸದ್ಯ ಶಾವ್ಸಕೋಶ ಸೋಂಕಿನಿಂದ ಬಳಲುತ್ತಿದ್ದಾರೆ. ಮೊಣಕಾಲ ಶಸ್ತ್ರಚಿಕಿತ್ಸೆ ಬಳಿಕ ಶ್ವಾಸಕೋಶದ ಸೋಂಕು ಉಲ್ಬಣಿಸಿತ್ತು.

Prisoner Escape: ಬಳ್ಳಾರಿ ಜೈಲಿನಿಂದ ವಿಚಾರಣಾಧೀನ ಕೈದಿ ಪರಾರಿ

ಬಳ್ಳಾರಿ ಜೈಲಿನಿಂದ ವಿಚಾರಣಾಧೀನ ಕೈದಿ ಪರಾರಿ

ವಿಜಯನಗರ ಜಿಲ್ಲೆಯ ಹರಪನಹಳ್ಳಿ ಮೂಲದ ಆರೋಪಿ ಅಣ್ಣಪ್ಪ ಎಂಬಾತ ಅಪರಾಧ ಪ್ರಕರಣದಲ್ಲಿ ಭಾಗಿಯಾಗಿ ಬಳ್ಳಾರಿ ಜೈಲು ಪಾಲಾಗಿದ್ದ. ನಿನ್ನೆ ಮಧ್ಯಾಹ್ನ ಜೈಲಿನೊಳಗಿದ್ದ ಮರದ ಮೇಲಿಂದ ಬಿದ್ದು ಗಾಯ ಮಾಡಿಕೊಂಡಿದ್ದ, ಈ ಹಿನ್ನೆಲೆ ಪೊಲೀಸರು ಗಾಯಗೊಂಡಿದ್ದ ಆರೋಪಿಯನ್ನು ಕೂಡಲೇ ಬಿಮ್ಸ್​ ಆಸ್ಪತ್ರೆಗೆ ಕರೆತಂದಿದ್ದರು.

ಒಡೆದ ಮನೆಯಂತಾದ ಕಾಂಗ್ರೆಸ್ : ಸಂಚಲನಕ್ಕೆ ಕಾರಣವಾದ ಕೆಪಿಸಿಸಿ ನೋಟೀಸು

ಶಿಸ್ತುಕ್ರಮಕ್ಕೆ ಆಗ್ರಹಿಸಿ ಪತ್ರ ಬರೆದ ಬ್ಲಾಕ್ ಕಾಂಗ್ರೆಸ್

ಶಾಸಕ ಪ್ರದೀಪ್ ಈಶ್ವರ್(MLA Pradeep Eshwar) ನಡೆಯ ವಿರುದ್ದ ಬಹಿರಂಗವಾಗಿ ಟೀಕೆ ಟಿಪ್ಪಣಿ ಮಾಡಿದ್ದ ಚಿಮುಲ್ ನಿರ್ದೇಶಕರಾದ ಭರಣಿ ವೆಂಕಟೇಶ್, ಕಾಕಲಚಿಂತೆ ರಾಜಣ್ಣ, ಮಿಲ್ಟನ್ ವೆಂಕಟೇಶ್ ಅವರಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ.ಸಿ. ಚಂದ್ರಶೇಖರ್ ಕಾರಣ ಕೇಳಿ ನೀಡಿರುವ ನೋಟೋಸು ಭಾರೀ ಸಂಚಲವನ್ನು ಉಂಟು ಮಾಡಿದೆ.

ಬಸವಕಲ್ಯಾಣದಲ್ಲಿ ಬಸವೇಶ್ವರರ ರಥೋತ್ಸವದ ವೇಳೆ ಘೋರ ದುರಂತ; ರಥದ ಚಕ್ರಕ್ಕೆ ಸಿಲುಕಿ ವ್ಯಕ್ತಿ ಸಾವು

ಬಸವಕಲ್ಯಾಣದಲ್ಲಿ ರಥದ ಚಕ್ರಕ್ಕೆ ಸಿಲುಕಿ ವ್ಯಕ್ತಿ ಸಾವು

Bidar News: ಬೀದರ್‌ ಜಿಲ್ಲೆಯ ಬಸವಕಲ್ಯಾಣ ನಗರದಲ್ಲಿ ಬಸವೇಶ್ವರ ದೇವಸ್ಥಾನ ಜಾತ್ರಾ ಮಹೋತ್ಸವ ವೇಳೆ ಭೀಕರ ಅವಘಡ ಸಂಭವಿಸಿದೆ. ರಥ ಎಳೆಯುವ ವೇಳೆ ಆಯಾ ತಪ್ಪಿ ಚಕ್ರಕ್ಕೆ ಸಿಲುಕಿ ಗಾಯಗೊಂಡಿದ್ದ ಧನರಾಜ ಚಾಕೂರೆ (65) ಮೃತಪಟ್ಟಿದ್ದಾರೆ.

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಕೋಕಾ-ಕೋಲಾ ವಿನೂತನ ಯೋಜನೆ: ಪಲ್ಸ್ ಆಪ್ ಮೂಲಕ ಪ್ರಯಾಣಿಕರಿಗೆ ತಂಪು ಪಾನೀಯ ವಿತರಣೆ

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಕೋಕಾ-ಕೋಲಾ ವಿನೂತನ ಯೋಜನೆ

ವಿಮಾನ ನಿಲ್ದಾಣದ ಎರಡೂ ಟರ್ಮಿನಲ್‌ಗಳ ಮೂಲಕ ಪ್ರಯಾಣಿಸುವವರು, ಬೆಂಗಳೂರು ವಿಮಾನ ನಿಲ್ದಾಣದ ಅಧಿಕೃತ ಆಲ್- ಇನ್- ಒನ್ ಡಿಜಿಟಲ್ ಪ್ಲಾಟ್‌ ಫಾರ್ಮ್ ಆದ 'ಪಲ್ಸ್' ಆಪ್ ಅನ್ನು ಸೇರಿದರೆ, ಅವರಿಗೆ ಉಚಿತವಾಗಿ ತಂಪಾದ ಕೋಕಾ-ಕೋಲಾ ನೀಡಲಾಗುತ್ತದೆ. ಇದನ್ನು ಇದಕ್ಕಾಗಿಯೇ ಮೀಸ ಲಾದ 'ಕೋಕ್ ಜೋನ್' ನಲ್ಲಿ ಪಡೆದುಕೊಳ್ಳಬಹುದು.

ʼʼನಿಮ್ಮ ದುರಾಡಳಿತಕ್ಕೆ ವಿದ್ಯಾರ್ಥಿಗಳನ್ನೇಕೆ ಎಳೆದು ತರುತ್ತೀರಿ?ʼʼ ಕಲಬುರಗಿ ಮಕ್ಕಳ ಆತ್ಮಸ್ಥೈರ್ಯ ಕುಗ್ಗಿಸಬೇಡಿ ಎಂದ  ಪ್ರಿಯಾಂಕ್‌ ಖರ್ಗೆಗೆ ನೆಟ್ಟಿಗರಿಂದ ಕ್ಲಾಸ್‌

ಮಕ್ಕಳ ಆತ್ಮಸ್ಥೈರ್ಯ ಕುಗ್ಗಿಸಬೇಡಿ ಎಂದ ಪ್ರಿಯಾಂಕ್‌ಗೆ ಕ್ಲಾಸ್‌

Priyank Kharge: ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟವಾಗಿದ್ದು, ಕಲಬುರಗಿ ಜಿಲ್ಲೆ ಕೊನೆಯ ಸ್ಥಾನದಲ್ಲಿದೆ. ಈ ಹಿನ್ನೆಲೆಯಲ್ಲಿ ಟ್ರೋಲ್‌ ಮಾಡಿದ ಬಿಜೆಪಿಗೆ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ತಿರುಗೇಟು ನೀಡಲು ಮುಂದಾಗಿದ್ದರು. ಆದರೆ ಇದೀಗ ಅವರಿಗೆ ನೆಟ್ಟಿಗರು ಕ್ಲಾಸ್‌ ತೆಗೆದುಕೊಂಡಿದ್ದಾರೆ. ʼʼನಿಮ್ಮ ವೈಫಲ್ಯಕ್ಕೆ ವಿದ್ಯಾರ್ಥಿಗಳನ್ನು ಎಳೆದು ತರಬೇಡಿʼʼ ಎಂದಿದ್ದಾರೆ.

ಅಮೆಜಾನ್ ಇಂಡಿಯಾದಿಂದ ರೂ. 2800 ಕೋಟಿ ಮೀರಿ ಹೂಡಿಕೆ: ಅಸೋಸಿಯೇಟ್ ಸುರಕ್ಷತೆ ಮತ್ತು ಸ್ವಾಸ್ಥ್ಯದ ಸುಧಾರಣೆ ಮತ್ತು ತನ್ನ ಅಖಿಲ-ಭಾರತ ಕಾರ್ಯಾಚರಣೆಗಳ ಜಾಲದ ಸದೃಢತೆ

ಅಮೆಜಾನ್ ಇಂಡಿಯಾದಿಂದ ರೂ. 2800 ಕೋಟಿ ಮೀರಿ ಹೂಡಿಕೆ

2013ರಲ್ಲಿ ಅಮೆಜಾನ್.ಇನ್ ಪ್ರಾರಂಭವಾದ ದಿನದಿಂದಲೂ ನಾವು ಭಾರತದ ಅತ್ಯಂತ ಸುರಕ್ಷಿತ, ವೇಗದ ಮತ್ತು ಅತ್ಯಂತ ವಿಶ್ವಾಸಾರ್ಹ ಕಾರ್ಯಾಚರಣೆಗಳ ಜಾಲವನ್ನು ನಿರ್ಮಿಸಿದ್ದು ದೇಶದ ಪ್ರತಿ ಸೇವೆ ಒದಗಿಸಬಲ್ಲ ಪಿನ್ ಕೋಡ್ ಗಳಲ್ಲಿ ಗ್ರಾಹಕರಿಗೆ ಸೇವೆ ಒದಗಿಸುತ್ತಿದೆ. ಈ ಜಾಲದ ಕೇಂದ್ರದಲ್ಲಿ ನಮ್ಮ ಜನರಿದ್ದಾರೆ ಮತ್ತು ನಾವು ಸುರಕ್ಷತೆ, ಆರೋಗ್ಯ ಮತ್ತು ಹಣಕಾಸು ಸ್ವಾಸ್ಥ್ಯದ ಮಾನದಂಡ ವಿಸ್ತರಿಸಲು ಬದ್ಧರಾಗಿದ್ದೇವೆ

'ಪ್ರಿವೆಂಟಿವ್ ಜೆನೊಮಿಕ್ಸ್ ಕ್ಲಿನಿಕ್' ಪ್ರಾರಂಭಿಸಿದ ಫೋರ್ಟಿಸ್ ಆಸ್ಪತ್ರೆ ಬೆಂಗಳೂರು; ನಿಖರ ವೈದ್ಯಕೀಯ ಪದ್ಧತಿಯಲ್ಲಿ ಹೊಸ ಅಧ್ಯಾಯ ಆರಂಭ

'ಪ್ರಿವೆಂಟಿವ್ ಜೆನೊಮಿಕ್ಸ್ ಕ್ಲಿನಿಕ್' ಪ್ರಾರಂಭಿಸಿದ ಫೋರ್ಟಿಸ್ ಆಸ್ಪತ್ರೆ

ಪ್ರಿವೆಂಟಿವ್ ಜೆನೊಮಿಕ್ಸ್ ಕ್ಲಿನಿಕ್ (ತಡೆಗಟ್ಟುವ ತಳಿವಿಜ್ಞಾನ ಚಿಕಿತ್ಸಾಲಯ) ಸುಧಾರಿತ ಆನುವಂಶಿಕ ಪರೀಕ್ಷೆ, ತಜ್ಞರ ಸಮಾಲೋಚನೆ ಮತ್ತು ವೈಯಕ್ತಿಕ ಚಿಕಿತ್ಸಾ ಯೋಜನೆಗಳನ್ನು ನೀಡುವ ಗುರಿಯನ್ನು ಹೊಂದಿದೆ. ಇದು ವ್ಯಕ್ತಿಗಳು ತಮ್ಮ ಆನುವಂಶಿಕ ಗುಣಲಕ್ಷಣಗಳ ಆಧಾರದ ಮೇಲೆ ಆರೋಗ್ಯ ರಕ್ಷಣೆಯ ಕುರಿತು ಸರಿಯಾದ ನಿರ್ಧಾರಗಳನ್ನು ತೆಗೆದುಕೊಳ್ಳಲು ಸಹಾಯ ಮಾಡುತ್ತದೆ.

Self Harming: ಶೇರ್ ಮಾರ್ಕೇಟ್ ನಲ್ಲಿ ನಷ್ಟ: ಯುವಕ ನೇಣಿಗೆ ಶರಣು

ಶೇರ್ ಮಾರ್ಕೇಟ್ ನಲ್ಲಿ ನಷ್ಟ: ಯುವಕ ನೇಣಿಗೆ ಶರಣು

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಪಟ್ಟಣದಲ್ಲಿ ಯುವಕನೋರ್ವ ಶೇರ್ ಮಾರ್ಕೇಟ್ ನಲ್ಲಿ ಹಣ ಕಳೆದುಕೊಂಡ ಆಘಾತದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಸಿದ್ಧಾಪುರದ ಹರ್ಷವರ್ಧನ್ (22)ನೇಣಿಗೆ ಶರಣಾದ ಯುವಕ. ಸಿದ್ದಾಪುರದ ಮನೆಯಲ್ಲೇ ಫ್ಯಾನಿಗೆ ನೇಣು ಹಾಕಿಕೊಂಡ ಯುವಕ ಮೊಬೈಲ್ ಮೂಲಕ ಸ್ಟಾಕ್ ಎಕ್ಸ್‌ಚೇಂಜ್ ನಲ್ಲಿ ಟ್ರೇಡಿಂಗ್ ಮಾಡುತ್ತಿದ್ದನೆಂದು ತಿಳಿದು ಬಂದಿದೆ.

SSLC Result: ಎಸ್‌ಡಿಎಂ ಶಾಲೆಯ ವಿದ್ಯಾರ್ಥಿನಿಯರ ಎಸ್‌ಎಸ್‌ಎಲ್‌ಸಿ ಶ್ರೇಷ್ಠ ಸಾಧನೆ

ಎಸ್‌ಡಿಎಂ ಶಾಲೆಯ ವಿದ್ಯಾರ್ಥಿನಿಯರ ಎಸ್‌ಎಸ್‌ಎಲ್‌ಸಿ ಶ್ರೇಷ್ಠ ಸಾಧನೆ

ವಿದ್ಯಾರ್ಥಿನಿ ಜಿ ಮಾಧುರ್ಯ ಅವರು ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 625ಕ್ಕೆ 620 ಅಂಕಗಳನ್ನು ಪಡೆದು ಅತ್ಯುತ್ತಮ ಸಾಧನೆ ಮಾಡಿದ್ದಾರೆ. ಅವರು ಕೇವಲ ಶೈಕ್ಷಣಿಕ ಕ್ಷೇತ್ರದಲ್ಲೇ ಅಲ್ಲದೆ ಸಾಂಸ್ಕೃ ತಿಕ ಕ್ಷೇತ್ರದಲ್ಲಿಯೂ ಪ್ರತಿಭಾವಂತಳಾಗಿದ್ದು, ಉತ್ತಮ *ನೃತ್ಯಗಾತಿಯಾಗಿ ಗುರುತಿಸಿಕೊಂಡಿದ್ದಾರೆ. ಜೊತೆಗೆ ಅಕ್ಷರ ಜೋಡಣೆ, ಪ್ರಬಂಧ ರಚನೆ, ಕಥೆ ಹಾಗೂ ಕವನ ರಚನೆಯಲ್ಲಿ ವಿಶಿಷ್ಟ ಸಾಮರ್ಥ್ಯ ತೋರಿದ್ದಾರೆ.

ಮೇ 9ರಂದು ಚಿತ್ರದುರ್ಗದಲ್ಲಿ ಬಿಎಸ್‌ವೈ ಅಭಿಮಾನೋತ್ಸವ: ಗೋವಿಂದ ಕಾರಜೋಳ

ಮೇ 9ರಂದು ಚಿತ್ರದುರ್ಗದಲ್ಲಿ ಬಿಎಸ್‌ವೈ ಅಭಿಮಾನೋತ್ಸವ: ಕಾರಜೋಳ

Govind Karjol: ಮೇ 9ರಂದು ಚಿತ್ರದುರ್ಗದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರ ಅಭಿಮಾನೋತ್ಸವ ಕಾರ್ಯಕ್ರಮ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಏಪ್ರಿಲ್‌ 26ರ ಬೆಳಗ್ಗೆ 10 ಗಂಟೆಗೆ ಭೂಮಿಪೂಜೆ ನೆರವೇರಿಸಲಾಗುವುದು ಎಂದು ಮಾಜಿ ಉಪ ಮುಖ್ಯಮಂತ್ರಿ ಮತ್ತು ಸಂಸದ ಗೋವಿಂದ ಕಾರಜೋಳ ತಿಳಿಸಿದ್ದಾರೆ.

2,000 ರುಪಾಯಿಗೆ ಭವಿಷ್ಯ ಹಾಳು ಮಾಡಿಕೊಳ್ಳಬೇಡಿ; ಮಹಿಳೆಯರಿಗೆ ಎಚ್‌.ಡಿ. ಕುಮಾರಸ್ವಾಮಿ ಕಿವಿಮಾತು

2,000 ರುಪಾಯಿಗೆ ಭವಿಷ್ಯ ಹಾಳು ಮಾಡಿಕೊಳ್ಳಬೇಡಿ ಎಂದ ಎಚ್‌ಡಿಕೆ

HD Kumaraswamy: ಕಾಂಗ್ರೆಸ್ ಸರ್ಕಾರ ಸಾಲ ಮಾಡಿ ನಿಮ್ಮ ತಲೆಯ ಮೇಲೆ ಹೊರೆ ಹೊರೆಸಿ 2,000 ರುಪಾಯಿ ಗ್ಯಾರಂಟಿ ಕೊಡುತ್ತಿದೆ. ದಿನ ಬೆಳಗ್ಗೆ ಬೆಲೆ ಏರಿಕೆ ಮಾಡಿ ತೆರಿಗೆ ಏರಿಸಿದರೆ 2,000 ರುಪಾಯಿ ಏನು ಬಂತು? ನಾನಾದರೆ 5,000 ರುಪಾಯಿ ಕೊಡುತ್ತಿದ್ದೆ. ನಿಮಗೆ ಗ್ಯಾರಂಟಿ ಬೇಕಾದರೆ ನಾನೇ 5,000 ರುಪಾಯಿ ಕೊಡುತ್ತೇನೆ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

Karnataka SSLC Results: ʼʼನನ್ನ ಅಂಕದ ಹಿಂದೆ ಪೋಷಕರ ತ್ಯಾಗ, ಶಿಕ್ಷಕರ ಪ್ರೋತ್ಸಾಹ ಇದೆʼʼ: 625 ಅಂಕ ಪಡೆದ ಬೃಂದಾ ಮನದಾಳ

625 ಅಂಕ ಪಡೆದ ಬೃಂದಾ ಓದಿನ ತಯಾರಿ ಹೇಗಿತ್ತು?

SSLC Result 2026: 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ಒಟ್ಟು 7 ಮಂದಿ 625 ಅಂಕಕ್ಕೆ 625 ಅಂಕ ಗಳಿಸಿ ಪ್ರಥಮ ಸ್ಥಾನ ಪಡೆದಿದ್ದಾರೆ. ಈ ಪೈಕಿ ಚಿಕ್ಕಮಗಳೂರು ನಗರದ ಸೈಂಟ್ ಮೇರಿಸ್ ಶಾಲೆಯ ವಿದ್ಯಾರ್ಥಿನಿ ಬೃಂದಾ ಎಂ. ತಾಪ್ಸೆ ʼವಿಶ್ವವಾಣಿ ಟಿವಿʼ ಪ್ರತಿನಿಧಿ ಶಿವಪ್ರಸಾದ್‌ ಬೋಳಂತೂರು ಜತೆ ಮಾತನಾಡಿ ಸಂತಸ ವ್ಯಕ್ತಪಡಿಸಿದ್ದಾಳೆ.

SSLC Result 2026: ಟೈಲರ್‌ ಮಗಳಿಗೆ ರಾಜ್ಯದಲ್ಲೇ ದ್ವಿತೀಯ ಸ್ಥಾನ; ಮುಂದೆ ವೈದ್ಯೆಯಾಗುವ ಕನಸು

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಟೈಲರ್ ಮಗಳು ಟಾಪರ್‌

Karnataka SSLC Results 2026: ಟೈಲರ್ ಮಹಮ್ಮದ್ ಜಪ್ರುದ್ದೀನ್ ಅವರ ಪುತ್ರಿ ಸಾದಿಯಾ ಬಾನು ತುಮಕೂರು ಶೈಕ್ಷಣಿಕ ಜಿಲ್ಲೆಗೆ ಸೇರಿದ ನಗರದ ಶ್ರೀದೇವಿ ವಿದ್ಯಾಮಂದಿರದಲ್ಲಿ ವ್ಯಾಸಂಗ ಮಾಡಿ, ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 624 ಅಂಕ ಗಳಿಸಿ ರಾಜ್ಯಕ್ಕೆ ದ್ವಿತೀಯ ಹಾಗೂ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದ್ದಾಳೆ.

Karnataka SSLC Result: ಪೆಟ್ರೋಲ್ ಬಂಕ್ ಕಾರ್ಮಿಕನ ಮಗಳಿಗೆ 623 ಅಂಕ; ಬಡತನದ ಮಧ್ಯೆಯೂ ಅರಳಿದ ಪ್ರತಿಭೆ

ಬಡತನದ ನಡುವೆಯೂ 623 ಅಂಕ ಗಳಿಸಿದ ವಿದ್ಯಾರ್ಥಿನಿ

Karnataka SSLC Result 2026: ತುಮಕೂರು ಜಿಲ್ಲೆಯ ಮಧುಗಿರಿ ಪಟ್ಟಣದ ಪೆಟ್ರೋಲ್ ಬಂಕ್‌ನಲ್ಲಿ ಕೆಲಸ ಮಾಡುವ ದೇವೇಂದರ್ ಎಂಬುವರ ಪುತ್ರಿ ಹಿತಾಶ್ರೀ ಡಿ. ಮಧುಗಿರಿ ಶೈಕ್ಷಣಿಕ ಜಿಲ್ಲೆಗೆ ಸೇರಿದ ಮಧುಗಿರಿ ಪಟ್ಟಣದ ಚಿರೆಕ್ ಪಬ್ಲಿಕ್ ಶಾಲೆಯಲ್ಲಿ ವ್ಯಾಸಂಗ ಮಾಡಿ, ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 623 ಅಂಕಗಳನ್ನು ಗಳಿಸಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದಿದ್ದಾಳೆ.

ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಎಡವಟ್ಟು; ಶಿರಸಿಯ ಅಂಧ ವಿದ್ಯಾರ್ಥಿನಿ ಪರೀಕ್ಷೆಗೆ ಹಾಜರಾಗಿದ್ದರೂ ಗೈರು ಎಂದು ಉಲ್ಲೇಖ

ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಎಡವಟ್ಟು; ಆತಂಕದಲ್ಲಿ ಅಂಧ ವಿದ್ಯಾರ್ಥಿನಿ

Sirsi News: ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶ ಪ್ರಕಟಣೆ ವೇಳೆ ನಡೆದ ಎಡವಟ್ಟಿನಿಂದ ಅಂಧ ವಿದ್ಯಾರ್ಥಿನಿಯೊಬ್ಬಳ ಭವಿಷ್ಯ ಸಂಕಷ್ಟಕ್ಕೆ ಸಿಲುಕುವಂತಾಗಿದೆ. ಶಿರಸಿ ನಗರದ ಯೂನಿಯನ್ ಪ್ರೌಢ ಶಾಲೆಯ ವಿದ್ಯಾರ್ಥಿನಿ ಲೀಸಾ ಖಾನಮ್ ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಎಲ್ಲ ಆರು ವಿಷಯಗಳನ್ನೂ ಬರೆದಿದ್ದರೂ, ಫಲಿತಾಂಶದಲ್ಲಿ ಸಮಾಜ ವಿಜ್ಞಾನ ವಿಷಯದಲ್ಲಿ ಗೈರು ಎಂದು ನಮೂದಿಲಾಗಿದೆ.

ಸರ್ಕಾರಿ ಶಾಲಾ ಶಿಕ್ಷಕನ ಮಗಳು ರಾಜ್ಯಕ್ಕೆ ಪ್ರಥಮ: ಎಲ್ಲ ಪೋಷಕರಿಗೆ ಮಾದರಿ ತಂದೆಯ ಈ ನಡೆ

ಮಗಳನ್ನು ಸರ್ಕಾರಿ ಶಾಲೆಯಲ್ಲೇ ಓದಿಸಿ ಟಾಪರ್ ಮಾಡಿದ ಶಿಕ್ಷಕ ತಂದೆ

Karnataka SSLC Result: ಈ ವರ್ಷ ರಾಜ್ಯದ ಏಳು ವಿದ್ಯಾರ್ಥಿಗಳು 625ಕ್ಕೆ 625 ಅಂಕಗಳನ್ನು ಗಳಿಸಿ ಎಸ್‌ಎಸ್‌ಎಲ್‌ಸಿಯಲ್ಲಿ ಪ್ರಥಮ ಸ್ಥಾನ ಗಳಿಸಿದ್ದಾರೆ. ಇದರಲ್ಲಿ ಬೆಳಗಾವಿ ಶಾಲೆಯ ವಿದ್ಯಾರ್ಥಿನಿ ಪ್ರಾರ್ಥನಾ ಬಿರಾದಾರ ಕೂಡ ಸೇರಿದ್ದಾಳೆ. ಈಕೆ 625ಕ್ಕೆ 625 ಅಂಕ ಪಡೆದು ಸರ್ಕಾರಿ ಶಾಲೆಯಲ್ಲಿ ಓದಿಯೂ ಟಾಪರ್‌ ಆಗಬಹುದು ಎನ್ನುವುದನ್ನು ತೋರಿಸಿಕೊಟ್ಟಿದ್ದಾರೆ. ಅವರ ತಂದೆ ಸರ್ಕಾರಿ ಶಾಲೆಯ ಶಿಕ್ಷಕರಾಗಿದ್ದು, ಮಗಳನ್ನು ಅದೇ ಶಾಲೆಯಲ್ಲಿ ಓದಿಸಿ ಮಾದರಿ ಎನಿಸಿಕೊಂಡಿದ್ದಾರೆ.

ಎಸ್‌ಎಸ್‌ಎಲ್‌ಸಿ ಬಳಿಕ ಮುಂದೇನು? ವಿದ್ಯಾರ್ಥಿಗಳ ಮುಂದಿದೆ ಬಹು ಆಯ್ಕೆ: ಈ ಪೈಕಿ ನಿಮ್ಮ ಆಪ್ಶನ್‌ ಯಾವುದು?

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಮುಂದಿದೆ ಬಹು ಆಯ್ಕೆ

What After SSLC? ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದೆ. ಈ ಬಾರಿ ಉತ್ತಮ ಫಲಿತಾಂಶ ದಾಖಲಾಗಿದ್ದು, ಬರೋಬ್ಬರಿ ಶೇಕಡಾ 94.10 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳು ಮುಂದೆ ಯಾವ ಕೋರ್ಸ್‌ ಆಯ್ಕೆ ಮಾಡುತ್ತಾರೆ ಎನ್ನುವುದರ ಮೇಲೆ ಅವರ ಭವಿಷ್ಯ ನಿರ್ಧಾರವಾಗುತ್ತದೆ. ಹಾಗಾರೆ ಅವರ ಮುಂದಿರುವ ಆಯ್ಕೆಗಳೇನು? ಇಲ್ಲಿದೆ ಸಮಗ್ರ ವಿವರ.

Karnataka SSLC Result: 623 ಅಂಕ ಗಳಿಸಿದ ಗಣೇಶ್ ಬೋಸ್ಲೆ ಕಲಬುರಗಿಗೆ ಜಿಲ್ಲೆಗೆ ಟಾಪರ್

ಎಸ್‌ಎಸ್‌ಎಲ್‌ಸಿಐಲ್ಲಿ 623 ಅಂಕ ಗಳಿಸಿ ಗಣೇಶ್ ಬೋಸ್ಲೆ ಕಲಬುರಗಿಗೆ ಟಾಪರ್

Karnataka SSLC Exam Result: ಕಲಬುರಗಿ ನಗರದ ಅಜೀಮ್ ಪ್ರೇಮ್‌ಜೀ ಶಾಲೆಯ ವಿದ್ಯಾರ್ಥಿ ಗಣೇಶ್ ಬೋಸ್ಲೆ 625ಕ್ಕೆ 623 ಅಂಕಗಳನ್ನು ಪಡೆಯುವ ಮೂಲಕ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಜಿಲ್ಲೆಗೆ ಪ್ರಥಮ ಹಾಗೂ ರಾಜ್ಯಕ್ಕೆ ತೃತೀಯ ಸ್ಥಾನವನ್ನು ಪಡೆದಿದ್ದಾರೆ.

CET Exam: ವಿದ್ಯಾರ್ಥಿನಿಯರ ಮೂಗಿಗೆ ಗಮ್‌ ಟೇಪ್‌ ಅಂಟಿಸಿದ ಭದ್ರತಾ ಸಿಬ್ಬಂದಿ; ಚಿಕ್ಕಮಗಳೂರಲ್ಲಿ ಅಚ್ಚರಿಯ ದೃಶ್ಯ

ವಿದ್ಯಾರ್ಥಿನಿಯರ ಮೂಗಿಗೆ ಗಮ್‌ ಟೇಪ್‌ ಅಂಟಿಸಿದ ಭದ್ರತಾ ಸಿಬ್ಬಂದಿ

ರಾಜ್ಯಾದ್ಯಂತ ಎಂಜಿನಿಯರಿಂಗ್, ಕೃಷಿ ವಿಜ್ಞಾನ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಸುವ 2026ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಯುತ್ತಿದೆ. ಈ ಮಧ್ಯೆ ಚಿಕ್ಕಮಗಳೂರಿನಲ್ಲಿ ಮೂಗುತಿ ಧರಿಸಿ ಬಂದ ವಿದ್ಯಾರ್ಥಿನಿಯರ ಮೂಗಿಗೆ ಭದ್ರತಾ ಸಿಬ್ಬಂದಿ ಗಮ್ ಟೇಪ್ ಅಂಟಿಸಿದ್ದಾರೆ.

SSLC Results 2026: 625 ಅಂಕ ಪಡೆದ ದಾವಣಗೆರೆಯ ಭರತ್‌ನ ಫಸ್ಟ್ ರಿಯಾಕ್ಷನ್ ಹೇಗಿತ್ತು?

625 ಅಂಕ ಪಡೆಯಲು ಶಿಕ್ಷಕರೇ ಪ್ರಮುಖ ಕಾರಣ ಎಂದ ಟಾಪರ್ ಭರತ್

SSLC ಪರೀಕ್ಷೆಯಲ್ಲಿ 625ಕ್ಕೆ 625 ಅಂಕವನ್ನು ರಾಜ್ಯದ ಏಳು ವಿದ್ಯಾರ್ಥಿಗಳು ಪಡೆದಿದ್ದು ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಕಬ್ಬಳ ಗ್ರಾಮದ ಶ್ರೀ ವಿದ್ಯಾಲಕ್ಷ್ಮೀ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಭರತ್ ಜಿ ಕೂಡ ಒಬ್ಬರಾಗಿದ್ದಾರೆ. 625 ಅಂಕಗಳನ್ನು ಪಡೆದು ರಾಜ್ಯಕ್ಕೆ ಟಾಪರ್ ಆಗಿ ಮಿಂಚಿದ್ದಾರೆ. ಈ ಸಾಧನೆಗೆ ಮುಖ್ಯ ಕಾರಣ ಯಾರು? ತನ್ನ ಓದಿನಲ್ಲಿ ಸವಾಲುಗಳೇನಿತ್ತು ಎಂದು ಖುದ್ದಾಗಿ ವಿದ್ಯಾರ್ಥಿ ಭರತ್ ಜಿ ಅವರೇ ವಿಶ್ವವಾಣಿ ಟಿವಿ ಜೊತೆ ಮಾತನಾಡಿದ್ದಾರೆ.

Loading...