ಬಿಗ್​ಬಾಸ್ ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಕರ್ನಾಟಕ

Mahantesh Bilagi Death: ಜೇವರ್ಗಿ ಬಳಿ ಭೀಕರ ಕಾರು ಅಪಘಾತ; ಹಿರಿಯ ಐಎಎಸ್‌ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರ ಸಾವು

ಕಾರು ಅಪಘಾತದಲ್ಲಿ ಐಎಎಸ್‌ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರ ಸಾವು

Kalaburagi Car Accident: ವಿಜಯಪುರದಿಂದ ಕಲಬುರಗಿಗೆ ತೆರಳುತ್ತಿದ್ದ ವೇಳೆ ಜೇವರ್ಗಿ ತಾಲೂಕಿನ ಗೌನಳ್ಳಿ ಕ್ರಾಸ್​​ ಬಳಿ ಮಂಗಳವಾರ ಕಾರು ಅಪಘಾತಕ್ಕೀಡಾಗಿದೆ. ಈ ಹಿಂದೆ ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಮಹಾಂತೇಶ್ ಬೀಳಗಿ ಅವರನ್ನು ಜನವರಿಯಲ್ಲಿ ಕರ್ನಾಟಕ ರಾಜ್ಯ ಖನಿಜ ಅಭಿವೃದ್ಧಿ ನಿಗಮ ಎಂಡಿಯಾಗಿ ವರ್ಗಾವಣೆ ಮಾಡಲಾಗಿತ್ತು.

Karnataka Politics: ಮಲ್ಲಿಕಾರ್ಜುನ ಖರ್ಗೆ ದೆಹಲಿಗೆ ಹೋಗಿದ್ದೇಕೆ?; ಆ ಗುಟ್ಟು ಬಹಿರಂಗ ಮಾಡಲ್ಲ ಎಂದ ಡಿ.ಕೆ.ಶಿವಕುಮಾರ್‌

ಖರ್ಗೆ ದೆಹಲಿಗೆ ಹೋಗಿದ್ದೇಕೆ?; ಆ ಗುಟ್ಟು ಬಹಿರಂಗ ಮಾಡಲ್ಲ ಎಂದ ಡಿಕೆಶಿ

DK Shivakumar: ಕೆಲ ಶಾಸಕರು ದೆಹಲಿಗೆ ತೆರಳಿದ್ದು, ನಿಮ್ಮನ್ನು ಸಿಎಂ ಮಾಡಲು ಪ್ರಯತ್ನಿಸುತ್ತಿದ್ದಾರೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿರುವ ಡಿ.ಕೆ.ಶಿವಕುಮಾರ್‌ ಅವರು, “ಸಚಿವ ಸ್ಥಾನದ ಆಕಾಂಕ್ಷೆ ಇರುವವರು ಹೋಗಿದ್ದಾರೆ, ನನ್ನನ್ನು ಸಿಎಂ ಮಾಡುವ ಪ್ರಯತ್ನದ ಬಗ್ಗೆ ನನಗೆ ಗೊತ್ತಿಲ್ಲ. ನಾನು ಅವರಿಗೆ ಕರೆ ಮಾಡಿಲ್ಲ, ಅವರನ್ನು ಕಳುಹಿಸಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

Belagavi News: 4ನೇ ಮಗು ಕೂಡ ಹೆಣ್ಣಾಗಿದ್ದಕ್ಕೆ ಕತ್ತು ಹಿಸುಕಿ ಕೊಂದ ತಾಯಿ!

4ನೇ ಮಗು ಕೂಡ ಹೆಣ್ಣಾಗಿದ್ದಕ್ಕೆ ಕತ್ತು ಹಿಸುಕಿ ಕೊಂದ ತಾಯಿ!

ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಹಿರೇಮಲಂಗಿ ಗ್ರಾಮದಲ್ಲಿ ಮಂಗಳವಾರ ಘಟನೆ ನಡೆದಿದೆ. ಹೆಣ್ಣು ಮಗಳನ್ನು ಕೊಂದ ಬಳಿಕ ತಾಯಿ ಡ್ರಾಮಾ ಮಾಡಿದ್ದು, ಮಗುವಿಗೆ ಉಸಿರಾಡುತ್ತಿಲ್ಲ ಎಂದು ಮನೆಯವರಿಗೆ ಹೇಳಿದ್ದಾಳೆ. ಇದರಿಂದ ರಾಮದುರ್ಗ ಸರ್ಕಾರಿ ಆಸ್ಪತ್ರೆಗೆ ಮಗುವನ್ನು ತೆಗೆದುಕೊಂಡು ಹೋದಾಗ ಘಟನೆ ಬೆಳಕಿಗೆ ಬಂದಿದೆ.

Bengaluru Power Cut: ನ.27ರಂದು ಬೆಂಗಳೂರಿನ ವಿಲ್ಸನ್ ಗಾರ್ಡನ್, ಶಾಂತಿನಗರ ಸೇರಿ ಹಲವೆಡೆ ವಿದ್ಯುತ್ ವ್ಯತ್ಯಯ

Bengaluru Power Cut: ನ.27ರಂದು ಬೆಂಗಳೂರಿನ ಹಲವೆಡೆ ವಿದ್ಯುತ್ ವ್ಯತ್ಯಯ

66/11ಕೆವಿ ಬಿ.ಎಂ.ಟಿ.ಸಿ ಉಪಕೇಂದ್ರ ವ್ಯಾಪ್ತಿಯಲ್ಲಿ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಕೈಗೆತ್ತಿಕೊಂಡಿರುವ ಹಿನ್ನೆಲೆಯಲ್ಲಿ ನವೆಂಬರ್‌ 27ರಂದು ಬೆಳಗ್ಗೆ 10ಯಿಂದ ಸಂಜೆ 05:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.

GTTCs in Karnataka: ಜಿಟಿಟಿಸಿ ಕೇಂದ್ರಗಳ ಕಾಮಗಾರಿ ಶೀಘ್ರ ಪ್ರಾರಂಭಿಸಿ: ಸಿಎಂ ಸೂಚನೆ

ಜಿಟಿಟಿಸಿ ಕೇಂದ್ರಗಳ ಕಾಮಗಾರಿ ಶೀಘ್ರ ಪ್ರಾರಂಭಿಸಿ: ಸಿಎಂ ಸೂಚನೆ

ನೂತನ ಜಿಟಿಟಿಸಿ ಕೇಂದ್ರಗಳ ಸ್ಥಾಪನೆ ಕುರಿತು ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಉದ್ಯೋಗಾಧಾರಿತ ಕೌಶಲ್ಯ ತರಬೇತಿ ನೀಡುವ ಜಿಟಿಟಿಸಿ ಮೂಲಕ ಗ್ರಾಮೀಣ ಅಭ್ಯರ್ಥಿಗಳಿಗೆ ಹೆಚ್ಚಿನ ಉದ್ಯೋಗ ಕಲ್ಪಿಸಲು ಸಾಧ್ಯವಾಗಿದೆ. ಈ ಸಾಲಿನ ಬಜೆಟ್‌ನಲ್ಲಿ ಹೊಸ 7 ಜಿಟಿಟಿಸಿ ಕೇಂದ್ರಗಳನ್ನು ಸ್ಥಾಪಿಸುವ ಘೋಷಣೆ ಮಾಡಲಾಗಿದ್ದು, ಈ ಕೇಂದ್ರಗಳ ಕಾಮಗಾರಿ ಆದಷ್ಟು ಬೇಗನೆ ಪ್ರಾರಂಭಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

Karnataka CM Race: ಡಿಕೆಶಿ 50 ಶಾಸಕರ ಸಂಖ್ಯಾಬಲ ತೋರಿಸಿದ್ರೆ ಇವತ್ತೇ ಸಿಎಂ ಮಾಡ್ತೇವೆ: ರಮೇಶ್‌ ಜಾರಕಿಹೊಳಿ

ಡಿಕೆಶಿ 50 ಶಾಸಕರ ಸಂಖ್ಯಾಬಲ ತೋರಿಸಿದ್ರೆ ಇವತ್ತೇ ಸಿಎಂ ಮಾಡ್ತೇವೆ

Ramesh Jarkiholi: ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ಪತನಕ್ಕೆ ಸಿದ್ದರಾಮಯ್ಯ ಕಾರಣ ಎಂಬ ಮಾಜಿ ಪ್ರಧಾನಿ ದೇವೇಗೌಡ ಅವರ ಹೇಳಿಕೆಗೆ ಶಾಸಕ ರಮೇಶ್‌ ಜಾರಕಿಹೊಳಿ ಅವರು ಪ್ರತಿಕ್ರಿಯಿಸಿದ್ದು, ದೇವೇಗೌಡ ಅವರ ಮಾತಿಗೆ ಕೌಂಟರ್ ಕೊಡಲು ಆಗುವುದಿಲ್ಲ. ಆದರೆ, ಸಮ್ಮಿಶ್ರ ಸರ್ಕಾರ ಪತನಕ್ಕೆ ಮೂಲಕಾರಣ ಡಿಕೆ.ಶಿವಕುಮಾರ್ ಎಂದು ತಿಳಿಸಿದ್ದಾರೆ.

ಪುರುಷರ ಜೂನಿಯರ್ ಹಾಕಿ ವಿಶ್ವಕಪ್‌ ಟ್ರೋಫಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

ಜೂ. ಹಾಕಿ ವಿಶ್ವಕಪ್‌ ಟ್ರೋಫಿ ಅನಾವರಣಗೊಳಿಸಿದ ಸಿದ್ದರಾಮಯ್ಯ

Hockey Men’s Junior World Cup 2025: ಜೂನಿಯರ್‌ ಹಾಕಿ ವಿಶ್ವಕಪ್‌ ಪಂದ್ಯಾವಳಿ ತಮಿಳುನಾಡಿನಲ್ಲಿ ಇದೇ ಶುಕ್ರವಾರದಿಂದ (ನವೆಂಬರ್‌ 28) ಡಿಸೆಂಬರ್‌ 10ರ ವರೆಗೆ ನಡೆಯಲಿದೆ. ತಮಿಳುನಾಡಿನ ಮದುರೈ ಮತ್ತು ಚೆನ್ನೈ ನಗರಗಳು ಆತಿಥ್ಯ ವಹಿಸುತ್ತಿದ್ದು, ಒಟ್ಟು 24 ತಂಡಗಳು ಟೂರ್ನಿಯಲ್ಲಿ ಭಾಗವಹಿಸಲಿವೆ. ಭದ್ರತಾ ಕಾಳಜಿಯಿಂದಾಗಿ ಪಾಕಿಸ್ತಾನ ಕೊನೆಯ ಹಂತದಲ್ಲಿ ಪಂದ್ಯಾವಳಿಯಿಂದ ಹಿಂದೆ ಸರಿದಿತ್ತು.

Nandini Ghee Export: ಮೂರು ದೇಶಗಳಿಗೆ ನಂದಿನಿ ತುಪ್ಪ ರಫ್ತು; ಸಿಎಂ ಸಿದ್ದರಾಮಯ್ಯ ಚಾಲನೆ

ಮೂರು ದೇಶಗಳಿಗೆ ನಂದಿನಿ ತುಪ್ಪ ರಫ್ತು; ಶುಭ ಹಾರೈಸಿದ ಸಿಎಂ

CM Siddaramaiah: ನಂದಿನಿ ತುಪ್ಪದ ಬೇಡಿಕೆ ಹೆಚ್ಚಾಗುತ್ತಿದ್ದು, ವಿದೇಶಗಳಿಗೂ ಕರ್ನಾಟಕದ ನಂದಿನಿ ತುಪ್ಪ ರಫ್ತಾಗುತ್ತಿದೆ. ಇದೀಗ ಆಸ್ಟ್ರೇಲಿಯಾ, ಅಮೆರಿಕ ಹಾಗೂ ಸೌದಿ ಅರೇಬಿಯಾ ದೇಶಗಳಿಗೆ ತುಪ್ಪ ರಫ್ತು ಮಾಡಲು ಕೆಎಂಎಫ್‌ ಮುಂದಾಗಿದ್ದು, ಸಿಎಂ ಸಿದ್ದರಾಮಯ್ಯ ಶುಭಹಾರೈಸಿದ್ದಾರೆ.

Pravasi Prapancha: ಕರ್ನಾಟಕ ಪ್ರವಾಸೋದ್ಯಮ ಸಂಸ್ಥೆಯಿಂದ ರೋಡ್ ಶೋ ಪ್ರಾರಂಭ

ಕರ್ನಾಟಕ ಪ್ರವಾಸೋದ್ಯಮ ಸಂಸ್ಥೆಯಿಂದ ರೋಡ್ ಶೋ ಪ್ರಾರಂಭ

Karnataka Tourism Department : ಕರ್ನಾಟಕ ಪ್ರವಾಸೋದ್ಯಮ ಸಂಸ್ಥೆ ವತಿಯಿಂದ ಆಯೋಜಿಸಿರುವ “ಕರ್ನಾಟಕ ಡೆಸ್ಟಿನೇಶನ್ ಪ್ರಮೋಶನ್ ರೋಡ್ ಶೋ” ಇಂದು ಪ್ರಾರಂಭಗೊಂಡಿದೆ. ಕರ್ನಾಟಕವನ್ನು ಪ್ರಮುಖ ಪ್ರವಾಸಿ ತಾಣವಾಗಿ ಪ್ರಚಾರ ಮಾಡುವುದರ ಜತೆಗೆ ಪ್ರವಾಸೋದ್ಯಮ ಕ್ಷೇತ್ರದಲ್ಲಿ B2B ಸಹಕಾರ ಬಲಪಡಿಸುವುದು ಈ ಅಭಿಯಾನದ ಮುಖ್ಯ ಉದ್ದೇಶ.

Murder Case: ಅಕ್ರಮ ಸಂಬಂಧದ ಸಂಶಯದಲ್ಲಿ ಯುವಕನ ಹೊಡೆದು ಕೊಲೆ

ಅಕ್ರಮ ಸಂಬಂಧದ ಸಂಶಯದಲ್ಲಿ ಯುವಕನ ಹೊಡೆದು ಕೊಲೆ

Bengaluru Crime News: 32 ವರ್ಷದ ನರಸಿಂಹರಾಜು ಕೊಲೆಯಾದ ಯುವಕ. ಮದುವೆಯಾಗಿದ್ದ ಮಹಿಳೆಯೊಬ್ಬರ ಜೊತೆ ನರಸಿಂಹರಾಜುಗೆ ಅಕ್ರಮ ಸಂಬಂಧ ಇತ್ತು. ಹಲ್ಲೆಯ ದೃಶ್ಯಗಳು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿವೆ. ನರಸಿಂಹರಾಜುವನ್ನು ಕೆಳಗೆ ಬೀಳಿಸಿ ಆರೋಪಿಗಳು ಹಲ್ಲೆ ಮಾಡಿದ್ದಾರೆ. ಮನೆಯಿಂದ ಕರೆದೊಯ್ಯುವ ಹಾಗೂ ಹಲ್ಲೆ ಮಾಡುವ ಸಿಸಿಟಿವಿ ದೃಶ್ಯಗಳು ಲಭ್ಯವಾಗಿದೆ.

Ayodhya Dhwajarohan: ಅಯೋಧ್ಯೆ ರಾಮಮಂದಿರ ಧ್ವಜಾರೋಹಣಕ್ಕೆ ಕರ್ನಾಟಕದ್ದೇ ಹೂವು!

ಅಯೋಧ್ಯೆ ರಾಮಮಂದಿರ ಧ್ವಜಾರೋಹಣಕ್ಕೆ ಕರ್ನಾಟಕದ್ದೇ ಹೂವು!

ದೇವಾಲಯ (Ayodhya Ram Mandir) ನಿರ್ಮಾಣ ಪೂರ್ಣಗೊಂಡ ಸಂಕೇತವಾಗಿ 22 ಅಡಿ ಎತ್ತರದ ಕೇಸರಿ ಭಗವಾಧ್ವಜವನ್ನು ಇಂದು ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಅನಾವರಣಗೊಳಿಸಿದರು. ಈ ಸಮಾರಂಭದಲ್ಲಿ ಇಡೀ ರಾಮಮಂದಿರವನ್ನು ಶೃಂಗರಿಸಲು ವ್ಯಾಪಕ ಶ್ರೇಣಿಯ ಹೂವುಗಳನ್ನು, ವಿಶೇಷವಾಗಿ ಆನೇಕಲ್, ಹೊಸೂರು, ಚಿಕ್ಕಬಳ್ಳಾಪುರ ಮತ್ತು ದೊಡ್ಡಬಳ್ಳಾಪುರದಲ್ಲಿ ಬೆಳೆಯುವ ಹಲವಾರು ಬಗೆಯ ಸೇವಂತಿಗೆಗಳನ್ನು ಅಯೋಧ್ಯೆಗೆ ಕಳುಹಿಸಲಾಗಿದೆ.

Gold Price Today on 25th November 2025: ಗ್ರಾಹಕರಿಗೆ ಮತ್ತೆ ಆಘಾತ... ಚಿನ್ನದ ದರದಲ್ಲಿ ಭಾರೀ ಏರಿಕೆ

ಚಿನ್ನದ ದರದಲ್ಲಿ ಮತ್ತೆ ಏರಿಕೆ; ಇಂದಿನ ರೇಟ್‌ ಚೆಕ್‌ ಮಾಡಿ

Gold and silver Rate today: ಚಿನ್ನದ ದರ ಇಳಿಕೆಯಾಗುವ ಲಕ್ಷಣ ಕಾಣುತ್ತಿಲ್ಲ. ಇಂದು ಮತ್ತೆ ಚಿನ್ನದ ದರದಲ್ಲಿ ಗಣನೀಯ ಏರಿಕೆ ಕಂಡು ಬಂದಿದೆ. ಇಂದು 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆಯಲ್ಲಿ175 ರೂ. ಏರಿಕೆ ಆಗಿದ್ದು, 11,645 ರೂ. ಇದ್ದರೆ, 24 ಕ್ಯಾರಟ್‌ ಚಿನ್ನದ 1 ಗ್ರಾಂ ಚಿನ್ನದ ಬೆಲೆಯಲ್ಲಿ 191 ಏರಿಕೆ ಆಗಿದ್ದು ಇಂದು 12,704 ರೂ. ಇದೆ.

Lokayukta Raid: ರಾಜ್ಯದೆಲ್ಲೆಡೆ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ದಾಳಿಯ ಶಾಕ್

ರಾಜ್ಯದೆಲ್ಲೆಡೆ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ದಾಳಿಯ ಶಾಕ್

ಬೆಂಗಳೂರು, ಮಂಡ್ಯ, ಬೀದರ್, ಮೈಸೂರು, ಧಾರವಾಡ, ಶಿವಮೊಗ್ಗ, ದಾವಣಗೆರೆ, ಮೈಸೂರು, ಮಡಿಕೇರಿಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟಾಚಾರದ ಆರೋಪ ಹೊತ್ತ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ದಾಳಿ ನಡೆಸಿ ಕಡತ ಪರಿಶೀಲನೆ (Lokayukta raid) ನಡೆಸಿದ್ದಾರೆ. ಅಧಿಕಾರಿಗಳಿಗೆ ಸಂಬಂಧಿಸಿದೆ ಎನ್ನಲಾದ ಮನೆ ಹಾಗೂ ಕಚೇರಿಗಳ ಮೇಲೆ ದಾಳಿ ನಡೆಸಿರುವ ಲೋಕಾಯುಕ್ತ ಅಧಿಕಾರಿಗಳು, ಸದ್ಯ ಪರಿಶೀಲನೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಲೆಮನ್‌ನಿಂದ ಭಾರತದ ಸ್ಟಾಕ್ ವ್ಯಾಪಾರಿಗಳಿಗಾಗಿ ಪವರ್ ಎಸ್‌ಐಪಿ ಪ್ರಾರಂಭ

ಸ್ಟಾಕ್ ವ್ಯಾಪಾರಿಗಳಿಗಾಗಿ ಪವರ್ ಎಸ್‌ಐಪಿ ಪ್ರಾರಂಭ

ಪವರ್ ಎಸ್‌ಐಪಿಯ ಜೊತೆಗೆ, ಲೆಮನ್ ಸಕ್ರಿಯ ಫ್ಯೂಚರ್ಸ್ & ಆಪ್ಷನ್ಸ್ (F&O) ವ್ಯಾಪಾರಿ ಗಳಿಗಾಗಿ ನಿರ್ದಿಷ್ಟವಾಗಿ ನಿರ್ಮಿಸಲಾದ ವೈಶಿಷ್ಟ್ಯವಾದ ಸ್ಕಾಲ್ಪ್‌ಪ್ರೋ ಅನ್ನು ಸಹ ಪರಿಚಯಿ ಸಿದೆ. ಇದು ಮೊಬೈಲ್‌ನಲ್ಲಿ ನೇರವಾಗಿ ಚಾರ್ಟ್‌ಗಳನ್ನು ಒದಗಿಸುವುದರ ಜೊತೆಗೆ ತಡೆರಹಿತ ಆರ್ಡರ್ ಕಾರ್ಯಗತಗೊಳಿಸಲು ಅನುವು ಮಾಡಿಕೊಡುತ್ತದೆ.

Helmet Mandatory: ಇನ್ನು ದ್ವಿಚಕ್ರ ವಾಹನಗಳಲ್ಲಿ ಮಕ್ಕಳಿಗೂ ಹೆಲ್ಮೆಟ್‌ ಕಡ್ಡಾಯ, ತಪ್ಪಿದರೆ ದಂಡ

ಇನ್ನು ದ್ವಿಚಕ್ರ ವಾಹನಗಳಲ್ಲಿ ಮಕ್ಕಳಿಗೂ ಹೆಲ್ಮೆಟ್‌ ಕಡ್ಡಾಯ, ತಪ್ಪಿದರೆ ದಂಡ

9 ತಿಂಗಳಿನಿಂದ 4 ವರ್ಷದ ವಯೋಮಾನದ ಮಕ್ಕಳೂ ಕೂಡ ಹೆಲ್ಮೆಟ್ ಧರಿಸುವುದು ಅನಿವಾರ್ಯ. ಎಲ್ಲರ ಜೀವವೂ ಅತ್ಯಮೂಲ್ಯ. ಅಪಘಾತ ಯಾವಾಗ ಬೇಕಿದ್ದರೂ ಸಂಭವಿಸಬಹುದು, ಹೀಗಾಗಿ ನಿರ್ಲಕ್ಷ್ಯ ಬೇಡ ಎಂದು ಸಾರ್ವಜನಿಕರಲ್ಲಿ ಟ್ರಾಫಿಕ್‌ ಪೊಲೀಸರು (Bengaluru traffic police) ಮನವಿ ಮಾಡಿದ್ದಾರೆ. ಇನ್ನು ಆರು ತಿಂಗಳಲ್ಲಿ ಹೆಲ್ಮೆಟ್‌ ಕಡ್ಡಾಯದ ನಿಯಮ ಜಾರಿಗೆ ಬರಲಿದೆ.

ಕೆಎಸ್‌ಸಿಎ ಅಧ್ಯಕ್ಷರಾಗಿ ವೆಂಕಟೇಶ್‌ ಪ್ರಸಾದ್‌ ಅವಿರೋಧ ಆಯ್ಕೆ?

ಬ್ರಿಜೇಶ್‌ ಬಣದ ಶಾಂತ್‌ಕುಮಾರ್‌ರ ನಾಮಪತ್ರ ತಿರಸ್ಕೃತ?

ksca elections: ಹೈಕೋರ್ಟ್ ಸೂಚನೆಯಂತೆ ಡಿಸೆಂಬರ್ 7ಕ್ಕೆ ಚುನಾವಣೆ ನಡೆಸುವಂತೆ ಸೂಚನೆ ನೀಡಿತ್ತು. ಪರಿಷ್ಕೃತ ವೇಳಾಪಟ್ಟಿ ಪ್ರಕಾರ, ಸೋಮವಾರ (ನ.24) ನಾಮಪತ್ರ ಪರಿಶೀಲನೆ ನಡೆಯಿತು. ಈ ವೇಳೆ ಶಾಂತ್‌ಕುಮಾರ್‌ ಅವರು ಕೆಎಸ್‌ಸಿಎ ಸದಸ್ಯತ್ವಕ್ಕೆ ಸಂಬಂಧಿಸಿ ಯಾವುದೋ ಒಂದು ಶುಲ್ಕ ಪಾವತಿಸಿಲ್ಲ ಎನ್ನುವ ಕಾರಣಕ್ಕೆ ಅವರ ನಾಮಪತ್ರವನ್ನು ಅಸಿಂಧುಗೊಳಿಸಲಾಗಿದೆ ಎಂದು ಹೇಳಲಾಗುತ್ತಿದೆ.

ಮದ್ದೂರಿನಿಂದ ನಾನು ಅಥವಾ ಅಭಿಷೇಕ್ ಸ್ಪರ್ಧೆ‌ ಖಚಿತ: ಸುಮಲತಾ ಅಂಬರೀಷ್

ಮದ್ದೂರಿನಿಂದ ನಾನು ಅಥವಾ ಅಭಿಷೇಕ್ ಸ್ಪರ್ಧೆ‌ ಖಚಿತ: ಸುಮಲತಾ ಅಂಬರೀಷ್

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮದ್ದೂರು ಕ್ಷೇತ್ರದಿಂದಲೇ ಸ್ಪರ್ಧೆಗಿಳಿಯುವಂತೆ ಬಿಜೆಪಿ ನಾಯಕರು ಆಹ್ವಾನ ನೀಡಿದ್ದರು. ಆದರೆ, ಸದ್ಯ ರಾಜ್ಯ ರಾಜಕಾರಣಕ್ಕೆ ಬರುವ ಮನಸ್ಸು ಇಲ್ಲ ಎಂದು ಇಂಗಿತ ವ್ಯಕ್ತಪಡಿಸಿದ್ದೆ. ಮದ್ದೂರು ನನ್ನ ಪತಿ ದಿ.ಅಂಬರೀಶ್ ಅವರ ಕರ್ಮಭೂಮಿಯಾಗಿದೆ. ಹೀಗಾಗಿ ನಾನು ಅಥವಾ ಪುತ್ರ ಅಭಿಷೇಕ ಅಂಬರೀಶ್ ಮದ್ದೂರು ಕ್ಷೇತ್ರದಿಂದ ಸ್ಪರ್ಧಿಸುವಂತೆ ಅಂಬಿ ಅಭಿಮಾನಿಗಳ ಅಪೇಕ್ಷೆಯಾಗಿದೆ ಎಂದು ಸುಮಲತಾ ನುಡಿದರು.

Dharmasthala Case: ಬುರುಡೆ ಚಿನ್ನಯ್ಯನಿಗೆ ಜಾಮೀನು ಮಂಜೂರು

Dharmasthala Case: ಬುರುಡೆ ಚಿನ್ನಯ್ಯನಿಗೆ ಜಾಮೀನು ಮಂಜೂರು

Mask Man Chinnayya: ಆಗಸ್ಟ್ 23 ರಂದು ಸುಧೀರ್ಘ ವಿಚಾರಣೆ ಬಳಿಕ ಬುರುಡೆ ಕೇಸ್ ನಲ್ಲಿ ಅನಾಮಿಕ ದೂರುದಾರ ಚಿನ್ನಯ್ಯ ಬಂಧನವಾಗಿತ್ತು. ಸೆಪ್ಟೆಂಬರ್ 6 ರಂದು ಕೋರ್ಟ್‌ ನ್ಯಾಯಾಂಗ ಬಂಧನ ವಿಧಿಸಿದ್ದರಿಂದ ಶಿವಮೊಗ್ಗ ಜೈಲಿಗೆ ಚಿನ್ನಯ್ಯನನ್ನು ಕರೆತರಲಾಗಿತ್ತು. 1 ಲಕ್ಷ ರೂ. ಬಾಂಡ್ ಸೇರಿ 12 ಷರತ್ತು ವಿಧಿಸಿ ಕೋರ್ಟ್‌ ಜಾಮೀನು ಮಂಜೂರು ಮಾಡಿದೆ.

DCM D.K. Shivakumar: ವಿಪಕ್ಷಗಳದು ಹಗಲುಗನಸು; 2028ಕ್ಕೆ ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ: ಡಿಸಿಎಂ ಡಿ.ಕೆ. ಶಿವಕುಮಾರ್

2028ಕ್ಕೆ ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ

“ರಾಜ್ಯದಲ್ಲಿ ಅಭಿವೃದ್ಧಿಯ ಸಂಗಮವಾಗಿದೆ. ೨ ಸಾವಿರ ಕೋಟಿ ರೂ. ಮೊತ್ತದ ಅಭಿವೃದ್ಧಿ ಕೆಲಸವನ್ನು ವಿರೋಧ ಪಕ್ಷದ ಶಾಸಕರ ಕ್ಷೇತ್ರಕ್ಕೆ ಕಾಂಗ್ರೆಸ್ ಸರ್ಕಾರ ನೀಡುತ್ತಿದೆ ಎಂದರೆ ನಮ್ಮ ಜನಪರ ಧೋರಣೆಯನ್ನು ಎಲ್ಲರೂ ಅರ್ಥ ಮಾಡಿಕೊಳ್ಳಬೇಕು. ಈ ಕ್ಷೇತ್ರದ ಅಭಿವೃದ್ಧಿಗೆ ಇಡೀ ಸರ್ಕಾರವೇ ಬಂದಿದೆ ಎಂದರೆ ನಮಗೆ ಜನರ ಮೇಲಿನ ಪ್ರೀತಿಯೇ ಕಾರಣ”

ಶಾಸಕರ ಖರೀದಿ ಹಾಗೂ ಕುದುರೆ ವ್ಯಾಪಾರ ಬಿಜೆಪಿ ಸಂಸ್ಕೃತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಶಾಸಕರ ಖರೀದಿ ಹಾಗೂ ಕುದುರೆ ವ್ಯಾಪಾರ ಬಿಜೆಪಿ ಸಂಸ್ಕೃತಿ

ಈ ಹಿಂದೆ ಬಿಜೆಪಿ ಸರ್ಕಾರ ರಚನೆ ಯಾದಾಗ ಅವರು ಎಷ್ಟು ಸಾವಿರ ಕೋಟಿ ಖರ್ಚು ಮಾಡಿದ್ದರು. ಮುಖ್ಯಮಂತ್ರಿ ಹುದ್ದೆಗೆ ಎಷ್ಟು ಹಣ ನೀಡಬೇಕಾಗಿತ್ತು, ಮಂತ್ರಿ ಹುದ್ದೆಗೆ ಎಷ್ಟು ಹಣ ನೀಡಲಾಗಿದೆ ಎಂದು ಅವರದೇ ಪಕ್ಷದ ನಾಯಕರು ಬಹಿರಂಗ ಹೇಳಿಕೆ ನೀಡಿದ್ದಾರೆ. ಅವರು ಎಷ್ಟು ಹಣ ಆಮೀಷ ಒಡ್ಡಿದ್ದರು ಎಂದು ವಿಧಾನಸಭೆಯಲ್ಲೂ ಪ್ರಸ್ತಾಪವಾಗಿದ್ದು, ದಾಖಲೆಗಳಲ್ಲಿ ಸೇರಿವೆ.

Dr. M.C.Sudhakar: ಎತ್ತಿನಹೊಳೆ ನೀರನ್ನು ಜಿಲ್ಲೆಗೆ ಹರಿಸಿದರೆ ಜಿಲ್ಲೆಯ ಜನತೆ ನಿಮಗೆ ಋಣಿಯಾಗಿರುತ್ತೇವೆ : ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್

ಎತ್ತಿನಹೊಳೆ ನೀರನ್ನು ಜಿಲ್ಲೆಗೆ ಹರಿಸಿದರೆ ಜಿಲ್ಲೆಯ ಜನತೆ ನಿಮಗೆ ಋಣಿ

ಮುಖ್ಯಮಂತ್ರಿ ಸಿದ್ಧರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ನೇತೃತ್ವದ ಸರಕಾರದಲ್ಲಿ ಉನ್ನತ ಶಿಕ್ಷಣ ಸಚಿವನಾಗಿ ಕೆಲಸ ಮಾಡುವ ಪುಣ್ಯ ಒಲಿದು ಬಂದಿರುವುದು ಅತ್ಯಂತ ಸಂತೋಷ ತಂದಿದೆ. ಮುಖ್ಯಮಂತ್ರಿ, ಕ್ಷೇತ್ರದ ಜನತೆ ನನ್ನ ಮೇಲೆ ಇಟ್ಟಿರುವ ಪ್ರೀತಿ ವಿಶ್ವಾಸಕ್ಕೆ ಎಂದೆಂದಿಗೂ ಚಿರಋಣಿಯಾಗಿದ್ದೇನೆ. ಈ ೨.೫ ವರ್ಷದಲ್ಲಿ ಜಿಲ್ಲೆಯಲ್ಲಿ ಸಾಕಷ್ಟು ಅಭಿವೃದ್ದಿ ಕೆಲಸಗಳು ಆಗುವಂತೆ ನೋಡಿಕೊಳ್ಳಲಾಗಿದೆ.

Chikkaballapur News: ಇತಿಹಾಸವಾದ ಕಾರ್ಯಕ್ರಮದಲ್ಲಿ ಅನುದಾನಕ್ಕೆ ಮೊರೆಯಿಟ್ಟ ಶಾಸಕ : ಅಸ್ತು ಎಂದ ಮುಖ್ಯಮಂತ್ರಿ

ಇತಿಹಾಸವಾದ ಕಾರ್ಯಕ್ರಮದಲ್ಲಿ ಅನುದಾನಕ್ಕೆ ಮೊರೆಯಿಟ್ಟ ಶಾಸಕ

ನಮ್ಮ ಕ್ಷೇತ್ರದ ೭೩ ವರ್ಷಗಳ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಮುಖ್ಯಮಂತ್ರಿ ಗಳೊಟ್ಟಿಗೆ ಸರಕಾರದ ೧೭ ಮಂದಿ ಸಚಿವರು ಒಂದೇ ವೇದಿಕೆಯಲ್ಲಿ ಭಾಗಿಯಾಗಿ ಅಭಿವೃದ್ಧಿ ಕಾರ್ಯಗಳಿಗೆ ಮುನ್ನುಡಿ ಬರೆದಿದ್ದಾರೆ. ೧೬ ಚುನಾವಣೆಗಳಲ್ಲಿ ೧೧ ಬಾರಿ ಕಾಂಗ್ರೆಸ್ ಶಾಸಕರು ಆರಿಸಿ ಬಂದಿ ದ್ದಾರೆ.

ನಾವೆಲ್ಲರೂ ಒಂದೇ ದೇವರ ಮಕ್ಕಳು, ಒಂದೇ ಕುಟುಂಬಕ್ಕೆ ಸೇರಿದವರು: ಶ್ರೀ ಮಧುಸೂದನ ಸಾಯಿ

ನಾವೆಲ್ಲರೂ ಒಂದೇ ದೇವರ ಮಕ್ಕಳು: ಮಧುಸೂದನ ಸಾಯಿ

Sadguru Sri Madhusudan Sai: ಮುದ್ದೇನಹಳ್ಳಿಯ ಸತ್ಯ ಸಾಯಿ ಗ್ರಾಮದಲ್ಲಿ ನಡೆದ 'ಒಂದು ಜಗತ್ತು ಒಂದು ಕುಟುಂಬ ವಿಶ್ವ ಸಾಂಸ್ಕೃತಿಕ ಉತ್ಸವ'ದ 100ನೇ ದಿನವಾದ ಭಾನುವಾರ ಸಮಾರೋಪ ಸಮಾರಂಭದಲ್ಲಿ ಆಶೀರ್ವಚನ ನೀಡಿದ ಎಂದು ಸದ್ಗುರು ಶ್ರೀ ಮಧುಸೂದನ ಸಾಯಿ ಅವರು, ಭಗವಾನ್ ಶ್ರೀ ಸತ್ಯ ಸಾಯಿ ಅವರ 100 ದಿನಗಳ ಜನ್ಮ ಶತಮಾನೋತ್ಸವವು ಅಂತ್ಯವಲ್ಲ, ಮತ್ತೊಂದು ಶತಮಾನದ ಆರಂಭವಾಗಿದೆ ಎಂದು ತಿಳಿಸಿದರು.

JDS Protest: ಟಿಬಿ ಡ್ಯಾಂನಿಂದ 2ನೇ ಬೆಳೆಗೆ ನೀರು ಬಿಡುಗಡೆಗೆ ಆಗ್ರಹ; ಜೆಡಿಎಸ್‌ನಿಂದ ನಾಳೆ ಸಿಂಧನೂರಿನಲ್ಲಿ ಬೃಹತ್‌ ಪ್ರತಿಭಟನೆ

ಟಿಬಿ ಡ್ಯಾಂನಿಂದ ನೀರು ಬಿಡುಗಡೆಗೆ ಆಗ್ರಹಿಸಿ ನಾಳೆ ಜೆಡಿಎಸ್‌ ಪ್ರತಿಭಟನೆ

Nikhil Kumaraswamy: ತುಂಗಭದ್ರಾ ಡ್ಯಾಂನಿಂದ ಎರಡನೇ ಬೆಳೆಗೆ ನೀರು ಹರಿಸುವಂತೆ ಒತ್ತಾಯಿಸಿ, ತುಂಗಭದ್ರಾ ಡ್ಯಾಮ್ ಗೇಟ್ ಅಳವಡಿಕೆ ವಿಳಂಬ ಧೋರಣೆ ಖಂಡಿಸಿ ರಾಯಚೂರು, ಬಳ್ಳಾರಿ, ಕೊಪ್ಪಳ ಹಾಗೂ ವಿಜಯನಗರ ಜಿಲ್ಲೆಯ ಸಾವಿರಾರು ರೈತರ ನೇತೃತ್ವದಲ್ಲಿ ನಾಳೆ ಜೆಡಿಎಸ್‌ ವತಿಯಿಂದ ಬೃಹತ್ ಪ್ರತಿಭಟನೆ ಮತ್ತು ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದ್ದಾರೆ.

Loading...