ರಾಜ್ಯದ ನೀರಾವರಿ ಯೋಜನೆಗಳ ಜಾರಿಗೆ ಕೇಂದ್ರದ ಮೇಲೆ ಒತ್ತಡ ಹಾಕೋಣ: ಡಿಕೆಶಿ
DK Shivakumar: ನಮಗೆ ಕೇಂದ್ರ ಸರ್ಕಾರದಿಂದ ಅಗತ್ಯ ಸಹಕಾರ ಸಿಗುತ್ತಿಲ್ಲ. ಪಾಪ, ಬೊಮ್ಮಾಯಿ ಅವರ ಸಮಯದಲ್ಲಿ ಕೇಂದ್ರ ಸರ್ಕಾರ ತನ್ನ ಬಜೆಟ್ನಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ಘೋಷಣೆ ಮಾಡಿತು. ಆದರೆ ಇವತ್ತಿನವರೆಗೂ ಆ ಹಣ ಬಿಡುಗಡೆಯಾಗಿಲ್ಲ. ಬೊಮ್ಮಾಯಿ ಅವರೇ, ನಿರ್ಮಲಾ ಸೀತಾರಾಮನ್ ಹಾಗೂ ಮೋದಿ ಅವರು ಕೊಟ್ಟ ಮಾತಿನಂತೆ ನಡೆದುಕೊಳ್ಳಬೇಕು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.