ಫೋಟೋ ಗ್ಯಾಲರಿ ಗುಜರಾತ್​ ವಿಮಾನ ಪತನ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ
ಕರ್ನಾಟಕ
Mango Price Drop: ಮಾವು ಬೆಲೆ ಕುಸಿತ; ರೈತರ ನೆರವಿಗೆ ಧಾವಿಸಲು ಕೇಂದ್ರಕ್ಕೆ ಸಿಎಂ ಸಿದ್ದರಾಮಯ್ಯ ಪತ್ರ

ಮಾವು ಬೆಳೆಗಾರರ ನೆರವಿಗೆ ಧಾವಿಸಲು ಕೇಂದ್ರಕ್ಕೆ ಸಿಎಂ ಸಿದ್ದರಾಮಯ್ಯ ಪತ್ರ

Mango Price Drop: 'ಮಾವು ಕರ್ನಾಟಕದ ಪ್ರಮುಖ ತೋಟಗಾರಿಕಾ ಬೆಳೆಗಳಲ್ಲಿ ಒಂದಾಗಿದೆ. ಇದನ್ನು ಸುಮಾರು 1.39 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆಯಲಾಗುತ್ತದೆ. ಆದರೆ, ಬೆಲೆ ಕುಸಿತದಿಂದ ರೈತರು ಕಂಗಾಲಾಗಿದ್ದು, ಅವರ ನೆರವಿಗೆ ಕೇಂದ್ರ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಅವರು ಮನವಿ ಮಾಡಿದ್ದಾರೆ.

Bengaluru News: ಬೆಂಗಳೂರಿನಲ್ಲಿ ನವರಸನ್ ನೇತೃತ್ವದ ‘ಉತ್ಸವ್ ಕೆಫೆ’ ಆರಂಭ

ಬೆಂಗಳೂರಿನಲ್ಲಿ ನವರಸನ್ ನೇತೃತ್ವದ ‘ಉತ್ಸವ್ ಕೆಫೆ’ ಆರಂಭ

Bengaluru News: ನವರಸನ್ ಅವರು ಬೆಂಗಳೂರಿನ ಜಿ.ಟಿ.ಮಾಲ್‌ನಲ್ಲಿ ʼಉತ್ಸವ್ ಕೆಫೆʼ ಎಂಬ ನೂತನ ಶುದ್ಧ ಸಸ್ಯಹಾರಿ ಹೋಟೆಲ್ ಆರಂಭಿಸಿದ್ದಾರೆ. ಈ ವೇಳೆ ಮಾತನಾಡಿರುವ ಅವರು ಶುದ್ಧ ಸಸ್ಯಹಾರಿ ಹೋಟೆಲ್ ಆರಂಭಿಸುವುದು ನನ್ನ ಎರಡು ವರ್ಷಗಳ ಕನಸು. ಅದು ಈಗ ಈಡೇರಿದೆ ಎಂದು ತಿಳಿಸಿದ್ದಾರೆ.

Kamal Haasan: ಕಮಲ್‌ ಹಾಸನ್‌ ಚಿತ್ರಕ್ಕೆ ರಕ್ಷಣೆ ಕೋರಿದ್ದ ಅರ್ಜಿ ವಿಚಾರಣೆ ಜೂನ್‌ 20ಕ್ಕೆ ಮುಂದೂಡಿಕೆ

ಕಮಲ್‌ ಹಾಸನ್‌ ಅರ್ಜಿ ವಿಚಾರಣೆ ಜೂನ್‌ 20ಕ್ಕೆ ಮುಂದೂಡಿಕೆ

Thug Life Movie: ಸದ್ಯದ ಮಟ್ಟಿಗೆ‌ ಕರ್ನಾಟಕ ರಾಜ್ಯದಲ್ಲಿ ಸಿನಿಮಾ ಬಿಡುಗಡೆ ಮಾಡುವುದಿಲ್ಲ ಎಂದು ಕಮಲ್ ಹಾಸನ್ ಈ ಮೊದಲು ಹೇಳಿಕೆ ನೀಡಿದ್ದರು. ಇದೀಗ ಅರ್ಜಿ ವಿಚಾರಣೆ ಮುಂದೂರಿಕೆಯಾದ ಕಾರಣ ಜೂನ್‌ 20ರವರೆಗೆ ಥಗ್‌ ಲೈಫ್ ಚಿತ್ರ‌ ರಿಲೀಸ್‌ ಆಗುವುದು ಅನುಮಾನವಾಗಿದೆ.

Bengaluru Stampede: ಕಾಲ್ತುಳಿತದ ವರದಿ ಮುಚ್ಚಿದ ಲಕೋಟೆಯಲ್ಲಿ ಹೈಕೋರ್ಟ್‌ಗೆ ಸಲ್ಲಿಸಿದ ಸರಕಾರ

ಕಾಲ್ತುಳಿತದ ವರದಿ ಮುಚ್ಚಿದ ಲಕೋಟೆಯಲ್ಲಿ ಹೈಕೋರ್ಟ್‌ಗೆ ಸಲ್ಲಿಸಿದ ಸರಕಾರ

Bengaluru Stampede: ಸರಕಾರದ ಪರ ಹಾಜರಾಗಿದ್ದ ಎ.ಜಿ, ಸರಕಾರದಿಂದ ಇಲ್ಲಿಯವರೆಗೆ ಕೈಗೊಂಡ ಕ್ರಮದ ಬಗ್ಗೆ ಹೈಕೋರ್ಟ್‌ಗೆ ಮುಚ್ಚಿದ ಲಕೋಟೆಯಲ್ಲಿ ವರದಿ ಸಲ್ಲಿಸಿದರು. ವಿಚಾರಣೆ ವೇಳೆ ಹೈಕೋರ್ಟ್ ಕೇಳಿದ್ದ ಪ್ರಶ್ನೆಗಳಿಗೆ ಸರಕಾರ ಉತ್ತರಿಸಿದೆ. ಎಲ್ಲ ದಾಖಲೆಗಳನ್ನೂ ಮುಖ್ಯ ಕಾರ್ಯದರ್ಶಿ ಕಸ್ಟಡಿಯಲ್ಲಿರಿಸಬೇಕು ಎಂದು ಹೈಕೋರ್ಟ್ ಸೂಚನೆ ನೀಡಿದೆ.

SSLC Exam- 2 Result: ಎಸ್‌ಎಸ್‌ಎಲ್‌ಸಿ ಪರೀಕ್ಷೆ- 2ರ ಫಲಿತಾಂಶ ಪ್ರಕಟ, 4 ಮಂದಿ ಔಟ್‌ ಆಫ್‌ ಔಟ್

ಎಸ್‌ಎಸ್‌ಎಲ್‌ಸಿ ಪರೀಕ್ಷೆ- 2ರ ಫಲಿತಾಂಶ ಪ್ರಕಟ, 4 ಮಂದಿ ಔಟ್‌ ಆಫ್‌ ಔಟ್

SSLC Exam- 2 Result: 2025ರ ಪರೀಕ್ಷೆ-2ರಲ್ಲಿ 11,818 ವಿದ್ಯಾರ್ಥಿಗಳು ಫಲಿತಾಂಶ ಉತ್ತಮಪಡಿಸಿಕೊಳ್ಳಲು ನೋಂದಾಯಿಸಿದ್ದು, ಅವರಲ್ಲಿ 6,635 ವಿದ್ಯಾರ್ಥಿಗಳು (ಶೇ.56.14ರಷ್ಟು ವಿದ್ಯಾರ್ಥಿಗಳು) ತಮ್ಮ ಫಲಿತಾಂಶವನ್ನು ಉತ್ತಮಪಡಿಸಿಕೊಂಡಿದ್ದಾರೆ. ಅಂಕ ಹೆಚ್ಚಳಕ್ಕೆ ಪರೀಕ್ಷೆ ಬರೆದಿದ್ದ ನಾಲ್ವರಿಗೆ ಔಟ್‌ ಆಫ್ ಔಟ್ ಅಂಕ ಬಂದಿದೆ.​

Viral News: ಇದೆಂಥಾ ಹುಚ್ಚಾಟ?! ಅಪಘಾತದಲ್ಲಿ ಗಾಯಗೊಂಡು ನರಳುತ್ತಿದ್ದ ವ್ಯಕ್ತಿಗೆ ಬೈಯ್ದ ಮಹಿಳೆ; ಕಿಡಿಕಾರಿದ ನೆಟ್ಟಿಗರು

ಬೈಕ್‌ನಲ್ಲಿದ್ದವನ ಬಾಯಲ್ಲಿ ರಕ್ತ ಸೋರುತ್ತಿದ್ದರೂ ಕ್ಯಾರೆ ಎನ್ನದ ಮಹಿಳೆ!

ಬೆಂಗಳೂರಿನಲ್ಲಿ ಪೆಟ್ರೋಲ್ ಬಂಕ್‌ ಬಳಿ ಕಾರು ಮತ್ತು ಬೈಕ್‍ ನಡುವೆ ಅಪಘಾತ ನಡೆದಿದೆ. ಈ ಘಟನೆಯಲ್ಲಿ ಬೈಕಿನಲ್ಲಿದ್ದ ವ್ಯಕ್ತಿಗೆ ತೀವ್ರ ಗಾಯವಾಗಿ ರಕ್ತಸೋರುತ್ತಿತ್ತು. ಆದರೆ ಕಾರು ಮಾಲಕಿ ಇದ್ಯಾವುದನ್ನೂ ಗಮನಿಸದೆ ಆತ ನಟನೆ ಮಾಡುತ್ತಿದ್ದಾನೆ ಎಂದು ನಿಂದಿಸಿದ್ದಾಳೆ. ಈ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ (Viral Video) ಆಗಿ ನೆಟ್ಟಿಗರ ಆಕ್ರೋಶಕ್ಕೆ ಕಾರಣವಾಗಿದೆ.

Chakravarty Sulibele: ಚಕ್ರವರ್ತಿ ಸೂಲಿಬೆಲೆ ವಿರುದ್ಧದ ಕೇಸ್‌ಗಳ ಮಾಹಿತಿ ಕ್ರೋಢೀಕರಣ, ಗಡಿಪಾರು ಬಗ್ಗೆ ಗೃಹ‌ ಸಚಿವರ ಪ್ರತಿಕ್ರಿಯೆ

ಚಕ್ರವರ್ತಿ ಸೂಲಿಬೆಲೆ ವಿರುದ್ಧದ ಕೇಸ್‌ಗಳ ಮಾಹಿತಿ ಕ್ರೋಢೀಕರಣ

ಪ್ರಚೋದನಕಾರಿ ಭಾಷಣಗಳಿಗೆ ಬ್ರೇಕ್​ ಹಾಕುವ ನಿಟ್ಟಿನಲ್ಲಿ ಕೆಲ ಸಂಘಟನೆಗಳ ಮುಖಂಡರ ಗಡಿಪಾರಿಗೂ ಪೊಲೀಸ್‌ ಇಲಾಖೆ ಮುಂದಾಗಿದೆ. ಇದೀಗ ಚಕ್ರವರ್ತಿ ಸೂಲಿಬೆಲೆ (Chakravarty Sulibele) ಮೇಲಿನ ಕೇಸ್‌ಗಳನ್ನು ಒಟ್ಟುಗೂಡಿಸುತ್ತಿರುವ ಹಿನ್ನೆಲೆಯಲ್ಲಿ, ಅವರನ್ನು ಕೂಡ ಗಡಿಪಾರು ಮಾಡಲಾಗುತ್ತಿದೆಯೇ ಎನ್ನುವ ಪ್ರಶ್ನೆ ಮೂಡಿದೆ.

ವೈದ್ಯೋ ನಾರಾಯಣೋ ಹರಿಃ; ಹೃದಯಾಘಾತಕ್ಕೊಳಗಾದ ವ್ಯಕ್ತಿಯ ಜೀವ ಉಳಿಸಿದ ಡಾಕ್ಟರ್‌

ಕುಸಿದು ಬಿದ್ದ ವ್ಯಕ್ತಿಯ ಜೀವ ಉಳಿಸಿದ ವೈದ್ಯ

ವರ್ತೂರು ರಸ್ತೆಯಲ್ಲಿರುವ ಮಣಿಪಾಲ್‌ ಆಸ್ಪತ್ರೆಗೆ ಎದೆನೋವಿನಿಂದ ಬಳಲುತ್ತಿದ್ದ 67 ವರ್ಷದ ವ್ಯಕ್ತಿಯೊಬ್ಬ ಭೇಟಿ ನೀಡಿದಾಗ ಇದ್ದಕ್ಕಿದ್ದಂತೆ ರಿಸೆಪ್ಶನ್‍ನಲ್ಲಿ ಕುಸಿದು ಬಿದ್ದಿದ್ದಾನೆ. ಆಗ ಅಲ್ಲಿದ್ದ ಹೃದ್ರೋಗ ತಜ್ಞರಾದ ಡಾ. ರಾಕಿ ಕಥೇರಿಯಾ ಅವರು ಆತನಿಗೆ ಹೃದಯಾಘಾತವಾಗಿದೆ ಎಂಬುದನ್ನು ಅರಿತು ಕೂಡಲೇ ಸಿಪಿಆರ್‌ ಮಾಡಿ ಆತನ ಜೀವ ಉಳಿಸಿದ್ದಾರೆ. ಈ ಸುದ್ದಿ ಈಗ ವೈರಲ್‌ (Viral News) ಆಗಿದೆ.

Tragic death: ಮಂಗಳೂರಿನಲ್ಲಿ 12ನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿನಿ ಸಾವು

ಮಂಗಳೂರಿನಲ್ಲಿ 12ನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿನಿ ಸಾವು

Tragic Death: ನಿನ್ನೆ ರಾತ್ರಿ ಬಟ್ಟೆ ಒಣಗಿಸಲೆಂದು ಹೋಗಿದ್ದ ಹಿಬಾ 12ನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿದ್ದಾರೆ. ವೈದ್ಯರುಗಳಾದ ಡಾ.ಮುಮ್ತಾಜ್ ಅಹ್ಮದ್ ದಂಪತಿ ಅಪಾರ್ಟ್ ಮೆಂಟ್‌ನ 12ನೇ ಮಹಡಿಯಲ್ಲಿ ವಾಸವಾಗಿದ್ದಾರೆ. ಮಂಗಳೂರಿನ ಉಳ್ಳಾಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Sira (Tumkur) News: ಭಾರತೀಯ ದಲಿತ ಸಂಘರ್ಷ ಸಮಿತಿಯಿಂದ 101 ಜೋಡಿಗಳ ಉಚಿತ ಸಾಮೂಹಿಕ ವಿವಾಹ; ಡಾ.ಎಚ್.ಪ್ರಕಾಶ ಬೀರಾವರ

ಭಾರತೀಯ ದಲಿತ ಸಂಘರ್ಷ ಸಮಿತಿಯಿಂದ 101 ಜೋಡಿಗಳ ಉಚಿತ ಸಾಮೂಹಿಕ ವಿವಾಹ

ಭಾರತೀಯ ದಲಿತ ಸಂಘರ್ಷ ಸಮಿತಿ ವತಿಯಿಂದ ಜೂ.20ರ ಶುಕ್ರವಾರ ಬೆಳಿಗ್ಗೆ 10ಗಂಟೆಗೆ ಶಿವಮೊಗ್ಗ ವಿನೋಭ ನಗರದ ಶುಭ ಮಂಗಳ ಸಮುದಾಯ ಭವನದಲ್ಲಿ ನೂತನ ಯುವ ಘಟಕ ರಾಜ್ಯಾಧ್ಯಕ್ಷರ ಪದಗ್ರಹಣ ಹಾಗೂ ರಾಜ್ಯ ಮಟ್ಟದ ಪದಾಧಿಕಾರಿಗಳ ಸಮಾವೇಶ ಹಾಗೂ 101 ಜೋಡಿಯ ಉಚಿತ ಸರಳ ಸಾಮೂಹಿಕ ವಿವಾಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ

Indi (Vijayapura) News: ಎಸ್‌ಬಿಐ ಬ್ಯಾಂಕ್ ಅನೇಕ ರೈತಪರ ಯೋಜನೆಗಳನ್ನು ಹಮ್ಮಿಕೊಂಡು ಜನರ ವಿಶ್ವಾಸ ಗಳಿಸಿದೆ

ಎಸ್‌ಬಿಐ ಬ್ಯಾಂಕ್ ರೈತಪರ ಯೋಜನೆಗಳನ್ನು ಹಮ್ಮಿಕೊಂಡು ಜನರ ವಿಶ್ವಾಸ ಗಳಿಸಿದೆ

ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದು ತಮ್ಮ ಜವಾಬ್ದಾರಿಯನ್ನು ನಿಭಾಯಿಸಲು ಹಾಗೂ ತಮ್ಮ ಕನಸುಗಳನ್ನು ನನಸಾಗಿಸಿಕೊಳ್ಳಲು ಹೆಚ್ಚಿನ ವಿದ್ಯಾಬ್ಯಾಸಕ್ಕಾಗಿ ನಾಲ್ಕು ಲಕ್ಷದಿಂದ ಇಪ್ಪತ್ತು ಲಕ್ಷದ ವರೆಗೆ ನಮ್ಮಲ್ಲಿ ಸಾಲ ಸೌಲಭ್ಯ ಇದೆ. ಇದರ ಸದುಪಯೋಗ ಪಡೆದುಕೊಳ್ಳಬೇಕು ಹಾಗೂ ರೈತರು ಬ್ಯಾಂಕ್ ನಿಂದ ಸಾಲ ಪಡೆದು ಸಕಾಲದಲ್ಲಿ ತುಂಬಿ ಮತ್ತೆ ಸಾಲ ಪಡೆಯಬಹುದು ಇದರಿಂದ ರೈತರು ತಮ್ಮ ಆದಾಯವನ್ನು ದ್ವಿಗುಣ ಮಾಡಿಕೊಂಡು ಸ್ವಾವಲಂಬಿ ಜೀವನ ಮಾಡಬಹುದು.

Indi(Vijayapura) News: ವಿಶ್ವ “ಬಾಲಕಾರ್ಮಿಕ ವಿರೋಧಿ”ದಿನ ಅಂಗವಾಗಿ ಕಾನೂನು ಅರಿವು ನೆರವು ಕಾರ್ಯಕ್ರಮ

ಕಾನೂನು ಅರಿವು ನೆರವು ಕಾರ್ಯಕ್ರಮ

ಪ್ರತೀ ವರ್ಷ ಜೂನ್ 12ರಂದು ಬಾಲ ಕಾರ್ಮಿಕ ವಿರೋಧಿನ ದಿನ ಆಚರಣೆ ಮಾಡಲಾಗುತ್ತದೆ. ಬಾಲ ಕಾರ್ಮಿಕ ಪದ್ಧತಿಯ ವಿರುಧ್ಧ ಜಾಗೃತಿ ಮೂಡಿಸುವುದು ಮತ್ತು ಈ ಪಿಡುಗನ್ನು ಸಂಪೂರ್ಣವಾಗಿ ತೊಡೆದು ಹಾಕುವ ಉದ್ದೇಶದಿಂದ ಈ ಯೋಜನೆಯನ್ನು ಅಂತರಾಷ್ಟ್ರೀಯ ಕಾರ್ಮಿಕ ಸಂಸ್ಥೆ 2002 ರಲ್ಲಿ ಈ ದಿನವನ್ನು ಪ್ರಥಮವಾಗಿ ಆಚರಿಸಿತು

Vishwavani Report Impact: ಕೆಡಿಪಿ ಸಭೆಯಲ್ಲಿ ವಿಶ್ವವಾಣಿ ವರದಿ ಪ್ರಸ್ತಾಪ, ಅಧಿಕಾರಿಗಳ ಮೇಲೆ ಶಾಸಕರ ಸಿಟ್ಟು

ವಿಶ್ವವಾಣಿ ವರದಿ ಪ್ರಸ್ತಾಪ ಅಧಿಕಾರಿಗಳ ಮೇಲೆ ಶಾಸಕರ ಸಿಟ್ಟು

ನನ್ನ ಸಭೆಗೆ ಬರಲು ನಿಮಗೆ ತೊಂದರೆಯೇ ? ಲಿಖಿತವಾಗಿ ತಿಳಿಸಿ, ಒಂದೋ ದಕ್ಷತೆಯಿಂದ ಕೆಲಸ ಮಾಡಿ ಇಲ್ಲವೇ ಜಾಗ ತೆರವು ಮಾಡಿ ಎಂದು ಅಧಿಕಾರಿಗಳಿಗೆ ಹರಿಹಾಯ್ದರು. ಶಾಸಕರ ಭಾಷಣದ ನಡುವೆ ಕೆಡಿಪಿ ಸದಸ್ಯ ದೇವರಾಜ್ ಅವರು ವಿಶ್ವವಾಣಿ ವರದಿಯನ್ನು ಸಮರ್ಥಿಸಿಕೊಳ್ಳುವುದಕ್ಕೆ ಮುಂದಾದ ಘಟನೆ ನಡೆಯಿತು.

Shakti Scheme: ಶಕ್ತಿ ಯೋಜನೆಗೆ 2 ವರ್ಷ ಭರ್ತಿ, ಮಹಿಳೆಯರಿಂದ 475 ಕೋಟಿ ಬಾರಿ ಪ್ರಯಾಣ!

ಶಕ್ತಿ ಯೋಜನೆಗೆ 2 ವರ್ಷ ಭರ್ತಿ, ಮಹಿಳೆಯರಿಂದ 475 ಕೋಟಿ ಬಾರಿ ಪ್ರಯಾಣ!

ಶಕ್ತಿ ಯೋಜನೆಯು (Shakti Scheme) ರಾಜ್ಯದ ಮಹಿಳೆಯರಿಗೆ ಮೀಸಲಾಗಿದ್ದು, ಸಾರ್ವಜನಿಕ ಸಾರಿಗೆ ಸಂಸ್ಥೆಯ ಬಸ್ಸುಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣವನ್ನು ಕಲ್ಪಿಸಿದೆ. ದಿನನಿತ್ಯದ ದುಡಿಮೆಗೆ, ಶಿಕ್ಷಣಕ್ಕೆ ಹಾಗೂ ಪ್ರವಾಸ ತೆರಳುವ ಮಹಿಳೆಯರು ಈ ಯೋಜನೆಯನ್ನು ಯಶಸ್ವಿಯಾಗಿ ಬಳಸಿಕೊಳ್ಳುತ್ತಿದ್ದಾರೆ.

Good News: ಸರಕಾರಿ ನೌಕರರಿಗೆ ಸಿಹಿ ಸುದ್ದಿ, 13 ಸಾವಿರ ಸಿಬ್ಬಂದಿಗೆ ಹಳೆಯ ಪಿಂಚಣಿ ಯೋಜನೆ ಜಾರಿ

ಸರಕಾರಿ ನೌಕರರಿಗೆ ಸಿಹಿ ಸುದ್ದಿ, 13,000 ಮಂದಿಗೆ ಹಳೆ ಪಿಂಚಣಿ ಯೋಜನೆ ಜಾರಿ

Good News: 01.04.2006ರಂದು ಅಥವಾ ಆ ದಿನಾಂಕದ ನಂತರ ಸೇವೆಗೆ ಸೇರಿರುವ ಎನ್.ಪಿ.ಎಸ್ ಯೋಜನೆಗೆ ವ್ಯಾಪ್ತಿಗೊಳಪಟ್ಟಿರುವ ನೌಕರರನ್ನು ಕೆಲವು ಷರತ್ತುಗಳಿಗೊಳಪಟ್ಟು ಒಂದು ಬಾರಿಯ ಕ್ರಮವಾಗಿ ಹಿಂದಿನ ಹಳೆಯ ಡಿಫೈನ್ಸ್ ಪಿಂಚಣಿ ಯೋಜನೆಗೆ (ಓ.ಪಿ.ಎಸ್) ವ್ಯಾಪ್ತಿಗೊಳಪಡಿಸಲು ಆದೇಶಿಸಲಾಗಿದೆ.

Road Accident: ಬೆಂಗಳೂರು ಬಳಿ ಸಾರಿಗೆ ಬಸ್-‌ ಲಾರಿ ಅಪಘಾತ, ನಾಲ್ವರ ಸಾವು

ಬೆಂಗಳೂರು ಬಳಿ ಸಾರಿಗೆ ಬಸ್-‌ ಲಾರಿ ಅಪಘಾತ, ನಾಲ್ವರ ಸಾವು

Road Accident: ಆಂಧ್ರ ಸಾರಿಗೆ ಬಸ್ ತಿರುಪತಿಯಿಂದ ಬೆಂಗಳೂರಿಗೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ. ಬಸ್ ಓವರ್​​ಟೇಕ್ ಮಾಡುವಾಗ ಮುಂದೆ ಹೋಗುತ್ತಿದ್ದ ಲಾರಿಗೆ ಡಿಕ್ಕಿಯಾಗಿದೆ. ಡಿಕ್ಕಿಯ ತೀವ್ರತೆಗೆ ಬಸ್ ನಜ್ಜುಗುಜ್ಜಾಗಿದೆ. ಚಾಲಕ ನಿದ್ದೆ ಮಂಪರಿನಲ್ಲಿ ಒವರ್ ಟೇಕ್ ಮಾಡಲು ಹೋಗಿ ದುರಂತ ಸಂಭವಿಸಿದೆ.

Star Fashion: ವೈಬ್ರೆಂಟ್‌ ನೀಲಿ ಕಲರ್‌ನ ಹಾಲ್ಟರ್‌ ನೆಕ್‌ ಫ್ಯಾಷನ್‌ವೇರ್‌ನಲ್ಲಿ ನಟಿ ಸುಕೃತಾ ವಾಗ್ಲೆ ನಯಾ ಲುಕ್‌!

ಹಾಲ್ಟರ್‌ ನೆಕ್‌ ಫ್ಯಾಷನ್‌ವೇರ್‌ನಲ್ಲಿ ನಟಿ ಸುಕೃತಾ ವಾಗ್ಲೆ ನಯಾ ಲುಕ್‌!

Actress Sukrutha Wagle: ಸ್ಯಾಂಡಲ್‌ವುಡ್‌ ನಟಿ ಸುಕೃತಾ ವಾಗ್ಲೆ ವೈಬ್ರೆಂಟ್‌ ಹಾಲ್ಟರ್‌ ನೆಕ್‌ಲೈನ್‌ ಇರುವಂತಹ ಹೈ ಸ್ಲಿಟ್‌ ಡ್ರೆಸ್‌ನಲ್ಲಿ ಅತ್ಯಾಕರ್ಷಕವಾಗಿ ಕಾಣಿಸಿಕೊಂಡಿದ್ದಾರೆ. ಈ ಉಡುಪಿನೊಂದಿಗೆ ಅವರ ಮಿನಿಮಲ್‌ ಮೇಕಪ್‌ ಹಾಗೂ ಆಕ್ಸೆಸರೀಸ್‌ ಅವರನ್ನು ಮತ್ತಷ್ಟು ಸುಂದರವಾಗಿಸಿದೆ. ಈ ಸ್ಟೈಲಿಂಗ್‌ ಕುರಿತಂತೆ ಇಲ್ಲಿದೆ ಡಿಟೇಲ್ಸ್.

Chikkaballapur News: ಮಕ್ಕಳಿಗೆ ಉತ್ತಮ ಭವಿಷ್ಯ ನಿರ್ಮಾಣ ಸಮಾಜದ ಎಲ್ಲರ ಹೊಣೆ : ಜಿಲ್ಲಾ ಗ್ಯಾರಂಟಿ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಎನ್.ರಮೇಶ್

ಮಕ್ಕಳಿಗೆ ಉತ್ತಮ ಭವಿಷ್ಯ ನಿರ್ಮಾಣ ಸಮಾಜದ ಎಲ್ಲರ ಹೊಣೆ

೧೪ ವರ್ಷದೊಳಗಿನ ಮಕ್ಕಳು ಯಾವುದೇ ಉದ್ಯೋಗ ಅಥವಾ  ಇತರೆ ದುಡಿಮೆಗಳ ಪ್ರಕ್ರಿಯೆಗಳಲ್ಲಿ ಹಾಗೂ ೧೮ ವರ್ಷ ವಯಸ್ಸಿನವರೆಗಿನ ಕಿಶೋರರು ಅಪಾಯಕಾರಿ ಉದ್ದಿಮೆ ಮತ್ತು ಸ್ಥಳಗಳಲ್ಲಿ ಕೆಲಸ ಮಾಡುವುದು ಕಂಡು ಬಂದಲ್ಲಿ ತಕ್ಷಣವೇ ಇಲಾಖೆಯ ಸಹಾಯವಾಣಿ ಸಂಖ್ಯೆ ೧೦೯೮, ೧೧೨ ಗೆ ಕರೆಮಾಡಿ ಮಾಹಿತಿ ತಿಳಿಸಬೇಕು

Yoga Training: 11ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಪ್ರಯುಕ್ತ ಯೋಗ ತರಬೇತಿ

ಯೋಗ ದಿನಾಚರಣೆಯ ಪ್ರಯುಕ್ತ ಯೋಗ ತರಬೇತಿ

೧೧ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಪ್ರಯುಕ್ತವಾಗಿ ಗುರುವಾರ ಇಂಡೋಟಿಬೇಟಿಯನ್ ಬಾರ್ಡರ್ ಪೊಲೀಸ್, ಸುಂಡ್ರಹಳ್ಳಿ ಇಲ್ಲಿ ಯೋಗ ತರಬೇತಿಯನ್ನು ನಡೆಸಲಾಯಿತು. ಅಲ್ಲಿನ ಅಧಿಕಾರಿಗಳು, ಪೊಲೀಸ್ ಸಿಬ್ಬಂದಿ ತರಬೇತಿಯಲ್ಲಿ ಪಾಲ್ಗೊಂಡಿದ್ದರು. ಶಿಡ್ಲಘಟ್ಟ ಸಾರ್ವಜನಿಕ ಆಸ್ಪತ್ರೆ ಎನ್.ಹೆಚ್.ಎಂ ವೈದ್ಯಾಧಿಕಾರಿ ಡಾ. ವಿಜಯ್ ಕುಮಾರ್, ಯೋಗ ತರಬೇತುದಾರರು ಮುನಿರಾಜು ಕಾರ್ಯಕ್ರಮವನ್ನು ನಡೆಸಿಕೊಟ್ಟರು

Special Admission: ಮೇಘಾಲಯದಿಂದ ವಲಸೆ ಬಂದ ಮಕ್ಕಳಿಗೆ ಪಿ.ಎಂ.ಶ್ರೀ ಶಾಲೆಯಲ್ಲಿ ವಿಶೇಷ ದಾಖಲಾತಿ

ವಲಸೆ ಬಂದ ಮಕ್ಕಳಿಗೆ ಪಿ.ಎಂ.ಶ್ರೀ ಶಾಲೆಯಲ್ಲಿ ವಿಶೇಷ ದಾಖಲಾತಿ

ಇದು ವಿಶ್ವಸಂಸ್ಥೆಯ ಆರ್ಥಿಕ ಮತ್ತು ಸಾಮಾಜಿಕ ಮಂಡಳಿ ಯೊಂದಿಗೆ ವಿಶೇಷ ಸಮಾಲೋಚನಾ ಸ್ಥಾನಮಾನದಲ್ಲಿರುವ ಸರಕಾರೇತರ ಸಂಸ್ಥೆಯಾಗಿರುವ ಎಐಎಂ, ದೇಣಿಗೆಗಳಿಂದ ಹಣವನ್ನು ಪಡೆದು ಮೇಘಾಲಯ ರಾಜ್ಯದಿಂದ ವಲಸೆ ಆರ್ಥಿಕ ವಾಗಿ ಬಡ ಮಕ್ಕಳ ಶಿಕ್ಷಣ ನೀಡುತ್ತಿದೆ. ಹಾಗಾಗಿ ಆ ಮಕ್ಕಳೆಲ್ಲರೂ ನಮ್ಮ ಪಿ.ಎಂ.ಶ್ರೀ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಗೆ 25 ವಿದ್ಯಾರ್ಥಿಗಳನ್ನು ದಾಖಲಾತಿ ಪಡೆದಿದ್ದಾರೆ

Chikkabalapur News: ಸರ್ಕಾರಿ ಕನ್ನಡ ಶಾಲೆಗಳನ್ನು ಉಳಿಸಿ: ಕರವೇ ಜಿಲ್ಲಾದ್ಯಕ್ಷ ಎಂ.ಆರ್.ಲೋಕೇಶ್

ಸರ್ಕಾರಿ ಕನ್ನಡ ಶಾಲೆಗಳನ್ನು ಉಳಿಸಿ

ನಾಡು-ನುಡಿ ರಕ್ಷಣೆಗಾಗಿ ಹೋರಾಟ ನಡೆಸುತ್ತಿರುವ ಕರ್ನಾಟಕ ರಕ್ಷಣಾ ವೇದಿಕೆಯ ಸಂಘಟನೆ ಇಡೀ ವಿಶ್ವದಲ್ಲಿಯೇ ಅತಿ ಹೆಚ್ಚು ಶಾಖೆಗಳನ್ನು ಹೊಂದಿರುವ ಹೆಗ್ಗಳಿಕೆಯನ್ನು ಹೊಂದಿದೆ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ನಾಡು ನುಡಿ ವಿಚಾರದಲ್ಲಿ ಹೋರಾಟ ಮಾಡುತ್ತಿರುವ ನಮ್ಮಂತಹ ನೂರಾರು ಕನ್ನಡದ ಕಟ್ಟಾಳುಗಳನ್ನು ಬೆಳೆಸಿ ನಾಯಕರನ್ನಾಗಿ ಮಾಡಿದ ಕೀರ್ತಿ ನಾರಾಯಣ ಗೌಡರಿಗೆ ಸಲ್ಲುತ್ತದೆ

NAREGA: ನರೇಗಾ ಅಕ್ರಮ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ತನಿಖೆಯಾಗಬೇಕು : ಸಿಪಿಎಂ ಪಕ್ಷದ ಜಿಲ್ಲಾ ಕಾರ್ಯದರ್ಶಿ ಜಿ.ಸಿದ್ದಗಂಗಪ್ಪ

ನರೇಗಾ ಅಕ್ರಮ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ತನಿಖೆಯಾಗಬೇಕು

2006ರಲ್ಲಿ ಯುಪಿಎ ಸರ್ಕಾರ ಇದ್ದಾಗ ನಮ್ಮ ಪಕ್ಷ ಅದಕ್ಕೆ ಬೆಂಬಲ ನೀಡಿತ್ತು. ಅದರಂತೆ ನಾವು ಗ್ರಾಮಾಂತರ ಪ್ರದೇಶದ ಕೂಲಿ ಕಾರ್ಮಿಕರಿಗೆ ಕೆಲಸ ಸಿಗಲು ನರೇಗಾ ಯೋಜನೆ ವರದಾನವಾಗಲಿ ಎಂದು ಅಂದಿನ ಪ್ರಧಾನಿಗಳಿಗೆ ಒತ್ತಾಯ ಮಾಡಿದ ಪರಿಣಾಮ ಇಂದು ನರೇಗಾ ಅನುಷ್ಥಾನದಲ್ಲಿದೆ. ಅದರೆ ಗ್ರಾಮ ಪಂಚಾಯಿತಿಯಲ್ಲಿ ನಡೆಯುತ್ತಿರುವ ಅಕ್ರಮದಲ್ಲಿ ಅಧಿಕಾರಿಗಳು ಶಾಮೀಲಾಗಿ ಕೋಟ್ಯಾಂತರ ರೂಪಾಯಿಗಳ ಹಣವನ್ನು ಗುಳಂ ಮಾಡಿದ್ದಾರೆ.

Chikkaballapur News: ಜುಲೈ 18ರಂದು ಶ್ರೀ ಶರಭಯೋಗೇಂದ್ರ ಸ್ವಾಮಿಯವರ 307ನೇ ಆರಾಧನಾ ಮತ್ತು ರಥೋತ್ಸವ

ಶ್ರೀ ಶರಭಯೋಗೇಂದ್ರ ಸ್ವಾಮಿಯವರ 307ನೇ ಆರಾಧನಾ ಮತ್ತು ರಥೋತ್ಸವ

ಶ್ರೀ ದಕ್ಷಿಣಕಾಶಿ ಪಂಚನಂದಿ ಮಹಾ ಪುಣ್ಯ ಕ್ಷೇತ್ರ ಪಾಪಾಗ್ನಿ ಮಠ ಆಶ್ರಯದಲ್ಲಿ ನಡೆಯಲಿರುವ 307ನೇ ಆರಾಧನಾ ಮಹೋತ್ಸವದ ಧಾರ್ಮಿಕ ಕಾರ್ಯಕ್ರಮಗಳ ಆರಂಭ ಜುಲೈ 17 ಗುರುವಾರ ದಿಂದ ಆರಂಭ ವಾಗಲಿದ್ದು ಅಂದು ಬೆಳಿಗ್ಗೆ 6ಕ್ಕೆ ಬ್ರಾಹ್ಮೀ ಮುಹೂರ್ತದಲ್ಲಿ ಗಣಪತಿ ಪೂಜೆ, ಪುಣ್ಯಾಹ ವಾಚನ, ತೀರ್ಥಗ್ರಹಣ, ದಶಶಾಂತಿ ಜೊತೆಗೆ ಸಂಜೆ ಕಾಶಿವಿಶ್ವನಾಥ ದೇವರಿಗೆ ರುದ್ರಾಭಿ ಷೇಕ, ಅಷ್ಟಧಿಕ್ಪಾಲ ಕಾರಾಧನೆ, ನೈವೇದ್ಯ, ಪ್ರಧಾನ ಕಳಶಾರಾಧನೆ, ಮಹಾನ್ಯಾಸ ಪೂರ್ವಕ ಅಭಿಷೇಕ, ಅಗ್ನಿ ಪ್ರತಿಷ್ಠಾಪನೆ,ಶರಭಯೋಗೇಂದ್ರಸ್ವಾಮಿ ಮಹಾಮಂತ್ರ ಹೋಮ ಮಂಗಳಾರತಿ ನಡೆಯಲಿದೆ

BRAT Movie: ಡಾರ್ಲಿಂಗ್ ಕೃಷ್ಣ ಅಭಿನಯದ ʼಬ್ರ್ಯಾಟ್ʼ ಚಿತ್ರದ ಟೀಸರ್ ಔಟ್‌

ಡಾರ್ಲಿಂಗ್ ಕೃಷ್ಣ ಅಭಿನಯದ ʼಬ್ರ್ಯಾಟ್ʼ ಚಿತ್ರದ ಟೀಸರ್ ಔಟ್‌

BRAT Movie: ಶಶಾಂಕ್ ನಿರ್ದೇಶನದ, ಡಾರ್ಲಿಂಗ್ ಕೃಷ್ಣ ನಾಯಕರಾಗಿ ನಟಿಸುತ್ತಿರುವ ʼಬ್ರ್ಯಾಟ್ʼ ಚಿತ್ರತಂಡ ಟೀಸರ್ ಬಿಡುಗಡೆ ಮಾಡಿದೆ. ಡಾರ್ಲಿಂಗ್ ಕೃಷ್ಣ ಅವರ ಹುಟ್ಟುಹಬ್ಬದ ಸಲುವಾಗಿ ಈ ಟೀಸರ್ ಬಿಡುಗಡೆ ಮಾಡಿರುವ ಚಿತ್ರತಂಡ ಆ ಮೂಲಕ ನಾಯಕನಿಗೆ ಹುಟ್ಟುಹಬ್ಬದ ಶುಭಾಶಯ ಹೇಳಿದೆ. ಈ ಕುರಿತ ವಿವರ ಇಲ್ಲಿದೆ.