ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ
ಕರ್ನಾಟಕ
HD Kumaraswamy: ಕೇಂದ್ರ ಸಚಿವ ಎಚ್‌ಡಿಕೆಗೆ ಸುಪ್ರೀಂ ಕೋರ್ಟ್‌ನಿಂದ ಬಿಗ್‌ ರಿಲೀಫ್‌; ನ್ಯಾಯಾಂಗ ನಿಂದನೆ ವಿಚಾರಣೆಗೆ ತಡೆ

ಎಚ್‌ಡಿಕೆಗೆ ವಿರುದ್ಧದ ನ್ಯಾಯಾಂಗ ನಿಂದನೆ ವಿಚಾರಣೆಗೆ ಸುಪ್ರೀಂ ತಡೆ

Supreme Court: ರಾಮನಗರದ ಬಿಡದಿ ಬಳಿಯ ಕೇತಗಾನಹಳ್ಳಿಯಲ್ಲಿ ಜಮೀನು ಒತ್ತುವರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ವಿರುದ್ಧದ ನ್ಯಾಯಾಂಗ ನಿಂದನೆ ವಿಚಾರಣೆಗೆ ಸುಪ್ರೀಂ ಕೋರ್ಟ್ ತಡೆ ನೀಡಿದೆ. ಈ ಮೂಲಕ ಕುಮಾರಸ್ವಾಮಿ ಅವರಿಗೆ ಬಿಗ್‌ ರಿಲೀಫ್‌ ಸಿಕ್ಕಂತಾಗಿದೆ.

ಪಾವಗಡ: ಮುಂದುವರಿದ ಖದೀಮರ ಕೈಚಳಕ; ಪುರಸಭೆ ಮಾಜಿ ಅಧ್ಯಕ್ಷರ ಮನೆಯಲ್ಲಿ ಹಾಡಹಗಲೇ ಕಳವು

ಪಾವಗಡ: ಪುರಸಭೆ ಮಾಜಿ ಅಧ್ಯಕ್ಷರ ಮನೆಯಿಂದ ಹಾಡಹಗಲೇ ಕಳವು

Theft Case: ತುಮಕೂರು ಜಿಲ್ಲೆಯ ಪಾವಗಡ ಪಟ್ಟಣದ ಶ್ರೀನಿವಾಸ ನಗರದಲ್ಲಿರುವ ಪುರಸಭೆ ಮಾಜಿ ಅಧ್ಯಕ್ಷರ ಮನೆಯಿಂದ ಕಳ್ಳರು ಹಾಡಹಗಲೇ 4 ಲಕ್ಷ ರೂ. ಮೌಲ್ಯದ ಚಿನ್ನಾಭರಣ ದೋಚಿದ್ದಾರೆ. ಈ ಪ್ರದೇಶದಲ್ಲಿ ನಡೆಯುತ್ತಿರುವ 7ನೇ ಕಳವು ಪ್ರಕರಣ ಇದಾಗಿದೆ.

KY Nanjegowda: ಕಾಂಗ್ರೆಸ್ ಶಾಸಕ ನಂಜೇಗೌಡಗೆ ಇಡಿ ಶಾಕ್; 1.32 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ

ಶಾಸಕ ನಂಜೇಗೌಡಗೆ ಇಡಿ ಶಾಕ್; 1.32 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ

ED: ಮಾಲೂರು ಕಾಂಗ್ರೆಸ್ ಶಾಸಕ ಕೆ.ವೈ. ನಂಜೇಗೌಡ ಮತ್ತು ಇತರರಿಗೆ ಸೇರಿದ 1.32 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಇಡಿ ಜಪ್ತಿ ಮಾಡಿಕೊಂಡಿದೆ. 2023ರಲ್ಲಿ ನಡೆದ ಕೋಮುಲ್ ನೇಮಕಾತಿ ಹಗರಣ ಸಂಬಂಧ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಇಡಿ ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿದೆ.

ಜೊಹೊದಿಂದ ಹಿಂದಿ ಮತ್ತು ಇಂಗ್ಲಿಷ್ ಭಾಷೆಗಳಿಗೆ ತನ್ನದೇ ಆದ ಎಲ್.ಎಲ್.ಎಂ. ಮಾಡೆಲ್ ಮತ್ತು ಎ.ಎಸ್.ಆರ್. ಮಾಡೆಲ್ ಬಿಡುಗಡೆ

ಇತರೆ ಭಾರತೀಯ ಭಾಷೆಗಳಿಗೆ ಎ.ಎಸ್.ಆರ್. ಸದ್ಯದಲ್ಲೇ ಬಿಡುಗಡೆ

ಜೊಹೊ 25ಕ್ಕೂ ಹೆಚ್ಚು ಪ್ರಿ-ಬಿಲ್ಟ್ ಏಜೆಂಟ್ಸ್ ಬಿಡುಗಡೆ ಮಾಡಿದ್ದು ಅವುಗಳಲ್ಲಿ ಕೆಲವನ್ನು ಪಾನ್ ಕಾರ್ಡ್ ಮತ್ತು ವೋಟರ್ ಐಡಿ ಪರಿಶೀಲನೆಗಳಿಗೆ ಭಾರತದ ಮಾರುಕಟ್ಟೆಗೇ ರೂಪಿಸಲಾಗಿದೆ. ಇದಲ್ಲದೆ, ಕಂಪನಿಯು ಭಾರತದಲ್ಲಿ 2024ರಲ್ಲಿ ಶೇ.32ರಷ್ಟು ಬೆಳವಣಿಗೆ ಕಂಡಿದೆ ಎಂದು ಹೇಳಿದೆ. ಬೆಂಗಳೂರಿ ನಲ್ಲಿ ಈ ವರ್ಷ ನಡೆದ ಕಂಪನಿಯ ವಾರ್ಷಿಕ ಬಳಕೆದಾರರ ಸಮ್ಮೇಳನ ಜೊಹೊಲಿಕ್ಸ್ ಇಂಡಿಯಾದಲ್ಲಿ ಇದನ್ನು ಪ್ರಕಟಿಸಲಾಯಿತು.

HM Ramesh Gowda: ಆಯ್ಕೆಗೊಂಡ ಪಿಎಸ್‌ಐ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ಪತ್ರ ನೀಡಿ: ಎಚ್.ಎಂ. ರಮೇಶ್‌ ಗೌಡ ಆಗ್ರಹ

ಆಯ್ಕೆಗೊಂಡ ಪಿಎಸ್‌ಐ ಅಭ್ಯರ್ಥಿಗಳ ಪ್ರತಿಭಟನೆ: ಜೆಡಿಎಸ್‌ ಬೆಂಬಲ

ರಾಜ್ಯ ಸರ್ಕಾರವು 2021ರಲ್ಲಿ 402 ಪಿಎಸ್‌ಐ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿತ್ತು. ಆದರೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ 4 ವರ್ಷಗಳ ನಂತರ ಪರೀಕ್ಷೆ ನಡೆಸಿತ್ತು. 2024 ಡಿಸೆಂಬರ್‌ 26ರಂದು ಫಲಿತಾಂಶವನ್ನೂ ಪ್ರಕಟಿಸಿತ್ತು. ಅದಾದ ಮೇಲೆ ಪರೀಕ್ಷೆಯಲ್ಲಿ ಅರ್ಹರಾದ ಎಲ್ಲಾ ಅಭ್ಯರ್ಥಿಗಳ ದಾಖಲಾತಿಗಳ ಪರಿಶೀಲನೆ ನಡೆದು 7 ತಿಂಗಳು ಕಳೆದರೂ ಇನ್ನೂ ನೇಮಕಾತಿ ಆದೇಶ ನೀಡದಿರುವುದು ಸರಿಯಲ್ಲ. ಕೂಡಲೇ ನೇಮಕಾತಿ ಆದೇಶ ಪತ್ರಗಳನ್ನು ನೀಡಬೇಕು ಎಂದು ಜೆಡಿಎಸ್‌ ಪಕ್ಷದ ನಗರ ಘಟಕದ ಅಧ್ಯಕ್ಷ ಎಚ್‌.ಎಂ. ರಮೇಶ್‌ ಗೌಡ ಒತ್ತಾಯಿಸಿದ್ದಾರೆ.

Laxmi Hebbalkar: ಬಿಜೆಪಿಯವರು ಕರ್ನಾಟಕದ ಗ್ಯಾರಂಟಿ ಸ್ಕೀಂಗಳನ್ನು ಕಾಪಿ ಹೊಡೆದು ಪಾಸಾಗಿರುವ ಸ್ಟೂಡೆಂಟ್ಸ್ ಎಂದ ಹೆಬ್ಬಾಳ್ಕರ್

ಬಿಜೆಪಿಯವರು ಮಾತನಾಡುವುದು ಒಂದು, ಮಾಡುವುದು ಮತ್ತೊಂದು: ಹೆಬ್ಬಾಳ್ಕರ್

Laxmi Hebbalkar: ಕೇಂದ್ರದ ಬಿಜೆಪಿ ನಾಯಕರು ಕರ್ನಾಟಕಕ್ಕೆ ಬಂದಾಗಲೆಲ್ಲಾ ಗ್ಯಾರಂಟಿ ಯೋಜನೆಗಳನ್ನು ಟೀಕೆ ಮಾಡುತ್ತಾರೆ. ಆದರೆ, ಕರ್ನಾಟಕ ಮಾಡೆಲ್ ಇಟ್ಟುಕೊಂಡು ನರೇಂದ್ರ ಮೋದಿ ರಾಜಕಾರಣ ಮಾಡುತ್ತಿದ್ದಾರೆ. ಕರ್ನಾಟಕದ ಯೋಜನೆಗಳನ್ನು ಹಾಗೂ ಮಾಡೆಲ್ ಅನ್ನು ಟೀಕೆ ಮಾಡುವ ನೈತಿಕತೆ ಇದೆಯೇ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರಶ್ನಿಸಿದ್ದಾರೆ.

WIPRO: ವಿಪ್ರೊದಿಂದ ಜೂನ್ 30ಕ್ಕೆ ಅಂತ್ಯವಾದ ತ್ರೈಮಾಸಿಕ ಫಲಿತಾಂಶಗಳ ಪ್ರಕಟಣೆ

ವಿಪ್ರೊದಿಂದ ಜೂನ್ 30ಕ್ಕೆ ಅಂತ್ಯವಾದ ತ್ರೈಮಾಸಿಕ ಫಲಿತಾಂಶಗಳ ಪ್ರಕಟಣೆ

ಮುಂಚೂಣಿಯ ಎಐ-ಸನ್ನದ್ಧ ತಂತ್ರಜ್ಞಾನ ಸೇವೆಗಳು ಮತ್ತು ಕನ್ಸಲ್ಟಿಂಗ್ ಕಂಪನಿ ವಿಪ್ರೊ ಲಿಮಿಟೆಡ್ (ಎನ್.ವೈ.ಎಸ್.ಇ.: ಡಬ್ಲ್ಯೂಐಟಿ, ಬಿ.ಎಸ್.ಇ: 507685, ಎನ್.ಎಸ್.ಇ: ವಿಪ್ರೊ) ಜೂನ್ 30, 2025ಕ್ಕೆ ಅಂತ್ಯವಾದ ತ್ರೈಮಾಸಿಕದ ಹಣಕಾಸು ಫಲಿತಾಂಶಗಳನ್ನು ಅಂತಾರಾಷ್ಟ್ರೀಯ ಹಣಕಾಸು ವರದಿಗಾರಿಕೆ ಮಾನದಂಡಗಳು (ಐ.ಎಫ್.ಆರ್.ಎಸ್.) ಅನ್ವಯ ಪ್ರಕಟಿಸಿದೆ

ಆಟೋಮೋಟಿವ್ ಐಷಾರಾಮದ ಹೊಸ ಯುಗ: MG SELECT ಬೆಂಗಳೂರಿನಲ್ಲಿ ಎರಡು ಅನುಭವ ಕೇಂದ್ರಗಳ ಉದ್ಘಾಟನೆ

MG SELECT ಬೆಂಗಳೂರಿನಲ್ಲಿ ಎರಡು ಅನುಭವ ಕೇಂದ್ರಗಳ ಉದ್ಘಾಟನೆ

ಉನ್ನತ ಅನುಭವಗಳು, ವೈಯಕ್ತೀಕರಿಸಿದ ಸೇವೆಗಳು, ಹೊಸ ಯುಗದ ಐಷಾರಾಮಿ, ನಾವೀನ್ಯತೆ ಮತ್ತು ಸುಸ್ಥಿರತೆಯೊಂದಿಗೆ ಬೆರೆತ ಅಪ್ರತಿಮ ಉತ್ಪನ್ನ ಶ್ರೇಣಿಯನ್ನು ನೀಡುವ MG SELECT ಅನುಭವ ಕೇಂದ್ರಗಳು. ಎಲೆಕ್ಟ್ರಾನಿಕ್ ಸಿಟಿ ಮತ್ತು ಅಶೋಕ್ ನಗರದಲ್ಲಿರುವ ಈ MG SELECT ಅನುಭವ ಕೇಂದ್ರಗಳು ಬೆಂಗಳೂರು ಪ್ರದೇಶದ ಹೊಸ ಯುಗದ ಐಷಾರಾಮಿ ಕಾರು ಖರೀದಿದಾರರಿಗೆ ಸೇವೆ ಸಲ್ಲಿಸಲಿವೆ. ನಮ್ಮ ಹೊಸ ಯುಗದ ಐಷಾರಾಮಿ ಬ್ರಾಂಡ್ ಗೆ ಗ್ರಾಹಕರನ್ನು ಒಂದು ಹೆಜ್ಜೆ ಹತ್ತಿರ ತರಲು, ನಾವು ಭಾರತದಾದ್ಯಂತ 13 ಪ್ರಮುಖ ನಗರಗಳಲ್ಲಿ 14 ಕೇಂದ್ರಗಳನ್ನು ಉದ್ಘಾಟಿಸುತ್ತಿದ್ದೇವೆ.

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ ಪ್ರಕರಣ: ವರದಿಯ ಅಧ್ಯಯನಕ್ಕೆ ಸಚಿವ ಸಂಪುಟ ತೀರ್ಮಾನ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ: ಸಚಿವ ಸಂಪುಟ ಹೇಳಿದ್ದೇನು?

Bengaluru Stampede: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಗುರುವಾರ ಸಚಿವ ಸಂಪುಟ ನಡೆಯಿತು. ಈ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿ ನಿವೃತ್ತ ನ್ಯಾಯಾಧೀಶ ಜಾನ್ ಮೈಕಲ್ ಕುನ್ಹಾ ನೇತೃತ್ವದ ಏಕ ಸದಸ್ಯ ವಿಚಾರಣಾ ಆಯೋಗದ ವರದಿಯನ್ನು ಪರಿಶೀಲಿಸಿ ನಿರ್ಣಯ ಕೈಗೊಳ್ಳಲು ತೀರ್ಮಾನಿಸಲಾಯಿತು.

IPL 2025: ಕಾಲ್ತುಳಿತ ಪ್ರಕರಣ ಸಂಬಂಧ ಆರ್‌ಸಿಬಿ, ಕೆಎಸ್‌ಸಿಎ ವಿರುದ್ದ ಎಫ್‌ಐಆರ್‌?

ಕಾಲ್ತುಳಿತ ಪ್ರಕರಣ ಸಂಬಂಧ ಆರ್‌ಸಿಬಿ, ಕೆಎಸ್‌ಸಿಎ ವಿರುದ್ದ ಎಫ್‌ಐಆರ್‌?

ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದ ಸಮೀಪ ಕಾಲ್ತುಳಿತದಿಂದ 11 ಮಂದಿ ಆರ್‌ಸಿಬಿ ಅಭಿಮಾನಿಗಳು ಮೃತಪಟ್ಟ ಪ್ರಕರಣ ಸಂಬಂಧ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಹಾಗೂ ಕರ್ನಾಟಕ ರಾಜ್ಯ ಕ್ರಿಕೆಟ್‌ ಅಸೋಸಿಯೇಷನ್‌ ವಿರುದ್ದ ಎಫ್‌ಐಆರ್‌ ದಾಖಲಿಸಲು ಕರ್ನಾಟಕ ಸರ್ಕಾರದ ಸಚಿವ ಸಂಪುಟ ಒಪ್ಪಿಗೆ ನೀಡಿದೆ ಎಂದು ವರದಿಯಾಗಿದೆ.

Actor Darshan: ದರ್ಶನ್‌ಗೆ ಜಾಮೀನು ನೀಡುವಾಗ ಕರ್ನಾಟಕ ಹೈಕೋರ್ಟ್ ವಿವೇಚನೆ ಬಳಸಿಲ್ಲ; ಸುಪ್ರೀಂ ಕೋರ್ಟ್‌ ಆಕ್ಷೇಪ

ದರ್ಶನ್‌ಗೆ ಜಾಮೀನು ನೀಡುವಾಗ ಹೈಕೋರ್ಟ್ ವಿವೇಚನೆ ಬಳಸಿಲ್ಲ: ಸುಪ್ರೀಂ

Supreme Court: ದರ್ಶನ್‌ ಅವರಿಗೆ ಜಾಮೀನು ನೀಡಿರುವ ಆದೇಶವನ್ನು ಪ್ರಶ್ನಿಸಿ ಕರ್ನಾಟಕ ಸರ್ಕಾರವು ಸಲ್ಲಿಸಿರುವ ಮೇಲ್ಮನವಿ ಅರ್ಜಿ ವಿಚಾರಣೆಯನ್ನು ನಡೆಸಿದ ಸುಪ್ರೀಂ ಕೋರ್ಟ್‌ ಗುರುವಾರ ಕರ್ನಾಟಕ ಹೈಕೋರ್ಟ್‌ನ ನಡೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ದರ್ಶನ್‌ ಅವರಿಗೆ ಜಾಮೀನು ನೀಡುವ ವೇಳೆ ಕರ್ನಾಟಕ ಹೈಕೋರ್ಟ್‌ ಸೂಕ್ತ ವಿವೇಚನೆಯನ್ನು ಬಳಸಿಲ್ಲ ಎಂದು ಸುಪ್ರೀಂ ಕೋರ್ಟ್‌ ಹೇಳಿದೆ.

ಅಂಗನವಾಡಿಗಳಲ್ಲಿ ಪೂರ್ವ ಪ್ರಾಥಮಿಕ ತರಗತಿ- ಸಚಿವರಾದ ಮಧು ಬಂಗಾರಪ್ಪ, ಲಕ್ಷ್ಮೀ ಹೆಬ್ಬಾಳ್ಕರ್ ಚರ್ಚೆ

ಅಂಗನವಾಡಿಗಳಲ್ಲಿ ಪೂರ್ವ ಪ್ರಾಥಮಿಕ ತರಗತಿ: ಪೂರ್ವಭಾವಿ ಸಭೆ

ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳನ್ನು ಆರಂಭಿಸುತ್ತಿರುವ ಹಿನ್ನೆಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರೊಂದಿಗೆ ಗುರುವಾರ ಪೂರ್ವಭಾವಿ ಸಭೆ ನಡೆಸಿದ್ದಾರೆ.

Eltuu Muthaa Movie: ‘ಎಲ್ಟು ಮುತ್ತಾ’ ಚಿತ್ರದ ಟ್ರೇಲರ್ ಔಟ್‌; ಆ.1ಕ್ಕೆ ಸಿನಿಮಾ ರಿಲೀಸ್‌

‘ಎಲ್ಟು ಮುತ್ತಾ’' ಚಿತ್ರದ ಟ್ರೇಲರ್ ಔಟ್‌; ಆ.1ಕ್ಕೆ ಸಿನಿಮಾ ರಿಲೀಸ್‌

Eltuu Muthaa Movie: ರಾ.ಸೂರ್ಯ ನಿರ್ದೇಶನದ ಹಾಗೂ ಶೌರ್ಯ ಪ್ರತಾಪ್, ರಾ.ಸೂರ್ಯ, ಪ್ರಿಯಾಂಕ ಮಳಲಿ ಮುಂತಾದವರು ಅಭಿನಯಿಸಿರುವ ‘ಎಲ್ಟು ಮುತ್ತಾʼ ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಹಿರಿಯ ನಿರ್ಮಾಪಕ ಎಸ್.ಎ. ಚಿನ್ನೇಗೌಡ ಚಿತ್ರದ ಟ್ರೇಲರ್ ಬಿಡುಗಡೆ ಮಾಡಿದರು.

Jockey 42 Movie: ಕಿರಣ್ ರಾಜ್ ಅಭಿನಯದ ʼಜಾಕಿ-42ʼ ಚಿತ್ರಕ್ಕೆ ಹೃತಿಕಾ ಶ್ರೀನಿವಾಸ್ ನಾಯಕಿ

ಕಿರಣ್ ರಾಜ್ ಅಭಿನಯದ ʼಜಾಕಿ-42ʼ ಚಿತ್ರಕ್ಕೆ ಹೃತಿಕಾ ಶ್ರೀನಿವಾಸ್ ನಾಯಕಿ

Jockey 42 Movie: ಕಿರಣ್ ರಾಜ್ ನಾಯಕನಾಗಿ ನಟಿಸುತ್ತಿರುವ ʼಜಾಕಿ-42ʼ ಚಿತ್ರಕ್ಕೆ ಹೃತಿಕಾ ಶ್ರೀನಿವಾಸ್ ನಾಯಕಿಯಾಗಿ ಆಯ್ಕೆಯಾಗಿದ್ದಾರೆ. ಈಗಾಗಲೇ ಹಾರ್ಸ್ ರೇಸ್ ಭಾಗದ ಚಿತ್ರೀಕರಣ ಬೆಂಗಳೂರಿನಲ್ಲಿ ನಡೆಯುತ್ತಿದೆ. ಸದ್ಯದಲ್ಲೇ ಚಿತ್ರದ ಟೀಸರ್ ಬಿಡುಗಡೆಯಾಗಲಿದೆ ಎಂದು ನಿರ್ದೇಶಕ ಗುರುತೇಜ್ ಶೆಟ್ಟಿ ತಿಳಿಸಿದ್ದಾರೆ.

Narayana Bharamani: ಮುಖ್ಯಮಂತ್ರಿಯಿಂದ ಅವಮಾನಕ್ಕೊಳಗಾಗಿ ರಾಜೀನಾಮೆಗೆ ಮುಂದಾದ ಎಎಸ್‌ಪಿ ನಾರಾಯಣ ಭರಮನಿಗೆ ಪದೋನ್ನತಿ

ಮುಖ್ಯಮಂತ್ರಿಯಿಂದ ಅವಮಾನಕ್ಕೊಳಗಾದ ಭರಮನಿಗೆ ಪದೋನ್ನತಿ

CM Siddaramaiah: ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್‌ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಅವಮಾನಕ್ಕೀಡಾಗಿ ರಾಜೀನಾಮೆಗೆ ಮುಂದಾಗಿದ್ದ ಧಾರವಾಡ ಎಎಸ್‌ಪಿ ನಾರಾಯಣ ವಿ. ಭರಮನಿ ಅವರಿಗೆ ಇದೀಗ ರಾಜ್ಯ ಸರ್ಕಾರ ಪದೋನ್ನತಿ ನೀಡಿದ್ದು, ಬೆಳಗಾವಿ ಕಾನೂನು ಸುವ್ಯವಸ್ಥೆಯ ಉಪ ಪೊಲೀಸ್‌ ಆಯುಕ್ತ (ಡಿಸಿಪಿ)ರಾಗಿ ನೇಮಿಸಿದೆ.

Swami Vachanananda Guru: ಲಂಡನ್‌ನಲ್ಲಿ ವಿಶ್ವಗುರು ಬಸವಣ್ಣನವರ ಪ್ರತಿಮೆಗೆ ಗೌರವ ನಮನ ಸಲ್ಲಿಸಿದ ವಚನಾನಂದ ಶ್ರೀ

ಬಸವಣ್ಣನವರ ಪ್ರತಿಮೆಗೆ ವಚನಾನಂದ ಶ್ರೀ ಗೌರವ ನಮನ

Vishwaguru Basavanna: ಇಂಗ್ಲೆಂಡ್‌ ರಾಜಧಾನಿ ಲಂಡನ್‌ನಲ್ಲಿ ಸ್ಥಾಪಿಸಲಾಗಿರುವ ಬಸವಣ್ಣನವರ ಪ್ರತಿಮೆಗೆ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದ ಜಗದ್ಗುರು ಶ್ರೀ ವಚನಾನಂದ ಮಹಾಸ್ವಾಮಿಗಳು ಗೌರವ ನಮನ ಸಲ್ಲಿಸಿದರು. ಈ ಪ್ರತಿಮೆಯನ್ನು ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ 2015ರ ನ. 14ರಂದು ಅನಾವರಣಗೊಳಿಸಿದ್ದರು.

Bagalkot News: ಕೋಲ್ಕತಾ ಹಾಸ್ಟೆಲ್​ನಲ್ಲಿ ಅತ್ಯಾಚಾರ ಪ್ರಕರಣ; ಮುಧೋಳದ ಯುವಕ ಪರಮಾನಂದ ಅರೆಸ್ಟ್‌

ಕೋಲ್ಕತಾ ಹಾಸ್ಟೆಲ್​ನಲ್ಲಿ ಅತ್ಯಾಚಾರ ಪ್ರಕರಣ; ಮುಧೋಳದ ಯುವಕ ಅರೆಸ್ಟ್‌

Crime News: ಕೋಲ್ಕತಾ ಕಾಲೇಜು ಹಾಸ್ಟೆಲ್​​ನಲ್ಲಿ ಯುವತಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದ ಎ1 ಆರೋಪಿ ಬಾಗಲಕೋಟೆ ಮೂಲದ ಪರಮಾನಂದ ಟೋಪಣ್ಣವರ ಎಂಬ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಲೋಕಾಪುರ ನಿವಾಸಿಯಾಗಿರುವ ಪರಮಾನಂದನನ್ನು ಜು. 12ರಂದೇ ಪೊಲೀಸರು ಬಂಧಿಸಿದ್ದಾರೆ.

Anchor Anushree: ಆ್ಯಂಕರ್ ಅನುಶ್ರೀ ಮದುವೆ ಫಿಕ್ಸ್‌, ಉದ್ಯಮಿ ಜೊತೆ ಹಸೆಮಣೆ ಏರಲಿರುವ ನಿರೂಪಕಿ

ಆ್ಯಂಕರ್ ಅನುಶ್ರೀ ಮದುವೆ ಫಿಕ್ಸ್‌, ಉದ್ಯಮಿ ಜೊತೆ ಹಸೆಮಣೆ ಏರಲಿರುವ ನಿರೂಪಕಿ

Anchor Anushree: ಮಂಗಳೂರು ಮೂಲದ ಅನುಶ್ರೀ ಅವರ ಭಾವಿ ವರ ಯಾರು ಎಂಬ ಬಗ್ಗೆ ಹೆಚ್ಚಿನ ವಿವರಗಳು ಇದೀಗ ದೊರೆಯಲಿವೆ. ಬೆಂಗಳೂರು ಮೂಲದ ಉದ್ಯಮಿ ರೋಷನ್ ಜೊತೆ ಅನುಶ್ರೀ ಮದುವೆ ಫಿಕ್ಸ್‌ ಆಗಿದೆ ಎನ್ನಲಾಗಿದ್ದು, ಆಗಸ್ಟ್ 28ಕ್ಕೆ ವಿವಾಹ ನಡೆಯಲಿದೆ ಎಂಬ ಮಾಹಿತಿ ದೊರೆತಿದೆ.

Actor Darshan: ಸುಪ್ರೀಂ ಕೋರ್ಟ್‌ನಲ್ಲಿ ನಟ ದರ್ಶನ್‌ ಜಾಮೀನು ಮೇಲ್ಮನವಿ ವಿಚಾರಣೆ ಜುಲೈ 23ಕ್ಕೆ ಮುಂದೂಡಿಕೆ

ದರ್ಶನ್‌ ಜಾಮೀನು ಮೇಲ್ಮನವಿ ವಿಚಾರಣೆ ಜುಲೈ 23ಕ್ಕೆ ಮುಂದೂಡಿದ ಸುಪ್ರೀಂ

Actor Darshan: ಬಂಧನದ ಕಾರಣಗಳನ್ನಷ್ಟೇ ನಾವು ಕೇಳುತ್ತಿದ್ದೇವೆ. ಬೇರೆ ಕೇಳುತ್ತಿಲ್ಲ. ಬಂಧನ ಕಾನೂನುಬದ್ಧವಾಗಿಲ್ಲ ಎನ್ನುವುದಾಗಿದೆ, ಇದಕ್ಕೆ ಉತ್ತರ ಕೊಡಿ ಎಂದು ರಾಜ್ಯ ಸರ್ಕಾರದ ಪರ ವಕೀಲರಿಗೆ ಸುಪ್ರೀಂ ಕೋರ್ಟ್ ಪ್ರಶ್ನಿಸಿತು. ಬಳಿಕ ವಿಚಾರಣೆಯನ್ನು ಜುಲೈ 22ಕ್ಕೆ ಅರ್ಜಿ ವಿಚಾರಣೆಯನ್ನು ಮುಂದೂಡಿತು.

Bengaluru Stampede: ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತಕ್ಕೆ ಆರ್‌ಸಿಬಿಯೇ ಕಾರಣ: ರಾಜ್ಯ ಸರಕಾರದ ವರದಿ, ಕೊಹ್ಲಿ ಹೆಸರೂ ಉಲ್ಲೇಖ

ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತಕ್ಕೆ ಆರ್‌ಸಿಬಿಯೇ ಕಾರಣ: ಸರಕಾರದ ವರದಿ

Bengaluru Stampede: ಬೆಂಗಳೂರು ಕಾಲ್ತುಳಿತಕ್ಕೆ ಕರ್ನಾಟಕ ಸರ್ಕಾರ ಆರ್‌ಸಿಬಿಯನ್ನು ದೂಷಿಸಿದ್ದು, ಇದೇ ವರದಿಯಲ್ಲಿ ವಿರಾಟ್ ಕೊಹ್ಲಿ ಹೆಸರನ್ನೂ ಉಲ್ಲೇಖಿಸಲಾಗಿದೆ. ಕ್ರೀಡಾಂಗಣದಲ್ಲಿ ವಿಜಯೋತ್ಸವದಲ್ಲಿ ಪಾಲ್ಗೊಳ್ಳುವಂತೆ ಅಭಿಮಾನಿಗಳನ್ವು ಆಹ್ವಾನಿಸಲಾಗಿತ್ತು. ಆದರೆ ಇದಕ್ಕೆ ತಂಡದ ಆಡಳಿತ ಮಂಡಳಿ ರಾಜ್ಯ ಸರ್ಕಾರದ ಅಥವಾ ಪೊಲೀಸ್ ಇಲಾಖೆಯ ಅನುಮತಿ ಪಡೆದಿರಲಿಲ್ಲ ಎಂದಿದೆ.

ವರ್ಲ್ಡ್‌ ಸ್ಕಿಲ್ಸ್ 2024 ಸ್ಪರ್ಧೆಯ ವಿಜೇತ ಟೊಯೋಟಾ ಕಿರ್ಲೋಸ್ಕರ್ ಮೋಟಾರ್‌ ನ ಉದ್ಯೋಗಿಗಳ ಸನ್ಮಾನಿಸಿದ ಕರ್ನಾಟಕ ಸರ್ಕಾರ

ವರ್ಲ್ಡ್‌ ಸ್ಕಿಲ್ಸ್ 2024 ಸ್ಪರ್ಧೆಯ ವಿಜೇತರಿಗೆ ಸನ್ಮಾನ

ಫ್ರಾನ್ಸ್‌ ನ ಲಿಯಾನ್‌ ನಲ್ಲಿ ಇತ್ತೀಚೆಗೆ ನಡೆದ ಅಂತಾರಾಷ್ಟ್ರೀಯ ಮಟ್ಟದ ವರ್ಲ್ಡ್‌ ಸ್ಕಿಲ್ಸ್ 2024 ಸ್ಪರ್ಧೆಯಲ್ಲಿ ಅಸಾಧಾರಣ ಪ್ರದರ್ಶನ ನೀಡಿದ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ (ಟಿಕೆಎಂ) ಸಂಸ್ಥೆಯ ಹತ್ತು ಪ್ರತಿಭಾವಂತ ಉದ್ಯೋಗಿಗಳಿಗೆ ಕರ್ನಾಟಕ ಸರ್ಕಾರವು ಗೌರವ ಸಲ್ಲಿಸಿದೆ.

ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ ಗುಣಮಟ್ಟ, ಸುರಕ್ಷತೆಯ ಕಣ್ಗಾವಲು ಸಂಸ್ಥೆ : ಸುಷ್ಮಾ ರಾವ್ ಮಂತ್ರಾಡಿ

ಗುಣಮಟ್ಟ, ಸುರಕ್ಷತೆಯ ಕಣ್ಗಾವಲು ಸಂಸ್ಥೆ ಬಿ.ಐ.ಎಸ್

ಬಿಐಎಸ್ ಬೆಂಗಳೂರು ವಿಭಾಗದ ಮುಖ್ಯಸ್ಥರು ಮತ್ತು ನಿರ್ದೇಶಕರಾದ ಸುಷ್ಮಾ ರಾವ್ ಮಂತ್ರಾಡಿ ಮಾತನಾಡಿ, ಬಿಐಎಸ್ನ ಸಾರ್ವಜನಿಕ ಸೇವೆಗಳು ಮತ್ತು ಉತ್ಪನ್ನಗಳಲ್ಲಿ ಗುಣಮಟ್ಟ, ಸುರಕ್ಷತೆ ಮತ್ತು ವಿಶ್ವಾಸಾರ್ಹತೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರದ ಎಲ್ಲಾ ಹಂತಗಳಲ್ಲಿ ಬಿಐಎಸ್ ಕಣ್ಗಾವಲು ರೀತಿಯಲ್ಲಿ ಕೆಲಸ ಮಾಡುತ್ತಿದೆ. ಬಿಐಎಸ್ ಪಾತ್ರ ಅತ್ಯಂತ ನಿರ್ಣಾಯಕ ಎಂದರು.

Self Harming: ಮೊಬೈಲ್‌ ನೋಡಬೇಡ ಎಂದದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ

ಮೊಬೈಲ್‌ ನೋಡಬೇಡ ಎಂದದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ

Self Harming: ಹಳಿಯಾಳದ ಸರ್ಕಾರಿ ಪ್ರಾಥಮಿಕ ಶಾಲೆಯ ಏಳನೇ ತರಗತಿ ವಿದ್ಯಾರ್ಥಿ ಓಂ ಕದಂ (13) ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮನೆಯಲ್ಲಿ ಪ್ರತಿದಿನ ಮೊಬೈಲ್ ನೋಡುತ್ತಾ ಕಾಲ ಕಳೆಯುತ್ತಿದ್ದ ಮಗನಿಗೆ ತಂದೆ ಮನೋಹರ್ ಮೊಬೈಲ್ ನೋಡದಂತೆ ಬುದ್ದಿವಾದ ಹೇಳುತ್ತಿದ್ದರು.

ಭಾರತದಲ್ಲಿ ಹೃದಯಾಘಾತ ಎಂಬ ಟೈಮ್ ಬಾಂಬ್ : ವಯಸ್ಸು 30 ಆಗಿದ್ದರೆ ಕೊಲೆಸ್ಟ್ರಾಲನ್ನು ನಿರ್ಲಕ್ಷಿಸಬೇಡಿ

ವಯಸ್ಸು 30 ಆಗಿದ್ದರೆ ಕೊಲೆಸ್ಟ್ರಾಲನ್ನು ನಿರ್ಲಕ್ಷಿಸಬೇಡಿ

ಸಾಮಾನ್ಯವಾಗಿ, ಕೊಲೆಸ್ಟ್ರಾಲ್ ಮಟ್ಟ ಹೆಚ್ಚಿರುವುದಕ್ಕೂ ವಯಸ್ಸಿಗೂ ಸಂಬಂಧವಿರುತ್ತದೆ. ಆದರೂ, 30ರ ಹರೆಯದವರಲ್ಲೂ, 20ರ ಹರೆಯದವರಲ್ಲೂ ಕೆಲವರಲ್ಲಿ ಕೊಲೆಸ್ಟ್ರಾಲ್ ಮಟ್ಟ ಹೆಚ್ಚಿರುವುದು ರೋಗನಿರ್ಣಯದಲ್ಲಿ ಪತ್ತೆಯಾಗಿದೆ. ಅಧಿಕವಾಗಿರುವ ಕೊಲೆಸ್ಟ್ರಾಲ್, ನಿಶ್ಶಬ್ದ ಕೊಲೆಗಾರ. ಏಕೆಂದರೆ ಇದು ಯಾವುದೇ ರೋಗಲಕ್ಷಣಗಳನ್ನು ಅಥವಾ ಯಾವುದೇ ಲಕ್ಷಣಗಳನ್ನು ಪ್ರದರ್ಶಿಸುವುದಿಲ್ಲ