ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಕರ್ನಾಟಕ

SC Internal Reservation Bill: ಎಸ್‌ಸಿ ಒಳಮೀಸಲಾತಿ ಮಸೂದೆಗೆ ಅಂಕಿತ ಹಾಕದೆ ವಾಪಸ್ ಕಳುಹಿಸಿದ ಗವರ್ನರ್‌

ಎಸ್‌ಸಿ ಒಳಮೀಸಲಾತಿ ಮಸೂದೆಯನ್ನು ವಾಪಸ್ ಕಳುಹಿಸಿದ ಗವರ್ನರ್‌

ಬೆಳಗಾವಿಯಲ್ಲಿ ನಡೆದ ಚಳಿಗಾಲದ ಅಧಿವೇಶನದಲ್ಲಿ ಉಭಯ ಸದನಗಳಲ್ಲಿ ರಾಜ್ಯ ಸರ್ಕಾರವು ಎಸ್‌ಸಿ ಒಳಮೀಸಲಾತಿ ಮಸೂದೆ (ಕರ್ನಾಟಕ ಅನುಸೂಚಿತ ಜಾತಿಗಳ (ಉಪವರ್ಗೀಕರಣ) ವಿಧೇಯಕ 2025) ಮಂಡಿಸಿ ಅಂಗೀಕಾರ ಪಡೆದಿತ್ತು. ಆದರೆ, ಇದೀಗ ಮಸೂದೆಗೆ ರಾಜ್ಯಪಾಲರು ಅಂಕಿತ ಹಾಕದೇ ವಾಪಸ್‌ ಕಳುಹಿಸಿದ್ದಾರೆ.

ಕೃಷ್ಣಾ ಮೇಲ್ದಂಡೆ ಯೋಜನೆ; ಭೂಮಿ ಮುಳುಗಡೆ ಸಂತ್ರಸ್ತ ರೈತರಿಗೆ ಎಕರೆಗೆ 35-40 ಲಕ್ಷ ಪರಿಹಾರ ಎಂದ ಡಿಸಿಎಂ

ಯುಕೆಪಿ ಭೂಮಿ ಮುಳುಗಡೆ ಸಂತ್ರಸ್ತ ರೈತರಿಗೆ ಎಕರೆಗೆ 35-40 ಲಕ್ಷ ಪರಿಹಾರ

ವಿಜಯಪುರ ಭಾಗದ ನಮ್ಮ ಶಾಸಕರ ಒತ್ತಡದ ಮೇರೆಗೆ ನಾನು ಹಾಗೂ ಮುಖ್ಯಮಂತ್ರಿಗಳು ಸಚಿವ ಸಂಪುಟದಲ್ಲಿ ಚರ್ಚೆ ಮಾಡಿ, ಯುಕೆಪಿ ಯೋಜನೆ ಮುಳುಗಡೆ ಸಂತ್ರಸ್ತರಿಗೆ ಪರಿಹಾರ ಘೋಷಿಸಿದ್ದೇವೆ. ಯುಕೆಪಿ ಯೋಜನೆಯಿಂದ 1,33,867 ಎಕರೆ ಮುಳುಗಡೆಯಾಗಲಿದ್ದು, ನಮ್ಮ ಸರ್ಕಾರ ಪ್ರತಿ ಎಕರೆಗೆ 30-40 ಲಕ್ಷ ಪರಿಹಾರ ನೀಡಲು ತೀರ್ಮಾನಿಸಲಾಗಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ.

Bomb Threat: ಬೆಂಗಳೂರಿನ ಕೇಂದ್ರೀಯ ವಿದ್ಯಾಲಯಕ್ಕೆ ಬಾಂಬ್‌ ಬೆದರಿಕೆ; ಸ್ಥಳದಲ್ಲಿ ಆತಂಕ

ಬೆಂಗಳೂರಿನ ಕೇಂದ್ರೀಯ ವಿದ್ಯಾಲಯಕ್ಕೆ ಬಾಂಬ್‌ ಬೆದರಿಕೆ; ಪೊಲೀಸರಿಂದ ತಪಾಸಣೆ

ಬೆಂಗಳೂರಿನ ಹೆಬ್ಬಾಳದ ಕೇಂದ್ರಿಯ ವಿದ್ಯಾಲಯಕ್ಕೆ ಬಾಂಬ್ ಬೆದರಿಕೆ ಇ-ಮೇಲ್‌ ಬಂದಿದೆ. ಈ ಬಗ್ಗೆ​ಪ್ರಾಂಶುಪಾಲರು ಬೆಂಗಳೂರಿನ ಸದಾಶಿವನಗರ ಠಾಣೆಗೆ ದೂರು ನೀಡಿದ್ದಾರೆ. ಸ್ಥಳಕ್ಕೆ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಇತ್ತೀಚೆಗೆ ರಾಜ್ಯದ ಹಲವು ಸರ್ಕಾರಿ ಕಚೇರಿಗಳು, ಕೋರ್ಟ್‌ಗಳಿಗೂ ಬಾಂಬ್‌ ಬೆದರಿಕೆ ಸಂದೇಶಗಳು ಬಂದಿದ್ದವು.

Sainik School Recruitment: ವಿಜಯಪುರ ಸೈನಿಕ ಶಾಲೆಯಲ್ಲಿದೆ ಉದ್ಯೋಗಾವಕಾಶ; ಅರ್ಜಿ ಸಲ್ಲಿಕೆಯ ಮಾಹಿತಿ ಇಲ್ಲಿದೆ

ಸೈನಿಕ ವಸತಿ ಸ್ಕೂಲ್‌ನಲ್ಲಿದೆ ಉದ್ಯೋಗಾವಕಾಶ

ನೀವು ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೊಮಾ ಹಾಗೂ 10ನೇ ತರಗತಿ ಉತ್ತೀರ್ಣರಾಗಿದ್ದು, ಆಕರ್ಷಕ ಸಂಬಳದ ಉದ್ಯೋಗಾವಕಾಶಕ್ಕಾಗಿ ಹುಡುಕಾಡುತ್ತಿದ್ದರೆ ಇಲ್ಲಿದೆ ಸುವರ್ಣವಾಕಾಶ. ವಿಜಯಪುರ ಸೈನಿಕ ವಸತಿ ಶಾಲೆಯಲ್ಲಿನ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಸಂದರ್ಶನ, ಸ್ಕ್ರೀನಿಂಗ್ ಟೆಸ್ಟ್‌ ಮೂಲಕ ಈ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಜನವರಿ 16.

Ballari Clash Case: ಬಳ್ಳಾರಿ ಗಲಭೆ ಪ್ರಕರಣದ 25 ಆರೋಪಿಗಳಿಗೆ ಜಾಮೀನು ನೀಡಿದ ಕೋರ್ಟ್‌

ಬಳ್ಳಾರಿ ಗಲಭೆ ಪ್ರಕರಣದ 25 ಆರೋಪಿಗಳಿಗೆ ಜಾಮೀನು ನೀಡಿದ ಕೋರ್ಟ್‌

ಶಾಸಕ ಜನಾರ್ದನ ರೆಡ್ಡಿ ಮನೆ ಮುಂದೆ ವಾಲ್ಮೀಕಿ ಪುತ್ಥಳಿ ಉದ್ಘಾಟನಾ ಬ್ಯಾನರ್ ಕಟ್ಟುವ ವಿಚಾರವಾಗಿ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ ಆಗಿತ್ತು. ಈ ವೇಳೆ ಖಾಸಗಿ ಗನ್ ಮ್ಯಾನ್ ಹಾರಿಸಿದ ಗುಂಡು ತಗುಲಿ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್‌ ಮೃತಪಟ್ಟಿದ್ದ ಎಂಬ ಆರೋಪ ಕೇಳಿಬಂದಿದೆ. ಈ ಪ್ರಕರಣದಲ್ಲಿ ಬಂಧನವಾಗಿದ್ದ 25 ಆರೋಪಿಗಳಿಗೆ ಜಾಮೀನು ಮಂಜೂರು ಆಗಿದೆ.

ನಮ್ಮಿಬ್ಬರ ಆಡಳಿತಾನುಭವದ ಬಗ್ಗೆ ನೀವು ಹೇಳೋದಲ್ಲ, ಜನರನ್ನೇ ಕೇಳಿ: ಡಿಕೆಶಿಗೆ ಎಚ್‌.ಡಿ.ಕುಮಾರಸ್ವಾಮಿ ತಿರುಗೇಟು

ಆಡಳಿತಾನುಭವದ ಬಗ್ಗೆ ಜನರನ್ನೇ ಕೇಳಿ: ಡಿಕೆಶಿಗೆ ಎಚ್‌ಡಿಕೆ ತಿರುಗೇಟು

ಕೊಳ್ಳೆ, ಸುಲಿಗೆ, ಬೇಲಿ, ಚದರಡಿ, ಕಮಿಷನ್, ಫಿಕ್ಸಿಂಗ್, ಒದ್ದು ಕಿತ್ತುಕೊಳ್ಳುವುದು ನನ್ನ ಎಕ್ಸ್ ಪೀರಿಯನ್ಸ್ ಅಲ್ಲಾ ಡಿಕೆಶಿರವರೇ.., ಏನೋ.. ಜನರ ಆಶೀರ್ವಾದ ಮತ್ತು ದೇವರ ದಯೆಯಿಂದ ಸಿಕ್ಕಿದ ಅವಕಾಶದಲ್ಲಿ ಜನರಿಗೆ ಕೈಲಾದ ಸಹಾಯ ಮಾಡುವ ಹುಲು ರಾಜಕಾರಣಿ ನಾನಷ್ಟೇ ಎಂದು ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಮನರೇಗಾ ಯೋಜನೆ ಬಗ್ಗೆ ಪ್ರಲ್ಹಾದ್‌ ಜೋಶಿ ಸಾರ್ವಜನಿಕ ಚರ್ಚೆಗೆ ಬರಲಿ: ಡಿ.ಕೆ. ಶಿವಕುಮಾರ್ ಸವಾಲು

ಮನರೇಗಾ ಬಗ್ಗೆ ಪ್ರಲ್ಹಾದ್‌ ಜೋಶಿ ಸಾರ್ವಜನಿಕ ಚರ್ಚೆಗೆ ಬರಲಿ: ಡಿಕೆಶಿ

DK Shivakumar: ಯುಪಿಎ ಸರ್ಕಾರದ ಅವಧಿಯ ಮನರೇಗಾ ಯೋಜನೆಯಲ್ಲಿ 11 ಲಕ್ಷ ಕೋಟಿ ಅವ್ಯವಹಾರ ನಡೆದಿದೆ ಎಂಬ ಪ್ರಲ್ಹಾದ್‌ ಜೋಶಿ ಅವರ ಹೇಳಿಕೆಗೆ ಡಿಸಿಎಂ ಡಿ.ಕೆ. ಶಿವಕುಮಾರ್‌ ಪ್ರತಿಕ್ರಿಯಿಸಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷರು, ವಿರೋಧ ಪಕ್ಷದ ನಾಯಕರು ಅಥವಾ ಕೇಂದ್ರ ಸಚಿವರು, ಈ ಮೂವರಲ್ಲಿ ಯಾರಾದರೂ ಒಬ್ಬರು ಮಾಧ್ಯಮ ವೇದಿಕೆ ಮೇಲೆ ಚರ್ಚೆಗೆ ಬರಲಿ. ನಾನು ಈ ವಿಚಾರವಾಗಿ ಚರ್ಚೆ ಮಾಡಲು ಸಿದ್ಧನಿದ್ದೇನೆ. ಅದು ಎಷ್ಟೇ ಕೋಟಿ ಅವ್ಯವಹಾರವಾದರೂ ತಾಕತ್ತಿದ್ದರೆ ತನಿಖೆ ಮಾಡಿಸಲಿ ಎಂದು ಸವಾಲು ಹಾಕಿದ್ದಾರೆ.

ಬೆಂಗಳೂರಿನಲ್ಲಿ ಲೆಕ್ಚರರ್‌ ಕಿರುಕುಳಕ್ಕೆ ಬೇಸತ್ತು ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ

ಲೆಕ್ಚರರ್‌ ಕಿರುಕುಳಕ್ಕೆ ಬೇಸತ್ತು ಡೆಂಟಲ್‌ ವಿದ್ಯಾರ್ಥಿನಿ ಆತ್ಮಹತ್ಯೆ

ಬೆಂಗಳೂರಿನ ಬೊಮ್ಮನಹಳ್ಳಿಯ ಆಕ್ಸ್‌ಫರ್ಡ್ ಡೆಂಟಲ್ ಕಾಲೇಜಿನ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಕಾಲೇಜಿನಲ್ಲಿ ಲೆಕ್ಚರರ್‌ ಕಿರುಕುಳದಿಂದ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ ಶರಣಾಗಿದ್ದಾಳೆ ಎಂಬ ಆರೋಪ ಕೇಳಿಬಂದಿದೆ. ಹೀಗಾಗಿ ಲೆಕ್ಚರರ್‌ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ವಿದ್ಯಾರ್ಥಿನಿಯ ಪೋಷಕರು ಹಾಗೂ ಕಾಲೇಜು ವಿದ್ಯಾರ್ಥಿಗಳು ಒತ್ತಾಯ ಮಾಡಿದ್ದಾರೆ.

ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಗೆ ಆಯೋಗ ಸಜ್ಜಾಗುತ್ತಿರುವುದು ಕಳವಳಕಾರಿ: ಡಾ.ಆನಂದ್ ಕುಮಾರ್

ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಗೆ ಆಯೋಗ ಸಜ್ಜು: ಕಳವಳಕಾರಿ

ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಚುನಾವಣಾ ಅಕ್ರಮಗಳ ಬಗ್ಗೆ ಧ್ವನಿ ಎತ್ತಿದ್ದು, ಈ ವರ್ಷದ ಆಗಸ್ಟ್'ನಲ್ಲಿ. ರಾಹುಲ್ ಗಾಂಧಿ ಅವರು ಮಾಡಿರುವ ಮತಗಳತನದ ಗಂಭೀರ ಆರೋಪಗಳ ಬಗ್ಗೆ ಇದುವರೆಗೆ ಆಯೋಗ ಸ್ಪಷ್ಟನೆ ನೀಡಿಲ್ಲ. ಇದರ ನಡುವೆ ಮತದಾರರನ್ನು ಜಾಗೃತಿಗೊಳಿಸುವ ಸ್ವೀಪ್ ಚಟುವಟಿಕೆಯ ಅಂಕಿ ಅಂಶಗಳನ್ನು ಮುಂದಿಟ್ಟುಕೊಂಡು ರಾಜ್ಯದಲ್ಲಿ ವಿಪಕ್ಷಗಳು ಜನರನ್ನು ದಾರಿ ತಪ್ಪಿಸುತ್ತಿವೆ

ರಾಜ್ಯಮಟ್ಟದ ಬ್ರಾಹ್ಮಣ ವಧು-ವರಾನ್ವೇಷಣಾ ಸಮಾವೇಶ ಹಾಗೂ ಶ್ರೀ ಶ್ರೀನಿವಾಸ ಕಲ್ಯಾಣೋತ್ಸವ

ವಧು-ವರಾನ್ವೇಷಣಾ ಸಮಾವೇಶ ಹಾಗೂ ಶ್ರೀ ಶ್ರೀನಿವಾಸ ಕಲ್ಯಾಣೋತ್ಸವ

ಬ್ರಾಹ್ಮಣ ವಿವಿಧ ಸಂಘಟನೆಗಳು, ಮೈಸೂರು ಮಂಗಳಸೂತ್ರ ಫೌಂಡೇಶನ್ ಸಹಯೋಗದಲ್ಲಿ ರಾಜ್ಯಮಟ್ಟದ ಬೃಹತ್ ಬ್ರಾಹ್ಮಣ ವಧು- ವರಾನ್ವೇಷಣ ಸಮಾವೇಶ ಹಾಗೂ ಶೀಘ್ರದಲ್ಲಿ ಕಲ್ಯಾಣಕ್ಕಾಗಿ ಶ್ರೀಶ್ರೀನಿವಾಸ ಕಲ್ಯಾಣೋತ್ಸವವನ್ನು ಕುಮಾರ ಪಾರ್ಕ್ ನ ಬಡಗನಾಡು ಸಂಘದ ಕನ್ವೇಷನ್ ಹಾಲ್ ನಲ್ಲಿ ಜ.10 ಹಾಗೂ 11 ರಂದು ನಡೆಯಲಿದೆ.

Viral video: ರಾಕ್ಷಸಿಯಂತೆ ವರ್ತಿಸಿದ ಬಿಜೆಪಿ ಕಾರ್ಯಕರ್ತೆಯ ಇನ್ನೊಂದು ವಿಡಿಯೊ ಬಯಲು

ರಾಕ್ಷಸಿಯಂತೆ ವರ್ತಿಸಿದ ಬಿಜೆಪಿ ಕಾರ್ಯಕರ್ತೆಯ ಇನ್ನೊಂದು ವಿಡಿಯೊ ಬಯಲು

ಸುಜಾತಾ ಹಂಡಿ ವ್ಯಕ್ತಿಯೊಬ್ಬರ ಮೇಲೆ ಮೃಗೀಯ ವರ್ತನೆ ತೋರಿದ್ದ 3 ವರ್ಷಗಳ ಹಳೆಯ ವಿಡಿಯೋ ಈಗ ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿದೆ. ವಿಡಿಯೋದಲ್ಲಿ ಈಕೆ ರಾಕ್ಷಸಿಯಂತೆ ವರ್ತಿಸುತ್ತಿರುವುದು ಕಂಡುಬಂದಿದೆ. ಯುವಕನೊಬ್ಬನನ್ನು ರೂಮಿನಲ್ಲಿ ಕೂಡಿ ಹಾಕಿ ಸುಜಾತ ಹಂಡಿ ಬೆಲ್ಟ್ ಹಿಡಿದು ಆತನ ಮೇಲೆ ಹಿಗ್ಗಾಮುಗ್ಗ ಹಲ್ಲೆ ಮಾಡಿದ್ದಾಳೆ.

Karnataka Weather: 15 ಡಿಗ್ರಿಗೆ ಇಳಿದ ಬೆಂಗಳೂರು ತಾಪಮಾನ, 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

15 ಡಿಗ್ರಿಗೆ ಇಳಿದ ಬೆಂಗಳೂರು ತಾಪಮಾನ, 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ರಾಜಧಾನಿ ಬೆಂಗಳೂರಿನಲ್ಲಿ ಚಳಿಯ ತೀವ್ರತೆ ಹೆಚ್ಚಾಗಿದ್ದು, ಬೆಳಗಿನ ಜಾವ ಮಂಜು ಮುಸುಕಿದ ವಾತಾವರಣ ಕಂಡುಬರುತ್ತಿದೆ. ಇಂದು ನಗರದ ಕನಿಷ್ಠ ತಾಪಮಾನ 15 ಡಿಗ್ರಿ ಸೆಲ್ಸಿಯಸ್ ಹಾಗೂ ಗರಿಷ್ಠ 26 ಡಿಗ್ರಿ ಸೆಲ್ಸಿಯಸ್ ಇರಲಿದೆ. ರಾಜ್ಯದ 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಸೂಚಿಸಲಾಗಿದೆ. ಹವಾಮಾನ ಇಲಾಖೆ ನೀಡಿರುವ ಮುನ್ಸೂಚನೆಯಂತೆ ಇನ್ನೆರಡು ದಿನ ರಾಜ್ಯದಲ್ಲಿ ಲಘು ಮಳೆಯಾಗುವ ಸಾಧ್ಯತೆಯಿದೆ.

19 ವಿಫಲ ಶಸ್ತ್ರಚಿಕಿತ್ಸೆಗಳ ನಂತರ, 31 ವರ್ಷದ ವ್ಯಕ್ತಿಗೆ ಹೊಸ ಜೀವನ

19 ವಿಫಲ ಶಸ್ತ್ರಚಿಕಿತ್ಸೆಗಳ ನಂತರ, 31 ವರ್ಷದ ವ್ಯಕ್ತಿಗೆ ಹೊಸ ಜೀವನ

ಅಂಗರಚನಾ ವಿರೂಪ ಮತ್ತು ಪುನರಾವರ್ತಿತ ಶಸ್ತ್ರಚಿಕಿತ್ಸಾ ವೈಫಲ್ಯಗಳನ್ನು ಗಂಭೀರವಾಗಿ ಪರಿಗಣಿ ಸಿದ ಫೋರ್ಟಿಸ್‌ನ ಮೂತ್ರಶಾಸ್ತ್ರಜ್ಞರ ತಂಡವು, ಇಲಿಯಲ್ ನಾಳಗಳ ಮೂಲಕ ಶಾಶ್ವತ ಮೂತ್ರ ವಿಸರ್ಜನೆಗೆ ಅವಕಾಶ ಮಾಡಿಕೊಡುವ ವಿಶೇಷ ಹಾಗೂ ಸಂಕೀರ್ಣಮಯವಾದ ಶಸ್ತ್ರ ಚಿಕಿತ್ಸೆಯನ್ನು ಯಶಸ್ವಿಯಾಗಿ ಕಾರ್ಯಗತಗೊಳಿಸಿತು.

Boiler Blast: ಬೈಲಹೊಂಗಲ ಸಕ್ಕರೆ ಫ್ಯಾಕ್ಟರಿಯಲ್ಲಿ ಬಾಯ್ಲರ್‌ ಸ್ಫೋಟ: ಮೃತರ ಸಂಖ್ಯೆ 7ಕ್ಕೆ ಏರಿಕೆ

ಬೈಲಹೊಂಗಲ ಫ್ಯಾಕ್ಟರಿಯಲ್ಲಿ ಬಾಯ್ಲರ್‌ ಸ್ಫೋಟ: ಮೃತರ ಸಂಖ್ಯೆ 7ಕ್ಕೆ ಏರಿಕೆ

ಕಾರ್ಖಾನೆ ವಾಲ್ ದುರಸ್ತಿ ಮಾಡುವಾಗ ವಾಲ್ ಸಿಡಿದು ಕುದಿಯುವ ಕಬ್ಬಿನ ಹಾಲು ಮೈಮೇಲೆ ಬಿದ್ದು 8 ಜನ ಕಾರ್ಮಿಕರು ಗಂಭೀರ ಗಾಯಗೊಂಡಿದ್ದರು. ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಚಿಕಿತ್ಸೆ ಫಲಕಾರಿಯಾಗದೇ ಇದುವರೆಗೆ 7 ಮಂದಿ ಮೃತಪಟ್ಟಿದ್ದಾರೆ. ಒಬ್ಬನನ್ನು ಹೊರತುಪಡಿಸಿ ಯಾರಿಗೂ ಪರಿಹಾರ ದೊರೆತಿಲ್ಲ, ಪೊಲೀಸರೂ ಕಠಿಣ ಕ್ರಮ ಕೈಗೊಂಡಿಲ್ಲ.

School Bag: ಅತಿ ಭಾರದ ಶಾಲಾ ಬ್ಯಾಗ್‌ ಹೊತ್ತು ವಿದ್ಯಾರ್ಥಿಯ ಕೈ ಮುರಿತ!

ಅತಿ ಭಾರದ ಶಾಲಾ ಬ್ಯಾಗ್‌ ಹೊತ್ತು ವಿದ್ಯಾರ್ಥಿಯ ಕೈ ಮುರಿತ!

ಕಾರವಾರದ ಸಮರ್ಥ್ ನಾಯ್ಕ್ ಕಾರವಾರದ ಖಾಸಗಿ ಶಾಲೆಯೊಂದರಲ್ಲಿ ಆರನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾನೆ. ಶಾಲೆಗೆ ಹೋಗಿದ್ದ ವಿದ್ಯಾರ್ಥಿ, ಶಿಕ್ಷಕರು ಹೆಚ್ಚು ಪುಸ್ತಕ ತರಲು ಹೇಳಿದ್ದರಿಂದ ಹೆಚ್ಚು ಭಾರದ ಪುಸ್ತಕಗಳನ್ನು ತುಂಬಿಕೊಂಡು ಭಾರವಾದ ಬ್ಯಾಗ್ ಹೊತ್ತು ಶಾಲೆಗೆ ತೆರಳಿದ್ದ. ಶಾಲೆಯಿಂದ ಮರಳಿ ಮನೆಗೆ ಬಂದಾಗ ವಿದ್ಯಾರ್ಥಿಯ ಬಲಗೈ ಭುಜ ಭಾಗದಲ್ಲಿ ತೀವ್ರ ಊತ ಕಂಡುಬಂದಿದೆ.

Road Accident: ಭೀಕರ ಅಪಘಾತ, ಕೊಪ್ಪಳ ಮೂಲದ ನಾಲ್ವರು ಅಯ್ಯಪ್ಪ ಭಕ್ತರ ದುರ್ಮರಣ

ಭೀಕರ ಅಪಘಾತ, ಕೊಪ್ಪಳ ಮೂಲದ ನಾಲ್ವರು ಅಯ್ಯಪ್ಪ ಭಕ್ತರ ದುರ್ಮರಣ

ತುಮಕೂರಿನ ಕೋರಾ ಬಳಿಯ ವಸಂತನರಸಾಪುರ ಕೈಗಾರಿಕಾ ಪ್ರದೇಶದ ಬಳಿ ರಸ್ತೆ ಬದಿ ನಿಂತಿದ್ದ ಲಾರಿಗೆ ಡಿಕ್ಕಿ ಅಯ್ಯಪ್ಪ ಭಕ್ತರು ಪ್ರಯಾಣಿಸುತ್ತಿದ್ದ ಡಿಕ್ಕಿ ಹೊಡೆದಿದೆ. ಬೆಳಗ್ಗಿನ ಜಾವ ಚಾಲಕ ನಿದ್ರೆಯ ಮಂಪರಿನಲ್ಲಿದ್ದ ಕಾರಣ ನಿಂತಿದ್ದ ಲಾರಿಯನ್ನು ಗಮನಿಸದೆ ಡಿಕ್ಕಿ ಹೊಡೆದ ಶಂಕೆ ಇದೆ. ಪರಿಣಾಮ‌ ಸ್ಥಳದಲ್ಲೇ‌ ನಾಲ್ಕು ಮಂದಿ‌ ಸಾವನ್ನಪ್ಪಿದ್ದಾರೆ.

Encroachment: ಕೋಗಿಲು ಬಳಿಕ ಥಣಿಸಂದ್ರದಲ್ಲೂ ಜೆಸಿಬಿ ಗರ್ಜನೆ, ಬಿಡಿಎ ಜಾಗ ಒತ್ತುವರಿ ತೆರವು

ಕೋಗಿಲು ಬಳಿಕ ಥಣಿಸಂದ್ರದಲ್ಲೂ ಜೆಸಿಬಿ ಗರ್ಜನೆ, ಬಿಡಿಎ ಜಾಗ ಒತ್ತುವರಿ ತೆರವು

ಬೆಂಗಳೂರಿನ ನಾಗವಾರದ ಥಣಿಸಂದ್ರ (Thanisandra) ಬಳಿಯ ಸಾರಾಯಿ ಪಾಳ್ಯದಲ್ಲಿ ಬಿಡಿಎಗೆ (BDA) ಸೇರಿದ ಸರ್ವೆ ಸಂಬರ್ 28 ರ 2 ಎಕರೆ ಜಾಗವನ್ನು ಮರುಸ್ವಾಧೀನಪಡಿಸಿಕೊಳ್ಳಲಾಗಿದೆ. ಈ ಜಾಗದಲ್ಲಿದ್ದ 30ಕ್ಕೂ ಹೆಚ್ಚು ಮನೆ, ಶೆಡ್ ಹಾಗೂ ಗ್ಯಾರೇಜ್​ಗಳನ್ನು ಜೆಸಿಬಿ ಬಳಸಿ ಕಾರ್ಯಾಚರಣೆ ನಡೆಸಿ ಕೆಡವಲಾಗಿದೆ.

Chikkaballapur News: ಆರೋಗ್ಯ ವಿಚಾರಣೆ ನೆಪದಲ್ಲಿ ಜೆಡಿಎಸ್ ಮುಖಂಡರ ಭೇಟಿ ಸಮಾಲೋಚನೆ

ಮಾಜಿ ಶಾಸಕ ಕೆ.ಪಿ.ಬಚ್ಚೇಗೌಡರಿಗೆ ಜೆ.ಕೆ.ಕೃಷ್ಣಾರೆಡ್ಡಿ ಮೂಲಕ ಗಾಳ

ಜೆಡಿಎಸ್ ಮುಖಂಡರ ಭೇಟಿಯ ಬಗ್ಗೆ ಮಾಧ್ಯಮದವರು ಮಾಜಿ ಶಾಸಕ ಕೆ.ಪಿ.ಬಚ್ಚೇಗೌಡರನ್ನು ಮಾತಿ ಗೆಳೆದಾಗ ಅವರು ಹೇಳಿದ್ದಿಷ್ಟು.ನಾನು ಈಗ ಕಾಂಗ್ರೆಸ್‌ನಲ್ಲಿದ್ದೇನೆ. ಯಾವ ಪಕ್ಷದಲ್ಲಿರುತ್ತೇನೋ ಆ ಪಕ್ಷಕ್ಕೆ ನಿಷ್ಟೆ ತೋರುವುದು ನಾನು ಪಾಲಿಸಿಕೊಂಡು ಬಂದಿರುವ ತತ್ವ. ನಾನು ಜೆಡಿಎಸ್ ಸೇರುವ ಮಾತೇ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ

ವಿಬಿ ಜಿ ರಾಮ್ ಜಿ ಕಾಯ್ದೆ ವಿರೋಧಿಸಿ ಜ. 26 ರಿಂದ ಫೆ. 2 ರವರೆಗೆ ತಾಲೂಕು ಮಟ್ಟದಲ್ಲಿ ಪಾದಯಾತ್ರೆ: ಡಿಕೆಶಿ

ವಿಬಿ ಜಿ ರಾಮ್ ಜಿ ಕಾಯ್ದೆ ವಿರೋಧಿಸಿ ಜ. 26 ರಿಂದ ಫೆ. 2 ರವರೆಗೆ ಪಾದಯಾತ್ರೆ

MGNREGA Bachao Andolan: ವಿಬಿ ಜಿ ರಾಮ್ ಜಿ ಕಾಯ್ದೆ ಹಿಂಪಡೆದು, ಮನರೇಗಾ ವಾಪಸ್ ತರಬೇಕು ಎಂದು ಒತ್ತಾಯಿಸಲು ಪಾದಯಾತ್ರೆ ಮಾಡಲಾಗುವುದು. ಈ ಪಾದಯಾತ್ರೆಯಲ್ಲಿ ರಾಷ್ಟ್ರೀಯ ನಾಯಕರು ಭಾಗವಹಿಸಲಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ.

ಕೇರಳದ ಕನ್ನಡ ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ; ಮಸೂದೆ ಹಿಂಪಡೆಯಲು ಸಿಎಂ ಸಿದ್ದರಾಮಯ್ಯ ಆಗ್ರಹ

ಕೇರಳದ ಕನ್ನಡ ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ; ಸಿಎಂ ಆಕ್ಷೇಪ

ಕಾಸರಗೋಡಿನ ಜನ ಹಲವು ತಲೆಮಾರುಗಳಿಂದ ಕನ್ನಡ ಮಾಧ್ಯಮದಲ್ಲಿ ಓದಿದ್ದಾರೆ, ನಿತ್ಯದ ಬದುಕಿನಲ್ಲಿ ಕನ್ನಡವನ್ನು ನಿರಂತರವಾಗಿ ಬಳಸುತ್ತಾ ಬಂದಿದ್ದಾರೆ. ಕೇರಳ ಸರ್ಕಾರ ಈ ಮಸೂದೆಯನ್ನು ಜಾರಿಗೊಳಿಸಲು ಹೊರಟರೆ ಕನ್ನಡಿಗರು ಇದನ್ನು ಒಕ್ಕೊರಲಿನಿಂದ ವಿರೋಧಿಸಲಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ವಿಶ್ವಕ್ಕೆ ಉನ್ನತ ಗುಣಮಟ್ಟದ ಎಂಜಿನಿಯರುಗಳನ್ನು ನೀಡುವ ಭರವಸೆ ನೀಡಿದ ಕುಲಪತಿ ಪ್ರೊ.ಎಸ್.ವಿದ್ಯಾಶಂಕರ್

ವಿಟಿಯು ಮುದ್ದೇನಹಳ್ಳಿಯಲ್ಲಿ ನಡೆದ ರಸಾಯನ -22 ಅಂತರರಾಷ್ಟ್ರೀಯ ಸಮ್ಮೇಳನ

ಎ.ಐ ತಂತ್ರಜ್ಞಾನದಷ್ಟೇ ವೇಗವಾಗಿ ಬೆಳೆಯುತ್ತಿರುವ ಕ್ವಾಂಟಮ್ ಕಂಪ್ಯೂಟಿಂಗ್ ತಂತ್ರಜ್ಞಾನ ಬಳಸಿ ಕೊಂಡಿರುವ ನಮ್ಮ ವಿಶ್ವವಿದ್ಯಾಲಯವು ವಿದ್ಯಾರ್ಥಿಗಳಿಗೆ ಇದರಲ್ಲಿ ಪದವಿ ನೀಡಲು ಮುಂದಾಗಿದೆ. ಕ್ಯೂ ನ್ಯೂ, ಕ್ಯೂಪೈವ್‌ಐ ಸಂಸ್ಥೆಗಳೊಟ್ಟಿಗೆ ವಿಟಿಯು ಒಡಂಬಡಿಕೆ ಮಾಡಿ ಕೊಂಡಿದ್ದು ಆಮೂಲಕ ನಮ್ಮ ವಿದ್ಯಾರ್ಥಿಗಳಿಗೆ ಎಂ.ಟೆಕ್ ಸ್ನಾತಕೋತ್ತರ ಪದವಿ ನೀಡುತ್ತಿದೆ.

Chikkaballapur News: 77ನೇ ಗಣರಾಜ್ಯೋತ್ಸವ ದಿನಾಚರಣೆಯನ್ನು ಆಕರ್ಷಣೀಯವಾಗಿ ಆಚರಿಸೋಣ

ಆಕರ್ಷಣೀಯವಾಗಿ 77ನೇ ಗಣರಾಜ್ಯೋತ್ಸವ ಆಚರಿಸೋಣ: ಜಿ ಪ್ರಭು

ಕಾರ್ಯಕ್ರಮದ ವೇದಿಕೆ ಸಿದ್ಧತೆ, ಅಲಂಕಾರ, ಆಸನ ವ್ಯವಸ್ಥೆ, ಕುಡಿಯುವ ನೀರಿನ ವ್ಯವಸ್ಥೆ, ಆಹ್ವಾನ ಪತ್ರಿಕೆಗಳ ಮುದ್ರಣ, ಕಾರ್ಯಕ್ರಮ ನಿರ್ವಹಣೆ, ನಿರೂಪಣೆ, ಕ್ರೀಡಾಂಗಣ ಸ್ವಚ್ಛತೆ ಇನ್ನಿತರೆ ಎಲ್ಲಾ ಸಿದ್ಧತಾ ಕಾರ್ಯಗಳನ್ನು ಸಂಬAಧ ಪಟ್ಟ ಇಲಾಖೆಗಳ ಅಧಿಕಾರಿಗಳಿಗೆ ಹಂಚಿಕೆ ಮಾಡಲಾಗಿದೆ. ಜಿಲ್ಲಾಡಳಿತ ಭವನದಲ್ಲಿ ಜರುಗುವ ಧ್ವಜಾರೋಹಣಕ್ಕೆ ಹಾಗೂ ಕ್ರೀಡಾಂಗಣಕ್ಕೆ ಎಲ್ಲಾ ಜಿಲ್ಲಾ ಮಟ್ಟದ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಭಾಗವಹಿಸ ಬೇಕು.

Chikkaballapur News: ಬೆಳೆ ವಿಮಾ ಯೋಜನೆ ನೋಂದಣಿಗೆ ಒತ್ತು: ಜಿಲ್ಲಾಧಿಕಾರಿ ಜಿ.ಪ್ರಭು

ಬೆಳೆ ವಿಮಾ ಯೋಜನೆ ನೋಂದಣಿಗೆ ಒತ್ತು: ಜಿಲ್ಲಾಧಿಕಾರಿ ಜಿ.ಪ್ರಭು

ಭೂಮಿಯೊಂದಿಗೆ ನಿಕಟ ಸಂಪರ್ಕವನ್ನು ಇಟ್ಟುಕೊಂಡು ಕೆಲಸ ಮಾಡುವ ರೈತರಿಗೆ ಹಲವು ಯೋಜನೆ ಗಳನ್ನು ಸರ್ಕಾರ ಜಾರಿ ಮಾಡುತ್ತಿದೆ. ಆ ಎಲ್ಲ ಯೋಜನೆಗಳನ್ನು ಅನುಷ್ಠಾನಗೊಳಿಸುವ ಕೃಷಿ, ತೋಟ ಗಾರಿಕೆ, ರೇಷ್ಮೆ ಹಾಗೂ ಹೈನುಗಾರಿಕೆ ಇಲಾಖೆಗಳಲ್ಲಿ ಶಿಸ್ತಿನ ಕಾರ್ಯವೈಖರಿಯನ್ನು ಉತ್ತಮ ಪಡಿಸಲು ಆದ್ಯತೆ ನೀಡಲಾಗುವುದು.

ವಿಬಿ ಜಿ ರಾಮ್ ಜಿ ಕಾಯ್ದೆ ವಿರುದ್ಧ ನ್ಯಾಯಾಲಯ, ಬೀದಿ-ಬೀದಿಯಲ್ಲಿ ಹೋರಾಟ: ಡಿ.ಕೆ. ಶಿವಕುಮಾರ್

ವಿಬಿ ಜಿ ರಾಮ್ ಜಿ ಕಾಯ್ದೆ ಜಾರಿ ಕಷ್ಟ ಎಂದ ಡಿ.ಕೆ. ಶಿವಕುಮಾರ್

DK Shivakumar: ಕೇಂದ್ರ ಸರ್ಕಾರದ ವಿಬಿ ಜಿ ರಾಮ್ ಜಿ ಕಾಯ್ದೆ ವಿರುದ್ಧ ನಾವು ನಾಯ್ಯಾಲಯದ ಮೆಟ್ಟಿಲೇರುತ್ತೇವೆ. ಜತೆಗೆ ಬೀದಿಗಿಳಿದು ಹೋರಾಟ ಮಾಡುತ್ತೇವೆ. ಪ್ರತಿ ಪಂಚಾಯತಿಯಲ್ಲಿ ಸಭೆ ನಡೆಸುತ್ತೇವೆ. ಪ್ರತಿ ತಾಲೂಕು ಹಾಗೂ ಜಿಲ್ಲಾ ಕೇಂದ್ರಗಳಲ್ಲಿ ಜನರಲ್ಲಿ ಅರಿವು ಮೂಡಿಸುತ್ತೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

Loading...