ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಕರ್ನಾಟಕ

ಹನೂರು ಎನ್‌ಕೌಂಟರ್‌ ಪ್ರಕರಣ; ಜಿಂಕೆ ಮಾಂಸ ಸೇರಿ ಹಲವು ಸಾಕ್ಷ್ಯ ಬಿಡುಗಡೆ ಮಾಡಿದ ಅರಣ್ಯ ಇಲಾಖೆ!

ಹನೂರು ಎನ್‌ಕೌಂಟರ್‌ ಪ್ರಕರಣ; ಸಾಕ್ಷ್ಯ ಬಿಡುಗಡೆ ಅರಣ್ಯ ಇಲಾಖೆ

Hanur Encounter Case: ಹನೂರು ವಲಯದ ಕಾಡಿನಲ್ಲಿ ಆ.15ರಂದು ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಮೃತಪಟ್ಟಿದ್ದರು. ಇದೀಗ ಈ ಕುರಿತು ತನಿಖೆ ಆರಂಭವಾಗಿದ್ದು, ತನಿಖೆಗೆ ಬಂಧ ಅಧಿಕಾರಿಯ ಮುಂದೆ ಅರಣ್ಯ ಇಲಾಖೆಯು ಬೇಟೆಗಾರರಿಂದ ವಶಕ್ಕೆ ಪಡೆದ ಮಾಂಸ, ಬಂದೂಕು ಸೇರಿದಂತೆ ಇನ್ನಿತರ ವಸ್ತುಗಳನ್ನು ಹಾಜರು ಪಡಿಸಿದ್ದಾರೆ.

ಬೆಂಗಳೂರಿನಲ್ಲಿ 800 ಕೆಜಿ ಜಿಲೆಟಿನ್ ಸೀಜ್; ಕಲ್ಲು ಸ್ಫೋಟಕ್ಕೆ ಅಕ್ರಮವಾಗಿ ಬಳಕೆ ಆರೋಪ

ಬೆಂಗಳೂರಿನಲ್ಲಿ 800 ಕೆಜಿ ಜಿಲೆಟಿನ್ ಸೀಜ್

Bengaluru News: ಕಾಮಗಾರಿಗೆ ಅಕ್ರಮವಾಗಿ ಬಳಕೆ ಮಾಡುತ್ತಿದ್ದ 800 ಕೆಜಿ ಜಿಲೆಟಿನ್​​ನನ್ನು ಪೊಲೀಸರು ಸೀಜ್ ಮಾಡಿದ್ದಾರೆ. ಬೆಳ್ಳಂದೂರು ಸಮೀಪದ ಭೋಗನಹಳ್ಳಿಯಲ್ಲಿ ನಿರ್ಮಾಣ ಹಂತದ ಕಟ್ಟಡ ಕಾಮಗಾರಿಗೆ ಅಕ್ರಮವಾಗಿ ಜಿಲೆಟಿನ್ ಬಳಸಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಈ ಸಂಬಂಧ ಬೆಳ್ಳಂದೂರು ಠಾಣೆ ಪೊಲೀಸರು 800 ಕೆಜಿಗೂ ಹೆಚ್ಚು ಜಿಲೆಟಿನ್ ವಶಪಡಿಸಿಕೊಂಡಿದ್ದಾರೆ.

ವಾಯುಮಾಲಿನ್ಯ ತಪಾಸಣೆ ದರ ಹೆಚ್ಚಳ!

ವಾಯುಮಾಲಿನ್ಯ ತಪಾಸಣೆ ದರ ಹೆಚ್ಚಳ!

ಕರ್ನಾಟಕದಲ್ಲಿ ವಾಹನಗಳ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿಸಿ) ಪಡೆಯಲು ಇನ್ನು ಮುಂದೆ ವಾಹನ ಮಾಲೀಕರು ಹೆಚ್ಚಿನ ಶುಲ್ಕ ತೆರಬೇಕಾಗಿದೆ. ಕಾರ್ಯಾಚರಣೆಯ ವೆಚ್ಚ ಹೆಚ್ಚಿರುವು ದನ್ನು ಉಲ್ಲೇಖಿಸಿ ಮಾಲಿನ್ಯ ಪರೀಕ್ಷಾ ಕೇಂದ್ರಗಳ ನಿರ್ವಾಹಕರ ಸಂಘ ಸಲ್ಲಿಸಿದ್ದ ಮನವಿಯನ್ನು ಪುರಸ್ಕರಿಸಿರುವ ಸಾರಿಗೆ ಇಲಾಖೆ, ಪರೀಕ್ಷಾ ಶುಲ್ಕವನ್ನು ಪರಿಷ್ಕರಿಸಿ ಅಧಿಕೃತ ಆದೇಶ ಹೊರಡಿಸಿದೆ.

ಡಿಸೆಂನರ್‌ʼನೊಳಗೆ ತಾಪಂ, ಜಿಪಂ ಚುನಾವಣೆ: ಡಿಕೆಶಿ

ಡಿಸೆಂನರ್‌ʼನೊಳಗೆ ತಾಪಂ, ಜಿಪಂ ಚುನಾವಣೆ: ಡಿಕೆಶಿ

ನೀವೆಲ್ಲ ಕಾರ್ಯಕರ್ತರು ಒಗ್ಗಟ್ಟಿನಿಂದ ಕೆಲಸ ಮಾಡಬೇಕು. ನಿಮ್ಮ ಶ್ರಮಕ್ಕೆ ತಕ್ಕಂತೆ ನಿಮಗೆ ಅಧಿಕಾರ ನೀಡಬೇಕು ಎನ್ನುವುದು ನಮ್ಮ ಆಸೆ. ಅಧಿಕಾರ ಹಂಚಿಕೆ ಯಾದಾಗ ಮಾತ್ರ ಎಲ್ಲ ಸರಕಾರಿ ಕೆಲಸ ಕಾರ್ಯಗಳಿಗೆ ವೇಗ ಸಿಗಲು ಸಾಧ್ಯ ಎಂದು ಕಾರ್ಯಕರ್ತ ರಲ್ಲಿ ಹುರುಪು ತುಂಬಿದರು. ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿಯೂ ‘ಭಾರತ್ ಜೋಡೋ ಯುವ ಘಟಕ’ಗಳನ್ನು ನಿರ್ಮಾಣ ಮಾಡಲಾಗು ವುದು. ಆ ಮೂಲಕ ಯುವಕರನ್ನು ಸಂಘಟಿಸಿ ಪಕ್ಷದ ಸಿದ್ಧಾಂತಗಳನ್ನು ತಲುಪಿಸಲಾಗುವುದು ಎಂದರು

ನೈಸ್‌ ರಸ್ತೆಯಲ್ಲಿನ ಟೋಲ್‌ ಮುಚ್ಚಿಸಿ: ಸಿಎಂ ಡಿಕೆಶಿಗೆ ಪತ್ರ ಬರೆದ ಕುಮಾರಸ್ವಾಮಿ

ನೈಸ್‌ ರಸ್ತೆಯಲ್ಲಿನ ಟೋಲ್‌ ಮುಚ್ಚಿಸಿ

ಸರಕಾರ ನ್ಯಾಯಾಲಯದ ಆದೇಶದ ಕಡೆ ಗಮನ ಹರಿಸುತ್ತಿಲ್ಲ. ನ್ಯಾಯಾಲಯದ ಆದೇಶ ಹಾಗೂ ಸಚಿವ ಸಂಪುಟ ಉಪ ಸಮಿತಿಯ ಶಿಫಾರಸ್ಸುಗಳನ್ನು ಗಮನದಲ್ಲಿಟ್ಟು ಕೊಂಡು ನೈಸ್ ಯೋಜನೆ ಯನ್ನು ಸರಕಾರ ವಶಕ್ಕೆ ಪಡೆದು ಟೋಲ್ ಸಂಗ್ರಹವನ್ನು ತಕ್ಷಣದಿಂದಲೇ ಸ್ಥಗಿತಗೊಳಿಸುವಂತೆ ಆಗ್ರಹಿಸಿದ್ದಾರೆ.

ಕಾವೇರಲಿದೆಯೇ ಸದನ ?

ಕಾವೇರಲಿದೆಯೇ ಸದನ ?

ಸೋಮವಾರದಿಂದ ಪುನರಾರಂಭವಾಗಲಿರುವ ಮಳೆಗಾಲದ ಅಧಿವೇಶನದಲ್ಲಿ ಬಿಜೆಪಿ ನಾಯಕರು ಈಗಾಗಲೇ ಘೋಷಿಸಿರುವಂತೆ ಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಗದ್ದಲ ಎಬ್ಬಿಸುವ ಸಾಧ್ಯತೆ ಯಿದೆ. ಇದರೊಂದಿಗೆ ಎರಡು ದಿನಗಳ ಹಿಂದೆ ಚಾಮರಾಜನಗರ ಜಿಲ್ಲೆಯ ಹನೂರಿನಲ್ಲಿ ಮೀಸಲು ಅರಣ್ಯ ಪ್ರದೇಶದಲ್ಲಿ ನಡೆದಿರುವ ಎನ್‌ಕೌಂಟರ್ ವಿಷಯವನ್ನು ಮುಂದಿಟ್ಟುಕೊಂಡು ಸರಕಾರವನ್ನು ಇಕ್ಕಟ್ಟಿಗೆ ಸಿಲುಕಿಸುವ ಆಲೋಚನೆಯಲ್ಲಿ ಬಿಜೆಪಿ ನಾಯಕರು ಇದ್ದಾರೆ.

ಹನೂರು ʼಶೂಟ್‌ʼಔಟ್‌ʼ ಹಿಂದೆ ರಾಜಕಾರಣದ ಡೌಟ್‌

ಹನೂರು ʼಶೂಟ್‌ʼಔಟ್‌ʼ ಹಿಂದೆ ರಾಜಕಾರಣದ ಡೌಟ್‌

ಚಾಮರಾಜನಗರ ಜಿಲ್ಲೆಯ ಹನೂರು ವಲಯದ ಶ್ಯಾಗ್ಯ ಸೆಕ್ಷನ್‌ನಲ್ಲಿ ಶನಿವಾರ ರಾತ್ರಿ ಶಂಕಿತ ಬೇಟೆ ಗಾರರನ್ನು ಶೂಟ್‌ಔಟ್ ಮಾಡಲಾಗಿದ್ದು, ಇದು ಭಾರೀ ಪ್ರತಿಭಟನೆಗೆ ಕಾರಣವಾಗಿ ಸರಕಾರ ಮೃತರಿಗೆ ಪರಿಹಾರವನ್ನೂ ಘೋಷಣೆ ಮಾಡಿದೆ. ಆದರೆ ಘಟನೆ ಹಿಂದಿನ ಸತ್ಯಾಸತ್ಯತೆಗಳು ಮರೆಯಾದಂತೆ ಮೇಲ್ನೋಟಕ್ಕೆ ಕಾಣುತ್ತಿದ್ದು, ಇದರಿಂದ ಅಧಿಕಾರಿಗಳು ಮತ್ತು ಸರಕಾರದ ವರ್ಗಾವಣೆ ಉದ್ದೇಶಗಳ ಬಗ್ಗೆ ಹತ್ತುಹಲವು ಶಂಕೆಗಳು ಉಂಟಾಗಿವೆ.

Annabrahma Chaturmasya: ʼʼರೋಗ ಬರದಂತೆ ಜೀವಿಸುವುದನ್ನು ಹಿರಿಯರು ಹೇಳಿ ಕೊಟ್ಟಿದ್ದಾರೆʼʼ: ರಾಘವೇಶ್ವರ ಶ್ರೀ

''ಆಹಾರಕ್ಕೂ ಅಧ್ಯಾತ್ಮಕ್ಕೂ ನೇರ ಸಂಬಂಧ'': ರಾಘವೇಶ್ವರ ಶ್ರೀ

Sri Raghaveshwara Bharathi Swamiji: ʼʼಪಾಶ್ಚಿಮಾತ್ಯ ಪದ್ಧತಿಗಳು ರೋಗ ಬಂದ ಮೇಲೆ ಅದನ್ನು ಹೇಗೆ ಸರಿಪಡಿಸಬೇಕು ಎಂದು ಚಿಂತಿಸುತ್ತವೆ. ಆದರೆ ನಮ್ಮ ಪ್ರಾಚೀನರು ಆಯುರ್ವೇದಾದಿಗಳ ಮೂಲಕ ರೋಗ ಬರದಂತೆ ಸ್ವಸ್ಥವಾಗಿ ಬದುಕುವ ಜತೆಗೆ ಪಾಪವನ್ನೂ ಕಳೆದುಕೊಳ್ಳುವ ದಾರಿಯನ್ನು ಎಂದೋ ಕಂಡುಕೊಂಡಿದ್ದಾರೆʼʼ ಎಂದು ಶ್ರೀ ರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿ ಹೇಳಿದ್ದಾರೆ.

ಹುಂಡಿ ಒಡೆದು 50 ಸಾವಿರಕ್ಕೂ ಅಧಿಕ ಹಣ ಕಳವು

ಹುಂಡಿ ಒಡೆದು 50 ಸಾವಿರಕ್ಕೂ ಅಧಿಕ ಹಣ ಕಳವು

ರಾತ್ರಿ ವೇಳೆ ದೇವಾಲಯದ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು, ಹುಂಡಿಯನ್ನು ಒಡೆದು ಅದರಲ್ಲಿದ್ದ ಹಣವನ್ನು ಕದ್ದಿದ್ದಾರೆ. ಬೆಳಗ್ಗೆ ದೇವಾಲಯಕ್ಕೆ ಬಂದ ಸ್ಥಳೀಯರು ಕಳ್ಳತನ ನಡೆದಿರುವು ದನ್ನು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಶಿಡ್ಲಘಟ್ಟ ಗ್ರಾಮಾಂತರ ಠಾಣೆಯ ಪಿಎಸ್ಐ ಸುನೀಲ್ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ತಹಸೀಲ್ದಾರ್ ಗಗನಸಿಂಧು ಕೂಡ ಸ್ಥಳಕ್ಕೆ ಭೇಟಿ ನೀಡಿ ದೇವಾಲಯದ ಪರಿಸ್ಥಿತಿಯನ್ನು ಪರಿಶೀಲಿಸಿದರು.

K H Puttaswamy Gowda: ಕೆಪಿಎಸ್‌ ಶಾಲೆಗೆ ಶಾಸಕರಿಂದ ಎರಡು ಬಸ್‌ಗಳ ಕೊಡುಗೆ

ಕೆಪಿಎಸ್‌ ಶಾಲೆಗೆ ಶಾಸಕರಿಂದ ಎರಡು ಬಸ್‌ಗಳ ಕೊಡುಗೆ

ಸುಮಾರು ನೂರು ವರ್ಷಗಳ ಇತಿಹಾಸ ಹೊಂದಿರುವ ಶಾಲೆಯಲ್ಲಿ ಪ್ರಸ್ತುತ 693ಕ್ಕೂ ಅಧಿಕ ವಿದ್ಯಾರ್ಥಿ ಗಳು ವ್ಯಾಸಂಗ ಮಾಡುತ್ತಿದ್ದಾರೆ. ದೂರದ ಊರುಗಳಿಂದ ಆಗಮಿಸುವ ವಿದ್ಯಾರ್ಥಿಗಳಿಗೆ ಅನುಕೂಲ ವಾಗುವಂತೆ ಸುಮಾರು 20 ಲಕ್ಷ ರೂಪಾಯಿ ವೆಚ್ಚದಲ್ಲಿ ಎರಡು ಹೊಸ ಬಸ್‌ಗಳನ್ನು ಖರೀದಿಸಿ ಶಾಲೆಗೆ ಕೊಡುಗೆಯಾಗಿ ನೀಡಲಾಗಿದೆ. ಅಲ್ಲದೆ, ನಾಲ್ಕು ಕೊಠಡಿಗಳ ನಿರ್ಮಾಣಕ್ಕೂ ಕ್ರಮ ಕೈಗೊಳ್ಳಲಾಗಿದೆ.

Accident: ಆದಿಯೋಗಿ ದರ್ಶನದ ಬಳಿಕ ದುರಂತ: ಕ್ಯಾಂಟರ್‌ಗೆ ಸಿಲುಕಿ ಬೈಕ್ ಸವಾರಿಬ್ಬರು ಸಾವು

ಕ್ಯಾಂಟರ್‌ಗೆ ಸಿಲುಕಿ ಬೈಕ್ ಸವಾರಿಬ್ಬರು ಸಾವು

ಆದಿಯೋಗಿ ದರ್ಶನ ಮುಗಿಸಿ ಬೈಕ್‌ನಲ್ಲಿ ಬೆಂಗಳೂರಿನತ್ತ ತೆರಳುತ್ತಿದ್ದ ವೇಳೆ ಲಿಂಗಶೆಟ್ಟಿಪುರ ಗೇಟ್ ಬಳಿ ಹೆದ್ದಾರಿ ದಾಟುವಾಗ ಬಾಗೇಪಲ್ಲಿ ಕಡೆಯಿಂದ ಬಂದ ಕ್ಯಾಂಟರ್ ಬೈಕ್‌ಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಇಬ್ಬರೂ ಕ್ಯಾಂಟರ್‌ನ ಚಕ್ರಗಳಡಿ ಸಿಲುಕಿದ್ದು, ಸುಮಾರು 100 ಮೀಟರ್‌ ವರೆಗೆ ಎಳೆದುಕೊಂಡು ಹೋಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

Chikkaballapur News: ಸ್ವಾತಂತ್ರ್ಯ ಹೋರಾಟಗಾರರಿಗೆ ಋಣಿಯಾಗಿರೋಣ: ಪಿ.ಎನ್.ಕೇಶವ ರೆಡ್ಡಿ

ಸ್ವಾತಂತ್ರ್ಯ ಹೋರಾಟಗಾರರಿಗೆ ಋಣಿಯಾಗಿರೋಣ: ಪಿ.ಎನ್.ಕೇಶವ ರೆಡ್ಡಿ

ಭಗತ್ ಸಿಂಗ್, ನೇತಾಜಿ ಸುಭಾಷ್ ಚಂದ್ರ ಬೋಸ್, ಲಾಲಾ ಲಜಪತ್ ರಾಯ್, ರಾಣಿ ಚೆನ್ನಮ್ಮ, ರಾಣಿ ಲಕ್ಷ್ಮೀಬಾಯಿ ಹಾಗೂ ಸಂಗೊಳ್ಳಿ ರಾಯಣ್ಣ ಸೇರಿದಂತೆ ಅನೇಕರು ದೇಶಕ್ಕಾಗಿ ಸರ್ವಸ್ವವನ್ನೂ ಅರ್ಪಿಸಿ ದ್ದಾರೆ. ಅವರ ತ್ಯಾಗ ಮತ್ತು ಬಲಿದಾನದಿಂದ ದೊರೆತ ಸ್ವಾತಂತ್ರ್ಯಕ್ಕೆ ಬೆಲೆ ಕಟ್ಟಲಾಗದು. ಹೋರಾಟ ಗಾರರ ಆಶಯಗಳನ್ನು ಅರ್ಥಮಾಡಿಕೊಂಡು ಅವರ ಕನಸುಗಳನ್ನು ನನಸು ಮಾಡುವ ಜವಾಬ್ದಾರಿ ಇಂದಿನ ಪೀಳಿಗೆಯ ಮೇಲಿದೆ

Mallikarjuna Kharge: ಖರ್ಗೆ ಭಾಷಣ ಮಾಡಿದ ವೇದಿಕೆ ‘ಶುದ್ಧೀಕರಣ’: ಮುನೀಂದ್ರ ಆಕ್ರೋಶ

ಖರ್ಗೆ ಭಾಷಣ ಮಾಡಿದ ವೇದಿಕೆ ‘ಶುದ್ಧೀಕರಣ’: ಮುನೀಂದ್ರ ಆಕ್ರೋಶ

ದಲಿತ ಸಮುದಾಯದ ಹಿರಿಯ ನಾಯಕನಿಗೆ ಜಾತಿಯ ಕಾರಣಕ್ಕೆ ಅವಮಾನ ಮಾಡಿದಂತಾಗಿರುವ ಈ ನಡೆ, ಸಮಾಜದಲ್ಲಿ ಇನ್ನೂ ಜೀವಂತವಾಗಿರುವ ಜಾತಿ ತಾರತಮ್ಯದ ಮನಸ್ಥಿತಿಯನ್ನು ಬಯಲಿ ಗೆಳೆಯುತ್ತದೆ ಎಂದು ಹೇಳಿದ್ದಾರೆ. ಇದು ಖರ್ಗೆ ಅವರಿಗೆ ಮಾತ್ರವಲ್ಲ, ಸಮಾನತೆ, ಸ್ವಾಭಿಮಾನ ಹಾಗೂ ಮಾನವ ಘನತೆಯ ಮೌಲ್ಯಗಳಿಗೆ ಮಾಡಿದ ಅವಮಾನವಾಗಿದೆ

Vande Mataram Row: ಸೋನಿಯಾ ಗಾಂಧಿ ವಿರುದ್ಧ ಮಂಗಳೂರಿನಲ್ಲಿ ದೂರು; ಎಫ್‌ಐಆರ್‌ ದಾಖಲಿಸದಿದ್ದರೆ ಹೈಕೋರ್ಟ್‌ ಮೊರೆ ಹೋಗುವುದಾಗಿ ಬಿಜೆಪಿ ಮುಖಂಡ ವಿಕಾಸ್ ಎಚ್ಚರಿಕೆ

ʼವಂದೇ ಮಾತರಂʼ ವಿವಾದ: ಸೋನಿಯಾ ಗಾಂಧಿ ವಿರುದ್ಧ ಮಂಗಳೂರಿನಲ್ಲಿ ದೂರು

BJP Leader Vikas Puttur: ಸ್ವಾತಂತ್ರ್ಯ ದಿನಾಚರಣೆಯಂದು ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ಸೇರಿ ಕಾಂಗ್ರೆಸ್‌ ನಾಯಕರು ರಾಷ್ಟ್ರೀಯ ಗೀತೆ ʼವಂದೇ ಮಾತರಂʼಗೆ ಅಗೌರವ ತೋರಿದ್ದಾರೆ ಎಂದು ಆರೋಪಿಸಿ ಬಿಜೆಪಿ ನಾಯಕ ವಿಕಾಸ್‌ ಪುತ್ತೂರು ದೂರು ದಾಖಲಿಸಿದ್ದಾರೆ.

ʼವಂದೇ ಮಾತರಂʼ ಗೀತೆಗೆ ಅಗೌರವ; ಸಿಡಿದೆದ್ದ ಬಿಜೆಪಿ ಯುವ ಮೋರ್ಚಾ: ಸೋನಿಯಾ, ರಾಹುಲ್ ಗಾಂಧಿ ಕ್ಷಮೆಯಾಚನೆಗೆ ಪಟ್ಟು

ʼವಂದೇ ಮಾತರಂʼಗೆ ಅಗೌರವ; ಸೋನಿಯಾ, ರಾಹುಲ್ ಕ್ಷಮೆಯಾಚನೆಗೆ ಬಿಜೆಪಿ ಪಟ್ಟು

Vande Mataram Row: ʼವಂದೇ ಮಾತರಂʼ ಗೀತೆಗೆ ಅಗೌರವ ತೋರಿದ ಕಾಂಗ್ರೆಸ್‌ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ಕ್ಷಮೆಯಾಚಿಸಬೇಕೆಂದು ಆಗ್ರಹಿಸಿ ಭಾನುವಾರ (ಆಗಸ್ಟ್‌ 16) ಸಂಜೆ ಬೆಂಗಳೂರಿನಲ್ಲಿ ಬಿಜೆಪಿ ಯುವ ಮೋರ್ಚಾ ವತಿಯಿಂದ ಪ್ರತಿಭಟನೆ ನಡೆಯಿತು.

ʼʼಅಂತ್ಯ ಸಂಸ್ಕಾರದಲ್ಲಿ ಪತಿ ಭಾಗವಹಿಸಬಾರದುʼʼ: ಡೆತ್‌ನೋಟ್‌ ಬರೆದಿಟ್ಟು ಗೃಹಿಣಿ ಆತ್ಮಹತ್ಯೆ; ಕೌಟುಂಬಿಕ ಕಲಹ ಶಂಕೆ

ಡೆತ್‌ನೋಟ್‌ ಬರೆದಿಟ್ಟು ಗೃಹಿಣಿ ಆತ್ಮಹತ್ಯೆ; ಕೌಟುಂಬಿಕ ಕಲಹದ ಶಂಕೆ

Chikkaballapur News: ಕೌಟುಂಬಿಕ ಲಕಹದಿಂದ ಬೇಸತ್ತು ಗೃಹಿಣಿಯೊಬ್ಬರು ಆತ್ಮಹತ್ಯೆಗೆ ಮಾಡಿಕೊಂಡ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ನಗರದ ಸೊಣ್ಣಶೆಟ್ಟಿಹಳ್ಳಿ ಬಡಾವಣೆಯಲ್ಲಿ ನಡೆದಿದೆ. ಮೃತರನ್ನು 26 ವರ್ಷದ ಮಮತಾಶ್ರೀ ಎಂದು ಗುರುತಿಸಲಾಗಿದೆ. ದೂರು ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ.

ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ; ಕ್ಯಾಂಟರ್‌ಗೆ ಸಿಲುಕಿ ಆದಿಯೋಗಿ ದರ್ಶನ ಮುಗಿಸಿ ಮರಳುತ್ತಿದ್ದ ಬೈಕ್ ಸವಾರಿಬ್ಬರ ದುರ್ಮರಣ

ಆದಿಯೋಗಿ ದರ್ಶನ ಮುಗಿಸಿ ಮರಳುತ್ತಿದ್ದ ಬೈಕ್ ಸವಾರಿಬ್ಬರ ದುರ್ಮರಣ

Road Accident: ಆದಿಯೋಗಿ ದರ್ಶನ ಮುಗಿಸಿ ಬೆಂಗಳೂರಿಗೆ ವಾಪಸಾಗುತ್ತಿದ್ದ ಯುವಕ ಹಾಗೂ ಯುವತಿ ಪ್ರಯಾಣಿಸುತ್ತಿದ್ದ ಬೈಕ್‌ಗೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಲಿಂಗಶೆಟ್ಟಿಪುರ ಗೇಟ್ ಬಳಿ ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಭಾನುವಾರ ನಡೆದಿದೆ.

'ʼಎಮ್ಮೆ ಥರ ಇದ್ದೀಯಾʼ': ಬಾಡಿ ಶೇಮಿಂಗ್‌ ಮಾಡಿ ಮಹಿಳಾ ಪಿಎಸ್‌ಐ ಮೇಲೆ ಹಲ್ಲೆ; ಬೆಂಗಳೂರಿನಲ್ಲಿ ಬೆಚ್ಚಿ ಬೀಳಿಸುವ ಘಟನೆ

ಕಾವೇರಿ ವಿಚಾರದಲ್ಲಿ ರೈತರ ಹಿತವೇ ಮುಖ್ಯ: ಸಿಎಂ ಡಿಕೆಶಿ

Crime News: ಬೆಂಗಳೂರಿನ ಕೆ.ಆರ್. ಪುರಂ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕರ್ತವ್ಯನಿರತ ಮಹಿಳಾ ಪಿಎಸ್‌ಐ ಮೇಲೆ ಕೆಲ ಕಿಡಿಗೇಡಿಗಳು ಹಲ್ಲೆ ನಡೆಸಿದ್ದಲ್ಲದೆ ಬಾಡಿ ಶೇಮಿಂಗ್ ಮಾಡಿ ಅವಮಾನಿಸಿರುವ ಘಟನೆ ನಡೆದಿದೆ. ಸಂಚಾರಿ ಮಹಿಳಾ ಪಿಎಸ್ಐ ನಯನಾ ಮೇಲೆ ಹಲ್ಲೆ ನಡೆಸಲಾಗಿದೆ.

ʼʼಯಾವುದೇ ಸಂಘಟನೆಯಾದರೂ ಕಾನೂನು ಪಾಲಿಸಬೇಕುʼʼ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಮಹತ್ವದ ಹೇಳಿಕೆ

ಕಾವೇರಿ ವಿಚಾರದಲ್ಲಿ ರೈತರ ಹಿತವೇ ಮುಖ್ಯ: ಸಿಎಂ ಡಿಕೆಶಿ

D.K. Shivakumar: ಕೊಡಗಿನ ಭಾಗಮಂಡಲ ಭಗಂಡೇಶ್ವರ ದೇಗುಲದಲ್ಲಿ ಭಾನುವಾರ ಪೂಜೆ ಸಲ್ಲಿಸಿ ಮಾಧ್ಯಮಗಳ ಜತೆ ಮಾತನಾಡಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಮಹತ್ವದ ವಿಚಾರಗಳನ್ನು ಹಂಚಿಕೊಂಡಿದ್ದಾರೆ. ʼʼಯಾವುದೇ ಸಂಘಟನೆಯಾಗಲಿ ಕಾನೂನು ಪಾಲಿಸಬೇಕು. ಸರ್ಕಾರಕ್ಕೆ ಅನುಮತಿ ಕೋರಿ ಅರ್ಜಿ ಬಂದರೆ, ನಿಯಮಾನುಸಾರ ಅಗತ್ಯ ಅನುಮತಿ ಹಾಗೂ ಸಿಬ್ಬಂದಿ ವ್ಯವಸ್ಥೆ ಮಾಡಲಾಗುವುದುʼʼ ಎಂದರು.

ಹನೂರಿನಲ್ಲಿ ಮೂವರ ಎನ್‌ಕೌಂಟರ್‌: ಮೃತರ ಕುಟುಂಬಸ್ಥರ ಮನವೊಲಿಸಲು ಶಾಸಕ ಮಂಜುನಾಥ್‌ ಕೊನೆಗೂ ಯಶಸ್ವಿ; ಮರಣೋತ್ತರ ಪರೀಕ್ಷೆಗೆ ಒಪ್ಪಿಗೆ

ಹನೂರು ಮೃತರ ಕುಟುಂಬಸ್ಥರ ಮನವೊಲಿಸಲು ಶಾಸಕ ಯಶಸ್ವಿ

Chamarajanagara Shootout Case: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಕಾವೇರಿ ವನ್ಯ ಜೀವಿಧಾಮದ ಹೊಳೆದಟ್ಟಿ ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿ ಪ್ರಕರಣಕ್ಕೆ ಭಾರಿ ಟ್ವಿಸ್ಟ್‌ ಸಿಕ್ಕಿದೆ. ಮೂವರ ಹತ್ಯೆ ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ಕುಟುಂಬಸ್ಥರ ಮನವೊಲಿಸಲು ಶಾಸಕ ಮಂಜುನಾಥ್‌ ನಡೆಸಿದ ಸಂಧಾನ ಯಶಸ್ವಿಯಾಗಿದ್ದು, ಹಲವು ಭರವಸೆ ನೀಡಿದ್ದಾರೆ.

ಭೀಮಾ ತೀರದಲ್ಲಿ ಮತ್ತೆ ಹಂತಕರ ಅಟ್ಟಹಾಸ: ನಿವೃತ್ತ ಶಿಕ್ಷಕನ ಭೀಕರ ಹತ್ಯೆ: ದುಷ್ಕರ್ಮಿಗಳ ಪತ್ತೆಗೆ ಕಾರ್ಯಾಚರಣೆ

ನಿವೃತ್ತ ಶಿಕ್ಷಕನ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Crime News: ಭಾನುವಾರ ವಿಜಯಪುರದ ಇಂಡಿ ತಾಲೂಕಿನಲ್ಲಿ ನಿವೃತ್ತ ಶಿಕ್ಷಕ, 63 ವರ್ಷದ ಸಿದ್ದಪ್ಪ ಅಂಜುಟಗಿ ಅವರನ್ನು ಕೊಲೆಗೈದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಇಂಡಿ ತಾಲೂಕಿನ ಚೌಡಿಹಾಳ ರಸ್ತೆಯ ಪೂಜಾರಿ ವಸ್ತಿ ಬಳಿ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದಾರೆ.

Haliyal News: ಆರ್ ಸಿಟಿ ಸಾಧನೆ ಅನಾವರಣ

ಆರ್ ಸಿಟಿ ಸಾಧನೆ ಅನಾವರಣ

ಸುಸ್ಥಿರ ಅಭಿವೃದ್ಧಿ ಕಾರ್ಯಕರ್ತ ಡಾ.ಪ್ರಕಾಶ ಭಟ್ ಮಾತನಾಡಿ, ಹಳ್ಳಿಗಳು ಅಭಿವೃದ್ಧಿಯಾಗ ಬೇಕಾದರೆ ಅಲ್ಲಿಯ ಜನರ ಸಹಭಾಗಿತ್ವ, ಸಂಘಟನೆಗಳು ಮುಖ್ಯ. ಸಂಘಟನೆಗಳ ಉಪಸ್ಥಿತಿಯಿದ್ದಾಗ ಮಾತ್ರ ಸಾಮಾಜಿಕ ಅಭಿವೃದ್ಧಿ ಸಾಧ್ಯ. ಧಾರವಾಡ ಜಿಲ್ಲೆಯಲ್ಲಿ ಸರ್ವೋದಯ ಮಹಾ ಸಂಘದಿಂದ ಇತಿಹಾಸ ಸೃಷ್ಟಿಯಾಗಿದೆ. ಎಲ್ಲರ ಯಶೋಗಾಥೆಗಳು ಇನ್ನೊಬ್ಬರಿಗೆ ಪ್ರೇರಣೆಯಾಗ ಬೇಕಿದೆ ಎಂದರು.

ರಾಜ್ಯದ ಹಲವೆಡೆ ಹೋಟೆಲ್, ರೆಸ್ಟೋರೆಂಟ್‌, ರೆಸಾರ್ಟ್‌, ಕೆಎಫ್‌ಸಿ ಔಟ್‌ಲೆಟ್ ಮೇಲೆ ಆಹಾರ ಸುರಕ್ಷತಾ ಇಲಾಖೆ ದಿಢೀರ್ ದಾಳಿ; ಅವಧಿ ಮೀರಿದ ಮಾಂಸ ವಶಕ್ಕೆ

ಹೋಟೆಲ್‌ಗಳ ಮೇಲೆ ದಾಳಿ; ಅವಧಿ ಮೀರಿದ ಪದಾರ್ಥಗಳು ವಶಕ್ಕೆ

Hotel Raids: ರಾಜ್ಯಾದ್ಯಂತ ಇರುವ ಹೋಟೆಲ್‌, ರೆಸ್ಟೋರೆಂಟ್‌, ರೆಸಾರ್ಟ್‌ ಮತ್ತು ಸಾರ್ವಜನಿಕ ಆಹಾರ ಕೇಂದ್ರಗಳ ಮೇಲೆ ಆಹಾರ ಸುರಕ್ಷತಾ ಇಲಾಖೆ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ. ತೀವ್ರ ತಪಾಸಣೆ ಅಭಿಯಾನದ ಭಾಗವಾಗಿ ಮೈಸೂರು ನಗರ ಮತ್ತು ಜಿಲ್ಲೆಯಲ್ಲಿ ತಪಾಸಣೆ ನಡೆಸಲಾಯಿತು.

ಜಾಗತಿಕ ಭಾಷಾ ಜಾತ್ರೆಯಾಗಿ ಕುಂದಾಪ್ರ ಕನ್ನಡ ಹಬ್ಬ ಆಚರಣೆ

ಜಾಗತಿಕ ಭಾಷಾ ಜಾತ್ರೆಯಾಗಿ ಕುಂದಾಪ್ರ ಕನ್ನಡ ಹಬ್ಬ ಆಚರಣೆ

Kundapra Kannada Habba: ರಾಜಧಾನಿ ಬೆಂಗಳೂರಿನ ಕುಂದಾಪ್ರ ಕನ್ನಡ ಪ್ರತಿಷ್ಠಾನ ಕಳೆದ ಎಂಟು ವರ್ಷಗಳಿಂದ ಆಚರಿಸಿಕೊಂಡು ಬರುತ್ತಿರುವ 'ವಿಶ್ವ ಕುಂದಾಪ್ರ ಕನ್ನಡ ಹಬ್ಬ ಈ ಸಲ ಜಾಗತಿಕ ಸ್ವರೂಪ ತಳೆದಿದ್ದು, 'ವಿಶ್ವ ಕುಂದಾಪ್ರ ಕನ್ನಡ ಸಮ್ಮೇಳನ-2027' ಎಂಬ ಹೆಸರಿನಲ್ಲಿ ಅದು ಅದ್ಧೂರಿಯಾಗಿ ಆಚರಣೆ ಆಗಲಿದೆ.

Loading...