ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ
ಕರ್ನಾಟಕ
ACP Daya Nayak: ಸಹಾಯಕ ಪೊಲೀಸ್ ಆಯುಕ್ತರಾಗಿ ಬಡ್ತಿ ಪಡೆದ ಎನ್‌ಕೌಂಟರ್ ಸ್ಪೆಷಲಿಸ್ಟ್ ದಯಾ ನಾಯಕ್

ಎಸಿಪಿಯಾಗಿ ಬಡ್ತಿ ಪಡೆದ ದಯಾ ನಾಯಕ್

ಮೂಲತಃ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಎಣ್ಣೆಹೊಳೆ ಗ್ರಾಮದವರಾದ ಎನ್‌ಕೌಂಟರ್ ಸ್ಪೆಷಲಿಸ್ಟ್ ದಯಾ ನಾಯಕ್ ಅವರಿಗೆ ಸಹಾಯಕ ಪೊಲೀಸ್ ಆಯುಕ್ತರನ್ನಾಗಿ ಬಡ್ತಿ ನೀಡಲಾಗಿದೆ. ಮಹಾರಾಷ್ಟ್ರ ಗೃಹ ಇಲಾಖೆಯ ಆದೇಶದ ಮೇರೆಗೆ ಹಿರಿಯ ಇನ್ಸ್‌ಪೆಕ್ಟರ್‌ಗಳಾದ ಜೀವನ್ ಖರತ್, ದೀಪಕ್ ದಳವಿ ಮತ್ತು ಪಾಂಡುರಂಗ ಪವಾರ್ ಅವರಿಗೂ ಎಸಿಪಿಯನ್ನಾಗಿ ಮಾಡಲಾಗಿದೆ.

ಉಚಿತ ನೇತ್ರ ತಪಾಸಣೆ ಶಿಬಿರ

ಉಚಿತ ನೇತ್ರ ತಪಾಸಣೆ ಶಿಬಿರ

ಕಣ್ಣು ಮಾನವನ ಅತೀ ಸೂಕ್ಷ್ಮವಾದ ಅಂಗ. ಇದನ್ನು ಅತಿ ಜಾಗರೂಕತೆಯಿಂದ ಕಾಪಾಡಿ ಕೊಳ್ಳಬೇಕು. ನಮ್ಮ ಸೇವಾ ಸಂಸ್ಥೆಯು ಸತತ 27 ವರ್ಷಗಳಿಂದ ನಿರಂತರವಾಗಿ ವಿವಿಧ ಕಾರ್ಯ ಕ್ರಮಗಳನ್ನು ನಡೆಸಿಕೊಂಡು ಬರುತ್ತಿದೆ. 8 ಲಕ್ಷ ಕುಟುಂಬಗಳಿಗೆ ಸಾಮಾಜಿಕವಾಗಿ ಸ್ಪಂದಿಸಿದ್ದೇವೆ. ಉಚಿತ ನೇತ್ರ ತಪಾಸಣ ಶಿಬಿರ ಮಾಡಿ ಸಾವಿರಾರು ಮಂದಿಗೆ ಉಚಿತ ಕನ್ನಡಕ ವಿತರಣೆ ಮಾಡಲಾಗಿದೆ.

KSRTC Bus: ಕೆಎಸ್‌ಆರ್‌ಟಿಸಿಯಲ್ಲಿ ನೂತನ ಲಗೇಜ್ ನಿಯಮ ಜಾರಿಯಾಗಿಲ್ಲ: ನಿಗಮ ಸ್ಪಷ್ಟನೆ

ಕೆಎಸ್‌ಆರ್‌ಟಿಸಿಯಲ್ಲಿ ನೂತನ ಲಗೇಜ್ ನಿಯಮ ಜಾರಿಯಾಗಿಲ್ಲ: ನಿಗಮ ಸ್ಪಷ್ಟನೆ

Luggage Guidelines: ಕೆಎಸ್‌ಆರ್‌ಟಿಸಿಯಲ್ಲಿ ನೂತನ ಲಗೇಜ್ ನಿಯಮ ಜಾರಿ ಎಂದು ಸಾಮಾಜಿಕ‌ ಜಾಲತಾಣ ಮತ್ತು ಕೆಲವೊಂದು ಮಾಧ್ಯಮಗಳಲ್ಲಿ ಪ್ರಕಟವಾಗಿತ್ತು. ಹೀಗಾಗಿ ಕೆಎಸ್‌ಆರ್‌ಟಿಸಿ ನಿಗಮದ ಅಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ. 2022ರ ಅ. 28 ನಂತರ ಯಾವುದೇ ಹೊಸ ಲಗೇಜ್ ನಿಯಮ / ಸುತ್ತೋಲೆಯನ್ನು ನಿಗಮದಲ್ಲಿ ಜಾರಿಗೆ ತಂದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Karnataka Rains: ಹವಾಮಾನ ವರದಿ; ನಾಳೆ ರಾಜ್ಯದ ಈ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಮಳೆ ಸಾಧ್ಯತೆ!

ನಾಳೆ ರಾಜ್ಯದ ಈ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಮಳೆ ಸಾಧ್ಯತೆ!

Weather Forecast: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳು ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಹಗುರ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 27°C ಮತ್ತು 19°C ಇರುವ ಸಾಧ್ಯತೆ ಇದೆ.

DK Shivakumar: ಶಾಸಕರ ಜತೆ ಸಿಎಂ ಸಭೆ; ಅದರಲ್ಲಿ ತಪ್ಪೇನಿದೆ ಎಂದ ಡಿ.ಕೆ.ಶಿವಕುಮಾರ್

ಶಾಸಕರ ಜತೆ ಸಿಎಂ ಸಭೆ; ಅದರಲ್ಲಿ ತಪ್ಪೇನಿದೆ ಎಂದ ಡಿ.ಕೆ.ಶಿವಕುಮಾರ್

DK Shivakumar: ಉಪಮುಖ್ಯಮಂತ್ರಿಗಳನ್ನು ಸಿಎಂ ಕಡೆಗಣಿಸಿದ್ದಾರೆ ಎನ್ನುವ ಬಿಜೆಪಿ ಟೀಕೆಯ ಬಗ್ಗೆ ಡಿಸಿಎಂ ಡಿಕೆಶಿ ಅವರು ಪ್ರತಿಕ್ರಿಯಿಸಿ, ಅವರು ಮೊದಲು ಅವರ ಮನೆಯನ್ನು ಸರಿ ಮಾಡಿಕೊಳ್ಳಲಿ. ಅವರ ಪಕ್ಷ, ಮನೆಯೇ ಅಸ್ತವ್ಯಸ್ತವಾಗಿದೆ. ಅವರ ಪಕ್ಷದ ಒಳಗೆ ಅನೇಕ ಮೇಲಾಟಗಳು ನಡೆಯುತ್ತಿವೆ. ಅವರ ಪಕ್ಷದ ನಾಯಕರ ಹೇಳಿಕೆಗಳನ್ನು ಎಲ್ಲರೂ ನೋಡಿದ್ದಾರೆ ಎಂದು ಟೀಕಿಸಿದ್ದಾರೆ.

Actor Pratham: ಫಿಲ್ಮ್‌ ಚೇಂಬರ್‌ ಎದುರು ಉಪವಾಸ ಸತ್ಯಾಗ್ರಹ ಆರಂಭಿಸಿದ ನಟ ಪ್ರಥಮ್‌; ದರ್ಶನ್‌ ಸ್ಪಷ್ಟನೆಗೆ ಒತ್ತಾಯ

ಫಿಲ್ಮ್‌ ಚೇಂಬರ್‌ ಎದುರು ಉಪವಾಸ ಸತ್ಯಾಗ್ರಹ ಕುಳಿತ ನಟ ಪ್ರಥಮ್‌

Actor Pratham: ತಮ್ಮ ಮೇಲೆ ಹಲ್ಲೆಗೆ ಯತ್ನ ಹಾಗೂ ಕೊಲೆ ಬೆದರಿಕೆಯ ಹಿನ್ನೆಲೆಯಲ್ಲಿ ನಟ ಪ್ರಥಮ್ ದೂರು ನೀಡಿದ್ದರು. ಬೇಕರಿ ರಘು ಮತ್ತು ಗ್ಯಾಂಗ್ ವಿರುದ್ಧ ದೂರು ಸಲ್ಲಿಕೆಯಾಗಿತ್ತು. ನನ್ನ ಮೇಲೆ ನಡೆದಿರುವ ಹಲ್ಲೆಗೆ ನಟ ದರ್ಶನ್‌ ಸ್ಪಷ್ಟನೆ ನೀಡಬೇಕು. ನನಗೆ ಹೆಚ್ಚು ಕಡಿಮೆಯಾದರೆ ನೀವೇ ಹೊಣೆ ಎಂದು ನಟ ದರ್ಶನ್‌ಗೆ ಪ್ರಥಮ್‌ ಎಚ್ಚರಿಕೆ ನೀಡಿದ್ದಾರೆ.

Sridevi Byrappa: ತಮ್ಮ ಕುಟುಂಬದ ಮಹಿಳೆಗೆ ಅನ್ಯಾಯವಾದಾಗ ನೀವು ಏನು ಮಾಡುತ್ತಿದ್ರಿ?; ರಮ್ಯಾ ಪರ ನಿಂತ ನಟ ಶಿವಣ್ಣ, ವಿನಯ್‌ಗೆ ಯುವ ಪತ್ನಿ ಶ್ರೀದೇವಿ ಪ್ರಶ್ನೆ

ರಮ್ಯಾ ಪರ ನಿಂತ ಶಿವಣ್ಣ, ವಿನಯ್‌ ವಿರುದ್ಧ ಯುವ ಪತ್ನಿ ಶ್ರೀದೇವಿ ಅಸಮಾಧಾನ!

Sridevi Byrappa: ಅಸಭ್ಯ ಕಮೆಂಟ್‌ ಮಾಡಿದ್ದರಿಂದ ದರ್ಶನ್‌ ಅಭಿಮಾನಿಗಳ ವಿರುದ್ಧ ನಟಿ ರಮ್ಯಾ ದೂರು ನೀಡಿದ್ದರು. ಈ ವಿಚಾರದಲ್ಲಿ ರಮ್ಯಾಗೆ ನಟ ಶಿವರಾಜ್‌ ಕುಮಾರ್‌, ವಿನಯ್‌ ರಾಜ್‌ಕುಮಾರ್‌ ಬೆಂಬಲ ಸೂಚಿಸಿದ್ದರು. ತನಗೆ ಅನ್ಯಾಯವಾದಾಗ ಯಾರೂ ದನಿಯೆತ್ತಲಿಲ್ಲ. ಈ ನಟಿ ರಮ್ಯಾಗೆ ಬೆಂಬಲ ಸೂಚಿಸಿದ್ದಾರೆ ಎಂದು ಯುವ ಪತ್ನಿ ಶ್ರೀದೇವಿ ಬಹಿರಂಗವಾಗಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ.

Road Accident: ಚಳ್ಳಕೆರೆಯಲ್ಲಿ ಕಾರು-ಬೈಕ್ ಡಿಕ್ಕಿಯಾಗಿ ಅಣ್ಣ-ತಂಗಿ ದಾರುಣ ಸಾವು

ಚಳ್ಳಕೆರೆಯಲ್ಲಿ ಕಾರು-ಬೈಕ್ ಡಿಕ್ಕಿಯಾಗಿ ಅಣ್ಣ-ತಂಗಿ ದಾರುಣ ಸಾವು

Challakere News: ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಬಳಿ ಕಾರು ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ಬೈಕ್‍ನಲ್ಲಿದ್ದ ಅಣ್ಣ-ತಂಗಿ ಗಂಭೀರವಾಗಿ ಗಾಯಗೊಂಡು ಮೃತಪಟ್ಟಿದ್ದಾರೆ. ಘಟನೆಯಲ್ಲಿ ಕಾರು ಚಾಲಕನಿಗೂ ಗಾಯಗಳಾಗಿವೆ. ಈ ಸಂಬಂಧ ಚಳ್ಳಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tiptur News: ತಿಪಟೂರಿನಲ್ಲಿ ಯುವಕ ಅನುಮಾನಾಸ್ಪದ ಸಾವು; ನ್ಯಾಯ ಕೊಡಿಸಲು ಕುಟುಂಬಸ್ಥರ ಆಗ್ರಹ

ತಿಪಟೂರಿನಲ್ಲಿ ಯುವಕ ಅನುಮಾನಾಸ್ಪದ ಸಾವು

Tiptur News: ಯುವಕನೊಬ್ಬ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ತಿಪಟೂರು ತಾಲೂಕಿನ ಹೊನ್ನವಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಗುರುಗದಹಳ್ಳಿಯಲ್ಲಿ ಜರುಗಿದ್ದು, ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಅರಸೀಕೆರೆ ತಾಲೂಕಿನ ಬೆಳಗುಂಬ ಗ್ರಾಮದ ಹರ್ಷ ಬಿ.ಪಿ (25) ಮೃತ ಯುವಕ ಎಂದು ಗುರುತಿಸಲಾಗಿದೆ.

Actor Pratham: ಆಮರಣಾಂತ ಉಪವಾಸಕ್ಕೆ ಪ್ರಥಮ್ ನಿರ್ಧಾರ; ಹಲ್ಲೆ ಯತ್ನದ ಬಗ್ಗೆ ಸ್ಪಷ್ಟನೆ ನೀಡಲು ನಟ ದರ್ಶನ್‌ಗೆ ಆಗ್ರಹ

ಹಲ್ಲೆ ಯತ್ನ ಪ್ರಕರಣ; ಆಮರಣಾಂತ ಉಪವಾಸಕ್ಕೆ ಪ್ರಥಮ್ ನಿರ್ಧಾರ

Actor Pratham: ನನ್ನ ಮೇಲೆ ನಡೆದಿರುವ ಹಲ್ಲೆಗೆ ನಟ ದರ್ಶನ್‌ ಸ್ಪಷ್ಟನೆ ನೀಡಬೇಕು. ನನಗೆ ಹೆಚ್ಚು ಕಡಿಮೆಯಾದರೆ ನೀವೇ ಹೊಣೆ. ದರ್ಶನ್‌ ಅವರು ಫ್ಯಾನ್ಸ್‌ ಬಾಯಿ ಮುಚ್ಚಿಸಬೇಕು. ಯಾವುದೇ ನಟರ ಬಗ್ಗೆ ಟ್ರೋಲ್‌ ಮಾಡಬಾರದು. ನಿಮ್ಮ ಫ್ಯಾನ್ಸ್‌ಗೆ ಹೇಳಿ, ಇಲ್ಲವೆಂದರೆ ನೀವೇ ಜವಾಬ್ದಾರಿ ಎಂದು‌ ನಟ ಪ್ರಥಮ್ ಆಕ್ರೋಶ ಹೊರಹಾಕಿದ್ದಾರೆ.

Actress Ramya: ನಿಮ್ಮ ಜತೆಗೆ ನಾವು ಸದಾ ನಿಲ್ಲುತ್ತೇವೆ; ರಮ್ಯಾಗೆ ನಟ ಶಿವಣ್ಣ ಬೆಂಬಲ

ನಿಮ್ಮ ಜತೆಗೆ ನಾವು ಸದಾ ನಿಲ್ಲುತ್ತೇವೆ; ರಮ್ಯಾಗೆ ನಟ ಶಿವಣ್ಣ ಬೆಂಬಲ

Actress Ramya: ನಟಿ ರಮ್ಯಾ ಅವರ ವಿರುದ್ಧ ಬಳಸಿರುವ ಪದಗಳು ಖಂಡನೀಯ. ಯಾವ ಮಹಿಳೆಯ ವಿರುದ್ಧವೂ ಆ ರೀತಿ ಮಾತನಾಡುವುದು ಸರಿಯಲ್ಲ; ಅದನ್ನು ನಾವು ಸಹಿಸಬಾರದು. ಮಹಿಳೆಯರನ್ನು ತಾಯಿಯಾಗಿ, ಅಕ್ಕನಾಗಿ, ಮಗಳಾಗಿ, ಮಡದಿಯಾಗಿ ಮತ್ತು ಮೊಟ್ಟಮೊದಲು ಒಬ್ಬ ವ್ಯಕ್ತಿಯಾಗಿ ಗೌರವಿಸುವುದು ತುಂಬಾ ಮುಖ್ಯ ಎಂದು ನಟ ಶಿವರಾಜ್‌ ಕುಮಾರ್‌ ತಿಳಿಸಿದ್ದಾರೆ.

Physical Abuse: ಕಲಬುರಗಿಯಲ್ಲಿ ಪೈಶಾಚಿಕ ಕೃತ್ಯ; ಆಸ್ಪತ್ರೆಯಲ್ಲೇ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಸಿಬ್ಬಂದಿ!

ಆಸ್ಪತ್ರೆಯಲ್ಲೇ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಸಿಬ್ಬಂದಿ!

Kalaburagi News: ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ತಂದೆಯ ಆರೈಕೆಗೆ ಆಸ್ಪತ್ರೆಗೆ ಬಂದಿದ್ದ ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಆಸ್ಪತ್ರೆಯ ಸಿಬ್ಬಂದಿಯೊಬ್ಬ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಈ ವೇಳೆ ಸ್ವಚ್ಛತಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ಪರಿಚಯಸ್ಥ ಸಿಬ್ಬಂದಿಯೊಬ್ಬ ಹೀನ ಕೃತ್ಯ ಎಸಗಿದ್ದಾನೆ. ಆರೋಪಿಯನ್ನು ಪೊಲೀಸರು ಅರೆಸ್ಟ್‌ ಮಾಡಿದ್ದಾರೆ.

Fraud Case: ಚಾಮರಾಜನಗರ: ಉದ್ಯಮಿಗೆ 3.70 ಲಕ್ಷ ರೂ. ವಂಚಿಸಿ ಪೊಲೀಸರೇ ನಾಪತ್ತೆ!

ಚಾಮರಾಜನಗರ: ಉದ್ಯಮಿಗೆ 3.70 ಲಕ್ಷ ರೂ. ವಂಚಿಸಿ ಪೊಲೀಸರೇ ನಾಪತ್ತೆ!

Chamarajanagara news: ಸುಲಿಗೆಕೋರ ವಂಚಕರು ಹಾಗೂ ಧನದಾಹಿ ಪೊಲೀಸರು ಸೇರಿಕೊಂಡು ನಡೆಸಿದ ವಂಚನೆಯ ಕಥೆ ಇದು. ತಮಿಳುನಾಡು ಮೂಲದ ಉದ್ಯಮಿಯನ್ನು ಇವರೆಲ್ಲ ಸೇರಿಕೊಂಡು ಬೆದರಿಸಿ 3.70 ಲಕ್ಷ ರೂ. ಹಣ ದೋಚಿದ್ದಾರೆ. ಇದೀಗ ಪಿಎಸ್‌ಐ ಮತ್ತು ಪೇದೆಗಳು ಪರಾರಿಯಾಗಿದ್ದಾರೆ.

ಬೆಂಗಳೂರಲ್ಲಿ ಡೆಂಘೀ ಗಣನೀಯ ಇಳಿಕೆ

ಬೆಂಗಳೂರಲ್ಲಿ ಡೆಂಘೀ ಗಣನೀಯ ಇಳಿಕೆ

ಮಳೆಗಾಲದ ಆರಂಭದಲ್ಲಿಯೇ ಡೆಂಘೀ ಪ್ರಕರಣಗಳು ಬೆಳಕಿಗೆ ಬರುತ್ತಿದ್ದಂತೆಯೇ ಅಧಿಕಾರಿಗಳು ನಿಯಂತ್ರಿಸಲು ಕ್ರಮ ಕೈಗೊಂಡಿದ್ದರಿಂದ ಡೆಂಘೀ ಪ್ರಕರಣಗಳಲ್ಲಿ ಇಳಿಕೆ ಕಂಡಿದ್ದು, ಶೇ.50ರಷ್ಟು ಪ್ರಕರಣಗಳು ಕಡಿಮೆಯಾಗಿದೆ. ಜನವರಿ 1 ರಿಂದ ಜುಲೈ 23 ರವರೆಗೆ ನಗರದಲ್ಲಿ ಕೇವಲ 1676 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ.

Street Dog attack: ಬೆಂಗಳೂರಿನಲ್ಲಿ ಬೀದಿನಾಯಿಗಳ ಬರ್ಬರ ದಾಳಿಗೆ ವೃದ್ಧ ಬಲಿ

ಬೆಂಗಳೂರಿನಲ್ಲಿ ಬೀದಿನಾಯಿಗಳ ಬರ್ಬರ ದಾಳಿಗೆ ವೃದ್ಧ ಬಲಿ

Bengaluru News: ನಿನ್ನೆ ಬೆಳಿಗ್ಗೆ ವಾಕಿಂಗ್ ಹೋಗುತ್ತಿದ್ದಾಗ ಸೀತಪ್ಪ ಅವರ ಮೇಲೆ ಬೀದಿ ನಾಯಿಗಳು ದಾಳಿ ಮಾಡಿವೆ. ಓಡಲಾಗದೆ ಬಿದ್ದ ವೃದ್ಧ ಸೀತಪ್ಪ ಅವರ ಕೈ ಕಾಲು ಮತ್ತು ಮುಖಕ್ಕೆ ಬೀದಿ ನಾಯಿಗಳು ಕಚ್ಚಿ ಗಂಭೀರವಾಗಿ ಗಾಯಗೊಳಿಸಿದ್ದವು. ಚಿಕಿತ್ಸೆಗಾಗಿ ಅವರನ್ನು ಆಸ್ಪತ್ರೆಗೆ ಒಯ್ಯಲಾಗಿತ್ತು. ಇದೀಗ ಚಿಕಿತ್ಸೆ ಫಲಕಾರಿ ಆಗದೆ ಸೀತಪ್ಪ ಕೊನೆಯುಸಿರೆಳೆದಿದ್ದಾರೆ.

Gold Price Today:ಚಿನ್ನದ ದರದಲ್ಲಿ ಕೊಂಚ ಇಳಿಕೆ; ಇಂದಿನ ರೇಟ್‌ ಚೆಕ್‌ ಮಾಡಿ

ಇಂದು ಚಿನ್ನದ ದರ ಎಷ್ಟಿದೆ? ಇಲ್ಲಿ ಚೆಕ್‌ ಮಾಡಿ

Gold Price Today on 29th July 2025: ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆಯಲ್ಲಿ 10 ರೂ. ಇಳಿಕೆ ಕಂಡು ಬಂದಿದೆ. ಆ ಮೂಲಕ ಆ ಮೂಲಕ 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ 9,150 ರೂ ಗೆ ಬಂದು ನಿಂತಿದೆ. 24 ಕ್ಯಾರಟ್‌ 1 ಗ್ರಾಂ ಚಿನ್ನ 11 ರೂ ಇಳಿಕೆ ಕಂಡಿದ್ದು, 9,982 ರೂ. ಆಗಿದೆ.

Raichur news: ಕಾಂಗ್ರೆಸ್‌ ಕಾರ್ಯಕ್ರಮದ ಬ್ಯಾನರ್‌ನಲ್ಲಿ ಸಿಎಂ, ಡಿಸಿಎಂ ಫೋಟೋ ಮಾಯ; ʼಕ್ಷಮಿಸಿʼ ಎಂದ ಸೌಮ್ಯಾ ರೆಡ್ಡಿ

ಕಾಂಗ್ರೆಸ್‌ ಕಾರ್ಯಕ್ರಮದ ಬ್ಯಾನರ್‌ನಲ್ಲಿ ಸಿಎಂ, ಡಿಸಿಎಂ ಫೋಟೋ ಮಾಯ!

Women Congress: ರಾಯಚೂರಿನಲ್ಲಿ ನಡೆದ ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಾವೇಶದಲ್ಲಿ ಈ ಘಟನೆ ನಡೆದಿದೆ. ರಾಜ್ಯ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಸೌಮ್ಯಾ ರೆಡ್ಡಿ ನೇತೃತ್ವದಲ್ಲಿ ಈ ಕಾರ್ಯಕ್ರಮ ನಡೆದಿತ್ತು. ಕಾರ್ಯಕ್ರಮದ ಬ್ಯಾನರ್‌ನಲ್ಲಿ ರಾಷ್ಟ್ರ, ರಾಜ್ಯ, ಜಿಲ್ಲೆ ಹಾಗೂ ಸ್ಥಳೀಯ ಮಟ್ಟದ ನಾಯಕರ ಫೋಟೋಗಳು ಕಂಡುಬಂದವಾದರೂ, ಸಿಎಂ, ಡಿಸಿಎಂ ಚಿತ್ರಗಳು ಕಾಣಿಸಲಿಲ್ಲ.

Federal Bank: ಫೆಡರಲ್ ಬ್ಯಾಂಕ್‌ನಿಂದ ಇಕಾಮ್‌ ಕಾರ್ಡ್ ವಹಿವಾಟುಗಳಿಗೆ ಬಯೊಮೆಟ್ರಿಕ್‌ ವ್ಯವಸ್ಥೆ - ಭಾರತದಲ್ಲಿ ಇದೇ ಮೊದಲು

ಫೆಡರಲ್ ಬ್ಯಾಂಕ್‌ನಿಂದ ಹೊಸ ಪ್ರಯತ್ನ

ಪ್ರಮುಖ ಖಾಸಗಿ ಬ್ಯಾಂಕ್ ಆಗಿರುವ ಫೆಡರಲ್ ಬ್ಯಾಂಕ್ ಫಿನ್‌ಟೆಕ್‌ ಪಾಲುದಾರರಾದ M2P ಮತ್ತು ಮಿಂಕಾಸುಪೇ (MinkasuPay) ಜೊತೆಗೂಡಿ ಭಾರದತದಲ್ಲಿ ಮೊದಲ ಬಾರಿಗೆ ಇ ಕಾಮರ್ಸ್ ಕಾರ್ಡ್ ವಹಿವಾಟುಗಳಿಗೆ ಬಯೊಮೆಟ್ರಿಕ್‌ ದೃಢೀಕರಣ ವ್ಯವಸ್ಥೆಯನ್ನು ಪರಿಚಯಿಸಿದೆ. ಈ ಬಯೊಮೆಟ್ರಿಕ್ ವ್ಯವಸ್ಥೆಯನ್ನು ಒಟಿಪಿ ವ್ಯವಸ್ಥೆಗೆ ಬದಲಿಯಾಗಿ ಸೃಷ್ಟಿಸಲಾಗಿದ್ದು ವಹಿವಾಟಿನ ಸಮಯವನ್ನು 3- 4 ಸೆಕೆಂಡ್‌ಗೆ ತಗ್ಗಿಸಿದೆ.

CM Siddaramaiah: ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿರುವುದು 5 ವರ್ಷಕ್ಕೆ: ಬಸವರಾಜ ರಾಯರೆಡ್ಡಿ

ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿರುವುದು 5 ವರ್ಷಕ್ಕೆ: ಬಸವರಾಜ ರಾಯರೆಡ್ಡಿ

CM Siddaramaiah: ಯಾರು ಬೇಕಾದ್ರೂ ಸಿಎಂ ಆಗಬಹುದು, ಅದರಲ್ಲಿ ತಪ್ಪಿಲ್ಲ. ಆದರೆ ಈಗ ಆ ಸಂದರ್ಭ ಬಂದಿಲ್ಲ ಅಂತ ಹೇಳಿದ್ದೇನೆ. ಮಲ್ಲಿಕಾರ್ಜುನ್ ಖರ್ಗೆ ಮುಖ್ಯಮಂತ್ರಿ ಆಗುವುದಕ್ಕೆ ಅರ್ಹ ವ್ಯಕ್ತಿ. ಮಲ್ಲಿಕಾರ್ಜುನ್ ಖರ್ಗೆ ಪ್ರಧಾನಿ ಆಗಲಿ ಅಂತ ವಿಶ್ ಮಾಡ್ತೀನಿ ಎಂದು ಬಸವರಾಜ ರಾಯರೆಡ್ಡಿ ಹೇಳಿದ್ದಾರೆ.

A Khata: ಲಂಚ ಕೊಡಬೇಡಿ, ಸದ್ಯದಲ್ಲೇ ಎ- ಖಾತಾ ವ್ಯವಸ್ಥೆ ಆನ್‌ಲೈನ್‌

ಲಂಚ ಕೊಡಬೇಡಿ, ಸದ್ಯದಲ್ಲೇ ಎ- ಖಾತಾ ವ್ಯವಸ್ಥೆ ಆನ್‌ಲೈನ್‌

A Khata: ಎ ಖಾತಾ ಮಾಡಿಸಿಕೊಳ್ಳಲು ಯಾವುದೇ ಬಿಬಿಎಂಪಿ ಕಚೇರಿಗೆ ಹೋಗಬೇಡಿ ಮತ್ತು ಯಾವುದೇ ಮಧ್ಯವರ್ತಿಗಳನ್ನು ಸಂಪರ್ಕಿಸಬೇಡಿ. ಯಾರಿಗೂ ಲಂಚ ನೀಡಬೇಡಿ. ಆನ್‌ಲೈನ್ ವ್ಯವಸ್ಥೆಯನ್ನು ಶೀಘ್ರದಲ್ಲೇ ಪ್ರಾರಂಭಿಸಲಾಗುವುದು ಎಂದು ಬಿಬಿಎಂಪಿ ಆಯುಕ್ತ ಎಂ ಮಹೇಶ್ವರ ರಾವ್ ತಿಳಿಸಿದ್ದಾರೆ.

Dharmasthala: ಧರ್ಮಸ್ಥಳದ ಕಾಡಿನಲ್ಲಿ ಶವ ಹೂಳಿದ ಜಾಗಗಳನ್ನು ತೋರಿಸಿದ ಮುಸುಕುಧಾರಿ

ಧರ್ಮಸ್ಥಳದ ಕಾಡಿನಲ್ಲಿ ಶವ ಹೂಳಿದ ಜಾಗಗಳನ್ನು ತೋರಿಸಿದ ಮುಸುಕುಧಾರಿ

Mass burial case: ಧರ್ಮಸ್ಥಳದ ನೇತ್ರಾವತಿ ನದಿ ಸ್ನಾನಘಟ್ಟದ ಪಕ್ಕದ ಕಾಡಿನಲ್ಲಿ ಈಗಾಗಲೇ ತಾನು ತಲೆಬುರುಡೆಯನ್ನು ತಂದ ಸ್ಥಳ, ಶವ ಹೂಳಲಾಗಿದ್ದ ಸ್ಥಳದಲ್ಲಿ ಇನ್ನಷ್ಟು ಮೂಳೆಗಳು ಹಾಗೂ ಇನೂ ಕೆಲವು ಸಮಾಧಿ ಸ್ಥಳಗಳನ್ನು ಎಸ್‌ಐಟಿಗೆ ತೋರಿಸಿದ್ದಾನೆ. ಅದರ ಆಧಾರದ ಮೇಲೆ ಅರಣ್ಯದ ಒಳಭಾಗದಲ್ಲಿ ಸಮಾಧಿಗಳ ಮೇಲೆ ಗುರುತು ಮಾಡಲಾಗಿದೆ.

Lokayukta Raid: ಚಿತ್ರದುರ್ಗ, ಚಿಕ್ಕಬಳ್ಳಾಪುರದಲ್ಲಿ ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ದಾಳಿ

ಚಿತ್ರದುರ್ಗ, ಚಿಕ್ಕಬಳ್ಳಾಪುರದಲ್ಲಿ ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ದಾಳಿ

Chitradurga: ಇಬ್ಬರು ಅಧಿಕಾರಿಗಳ ವಿರುದ್ಧ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಸಂಪಾದನೆ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ಲೋಕಾಯುಕ್ತ ಪೊಲೀಸರು ತೀವ್ರ ತನಿಖೆ ನಡೆಸುತ್ತಿದ್ದಾರೆ. ದಾಖಲೆಗಳ ಪರಿಶೀಲನೆ ಮುಂದುವರಿದಿದ್ದು, ಮುಂದಿನ ಕಾನೂನು ಕ್ರಮಕ್ಕಾಗಿ ವರದಿ ಸಿದ್ಧಪಡಿಸಲಾಗುತ್ತಿದೆ. ಚಿತ್ರದುರ್ಗ, ಚಿಕ್ಕಬಳ್ಳಾಪುರದಲ್ಲಿ ದಾಳಿಗಳು ನಡೆದಿವೆ.

Himavad Gopalaswamy Betta: ಹಿಮವದ್‌ ಗೋಪಾಲಸ್ವಾಮಿ ಬೆಟ್ಟ ಎರಡು ದಿನ ಪ್ರವಾಸಿಗರಿಗೆ ಬಂದ್‌

ಹಿಮವದ್‌ ಗೋಪಾಲಸ್ವಾಮಿ ಬೆಟ್ಟ ಎರಡು ದಿನ ಪ್ರವಾಸಿಗರಿಗೆ ಬಂದ್‌

Chamarajanagara: ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ತೆರಳುವ ರಸ್ತೆ ಕುಸಿದಿದೆ. ಭಾರಿ ಮಳೆಯಿಂದ ಹಲೆವೆಡೆ ಕುಸಿತ ಸಂಭವಿಸಿದೆ. ಈ ಪೈಕಿ ಬೆಟ್ಟದ ರಸ್ತೆಯ ಪ್ಯಾರಪಿಟ್ ವಾಲ್ (ಅಡ್ಡಗೋಡೆ) ಕುಸಿದಿರುವ ಕಾರಣ ವಾಹನಗಳಿಗೆ ಸಾಗಲು ಸಾಧ್ಯವಾಗುತ್ತಿಲ್ಲ. ದುರಸ್ತಿ ಕಾರ್ಯಗಳಿಗಾಗಿ ರಸ್ತೆಯನ್ನು ಎರಡು ದಿನ ಮುಚ್ಚಲಾಗುತ್ತಿದೆ.

Drugs Factory: ಮೈಸೂರಿನಲ್ಲಿ ಡ್ರಗ್ಸ್‌ ಫ್ಯಾಕ್ಟರಿ ಪತ್ತೆ, ₹390 ಕೋಟಿಯ ಮಾದಕ ವಸ್ತು ವಶ‌

ಮೈಸೂರಿನಲ್ಲಿ ಡ್ರಗ್ಸ್‌ ಫ್ಯಾಕ್ಟರಿ ಪತ್ತೆ, ₹390 ಕೋಟಿಯ ಮಾದಕ ವಸ್ತು ವಶ‌

ಮೈಸೂರು ರಿಂಗ್‌ ರಸ್ತೆಯ ಕಟ್ಟಡದ ಮುಂಭಾಗವು ಹೋಟೆಲ್ ಮತ್ತು ಗ್ಯಾರೇಜ್‌ನಂತೆ ಕಾಣುತ್ತಿತ್ತು. ಆದರೆ, ಅದನ್ನು ಪ್ರವೇಶಿಸಿದಾಗ, ನಮಗೆ ಮೆಫೆಡ್ರೋನ್ ಉತ್ಪಾದನಾ ಘಟಕ ಸಿಕ್ಕಿತು. ಇಲ್ಲಿಂದ ಅಕ್ರಮವಾಗಿ ಮುಂಬೈ ಮತ್ತು ಪಕ್ಕದ ಜಿಲ್ಲೆಗಳಿಗೆ ಸರಬರಾಜು ಮಾಡಲಾಗುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

Loading...