ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಕರ್ನಾಟಕ

Chinthamani News: ನೀರು ಬಿಡುವ ವಿಚಾರಕ್ಕೆ ಗಲಾಟೆ; ಮೂವರ ವಿರುದ್ಧ ಬಟ್ಲಹಳ್ಳಿ ದೂರು ದಾಖಲು!

ನೀರು ಬಿಡುವ ವಿಚಾರಕ್ಕೆ ಗಲಾಟೆ; ದೂರು ದಾಖಲು

ಚಿಂತಾಮಣಿ ತಾಲ್ಲೂಕಿನ ಮುಂಗಾನಹಳ್ಳಿ ಗ್ರಾಮದ ವಾಟರ್‌ಮ್ಯಾನ್ ನಾಗಮ್ಮ ಎಂಬುವವರು ಸರಿಯಾಗಿ ನೀರು ಬಿಡುತ್ತಿರಲಿಲ್ಲ ಎನ್ನಲಾಗಿದೆ.ಈ ವಿಚಾರವಾಗಿ ಗಾಯಾಳು ಪ್ರಭಾಕರ್ ಅವರ ಅಣ್ಣ ಸುಧಾಕರ್ ಅವರು ಪಿ.ಡಿ.ಓ ಅವರಿಗೆ ದೂರು ನೀಡಿದ್ದರು. ದೂರಿನ ಅನ್ವಯ ಪಿ.ಡಿ.ಓ ಅವರು ಗ್ರಾಮಕ್ಕೆ ಬಂದು ಸಮಸ್ಯೆಯನ್ನು ಬಗೆಹರಿಸಿದ್ದರು.

ದೇಶದ ಅತ್ಯಂತ ಭ್ರಷ್ಟ ರಾಜ್ಯಗಳಲ್ಲಿ ಕರ್ನಾಟಕಕ್ಕೆ 5ನೇ ಸ್ಥಾನ; ನ್ಯಾ. ಬಿ. ವೀರಪ್ಪ

ದೇಶದ ಅತ್ಯಂತ ಭ್ರಷ್ಟ ರಾಜ್ಯಗಳಲ್ಲಿ ಕರ್ನಾಟಕಕ್ಕೆ 5ನೇ ಸ್ಥಾನ

ರಾಜ್ಯದ ಪ್ರತಿಯೊಂದು ಇಲಾಖೆಯಲ್ಲೂ ಭ್ರಷ್ಟಾಚಾರ ಮಿತಿಮೀರಿದ್ದು, ಕರ್ನಾಟಕ ದೇಶದ ಅತ್ಯಂತ ಭ್ರಷ್ಟ ರಾಜ್ಯಗಳಲ್ಲಿ ಐದನೇ ಸ್ಥಾನದಲ್ಲಿದೆ ಎಂದು ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ಹೇಳಿದ್ದಾರೆ. ಮಂಡ್ಯ ಮತ್ತು ಮಳವಳ್ಳಿ ತಾಲೂಕುಗಳಲ್ಲಿ ಬಾಕಿ ಉಳಿದಿದ್ದ ಲೋಕಾಯುಕ್ತ ಪ್ರಕರಣಗಳ ವಿಚಾರಣೆ ಪೂರ್ಣಗೊಳಿಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದರು.

Doctor Self harming: ಕ್ಯಾನ್ಸರ್ ರೋಗದಿಂದ ಬಳಲುತ್ತಿದ್ದ ಹಿರಿಯ ವೈದ್ಯ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

ಕ್ಯಾನ್ಸರ್ ರೋಗದಿಂದ ಬಳಲುತ್ತಿದ್ದ ಹಿರಿಯ ವೈದ್ಯ ಆತ್ಮಹತ್ಯೆ

ಡಾ.ದಿನೇಶ್ ಲಕ್ಷ್ಮಣ ಭಟ್ಕಳ (79) ಆತ್ಮಹತ್ಯೆ ಮಾಡಿಕೊಂಡ ವೈದ್ಯರು. ಅವರು ಮೂಲತಃ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನವರಾಗಿದ್ದು, ಹಲವು ವರ್ಷಗಳಿಂದ ವೈದ್ಯಕೀಯ ಸೇವೆ ಸಲ್ಲಿಸಿ ನಂತರ ಬೆಳಗಾವಿಯಲ್ಲಿ ನೆಲೆಸಿದ್ದರು. ಸಮಾಜದಲ್ಲಿ ಸರಳ ಹಾಗೂ ಸ್ನೇಹಪರ ವ್ಯಕ್ತಿತ್ವ ದಿಂದ ಪರಿಚಿತರಾಗಿದ್ದ ಅವರು, ವೈದ್ಯ ವಲಯದಲ್ಲಿಯೂ ಗೌರವ ಪಡೆದಿದ್ದರು.

Gudibande News: ಸಾಗುವಳಿ ಚೀಟಿಗಾಗಿ ಆಗ್ರಹಿಸಿ ಕರ್ನಾಟಕ ಭೂ ಹಕ್ಕುದಾರರ ವೇದಿಕೆ ಪ್ರತಿಭಟನೆ

ಸಾಗುವಳಿ ಚೀಟಿಗಾಗಿ ಆಗ್ರಹಿಸಿ ಕರ್ನಾಟಕ ಭೂ ಹಕ್ಕುದಾರರ ವೇದಿಕೆ ಪ್ರತಿಭಟನೆ

ಭೂಮಿಯ ಹಕ್ಕು ಕೋರಿ ನಮೂನೆ 50, 53 ಮತ್ತು 57ರ ಅಡಿಯಲ್ಲಿ ಅರ್ಜಿಗಳನ್ನು ಸಲ್ಲಿಸಿದ್ದರೂ, ಸರ್ಕಾರ ವರ್ಷಗಳಿಂದ ಅವುಗಳನ್ನು ಇತ್ಯರ್ಥಪಡಿಸದೆ ನೆನೆಗುದಿಗೆ ಇಟ್ಟಿದೆ. ನಮೂನೆ 57 ರ ಅಡಿಯಲ್ಲಿ ಅರ್ಜಿಗಳನ್ನು ಪಡೆದ ನಂತರ ಸಂಬಂಧಪಟ್ಟ ಇಲಾಖೆಯು ಯಾವುದೇ ಸಭೆಗಳನ್ನು ನಡೆಸುತ್ತಿಲ್ಲ. ಅಧಿಕಾರಿಗಳು ರೈತರ ಪರವಾಗಿ ನಿಲ್ಲುತ್ತಿಲ್ಲ ಎಂದು ಆರೋಪಿಸಿದರು.

ಬೆಳಗಾವಿ ಜೈಲಿನಿಂದ ರೌಡಿಶೀಟರ್ ವಿಲ್ಸನ್ ಗಾರ್ಡನ್ ನಾಗ ಜೈಲಿನಿಂದ ರಿಲೀಸ್; ಸನ್ಮಾನ ಮಾಡಲು ಹೋದವರು ವಶಕ್ಕೆ!

ರೌಡಿಶೀಟರ್ ವಿಲ್ಸನ್ ಗಾರ್ಡನ್ ನಾಗ ಜೈಲಿನಿಂದ ರಿಲೀಸ್

ಸಿದ್ದಾಪುರದ ಮಹೇಶ್ ಕೊಲೆ ಪ್ರಕರಣದಲ್ಲಿ ಬಂಧಿತನಾಗಿದ್ದ ನಟೋರಿಯಸ್ ರೌಡಿಶೀಟರ್ ವಿಲ್ಸನ್ ಗಾರ್ಡನ್ ನಾಗನಿಗೆ ಜಾಮೀನು ಮಂಜೂರಾಗಿದ್ದು, ಗುರುವಾರ ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹದಿಂದ ಬಿಡುಗಡೆ ಮಾಡಲಾಗಿದೆ. ಮಹೇಶ್ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿ ಬಂಧಿತರಾಗಿದ್ದ ನಾಗ ಕಳೆದ ಹಲವು ತಿಂಗಳುಗಳಿಂದ ನ್ಯಾಯಾಂಗ ಬಂಧನದಲ್ಲಿದ್ದ.

ಮುಂದಿನ ಮೂರು ದಿನ ರಾಜ್ಯದಲ್ಲಿ ಭಾರೀ ಮಳೆ; ಹಲವು ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಘೋಷಣೆ

ಮುಂದಿನ ಮೂರು ದಿನ ರಾಜ್ಯದಲ್ಲಿ ಭಾರೀ ಮಳೆ

ಮುಂದಿನ ಐದು ದಿನಗಳವರೆಗೆ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಪೂರ್ವ ಮುಂಗಾರು ಮಾರುತಗಳ ತೀವ್ರತೆ ಹೆಚ್ಚಾಗಿರುವುದರಿಂದ ಹಲವೆಡೆ ಬಿರುಗಾಳಿ ಸಹಿತ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಮುಂದಿನ 3 ದಿನ ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ.

ಉತ್ತರ ಕನ್ನಡ ಜನತೆಗೆ ಗುಡ್‌ನ್ಯೂಸ್‌; ಕಾರವಾರದಲ್ಲಿ ನಿರ್ಮಾಣವಾಗಲಿದೆ 200 ಹಾಸಿಗೆಯ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ

ಕಾರವಾರದಲ್ಲಿ ನಿರ್ಮಾಣವಾಗಲಿದೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ

Sidaramaiah: ಉತ್ತರ ಕನ್ನಡ ಭಾಗದ ಜನರ ಬಹು ವರ್ಷಗಳ ಬೇಡಿಕೆಯಾದ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. 200 ಹಾಸಿಗೆಗಳ ಸಾಮರ್ಥ್ಯದ ಹೊಸ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಕಟ್ಟಡವನ್ನು 100 ಕೋಟಿ ರುಪಾಯಿ ಅಂದಾಜು ಮೊತ್ತದಲ್ಲಿ ಕಾರವಾರದಲ್ಲಿ ನಿರ್ಮಿಸಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.

ಸಂಜೆಯಾಗುತ್ತಿದ್ದಂತೆ ಬೆಂಗಳೂರಿನಲ್ಲಿ ಅಬ್ಬರಿಸಿದ ಮಳೆ; ಮೆಟ್ರೋ ಸಂಚಾರದಲ್ಲಿ ವ್ಯತ್ಯಯ, ಪ್ರಯಾಣಿಕರ ಪರದಾಟ

ಬೆಂಗಳೂರಿನಲ್ಲಿ ಅಬ್ಬರಿಸಿದ ವರುಣ; ಮೆಟ್ರೋ ಸಂಚಾರದಲ್ಲಿ ವ್ಯತ್ಯಯ

Bengaluru Rains: ಮುಂಗಾರುಪೂರ್ವ ಮಳೆ ರಾಜ್ಯಾದ್ಯಂತ ಅಬ್ಬರಿಸುತ್ತಿದ್ದು, ಗುರುವಾರ ಬೆಂಗಳೂರಿನಲ್ಲಿ ವರುಣಾರ್ಭಟಕ್ಕೆ ಜನತೆ ಕಂಗಾಲಾಗಿದ್ದಾರೆ. ಬೆಂಗಳೂರಿನ ಜೀವನಾಡಿ ನಮ್ಮ ಮೆಟ್ರೋ ಸಂಚಾರರದಲ್ಲಿ ವ್ಯತ್ಯಯ ಉಂಟಾಗಿ ಪ್ರಯಾಣಿಕರು ಕಂಗಾಲಾದರು. ಬೆಂಗಳೂರು ಮೆಟ್ರೋ ರೈಲು ನಿಗಮ ವ್ಯಾಪ್ತಿಯ ಹಸಿರು ಮತ್ತು ನೇರಳೆ ಸೇರಿಎಲ್ಲ ಪ್ರಮುಖ ಮೆಟ್ರೋ ಮಾರ್ಗಗಳ ರೈಲು ಸೇವೆಗಳಲ್ಲಿ ವಿಳಂಬ ಉಂಟಾಯಿತು.

ನಟ ದರ್ಶನ್‌ ಜತೆ ಜೈಲಿನಲ್ಲಿ ಸಿಗರೇಟ್‌ ಸೇದುತ್ತ ವೈರಲ್‌ ಆಗಿದ್ದ ರೌಡಿ ವಿಲ್ಸನ್‌ ಗಾರ್ಡನ್‌ ನಾಗನಿಗೆ ಜಾಮೀನು; ಜೈಲಿನಿಂದ ಬಿಡುಗಡೆ

ರೌಡಿ ವಿಲ್ಸನ್‌ ಗಾರ್ಡನ್‌ ನಾಗನಿಗೆ ಜಾಮೀನು

Belagavi News: ಸಿದ್ದಾಪುರದ ಮಹೇಶ್ ಕೊಲೆ ಪ್ರಕರಣದ ಬಂಧಿತ ಆರೋಪಿ, ನಟೋರಿಯಸ್ ರೌಡಿಶೀಟರ್‌ ವಿಲ್ಸನ್ ಗಾರ್ಡನ್ ನಾಗನಿಗೆ ಜಾಮೀನು ಮಂಜೂರಾದ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲಾಸ್ಪತ್ರೆ ಕೈದಿ ವಾರ್ಡನಲ್ಲಿ ಆರೋಗ್ಯ ತಪಾಸಣೆ ನಡೆಸಿ ಬಿಡುಗಡೆ ಮಾಡಲಾಯಿತು.

ಕಾಂಗ್ರೆಸ್ ಕಚೇರಿಯಲ್ಲಿ ಪುಷ್ಪನಮನದ ಮೂಲಕ ರಾಜೀವ್‌ಗಾಂಧಿ ಪುಣ್ಯಸ್ಮರಣೆ

ಕಾಂಗ್ರೆಸ್ ಕಚೇರಿಯಲ್ಲಿ ಪುಷ್ಪನಮನದ ಮೂಲಕ ರಾಜೀವ್‌ಗಾಂಧಿ ಪುಣ್ಯಸ್ಮರಣೆ

ಭಾರತ ಕಂಡ ದೂರದೃಷ್ಟಿಯ ನೇತಾರರಲ್ಲಿ ಒಬ್ಬರಾಗಿದ್ದ ರಾಜೀವ್‌ಗಾಂಧಿ ಅವರು ಅಪ್ರತಿಮ ನಾಯಕರಾಗಿದ್ದರು.ಅವರು ಪ್ರಧಾನಿಗಳಾಗಿದ್ದ ಅವಧಿಯಲ್ಲಿ ಭಾರತವು ಅಭಿವೃದ್ಧಿಯತ್ತ ದಿಟ್ಟ ಹೆಜ್ಜೆಗೋಳನ್ನು ಹಾಕಿತ್ತು. ಅತ್ಯಂತ ಕಿರಿಯ ವಯಸ್ಸಿನಲ್ಲಿಯೇ ದೇಶದ ಪ್ರಧಾನಿಯಾಗಿದ್ದ ರಾಜೀವ್‌ಗಾಂಧಿ ಅಭಿವೃದ್ದಿಯ ಶಕೆಯನ್ನು ಹುಟ್ಟು ಹಾಕುವ ಮೂಲಕ ಯುವಕರ ಕಣ್ಮಣಿಯಾಗಿದ್ದರು

ಶಾಂತಿಯುತ ಬಕ್ರೀದ್ ಆಚರಣೆಗೆ ಪೊಲೀಸ್ ಸನ್ನದ್ಧ: ಚಿಂತಾಮಣಿ ವೃತ್ತ ನಿರೀಕ್ಷಕ ಬಿ.ಎ.ವಿಜಿ ಕುಮಾರ್ ಭರವಸೆ

ಶಾಂತಿಯುತ ಬಕ್ರೀದ್ ಆಚರಣೆಗೆ ಪೊಲೀಸ್ ಸನ್ನದ್ಧ

ಚಿಂತಾಮಣಿ ನಗರ ಮತ್ತು ಗ್ರಾಮಾಂತರ ಪ್ರದೇಶಗಳು ಶಾಂತಿ ಮತ್ತು ಸೌಹಾರ್ದತೆಗೆ ಹೆಸರಾಗಿದ್ದು, ಯಾವುದೇ ರೀತಿಯ ಅಹಿತಕರ ಘಟನೆಗಳಿಗೆ ಆಸ್ಪದ ನೀಡದಂತೆ ಹಬ್ಬವನ್ನು ಯಶಸ್ವಿಯಾಗಿ ಆಚರಿಸಲು ಸಾರ್ವಜನಿಕರ ಸಹಕಾರ ಅತ್ಯಗತ್ಯ. ಪೊಲೀಸ್ ಇಲಾಖೆಯ ವತಿಯಿಂದ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಎಲ್ಲಾ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಭರವಸೆ ನೀಡಿದರು.

ʼವಿಶ್ವವಾಣಿʼ ಉದ್ಯೋಗಿ ಜಿ.ಎಲ್. ರಂಗನಾಥ್ ನಿಧನ

ʼವಿಶ್ವವಾಣಿʼ ಉದ್ಯೋಗಿ ಜಿ.ಎಲ್. ರಂಗನಾಥ್ ನಿಧನ

GL Ranganath: ʼವಿಶ್ವವಾಣಿʼ ದಿನಪತ್ರಿಕೆಯಲ್ಲಿ ಬೆಂಗಳೂರು ಕೇಂದ್ರ ಕಚೇರಿಯಲ್ಲಿ ಹಿರಿಯ ಗ್ರಾಫಿಕ್ ಡಿಸೈನರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಜಿ.ಎಲ್. ರಂಗನಾಥ್ ಗುರುವಾರ ನಸುಕಿನಲ್ಲಿ ಮೃತಪಟ್ಟಿದ್ದಾರೆ. ಮೃತರು ಇಬ್ಬರು ಸಹೋದರರು, ಸಹೋದರಿ, ಪತ್ನಿ, ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.

26ನೇ ವಯಸ್ಸಿಗೆ ಬಿಎಂಡಬ್ಲ್ಯು ಕಾರ್ ಖರೀದಿಸಿದ ಬೆಂಗಳೂರಿನ ಯುವಕ: ಪೋಷಕರ ಭಾವನಾತ್ಮಕ ಕ್ಷಣ ವೈರಲ್

ಬಿಎಂಡಬ್ಲ್ಯು ಕಾರ್ ಖರೀದಿಸಿದ ಬೆಂಗಳೂರಿನ ಯುವಕ: ನೆಟ್ಟಿಗರ ಮನಗೆದ್ದ ದೃಶ್ಯ

Viral News: ಬೆಂಗಳೂರಿನ ಟೆಕ್ಕಿ ಇಶಾನ್ ದತ್ತ 26ನೇ ವಯಸ್ಸಿನಲ್ಲಿ ತಮ್ಮ ಕನಸಿನ ಬಿಎಂಡಬ್ಲ್ಯು ಕಾರ್‌ ಖರೀದಿಸಿದ್ದು, ಇದನ್ನು ಕಂಡು ಪೋಷಕರು ಖುಷಿಯಲ್ಲೇ ಅತ್ತು ಬಿಟ್ಟಿದ್ದಾರೆ. ಈ ಘಟನೆಯ ದೃಶ್ಯ ಸೋಷಿಯಲ್ ಮೀಡಿಯಾದಲ್ಲಿ ಭಾರಿ ವೈರಲ್ ಆಗಿದೆ.

Kalaburagi News: ಕರೆಂಟ್‌ ಹರಿಸಿ ಕಾಡು ಪ್ರಾಣಿಗಳ ಬಲಿ ಪಡೆಯುತ್ತಿದ್ದ ಇಬ್ಬರ ಬಂಧನ

ಕಾಡು ಪ್ರಾಣಿಗಳ ಬಲಿ ಪಡೆಯುತ್ತಿದ್ದ ಇಬ್ಬರ ಬಂಧನ

ತೆಲಂಗಾಣ ಗಡಿಭಾಗದ ಸಂಗಾಪೂರ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಕರೆಂಟ್‌ ಹರಿಸಿ ಪ್ರಾಣಿಗಳನ್ನು ಬಲಿ ಪಡೆಯುತ್ತಿದ್ದ ಇಬ್ಬರು ಆರೋಪಿಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ. ಸಂಗಾಪೂರ ಗ್ರಾಮದ ಮಾಣಿಕ ತಂದೆ ಹರಿಶ್ಚಂದ್ರ ಪವಾರ (40) ಹಾಗೂ ಸುನೀಲ ತಂದೆ ಧರ್ಮು ರಾಠೋಡ (30) ಬಂಧಿತರು.

MLA Pradeep Eshwar: ಶಾಸಕ ಪ್ರದೀಪ್ ಈಶ್ವರ್ ಸಚಿವರಾಗಬೇಕು ಎಂಬುದು ಕ್ಷೇತ್ರದ ಜನತೆಯ ಆಶಯವಾಗಿದೆ : ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾಗಭೂಷಣ್

ಶಾಸಕ ಪ್ರದೀಪ್ ಈಶ್ವರ್ ಸಚಿವರಾಗಬೇಕು ಎಂಬುದು ಕ್ಷೇತ್ರದ ಜನತೆಯ ಆಶಯ

ಹಳ್ಳಿಗಳ ಬೆಳವಣಿಗೆಯಲ್ಲಿಯೇ ದೇಶದ ಅಭಿವೃದ್ದಿಯ ಗುಟ್ಟು ಅಡಗಿದೆ ಎಂಬ ಮಹಾತ್ಮಾ ಗಾಂಧೀಜಿ ಅವರ ಗ್ರಾಮಸ್ವರಾಜ್ಯ ತತ್ವದಲ್ಲಿ ನಂಬಿಕೆ ಇಟ್ಟಿರುವ ನಮ್ಮ ಶಾಸಕ ಪ್ರದೀಪ್ ಈಶ್ವರ್ ಕೊಟ್ಟ ಮಾತಿನಂತೆ ನಡೆದುಕೊಳ್ಳುವ ನಾಯಕರಾಗಿದ್ದಾರೆ. ಕ್ಷೇತ್ರದ ಪ್ರತಿಹಳ್ಳಿಯ ರಸ್ತೆಗಳು ಚೆನ್ನಾಗಿರಬೇಕು ಎಂದು ಭಾವಿಸಿ ಎಲ್ಲೆಲ್ಲಿ ಸಾಧ್ಯವೋ ಎಲ್ಲೆಲ್ಲಾ ಸಿ ಸಿ ರಸ್ತೆ ನಿರ್ಮಾಣಕ್ಕೆ ಅಡಿಗಲ್ಲು ಹಾಕುತ್ತಿದ್ದಾರೆ. ಇದಕ್ಕೆ ಇಂದಿನ  ಶಂಕುಸ್ಥಾಪನೆಯೇ ಸಾಕ್ಷಿ ಎಂದರು

Indira Kit: ಅಕ್ಕಿಯ ಜೊತೆಗೆ ಇಂದಿರಾ ಕಿಟ್: ಸರ್ಕಾರದ ಘೋಷಣೆ ಮೇಲೆ ಜನರ ಕಣ್ಣು

ಇಂದಿರಾ ಕಿಟ್ ಯೋಜನೆಗೆ ಚಾಲನೆ – ಜೂನ್‌ನಲ್ಲಿ ವಿತರಣೆ ಸಾಧ್ಯತೆ

ಸಚಿವರ ಮಾಹಿತಿಯಂತೆ ಕಿಟ್ ವಿತರಣೆಗೆ ಸಂಬಂಧಿಸಿದ ಮರು ಟೆಂಡರ್ ಪ್ರಕ್ರಿಯೆ ಅಂತಿಮ ಹಂತ ದಲ್ಲಿದ್ದು, ಶೀಘ್ರದಲ್ಲೇ ಜಿಲ್ಲೆಗಳಿಗೆ ಸರಬರಾಜು ಆರಂಭವಾಗಲಿದೆ. ಇಂದಿರಾ ಕಿಟ್‌ನಲ್ಲಿ ತೊಗರಿ ಬೇಳೆ, ಸೂರ್ಯಕಾಂತಿ ಎಣ್ಣೆ, ಸಕ್ಕರೆ ಹಾಗೂ ಉಪ್ಪು ಸೇರಿರಲಿದ್ದು, ಬಡ ಕುಟುಂಬಗಳಿಗೆ ಇದು ನೆರವಾಗಲಿದೆ ಎಂದು ಸರ್ಕಾರ ಹೇಳಿದೆ.

ಗೃಹಲಕ್ಷ್ಮಿ ಯೋಜನೆ ಬಾಕಿ ಹಣ ವಿಚಾರದಲ್ಲಿ ಸರ್ಕಾರಕ್ಕೆ ಹೈಕೋರ್ಟ್‌ ನೋಟಿಸ್‌; ನ್ಯಾಯಾಲಯ ಹೇಳಿದ್ದೇನು?

ʼಗೃಹಲಕ್ಷ್ಮಿʼ ಬಾಕಿ ಹಣ ವಿಚಾರದಲ್ಲಿ ಸರ್ಕಾರಕ್ಕೆ ಹೈಕೋರ್ಟ್‌ ನೋಟಿಸ್‌

Gruhalakshmi Scheme: ಗೃಹಲಕ್ಷ್ಮಿ ಯೋಜನೆ 2 ತಿಂಗಳ ಕಂತು ಪಾವತಿಯಾಗದಿರುವ ಬಗ್ಗೆ ಸಲ್ಲಿಕೆಯಾಗಿರುವ ಅರ್ಜಿ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್‌ ಸರ್ಕಾರಕ್ಕೆ ನೋಟಿಸ್‌ ನೀಡಿದೆ. 2025ರ ಫೆಬ್ರವರಿ ಮತ್ತು ಮಾರ್ಚ್ ತಿಂಗಳ‌ ಹಣವನ್ನು ಪಾವತಿ ಮಾಡದ ಹಿನ್ನೆಲೆಯಲ್ಲಿ ಫಲಾನುಭವಿಗಳು ಕೋರ್ಟ್‌ ಮೊರೆ ಹೋಗಿದ್ದರು.

Gauribidabur News: ಸವಿತಾ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ

Gauribidabur News: ಸವಿತಾ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ

ತಾಲೂಕು ಸವಿತಾ ಸಮಾಜ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಜಿ.ಡಿ.ಶಿವಕುಮಾರ್ ಮಾತನಾಡಿ, ಸಮುದಾಯದವರು ಸಂಘಟನೆ ಮತ್ತು ಒಗ್ಗಟ್ಟಿನಿಂದ ಸಾಗಿದಾಗ ರಾಜಕೀಯ, ಸಾಮಾಜಿಕ ಕ್ಷೇತ್ರಗಳಲ್ಲಿ ನಮಗೆ ಪ್ರಾತಿನಿಧ್ಯ ಸಿಗಲಿದೆ, ಈ ನಿಟ್ಟಿನಲ್ಲಿ ನೂತನ ಪದಾಧಿ ಕಾರಿಗಳು ಸಮುದಾಯದ ಸಂಘಟನೆ ಯಲ್ಲಿ ತೊಡಗಿಸಿಕೊಳ್ಳಬೇಕು ಎಂದರು

ಬೆಂಗಳೂರಿನಲ್ಲಿ ಡಿ.5,6ರಂದು ಮನೋತ್ಸವ-2026 ರಾಷ್ಟ್ರೀಯ ಮಾನಸಿಕ ಆರೋಗ್ಯ ಹಬ್ಬ: ಕಾರ್ಯಕ್ರಮ ಪ್ರಸ್ತಾವನೆಗಳಿಗೆ ಆಹ್ವಾನ

ಡಿ.5,6ರಂದು ಮನೋತ್ಸವ-2026 ರಾಷ್ಟ್ರೀಯ ಮಾನಸಿಕ ಆರೋಗ್ಯ ಹಬ್ಬ

ದೇಶದ ಪ್ರತಿಷ್ಠಿತ ರಾಷ್ಟ್ರೀಯ ಮಾನಸಿಕ ಆರೋಗ್ಯ ಹಬ್ಬ ಮನೋತ್ಸವದ ಮೂರನೇ ಆವೃತ್ತಿಯು ಇದೇ ವರ್ಷದ ಡಿಸೆಂಬರ್ 5 ಮತ್ತು 6 ರಂದು ಬೆಂಗಳೂರಿನಲ್ಲಿ ಆಯೋ ಜನೆಗೊಂಡಿದೆ. ಸಾರ್ವಜನಿಕ ರಿಗೆ ಉಚಿತ ಪ್ರವೇಶವಿರುವ ಈ ವಿಶಿಷ್ಟ ಕಾರ್ಯಕ್ರಮಕ್ಕಾಗಿ ಪ್ರಸ್ತುತ ಕಾರ್ಯಕ್ರಮ ಪ್ರಸ್ತಾವನೆಗಳನ್ನು ಆಹ್ವಾನಿಸಲಾಗಿದೆ.

ನೀಟ್‌ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಶಾಕಿಂಗ್‌ ಹೇಳಿಕೆ; ಕೇಂದ್ರದ ವಿರುದ್ಧ ವಾಗ್ದಾಳಿ

ವೈದ್ಯಕೀಯ ಪ್ರವೇಶ ಪರೀಕ್ಷೆ ಕೇಂದ್ರೀಕೃತವಾಗಬಾರದು‌: ಸಿಎಂ ಸಿದ್ದರಾಮಯ್ಯ

CM Siddaramaiah: ನೀಟ್ ಪರೀಕ್ಷೆಯ ಪ್ರಶ್ನೆ ಸೋರಿಕೆಯಾಗಿದ್ದು, ಇದಕ್ಕೆ ಜವಾಬ್ದಾರರಾಗಿರುವ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರಾಗಲಿ ಅಥವಾ ಪ್ರಧಾನಮಂತ್ರಿ ನರೇಂದ್ರ ಮೋದಿಯವರಾಗಲಿ ಜವಾಬ್ದಾರಿಯನ್ನು ಹೊತ್ತುಕೊಂಡಿಲ್ಲ. ಧರ್ಮೇಂದ್ರ ಪ್ರಧಾನ್ ನೀಟ್ ಪರೀಕ್ಷೆಗೆ ಮತ್ತೊಂದು ದಿನಾಂಕ ನಿಗದಿ ಮಾಡಿ ಕೈ ತೊಳೆದುಕೊಂಡಿದ್ದು , ಈ ಜವಾಬ್ದಾರಿಯನ್ನು ಧರ್ಮೇಂದ್ರ ಪ್ರಧಾನ್ ಹಾಗೂ ಪ್ರಧಾನಿ ನರೇಂದ್ರ ಮೋದಿ ಹೊರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ನಾಳೆ ರಾಜ್ಯಾದ್ಯಂತ ಅಬ್ಬರಿಸಲಿದೆ ಮುಂಗಾರು ಪೂರ್ವ ಮಳೆ; ಬೆಂಗಳೂರು ಸೇರಿ ಹಲವು ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌

ನಾಳೆ ರಾಜ್ಯಾದ್ಯಂತ ಅಬ್ಬರಿಸಲಿದೆ ಮುಂಗಾರು ಪೂರ್ವ ಮಳೆ

Karnataka Weather: ಮುಂದಿನ 4 ದಿನಗಳ ಕಾಲ ರಾಜ್ಯಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜತೆಗೆ ಬೆಂಗಳೂರು ಸೇರಿ ಕೆಲವು ಜಿಲ್ಲೆಗಳಲ್ಲಿ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಬೆಂಗಳೂರು ಏರ್‌ಪೋರ್ಟ್‌ನಲ್ಲಿ 'ಚಾಲೆಂಜರ್ 2026' ಭರ್ಜರಿ ತಾಲೀಮು

ಬೆಂಗಳೂರು ಏರ್‌ಪೋರ್ಟ್‌ನಲ್ಲಿ 'ಚಾಲೆಂಜರ್ 2026' ಭರ್ಜರಿ ತಾಲೀಮು

Kempegowda International Airport: ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 'ಚಾಲೆಂಜರ್ 2026' ಎಂಬ ಮಹಾ ಅಭ್ಯಾಸವನ್ನು ಯಶಸ್ವಿಯಾಗಿ ನಡೆಸಲಾಯಿತು. ಈ ತಾಲೀಮಿನಲ್ಲಿ ವಿಮಾನಯಾನ ಸಂಸ್ಥೆಗಳು, ರಾಜ್ಯ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ, ಆಸ್ಪತ್ರೆಗಳು, ಭಾರತೀಯ ವಾಯುಪಡೆ, ಸೇನಾ ಹಾಗೂ ಅರೆಸೇನಾ ಪಡೆಗಳು ಮತ್ತು ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಸೇರಿ ಬರೋಬ್ಬರಿ 100ಕ್ಕೂ ಹೆಚ್ಚು ಸಂಸ್ಥೆಗಳು ಹಾಗೂ 3,000ಕ್ಕೂ ಅಧಿಕ ಸಿಬ್ಬಂದಿ ಪಾಲ್ಗೊಂಡಿದ್ದರು.

ತಪ್ಪಿದ ಭಾರೀ ದುರಂತ: ನೆಲಕ್ಕಪ್ಪಳಿಸಿದ ಏರ್ ಇಂಡಿಯಾ ವಿಮಾನದ ಹಿಂಭಾಗ, ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಅವಘಡ

ಬೆಂಗಳೂರಿನಲ್ಲಿ ನೆಲಕ್ಕಪ್ಪಳಿಸಿದ ಏರ್ ಇಂಡಿಯಾ ವಿಮಾನದ ಹಿಂಭಾಗ

tail strike in Bengaluru: ಏರ್ ಇಂಡಿಯಾ ವಿಮಾನವೊಂದು ಇಂದು (ಗುರುವಾರ, ಮೇ 21) ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ವೇಳೆ ಅದರ ಹಿಂಭಾಗ ನೆಲಕ್ಕಪ್ಪಳಿಸಿದ ಘಟನೆ ನಡೆದಿದೆ. ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ವೇಳೆ ತಾಂತ್ರಿಕ ಅಡಚಣೆ ಉಂಟಾಗಿದ್ದರಿಂದ ಈ ದುರ್ಘಟನೆ ನಡೆದಿದೆ.

ರಾಹುಲ್ ಗಾಂಧಿ ಅಸಂಬದ್ಧ, ಬೇಜವಾಬ್ದಾರಿಯ ಹೇಳಿಕೆ ಖಂಡನೀಯ: ಬಿ.ವೈ. ರಾಘವೇಂದ್ರ

ರಾಹುಲ್ ಗಾಂಧಿ ಹೇಳಿಕೆ ಖಂಡನೀಯ: ಬಿ.ವೈ. ರಾಘವೇಂದ್ರ

BY Raghavendra: ಮೇಲಿಂದ ಮೇಲೆ ಚುನಾವಣಾ ಸೋಲುಗಳನ್ನು ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ಮೇಲಿನ ಜನರ ಅಚಲ ನಂಬಿಕೆಯನ್ನು ಒಪ್ಪಿಕೊಳ್ಳಲು ಸಾಧ್ಯವಾಗದೆ, ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ, ಮತ್ತೆ ತಮ್ಮ ಅದೇ ನಿಂದನೀಯ ಮತ್ತು ಬೇಜವಾಬ್ದಾರಿಯುತ ನಾಲಿಗೆಯನ್ನು ಹರಿ ಬಿಟ್ಟಿದ್ದಾರೆ ಎಂದು ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ ಟೀಕಿಸಿದ್ದಾರೆ.

Loading...