ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ್​ ಐಪಿಎಲ್​ ಅಕ್ಷಯ ತೃತೀಯ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ
Operation Sindoor
Operation Sindoor: ಉರಿಯಿಂದ ಪಹಲ್ಗಾಮ್‌ವರೆಗೆ- 3 ಪ್ರಮುಖ ಭಯೋತ್ಪಾದಕ ದಾಳಿಗಳಿಗೆ ಭಾರತದ ಪ್ರತ್ಯುತ್ತರ ಹೇಗಿತ್ತು?

ಇದುವರೆಗೆ ಪಾಕ್ ವಿರುದ್ಧ ಭಾರತ ಮಾಡಿದ ದಾಳಿಗಳ ಮಾಹಿತಿ ಇಲ್ಲಿದೆ

Operation Sindoor: ಇಂದು ಬೆಳಗ್ಗೆ 1:44 ಗಂಟೆಗೆ, ಪಹಲ್ಗಾಮ್ ಭಯೋತ್ಪಾದಕ ದಾಳಿಯ 15 ದಿನಗಳ ನಂತರ ಭಾರತವು ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿ (ಪಿಒಕೆ) 9 ಭಯೋತ್ಪಾದಕ ಶಿಬಿರಗಳ ಮೇಲೆ ದಾಳಿ ನಡೆಸಿದೆ. ಸ್ಕಾಲ್ಪ್ ಕ್ಷಿಪಣಿ, ಹ್ಯಾಮರ್ ಬಾಂಬ್‌ಗಳಂತಹ ನಿಖರ ಶಸ್ತ್ರಾಸ್ತ್ರಗಳು ಮತ್ತು 'ಲಾಯಿಟರಿಂಗ್ ಮ್ಯುನಿಷನ್ಸ್' ಅಂದರೆ ಡ್ರೋನ್‌ಗಳ ಮೂಲಕ ಗುರಿಗಳನ್ನು ಗುರುತಿಸಿ ದಾಳಿ ಮಾಡುವ ಕ್ಷಿಪಣಿಗಳನ್ನು ಈ ಕಾರ್ಯಾಚರಣೆಯಲ್ಲಿ ಬಳಸಲಾಗಿದೆ

Pak artillery firing: ನಿಲ್ಲದ ಪಾಕ್‌ ಪುಂಡಾಟ; ಕದನ ವಿರಾಮ ಉಲ್ಲಂಘಿಸಿ ಗುಂಡಿನ ದಾಳಿ- 15ನಾಗರಿಕರು ಬಲಿ

ನಿಲ್ಲದ ಪಾಕ್‌ ಪುಂಡಾಟ; ಗಡಿಯಲ್ಲಿ ಮತ್ತೆ ಫೈರಿಂಗ್‌- 15ನಾಗರಿಕರು ಬಲಿ

15 civilians killed: ನಿನ್ನೆ ರಾತ್ರಿಯಿಂದ ಪಾಕಿಸ್ತಾನ ಸೇನೆ ನಡೆಸಿದ ಫಿರಂಗಿ ಗುಂಡಿನ ದಾಳಿಯಲ್ಲಿ(Pak artillery firing) ಹದಿನೈದು ಅಮಾಯಕ ನಾಗರಿಕರು ಸಾವನ್ನಪ್ಪಿದ್ದಾರೆ ಮತ್ತು 43 ಮಂದಿ ಗಾಯಗೊಂಡಿದ್ದಾರೆ ಎಂದು ರಕ್ಷಣಾ ಮೂಲಗಳು ಬುಧವಾರ ತಿಳಿಸಿವೆ. ಪಾಕಿಸ್ತಾನ ಸೇನೆಯು ಗಡಿ ಪ್ರದೇಶಗಳಲ್ಲಿನ ನಾಗರಿಕ ಪ್ರದೇಶಗಳನ್ನು ಗುರಿಯಾಗಿಸಿಕೊಂಡಿದೆ.

Operation Sindoor: ಛೀ..ನಾಚಿಕೆ ಇಲ್ಲದ ಪಾಕಿಸ್ತಾನ! ಹತ ಉಗ್ರರ ಅಂತ್ಯಕ್ರಿಯೆಯಲ್ಲಿ ಸೇನೆ ಭಾಗಿ; ಮೃತದೇಹಗಳ ಮೇಲೆ ಪಾಕ್‌ ಧ್ವಜ

ಹತ ಉಗ್ರರ ಅಂತ್ಯಕ್ರಿಯೆಯಲ್ಲಿ ಪಾಕ್‌ ಸೇನೆ ಭಾಗಿ- ವಿಡಿಯೊ ಇದೆ

Last rites of terrorists:ಭಾರತೀಯ ಸಶಸ್ತ್ರ ಪಡೆಗಳು ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಾದ್ಯಂತ 9 ಸ್ಥಳಗಳನ್ನು ಗುರಿಯಾಗಿಸಿಕೊಂಡು ಭಯೋತ್ಪಾದಕ ಸಂಘಟನೆಗಳ ಮೇಲೆ ದಾಳಿ ನಡೆಸಿದ್ದು,80ಕ್ಕೂ ಹೆಚ್ಚು ಉಗ್ರರನ್ನು ಹೊಡೆದುರುಳಿಸಲಾಗಿದೆ. ಇದೀಗ ಈ ಉಗ್ರರ ಅಂತ್ಯಕ್ರಿಯೆ ಇಸ್ಲಮಾಬಾದ್‌ನಲ್ಲಿ ನಡೆದಿದ್ದು, ಉಗ್ರರ ಮೃತದೇಹಗಳ ಮೇಲೆ ಪಾಕ್‌ ಧ್ವಜವನ್ನು ಹೊದಿಸಲಾಗಿತ್ತು. ಅಲ್ಲದೇ ಪಾಕ್‌ ಸೈನಿಕರು ಭಾಗಿಯಾಗಿರುವುದು ತಿಳಿದುಬಂದಿದೆ.

Pahalgam terror attack: ಪಹಲ್ಗಾಮ್‌ ಉಗ್ರರ ದಾಳಿ ಬಗ್ಗೆ ಮಾಹಿತಿ ಸಿಕ್ಕರೆ ಈ ನಂಬರ್‌ಗೆ ಕರೆ ಮಾಡಿ- NIA ಮನವಿ

ಪಹಲ್ಗಾಮ್‌ ಉಗ್ರರ ದಾಳಿ ಬಗ್ಗೆ ಮಾಹಿತಿ ಸಿಕ್ಕರೆ ಈ ನಂಬರ್‌ಗೆ ಕರೆ ಮಾಡಿ

NIA on Pahalgam terror attack:26 ಪ್ರವಾಸಿಗರನ್ನು ಬಲಿ ತೆಗೆದುಕೊಂಡ ದಾಳಿಗೆ ಸಂಬಂಧಿಸಿದ ಮಾಹಿತಿ, ಫೋಟೋ ಅಥವಾ ವಿಡಿಯೊಗಳನ್ನು ಹಂಚಿಕೊಳ್ಳುವಂತೆ NIA ಒಂದು ಪ್ರಕಟಣೆ ಮೂಲಕ ಜನರಲ್ಲಿ ಮನವಿ ಮಾಡಿದೆ. ಅಷ್ಟೇ ಅಲ್ಲದೇ ಜನರು ಸಂಪರ್ಕಿಸಲು ಎನ್‌ಐಎ ಫೋನ್ ನಂಬರ್‌ ಅನ್ನು ಸಹ ಬಿಡುಗಡೆ ಮಾಡಿದೆ.

Operation Sindoor: ಪಾಕಿಸ್ತಾನ್ ಮುರ್ದಾಬಾದ್ ಎಂದ  ಬಾಲಕನಿಗೆ ಇರಿದ ದುಷ್ಕರ್ಮಿಗಳು

ಪಾಕಿಸ್ತಾನ್ ಮುರ್ದಾಬಾದ್ ಎಂದ ಬಾಲಕನಿಗೆ ಇರಿದ ದುಷ್ಕರ್ಮಿಗಳು

Miscreants stabbed a boy :ಪಾಕಿಸ್ತಾನದಲ್ಲಿರುವ ಭಯೋತ್ಪಾದಕರ ಶಿಬಿರಗಳ ಮೇಲೆ ನಡೆಸಿರುವ ವಾಯುದಾಳಿಯ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಶಹಜಹಾನ್‌ಪುರ ಜಿಲ್ಲೆಯ ಒಂದು ಸಣ್ಣ ಹಳ್ಳಿಯಲ್ಲಿ ನಡೆದ ಸಂಭ್ರಮಾಚರಣೆಯಲ್ಲಿ ಎಂಟು ವರ್ಷದ ಬಾಲಕನೊಬ್ಬನಿಗೆ ಇಬ್ಬರು ವ್ಯಕ್ತಿಗಳು ಚಾಕುವಿನಿಂದ ಇರಿದಿದ್ದಾರೆ. ಇದು ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಗಿ ಈ ಪ್ರದೇಶದಲ್ಲಿ ಕೋಮು ಗಲಭೆಯ ಆತಂಕವನ್ನು ಉಂಟು ಮಾಡಿತ್ತು.

DK Shivakumar: ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕರ ಹೇಡಿತನದ ಕೃತ್ಯಕ್ಕೆ ಆಪರೇಷನ್ ಸಿಂದೂರ ಉತ್ತಮ ಪ್ರತ್ಯುತ್ತರ: ಡಿ.ಕೆ.ಶಿವಕುಮಾರ್‌

ಕೇಂದ್ರ ಸರ್ಕಾರ, ಭದ್ರತಾ ಪಡೆಗಳ ಪರ ನಿಲ್ಲುತ್ತೇವೆ: ಡಿ.ಕೆ.ಶಿವಕುಮಾರ್‌

DK Shivakumar: ಭದ್ರತಾ ಪಡೆಗಳ ಬಗ್ಗೆ ನಮಗೆ ಬಹಳ ಹೆಮ್ಮೆಯಿದೆ. ಅವರು ದೇಶದ ಘನತೆ, ಹಿತಾಸಕ್ತಿಯನ್ನು ಕಾಪಾಡುತ್ತಿದ್ದು, ಅವರಿಗೆ ನಾವೆಲ್ಲರೂ ನಮಿಸೋಣ. ಈ ಸಂದರ್ಭದಲ್ಲಿ ನಾವು ಅವರ ಬೆನ್ನಿಗೆ ನಿಲ್ಲೋಣ. ಕಾಂಗ್ರೆಸ್ ಪಕ್ಷ ದೇಶದ ಹಿತರಕ್ಷಣೆ ವಿಚಾರದಲ್ಲಿ ಸೇನೆ ಬೆನ್ನಿಗೆ ನಿಂತು ಬೆಂಬಲ ನೀಡಲಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

Operation Sindoor: ಸಿಂದೂರ ಅಳಿಸಿದವರಿಗೆ ದಿಟ್ಟ ಉತ್ತರ ನೀಡಿದ ನಾರಿ ಶಕ್ತಿಯರು  ಯಾರು ಗೊತ್ತೇ?

ಆಪರೇಷನ್ ಸಿಂದೂರ್‌ನಲ್ಲಿ ಭಾಗಿಯಾದ ದಿಟ್ಟ ಮಹಿಳೆಯರು ಯಾರು ಗೊತ್ತೇ?

ಭಾರತೀಯ ಮಹಿಳೆಯ ಸಿಂದೂರ ಅಳಿಸುವ ಕಾರ್ಯ ಮಾಡಿದವರಿಗೆ ತಕ್ಕ ಪಾಠ ಕಲಿಸುವ ಎಚ್ಚರಿಕೆ ನೀಡಿರುವ ಆಪರೇಷನ್‌ ಸಿಂದೂರ ಕಾರ್ಯಾಚರಣೆಯ ಭಾಗವಾಗಿದ್ದ ಕರ್ನಲ್ ಸೋಫಿಯಾ ಖುರೇಷಿ ಮತ್ತು ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್ ಈ ಮೂಲಕ ಶತ್ರು ರಾಷ್ಟ್ರಕ್ಕೆ ಬಲವಾದ ಸಂದೇಶವನ್ನು ರವಾನಿಸಿದ್ದಾರೆ. ಇವರು ಯಾರು ಗೊತ್ತೇ?

President Murmu: ಪ್ರಧಾನಿ ನರೇಂದ್ರ ಮೋದಿ ಮೀಟ್ಸ್‌ ರಾಷ್ಟ್ರಪತಿ ದ್ರೌಪದಿ ಮುರ್ಮು; ಆಪರೇಷ್‌ ಸಿಂಧೂರ್‌ ಬಗ್ಗೆ ಮಾಹಿತಿ

ಆಪರೇಷನ್‌ ಸಿಂಧೂರ್‌ ಬಗ್ಗೆ ರಾಷ್ಟ್ರಪತಿಗೆ ಮಾಹಿತಿ

Operation Sindoor: ಮೇ 7ರ ನಸುಕಿನ ಜಾವ ಭಾರತೀಯ ಸೇನೆ ಪಾಕಿಸ್ತಾನ ಮತ್ತು ಪಾಕ್‌ ಆಕ್ರಮಿತ ಕಾಶ್ಮೀರದ ಮೇಲೆ ದಾಳಿ ನಡೆಸಿ ಉಗ್ರರ ತಾಣಗಳನ್ನು ಉಡೀಸ್‌ ಮಾಡಿದೆ. ಇದಕ್ಕೆ ಆಪರೇಷನ್‌ ಸಿಂಧೂರ್‌ ಎಂದು ಹೆಸರಿಡಲಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಈ ಬಗ್ಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಮಾಹಿತಿ ನೀಡಿದ್ದಾರೆ.

Rajnath Singh: "ನಮ್ಮವರನ್ನು ಕೊಂದವರನ್ನು ನಾವು ಬಲಿ ಪಡೆದಿದ್ದೇವೆ"; ರಾಜನಾಥ್‌ ಸಿಂಗ್‌

ಪಾಕ್‌ ಮೇಲೆ ದಾಳಿ ಕುರಿತು ಪ್ರತಿಕ್ರಿಯೆ ನೀಡಿದ ರಕ್ಷಣಾ ಸಚಿವ

ಪಹಲ್ಗಾಮ್‌ನಲ್ಲಿ ನಡೆದ ದಾಳಿ ಬಳಿಕ ಭಾರತ ಉಗ್ರರಿಗೆ ನರಕ ದರ್ಶನವನ್ನು ಮಾಡಿಸಿದೆ. ಪಾಕಿಸ್ತಾನ ಹಾಗೂ ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಇರುವ ಉಗ್ರರ ನೆಲೆ ಮೇಲೆ ದಾಳಿ ನಡೆಸಿ 100 ಕ್ಕೂ ಹೆಚ್ಚು ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ. ಇದೀಗ ಈ ಕುರಿತು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಪ್ರತಿಕ್ರಿಯೆ ನೀಡಿದ್ದಾರೆ.

Operation Sindoor: ಆಪರೇಷನ್‌ ಸಿಂಧೂರ್‌ ಯಶಸ್ವಿ: ಭಾರತೀಯ ಸೇನೆಯ ಹೆಸರಿನಲ್ಲಿ ಮೇ 8ರಂದು ರಾಜ್ಯಾದ್ಯಂತ ವಿಶೇಷ ಪೂಜೆ

ಆಪರೇಷನ್‌ ಸಿಂಧೂರ್‌ ಯಶಸ್ವಿ: ಭಾರತೀಯ ಸೇನೆಯ ಹೆಸರಿನಲ್ಲಿ ಪೂಜೆ

ಮೇ 7ರಂದು ಮುಂಜಾನೆ ಭಾರತವು ಪಾಕಿಸ್ತಾನ, ಪಾಕ್ ಆಕ್ರಮಿತ ಕಾಶ್ಮೀರದ ಭಯೋತ್ಪಾದಕ ಶಿಬಿರಗಳ ಮೇಲೆ ಆಪರೇಷನ್ ಸಿಂಧೂರ್ ಹೆಸರಿನಲ್ಲಿ ಸೇನಾ ಕಾರ್ಯಾಚರಣೆಯನ್ನು ಯಶಸ್ವಿಯಾಗಿ ನೆರವೇರಿಸಿದೆ. ಈ ಹಿನ್ನೆಲೆಯಲ್ಲಿ ಮೇ 8ರಂದು ರಾಜ್ಯದ ದೇವಾಲಯಗಳಲ್ಲಿ ಸೈನಿಕರ ಕ್ಷೇಮಾಭಿವೃದ್ಧಿಗಾಗಿ ವಿಶೇಷ ಪೂಜೆ ನಡೆಯಲಿದೆ.

Hania Amir: ಭಾರತದಲ್ಲಿ ಬ್ಯಾನ್‌ ಆದರೂ ಇಳಿಯದ ಪಾಕ್‌ ನಟಿಯರ ಸೊಕ್ಕು; ಉಗ್ರರ ಮೇಲಿನ ದಾಳಿ ಹೇಡಿ ಕೃತ್ಯ ಎಂದ ಲಾಲಿವುಡ್‌

ಉಗ್ರರ ಮೇಲಿನ ದಾಳಿ ಹೇಡಿ ಕೃತ್ಯ ಎಂದ ಪಾಕ್‌ ನಟ ನಟಿಯರು

ಭಾರತ ಹಾಗೂ ಪಾಕಿಸ್ತಾನದ ನಡುವೆ ಉದ್ವಿಗ್ನ ಪರಿಸ್ಥಿತಿ ಏರ್ಪಟ್ಟಿರುವಾಗ ಭಾರತ ಮಂಗಳವಾರ ತಡರಾತ್ರಿ ಭಾರತ ಪಾಕಿಸ್ತಾನದಲ್ಲಿರುವ ಉಗ್ರರ ನೆಲೆಯ ಮೇಲೆ ದಾಳಿ ನಡೆಸಿದೆ. ದಾಳಿಯಲ್ಲಿ 100 ಕ್ಕೂ ಅಧಿಕ ಉಗ್ರರು ಮೃತಪಟ್ಟಿದ್ದಾರೆ. ಸದ್ಯ ಈ ಘಟನೆಯನ್ನು ಪಾಕಿಸ್ತಾನದ ಸಿನಿಮಾ ತಾರೆಯರು ಖಂಡಿಸಿದ್ದಾರೆ.

Shehbaz Sharif: ತುರ್ತು ಸಭೆಯಲ್ಲಿ ಪಾಕ್‌ ಪ್ರಧಾನಿ ಆಕ್ರೋಶ; ಭಾರತದ ಮೇಲೆ ದಾಳಿ ನಡೆಸಲು ಸೇನೆಗೆ ಸೂಚನೆ

ಭಾರತದ ಮೇಲೆ ದಾಳಿ ನಡೆಸಲು ಸೇನೆಗೆ ಸೂಚನೆ; ಪಾಕ್‌ ಪ್ರಧಾನಿ

ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ಪ್ರತೀಕಾರವಾಗಿ ಮಂಗಳವಾರ ತಡರಾತ್ರಿ ಭಾರತ ಪಾಕಿಸ್ತಾನದಲ್ಲಿರುವ ಭಯೋತ್ಪಾದಕ ನೆಲೆಗಳ ಮೇಲೆ ದಾಳಿ ನಡೆಸಿದೆ. ದಾಳಿಯಲ್ಲಿ 100 ಕ್ಕೂ ಅಧಿಕ ಭಯೋತ್ಪಾದಕರು ಹತರಾಗಿದ್ದಾರೆಂದು ಮೂಲಗಳು ತಿಳಿಸಿವೆ. ಭಾರತದ ಆಪರೇಶನ್ ಸಿಂಧೂರ್ ದಾಳಿ ಬೆನ್ನಲ್ಲೇ ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್ ತುರ್ತು ಸಭೆ ನಡೆಸಿದ್ದಾರೆ.

Laxmi Hebbalkar:  ಭಾರತದ ಹೆಮ್ಮೆಯ ಸೈನಿಕರಿಗೊಂದು ದೊಡ್ಡ ಸಲಾಂ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಭಾರತದ ಹೆಮ್ಮೆಯ ಸೈನಿಕರಿಗೊಂದು ದೊಡ್ಡ ಸಲಾಂ: ಲಕ್ಷ್ಮೀ ಹೆಬ್ಬಾಳಕರ್

Laxmi Hebbalkar: ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರ (ಪಿಒಕೆ) ಪ್ರದೇಶಗಳಲ್ಲಿರುವ ಭಯೋತ್ಪಾದಕರ ನೆಲೆಯನ್ನು ನಾಶ ಮಾಡಿ ಪರಾಕ್ರಮ ಮೆರೆದ ನಮ್ಮ ಭಾರತೀಯ ಸೈನಿಕರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಅವರ ಸಾಧನೆಗೊಂದು ದೊಡ್ಡ ಸಲಾಂ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

Basavaraj Bommai: ಆಪರೇಷನ್ ಸಿಂಧೂರ, ಸೇನೆಯ ಕಾರ್ಯಕ್ಕೆ ದೇಶವೇ ಹೆಮ್ಮೆ ಪಡುವಂತೆ ಮಾಡಿದೆ: ಬಸವರಾಜ ಬೊಮ್ಮಾಯಿ

ಸಿಂಧೂರ ಕಳೆದುಕೊಂಡ ಹೆಣ್ಣು ಮಕ್ಕಳ ಪ್ರತೀಕಾರ: ಬಸವರಾಜ ಬೊಮ್ಮಾಯಿ

Basavaraj Bommai: ಪಾಕಿಸ್ತಾನವು ಅಂತಾರಾಷ್ಟ್ರೀಯ ಭಯೋತ್ಪಾದಕರ ನೆಲೆಗಟ್ಟು ಮತ್ತು ತರಬೇತಿ ನೀಡುವ ಫ್ಯಾಕ್ಟರಿ ಆಗಿ ಪರಿವರ್ತನೆ ಆಗಿದೆ. ಇದು ಕೇವಲ ಭಾರತ ಅಷ್ಟೇ ಅಲ್ಲ ಇಡೀ ವಿಶ್ವದಲ್ಲೇ ಭಯೋತ್ಪಾದನೆ ಕಿತ್ತೊಗೆಯುವ ಕೆಲಸ ಭಾರತೀಯ ಸೇನೆ ಮಾಡಿದೆ. ಇದು ಇನ್ನೂ ಪ್ರಾರಂಭ, ಪಾಕಿಸ್ತಾನದಲ್ಲಿರುವ ಕೊನೆಯ ಭಯೋತ್ಪಾದಕರಿರುವವರೆಗೂ ಈ ಕಾರ್ಯಾಚರಣೆ ನಡೆಯುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

Stock market: ಆಪರೇಷನ್‌ ಸಿಂಧೂರ; ಸೆನ್ಸೆಕ್ಸ್‌, ನಿಫ್ಟಿ ಸ್ಥಿರ!

ಆಪರೇಷನ್‌ ಸಿಂಧೂರ; ಸೆನ್ಸೆಕ್ಸ್‌, ನಿಫ್ಟಿ ಸ್ಥಿರ

ಸಾಮಾನ್ಯವಾಗಿ ಯುದ್ಧದ ಸಂದರ್ಭ, ಜಿಯೊಪೊಲಿಟಿಕಲ್‌ ಟೆನ್ಷನ್‌ ಆದಾಗ, ಸ್ಟಾಕ್‌ ಮಾರ್ಕೆಟ್‌ಗಳಲ್ಲಿ (Stock market) ಭಾರಿ ಅಲ್ಲೋಲಕಲ್ಲೋಲ ಉಂಟಾಗುತ್ತದೆ. ಯುದ್ಧ ಸೃಷ್ಟಿಸುವ ಅನಿಶ್ಚಿತತೆ ಅದಕ್ಕೆ ಕಾರಣ. ಆದರೆ ಭಾರತವು ಪಾಕಿಸ್ತಾನ ಮತ್ತು ಪಿಒಕೆಯಲ್ಲಿ ಉಗ್ರರ ಶಿಬಿರಗಳನ್ನು ಧ್ವಂಸಗೊಳಿಸಲು ಆಪರೇಷನ್‌ ಸಿಂಧೂರ ನಡೆಸಿದ ಬೆನ್ನಲ್ಲೇ ಬುಧವಾರ ಬೆಳಗ್ಗೆ ಸ್ಟಾಕ್‌ ಮಾರ್ಕೆಟ್‌ನಲ್ಲಿ ಅಲ್ಪ ಏರಿಳಿತ ಸಂಭವಿಸಿದರೂ, ಭಾರಿ ಕುಸಿತವೇನೂ ಆಗಲಿಲ್ಲ.

Operation Sindoor: ಪಹಲ್ಗಾಮ್ ಹತ್ಯಾಕಾಂಡದಲ್ಲಿ ಪತಿಯನ್ನು ಕಳೆದುಕೊಂಡ ಮಹಿಳೆಯರು ಆಪರೇಷನ್ ಸಿಂಧೂರ್ ಬಗ್ಗೆ ಹೇಳಿದ್ದೇನು?

ಸರ್ಕಾರಕ್ಕೆ ಹೃತ್ಪೂರ್ವಕ ಧನ್ಯವಾದ ಸಲ್ಲಿಸಿದ ಸಂತ್ರಸ್ತರು

Operation Sindoor: ಭಾರತವು ಇಂದು ಬೆಳಗ್ಗೆ ಆಪರೇಷನ್ ಸಿಂಧೂರ್ ಆರಂಭಿಸಿ, ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಕನಿಷ್ಠ ಒಂಬತ್ತು "ಭಯೋತ್ಪಾದಕ ಮೂಲಸೌಕರ್ಯ" ಕೇಂದ್ರಗಳ ಮೇಲೆ ದಾಳಿ ನಡೆಸಿದೆ. ಈ ಕಾರ್ಯಾಚರಣೆಗೆ 'ಸಿಂಧೂರ್’ ಎಂದು ಹೆಸರಿಡಲಾಗಿದ್ದು, ಇದು ಹಿಂದೂ ವಿವಾಹಿತ ಮಹಿಳೆಯರು ಧರಿಸುವ ಕೆಂಪು ಕುಂಕುಮವನ್ನು ಸಂಕೇತಿಸುತ್ತದೆ.

India Pakistan War: ಮುಗಿಯದ ಸಂಘರ್ಷ- 1947ರಿಂದಲೂ ಯುದ್ಧ ಭೂಮಿಯಲ್ಲಿ ಹೋರಾಡುತ್ತಲೇ ಇದೆ  ಭಾರತ- ಪಾಕ್

ರಣರಂಗದಲ್ಲಿ ಭಾರತ-ಪಾಕ್! ಇದು ಇಂದು ನಿನ್ನೆಯ ಯುದ್ಧವಲ್ಲ

ಎರಡು ದೇಶಗಳು ವಿಭಜನೆಯಾದ ಬಳಿಕ ಅಂದರೆ 1947ರಲ್ಲಿ ಭಾರತ ಮತ್ತು ಪಾಕಿಸ್ತಾನ ಸ್ವಾತಂತ್ರ್ಯಗೊಂಡ ಅನಂತರ ಹಲವು ಬಾರಿ ಮುಖಾಮುಖಿಯಾಗಿವೆ. ಇದೀಗ ಆಪರೇಷನ್ ಸಿಂಧೂರ್ ನಲ್ಲಿ ಭಾರತೀಯ ಸೇನೆ ತೊಡಗಿಕೊಂಡಿದ್ದು, ಯುದ್ಧ ಘೋಷಣೆಗಳು ಮೊಳಗಿವೆ. ಈ ಮಧ್ಯೆ, 1947ರಿಂದ ಈವರೆಗೆ ಭಾರತ ಮತ್ತು ಪಾಕಿಸ್ತಾನ ನಡುವೆ ನಡೆದ ಯುದ್ಧಗಳು ಹೇಗಿತ್ತು ಎನ್ನುವ ಅವಲೋಕನ ಇಲ್ಲಿದೆ.

Priyanka Gandhi: "ಸೇನೆ ಬಗ್ಗೆ ಹೆಮ್ಮೆಯಿದೆ" ; ಆಪರೇಷನ್ ಸಿಂಧೂರ್ ಶ್ಲಾಘಿಸಿದ ಸಂಸದೆ ಪ್ರಿಯಾಂಕಾ ಗಾಂಧಿ

ಆಪರೇಷನ್ ಸಿಂಧೂರ್ ಶ್ಲಾಘಿಸಿದ ಸಂಸದೆ ಪ್ರಿಯಾಂಕಾ ಗಾಂಧಿ

ಪಾಕಿಸ್ತಾನದಲ್ಲಿರುವ ಭಯೋತ್ಪಾದಕ ನೆಲೆಯ ಮೇಲೆ ಭಾರತ ಆಪರೇಷನ್‌ ಸಿಂಧೂರ್‌ ಹೆಸರಿನಲ್ಲಿ ವೈಮಾನಿಕ ದಾಳಿ ನಡೆಸಿದೆ. ದಾಳಿಯಲ್ಲಿ 9 ಉಗ್ರ ನೆಲೆಗಳು ಧ್ವಂಸ ಮಾಡಿದೆ. ಆಪರೇಷನ್ ಸಿಂಧೂರ್ ನಡೆಸಿದ್ದಕ್ಕಾಗಿ ವಯನಾಡಿನ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಬುಧವಾರ ಭಾರತೀಯ ಸೇನೆಯನ್ನು ಶ್ಲಾಘಿಸಿದ್ದಾರೆ.

'ಆಪರೇಷನ್ ಸಿಂಧೂರ್' ದಾಳಿಯಲ್ಲಿ ಭಾರತ ಬಳಸಿದ ಶಸ್ತ್ರಾಸ್ತ್ರಗಳು ಯಾವುದು?

'ಆಪರೇಷನ್ ಸಿಂಧೂರ್' ದಾಳಿಯಲ್ಲಿ ಭಾರತ ಬಳಸಿದ ಶಸ್ತ್ರಾಸ್ತ್ರಗಳು ಯಾವುದು?

ಭಾರತೀಯ ಸೇನೆಯು ರಫೇಲ್ ಜೆಟ್‌ಗಳಲ್ಲಿ ಅಳವಡಿಸಲಾದ ಸ್ಕಾಲ್ಪ್ ಕ್ರೂಸ್ ಕ್ಷಿಪಣಿ, ಹ್ಯಾಮರ್ ಕ್ಷಿಪಣಿ ಹಾಗೂ ಆತ್ಮಾಹುತಿ ಡ್ರೋನ್​ಗಳಂಥ ಅತ್ಯಾಧುನಿಕ ಶಸ್ತ್ರಾಸ್ತ್ರಗಳನ್ನು ಬಳಸಲಾಗಿತ್ತು. ಈ ಪೈಕಿ ಸಾಲ್ಟ್ ಕ್ರೂಸ್ ಕ್ಷಿಪಣಿ, ಹ್ಯಾಮರ್ ಎಂಬ ಬಾಬರ್ ಮತ್ತು ಕಾಮಿಕೇಜ್ ಡ್ರೋನ್‌ಗಳನ್ನು ಬಳಸಲಾಗಿತ್ತು.

Operation Sindoor: 2 ಮಹಿಳಾ ಅಧಿಕಾರಿಗಳು, ಒಬ್ಬ ಕಾಶ್ಮೀರಿ ಪಂಡಿತ... ಆಪರೇಷನ್‌ಗೆ ಹೆಸರು ಸಿಂಧೂರ; ಇದು ಐತಿಹಾಸಿಕ ಮಾಧ್ಯಮಗೋಷ್ಠಿ!

2 ಮಹಿಳಾ ಅಧಿಕಾರಿಗಳು, ಒಬ್ಬ ಕಾಶ್ಮೀರಿ ಪಂಡಿತ- ಆಪರೇಷನ್‌ಗೆ ಹೆಸರು ಸಿಂಧೂರ!

Operation Sindoor Briefing:ಆಪರೇಷನ್‌ ಸಿಂಧೂರ್‌ ಕಾರ್ಯಾಚರಣೆಗೆ ಸಂಬಂಧಿಸಿದ ಪ್ರತೀ ವಿಚಾರಗಳು ಬಹಳಷ್ಟು ವಿಶೇಷತೆ ಪಡೆದುಕೊಂಡಿವೆ. ದಾಳಿ ಬಗ್ಗೆ ಇಂದು ವಿದೇಶಾಂಗ ಕಾರ್ಯದರ್ಶಿ ಮತ್ತು ಸೇನಾಧಿಕಾರಿಗಳು ನಡೆಸಿದ ಮಾಧ್ಯಮಗೋಷ್ಠಿಗಳೂ ಬಹಳ ವಿಶೇಷತೆ ಪಡೆದುಕೊಂಡಿವೆ. ಕಾಶ್ಮೀರಿ ಪಂಡಿತ ಸಮುದಾಯದ ಹಿನ್ನೆಲೆವುಳ್ಳ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್‌ ಮಿಸ್ರಿ ಕೂಡ ಈ ಸುದ್ದಿಗೋಷ್ಠಿಯಲ್ಲಿದ್ದರು.

Operation Sindoor: ʼಇದು ಹೆಮ್ಮೆಯ ಕ್ಷಣʼ; ಸೇನಾಪಡೆಗಳಿಗೆ ಅಭಿನಂದನೆ ಸಲ್ಲಿಸಿದ ಮೋದಿ

ಸೇನಾಪಡೆಗಳಿಗೆ ಅಭಿನಂದನೆ ಸಲ್ಲಿಸಿದ ಪ್ರಧಾನಿ ಮೋದಿ

ಬುಧವಾರ ನಸುಕಿನಲ್ಲಿ ಉಗ್ರರ ಮೇಲೆ ದಾಳಿ ಮಾಡಿದ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು ಸಂಪುಟ ಸಭೆಯನ್ನು ಕರೆದಿದ್ದರು. ಇದೀಗ ಸಂಪುಟ ಸಭೆ ಮುಕ್ತಾಯಗೊಂಡಿದ್ದು, ಸಭೆಯಲ್ಲಿ ಮೂರು ಪಡೆಗಳ ಮುಖ್ಯಸ್ಥರು, ರಕ್ಷಣಾ ಮಂತ್ರಿ ರಾಜನಾಥ್‌ ಸಿಂಗ್‌ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Operation Sindoor: ಪಹಲ್ಗಾಮ್‌ ದಾಳಿಗೆ ಸೇಡು ತೀರಿಸಿಕೊಂಡ ಭಾರತ; ಸಿನಿಮಾ ಮಂದಿ ಏನಂದ್ರು?

ಪಹಲ್ಗಾಮ್‌ ದಾಳಿಗೆ ಸೇಡು ತೀರಿಸಿಕೊಂಡ ಭಾರತ; ಸಿನಿಮಾ ಮಂದಿ ಏನಂದ್ರು?

ಏ. 22ರಂದು ಜಮ್ಮು ಕಾಶ್ಮೀರದ ಪಹಲ್ಗಾಮ್‌ ಉಗ್ರ ದಾಳಿಯಲ್ಲಿ 26 ಪ್ರವಾಸಿಗರು ಮೃತಪಟ್ಟಿದ್ದು, ಇದೀಗ ಭಾರತೀಯ ಸೇನೆ ಭರ್ಜರಿಯಾಗಿ ಸೇಡು ತೀರಿಸಿಕೊಂಡಿದೆ.‍ ಪ್ರವಾಸಿಗರ ಧರ್ಮ ವಿಚಾರಿಸಿ ಉಗ್ರರು ಮುಸ್ಲಿಮೇತರರನ್ನು ಗುಂಡಿಟ್ಟು ಹತ್ಯೆ ಮಾಡಿದ್ದರು. ಹಿಂದೂ ಮಹಿಳೆಯರ ಕುಂಕುಮ ಅಳಿಸಿದವರನ್ನು ಪಾಕ್​ ಒಳಗೇ ನುಗ್ಗಿ ಹೊಡೆಯಲಾಗಿದೆ. ಭಾರತೀಯ ಸೇನೆ ಮಧ್ಯ ರಾತ್ರಿ ನಡೆಸಿದ ಈ ದಾಳಿಯಲ್ಲಿ 70ಕ್ಕೂ ಹೆಚ್ಚು ಭಯೋತ್ಪಾದಕರು ಹತರಾಗಿದ್ದಾರೆ. ಭಾರತೀಯ ಸೇನೆಯ ಈ ದಾಳಿಗೆ ಬಾಲಿವುಡ್‌ ಮಂದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಯಾರು ಏನಂದರು ಎನ್ನುವ ವಿವರ ಇಲ್ಲಿದೆ.

Operation Sindoor: ಆಪರೇಷನ್‌ ಸಿಂಧೂರ್‌ ಬೆನ್ನಲ್ಲೇ ಮೋದಿ ವಿದೇಶ ಪ್ರವಾಸ ರದ್ದು; ಅಮಿತ್‌ ಶಾ  ರಿಯಾಕ್ಟ್‌

ಆಪರೇಷನ್‌ ಸಿಂಧೂರ್‌ ಸಕ್ಸಸ್‌: ಮೋದಿ ವಿದೇಶ ಪ್ರವಾಸ ರದ್ದು

Narendra Modi: ಪಹಲ್ಗಾಮ್‌ ದಾಳಿಗೆ ಪ್ರತೀಕಾರವಾಗಿ ಪಾಕಿಸ್ತಾನ ಮತ್ತು ಪಾಕ್‌ ಆಕ್ರಮಿತ ಕಾಶ್ಮೀರದಲ್ಲಿ ಉಗ್ರರ ನೆಲೆಯನ್ನು ಭಾರತೀಯ ಸೇನೆ ಧ್ವಂಸಗೊಳಿಸಿದೆ. ಉಗ್ರರ ನೆಲೆಯನ್ನು ಪುಡಿಗಟ್ಟಿದ ಬೆನ್ನಲ್ಲೇ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಮತ್ತೊಂದೆಡೆ ಪ್ರಧಾನಿ ನರೇಂದ್ರ ಮೋದಿ ತಮ್ಮ ಮೂರು ದೇಶಗಳ ವಿದೇಶ ಪ್ರವಾಸವನ್ನು ರದ್ದುಗೊಳಿಸಿದ್ದಾರೆ.

Masood Azhar: ಮಸೂದ್‌ ಅಜರ್‌ ಸತ್ತಿಲ್ಲ..! ಕುಟುಂಬಸ್ಥರನ್ನು ಕಳೆದುಕೊಂಡ ಬೆನ್ನಲ್ಲೇ ಉಗ್ರನಿಂದ ಪೋಸ್ಟ್‌

ಕುಟುಂಬಸ್ಥರನ್ನು ಕಳೆದುಕೊಂಡ ಬೆನ್ನಲ್ಲೇ ಮಸೂದ್‌ ಅಜರ್‌ ದಾಳಿಯ ಎಚ್ಚರಿಕೆ

ಲಾಹೋರ್‌ ನಿಂದ 400 ಕಿಲೋ ಮೀಟರ್‌ ದೂರದಲ್ಲಿರುವ ಬಹಾವಲ್ಪುರದಲ್ಲಿರುವ ಜೈಶ್‌ ಎ ಮೊಹಮ್ಮದ್‌ ನ ಪ್ರಧಾನ ಕಚೇರಿಯನ್ನು ಗುರಿಯಾಗಿರಿಸಿಕೊಂಡು ದಾಳಿ ನಡೆಸಲಾಗಿತ್ತು. ಸುಮಾರು 18ಕ್ಕೂ ಅಧಿಕ ಎಕರೆ ಜಾಗದಲ್ಲಿರುವ ಜೈಶ್‌ ಇ ಮೊಹಮ್ಮದ್‌ ಪ್ರಧಾನ ಕಚೇರಿ ಉಗ್ರರ ನೇಮಕಾತಿ, ದೇಣಿಗೆ ಸಂಗ್ರಹ, ಉಗ್ರ ಚಟುವಟಿಕೆಯ ಕೇಂದ್ರ ಸ್ಥಾನವಾಗಿತ್ತು.