ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಕರ್ನಾಟಕ

SSLC result: ಇನ್ನು ಡಿಜಿಲಾಕರ್ ಮೂಲಕವೇ ಎಸ್ಸೆಸ್ಸೆಲ್ಸಿ ಅಂಕಪಟ್ಟಿ ನೀಡುವುದು ಕಡ್ಡಾಯ

ಇನ್ನು ಡಿಜಿಲಾಕರ್ ಮೂಲಕವೇ ಎಸ್ಸೆಸ್ಸೆಲ್ಸಿ ಅಂಕಪಟ್ಟಿ ನೀಡುವುದು ಕಡ್ಡಾಯ

2026-27ನೇ ಶೈಕ್ಷಣಿಕ ಸಾಲಿನಿಂದ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ವಿದ್ಯಾರ್ಥಿಗಳಿಗೆ ಈಗ ನೀಡಲಾಗುತ್ತಿರುವ ಕಾಗದದ (Hard Copy) ಅಂಕಪಟ್ಟಿ ವಿತರಣೆಯನ್ನು ಸಂಪೂರ್ಣವಾಗಿ ನಿಲ್ಲಿಸಲಾಗುತ್ತದೆ. ಬದಲಾಗಿ, National Academic Depository (NAD)/ Digilocker ನಲ್ಲಿ ವಿದ್ಯಾರ್ಥಿಗಳ ಅಂಕಪಟ್ಟಿಯನ್ನು ಅಳವಡಿಸಲಾಗುತ್ತದೆ.

ಆಂಟಿಗಳ ಎಸ್ಕೇಪ್‌, ಅಂಕಲ್‌ʼಗಳ ಪರದಾಟ

ಆಂಟಿಗಳ ಎಸ್ಕೇಪ್‌, ಅಂಕಲ್‌ʼಗಳ ಪರದಾಟ

ಪ್ರೀತಿಸಿ, ಮನೆಯವರ ಒಪ್ಪಿಗೆ ಪಡೆದು ಮದುವೆಯಾಗಿದ್ದ ಜಿಮ್ ಟ್ರೈನರ್‌ನ ಪತ್ನಿ, ಪತಿಯ ಸ್ನೇಹಿತ ನೊಂದಿಗೆ ಓಡಿ ಹೋಗಿದ್ದಾಳೆ. ಪ್ರೀತಿಸಿ ಮದುವೆಯಾದ ಪತ್ನಿ ಈಗ ಗೆಳೆಯನ ಪಾಲಾಗಿದ್ದಾಳೆ. ಅಣ್ಣ ಅಣ್ಣ ಅಂತ ಕರೆಯುತ್ತಿದ್ದವಳು ಈಗ ಪ್ರೀತಿಸಿ ಮದುವೆಯಾಗಿದ್ದ ಗಂಡನಿಗೆ ಕೊಟ್ಟು ಕೈಕೊಟ್ಟು ಪರಾರಿ ಯಾಗಿದ್ದಾಳೆ. ಈ ಬಗ್ಗೆ ದೂರು ದಾಖಲಾಗಿದ್ದರೂ ಮಹಿಳೆ ಓಡಿಹೋಗಿರುವುದು ಕುತೂಹಲಕ್ಕೆ ಕಾರಣ ವಾಗಿದೆ.

Bengaluru Crime news: ಬೆಂಗಳೂರಿನ ಮನೆಯಲ್ಲಿ ದಂಪತಿ ಶವಗಳು ಪತ್ತೆ; ಕೊಲೆ ಮಾಡಿ ಆತ್ಮಹತ್ಯೆ ಶಂಕೆ

ಬೆಂಗಳೂರಿನ ಮನೆಯಲ್ಲಿ ದಂಪತಿ ಶವಗಳು ಪತ್ತೆ; ಕೊಲೆ ಮಾಡಿ ಆತ್ಮಹತ್ಯೆ ಶಂಕೆ

ಪತ್ನಿಯನ್ನು ಉಸಿರುಗಟ್ಟಿಸಿ ಕೊಲ್ಲಲಾಗಿದೆ. ಪತಿ ಸೀರೆಯಿಂದ ನೇಣು ಹಾಕಿಕೊಂಡಿದ್ದಾನೆ. ಮೇಲ್ನೋಟಕ್ಕೆ ಕೌಟುಂಬಿಕ ಕಲಹದಿಂದ ಸಂಭವಿಸಿದ ಕೊಲೆ- ಆತ್ಮಹತ್ಯೆ ಎನ್ನಲಾಗುತ್ತಿದೆಯಾದರೂ ಮರಣೋತ್ತರ ಪರೀಕ್ಷೆ ವರದಿ ಹಾಗೂ ಪೊಲೀಸರ ತನಿಖೆ ಬಳಿಕ ಸಾವಿನ ರಹಸ್ಯ ಬಯಲಿಗೆ ಬರಲಿದೆ.

CET exam: ಇಂದು, ನಾಳೆ ಕರ್ನಾಟಕ ಸಿಇಟಿ ಪರೀಕ್ಷೆ, ಎಚ್ಚರಿಕೆಯ ಕಣ್ಗಾವಲು

ಇಂದು, ನಾಳೆ ಕರ್ನಾಟಕ ಸಿಇಟಿ ಪರೀಕ್ಷೆ, ಎಚ್ಚರಿಕೆಯ ಕಣ್ಗಾವಲು

ಒಟ್ಟು 3,30,479 ವಿದ್ಯಾರ್ಥಿಗಳು ಪರೀಕ್ಷೆಗೆ ಹೆಸರು ನೋಂದಾಯಿಸಿದ್ದಾರೆ. ರಾಜ್ಯಾದ್ಯಂತ 745 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಪರೀಕ್ಷಾ ಅಕ್ರಮ ತಡೆಯಲು ಒಟ್ಟು 15,265 ಸಿಸಿ ಕ್ಯಾಮೆರಾಗಳನ್ನು ಅಳವಡಿಸಲಾಗಿದ್ದು, ಜಿಲ್ಲಾ ಮಟ್ಟದಲ್ಲಿ ಡಿಸಿಗಳು ಮತ್ತು ಬೆಂಗಳೂರಿನ ಕಮಾಂಡ್ ಸೆಂಟರ್‌ನಿಂದ ನೇರ ನಿಗಾ ವಹಿಸಲಾಗುತ್ತದೆ.

Karnataka SSLC Result 2026: ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟ; ರಿಸಲ್ಟ್‌ ಚೆಕ್‌ ಮಾಡಲು ಇಲ್ಲಿದೆ ಲಿಂಕ್‌

ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ 2026​: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಬಿಡುಗಡೆ ಬಗ್ಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ಮಾಹಿತಿ ನೀಡಿದೆ. ಇಂದು ಮಧ್ಯಾಹ್ನ ಫಲಿತಾಂಶ ಪ್ರಕಟವಾಗಲಿದ್ದು, ರಿಸಲ್ಟ್‌ ಚೆಕ್‌ ಮಾಡುವ ವಿಧಾನ ಹಾಗೂ ವೆಬ್‌ಸೈಟ್‌ ಮಾಹಿತಿ ಇಲ್ಲಿ ನೀಡಲಾಗಿದೆ.

ನಿರಂತರ ಪ್ರಯತ್ನದಿಂದ ಯಶಸ್ಸು ಸಾಧ್ಯ : ಸಂಘದ ಅಧ್ಯಕ್ಷೆ ಪದ್ಮ ಅಭಿಮತ

ನಿರಂತರ ಪ್ರಯತ್ನದಿಂದ ಯಶಸ್ಸು ಸಾಧ್ಯ : ಸಂಘದ ಅಧ್ಯಕ್ಷೆ ಪದ್ಮ ಅಭಿಮತ

ಕಾರ್ಯಕ್ರಮದಲ್ಲಿ 2026ರ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.95.4 ಅಂಕ  ಪಡೆದಿರುವ ನಗರಸಭೆ ಸದಸ್ಯೆ ಸುಬ್ಬಮ್ಮ ಮೊಮ್ಮಗ ಹಾಗೂ ಶ್ರೀನಿವಾಸ ಹಾಗೂ ಭಾರತಿ ದಂಪತಿ ಪುತ್ರ ಪುನೀತ್ ಅವರನ್ನು ಸನ್ಮಾನಿಸಲಾಯಿತು.  ಜೀವನದ ಸವಾಲನ್ನು ಎದುರಿಸುವ ಶಕ್ತಿ ಸಾಮರ್ಥ್ಯವನ್ನು ಬೆಳೆಸಿಕೊಳ್ಳಬೇಕು. ಸಾಧನೆಯ ಮೆಟ್ಟಿಲನ್ನು ಏರುವ ತುಡಿತ ನಮ್ಮಲ್ಲಿರಬೇಕು. ನಮ್ಮ ಸಾಧನೆ ಮುಂದಿನ ಜನಾಂಗಕ್ಕೆ ಪ್ರೇರಣೆಯಾಗಬೇಕು

ನಿಮ್ಮನ್ನು ಗೆಲ್ಲಿಸಿ ತಪ್ಪು ಮಾಡಿದೆವು : ಜನರನ್ನು ಮರುಳು ಮಾಡಿದ ನೀವು ಷ್ಟಾಚಾರದ ಪಿತಾಮಹ: ಮಿಲ್ಟನ್ ವೆಂಕಟೇಶ್ ಆಕ್ರೋಶ

ಜನರನ್ನು ಮರುಳು ಮಾಡಿದ ನೀವು ಭ್ರಷ್ಟಾಚಾರದ ಪಿತಾಮಹ

ಕೈಯಲ್ಲಿ ಬಿಡಿಗಾಸು ಇಲ್ಲದೆ ಕ್ಷೇತ್ರಕ್ಕೆ ಬಂದ ನಿಮಗೆ ನಾವೆಲ್ಲಾ ಹಣ ಖರ್ಚು ಮಾಡಿಕೊಂಡು ಕೆಲಸ ಮಾಡಿದ್ದೇವೆ. ಕೈಯಲ್ಲಿ ಅಂಬೇಡ್ಕರ್ ಪೋಟೋ ಹಿಡಿದು ಕಾಲೋನಿಗಳಿಗೆ ಹೋಗಿ ಅಮ್ಮಾ ನಾನು ಅನಾಥ, ನನ್ನ ಕೈಹಿಡಿದು ನಡೆಸಿ ಎಂದು ಗೋಗರೆದೆ. ಅವರೊಟ್ಟಿಗೆ ಕುಳಿತು ಅನ್ನ ತಿಂದು ಪ್ರಾಮಾ ಣಿಕವಾಗಿ ಕೆಲಸ ಮಾಡುವ ಮಾತಾಡಿದೆ.

Chikkaballapur News: ನನ್ನ ವಿರುದ್ಧ ನಿಂತು ಜಿಲ್ಲಾ ಪಂಚಾಯಿತಿ ಸ್ಥಾನ ಗೆಲ್ಲಲಿ ನೋಡೋಣ : ಕಾಕಲ ಚಿಂತೆ ರಾಜಣ್ಣ ಸವಾಲು

ನನ್ನ ವಿರುದ್ಧ ನಿಂತು ಜಿಲ್ಲಾ ಪಂಚಾಯಿತಿ ಸ್ಥಾನ ಗೆಲ್ಲಲಿ ನೋಡೋಣ

ನೀವೊಬ್ಬ ಎಂಎಲ್‌ಎ ಆಗಿ ಚಿಮುಲ್ ಚುಕ್ಕಾಣಿ ಹಿಡಿಯಬೇಕಾದರೆ ಅಭ್ಯರ್ಥಿ ಹಾಕಿಸಬೇಕಿತ್ತು. ಯಾಕೆ ನಿಮಗೆ ಅರ್ಹ ಅಭ್ಯರ್ಥಿಗಳು ಯಾರೂ ಸಿಗಲಿಲ್ಲವಾ? ಯಾಕೆ ಹಾಕಿಸಲಿಲ್ಲ? ಎಂದ ಅವರು ನಿಮಗೆ ಯೋಗ್ಯತೆಯಿಲ್ಲ ಎಂಬುದನ್ನು ಅರಿತು, ಇಡೀ ಜಿಲ್ಲೆಯಲ್ಲಿ ಪೆರೇಸಂದ್ರದಲ್ಲಿ ಮಾತ್ರ ಯುನಾನಿಮಸ್ ಆಯ್ಕೆಯಾದರೆ ಪಕ್ಷಕ್ಕೆ ಮರ್ಯಾದೆ ಇರಲ್ಲ ಎಂದು ಭಾವಿಸಿ ಜಿಲ್ಲಾ ಉಸ್ತುವಾರಿ ಸಚಿವರು ನನ್ನನ್ನು ಅಭ್ಯರ್ಥಿ ಮಾಡಿದರು.ನೀವು ಶಾಸಕರಾಗಿ ನನ್ನ ಪರವಾಗಿ ಕೆಲಸ ಮಾಡಬೇಕಿತ್ತು ಮಾಡಿದಿರಾ?

ಏ.23ರಿಂದ ಶ್ರೀ ಕಾಳಿಕಾದೇವಿ ಜಾತ್ರಾ ಮಹೋತ್ಸವ

ಏ.23ರಿಂದ ಶ್ರೀ ಕಾಳಿಕಾದೇವಿ ಜಾತ್ರಾ ಮಹೋತ್ಸವ

23 ರಂದು ಸಾಯಂಕಾಲ 7 ಗಂಟೆಗೆ ಪುರಾಣ ಮಹಾಮಂಗಲ, ಶ್ರೀ ವಿಶ್ವಕರ್ಮ ಜಗದ್ಗುರು ಮೂರಝಾವಧೀಶ್ವರ ಅಫಝಲಪೂರದ ಶ್ರೀ ಪ್ರಣವ ನಿರಂ ಜನ ಶ್ರೀಗಳು, ಸಿಂದಗಿಯ ರಾಮ ಚಂದ್ರ ಶ್ರೀಗಳು, ಗೋಳಸಾರದ ಅಭಿನವ ಪುಂಡಲಿಂಗ ಶ್ರೀಗಳು, ಜೆಡಿ ಎಸ್ ಮುಖಂಡ ಬಿ.ಡಿ.ಪಾಟೀಲ, ನಗರಸಭೆ ಪೌರಾಯುಕ್ತ ಶಿವಾನಂದ ಪೂಜಾರಿ ಉಪಸ್ಥಿತರಿರುವರು

Indi News: ಗ್ರಾಪಂ ಗಳಿಗೆ ಬಾರದ 15ನೇ ಹಣಕಾಸು ಯೋಜನೆ ಅನುದಾನ: ಬಹುತೇಕ ಗ್ರಾಪಂಗಳಿಗೆ ಅರ್ಥಿಕ  ಸಂಕಷ್ಟ

ಗ್ರಾಪಂ ಗಳಿಗೆ ಬಾರದ 15ನೇ ಹಣಕಾಸು ಯೋಜನೆ ಅನುದಾನ

ಅಭಿವೃದ್ದಿ ಕಾರ್ಯಗಳು ಅರ್ಧಕ್ಕೆ ನಿಂತಿದ್ದು ಜನರ ಪ್ರಶ್ನೆಗಳಿಗೆ ಉತ್ತರಿಸಲಾಗದ ಪಂಚಾಯಿತಿ ಅಭಿವೃದ್ದಿ ಅಧಿಕಾರಿಗಳು ಅಕ್ಷರಶಃ ಹೈರಾಣಾಗುತ್ತಿದ್ದಾರೆ. ವೇತನ ಪಾವತಿ, ನಿರ್ವಹಣೆಗೆ ತಾಲೂಕಿ ನಲ್ಲಿರುವ 38 ಗ್ರಾಪಂಗಳು ಸಾರ್ವಜನಿಕರಿಂದ ಸಂಗ್ರಹವಾಗುವ ತೆರಿಗೆ ಕೇಂದ್ರ ಮತ್ತು ರಾಜ್ಯ ಹಣಕಾಸು ಆಯೋಗ ನೀಡುವ ಅನುದಾನ ಅವಲಂಬಿಸಿವೆ. ಆದರೆ 15ನೇಯ ಹಣಕಾಸು ಆಯೋಗದ ಅನುದಾನ ವನ್ನು ನಾಲ್ಕು ವರ್ಷದವರೆಗೆ ನಾನಾ ಕಂತುಗಳಲ್ಲಿ ನೀಡುತ್ತ ಬಂದಿದ್ದ ಕೇಂದ್ರ ಐದನೇ ವರ್ಷದ ಅನುದಾನವನ್ನು ಸಮರ್ಪಕವಾಗಿ ಬಿಡುಗಡೆ ಮಾಡಿಲ್ಲ

Excise Department: ರಾಜ್ಯ ಸರ್ಕಾರಕ್ಕೆ ಅಬಕಾರಿ ಸುಧಾರಣೆ ವರದಿ ಸಲ್ಲಿಕೆ; ಮದ್ಯದ ಅಂಶದ ಆಧಾರದ ಮೇಲೆ ತೆರಿಗೆ ವಿಧಿಸಲು ಶಿಫಾರಸು

ಸಂಪನ್ಮೂಲ ಸಂಗ್ರಹ ಸಮಿತಿಯಿಂದ ಅಬಕಾರಿ ಸುಧಾರಣೆ ವರದಿ ಸಲ್ಲಿಕೆ

Liquor price: ಉದ್ಯಮ ಕ್ಷೇತ್ರದ ಪ್ರತಿನಿಧಿಗಳು, ಸಾರ್ವಜನಿಕ ಆರೋಗ್ಯ ತಜ್ಞರು, ಶೈಕ್ಷಣಿಕ ಸಂಸ್ಥೆಗಳು, ಸರ್ಕಾರೇತರ ಸಂಸ್ಥೆಗಳು ಮತ್ತು ಸಾಮಾನ್ಯ ನಾಗರಿಕರು ಸೇರಿದಂತೆ ಎಲ್ಲಾ ಆಸಕ್ತ ಪಾಲುದಾರರು ವರದಿಯನ್ನು ಪರಿಶೀಲಿಸಿ ತಮ್ಮ ಅಭಿಪ್ರಾಯಗಳನ್ನು ಮೇ 22ರರೊಳಗೆ ಸಲ್ಲಿಸಲು ರಾಜ್ಯ ಸರ್ಕಾರ ವಿನಂತಿಸಿದೆ.

MLA Yashwant Rayagouda Patil: ಇಂಡಿ ಅಭಿವೃದ್ದಿಗಾಗಿ ಕೆಲಸ ಮಾಡುವ ಪ್ರಾಧಿಕಾರ: ಯಶವಂತರಾಯಗೌಡರು

ಇಂಡಿ ಅಭಿವೃದ್ದಿಗಾಗಿ ಕೆಲಸ ಮಾಡುವ ಪ್ರಾಧಿಕಾರ: ಯಶವಂತರಾಯಗೌಡರು

ನಗರಗಳ ವ್ಯವಸ್ಥಿತ ಬೆಳವಣೆಗೆಗೆ ಯೋಜನೆ ಸಿದ್ದಪಡಿಸುವದು ಮತ್ತು ಅನುಷ್ಠಾನಗೊಳಿಸುವದು ಉದ್ದೇಶವಾಗಿದೆ. ಅಭಿವೃದ್ದಿ ಪಡಿಸಿದ ಪ್ರದೇಶಗಳಲ್ಲಿ ರಸ್ತೆ ನೀರು ಸರಬರಾಜು ಒಳಚರಂಡಿ ಮತ್ತು ವಿದ್ಯುತ್ ಸಂಪರ್ಕ ಕಲ್ಪಿಸುವದು ನಮ್ಮ ಗುರಿಯಾಗಿದೆ ಎಂದರು. ಇಂಡಿ ನಗರದ ವ್ಯವಸ್ಥಿತ ಅಭಿವೃದ್ದಿ ವಸತಿ ಯೋಜನೆಗಳು ಮತ್ತು ಮೂಲಸೌಕರ್ಯ ಮಾಡುವ ಉದ್ದೇಶ ಹೊಂದಿದೆ ಎಂದರು.

ಏ.24ರಂದು ವರನಟ ಡಾ|| ರಾಜ್ ಕುಮಾರ್ ಜನ್ಮ ದಿನಾಚರಣೆ

ಏ.24ರಂದು ವರನಟ ಡಾ|| ರಾಜ್ ಕುಮಾರ್ ಜನ್ಮ ದಿನಾಚರಣೆ

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕನ್ನಡ ಸಾಹಿತ್ಯ ಪರಿಷತ್ತು, ಚಿಕ್ಕಬಳ್ಳಾಪುರ ಇವರ ಸಂಯುಕ್ತಾಶ್ರಯದಲ್ಲಿ ವರನಟ ಡಾ|| ರಾಜ್ ಕುಮಾರ್ ಜನ್ಮ ದಿನಾಚರಣೆಯನ್ನು ಏ.24ರಂದು ಬೆಳಿಗ್ಗೆ ಜಿಲ್ಲಾಧಿಕಾರಿಗಳ ಕಚೇರಿಯ ೨ನೇ ಮಹಡಿಯ ಸಭಾಂಗಣದಲ್ಲಿ ಆಯೋಜಿಸಲಾಗಿದೆ

ಹಿಂದೂ ಧರ್ಮದಲ್ಲಿ ಆದಿ ಗುರು ಶಂಕರಾಚಾರ್ಯರಿಗೆ ವಿಶೇಷ ಸ್ಥಾನವಿದೆ, ಜಿಲ್ಲಾಡಳಿತದಿಂದ ಶ್ರೀ ಶಂಕರಚಾರ್ಯರ ಜಯಂತಿ ಆಚರಣೆ : ಜಿಲ್ಲಾಧಿಕಾರಿ ಜಿ.ಪ್ರಭು

ಹಿಂದೂ ಧರ್ಮದಲ್ಲಿ ಆದಿ ಗುರು ಶಂಕರಾಚಾರ್ಯರಿಗೆ ವಿಶೇಷ ಸ್ಥಾನವಿದೆ

ಶ್ರೀ ಶಂಕರಾಚಾರ್ಯ ತಮ್ಮದೇ ಆದ ಅದ್ವೈತ ಸಿದ್ದಾಂತವನ್ನು ಭಾರತಾದ್ಯಂತ ಪ್ರಚುರ ಪಡಿಸುವ ಮೂಲಕ ಹಿಂದೂ ಧರ್ಮಕ್ಕೆ ನೀಡಿದ ಕೊಡುಗೆಯು ಅಪಾರವಾದುದು ಅವರು ಚಿಕ್ಕ ವಯಸ್ಸಿನಲ್ಲಿಯೇ 4 ವೇದಗಳನ್ನು ಅಧ್ಯಯನ ಮಾಡಿ ಎಲ್ಲಾ ಶಾಸ್ತ್ರಗಳಲ್ಲಿ ಜ್ಞಾನ ಪಡೆದಿದ್ದರು. ಬಜಗೋವಿಂದಂ, ವಿವೇಕ ಚೂಡಾಮಣಿ ಇನ್ನು ಮುಂತಾದ ಪುಸ್ತಕಗಳನ್ನು ರಚಿಸಿ ಮಹಾನ್ ತತ್ವಜ್ಞಾನವನ್ನು ಪ್ರಸಾರ ಮಾಡಿದ್ದಾರೆ.

ಅಣ್ಣನ ತರ ಎನ್ನುತ್ತಿದ್ದವಳು ಅವನ ಜತೆಯೇ ಓಡಿ ಹೋದಳು; ಬೆಂಗಳೂರಿನಲ್ಲಿ ಜಿಮ್ ಟ್ರೈನರ್‌ ಕಣ್ಣೀರು

ಅಣ್ಣನ ತರ ಎನ್ನುತ್ತಿದ್ದವಳು ಅವನ ಜತೆಯೇ ಓಡಿ ಹೋದಳು!; ಗಂಡ ಕಣ್ಣೀರು

ಬೆಂಗಳೂರಿನ ​ಜಿಮ್ ಟ್ರೈನರ್ ನಿತೇಶ್ ಯುವತಿಯೊಬ್ಬಳನ್ನು ಪ್ರೀತಿಸಿ, ಮನೆಯವರನ್ನು ಒಪ್ಪಿಸಿ ಅದ್ಧೂರಿಯಾಗಿ ಮದುವೆಯಾಗಿದ್ದರು. ದಾಂಪತ್ಯ ಜೀವನ ಚೆನ್ನಾಗಿಯೇ ಇತ್ತು. ಆದರೆ, ಈಗ ಇವರ ಜೀವನಕ್ಕೆ ಬೆಸ್ಟ್ ಫ್ರೆಂಡ್ ವಿಲನ್‌ ಆಗಿದ್ದಾನೆ. ಗಂಡನ ಸ್ನೇಹಿತನ ಜತೆಯೇ ಮಹಿಳೆ ಪರಾರಿಯಾಗಿದ್ದು, ನ್ಯಾಯಕ್ಕಾಗಿ ಪತಿ ಕಣ್ಣೀರಿಟ್ಟಿದ್ದಾರೆ.

Wind Energy: ಪವನ ಶಕ್ತಿ ಸಾಮರ್ಥ್ಯದಲ್ಲಿ ಜಾಗತಿಕವಾಗಿ 4ನೇ ಸ್ಥಾನದಲ್ಲಿದೆ ಭಾರತ: ಪ್ರಲ್ಹಾದ್ ಜೋಶಿ‌

ಪವನ ಶಕ್ತಿ ಸಾಮರ್ಥ್ಯದಲ್ಲಿ ಜಾಗತಿಕವಾಗಿ 4ನೇ ಸ್ಥಾನದಲ್ಲಿದೆ ಭಾರತ: ಜೋಶಿ‌

Pralhad Joshi: 150 ಮೀಟರ್ ಹಬ್ ಎತ್ತರದಲ್ಲಿ ಭಾರತದ ಪವನ ಶಕ್ತಿ ಸಾಮರ್ಥ್ಯ ಸುಮಾರು 1164 GW ಎಂಬ ಅಂದಾಜಿದ್ದು, 2030ರ ವೇಳೆಗೆ 100 GW ಮತ್ತು 2036ರ ವೇಳೆಗೆ 156 GW ಪವನ ಶಕ್ತಿಯನ್ನು ಸಾಧಿಸುತ್ತದೆ ಮತ್ತು 2070ರ ವೇಳೆಗೆ ನಿವ್ವಳ-ಶೂನ್ಯ ಗುರಿಗೆ ಗಮನಾರ್ಹ ಕೊಡುಗೆ ನೀಡುತ್ತದೆ ಎಂದು ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ್‌ ಜೋಶಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Tesla Model Y L: ಒಂದೇ ಚಾರ್ಜ್‌ಗೆ 681 ಕಿ.ಮೀ. ರೇಂಜ್‌; ಭಾರತಕ್ಕೆ ಲಗ್ಗೆ ಇಟ್ಟ ಟೆಸ್ಲಾ ಹೊಸ ಕಾರು!

ಒಂದೇ ಚಾರ್ಜ್‌ಗೆ 681 ಕಿ.ಮೀ. ರೇಂಜ್‌; ಹೊಸ ಟೆಸ್ಲಾ ಕಾರು ಮಾರುಕಟ್ಟೆಗೆ!

Tesla EV Car: ಟೆಸ್ಲಾ ಭಾರತದಲ್ಲಿ ತನ್ನ ಹೊಚ್ಚ ಹೊಸ, ಎಲ್ಲಾ ವೈಶಿಷ್ಟ್ಯಗಳನ್ನೊಳಗೊಂಡ 6-ಸೀಟರ್ ಕಾರು 'ಮಾಡೆಲ್ ವೈ ಎಲ್' ಅನ್ನು ಬಿಡುಗಡೆ ಮಾಡಿದೆ. ಮುಂಬೈನ ಬಲ್ಲಾರ್ಡ್ ಪಿಯರ್ ಡೌನ್‌ಟೌನ್ ಎಕ್ಸ್‌ಪೀರಿಯೆನ್ಸ್ ಸೆಂಟರ್‌ನಲ್ಲಿ ಈ ನೂತನ ಕಾರನ್ನು ಅನಾವರಣಗೊಳಿಸಲಾಗಿದೆ.

e-property: ಇ-ಸ್ವತ್ತಿನೊಂದಿಗೆ ಹಕ್ಕುಪತ್ರ ನೀಡಿ: ಜಿಲ್ಲಾಧಿಕಾರಿ ಜಿ.ಪ್ರಭು ಸೂಚನೆ

ಇ-ಸ್ವತ್ತಿನೊಂದಿಗೆ ಹಕ್ಕುಪತ್ರ ನೀಡಿ: ಜಿಲ್ಲಾಧಿಕಾರಿ ಜಿ.ಪ್ರಭು ಸೂಚನೆ

ಆಶ್ರಯ ಯೋಜನೆಗಳಿಗೆ ಫಲಾನುಭವಿಗಳನ್ನು ಗ್ರಾಮ ಸಭೆಗಳ ಮೂಲಕ ನಿಯಮಾವಳಿ ರೀತ್ಯ ಸಮರ್ಪಕವಾಗಿಯೇ ಆಯ್ಕೆ ಮಾಡಿ  ಅರ್ಹರಿಗೆ ವಿತರಣೆ ಆಗಬೇಕು ಈ ಬಗ್ಗೆ ಈಗಾಗಲೇ ಸೂಚನೆ ನೀಡಲಾಗಿದೆ. ಮಂಜೂರಾತಿ ಆಗಿರುವ ಜಮೀನಿನಲ್ಲಿ ನಿವೇಶನಗಳು ಅರ್ಹ ಫಲಾನುಭವಿಗಳಿಗೆ ಸಿಗು ವಂತೆ ಮಾಡಲು ಸಂಬಂಧಪಟ್ಟ ಅಧಿಕಾರಿಗಳು ತ್ವರಿತ ಉಪಕ್ರಮಗಳನ್ನು ಕೈಗೊಳ್ಳಬೇಕು

ಏ.23ರಂದು ಅಂಬೇಡ್ಕರ್ ಭವನದಲ್ಲಿ ಶ್ರೀ ಭಗೀರಥ ಜಯಂತಿ

ಏ.23ರಂದು ಅಂಬೇಡ್ಕರ್ ಭವನದಲ್ಲಿ ಶ್ರೀ ಭಗೀರಥ ಜಯಂತಿ

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಚಿಕ್ಕಬಳ್ಳಾಪುರ ಇವರ ಸಂಯುಕ್ತಾಶ್ರಯದಲ್ಲಿ ಶ್ರೀ ಭಗೀರಥ ಜಯಂತಿಯನ್ನು ಏ.23ರಂದು ಬೆಳಿಗ್ಗೆ 11 ಗಂಟೆಗೆ ನಗರದ ಡಾ|| ಬಿ.ಆರ್ ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾಗಿದೆ. ಉನ್ನತ ಶಿಕ್ಷಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಂ.ಸಿ.ಸುಧಾಕರ್ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಲಿದ್ದಾರೆ.

ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಿ ಖರೀದಿಗೆ ಚೀಟಿ ಕೊಡುವಂತಿಲ್ಲ: ಜಿಲ್ಲಾಧಿಕಾರಿ ಜಿ.ಪ್ರಭು

ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಿ ಖರೀದಿಗೆ ಚೀಟಿ ಕೊಡುವಂತಿಲ್ಲ

ನಾಯಿ ಕಡಿತ, ಹಾವು ಕಡಿತ ಸೇರಿದಂತೆ ಆರೋಗ್ಯ ಸೇವೆಗಳಿಗೆ ಅಗತ್ಯವಾಗಿ ಬೇಕಿರುವ ಎಲ್ಲಾ ಔಷಧಿಗಳ ಪೂರೈಕೆಯು ಸಾಕಷ್ಟು ಜಿಲ್ಲೆಯಲ್ಲಿ ಲಭ್ಯವಿದೆ. ಸರ್ಕಾರದಿಂದ ಉಚಿತವಾಗಿ ಸಿಗಬೇಕಿ ರುವ ಆರೋಗ್ಯ ತಪಾಸಣೆ, ಚಿಕಿತ್ಸೆ, ಔಷಧಿ ವಿತರಣೆಯ ಎಲ್ಲ ಆರೋಗ್ಯ ಸೇವೆಗಳು ಉಚಿತವಾಗಿ ಜನರಿಗೆ ದೊರಕಬೇಕು. ಗೌರಿಬಿದನೂರು ತಾಯಿ ಮಕ್ಕಳ ಆಸ್ಪತ್ರೆಗೆ ತಿಂಗಳಿಗೆ ಸರಾಸರಿ 15000 ಹೊರ ರೋಗಿಗಳು ಮತ್ತು 500 ಒಳರೋಗಿಗಳು ದಾಖಲಾಗಿ ಆರೋಗ್ಯ ಸೇವೆ ಪಡೆಯುತ್ತಿದ್ದಾರೆ.

Ranya Rao case: ಚಿನ್ನ ಕಳ್ಳಸಾಗಣೆ ಪ್ರಕರಣ; ಪರಪ್ಪನ ಅಗ್ರಹಾರ ಜೈಲಿನಿಂದ ನಟಿ ರನ್ಯಾ ರಾವ್‌ ರಿಲೀಸ್‌

ಪರಪ್ಪನ ಅಗ್ರಹಾರ ಜೈಲಿನಿಂದ ನಟಿ ರನ್ಯಾ ರಾವ್‌ ರಿಲೀಸ್‌

ದುಬೈನಿಂದ 14.2 ಕೆ.ಜಿ ಚಿನ್ನವನ್ನು ಕಳ್ಳ ಸಾಗಣೆ ಮಾಡಿದ್ದ ಆರೋಪದಡಿ ಕಳೆದ ವರ್ಷ ಮಾರ್ಚ್ 3ರಂದು ಡಿಆರ್‌ಐ ಅಧಿಕಾರಿಗಳು ದೇವನಹಳ್ಳಿಯ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ರನ್ಯಾ ರಾವ್ ಅವರನ್ನು ಬಂಧಿಸಿದ್ದರು. ಕಾಫಿಫೋಸಾ 3(1) ಸೆಕ್ಷನ್ ಅಡಿಯಲ್ಲಿ ಬಂಧನವಾಗಿದ್ದರಿಂದ ಜಾಮೀನು ಲಭಿಸಿದ್ದರೂ ಕಳೆದ ಒಂದು ವರ್ಷದಿಂದ ನಟಿ ಜೈಲಿನಲ್ಲೇ ಇರಬೇಕಾಗಿತ್ತು. ಇದೀಗ ನಟಿ ರನ್ಯಾ ರಾವ್, ಬೆಂಗಳೂರು ಸೆಂಟ್ರಲ್‌ ಜೈಲಿನಿಂದ ಬಿಡುಗಡೆಯಾಗಿದ್ದಾರೆ.

Gubbi News: ಅಂಬೇಡ್ಕರ್ ಜಯಂತೋತ್ಸವ ದೇಶಾದ್ಯಂತ ನಡೆಯುವ ದಲಿತರ ಹಬ್ಬ : ಗೂಳೂರು ಸಿದ್ದರಾಜು

ಅಂಬೇಡ್ಕರ್ ಜಯಂತೋತ್ಸವ ದೇಶಾದ್ಯಂತ ನಡೆಯುವ ದಲಿತರ ಹಬ್ಬ

ದಸಂಸ ಜಿಲ್ಲಾ ಸಂಚಾಲಕ ನಿಟ್ಟೂರು ರಂಗಸ್ವಾಮಿ ಮಾತನಾಡಿ ಯುವ ಪೀಳಿಗೆ ಡಾ. ಬಿ.ಆರ್.ಅಂಬೇಡ್ಕರ್ ಮತ್ತು ಬಾಬು ಜಗಜೀವನ್ ರಾಮ್ ರವರ ಆದರ್ಶವನ್ನು ಪಾಲಿಸಿ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಬೇಕು. ಒಳ ಮೀಸಲಾತಿ (Inner Reservation) ಜಾರಿಗೊಳಿಸಲು ತಾಲೂಕಿನ ಎಲ್ಲಾ ದಲಿತ ಬಂಧು ಗಳು ಒಗ್ಗಟ್ಟಿನ ಪ್ರದರ್ಶನ ತೋರಿಸಬೇಕು

ಸ್ವ ಪಕ್ಷದ ಶಾಸಕರ ಬಗ್ಗೆ ಕೇವಲವಾಗಿ ಮಾತನಾಡುವುದು ಸರಿಯಲ್ಲ: ಜಿ.ಪಂ ಮಾಜಿ ಸದಸ್ಯ ಕೆ.ಎಂ.ಮುನೇಗೌಡ

ಸ್ವ ಪಕ್ಷದ ಶಾಸಕರ ಬಗ್ಗೆ ಕೇವಲವಾಗಿ ಮಾತನಾಡುವುದು ಸರಿಯಲ್ಲ

ಶಾಸಕರ ವಿರುದ್ಧ ಆರೋಪ ಮಾಡುವವರು ತಮ್ಮಿಂದ ಪಕ್ಷಕ್ಕೆ ಎಷ್ಟು ಲಾಭವಾಗಿದೆ ಎಂದು ಆತ್ಮಾವಲೋಕನ ಮಾಡಿಕೊಳ್ಳಬೇಕು. ಕಳೆದ ಮೂರು ವರ್ಷಗಳಲ್ಲಿ ನಡೆದ ಚುನಾವಣೆಯಲ್ಲಿ ಶಾಸಕರು ಪಕ್ಷ ನೀಡಿದ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿಭಾಯಿಸಿದ್ದಾರೆ. ಆರೋಪ ಮಾಡುವವರು ಎಷ್ಟು ಬಾರಿ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದಾರೆ ಎಂಬುದನ್ನು ತಿಳಿಸಿ ಎಂದು ಸವಾಲು ಹಾಕಿದರು.

ಭೂಮಿ ಜೀವ ಸಂಕುಲ ಹೊಂದಿರುವ ಏಕೈಕ ಗ್ರಹ. ಭೂಮಿಯ ಆರೋಗ್ಯ ಕಾಪಾಡಿಕೊಳ್ಳುವುದು ಅನಿವಾರ್ಯ

ಭೂಮಿಯ ಆರೋಗ್ಯ ಕಾಪಾಡಿಕೊಳ್ಳುವುದು ಅನಿವಾರ್ಯ

1970ರಲ್ಲಿ ಮೊದಲ ಪ್ರಾರಂಭವಾದ ವಿಶ್ವ ಭೂದಿನ ಆಚರಣೆ ಇಂದು ವಿಶ್ವದೆಲ್ಲೆಡೆ ಆಚರಿಸ ಲಾಗುತ್ತಿದೆ. ನಮ್ಮ ದೇಶದಲ್ಲಿ ಭೂಮಿಯ ಬಗ್ಗೆ ಪೂಜ್ಯ ಭಾವನೆ ಹೊಂದಿದ್ದು, ಮಾತೃ ಸ್ಥಾನ ನೀಡಿದ್ದೇವೆ.  ನಮ್ಮ ಸುತ್ತಮುತ್ತಲಿನ ಮಣ್ಣು, ನೀರು ಮತ್ತು ಗಾಳಿ ಸಂರಕ್ಷಣೆ ಮಾಡಬೇಕಾಗಿದೆ. ಈ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸುವುದು ನಮ್ಮಲ್ಲರ ಕರ್ತವ್ಯ

Loading...