ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಕರ್ನಾಟಕ

Khadi clothing: ಸರಕಾರಿ ನೌಕರರು ತಿಂಗಳಲ್ಲಿ ಒಂದು ದಿನ ಖಾದಿ ಧರಿಸುವುದು ಕಡ್ಡಾಯ : ಜಿಲ್ಲಾಧಿಕಾರಿ ಜಿ.ಪ್ರಭು

ತಿಂಗಳಲ್ಲಿ ಒಂದು ದಿನ ಸರಕಾರಿ ನೌಕರರು ಖಾದಿ ಧರಿಸುವುದು ಕಡ್ಡಾಯ

ಕರ್ನಾಟಕ ಸರ್ಕಾರವು ತನ್ನ ನೌಕರರಿಗೆ ತಿಂಗಳಲ್ಲಿ ಒಂದು ದಿನ ಖಾದಿ ಉಡುಪು ಧರಿಸುವು ದನ್ನು ಕಡ್ಡಾಯಗೊಳಿಸಿದೆ. ಪ್ರತಿ ತಿಂಗಳ ಮೊದಲ ಶನಿವಾರ ಮತ್ತು ರಾಷ್ಟ್ರೀಯ ಹಬ್ಬ ಗಳಂದು ಖಾದಿ ಬಟ್ಟೆಗಳನ್ನು ಧರಿಸಬೇಕು. ಇದು ಸ್ವದೇಶಿ ಉತ್ಪನ್ನಗಳ ಬಗ್ಗೆ ಗೌರವ, ರಾಷ್ಟ್ರೀಯ ಭಾವನೆ ಮತ್ತು ಗ್ರಾಮೀಣ ಆರ್ಥಿಕತೆಯನ್ನು ಉತ್ತೇಜಿಸುವ ಗುರಿ ಹೊಂದಿದೆ.

ಬಜೆಟ್‌ ಬಳಿಕ ರಾಜ್ಯ ಸರ್ಕಾರ ಪತನವಾಗುವುದು ನಿಶ್ಚಿತ: ಶಾಸಕ ಯತ್ನಾಳ್‌ ಭವಿಷ್ಯ

ಬಜೆಟ್‌ ಬಳಿಕ ರಾಜ್ಯ ಸರ್ಕಾರ ಪತನವಾಗುವುದು ನಿಶ್ಚಿತ: ಶಾಸಕ ಯತ್ನಾಳ್‌

ಸಿಎಂ ಸಿದ್ದರಾಮಯ್ಯ ಅವರೇ ತಮಗೆ ಒಳಸಂಚು ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ. ಅವರಿಗೆ ಒಳಸಂಚು ಯಾರು ಮಾಡುತ್ತಾರೆ?, ಬಿಜೆಪಿಯವರು ಮಾಡುತ್ತಿದ್ದಾರಾ? ಕಾಂಗ್ರೆಸ್ ಪಾರ್ಟಿಯಲ್ಲಿಯೇ ಒಳ ಸಂಚು ಮಾಡುತ್ತಿದ್ದಾರೆ. ಡಿಕೆಶಿ ಅವರು ಎರಡೂವರೆ ವರ್ಷ ಸಿಎಂ ಆಗಬೇಕೆಂದು ಪ್ರಯತ್ನ ಮಾಡುತ್ತಿದ್ದಾರೆ ಎಂದು ಶಾಸಕ ಯತ್ನಾಳ್‌ ಟೀಕಿಸಿದ್ದಾರೆ.

Chikkaballapur News: 10 ಸಾವಿರ ಮಂದಿಗೆ ಉಚಿತ ಸೂರು ಕಲ್ಪಿಸುವ ಸಂಕಲ್ಪಕ್ಕೆ ಚಾಲನೆ ನೀಡಿದ ಸಮಾಜ ಸೇವಕ ಸಿ.ಎಂ. ಬೈರೇಗೌಡ

ಸೂರು ಕಲ್ಪಿಸುವ ಸಂಕಲ್ಪಕ್ಕೆ ಚಾಲನೆ ನೀಡಿದ ಸಿ.ಎಂ. ಬೈರೇಗೌಡ

ಅವರಿವರೆನ್ನದೆ ಮನುಷ್ಯ ಮನುಷ್ಯರಿಗೆ ನೆರವಾಗುವುದೇ ರಾಷ್ಟ್ರಕವಿ ಕುವೆಂಪು ಹೇಳುವ ಮನುಜ ಮತ ವಿಶ್ವಪಥದ ಸಂದೇಶವಾಗಿದೆ. ಇದನ್ನು ಅರ್ಥ ಅರಿತಿರುವ ನಾನು ಮತ್ತು ನಮ್ಮ ಸಮಿತಿ ಜಿಲ್ಲೆಯ 8 ತಾಲೂಕುಗಳಲ್ಲಿ ಸಂಚರಿಸಿ ಇಂದಿಗೂ ಗುಡಿಸಿಲುಗಳಲ್ಲಿ, ಟೆಂಟು ಗಳಲ್ಲಿ, ತಡಿಕೆಗಳಲ್ಲಿ, ಬಸ್ ತಂಗುದಾಣಗಳಲ್ಲಿ ಆಶ್ರಯ ಪಡೆದು ವಾಸ ಮಾಡುತ್ತಿರುವ ನಿರ್ಗತಿಕರಿಗೆ ನೆರವಾಗಲು ಮುಂದಾಗಿದ್ದೇವೆ

ಮಗಳನ್ನು ಪ್ರೀತಿಸಿ ಮದುವೆಯಾಗಿದ್ದಕ್ಕೆ ಯುವಕನ ಮನೆಗೆ ಬೆಂಕಿ ಇಟ್ಟ ಮಾವ!

ಮಗಳನ್ನು ಪ್ರೀತಿಸಿ ಮದುವೆಯಾಗಿದ್ದಕ್ಕೆ ಯುವಕನ ಮನೆಗೆ ಬೆಂಕಿ ಇಟ್ಟ ಮಾವ!

Mandya News: ಮದ್ದೂರು ತಾಲೂಕಿನ ಚುಂಚಗಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಮನೆಯಲ್ಲಿ ಯಾರೂ ಇಲ್ಲದ ಪರಿಣಾಮ ಪ್ರಾಣಾಪಾಯ ಸಂಭವಿಸಿಲ್ಲ. ಮನೆ ಸಂಪೂರ್ಣ ಭಸ್ಮವಾಗಿದ್ದು, ಮನೆಯಲ್ಲಿದ್ದ ಎಲೆಕ್ಟ್ರಾನಿಕ್ ವಸ್ತುಗಳು, ಬಟ್ಟೆ, ಅಡುಗೆ ಸಾಮಗ್ರಿಗಳು ಸುಟ್ಟು ಕರಕಲಾಗಿವೆ.

Kamalakar Bhat Case: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ; ಜ್ಯೋತಿಷಿ ಕಮಲಾಕರ ಭಟ್ ವಿರುದ್ಧ ಮತ್ತೊಂದು ಕೇಸ್‌!

ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ; ಕಮಲಾಕರ ಭಟ್ ವಿರುದ್ಧ ಮತ್ತೊಂದು ಕೇಸ್‌!

ವಸಂತ್ ನಾಯ್ಕ ಕೊಲೆ ಪ್ರಕರಣದಲ್ಲಿ ಜ್ಯೋತಿಷಿ ಕಮಲಾಕರ್‌ ಭಟ್, ಸುಚಿತ್ರಾ ಸೇರಿ ಐವರು ಜೈಲು ಸೇರಿದ್ದರು. ಈ ನಡುವೆ ಜ್ಯೋತಿಷಿ ವಿರುದ್ಧ ಮತ್ತೊಂದು ಕೇಸ್ ದಾಖಲಾಗಿದೆ. ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೊ ಪ್ರಕರಣ ದಾಖಲಾಗಿದೆ.

DK Shivakumar: ಬಿಜೆಪಿಯವರು ಅತ್ಯಂತ ಪ್ರಾಮಾಣಿಕರಲ್ಲವೇ: ಡಿ.ಕೆ. ಶಿವಕುಮಾರ್ ಲೇವಡಿ

ಬಿಜೆಪಿಯವರು ಅತ್ಯಂತ ಪ್ರಾಮಾಣಿಕರಲ್ಲವೇ: ಡಿಕೆಶಿ ಲೇವಡಿ

DK Shivakumar: ಬಿಜೆಪಿ ಶಾಸಕ ಲಂಚ ಪಡೆಯುವಾಗ ಲೋಕಾಯುಕ್ತರಿಗೆ ಸಿಕ್ಕಿ ಬಿದ್ದಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ.ಕೆ. ಶಿವಕುಮಾರ್, ಬಿಜೆಪಿಯವರು ಈ ದೇಶದಲ್ಲೇ ಅತ್ಯಂತ ಪ್ರಾಮಾಣಿಕರಲ್ಲವೇ ಎಂದು ಲೇವಡಿ ಮಾಡಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

ರಾಜ್ಯ ಸರ್ಕಾರದಿಂದ ಪ್ರಜಾಪ್ರಭುತ್ವದ ಕಗ್ಗೊಲೆ: ವಿಜಯೇಂದ್ರ ಕಿಡಿ

ರಾಜ್ಯ ಸರ್ಕಾರದಿಂದ ಪ್ರಜಾಪ್ರಭುತ್ವದ ಕಗ್ಗೊಲೆ: ವಿಜಯೇಂದ್ರ ಕಿಡಿ

BY Vijayendra: ಬಾಗಲಕೋಟೆಯಲ್ಲಿ ಶಿವಾಜಿ ಮಹಾರಾಜರ ಜಯಂತಿ ಸಂದರ್ಭದಲ್ಲಿ ಶಾಂತಿಯುತ ಮೆರವಣಿಗೆ ನಡೆಯುತ್ತಿತ್ತು. ಅಲ್ಲಿ ಒಂದು ಧರ್ಮದ ದೇಶದ್ರೋಹಿಗಳು ಕಲ್ಲೆಸೆದಿದ್ದಾರೆ. ಕೋಮುಗಲಭೆ ಸೃಷ್ಟಿಸುವ ದುಸ್ಸಾಹಸಕ್ಕೆ ಕೈ ಹಾಕಿದ್ದಾರೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ.

ಹೇಮಾವತಿ ನಾಲೆ ಕೆಲಸ ಮುಗಿಸದಿದ್ರೆ ತಾಲೂಕಿನ ಇತರೆಲ್ಲಾ ಸರ್ಕಾರಿ ಕಾಮಗಾರಿಗಳಿಗೆ ಬ್ರೇಕ್: ಭಟ್ಟರಹಳ್ಳಿ ಮಲ್ಲಿಕಾರ್ಜುನ ಎಚ್ಚರಿಕೆ

ಹೇಮಾವತಿ ನಾಲಾ ಕಾಮಗಾರಿ ಪೂರ್ಣಗೊಳಿಸಲು ಆಗ್ರಹ

Chikkanayakanahalli News: ಹೇಮಾವತಿ ಯೋಜನೆಯಡಿ ಬಾಕಿ ಇರುವ 11 ಸೇತುವೆಗಳು ಮತ್ತು 8 ಕಿಲೋಮೀಟರ್ ಉದ್ದದ ಕಾಮಗಾರಿ ಪೂರ್ಣಗೊಂಡರೆ ಮಾತ್ರ ನವಿಲೆ ಕೆರೆಗೆ ನೀರು ಹರಿಯಲು ಸಾಧ್ಯ. ಈ ಕೆಲಸಗಳಿಗೆ ಅಗತ್ಯವಿರುವ ಅನುದಾನ ಲಭ್ಯವಿದ್ದರೂ ಹಾಗೂ ಭೂಮಿ ವಶಪಡಿಸಿಕೊಳ್ಳುವ ಪ್ರಕ್ರಿಯೆ ಪೂರ್ಣಗೊಂಡಿದ್ದರೂ ಯಾವುದೇ ತಾಂತ್ರಿಕ ಸಮಸ್ಯೆ ಇಲ್ಲದೆ ಕೆಲಸ ವಿಳಂಬವಾಗುತ್ತಿದೆ ಎಂದು ಭಟ್ಟರ ಹಳ್ಳಿ ಮಲ್ಲಿಕಾರ್ಜುನ ಆರೋಪಿಸಿದ್ದಾರೆ.

ಲಂಚ ಆರೋಪ; ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ ಕ್ಷಮೆ ಕೋರಿದ ಸ್ನೇಹಮಯಿ ಕೃಷ್ಣ

ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ ಕ್ಷಮೆ ಕೋರಿದ ಸ್ನೇಹಮಯಿ ಕೃಷ್ಣ

ಸಿಸಿಬಿ ವಿಚಾರಣೆ ಬಳಿಕ ಮಾತನಾಡಿರುವ ಸ್ನೇಹಮಯಿ ಕೃಷ್ಣ ಅವರು, ನಟೇಶ್‌ ಅವರಿಗೆ ಸಂಬಂಧಿಸಿ ಬಿಡುಗಡೆಯಾಗಿರುವ ಆಡಿಯೋ ನಿಜ, ಆದರೆ ಶಾಲಿನಿ ರಜನೀಶ್ ವಿರುದ್ಧದ ಆರೋಪ ಸುಳ್ಳು. ಮುಡಾ ಪ್ರಕರಣಕ್ಕೂ ಇದಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟನೆ ಕೊಟ್ಟಿದ್ದಾರೆ.

ವಿವಿಧ ಇಲಾಖೆಗಳಲ್ಲಿನ 2.5 ಲಕ್ಷಕ್ಕೂ ಹೆಚ್ಚು ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸಿಎಂ ಭರವಸೆ

2.5 ಲಕ್ಷಕ್ಕೂ ಹೆಚ್ಚು ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸಿಎಂ ಭರವಸೆ

ಬೆಂಗಳೂರಿನ ವಸಂತ ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ್ದ ʼಅಭಯ ಹಸ್ತʼ ಕಾರ್ಯಕ್ರಮದಲ್ಲಿ ಆರೋಗ್ಯ ಮತ್ತು ಕುಟುಂಬ‌ ಕಲ್ಯಾಣ ಇಲಾಖೆ ಹಾಗೂ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ವೃಂದಗಳ ನೇಮಕಾತಿ ಆದೇಶಗಳನ್ನು ಸಿಎಂ ಸಿದ್ದರಾಮಯ್ಯ ವಿತರಿಸಿದರು.

ಸಂಗನಕಲ್ಲಿನ ಗುಡ್ಡಕ್ಕೆ ಜಿಲ್ಲಾಧಿಕಾರಿ ಚಾರಣ; ಪ್ರವಾಸೋದ್ಯಮ ಅಭಿವೃದ್ಧಿಗೆ ಒತ್ತು ನೀಡುವುದಾಗಿ ಭರವಸೆ

ಬಳ್ಳಾರಿಯ ಸಂಗನಕಲ್ಲಿನ ಗುಡ್ಡಕ್ಕೆ ಡಿಸಿ ನಾಗೇಂದ್ರ ಪ್ರಸಾದ್ ಚಾರಣ

Ballari News: ಬಳ್ಳಾರಿ ಜಿಲ್ಲೆಯ ಐತಿಹಾಸಿಕ ಹಾಗೂ ಸಾಂಪ್ರದಾಯಿಕ ಮಹತ್ವ ಹೊಂದಿರುವ ಪ್ರಸಿದ್ಧ ಪ್ರವಾಸಿ ತಾಣವಾದ ಸಂಗನಕಲ್ಲಿನ ಹೀರೆಗುಡ್ಡಕ್ಕೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್ ಕೆ. ಚಾರಣ ಮಾಡಿ, ಪರಿಶೀಲನೆ ನಡೆಸಿದರು. ಈ ಕುರಿತ ವಿವರ ಇಲ್ಲಿದೆ.

5 ಲಕ್ಷ ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಬಿಜೆಪಿ ಶಾಸಕ ಡಾ. ಚಂದ್ರು ಲಮಾಣಿ

ಲಂಚ ಸ್ವೀಕರಿಸುವ ವೇಳೆ ಸಿಕ್ಕಿಬಿದ್ದ ಬಿಜೆಪಿ ಶಾಸಕ ಡಾ. ಚಂದ್ರು ಲಮಾಣಿ

ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಸಂಕಧಾಳ ಗ್ರಾಮದಲ್ಲಿ 1 ಕೋಟಿ ರೂಪಾಯಿ ವೆಚ್ಚದಲ್ಲಿ ರಸ್ತೆ ಬದಿಯ ತಡೆಗೋಡೆ ನಿರ್ಮಾಣ ಕಾಮಗಾರಿ ಮಂಜೂರಾಗಿದೆ. ಇದಕ್ಕಾಗಿ ಗುತ್ತಿಗೆದಾರನಿಂದ ‌ಶಾಸಕ ಚಂದ್ರು ಲಮಾಣಿ, 11 ಲಕ್ಷ ಕಮಿಷನ್‌ ನೀಡಲು ಬೇಡಿಕೆ ಇಟ್ಟಿದ್ದರು. ಈ ಪೈಕಿ 5 ಲಕ್ಷ ಹಣ ಪಡೆಯುತ್ತಿದ್ದಾಗ ಸಿಕ್ಕಿಬಿದ್ದಿದ್ದಾರೆ.

ಎಟಿಎಂಗಳಿಗೆ ತುಂಬಬೇಕಿದ್ದ 3.40 ಕೋಟಿ ರೂ. ವಂಚನೆ; ಸಿಎಂಎಸ್ ಕಂಪನಿಯ ಇಬ್ಬರ ವಿರುದ್ಧ ಎಫ್‌ಐಆರ್‌

ಎಟಿಎಂಗೆ ತುಂಬಬೇಕಿದ್ದ 3.40 ಕೋಟಿ ರೂ. ವಂಚನೆ; ಇಬ್ಬರ ವಿರುದ್ಧ ಕೇಸ್‌

Hassan News: ಹಾಸನದಲ್ಲಿ ವಂಚನೆ ಪ್ರಕರಣ ಬೆಳಕಿಗೆ ಬಂದಿದೆ. ಎಟಿಎಂಗಳಿಗೆ ಹಣ ಹಾಕದೇ 3,40,28,200 ರೂ. ದುರುಪಯೋಗ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಸಿಎಂಎಸ್ ಕಂಪನಿಯ ಇಬ್ಬರು ಸಿಬ್ಬಂದಿ ವಿರುದ್ಧ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರೋಹಿಣಿ ಸಿಂಧೂರಿಗೆ ಹಿನ್ನಡೆ; ಮಾನನಷ್ಟ ಮೊಕದ್ದಮೆ ರದ್ದು ಕೋರಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್‌

ಮಾನನಷ್ಟ ಕೇಸ್‌ ರದ್ದು ಕೋರಿದ್ದ ರೋಹಿಣಿ ಸಿಂಧೂರಿ ಅರ್ಜಿ ವಜಾ

ಜವಾಬ್ದಾರಿಯುತ ಸ್ಥಾನದಲ್ಲಿರುವ ಐಪಿಎಸ್‌ ಅಧಿಕಾರಿ ರೂಪಾ ಅವರು ತನ್ನ ಮೇಲೆ ವೈಯಕ್ತಿಕ ಹಗೆ ಸಾಧಿಸಲು ಮಾನಸಿಕ ಸ್ಥಿಮಿತತೆ ಕಳೆದುಕೊಂಡಿರುವ ರೀತಿಯಲ್ಲಿ ವರ್ತಿಸುತ್ತಿದ್ದಾರೆ ಎಂದು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ್ದನ್ನು ಆಧರಿಸಿ ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಐಪಿಎಸ್‌ ಅಧಿಕಾರಿ ಡಿ ರೂಪಾ ಮೌದ್ಗಿಲ್‌ ಅವರು ಮಾನಹಾನಿ ಪ್ರಕರಣ ದಾಖಲಿಸಿದ್ದರು.

ಬಜಾಜ್ ಜನರಲ್ ಇನ್ಶೂರೆನ್ಸ್ನಿಂದ ‘ ಎನ್ಆರ್ ಇನ್ಷೂರ್ ' ಬಿಡುಗಡೆ

ಬಜಾಜ್ ಜನರಲ್ ಇನ್ಶೂರೆನ್ಸ್ನಿಂದ ‘ ಎನ್ಆರ್ ಇನ್ಷೂರ್ ' ಬಿಡುಗಡೆ

ವಿದೇಶದಲ್ಲಿ ವಾಸಿಸುತ್ತಿದ್ದರೂ, ಭಾರತದಲ್ಲಿ ಹೆಲ್ತ್ ಇನ್ಶೂರೆನ್ಸ್ ಕವರೇಜನ್ನು ನಿರ್ವಹಿಸುವುದನ್ನು ಮುಂದುವರಿಸುವ ಎನ್ಆರ್ಐಗಳಲ್ಲಿ ದೀರ್ಘಾವಧಿಯ ಅಗತ್ಯವನ್ನು ಪರಿಹರಿಸುವ ಗುರಿಯನ್ನು NRInsure ಹೊಂದಿದೆ. ಹೊಸ ಪಾಲಿಸಿಯನ್ನು ಖರೀದಿಸುವ ಸಮಯದಲ್ಲಿ ಆ್ಯಡ್-ಆನ್ ಅನ್ನು ಆಯ್ಕೆ ಮಾಡಬಹುದು, ಅರ್ಹ ಗ್ರಾಹಕರು ತಮ್ಮ ಎನ್ಆರ್ಐ/ಒಸಿಐ ಸ್ಟೇಟಸ್ ಘೋಷಿಸಿದ ನಂತರ ಮತ್ತು ನಿಗದಿತ ಡಾಕ್ಯುಮೆಂಟ್ಗಳನ್ನು ಸಲ್ಲಿಸಿದ ನಂತರ ರಿಯಾಯಿತಿ ಪಡೆಯಲು ಅನುವು ಮಾಡಿಕೊಡುತ್ತದೆ.

ಇಂಡಿಯಾವುಡ್: ವುಡ್ವರ್ಕಿಂಗ್ ಮತ್ತು ಫರ್ನಿಚರ್ ಉತ್ಪಾದನೆಯಲ್ಲಿ ಭಾರತದ ಬೆಳವಣಿಗೆಗೆ ಹೊಸ ವೇಗ

ಫರ್ನಿಚರ್ ಉತ್ಪಾದನೆಯಲ್ಲಿ ಭಾರತದ ಬೆಳವಣಿಗೆಗೆ ಹೊಸ ವೇಗ

ಇತಿಹಾಸದಲ್ಲೇ ಅತಿದೊಡ್ಡ ಆವೃತ್ತಿಯಾಗಿರುವ INDIAWOOD 2026ರಲ್ಲಿ 50ಕ್ಕೂ ಹೆಚ್ಚು ದೇಶಗಳಿಂದ 1,000ಕ್ಕೂ ಅಧಿಕ ಬ್ರಾಂಡ್ಗಳು ಭಾಗವಹಿಸಲಿವೆ. ಸುಮಾರು 90,000ಕ್ಕೂ ಹೆಚ್ಚು ಉದ್ಯಮ ವೃತ್ತಿಪರರ ಭಾಗವಹಿಸುವಿಕೆ ನಿರೀಕ್ಷಿಸಲಾಗಿದ್ದು, 85,000 ಚದರ ಮೀಟರ್ ವಿಸ್ತೀರ್ಣದಲ್ಲಿ ಪ್ರದರ್ಶನ ನಡೆಯಲಿದೆ.

Byrati Basavaraj: ಶಾಸಕ ಬೈರತಿ ಬಸವರಾಜ್‌ ಮತ್ತೆ ಫೆ.26ರವರೆಗೆ ನ್ಯಾಯಾಂಗ ಬಂಧನಕ್ಕೆ

ಶಾಸಕ ಬೈರತಿ ಬಸವರಾಜ್‌ ಮತ್ತೆ ಫೆ.26ರವರೆಗೆ ನ್ಯಾಯಾಂಗ ಬಂಧನಕ್ಕೆ

ಸದ್ಯ ಫೆ.26ರವರೆಗೆ ಶಾಸಕ ಬೈರತಿ ಬಸವರಾಜ್ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಜಯದೇವ ಆಸ್ಪತ್ರೆಯಲ್ಲಿ ನೀಡಿರುವ ಡಯೆಟ್ ಪ್ಲಾನ್ ಅನ್ನು ಜೈಲಿನಲ್ಲಿ ಮುಂದುವರೆಸಲು ಕೋರ್ಟ್ ಸೂಚನೆ ನೀಡಿದೆ. ಜೈಲಿನಲ್ಲಿ ಕೂಡ ಡಯೆಟ್ ಪ್ಲಾನ್ ಪ್ರಕಾರವೇ ಊಟ ನೀಡಲು ನ್ಯಾಯಾಲಯ ಸೂಚಿಸಿದೆ.

kalaburagi news: ಬಾಗಲಕೋಟೆ ಬಳಿಕ ಕಲಬುರಗಿಯಲ್ಲೂ ಶಿವಾಜಿ ಜಯಂತಿ ವೇಳೆ ಮಾರಾಮಾರಿ

ಬಾಗಲಕೋಟೆ ಬಳಿಕ ಕಲಬುರಗಿಯಲ್ಲೂ ಶಿವಾಜಿ ಜಯಂತಿ ವೇಳೆ ಮಾರಾಮಾರಿ

ಶಿವಾಜಿ ಜಯಂತಿಯಲ್ಲಿ ಸೌಂಡ್ ಬಾಕ್ಸ್ ಬಳಕೆ ಬಗ್ಗೆ ಮಾತಿನ ಚಕಮಕಿ ಉಂಟಾಗಿ, ಬಳಿಕ ಎರಡೂ ಸಮುದಾಯಗಳ ನಡುವೆ ಕಟ್ಟಿಗೆ ಹಾಗೂ ಕಲ್ಲುಗಳಿಂದ ಹೊಡೆದಾಟ ನಡೆದಿದೆ. ಘಟನೆಯಲ್ಲಿ ಮೂರ್ನಾಲ್ಕು ಜನರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ.

Terrorist Arrest: ಜಾಮೀನು ಪಡೆದು ಪರಾರಿಯಾಗಿದ್ದ ಶಂಕಿತ ಉಗ್ರ ಬೆಂಗಳೂರಿನಲ್ಲಿ ಸೆರೆ

ಜಾಮೀನು ಪಡೆದು ಪರಾರಿಯಾಗಿದ್ದ ಶಂಕಿತ ಉಗ್ರ ಬೆಂಗಳೂರಿನಲ್ಲಿ ಸೆರೆ

ಸತತವಾಗಿ ವಿಚಾರಣೆಗೆ ಗೈರಾದ ಹಿನ್ನೆಲೆಯಲ್ಲಿ, ಎನ್ಐಎ ವಿಶೇಷ ನ್ಯಾಯಾಲಯವು ಅರ್ಷಾದ್ ಖಾನ್ ವಿರುದ್ಧ ವಾರೆಂಟ್ ಮತ್ತು ಪ್ರಕ್ಲೊಮೇಷನ್ (ಘೋಷಿತ ಅಪರಾಧಿ) ಆದೇಶ ಹೊರಡಿಸಿತ್ತು. ನ್ಯಾಯಾಲಯದ ಈ ಕಠಿಣ ಆದೇಶದ ಬೆನ್ನಲ್ಲೇ ಕಾರ್ಯಪ್ರವೃತ್ತರಾದ ಎನ್ಐಎ ತಂಡ, ಇಂದು ಆತನನ್ನು ಬಂಧಿಸಿ ಮತ್ತೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

Pocso Case: ಚಾಕಲೇಟ್‌ ಆಮಿಷವೊಡ್ಡಿ 9 ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪಾಪಿ ಆರೆಸ್ಟ್‌

ಚಾಕಲೇಟ್‌ ಆಮಿಷವೊಡ್ಡಿ 9 ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪಾಪಿ ಸೆರೆ

ಕೃಷ್ಣಮೂರ್ತಿ ಅಲಿಯಾಸ್ ಕಿಟ್ಟಿ ಎಂಬಾತನಿಂದ ಈ ದುಷ್ಕೃತ್ಯ ನಡೆದಿದೆ. ಶಾಲಾ ಆವರಣ ಮತ್ತು ಶೌಚಾಲಯದಲ್ಲಿ ಈತ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಆರಂಭದಲ್ಲಿ ಒಬ್ಬ ಬಾಲಕಿ ಆರೋಪಿಯ ನೀಚತನದ ಬಗ್ಗೆ ಬಾಯಿ ಬಿಟ್ಟಿದ್ದಾಳೆ. ತದನಂತರ 9 ವಿದ್ಯಾರ್ಥಿಗಳ ಜೊತೆಗೆ ಈತ ಅಸಭ್ಯವಾಗಿ ವರ್ತಿಸಿರುವುದು ಗೊತ್ತಾಗಿದೆ.

ಫೆಡ್ಎಕ್ಸ್ ನವಿ ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಂಪೂರ್ಣ ಸ್ವಯಂಚಾಲಿತ ಏರ್ ಕಾರ್ಗೋ ಹಬ್‌ಗೆ ಭೂಮಿಪೂಜೆ

ಸಂಪೂರ್ಣ ಸ್ವಯಂಚಾಲಿತ ಏರ್ ಕಾರ್ಗೋ ಹಬ್‌ಗೆ ಭೂಮಿಪೂಜೆ

ಫೆಡ್‌ಎಕ್ಸ್‌ನ 2,500 ಕೋಟಿ ರೂ. ದೀರ್ಘಾವಧಿಯ ಹೂಡಿಕೆಯು, ಪ್ರಾದೇಶಿಕ ಬಲವರ್ಧನೆ ಮತ್ತು ಪುನರ್ವಿತರಣಾ ಕೇಂದ್ರವಾಗಿ ವಿನ್ಯಾಸಗೊಳಿಸಲಾದ ಮತ್ತು ಅದಾನಿ ಏರ್‌ ಪೋರ್ಟ್ ಹೋಲ್ಡಿಂಗ್ಸ್ ಲಿಮಿಟೆಡ್ (AAHL) ಸಹಭಾಗಿತ್ವದಲ್ಲಿ ಅಭಿವೃದ್ಧಿಪಡಿಸಲಾದ ಪ್ರಸ್ತಾವಿತ 300,000 ಚದರ ಅಡಿ ಸೌಲಭ್ಯವನ್ನು ಒಳಗೊಂಡಿರಲಿದೆ.

Self harming: ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಆಪ್ತ ಕಾರ್ಯದರ್ಶಿಯ ಮಗ ಆತ್ಮಹತ್ಯೆ

ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಆಪ್ತ ಕಾರ್ಯದರ್ಶಿಯ ಮಗ ಆತ್ಮಹತ್ಯೆ

ಬೆಂಗಳೂರಿನ ಸಂಜಯನಗರದ ಲೊಟ್ಟೆಗೊಲ್ಲಹಳ್ಳಿಯಲ್ಲಿ ಈ ಒಂದು ಘಟನೆ ನಡೆದಿದ್ದು, ಹೇಮಂತ್ ಆತ್ಮಹತ್ಯೆಗೆ ಕಾರಣ ನಿಗೂಢವಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡುತ್ತಿದ್ದಾರೆ. ಮರಣೋತ್ತರ ಪರೀಕ್ಷೆಗೆ ಎಂ ಎಸ್ ರಾಮಯ್ಯ ಆಸ್ಪತ್ರೆಗೆ ಹೇಮಂತ್ ಶವ ರವಾನಿಸಲಾಗಿದೆ. ಪೊಲೀಸರು ಕುಟುಂಬಸ್ಥರಿಂದ ಮಾಹಿತಿ ಕಲೆ ಹಾಕುತ್ತಿದ್ದಾರೆ.

Snehamayi Krishna: ಬಂಧಿತ ಸ್ನೇಹಮಯಿ ಕೃಷ್ಣ ಮನೆ, ಕಚೇರಿಯಲ್ಲಿ ತೀವ್ರ ತಲಾಶೆ, ಮಹತ್ವದ ದಾಖಲೆ ಜಪ್ತಿ

ಸ್ನೇಹಮಯಿ ಕೃಷ್ಣ ಮನೆ, ಕಚೇರಿಯಲ್ಲಿ ತೀವ್ರ ತಲಾಶೆ, ಮಹತ್ವದ ದಾಖಲೆ ಜಪ್ತಿ

ದಾಳಿಯ ವೇಳೆ ಸಿಕ್ಕ ಎಲ್ಲಾ ಎಲೆಕ್ಟ್ರಾನಿಕ್ ಉಪಕರಣಗಳು ಹಾಗೂ ದಾಖಲೆಗಳನ್ನು ಸಿಸಿಬಿ ಪೊಲೀಸರು ಸ್ಥಳದಲ್ಲೇ ಸೀಲ್ ಮಾಡಿ ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ. ಈ ಡಿಜಿಟಲ್ ಪುರಾವೆಗಳನ್ನು ಎಫ್‌ಎಸ್‌ಎಲ್ (FSL) ಪರೀಕ್ಷೆಗೆ ಒಳಪಡಿಸುವ ಸಾಧ್ಯತೆಯಿದೆ. ನಕಲಿ ಆಡಿಯೋ ತುಣುಕು ಸೃಷ್ಟಿಸಿದವರ ಹಿಂದೆ ಯಾರಿದ್ದಾರೆ ಮತ್ತು ಇದರ ಉದ್ದೇಶವೇನಿತ್ತು ಎಂಬುದು ಸಿಸಿಬಿ ವಿಚಾರಣೆಯಿಂದ ಹೊರಬರಬೇಕಿದೆ.

Karnataka schools: ರಾಜ್ಯದ ಎಲ್ಲಾ ಶಾಲೆಗಳಲ್ಲಿ ‘ಮೊಬೈಲ್ ಬಿಡಿ – ಪುಸ್ತಕ ಹಿಡಿ’ ಅಭಿಯಾನ: ಶಿಕ್ಷಣ ಇಲಾಖೆ ಆದೇಶ

ರಾಜ್ಯದ ಎಲ್ಲಾ ಶಾಲೆಗಳಲ್ಲಿ ‘ಮೊಬೈಲ್ ಬಿಡಿ – ಪುಸ್ತಕ ಹಿಡಿ’ ಅಭಿಯಾನ

ವಿದ್ಯಾರ್ಥಿಗಳಲ್ಲಿ ಮೊಬೈಲ್ ಫೋನ್‌ಗಳು ಹಾಗೂ ಇತರೆ ಡಿಜಿಟಲ್ ಸಾಧನಗಳ ಅತಿಯಾದ ಹಾಗೂ ಅನಿಯಂತ್ರಿತ ಬಳಕೆಯಿಂದಾಗಿ ಓದುವಿಕೆಯಲ್ಲಿ ಗಣನೀಯ ಕುಸಿತ, ಕಲಿಕಾ ಆಸಕ್ತಿ ಗಂಭೀರವಾಗಿ ಕುಂಠಿತವಾಗುತ್ತಿರುವುದು, ಏಕಾಗ್ರತೆಯಲ್ಲಿ ಹಿನ್ನಡೆ, ಮಾನಸಿಕ ಆರೋಗ್ಯದ ಮೇಲೆ ಪ್ರತಿಕೂಲ ಪರಿಣಾಮ, ಶೈಕ್ಷಣಿಕ ಸಾಧನೆಗೆ ಸ್ಪಷ್ಟ ಅಡ್ಡಿಯುಂಟಾಗುತ್ತಿದೆ. ಅದನ್ನು ತಡೆಯಲು ಈ ಅಭಿಯಾನ.

Loading...