ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ
ಕರ್ನಾಟಕ
Physical Abuse: ಅತ್ಯಾಚಾರ, ವಂಚನೆ ಪ್ರಕರಣ: ತಲೆಮರೆಸಿಕೊಂಡಿದ್ದ ಪುತ್ತೂರು ಬಿಜೆಪಿ ಮುಖಂಡನ ಪುತ್ರ ಅರೆಸ್ಟ್

ಅತ್ಯಾಚಾರ, ವಂಚನೆ ಪ್ರಕರಣ: ಪುತ್ತೂರು ಬಿಜೆಪಿ ಮುಖಂಡನ ಪುತ್ರ ಅರೆಸ್ಟ್

Physical Abuse: ಸಹಪಾಠಿ ವಿದ್ಯಾರ್ಥಿನಿಯನ್ನು ಪ್ರೀತಿಯ ಬಲೆಗೆ ಬೀಳಿಸಿಕೊಂಡಿದ್ದ ಆರೋಪಿ, ಆಕೆಯ ಜತೆ ದೈಹಿಕ ಸಂಪರ್ಕ ಬೆಳೆಸಿದ್ದ. ಬಳಿಕ ಗರ್ಭಿಣಿಯಾದ ವಿಚಾರ ತಿಳಿದು ಮದುವೆಯಾಗಲು ನಿರಾಕರಿಸಿದ್ದ. ಈ ಸಂಬಂಧ ಯುವತಿ ನೀಡಿದ ದೂರಿನ ಮೇರೆಗೆ ಆರೋಪಿ ಕೃಷ್ಣ ರಾವ್ ವಿರುದ್ಧ ಮಹಿಳಾ ಠಾಣೆಯಲ್ಲಿ ದೂರು ದಾಖಲಾಗಿತ್ತು. ತಲೆಮರೆಸಿಕೊಂಡಿದ್ದ ಆರೋಪಿ ಇದೀಗ ಸಿಕ್ಕಿಬಿದ್ದಿದ್ದಾನೆ.

Siganduru Bridge: ದೇಶದ 2ನೇ ಅತಿದೊಡ್ಡ ತೂಗು ಸೇತುವೆ ಸಿಗಂದೂರಿನಲ್ಲಿ ಜುಲೈ 14ರಂದು ಲೋಕಾರ್ಪಣೆ

ದೇಶದ 2ನೇ ಅತಿದೊಡ್ಡ ತೂಗು ಸೇತುವೆ ಸಿಗಂದೂರಿನಲ್ಲಿ ಜುಲೈ 14ರಂದು ಲೋಕಾರ್ಪಣೆ

Siganduru Bridge: ಈ ಸಿಗಂದೂರು ಸೇತುವೆಯು ಉದ್ಘಾಟನೆಗೊಂಡ ಬಳಿಕ, ಭಾರತದ 2ನೇ ಅತಿ ಉದ್ದದ ಕೇಬಲ್ ಸೇತುವೆ ಎಂಬ ಹಿರಿಮೆಗೂ ಪಾತ್ರವಾಗಲಿದೆ. ಇದು 2.44 ಕಿ.ಮೀ ಉದ್ದವಿದ್ದು, 16 ಮೀಟರ್ ಅಗಲವಿದೆ. 17 - ಪಿಲ್ಲರ್‌ಗಳನ್ನು ಒಳಗೊಂಡಿದೆ. 2018ರ ಫೆಬ್ರವರಿಯಲ್ಲಿ ಈ ಸೇತುವೆ ನಿರ್ಮಾಣಕ್ಕೆ ಅಡಿಪಾಯ ಹಾಕಲಾಗಿತ್ತು.

Assault Case: ಮಾಡೆಲ್‌ ಮೇಲೆ ಖಾಸಗಿ ಬಸ್‌ ಸಿಬ್ಬಂದಿ ಹಲ್ಲೆ, ಬೆಲೆಬಾಳುವ ಸ್ವತ್ತುಗಳ ಸುಲಿಗೆ

ಮಾಡೆಲ್‌ ಮೇಲೆ ಖಾಸಗಿ ಬಸ್‌ ಸಿಬ್ಬಂದಿ ಹಲ್ಲೆ, ಬೆಲೆಬಾಳುವ ಸ್ವತ್ತು ಸುಲಿಗೆ

‌Assault Case: ತನ್ನ ದುಬಾರಿ ಬೆಲೆಯ ಶೂ, ಏರ್ ಬಡ್ಸ್‌, 44 ಸಾವಿರ ರೂ ಬೆಲೆ ಸನ್ ಗ್ಲಾಸ್, 1.85 ಲಕ್ಷ ರೂ ಬೆಲೆಯ ಪ್ಲಾಟಿನಂ ಪೆಂಡೆಂಟ್ ಇರುವ ಸಿಲ್ವರ್ ಚೈನ್, ಪಾಸ್‌ಪೋರ್ಟ್, 45 ಸಾವಿರ ರೂ ಬೆಲೆಯ ವಾಚ್, 40 ಸಾವಿರ ರೂ ಮೌಲ್ಯದ ಪ್ಲಾಟಿನಂ ರಿಂಗ್ ಹಾಗೂ ಪರ್ಸ್​ನಲ್ಲಿದ್ದ 10 ಸಾವಿರ ರೂ. ಹಣ ಕೂಡ ಕದ್ದಿರುವುದಾಗಿ ಮಾಡೆಲ್ ಧ್ರುವ್ ನಾಯ್ಕ್ ಆರೋಪಿಸಿದ್ದಾರೆ.

Road Accident: ಬೆಂಗಳೂರು, ಚಿತ್ರದುರ್ಗದಲ್ಲಿ ರಸ್ತೆ ಅಪಘಾತ: ಬಸ್‌ ಡಿಕ್ಕಿಯಾಗಿ ಇಬ್ಬರು ಬೈಕ್‌ ಸವಾರರ ಸಾವು

ಬೆಂಗಳೂರು, ಚಿತ್ರದುರ್ಗದಲ್ಲಿ ಬಸ್‌ ಡಿಕ್ಕಿಯಾಗಿ ಇಬ್ಬರು ಬೈಕ್‌ ಸವಾರರ ಸಾವು

Road Accident: ಬೆಂಗಳೂರಿನ ಮೈಸೂರು ಬ್ಯಾಂಕ್‌ ಸರ್ಕಲ್‌ನಲ್ಲಿ ಬಸ್ಸಿಗೆ ವೇಗವಾಗಿ ಬಂದ ಬೈಕ್‌ ಡಿಕ್ಕಿಯಾಗಿದೆ. ಚಿತ್ರದುರ್ಗದಲ್ಲಿ ಬೈಕ್‌ಗೆ ಡಿಕ್ಕಿಯಾದ ಬಳಿಕ ಖಾಸಗಿ ಬಸ್‌ನಲ್ಲಿ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದಿದೆ. ಎರಡೂ ಘಟನೆಗಳಲ್ಲಿ ಬೈಕ್‌ ಸವಾರರು ಮೃತಪಟ್ಟಿದ್ದಾರೆ.

Air India: ವಿಮಾನದಲ್ಲೇ ಕುಸಿದು ಬಿದ್ದ ಪೈಲಟ್‌, ಬೆಂಗಳೂರು- ದಿಲ್ಲಿ ವಿಮಾನ ವಿಳಂಬ

ವಿಮಾನದಲ್ಲೇ ಕುಸಿದು ಬಿದ್ದ ಪೈಲಟ್‌, ಬೆಂಗಳೂರು- ದಿಲ್ಲಿ ವಿಮಾನ ವಿಳಂಬ

Air India: ಬೆಂಗಳೂರಿನಿಂದ ದೆಹಲಿಗೆ AI2414 ವಿಮಾನ ಹಾರಾಟ ನಡೆಸುವ ಮುನ್ನ ಪೈಲಟ್ ಕುಸಿದು ಬಿದ್ದರು. ಅವರನ್ನು ತಕ್ಷಣ ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅವರ ಬದಲು ಬೇರೆ ಪೈಲಟ್‌ ನಿಯೋಜನೆ ಮಾಡಿದ ನಂತರ ವಿಮಾನ ಹಾರಾಟ ನಡೆಸಲಾಯಿತು.

Karnataka High Court: ಲಿಂಗಾಯತರಲ್ಲಿರುವ ಜಂಗಮರು ಬೇಡ- ಬುಡ್ಗ ಜಂಗಮರಲ್ಲ: ಹೈಕೋರ್ಟ್

ಲಿಂಗಾಯತರಲ್ಲಿರುವ ಜಂಗಮರು ಬೇಡ- ಬುಡ್ಗ ಜಂಗಮರಲ್ಲ: ಹೈಕೋರ್ಟ್

karnataka high court: ವೀರಶೈವರಲ್ಲಿನ ಜಂಗಮರು ಪೂಜಿಸುವ ವರ್ಗದವರು ಮತ್ತು ಅವರು ಸಸ್ಯಾಹಾರಿಗಳು. ಆದರೆ, ಬೇಡ ಜಂಗಮರು ಸಮಾಜದಲ್ಲಿ ತಳವರ್ಗದ ಜಾತಿಗೆ ಸೇರಿದವರು ಮತ್ತು ಅವರನ್ನು ಅಸ್ಪೃಶ್ಯರೆಂದು ಪರಿಗಣಿಸಲಾಗುತ್ತದೆ ಎಂದು ಪೀಠ ತನ್ನ ಆದೇಶದಲ್ಲಿ ವಿವರಿಸಿದೆ.

Kamal Hassan: ಕಮಲ ಹಾಸನ್‌ಗೆ ಇನ್ನೊಂದು ಶಾಕ್‌, ಕನ್ನಡದ ಬಗ್ಗೆ ಹೇಳಿಕೆ ನೀಡದಂತೆ ಕೋರ್ಟ್‌ ನಿರ್ಬಂಧ

ಕಮಲ ಹಾಸನ್‌ಗೆ ಶಾಕ್‌, ಕನ್ನಡದ ಬಗ್ಗೆ ಹೇಳಿಕೆ ನೀಡದಂತೆ ಕೋರ್ಟ್‌ ನಿರ್ಬಂಧ

‌Kamal Hassan: ಕಮಲ ಹಾಸನ್ ಕನ್ನಡ ಭಾಷೆಯ ಮೇಲೆ ಭಾಷಾಶಾಸ್ತ್ರಜ್ಞರ ಶ್ರೇಷ್ಠತೆ ಪ್ರತಿಪಾದಿಸುವ ಯಾವುದೇ ಹೇಳಿಕೆ ಅಥವಾ ಟೀಕೆಗಳನ್ನು ಪೋಸ್ಟ್ ಮಾಡುವುದು, ನೀಡುವುದು, ಬರೆಯುವುದು, ಪ್ರಕಟಿಸುವುದು ಅಥವಾ ವಿತರಿಸುವುದನ್ನು ಬೆಂಗಳೂರು ಸಿಟಿ ಸಿವಿಲ್‌ ಕೋರ್ಟ್ ನಿರ್ಬಂಧಿಸಿದೆ.

SSLC Exam-3: ರಾಜ್ಯದಲ್ಲಿ ಇಂದಿನಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ-3 ಆರಂಭ, ನಿಯಮ ಪಾಲಿಸಲು ಸೂಚನೆ

ರಾಜ್ಯದಲ್ಲಿ ಇಂದಿನಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ-3, ನಿಯಮ ಪಾಲಿಸಲು ಸೂಚನೆ

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಜುಲೈ 5ರಿಂದ ಎಸ್ ಎಸ್ ಎಲ್ ಸಿ ಪರೀಕ್ಷೆ-3 (SSLC Exam-3) ನಡೆಯಲಿದೆ. ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಎಸ್.ಟಿ.ಡಿ., ಮೊಬೈಲ್ ಪೇಜರ್, ಝರಾಕ್ಸ್, ಟೈಪಿಂಗ್ ಮುಂತಾದವುಗಳನ್ನು ನಿಷೇಧಿಸಲಾಗಿದೆ.

Karnataka Weather: ಇಂದಿನ ಹವಾಮಾನ; ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ!

ಇಂದಿನ ಹವಾಮಾನ; ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ!

Karnataka Rains: ಜುಲೈ 5ರಂದು ಕರ್ನಾಟಕದ ಕರಾವಳಿ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌, ಉತ್ತರ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ನೀಡಲಾಗಿದ್ದು, ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Pralhad Joshi: ಸಂಶೋಧನೆಗೆ ರೂ. 1 ಲಕ್ಷ ಕೋಟಿ ವಿನಿಯೋಗಿಸಲು ಕೇಂದ್ರ ಅಸ್ತು: ಪ್ರಲ್ಹಾದ್‌ ಜೋಶಿ

ಸಂಶೋಧನೆಗೆ ರೂ. 1 ಲಕ್ಷ ಕೋಟಿ ವಿನಿಯೋಗಿಸಲು ಕೇಂದ್ರ ಅಸ್ತು: ಜೋಶಿ

Pralhad Joshi: ಇತ್ತೀಚಿನ ವರ್ಷಗಳಲ್ಲಿ ದೇಶದಲ್ಲಿ ಬಹು ದೊಡ್ಡ ಪ್ರಮಾಣದಲ್ಲಿ ಹೂಡಿಕೆದಾರರ ಸಂಖ್ಯೆ ಹೆಚ್ಚುತ್ತಿದೆ. 2025ರ ಏಪ್ರಿಲ್‌-ಮೇ, ಜೂನ್‌ ತಿಂಗಳಲ್ಲೇ ಒಟ್ಟಾರೆ US$ 35 ಬಿಲಿಯನ್‌ ಹೂಡಿಕೆ ಬಂದಿದೆ. ಮೊಬೈಲ್‌ ಆಮದು ಮಾಡಿಕೊಳ್ಳುತ್ತಿದ್ದ ಭಾರತವೀಗ ಮೊಬೈಲ್‌ ಉತ್ಪಾದನಾ ಹಬ್‌ ಆಗುತ್ತಿದೆ. ಮುಂದಿನ ದಿನಗಳಲ್ಲಿ ಮೆಡಿಕಲ್‌ ಹಬ್‌ ಆಗಲಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್‌ ಜೋಶಿ ತಿಳಿಸಿದ್ದಾರೆ.

Pilikula Biological park: ಮಂಗಳೂರು ಪಿಲಿಕುಳ ಜೈವಿಕ ಉದ್ಯಾನದಲ್ಲಿ ಪ್ರಾಣಿಗಳ ನಿಗೂಢ ಮರಣ; ವಾರದಲ್ಲಿ 9 ಸಾವು ವರದಿ

ಮಂಗಳೂರು ಪಿಲಿಕುಳ ಉದ್ಯಾನದಲ್ಲಿ ಒಂದೇ ವಾರದಲ್ಲಿ 9 ಪ್ರಾಣಿಗಳ ನಿಗೂಢ ಮರಣ

Pilikula Biological park: ಪಿಲಿಕುಳದಲ್ಲಿ 5 ಪುನುಗು ಬೆಕ್ಕುಗಳು, 2 ಕೃಷ್ಣಮೃಗ ಮತ್ತು ಒಂದು ಬರಿಂಕ ಮಾತ್ರ ಮೃತಪಟ್ಟಿದ್ದು, ಮಳೆಯ ಹಿನ್ನೆಲೆಯಲ್ಲಿ ಶೀತ ವಾತಾವರಣ ಹೆಚ್ಚಾದ ಪರಿಣಾಮ ಈ ಪ್ರಾಣಿಗಳು ಮೃತಪಟ್ಟಿವೆ ಎಂದು ಜೈವಿಕ ಉದ್ಯಾನವನದ ಪ್ರಭಾರ ನಿರ್ದೇಶಕರು ತಿಳಿಸಿದ್ದಾರೆ.

Heart Attack: ಕೋವಿಡ್‌ ಬಂದು ಹೋದವರಲ್ಲಿ ಹೃದಯಾಘಾತ ಸಾಧ್ಯತೆ: ತಜ್ಞರ ಸಮಿತಿ ವರದಿಯಲ್ಲಿದೆ ಆಘಾತಕರ ಅಂಶ!

ಕೋವಿಡ್‌ ಬಂದು ಹೋದವರಲ್ಲಿ ಹೃದಯಾಘಾತ ಸಾಧ್ಯತೆ: ತಜ್ಞರ ಸಮಿತಿ ವರದಿ

Heart Attack: ಸಮಿತಿ ಅಧ್ಯಯನ ನಡೆಸಿ ಸಿದ್ಧಪಡಿಸಿರುವ ವರದಿಯಲ್ಲಿ ಹಲವು ಮಹತ್ವದ ವಿಚಾರಗಳು ಅಡಕವಾಗಿವೆ. ಕೋವಿಡ್‌ ಸೋಂಕಿನಿಂದ ಗುಣಮುಖರಾದವರಿಗೆ ಕೊಂಚ ಹೃದಯ ಸಮಸ್ಯೆ ಕಾಡುತ್ತಿದೆ. ಹೃದಯಾಘಾತಕ್ಕೆ ಕೊರೋನಾ ಲಸಿಕೆ ಕಾರಣವಲ್ಲ. ಆದರೆ, ಕೊರೋನಾ ವೈರಸ್ ಕೊಂಚ ಪ್ರಮಾಣದಲ್ಲಿ ಸಮಸ್ಯೆ ಉಂಟು ಮಾಡುತ್ತಿದೆ ಎಂದು ವರದಿಯಲ್ಲಿದೆ.

ಎತ್ತಿನಹೊಳೆ ನೀರು ಲಭ್ಯತೆ ವಿಚಾರ : ಸರಕಾರ ರಾಜ್ಯದ ಜನತೆಯ ಮುಂದೆ ಬೆತ್ತಲಾಗಿದೆ : ಆರ್.ಆಂಜನೇಯರೆಡ್ಡಿ

ಸರಕಾರ ರಾಜ್ಯದ ಜನತೆಯ ಮುಂದೆ ಬೆತ್ತಲಾಗಿದೆ: ಆರ್.ಆಂಜನೇಯರೆಡ್ಡಿ

ನೀವು ಪಿಕ್ನಿಕ್ ಗೆ ಬಂದಿದ್ದಿರಾ. ತ್ಯಾಜ್ಯ ನೀರನ್ನು ಹೇಗೆ ಬಳಸಿಕೊಳ್ಳಬೇಕು ಎಂಬ ಬಗ್ಗೆ ನಿಯಮ ಗಳಿವೆ. ೩ನೇ ಹಂತದ ಶುದ್ಧೀಕರಣ ಬೇಕಿದೆ ಜಲವಿಜ್ಞಾನಿಗಳೇ ಹೇಳುತ್ತಾರೆ.ಇದನ್ನೆಲ್ಲಾ ಪರಿಶೀಲಿಸದೆ ಮೂರನೇ ಹಂತದ ಶುದ್ಧೀಕರಣ ಅಗತ್ಯವಿಲ್ಲ ಎಂದು ಉಸ್ತುವಾರಿ ಸಚಿವರೇ ಹೇಳುವ ಮೂಲಕ ನಮ್ಮ ಜಿಲ್ಲೆಗಳ ಪಾಲಿಗೆ ಸರ್ಕಾರ ಸತ್ತಿದೆ ಎಂಬುದನ್ನು ತೋರಿಸಿದ್ದಾರೆ.

Guarantee Scheme: ಗ್ಯಾರಂಟಿಗಳನ್ನು ಶೇ.100ರಷ್ಟು ಅರ್ಹರಿಗೆ ತಲುಪಿಸಲು ಬದ್ದ: ಪ್ರಾಧಿಕಾರದ ಅಧ್ಯಕ್ಷ ಯಲುವಳ್ಳಿ ಎನ್. ರಮೇಶ್

ಗ್ಯಾರಂಟಿಗಳನ್ನು ಶೇ. ೧೦೦ ರಷ್ಟು ಅರ್ಹರಿಗೆ ತಲುಪಿಸಲು ಬದ್ದ

ಗ್ಯಾರಂಟಿ ಯೋಜನೆಗಳನ್ನು ಶೇ. ೧೦೦ ರಷ್ಟು ಪ್ರಮಾಣದಲ್ಲಿ ಅರ್ಹರಿಗೆ ತಲುಪಿಸಲು ಪ್ರಾಧಿಕಾರ ಕಂಕಣ ಬದ್ದವಾಗಿ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿದೆ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ವ್ಯಾಪಕ ಪ್ರಚಾರ ಮಾಡಲು ಈಗಾಗಲೇ ಸಂಚಾರ ವಾಹನದ ಮೂಲಕ ಯೋಜನೆಗಳ ಕುರಿತು ಜಿಲ್ಲಾದ್ಯಂತ ಜಾಗೃತಿ ಮೂಡಿಸಲಾಗಿದೆ.

DK Shivakumar: ಬೆಂಗಳೂರು ಟನಲ್ ರಸ್ತೆಗೆ ಶೀಘ್ರ ಟೆಂಡರ್ ಪ್ರಕ್ರಿಯೆ ಅಂತಿಮ:‌ ಡಿ.ಕೆ.ಶಿವಕುಮಾರ್

ಬೆಂಗಳೂರು ಟನಲ್ ರಸ್ತೆಗೆ ಶೀಘ್ರ ಟೆಂಡರ್ ಪ್ರಕ್ರಿಯೆ ಅಂತಿಮ:‌ ಡಿಕೆಶಿ

DK Shivakumar: ಬೆಂಗಳೂರಿನಲ್ಲಿ ಮೊದಲ ಹಂತದ ಟನಲ್ ರಸ್ತೆಗೆ ಟೆಂಡರ್ ಪ್ರಕ್ರಿಯೆ ಮುಂದಿನ‌ 4-5 ದಿನಗಳಲ್ಲಿ ಅಂತಿಮಗೊಳ್ಳಲಿದೆ. ಹೆಬ್ಬಾಳ ಜಂಕ್ಷನ್‌ನಿಂದ ಸಿಲ್ಕ್ ಬೋರ್ಡ್‌ವರೆಗೆ ಸುಮಾರು 40 ಕಿ.ಮೀ ಮತ್ತು 23 ಕಿ.ಮೀ ಉದ್ದದ ಮೈಸೂರು ರಸ್ತೆಯಿಂದ ಕೆ.ಆರ್.ಪುರದವರೆಗೆ ಟ್ವಿನ್ ಟನಲ್ ರಸ್ತೆ ನಿರ್ಮಾಣಕ್ಕೆ ನಾವು ಮುಂದಡಿ ಇಟ್ಟಿದ್ದೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ತಾಪಮಾನ ಏರಿಕೆಯಾಗುತ್ತಿರುವುದು ಆತಂಕಕಾರಿ ವಿಚಾರ : ನ್ಯಾ.ನೇರಳೆ ವೀರಭದ್ರಯ್ಯ ಭವಾನಿ ಕಳವಳ

ತಾಪಮಾನ ಏರಿಕೆಯಾಗುತ್ತಿರುವುದು ಆತಂಕಕಾರಿ ವಿಚಾರ

ವಾತಾವರಣದಲ್ಲಿ ತಾಪಮಾನ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವುದು ಆತಂಕಕಾರಿ ವಿಚಾರ. ನಿಷೇಧಿತ ಪ್ಲಾಸ್ಟಿಕ್ ಬಳಕೆ, ಜಲಮೂಲಗಳ ಕಲುಷಿತಗೊಳಿಸುವುದು, ಅರಣ್ಯ ನಾಶದಿಂದ ಪರಿಸರ ಮಾಲಿನ್ಯಕ್ಕೆ ಕಾರಣವಾಗಿದೆ. ಹಸಿರನ್ನು ಉಳಿಸಿ, ಬೆಳೆಸುವುದು, ಮಾಲಿನ್ಯವನ್ನು ತಡೆಗಟ್ಟಿ ಪರಿಸರ ಸಮತೋಲನ ಕಾಪಾಡುವುದು ಭೂಮಿ ಮೇಲಿರುವ ಪ್ರತಿ ಜೀವಿಯ ಸುಸ್ಥಿರ ಜೀವನಕ್ಕೆ ನೆರವಾಗಲಿದೆ

Ranya Rao: ಚಿನ್ನ ಸ್ಮಗ್ಲಿಂಗ್‌ ಕೇಸ್:‌ ರನ್ಯಾ ರಾವ್‌ಗೆ ಸೇರಿದ 34.12 ಕೋಟಿ ರೂ. ಮೌಲ್ಯದ ಆಸ್ತಿ ಮುಟ್ಟುಗೋಲು

ನಟಿ ರನ್ಯಾ ರಾವ್‌ಗೆ ಸೇರಿದ 34.12 ಕೋಟಿ ರೂ. ಮೌಲ್ಯದ ಆಸ್ತಿ ಮುಟ್ಟುಗೋಲು

Actress Ranya Rao:‌ ನಟಿ ರನ್ಯಾ ರಾವ್‌ಗೆ ಸೇರಿದ ಬೆಂಗಳೂರಿನ ವಿಕ್ಟೋರಿಯಾ ಲೇಔಟ್‌ನಲ್ಲಿರುವ ಮನೆ, ಅರ್ಕಾವತಿ ಲೇಔಟ್‌ನಲ್ಲಿರುವ ನಿವೇಶನ, ತುಮಕೂರಿನಲ್ಲಿರುವ ಕೈಗಾರಿಕಾ ನಿವೇಶನ, ಆನೇಕಲ್ ತಾಲೂಕಿನಲ್ಲಿರುವ ಕೃಷಿ ಜಮೀನನ್ನು ಜಾರಿ ನಿರ್ದೇಶನಾಲಯ ಜಪ್ತಿ ಮಾಡಿಕೊಂಡಿದೆ.

ಬೆಳೆ ವಿಮೆ ಮಾಡಿಸಲು ಅವಕಾಶ

ಬೆಳೆ ವಿಮೆ ಮಾಡಿಸಲು ಅವಕಾಶ

ದಾಳಿಂಬೆ ಬೆಳಗೆ ವಿಮಾ ಮೊತ್ತವಾಗಿ ೧,೨೭,೦೦೦ ರೂ. ಗಳನ್ನು ನಿಗದಿಪಡಿಸಲಾಗಿದೆ. ಪ್ರತಿ ಹೆಕ್ಟೆರ್ ಗೆ ರೈತರು ಪಾವತಿಸಬೇಕಾದ ಮೊತ್ತ ೬,೩೫೦ ರೂ.ಗಳು ಆಗಿದೆ. ಅಂದರೆ ಪ್ರತಿ ಎಕರೆಗೆ ರೈತರು ಪಾವತಿಸ ಬೇಕಾದ ಮೊತ್ತ-೨,೫೪೦ ರೂ. ಗಳನ್ನು ಪಾವತಿಸಬೇಕಾಗಿದೆ. ಬೆಳೆ ವಿಮೆ ಪ್ರಕ್ರಿಯೆ ನಿರ್ವಹಣೆಗೆ ಜಿಲ್ಲೆ ಯಲ್ಲಿ ಟಾಟಾ ಎಐಜಿ ಜನರಲ್ ಇನ್ಸುರೆನ್ಸ್ ಕಂಪನಿ ಆಯ್ಕೆಯಾಗಿದೆ. ಬೆಳೆ ವಿಮೆಯನ್ನು ಜುಲೈ ೩೧ ರ ವರೆಗೆ ಪಾವತಿಸಬಹುದು.

Pralhad Joshi: ಪ್ರಧಾನಿ ಮೋದಿ ವಿರೋಧಿಸುವ ಭರದಲ್ಲಿ ದೇಶದ ಸಾಧನೆಗೆ ಅಪಮಾನ; ಸಿಎಂ ಕ್ಷಮೆಯಾಚನೆಗೆ ಜೋಶಿ ಆಗ್ರಹ

ಸಿಎಂ ಕ್ಷಮೆಯಾಚನೆಗೆ ಪ್ರಲ್ಹಾದ್‌ ಜೋಶಿ ಆಗ್ರಹ

Pralhad Joshi: ಕೋವಿಡ್‌ ವ್ಯಾಕ್ಸಿನ್‌ಗೂ, ರಾಜ್ಯದಲ್ಲಿ ಸಂಭವಿಸುತ್ತಿರುವ ಹೃದಯಾಘಾತ ಪ್ರಕರಣಗಳಿಗೂ ಯಾವುದೇ ಸಂಬಂಧವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟಪಡಿಸಬೇಕು ಮತ್ತು ಈ ಕೂಡಲೇ ವಿಜ್ಞಾನಿಗಳ, ದೇಶದ ಜನರ ಕ್ಷಮೆ ಕೇಳಬೇಕು ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಆಗ್ರಹಿಸಿದ್ದಾರೆ.

Chikkaballapur News: 14ನೇ ಸಚಿವ ಸಂಪುಟದ ತೀರ್ಮಾನಗಳಿಗೆ ಅಂತಿಮ ಗಡುವು ನೀಡಿ : ಬಿಜೆಪಿ ಜಿಲ್ಲಾಧ್ಯಕ್ಷ ಸೀಕಲ್ ರಾಮಚಂದ್ರಗೌಡ

14ನೇ ಸಚಿವ ಸಂಪುಟದ ತೀರ್ಮಾನಗಳಿಗೆ ಅಂತಿಮ ಗಡುವು ನೀಡಿ

ಶಾಶ್ವತ ನೀರಾವರಿಗೆ ಸಂಬಂಧಪಟ್ಟಂತೆ ನಂದಿಬೆಟ್ಟದ ಸಚಿವ ಸಂಪುಟದ ಸಭೆಯ ಮೇಲೆ ಬೆಟ್ಟದಷ್ಟು ನಿರೀಕ್ಷೆಗಳಿದ್ದವು. ಆದರೆ ಆನಿರೀಕ್ಷೆಗಳೆಲ್ಲಾ ಹುಸಿಯಾಗಿವೆ. 2025ನೇ ಸಾಲಿನ ಆಯವ್ಯಯದಲ್ಲಿ ಘೋಷಣೆ ಆಗಿರುವ ವಿಚಾರಗಳಿಗೆ ಮಾತ್ರ ಆಡಳಿತಾತ್ಮಕ ಅನುಮೋದನೆಯನ್ನು ಈ ಸಭೆಯಲ್ಲಿ ಪಡೆಯಲಾಗಿದೆ.ಇದು ಜಿಲ್ಲೆಗೆ ಮಾಡಿರುವ ದ್ರೋಹ ಎಂದು ಬೇಸರಿಸಿದರು.

Karnataka Rains: ಕದ್ರಾ-ಕೊಡಸಳ್ಳಿ ಮಾರ್ಗದಲ್ಲಿ ಗುಡ್ಡ ಕುಸಿತ; ರಸ್ತೆ ಸಂಚಾರ ಸ್ಥಗಿತ

ಕದ್ರಾ-ಕೊಡಸಳ್ಳಿ ಮಾರ್ಗದಲ್ಲಿ ಗುಡ್ಡ ಕುಸಿತ; ರಸ್ತೆ ಸಂಚಾರ ಸ್ಥಗಿತ

Karnataka Rains: ಉತ್ತರ ಕನ್ನಡ ಜಿಲ್ಲೆಯಾದ್ಯಂತ ಕಳೆದ ಗುರುವಾರ ರಾತ್ರಿಯಿಂದ ಮಳೆಯ ಅಬ್ಬರ ಮುಂದುವರಿದಿದೆ. ಭಾರೀ ಮಳೆ ಹಿನ್ನೆಲೆಯಲ್ಲಿ ಕದ್ರಾದಿಂದ ಕೊಡಸಳ್ಳಿಗೆ ಸಾಗುವ ಮಾರ್ಗ ಮಧ್ಯದಲ್ಲಿ ಭಾರೀ ಪ್ರಮಾಣದ ಗುಡ್ಡ ಕುಸಿತ ಸಂಭವಿಸಿದೆ. ಈ ಕುರಿತ ವಿವರ ಇಲ್ಲಿದೆ.

Body Found: 10 ದಿನ ಹಿಂದೆ ನಾಪತ್ತೆಯಾಗಿದ್ದ ಫಾರೆಸ್ಟ್‌ ಗಾರ್ಡ್‌ ಶವ ಬೆತ್ತಲೆಯಾಗಿ ಪತ್ತೆ

10 ದಿನ ಹಿಂದೆ ನಾಪತ್ತೆಯಾದ ಫಾರೆಸ್ಟ್‌ ಗಾರ್ಡ್‌ ಶವ ಬೆತ್ತಲೆಯಾಗಿ ಪತ್ತೆ

Body Found: ನೀಲಗಿರಿ ಪ್ಲಾಂಟೇಶನಿನಲ್ಲಿ ಜೂನ್ 24ರಂದು ಕಾರ್ಯ ನಿರ್ವಹಿಸುತ್ತಿದ್ದ ವೇಳೆ ಶರತ್ ನಿಗೂಢವಾಗಿ ನಾಪತ್ತೆಯಾಗಿದ್ದರು. ಶರತ್‌ಗಾಗಿ ಅರಣ್ಯ ಇಲಾಖೆಯ ನೂರಾರು ಸಿಬ್ಬಂದಿ, ಪೊಲೀಸರು ನೀಲಗಿರಿ ಪ್ಲಾಂಟೇಶನ್, ಅರಣ್ಯದಲ್ಲಿ ಹುಡುಕಾಟ ನಡೆಸಿದ್ದರು. ಹುಡುಕಾಟದ ವೇಳೆ ಶರತ್ ಬೈಕ್ ಒಂದು ಕಡೆ ಸಿಕ್ಕಿದ್ದು, ಬಟ್ಟೆ ಹಾಗೂ ಪರ್ಸ್ ಒಂದೊಂದು ದಿಕ್ಕಿನಲ್ಲಿ ಪತ್ತೆಯಾಗಿತ್ತು.

Pralhad Joshi: ಆರೆಸ್ಸೆಸ್‌ ಬ್ಯಾನ್‌, ಕಾಂಗ್ರೆಸ್‌ಗೆ ಅಧಿಕಾರ ಎಲ್ಲಾ ಹಗಲುಗನಸು ಎಂದ ಪ್ರಲ್ಹಾದ್‌ ಜೋಶಿ

ಆರೆಸ್ಸೆಸ್‌ ಬ್ಯಾನ್‌, ಕಾಂಗ್ರೆಸ್‌ಗೆ ಅಧಿಕಾರ ಎಲ್ಲಾ ಹಗಲುಗನಸು ಎಂದ ಜೋಶಿ

Pralhad Joshi: ದೇಶದಲ್ಲಿ ಇನ್ನು ಕಾಂಗ್ರೆಸ್‌ ಅಧಿಕಾರಕ್ಕೆ ಬರುವುದು ದೂರದ ಮಾತು. ʼನಾವು ಅಧಿಕಾರಕ್ಕೆ ಬಂದರೆ ಬ್ಯಾನ್‌ʼ ಎಂದಿದ್ದಾರೆ. ಪ್ರಿಯಾಂಕ್‌ ಖರ್ಗೆ ಹೀಗೇ ಹಗಲುಗನಸು ಕಾಣುತ್ತಲೇ ಇರಲಿ. ಕಾಂಗ್ರೆಸ್‌ ಅತಿ ದೊಡ್ಡ ವಿರೋಧ ಪಕ್ಷವಾಗಿದ್ದೇ ನಿಮ್ಮ ಪುಣ್ಯ. ಭವಿಷ್ಯದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬರುವುದಿಲ್ಲ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್‌ ಜೋಶಿ ತಿರುಗೇಟು ನೀಡಿದ್ದಾರೆ.

Laxmi Hebbalkar:  ಅಂಗನವಾಡಿ ಕೇಂದ್ರ, ಬಾಲಕಿಯರ ಬಾಲಮಂದಿರಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ದಿಢೀರ್ ಭೇಟಿ, ಪರಿಶೀಲನೆ

ಅಂಗನವಾಡಿ ಕೇಂದ್ರ, ಬಾಲಕಿಯರ ಬಾಲಮಂದಿರಕ್ಕೆ ಹೆಬ್ಬಾಳ್ಕರ್ ದಿಢೀರ್ ಭೇಟಿ

Laxmi Hebbalkar: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು, ಶುಕ್ರವಾರ ಬೀದರ್‌ ಜಿಲ್ಲೆಯ ಚಿಟ್ಟಾವಾಡಿಯಲ್ಲಿರುವ ಅಂಗನವಾಡಿ ಕೇಂದ್ರ ಹಾಗೂ ಮೈಲೂರದಲ್ಲಿರುವ ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.