ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಕರ್ನಾಟಕ

Kantara: Chapter 1: ನೀವು ದೈವಗಳ ಅನುಕರಣೆ ಮಾಡೋದು ಸರೀನಾ?; ಕಾಂತಾರ-1 ಚಿತ್ರತಂಡದ ವಿರುದ್ಧ ನೆಟ್ಟಿಗರ ಆಕ್ರೋಶ

ನೀವು ದೈವಗಳ ಅನುಕರಣೆ ಮಾಡೋದು ಸರೀನಾ?; ಕಾಂತಾರ ವಿರುದ್ಧ ಆಕ್ರೋಶ

Sandalwood News: ಒಂದೆಡೆ ಕಾಂತಾರ ಚಿತ್ರತಂಡ ದೈವಗಳನ್ನು ಅನುಕರಿಸಬಾರದು ಎಂದು ಎಚ್ಚರಿಕೆ ನೀಡಿದ್ದರೆ, ಮತ್ತೊಂದೆಡೆ ಚಿತ್ರತಂಡದ ವಿರುದ್ಧ ಕೆಲವರು ಅಸಮಾಧಾನ ಹೊರಹಾಕುತ್ತಿದ್ದಾರೆ. ಸಿನಿಮಾದಲ್ಲಿ ನೀವು ದೈವಗಳನ್ನು ಅನುಕರಿಸಿದರೆ ಸರಿ, ಪ್ರೇಕ್ಷಕರು ತಮ್ಮ ಖುಷಿಗಾಗಿ ದೈವಗಳನ್ನು ಅನುಕರಣೆ ಮಾಡಿದರೆ ತಪ್ಪಾ? ಎಂದು ಕೆಲ ನೆಟ್ಟಿಗರು ಪ್ರಶ್ನಿಸಿದ್ದಾರೆ.

ಬೆಂಗಳೂರಿನಲ್ಲೊಂದು ಭಯಾನಕ ಘಟನೆ: ಯುವತಿಯೊಂದಿಗೆ ಅನುಚಿತವಾಗಿ ವರ್ತಿಸಿದ ಉಬರ್ ಕ್ಯಾಬ್ ಡ್ರೈವರ್; ವಿಡಿಯೊ ಇಲ್ಲಿದೆ

ಬೆಂಗಳೂರು ಕ್ಯಾಬ್‌ನಲ್ಲಾದ ಕಹಿ ಅನುಭವ ಹಂಚಿಕೊಂಡ ಇನ್‌ಫ್ಲುಯೆನ್ಸರ್‌

ಸಿಲಿಕಾನ್ ಸಿಟಿ ಬೆಂಗಳೂರು ಮಹಿಳೆಯರಿಗೆ, ಯುವತಿಯರಿಗೆ ಎಷ್ಟು ಸೇಫ್ ಎಂಬ ಯಕ್ಷಪ್ರಶ್ನೆ ಆಗಾಗ ಎದುರಾಗುತ್ತಲೇ ಇರುತ್ತದೆ. ಇದೀಗ ನಗರದಲ್ಲಿ ಅಂತಹದ್ದೊಂದು ಭಯಾನಕ ಕೃತ್ಯ ನಡೆದಿದೆ. ಕ್ಯಾಬ್‌ನಲ್ಲಿ ಯುವತಿ ಮೇಲೆ ದೌರ್ಜನ್ಯ ಎಸಗಿರುವ ಘಟನೆ ನಡೆದಿದೆ. ಸೋಶಿಯಲ್‌ ಮೀಡಿಯಾ ಇನ್‌ಫ್ಲುಯೆನ್ಸರ್‌ ಆಗಿರುವ ಯುವತಿ ರಾತ್ರಿ ಕ್ಯಾಬ್‌ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ತಮಗಾದ ಅನುಭವವನ್ನು ಅವರನ್ನು ಹಂಚಿಕೊಂಡಿದ್ದಾರೆ.

Dearness Allowance: ಬಾಕಿ ತುಟ್ಟಿಭತ್ಯೆ ಬಿಡುಗಡೆ ಮಾಡಿ; ಸಿಎಂಗೆ ರಾಜ್ಯ ಸರ್ಕಾರಿ ನೌಕರರ ಸಂಘ ಮನವಿ

ಬಾಕಿ ತುಟ್ಟಿಭತ್ಯೆ ಬಿಡುಗಡೆ ಮಾಡಲು ರಾಜ್ಯ ಸರ್ಕಾರಿ ನೌಕರರ ಸಂಘ ಮನವಿ

DA arrears: ಪ್ರಸ್ತುತ ಕೇಂದ್ರ ಸರ್ಕಾರವು ಅಖಿಲ ಭಾರತ ಬೆಲೆ ಸೂಚ್ಯಂಕವನ್ನಾಧರಿಸಿ ಕೇಂದ್ರ ಸರ್ಕಾರಿ ನೌಕರರಿಗೆ ಶೇ. 3%ರಷ್ಟು ತುಟ್ಟಿಭತ್ಯೆಯನ್ನು ಮಂಜೂರು ಮಾಡಿ ಆದೇಶಿಸಿದೆ. ಆದ್ದರಿಂದ, ಕರ್ನಾಟಕ ರಾಜ್ಯದ ಸರ್ಕಾರಿ ನೌಕರರಿಗೂ ತುಟ್ಟಿಭತ್ಯೆಯನ್ನು ಸಂಪೂರ್ಣ ನಗದು ರೂಪದಲ್ಲಿ ನೀಡಲು ಕ್ರಮ ವಹಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಅವರಿಗೆ ಕರ್ನಾಟಕ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್‌.ಷಡಾಕ್ಷರಿ ಕೋರಿದ್ದಾರೆ.

Madhugiri News: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಫಲಾನುಭವಿಗೆ ವಾತ್ಸಲ್ಯ ಮನೆ ಹಸ್ತಾಂತರ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ವಾತ್ಸಲ್ಯ ಮನೆ ಹಸ್ತಾಂತರ

Madhugiri News: ಮಧುಗಿರಿ ತಾಲೂಕಿನ ಪುರವರ ವಲಯದ ಕೊಡ್ಲಾಪುರ ಕಾರ್ಯ ಕ್ಷೇತ್ರದ ಮಾಸಾಶನ ಫಲಾನುಭವಿ ಗೋವಿಂದಪ್ಪ ಅವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ನಿರ್ಮಿಸಿಕೊಟ್ಟಿರುವ ವಾತ್ಸಲ್ಯ ಮನೆಯನ್ನು ಮಂಗಳವಾರ ಹಸ್ತಾಂತರ ಮಾಡಲಾಯಿತು.

Dasara holidays: ಶಾಲೆಗಳ ದಸರಾ ರಜೆ ಅ.18 ರವರೆಗೆ ವಿಸ್ತರಣೆ; ಮೃತ ಸಮೀಕ್ಷಕರ ಕುಟುಂಬಕ್ಕೆ 20 ಲಕ್ಷ ಪರಿಹಾರ

ದಸರಾ ರಜೆ ಅ.18 ರವರೆಗೆ ವಿಸ್ತರಣೆ; ಮೃತ ಸಮೀಕ್ಷಕರ ಕುಟುಂಬಕ್ಕೆ ಪರಿಹಾರ

Caste census: 10 ದಿನಗಳ ಕಾಲ ದಸರಾ ರಜೆ ವಿಸ್ತರಿಸಿದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ಶಿಕ್ಷಣ ಸಚಿವರು ಹಾಗೂ ಇಲಾಖೆಯ ಎಲ್ಲಾ ಅಧಿಕಾರಿಗಳು, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಚಂದ್ರಶೇಖರ ನುಗ್ಗಲಿ ಹಾಗೂ ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ ಧನ್ಯವಾದ ಸಲ್ಲಿಸಿದ್ದಾರೆ.

HD Deve Gowda: ಮಾಜಿ ಪ್ರಧಾನಿ ಎಚ್‌.ಡಿ ದೇವೇಗೌಡ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ದಾಖಲು

ಎಚ್‌.ಡಿ ದೇವೇಗೌಡ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ದಾಖಲು

Bengaluru News: ಕಳೆದ ವರ್ಷ ಫೆಬ್ರವರಿಯಲ್ಲಿ ತೀವ್ರ ಜ್ವರ, ಕೆಮ್ಮು ಮತ್ತು ಉಸಿರಾಟದ ಸಮಸ್ಯೆ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರನ್ನು ಇದೇ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ ಮತ್ತೆ ಆರೋಗ್ಯದಲ್ಲಿ ಏರುಪೇರಾಗಿದ್ದರಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸದ್ಯ ದೇವೇಗೌಡರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ ಎನ್ನಲಾಗಿದೆ.

SV Rajendrasingh Babu: ಎಸ್‌.ವಿ. ರಾಜೇಂದ್ರಸಿಂಗ್ ಬಾಬು ನಿರ್ದೇಶಕರಾಗಿ 50 ವರ್ಷ ಪೂರ್ಣ: ಅ.23ರಿಂದ 5 ದಿನಗಳ ಕಾಲ ʼಎಸ್‌ವಿಆರ್ 50ʼ ಸಮಾರಂಭ

ಅ.23ರಿಂದ 5 ದಿನಗಳ ಕಾಲ ʼಎಸ್‌ವಿಆರ್ 50ʼ ಸಮಾರಂಭ

SVR 50 Ceremony: ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕ ಎಸ್.ವಿ. ರಾಜೇಂದ್ರಸಿಂಗ್ ಬಾಬು ನಿರ್ದೇಶಕರಾಗಿ ಇದೇ ಅಕ್ಟೋಬರ್ ತಿಂಗಳಿಗೆ 50 ವರ್ಷಗಳಾಗಿದೆ. ಈ ಸಂಭ್ರಮವನ್ನು ಸಂಭಮಿಸಲು ಕನ್ನಡ ಚಿತ್ರರಂಗದಿಂದ ʼಎಸ್‌ವಿಆರ್ 50ʼ ಎಂಬ ಅದ್ದೂರಿ ಸಮಾರಂಭ ಆಯೋಜಿಸಿ ರಾಜೇಂದ್ರಸಿಂಗ್ ಬಾಬು ಅವರನ್ನು ಆತ್ಮೀಯವಾಗಿ ಸನ್ಮಾನಿಸಲಿದೆ. ಅ.23ರಿಂದ ಐದು ದಿನಗಳ ಕಾಲ ಅದ್ಧೂರಿಯಾಗಿ ಈ ಸಮಾರಂಭ ನಡೆಯಲಿದೆ.

Kuruba community: ಕುರುಬರನ್ನು ಎಸ್‌ಟಿಗೆ ಸೇರಿಸಿದರೆ ST ಮೀಸಲಾತಿ ಪ್ರಮಾಣ ಹೆಚ್ಚಾಗಬೇಕು: ಸಿಎಂ

ಕುರುಬರನ್ನು ಎಸ್‌ಟಿಗೆ ಸೇರಿಸಿದರೆ ಮೀಸಲಾತಿ ಪ್ರಮಾಣ ಹೆಚ್ಚಾಗಬೇಕು: ಸಿಎಂ

Valmiki Jayanti 2025: ಕುರುಬರನ್ನು ಎಸ್‌ಟಿ ಗೆ ಸೇರಿಸಿದರೆ ಎಸ್‌ಟಿ ಮೀಸಲಾತಿ ಪ್ರಮಾಣ ಹೆಚ್ಚಾಗಬೇಕು ಎನ್ನುವುದಕ್ಕೆ ನನ್ನ ಬೆಂಬಲ, ಸಹಮತವೂ ಇದೆ. ಯಾರೂ ಯಾರ ಅನ್ನದ ತಟ್ಟೆಗೆ ಕೈ ಹಾಕಬಾರದು. ಯಾರೂ ಯಾರ ಅವಕಾಶಗಳನ್ನೂ ಕಿತ್ತುಕೊಳ್ಳಬಾರದು ಎನ್ನುವುದು ನನ್ನ ಬದ್ಧತೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

Dasara Holidays: ಜಾತಿ ಸಮೀಕ್ಷೆ ಹಿನ್ನೆಲೆ ಶಾಲೆಗಳ ದಸರಾ ರಜೆ 10 ದಿನ ವಿಸ್ತರಿಸಿದ ಸರ್ಕಾರ

ಜಾತಿ ಸಮೀಕ್ಷೆ ಹಿನ್ನೆಲೆ ದಸರಾ ರಜೆ 10 ದಿನ ವಿಸ್ತರಿಸಿದ ರಾಜ್ಯ ಸರ್ಕಾರ

CM Siddaramaiah: ಜಾತಿ ಸಮೀಕ್ಷೆ ಪೂರ್ಣಗೊಳಿಸಲು ವಿಧಾನ‌ ಪರಿಷತ್ ಸದಸ್ಯ ಪುಟ್ಟಣ್ಣ ಮತ್ತು ಶಿಕ್ಷಕರ ಸಂಘ ಹೆಚ್ಚುವರಿಯಾಗಿ 10 ದಿನಗಳ‌ ಕಾಲಾವಕಾಶ ಕೇಳಿ ಮನವಿ ಮಾಡಿದ್ದರು. ಈ ಮನವಿ ಪುರಸ್ಕರಿಸಿ ಅಕ್ಟೋಬರ್ 18ರ ವರೆಗೆ ಸರ್ಕಾರಿ, ಅನುದಾನಿತ ಶಾಲೆಗಳಿಗೆ ರಜೆ ಘೋಷಿಸಿದ್ದೇವೆ. 8 working days ರಜೆ ಘೋಷಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಎಲೆಕ್ಟ್ರಿಕ್ ಸ್ಕೂಟರ್ ಉತ್ಪಾದನೆಯಲ್ಲಿ 5 ಲಕ್ಷ ಗಡಿ ದಾಟಿ ಮೈಲುಗಲ್ಲು ಸಾಧನೆ ಮಾಡಿದ ಏಥರ್ ಎನರ್ಜಿ

ಉತ್ಪಾದನೆಯಲ್ಲಿ 5 ಲಕ್ಷ ಗಡಿ ದಾಟಿ ಮೈಲುಗಲ್ಲು ಸಾಧನೆ ಮಾಡಿದ ಏಥರ್ ಎನರ್ಜಿ

5,00,೦೦೦ ಎಲೆಕ್ಟ್ರಿಕ್ ಸ್ಕೂಟರ್‌ ಗಳ ಉತ್ಪಾದನಾ ಗಡಿಯನ್ನು ದಾಟಿರುವುದು ಏಥರ್‌ ಗೆ ಬಹು ದೊಡ್ಡ ಮೈಲುಗಲ್ಲಾಗಿದೆ. ಮೊದಲ ಪ್ರೋಟೋಟೈಪ್‌ ರೂಪಿಸಿದಾಗಿನಿಂದ ಹಿಡಿದು ಇಲ್ಲಿಯವರೆಗೆ ಸಾಗಿ ಬಂದ ನಮ್ಮ ಈ ಪಯಣದಲ್ಲಿ ನಾವು ಕೇವಲ ವಾಹನಗಳನ್ನು ನಿರ್ಮಿಸುವುದರ ಬಗ್ಗೆ ಮಾತ್ರವೇ ಗಮನ ಹರಿಸಿಲ್ಲ, ಬದಲಿಗೆ ವಿಸ್ತರಣೆ ಮಾಡಬಹುದಾದ, ವಿಶ್ವಾಸಾರ್ಹ ಮತ್ತು ಸ್ಥಿರವಾದ ಉತ್ಪಾದನಾ ವ್ಯವಸ್ಥೆಯನ್ನು ಕಟ್ಟುವುದರ ಕಡೆಗೆ ಹೆಚ್ಚಿನ ಗಮನ ಹರಿಸಿದ್ದೇವೆ.

Bigg Boss Kannada 12: ಬಿಗ್‌ ಬಾಸ್‌ ಶೋಗೆ ಬಿಗ್‌ ಸಂಕಷ್ಟ, ಪ್ರತಿಭಟನೆ, ಪೊಲೀಸ್‌ ಅನುಮತಿಯೂ ಇಲ್ಲ

ಬಿಗ್‌ ಬಾಸ್‌ ಶೋಗೆ ಬಿಗ್‌ ಸಂಕಷ್ಟ, ಪ್ರತಿಭಟನೆ, ಪೊಲೀಸ್‌ ಅನುಮತಿಯೂ ಇಲ್ಲ

Bigg Boss Kannada: ಇದೀಗ ಪೊಲೀಸ್ ಇಲಾಖೆಯಿಂದಲೂ ಅನುಮತಿ ಪಡೆಯದೇ ಬಿಗ್ ಬಾಸ್ ನಡೆಸುತ್ತಿದ್ದಾರೆ ಎನ್ನುವ ಆರೋಪವೂ ಕೇಳಿ ಬಂದಿದೆ. ಪ್ರಮುಖವಾಗಿ ಬಿಗ್ ಬಾಸ್ ಶೋ ನಡೆಸಲು ಪೊಲೀಸರು ನೀಡುವ ಅನುಮತಿ ಕಡ್ಡಾಯವಾಗಿದೆ. ಆದರೆ ಶೋ ನಡೆಸಲು ಪೊಲೀಸರ ಯಾವುದೇ ಅನುಮತಿ ಪಡೆದಿಲ್ಲ.

SC certificates: ಬೌದ್ಧ ಧರ್ಮಕ್ಕೆ ಮತಾಂತರಗೊಂಡ ಪರಿಶಿಷ್ಟ ಜಾತಿಯವರಿಗೆ ಎಸ್‌ಸಿ ಪ್ರಮಾಣಪತ್ರ: ರಾಜ್ಯ ಸರ್ಕಾರ ಆದೇಶ

ಬೌದ್ಧ ಧರ್ಮಕ್ಕೆ ಮತಾಂತರಗೊಂಡ ಪರಿಶಿಷ್ಟ ಜಾತಿಯವರಿಗೆ ಎಸ್‌ಸಿ ಪ್ರಮಾಣಪತ್ರ

Social welfare department: 1950ರಲ್ಲಿ ಹಿಂದೂಗಳನ್ನು ಮಾತ್ರ ಎಸ್‌ಸಿ ಎಂದು ಸಾಂವಿಧಾನಿಕ ಆದೇಶದ ಮೂಲಕ ಪರಿಗಣಿಸಲಾಗಿತ್ತು. ನಂತರ 1956ರ ತಿದ್ದುಪಡಿ ಮೂಲಕ ದಲಿತ ಸಿಖ್ಖರನ್ನು, 1990ರ ತಿದ್ದುಪಡಿಯ ಮೂಲಕ ದಲಿತ ಬೌದ್ಧರನ್ನು ಎಸ್‌ಸಿಗಳೆಂದು ಪರಿಗಣಿಸಬಹುದು ಎಂದು ಬದಲಿಸಲಾಯಿತು.

Sujata Bhat: ತಪ್ಪು ಮಾಡಿದೆ, ಹೆಗ್ಗಡೆ, ಮಂಜುನಾಥ ಸ್ವಾಮಿಯಲ್ಲಿ ಕ್ಷಮೆ ಕೇಳುವೆ: ಸುಜಾತ ಭಟ್

ತಪ್ಪು ಮಾಡಿದೆ, ಹೆಗ್ಗಡೆ, ಮಂಜುನಾಥ ಸ್ವಾಮಿಯ ಕ್ಷಮೆ ಕೇಳುವೆ: ಸುಜಾತ ಭಟ್

Dharmasthala: ಗಿರೀಶ್‌ ಮಟ್ಟೆಣ್ಣವರ್‌, ಮಹೇಶ್‌ ಶೆಟ್ಟಿ ತಿಮರೋಡಿ ಅವರ್ಯಾರೂ ಈಗ ತಮ್ಮ ಜೊತೆಗಿಲ್ಲ. ಅವರ ಸಹವಾಸ ನನಗೆ ಬೇಡ. ಅವರೂ ಹಾಳಾಗುವುದಲ್ಲದೆ ನನ್ನನ್ನೂ ಹಾಳು ಮಾಡಿದರು. ನಾಲ್ಕು ಮನೆ ಮುಸುರೆ ತಿಕ್ಕಿದರೂ ನನ್ನ ಜೀವನದಲ್ಲಿ ಕಪ್ಪು ಚುಕ್ಕಿ ಇರಲಿಲ್ಲ. ಇದೇ ನನ್ನ ಜೀವನದಲ್ಲಿ ಮೊದಲ ಬಾರಿಗೆ ಬಂದ ಕಪ್ಪು ಚುಕ್ಕಿ ಎಂದಿದ್ದಾರೆ.

Belagavi news: ಅನೈತಿಕ ಸಂಬಂಧದ ಶಂಕೆ, ಗಂಡನ ಮೇಲೆ ಕುದಿವ ಎಣ್ಣೆ ಸುರಿದ ಹೆಂಡತಿ

ಅನೈತಿಕ ಸಂಬಂಧದ ಶಂಕೆ, ಗಂಡನ ಮೇಲೆ ಕುದಿವ ಎಣ್ಣೆ ಸುರಿದ ಹೆಂಡತಿ

Illicit relationship: ಗಂಡ ಬೇರೆ ಮಹಿಳೆ ಜೊತೆ ಅನೈತಿಕ ಸಂಬಂಧ ಹೊಂದಿದ್ದಾನೆ ಎಂದು ಹೆಂಡತಿ ವೈಶಾಲಿಗೆ ಸಂಶಯವಿತ್ತು. ಈ ವಿಚಾರದಲ್ಲಿ ಇಬ್ಬರಿಗೂ ಜಗಳವಾಗುತ್ತಿತ್ತು ಎನ್ನಲಾಗಿದೆ. ಇದೇ ಹಿನ್ನೆಲೆಯಲ್ಲಿ, ಮನೆಗೆ ಬಂದ ಗಂಡನ ಮೇಲೆ ಸುಡುವ ಎಣ್ಣೆ ತಂದು ಹೆಂಡತಿ ಸುರಿದಿದ್ದಾಳೆ.

School holidays: ದಸರಾ ರಜೆ ಅಂತ್ಯ, ನಾಳೆಯಿಂದ ಶಾಲೆಗಳು ಪುನರಾರಂಭ, ರಜೆ ಅ.17ರವರೆಗೆ ವಿಸ್ತರಿಸಲು ಮನವಿ

ದಸರಾ ರಜೆ ಅಂತ್ಯ, ನಾಳೆಯಿಂದ ಶಾಲೆಗಳು ಪುನರಾರಂಭ, ರಜೆ ವಿಸ್ತರಿಸಲು ಮನವಿ

Dasara holidays: ಒಟ್ಟು 18 ದಿನಗಳ ಕಾಲ ಶಾಲಾ ವಿದ್ಯಾರ್ಥಿಗಳಿಗೆ ದಸರಾ ರಜೆ ಸಿಕ್ಕಿತ್ತು. ರಜೆಯ ಮಜಾ ನಾಳೆಗೆ ಅಂತ್ಯಗೊಳ್ಳಲಿದ್ದು, ರಾಜ್ಯಾದ್ಯಂತ ನಾಳೆಯಿಂದ ಶಾಲೆಗಳು ಪುನಾರಂಭಗೊಳ್ಳಲಿವೆ. ಆದರೆ ಶಾಲಾ ಅವಧಿಯಲ್ಲಿ ಬದಲಾವಣೆ ಮಾಡಲಾಗಿದೆ. ಮಧ್ಯಾಹ್ನದವರೆಗೆ ತರಗತಿಗಳು ನಡೆಯಲಿದೆ

Kantara Chpter 1 collection: ಸೋಮವಾರವೂ ಕಾಂತಾರ ಅಬ್ಬರ, ದಾಖಲೆ ಮಾಡಿದ ಕಲೆಕ್ಷನ್‌

ಸೋಮವಾರವೂ ಕಾಂತಾರ ಅಬ್ಬರ, ದಾಖಲೆ ಮಾಡಿದ ಕಲೆಕ್ಷನ್‌

Rishab Shetty: ಶನಿವಾರ, ಭಾನುವಾರಗಳಿಗೆ ಹೋಲಿಸಿದರೆ ಸಿನಿಮಾದ ಗಳಿಕೆ ಸೋಮವಾರ ತುಸು ಕುಸಿದಿದೆಯಾದರೂ, ಉತ್ತಮ ಮೊತ್ತವೇ ಚಿತ್ರ ನಿರ್ಮಾಪಕರ ಕೈ ಸೇರಿದೆ. ಸೋಮವಾರದ ದಿನ ‘ಕಾಂತಾರ: ಚಾಪ್ಟರ್ 1’ ಸಿನಿಮಾ 30 ಕೋಟಿಗೂ ಹೆಚ್ಚಿನ ಮೊತ್ತದ ಹಣವನ್ನು ಗಳಿಕೆ ಮಾಡಿದೆ.

SSLC Exam Fee: ಎಸ್‌ಎಸ್‌ಎಲ್‌ಸಿ ಪರೀಕ್ಷಾ ಶುಲ್ಕ ಏರಿಕೆ ಮಾಡಿದ ಶಿಕ್ಷಣ ಇಲಾಖೆ

ಎಸ್‌ಎಸ್‌ಎಲ್‌ಸಿ ಪರೀಕ್ಷಾ ಶುಲ್ಕ ಏರಿಕೆ ಮಾಡಿದ ಶಿಕ್ಷಣ ಇಲಾಖೆ

Fees hike: ಉತ್ತರಪತ್ರಿಕೆಗಳ ಮೌಲ್ಯಮಾಪನ, ಮತ್ತು ಇತರ ಸಂಬಂಧಿತ ಆಡಳಿತಾತ್ಮಕ ವೆಚ್ಚಗಳು ಕಾಲಕಾಲಕ್ಕೆ ಏರುತ್ತಿರುವುದರಿಂದ ಈ ಕ್ರಮ ಅಗತ್ಯವೆಂದು ಪರಿಗಣಿಸಲಾಗಿದೆ. ಹಲವು ವರ್ಷಗಳಿಂದ ಪರೀಕ್ಷಾ ಶುಲ್ಕವನ್ನು ಪರಿಷ್ಕರಣೆ ಮಾಡಿರಲಿಲ್ಲ. ಆದರೆ ಇದೀಗ ವೆಚ್ಚಗಳು ಹೆಚ್ಚಳವಾಗುತ್ತಿರುವುದರಿಂದ ಪರೀಕ್ಷಾ ಶುಲ್ಕ ಹೆಚ್ಚಿಸುವುದು ಅನಿವಾರ್ಯವಾಗಿದೆ ಎಂದು ಇಲಾಖೆ ತಿಳಿಸಿದೆ.

Star Fashion 2025: ಕನ್ನಡ ರ‍್ಯಾಪರ್‌ ಇಶಾನಿಯ ಜಾಕೆಟ್‌ ಲವ್‌!

ಕನ್ನಡ ರ‍್ಯಾಪರ್‌ ಇಶಾನಿಯ ಜಾಕೆಟ್‌ ಲವ್‌!

Star Fashion 2025: ಕನ್ನಡದ ರ‍್ಯಾಪರ್‌ ಹಾಗೂ ಬಿಗ್‌ ಬಾಸ್‌ನ ಮಾಜಿ ಸ್ಪರ್ಧಿ ಇಶಾನಿ ಜಾಕೆಟ್‌ ಲವ್ವರ್‌, ಮಾತ್ರವಲ್ಲ, ತಮ್ಮದೇ ಆದ ಫ್ಯಾಷನ್‌ ಸ್ಟೇಟ್‌ಮೆಂಟ್ಸ್ ಹೊಂದಿರುವಾಕೆ. ವಿಶ್ವವಾಣಿ ನ್ಯೂಸ್‌ಗೆ ನೀಡಿದ ಸಂದರ್ಶನದಲ್ಲಿ ಈ ವಿಷಯವನ್ನು ಹಂಚಿಕೊಳ್ಳುವುದರೊಂದಿಗೆ ತಮ್ಮ ಒಂದಿಷ್ಟು ಫ್ಯಾಷನ್‌ ಲೈಫ್‌ ಬಗ್ಗೆಯೂ ಮಾತನಾಡಿದ್ದಾರೆ.

Caste Census: ಮುಗಿಯದ ಜಾತಿ ಗಣತಿ, ಶಿಕ್ಷಕರಿಗೆ ಬಿತ್ತು ಡಬಲ್‌ ಡ್ಯೂಟಿ

ಮುಗಿಯದ ಜಾತಿ ಗಣತಿ, ಶಿಕ್ಷಕರಿಗೆ ಬಿತ್ತು ಡಬಲ್‌ ಡ್ಯೂಟಿ

Karnataka: ಸೆಪ್ಟೆಂಬರ್‌ 22 ರಿಂದ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಆರಂಭಗೊಂಡಿತ್ತು. ಸೆಪ್ಟೆಂಬರ್‌ 22ರಿಂದ ಅಕ್ಟೋಬರ್ 7 ರವರೆಗೆ 15 ದಿನಗಳ ಕಾಲ ಸಮೀಕ್ಷೆಗೆ ಸಿಎಂ ಸಿದ್ದರಾಮಯ್ಯ ಸೂಚಿಸಿದ್ದರು. ಆದರೆ ಸಮೀಕ್ಷೆ ಪೂರ್ಣಗೊಂಡಿಲ್ಲ. ಜೊತೆಗೆ ಶಾಲೆಗಳು ಕೂಡ ಆರಂಭವಾಗಿದ್ದು, ದಿಕ್ಕು ತೋಚದ ಸರಕಾರ ಈ ನಿರ್ದೇಶನ ನೀಡಿದೆ.

Road Accident: ಪಾದಯಾತ್ರೆ ಹೋಗುತ್ತಿದ್ದವರ ಮೇಲೆ ಹರಿದ ಖಾಸಗಿ ಬಸ್‌, ಮೂವರು ಭಕ್ತರ ಸಾವು

ಪಾದಯಾತ್ರೆ ಹೋಗುತ್ತಿದ್ದವರ ಮೇಲೆ ಹರಿದ ಖಾಸಗಿ ಬಸ್‌, ಮೂವರು ಭಕ್ತರ ಸಾವು

Koppala news: ಸಿಂದಗಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಸ್ಲೀಪರ್ ಕೋಚ್ ಬಸ್ ನಿಯಂತ್ರಣ ತಪ್ಪಿ, ರಸ್ತೆ ಬದಿ ನಡೆಯುತ್ತಿದ್ದ ಭಕ್ತರ ಮೇಲೆ ಹರಿದ ಪರಿಣಾಮ ಈ ದುರಂತ ಸಂಭವಿಸಿದೆ. ಅಪಘಾತದ ವೇಳೆ ಭಕ್ತರು ದೇವಾಲಯದಿಂದ ಕೇವಲ ಮೂರು ಗಂಟೆಗಳ ನಡಿಗೆಯ ದೂರದಲ್ಲಿದ್ದರು.

Physical Abuse: ನಟಿಗೆ ಲೈಂಗಿಕ ಕಿರುಕುಳ, ಕನ್ನಡದ ನಟ- ನಿರ್ದೇಶಕ ಹೇಮಂತ್‌ ಬಂಧನ

ನಟಿಗೆ ಲೈಂಗಿಕ ಕಿರುಕುಳ, ಕನ್ನಡದ ನಟ- ನಿರ್ದೇಶಕ ಹೇಮಂತ್‌ ಬಂಧನ

Sandalwood: ಹೇಮಂತ್ ಅಶ್ಲೀಲ ಬಟ್ಟೆ ತೊಟ್ಟು ನಟಿಸಬೇಕು ಎಂದು ನಟಿಗೆ ಕಿರುಕುಳ ನೀಡಿದ್ದಾನೆ. ಮುಂಬೈಗೆ ಶೂಟಿಂಗ್‌ಗೆ ಹೋಗಿದ್ದಾಗ ಅಸಭ್ಯ ವರ್ತನೆ ತೋರಿದ್ದಾನೆ. ನಿರಾಕರಿಸಿದ್ದಕ್ಕೆ ರೌಡಿಗಳನ್ನು ಬಿಟ್ಟು ಬೆದರಿಕೆ ಹಾಕಿದ್ದಾನೆ. ಚಿತ್ರೀಕರಣದ ಬಳಿಕ ನೀಡಿದ್ದ ಚೆಕ್ ಬೌನ್ಸ್ ಆಗಿದೆ. ಸೆನ್ಸಾರ್ ಆಗದ ದೃಶ್ಯಗಳನ್ನು ವೈರಲ್ ಮಾಡಿದ್ದಾನೆ ಎಂದು ನಟಿ ಆರೋಪಿಸಿದ್ದಾರೆ.

Karnataka Weather: ಇಂದಿನ ಹವಾಮಾನ; ಬೆಂಗಳೂರು, ಕೋಲಾರ ಸೇರಿ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ

ಇಂದಿನ ಹವಾಮಾನ; ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ

Rain News: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ನಿರೀಕ್ಷೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 29°C ಮತ್ತು 20°C ಇರುವ ಸಾಧ್ಯತೆ ಇದೆ.

Chikkaballapur News: ಹೃದಯವಂತನ ಹುಟ್ಟುಹಬ್ಬಕ್ಕೆ ಶುಭಾಶಯಗಳ ಮಹಾಪೂರ!

ಹೃದಯವಂತನ ಹುಟ್ಟುಹಬ್ಬಕ್ಕೆ ಶುಭಾಶಯಗಳ ಮಹಾಪೂರ!

ನಗರದ ಬೆಳಿಗ್ಗೆ ನವೀನ್ ಕಿರಣ್ ಅಭಿಮಾನಿಗಳು ಸರಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ ಮಾಡಿದ್ದಲ್ಲದೆ, ದೇವಾಲಯಗಳಲ್ಲಿ ವಿಶೇಷ ಪೂಜೆ ಮಾಡಿಸಿದರು. ಮತ್ತೂ ಕೆಲವರು ಆಟೋ ಚಾಲಕರಿಗೆ ಸಮವಸ್ತ್ರ ವಿತರಣೆ ಮಾಡಿದರೆ, ಗುಂಪುಮರದ ಆನಂದ್, ಆಟೋ ಸುಬಾನ್ ತರದವರು ಗಿಡ ನೆಡುವ ಮೂಲಕ ವಿಶಿಷ್ಟತೆ ಮೆರೆದರು.

Andhra Pradesh DCM Pawan Kalyan:  ಸಾಮಾಜಿಕ ಮತ್ತು ನ್ಯಾಯಪರ ತೀರ್ಪುಗಳ ಮೇರು ವ್ಯಕ್ತಿ : ನ್ಯಾಯಮೂರ್ತಿ ವಿ.ಗೋಪಾಲಗೌಡ - ಆಂಧ್ರ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಬಣ್ಣನೆ

ಸಾಮಾಜಿಕ ಮತ್ತು ನ್ಯಾಯಪರ ತೀರ್ಪುಗಳ ಮೇರು ವ್ಯಕ್ತಿ

ಚಿಂತಾಮಣಿಯ ಸಹೋದರ ಸಹೋದರಿಯರೇ ಜನಸೇನಾ ಸೇನಾನಿಗಳೇ ಹಾಗೂ ನೆಚ್ಚಿನ ಅಭಿಮಾನಿ ದೇವರುಗಳೇ ಕರ್ನಾಟಕದ ಜನತೆ ಪುಣ್ಯವಂತರು, ಶ್ರಮ, ಸೃಜನಶೀಲತೆ, ಚಲನಶೀಲತೆ ಯಿಂದ ಕೂಡಿದ ಈ ಮಣ್ಣಿನ ಮಗನಾಗಿರುವ ಸುಪ್ರಿಂ ಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ವಿ.ಗೋಪಾಲಗೌಡರ ಹುಟ್ಟು ಹಬ್ಬದಲ್ಲಿ ಪಾಲ್ಗೊಂಡಿರುವುದು ಒಂದು ಸುದೈವ.

Loading...