ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಕರ್ನಾಟಕ

ರಾಜ್ಯದ ಎಲ್ಲಾ ನಗರಗಳಲ್ಲಿ ಸಂಚಾರಿ ಗ್ರಿಡ್ ರೂಪಿಸಲು ಚಿಂತನೆ: ಡಿಸಿಎಂ ಡಿ.ಕೆ. ಶಿವಕುಮಾರ್

ರಾಜ್ಯದ ಎಲ್ಲಾ ನಗರಗಳಲ್ಲಿ ಸಂಚಾರಿ ಗ್ರಿಡ್ ರೂಪಿಸಲು ಚಿಂತನೆ: ಡಿಸಿಎಂ

ದಾವೋಸ್ ಕಾರ್ಯಕ್ರಮದಲ್ಲಿ ಕೆಲವು ಕಂಪನಿಗಳು ಕರ್ನಾಟಕದ 2-3ನೇ ಹಂತದ ನಗರಗಳ ಬಗ್ಗೆಯೂ ಆಸಕ್ತಿ ಹೊಂದಿದ್ದು, ಈ ನಗರಗಳು ಪ್ರಕಾಶಮಾನವಾಗಿ, ಯುವ ಪ್ರತಿಭೆಗಳನ್ನು ಹೊಂದಿರಬೇಕು ಎಂದು ಚರ್ಚೆ ಮಾಡಿದ್ದಾರೆ. ಇಡೀ ರಾಜ್ಯದಲ್ಲಿ ಎಲ್ಲಾ ನಗರ ಪ್ರದೇಶಗಳಿಗೆ ಸಂಚಾರ ಯೋಜನೆ ರೂಪಿಸಬೇಕು ಎಂದು ಡಿಕೆ ಶಿವಕುಮಾರ್‌ ತಿಳಿಸಿದ್ದಾರೆ.

Chimul Election: ಚಿಮುಲ್ ಚುನಾವಣೆಗೂ ಮುನ್ನ ಕಾಂಗ್ರೆಸ್‌ನಲ್ಲಿ ಒಳಪೈಪೋಟಿ : ಪುಟ್ಟು ಆಂಜಿನಪ್ಪಗೆ ವಿರೋಧ ಬಲ

ಚಿಮುಲ್ ಚುನಾವಣೆಗೂ ಮುನ್ನ ಕಾಂಗ್ರೆಸ್‌ನಲ್ಲಿ ಒಳಪೈಪೋಟಿ

ಚಿಮುಲ್ ನಿರ್ದೇಶಕ ಮಂಡಳಿ ಚುನಾವಣೆಯನ್ನು ಎದುರಿಸುವ ಸಂದರ್ಭದಲ್ಲಿ ಸಹ, ಸಮೂಹ ನಾಯಕತ್ವ ಮತ್ತು ಸಂಘಟಿತ ಪ್ರಯತ್ನಗಳ ಅಗತ್ಯವಿದ್ದರೂ, ಆಂಜಿನಪ್ಪ ಪುಟ್ಟು ಅವರನ್ನು ಮುಂದಿಟ್ಟು ತೋರಿಸುವ ಪ್ರಯತ್ನ ಪಕ್ಷದ ಒಗ್ಗಟ್ಟಿಗೆ ಧಕ್ಕೆ ತರುತ್ತಿದೆ ಎಂದು ಒಂದು ವರ್ಗ ಆಕ್ಷೇಪ ವ್ಯಕ್ತಪಡಿಸಿದೆ.

ಕಾಂಗ್ರೆಸ್‌ನಲ್ಲಿ ಸಚಿವರ ಬಣ ಶಾಸಕರ ಬಣ ಎಂಬುದಿಲ್ಲ, ಡೆಲಿಗೇಟ್ಸ್ ಆಶೀರ್ವಾದ ಇದ್ದವರು ಗೆಲುವು ಸಾಧಿಸುವರು: ಭರಣಿ ವೆಂಕಟೇಶ್ ಅಭಿಮತ

ಕಾಂಗ್ರೆಸ್‌ನಲ್ಲಿ ಸಚಿವರ ಬಣ ಶಾಸಕರ ಬಣ ಎಂಬುದಿಲ್ಲ

ನಾನು ಕಳೆದ 6 ವರ್ಷಗಳಿಂದ ಹಾಲು ಒಕ್ಕೂಟದಲ್ಲಿ ಮತ್ತು ತಾಲೂಕಿನ 205 ಹಾಲು ಉತ್ಪಾ ದಕ ಸಹಕಾರ ಸಂಘಗಳಲ್ಲಿ ಸಕ್ರಿಯವಾಗಿ ಕೆಲಸ ಮಾಡಿದ್ದೇನೆ. ಯಾವ ರೀತಿ ಕೆಲಸ ಮಾಡಿದ್ದೇನೆ ಎಂಬುದು ಎಲ್ಲಾ ಹಾಲು ಉತ್ಪಾದಕ ರೈತ ಬಾಂದವರಿಗೆ ಗೊತ್ತಿದೆ.ನಾನು ಕೆಲಸ ಮಾಡಿರುವು ದರಿಂದ ಮತ್ತೊಮ್ಮೆ ನನ್ನನ್ನು ಆಯ್ಕೆ ಮಾಡಿಕೊಳ್ಳುತ್ತಾರೆ ಎಂಬ ವಿಶ್ವಾಸವಿದೆ

Chimul Election: ಸಚಿವರ ಬೆಂಬಲದಿಂದ ಚಿಮುಲ್ ಚುನಾವಣೆಗೆ ಸ್ಪರ್ಧೆ ಮಾಡಿದ್ದು ಗೆಲ್ಲುವ ವಿಶ್ವಾಸವಿದೆ: ಕೆ.ಆರ್.ರಾಜಣ್ಣ

ಚಿಮುಲ್ ಚುನಾವಣೆಗೆ ಸ್ಪರ್ಧೆ ಮಾಡಿದ್ದು ಗೆಲ್ಲುವ ವಿಶ್ವಾಸವಿದೆ

ಚಿಕ್ಕಬಳ್ಳಾಪುರ ಹಾಲು ಒಕ್ಕೂಟದ ಚುನಾವಣೆ ಸಂಬಂಧ ಉಮೇದುವಾರಿಕೆ ವಾಪಸ್ಸು ಪಡೆ ಯಲು ಶನಿವಾರ ಅಂತಿಮ ದಿನವಾಗಿತ್ತು. ಈ ದಿನವೇ ಕಣದಲ್ಲಿರುವ ಅಭ್ಯರ್ಥಿಗಳಿಗೆ ಕ್ರಮ ಸಂಖ್ಯೆ ಮತ್ತು ಚಿನ್ಹೆ ನೀಡಲಾಗಿದೆ. ಅದರಂತೆ ನನ್ನ ಕ್ರಮಸಂಖ್ಯೆ 02 ಮತ್ತು ಚಿನ್ಹೆ ಫ್ರೆಷರ್ ಕುಕ್ಕರ್ ಆಗಿದೆ.

ಕರ್ನಾಟಕದಲ್ಲಿ ಹೂಡಿಕೆಗೆ ಉತ್ತಮ ಅವಕಾಶ; ಸಿಎಂ ಸಿದ್ದರಾಮಯ್ಯ

ಕರ್ನಾಟಕದಲ್ಲಿ ಹೂಡಿಕೆಗೆ ಉತ್ತಮ ಅವಕಾಶ; ಸಿಎಂ ಸಿದ್ದರಾಮಯ್ಯ

ಕರ್ನಾಟಕದಲ್ಲಿ ಹೂಡಿಕೆಗೆ ಉತ್ತಮ ಅವಕಾಶವಿದೆ ಎಂದು ಮುಖ್ಯಮಂತ್ರಿ‌ ಸಿದ್ದರಾಮಯ್ಯ ತಿಳಿಸಿದರು. ಅವರು‌ ಇಂದು ಮೈಸೂರು ವಿಮಾನ ನಿಲ್ದಾಣದಲ್ಲಿ ಜಿಲ್ಲಾಡಳಿತದಿಂದ ಗೌರವ ವಂದನೆ ಸ್ವೀಕರಿಸಿ, ಮಾಧ್ಯಮದವರ ಜೊತೆ ಮಾತನಾಡಿದರು.‌ ಕರ್ನಾಟಕದಲ್ಲಿ ಹೂಡಿಕೆಗೆ ಉತ್ತಮ ವಾತಾವರಣವಿದೆ. ಕೌಶಲ್ಯವಿರುವ ಮಾನವ ಸಂಪನ್ಮೂಲ ಲಭ್ಯತೆಯಿದೆ. ಇದಕ್ಕೆ ತರಬೇತಿಯೂ ನೀಡಲಾಗುತ್ತಿದೆ ಎಂದು ಹೇಳಿದರು.

Kalaburagi Fort: ಇಚ್ಛಾಶಕ್ತಿ ಕೊರತೆ: ಅವನತಿಯತ್ತ ಕಲಬುರಗಿ ಕೋಟೆ

ಇಚ್ಛಾಶಕ್ತಿ ಕೊರತೆ: ಅವನತಿಯತ್ತ ಕಲಬುರಗಿ ಕೋಟೆ

ಸ್ಮಾರಕದ ಒಳಭಾಗದಲ್ಲೇ ಅಕ್ರಮ ವಾಸಿಗಳಿಗೆ ವಿದ್ಯುತ್, ನೀರು, ರಸ್ತೆ ಸೇರಿದಂತೆ ಮೂಲಸೌಕರ್ಯ ಕಲ್ಪಿಸಲಾಗುತ್ತಿದೆ. ಇದು ಅತಿಕ್ರಮಣ ಕ್ಕೆ ನೇರ ಬೆಂಬಲ ನೀಡಿದಂತೆ ಎನ್ನುವ ಟೀಕೆಗಳು ಕೇಳಿಬರುತ್ತಿವೆ. ಕೆಲವರ ಇಚ್ಛಾಶಕ್ತಿಯ ಕೊರತೆಯಿಂದ, ವಿಶ್ವವಿಖ್ಯಾತವಾಗಬೇಕಿದ್ದ ಐತಿಹಾಸಿಕ ಪರಂಪರೆಗೆ ಅನ್ಯಾಯ ವಾಗುತ್ತಿರುವುದು ನಿರಾಕರಣೀಯ ಸತ್ಯ.

ʼಪುಸ್ತಕ ಮನೆʼ ಖ್ಯಾತಿಯ ಕನ್ನಡಿಗ ಅಂಕೇ ಗೌಡಗೆ ಪದ್ಮಶ್ರೀ ಪ್ರಶಸ್ತಿ ಪ್ರಕಟ

ಕನ್ನಡಿಗ ಅಂಕೇ ಗೌಡಗೆ ಪದ್ಮಶ್ರೀ ಪ್ರಶಸ್ತಿ ಪ್ರಕಟ

ಭಾರತ ಸರ್ಕಾರದ ಈ ಸಾಲಿನ ಪ್ರತಿಷ್ಠಿತ ಪದ್ಮ ಪ್ರಶಸ್ತಿ ಪ್ರಕಟವಾಗಿದೆ. ಈ ಪೈಕಿ ಕನ್ನಡಿಗೆ ಅಂಕೇಗೌಡ ಅವರಿಗೆ ಪದ್ಮಶ್ರೀ ಘೋಷಿಸಲಾಗಿದೆ. ಮೈಸೂರು ಮೂಲದ ಇವರು 20 ಲಕ್ಷಕ್ಕೂ ಅಧಿಕ ಪುಸ್ತಕ ಸಂಗ್ರಹಿಸುವ ಮೂಲಕ ಗಮನ ಸೆಳೆದಿದ್ದಾರೆ. ಇವರು ಸಾಹಿತ್ಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ.

Mahakutumba: ಗೋಳಿಕೈ ಗಣಪತಿ ಹೆಗಡೆಯವರಿಗೆ ಕನಕಾಭಿಷೇಕ

ಗೋಳಿಕೈ ಗಣಪತಿ ಹೆಗಡೆಯವರಿಗೆ ಕನಕಾಭಿಷೇಕ

ಒಬ್ಬ ವ್ಯಕ್ತಿಗೆ ಮರಿ ಮಗ ಹುಟ್ಟಿ, ಆ ಮಗುವಿಗೆ ನಾಮಕರಣವಾದ ನಂತರ ಈ ಆಚರಣೆ ನಡೆಯುತ್ತದೆ. ಅಂದರೆ, ಒಬ್ಬ ವ್ಯಕ್ತಿ ತನ್ನ ಮಗನ ಮಗನನ್ನು ನೋಡಿದಾಗ ಇದು ನಡೆಯುತ್ತದೆ. ಸಾಮಾನ್ಯವಾಗಿ 90 ರಿಂದ 100 ವರ್ಷಗಳ ಸುದೀರ್ಘ ಆಯುಷ್ಯವನ್ನು ಹೊಂದಿದವರಿಗೆ ಈ ಗೌರವ ಸಲ್ಲಿಕೆಯಾಗುತ್ತದೆ.

ಬೆಳಗಾವಿಯಲ್ಲಿ ನಡೀತು ದೇಶದಲ್ಲಿಯೇ ಅತ್ಯಂತ ದೊಡ್ಡ ದರೋಡೆ; 400 ಕೋಟಿ  ರಾಬರಿ!

ಬೆಳಗಾವಿಯಲ್ಲಿ ನಡೀತು ದೇಶದಲ್ಲಿಯೇ ಅತ್ಯಂತ ದೊಡ್ಡ ದರೋಡೆ!

Maharashtra Robbery Case: ಗೋವಾದಿಂದ ಮಹಾರಾಷ್ಟ್ರಕ್ಕೆ ಸಾಗಿಸುತ್ತಿದ್ದ 400 ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ನಿಷೇಧಿತ 2,000 ರೂ. ಮುಖಬೆಲೆಯ ನೋಟುಗಳಿದ್ದ ಎರಡು ಕಂಟೇನರ್‌ಗಳನ್ನ ಬೆಳಗಾವಿಯ ಚೋರ್ಲಾ ಘಾಟ್‌ನಲ್ಲಿ ಹೈಜಾಕ್ ಮಾಡಲಾಗಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

Honorary Award: ಸಾಧಕ ಮಹನೀಯರಿಗೆ ಪುರಸ್ಕಾರದ ಗೌರವ

Honorary Award: ಸಾಧಕ ಮಹನೀಯರಿಗೆ ಪುರಸ್ಕಾರದ ಗೌರವ

ಉತ್ತರ ಕನ್ನಡ ಜಿಲ್ಲೆಯ ಪ್ರಪ್ರಥಮ ದೈನಿಕ ಲೋಕಧ್ವನಿಯು ಜಿಲ್ಲೆಯ ಪತ್ರಿಕೋದ್ಯಮ ಇತಿಹಾಸದಲ್ಲಿ ಮೊದಲ ಬಾರಿಗೆ ರಾಜಧಾನಿ ಬೆಂಗಳೂರಿನ ರಾಡಿಸನ್ ಬ್ಲೂ ಹೋಟೆಲ್‌ ನಲ್ಲಿ ನಮ್ಮ ಹೆಮ್ಮೆಯ ಸಾಧಕರು ಪ್ರಶಸ್ತಿ ಪ್ರದಾನ ಎಂಬ ಕಾರ್ಯಕ್ರಮವನ್ನು ಆಯೋಜಿ ಸಿತ್ತು. ಉತ್ತರ ಕನ್ನಡ, ಕೊಪ್ಪಳ ಜಿಲ್ಲೆಯಲ್ಲಿ ವಿವಿಧ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡಿದ ಮಹನೀಯರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯಅವರು ಪ್ರಶಸ್ತಿ ನೀಡಿ ಗೌರವಿಸಿದರು.

ಕೆಎಂಎಫ್‌ನಿಂದ ಗುಡ್‌ ನ್ಯೂಸ್‌; 10ರೂ. ಸಿಗುತ್ತೆ, ನಂದಿನಿ ಹಾಲು, ಮೊಸರು

ಕೆಎಂಎಫ್‌ನಿಂದ ಗುಡ್‌ ನ್ಯೂಸ್‌; 10ರೂ. ಸಿಗುತ್ತೆ, ನಂದಿನಿ ಹಾಲು, ಮೊಸರು

ಕರ್ನಾಟಕ ಸಹಕಾರ ಹಾಲು ಉತ್ಪಾದಕ ಮಹಾಮಂಡಳ (ಕೆಎಂಎಫ್) ರಾಜ್ಯದ ಸಾಮಾನ್ಯ ಗ್ರಾಹಕರಿಗೆ ಭರ್ಜರಿ ಉಡುಗೊರೆ ನೀಡಿದ್ದು, ಬೆಲೆ ಏರಿಕೆಯ ನಡುವೆ ಕಂಗಾಲಾಗಿದ್ದ ಸಾಮಾನ್ಯ ಜನರಿಗೆ ನಂದಿನಿ ಬ್ರ್ಯಾಂಡ್‌ನ ಹಾಲು ಮತ್ತು ಮೊಸರು ಇನ್ಮುಂದೆ ಕೇವಲ 10 ರೂಪಾಯಿಗೆ ಮಾರುಕಟ್ಟೆಯಲ್ಲಿ ಲಭ್ಯವಾಗಲಿವೆ.

ಮಾದಪ್ಪನ ದರ್ಶನಕ್ಕೆ ತೆರಳುವವರೇ ಗಮನಿಸಿ; ಮಲೆ ಮಹದೇಶ್ವರದಲ್ಲಿ ಹೊಸ ರೂಲ್ಸ್‌ ಜಾರಿ

ಭಕ್ತರಿಗೆ ಮಲೆ ಮಹದೇಶ್ವರದಲ್ಲಿ ಹೊಸ ರೂಲ್ಸ್‌ ಜಾರಿ

ಮಲೆ ಮಹದೇಶ್ವರ ಬೆಟ್ಟದಲ್ಲಿ ಚಿರತೆ ದಾಳಿಗೆ ಭಕ್ತನೊಬ್ಬ ಬಲಿಯಾದ ಘಟನೆ ಹಿನ್ನೆಲೆ, ಚಾಮರಾಜನಗರ ಜಿಲ್ಲಾಡಳಿತ ಪಾದಯಾತ್ರಿಕರು ಹಾಗೂ ದ್ವಿಚಕ್ರ ವಾಹನ ಸವಾರರಿಗೆ ಸಂಬಂಧಿಸಿದಂತೆ ಹೊಸ ಆದೇಶವನ್ನು ಹೊರಡಿಸಿದೆ. ಮಾದಪ್ಪನ ದರ್ಶನಕ್ಕೆ ಸಮಯ ನಿಗದಿ ಮಾಡಲಾಗಿದೆ.

ʼವಿಶ್ವವಾಣಿʼಯಂತೆ ʼಲೋಕಧ್ವನಿʼಯೂ ಬೆಳಗಲಿ

ʼವಿಶ್ವವಾಣಿʼಯಂತೆ ʼಲೋಕಧ್ವನಿʼಯೂ ಬೆಳಗಲಿ

ವಿಶ್ವೇಶ್ವರ ಭಟ್ಟರು ಉತ್ತರ ಕನ್ನಡದ ಪ್ರಮುಖ ಪತ್ರಿಕೆಯಾಗಿರುವ ಲೋಕಧ್ವನಿಯ ಸಾರಥ್ಯ ವಹಿಸಿಕೊಂಡ ಬಳಿಕ ಈ ಪತ್ರಿಕೆಯನ್ನು ಕೊಪ್ಪಳಕ್ಕೂ ವಿಸ್ತರಿಸಿದ್ದಾರೆ. ಶೀಘ್ರದಲ್ಲಿಯೇ ಮೈಸೂರಿನಲ್ಲಿಯೂ ಆರಂಭಿಸುವುದಾಗಿ ಹೇಳಿದ್ದಾರೆ. ಆದ್ದರಿಂದ ಲೋಕಧ್ವನಿ ಜಿಲ್ಲಾಮಟ್ಟದ ಪತ್ರಿಕೆಯಾಗಿ ಉಳಿದಿಲ್ಲ. ಬದಲಿಗೆ ಅದೂ ಸಹ ರಾಜ್ಯಮಟ್ಟದ ಪತ್ರಿಕೆ ಯಾಗುವತ್ತ ಸಾಗುತ್ತದೆ.

Achievers: ನಾಡಿನ ಸಾಧಕರಿಗೆ ʼಲೋಕಧ್ವನಿʼಯ ಗೌರವ

Achievers: ನಾಡಿನ ಸಾಧಕರಿಗೆ ʼಲೋಕಧ್ವನಿʼಯ ಗೌರವ

ವಿಭಿನ್ನ ಸುದ್ದಿಯ ಮೂಲಕವೇ ಜನಜನಿತವಾಗಿರುವ ಲೋಕಧ್ವನಿ, ತೆರೆಮರೆಯ ಸಾಧಕ ರನ್ನು ಗುರುತಿಸುವ ನಿಟ್ಟಿನಲ್ಲಿ ‘ಲೋಕಧ್ವನಿ ಹೆಮ್ಮೆಯ ಸಾಧಕ -2026’ ನೀಡಲಾಯಿತು. ಎಲೆಮರೆಯ ಕಾಯಿಗಳಂತೆ ಗ್ರಾಮೀಣ ಪ್ರದೇಶದಲ್ಲಿ ಸಾಧನೆ ಮಾಡಿರುವ ಕರುನಾಡಿನ ಸಾಧಕರನ್ನು ಪರಿಚಯಿಸುವುದು ಈ ಕಾರ್ಯಕ್ರಮದ ಮೂಲ ಉದ್ದೇಶವಾಗಿತ್ತು.

Voice of Uttara Kannada, 'Lokadhvani': ಉತ್ತರ ಕನ್ನಡದ ಧ್ವನಿ ʼಲೋಕಧ್ವನಿʼ

ಉತ್ತರ ಕನ್ನಡದ ಧ್ವನಿ ʼಲೋಕಧ್ವನಿʼ

ಲೋಕಧ್ವನಿ ಪತ್ರಿಕೆಯ 42ನೇ ವರ್ಷದ ವಾರ್ಷಿಕೋತ್ಸವ ಹಾಗೂ ಲೋಕಧ್ವನಿ ನಮ್ಮ ಹೆಮ್ಮೆಯ ಸಾಧಕರ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಲೋಕ ಧ್ವನಿ ಪತ್ರಿಕೆಯು ಉತ್ತರ ಕನ್ನಡ ಜಿಲ್ಲೆಯ ಮೊದಲ ದೈನಿಕವಾಗಿದ್ದು, ಕಳೆದ ನಾಲ್ಕು ದಶಕಗಳಿಂದ ಜನಜೀವನದ ಅವಿಭಾಜ್ಯ ಅಂಗವಾಗಿ ಬೆಳೆದು ಬಂದಿದೆ.

ನಾನ್‌ವೆಜ್‌ ಪ್ರಿಯರಿಗೆ ಬಿಗ್‌ ಶಾಕ್‌; ಕೋಳಿ ಮಾಂಸದ ಬೆಲೆಯಲ್ಲಿ ಭಾರೀ ಏರಿಕೆ!

ಕೋಳಿ ಮಾಂಸದ ಬೆಲೆಯಲ್ಲಿ ಭಾರೀ ಏರಿಕೆ!

ಕೋಳಿ ಮಾಂಸದ ಬೆಲೆ ದಿನೇದಿನೇ ಏರಿಕೆಯಾಗುತ್ತಿದ್ದು, ಕಳೆದ ಎರಡು ವಾರಗಳಲ್ಲಿ ಪ್ರತಿ ಕೆ.ಜಿ ಮೇಲೆ ಸುಮಾರು 100 ರೂಗೂ ಹೆಚ್ಚಾಗಿದೆ. ಇದರಿಂದ ಚಿಕನ್‌ ಪ್ರಿಯರ ಜೇಬು ಸುಡುತ್ತಿದೆ. ಕೋಳಿ ಮಾಂಸದ ದಿಢೀರ್ ಬೆಲೆ ಏರಿಕೆಗೆ ಹಲವು ಕಾರಣಗಳಿವೆ. ಪ್ರಮುಖವಾಗಿ ತಮಿಳುನಾಡು ಮತ್ತು ಆಂಧ್ರಪ್ರದೇಶಗಳಲ್ಲಿ ಕೋಳಿ ಸಾಕಾಣೆದಾರರು ನಡೆಸುತ್ತಿರುವ ಪ್ರತಿಭಟನೆ ಇದಕ್ಕೆ ಕಾರಣ ಎನ್ನಲಾಗಿದೆ.

ಗಣರಾಜ್ಯೋತ್ಸವಕ್ಕೆ ಮಾಣಿಕ್ ಷಾ ಮೈದಾನ ಸಜ್ಜು; ಹಲವೆಡೆ ಸಂಚಾರ ನಿಷೇಧ

ಗಣರಾಜ್ಯೋತ್ಸವಕ್ಕೆ ಮಾಣಿಕ್ ಷಾ ಮೈದಾನ ಸಜ್ಜು

77ನೇ ಗಣರಾಜ್ಯೋತ್ಸವಕ್ಕೆ ದೇಶಾದ್ಯಂತ ಭರದಿಂದ ಸಿದ್ದತೆ ನಡೆಸಲಾಗುತ್ತಿದೆ. ಐತಿಹಾಸಿಕ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಗಣರಾಜ್ಯೋತ್ಸವಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಸಾರ್ವಜನಿಕ ದೃಷ್ಟಿಯಿಂದ ಬಿಗಿ ಪೊಲೀಸ್ ಬಂದೋಬಸ್ತ್ ನಡುವೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಧ್ವಜಾರೋಹಣ ನೆರವೇರಿಸಲಿದ್ದಾರೆ.

ಬೆಂಗಳೂರಿನ ಮೆಜೆಸ್ಟಿಕ್‌-ಏರ್‌ಪೋರ್ಟ್‌ ಸಬ್‌ ಅರ್ಬನ್‌ ರೈಲು ಯೋಜನೆಗೆ ಕೇಂದ್ರದಿಂದ ಗ್ರೀನ್‌ ಸಿಗ್ನಲ್‌

ಮೆಜೆಸ್ಟಿಕ್‌-ಏರ್‌ಪೋರ್ಟ್‌ ಉಪನಗರ ರೈಲು ಯೋಜನೆಗೆ ಗ್ರೀನ್‌ ಸಿಗ್ನಲ್‌

Bengaluru Suburban Rail Project: ಬೆಂಗಳೂರಿನ ಮೆಜೆಸ್ಟಿಕ್‌ನಿಂದ ಕೆಂಪೇಗೌಡ ವಿಮಾನ ನಿಲ್ದಾಣ ಸಂಪರ್ಕಿಸುವ ಉಪನಗರ ರೈಲು ಯೋಜನೆಯನ್ನು 4,100 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲು ಕೇಂದ್ರ ರೈಲ್ವೆ ಇಲಾಖೆ ಅನುಮೋದನೆ ನೀಡಿದೆ. ಒಟ್ಟು 8.5 ಕಿ.ಮೀ ರೈಲು ಮಾರ್ಗ 2030ರ ವೇಳೆಗೆ ಪೂರ್ಣಗೊಳ್ಳುವ ಸಾಧ್ಯತೆ ಇದೆ.

ಕಡಬದಲ್ಲಿ ಶಾಕಿಂಗ್‌ ಘಟನೆ; ತಂದೆಗೆ ಚಾಕು ಇರಿದ ಬಳಿಕ ಕೋವಿಯಿಂದ ಗುಂಡು ಹಾರಿಸಿಕೊಂಡು ಬಾಲಕ ಆತ್ಮಹತ್ಯೆ!

ತಂದೆಗೆ ಚಾಕುವಿನಿಂದ ಇರಿದ ಬಳಿಕ ಗುಂಡು ಹಾರಿಸಿಕೊಂಡು ಬಾಲಕ ಆತ್ಮಹತ್ಯೆ!

Kadaba News: ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ರಾಮಕುಂಜ ಗ್ರಾಮದ ಪಾದೆಯಲ್ಲಿ ಘಟನೆ ನಡೆದಿದೆ. ಗಲಾಟೆ ವೇಳೆ ಕೋಪದಿಂದ ತಂದೆಗೆ ಚಾಕುವಿನಿಂದ ಇರಿದಿದ್ದ ಬಾಲಕ, ಬಳಿಕ ಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ರಾಜ್ಯದ ಜೈಲುಗಳಲ್ಲಿ ಹೊಸ ರೂಲ್ಸ್‌; ದರ್ಶನ್ ಸೇರಿ ಇತರ ಕೈದಿಗಳಿಗೆ ವಿಶೇಷ ಸೌಲಭ್ಯಕ್ಕೆ ಕುತ್ತು

ಜೈಲಿನಲ್ಲಿ ದರ್ಶನ್ ಸೇರಿ ಇತರ ಕೈದಿಗಳಿಗೆ ವಿಶೇಷ ಸೌಲಭ್ಯಕ್ಕೆ ಕುತ್ತು

ವಿಚಾರಣಾಧೀನ ಆರೋಪಿಗಳಿಗೆ ಒದಗಿಸುವ ಹೊರಗಿನ ಸೌಕರ್ಯದ ಬಗ್ಗೆ ಹೊಸ ಸುತ್ತೋಲೆ ಹೊರಡಿಸಲಾಗಿದೆ. ಹೊರಗಿನಿಂದ ನೀಡುವ ಆಹಾರ, ಬಟ್ಟೆ, ಹಾಸಿಗೆ ಸರಬರಾಜು ನಿಯಂತ್ರಣಕ್ಕೆ ಸಂಬಂಧಿಸಿ ಕೆಲ ನಿರ್ಬಂಧಗಳನ್ನು ವಿಧಿಸಲಾಗಿದೆ. ಈ ಬಗ್ಗೆ ಕಾರಾಗೃಹ ಮತ್ತು ಸುಧಾರಣಾ ಸೇವೆಗಳ ಡಿಜಿಪಿ ಅಲೋಕ್‌ ಕುಮಾರ್‌ ಸುತ್ತೋಲೆ ಹೊರಡಿಸಿದ್ದಾರೆ.

Koratagere News: ಕೊರಟಗೆರೆಯಲ್ಲಿ ಸರ್ಕಾರಿ ಯೋಜನೆಗಳ ಮಾಹಿತಿ ಮಳಿಗೆ ಉದ್ಘಾಟಿಸಿದ ಡಿಸಿ ಶುಭಕಲ್ಯಾಣ್

ಕೊರಟಗೆರೆಯಲ್ಲಿ ಸರ್ಕಾರಿ ಯೋಜನೆಗಳ ಮಾಹಿತಿ ಮಳಿಗೆ ಉದ್ಘಾಟಿಸಿದ ಡಿಸಿ

ಕೊರಟಗೆರೆಯ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಸರ್ಕಾರಿ ಯೋಜನೆಗಳ ಬಗ್ಗೆ ತಿಳಿಸುವ ಮಾಹಿತಿ ಮಳಿಗೆ ಸ್ಥಾಪಿಸಲಾಗಿದೆ. ಈ ಬಗ್ಗೆ ಜಿಲ್ಲಾಧಿಕಾರಿ ಶುಭಕಲ್ಯಾಣ್‌ ಮಾತನಾಡಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಸರ್ಕಾರದ ಯೋಜನೆಗಳ ಮಾಹಿತಿ ಮಳಿಗೆ ಸ್ಥಾಪಿಸಿ, ಯೋಜನೆಗಳ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡುತ್ತಿರುವುದು ಪ್ರಶಂಸನೀಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಟಾಟಾ ಏಸ್-ಸ್ಕೂಟರ್‌ ಮುಖಾಮುಖಿ ಡಿಕ್ಕಿಯಾಗಿ ತಾಯಿ-ಮಗ ಸ್ಥಳದಲ್ಲೇ ಸಾವು

ಬೆಂಗಳೂರಿನಲ್ಲಿ ಟಾಟಾ ಏಸ್-ಸ್ಕೂಟರ್‌ ಡಿಕ್ಕಿಯಾಗಿ ತಾಯಿ-ಮಗ ಸಾವು

ಡಿ ಮಾರ್ಟ್‌ನಿಂದ ದಿನಸಿ ಸಾಮಗ್ರಿ ಖರೀದಿಸಿ ತಾಯಿ-ಮಗ ಡಿಯೋ ಸ್ಕೂಟರ್‌ನಲ್ಲಿ ಮನೆಯತ್ತ ಸಾಗುತ್ತಿದ್ದಾಗ ಎದುರಿಗೆ ಬಂದ ಟಾಟಾ ಏಸ್‌ ಡಿಕ್ಕಿಯಾಗಿದೆ. ಇದರಿಂದ ಸ್ಥಳದಲ್ಲೇ ತಾಯಿ-ಮಗ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಹುಬ್ಬಳ್ಳಿಯಲ್ಲಿ ಕಟೌಟ್ ಬಿದ್ದು ಗಾಯಗೊಂಡವರ ಆರೋಗ್ಯ ವಿಚಾರಿಸಿದ ಸಿಎಂ

ಹುಬ್ಬಳ್ಳಿಯಲ್ಲಿ ಕಟೌಟ್ ಬಿದ್ದು ಗಾಯಗೊಂಡವರ ಆರೋಗ್ಯ ವಿಚಾರಿಸಿದ ಸಿಎಂ

cutout collapse in Hubli: ಹುಬ್ಬಳ್ಳಿಯ ಮಂಟೂರ ರಸ್ತೆಯಲ್ಲಿ ಮನೆ ಹಂಚಿಕೆ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಅಳವಡಿಸಿದ್ದ ಬೃಹತ್ ಕಟೌಟ್‌ಗಳು ಶನಿವಾರ ಮುರಿದುಬಿದ್ದು ನಾಲ್ವರು ಗಾಯಗೊಂಡಿದ್ದರು. ಗಾಯಾಳುಗಳನ್ನು ಸಿಎಂ ಸಿದ್ದರಾಮಯ್ಯ ಅವರು ಆಸ್ಪತ್ರೆಯಲ್ಲಿ ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದಾರೆ.

ಕೊಳೆಗೇರಿ ಜನರನ್ನು ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆಗಳ ವಿತರಣೆ: ಸಿಎಂ

ಕೊಳೆಗೇರಿ ಜನರಿಗೆ ಬೃಹತ್ ಪ್ರಮಾಣದಲ್ಲಿ ಮನೆಗಳ ವಿತರಣೆ: ಸಿಎಂ

ಮೊದಲ ಬಾರಿ ಮುಖ್ಯಮಂತ್ರಿ ಆಗಿದ್ದಾಗ ನಮ್ಮ ಕಾಂಗ್ರೆಸ್ ಸರ್ಕಾರ 14,58,000 ಮನೆಗಳನ್ನು ಕಟ್ಟಿ ಇತಿಹಾಸ ನಿರ್ಮಿಸಿ ವಸತಿ ಕ್ರಾಂತಿ ಮಾಡಿದ್ದೆವು. ಎರಡನೇ ಬಾರಿ ಮುಖ್ಯಮಂತ್ರಿ ಆದ ಬಳಿಕ 2024ರಲ್ಲಿ 36,789 ಮನೆಗಳನ್ನು ಮೊದಲನೇ ಹಂತದಲ್ಲಿ ವಿತರಿಸಿದ್ದ ನಮ್ಮ ಸರ್ಕಾರ ಎರಡನೇ ಹಂತದಲ್ಲಿ 45 ಸಾವಿರ ಮನೆಗಳನ್ನು ಹಂಚುತ್ತಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

Loading...