ಬಿಗ್​ಬಾಸ್ ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಕರ್ನಾಟಕ

DK Shivakumar: ನಮ್ಮ ಮೆಟ್ರೋ ಪಿಂಕ್‌ ಲೈನ್‌ ಕಾರ್ಯಾರಂಭ ಸನಿಹ: ಡಿಕೆ ಶಿವಕುಮಾರ್‌ ಮಾಹಿತಿ

ನಮ್ಮ ಮೆಟ್ರೋ ಪಿಂಕ್‌ ಲೈನ್‌ ಕಾರ್ಯಾರಂಭ ಸನಿಹ: ಡಿಕೆ ಶಿವಕುಮಾರ್‌ ಮಾಹಿತಿ

Namm Metro Pink Line: ಬೆಂಗಳೂರಿನ ಪಿಂಕ್‌ ಲೈನ್‌ ನಮ್ಮ ಮೆಟ್ರೋ ಕಾಮಗಾರಿ ಅಂತಿಮ ಹಂತದಲ್ಲಿದ್ದು, ಇದರ ಕಾರ್ಯಾಚರಣೆ ಯಾವಾಗಿನಿಂದ ಎಂಬ ಮಾಹಿತಿಯನ್ನು ಡಿಸಿಎಂ ಡಿಕೆ ಶಿವಕುಮಾರ್‌ ನೀಡಿದ್ದಾರೆ. ಕಾಳೇನ ಅಗ್ರಹಾರ- ನಾಗವಾರ ನಡುವಿನ ಗುಲಾಬಿ ಮಾರ್ಗವು 21 ಕಿಮೀ ಉದ್ದ ಹೊಂದಿದ್ದು, ಇದರ ಕಾಮಗಾರಿ ಅಂತಿಮ ಹಂತಕ್ಕೆ ತಲುಪಿದೆ. ಇದರಲ್ಲಿ 13.76 ಕಿಮೀ ಸುರಂಗ ಮಾರ್ಗವಾಗಿದೆ. ಇದು ಅತಿ ಉದ್ದದ ಭೂಗತ ಮಾರ್ಗ. ಈ ಸುರಂಗದಲ್ಲಿ 12 ನಿಲ್ದಾಣಗಳು ಇವೆ. ಭೂಗತ ನಿಲ್ದಾಣಗಳಲ್ಲಿ ಮೆಟ್ಟಿಲು ನಿರ್ಮಾಣ, ಹಳಿ ಜೋಡಣೆ, ವಿದ್ಯುತ್ ಸಂಪರ್ಕ, ಎಲಿವೇಟರ್, ಎಸಿ, ಮತ್ತು ಅಗ್ನಿಶಾಮಕ ಸುರಕ್ಷತಾ ವ್ಯವಸ್ಥೆಗಳ ಅಳವಡಿಕೆ ಕಾರ್ಯ ಭರದಿಂದ ಸಾಗಿದೆ.

Actor Darshan: ನವೆಂಬರ್‌ 10ಕ್ಕೆ ದರ್ಶನ್‌ ವಿಚಾರಣೆ ಮುಂದೂಡಿಕೆ

ನವೆಂಬರ್‌ 10ಕ್ಕೆ ದರ್ಶನ್‌ ವಿಚಾರಣೆ ಮುಂದೂಡಿಕೆ

Renukaswamy Murder Case: ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ನಟ ದರ್ಶನ್‌ ಸೇರಿದಂತೆ ಆರೋಪಿಗಳ ವಿಚಾರಣೆಯನ್ನು 57ನೇ ಸೆಷನ್ ಕೋರ್ಟ್ ನವೆಂಬರ್‌ 10ಕ್ಕೆ ವಿಚಾರಣೆ ಮುಂದೂಡಿದೆ. ಜೈಲು ಸೇರಿರುವ ದರ್ಶನ್‌ ಸೇರಿದಂತೆ ಆರೋಪಿಗಳು ನವೆಂಬರ್‌ 3ರಂದು ಬೆಂಗಳೂರು 64ನೇ ಸಿಸಿಎಚ್ ಕೋರ್ಟ್‌ಗೆ ಹಾಜರಾದರು.

CM Siddaramaiah: ಅಸಮಾನತೆ ನಿವಾರಣೆ ಪ್ರತಿಯೊಬ್ಬ ರಾಜಕಾರಣಿಯ ಜವಾಬ್ದಾರಿ: ಸಿಎಂ ಸಿದ್ದರಾಮಯ್ಯ

ಅಸಮಾನತೆ ನಿವಾರಣೆ ಪ್ರತಿಯೊಬ್ಬ ರಾಜಕಾರಣಿಯ ಜವಾಬ್ದಾರಿ: ಸಿಎಂ

Devaraj Arasu statue Unveiling: ಮೈಸೂರಿನ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ನೂತನವಾಗಿ ಸ್ಥಾಪಿಸಿರುವ ದೇವರಾಜ ಅರಸು ಅವರ ಪ್ರತಿಮೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅನಾವರಣಗೊಳಿಸಿದರು. ಬಳಿಕ ಮಾತನಾಡಿದ ಅವರು, ಅವಕಾಶ ವಂಚಿತರಿಗೆ ಅವಕಾಶ ಒದಗಿಸಿಕೊಡುವುದು ಪ್ರತಿಯೊಬ್ಬ ರಾಜಕಾರಣಿಯ ಹೊಣೆಗಾರಿಕೆ ಆಗಬೇಕು. ಅರಸು ಅವರು ಅತ್ಯಂತ ಕೆಳಮಟ್ಟದಲ್ಲಿರುವ ಜನ ಸಮುದಾಯಗಳ ಪ್ರತಿನಿಧಿಗಳನ್ನು ವಿಧಾನಸೌಧದ ಮೆಟ್ಟಿಲು ಹತ್ತಿಸುವಂತೆ ಮಾಡಿದರು ಎಂದು ತಿಳಿಸಿದ್ದಾರೆ.

Golden Chariot: ಚಕ್ರಗಳ ಮೇಲೆ ರಾಜ್ಯದ ಸಾಮ್ರಾಜ್ಯಗಳು; 6 ದಿನ ಹೋಗಿ ಅರಸರಾಗಿ ಬನ್ನಿ

ಗೋಲ್ಡನ್ ಚಾರಿಯಟ್‌ ಎಂಬ ಐಷಾರಾಮಿ ರೈಲಿನಲ್ಲಿ ಸುತ್ತಾಡಿ

Pravasi Prapancha: ದಕ್ಷಿಣ ಭಾರತ ಸಂಸ್ಕೃತಿ ಮತ್ತು ಪರಂಪರೆಯ ಅನುಭವ ನೀಡುತ್ತ, ಪ್ರವಾಸದಲ್ಲಿ ಅದರ ಸತ್ವವನ್ನು ಕಟ್ಟಿಕೊಡಲು ಐಷಾರಾಮಿ ಪ್ರವಾಸಿ ರೈಲು ಗೋಲ್ಡನ್ ಚಾರಿಯಟ್, ತನ್ನ ವೈಭವದ ಓಡಾಟವನ್ನು ಮತ್ತೆ ಆರಂಭಿಸಿದೆ. ಈ ಗೋಲ್ಡನ್ ಚಾರಿಯಟ್ನೊಂದಿಗೆ ಪ್ರವಾಸಕ್ಕೆ ಬರುವವರಿಗೆ ರಾಜ್ಯದ ಗೋಲ್ಡನ್ ಚರಿತ್ರೆಯ ಅನುಭವ ರೈಲಿನಲ್ಲಿಯೇ ರೀ ಓಪನ್ ಆಗಲಿದೆ. ಹೌದು, ಸುಂದರ ವಿನ್ಯಾಸದ ಈ ಚಾರಿಯಟ್ ಒಳಾಂಗಣವು ವಿಭಿನ್ನ ಬೋಗಿಗಳಲ್ಲಿ ಮತ್ತದೇ ವಿಭಿನ್ನ ರಾಜಮನೆತನದ ವೈಭೋಗವನ್ನು ಅನುಭವಕ್ಕೆ ತರಲಿದೆ.

CM Siddaramaiah: ಹೈಕಮಾಂಡ್ ನಿರ್ಧಾರವೇ ಅಂತಿಮ; ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಸಿದ್ದರಾಮಯ್ಯ ಹೇಳಿದ್ದೇನು?

ಹೈಕಮಾಂಡ್ ನಿರ್ಧಾರವೇ ಅಂತಿಮ: ಸಿದ್ದರಾಮಯ್ಯ

''ಜನರ ಅಭಿಪ್ರಾಯವೇನೇ ಇದ್ದರೂ, ಹೈಕಮಾಂಡ್ ನಿರ್ಧಾರವೇ ಅಂತಿಮ. ಪಕ್ಷದ ವರಿಷ್ಠರು ಈ ಬಗ್ಗೆ ಏನೂ ಹೇಳಿಲ್ಲ. ಬಿಹಾರ ಚುನಾವಣೆಯ ನಂತರ ರಾಜ್ಯದಲ್ಲಿ ಸಂಪುಟ ಪುನರ್‌ರಚನೆಯ ಬಗ್ಗೆ ವರಿಷ್ಠರೊಂದಿಗೆ ಚರ್ಚಿಸಲಾಗುವುದುʼʼ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಮುಖ್ಯಮಂತ್ರಿ ಬದಲಾವಣೆ ಕುರಿತ ಪ್ರಶ್ನೆಗೆ ಅವರು ಪ್ರತಿಕ್ರಿಯೆ ನೀಡಿದರು.

Snake Bite: ಒಂದೇ ಮನೆಯ ಮೂವರು ಮಕ್ಕಳಿಗೆ ಕಡಿದ ವಿಷಪೂರಿತ ಹಾವು; ಪ್ರಾಣಾಪಾಯದಿಂದ ಕಾಪಾಡಿದ ನಾಟಿ ವೈದ್ಯ

ಒಂದೇ ಮನೆಯ ಮೂವರು ಮಕ್ಕಳಿಗೆ ಕಡಿದ ವಿಷಪೂರಿತ ಹಾವು

Dakshina Kannada News: ಮನೆಯೊಳಗೆ ಮಲಗಿದ್ದ ಮೂವರು ಮಕ್ಕಳಿಗೆ ವಿಷಪೂರಿತ ಹಾವೊಂದು ಕಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕು ತಣ್ಣೀರುಪಂತ ಸಮೀಪದ ಕುದ್ರಡ್ಕದಲ್ಲಿ ನಡೆದಿದೆ . ಸದ್ಯ ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕುದ್ರಡ್ಕ ನಿವಾಸಿ ವಿಜಯ ಮಡೆಕ್ಕಿಲ ಅವರ ಮಗ ದಕ್ಷಿತ್ ಮತ್ತು ಅಕ್ಕನ ಮಕ್ಕಳಾದ ವಿಶ್ಮಿತಾ ಹಾಗೂ ಅನ್ವಿತಾ ಅವರಿಗೆ ವಿಷ ಪೂರಿತ ಕನ್ನಡಿ ಹಾವು ಕಡಿದಿದೆ. ಸಕಾಲದಲ್ಲಿ ನಾಟಿ ವೈದ್ಯರು ಚಿಕಿತ್ಸೆ ನೀಡಿದ್ದರಿಂದ ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಬೆಳಗಾವಿಯಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ 2 ಕಾಡಾನೆ ಸಾವು; ತನಿಖೆಗೆ ಸಚಿವ ಈಶ್ವರ್‌ ಖಂಡ್ರೆ ಆದೇಶ

ಬೆಳಗಾವಿಯಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ 2 ಕಾಡಾನೆ ಸಾವು

ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಸುಳೆಗಾಳಿ ಗ್ರಾಮದಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ 2 ಕಾಡಾನೆಗಳು ಸಾವನ್ನಪ್ಪಿವೆ. ಜಮೀನಿನ ಬಳಿ ತಂತಿ ಬೇಲಿಗೆ ವಿದ್ಯುತ್ ಕನೆಕ್ಷನ್ ನೀಡಿದ್ದ ಕಾರಣ ಈ ದುರ್ಘಟನೆ ಸಂಭವಿಸಿದೆ. ಜಮೀನಿನ ಬೇಲಿಗೆ ಅಕ್ರಮವಾಗಿ ಮನೆಯಿಂದ ವಿದ್ಯುತ್ ಸಂಪರ್ಕ ನೀಡಿದ್ದ ಆರೋಪದಲ್ಲಿ ರೈತ ಗಣಪತಿ ಸಾತೇರಿ ಗುರವ್ ಅವರನ್ನು ಅರಣ್ಯ ಇಲಾಖೆ ಬಂಧಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

Kasa Suriyuva Habba: ಎಲ್ಲೆಂದರಲ್ಲಿ ಕಸ ಎಸೆಯುವವರ ವಿಡಿಯೊ ಕಳುಹಿಸಿ 250 ರೂ. ಗಳಿಸಿ; BSWMLನಿಂದ ಹೊಸ ಯೋಜನೆ

ಎಲ್ಲೆಂದರಲ್ಲಿ ಕಸ ಎಸೆಯುವವರ ವಿಡಿಯೊ ಕಳುಹಿಸಿ 250 ರೂ. ಗಳಿಸಿ

ಬೆಂಗಳೂರಿನಲ್ಲಿ ಬಿಗಡಾಯಿಸಿರುವ ಕಸದ ಸಮಸ್ಯೆ ನಿವಾರಣೆಗೆ ಮುಂದಾಗಿರುವ ಬೆಂಗಳೂರು ಘನತ್ಯಾಜ್ಯ ನಿರ್ವಹಣೆ ನಿಯಮಿತ ಕಠಿಣ ಕ್ರಮ ಕೈಗೊಂಡಿದೆ. ಕಸ ಸುರಿಯುವ ಹಬ್ಬ ಎನ್ನುವ ವಿಶಿಷ್ಟ ಯೋಜನೆಯನ್ನು ಜಾರಿಗೊಳಿಸಿದೆ. ಅದರ ಮೂಲಕ ಎಲ್ಲೆಂದರಲ್ಲಿ ಕಸ ಎಸೆಯುವವರ ಮನೆಗಳ ಮುಂದೆ ಕಸ ಸುರಿದು, ದಂಡ ವಿಧಿಸುತ್ತಿದೆ. ಇದೀಗ ಸಾರ್ವಜನಿಕ ಸ್ಥಳಗಳಲ್ಲಿ ಕಸ ಎಸೆಯುವ ದೃಶ್ಯವನ್ನು ಚಿತ್ರೀಕರಿಸಿ ಕಳುಹಿಸಿ ಕೊಟ್ಟವರಿಗೆ 250 ರೂ. ನೀಡುವುದಾಗಿ ಘೋಷಿಸಿದೆ.

Gold price today on 3rd November 2025: ಚಿನ್ನದ ದರದಲ್ಲಿ ಇಂದು ಮತ್ತೆ ಏರಿಕೆ; ಇಂದಿನ ರೇಟ್‌ ಎಷ್ಟಿದೆ?

ಚಿನ್ನದ ದರದಲ್ಲಿ ಇಂದು ಮತ್ತೆ ಏರಿಕೆ; ಇಂದಿನ ರೇಟ್‌ ಎಷ್ಟಿದೆ?

Gold and silver rate in bengaluru: ಇಂದು 22ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆಯಲ್ಲಿ 15 ರೂ. ಏರಿಕೆ ಕಂಡು ಬಂದಿದ್ದು, 11,290 ರೂ. ಗೆ ತಲುಪಿದೆ. 24 ಕ್ಯಾರಟ್‌ 1 (Gold Price) ಗ್ರಾಂ ಚಿನ್ನದ ದರದಲ್ಲಿ 17 ರೂ. ಏರಿಕೆಯಾಗಿ, 12,317 ರೂ ಆಗಿದೆ. 22 ಕ್ಯಾರಟ್‌ನ 8 ಗ್ರಾಂ ಚಿನ್ನ 90,320 ರೂ. ಬಾಳಿದರೆ, 10 ಗ್ರಾಂಗೆ ನೀವು 1,12,900 ಹಾಗೂ 100 ಗ್ರಾಂಗೆ 12,29,000 ನೀಡಬೇಕಾಗುತ್ತದೆ. 24 ಕ್ಯಾರಟ್‌ನ 8 ಗ್ರಾಂ ಚಿನ್ನಕ್ಕೆ 98,536 ರೂ. ಆದರೆ, 10 ಗ್ರಾಂಗೆ ನೀವು 1,23,170 ರೂ. ಹಾಗೂ 100 ಗ್ರಾಂಗೆ 12,31,700 ರೂ. ಪಾವತಿಸಬೇಕಾಗುತ್ತದೆ.

Bengaluru Jala Mandali: ಶುದ್ಧ ನೀರಿನ ಘಟಕದಲ್ಲಿ ಏಕರೂಪ ದರ ಜಾರಿಗೆ ಜಲ ಮಂಡಳಿ ಚಿಂತನೆ

ನೀರಿನ ಘಟಕದಲ್ಲಿ ಏಕರೂಪ ದರ; ಜಲ ಮಂಡಳಿ ಚಿಂತನೆ

Bengaluru News: ಬೆಂಗಳೂರು ಜಲಮಂಡಳಿಯು ನಗರದಲ್ಲಿರುವ ಶುದ್ಧ ನೀರಿನ ಘಟಕಗಳಿಂದ ಕ್ಯೂ ಆರ್‌ಕೋಡ್ ಸ್ಕ್ಯಾನಿಂಗ್ ಮೂಲಕ ಅಥವಾ ಪ್ರೀಪೇಯ್ಡ್‌ ಕಾರ್ಡ್ ಮೂಲಕ ನೀರು ಪಡೆಯುವ ಹಾಗೂ ಏಕರೂಪ ದರ ನಿಗದಿ ಸಂಬಂಧ ಯೋಜನೆಯನ್ನು ರೂಪಿಸಿದೆ. ಬಿಬಿಎಂಪಿ ನಿರ್ವಹಣೆಯಲ್ಲಿದ್ದಾಗ ಏಕರೂಪದಲ್ಲಿ ಇರಲಿಲ್ಲ. ಕೆಲವು ಕಡೆ 20 ಲೀಟರ್‌ಗೆ 5 ರೂ., 10 ರೂ. ಇಲ್ಲವೇ 15 ರೂ. ಇತ್ತು. ಇದನ್ನು ತಪ್ಪಿಸಿ ಒಂದೇ ದರ ನಿಗದಿ ಮಾಡುವ ನಿರ್ಧಾರವನ್ನು ಜಲಮಂಡಳಿ ಕೈಗೊಂಡಿದೆ.

DK Shivakumar: ಮತದಾನಕ್ಕೆ ತೆರಳುವ ಬಿಹಾರಿಗಳಿಗೆ ಮೂರು ದಿನ ರಜೆ: ಡಿಕೆಶಿ ಘೋಷಣೆ

ಮತದಾನಕ್ಕೆ ತೆರಳುವ ಬಿಹಾರಿಗಳಿಗೆ ಮೂರು ದಿನ ರಜೆ: ಡಿಕೆಶಿ ಘೋಷಣೆ

Bihar Election: ಬ್ಯಾಟರಾಯನಪುರದ ಕಾಫಿ ಬೋರ್ಡ್ ಲೇಔಟ್ ನಲ್ಲಿ ಬಿಹಾರ ಮೂಲದ ಬೆಂಗಳೂರು ನಿವಾಸಿಗಳ ಸಂಘದ ಸದಸ್ಯರನ್ನು ಉದ್ದೇಶಿಸಿ ಭಾನುವಾರ ಮಾತನಾಡಿದ ಡಿಕೆಶಿ, ನನಗೆ ದೊಡ್ಡ ಸ್ಥಾನ ಬೇಕು ಎಂದು ನೀವೆಲ್ಲರೂ ಹೇಳಿದ್ದೀರಿ. ನನಗೆ ಅದು ಮುಖ್ಯವಲ್ಲ. ಬಿಹಾರದಲ್ಲಿ ಮಹಾಘಟ ಬಂಧನ ಅಧಿಕಾರಕ್ಕೆ ತಂದರೆ ನನಗೆ ಎಲ್ಲಾ ಸ್ಥಾನವನ್ನು ನೀವು ಕೊಟ್ಟಂತೆ. ನಿಮ್ಮ ಒಂದೊಂದು ಮತವೂ ಮಹಾಘಟಬಂದನ್ ಅಧಿಕಾರಕ್ಕೆ ಬರಲು ಮುಖ್ಯವಾದುದು. ಈ ಮೊದಲಿನಂತೆ ನಿತೀಶ್ ಕುಮಾರ್ ಅವರ ಕೈಯಲ್ಲಿ ಬಿಹಾರವಿಲ್ಲ. ಅವರು ರಾಜಕೀಯದ ಕೊನೆಗಾಲದಲ್ಲಿದ್ದಾರೆ ಎಂದರು.

K-SET Exam: K-SET ಪರೀಕ್ಷೆಯ ವೇಳೆ ಮಹಿಳಾ ಅಭ್ಯರ್ಥಿಗಳ ಕಿವಿಯೋಲೆ, ಮೂಗುತಿ ಬಿಚ್ಚಿಸಿದ  KEA ಸಿಬ್ಬಂದಿ- ಭುಗಿಲೆದ್ದ ಆಕ್ರೋಶ

ಮಹಿಳಾ ಅಭ್ಯರ್ಥಿಗಳ ಕಿವಿಯೋಲೆ, ಮೂಗುತಿ ಬಿಚ್ಚಿಸಿದ KEA ಸಿಬ್ಬಂದಿ

K-SET Exam Row: ನಿನ್ನೆ ರಾಜ್ಯಾದ್ಯಂತ ನಡೆದ ಕೆ-ಸೆಟ್ ಪರೀಕ್ಷೆ ವೇಳೆಯೂ ಇಂತಹದ್ದೇ ಒಂದು ಎಡವಟ್ಟು ನಡೆದಿರುವುದು ವರದಿಯಾಗಿದೆ. ಈ ಪರೀಕ್ಷೆಯ ಸಂದರ್ಭದಲ್ಲಿ ಕೆಇಎ ಮತ್ತೊಂದು ಯಡವಟ್ಟು ಮಾಡಿದೆ. ಪರೀಕ್ಷೆಗೆ ಹಾಜರಾದಂತ ಮಹಿಳಾ ಅಭ್ಯರ್ಥಿಗಳ ಕಿವಿಯೋಲೆ, ಮೂಗುತಿಯನ್ನೇ ಸಿಬ್ಬಂದಿಗಳು ಬಿಚ್ಚಿಸಿರುವುದಾಗಿ ತಿಳಿದು ಬಂದಿದೆ. ಇದಕ್ಕೆ ಸಂಬಂಧಿಸಿದ ವಿಡಿಯೊಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದು, ಆಕ್ರೋಶ ಭುಗಿಲೆದ್ದಿದೆ.

Hassan Mews: 6 ಮಕ್ಕಳಿದ್ದರೂ ಅನಾಥಾಶ್ರಮದಲ್ಲಿ ಜೀವಬಿಟ್ಟ ವೃದ್ಧೆ; ಹೆಣಕ್ಕಾಗಿ ನಡೀತು ಹೊಡೆದಾಟ!

6 ಮಕ್ಕಳಿದ್ದರೂ ಅನಾಥಾಶ್ರಮದಲ್ಲಿ ಜೀವಬಿಟ್ಟ ವೃದ್ಧೆ

Elderly woman dies in orphanage: ತಾಯಿಯೇ ದೇವರು... ಆಕೆಗಿಂತ ಮಿಗಿಲಾದ ದೇವರು ಮತ್ತೊಂದಿಲ್ಲ ಅನ್ನೋ ಮಾತಿದೆ. ಆದರೆ ಇಲ್ಲಿ ಆರು ಜನ ಗಟ್ಟಿಮುಟ್ಟಾದ ಮಕ್ಕಳಿದ್ದರೂ ವೃದ್ಧ ತಾಯಿ ಅನಾಥಾಶ್ರಮದಲ್ಲೇ ಜೀವನ ಸಾಗಿಸಿ ಕೊನೆಗೆ ಅಲ್ಲೇ ಕಣ್ಮುಚ್ಚಿದ್ದಾಳೆ. ಬದುಕಿರುವಾಗ ತಾಯಿಯನ್ನು ವೃದ್ಧಾಶ್ರಮಕ್ಕೆ ತಳ್ಳಿ ತಮ್ಮ ಪಾಡಿಗೆ ಇದ್ದ ಮಕ್ಕಳು ಇದೀಗ ಆಕೆ ಸಾವನ್ನಪ್ಪಿದ್ದಾಳೆ ಎಂದು ತಿಳಿದ ಕೂಡಲೇ ಓಡಿ ಬಂದಿದ್ದು ಮಾತ್ರವಲ್ಲದೇ ಹೆಣಕ್ಕಾಗಿ ಭಾರೀ ಮಾರಾಮಾರಿಯನ್ನೇ ನಡೆಸಿದ್ದಾರೆ. ಇಷ್ಟೆಲ್ಲಾ ನಡೆದಿದ್ದು ಬೇರೆಲ್ಲೂ ಅಲ್ಲ ನಮ್ಮ ರಾಜ್ಯದ ಹಾಸನ ಜಿಲ್ಲೆಯಲ್ಲಿ.

Karnataka Weather: ಇಂದಿನ ಹವಾಮಾನ; ಕೋಲಾರ, ರಾಮನಗರ ಸೇರಿ ರಾಜ್ಯದ ಈ ಜಿಲ್ಲೆಗಳಲ್ಲಿ ಸಾಧಾರಣ ಮಳೆ ನಿರೀಕ್ಷೆ

ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಸಾಧಾರಣ ಮಳೆ ನಿರೀಕ್ಷೆ

ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳವರೆಗೆ: ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 29 ಡಿಗ್ರಿ ಸೆ. ಮತ್ತು 19 ಡಿಗ್ರಿ ಸೆ. ಇರುವ ಸಾಧ್ಯತೆ ಇದೆ.

Chikkaballapur News: ಖಾಲಿ ಹುದ್ದೆಗಳ ಶೀಘ್ರ ಭರ್ತಿಗೆ ಕ್ರಮವಹಿಸ ಬೇಕು : ಮುಖ್ಯಮಂತ್ರಿ ಬದಲಾದಲ್ಲಿ ದಲಿತರನ್ನು ಸಿ.ಎಂ.ಮಾಡಿ : ಶಿವಶಂಕರ್ ಒತ್ತಾಯ

ಖಾಲಿ ಹುದ್ದೆಗಳ ಶೀಘ್ರ ಭರ್ತಿಗೆ ಕ್ರಮವಹಿಸ ಬೇಕು

ದಲಿತರ ಕಾರಣಕ್ಕಾಗಿ ಅಧಿಕಾರಕ್ಕೆ ಬಂದಿರುವ ರಾಜ್ಯದ ಕಾಂಗ್ರೆಸ್ ಸರಕಾರ ದಲಿತರ ಏಳಿಗಾಗಿ ಇನ್ನಷ್ಟು ರಚನಾತ್ಮಕ ಕಾರ್ಯಕ್ರಮಗಳನ್ನು ಹಾಕಿಕೊಳ್ಳಬೇಕು. ದಲಿತ ದಮನಿತರ ಪರವಾಗಿ ಸಮರ್ಥವಾಗಿ ಕಾರ್ಯನಿರ್ವಹಿಸುತ್ತಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯ ಒಳಮೀಸಲಾತಿ ಜಾರಿ ದಲಿತರಲ್ಲಿ ಒಗ್ಗಟ್ಟು ಮೂಡಿಸುವ ಬದಲಿಗೆ ವೈಮನಸ್ಸು ಉಂಟು ಮಾಡಿದೆ.

Chikkaballapur News: ದೇಹ ಮತ್ತು ಮನಸ್ಸುಗಳ ಸಂಲಗ್ನವೇ ಯೋಗ: ಜೀವನದಲ್ಲಿ ಏನೇ ಬಿಟ್ಟರೂ ಯೋಗ ಬಿಡಬೇಡಿ : ಡಾ.ಲೋಕನಾಥ್

ಜೀವನದಲ್ಲಿ ಏನೇ ಬಿಟ್ಟರೂ ಯೋಗ ಬಿಡಬೇಡಿ

ದೇಹ ಮತ್ತು ಮನಸ್ಸುಗಳ ಸಂಲಗ್ನವೇ ಯೋಗ, ಜೀವನದಲ್ಲಿ ಏನೇ ಬಿಟ್ಟರೂ ಯೋಗ ಬಿಡ ಬಾರದು. ಇದರಿಂದಾಗಿ ಜ್ಞಾಪಕಶಕ್ತಿ ಹೆಚ್ಚಾಗಲಿದ್ದು ಬೆನ್ನುನೋವು ಕಡಿಮೆ ಮಾಡಿಕೊಂಡು ಸ್ಥೂಲಕಾಯದ ಸಮಸ್ಯೆ ನಿವಾರಣೆ ಆಗಲಿದೆ. ಅಮೆರಿಕಾದಲ್ಲಿ ಪ್ರತಿ ಹತ್ತು ಮನೆಗಳಿಗೆ ಒಂದು ಯೋಗ ಕೇಂದ್ರವಿದೆ.ಆದರೆ ಭಾರತದಲ್ಲಿ ಇದರ ಕೊರತೆಯಿದೆ

Gudibande News: ಪ್ರತೀ ತಿಂಗಳು ಬಗರ್ ಹುಕುಂ ಸಮಿತಿ ಸಭೆ ನಡೆಸಲು ಭೂ ಹಕ್ಕುದಾರರ ವೇದಿಕೆ ಆಗ್ರಹ

ಪ್ರತೀ ತಿಂಗಳು ಬಗರ್ ಹುಕುಂ ಸಮಿತಿ ಸಭೆ ನಡೆಸಲು ವೇದಿಕೆ ಆಗ್ರಹ

ತಾಲೂಕಿನಲ್ಲಿರುವ ಅನೇಕ ಭೂ ರಹಿತ ರೈತರು ಸರ್ಕಾರದ ಬಗರ್ ಹುಕುಂ ಯೋಜನೆಯಡಿ ಸರ್ಕಾರಿ ಜಮೀನುಗಳಲ್ಲಿ ಉಳುಮೆ ಮಾಡಿಕೊಂಡು ಜೀವನ ಸಾಗಿಸಿ ಕೊಳ್ಳುತ್ತಿದ್ದಾರೆ. ತಮಗೆ ಜಮೀನು ಮಂಜೂರು ಮಾಡಿ ಸಾಗುವಳಿ ಚೀಟಿ ನೀಡಬೇಕೆಂದು ಅರ್ಜಿ ಸಲ್ಲಿಸಿದ್ದಾರೆ. ಈ ಸಂಬಂಧ ಫಾರಂ.೫೦, ೫೩ ಹಾಗೂ ೫೭ ರಲ್ಲಿ ಅರ್ಜಿಗಳನ್ನು ಸಲ್ಲಿಸಿದ್ದಾರೆ.

Dr. M.C. Sudhakar: ಮಾಜಿ ಶಾಸಕ ಜೆಕೆ ಕೃಷ್ಣಾರೆಡ್ಡಿ ವಿರುದ್ಧ ಗುಡುಗಿದ ಸಚಿವ ಡಾ.ಎಂ.ಸಿ.ಸುಧಾಕ‌ರ್

ವಿರೋಧಿಗಳಿಗೆ ವಿದ್ಯಾಭ್ಯಾಸದ ಕೊರತೆಯಿಂದ ಇಲ್ಲಸಲ್ಲದ ಮಾತನಾಡುತ್ತಾರೆ

ಭಕ್ತರಹಳ್ಳಿ ಅರಸನ ಕೆರೆಯು ಕೇವಲ ಅವರೊಬ್ಬರಿಂದಲೇ ಆಗಲಿಲ್ಲ ಬದಲಾಗಿ ಎಲ್ಲರ ಸಹಕಾರ ದಿಂದ ಹಿಂದಿನ ಹಲವು ರಾಜಕೀಯ ನೇತಾರರ ಪ್ರತಿಫಲ ವಾಗಿ ಭಕ್ತರಹಳ್ಳಿ ಅರಸನಕೆರೆಯ ನೀರು ನಗರ ಭಾಗಕ್ಕೆ ಹರಿಯುವಂತಾಗಿದೆಯೆಂದರು.ನಾಗರೋತ್ಥಾನದ ಹಣದಲ್ಲಿ ಈ ಕಾಮಗಾರಿಗಳನ್ನು ಮಾಡಲಾಗುತ್ತಿದ್ದು ಅವರು ಯಾವುದೇ ಹೆಚ್ಚುವರಿ ಹಣವನ್ನು ಒದಗಿಸಿಲ್ಲವೆಂದರು

Shidlaghatta News: 'ನಮ್ಮ ಬದುಕು ಸಮಾಜಕ್ಕೆ ಮಾದರಿಯಾಗಬೇಕು: ಪುಟ್ಟು ಆಂಜಿನಪ್ಪ

'ನಮ್ಮ ಬದುಕು ಸಮಾಜಕ್ಕೆ ಮಾದರಿಯಾಗಬೇಕು: ಪುಟ್ಟು ಆಂಜಿನಪ್ಪ

ಕನ್ನಡಿಗ ರಾದ ನಾವು ನುಡಿ ಕನ್ನಡ, ನಡೆ ಕನ್ನಡ, ಉಸಿರು ಕನ್ನಡ ಎಂದು ಜೀವಿಸುತ್ತಿರುವುದು ಎಲ್ಲರಿಗೂ ಗೊತ್ತಿರುವ ವಿಷಯ. ಇದೇ ವೇಳೆ ಕನ್ನಡದ ಬಗ್ಗೆ, ಕನ್ನಡಿಗರ ಬಗ್ಗೆ ಹೆಮ್ಮೆ ಪಡುವ ವಿಷಯಗಳು ಆಗಾಗ ಕೇಳಿಬರುತ್ತಿರುತ್ತವೆ. ನಾಮಫಲಕಗಳಲ್ಲಿ ಶೇಕಡ.೫೦ ಕ್ಕಿಂತ ಹೆಚ್ಚು ಕನ್ನಡ ಬಳಸಬೇಕು

Chikkaballapur News: ಮೂಲವ್ಯಾಧಿ ಬಗ್ಗೆ ಜಾಗೃತೆಯಿರಲಿ ; ನಕಲಿ ವೈದ್ಯರ ಬಳಿ ಚಿಕಿತ್ಸೆ ಖಂಡಿತ ಬೇಡ : ಡಾ.ಮಾದೇಶ್

ಮೂಲವ್ಯಾಧಿ ಬಗ್ಗೆ ಜಾಗೃತೆಯಿರಲಿ

ಕೆಲವರಿಗೆ ಮೂಲವ್ಯಾಧಿ ಸಣ್ಣ ಸಮಸ್ಯೆ ಎಂದು ಅನ್ನಿಸಿದರೂ ಜನತೆ ಭಾವಿಸಿದಷ್ಟು ಸರಳವಾಗಿ ಇರುವು ದಿಲ್ಲ. ಸಮಸ್ಯೆ ಕಾಣಿಸಿಕೊಂಡ ಕೂಡಲೇ ತಜ್ಞ ವೈದ್ಯರನ್ನು ಕಾಣುವುದು ಮುಖ್ಯ.ಇದನ್ನು ಬಿಟ್ಟು ಉಪೇಕ್ಷೆ ಮಾಡುವುದಾಗಲಿ, ನಕಲಿ ವೈದ್ಯರನ್ನು ಭೇಟಿ ಮಾಡುವುದಾಗಲಿ ಮಾಡಬಾರದು. ಸಮಸ್ಯೆ ಹೇಳಿಕೊಳ್ಳದೆ ಹಾಗೆ ಬಿಟ್ಟರೆ ಅದು ಕ್ಯಾನ್ಸರ್ ಆಗಿ ಪರಿವರ್ತನೆ ಆಗುವ ಅಪಾಯವಿರುತ್ತದೆ

Chikkanayakanahalli News: ಪದವೀಧರರ ಧ್ವನಿಯಾಗಿ ಮೇಲ್ಮನೆಯಲ್ಲಿರುವೆ: ಬಿಜೆಪಿ ಮುಖಂಡ ವಸಂತಕುಮಾರ್

ಪದವೀಧರರ ಧ್ವನಿಯಾಗಿ ಮೇಲ್ಮನೆಯಲ್ಲಿರುವೆ: ಬಿಜೆಪಿ ಮುಖಂಡ ವಸಂತಕುಮಾರ್

Karnataka Politics: ಕಳೆದ 20 ವರ್ಷಗಳಿಂದ ಬಿಜೆಪಿ ಪಕ್ಷದಲ್ಲಿ ನಿಷ್ಠಾವಂತ ಕಾರ್ಯಕರ್ತನಾಗಿ ಪಕ್ಷದ ಏಳಿಗೆಗಾಗಿ ದುಡಿದಿರುವ ನನ್ನ ನಿಷ್ಠೆಯನ್ನು ಪರಿಗಣಿಸಿ, ಆಗ್ನೇಯ ಪದವೀಧರ ಕ್ಷೇತ್ರದ ವ್ಯಾಪ್ತಿಯಲ್ಲಿ ಪಕ್ಷ ಸಂಘಟನೆಯಲ್ಲಿ ತೋಡಗಿಕೊಳ್ಳುವಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರಿಂದ ಸೂಚನೆ ಬಂದಿದೆ ಎಂದು ಹಿರಿಯ ವಕೀಲ ಹಾಗೂ ಬಿಜೆಪಿ ಮುಖಂಡ ವಸಂತಕುಮಾರ್ ತಿಳಿಸಿದ್ದಾರೆ.

Sri Madhusudan sai: ದೇಶದಲ್ಲಿ 6 ಸಾವಿರ ಸಾಯಿ ಸ್ವಾಸ್ಥ್ಯ ವೆಲ್‌ನೆಸ್‌ ಕೇಂದ್ರ ಆರಂಭಿಸುವ ಗುರಿ: ಶ್ರೀ ಮಧುಸೂದನ ಸಾಯಿ

ದೇಶದಲ್ಲಿ 6 ಸಾವಿರ ಸಾಯಿ ಸ್ವಾಸ್ಥ್ಯ ವೆಲ್‌ನೆಸ್‌ ಕೇಂದ್ರ ಆರಂಭ

Sathya Sai Grama: ದೇಶದಲ್ಲಿ 6 ಸಾವಿರ ಸಾಯಿ ಸ್ವಾಸ್ಥ್ಯ ವೆಲ್‌ನೆಸ್‌ ಕೇಂದ್ರಗಳನ್ನು ಆರಂಭಿಸುವ ಗುರಿ ಇರಿಸಿಕೊಳ್ಳಲಾಗಿದೆ. 2025ರ ನವೆಂಬರ್ 23 ರೊಳಗೆ ನೂರು ಕೇಂದ್ರಗಳನ್ನು ಪ್ರಾರಂಭಿಸಲಾಗುತ್ತದೆ. ಈ ಗುರಿಯನ್ನು ತಲುಪುವ ಸಮೀಪಕ್ಕೆ ಬಂದಿದ್ದೇವೆ. ನೇಮಕಾತಿ ಪ್ರಕ್ರಿಯೆಯೂ ನಡೆಯುತ್ತಿದೆ. ನವೆಂಬರ್ 23 ರಿಂದ ಈ 100 ಕೇಂದ್ರಗಳು ಸಂಪೂರ್ಣವಾಗಿ ಕಾರ್ಯವನ್ನು ಆರಂಭಿಸುವುದರೊಂದಿಗೆ ರಾಷ್ಟ್ರಕ್ಕೆ ಸಮರ್ಪಿಸಲಾಗುತ್ತದೆ ಎಂದು ಸದ್ಗುರು ಶ್ರೀ ಮಧುಸೂದನ ಸಾಯಿ ತಿಳಿಸಿದ್ದಾರೆ.

Bagalkot News: ಪಿಕೆಪಿಎಸ್‌ ಚುನಾವಣೆ ವೇಳೆ ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಮಾರಾಮಾರಿ

ಪಿಕೆಪಿಎಸ್ ಚುನಾವಣೆ ವೇಳೆ ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಮಾರಾಮಾರಿ

PKPS election: ಅಕ್ಟೋಬರ್ 29ರಂದು ರನ್ನಬೆಳಗಲಿ ಗ್ರಾಮದಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ‌-ಉಪಾಧ್ಯಕ್ಷ ಚುನಾವಣೆ ವೇಳೆ ಗಲಭೆ ನಡೆದಿದೆ. ಕಾರ್ಯಕರ್ತರು ಕೈ ಕೈ ಮಿಲಾಯಿಸಿದ್ದಲ್ಲದೆ ಕೋಲಿನಿಂದ ಬಡಿದಾಡಿಕೊಂಡಿದ್ದಾರೆ. ಪರಿಸ್ಥಿತಿ ಪರಿಸ್ಥಿತಿ ನಿಯಂತ್ರಿಸಲು ಲಘು ಲಾಠಿ ಪ್ರಹಾರ ಮಾಡಿದ್ದಾರೆ.

Karnataka Weather: ಹವಾಮಾನ ವರದಿ; ನಾಳೆ ಮೈಸೂರು, ಮಂಡ್ಯ ಸೇರಿ ಈ ಜಿಲ್ಲೆಗಳಲ್ಲಿ ಹಗುರ ಮಳೆ ಸಾಧ್ಯತೆ

ನಾಳೆ ಮೈಸೂರು, ಮಂಡ್ಯ ಸೇರಿ ಈ ಜಿಲ್ಲೆಗಳಲ್ಲಿ ಹಗುರ ಮಳೆ ಸಾಧ್ಯತೆ

ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳವರೆಗೆ: ಭಾಗಶಃ ಮೋಡ ಕವಿದ ವಾತಾವರಣ (Weather Report) ಇರಲಿದ್ದು, ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 29 ಡಿಗ್ರಿ ಸೆ. ಮತ್ತು 19 ಡಿಗ್ರಿ ಸೆ. ಇರುವ ಸಾಧ್ಯತೆ ಇದೆ.

Loading...