ಕಲ್ಯಾಣ ಕರ್ನಾಟಕಕ್ಕೆ ನೆರೆ ಪರಿಹಾರ ಪ್ಯಾಕೇಜ್ ಘೋಷಿಸಿ: ಎಚ್ಡಿಕೆ ಆಗ್ರಹ
HD Kumaraswamy: ಮುಖ್ಯಮಂತ್ರಿ ಸೇರಿ ಸಂಪುಟದ 36 ಸಚಿವರಿಗೆ ಇವತ್ತು ಜ್ಞಾನೋದಯವಾಗಿದೆ. ಅಷ್ಟೂ ಸಚಿವರು ಇಲ್ಲಿವರೆಗೆ ಏನು ಮಾಡುತ್ತಿದ್ದರು? ಮಾಧ್ಯಮಗಳು ಮತ್ತು ಪ್ರತಿಪಕ್ಷಗಳಿಂದ ಸರ್ಕಾರದ ವಿರುದ್ಧ ಟೀಕೆಗಳು ಶುರುವಾದ ಮೇಲೆ ಮುಖ್ಯಮಂತ್ರಿಗಳು ನೆರೆಪೀಡಿತ ಜಿಲ್ಲೆಗಳಿಗೆ ತೆರಳಿ ಏರಿಯಲ್ ಸರ್ವೇ ಮಾಡಿದ್ದಾರೆ. ಆದರೆ, ನೆರೆ ಪ್ರತಿ ವರ್ಷದ ಸಮಸ್ಯೆ. ಕಳೆದ 3 ತಿಂಗಳಿಂದ ಈ ಸರ್ಕಾರ ಗಾಢ ನಿದ್ರೆಯಲ್ಲಿತ್ತು ಎಂದು ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಕಿಡಿಕಾರಿದ್ದಾರೆ.