ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಅಕ್ಷಯ ತೃತೀಯ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ
ಕರ್ನಾಟಕ
Sirsi News: ತುಳಸಿಯ ಮುಡಿಗೆ ಗ್ಲೋಬಲ್ ಚೈಲ್ಡ್ ಪ್ರೊಡಿಜಿ ಅವಾರ್ಡ್

ತುಳಸಿಯ ಮುಡಿಗೆ ಗ್ಲೋಬಲ್ ಚೈಲ್ಡ್ ಪ್ರೊಡಿಜಿ ಅವಾರ್ಡ್

ಜಗತ್ತಿನ ನೂರಾ ಮೂವತ್ತು ದೇಶಗಳಲ್ಲಿ ಕಲೆ, ಕ್ರೀಡೆ, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ ಸೇರಿದಂತೆ‌ ವಿವಿಧ‌ ಕ್ಷೇತ್ರದಲ್ಲಿ ಸಾಧನೆ ಮಾಡಿದ ನೂರು ಸಾಧಕ ಮಕ್ಕಳ ಪಟ್ಟಿಗೆ ಯಕ್ಷಗಾನ ಯುವ ಕಲಾವಿದೆ, ಶಿರಸಿಯ ತುಳಸಿ ಹೆಗಡೆ ಹೆಸರು ಸೇರ್ಪಡೆಗೊಂಡಿದೆ .ಮಕ್ಕಳ ಅರ್ಹತೆ, ಸಾಧನೆ, ಅವರ ನಿರಂತರ ಶ್ರಮ ಪರಿಗಣಿಸಿ ತಜ್ಞರ‌ ಸಮಿತಿ ನೂರು ಸಾಧಕ ಮಕ್ಕಳನ್ನು ಆಯ್ಕೆ ಮಾಡಿದ್ದು ಈ ಪಟ್ಟಿಯಲ್ಲಿ ಕನ್ನಡದ ಕಲೆ ಯಕ್ಷಗಾನದ ಮೂಲಕ ಹೆಸರಾದ ತುಳಸಿ ಹೆಗಡೆ ಕೂಡ ಒಬ್ಬರು

Pralhad Joshi: ಮೀಸಲಾತಿ ತೆಗೆಯುವುದಲ್ಲ, ಮುಟ್ಟಲೂ ಸಹ ಕೇಂದ್ರ ಸರ್ಕಾರ ಬಿಡಲ್ಲ: ಪ್ರಲ್ಹಾದ್‌ ಜೋಶಿ

ಮೀಸಲಾತಿ ತೆಗೆಯುವುದಲ್ಲ, ಮುಟ್ಟಲೂ ಸಹ ಬಿಡಲ್ಲ: ಪ್ರಲ್ಹಾದ್‌ ಜೋಶಿ

Pralhad Joshi: ಅತಿ ಹೆಚ್ಚು ಬಾರಿ ಸಂವಿಧಾನ ಬದಲಾಯಿಸಿ ದೇಶಕ್ಕೆ ಅನ್ಯಾಯ ಎಸಗಿದವರೇ ಇಂದು ಸಂವಿಧಾನ ಬದಲಾವಣೆ ಕೂಗೆಬ್ಬಿಸಿ ಅಪಪ್ರಚಾರ ಮಾಡುತ್ತಿದ್ದಾರೆ. ಮೀಸಲಾತಿ ತೆಗೆಯುವುದಲ್ಲ, ಅದನ್ನು ಮುಟ್ಟಲೂ ಸಹ ಕೇಂದ್ರ ಸರ್ಕಾರ ಬಿಡುವುದಿಲ್ಲ ಎಂದು ಕೇಂದ್ರ ಆಹಾರ ಮತ್ತು ನಾಗರೀಕ ಸರಬರಾಜು ಸಚಿವ ಪ್ರಲ್ಹಾದ್‌ ಜೋಶಿ ಹೇಳಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

Dinesh Gundu Rao: ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರುಪಡೆಯುವಿಕೆ ಕೇಂದ್ರ ಪ್ರಾರಂಭಿಸಿ: ದಿನೇಶ್ ಗುಂಡೂರಾವ್

ಅಂಗಾಂಗ ಮರುಪಡೆಯುವಿಕೆ ಕೇಂದ್ರ ಪ್ರಾರಂಭಿಸಿ: ದಿನೇಶ್ ಗುಂಡೂರಾವ್

ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರುಪಡೆಯುವಿಕೆ ಕೇಂದ್ರಗಳನ್ನು ಪ್ರಾರಂಭಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ರಾಜ್ಯದ 3 ಸ್ಥಳಗಳಲ್ಲಿ BMST ಅಡಿಯಲ್ಲಿ HLA ಪ್ರಯೋಗಾಲಯಗಳನ್ನು ಸ್ಥಾಪಿಸಲು KMC&RI ಮಾದರಿಯನ್ನು ಅನ್ವೇಷಿಸುವಂತೆ ತಿಳಿಸಿದ್ದಾರೆ.

PES University: ರಾಷ್ಟ್ರ ಮಟ್ಟದ ಸ್ಥಿರ-ವಿಂಗ್‌ ಡ್ರೋನ್‌ ಸ್ಪರ್ಧೆ: ಪಿಇಎಸ್‌ ವಿವಿಯ ತಂಡಕ್ಕೆ 2ನೇ ಸ್ಥಾನ

ಸ್ಥಿರ ವಿಂಗ್‌ ಡ್ರೋನ್‌ ಸ್ಪರ್ಧೆ: ಪಿಇಎಸ್‌ ವಿವಿಗೆ 2ನೇ ಸ್ಥಾನ

ಚೆನ್ನೈನಲ್ಲಿ ನಡೆದ ರಾಷ್ಟ್ರೀಯ ಮಟ್ಟದ ಸ್ಥಿರ-ವಿಂಗ್‌ ಡ್ರೋನ್‌ ಸ್ಪರ್ಧೆಯಲ್ಲಿ ಬೆಂಗಳೂರಿನ ಪಿಇಎಸ್‌ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಎರಡನೇ ಸ್ಥಾನ ಪಡೆದಿದ್ದಾರೆ. ತಂಡವು ಈ ಸಾಧನೆಗಾಗಿ 45,000 ರೂ.ಗಳ ಬಹುಮಾನ ಪಡೆಯಿತು. ಪಿಇಎಸ್‌ ವಿಶ್ವವಿದ್ಯಾಲಯದ ಕುಲಾಧಿಪತಿ ಪ್ರೊ.ಜವಾಹರ್‌ ದೊರೆಸ್ವಾಮಿ, ಕುಲಪತಿ ಪ್ರೊ. ಜೆ. ಸೂರ್ಯಪ್ರಸಾದ್‌ ಅವರು ತಂಡವನ್ನು ಅಭಿನಂದಿಸಿದ್ದಾರೆ.

Karnataka Rains: ಹಾವೇರಿಯಲ್ಲಿ ಸಿಡಿಲು ಬಡಿದು ರೈತ ಸಾವು

ಹಾವೇರಿಯಲ್ಲಿ ಸಿಡಿಲು ಬಡಿದು ರೈತ ಸಾವು

Haveri News: ಸಿಡಿಲು ಬಡಿದು ರೈತ ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆಯ ಹಿರೇಕೆರೂರ ತಾಲೂಕಿನ ಡಮ್ಮಳ್ಳಿ ಗ್ರಾಮದಲ್ಲಿ ಸೋಮವಾರ ಜರುಗಿದೆ. ಡಮ್ಮಳ್ಳಿ ಗ್ರಾಮದ ನಾಗಪ್ಪ ಕಣಸೋಗಿ ಮೃತಪಟ್ಟವರು. ಘಟನಾ ಸ್ಥಳಕ್ಕೆ ಹಿರೇಕೆರೂರು ಶಾಸಕ ಯು.ಬಿ. ಬಣಕಾರ, ತಹಸೀಲ್ದಾರ್ ಪ್ರಭಾಕರ್ ಮತ್ತು ಹಿರೇಕೆರೂರು ಪೊಲೀಸರು ಭೇಟಿ ನೀಡಿದ್ದಾರೆ.

ಚಂದನವನ ಫಿಲ್ಮ್ ಕ್ರಿಟಿಕ್ಸ್ ಅವಾರ್ಡ್ಸ್ 2025: ಶಿವರಾಜಕುಮಾರ್‌ಗೆ ಜೀವಮಾನ ಸಾಧನೆ ಪ್ರಶಸ್ತಿ; ವಿಜಯ್ ಅತ್ಯುತ್ತಮ ನಿರ್ದೇಶಕ, ಗಣೇಶ್ ಅತ್ಯುತ್ತಮ ನಟ

ಚಂದನವನ ಫಿಲ್ಮ್ ಕ್ರಿಟಿಕ್ಸ್ ಅವಾರ್ಡ್ಸ್ 2025 ಪ್ರಕಟ

Chandanavana Film Critics Awards 2025: ಬೆಂಗಳೂರಿನಲ್ಲಿ ಭಾನುವಾರ ಸಂಜೆ ನಡೆದ ಅದ್ದೂರಿ ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ ಪ್ರಶಸ್ತಿ ಪ್ರದಾನ ಸಮಾರಂಭ 2025ರಲ್ಲಿ ಕನ್ನಡದ ಸೂಪರ್‌ಸ್ಟಾರ್ ಶಿವರಾಜಕುಮಾರ್ ಅವರಿಗೆ ಜೀವಮಾನ ಸಾಧನೆ ಪ್ರಶಸ್ತಿಯನ್ನು ನೀಡಲಾಯಿತು.

ಶಿರಸಿಯ ಬಾಲ ಪ್ರತಿಭೆ ತುಳಸಿಯ ಮುಡಿಗೆ ಗ್ಲೋಬಲ್ ಚೈಲ್ಡ್ ಪ್ರೊಡಿಜಿ ಅವಾರ್ಡ್

ತುಳಸಿಯ ಮುಡಿಗೆ ಅಂತಾರಾಷ್ಟ್ರೀಯ ಪ್ರಶಸ್ತಿ

ಚೆನ್ನೈನ ಹಿಂದೂಸ್ತಾನ್ ಹಾಗೂ ಚಾರ್ಲ್ಸ್‌ ಗ್ರೂಪ್‌ಗಳ ಸಹಕಾರದಲ್ಲಿ ನಡೆಸಲಾದ ಗ್ಲೋಬಲ್ ಚೈಲ್ಡ್ ಪ್ರೊಡಿಜಿ ಅವಾರ್ಡ್‌ಗೆ ಶಿರಸಿಯ ತುಳಸಿ ಹೆಗಡೆ ಆಯ್ಕೆಯಾಗಿದ್ದಾರೆ. ಜಗತ್ತಿನ 130 ದೇಶಗಳಲ್ಲಿ ಕಲೆ, ಕ್ರೀಡೆ, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ ಸೇರಿದಂತೆ‌ ವಿವಿಧ‌ ಕ್ಷೇತ್ರದಲ್ಲಿ ಸಾಧನೆ ಮಾಡಿದ ನೂರು ಸಾಧಕ ಮಕ್ಕಳ ಪಟ್ಟಿಗೆ ಯಕ್ಷಗಾನ ಯುವ ಕಲಾವಿದೆ, ಶಿರಸಿಯ ತುಳಸಿ ಹೆಗಡೆ ಹೆಸರು ಸೇರ್ಪಡೆಗೊಂಡಿದೆ.

CM Siddaramaiah: ಬಿಜೆಪಿಯವರು ಸತ್ಯದ ತಲೆ ಮೇಲೆ ಹೊಡೆದಂತೆ ಸುಳ್ಳು ಹೇಳ್ತಾರೆ: ಸಿದ್ದರಾಮಯ್ಯ

ಬಿಜೆಪಿಯವರು ಸತ್ಯದ ತಲೆ ಮೇಲೆ ಹೊಡೆದಂತೆ ಸುಳ್ಳು ಹೇಳ್ತಾರೆ: ಸಿದ್ದರಾಮಯ್ಯ

ರಾಜ್ಯ ಸರ್ಕಾರದ ಬಳಿ ಅಭಿವೃದ್ಧಿಗೆ ಹಣ ಇಲ್ಲ ಎಂದು ಬಿಜೆಪಿಯವರು ಸುಳ್ಳು ಹೇಳುತ್ತಿದ್ದಾರೆ. ಇಂದು ಒಂದೇ ದಿನ 140 ಕೋಟಿ ರೂ. ಅಭಿವೃದ್ಧಿ ಕಾರ್ಯಗಳನ್ನು ಎಚ್.ಡಿ. ಕೋಟೆ ಜನಕ್ಕೆ ಅರ್ಪಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

Double Murder Case: ಆಸ್ತಿಗಾಗಿ ಅವಳಿ ಕೊಲೆ, ತಾಯಿ- ಮಗನ ಹತ್ಯೆ

ಆಸ್ತಿಗಾಗಿ ಅವಳಿ ಕೊಲೆ, ತಾಯಿ- ಮಗನ ಹತ್ಯೆ

ಆಸ್ತಿ ವ್ಯಾಜ್ಯಕ್ಕೆ ಸಂಬಂಧಿಸಿ ಕಲಹ ಉಲ್ಬಣಿಸಿ ತಾಯಿ- ಮಗನ ಕೊಲೆ ಸಂಭವಿಸಿದೆ. ಬಾಗಲಕೋಟೆ ಜಿಲ್ಲೆಯ ಇಳಕಲ್‌ ತಾಲೂಕಿನಲ್ಲಿ ಆರೋಪಿಯೊಬ್ಬ ಅವಳಿ ಕೊಲೆ (Double Murder Case) ಮಾಡಿ ಪರಾರಿಯಾಗಿದ್ದಾನೆ. ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದು, ಆರೋಪಿಯನ್ನು ಶೋಧಿಸುತ್ತಿದ್ದಾರೆ.

Karnataka Congress: ಕಾಂಗ್ರೆಸ್‌ ನಕ್ಷೆಯಲ್ಲಿ ತಿರುಚಿದ ಕಾಶ್ಮೀರ; ಟೀಕೆ, ಡಿಕೆಶಿ ಕಠಿಣ ಕ್ರಮ

ಕಾಂಗ್ರೆಸ್‌ ನಕ್ಷೆಯಲ್ಲಿ ತಿರುಚಿದ ಕಾಶ್ಮೀರ; ಟೀಕೆ, ಡಿಕೆಶಿ ಕಠಿಣ ಕ್ರಮ

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್) ಪಾಕಿಸ್ತಾನಕ್ಕೆ ನೀಡಿದ ಸಾಲವನ್ನು ಟೀಕಿಸುವ ಉದ್ದೇಶದಿಂದ ಪೋಸ್ಟರ್‌ ಹಾಕಲಾಗಿತ್ತು. ಅದರಲ್ಲಿ ಜಮ್ಮು ಮತ್ತು ಕಾಶ್ಮೀರದ ತಪ್ಪು ನಕ್ಷೆಯನ್ನು ಟ್ವೀಟ್ ಮಾಡಿದ ನಂತರ ಕರ್ನಾಟಕ ಕಾಂಗ್ರೆಸ್ (Karnataka Congress) ತೀವ್ರ ಟೀಕೆಗೆ ಒಳಗಾಗಿದೆ

Crime News: ಮಹಿಳೆಗೆ ಮರ್ಮಾಂಗ ತೋರಿಸಿದ ಗ್ರಾಪಂ ಉಪಾಧ್ಯಕ್ಷ: ಪಕ್ಷದಿಂದ ಉಚ್ಛಾಟಿಸಿದ ಬಿಜೆಪಿ

ಮಹಿಳೆಗೆ ಮರ್ಮಾಂಗ ತೋರಿಸಿದ ಗ್ರಾಪಂ ಉಪಾಧ್ಯಕ್ಷ: ಬಿಜೆಪಿಯಿಂದ ಉಚ್ಛಾಟನೆ

Crime News: ಮನೆಗೆ ಹೋಗುವ ರಸ್ತೆಗೆ ಸಂಬಂಧಿಸಿದಂತೆ ಮಹಿಳೆಗೂ ಪದ್ಮನಾಭ ಅವರಿಗೂ ವಿವಾದ ಇತ್ತು. ರಸ್ತೆಯ ಗೇಟಿಗೆ ಬೀಗ ಹಾಕಿದ್ದನ್ನು ವಿಚಾರಿಸಲು ಬಂದ ಮಹಿಳೆಯ ಮುಂದೆ ಈತ ಚಡ್ಡಿ ಜಾರಿಸಿ ಗುಪ್ತಾಂಗ ತೋರಿಸಿ ವಿಕೃತಿ ಮೆರೆದಿದ್ದಾನೆ. ಈ ಬಗ್ಗೆ ವೀಡಿಯೋ ವೈರಲ್ ಆಗಿದೆ.

Bengaluru Crime News: ಪಿಸ್ತೂಲು ಹಿಡಿದು ಕ್ಲಬ್‌ಗೆ ನುಗ್ಗಿದ ಅಪರಿಚಿತ ವ್ಯಕ್ತಿ: ಪೊಲೀಸ್‌ ಅಲರ್ಟ್

ಪಿಸ್ತೂಲು ಹಿಡಿದು ಕ್ಲಬ್‌ಗೆ ನುಗ್ಗಿದ ಅಪರಿಚಿತ ವ್ಯಕ್ತಿ: ಪೊಲೀಸ್‌ ಅಲರ್ಟ್

ಪಬ್‌ಗೆ ನುಗ್ಗಿದ ಅಪರಿಚಿತ ವ್ಯಕ್ತಿಯ ಬಳಿ ಪಿಸ್ತೂಲ್​ ಇರುವುದರಿಂದ ಈ ಪ್ರಕರಣವನ್ನು ತುಂಬಾ ಸೂಕ್ಷ್ಮವಾಗಿ ನಿಭಾಯಿಸಲಾಗುತ್ತಿದೆ. ಘಟನಾ ಸ್ಥಳದಲ್ಲಿ ಡ್ರೋನ್ ಹಾರಿಸಿ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಕಳ್ಳತನ ಅಥವಾ ದರೋಡೆಗೆ ಬಂದಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.

Cyber Attack: ಪಾಕಿಸ್ತಾನದಿಂದ ಸೈಬರ್‌ ದಾಳಿ ಸಾಧ್ಯತೆ: ಪೊಲೀಸ್‌ ಆಯುಕ್ತರ ಎಚ್ಚರಿಕೆ

ಪಾಕಿಸ್ತಾನದಿಂದ ಸೈಬರ್‌ ದಾಳಿ ಸಾಧ್ಯತೆ: ಪೊಲೀಸ್‌ ಆಯುಕ್ತರ ಎಚ್ಚರಿಕೆ

ಪೊಲೀಸ್ ಕಮಿಷನರ್ ಬಿ.ದಯಾನಂದ್ (B Dayanand) ಅವರು ಸಾರ್ವಜನಿಕರಿಗೆ ಎಚ್ಚರಿಕೆ ಸಂದೇಶ ನೀಡಿದ್ದು, ಅಪರಿಚಿತ ಲಿಂಕ್, ಇ-ಮೇಲ್ ಗಳ ಮೇಲೆ ನಿಗಾವಹಿಸಿ, ಎಕ್ಸ್ ಕ್ಲೂಸಿವ್ ನ್ಯೂಸ್ ಲಿಂಕ್ ಗಳು ಹಾಗೂ ಎಪಿಕೆ ಫೈಲ್ಸ್, ಅಪರಿಚಿತ ಫಾರ್ವರ್ಡ್ ಲಿಂಕ್ ಕ್ಲಿಕ್ ಮಾಡದಂತೆ ಸೂಚನೆ ನೀಡಿದ್ದಾರೆ.

Road Accident: ಚಿತ್ರದುರ್ಗ ಬಳಿ ಭೀಕರ ಅಪಘಾತ, ಆಂಧ್ರದ ಮೂವರು ಸಾವು

ಚಿತ್ರದುರ್ಗ ಬಳಿ ಭೀಕರ ಅಪಘಾತ, ಆಂಧ್ರದ ಮೂವರು ಸಾವು

ಚಿತ್ರದುರ್ಗದಿಂದ ಹೊಳಲ್ಕೆರೆ ಕಡೆಗೆ ತೆರಳುತ್ತಿದ್ದ ಕಾರಿಗೆ, ಹೊಳಲ್ಕೆರೆಯಿಂದ ಚಿತ್ರದುರ್ಗ ಕಡೆ ಬರುತ್ತಿದ್ದ ಲಾರಿ ಡಿಕ್ಕಿ ಹೊಡೆದು ಅವಘಡ (Road Accident) ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಆಂಧ್ರಪ್ರದೇಶದ ನಿವಾಸಿಗಳು ಇದ್ದ ಇನೊವಾ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.

Karnataka JDS: ಕಮಲದ ನೆರಳಿನಲ್ಲಿ ಕಮರುವ ಜೆಡಿಎಸ್

ಕಮಲದ ನೆರಳಿನಲ್ಲಿ ಕಮರುವ ಜೆಡಿಎಸ್

ರಾಜ್ಯ ಜೆಡಿಎಸ್ ನಾಯಕತ್ವ ಕೊರತೆ ಬಿಸಿ ನಿಧಾನವಾಗಿ ತಟ್ಟಲಾರಂಭಿಸಿದ್ದು, ಪಕ್ಷದ ಶಾಸಕರು ಮತ್ತು ಮುಖಂಡರಲ್ಲಿ ಸದ್ದಿಲ್ಲದೆ ಆತಂಕ ಶುರವಾಗಿದೆ. ಕಳೆದೊಂದು ವರ್ಷದಿಂದ ಬಿಜೆಪಿ ನೆರಳಿನಲ್ಲಿರುವ ಜೆಡಿಎಸ್, ನಿಧಾನವಾಗಿಯೇ ತನ್ನ ಬೇರುಗಳನ್ನು ಕಳಚಿ ಕೊಳ್ಳುತ್ತಿದೆಯೇನೋ ಎಂದು ಭಾಸವಾಗುವಂತೆ ಕಾರ್ಯಕರ್ತರಲ್ಲಿ ದಿಗಿಲು ಹುಟ್ಟಿಸಿದೆ.

Rakesh Poojary: ಕಾಮಿಡಿ ಕಿಲಾಡಿಗಳು ಖ್ಯಾತಿಯ ರಾಕೇಶ್‌ ಪೂಜಾರಿ ನಿಧನ

ಕಾಮಿಡಿ ಕಿಲಾಡಿಗಳು ಖ್ಯಾತಿಯ ರಾಕೇಶ್‌ ಪೂಜಾರಿ ನಿಧನ

ಸುಮಾರು 150 ಆಡಿಷನ್ ನೀಡಿದ್ದ ರಾಕೇಶ್ ಪೂಜಾರಿ (Rakesh Pujari) 2018 ರಲ್ಲಿ ಜೀ ಕನ್ನಡ ‘ಕಾಮಿಡಿ ಕಿಲಾಡಿಗಳು ಸೀಸನ್ 2’ ಶೋಗೆ ಸೆಲೆಕ್ಟ್ ಆದರು. ಇದರಲ್ಲಿ ರನ್ನರ್ ಅಪ್ ತಂಡದ ಸದಸ್ಯರಾಗಿದ್ದರು. ಬಳಿಕ 2020ರಲ್ಲಿ ‘ಕಾಮಿಡಿ ಕಿಲಾಡಿಗಳು ಸೀಸನ್ 3’ ವಿಜೇತರಾಗಿದ್ದರು.

Karnataka Rains: ಹವಾಮಾನ ವರದಿ; ಇಂದು ಬೆಂಗಳೂರು, ಶಿವಮೊಗ್ಗ ಸೇರಿ ಹಲವೆಡೆ ಗುಡುಗು ಸಹಿತ ಮಳೆ ನಿರೀಕ್ಷೆ

ಇಂದು ಬೆಂಗಳೂರು, ಶಿವಮೊಗ್ಗ ಸೇರಿ ಹಲವೆಡೆ ಗುಡುಗು ಸಹಿತ ಮಳೆ ನಿರೀಕ್ಷೆ

Karnataka Rains: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಸಂಜೆ ವೇಳೆಗೆ ಮೋಡ ಕವಿದ ವಾತಾವರಣವಿರುತ್ತದೆ. ಹಗುರದಿಂದ ಮಧ್ಯಮ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 33°C ಮತ್ತು 22°C ಇರಲಿದೆ.

Cricket: ಮೇ 12ರಿಂದ  ಸತ್ಯಸಾಯಿ ಗ್ರಾಮ ಮುದ್ದೇನಹಳ್ಳಿಯಲ್ಲಿ ಭಾರತ- ಆಫ್ರಿಕಾ ನಡುವೆ ಅಂಧರ ಕ್ರಿಕೆಟ್ T20 ಸರಣಿ ಆರಂಭ

ಮೇ 12ರಿಂದ  ಭಾರತ- ಆಫ್ರಿಕಾ ನಡುವೆ ಅಂಧರ ಕ್ರಿಕೆಟ್ T20 ಸರಣಿ ಆರಂಭ

ಸತ್ಯಸಾಯಿ ಗ್ರಾಮ ಮುದ್ದೇನಹಳ್ಳಿಯಲ್ಲಿ ಮೇ 12ರಿಂದ ಭಾರತ- ಆಫ್ರಿಕಾ ನಡುವೆ ಅಂಧರ ಕ್ರಿಕೆಟ್ T20 ಸರಣಿ ಆರಂಭವಾಗಲಿದೆ. ಭಾರತ ಮತ್ತು ದಕ್ಷಿಣ ಆಫ್ರಿಕಾ ತಂಡಗಳ ನಡುವೆ 5 T20 ಸರಣಿ ನಾಳೆಯಿಂದ ಆರಂಭವಾಗಲಿದ್ದು ಸರಣಿ ಉದ್ಘಾಟನಾ ಕಾರ್ಯಕ್ರಮಕ್ಕೆ ಆಹ್ವಾನಿಸಲು ನಾವು ಸಂತೋಷ ಪಡುತ್ತೇವೆ.

Operation Sindoor: ಕಾಶ್ಮೀರದಲ್ಲಿ ಸಿಲುಕಿದ್ದ ಕರ್ನಾಟಕದ 13 ವಿದ್ಯಾರ್ಥಿಗಳನ್ನು ಕರೆತರಲು ಎಚ್‌ಡಿಕೆ ನೆರವು

ಕಾಶ್ಮೀರದಿಂದ ರಾಜ್ಯದ 13 ವಿದ್ಯಾರ್ಥಿಗಳನ್ನು ಕರೆತರಲು ಎಚ್‌ಡಿಕೆ ನೆರವು

Operation Sindoor: ಜಮ್ಮು ಮತ್ತು ಕಾಶ್ಮೀರದ ಶೇರ್-ಇ-ಕಾಶ್ಮೀರ ಕೃಷಿ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ಕರ್ನಾಟಕದ 13 ವಿದ್ಯಾರ್ಥಿಗಳು ಕ್ಷೇಮವಾಗಿ ನವದೆಹಲಿಗೆ ಮುಟ್ಟಿದ್ದು, ನಾಳೆ ಸಂಜೆ ಬೆಂಗಳೂರು ತಲುಪಲಿದ್ದಾರೆ ಎಂದು ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

Karnataka Rains: ಬೆಳಗಾವಿಯಲ್ಲಿ ಸಿಡಿಲು ಬಡಿದು ಇಬ್ಬರು ರೈತ ಮಹಿಳೆಯರ ಸಾವು

ಬೆಳಗಾವಿಯಲ್ಲಿ ಸಿಡಿಲು ಬಡಿದು ಇಬ್ಬರು ರೈತ ಮಹಿಳೆಯರ ಸಾವು

Karnataka Rains: ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹಿಟ್ಟಣಗಿ ಗ್ರಾಮದಲ್ಲಿ ದುರಂತ ನಡೆದಿದೆ. ಸಿಡಿಲು ಬಡಿದು ಇಬ್ಬರು ರೈತ ಮಹಿಳೆಯರು ಸ್ಥಳದಲ್ಲೇ ಮೃತಪಟ್ಟಿದ್ದು, ಸ್ಥಳಕ್ಕೆ ಸವದತ್ತಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಾಳೆಯೂ ಬೆಳಗಾವಿ, ಧಾರವಾಡ ಸೇರಿ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆ ಇದೆ.

Ranjith Kumar Wedding: ದಾಂಪತ್ಯ ಜೀವನಕ್ಕೆ ಕಾಲಿಟ್ಟ ಬಿಗ್​ ಬಾಸ್ ಖ್ಯಾತಿಯ ರಂಜಿತ್;‌ ಹುಡುಗಿ ಯಾರು?

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಬಿಗ್​ ಬಾಸ್ ಖ್ಯಾತಿಯ ರಂಜಿತ್

Ranjith Kumar Wedding: ದೊಡ್ಡಬಳ್ಳಾಪುರದ ಮುಖ್ಯರಸ್ತೆಯ ಹೊನ್ನೇನಹಳ್ಳಿಯಲ್ಲಿ ರಂಜಿತ್‌ ಮತ್ತು ಮಾನಸ ಗೌಡ ಅವರ ಮದುವೆ ಅದ್ಧೂರಿಯಾಗಿ ಶನಿವಾರ ನಡೆದಿದೆ. ಬಿಗ್‌ ಬಾಸ್‌ ಮಾಜಿ ಸ್ಪರ್ಧಿಗಳಾದ ತುಕಾಲಿ ಸಂತೋಷ್​ ಹಾಗೂ ಮಾನಸಾ ಸಂತೋಷ್ ದಂಪತಿ, ಲಾಯರ್ ಜಗದೀಶ್​, ಗೋಲ್ಡ್​ ಸುರೇಶ್, ಅನುಷಾ ರೈ, ಯಮುನಾ ಶ್ರೀನಿಧಿ ಮತ್ತಿತರರು ನವ ಜೋಡಿ ರಂಜಿತ್‌ ಮತ್ತು ಮಾನಸ ಗೌಡ ದಂಪತಿಗೆ ಶುಭ ಹಾರೈಸಿದ್ದಾರೆ.

Karnataka Weather: ನಾಳೆ ಬೆಂಗಳೂರು, ಮೈಸೂರು ಸೇರಿ ಈ ಜಿಲ್ಲೆಗಳಲ್ಲಿ ಅಬ್ಬರಿಸಲಿದೆ ಗುಡುಗು ಸಹಿತ ಮಳೆ!

ನಾಳೆ ಬೆಂಗಳೂರು, ಮೈಸೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ!

Karnataka Weather: ಮುಂದಿನ 5 ದಿನಗಳವರೆಗೆ ಕರ್ನಾಟಕದಾದ್ಯಂತ ಗರಿಷ್ಠ ತಾಪಮಾನದಲ್ಲಿ ಇಳಿಕೆಯ ಪ್ರವೃತ್ತಿಯೊಂದಿಗೆ ದೊಡ್ಡ ಬದಲಾವಣೆಗಳಿಲ್ಲ. ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಸಂಜೆ ವೇಳೆಗೆ ಮೋಡ ಕವಿದ ವಾತಾವರಣವಿರುತ್ತದೆ. ಹಗುರದಿಂದ ಮಧ್ಯಮ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

Operation sindoor: ರಜೆಗೆ ಬಂದಿದ್ದ ಹಾವೇರಿಯ ಇಬ್ಬರು ಯೋಧರು ಮರಳಿ ಕರ್ತವ್ಯಕ್ಕೆ

ರಜೆಗೆ ಬಂದಿದ್ದ ಹಾವೇರಿಯ ಇಬ್ಬರು ಯೋಧರು ಮರಳಿ ಕರ್ತವ್ಯಕ್ಕೆ

Operation sindoor: ಪಹಲ್ಗಾಮ್‌ ದಾಳಿ ಪ್ರತೀಕಾರವಾಗಿ ಉಗ್ರರ ನಿಗ್ರಹಕ್ಕೆ ಭಾರತೀಯ ಸೇನೆ, ಅಪರೇಷನ್ ಸಿಂದೂರ ಕಾರ್ಯಚರಣೆ ಕೈಗೊಂಡಿದೆ. ಹೀಗಾಗಿ ಭಾರತೀಯ ಸೇನೆಯಿಂದ ಕರೆಬಂದ ಹಿನ್ನಲೆಯಲ್ಲಿ ಹಾವೇರಿ ನಗರದ ಬಿಎಸ್‌ಎಫ್ ಯೋಧ ಶಶಾಂಕ್ ಹಾಗೂ ಸಿಆರ್‌ಪಿಎಫ್ ಯೋಧ ಸಂಜೀವ ಸಂಗೂರ ಕರ್ತವ್ಯಕ್ಕೆ ಮರಳಿದ್ದಾರೆ.

Fraud Case: ಬೆಂಗಳೂರು ವಿವಿ ರಿಜಿಸ್ಟ್ರಾರ್‌ ಹುದ್ದೆ ಕೊಡಿಸುವುದಾಗಿ ಪ್ರೊಫೆಸರ್‌ಗೆ 35 ಲಕ್ಷ ವಂಚನೆ; ಕೇಸ್‌ ದಾಖಲು

ಬೆಂಗಳೂರು ವಿವಿ ರಿಜಿಸ್ಟ್ರಾರ್‌ ಹುದ್ದೆ ಕೊಡಿಸುವುದಾಗಿ 35 ಲಕ್ಷ ವಂಚನೆ

Fraud Case: ಬೆಂಗಳೂರು ವಿಶ್ವವಿದ್ಯಾಲಯದ ರಿಜಿಸ್ಟ್ರಾರ್ ಹುದ್ದೆ ಕೊಡಿಸುವುದಾಗಿ ನಿವೃತ್ತ ಪ್ರೊಫೆಸರ್ ಒಬ್ಬರಿಂದ 35 ಲಕ್ಷ ರೂ. ಪಡೆದು ವಂಚಿಸಿರುವ ಘಟನೆ ನಡೆದಿದೆ. ಈ ಸಂಬಂಧ ಗೋವಿಂದರಾಜನಗರ ಪೊಲೀಸ್ ಠಾಣೆಗೆ ನಿವೃತ್ತ ಪ್ರೊಫೆಸರ್ ದೂರು ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.