ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ
ಕರ್ನಾಟಕ
Gold Rate Today: ಚಿನ್ನದ ದರದಲ್ಲಿ ಯಥಾಸ್ಥಿತಿ; ಇಂದಿನ ದರ ಎಷ್ಟಿದೆ?

ಇಂದು ಚಿನ್ನದ ದರ ಎಷ್ಟಿದೆ? ಇಲ್ಲಿ ಚೆಕ್‌ ಮಾಡಿ

Gold Price Today on 8th June 2025: ಬೆಂಗಳೂರಿನಲ್ಲಿ ನಿನ್ನೆ 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 8,980 ರೂ.ಗೆ ತಲುಪಿತ್ತು. ಇನ್ನು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರದಲ್ಲಿ 9,797 ರೂ ಇತ್ತು. 22 ಕ್ಯಾರಟ್‌ನ 8 ಗ್ರಾಂ ಚಿನ್ನ 71,840 ರೂ. ಬೆಲೆ ಬಾಳಿದರೆ, 10 ಗ್ರಾಂಗೆ ನೀವು 89,800 ರೂ. ಮತ್ತು 100 ಗ್ರಾಂಗೆ 8,98,000 ರೂ. ನೀಡಬೇಕಾಗುತ್ತದೆ.

Heavy explosion: ದಾವಣಗೆರೆಯಲ್ಲಿ ತಡರಾತ್ರಿ ಭಾರೀ ಸ್ಪೋಟದ ಶಬ್ಬ- ಬೆಚ್ಚಿ ಬಿದ್ದ ಜನ

ಗಾಢನಿದ್ರೆಯಲ್ಲಿದ್ದ ಜನರನ್ನು ಬೆಚ್ಚಿ ಬೀಳಿಸಿದ ಸ್ಫೋಟದ ಸದ್ದು

ಗಾಢ ನಿದ್ದೆಯಲ್ಲಿದ್ದ ದಾವಣಗೆರೆ ಜನರಲ್ಲಿ ಸ್ಫೋಟದ ಸದ್ದೊಂದು ಆತಂಕ ಸೃಷ್ಟಿಸಿರುವ ಘಟನೆ ವರದಿಯಾಗಿದೆ. ಜಗಳೂರು ಪಟ್ಟಣದಲ್ಲಿ 5 ದಶಕಗಳ ನಂತರ ರಸ್ತೆ ಅಗಲೀಕರಣ ಕಾಮಗಾರಿ ನಡೆಯುತ್ತಿದ್ದು, ರಸ್ತೆ ಅಗಲೀಕರಣಕ್ಕೆ ಅಡ್ಡಿಯಾಗಿದ್ದ ಬೃಹತ್ ಕಲ್ಲು ಬಂಡೆ, ಕಲ್ಲುಬಂಡೆ ತೆರವು ಮಾಡಲು ಸ್ಪೋಟಕ ಬಳಸಿರುವ ಶಂಕೆ ವ್ಯಕ್ತವಾಗಿದೆ.

Tragedy in Mandya: ಈಜಲು ಹೋದ ಬಾಲಕರಿಬ್ಬರು ನೀರುಪಾಲು

ಈಜಲು ಹೋದ ಬಾಲಕರಿಬ್ಬರು ನೀರುಪಾಲು

ಮದ್ದೂರು ತಾಲೂಕಿನ ಕ್ಯಾತಘಟ್ಟ ಗ್ರಾಮದ ಬಳಿ ಹಳ್ಳದಲ್ಲಿ ಈಜಲು ಹೋಗಿದ್ದ ಇಬ್ಬರು ಬಾಲಕರು ಸಾವನ್ನಪ್ಪಿದ್ದಾರೆ. ಮೃತ ಬಾಲಕರನ್ನು ಆಲಭುಜನಹಳ್ಳಿಯ ಚೇತನ್ (14) ಹಾಗೂ ದರ್ಶನ್ (15) ಎಂದು ಗುರುತಿಸಲಾಗಿದೆ. ಇಬ್ಬರು ಬಾಲಕರ ಶವಗಳನ್ನು ಅಗ್ನಿಶಾಮಕ ದಳದ ಸಿಬ್ಬಂದಿ ಹೊರತೆಗೆದಿದ್ದಾರೆ.

HD Kumaraswamy: ಪಂದ್ಯ ಆರಂಭಕ್ಕೂ ಮುನ್ನವೇ ವಿಜಯೋತ್ಸವಕ್ಕೆ ಅನುಮತಿ ಕೇಳಿತ್ತಾ RCB?

ಪಂದ್ಯಕ್ಕೂ ಮುನ್ನವೇ ವಿಜಯೋತ್ಸವಕ್ಕೆ ಅನುಮತಿ ಕೇಳಿತ್ತಾ RCB?

Bengaluru Stampede: ಐಪಿಎಲ್ ಫೈನಲ್ ಪಂದ್ಯ ಆರಂಭಕ್ಕೂ ಮುನ್ನವೇ ಆರ್ಸಿಬಿ ವಿಜಯೋತ್ಸವ ಆಚರಿಸಲು ಅನುಮತಿ ನೀಡುವಂತೆ ಆರ್ಸಿಬಿ ಮ್ಯಾನೇಜ್ಮೆಂಟ್ ಮನವಿ ಮಾಡಿತ್ತು ಎಂಬ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಆರ್‌ಸಿಬಿ ಗೆಲುವಿನ ಬಗ್ಗೆ ಮ್ಯಾನೇಜ್‌ಮೆಂಟ್‌ಗೆ ಹೇಗೆ ತಿಳಿದಿತ್ತು ಎಂದು ಹೆಚ್‌.ಡಿ. ಕುಮಾರಸ್ವಾಮಿ ಅನುಮಾನ ವ್ಯಕ್ತಪಡಿಸಿದ್ದಾರೆ.

Physical assault: ರಾಜ್ಯವನ್ನೇ ಬೆಚ್ಚಿ ಬೀಳಿಸೋ ಘಟನೆ; ಬಾಲಕಿ ಮೇಲೆ ಗ್ಯಾಂಗ್‌ರೇಪ್‌

ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ

Haveri Horror: ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಬಂಕಾಪುರ ಠಾಣೆ ವ್ಯಾಪ್ತಿಯಲ್ಲಿ ಬಾಲಕಿಯನ್ನು ಪ್ರೀತಿಸುತ್ತಿದ್ದ ಯುವಕನ ಇಬ್ಬರು ಸ್ನೇಹಿತರೇ ಬೆದರಿಸಿ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ ಎನ್ನಲಾಗಿದೆ. ಇನ್ನು ಆರೋಪಿಗಳನ್ನು ಪೊಲೀಸರು ಅರೆಸ್ಟ್‌ ಮಾಡಿದ್ದಾರೆ.

B.Dayanand: ಪೊಲೀಸ್‌ ಆಯುಕ್ತರನ್ನು ಸಸ್ಪೆಂಡ್‌ ಮಾಡುವ ಅಧಿಕಾರ ರಾಜ್ಯ ಸರ್ಕಾರಕ್ಕಿದೆಯೇ?

ಪೊಲೀಸ್‌ ಆಯುಕ್ತರನ್ನು ಸಸ್ಪೆಂಡ್‌ ಮಾಡುವ ಅಧಿಕಾರ ರಾಜ್ಯ ಸರ್ಕಾರಕ್ಕಿದೆಯೇ?

Bengaluru Stampede: ಆರ್‌ಸಿಬಿಯ ವಿಜಯೋತ್ಸವದ ಸಂದರ್ಭದಲ್ಲಿ ಕಾಲ್ತುಳಿತ ಸಂಭವಿಸಿದ ಘಟನೆ ಬೆನ್ನಲ್ಲೇ ಕರ್ನಾಟಕದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರವು ಬೆಂಗಳೂರು ಪೊಲೀಸ್ ಆಯುಕ್ತ ಬಿ. ದಯಾನಂದ ಅವರನ್ನು ಅಮಾನತುಗೊಳಿಸಿರುವುದು ಭಾರಿ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ಉನ್ನತ ಪೊಲೀಸ್ ಅಧಿಕಾರಿಯ ಮುಂದಿನ ನಡೆ ಏನು? ಇಲ್ಲಿದೆ ಡಿಟೇಲ್ಸ್‌

Makeup kit Ideas: ಲಾಂಗ್ ಲಾಸ್ಟಿಂಗ್ ಮೇಕಪ್ ಕಿಟ್‌ಗೆ ಇಲ್ಲಿದೆ 5 ಐಡಿಯಾ

ಲಾಂಗ್ ಲಾಸ್ಟಿಂಗ್ ಮೇಕಪ್ ಕಿಟ್‌ಗೆ ಇಲ್ಲಿದೆ 5 ಐಡಿಯಾ

Makeup kit Ideas: ಮೇಕಪ್‌ ಕಿಟ್‌ ಅಥವಾ ಪ್ರಾಡಕ್ಟ್‌ಗಳನ್ನು ಖರೀದಿಸುವಾಗ ಒಂದಿಷ್ಟು ವಿಷಯಗಳನ್ನು ಗಮನದಲ್ಲಿಟ್ಟುಕೊಳ್ಳಬೇಕು. ಆಗಷ್ಟೇ ಅವು ದೀರ್ಘ ಕಾಲ ಬಾಳಿಕೆ ಬರಬಲ್ಲವು ಎನ್ನುತ್ತಾರೆ ಬ್ಯೂಟಿ ಎಕ್ಸ್‌ಪರ್ಟ್ಸ್‌. ಈ ಕುರಿತಂತೆ 5 ಸಿಂಪಲ್‌ ಟಿಪ್ಸ್‌ ನೀಡಿದ್ದಾರೆ. ಪಾಲಿಸಿ ನೋಡಿ.

Karnataka Weather: ಇಂದಿನ ಹವಾಮಾನ; ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಾಧ್ಯತೆ

ಇಂದಿನ ಹವಾಮಾನ; ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಾಧ್ಯತೆ

Karnataka Weather: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಹಗುರ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 32°C ಮತ್ತು 22°C ಇರುವ ಸಾಧ್ಯತೆ ಇದೆ.

ಸ್ನಾತಕ ಪದವಿ ಪರೀಕ್ಷೆಗಳು ಪಾರದರ್ಶಕವಾಗಿ ನಡೆದರೆ ಮಾತ್ರ ಗುಣಾತ್ಮಕ ಶಿಕ್ಷಣಕ್ಕೆ ಅರ್ಥ ಬರಲಿದೆ: ಮೌಲ್ಯಮಾಪನ ಕುಲ ಸಚಿವ ಲೋಕನಾಥ್ ಅಭಿಮತ

ಪರೀಕ್ಷೆಗಳು ಪಾರದರ್ಶಕವಾಗಿ ನಡೆದರೆ ಗುಣಾತ್ಮಕ ಶಿಕ್ಷಣಕ್ಕೆ ಅರ್ಥ ಬರಲಿದೆ

ಚಿಕ್ಕಬಳ್ಳಾಪುರ ವಿಶ್ವವಿದ್ಯಾಲಯದ ಉದ್ದೇಶ ಈಡೇರಬೇಕಾದರೆ ಪರಿಣಾಮಕಾರಿ ಬೋಧನೆ ಮತ್ತು ಪಾರದರ್ಶಕ ಪರೀಕ್ಷಾ ವ್ಯವಸ್ಥೆಯಿಂದ ಮಾತ್ರ ಸಾಧ್ಯ ಈ ಕರ್ತವ್ಯಕ್ಕೆ ನಿಯೋಜನೆಗೊಳ್ಳುವವರು ವೃತ್ತಿಬದ್ಧತೆ ಪ್ರದರ್ಶನ ಮಾಡಿದಾಗ ಮಾತ್ರ ವಿಶ್ವವಿದ್ಯಾಲಯಕ್ಕೆ ಹೆಸರು ಬರಲಿದೆ ಎಂದು ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಮೌಲ್ಯಮಾಪನ ಕುಲ ಸಚಿವ ಡಾಕ್ಟರ್ ಲೋಕನಾಥ್ ಅಭಿಪ್ರಾಯ ಪಟ್ಟರು

Chikkaballapur News: 4ನೇ ಅಖಿಲ ಭಾರತ ಸಾಹಿತ್ಯ ಪರಿಷದ್ ಸಮ್ಮೇಳನದಲ್ಲಿ ಬಿ.ಆರ್.ಕೃಷ್ಣರಿಗೆ ಸನ್ಮಾನ

ಪರಿಷದ್ ಸಮ್ಮೇಳನದಲ್ಲಿ ಬಿ.ಆರ್.ಕೃಷ್ಣರಿಗೆ ಸನ್ಮಾನ

ಬಾಗಲಕೋಟೆಯ ಸಾಹಿತಿ ಎಸ್.ಜಿ. ಕೋಟಿ ಅಧಿವೇಶನದ ಅವರು ಅಧ್ಯಕ್ಷತೆ ವಹಿಸಿದ್ದರು. ಸತತ ಎರಡು ದಿನಗಳ ಕಾಲ ನಡೆದ ಸಮ್ಮೇಳನದಲ್ಲಿ ಕವಿಗೋಷ್ಠಿ, ವಿಚಾರಗೋಷ್ಠಿ, ಸಾಂಸ್ಕೃತಿಕ ಕಾರ್ಯಕ್ರಮಗಳು, ಸಾಹಿತ್ಯ ಸಮ್ಮೇಳನಗಳು, ಕನ್ನಡಕ್ಕಾಗಿ ಸೇವೆ ಸಲ್ಲಿಸಿದ ಕವಿ, ಸಾಮಾಜಿ ಕಾರ್ಯಕರ್ತರಿಗೆ ಸನ್ಮಾನ ಮಾಡಲಾಯಿತು.

Bakrid: ಬಾಗೇಪಲ್ಲಿ ತಾಲ್ಲೂಕಿನಾದ್ಯಂತ ಶ್ರದ್ಧಾ ಭಕ್ತಿಯಿಂದ ಬಕ್ರೀದ್ ಆಚರಣೆ

ಬಾಗೇಪಲ್ಲಿ ತಾಲ್ಲೂಕಿನಾದ್ಯಂತ ಶ್ರದ್ಧಾ ಭಕ್ತಿಯಿಂದ ಬಕ್ರೀದ್ ಆಚರಣೆ

ಮುಸ್ಲಿಂ ಧರ್ಮದಲ್ಲಿ ಪ್ರತಿಯೊಬ್ಬರು ತಮ್ಮ ಬದುಕಿನಲ್ಲಿ ನಮಾಜ್, ಹಜ್, ರೋಜಾ, ಜಕಾತ, ಸಿತ್ರಾ ಈ ಪಂಚ ಸೂತ್ರಗಳನ್ನು ಪಾಲಿಸಿದಾಗ ಮಾತ್ರ ಅಲ್ಲಾಹನ ಕೃಪೆಗೆ ಪಾತ್ರರಾಗಿ ಮೋಕ್ಷ ಪಡೆಯಲು ಸಾಧ್ಯ. ಅನಿವಾರ್ಯ ಸಂದರ್ಭದಲ್ಲಿ ದೇಶ, ಧರ್ಮ ಹಾಗೂ ಮಾನವ ಕುಲಕ್ಕಾಗಿ ಸರ್ವಸ್ವವನ್ನು ತ್ಯಾಗ ಮಾಡಲು ಸನ್ನದ್ಧಗೊಳಿಸುವುದು ಈ ಹಬ್ಬದ ಆಚರಣೆಯ ಉದ್ದೇಶವಾಗಿದೆ

Chikkaballapur News: ಪರಿಸರ ಸ್ನೇಹಿ ಕೃಷಿ ತಾಂತ್ರಿಕತೆಯಿಂದ ಸುಸ್ಥಿರ ಕೃಷಿ ಸಾಧನೆ

ಪರಿಸರ ಸ್ನೇಹಿ ಕೃಷಿ ತಾಂತ್ರಿಕತೆಯಿಂದ ಸುಸ್ಥಿರ ಕೃಷಿ ಸಾಧನೆ

ಪ್ರಕೃತಿ ವಿಕೋಪಗಳು ಈಗ ನಮ್ಮ ಕಣ್ಮುಂದೆ ಕಾಣು ತ್ತಿವೆ. ಆದರೆ ಪ್ರಸ್ತುತ ಪರಿಸ್ಥಿತಿಯಲ್ಲಿ ಮರಗಳನ್ನು ಕಡಿದು ವಾಣಿಜ್ಯ ಮಟ್ಟದಲ್ಲಿ ಹೆಚ್ಚು ರಾಸಾಯ ನಿಕಗಳನ್ನು ಬಳಸಿ ಕೃಷಿ ಮಾಡಿ ಹಣಗಳಿಸುತ್ತಿರುವು ದರಿಂದ, ಆರೋಗ್ಯದಲ್ಲಿ ವ್ಯತ್ಯಾಸಗಳು ಕಾಣಿಸಿ ಕೊಂಡು ಆಸ್ಪತ್ರೆಗಳಿಗೆ ಖರ್ಚು ಮಾಡಲಾಗುತ್ತಿದೆಂದು ಸದ್ಯದ ಪರಿಸರದ ಪರಿಸ್ಥಿತಿಯ ಬಗ್ಗೆ ಸಂಕ್ಷಿಪ್ತವಾಗಿ ರೈತರಿಗೆ ಮನದಟ್ಟು ಮಾಡಿಕೊಟ್ಟರು.

Bakrid at Chikkaballapur: ಚಿಕ್ಕಬಳ್ಳಾಪುರದಲ್ಲಿ ಶ್ರದ್ಧಾಭಕ್ತಿಯಿಂದ ಬಕ್ರೀದ್ ಆಚರಣೆ

ಚಿಕ್ಕಬಳ್ಳಾಪುರದಲ್ಲಿ ಶ್ರದ್ಧಾಭಕ್ತಿಯಿಂದ ಬಕ್ರೀದ್ ಆಚರಣೆ

ಹಬ್ಬದ ಪ್ರಯುಕ್ತ ನಗರದಲ್ಲಿ ಮುಸ್ಲಿಂ ಬಾಂಧವರು ನಗರದ ಮಸ್ಜಿದೆ ಖುರ್ದ್ ಬಳಿ ಜಮಾಯಿಸಿ, ದೇವರ ನಾಮ ಸ್ಮರಣೆ ಮಾಡಿ, ಬಳಿಕ ಮೆರವಣಿಗೆ ಸಾಗಿದ ನೂರಾರು ಮುಸ್ಲಿಂ ಬಾಂಧವರು ಬಜಾರ್ ರಸ್ತೆ, ಭುವನೇಶ್ವರಿ ವೃತ್ತ,ಗಂಗಮ್ಮ ಗುಡಿ ರಸ್ತೆ ಹಾಗೂ ಎಂ.ಜಿ.ರಸ್ತೆ ಮಾರ್ಗವಾಗಿ ಸಾಗಿ ಪ್ರಶಾಂತ ನಗರದಲ್ಲಿರುವ ಈದ್ಗಾ ಮೈದಾನದ ಬಳಿ ಸೇರಿದರು.

Pralhad Joshi: ಕೇಂದ್ರದ ಪುರಸ್ಕಾರಗಳು ನೈಜ ಸಾಧಕರಿಗೆ ಸಲ್ಲುತ್ತಿವೆ: ಪ್ರಲ್ಹಾದ್‌ ಜೋಶಿ

ಕೇಂದ್ರದ ಪುರಸ್ಕಾರಗಳು ನೈಜ ಸಾಧಕರಿಗೆ ಸಲ್ಲುತ್ತಿವೆ: ಜೋಶಿ

ಸ್ಥಳೀಯ ಆಡಳಿತ, ಅಧಿಕಾರಿಗಳಿಗೇ ನೈಜ ಸಾಧಕರ ಬಗ್ಗೆ ಮಾಹಿತಿ ಇರುವುದಿಲ್ಲ. ಅಂಥ ಸಮಾಜ ಸೇವಕರನ್ನು, ಸಾಧಕರನ್ನು ಪ್ರಧಾನಿ ನರೇಂದ್ರ ಮೋದಿ ಗುರುತಿಸಿ ಪದ್ಮಶ್ರೀಯಂತಹ ಅತ್ಯುನ್ನತ ಪ್ರಶಸ್ತಿ ನೀಡಿ ಪುರಸ್ಕರಿಸುತ್ತಿದ್ದಾರೆ. ಈ ಮೂಲಕ ಅವರ ಸೇವಾ ಕೈಂಕರ್ಯಗಳಿಗೆ ಮತ್ತಷ್ಟು ಪ್ರೋತ್ಸಾಹ ನೀಡುತ್ತ ಬೆಂಬಲವಾಗಿ ನಿಂತಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ತಿಳಿಸಿದ್ದಾರೆ.

Chowkidar Movie: ಅಪ್ಪ-ಮಗನ ಬಾಂಧವ್ಯದ ಮನ ಮುಟ್ಟುವ ʼಚೌಕಿದಾರ್ʼ ಚಿತ್ರದ ಹಾಡಿಗೆ ಭರಪೂರ ಮೆಚ್ಚುಗೆ: 1 ಮಿಲಿಯನ್ಸ್‌ ವೀಕ್ಷಣೆ

ಅಪ್ಪ-ಮಗನ ಬಾಂಧವ್ಯದ ಮನ ಮುಟ್ಟುವ ʼಚೌಕಿದಾರ್ʼ ಚಿತ್ರದ ಹಾಡಿಗೆ ಮೆಚ್ಚುಗೆ

ʼಚೌಕಿದಾರ್‌ʼ ಸಿನಿಮಾದ ಅಪ್ಪ-ಮಗನ ಬಾಂಧವ್ಯ ಗೀತೆಗೆ ಭರಪೂರ ಮೆಚ್ಚುಗೆ ವ್ಯಕ್ತವಾಗಿದೆ. ಅಪ್ಪನ ಆಂಥೆಮ್‌ ಗೀತೆಗೆ ಬರೋಬ್ಬರಿ ಒಂದು ಮಿಲಿಯನ್ಸ್‌ ವೀಕ್ಷಣೆ ಕಂಡಿದೆ. ʼಚೌಕಿದಾರ್ʼ ಸಿನಿಮಾದಲ್ಲಿ ಪೃಥ್ವಿ ಅಂಬಾರ್ ನಾಯಕನಾಗಿ ಅಭಿನಯಿಸಿದ್ದಾರೆ. ಧನ್ಯಾ ರಾಮ್‌ಕುಮಾರ್ ಚಿತ್ರದ ನಾಯಕಿಯಾಗಿ ನಟಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

Bengaluru stampede: ಇಂಥ ಪರಿಸ್ಥಿತಿ ಯಾರಿಗೂ ಬೇಡ; ಭೂಮಿಕ್‌ ಸಮಾಧಿ ಮೇಲೆ ಬಿದ್ದು ತಂದೆ ಗೋಳಾಟ

ಇಂಥ ಪರಿಸ್ಥಿತಿ ಯಾರಿಗೂ ಬೇಡ; ಭೂಮಿಕ್‌ ಸಮಾಧಿ ಮೇಲೆ ಬಿದ್ದು ತಂದೆ ಆಕ್ರಂದನ

Bengaluru stampede: ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಮೃತಪಟ್ಟಿದ್ದ ಯುವಕ ಭೂಮಿಕ್‌ ಮೃತದೇಹದ ಶವಪರೀಕ್ಷೆಯನ್ನು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ನಡೆಸಿ ಕುಟುಂಬಸ್ಥರಿಗೆ ಹಸ್ತಾಂತರಿಲಾಗಿತ್ತು. ಅದೇ ದಿನ, ಬೇಲೂರಿನ ಕುಪ್ಪಗೋಡಿನಲ್ಲಿರುವ ಲಕ್ಷ್ಮಣ್ ಅವರು ಖರೀದಿಸಿದ್ದ ಜಮೀನಿನಲ್ಲೇ ಅವರ ಅಂತ್ಯಕ್ರಿಯೆ ನಡೆಸಲಾಗಿತ್ತು. ಸಮಾಧಿ ಪೂಜೆಗೆ ತೆರಳಿದಾಗ ತಂದೆ ಹಾಗೂ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ.

Bengaluru stampede: ಕಾಲ್ತುಳಿತ ದುರಂತ; 11 ಮೃತರ ಕುಟುಂಬಕ್ಕೆ ಪರಿಹಾರ ತಲಾ 25 ಲಕ್ಷಕ್ಕೆ ಹೆಚ್ಚಿಸಲು ಸಿಎಂ ಆದೇಶ

11 ಮೃತರ ಕುಟುಂಬಕ್ಕೆ ಪರಿಹಾರ ತಲಾ 25 ಲಕ್ಷಕ್ಕೆ ಹೆಚ್ಚಿಸಲು ಸಿಎಂ ಆದೇಶ

Bengaluru stampede: ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ಪ್ರಕರಣದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಈ ಮೊದಲು ತಲಾ 10 ಲಕ್ಷ ರೂ.ಗಳ ಪರಿಹಾರವನ್ನು ರಾಜ್ಯ ಸರ್ಕಾರ ಘೋಷಿಸಿತ್ತು. ಇದೀಗ ಪರಿಹಾರ ಮೊತ್ತ ಹೆಚ್ಚಿಸಲು ಸಿಎಂ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

SS Mallikarjun: ಸರ್ಕಾರಿ ಕಾಮಗಾರಿಗಳಿಗೆ ಬಳಸುವ ಉಪ ಖನಿಜಕ್ಕೆ ಶುಲ್ಕ ಪಾವತಿ ಕಡ್ಡಾಯ: ಎಸ್.ಎಸ್.ಮಲ್ಲಿಕಾರ್ಜುನ್

ಸರ್ಕಾರಿ ಕಾಮಗಾರಿಗಳಿಗೆ ಬಳಸುವ ಉಪ ಖನಿಜಕ್ಕೆ ಶುಲ್ಕ ಕಡ್ಡಾಯ

SS Mallikarjun: ಕೆಎಸ್‌ಆರ್‌ಎಸ್‌ಎಸಿ (KSRSAC) ಸಂಸ್ಥೆಯವರಿಂದ ತ್ರೈಮಾಸಿಕವಾಗಿ ಆಯ್ಕೆ ಕ್ಲಸ್ಟರ್ ಕಲ್ಲುಗಣಿ ಗುತ್ತಿಗೆ ಪ್ರದೇಶಗಳನ್ನು ಡ್ರೋನ್‌ ಉಪಕರಣದ ಮೂಲಕ ಸಮೀಕ್ಷೆ ನಡೆಸಿ ಕಲ್ಲುಗಣಿ ಗುತ್ತಿಗೆ ಪ್ರದೇಶಗಳಲ್ಲಿ ಗುತ್ತಿಗೆದಾರರು ಉತ್ಪಾದಿಸಿ ಸಾಗಾಣಿಕೆ ಮಾಡಿದ ಉಪ ಖನಿಜದ ಪ್ರಮಾಣಕ್ಕೆ ಅನುಗುಣವಾಗಿ ರಾಜಧನ ಮತ್ತು ಇತರೆ ಅನ್ವಯಿಕ ಶುಲ್ಕಗಳನ್ನು ಸಂಗ್ರಹಿಸಲು ಕ್ರಮ ವಹಿಸಲಾಗುವುದು ಎಂದು ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕಾ ಸಚಿವ ಎಸ್.ಎಸ್ ಮಲ್ಲಿಕಾರ್ಜುನ್ ತಿಳಿಸಿದ್ದಾರೆ.

DK Shivakumar: ಕುಮಾರಸ್ವಾಮಿ ಆರೋಗ್ಯ ಸುಧಾರಣೆ ಆಗುವುದಾದರೆ ನನ್ನನ್ನು ಟೀಕಿಸಲಿ ಎಂದ ಡಿಕೆಶಿ

ಕುಮಾರಸ್ವಾಮಿ ಆರೋಗ್ಯ ಸುಧಾರಣೆ ಆಗುವುದಾದರೆ ನನ್ನನ್ನು ಟೀಕಿಸಲಿ ಎಂದ ಡಿಕೆಶಿ

DK Shivakumar: ನಾನು ಕುಮಾರಸ್ವಾಮಿ ಅವರನ್ನು ಗಮನಿಸುತ್ತಿದ್ದೇನೆ. ಅವರು ತಮ್ಮ ಖುಷಿಗೆ ಮಾತನಾಡುತ್ತಿದ್ದಾರೆ. ಅವರು ಏನಾದರೂ ಮಾತನಾಡಲಿ. ಇದರಿಂದ ಅವರಿಗೆ ಖುಷಿಯಾಗಿ, ಆರೋಗ್ಯ ಸುಧಾರಣೆ ಆಗುವುದಾದರೆ ಆಗಲಿ. ಅವರ ಆರೋಗ್ಯ ಸುಧಾರಣೆಯಾಗುವುದು ನನಗೆ ಮುಖ್ಯ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

Book Release: ಮಾಧ್ಯಮ ಕ್ಷೇತ್ರದಲ್ಲಿ ಮಾರ್ಗದರ್ಶನ ನೀಡುವವರ ಕೊರತೆ ಸಾಕಷ್ಟಿದೆ: ಡಾ. ನಿರಂಜನ ವಾನಳ್ಳಿ

ಮಾಧ್ಯಮ ಕ್ಷೇತ್ರದಲ್ಲಿ ಮಾರ್ಗದರ್ಶನ ನೀಡುವವರ ಕೊರತೆ ಸಾಕಷ್ಟಿದೆ

Book Release: ಶಿರಸಿ ನಗರದ ಪಂಚವಟಿ ಸಭಾಂಗಣದಲ್ಲಿ ಮನು ವಿಕಾಸ ಸಂಸ್ಥೆ ಹಾಗೂ ಸಾಹಿತ್ಯ ಪ್ರಕಾಶನ ವತಿಯಿಂದ ಹಿರಿಯ ಪತ್ರಕರ್ತ ರಾಜು ಅಡಕಳ್ಳಿ ಅವರ 'ಸ್ಫೂರ್ತಿವಂತರು' ಕೃತಿಯನ್ನು ಲೋಕಾರ್ಪಣೆಗೊಳಿಸಲಾಯಿತು. ಈ ವೇಳೆ ಬೆಂಗಳೂರು ಉತ್ತರ ವಿಶ್ವ ವಿದ್ಯಾಲಯದ ಕುಲಪತಿ ಡಾ. ನಿರಂಜನ ವಾನಳ್ಳಿ ಮಾತನಾಡಿದ್ದಾರೆ.

Mangalore News: ಸೋಶಿಯಲ್‌ ಮೀಡಿಯಾದಲ್ಲಿ ಕೋಮು ಪ್ರಚೋದಕ ಸಂದೇಶ; 6 ಕಿಡಿಗೇಡಿಗಳ ಬಂಧನ

ಕೋಮು ಪ್ರಚೋದಕ ಸಂದೇಶ; ಮಂಗಳೂರಲ್ಲಿ 6 ಮಂದಿ ಅರೆಸ್ಟ್‌

Mangalore News: ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಸಂದೇಶಗಳನ್ನು ಹಾಕಿ, ಸಮಾಜದ ನೆಮ್ಮದಿಗೆ ಭಂಗವನ್ನುಂಟು ಮಾಡಿದ ಆರೋಪದಲ್ಲಿ ಆರು ಮಂದಿಯನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ವಿವಿಧ ಪ್ರಕರಣಗಳ ತನಿಖೆಯನ್ನು ಮಂಗಳೂರು ನಗರ ಸಿ.ಇ.ಎನ್ ಅಪರಾಧ ಪೊಲೀಸ್ ಠಾಣೆಯ ಅಧಿಕಾರಿಗಳಿಂದ ಮುಂದುವರಿದಿದೆ.

Karnataka Rains: ರಾಜ್ಯದಲ್ಲಿ ಮುಂದಿನ 4 ದಿನ ಅಬ್ಬರಿಸಲಿದೆ ಮಳೆ; ಯೆಲ್ಲೋ ಅಲರ್ಟ್‌ ಘೋಷಣೆ

ಜೂ.11ರವರೆಗೆ ಯೆಲ್ಲೋ ಅಲರ್ಟ್‌ ಘೋಷಣೆ; ಭಾರಿ ಮಳೆ ನಿರೀಕ್ಷೆ

Karnataka Rains: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಹಗುರ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 32°C ಮತ್ತು 22°C ಇರುವ ಸಾಧ್ಯತೆ ಇದೆ.

HD Kumaraswamy: ಕಾವೇರಿ ಆರತಿಗೆ 100 ಕೋಟಿ ಖರ್ಚು ಮಾಡುವುದಕ್ಕೆ ನನ್ನ ವಿರೋಧವಿದೆ: ಎಚ್.ಡಿ.ಕುಮಾರಸ್ವಾಮಿ

ಕಾವೇರಿ ಆರತಿಗೆ 100 ಕೋಟಿ ಖರ್ಚು ಮಾಡಲು ವಿರೋಧವಿದೆ: ಎಚ್‌ಡಿಕೆ

HD Kumaraswamy: ಬೆಂಗಳೂರು ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತದ ವಿಚಾರದಲ್ಲಿ ರಾಜ್ಯ ಸರ್ಕಾರ ಗಂಟೆ ಗಂಟೆಗೊಂದು ನಿರ್ಧಾರ ಮಾಡುತ್ತಿದೆ. ಅಂತಿಮವಾಗಿ ಏನು ಮಾಡುತ್ತದೆ ಎಂಬುದನ್ನು ನೋಡಬೇಕು. ಮೊದಲು ಮ್ಯಾಜಿಸ್ಟ್ರಿಯಲ್ ತನಿಖೆ ಎಂದರು, ಆಮೇಲೆ ನ್ಯಾಯಾಂಗ ತನಿಖೆ ಎಂದು ಹೇಳಿದರು, ಅದಾದ ಮೇಲೆ ಸಿಐಡಿ ಕೊಡುತ್ತೇವೆ ಎನ್ನುತ್ತಿದ್ದಾರೆ. ಅಂತಿಮವಾಗಿ ಯಾವ ತನಿಖೆ ವರದಿ ಪಡೆದುಕೊಳ್ಳುತ್ತಾರೆ ಎಂಬುದನ್ನು ನೋಡಬೇಕು ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಟೀಕಿಸಿದ್ದಾರೆ.

DK Suresh: ಕುಮಾರಸ್ವಾಮಿ ಒತ್ತಡದಲ್ಲಿದ್ದಾರೆ, ಜೆಡಿಎಸ್ ಟ್ವೀಟ್‌ಗಳನ್ನು ಜನರಿಗೆ ತೋರಿಸಬೇಕು‌: ಡಿ.ಕೆ.ಸುರೇಶ್‌

ಕುಮಾರಸ್ವಾಮಿ ಒತ್ತಡದಲ್ಲಿದ್ದಾರೆ, ಆರೋಗ್ಯ ಸರಿಯಿಲ್ಲ: ಡಿ.ಕೆ.ಸುರೇಶ್‌

DK Suresh: ಕುಮಾರಸ್ವಾಮಿ ಅವರ ಹೇಳಿಕೆಗಳನ್ನು ನಾನು ಗಮನಿಸುತ್ತಿದ್ದೆ. ಅವರು ಒತ್ತಡದಲ್ಲಿ ಇದ್ದಾರೆ, ಆರೋಗ್ಯ ಸರಿಯಿಲ್ಲ ಎನಿಸುತ್ತದೆ. ಆರೋಗ್ಯದ ಕಡೆ ಗಮನ ಹರಿಸಿ ಈ ರಾಷ್ಟ್ರದ ಸೇವೆ ಮಾಡಲಿʼ ಎಂದು ಮಾಜಿ ಸಂಸದ ಡಿ.ಕೆ. ಸುರೇಶ್ ಟೀಕಿಸಿದ್ದಾರೆ‌.