ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ
ಕರ್ನಾಟಕ
Guru Purnima 2025: ಹಿಂದೂ ಜನಜಾಗೃತಿ ಸಮಿತಿಯಿಂದ ಜು.10ರಂದು ‘ಗುರು ಪೂರ್ಣಿಮೆ ಮಹೋತ್ಸವʼ

ಹಿಂದೂ ಜನಜಾಗೃತಿ ಸಮಿತಿಯಿಂದ ಜು.10ರಂದು ‘ಗುರು ಪೂರ್ಣಿಮೆ ಮಹೋತ್ಸವʼ

Hindu Janajagruti Samiti: ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಬೆಂಗಳೂರಿನ ಬಸವೇಶ್ವರ ನಗರದ ಗಂಗಮ್ಮ ತಿಮ್ಮಯ್ಯ ಕನ್ವೆನ್ಷನ್ ಸೆಂಟರ್‌ನಲ್ಲಿ ಜು.10 ರಂದು ಗುರುವಾರ ಸಂಜೆ 5 ಗಂಟೆಗೆ ‘ಗುರು ಪೂರ್ಣಿಮೆ ಮಹೋತ್ಸವʼ ಹಮ್ಮಿಕೊಳ್ಳಲಾಗಿದೆ. ಈ ಕುರಿತ ವಿವರ ಇಲ್ಲಿದೆ.

Karnataka Rains: ಮುಂದಿನ 4 ದಿನ ರಾಜ್ಯದ ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌; ಆರ್ಭಟಿಸಲಿದ್ದಾನೆ ವರುಣ!

ಮುಂದಿನ 4 ದಿನ ರಾಜ್ಯದ ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌; ಭಾರಿ ಮಳೆ!

Weather Forecast: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ನಿರಂತರ ಗಾಳಿ ಜತೆಗೆ ಹಗುರ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 28°C ಮತ್ತು 20°C ಇರುವ ಸಾಧ್ಯತೆ ಇದೆ.

Indi (Vijayapura) News: ರೈತ, ಸೈನಿಕ ದೇಶದ ಬೆನ್ನೆಲುಬು: ಬಸವಂತರಾಯಗೌಡ.ವ್ಹಿ ಪಾಟೀಲ

ರೈತ, ಸೈನಿಕ ದೇಶದ ಬೆನ್ನೆಲುಬು

ಭಾರತ ದೇಶ ವಿಶ್ವದಲ್ಲಿಯೇ ಪ್ರಬಲ ರಾಷ್ಟ್ರವಾಗಿದ್ದು, ಇದಕ್ಕೆ ಸೈನಿಕರ ಆತ್ಮಸ್ಥೆರ್ಯೆವೇ ಕಾರಣ. ಸೈನಿಕರು ತಮ್ಮ ಮನೆ, ಮಠ.ಬಂಧು ಬಾಂದವರನ್ನು ಬಿಟ್ಟು ತಾಯ್ನಾಡಿನ ಸೇವೆ ಮಾಡುತ್ತಿರುವುದು ಪುಣ್ಯದ ಕೆಲಸ ಇಡೀ ದೇಶವೆ ನನ್ನ ಮನೆ ಎಂಬ ಮನೋದೋರಣೆ ಅವರಲ್ಲಿದೆ ದೇಶ ಸೇವೆ ಈಶ ಸೇವೆ ಇಂತಹ ಪವಿತ್ರ ಕಾಯಕ ಮಾಡುತ್ತಿರುವ ಇವರ ಕುಟುಂಬಸ್ಥರು ಭಾಗ್ಯವಂತರು ಸರಕಾರಗಳು ಸೈನಿಕರ ಕುಟುಂಬ ಗಳಿಗೆ ಇನ್ನು ಹೆಚ್ಚಿನ ಸಹಾಯ ಸೌಲಭ್ಯಗಳು ನೀಡಬೇಕು

Greater Bengaluru: ವಿಪಕ್ಷ ನಾಯಕರನ್ನು ವಿಶ್ವಾಸಕ್ಕೆ ಪಡೆದು ಗ್ರೇಟರ್ ಬೆಂಗಳೂರು ಪ್ರಾಧಿಕಾರ ವರದಿ ಸಚಿವ ಸಂಪುಟ ಸಭೆಯಲ್ಲಿ ಪ್ರಸ್ತಾಪ: ಡಿಕೆಶಿ

ವಿಪಕ್ಷ ನಾಯಕರನ್ನು ವಿಶ್ವಾಸಕ್ಕೆ ಪಡೆದು ಗ್ರೇಟರ್ ಬೆಂಗಳೂರು ರಚನೆ

DK Shivakumar: ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಡಿಯಲ್ಲಿ ಪಾಲಿಕೆಗಳನ್ನು ಹೇಗೆ ವಿಂಗಡಿಸಬೇಕು ಎಂಬುದರ ಬಗ್ಗೆ ಸಮಿತಿಯವರು ಅಂತಿಮ ವರದಿ ನೀಡಿದ್ದಾರೆ. ಈ ವಿಚಾರವಾಗಿ ವಿರೋಧ ಪಕ್ಷದ ನಾಯಕರ ಜತೆ ಚರ್ಚೆ ಮಾಡಿ ಅವರನ್ನು ವಿಶ್ವಾಸಕ್ಕೆ ಪಡೆಯಬೇಕು ಎಂದು ಸಮಿತಿ ಅಧ್ಯಕ್ಷರಿಗೆ ಸೂಚಿಸಿದ್ದೇನೆ. ಇದಾದ ಬಳಿಕ ಸಚಿವ ಸಂಪುಟ ಸಭೆಯ ಮುಂದೆ ವರದಿ ಬಗ್ಗೆ ಪ್ರಸ್ತಾಪ ಮಾಡುತ್ತೇನೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

Leopard Captured: ತಿಪಟೂರು ತಾಲೂಕಿನ ಜನರ ನಿದ್ದೆಗೆಡಿಸಿದ್ದ ಚಿರತೆ ಕೊನೆಗೂ ಸೆರೆ!

ತಿಪಟೂರು ತಾಲೂಕಿನ ಜನರ ನಿದ್ದೆಗೆಡಿಸಿದ್ದ ಚಿರತೆ ಕೊನೆಗೂ ಸೆರೆ!

Leopard Captured: ಕಳೆದ ಒಂದು ತಿಂಗಳಿಂದ ತಿಪಟೂರು ತಾಲೂಕಿನ ಗ್ರಾಮಸ್ಥರಲ್ಲಿ ಭಯಭೀತಿಗೊಳಿಸಿದ್ದ ಚಿರತೆ ಅರಣ್ಯ ಇಲಾಖೆ ಇರಿಸಿದ್ದ ಬೋನಿನಲ್ಲಿ ಸೆರೆಯಾಗಿರುವ ಘಟನೆ ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ಅಂಚೆಕೊಪ್ಪಲು ಗ್ರಾಮದಲ್ಲಿ ಜರುಗಿದೆ. ಈ ಕುರಿತ ವಿವರ ಇಲ್ಲಿದೆ.

Murder Case: ವ್ಯಕ್ತಿಯ ಅಪಹರಿಸಿ, ಖಾಸಗಿ ಅಂಗಕ್ಕೆ ಒದ್ದು ಹತ್ಯೆ; ಮಹಿಳೆ ಸೇರಿ ಮೂವರ ಬಂಧನ

ವ್ಯಕ್ತಿಯ ಅಪಹರಿಸಿ, ಖಾಸಗಿ ಅಂಗಕ್ಕೆ ಒದ್ದು ಹತ್ಯೆ; ಮಹಿಳೆ ಸೇರಿ ಮೂವರ ಬಂಧನ

Kalaburagi News: ಕಲಬುರಗಿಯ ಹೋಟೆಲ್ ಒಂದರಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯನ್ನು ಅಪಹರಿಸಿ, ಹಲ್ಲೆ ನಡೆಸಿ ಕೊಲೆ ಮಾಡಲಾಗಿತ್ತು. ಬಳಿಕ ಆರೋಪಿಗಳು ಶವವನ್ನು ಶಹಾಬಾದ್ ಮೂಲಕ ಸಾಗಿಸಿ ರಾಯಚೂರು ಬಳಿಯ ಶಕ್ತಿ ನಗರದ ಕೃಷ್ಣ ನದಿಯಲ್ಲಿ ಎಸೆದಿದ್ದರು. ಈ ಪ್ರಕರಣ ಭೇದಿಸಿದ ಪೊಲೀಸರು ಮೂವರನ್ನು ಬಂಧಿಸಿದ್ದಾರೆ

ಬೆಳೆ ವಿಮೆ ನೋಂದಣಿಗೆ ಅವಧಿ ವಿಸ್ತರಣೆ

ಬೆಳೆ ವಿಮೆ ನೋಂದಣಿಗೆ ಅವಧಿ ವಿಸ್ತರಣೆ

ಮರುವಿನ್ಯಾಸಗೊಳಿಸಿದ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆ ನೋಂದಾಯಿಸುವ ಅವಧಿ ಜು, ೧೫ರವರೆಗೆ ಹಾಗೂ ದ್ರಾಕ್ಷಿ ಬೆಳೆ ವಿಮಾ ಯೋಜನೆಯಡಿ ನೋಂದಾಯಿಸುವ ಅವಧಿ ಆ, ೧೬ರ ವರೆಗೆ ವಿಸ್ತರಿಸಲಾಗಿದೆ. ಬೆಳೆ ಸಾಲ ಪಡೆದ ರೈತರು ಹಾಗೂ ಪಡೆಯದೆ ಇರುವ ರೈತರು ಆಧಾರ ಕಾರ್ಡ ಝರಾಕ್ಷ ,ಪಹಣಿ ,ಬ್ಯಾಂಕ್ ಖಾತೆ ಪ್ರತಿಯೊಂದಿಗೆ ಹತ್ತಿರದ ಬ್ಯಾಂಕ್ ಅಥವಾ ಗ್ರಾಮ ಒನ್ ಕೇಂದ್ರ ಸಿ.ಎಸ್.ಸಿ ಸೆಂಟರ್‌ಗಳಲ್ಲಿ ವಿಮಾ ಯೋಜನೆ ನೋಂದಣಿ ಮಾಡಬೇಕು.

ಜೆಡಿಎಸ್ ಮುಖಂಡ ಬಿ.ಎಸ್.ನಾಗರಾಜು ಅವರ 50 ನೇ ಹುಟ್ಟುಹಬ್ಬಕ್ಕೆ ಹೃದಯ ತಪಾಸಣಾ ಶಿಬಿರ

ಹುಟ್ಟುಹಬ್ಬಕ್ಕೆ ಹೃದಯ ತಪಾಸಣಾ ಶಿಬಿರ

ಜೆಡಿಎಸ್ ಪಕ್ಷ ಸಂಘಟನೆಯ ಮೂಲಕ ತಾಲ್ಲೂಕಿನಲ್ಲಿ ತನ್ನದೇ ವರ್ಚಸ್ಸು ಬೆಳೆಸಿಕೊಂಡ ನಾಗರಾಜು ಅವರ ಹುಟ್ಟುಹಬ್ಬ ಅರ್ಥಪೂರ್ಣ ಆಚರಣೆಗೆ ಅವರ ಅಭಿಮಾನಿಗಳು ಸಕಲ ಸಿದ್ಧತೆ ನಡೆಸಿದ್ದಾರೆ. ಇದೇ ತಿಂಗಳ 10 ಗುರುವಾರ ಬೆಳಿಗ್ಗೆ ನಡೆಯುವ ಕಾರ್ಯಕ್ರಮಕ್ಕೆ ಕೇಂದ್ರ ಸಚಿವ ಸೋಮಣ್ಣ ಸೇರಿದಂತೆ ಇನ್ನಿತರ ಗಣ್ಯರಿಗೆ ಆಹ್ವಾನ ನೀಡಲಾಗಿದೆ.

Gubbi (Tumkur) News: ಯಾವುದೇ ಕಾರಣಕ್ಕೂ ಲಿಂಕ್ ಕೆನಾಲ್ ಮಾಡಲು ಬಿಡುವುದಿಲ್ಲ: ಹೇಮಾವತಿ ಹೋರಾಟ ಸಮಿತಿಯ ನಿರ್ಣಯ

ಯಾವುದೇ ಕಾರಣಕ್ಕೂ ಲಿಂಕ್ ಕೆನಾಲ್ ಮಾಡಲು ಬಿಡುವುದಿಲ್ಲ

ಮಕ್ಕಳೇ ಬೇಡ ಅಂತ ಇದ್ರೆ, ಗಂಡಾ ಹೆಣ್ಣಾ ಅಂತ ಟೆಸ್ಟ್ ಮಾಡ್ತೀವಿ ಅನ್ನುವಂತೆ ಯಾವ ಐಐಟಿಯು ಬೇಡ, ಯಾವ ನೈಟಿಯು ಬೇಡ ಎಂದು ವ್ಯಂಗ್ಯ ಪ್ರತಿಕ್ರಿಯಿಸಿದ ಅವರು 25 ವರ್ಷದಿಂದ ಶಾಸಕರು ಆಡಳಿತ ಮಾಡುತ್ತಿದ್ದಾರೆ. ಅವರಿಗೆ ರೈತರ ಆತಂಕದ ಚಿಂತನೆ ಇಲ್ಲ. ಹದಿನೈದು ದಿನದ ಹಿಂದೆ ಸಭೆಯ ದಿನಾಂಕ ನಿಗದಿಯಾಗಿತ್ತು

Assault case: ಯುವಕನ ಬಟ್ಟೆ ಬಿಚ್ಚಿಸಿ ಹಲ್ಲೆ ಪ್ರಕರಣ; ಪವಿತ್ರಾ ಗೌಡ ರೀತಿ ಸ್ಕೆಚ್ ಹಾಕಿದ 17 ವರ್ಷದ ಹುಡುಗಿ ಅರೆಸ್ಟ್‌!

ಯುವಕನ ಮೇಲೆ ಹಲ್ಲೆ ಕೇಸ್‌; 17 ವರ್ಷದ ಹುಡುಗಿಯ ಬಂಧನ

Assault case: ಬಂಧನವಾಗಿರುವ 17 ವರ್ಷದ ಹುಡಗಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವಾಗಲೇ ಹಲ್ಲೆಗೊಳಗಾದ ಯುವಕ ಕುಶಾಲ್​ನ ಪರಿಚಯವಾಗಿತ್ತು. ಪರಿಚಯ ಪ್ರೇಮಕ್ಕೆ ತಿರುಗಿತ್ತು. ಆದರೆ, ಎರಡು ವರ್ಷದ ಪ್ರೀತಿ ಕೆಲ ದಿನಗಳ ಹಿಂದೆಯಷ್ಟೇ ಬ್ರೇಕ್​ ಅಪ್​ ಆಗಿತ್ತು. ಯುವಕ ಅಶ್ಲೀಲ ಮೆಸೇಜ್‌ ಕಳುಹಿಸಿದ್ದರಿಂದ ಸ್ನೇಹಿತರಿಗೆ ಹೇಳಿ ಹಲ್ಲೆ ಮಾಡಿಸಿದ್ದಾಳೆ.

Tumkur News: ತುಮಕೂರಿನಲ್ಲಿ ಒಂದೇ ದಿನ ಹೃದಯಾಘಾತಕ್ಕೆ ಇಬ್ಬರು ಬಲಿ

ತುಮಕೂರಿನಲ್ಲಿ ಒಂದೇ ದಿನ ಹೃದಯಾಘಾತಕ್ಕೆ ಇಬ್ಬರು ಬಲಿ

Heart attack: ತುಮಕೂರಿನ ಹನುಮಂತಪುರದ ನಿವಾಸಿಗಳಾದ ಜಯಂತ್ (31) ಹಾಗೂ ಶ್ರೀಧರ್ (52) ಎಂಬುವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಹಾಸನ ಜಿಲ್ಲೆಯಲ್ಲಿ ಹೃದಯಾಘಾತ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ನಡುವೆ ನಗರದಲ್ಲಿ ಒಂದೇ ಇಬ್ಬರು ಹೃದಯಾಘಾತದಿಂದ ಇಬ್ಬರು ಮೃತಪಟ್ಟಿರುವುದು ಜನರಲ್ಲಿ ಆತಂಕ ಮೂಡಿಸಿದೆ.

Chit fund scam: ಚೀಟಿ ಹೆಸರಲ್ಲಿ 40 ಕೋಟಿ ವಂಚಿಸಿ ದಂಪತಿ ಪರಾರಿ; ಡಿಸಿಎಂ, ಗೃಹ ಸಚಿವರಿಗೆ ದೂರು

ಚೀಟಿ ಹೆಸರಲ್ಲಿ 40 ಕೋಟಿ ವಂಚಿಸಿ ದಂಪತಿ ಪರಾರಿ!

Chit fund scam: ಬೆಂಗಳೂರಿನ ಜರಗನಹಳ್ಳಿಯಲ್ಲಿ ವಂಚನೆ ಪ್ರಕರಣ ನಡೆದಿದೆ. ಚೀಟಿ ಹೆಸರಲ್ಲಿ ಸುಮಾರು 600ಕ್ಕೂ ಹೆಚ್ಚು ಮಂದಿಗೆ ವಂಚಿಸಿ, 40 ಕೋಟಿ ರೂ.‌ಗಳೊಂದಿಗೆ ದಂಪತಿ ಪರಾರಿಯಾಗಿದ್ದಾರೆ. ವಂಚನೆಗೆ ಒಳಗಾದವರು ನ್ಯಾಯ ಕೊಡಿಸಬೇಕು ಎಂದು ಗೃಹ ಸಚಿವ ಜಿ‌.ಪರಮೇಶ್ವರ್ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅವರ ಮೊರೆ ಹೋಗಿದ್ದಾರೆ.

Infant murder case: ನೀರಿನ ಹಂಡೆಯಲ್ಲಿ ಮುಳುಗಿಸಿ ಮಗುವನ್ನು ಕೊಂದ ನಿಷ್ಕರುಣಿ ತಾಯಿ

ನೀರಿನ ಹಂಡೆಯಲ್ಲಿ ಮುಳುಗಿಸಿ ಮಗುವನ್ನು ಕೊಂದ ನಿಷ್ಕರುಣಿ ತಾಯಿ

Infant Murder: ಪವನ್ ಹಾಗೂ ರಾಧೆ ಎಂಬ ದಂಪತಿಗೆ ಈ ಗಂಡು ಮಗು ಜನಿಸಿತ್ತು. ಗಂಡ ಮನೆ ನಿಭಾಯಿಸದೆ ಕುಡಿತದ ಚಟಕ್ಕೆ ಒಳಗಾಗಿದ್ದ. ಬಡತನ ಹಾಗೂ ಮಗುವಿನ ಆರೈಕೆ ಕಷ್ಟವಾದ ಹಿನ್ನೆಲೆಯಲ್ಲಿ ಹತಾಶಗೊಂಡ ತಾಯಿ ತಡರಾತ್ರಿ ಮಗುವನ್ನು ನೀರಿನಲ್ಲಿ ಮುಳುಗಿಸಿ ಕೊಲೆ ಮಾಡಿದ್ದಾಳೆ.

Mandya News: ಫೋಟೋ ತೆಗೆದುಕೊಳ್ಳಲು ಹೋಗಿ ಕಾವೇರಿ ನದಿಗೆ ಬಿದ್ದು ಕೊಚ್ಚಿ ಆಟೋ ಚಾಲಕ!

ಫೋಟೋ ತೆಗೆದುಕೊಳ್ಳಲು ಹೋಗಿ ಕಾವೇರಿ ನದಿಗೆ ಬಿದ್ದು ಕೊಚ್ಚಿ ಆಟೋ ಚಾಲಕ!

Mandya News: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಸರ್ವಧರ್ಮ ಆಶ್ರಮದ ಬಳಿ ಘಟನೆ ನಡೆದಿದೆ. ಆಟೋ ಚಾಲಕ ಫೋಟೋ ತೆಗೆಸಿಕೊಳ್ಳಲು ಹೋದಾಗ ಆಯತಪ್ಪಿ ಕಾವೇರಿ ನದಿಗೆ ಬಿದ್ದಿದ್ದಾರೆ. ನದಿಯಲ್ಲಿ ನೀರು ಹೆಚ್ಚಿದ್ದ ಕಾರಣ ಕೊಚ್ಚಿ ಹೋಗಿದ್ದಾರೆ. ಅವರ ಪತ್ತೆಗಾಗಿ ಶೋಧಕಾರ್ಯ ನಡೆಯುತ್ತಿದೆ.

contaminated water: ಯಾದಗಿರಿಯ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ಮೂವರ ಸಾವು, ಹಲವು ಜನ ಗಂಭೀರ

ಯಾದಗಿರಿಯ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ಮೂವರ ಸಾವು, ಹಲವು ಜನ ಗಂಭೀರ

Contaminated Water: 10 ದಿನಗಳ ಹಿಂದೆ ಕಲುಷಿತ ನೀರು ಸೇವಿಸಿ ತಿಪ್ಪನಟಗಿ ಗ್ರಾಮಸ್ಥರು ವಾಂತಿ-ಭೇದಿಯಿಂದ ಬಳಲಿ ಖಾಸಗಿ ಮತ್ತು ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದರು. ದುರದೃಷ್ಟವಶಾತ್ ಸೋಮವಾರ (ಜು. 07) ಚಿಕಿತ್ಸೆ ಫಲಿಸದೆ ಗ್ರಾಮದ ಮೂವರು ಮೃತಪಟ್ಟಿದ್ದಾರೆ. ಆರು ಜನರ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಡೆಟ್ರಾಯ್ಟ್‌ನಲ್ಲಿ ವಿಜೃಂಭಣೆಯ 47ನೇ ವಿಎಸ್ಎನ್ಎ ಮತ್ತು ಬಸವ ಜಯಂತಿ ಮಹಾಸಮಾವೇಶ

ಡೆಟ್ರಾಯ್ಟ್‌ನಲ್ಲಿ ವಿಜೃಂಭಣೆಯ 47ನೇ ವಿಎಸ್ಎನ್ಎ ಮತ್ತು ಬಸವ ಜಯಂತಿ ಸಮಾವೇಶ

ವೀರಶೈವ ಸಮಾಜ ಉತ್ತರ ಅಮೆರಿಕ (VSNA) ಆಯೋಜಿಸಿದ್ದ 47ನೇ ವಾರ್ಷಿಕ ಮಹಾಸಮಾವೇಶ ಮತ್ತು ಬಸವ ಜಯಂತಿ (Basava Jayanthi) ಮಹೋತ್ಸವ ಅತ್ಯಂತ ಭಕ್ತಿಭಾವದಿಂದ ಹಾಗೂ ಸಂಸ್ಕೃತಿಯ ಅದ್ಧೂರಿತನದಿಂದ ಅಮೆರಿಕದ ಡೆಟ್ರಾಯ್ಟ್ (Detroit) ನಗರದಲ್ಲಿ ನೆರವೇರಿತು.

Self Harming: ಮ್ಯಾನೇಜರ್‌ನಿಂದ ಕಿರುಕುಳ, ಕೆಎಸ್‌ಆರ್‌ಟಿಸಿ ಬಸ್‌ ಚಾಲಕ ಆತ್ಮಹತ್ಯೆ ಯತ್ನ

ಮ್ಯಾನೇಜರ್‌ನಿಂದ ಕಿರುಕುಳ, ಕೆಎಸ್‌ಆರ್‌ಟಿಸಿ ಬಸ್‌ ಚಾಲಕ ಆತ್ಮಹತ್ಯೆ ಯತ್ನ

Self Harming: ಡಿಪೋ ಮ್ಯಾನೇಜರ್ ಶಾಜಿಯಾ ಬಾನು ವಿರುದ್ಧ ಕಿರುಕುಳ ಆರೋಪ ಕೇಳಿ ಬಂದಿದ್ದು, ಕೆಲಸದ ವಿಷಯವಾಗಿ ಹರೀಶ್ ಮತ್ತು ಶಾಜಿಯ ಬಾನು ನಡುವೆ ವಾಗ್ವಾದ ನಡೆದಿದೆ. ನಂತರ ವಿಶ್ರಾಂತಿ ಕೊಠಡಿಗೆ ಹೋಗಿ ಹರೀಶ್ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

Gold Price Today: ಚಿನ್ನದ ದರದಲ್ಲಿ ಕೊಂಚ ಇಳಿಕೆ; ಇಂದಿನ ರೇಟ್‌ ಚೆಕ್‌ ಮಾಡಿ

ಇಂದು ಚಿನ್ನದ ದರ ಎಷ್ಟಿದೆ? ಇಲ್ಲಿ ಚೆಕ್‌ ಮಾಡಿ

Gold Price Today on 7th July 2025: ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆಯಲ್ಲಿ 50 ರೂ. 9,010ರೂ. ಇದ್ದು, 24 ಕ್ಯಾರಟ್‌ 1 ಗ್ರಾಂ ಚಿನ್ನದ ದರದಲ್ಲಿ 54 ರೂ. 9,829 ರೂ. ಇದೆ. 22 ಕ್ಯಾರಟ್‌ನ 8 ಗ್ರಾಂ ಚಿನ್ನ 72,080 ರೂ. ಬಾಳಿದರೆ, 10 ಗ್ರಾಂಗೆ ನೀವು 90,100 ರೂ. ಹಾಗೂ 100 ಗ್ರಾಂಗೆ 9,01,000 ರೂ. ನೀಡಬೇಕಾಗುತ್ತದೆ.

Assault Case: ಯುವತಿಗೆ ಮೆಸೇಜ್;‌ ಯುವಕನ ಬಟ್ಟೆ ಬಿಚ್ಚಿಸಿ, ಮರ್ಮಾಂಗಕ್ಕೆ ಒದ್ದು ರೇಣುಕಾಸ್ವಾಮಿ ಕೇಸ್‌ ಮಾದರಿಯಲ್ಲಿ ಹಲ್ಲೆ

ಯುವಕನ ಮರ್ಮಾಂಗಕ್ಕೆ ಒದ್ದು ರೇಣುಕಾಸ್ವಾಮಿ ಕೇಸ್‌ ಮಾದರಿಯಲ್ಲಿ ಹಲ್ಲೆ

Assault Case: ಹುಡುಗಿ ವಿಚಾರಕ್ಕೆ ಯುವಕನ ಬಟ್ಟೆ ಬಿಚ್ಚಿ, ಮರ್ಮಾಂಗಕ್ಕೆ ಒದ್ದು ಮಾರಣಾಂತಿಕವಾಗಿ ಹಲ್ಲೆ ನಡೆಸಲಾಗಿದೆ. ʼನೀನೂ ರೇಣುಕಾಸ್ವಾಮಿ ರೀತಿ ಸಾಯ್ತೀಯಾʼ ಎಂದು ದಬಾಯಿಸುತ್ತಾ ಯುವಕನಿಗೆ ಥಳಿಸಿದ್ದಾರೆ. ಒಬ್ಬನ ಮೇಲೆ 8 ರಿಂದ 10 ಜನ ದುಷ್ಕರ್ಮಿಗಳು ಮುಗಿಬಿದ್ದು ಭೀಕರವಾಗಿ ಹಲ್ಲೆ ಮಾಡಿದ್ದಾರೆ.

Sharan Pumpwell: ವಿಹಿಂಪ ಮುಖಂಡ ಶರಣ್‌ ಪಂಪ್‌ವೆಲ್‌ಗೆ ಚಿಕ್ಕಮಗಳೂರು ಪ್ರವೇಶಿಸದಂತೆ ನಿರ್ಬಂಧ

ವಿಹಿಂಪ ಮುಖಂಡ ಶರಣ್‌ ಪಂಪ್‌ವೆಲ್‌ಗೆ ಚಿಕ್ಕಮಗಳೂರು ಪ್ರವೇಶಿಸದಂತೆ ನಿರ್ಬಂಧ

Sharan Pumpwell: ವಿಹಿಂಪ ಮುಖಂಡ ಶರಣ್ ಪಂಪ್‌ವೆಲ್ ಅವರ ಹೇಳಿಕೆಗಳು ಸಾಮಾಜಿಕ ಸಾಮರಸ್ಯಕ್ಕೆ ಧಕ್ಕೆ ತಂದಿವೆ ಎಂದು ಜಿಲ್ಲಾಡಳಿತ ಆತಂಕ ವ್ಯಕ್ತಪಡಿಸಿದೆ. ಅಲ್ಲದೇ ಈ ಹಿಂದೆಯೂ ಇದೇ ರೀತಿಯ ಹೇಳಿಕೆಗಳಿಂದ ಶರಣ್ ಪಂಪ್‌ವೆಲ್ ವಿರುದ್ಧ ದೂರುಗಳು ದಾಖಲಾಗಿತ್ತು.

Murder Case: ಲವರ್‌ಗಾಗಿ ಆಕೆಯ ಪತಿಯನ್ನು ಕೊಂದು ರಸ್ತೆ ಬದಿ ಮಲಗಿಸಿದ ಶಾಲಾ ವಾಹನ ಚಾಲಕ

ಲವರ್‌ಗಾಗಿ ಆಕೆಯ ಪತಿಯನ್ನು ಕೊಂದು ರಸ್ತೆ ಬದಿ ಮಲಗಿಸಿದ ಶಾಲಾ ವಾಹನ ಚಾಲಕ

Murder Case: ಹೆದ್ದಾರಿ ಪಕ್ಕದಲ್ಲಿ ಮಧು ಶವ ಕಂಡ ಸ್ಥಳೀಯರು ಈ ವಿಚಾರವನ್ನು ಪೊಲೀಸರಿಗೆ ತಿಳಿಸಿದ್ದರು. ಸ್ಥಳೀಯರು, ಮಧು ಅಪಘಾತದಿಂದ ಮೃತಪಟ್ಟಿದ್ದಾರೆ ಎಂದು ಸಂಶಯ ವ್ಯಕ್ತಪಡಿಸಿದರು. ಆದರೆ, ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದಾಗ, ಮಧು ಅಪಘಾತದಿಂದ ಮೃತಪಟ್ಟಿಲ್ಲ, ಕೊಲೆಯಾಗಿದ್ದಾನೆ ಎಂದು ಗೊತ್ತಾಗಿದೆ.

CM Siddaramaiah: ದುರಹಂಕಾರಿ ಅಂದ್ರೆ ಕೇರ್‌ ಮಾಡಲ್ಲ, ನಾನು ಸ್ವಾಭಿಮಾನಿ: ಸಿಎಂ ಸಿದ್ದರಾಮಯ್ಯ

ದುರಹಂಕಾರಿ ಅಂದ್ರೆ ಕೇರ್‌ ಮಾಡಲ್ಲ, ನಾನು ಸ್ವಾಭಿಮಾನಿ: ಸಿಎಂ ಸಿದ್ದರಾಮಯ್ಯ

CM Siddaramaiah: ಮೇಲ್ಜಾತಿಯ ಬಡವ ಬಂದರೆ ಗೌರವ ಕೊಡುತ್ತೇವೆ. ಕೆಲವರ್ಗದ ಶ್ರೀಮಂತ ಬಂದರೆ ಅವರನ್ನು ಕೀಳಾಗಿ ಕಾಣುತ್ತೇವೆ. ಸ್ವಾಭಿಮಾನಿಗಳಾಗಿ ಬದುಕುವುದು ದುರಹಂಕಾರ ಅಲ್ಲ. ನನ್ನ ನೋಡಿದರೆ ದುರಹಂಕಾರಿ ಅಂತಾರೆ. ನಾನು ಸ್ವಾಭಿಮಾನಿ. ದುರಹಂಕಾರಿ ಅಂತ ಯಾರೇ ಕರೆದರೂ ನಾನು ಅದಕ್ಕೆ ಸೊಪ್ಪು ಹಾಕಲ್ಲ ಎಂದರು.

Self Harming: ಮಧ್ಯಪ್ರದೇಶದಿಂದ ಕಳವು ಚಿನ್ನ ಜಪ್ತಿ ಮಾಡಿ ತಂದ ಮರುದಿನ ಲಾಡ್ಜ್‌ನಲ್ಲಿ ನೇಣು ಬಿಗಿದುಕೊಂಡು ದಾವಣಗೆರೆ ಪಿಎಸ್‌ಐ ಆತ್ಮಹತ್ಯೆ

ಕಳವು ಚಿನ್ನ ಜಪ್ತಿ ಮಾಡಿ ತಂದ ಮರುದಿನ ದಾವಣಗೆರೆ ಪಿಎಸ್‌ಐ ಆತ್ಮಹತ್ಯೆ

ಕಳವು ಪ್ರಕರಣವೊಂದರಲ್ಲಿ ಚಿನ್ನಾಭರಣವನ್ನು ನ್ಯಾಯಾಲಯದ ಅನುಮತಿ ಪಡೆದು ಮಧ್ಯಪ್ರದೇಶದಿಂದ ಜಪ್ತಿ ಮಾಡಿ ತಂದಿದ್ದ ಬಡಾವಣೆ ಠಾಣೆ ಎಸ್‌ಐ ಬಿ ಆರ್‌ ನಾಗರಾಜಪ್ಪ, ಮರುದಿನವೇ ನಾಪತ್ತೆಯಾಗಿದ್ದರು. ವಿಶೇಷ ಕರ್ತವ್ಯ ಮುಗಿಸಿ ಜೂನ್‌ 30ರಂದು ಬೆಳಗ್ಗೆ 11ಕ್ಕೆ ಮನೆಗೆ ಮರಳಿದ್ದ ನಾಗರಾಜಪ್ಪ, ಜುಲೈ 1ರ ನಸುಕಿನಲ್ಲಿ ಮನೆ ತೊರೆದಿದ್ದರು.

Heart Attack: ನಿಲ್ಲದ ಹೃದಯಾಘಾತ ಸಾವಿನ ಸರಣಿ, ನಿನ್ನೆ ಒಂದೇ ದಿನ 8 ಮಂದಿ ಸಾವು

ನಿಲ್ಲದ ಹೃದಯಾಘಾತ ಸಾವಿನ ಸರಣಿ, ನಿನ್ನೆ ಒಂದೇ ದಿನ 8 ಮಂದಿ ಸಾವು

ರಾಜ್ಯದಲ್ಲಿ ಹೃದಯಾಘಾತದಿಂದ (Heart Attack) ಸಾವಿಗೀಡಾಗುವವರ ಸಂಖ್ಯೆ ಹೆಚ್ಚುತ್ತಲೇ ಇದೆ. ಮೊನ್ನೆ ಆರು ಜನ ಮೃತಪಟ್ಟಿದ್ದರೆ, ನಿನ್ನೆ ಒಂದೇ ದಿನ ಕರ್ನಾಟಕದಲ್ಲಿ ಹೃದಯಾಘಾತದಿಂದ 8 ಮಂದಿ ಮೃತಪಟ್ಟಿದ್ದಾರೆ. ಹಾಸನ ಮತ್ತು ಚಿಕ್ಕಮಗಳೂರಿನಲ್ಲಿ ಇಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ.