ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ
ಕರ್ನಾಟಕ
Voter Fraud: ಮತಗಳ್ಳತನ ಬಗ್ಗೆ ಕಾನೂನು ಇಲಾಖೆಯಿಂದ ಪರಿಶೀಲಿಸಿ, ಕ್ರಮ: ಸಿಎಂ ಸಿದ್ದರಾಮಯ್ಯ

ಮತಗಳ್ಳತನ ಬಗ್ಗೆ ಕಾನೂನು ಇಲಾಖೆಯಿಂದ ಪರಿಶೀಲಿಸಿ, ಕ್ರಮ: ಸಿಎಂ ಸಿದ್ದರಾಮಯ್ಯ

CM Siddaramaiah: ಬಿಜೆಪಿಯವರು ತಪ್ಪು ಮಾಡಿ ಸುಳ್ಳು ಹೇಳುತ್ತಿದ್ದಾರೆ. ನಾವು ಕಳೆದ ಲೋಕಸಭಾ ಚುನಾವಣೆಯಲ್ಲಿ ಹದಿನಾರು ಸ್ಥಾನಗಳನ್ನು ಗೆಲ್ಲುವು ಎಂದು ಆಂತರಿಕ ಸಮೀಕ್ಷೆ ತಿಳಿಸಿತ್ತು. ಆದರೆ ನಾವು ಗೆದ್ದದ್ದು 9 ಸ್ಥಾನಗಳನ್ನು ಮಾತ್ರ. ರಾಹುಲ್ ಗಾಂಧಿ ಅವರು ಸಾಕ್ಷಿ ಸಮೇತ ವಿಚಾರಗಳನ್ನು ತಿಳಿಸಿರುವುದಾಗಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

Physical Abuse: ಬುದ್ಧಿಮಾಂದ್ಯ ಯುವತಿಯನ್ನೂ ಬಿಡದ ದುರುಳರು, ಅತ್ಯಾಚಾರಗೈದು ವಿಡಿಯೋ ಸಹೋದರನಿಗೆ ಕಳಿಸಿ ವಿಕೃತಿ

ಬುದ್ಧಿಮಾಂದ್ಯ ಯುವತಿಯ ಮೇಲೆ ಅತ್ಯಾಚಾರ, ವಿಡಿಯೋ ಸೋದರನಿಗೆ ಕಳಿಸಿ ವಿಕೃತಿ

ಪಾತಕಿಗಳು ಬುದ್ಧಿಮಾಂದ್ಯ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿ, ಆ ಪೈಶಾಚಿಕ ಕೃತ್ಯದ ವಿಡಿಯೋವನ್ನು ಸಂತ್ರಸ್ತೆಯ ಸಹೋದರನಿಗೆ ಕಳುಹಿಸಿ ಬಳಿಕ ಡಿಲೀಟ್ ಮಾಡಿದ್ದಾರೆ. ಸಂತ್ರಸ್ತೆಯ ಸಹೋದರ ಪೊಲೀಸರಿಗೆ ದೂರು ನೀಡಿದ ಹಿನ್ನೆಲೆಯಲ್ಲಿ ಅಬ್ದುಲ್ ಅಫ್ತಾಬ್, ರಾಜಿಕ್ ಪಾಷಾ ಮತ್ತು ಉಮ್ರಾನ್ ಎಂಬ ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದೆ.

PES students startup: ಪಿಇಎಸ್‌ ವಿದ್ಯಾರ್ಥಿಗಳ ಸ್ಟಾರ್ಟಪ್‌ಗೆ ದಾಖಲೆಯ ಆದಾಯ

ಪಿಇಎಸ್‌ ವಿದ್ಯಾರ್ಥಿಗಳ ಸ್ಟಾರ್ಟಪ್‌ಗೆ ದಾಖಲೆಯ ಆದಾಯ

PES students startup: ʼಆಥಿಫೈʼ ಸ್ಟಾರ್ಟಪ್‌ ರಾಷ್ಟ್ರೀಯ ದೂರದರ್ಶನದಲ್ಲಿ ರಾಷ್ಟ್ರವ್ಯಾಪಿ ಮನ್ನಣೆಯನ್ನು ಗಳಿಸಿದ್ದು, ಪ್ರಸ್ತುತ ಭಾರತದ ಅತಿದೊಡ್ಡ ದೀರ್ಘಾಯುಷ್ಯ ಮತ್ತು ಸ್ವಾಸ್ಥ್ಯ ಬ್ರಾಂಡ್‌ಗಳಲ್ಲಿ ಒಂದರೊಂದಿಗೆ ಕೆಲಸ ಮಾಡುತ್ತಿದೆ. ಪಿಇಎಸ್‌ ವಿಶ್ವವಿದ್ಯಾಲಯದ ಗೌರವಾನ್ವಿತ ಕುಲಾಧಿಪತಿಗಳಾದ ಪ್ರೊ. ಜವಾಹರ್ ದೊರೆಸ್ವಾಮಿ ಮತ್ತು ಪಿಇಎಸ್ ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ. ಜೆ ಸೂರ್ಯಪ್ರಸಾದ್ ತಂಡವನ್ನು ಅಭಿನಂದಿಸಿದ್ದಾರೆ.

Chikkaballapur News: ಬಾಗೇಪಲ್ಲಿಯಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ ; ನಾಡಿನ ಒಳಿತಿಗೆ ನಾರಿಯರ ಪ್ರಾರ್ಥನೆ

ಬಾಗೇಪಲ್ಲಿಯಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ವರಮಹಾಲಕ್ಷ್ಮಿ ದೇವಿಗೆ ಸೀರೆ ಉಡಿಸಿ, ಕಲಶ ಇಟ್ಟು ವಸ್ತ್ರ, ಒಡವೆ, ಧನಕನಕಾದಿಗಳನ್ನಿಟ್ಟು, ಫಲ ವಸ್ತುಗಳು, ಅರಶಿನ ಕುಂಕುಮ, ನೈವೇದ್ಯಕ್ಕೆ ಹಣ್ಣು, ತರಕಾರಿ, ಬಗೆಬಗೆಯ ತಿನಿಸುಗಳನ್ನು ತಯಾರಿಸಿ ಮಹಾಲಕ್ಷ್ಮಿ ದೇವಿಯ ಮುಂದಿಟ್ಟು ಪೂಜಿಸುತ್ತಾರೆ. ಮಹಿಳೆಯರೇ ಮಾಡುವ ಹಬ್ಬ ಇದಾಗಿರುವು ದರಿಂದ ಮಹಿಳೆಯರು ನಸುಕಿನಲ್ಲಿಯೇ ಎದ್ದು ಮನೆಯ ಮುಂದೆ ಸಾರಿಸಿ ರಂಗೋಲಿ ಬಳಿದು ಸ್ನಾನ ಮಾಡಿ ಬಂದು ಹೊಸ ಉಡುಗೆ ತೊಟ್ಟು ದೇವಿಗೆ ಮುಂದೆ ಕುಳಿತು ಸಂಕಲ್ಪ ಮಾಡಿ ವ್ರತ ಕೈಗೊಳ್ಳುತ್ತಾರೆ.

Varamahalakshmi Pooja: ಆಲಂಬಗಿರಿಯಲ್ಲಿ ಸಾಮೂಹಿಕ ವರಮಹಾಲಕ್ಷ್ಮೀ ಪೂಜೆ

ಆಲಂಬಗಿರಿಯಲ್ಲಿ ಸಾಮೂಹಿಕ ವರಮಹಾಲಕ್ಷ್ಮೀ ಪೂಜೆ

ಅರ್ಚಕ ವೃಂದದವರು ಲಕ್ಷ್ಮೀ ಅಷ್ಟೋತ್ತರವನ್ನು ಹೇಳುತ್ತಿದ್ದರೆ, ಮುತ್ತೈದೆಯರು ಕುಳಿತ ಲ್ಲಿಯೇ ಕುಂಕುಮಾರ್ಚನೆಯನ್ನು ಶ್ರದ್ದಾ ಭಕ್ತಿಗಳಿಂದ ಪೂಜಿಸಿದರು. ಸರ್ವಾಲಂಕೃತವಾದ ಪೀಠ ದಲ್ಲಿ ಲಕ್ಷ್ಮೀ ಅಮ್ಮನವರನ್ನು ಆಸೀನಗೊಳಿಸಲಾಗಿತ್ತು. ನೂತನ ವಸ್ತ್ರಾಭರಣ ಹಾಗೂ ವಿವಿಧ ಬಗೆಯ ಹೂಗಳಿಂದ, ಅಮ್ಮನವರನ್ನು ಸಿಂಗರಿಸಲಾಗಿತ್ತು. ಸಭಾಪ್ರಾರ್ಥನೆ, ವಿಶ್ವಕ್ಸೇನ ಪೂಜಾ, ಕಲಶಾ ರಾಧನೆ, ಪೀಠಪೂಜೆ, ದ್ವಾರಪಾಲಕ ಪೂಜೆ, ಪ್ರಾಣಪ್ರತಿಷ್ಠೆ, ಲಕ್ಷ್ಮೀ ಅಷ್ಟೋತ್ತರ ಶತನಾ ಮಾವಳಿ ಪೂಜೆ, ಧೂಪ, ದೀಪ ನೈವೇದ್ಯಗಳನ್ನು ಸಮರ್ಪಿಸಲಾಯಿತು.

PM Narendra Modi: ನಾಳೆ ಬೆಂಗಳೂರಿನಲ್ಲಿ ಪಿಎಂ ಮೋದಿ, ಈ ರಸ್ತೆಗಳಲ್ಲಿ ಸಂಚಾರ ನಿರ್ಬಂಧ, ಪರ್ಯಾಯ ಮಾರ್ಗ ಸೂಚನೆ

ನಾಳೆ ಬೆಂಗಳೂರಿನಲ್ಲಿ ಪಿಎಂ ಮೋದಿ, ಈ ರಸ್ತೆಗಳಲ್ಲಿ ಸಂಚಾರ ಬದಲಾವಣೆ

Narendra Modi: ಪ್ರಧಾನಿ ಮೋದಿಯವರು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೇಲ್ವೆ ನಿಲ್ದಾಣದಲ್ಲಿ, ರಾಗೀಗುಡ್ಡ ಮೆಟ್ರೋ ನಿಲ್ದಾಣದಲ್ಲಿ ಹಾಗೂ ಎಲೆಕ್ಟ್ರಾನಿಕ್‌ ಸಿಟಿಯ ಐಐಐಟಿ ಕೇಂದ್ರದ ಸಭಾಂಗಣದಲ್ಲಿ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಈ ಪ್ರದೇಶಗಳ ಆಸುಪಾಸಿನಲ್ಲಿ ಸಂಚಾರಕ್ಕೆ ಪರ್ಯಾಯ ವ್ಯವಸ್ಥೆ ಕಲ್ಪಿಸಲಾಗುತ್ತಿದೆ.

Chikkaballapur News: ರಾಜಲಕ್ಷ್ಮೀ ದೇವಸ್ಥಾನಕ್ಕೆ ಹರಿದು ಬಂದ ಭಕ್ತ ಸಾಗರ

ರಾಜಲಕ್ಷ್ಮೀ ದೇವಸ್ಥಾನಕ್ಕೆ ಹರಿದು ಬಂದ ಭಕ್ತ ಸಾಗರ

ಪ್ರಧಾನ ಅರ್ಚಕರಾದ ಭೂಮರಾಜು ನರೇಂದ್ರಶರ್ಮ ನೇತೃತ್ವದಲ್ಲಿ ಮುಂಜಾನೆಯಿಂದಲೇ ರಾಜ ಲಕ್ಷ್ಮೀ ದೇವಿಗೆ ಅಭಿಷೇಕ, ಅರ್ಚನೆ, ಅಲಂಕಾರ, ವರಮಹಾ ಲಕ್ಷ್ಮೀ ವ್ರತ, ಕನಕಾಭಿಷೇಕ, ದಿಂಡಿ ಉತ್ಸವ, ಅಷ್ಠಾವಧಾನ ಸೇವೆ,ಗೋಪೂಜೆ ಮುಂತಾದ ದೇವತಾ ಕಾರ್ಯಗಳನ್ನು ನೆರವೇರಿಸ ಲಾಯಿತು. ಮಧ್ಯಾಹ್ನ ಮಹಾಮಂಗಳಾರತಿ ನಂತರ ಭಕ್ತಾಧಿಗಳಿಗೆ ತೀರ್ಥ ಪ್ರಸಾದವನ್ನು ವಿನಿಯೋಗಿಸಲಾಯಿತು. ವರಮಹಾಲಕ್ಷ್ಮೀ ಹಬ್ಬದ ಅಂಗವಾಗಿ ಬೆಳಗ್ಗೆಯಿಂದಲೆ ಸಾವಿರಾರು ಮಂದಿ ಭಕ್ತರು ಸರದಿ ಸಾಲಿನಲ್ಲಿ ನಿಂತು ದೇವಿಯ ದರ್ಶನ ಪಡೆದುಕೊಂಡರು.

Chikkaballapur News: ಮಾಜಿ ಸೈನಿಕನ ಹೋರಾಟಕ್ಕೆ ಸಾಥ್ ಕೊಟ್ಟ ಕೆ ಸತೀಶ್ ಕುಮಾರ್

೧೪ ನೇ ದಿನಕ್ಕೆ ಕಾಲಿಟ್ಟ ಮಾಜಿ ಸೈನಿಕನ ನ್ಯಾಯಕ್ಕಾಗಿ ಹೋರಾಟ

ಸರ್ಕಾರದಿಂದ ಸಿಗಬೇಕಾದ ಜಮೀನಿಗಾಗಿ ಕಳೆದ ೨೬ ವರ್ಷಗಳಿಂದ ಹೋರಾಟ ನಡೆಸಿದ್ದು ಮುಖ್ಯಮಂತ್ರಿ, ಸಚಿವರು, ಜಿಲ್ಲಾಧಿಕಾರಿಗಳು ಸ್ಥಳೀಯ ಅಧಿಕಾರಿಗಳ ಗಮನಕ್ಕೂ ತಂದಿದ್ದರೂ ಯಾವುದೇ ಪ್ರಯೋಜನವಾಗಲಿಲ್ಲಾ.ಇದರಿಂದ ಬೇಸತ್ತ ಮಾಜಿ ಸೈನಿಕ ತಾಲೂಕು ಕಚೇರಿ ಮುಂಭಾಗ ನ್ಯಾಯಕ್ಕಾಗಿ ಹೋರಾಟ ಮಾಡುತ್ತಿದ್ದು ಹೋರಾಟ 14ನೇ ದಿನಕ್ಕೆ ಕಾಲಿಟ್ಟಿದೆ.

Varamahalakshmi Festival: ಜಿಲ್ಲೆಯಾದ್ಯಂತ ವರಮಹಾಲಕ್ಷ್ಮೀ ಹಬ್ಬದ ಸಂಭ್ರಮ : ಲಕ್ಷಿಯನ್ನು ಪೂಜಿಸಿ ಪುನೀತರಾದ ಜನತೆ

ಜಿಲ್ಲೆಯಾದ್ಯಂತ ವರಮಹಾಲಕ್ಷ್ಮೀ ಹಬ್ಬದ ಸಂಭ್ರಮ

ಹಲವು ಮಹಿಳೆಯರು ಮನೆಯಲ್ಲಿಯೇ ಲಕ್ಷ್ಮೀಯನ್ನು ಪ್ರತಿಷ್ಠಾಪಿಸಿ ಪೂಜೆ ಸಲ್ಲಿಸಿದರು. ಕಳಸದ ಮೇಲೆ ಲಕ್ಷ್ಮೀದೇವಿ ಮುಖವಾಡವನಿಟ್ಟು ಕೆಲವರು ಪೂಜಿಸಿದರೆ, ಹಲವರು ತೆಂಗಿನಕಾಯಿಗೆ ಮೂಗು ಕಣ್ಣು ಕಿವಿ ಮಾಡಿ, ಒಡವೆಗಳು ಹಾಕಿ, ಹೊಸ ಸೀರೆಯಿಂದ ಅಲಂಕರಿಸಿ, ಅದರ ಸುತ್ತಲೂ ಮಾವಿನ ಎಲೆ ಕಟ್ಟಿ, ಬಾಳೆಕಂಬಗಳನ್ನು ಇಟ್ಟು, ಪುಷ್ಪಾಲಂಕಾರ ಮಾಡಿ ವ್ರತಾಚರಣೆ ಮಾಡಿದರು.

Chikkaballapur News: ಕೈವಾರ ಪಟ್ಟಣ ಪಂಚಾಯತಿಯಾಗಿ ಘೋಷಣೆ: ಗ್ರಾಮದಲ್ಲಿ ಪಟಾಕಿ ಸಿಡಿಸಿ ಸಂಭ್ರಮ

ಕೈವಾರ ಪಟ್ಟಣ ಪಂಚಾಯತಿಯಾಗಿ ಘೋಷಣೆ

ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟದಲ್ಲಿ ಚಿಂತಾಮಣಿ ತಾಲ್ಲೂಕಿನ ಪವಿತ್ರ ಯಾತ್ರಾಸ್ಥಳವಾದ ಕೈವಾರ ಮತ್ತು ಕೈಗಾರಿಕಾ ಪ್ರದೇಶ ಮಸ್ತೇನ ಹಳ್ಳಿ ಗ್ರಾಮ ಪಂಚಾಯಿತಿಗಳನ್ನು ಮೇಲ್ದರ್ಜೆಗೆ ಏರಿಸಿ ಕೈವಾರ ಪಟ್ಟಣ ಪಂಚಾಯತಿ ಎಂದು ಘೋಷಿಸಲಾಯಿತು.

Dharmasthala Case: ಧರ್ಮಸ್ಥಳ ಪ್ರಕರಣದ ಎಸ್‌ಐಟಿಗೆ ಪೊಲೀಸ್‌ ಠಾಣೆ ಮಾನ್ಯತೆ ನೀಡಿದ ಸರಕಾರ

ಧರ್ಮಸ್ಥಳ ಪ್ರಕರಣ ಎಸ್‌ಐಟಿಗೆ ಪೊಲೀಸ್‌ ಠಾಣೆ ಮಾನ್ಯತೆ ನೀಡಿದ ಸರಕಾರ

Karnataka Government: ಧರ್ಮಸ್ಥಳ ಗ್ರಾಮ ಹಾಗೂ ಸುತ್ತಮುತ್ತ ನಡೆದಿದೆ ಎನ್ನಲಾಗಿರುವ ಅಪರಾಧ ಕೃತ್ಯಗಳು ಹಾಗೂ ಅನಧಿಕೃತ ಮೃತದೇಹಗಳ ಅಂತ್ಯಕ್ರಿಯೆ ಸಂಬಂಧ ಸಲ್ಲಿಕೆಯಾಗುವ ದೂರುಗಳನ್ವಯ ಎಫ್‌ಐಆರ್ ದಾಖಲಿಸುವ ಅಧಿಕಾರವನ್ನು ಇದೀಗ ವಿಶೇಷ ತನಿಖಾ ತಂಡ (ಎಸ್‌ಐಟಿ) ಪಡೆದಿದೆ.

Self Harming: ಸಹಪಾಠಿಗಳ ಕಿರುಕುಳ, ಡೆತ್‌ ನೋಟ್‌ನಲ್ಲಿ ಹೆಸರು ಬರೆದಿಟ್ಟು ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ

ಸಹಪಾಠಿಗಳ ಕಿರುಕುಳ, ಡೆತ್‌ ನೋಟ್‌ ಬರೆದಿಟ್ಟು ವಿದ್ಯಾರ್ಥಿನಿ ಆತ್ಮಹತ್ಯೆ

Bagalakote: ಕಿರುಕುಳ ನೀಡಿದವರ ಹೆಸರನ್ನು ವಿದ್ಯಾರ್ಥಿನಿ ಅಂಜಲಿ ತಮ್ಮ ಡೆತ್‌ನೋಟ್‌ನಲ್ಲಿ ಬರೆದಿದ್ದಾರೆ. ಈ ಘಟನೆಯ ಕುರಿತು ಗುಳೇದಗುಡ್ಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಡೆತ್ ನೋಟ್‌ನಲ್ಲಿ ಉಲ್ಲೇಖವಾಗಿರುವ ವ್ಯಕ್ತಿಗಳ ಬಗ್ಗೆ ಪೊಲೀಸರು ಮಾಹಿತಿ ಸಂಗ್ರಹಿಸುತ್ತಿದ್ದಾರೆ.

Narendra Modi: ನಾಳೆ ಬೆಂಗಳೂರಿಗೆ ಪಿಎಂ ನರೇಂದ್ರ ಮೋದಿ; ನಮ್ಮ ಮೆಟ್ರೋ ಹಳದಿ ಮಾರ್ಗ, ವಂದೇ ಭಾರತ್‌ ರೈಲಿಗೆ ಚಾಲನೆ

ನಾಳೆ ಬೆಂಗಳೂರಿಗೆ ಮೋದಿ; ಮೆಟ್ರೋ ಹಳದಿ ಮಾರ್ಗ, ವಂದೇ ಭಾರತ್‌ ರೈಲಿಗೆ ಚಾಲನೆ

ನಮ್ಮ ಮೆಟ್ರೋ (Namma Metro) 3ನೇ ಹಂತದ ಯೋಜನೆಗೆ ಶಂಕುಸ್ಥಾಪನೆ, ಮೆಟ್ರೋ ಹಳದಿ ಮಾರ್ಗ (Yellow line) ಉದ್ಘಾಟನೆ ಹಾಗೂ ಮೂರು ವಂದೇ ಭಾರತ್ ರೈಲುಗಳಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ನಾಳೆ (ಆಗಸ್ಟ್‌ 10) ಬೆಂಗಳೂರಿನಲ್ಲಿ ಹಸಿರು ನಿಶಾನೆ ತೋರಲಿದ್ದಾರೆ.

ಬೊಮ್ಮಸಂದ್ರದಲ್ಲಿ 80 ಸಾವಿರ ಆಸನ ಸಾಮರ್ಥ್ಯದ ಕ್ರಿಕೆಟ್ ಕ್ರೀಡಾಂಗಣಕ್ಕೆ ಸಿಎಂ ಅಸ್ತು

ಬೊಮ್ಮಸಂದ್ರದಲ್ಲಿ ನಿರ್ಮಾಣವಾಗಲಿದೆ ದೇಶದ 2ನೇ ಅತಿ ದೊಡ್ಡ ಕ್ರೀಡಾಂಗಣ

Bommasandra cricket stadium: ಕೆಲವು ತಿಂಗಳಲ್ಲಿ ಯೋಜನೆ ಅನುಷ್ಠಾನಕ್ಕೆ ಶಂಕುಸ್ಥಾಪನೆಯನ್ನು ನೆರವೇರಿಸಲಾಗುತ್ತದೆ. ಕ್ರೀಡಾಂಗಣ ಪೂರ್ಣಗೊಂಡ ನಂತರ, ಇದು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದ ನಂತರ ಭಾರತದ ಎರಡನೇ ಅತಿದೊಡ್ಡ ಕ್ರಿಕೆಟ್ ಕ್ರೀಡಾಂಗಣವಾಗಲಿದೆ. ಮೋದಿ ಸ್ಟೇಡಿಯಂ 1,32,000 ಪ್ರೇಕ್ಷಕರ ಸಾಮರ್ಥ್ಯ ಹೊಂದಿದೆ.

Murder Case: ಮದ್ದೂರಿನಲ್ಲಿ ರೌಡಿ ಶೀಟರ್‌ನನ್ನು ಕೊಚ್ಚಿ ಕೊಲೆ

ಮದ್ದೂರಿನಲ್ಲಿ ರೌಡಿ ಶೀಟರ್‌ನನ್ನು ಕೊಚ್ಚಿ ಕೊಲೆ

Mandya News: ಅರುಣ್ ಸ್ವಗ್ರಾಮ ವಡ್ಡರದೊಡ್ಡಿಗೆ ತೆರಳುವ ವೇಳೆ ಸೋಮನಹಳ್ಳಿ ಬಳಿಯ ಸ್ಕಂದ ಲೇಔಟ್ ಬಳಿ ಎಂಟತ್ತು ಮಂದಿ ಅರುಣ್ ಮೇಲೆ ಮಾರಕಾಸ್ತ್ರಗಳಿಂದ ಏಕಾಏಕಿ ದಾಳಿ ಮಾಡಿದ ಪರಿಣಾಮ ತೀವ್ರ ರಕ್ತಸ್ರಾವದಿಂದ ನರಳಿ ಅರುಣ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

Dharmasthala Case: ಧರ್ಮಸ್ಥಳದ ಬಗ್ಗೆ ಬಿಜೆಪಿ ಮುಖಂಡ ಬಿಎಲ್‌ ಸಂತೋಷ್‌ ಕುತೂಹಲಕಾರಿ ಪೋಸ್ಟ್‌

ಧರ್ಮಸ್ಥಳ ಬಗ್ಗೆ ಬಿಜೆಪಿ ಮುಖಂಡ ಬಿಎಲ್‌ ಸಂತೋಷ್‌ ಕುತೂಹಲಕಾರಿ ಪೋಸ್ಟ್‌

BL Santosh: ಧರ್ಮಸ್ಥಳದ ಪ್ರಕರಣ ಹಾಗೂ ಅದಕ್ಕೆ ಸಂಬಂಧಿಸಿದ ಬೆಳವಣಿಗೆಗಳ ಬಗ್ಗೆ ಸೋಶಿಯಲ್ ಮೀಡಿಯಾ ಪೋಸ್ಟ್ ಮಾಡಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸಂತೋಷ್, "ಎಚ್ಚೆತ್ತುಕೊಳ್ಳೋಣ, ಶಬರಿಮಲೈ, ಶನಿಸಿಂಗ್ಲಾಪುರ, ಈಶಾ ಈಗ ಧರ್ಮಸ್ಥಳ" ಎಂದು ಬರೆದಿದ್ದಾರೆ.

Actress Ramya: ನಟಿ ರಮ್ಯಾಗೆ ಅಶ್ಲೀಲ ಸಂದೇಶ ಕಳಿಸಿದ ಪ್ರಮುಖ ಆರೋಪಿ ಬಂಧನ

ನಟಿ ರಮ್ಯಾಗೆ ಅಶ್ಲೀಲ ಸಂದೇಶ ಕಳಿಸಿದ ಪ್ರಮುಖ ಆರೋಪಿ ಬಂಧನ

Obscene message: ಸ್ಯಾಂಡಲ್‌ವುಡ್‌ ನಟಿ ರಮ್ಯಾ ಅವರ ಇನ್‌ಸ್ಟಾಗ್ರಾಂ ಖಾತೆಗೆ ಅಶ್ಲೀಲ ಮತ್ತು ಬೆದರಿಕೆ ಸಂದೇಶ ಕಳುಹಿಸಿದ್ದ ಪ್ರಮೋದ್ ಗೌಡ ಎಂಬಾತನನ್ನು ಗುರುವಾರ ರಾತ್ರಿ ಬಂಧಿಸಲಾಗಿದ್ದು, ವಿಚಾರಣೆ ನಡೆಸಲಾಗುತ್ತಿದೆ ಎಂದು ಸಿಸಿಬಿ ಪೊಲೀಸರು ತಿಳಿಸಿದ್ದಾರೆ.

Murder case: ಪತ್ನಿಯನ್ನು ಕೊಂದಿದ್ದ ಪತಿಯ ಮಚ್ಚಿನಿಂದ ಕೊಚ್ಚಿ ಹತ್ಯೆ

ಪತ್ನಿಯನ್ನು ಕೊಂದಿದ್ದ ಪತಿಯ ಮಚ್ಚಿನಿಂದ ಕೊಚ್ಚಿ ಹತ್ಯೆ

ಪತ್ನಿ ಮೇಘನಾಳನ್ನು ಪತಿ ಚರಣ್ ಹತ್ಯೆಗೈದು ಚೈಲು ಸೇರಿದ್ದನು. ಮೂರು ತಿಂಗಳ ಹಿಂದೆ ಜಾಮೀನಿನ ಮೇಲೆ ಹೊರಬಂದಿದ್ದನು. ಇಂದು ಬೈಕ್‌ನಲ್ಲಿ ತೆರಳುವಾಗ ಚರಣ್ ನನ್ನು ಹಿಂಬಾಲಿಸಿ ಹೋದಂತ ಹಂತಕರು ಮಚ್ಚಿನಿಂದ ಹಲ್ಲೆ ಮಾಡಿ ಕೊಲೆ ಮಾಡಿದ್ದಾರೆ.

ಅಪಘಾತಕ್ಕೀಡಾದ ವಾಹನ ವಿಮೆ ಪಡೆದಿದ್ದ ವಿಮಾ ಕಂಪನಿಯನ್ನು ಹೊಣೆಗಾರನ್ನಾಗಿ ಮಾಡಲಾಗುವುದಿಲ್ಲ

ವಾಹನದ ಮಾಲೀಕರು ಸಂತ್ರಸ್ತರಿಗೆ ಪರಿಹಾರ ಪಾವತಿಸಬೇಕು

ಸರಕು ಸಾಗಣೆ ವಾಹನ ಅಪಘಾತಕ್ಕೀಡಾಗಿ ಗಾಯಗೊಂಡವರಿಗೆ ಪರಿಹಾರ ನೀಡುವಂತೆ ಆದೇಶಿಸಿದ್ದ ಮೋಟಾರು ಅಪಘಾತ ಪರಿಹಾರ ನ್ಯಾಯಾಧಿಕರಣದ ಆದೇಶವನ್ನು ಪ್ರಶ್ನಿಸಿ, ಸರಕು ಸಾಗಾಣೆ ವಾಹನಕ್ಕೆ ವಿಮೆ ನೀಡಿದ್ದ ದಿ ನ್ಯಾಷನಲ್ ಇನ್ಶೂರೆನ್ಸ್ ಕಂಪನಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಉಮೇಶ್ ಎಂ. ಅಡಿಗ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿದೆ.

Bengaluru News: ನ್ಯಾಯಾಲಯದ ಆದೇಶದಂತೆ ಅಭಿಮಾನ್ ಸ್ಟುಡಿಯೋದಲ್ಲಿ ವಿಷ್ಣುವರ್ಧನ್ ಸಮಾಧಿ ಸ್ಥಳ ತೆರವು: ವಕೀಲ ಕಾರ್ತಿಕ್ ವಿ.

ನ್ಯಾಯಾಲಯದ ಆದೇಶದಂತೆ ಅಭಿಮಾನ್ ಸ್ಟುಡಿಯೋದಲ್ಲಿ ಸಮಾಧಿ ಸ್ಥಳ ತೆರವು

ಬಾಲಕೃಷ್ಣ ಅವರ ಮೊಮ್ಮಗ ಬಿ.ಎಸ್. ಕಾರ್ತಿಕ್ ಕಾನೂನು ಹೋರಾಟ ನಡೆಸಿದ್ದರು. ನ್ಯಾಯಾ ಲಯದ ಆದೇಶದಂತೆ ಎರಡು ತಿಂಗಳ ನಂತರವೂ ಸಮಾಧಿ ಸ್ಥಳವನ್ನು ತೆರವುಗೊಳಿಸಿರಲಿಲ್ಲ. ಆದರೆ ಕಳೆದ 2020 ರ ಜನವರಿ 10 ರಂದು ಡಾ. ವಿಷ್ಣುವರ್ಧನ್ ಅವರ ಸಮಾಧಿ ಸ್ಥಳವನ್ನು ಮೈಸೂರಿಗೆ ಸ್ಥಳಾಂತರಿ ಸುವಂತೆ ಸರ್ಕಾರ ಆದೇಶ ಹೊರಡಿಸಿತ್ತು.

ಇಡೀ ರಾಜ್ಯದಲ್ಲಿ ಮತದಾರರ ಪಟ್ಟಿ ಅಕ್ರಮದ ಪರಿಶೀಲನೆಗೆ ಚುನಾವಣಾ ಆಯೋಗಕ್ಕೆ ಮನವಿ: ಡಿಕೆಶಿ

ಮತದಾರರ ಪಟ್ಟಿ ಅಕ್ರಮದ ಪರಿಶೀಲನೆಗೆ ಚುನಾವಣಾ ಆಯೋಗಕ್ಕೆ ಮನವಿ

DK Shivakumar: ಚುನಾವಣಾ ಆಯೋಗಕ್ಕೆ ಹೊಸದಾಗಿ ಬಂದಿರುವ ಅನ್ಬುಕುಮಾರ್ ಅವರು ಪರಿಶೀಲನೆ ಆರಂಭಿಸಿರುವುದಾಗಿ ನಮಗೆ ತಿಳಿಸಿದರು. ಅವರ ಕ್ರಮ ಸ್ವಾಗತಾರ್ಹ. ಯಾವ ಕ್ಷೇತ್ರಗಳಲ್ಲಿ ಏನೆಲ್ಲಾ ಅನ್ಯಾಯ ಆಗಿದೆ, ಮುಂದೆ ಏನೆಲ್ಲಾ ಕ್ರಮ ಕೈಗೊಳ್ಳಬೇಕು ಎಂಬ ವಿಚಾರ ತಿಳಿಸುತ್ತೇವೆ. ಇದು ಕೇವಲ ಕರ್ನಾಟಕ ಅಥವಾ ಮಹದೇವಪುರಕ್ಕೆ ಸೀಮಿತವಾದ ಹೋರಾಟವಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

Pralhad Joshi: ರಾಹುಲ್‌ ಗಾಂಧಿ ಅವರದ್ದು ʼಹಿಟ್‌ ಅಂಡ್‌ ರನ್‌ ಕೇಸ್‌ʼ ಇದ್ದಂತೆ: ಪ್ರಲ್ಹಾದ್ ಜೋಶಿ

ರಾಹುಲ್‌ ಗಾಂಧಿ ಅವರದ್ದು ʼಹಿಟ್‌ ಅಂಡ್‌ ರನ್‌ ಕೇಸ್‌ʼ ಇದ್ದಂತೆ: ಜೋಶಿ ‌

Pralhad Joshi: ರಾಹುಲ್‌ ಗಾಂಧಿ ಅವರದ್ದು ಒಂದು ರೀತಿ ಹಿಟ್‌ ಆಂಡ್‌ ರನ್‌ ಕೇಸ್‌ ಇದ್ದಂತೆ. ಮನಬಂದಂತೆ ಮಾತನಾಡುತ್ತಾರೆ. ಉತ್ತರ ಕೇಳಿದರೆ ನಾಪತ್ತೆಯಾಗುತ್ತಾರೆ. ಯಾವುದೇ ಪ್ರಕರಣ ಸಹ ದಾಖಲಿಸುವುದಿಲ್ಲ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸಚಿವ ಪ್ರಲ್ಹಾದ್‌ ಜೋಶಿ ವಾಗ್ದಾಳಿ ನಡೆಸಿದ್ದಾರೆ.

ಮಂತ್ರಾಲಯದಲ್ಲಿ ರಾಯರ 354ನೇ ವರ್ಷದ ಆರಾಧನಾ ಮಹೋತ್ಸವದ ಸಪ್ತರಾತ್ರೋತ್ಸವಕ್ಕೆ ಶ್ರೀಗಳಿಂದ ಚಾಲನೆ

ಮಂತ್ರಾಲಯದಲ್ಲಿ ರಾಯರ 354ನೇ ವರ್ಷದ ಆರಾಧನಾ ಮಹೋತ್ಸವಕ್ಕೆ ಚಾಲನೆ

Raghavendra Swamy Aradhana: ಮಂತ್ರಾಲಯದಲ್ಲಿ ಶ್ರೀ ರಾಘವೇಂದ್ರ ತೀರ್ಥ ಗುರುಸಾರ್ವಭೌಮರ 354ನೇ ವರ್ಷದ ಆರಾಧನಾ ಸಪ್ತರಾತ್ರೋತ್ಸವಕ್ಕೆ (Raghavendra Swamy Aradhana) ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥ ಸ್ವಾಮೀಜಿ ಅವರು ಭಗವಾ ಧ್ವಜಾರೋಹಣ ನೆರವೇರಿಸುವ ಮೂಲಕ‌ ವಿಧ್ಯುಕ್ತ ಚಾಲನೆ ನೀಡಿದರು.

Dr. Vishnuvardhan's samadhi: ನಟ ವಿಷ್ಣುವರ್ಧನ್‌‌ರನ್ನು ಎರಡನೇ ಬಾರಿ ಸಾಯಿಸಿದ್ದಾರೆ: ವೀರಕಪುತ್ರ ಶ್ರೀನಿವಾಸ್‌ ಕಿಡಿ

ವಿಷ್ಣುವರ್ಧನ್‌‌ರನ್ನು 2ನೇ ಬಾರಿ ಸಾಯಿಸಿದ್ದಾರೆ: ವೀರಕಪುತ್ರ ಶ್ರೀನಿವಾಸ್‌

Dr. Vishnuvardhan's samadhi: ಕೊನೆಗೂ ಡಾ.ವಿಷ್ಣುವರ್ಧನ್ ಅವರ ಪುಣ್ಯಭೂಮಿಯನ್ನು ನೆಲಸಮ ಮಾಡಿಬಿಟ್ಟರು! ಹನ್ನೊಂದು ವರ್ಷಗಳ ಹೋರಾಟ ನೀರಲ್ಲಿ ಹೋಮ ಮಾಡಿದಂತಾಯಿತು. ಡಾ.ವಿಷ್ಣುವರ್ಧನ್ ಅವರಿಗೆ ಹತ್ತು ಗುಂಟೆ ಜಾಗ ಕೊಡಲಾಗದ ನಾಚಿಕಗೇಡಿನ ಸರ್ಕಾರ ಇದು ಎಂದು ಡಾ.ವಿಷ್ಣು ಸೇನಾ ಸಮಿತಿಯ ರಾಜ್ಯಾಧ್ಯಕ್ಷ, ಪುಸ್ತಕೋದ್ಯಮಿ ವೀರಕಪುತ್ರ ಶ್ರೀನಿವಾಸ್ ಅಸಮಾಧಾನ ಹೊರಹಾಕಿದ್ದಾರೆ.

Loading...