ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಕರ್ನಾಟಕ

ಹೊಸ ಆಶಯದೊಂದಿಗೆ ಕತಾರ್‌ ‘ಕನ್ನಡ ಪಾಠಶಾಲೆ’ ಪುನರಾರಂಭ

ಕತಾರ್‌ ‘ಕನ್ನಡ ಪಾಠಶಾಲೆ’ ಪುನರಾರಂಭ

ವಿದೇಶದಲ್ಲಿ ನೆಲೆಸಿರುವ ಕನ್ನಡ ಭಾಷಿಗರ ಮಕ್ಕಳಿಗೆ ಕನ್ನಡ ಭಾಷೆ, ನಾಡು-ನುಡಿ ಹಾಗೂ ಸಂಸ್ಕೃತಿಯನ್ನು ಪರಿಚಯಿಸುವ ಉದ್ದೇಶದಿಂದ ಕರ್ನಾಟಕ ಸಂಘ ಕತಾರ್ ವತಿಯಿಂದ ‘ಕನ್ನಡ ಪಾಠಶಾಲೆ’ಯನ್ನು ಹೊಸ ಆಶಯದೊಂದಿಗೆ ಪುನರಾರಂಭಿಸಲಾಗಿದೆ. ಇತ್ತೀಚೆಗೆ ನಡೆದ ಶಿಕ್ಷಕರ ದಿನಾಚರಣೆಯ ಸಂದರ್ಭದಲ್ಲಿ ಇದನ್ನು ಅಧಿಕೃತವಾಗಿ ಘೋಷಿಸಲಾಯಿತು.

ಶತದಿನೋತ್ಸವಕ್ಕೆ ಕರೆದಿಲ್ಲವೆಂದು ಮಾಧ್ಯಮಗಳೆದುರು ಹೇಳಿದ್ದೇಕೆ? ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಹರಿಪ್ರಸಾದ್‌ಗೆ ಮಲ್ಲಿಕಾರ್ಜುನ್ ಖರ್ಗೆ ಖಡಕ್ ಪ್ರಶ್ನೆ

ಕೆಪಿಸಿಸಿ ಅಧ್ಯಕ್ಷರಿಗೇ ಹೈಕಮಾಂಡ್ ಶಿಸ್ತಿನ ಪಾಠ

ಪಕ್ಷದ ರಾಜ್ಯಾಧ್ಯಕ್ಷರೇ ಸರಕಾರದ ವಿರುದ್ಧ ಹೇಳಿಕೆ ನೀಡಿದರೆ ಪಕ್ಷಕ್ಕೆ ಹಾಗೂ ಸರಕಾರಕ್ಕೆ ಹೊಡೆತ ಬೀಳುತ್ತದೆ. ಇದಿಷ್ಟೇ ಅಲ್ಲದೇ, ಸರಕಾರ ಹಾಗೂ ಪಕ್ಷದ ನಡುವೆ ಸಮನ್ವಯತೆ ಇಲ್ಲ ಎನ್ನುವ ಸಂದೇಶ ರವಾನೆಯಾದರೆ ಸಂಘಟನೆಗೆ ಸಮಸ್ಯೆಯಾಗುತ್ತದೆ. ಆದ್ದರಿಂದ ಮುಂದಿನ ದಿನದಲ್ಲಿ ಈ ರೀತಿಯ ಗೊಂದಲಗಳ ಬಗ್ಗೆ ಬಹಿರಂಗವಾಗಿ ಮಾತನಾಡದಂತೆ ಸೂಚನೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇನ್ನೂ 23 ತಾಲೂಕು ಬರ ಪಟ್ಟಿಗೆ: ಬರ ಬಾಧೆ: 2ನೇ ಪಟ್ಟಿಯಲ್ಲಿ 23 ತಾಲೂಕು ಸೇರ್ಪಡೆ

ಮಳೆಯ ಕೊರತೆ: 21 ತೀವ ಬರಪೀಡಿತ, 2 ಸಾಧಾರಣ

ರಾಜ್ಯದಲ್ಲಿ ನಿರೀಕ್ಷಿತ ಪ್ರಮಾಣದ ಮುಂಗಾರು ಮಳೆ ಬಾರದೇ ಇರುವುದರಿಂದ ರಾಜ್ಯ ಸರಕಾರ 2ನೇ ಹಂತದ ಬರ ತಾಲೂಕುಗಳ ಪಟ್ಟಿಯನ್ನು ಪ್ರಕಟಿಸಿದ್ದು, ಎರಡನೇ ಹಂತದಲ್ಲಿ 17 ಜಿಲ್ಲೆಗಳ 23 ತಾಲೂಕುಗಳು ಸೇರಿವೆ. ಮಳೆ ಕೊರತೆಯಾಗಿ ಬರ ಪರಿಸ್ಥಿತಿ ಸೃಷ್ಟಿಯಾಗಿದ್ದು, ಈಗಾಗಲೇ ಮೊದಲ ಹಂತದಲ್ಲಿ 101 ತಾಲೂಕುಗಳನ್ನು ರಾಜ್ಯ ಸರಕಾರ ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಿತ್ತು.

Ration Card e-KYC: ಪಡಿತರ ಚೀಟಿ ಇ-ಕೆವೈಸಿ: ಅ.20ರವರೆಗೆ ವಿಸ್ತರಣೆ

ಪಡಿತರ ಚೀಟಿ ಇ-ಕೆವೈಸಿ: ಅ.20ರವರೆಗೆ ವಿಸ್ತರಣೆ

ಹಗಲು ವೇಳೆಯಲ್ಲಿ ಕೂಲಿ-ನಾಲಿ ಮಾಡುವ ಶ್ರಮಿಕರು ಪಡಿತರ ಪಡೆಯಲು ಇಡೀ ದಿನದ ದುಡಿಮೆ ಕಳೆದುಕೊಳ್ಳುವುದನ್ನು ಸರಕಾರ ಸಹಿಸುವುದಿಲ್ಲ. ಪಡಿತರದಾರರ ಅನುಕೂಲಕ್ಕೆ ತಕ್ಕಂತೆ ನ್ಯಾಯಬೆಲೆ ಅಂಗಡಿಗಳು ಕಾರ್ಯನಿರ್ವಹಿಸಲೇಬೇಕಿದೆ. ಬರುವ ಅ.1ರಿಂದ ಜಾರಿಗೆ ಬರುವಂತೆ ರಾಜ್ಯದ ಎಲ್ಲಾ ನ್ಯಾಯಬೆಲೆ ಅಂಗಡಿಗಳು ಕಡ್ಡಾಯವಾಗಿ ಬೆಳಗ್ಗೆ 7 ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ, ಸಂಜೆ 4 ಗಂಟೆಯಿಂದ ರಾತ್ರಿ 8 ಗಂಟೆಯ ವರೆಗೆ ತೆರೆಯಲು ಆದೇಶಿಸಲಾಗಿದೆ.

ತುಳುವಿಗೆ ರಾಜ್ಯಭಾಷೆ ಸ್ಥಾನ ಸೇರಿ ಹಲ ಘೋಷಣೆ ನಿರೀಕ್ಷೆ ಕರಾವಳಿ ಕೇಂದ್ರಿತವಾದ 35 ವಿಚಾರಗಳನ್ನು ಚರ್ಚಿಸುವ ಸಾಧ್ಯತೆ: ಇಂದು ಕರಾವಳಿಯಲ್ಲಿ ಮಂತ್ರಿಮಂಡಲ ಸಭೆ

ಇಂದು ಕರಾವಳಿಯಲ್ಲಿ ಮಂತ್ರಿಮಂಡಲ ಸಭೆ

ದ.ಕನ್ನಡ, ಉಡುಪಿ ಮತ್ತು ಉ.ಕನ್ನಡ ಜಿಗಳಿಗೆ ಸಂಬಂಧಿಸಿದ ಸಂಪುಟ ಸಭೆಯಾದರೂ, ಮೀನು ಗಾರಿಕೆ, ಪ್ರವಾಸೋದ್ಯಮ, ಕಂದಾಯ ಭೂಮಿ, ಪಿಲಿಕುಳ ಅಭಿವೃದ್ಧಿ, ಕೋಸ್ಟಲ್ ರೋಡ್, ಸಿಆರ್ ಝಡ್ ಸಡಿಲಿಕೆ ಮುಂತಾದ 35ಕ್ಕೂ ಹೆಚ್ಚು ಮಂಗ ಳೂರು ಕೇಂದ್ರೀಕೃತ ಅಭಿವೃದ್ಧಿ ಯೋಜನೆಗಳ ವಿಷಯ ಮಂಡನೆ ನಡೆಯಲಿವೆ. ಕ್ರೂಸ್ ಟೂರಿಸಂ, ಬೋಟ್ ಹೌಸ್, ಹೂಡಿಕೆ ಹೆಚ್ಚಳ, ಕಡಲ ತೀರ ಮತ್ತು ಧಾರ್ಮಿಕ ಕೇಂದ್ರಗಳ ಅಭಿವೃದ್ಧಿಗೆ ತೀರ್ಮಾನ ನಿರೀಕ್ಷಿಸಲಾಗಿದೆ.

ಮಳೆ ಕೈ ಕೊಟ್ಟ ಹಿನ್ನೆಲೆ ಕೃಷಿಗೆ ಸಂಕಷ್ಟ, ಬರ ಘೋಷಣೆಗೆ ರೈತರ ಒತ್ತಾಯ: 1000 ಕೋಟಿ ವಿಶೇಷ ಪ್ಯಾಕೇಜ್‌ಗೆ ಆಗ್ರಹ

1000 ಕೋಟಿ ವಿಶೇಷ ಪ್ಯಾಕೇಜ್‌ಗೆ ಆಗ್ರಹ

ಕಲಬುರಗಿಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಆಗಮಿಸಿರುವ ಸಂದರ್ಭದಲ್ಲೇ ರೈತರ ಈ ಬೇಡಿಕೆ ಮತ್ತಷ್ಟು ಮುನ್ನೆಲೆಗೆ ಬಂದಿದೆ. ಬರದ ಸಂಕಷ್ಟದಲ್ಲಿರುವ ಕೃಷಿಕರಿಗೆ ಸರಕಾರ ತಕ್ಷಣ ಸ್ಪಂದಿಸಬೇಕು. ನೈಜ ಬೆಳೆನಷ್ಟ ಗುರುತಿಸಿ ಪರಿಹಾರ ಕಲ್ಪಿಸುವ ಜತೆಗೆ ಕುಡಿಯುವ ನೀರು, ಜಾನುವಾರುಗಳಿಗೆ ಮೇವು ಹಾಗೂ ಕೃಷಿ ಪುನಶ್ಚೇತನಕ್ಕೆ ಅಗತ್ಯ ಕ್ರಮ ಕೈಗೊಳ್ಳಬೇಕು.

ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಸ್ವಯಂ ರಕ್ತದಾನ; ಯುವ ಸಮುದಾಯಕ್ಕೆ ಪ್ರೇರಣೆಯಾದ ಶಿಕ್ಷಣ ಸಚಿವ

ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಸ್ವಯಂ ರಕ್ತದಾನ

Pralhad Joshi: ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನ ಪ್ರಯುಕ್ತ ಆಯೋಜಿಸಿದ್ದ "ಸೇವಾ ಸಂಕಲ್ಪ ಅಭಿಯಾನ"ದ ಭಾಗವಾಗಿ ಬಿಜೆಪಿ ಯುವ ಮೋರ್ಚಾವು ಮಹಾಮನೆ ಮನಗುಂಡಿಯಲ್ಲಿ ಗುರುವಾರ ಆಯೋಜಿಸಿದ್ಧ ರಕ್ತದಾನ ಶಿಬಿರದಲ್ಲಿ ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಸ್ವತಃ ರಕ್ತದಾನ ಮಾಡುವ ಮೂಲಕವೇ ಚಾಲನೆ ನೀಡಿದ್ದಾರೆ.

ನಾಳೆ ಕರಾವಳಿಯಲ್ಲಿ ಸಂಪುಟ ಸಭೆ: ತುಳು 2ನೇ ಆಡಳಿತ ಭಾಷೆ, ಮೂಲಸೌಕರ್ಯ ಯೋಜನೆಗಳಿಗೆ ಅಧಿಕೃತ ಮುದ್ರೆಯ ನಿರೀಕ್ಷೆ

ನಾಳೆ ಕರಾವಳಿಯಲ್ಲಿ ಸಂಪುಟ ಸಭೆ

ಕರ್ನಾಟಕದ ಆಡಳಿತ ಶಕ್ತಿ ಸೌಧವೇ ಕರಾವಳಿಯಂಗಳಕ್ಕೆ ಇಳಿದು ಬರುತ್ತಿರುವ ಸಂದರ್ಭದಲ್ಲಿ ವಿವಿಧ ರಾಜಕೀಯ ಪಕ್ಷಗಳು, ಜನಪ್ರತಿನಿಧಿಗಳು, ಧಾರ್ಮಿಕಸಾಮಾಜಿಕ ಸಂಘಟನೆಗಳು ಹಾಗೂ ಕೈಗಾರಿಕಾ ಒಕ್ಕೂಟಗಳು ಸರಕಾರದ ಮುಂದಿಟ್ಟಿರುವ ಪ್ರಮುಖ ಪ್ರಸ್ತಾವನೆಗಳು ಮತ್ತು ಅವುಗಳ ಸಂಪುಟ ಅನುಮೋದನೆಯ ಸಾಧ್ಯತೆಗಳು ಹೀಗಿದೆ.

ಮದುವೆ ಆಮಿಷ ಒಡ್ಡಿ ಯುವತಿಗೆ ವಂಚನೆ; ಮಾಜಿ ಸಚಿವ ಡಿ. ಸುಧಾಕರ್ ಸಹೋದರನ ಕುಟುಂಬದ ವಿರುದ್ಧ ಎಫ್‌ಐಆರ್

ಮದುವೆ ಆಮಿಷ ಒಡ್ಡಿ ಯುವತಿಗೆ ವಂಚನೆ; ಎಫ್‌ಐಆರ್ ದಾಖಲು

Tumkur News: ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ವಂಚನೆ ಎಸಗಿರುವ ಹಾಗೂ ಲೈಂಗಿಕ ದೌರ್ಜನ್ಯ ನಡೆಸಿರುವ ಗಂಭೀರ ಆರೋಪದ ಮೇಲೆ ಮಾಜಿ ಸಚಿವ ದಿವಂಗತ ಡಿ. ಸುಧಾಕರ್ ಅವರ ಸಹೋದರ ಡಿ.ಎಸ್. ಕುಮಾರ್ ಕುಟುಂಬದ ವಿರುದ್ಧ ತುಮಕೂರು ನಗರದ ಮಹಿಳಾ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಒಟ್ಟು ಏಳು ಜನರ ವಿರುದ್ಧ ದೂರು ದಾಖಲಾಗಿದೆ.

ದಿವ್ಯಾಂಗರಿಗೆ ಅನುಕಂಪವಲ್ಲ, ಸ್ವಾವಲಂಬನೆಗೆ ಆದ್ಯತೆ: ಬಿ.ಎಸ್.ಸುರೇಶ್

ದಿವ್ಯಾಂಗರಿಗೆ ಅನುಕಂಪವಲ್ಲ, ಸ್ವಾವಲಂಬನೆಗೆ ಆದ್ಯತೆ

ಸುಮಾರು 2,000 ವಿಕಲಚೇತನರು ಹಾಗೂ ಹಿರಿಯ ನಾಗರಿಕರಿಗೆ ಒಂದೇ ಸೂರಿನಡಿ ವಿವಿಧ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಯೋಜನೆಗಳ ಸೌಲಭ್ಯ ವಿತರಿಸುತ್ತಿರುವುದು ಸಂತಸದ ಸಂಗತಿ. ಹಿಂದೆ ವಿಕಲಚೇತನರ ಬಗ್ಗೆ ಸಮಾಜದಲ್ಲಿ ವಿಭಿನ್ನ ಭಾವನೆಗಳಿದ್ದವು. ಇದೀಗ ಅವರನ್ನು ಅನುಕಂಪದಿಂದ ನೋಡುವ ಬದಲು ಸಮಾಜದ ಮುಖ್ಯವಾಹಿನಿಗೆ ತಂದು ಸ್ವಾವಲಂಬಿಗಳನ್ನಾಗಿ ಮಾಡಬೇಕಾದ ಕಾಲ ಬಂದಿದೆ

ಕಡಲ ನಗರಿ ಮಂಗಳೂರಿನಲ್ಲಿ ನಾಳೆ ಸಚಿವ ಸಂಪುಟ ಸಭೆ; 2ನೇ ಆಡಳಿತ ಭಾಷೆಯಾಗುತ್ತ ತುಳು?

ಕಡಲ ನಗರಿ ಮಂಗಳೂರಿನಲ್ಲಿ ನಾಳೆ ಸಚಿವ ಸಂಪುಟ ಸಭೆ

Cabinet meeting in Mangaluru: ಕರಾವಳಿಯ ಮಂಗಳೂರಿನಲ್ಲಿ ಇದೇ ಮೊದಲ ಬಾರಿಗೆ ಸಚಿವ ಸಂಪುಟ ಸಭೆ ನಡೆಸಲು ಸಿದ್ಧತೆ ಜೋರಾಗಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ನೇತೃತ್ವದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ಶುಕ್ರವಾರ (ಸೆಪ್ಟೆಂಬರ್‌ 18) ಈ ಐತಿಹಾಸಿಕ ಸಭೆ ಆಯೋಜಿಸಲಾಗಿದೆ.

ಸಾಕುಪ್ರಾಣಿಗಳ ವಿಮಾನ ಪ್ರಯಾಣದಲ್ಲಿ ಬೆಂಗಳೂರು ಮುಂಚೂಣಿ: ಅಕಾಸಾ ಏರ್

ಸಾಕುಪ್ರಾಣಿಗಳ ವಿಮಾನ ಪ್ರಯಾಣದಲ್ಲಿ ಬೆಂಗಳೂರು ಮುಂಚೂಣಿ

ಅಕಾಸಾ ಏರ್‌ನಲ್ಲಿ ಅತಿ ಹೆಚ್ಚು ಬಾರಿ ಸಾಕುಪ್ರಾಣಿಗಳೊಂದಿಗೆ ಪ್ರಯಾಣಿಸುವ ಮೊದಲ 10 ಪೆಟ್ ಪೇರಂಟ್ಸ್‌ಗಳಲ್ಲಿ ಐವರು ಬೆಂಗಳೂರಿನವರಾಗಿದ್ದಾರೆ. ಬೆಂಗಳೂರು–ದೆಹಲಿ, ಬೆಂಗಳೂರು–ಕೊಲ್ಕತ್ತಾ ಮತ್ತು ಬೆಂಗಳೂರು–ಗುವಾಹಟಿ ಮಾರ್ಗಗಳು ಅತ್ಯಂತ ಜನಪ್ರಿಯ ಸಾಕುಪ್ರಾಣಿ ಪ್ರಯಾಣ ಮಾರ್ಗ ಗಳಲ್ಲಿ ಸೇರಿದ್ದು, ಕಳೆದ ಮೂರು ಹಣಕಾಸು ವರ್ಷಗಳಲ್ಲಿ ಬೆಂಗಳೂರಿನಿಂದ ನಡೆದ ಸಾಕುಪ್ರಾಣಿ ವಿಮಾನ ಪ್ರಯಾಣಗಳಲ್ಲಿ ಶೇ.55ಕ್ಕಿಂತ ಹೆಚ್ಚು ಪಾಲು ಹೊಂದಿವೆ.

Chikkaballapur News: ವೈರತ್ವದಾಚೆ ಮನುಷ್ಯತ್ವ ಮೆರೆದ ಶಾಸಕ, ಸಂಸದ: ಶಾಂತಮ್ಮ ನಮ್ಮ ತಾಯಿಯಷ್ಟೇ ಶ್ರೇಷ್ಠ ಎಂದ ಶಾಸಕ ಪ್ರದೀಪ್ ಈಶ್ವರ್

ಶಾಂತಮ್ಮ ನಮ್ಮ ತಾಯಿಯಷ್ಟೇ ಶ್ರೇಷ್ಠ ಎಂದ ಶಾಸಕ ಪ್ರದೀಪ್

ಇದು ರಾಜಕೀಯ ಹೊರತಾದ ಮನವಿ. ಸಂಸದರ ತಾಯಿ ನಮ್ಮೂರಿನ ಹೆಣ್ಣುಮಗಳು. ಅವರು ನಮ್ಮ ತಾಯಿಯಷ್ಟೇ ಶ್ರೇಷ್ಠರು. ಅವರ ಹೆಸರನ್ನು ಒಪಿಡಿಗೆ ಇಟ್ಟರೆ ನನಗೆ ಹೆಚ್ಚು ಸಂತೋಷವಾಗುತ್ತದೆ” ಇದು ನನ್ನ ಸಂಕಲ್ಪವೂ ಆಗಿತ್ತು ಎಂದು ಶಾಸಕ ಹೇಳಿದ ಮಾತು ಕಾರ್ಯಕ್ರಮದ ವಾತಾವರಣವನ್ನೇ ಬದಲಿಸಿತು.

Dr B R Ambedkar: ಅಂಬೇಡ್ಕರ್ ಚಿಂತನೆಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ

ಅಂಬೇಡ್ಕರ್ ಚಿಂತನೆಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ

ಅಂಬೇಡ್ಕರ್ ಅವರು ಯಾವುದೇ ಒಂದು ಜಾತಿ ಅಥವಾ ಸಮುದಾಯಕ್ಕೆ ಸೀಮಿತರಾದವರಲ್ಲ. ದೇಶದ ಎಲ್ಲ ಜನರಿಗೂ ಸಮಾನತೆ, ಸ್ವಾತಂತ್ರ್ಯ ಮತ್ತು ಬಂಧುತ್ವದ ಮೌಲ್ಯಗಳನ್ನು ಪ್ರತಿಪಾದಿಸಿದ ಮಹಾನ್ ಮಾನವತಾವಾದಿ ಹಾಗೂ ಸಂವಿಧಾನ ಶಿಲ್ಪಿಯಾಗಿದ್ದಾರೆ. ಅವರನ್ನು ಜಾತಿಯ ಎಲ್ಲೆಗಳನ್ನು ಮೀರಿ ಪ್ರತಿಯೊಬ್ಬರೂ ಗೌರವಿಸಬೇಕು.

Alamatti: ಕಡಿಮೆಯಾಗುತ್ತಿರುವ ಆಲಮಟ್ಟಿ ‌ಜಲಾಶಯ ಮಟ್ಟ; ಶೂನ್ಯಕ್ಕಿಳಿದ ಒಳಹರಿವು; ಬಾಗಿನಕ್ಕೆ ಹೆಚ್ಚಿದ ಒತ್ತಡ

ಕೂಡಲಸಂಗಮದ ಪೂಜೆ ನೆಪದಲ್ಲಿ‌ ಮರೆಯಾಗದಿರಲಿ ಕೃಷ್ಣೆ

ಮಹಾರಾಷ್ಟ್ರದಲ್ಲಿ ‌ಮಳೆ ಸಂಪೂರ್ಣ ನಿಂತ ಕಾರಣ ಜಲಾಶಯದ ಒಳಹರಿವು ಬುಧವಾರ ಶೂನ್ಯಕ್ಕೆ ತಲುಪಿದೆ. ಆದರೆ ಕಾಲುವೆಗಳ ಜಾಲಕ್ಕೆ ಮುಂಗಾರು ಹಂಗಾಮಿಗೆ ನೀರು, ಕೆರೆಗಳ‌ ಭರ್ತಿ, ಹಿನ್ನೀರಿನ‌ ಬಳಕೆ, ಭಾಷ್ಪಿಭವನದ ಕಾರಣ 13,692 ಕ್ಯುಸೆಕ್ ನೀರು ಜಲಾಶಯದಿಂದ ಹೊರ ಹೋಗುತ್ತಿದೆ. ಇದರಿಂದ ಜಲಾಶಯದ ಮಟ್ಟ ಕುಸಿಯತೊಡಗಿದೆ.

S N Subbareddy: ಶಿಕ್ಷಣದ ಜತೆಗೆ ಶಿಸ್ತನ್ನು ಕಲಿಸಿಕೊಡಿ: ಶಾಸಕ ಸುಬ್ಬಾರೆಡ್ಡಿ

ಶಿಕ್ಷಣದ ಜತೆಗೆ ಶಿಸ್ತನ್ನು ಕಲಿಸಿಕೊಡಿ: ಶಾಸಕ ಸುಬ್ಬಾರೆಡ್ಡಿ

ಮಕ್ಕಳು ತಮ್ಮ ಸುತ್ತಮುತ್ತಲಿನವರ ನಡವಳಿಕೆಯನ್ನು ಗಮನಿಸಿ ಅನುಸರಿಸುವುದರಿಂದ ಶಿಕ್ಷಕರು ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಹಿಂದುಳಿದ ಹಾಗೂ ಬರಪೀಡಿತ ಗುಡಿಬಂಡೆ ತಾಲೂಕಿ ನಲ್ಲಿ ಮಕ್ಕಳ ಭವಿಷ್ಯ ರೂಪಿಸಲು ಶಿಕ್ಷಣವೇ ಪ್ರಮುಖ ಸಾಧನವಾಗಿದೆ. ಬಡ ಕುಟುಂಬಗಳ ಅನೇಕ ಮಕ್ಕಳು ಸರ್ಕಾರಿ ಶಾಲೆಗಳನ್ನು ಅವಲಂಬಿಸಿದ್ದು, ಶಿಕ್ಷಕರು ಅವರನ್ನು ತಮ್ಮ ಮಕ್ಕಳಂತೆ ಭಾವಿಸಿ ಗುಣಮಟ್ಟದ ಶಿಕ್ಷಣ ನೀಡಬೇಕು

ಹಾವೇರಿಯ ಸೈಬರ್ ಠಾಣೆಯಲ್ಲಿ ಭಾವೈಕ್ಯತೆಯ ಗಣೇಶ ಚತುರ್ಥಿ; ಗಣಪತಿ ಪ್ರತಿಷ್ಠಾಪಿಸಿ, ಪೂಜೆಯಲ್ಲಿ ಪಾಲ್ಗೊಂಡ ಡಿಎಸ್‌ಪಿ ಸಮೀವುಲ್ಲಾ

ಹಾವೇರಿಯ ಸೈಬರ್ ಠಾಣೆಯಲ್ಲಿ ಭಾವೈಕ್ಯತೆಯ ಗಣಪತಿ

Haveri News: ಹಾವೇರಿ ನಗರದ ಹಳೆ ಕೋರ್ಟ್ ಆವರಣದಲ್ಲಿರುವ ಜಿಲ್ಲಾ ಸೈಬರ್ ಕ್ರೈಂ ಪೊಲೀಸ್ ಠಾಣೆಯ ಡಿಎಸ್‌ಪಿ ಕೆ. ಸಮೀವುಲ್ಲಾ, ಠಾಣೆಯಲ್ಲಿ ಗಣಪತಿ ಮೂರ್ತಿ ಪ್ರತಿಷ್ಠಾಪಿಸಿ, ತಾವೇ ಖುದ್ದಾಗಿ ಪೂಜಾ ಕಾರ್ಯದಲ್ಲಿ ಭಾಗವಹಿಸುವ ಮೂಲಕ ಸೌಹಾರ್ದತೆಯ ಸಂದೇಶ ಮೆರೆದಿದ್ದಾರೆ. ಗುರುವಾರ ವಿಶೇಷ ಸತ್ಯನಾರಾಯಣ ಪೂಜೆ ಹಮ್ಮಿಕೊಂಡು ಕುಟುಂಬ ಸಮೇತ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಯೊಂದಿಗೆ ಪೂಜಾ ಕಾರ್ಯ ನೆರವೇರಿಸಿದರು.

ಪ್ರಾಥಮಿಕ ಶಾಲೆ ಶಿಕ್ಷಕರಿಗಿನ್ನು 6 ತಿಂಗಳ ವಿಶೇಷ ಬ್ರಿಡ್ಜ್ ಕೋರ್ಸ್; ತಳಮಟ್ಟದಿಂದಲೇ ಶೈಕ್ಷಣಿಕ ಗುಣಮಟ್ಟ ವೃದ್ಧಿಗೆ ಸಚಿವ  ಪ್ರಲ್ಹಾದ್‌ ಜೋಶಿ ಮಹತ್ತರ ಹೆಜ್ಜೆ

ಪ್ರಾಥಮಿಕ ಶಾಲೆ ಶಿಕ್ಷಕರಿಗಿನ್ನು 6 ತಿಂಗಳ ವಿಶೇಷ ಬ್ರಿಡ್ಜ್ ಕೋರ್ಸ್

Pralhad Joshi: ಮಕ್ಕಳಿಗೆ ಪ್ರಾಥಮಿಕ ಹಂತದಿಂದಲೇ ಗುಣಮಟ್ಟದ ಶಿಕ್ಷಣ ಒದಗಿಸುವಲ್ಲಿ ಮಹತ್ತರ ಹೆಜ್ಜೆ ಇಟ್ಟಿರುವ ಕೇಂದ್ರ ಶಿಕ್ಷಣ ಸಚಿವ ಪ್ರಲ್ಹಾದ್‌ ಜೋಶಿ, ಪ್ರಾಥಮಿಕ ಶಿಕ್ಷಕರ ಶಿಕ್ಷಣದಲ್ಲಿ ಆರು ತಿಂಗಳ ಪ್ರಮಾಣಪತ್ರ (ಬ್ರಿಡ್ಜ್) ಕೋರ್ಸ್‌ಗೆ ಚಾಲನೆ ನೀಡಿದ್ದಾರೆ.

Vishweshwar Bhat: ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಒಂದು ಗರಿ ಮೂಡಿತು!

ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಒಂದು ಗರಿ ಮೂಡಿತು!

Anant Nag: ಅನಂತ್ ನಾಗ್ ಮತ್ತು ಶಂಕರ್ ನಾಗ್—ಈ ಇಬ್ಬರು ಸಹೋದರರ ಒಡನಾಟ ಕನ್ನಡ ಸಾಂಸ್ಕೃತಿಕ ಲೋಕದ ಅತ್ಯಂತ ಸುಂದರ ಅಧ್ಯಾಯ. ಶಂಕರ್ ಅವರಲ್ಲೊಂದು ಕಾಡಿನ ಬೆಂಕಿಯಂತಹ ತೀವ್ರತೆ, ನಿರಂತರ ಚಲನೆ ಇದ್ದರೆ, ಅನಂತ್ ಅವರಲ್ಲಿ ಹರಿಯುವ ನದಿಯಂತಹ ಪ್ರಶಾಂತತೆ, ತಣ್ಣನೆಯ ಗಾಂಭೀರ್ಯವಿತ್ತು. ಶಂಕರ್ ನಿರ್ದೇಶಿಸಿದ ಆರ್.ಕೆ. ನಾರಾಯಣ್ ಅವರ ‘ಮಾಲ್ಗುಡಿ ಡೇಸ್’ನಲ್ಲಿ ಅನಂತ್ ಕಾಣಿಸಿಕೊಂಡ ಪರಿ ಇಂದಿಗೂ ಮರೆಯಲಾಗದು-ಅನಂತ್‌ ನಾಗ್‌ ಅವರಿಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಬಂದ ಹಿನ್ನೆಲೆಯಲ್ಲಿ ವಿಶ್ವೇಶ್ವರ ಭಟ್‌ ಅವರು ಬರೆದ ಆತ್ಮೀಯ ಬರಹ ಇಲ್ಲಿದೆ.

ನೀರು ಯಾವಾಗ ಕುಡಿಯಬೇಕು, ಯಾವಾಗ ಕುಡಿಯಬಾರದು? ರಾಘವೇಶ್ವರ ಭಾರತೀ ಶ್ರೀ ಸಲಹೆ ಇಲ್ಲಿದೆ

ಅತಿಯಾದ ನೀರು ಸೇವನೆಯೂ ಅನಾರೋಗ್ಯಕ್ಕೆ ದಾರಿ: ರಾಘವೇಶ್ವರ ಶ್ರೀ

Sri Raghaveshwara Bharathi Swamiji: ಜೀವನದಲ್ಲಿ ಯಾವುದು ಹೆಚ್ಚು ಅಥವಾ ಕಡಿಮೆ ಆದರೂ ಅನರ್ಥವೇ ಆಗುವುದು. ಹಾಗೆಯೇ ಹೆಚ್ಚಿನ ನೀರು ಹಾಗೂ ಕಡಿಮೆ ನೀರು ಸೇವನೆಯಿಂದ ಅನರ್ಥವೇ ಆಗುತ್ತದೆ. ನೀರನ್ನು ಹೆಚ್ಚಾಗಿ ಕುಡಿದಾಗ ಸರಿಯಾಗಿ ಸೇವಿಸಿದ ಆಹಾರವೂ ಸಮರ್ಪಕವಾಗಿ ಜೀರ್ಣವಾಗುವುದಿಲ್ಲ. ಹೆಚ್ಚಾಗಿ ನೀರು ಕುಡಿಯುವುದು ಎಲ್ಲ ರೀತಿಯ ಅನಾರೋಗ್ಯಕ್ಕೆ ಮೂಲವಾಗಬಹುದು. ಅಸಮರ್ಪಕವಾಗಿ ಸೇವಿಸಿದ ಔಷಧ, ಆಹಾರದಂತೆ ನೀರಿನಿಂದಲೂ ಅಡ್ಡಪರಿಣಾಮವಿದ್ದು, ನೀರನ್ನು ಸಮರ್ಪಕವಾಗಿ ಸೇವಿಸಬೇಕು ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ ತಿಳಿಸಿದ್ದಾರೆ.

ಹಾವೇರಿ ಅನ್ನದಾತರಿಗೆ‌ ಕೊಂಚ ರಿಲೀಫ್; ಬರಪೀಡಿತ ಜಿಲ್ಲೆಯಾಗಿ ಘೋಷಣೆ: ಸರ್ಕಾರಕ್ಕೆ ಧನ್ಯವಾದ ಸಲ್ಲಿಸಿದ ರುದ್ರಪ್ಪ ಲಮಾಣಿ

ಹಾವೇರಿ ಬರಪೀಡಿತ ಜಿಲ್ಲೆ ಘೋಷಣೆ

Haveri News: ಹಾವೇರಿ ಜಿಲ್ಲೆಯನ್ನು ಅಧಿಕೃತವಾಗಿ ಬರಪೀಡಿತ ಜಿಲ್ಲೆ ಎಂದು ಘೋಷಿಸಿರುವ ರಾಜ್ಯ ಸರ್ಕಾರ ಹಾಗೂ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರಿಗೆ ಜಿಲ್ಲೆಯ ರೈತರ ಪರವಾಗಿ ಧನ್ಯವಾದ ಸಲ್ಲಿಸುವುದಾಗಿ ಸಕ್ಕರೆ ಮತ್ತು ಜವಳಿ ಖಾತೆ ಹಾಗೂ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವ ರುದ್ರಪ್ಪ ಲಮಾಣಿ ತಿಳಿಸಿದ್ದಾರೆ.

ತೆಲಂಗಾಣ, ಕರ್ನಾಟಕ ಮೂಲದ ಇಬ್ಬರು ಗಲ್ಫ್ ರಾಷ್ಟ್ರಗಳಲ್ಲಿ ಅರೆಸ್ಟ್‌: ಇವರು ಎಸಗಿದ ಅಪರಾಧವೇನು?

ಇಬ್ಬರು ಭಾರತೀಯರು ಗಲ್ಫ್ ರಾಷ್ಟ್ರಗಳಲ್ಲಿ ಬಂಧನ

Two Youths Arrested in Gulf Countries: ತೆಲಂಗಾಣದ ಹೈದರಾಬಾದ್ ಹಾಗೂ ಮೈಸೂರು ಮೂಲದ ಇಬ್ಬರನ್ನು ಸೌದಿ ಅರೇಬಿಯಾ ಮತ್ತು ದುಬೈಯಲ್ಲಿ ಬಂಧಿಸಲಾಗಿದೆ. ಹೈದರಾಬಾದ್‌ನ ಯಾಕುತ್‌ಪುರ ನಿವಾಸಿಯಾದ ಮೊಹಮ್ಮದ್ ಅಫ್ರೋಜ್‌ನನ್ನು ಸೌದಿಯಲ್ಲಿ ಮತ್ತು ಪ್ರತ್ಯೇಕ ಪ್ರಕರಣದಲ್ಲಿ, ಮೈಸೂರಿನ ಸಲ್ಮಾನ್ ಫಾರಿಜ್‌ನನ್ನು ದುಬೈನಲ್ಲಿ ಬಂಧಿಸಲಾಗಿದೆ.

ಸಾಲದ ಶೂಲಕ್ಕೆ ಮತ್ತೊಂದು ಬಲಿ; ಬರದಿಂದ ಕೈಕೊಟ್ಟ ಬೆಳೆ: ಹಾವೇರಿಯಲ್ಲಿ ರೈತ ಆತ್ಮಹತ್ಯೆ

ಹಾವೇರಿಯಲ್ಲಿ ಸಾಲ ಬಾಧೆ ತಾಳಲಾರದೆ ರೈತ ಆತ್ಮಹತ್ಯೆ

Haveri News: ಸಾಲ ಬಾಧೆ ತಾಳಲಾರದೆ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾವೇರಿ ತಾಲೂಕಿನ ದೇವಗಿರಿ ಗ್ರಾಮದಲ್ಲಿ ನಡೆದಿದೆ. ಒಂದು ವಾರದ ಹಿಂದೆ ಸಾಲ ಬಾಧೆಯಿಂದ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಅವರು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಚೇತರಿಸಿಕೊಂಡು ಮನೆಗೆ ಮರಳಿದ್ದರು. ಆದರೆ ಗುರುವಾರ ಮಧ್ಯಾಹ್ನ ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಒಂದಲ್ಲ ಎರಡಲ್ಲ ಬರೋಬ್ಬರಿ 50 ಲಕ್ಷ ರೂಪಾಯಿ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ತಹಶೀಲ್ದಾರ್

50 ಲಕ್ಷ ರೂ. ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ತಹಶೀಲ್ದಾರ್

Lokayukta Raid: ಬರೋಬ್ಬರಿ 1 ಕೋಟಿ ರೂಪಾಯಿ ಲಂಚಕಕೆ ಬೇಡಿಕೆ ಇಟ್ಟು, 50 ಲಕ್ಷ ರೂಪಾಯಿ ಲಂಚದ ಹಣ ಸ್ವೀಕರಿಸುತ್ತಿದ್ದ ವೇಳೆ ಧಾರವಾಡ ತಹಸೀಲ್ದಾರ್ ಸಚ್ಚಿದಾನಂದ ಕುಚನೂರ ಲೋಕಾಯುಕ್ತ ಅಧಿಕಾರಿಗಳಿಗೆ ರೆಡ್‌ ಹ್ಯಾಂಡ್‌ ಆಗಿ ಸಿಕ್ಕಿ ಬಿದ್ದಿದ್ದಾರೆ. ಲಂಚದ ಹಣ ಪಡೆಯುತ್ತಿದ್ದಾಗಲೇ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

Loading...