ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಕರ್ನಾಟಕ

MP Dr K Sudhakar: 'ಪಕ್ಷ ಯಾರನ್ನು ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಿದರೂ ಅವರನ್ನೇ ನನ್ನ ಪ್ರತಿನಿಧಿ ಎಂದು ಭಾವಿಸಿ ಗೆಲ್ಲಿಸಿ'; ಕಾರ್ಯಕರ್ತರಿಗೆ ಕರೆ

2028ರ ವಿಧಾನಸಭೆ ಚುನಾವಣೆಗೆ ನಾನು ಸ್ಪರ್ಧಿಸುವುದಿಲ್ಲ

'ಪಕ್ಷ ನನ್ನನ್ನು ಸಂಸದನಾಗಿಯೇ ಮುಂದುವರಿಸಿದರೆ ಹಾಗೆಯೇ ಇರುತ್ತೇನೆ. ವಿಧಾನಸಭೆಗೆ ಪಕ್ಷದ ಹೈಕಮಾಂಡ್ ಹಾಗೂ ಸ್ಥಳೀಯ ಮುಖಂಡರು ಚರ್ಚಿಸಿ ಯಾರನ್ನು ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಿದರೂ ಅವರನ್ನೇ ನನ್ನ ಪ್ರತಿನಿಧಿ ಎಂದು ಭಾವಿಸಿ ಗೆಲ್ಲಿಸಬೇಕು. ಅವರು ಗೆದ್ದರೆ ನಾನೇ ಗೆದ್ದಂತೆ. ಕ್ಷೇತ್ರದ ಅಭಿವೃದ್ಧಿ ಇದೇ ರೀತಿ ಮುಂದುವರಿಯಲಿದೆ' ಎಂದು ಕಾರ್ಯಕರ್ತರಿಗೆ ಮನವಿ ಮಾಡಿದರು

ರೈತರ ಬೆಳೆ ವಿಮೆ ನೋಂದಣಿ ಅವಧಿ 15 ದಿನ ವಿಸ್ತರಣೆ: ಜೋಶಿ ಮನವಿಗೆ ಸ್ಪಂದಿಸಿದ ಕೇಂದ್ರ ಕೃಷಿ ಸಚಿವರು

ರೈತರ ಬೆಳೆ ವಿಮೆ ನೋಂದಣಿ ಅವಧಿ 15 ದಿನ ವಿಸ್ತರಣೆ

Pralhad Joshi: ಉತ್ತರ ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ತೀವ್ರ ಮಳೆ ಕೊರತೆಯ ಕಾರಣ ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಅವರ ಮನವಿ ಮೇರೆಗೆ ಕೇಂದ್ರ ಸರ್ಕಾರ ರೈತರಿಗೆ ಬೆಳೆ ವಿಮೆ ನೋಂದಣಿ ಅವಧಿಯನ್ನು 15 ದಿನಗಳ ಕಾಲ ವಿಸ್ತರಿಸಿ ನೆರವಾಗಿದೆ.

ʼಒಂದು ರಾಷ್ಟ್ರ, ಒಂದು ಸಮಯ'ಕ್ಕೆ ಇಸ್ರೋ ಸಹಯೋಗ ಅನನ್ಯ: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಬಣ್ಣನೆ

ʼಒಂದು ರಾಷ್ಟ್ರ, ಒಂದು ಸಮಯ'ಕ್ಕೆ ಇಸ್ರೋ ಸಹಯೋಗ ಅನನ್ಯ: ಜೋಶಿ

Pralhad Joshi: ಹೆಮ್ಮೆಯ ಇಸ್ರೋ ಸಂಸ್ಥೆ ಭಾರತದ ವೈಜ್ಞಾನಿಕ ಶ್ರೇಷ್ಠತೆ ಮತ್ತು ನಾವೀನ್ಯತೆಯ ಸಂಕೇತವಾಗಿದೆ. ಇದೀಗ ನಿಖರ, ಸುರಕ್ಷಿತ, ಸ್ಥಿತಿಸ್ಥಾಪಕ ಮತ್ತು ಸ್ಥಳೀಯ ಸಮಯ ಪ್ರಸರಣ ವ್ಯವಸ್ಥೆ ನಿರ್ಮಾಣದತ್ತ ಮಹತ್ವದ ಹೆಜ್ಜೆಯಿರಿಸಿದೆ ಎಂದು ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ್‌ ಜೋಶಿ ಸಂತಸ ವ್ಯಕ್ತಪಡಿಸಿದ್ದಾರೆ.

Bengaluru Lift Tragedy: ಬೆಂಗಳೂರಿನಲ್ಲಿ ಘೋರ ಘಟನೆ; ಲಿಫ್ಟ್‌ ಡೋರ್‌ನಲ್ಲಿ ತಲೆ ಸಿಲುಕಿ ಯುವಕ ಸಾವು

ಬೆಂಗಳೂರಿನಲ್ಲಿ ಘೋರ ಘಟನೆ; ಲಿಫ್ಟ್‌ ಡೋರ್‌ನಲ್ಲಿ ತಲೆ ಸಿಲುಕಿ ಯುವಕ ಸಾವು

ಬೆಂಗಳೂರಿನ ಜಯನಗರದ ದಕ್ಷಿಣ ಉಪಹಾರ ಹೋಟೆಲ್‌ನಲ್ಲಿ ಸೋಮವಾರ ದುರ್ಘಟನೆ ನಡೆದಿದೆ. ಈ ಕುರಿತು ಮಾಹಿತಿ ತಿಳಿಯುತ್ತಿದ್ದಂತೆ ಜಯನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ತನಿಖೆ ಆರಂಭಿಸಿದ್ದಾರೆ. ಈ ದುರ್ಘಟನೆಯು ಲಿಫ್ಟ್ ಸುರಕ್ಷತೆ ಬಗ್ಗೆ ಪ್ರಶ್ನೆಗಳನ್ನು ಎಬ್ಬಿಸಿದೆ.

ಯಾರೂ ಜೈಲಿಗೆ ಕಳಿಸಲು ನೋಡುತ್ತಿಲ್ಲ, ಅನುಕಂಪ ಗಿಟ್ಟಿಸಿಕೊಳ್ಳೋ ಯತ್ನ: ಸಿಎಂ ಡಿಕೆಶಿ ಹೇಳಿಕೆಗೆ ಜೋಶಿ ತಿರುಗೇಟು

ಡಿ.ಕೆ. ಶಿವಕುಮಾರ್‌ಗೆ ಏಕೆ ಜೈಲಿಗೆ ಹೋಗುವ ಭಯ?: ಜೋಶಿ

Pralhad Joshi: ಯಾರೇ ಆಗಲಿ ಅಪರಾಧ ಮಾಡಿದವರು ಮಾತ್ರ ಜೈಲಿಗೆ ಹೋಗುತ್ತಾರೆ. ಹಾಗಾದರೆ ಸಿಎಂ ಡಿ.ಕೆ. ಶಿವಕುಮಾರ್‌ ಏನು ತಪ್ಪು ಮಾಡಿದ್ದಾರಾ? ಭ್ರಷ್ಟಾಚಾರ ಎಸಗಿದ್ದಾರಾ? ವಿನಾಕಾರಣ ಅವರಿಗೇಕೆ ಜೈಲಿಗೆ ಹೋಗುವ ಭಯ? ಈಗೇಕೆ ಆ ಮಾತನಾಡುತ್ತಿದ್ದೀರಿ? ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್‌ ಜೋಶಿ ಪ್ರಶ್ನಿಸಿದ್ದಾರೆ.

Bengaluru Murder: ನಾಯಿ ಬೆಲ್ಟ್‌ನಿಂದ ಗರ್ಭಿಣಿ ಪತ್ನಿ ಕುತ್ತಿಗೆ ಬಿಗಿದು ಕೊಂದು ಪತಿಯೂ ಆತ್ಮಹತ್ಯೆ!

ನಾಯಿ ಬೆಲ್ಟ್‌ನಿಂದ ಗರ್ಭಿಣಿ ಪತ್ನಿ ಕುತ್ತಿಗೆ ಬಿಗಿದು ಕೊಂದ ಪತಿ!

ಬೆಂಗಳೂರು ನಗರದ ಸಿಕೆ ಅಚ್ಚುಕಟ್ಟು ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಘಟನೆ ಬೆಳಕಿಗೆ ಬಂದಿದೆ. ವ್ಯಕ್ತಿಯೊಬ್ಬ ಗರ್ಭಿಣಿ ಪತ್ನಿಯನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸ್ಥಳಕ್ಕೆ ಸಿಕೆ ಅಚ್ಚುಕಟ್ಟು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.

MK Pranesh: ಉಪಸಭಾಪತಿ ಎಂ.ಕೆ. ಪ್ರಾಣೇಶ್ ವಿಧಾನ ಪರಿಷತ್ ಸದಸ್ಯತ್ವ ರದ್ದು ಮಾಡಿದ ಸುಪ್ರೀಂ‌ ಕೋರ್ಟ್

ಎಂ.ಕೆ. ಪ್ರಾಣೇಶ್ ವಿಧಾನ ಪರಿಷತ್ ಸದಸ್ಯತ್ವ ರದ್ದು ಮಾಡಿದ ಸುಪ್ರೀಂ‌ ಕೋರ್ಟ್

ಚಿಕ್ಕಮಗಳೂರು ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ಎಂ.ಕೆ. ಪ್ರಾಣೇಶ್ ಅವರ ಆಯ್ಕೆಯನ್ನು ಸರ್ವೋಚ್ಚ ನ್ಯಾಯಾಲಯ ರದ್ದುಗೊಳಿಸಿದೆ. ನಗರ ಸ್ಥಳೀಯ ಸಂಸ್ಥೆಗಳ ನಾಮನಿರ್ದೇಶಿತ ಸದಸ್ಯರ ಮತದಾನದ ಹಕ್ಕು ಕುರಿತ ಕಾನೂನು ಹೋರಾಟದಲ್ಲಿ ಕಾಂಗ್ರೆಸ್ ನಾಯಕಿ ಗಾಯತ್ರಿ ಶಾಂತೇಗೌಡ ಅವರಿಗೆ ಅಂತಿಮ ಜಯ ದೊರೆತಿದೆ.

Bengaluru Murder: ಅಣ್ಣನ ಪ್ರೀತಿ ನಿರಾಕರಿಸಿದ ಯುವತಿಗೆ ತಮ್ಮನಿಂದ ಚಾಕು ಇರಿತ; ಚಿಕಿತ್ಸೆ ಫಲಿಸದೆ ಲಾ ವಿದ್ಯಾರ್ಥಿನಿ ಸಾವು

ಅಣ್ಣನ ಪ್ರೀತಿ ನಿರಾಕರಿಸಿದ ಯುವತಿಯನ್ನು ಕೊಲೆಗೈದ ತಮ್ಮ!

​ಬೆಂಗಳೂರಿನ ನಗರದ ಜೀವನ್ ಭೀಮಾನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಲಾ ವಿದ್ಯಾರ್ಥಿನಿಯನ್ನು ಯುವಕನೊಬ್ಬ ಪ್ರೀತಿಸುತ್ತಿದ್ದ. ಆದರೆ, ಆಕೆ ದೂರವಾದ ಹಿನ್ನೆಲೆಯಲ್ಲಿ ಯುವತಿಗೆ ತಮ್ಮ ಚಾಕುವಿನಿಂದ ಇರಿದಿದ್ದಾನೆ. ಯುವತಿ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾಳೆ.

Forest Watcher Recruitment: ಅರಣ್ಯ ಇಲಾಖೆಯಲ್ಲಿ ಭರ್ಜರಿ ನೇಮಕಾತಿ; 750 ಅರಣ್ಯ ವೀಕ್ಷಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

750 ಅರಣ್ಯ ವೀಕ್ಷಕ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಕರ್ನಾಟಕ ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ 'ಅರಣ್ಯ ವೀಕ್ಷಕ' ಹುದ್ದೆಗಳ ನೇಮಕಾತಿಗೆ ಸಿದ್ಧತೆ ನಡೆದಿದೆ. ಇಲಾಖೆಯು ನೇರ ನೇಮಕಾತಿಗೆ ಕರಡು ಅಧಿಸೂಚನೆಯನ್ನು ಸಿದ್ಧಪಡಿಸಿದ್ದು, ಆರ್ಥಿಕ ಇಲಾಖೆಯ ಸಹಮತಿಯೂ ದೊರೆತಿದೆ. ಶೀಘ್ರದಲ್ಲೇ ಅಧಿಕೃತ ಅಧಿಸೂಚನೆ ಹೊರಬೀಳಲಿದೆ.

Gudibande News: ಬಿಜೆಪಿ ಮುಖಂಡ ಸಿ.ಮುನಿರಾಜು ಹುಟ್ಟುಹಬ್ಬದ ಪ್ರಯುಕ್ತ ಹಣ್ಣು ಹಂಪಲು ವಿತರಣೆ

ಬಿಜೆಪಿ ಮುಖಂಡರ ಹುಟ್ಟುಹಬ್ಬದ ಪ್ರಯುಕ್ತ ಹಣ್ಣು ಹಂಪಲು ವಿತರಣೆ

ಬಿಜೆಪಿ ರಾಜ್ಯ ಪ್ರಧಾನಕಾರ್ಯದರ್ಶಿ ಸಿ. ಮುನಿರಾಜು ರವರ 48ನೇ ಹುಟ್ಟುಹಬ್ಬದ ಪ್ರಯುಕ್ತ ಬಿಜೆಪಿ ತಾಲೂಕು ಘಟಕ ಹಾಗೂ ಮಹಿಳಾ ಮೋರ್ಚಾ ಘಟಕದ ವತಿಯಿಂದ ಸರ್ಕಾರಿ ಆಸ್ಪತ್ರೆಯ ಒಳ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ, ಅನ್ನ ಸಂತರ್ಪಣೆ ಹಾಗೂ ಪೌರ ಕಾರ್ಮಿಕರಿಗೆ ಸನ್ಮಾನ ಹಾಗೂ ಸಮವಸ್ತ್ರ ವಿತರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು

Gold Price Today On 16th July 2026: ಮತ್ತೆ ಇಳಿದ ಚಿನ್ನದ ಬೆಲೆ; ಬೆಂಗಳೂರಿನ ಇಂದಿನ ದರ ಚೆಕ್‌ ಮಾಡಿ

ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆ; ಇಂದಿನ ಬೆಲೆ ಚೆಕ್‌ ಮಾಡಿ

Gold Silver Price Today: ಬುಧವಾರ ಏರಿಕೆಯಾಗಿದ್ದ ಚಿನ್ನದ ದರ ಇಂದು ಇಳಿಕೆಯ ಹಾದಿಯಲ್ಲಿದೆ. ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನಕ್ಕೆ 25 ರುಪಾಯಿ ಕಡಿಮೆಯಾಗಿ 13,135 ರುಪಾಯಿಗೆ ಬಂದು ತಲುಪಿದೆ. 24 ಕ್ಯಾರಟ್‌ನ 1 ಗ್ರಾಂ ಚಿನ್ನ 28 ರುಪಾಯಿ ಅಗ್ಗವಾಗಿ, 14,329 ರುಪಾಯಿಗೆ ಬಂದಿದೆ.

ಶಾಸಕರ ಬಗ್ಗೆ ಅಪಪ್ರಚಾರ ಹಾಗೂ ತೇಜೋವಧೆ ಮಾಡುವುದು ಸರಿಯಲ್ಲ: ಕಾಂಗ್ರೆಸ್ ಮುಖಂಡರ ಎಚ್ಚರಿಕೆ

ಶಾಸಕರ ಬಗ್ಗೆ ಅಪಪ್ರಚಾರ ಹಾಗೂ ತೇಜೋವಧೆ ಮಾಡುವುದು ಸರಿಯಲ್ಲ

ಈ ಭೂಮಿ ಈ ಹಿಂದೆ ಶ್ಯಾನುಭೋಗರು ಹಾಗೂ ಪಟೇಲರ ಹೆಸರಲ್ಲಿತ್ತು. ಈ ಭಾಗದಲ್ಲಿ ಕೆಲ ಪರಿಶಿಷ್ಟರು ಉಳುಮೆ ಮಾಡುತ್ತಿದ್ದರು. ಅದನ್ನು ಬೇರೆಯವರು ಖರೀದಿಸಿದ್ದಾರೆ. ಆದರೆ ಅದನ್ನು ಶಾಸಕ ಸುಬ್ಬಾ ರೆಡ್ಡಿಯವರೇ ಖರೀದಿ ಮಾಡಿದಂತೆ, ಅಲ್ಲಿನ ಸರ್ಕಾರಿ ಜಮೀನು ಒತ್ತುವರಿ ಮಾಡಿ ಕೊಂಡಿದ್ದಾರೆ ಎಂದು ಆರೋಪ ಮಾಡುತ್ತಿದ್ದಾರೆ. ಇಂತಹ ಆಧಾರ ರಹಿತ ಆರೋಪಗಳನ್ನು ಕೂಡಲೇ ನಿಲ್ಲಿಸಬೇಕು

ಏಟ್ರಿಯಾ ರಿನ್ಯೂಎಬಲ್ ಮೈಸೂರಿಗೆ ವಿಸ್ತರಣೆ; ಕರ್ನಾಟಕದಲ್ಲಿ ರೂಫ್‌ಟಾಪ್ ಸೌರಶಕ್ತಿ ಸೇವೆ ಮತ್ತಷ್ಟು ಬಲ

ಕರ್ನಾಟಕದಲ್ಲಿ ರೂಫ್‌ಟಾಪ್ ಸೌರಶಕ್ತಿ ಸೇವೆ ಮತ್ತಷ್ಟು ಬಲ

ವಸತಿ ಹಾಗೂ ವಾಣಿಜ್ಯ ಗ್ರಾಹಕರಿಗೆ ಉತ್ತಮ ಗುಣಮಟ್ಟದ ಮತ್ತು ತೊಂದರೆಯಿಲ್ಲದ ರೂಫ್‌ ಟಾಪ್ ಸೌರಶಕ್ತಿ ಪರಿಹಾರಗಳನ್ನು ಒದಗಿಸುತ್ತಿರುವ ಏಟ್ರಿಯಾ ರಿನ್ಯೂಎಬಲ್, ಹೆಚ್ಚಿನ ಸೌರ ವ್ಯವಸ್ಥೆಗಳ ಅಳವಡಿಕೆಯನ್ನು ಕೇವಲ 5 ರಿಂದ 6 ಗಂಟೆಗಳೊಳಗೆ ಪೂರ್ಣಗೊಳಿಸುತ್ತದೆ. ಪ್ರತಿಯೊಂದು ಸೌರಶಕ್ತಿ ವ್ಯವಸ್ಥೆಗೆ 30 ವರ್ಷಗಳ ವಾರಂಟಿ ಹಾಗೂ 5 ವರ್ಷಗಳ ಉಚಿತ ನಿರ್ವಹಣಾ ಸೇವೆ ಒದಗಿಸಲಾಗುತ್ತಿದ್ದು, ಗ್ರಾಹಕರು ವಿಶ್ವಾಸದಿಂದ ಸೌರಶಕ್ತಿಯನ್ನು ಅಳವಡಿಸಿಕೊಳ್ಳಲು ಇದು ನೆರವಾಗಲಿದೆ.

Gauribidanur News: ಛಾಯಾಗ್ರಾಹಕರು ತಂತ್ರಜ್ಞಾನ ಅಳವಡಿಸಿಕೊಳ್ಳುವ ಜತೆಗೆ ಸಂಘಟನೆಯ ಬಲ ಹೆಚ್ಚಿಸಬೇಕು: ಎನ್.ಎ. ರಾಮಚಂದ್ರ

ಛಾಯಾಗ್ರಾಹಕರು ತಂತ್ರಜ್ಞಾನ ಜತೆಗೆ ಸಂಘಟನೆಯ ಬಲ ಹೆಚ್ಚಿಸಬೇಕು

ಸಂಘಟನೆಯ ಮೂಲಕ ಸರ್ಕಾರದ ವಿವಿಧ ಸೌಲಭ್ಯಗಳು, ತರಬೇತಿ ಕಾರ್ಯಕ್ರಮಗಳು ಹಾಗೂ ವೃತ್ತಿ ಅಭಿವೃದ್ಧಿಗೆ ಅಗತ್ಯವಾದ ಅವಕಾಶಗಳನ್ನು ಪರಿಣಾಮಕಾರಿಯಾಗಿ ಪಡೆಯಬಹುದು. ಛಾಯಾ ಗ್ರಾಹಕರ ಸಮಸ್ಯೆಗಳ ಪರಿಹಾರ, ಕಲ್ಯಾಣ ಮತ್ತು ವೃತ್ತಿ ಅಭಿವೃದ್ಧಿಗಾಗಿ ಸಂಘಟನೆ ನಿರಂತರವಾಗಿ ಶ್ರಮಿಸುತ್ತಿದ್ದು, ಎಲ್ಲ ಛಾಯಾಗ್ರಾಹಕರೂ ಸದಸ್ಯತ್ವ ಪಡೆದು ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಬೇಕು

Gauribidanur News: ಜು.18ರೊಳಗೆ ಹಂದಿಗಳನ್ನು ನಗರದಿಂದ ಸ್ಥಳಾಂತರಿಸಿ: ಸಾಕಾಣೆದಾರರಿಗೆ ನಗರಸಭೆ ಕಟ್ಟುನಿಟ್ಟಿನ ಸೂಚನೆ

ಜು.18ರೊಳಗೆ ಹಂದಿಗಳನ್ನು ನಗರದಿಂದ ಸ್ಥಳಾಂತರಿಸಿ

ಹಂದಿಗಳನ್ನು ನಗರದಿಂದ ಕನಿಷ್ಠ ಒಂದು ಕಿಲೋಮೀಟರ್ ದೂರಕ್ಕೆ ಸ್ಥಳಾಂತರಿಸಿ, ಅವುಗಳನ್ನು ಮುಕ್ತವಾಗಿ ಬಿಡದೆ ಸೂಕ್ತ ಗೂಡುಗಳಲ್ಲಿ ಸಾಕಬೇಕು. ನಗರ ವ್ಯಾಪ್ತಿಯಲ್ಲಿ ಹಂದಿಗಳು ಸಂಚರಿಸು ತ್ತಿರುವುದು ಕಂಡುಬಂದರೆ ಕಾನೂನಿನ ಪ್ರಕಾರ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದರು.

100ಕ್ಕೂ ಹೆಚ್ಚು ದೇಶಗಳಿಗೆ 'ಬಿಎಲ್‌ಎಸ್ ಇಂಟರ್‌ನ್ಯಾಷನಲ್' ಸೇವೆ ವಿಸ್ತರಣೆ, ₹2,998 ಕೋಟಿ ಆದಾಯದೊಂದಿಗೆ ಹೊಸ ಮೈಲಿಗಲ್ಲು

100ಕ್ಕೂ ಹೆಚ್ಚು ದೇಶಗಳಿಗೆ 'ಬಿಎಲ್‌ಎಸ್ ಇಂಟರ್‌ನ್ಯಾಷನಲ್' ಸೇವೆ ವಿಸ್ತರಣೆ

ಕಳೆದ ಎರಡು ದಶಕಗಳಿಂದ ಈ ವಲಯದಲ್ಲಿ ಸೇವೆ ಸಲ್ಲಿಸುತ್ತಿರುವ ಸಂಸ್ಥೆಯು 100 ದೇಶಗಳ ಗಡಿ ದಾಟಿರುವುದು ಮಹತ್ವದ ಮೈಲಿಗಲ್ಲಾಗಿದೆ. ಹೊಸ ಮಾರುಕಟ್ಟೆಗಳ ಪ್ರವೇಶ, ವಿವಿಧ ಸರ್ಕಾರ ಗಳೊಂದಿಗಿನ ದೃಢವಾದ ಪಾಲುದಾರಿಕೆ, ಕಾರ್ಯತಂತ್ರದ ಸ್ವಾಧೀನಗಳು ಹಾಗೂ ತಂತ್ರಜ್ಞಾನ ಆಧಾರಿತ ನಾವೀನ್ಯತೆಯೇ ಈ ಬೃಹತ್ ಬೆಳವಣಿಗೆಗೆ ಕಾರಣವಾಗಿದೆ.

‌ಸರ್ವರ್ ಸಮಸ್ಯೆ: ನೋಂದಣಿ ಸ್ಥಗಿತ

ಸರ್ವರ್ ಸಮಸ್ಯೆ: ನೋಂದಣಿ ಸ್ಥಗಿತ

ಸರ್ವರ್ ಸಮಸ್ಯೆಯಿಂದ ಇ- ಖಾತೆಯೂ ಸಿಗುತ್ತಿಲ್ಲ. ಇದ ರೊಂದಿಗೆ ತಮ್ಮದೇ ಖಾತೆಯಲ್ಲಿ ಆಗಿರುವ ಲೋಪದೋಷವನ್ನು ಸರಿಪಡಿಸಿಕೊಳ್ಳಲು ಆಗದೇ ತೀವ್ರ ಸಮಸ್ಯೆಯನ್ನು ಸಾರ್ವಜನಿಕರು ಅನುಭವಿಸು ತ್ತಿದ್ದಾರೆ. ಈ ಬಗ್ಗೆ ಅಧಿಕಾರಿಗಳನ್ನು ಪ್ರಶ್ನಿಸಿದರೆ, ಸರ್ವರ್ ಸಮಸ್ಯೆ ಎನ್ನುವ ಹಾರಿಕೆ ಉತ್ತರ ನೀಡುತ್ತಿದ್ದಾರೆ ಹೊರತು, ತಾಂತ್ರಿಕವಾಗಿ ಆಗುತ್ತಿರುವ ಸಮಸ್ಯೆಗಳೇನು ಎನ್ನುವ ಸ್ಪಷ್ಟನೆಯನ್ನು ನೀಡುತ್ತಿಲ್ಲ

Kalaburagi Jail Incident: 40 ಗಂಟೆ ಕಳೆದರೂ ಸಿಗದ ಇಬ್ಬರು ಕೈದಿಗಳು; ತೀವ್ರಗೊಂಡ ಶೋಧ

40 ಗಂಟೆ ಕಳೆದರೂ ಸಿಗದ ಇಬ್ಬರು ಕೈದಿಗಳು; ತೀವ್ರಗೊಂಡ ಶೋಧ

ಮಂಗಳವಾರ ನಸುಕಿನ ಜಾವ ಜೈಲಿನ ಕಬ್ಬಿಣದ ಕಂಬಿ ಕತ್ತರಿಸಿ, 20 ಅಡಿ ಎತ್ತರದ ಗೋಡೆ ಹಾರಿ ಎಸ್ಕೇಪ್ ಆಗಿದ್ದ ಮೂವರ ಪೈಕಿ ಸಂತೋಷ್ ಎಂಬಾತನನ್ನು ಪೊಲೀಸರು ಶೂಟೌಟ್ ನಡೆಸಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ, ಪೋಕ್ಸೋ ಮತ್ತು ಕೊಲೆ ಪ್ರಕರಣದಂತಹ ಗಂಭೀರ ಅಪರಾಧ ಹಿನ್ನೆಲೆಯುಳ್ಳ ಮಸ್ತಾನ್ ಮತ್ತು ಸಾಗರ್ ಎಂಬ ಇಬ್ಬರು ಕೈದಿಗಳು ಇನ್ನೂ ಮುಕ್ತವಾಗಿ ತಿರುಗುತ್ತಿರುವುದು ಸಾರ್ವಜನಿಕ ವಲಯದಲ್ಲಿ ಆತಂಕ ಮೂಡಿಸಿದೆ.

ಡಿಕೆ, ಸಿದ್ದು, ಹರಿ ದಿಲ್ಲಿಗೆ: ಸಂಪುಟ ವಿಸ್ತರಣೆ ಫಿಕ್ಸ್‌

ಡಿಕೆ, ಸಿದ್ದು, ಹರಿ ದಿಲ್ಲಿಗೆ: ಸಂಪುಟ ವಿಸ್ತರಣೆ ಫಿಕ್ಸ್‌

ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ವಿದೇಶದಿಂದ ವಾಪಸಾಗುತ್ತಿದ್ದಂತೆ, ರಾಜ್ಯ ಕಾಂಗ್ರೆಸ್‌ನಲ್ಲಿ ಸಂಪುಟ ರಚನೆಯ ಪ್ರಕ್ರಿ ಯೆಗೆ ವೇಗ ಸಿಕ್ಕಿದೆ. ಇದಕ್ಕೆ ಪೂರಕ ಎನ್ನುವಂತೆ ಮುಖ್ಯ ಮಂತ್ರಿ ಡಿ.ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿ ಪ್ರಸಾದ್ ದೆಹಲಿ ಪ್ರವಾಸ ಕೈಗೊಂಡಿರುವುದು ಸಂಪುಟ ವಿಸ್ತರಣೆಗೆ ಕಾಲಕೂಡಿ ಬಂದಿದೆ ಎನ್ನುವ ಮಾತು ಗಳಿಗೆ ಪುಷ್ಟಿ ನೀಡಿದೆ.

ಎಲ್ಲಿ ಹೋಗುವಿರಿ ನಿಲ್ಲಿ ಮೋಡಗಳೇ...; ಮತ್ತೆ ಮಂಕಾದ ಮುಂಗಾರು: ತಲೆ ಮೇಲೆ ಕೈ ಹೊತ್ತು ಕುಳಿತ ರೈತ

ಮತ್ತೆ ಮಂಕಾದ ಮುಂಗಾರು; 3 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌

Karnataka Weather: ಗುರುವಾರ (ಜುಲೈ 16) ಕೂಡ ರಾಜ್ಯದ ಬಹುತೇಕ ಕಡೆ ಒಣ ಹವೆ ಮುಂದುವರಿಯಲಿದ್ದು, 3 ಜಿಲ್ಲೆಗಳಲ್ಲಿ ಮಾತ್ರ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ವೈದ್ಯನನ್ನು ಕೊಲೆ ಮಾಡಿದ ಪತ್ನಿ; 10 ವರ್ಷದ ಮಗನ ಮೇಲೆ ಹಲ್ಲೆ ನಡೆಸಿ ಮೊಬೈಲ್‌ ನೋಡುತ್ತ ಕುಳಿತ ಪಾಪಿ

ವೈದ್ಯನನ್ನು ಕೊಲೆ ಮಾಡಿದ ಪತ್ನಿ; ಕಾರಣ ನಿಗೂಢ

Dharwad News: ಧಾರವಾಡದ ಚಿರಾಯು ಆಸ್ಪತ್ರೆಯ ವೈದ್ಯ ಡಾ. ಕಿರಣ್ ಹೊನ್ನಣ್ಣವರ್ (45) ಅವರನ್ನು ಪತ್ನಿ ಡಾ. ಪ್ರಿಯಾಂಕಾ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಅಲ್ಲದೆ ಪ್ರಿಯಾ ಮಗನ ಮೇಲೂ ಹಲ್ಲೆ ನಡೆಸಿದ್ದಾಳೆ. ಘಟನೆಗೆ ಕಾರಣ ತಿಳಿದು ಬಂದಿಲ್ಲ.

ಜೀತ ವಿಮುಕ್ತರಿಗೆ ನಿವೇಶನ, ವಸತಿ ವ್ಯವಸ್ಥೆ ಕಲ್ಪಿಸಲು ಆದ್ಯತೆ: ಜಿಲ್ಲಾಧಿಕಾರಿ ಜಿ. ಪ್ರಭು

ಜೀತ ವಿಮುಕ್ತರಿಗೆ ನಿವೇಶನ, ವಸತಿ ವ್ಯವಸ್ಥೆ ಕಲ್ಪಿಸಲು ಆದ್ಯತೆ

ಸಮಾಜದ ದುರ್ಬಲ ವರ್ಗಗಳ ಸಮಗ್ರ ಅಭಿವೃದ್ಧಿಗೆ ವಿವಿಧ ಇಲಾಖೆಗಳು ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕು. ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ನಿವೇಶನ ರಹಿತ ಮತ್ತು ವಸತಿ ರಹಿತ ಕುಟುಂಬಗಳ ನಿಖರ ಮಾಹಿತಿಯನ್ನು ತಾಲೂಕು ವಾರು ಸಂಗ್ರಹಿಸಿ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರಿಗೆ ಒಂದು ವಾರದ ಒಳಗೆ ಸಲ್ಲಿಸಬೇಕು.

ಕರ್ನಾಟಕ ಸೇರಿ ವಿವಿಧೆಡೆಗಳ ಎಸ್‌ಐಆರ್‌ ಅವಧಿ ವಿಸ್ತರಿಸಿದ ಚುನಾವಣಾ ಆಯೋಗ; ರಾಜ್ಯದಲ್ಲಿ ಆಗಸ್ಟ್ 8ರವರೆಗೆ  ಮನೆ-ಮನೆ ಭೇಟಿ

ಕರ್ನಾಟಕ ಸೇರಿ ವಿವಿಧೆಡೆ ರಾಜ್ಯಗಳ ಎಸ್‌ಐಆರ್‌ ಅವಧಿ ವಿಸ್ತರಣೆ

SIR: ಭಾರತೀಯ ಚುನಾವಣಾ ಆಯೋಗವು ಕರ್ನಾಟಕ ಸೇರಿ ದೆಹಲಿ, ಪಂಜಾಬ್ ಮತ್ತು ತೆಲಂಗಾಣದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆ ಅವಧಿಯನ್ನು ವಿಸ್ತರಿಸಿ ಆದೇಶ ಹೊರಡಿಸಿದೆ. ಜುಲೈ 14ರಂದು ಆಂಧ್ರ ಪ್ರದೇಶ ಮತ್ತು ಹರಿಯಾಣದ ಎಸ್‌ಐಆರ್‌ ಅವಧಿಯನ್ನು ವಿಸ್ತರಿಸಲಾಗಿತ್ತು.

Chikkaballapur News: ರಾಮಮಂದಿರದಲ್ಲಿ ನೂರಾರು ಕೋಟಿ ಅವ್ಯವಹಾರದ ಆರೋಪ: ಸುಪ್ರೀಂ ಕೋರ್ಟ್ ತನಿಖೆಗೆ ಮುಂದಾಗಿದ್ದು, ಪ್ರಧಾನಿಗಳು ಮೌನ ಮುರಿದು ಸತ್ಯ ಹೇಳಲಿ: ಲಾಯರ್ ನಾರಾಯಣಸ್ವಾಮಿ ಆಗ್ರಹ

ರಾಮಮಂದಿರದಲ್ಲಿ ನೂರಾರು ಕೋಟಿ ಅವ್ಯವಹಾರದ ಆರೋಪ

ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣದ ವಿಚಾರದಲ್ಲಿ ಭಾರತದ ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರ ಕೊಡುಗೆಯೂ ಇದೆ ಎಂಬುದನ್ನು ಬಿಜೆಪಿ ಮತ್ತದರ ಅಂಗಸಂಸ್ಥೆಗಳು ಮನಗಾಣ ಬೇಕು. ಕೋಟ್ಯಂತರ ಭಕ್ತರ ದೇಣಿಗೆಯಿಂದ ನಿರ್ಮಾಣಗೊಂಡಿರುವ ಇದು ಸಾರ್ವಜನಿಕ ದೇವಾಲಯ ವಾಗಿದ್ದು, ಅದರ ಹಣಕಾಸಿನ ವ್ಯವಹಾರಗಳ ಲೆಕ್ಕವನ್ನು ಸಾರ್ವಜನಿಕರಿಗೆ ಮುಕ್ತವಾಗಿ ನೀಡಬೇಕಾದ್ದು ಧರ್ಮ

Loading...