SIR ತಾತ್ಕಾಲಿಕ ತಡೆಗೆ ಎನ್ಡಿಎ ಪಟ್ಟು; ಮುಖ್ಯ ಚುನಾವಣಾ ಆಯುಕ್ತರಿಗೆ ದೂರು
ಕರ್ನಾಟಕದಲ್ಲಿ SIR ಪ್ರಕ್ರಿಯೆಯಲ್ಲಿ ಕೇಂದ್ರ ಚುನಾವಣಾ ಆಯೋಗದ ಕಾರ್ಯವಿಧಾನ, ನಿಯಮಗಳನ್ನು ಉಲ್ಲಂಘಿಸಿದ ಎಲ್ಲಾ ಅಧಿಕಾರಿಗಳು ಮತ್ತು ರಾಜಕೀಯ ಪಕ್ಷದ ಕಾರ್ಯಕರ್ತರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶಕುಮಾರ್ ಅವರಿಗೆ ರಾಜ್ಯದ ಬಿಜೆಪಿ-ಜೆಡಿಎಸ್ ನಾಯಕರು ಮನವಿ ಮಾಡಿದ್ದಾರೆ.