ತುಂಗಭದ್ರಾ ನದಿಯಲ್ಲಿ ಮುಳುಗಿ ಬೆಂಗಳೂರಿನ ಯುವಕರಿಬ್ಬರ ಸಾವು
ಎಲೆಬಿಚ್ಚಾಲಿ ಗುರುರಾಯರ ಏಕಶಿಲಾ ವೃಂದಾವನ ದರ್ಶನಕ್ಕೆ ಬೆಂಗಳೂರಿನಿಂದ 15 ಜನ ಸ್ನೇಹಿತರ ತಂಡ ಆಗಮಿಸಿತ್ತು. ಈ ವೇಳೆ ಮುತ್ತುರಾಜ್ ಮತ್ತು ಮದನ್ ನದಿಯಲ್ಲಿ ಈಜಲು ತೆರಳಿದ್ದಾರೆ. ನದಿಯಲ್ಲಿ ತಗ್ಗು ಪ್ರದೇಶದಲ್ಲಿ ಸಿಲುಕಿ ಒದ್ದಾಡಿ ಮೃತಪಟ್ಟಿದ್ದಾರೆ ಎನ್ನಲಾಗಿದ್ದು, ಶವಗಳನ್ನು ಹೊರ ತೆಗೆದು ಮರಣೋತ್ತರ ಪರೀಕ್ಷೆಗಾಗಿ ರವಾನಿಸಲಾಗಿದೆ.