ವಕ್ಫ್​ ತಿದ್ದುಪಡಿ ಮಸೂದೆ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ
ಕರ್ನಾಟಕ
Drowned: ತುಂಗಭದ್ರಾ ನದಿಯಲ್ಲಿ ಮುಳುಗಿ ಬೆಂಗಳೂರಿನ ಯುವಕರಿಬ್ಬರ ಸಾವು

ತುಂಗಭದ್ರಾ ನದಿಯಲ್ಲಿ ಮುಳುಗಿ ಬೆಂಗಳೂರಿನ ಯುವಕರಿಬ್ಬರ ಸಾವು

ಎಲೆಬಿಚ್ಚಾಲಿ ಗುರುರಾಯರ ಏಕಶಿಲಾ ವೃಂದಾವನ ದರ್ಶನಕ್ಕೆ ಬೆಂಗಳೂರಿನಿಂದ 15 ಜನ ಸ್ನೇಹಿತರ ತಂಡ ಆಗಮಿಸಿತ್ತು. ಈ ವೇಳೆ ಮುತ್ತುರಾಜ್ ಮತ್ತು ಮದನ್ ನದಿಯಲ್ಲಿ ಈಜಲು ತೆರಳಿದ್ದಾರೆ. ನದಿಯಲ್ಲಿ ತಗ್ಗು ಪ್ರದೇಶದಲ್ಲಿ ಸಿಲುಕಿ ಒದ್ದಾಡಿ ಮೃತಪಟ್ಟಿದ್ದಾರೆ ಎನ್ನಲಾಗಿದ್ದು, ಶವಗಳನ್ನು ಹೊರ ತೆಗೆದು ಮರಣೋತ್ತರ ಪರೀಕ್ಷೆಗಾಗಿ ರವಾನಿಸಲಾಗಿದೆ.

Self Harming: ಬೆಂಗಳೂರಿನಲ್ಲಿ ಮತ್ತೊಬ್ಬ ಬಿಜೆಪಿ ಕಾರ್ಯಕರ್ತ ವಿಡಿಯೋ ಮಾಡಿಕೊಂಡು ಆತ್ಮಹತ್ಯೆ

ಬೆಂಗಳೂರಿನಲ್ಲಿ ಮತ್ತೊಬ್ಬ ಬಿಜೆಪಿ ಕಾರ್ಯಕರ್ತ ವಿಡಿಯೊ ಮಾಡಿ ಆತ್ಮಹತ್ಯೆ

ಫೇಸ್ಬುಕ್‌ನಲ್ಲಿ ವಿಡಿಯೋ ಮಾಡಿಕೊಳ್ಳುತ್ತಾ ಬಿಜೆಪಿ ಕಾರ್ಯಕರ್ತ ಪ್ರವೀಣ್ ಗೌಡ ಬೇಲೂರು (35) ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಆನೇಕಲ್ ಪಟ್ಟಣದ ಎಸ್‌ವಿಎಂ ಸ್ಕೂಲ್ ಬಳಿ ಈ ಘಟನೆ ನಡೆದಿದೆ. ಸಾವಿಗೆ ಕಾರಣರಾದವರ ಹೆಸರುಗಳನ್ನು ವಿಡಿಯೋದಲ್ಲಿ ರೆಕಾರ್ಡ್ ಮಾಡಿರುವ ಪ್ರವೀಣ್, ಇವರುಗಳಿಗೆ ಶಿಕ್ಷೆ ಆಗಬೇಕು ಎಂದು ಕೋರಿದ್ದಾರೆ.

Bengaluru Traffic Alert: ಇಂದು ಐಪಿಎಲ್‌ ಪಂದ್ಯದ ಕಾರಣ ಸಂಚಾರ ಬದಲಾವಣೆ; ಬೆಂಗಳೂರಿಗರು ಗಮನಿಸಿ

ಇಂದು ಆರ್‌ಸಿಬಿ ಪಂದ್ಯದ ಕಾರಣ ಸಂಚಾರ ಬದಲಾವಣೆ; ಬೆಂಗಳೂರಿಗರು ಗಮನಿಸಿ

RCB vs PBKS: ಪಂದ್ಯವನ್ನು ನೋಡಲು ತೆರಳುವವರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) ವಿಶೇಷ ಬಸ್ ಸೇವೆ ಒದಗಿಸಿದೆ. ಜತೆಗೆ ಬೆಂಗಳೂರು ಮೆಟ್ರೊ ರೈಲು ನಿಗಮ (ಬಿಎಂಆರ್‌ಸಿಎಲ್‌) ಕೂಡ ಎಲ್ಲ ನಾಲ್ಕು ಮೆಟ್ರೊ ಟರ್ಮಿನಲ್‌ಗಳಿಂದ ಕೊನೆಯ ಮೆಟ್ರೊ ರೈಲು ಸೇವೆಯನ್ನು ರಾತ್ರಿ 12.30ರವರೆಗೆ ವಿಸ್ತರಿಸಿದೆ.

Road Accident: ಭೀಕರ ಅಪಘಾತ, ರಸ್ತೆ ತಡೆಗೋಡೆಗೆ ಪಿಕಪ್‌ ಡಿಕ್ಕಿಯಾಗಿ ನಾಲ್ವರು ಸಾವು

ಭೀಕರ ಅಪಘಾತ, ರಸ್ತೆ ತಡೆಗೋಡೆಗೆ ಪಿಕಪ್‌ ಡಿಕ್ಕಿಯಾಗಿ ನಾಲ್ವರು ಸಾವು

ಮೃತಪಟ್ಟ ನಾಲ್ವರು ತೆಲಂಗಾಣದ ಹಿಂದೂಪುರ ನಿವಾಸಿಗಳು ಎಂದು ತಿಳಿದು ಬಂದಿದೆ. ಗೂಡ್ಸ್ ಪಿಕಪ್ ವಾಹನ ಚಾಲಕ ಆನಂದ್‌ಗೆ ಗಂಭೀರವಾದ ಗಾಯಗಳಾಗಿವೆ. ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಾಲಕನಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಕುರಿ ಖರೀದಿಸಲು ಯಾದಗಿರಿ ಜಿಲ್ಲೆಯ ಶಹಾಪುರಕ್ಕೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ. ಅಪಘಾತದ ಕುರಿತು ದೇವದುರ್ಗ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Waqf Bill: ವಕ್ಫ್‌ ಕಾಯಿದೆ ತಿದ್ದುಪಡಿ ವಿರೋಧಿಸಿ ಇಂದು ಮಂಗಳೂರಿನಲ್ಲಿ ಬೃಹತ್‌ ಪ್ರತಿಭಟನೆ, ಸಂಚಾರ ಮಾರ್ಗ ಬದಲು

ವಕ್ಫ್‌ ತಿದ್ದುಪಡಿ ವಿರೋಧಿಸಿ ಇಂದು ಮಂಗಳೂರಿನಲ್ಲಿ ಬೃಹತ್‌ ಪ್ರತಿಭಟನೆ

ಪ್ರತಿಭಟನೆ ವೇಳೆ ರಸ್ತೆ ಸಂಚಾರ ನಿರ್ಬಂಧಿಸದಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ. ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಎನ್​ಹೆಚ್ 73 ಬಂದ್ ಮಾಡಿ ಪ್ರತಿಭಟನೆ ನಡೆಸುವಂತಿಲ್ಲ. ಸರ್ಕಾರ ಅನುಮತಿ ನೀಡಿದ ಸ್ಥಳದಲ್ಲಿ ಮಾತ್ರ ಪ್ರತಿಭಟನೆ ನಡೆಸಬೇಕು. ಸರ್ಕಾರ ಅನುಮತಿ ನೀಡುವಾಗ ಸುಪ್ರೀಂ ಕೋರ್ಟ್ ವಿಚಾರಣೆ ಗಮನದಲ್ಲಿಟ್ಟುಕೊಳ್ಳಬೇಕು ಎಂದು ಪೀಠ ಹೇಳಿದೆ.

CET Exam: ಸಿಇಟಿ ಪರೀಕ್ಷೆಗೆ ಅಭ್ಯರ್ಥಿಗಳ ಜನಿವಾರ ತೆಗೆಸಿದ ಅಧಿಕಾರಿಗಳು, ಖಂಡನೆ

ಸಿಇಟಿ ಪರೀಕ್ಷೆಗೆ ಅಭ್ಯರ್ಥಿಗಳ ಜನಿವಾರ ತೆಗೆಸಿದ ಅಧಿಕಾರಿಗಳು, ಖಂಡನೆ

ವರ್ಷಪೂರ್ತಿ ಕಷ್ಟಪಟ್ಟು ಅಧ್ಯಯನ ಮಾಡಿ ಒಳ್ಳೆಯ ಭವಿಷ್ಯಕ್ಕಾಗಿ ಸಿದ್ಧತೆ ಮಾಡಿಕೊಂಡು ಬಂದಿದ್ದ ವಿದ್ಯಾರ್ಥಿಗಳ ಜನಿವಾರ ಬಿಚ್ಚಿಸುವ ಅಧಿಕಾರಿಗಳ ಕೃತ್ಯ ಬ್ರಾಹ್ಮಣ ಮತ್ತು ಹಿಂದೂ ವಿರೋಧಿಯಾಗಿದೆ ಎಂದು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಮತ್ತು ವಿಪ್ರ ಸಂಘಟನೆಗಳ ಒಕ್ಕೂಟ ತೀವ್ರವಾಗಿ ಖಂಡಿಸಿದೆ.

Trends Footwear: ಟ್ರೆಂಡ್ಸ್ ಫುಟ್‌ವೇರ್‌ 'ಪವರ್ ಪ್ಲೇ' ಸ್ಪರ್ಧೆ; ವಿಜೇತರಿಗೆ ಕ್ರಿಕೆಟ್ ಪಂದ್ಯ ವೀಕ್ಷಿಸಲು ಜೋಡಿ ಟಿಕೆಟ್, ಗಿಫ್ಟ್ ವೋಚರ್!

ಟ್ರೆಂಡ್ಸ್ ಫುಟ್‌ವೇರ್‌ 'ಪವರ್ ಪ್ಲೇ' ಸ್ಪರ್ಧೆ

Trends Footwear: ಟ್ರೆಂಡ್ಸ್ ಫುಟ್‌ವೇರ್‌ನಿಂದ ‘ಪವರ್ ಪ್ಲೇʼ ಎಂಬ ಸ್ಪರ್ಧೆಯನ್ನು ಪರಿಚಯಿಸುತ್ತಿದೆ. ಇದು ಸೀಮಿತವಾದ ಅವಧಿಯಾಗಿದ್ದು, ಇದರಲ್ಲಿ ಯಾವ ಗ್ರಾಹಕರು ಮೂರು ಸಾವಿರ ರೂಪಾಯಿ ಅಥವಾ ಅದಕ್ಕಿಂತ ಹೆಚ್ಚಿನ ಮೊತ್ತದ ಖರೀದಿ ಮಾಡುತ್ತಾರೋ ಅಂಥವರು ಎಕ್ಸ್‌ಕ್ಲೂಸಿವ್ ಆಗಿ ಜೋಡಿ ಟಿಕೆಟ್‌ಗಳು ಮತ್ತು ಅತ್ಯಾಕರ್ಷಕವಾದ ಗಿಫ್ಟ್ ವೋಚರ್‌ಗಳನ್ನು ಗೆಲ್ಲುವ ಅವಕಾಶಗಳನ್ನು ಪಡೆದುಕೊಳ್ಳುತ್ತಾರೆ. ಈ ಕುರಿತ ವಿವರ ಇಲ್ಲಿದೆ.

Caste Census:‌ ಮೇ 2ರ ಸಚಿವ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿಯ ಬಗ್ಗೆ ಅಂತಿಮ ನಿರ್ಧಾರ: ಎಚ್.ಕೆ.ಪಾಟೀಲ್

ಮೇ 2ರಂದು ಜಾತಿ ಗಣತಿ ವರದಿಯ ಬಗ್ಗೆ ಅಂತಿಮ ನಿರ್ಧಾರ

H.K. Patil: ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ 2015ರ ದತ್ತಾಂಶಗಳ ಅಧ್ಯಯನ ವರದಿಯನ್ನು ರಾಜ್ಯ ಸಚಿವ ಸಂಪುಟ ಸುದೀರ್ಘವಾಗಿ ಚರ್ಚೆ ನಡೆಸಿದ್ದು, ಈ ಬಗ್ಗೆ ಮತ್ತಷ್ಟು ಪೂರಕ ಮಾಹಿತಿ ಒದಗಿಸಲು ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸಚಿವ ಎಚ್.ಕೆ.ಪಾಟೀಲ್ ತಿಳಿಸಿದ್ದಾರೆ. ಮೇ 2ರಂದು ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಚರ್ಚಿಸಿ ಅಂತಿಮ ತೀರ್ಮಾನಕ್ಕೆ ಬರಲಾಗುತ್ತದೆ ಎಂದಿದ್ದಾರೆ.

Lorry Strike Called Off: ಸಚಿವ ರಾಮಲಿಂಗಾ ರೆಡ್ಡಿ ಸಂಧಾನ ಯಶಸ್ವಿ; ಲಾರಿ ಮುಷ್ಕರ ಅಂತ್ಯ

ರಾಜ್ಯದಲ್ಲಿ ಲಾರಿ ಮುಷ್ಕರ ಅಂತ್ಯ

Ramalinga Reddy: ವಿವಿಧ ಬೇಡಿಕೆ ಈಡೇರಿಸುವಂತೆ 3 ದಿನಗಳಿಂದ ಲಾರಿ ಮಾಲೀಕರ ಸಂಘ ನಡೆಸುತ್ತಿದ್ದ ಅನಿರ್ದಿಷ್ಟಾವಧಿ ಮುಷ್ಕರ ಅಂತ್ಯವಾಗಿದೆ. ಏ. 14ರಿಂದ ರಾಜ್ಯದಲ್ಲಿ ಮುಷ್ಕರ ನಡೆಸುತ್ತಿದ್ದ ಲಾರಿ ಮಾಲೀಕರೊಂದಿಗೆ ಸಚಿವ ರಾಮಲಿಂಗಾ ರೆಡ್ಡಿ ಗುರುವಾರ (ಏ. 17) ನಡೆಸಿದ ಸಂಧಾನ ಸಭೆ ಯಶಸ್ವಿಯಾಗಿದೆ.

ED Raid: 50 ಕೋಟಿ ರೂ. ಪಾವತಿಸಿ ಶ್ವಾನ ಖರೀದಿಸಿದ್ದಾಗಿ ಘೋಷಿಸಿದ್ದ ಬೆಂಗಳೂರು ವ್ಯಕ್ತಿಗೆ ಇಡಿ ಶಾಕ್‌; ಮನೆ ಮೇಲೆ ದಾಳಿ

50 ಕೋಟಿ ರೂ. ಪಾವತಿಸಿ ಶ್ವಾನ ಖರೀದಿಸಿದ ವ್ಯಕ್ತಿಗೆ ಇಡಿ ಶಾಕ್‌

Cadabomb Okami: ಸುಮಾರು 50 ಕೋಟಿ ರೂ. ಪಾವತಿಸಿ ಅಪರೂಪದ ಶ್ವಾನತಳಿ ವುಲ್ಫ್‌ಡಾಗ್‌ ಅನ್ನು ಖರೀದಿಸಿದ್ದಾಗಿ ಹೇಳಿಕೊಂಡಿದ್ದ ಬೆಂಗಳೂರಿನ ಎಸ್‌.ಸತೀಶ್‌ಗೆ ಜಾರಿ ನಿರ್ದೇಶನಾಲಯ ಶಾಕ್‌ ನೀಡಿದೆ. ಅವರ ಮನೆ ಮೇಲೆ ದಾಳಿ ನಡೆಸಿ ದಾಖಲೆ ಪರಿಶೀಲಿಸಿದೆ.

Health: ವರ್ಟಿಗೋ ಅಥವಾ “ಚಕ್ಕರ್” ಕುರಿತು ತಿಳಿಯಬೇಕೇ? ಈ ಒಳನೋಟಪೂರ್ಣ ಅಧ್ಯಯನ ವರದಿ ಓದಿ!

ವರ್ಟಿಗೋ ಅಥವಾ “ಚಕ್ಕರ್” ಕುರಿತು ತಿಳಿಯಬೇಕೇ?

ವಿಶ್ವಾದ್ಯಂತ ಪ್ರತೀ 10 ಜನರಲ್ಲಿ ಒಬ್ಬರು ತಮ್ಮ ಜೀವನ ದಲ್ಲಿ ಯಾವುದಾದರೂ ಒಂದು ಸಂದರ್ಭ ದಲ್ಲಿ ವರ್ಟಿಗೋ ಸಮಸ್ಯೆ ಎದುರಿಸುತ್ತಾರೆ. ತಲೆಸುತ್ತು, ಅಸ್ಥಿರತೆ, ಮತ್ತು ವಾಕರಿಕೆಯಂತಹ ಆರಂಭಿಕ ಲಕ್ಷಣಗಳನ್ನು ಕಾಣಬಹುದಾದರೆ ಆ ಲಕ್ಷಣಗಳನ್ನು ಸಾಮಾನ್ಯವಾಗಿ ನಿರ್ಲಕ್ಷಿಸಲಾಗುತ್ತದೆ. ಆರಂಭಿಕ ಹಂತದಲ್ಲಿಯೇ ಈ ಸಮಸ್ಯೆ ಪತ್ತೆ ಹಚ್ಚುವುದರಿಂದ ಮತ್ತು ಸೂಕ್ತ ಚಿಕಿತ್ಸೆ ನೀಡುವುದರಿಂದ ಭವಿಷ್ಯ ದಲ್ಲು ಉಂಟಾಗುವ ಹೆಚ್ಚಿನ ಸಮಸ್ಯೆಗಳನ್ನು ತಡೆಯಬಹುದು

ಬೆಂಗಳೂರಿನ ನೀರಿನ ಬಿಕ್ಕಟ್ಟು ಪರಿಹರಿಸಲು ಬೋಸನ್ ವೈಟ್‌ವಾಟರ್ ನಿಂದ ವಿಚಾರ ಸಂಕಿರಣ

ನೀರಿನ ಬಿಕ್ಕಟ್ಟು ಪರಿಹರಿಸಲು ಬೋಸನ್ ವೈಟ್‌ವಾಟರ್ ನಿಂದ ವಿಚಾರ ಸಂಕಿರಣ

ನೀರಿನ ಮರುಬಳಕೆ ಮತ್ತು ಮರುಬಳಕೆ ಪರಿಸರ ವ್ಯವಸ್ಥೆಯ ಪ್ರಮುಖ ಪಾಲುದಾರರನ್ನು ಒಟ್ಟು ಗೂಡಿಸುವುದು ಈ ಕಾರ್ಯಕ್ರಮದ ಹಿಂದಿನ ಉದ್ದೇಶವಾಗಿದೆ. ಬೆಂಗಳೂರಿನ ನೀರಿನ ಕೊರತೆಯ ಸಮಸ್ಯೆಯನ್ನು ಪರಿಹರಿಸಲು ಈ ಮೌಲ್ಯಯುತ ಸರಪಳಿಯ ಪ್ರತಿಯೊಬ್ಬ ಸದಸ್ಯನು ಅಂದರೆ ಮೂಲದಿಂದ ಅಂತಿಮ ಗ್ರಾಹಕರವರೆಗೆ ಎಲ್ಲರೂ ಮುಖ ಪಾತ್ರ ವಹಿಸುತ್ತಾರೆ

Caste Census: ಜಾತಿ ಗಣತಿ ವರದಿ: ಅಂತಿಮ ತೀರ್ಮಾನಕ್ಕೆ ಬರಲಾಗದೆ ಸಚಿವ ಸಂಪುಟ ಸಭೆ ಮುಕ್ತಾಯ

ಜಾತಿ ಗಣತಿ ವರದಿ: ತೀರ್ಮಾನಕ್ಕೆ ಬರಲಾಗದೆ ಸಚಿವ ಸಂಪುಟ ಸಭೆ ಮುಕ್ತಾಯ

CM Siddaramaiah: ರಾಜ್ಯಾದ್ಯಂತ ಭಾರಿ ಸಂಚಲನ ಮೂಡಿಸಿದ ಜಾತಿ ಗಣತಿ ವರದಿಯ ಭವಿಷ್ಯ ನಿರ್ಧರಿಸಲು ಕರೆಯಲಾಗಿದ್ದ ಸಚಿವ ಸಂಪುಟ ಸಭೆ ಮುಕ್ತಾಯವಾಗಿದ್ದು, ಹಲವು ಸಚಿವರು ವಿರೋಧ ವ್ಯಕ್ತಪಡಿಸಿದ ಹಿನ್ನಲೆಯಲ್ಲಿ ಯಾವುದೇ ಮಹತ್ವದ ನಿರ್ಧಾರ ಕೈಗೊಳ್ಳಲು ಸಾಧ್ಯವಾಗಿಲ್ಲ.

Bangalore News: ಸಾಯಿ ಬಾಬಾ ಪಾದುಕೆ ದರ್ಶನ ಪಡೆಯುತ್ತಿರುವ ಭಕ್ತರು

ಸಾಯಿ ಬಾಬಾ ಪಾದುಕೆ ದರ್ಶನ ಪಡೆಯುತ್ತಿರುವ ಭಕ್ತರು

ಶಿರಾಡಿಯಿಂದ ಆಗಮಿಸಿದ ಪಾದುಕೆಗಳನ್ನ ಮಲ್ಲೇಶ್ವರಂ ಪದವಿಪೂರ್ವ ಶಿಕ್ಷಣ ಇಲಾಖೆ ಸನಿಹದಿಂದ 14ನೇ ತಿರುವಿನಲ್ಲಿರುವ ಸಾಯಿ ಮಂದಿ ರಕ್ಕೆ ಉತ್ಸವ ಮೆರವಣಿಗೆ ಮುಖಾಂತರ ತಂದು ಸಾರ್ವಜನಿಕ ಭಕ್ತರ ದರ್ಶನಕ್ಕೆ ಬೆಳಿಗ್ಗೆ 6 ರಿಂದ ರಾತ್ರಿ 10ರವರೆಗೆ ಇಡಲಾಗಿದೆ. ಸಾವಿರಾರು ಭಕ್ತರು ಬೆಳಗಿನಿಂದಲೇ ಸರತಿ ಸಾಲಿನಲ್ಲಿ ನಿಂತು ಬಾಭರವರ ಪಾದುಕೆ ದರ್ಶನ ಪಡೆಯುತ್ತಿದ್ದಾರೆ.

ಇಎಸ್ಐ ಆಸ್ಪತ್ರೆಯ ಚರ್ಮರೋಗ ವಿಭಾಗದ ಮುಖ್ಯಸ್ಥ ಡಾ.ಗಿರೀಶ್'ಗೆ ಡಾ.ಅಂಬೇಡ್ಕರ್ ರಾಷ್ಟ್ರೀಯ ಪ್ರಶಸ್ತಿ

ಡಾ.ಗಿರೀಶ್ʼಗೆ ಡಾ.ಅಂಬೇಡ್ಕರ್ ರಾಷ್ಟ್ರೀಯ ಪ್ರಶಸ್ತಿ

ನವದೆಹಲಿಯ ನಾಗರಿ ಲಿಪಿ ಪರಿಷದ್ ನ ತಮಿಳುನಾಡು ಘಟಕದಿಂದ ದೆಹಲಿಯಲ್ಲಿ ಡಾ ಅಂಬೇಡ್ಕರ್ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಮಾಡಲಾಯಿತು. ಡಾ ಅಂಬೇಡ್ಕರ್ ಅವರ 134 ಜಯಂತಿ ಹಿನ್ನೆಲೆಯಲ್ಲಿ ಕರ್ನಾಟಕ, ಗುಜರಾತ್, ಮಧ್ಯ ಪ್ರದೇಶ, ಗೋವಾ, ಮಹಾರಾಷ್ಟ್ರ, ದೆಹಲಿ, ತಮಿಳುನಾಡು, ತೆಲಂಗಾಣ, ಹಾಗೂ ನಾರ್ವೆ ವಿದೇಶದಿಂದ ಕೂಡ ಗಣ್ಯರು ಭಾಗವಹಿಸಿದ್ದರು.

Physical Abuse: ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ; ಮಂಗಳೂರಿನಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ

ಮಂಗಳೂರಿನಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ

Crime News: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಹೊರ ವಲಯದಲ್ಲಿರುವ ಕಲ್ಲಾಪು ನಿರ್ಜನ ಪ್ರದೇಶದಲ್ಲಿ ಯುವತಿಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ. ರಿಕ್ಷಾ ಚಾಲಕ ಸೇರಿ ಮೂವರು ಬುಧವಾರ (ಏ. 16) ರಾತ್ರಿ ಅತ್ಯಾಚಾರ ಎಸಗಿದ್ದಾರೆ ಎನ್ನಲಾಗಿದೆ. ಸದ್ಯ ತನಿಖೆ ಮುಂದುವರಿದಿದೆ.

BY Vijayendra: ಜನಾಕ್ರೋಶ ಯಾತ್ರೆಯ ಮೊದಲ ಹಂತ ಯಶಸ್ವಿ: ಬಿ.ವೈ.ವಿಜಯೇಂದ್ರ

ಜನಾಕ್ರೋಶ ಯಾತ್ರೆಯ ಮೊದಲ ಹಂತ ಯಶಸ್ವಿ: ಬಿ.ವೈ.ವಿಜಯೇಂದ್ರ

BY Vijayendra: ಜನಾಕ್ರೋಶ ಯಾತ್ರೆಯ ಮೊದಲ ಹಂತ ಯಶಸ್ವಿಯಾಗಿ ಮುಗಿದಿದೆ. ಸಿದ್ದರಾಮಯ್ಯನವರೇ ನೀವು ಮುಖ್ಯಮಂತ್ರಿಗಳಾದ ಬಳಿಕ ರೈತರ ಆತ್ಮಹತ್ಯೆ ಹೆಚ್ಚಾಗಿದೆ. ಹಿಂದೂ ಹೆಣ್ಮಕ್ಕಳ ಮೇಲೆ ಅಪಮಾನ, ಲವ್ ಜಿಹಾದ್ ಹೆಚ್ಚಾಗಿದೆ. ಗೋಹತ್ಯೆಗಳು ಜಾಸ್ತಿ ಆಗಿದೆ ಎಂದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಆರೋಪಿಸಿದ್ದಾರೆ.

Accident news: ಮೆಟ್ರೋ ವಯಾಡಕ್ಟ್‌ ಬಿದ್ದು ಆಟೋ ಚಾಲಕ ಸಾವು ಪ್ರಕರಣ: ಮೂವರ ಮೇಲೆ ಎಫ್‌ಐಆರ್

ಮೆಟ್ರೋ ವಯಾಡಕ್ಟ್‌ ಬಿದ್ದು ಆಟೋ ಚಾಲಕ ಸಾವು ಪ್ರಕರಣ: ಮೂವರ ಮೇಲೆ ಎಫ್‌ಐಆರ್

ಮೆಟ್ರೋ ಕಾಮಗಾರಿ ಎಡವಟ್ಟಿಗೆ ಆಟೋ ಚಾಲಕ ಬಲಿಯಾದ ಘಟನೆ ಬೆಂಗಳೂರಿನ ಯಲಹಂಕದ ಕೋಗಿಲು ಕ್ರಾಸ್ ಬಳಿ ನಡೆದಿತ್ತು. ಘಟನೆಯಲ್ಲಿ ಆಟೋ ಚಾಲಕ ಖಾಸಿಂ ಸಾಬ್ (35) ಸ್ಥಳದಲ್ಲೇ ಮೃತಪಟ್ಟಿದ್ದರು. ವಯಾಡೆಕ್ಟ್ ಲಾರಿಯಿಂದ ಜಾರಿ ಪಕ್ಕದಲ್ಲಿದ್ದ ಆಟೋ ಮೇಲೆ ಬಿದ್ದು ಆಟೋ ಅಪ್ಪಚ್ಚಿಯಾಗಿತ್ತು. ಅದರಲ್ಲಿದ್ದ ಚಾಲಕ ಸ್ಥಳದಲ್ಲೇ ಸಾವನಪ್ಪಿದ್ದರು.

Bank of Bhagyalakshmi Movie: ದೀಕ್ಷಿತ್ ಶೆಟ್ಟಿ ಅಭಿನಯದ ‘ಬ್ಯಾಂಕ್ ಆಫ್ ಭಾಗ್ಯಲಕ್ಷ್ಮಿ’ ಚಿತ್ರದ ಫಸ್ಟ್‌ ಸಾಂಗ್‌ ಔಟ್‌

‘ಬ್ಯಾಂಕ್ ಆಫ್ ಭಾಗ್ಯಲಕ್ಷ್ಮಿ’ ಚಿತ್ರದ ಫಸ್ಟ್‌ ಸಾಂಗ್‌ ಔಟ್‌

Bank of Bhagyalakshmi Movie: ದೀಕ್ಷಿತ್ ಶೆಟ್ಟಿ ನಾಯಕರಾಗಿ ನಟಿಸಿರುವ, ಅಭಿಷೇಕ್ ಎಂ. ನಿರ್ದೇಶನದ ʼಬ್ಯಾಂಕ್ ಆಫ್ ಭಾಗ್ಯಲಕ್ಷ್ಮೀʼ ಚಿತ್ರದ ಮೊದಲ ಹಾಡು MRT ಮ್ಯೂಸಿಕ್ (ಲಹರಿ) ಮೂಲಕ ಬಿಡುಗಡೆಯಾಗಿದೆ. ಈ ಕುರಿತ ವಿವರ ಇಲ್ಲಿದೆ.

B. Suresh: ಬೆಂಗಳೂರಿನಲ್ಲಿ ಏ.20ರಂದು ಶೈಲಜಾ ನಾಗ್‌ - ಬಿ.ಸುರೇಶ್‌ ದಂಪತಿಯ ಪುತ್ರಿ ಚಂದನಾ ನಾಗ್‌ ಭರತನಾಟ್ಯ ರಂಗಪ್ರವೇಶ

ಬೆಂಗಳೂರಿನಲ್ಲಿ ಏ.20ರಂದು ಚಂದನಾ ನಾಗ್‌ ಭರತನಾಟ್ಯ ರಂಗಪ್ರವೇಶ

B. Suresh's Daughter: ನಟನೆ, ನಿರ್ಮಾಣ, ನಿರ್ದೇಶನ, ರಂಗಭೂಮಿ ಹೀಗೆ ಹಲವು ವಿಭಾಗಗಳಲ್ಲಿ ಗುರುತಿಸಿಕೊಂಡಿರುವ ಬಿ. ಸುರೇಶ ಮತ್ತು ನಟಿ, ನಿರ್ಮಾಪಕಿ ಶೈಲಜಾ ನಾಗ್ ಅವರ ಪುತ್ರಿ ಚಂದನಾ ಎಸ್. ನಾಗ್ ಅವರು ಏಪ್ರಿಲ್‌ 20ರಂದು ಬೆಂಗಳೂರಿನ ಜೆಸಿ ರಸ್ತೆಯಲ್ಲಿನ ಎಡಿಎ ರಂಗಮಂದಿರದಲ್ಲಿ ಸಂಜೆ 5.30ಕ್ಕೆ ರಂಗಪ್ರವೇಶ ಮಾಡಲಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

Congress Protest: ಅಗತ್ಯ ವಸ್ತುಗಳ ಬೆಲೆ ಏರಿಸಿದ ಮೋದಿ ಮಧ್ಯಮ ವರ್ಗ, ಬಡವರ ವಿರೋಧಿ: ಸಿದ್ದರಾಮಯ್ಯ

ಅಗತ್ಯ ವಸ್ತುಗಳ ಬೆಲೆ ಏರಿಸಿದ ಮೋದಿ ಬಡವರ ವಿರೋಧಿ: ಸಿದ್ದರಾಮಯ್ಯ

CM Siddaramaiah: ʼʼಗೊಬ್ಬರ, ಔಷಧಿ, ರಾಗಿ, ಗೋಧಿ, ಡೀಸೆಲ್, ಪೆಟ್ರೋಲ್ ಎಲ್ಲದರ ಬೆಲೆ ಆಕಾಶಕ್ಕೇರಿಸಿದ ಪ್ರಧಾನಿ ನರೇಂದ್ರ ಮೋದಿ ಭಾರತದ ಮಧ್ಯಮ ವರ್ಗ ಮತ್ತು ಬಡವರ ವಿರೋಧಿ. ಬಿಜೆಪಿ ಯಾವ‌ ಮುಖ ಇಟ್ಟುಕೊಂಡು ನಮ್ಮ ಸರ್ಕಾರದ ವಿರುದ್ಧ ಮಾತಾಡುತ್ತಿದೆ?'' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

Accident Case: ಅಪಘಾತದಲ್ಲಿ ಬಾಲಕನ ಸಾವಿಗೆ ಕಾರಣನಾದ ಬಿಬಿಎಂಪಿ ಲಾರಿ ಚಾಲಕ ಆಸ್ಪತ್ರೆಯಲ್ಲಿ ಸಾವು

ಬಾಲಕನ ಸಾವಿಗೆ ಕಾರಣನಾದ ಬಿಬಿಎಂಪಿ ಲಾರಿ ಚಾಲಕ ಆಸ್ಪತ್ರೆಯಲ್ಲಿ ಸಾವು

ಬೆಂಗಳೂರಿನ ಥಣಿಸಂದ್ರದ ಹೆಗಡೆ ನಗರದ ಬಳಿ ಮಾರ್ಚ್ 29ರಂದು ಬಿಬಿಎಂಪಿ ಕಸದ ಲಾರಿ ಅಪಘಾತವಾಗಿತ್ತು‌. ಬಿಬಿಎಂಪಿ ಲಾರಿ, ಬೈಕ್​ಗೆ ಗುದ್ದಿದ್ದ ಪರಿಣಾಮ 10 ವರ್ಷದ ಬಾಲಕ ಐಮಾನ್ ಸಾವನ್ನಪ್ಪಿದ್ದ. ಬಾಲಕನ ತಂದೆ ಸಣ್ಣಗಾಯಗಳಿಂದ ಪಾರಾಗಿದ್ದರು. ಈ ಸಂದರ್ಭದಲ್ಲಿ ಅಲ್ಲಿ ಸೇರಿ ಒಂದೇ ಸಮುದಾಯದ ಹಲವು ಮಂದಿ ಚಾಲಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದರು.

Dodda Alada Mara: ಬೆಂಗಳೂರಿನಲ್ಲಿದೆ ದೇಶದ 4ನೇ ದೊಡ್ಡ ಆಲದ ಮರ; ಪ್ರಕೃತಿಪ್ರಿಯರು ಭೇಟಿ ನೀಡಲೇಬೇಕಾದ ಜಾಗ ಇದು

ಬೆಂಗಳೂರಿನಲ್ಲಿದೆ ದೇಶದ 4ನೇ ದೊಡ್ಡ ಆಲದ ಮರ

Big Banyan Tree: ಪ್ರಕೃತಿ ಸಮತೋಲನಕ್ಕೆ ಆಲದ ಮರಗಳ ಕೊಡುಗೆ ಗಣನೀಯ. ವಿಶಾಲವಾಗಿ ಹರಡಿ ಬೆಳೆಯುವ ಇವು ಅನೇಕ ಜೀವ ವೈವಿಧ್ಯಗಳಿಗೆ ಆಶ್ರಯತಾಣ ಎನಿಸಿಕೊಳ್ಳುತ್ತವೆ. ಬೆಂಗಳೂರಿನಲ್ಲಿ ಅಂತಹ ಬೃಹತ್‌ ಗ್ರಾತದ ಆಲದ ಮರವೊಂದಿದೆ. ಬರೋಬ್ಬರಿ 3 ಎಕ್ರೆಯಲ್ಲಿ ಹರಡಿರುವ ಈ 1 ಮರ ಪ್ರವಾಸಿಗರ ಆಕರ್ಷಣೆಯ ಕೇಂದ್ರಬಿಂದು ಎನಿಸಿಕೊಂಡಿದೆ. ಇಲ್ಲಿಗೆ ತೆರಳುವುದು ಹೇಗೆ ಎನ್ನುವ ವಿವರ ಇಲ್ಲಿದೆ.

Shakti Scheme: ಮಹಿಳೆಯರ ಉಚಿತ ಪ್ರಯಾಣಕ್ಕೆ ಇನ್ನು ಆಧಾರ್‌ ಅಗತ್ಯವಿಲ್ಲ

ಮಹಿಳೆಯರ ಉಚಿತ ಪ್ರಯಾಣಕ್ಕೆ ಇನ್ನು ಆಧಾರ್‌ ಅಗತ್ಯವಿಲ್ಲ

ಶಕ್ತಿ ಯೋಜನೆಯ ಲಾಭವನ್ನು ಇನ್ನಷ್ಟು ಸರಳವಾಗಿ ಪಡೆಯಲು ಸರ್ಕಾರ ಸ್ಮಾರ್ಟ್ ಕಾರ್ಡ್ ವಿತರಣೆ ಮಾಡುವ ನಿರ್ಧಾರ ಕೈಗೊಂಡಿದೆ. ಈ ಸ್ಮಾರ್ಟ್ ಕಾರ್ಡ್‌ನ್ನು ಎರಡು ತಿಂಗಳೊಳಗೆ ರಾಜ್ಯದ ಎಲ್ಲಾ ಅರ್ಹ ಮಹಿಳೆಯರಿಗೆ ಉಚಿತವಾಗಿ ನೀಡಲಾಗುವುದು. ಈಗಾಗಲೇ ಈ ಕುರಿತ ಕಡತ ಹಣಕಾಸು ಇಲಾಖೆಗೆ ಹೋಗಿದ್ದು, ಕೇವಲ ಅನುಮತಿಯ ಬಾಕಿಯಿದೆ. ಸಾರಿಗೆ ಇಲಾಖೆ ಟೆಂಡರ್ ಕರೆಯಲು ಸಿದ್ಧತೆ ಮಾಡಿಕೊಂಡಿದೆ.