ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಕರ್ನಾಟಕ

ನಿಮ್ಮ ಗೆಲುವಿನಲ್ಲಿ ಸಚಿವರ ಪಾತ್ರ ಎಷ್ಟಿದೆ ಎಂಬುದು ಆತ್ಮವಿಮರ್ಶೆ ಮಾಡಿಕೊಳ್ಳಿ : ಭರಣಿ ವೆಂಕಟೇಶ್ ವಾಗ್ದಾಳಿ

ಗೆಲುವಿನಲ್ಲಿ ಸಚಿವರ ಪಾತ್ರ ಎಷ್ಟಿದೆ ಎಂಬುದು ಆತ್ಮವಿಮರ್ಶೆ ಮಾಡಿಕೊಳ್ಳಿ

ಬುಧವಾರ ನಾವು ಸುದ್ದಿಗೋಷ್ಠಿ ನಡೆಸುವ ವಿಚಾರ ತಿಳಿಯುತ್ತಿದ್ದಂತೆ ಯಾರೋ ಒಬ್ಬರು ಪೋನ್ ಸರ್ ಮಾಡಿ ತಪ್ಪಾಗಿದೆ. ಬೈ ಮಿಸ್ಟೇಕ್ ಅದನ್ನು ಮಾಧ್ಯಮಕ್ಕೆ ಕೊಟ್ಟು ಬಿಟ್ಟಿದ್ದಾರೆ. ಅದೆಲ್ಲಾ ಸುಳ್ಳು, 3 ಕೋಟಿ ಅನುದಾನದ ಪೈಕಿ 99 ಲಕ್ಷ ಮೊದಲು ಕಂತಾಗಿ ಬಿಡುಗಡೆ ಮಾಡಿದ್ದು ಆಕ್ಷನ್ ಪ್ಲಾನ್ ಆಗಿದೆ. ಕಾಮಗಾರಿ ನಡೆಯುತ್ತಿದೆ.

MP Dr.K.Sudhakar: ನಾರಿ ಶಕ್ತಿ ವಂದನಾ ಅಧಿನಿಯಮ ವಿರೋಧಿಸಿ ಮಹಿಳೆಯರಿಗೆ ಅನ್ಯಾಯ ಮಾಡಿದ ಕಾಂಗ್ರೆಸ್‌, ಮತ ಕೊಡಲು ಮಾತ್ರ ಮಹಿಳೆಯರು ಬೇಕಾ?: ಡಾ.ಕೆ.ಸುಧಾಕರ್‌ ಆಕ್ರೋಶ

ಮತ ಕೊಡಲು ಮಾತ್ರ ಮಹಿಳೆಯರು ಬೇಕಾ?

ಮಹಿಳೆಯರು ರಾಜಕೀಯದಲ್ಲಿ ಹೆಚ್ಚು ಭಾಗವಹಿಸಬೇಕೆಂದು ಪ್ರಧಾನಿ ನರೇಂದ್ರ ಮೋದಿ ನಾರಿ ಶಕ್ತಿ ವಂದನಾ ಅಧಿನಿಯಮ ತಿದ್ದುಪಡಿ ಮಸೂದೆ ಜಾರಿ ಮಾಡಲು ಮುಂದಾಗಿದ್ದರು. ಆದರೆ ಕಾಂಗ್ರೆಸ್‌ ಸೇರಿದಂತೆ ಇಂಡಿ ಕೂಟದ ಸದಸ್ಯರು ಮಹಿಳೆಯರಿಗೆ ಮೀಸಲಾತಿ ನೀಡುವುದನ್ನು ವಿರೋಧ ಮಾಡಿ ದ್ದಾರೆ. 60 ವರ್ಷ ಆಡಳಿತ ನಡೆಸಿದ ಕಾಂಗ್ರೆಸ್‌ ಎಂದಿಗೂ ಮಹಿಳಾ ಮೀಸಲಾತಿ ನೀಡಲಿಲ್ಲ

ಪ್ರಧಾನಿ ಮೋದಿ ವಿರುದ್ಧ ಲಘು ಹೇಳಿಕೆ; ಖರ್ಗೆ ಕ್ಷಮೆಯಾಚಿಸಲಿ ಎಂದು ಜೋಶಿ ಆಗ್ರಹ

ಪ್ರಧಾನಿ ಮೋದಿ ವಿರುದ್ಧ ಖರ್ಗೆ ಹೇಳಿಕೆಗೆ ಜೋಶಿ ತೀವ್ರ ಖಂಡನೆ

Pralhad Joshi: ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ಈರ್ವರೂ ಘನತೆ, ಗೌರವ ಮರೆತು ಪ್ರಧಾನಿ ವಿರುದ್ಧ ಕೆಳಮಟ್ಟದ ಭಾಷಣ ಮಾಡಿರುವುದು ದುರಹಂಕಾರದ ಪರಮಾವಧಿ. ಇದು ಅವರ ನೀಚ ರಾಜಕಾರಣವನ್ನು ಪ್ರತಿಬಿಂಬಿಸುತ್ತದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್‌ ಜೋಶಿ ಕಿಡಿಕಾರಿದ್ದಾರೆ.

Shivamogga Trial Blast Case: ಶಿವಮೊಗ್ಗ ಟ್ರಯಲ್‌ ಬ್ಲಾಸ್ಟ್‌ ಪ್ರಕರಣ; ಅಪರಾಧಿ ಅರಾಫತ್ ಅಲಿಗೆ 6 ವರ್ಷ ಜೈಲು ಶಿಕ್ಷೆ

ಶಿವಮೊಗ್ಗ ಟ್ರಯಲ್‌ ಬ್ಲಾಸ್ಟ್‌ ಪ್ರಕರಣ; ಅರಾಫತ್ ಅಲಿಗೆ 6 ವರ್ಷ ಜೈಲು

ಶಿವಮೊಗ್ಗದ ತೀರ್ಥಹಳ್ಳಿ ಮೂಲದ ಅರಾಫತ್ ಅಲಿಯನ್ನು ಎನ್ಐಎ ಅಧಿಕಾರಿಗಳು ದೆಹಲಿಯಲ್ಲಿ 2023ರಲ್ಲಿ ಬಂಧಿಸಿದ್ದರು. ಈತ ವಿಚಾರಣೆ ವೇಳೆ ತಪ್ಪೊಪ್ಪಿಗೆ ಹೇಳಿಕೆ ನೀಡಿದ್ದ. ಇದೀಗ ಈತನಿಗೆ 6 ವರ್ಷ ಜೈಲು ಶಿಕ್ಷೆ, 47 ಸಾವಿರ ರೂ. ದಂಡ ವಿಧಿಸಿ ಎನ್ಐಎ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ.

Akshaya Tritiya: ಇನ್‌ಸ್ಟಾಮಾರ್ಟ್‌ನಲ್ಲಿ 2 ಲಕ್ಷದ ಚಿನ್ನ-ಬೆಳ್ಳಿ ಆರ್ಡರ್‌ ಮಾಡಿದ ಬೆಂಗಳೂರಿಗ; ಬಂಗಾರದ ಖರೀದಿ 49 ಪಟ್ಟು ಹೆಚ್ಚಳ!

ಇನ್‌ಸ್ಟಾಮಾರ್ಟ್‌ನಲ್ಲಿ 2 ಲಕ್ಷದ ಚಿನ್ನ-ಬೆಳ್ಳಿ ಆರ್ಡರ್‌ ಮಾಡಿದ ಬೆಂಗಳೂರಿಗ

Instamart: 2026ರ ಅಕ್ಷಯ ತೃತೀಯ ದಿನದಂದು ಕ್ವಿಕ್ ಕಾಮರ್ಸ್ ದೈತ್ಯ 'ಇನ್‌ಸ್ಟಾಮಾರ್ಟ್' ದಾಖಲೆಯ ಮಟ್ಟದ ವಹಿವಾಟು ನಡೆಸಿದೆ. ಹಬ್ಬದ ಖರೀದಿ ಎಂದರೆ ಕೇವಲ ಚಿನ್ನವಷ್ಟೇ ಅಲ್ಲ ಎಂಬುದನ್ನು ಬೆಂಗಳೂರಿನ ಗ್ರಾಹಕನೊಬ್ಬ ಸಾಬೀತು ಮಾಡಿದ್ದಾನೆ. ಈತ ಒಂದೇ ಆರ್ಡರ್‌ನಲ್ಲಿ ಬರೋಬ್ಬರಿ 1,99,917 ರೂ. ಮೌಲ್ಯದ ವಸ್ತುಗಳನ್ನು ಖರೀದಿಸಿದ್ದಾನೆ! ಇದರಲ್ಲಿ 1.65 ಲಕ್ಷ ರುಪಾಯಿ ಮೌಲ್ಯದ ಬೆಳ್ಳಿಯ ಗಟ್ಟಿಗಳು, 31,800 ರುಪಾಯಿ ಮೌಲ್ಯದ ಚಿನ್ನದ ನಾಣ್ಯಗಳು ಇದ್ದವು.

ಯಕ್ಷಗಾನದಲ್ಲಿ ʼರಾಮಾಯಣʼಕ್ಕೆ ಅವಮಾನ? ವಿವಾದದ ಬೆನ್ನಲ್ಲೇ ʼವಿಶ್ವವಾಣಿʼಗೆ ಕಲಾವಿದ ದಿನೇಶ್‌ ಕೋಡಪದವು ಫಸ್ಟ್‌ ರಿಯಾಕ್ಷನ್‌

ನಾನೂ ರಾಮನ ಭಕ್ತ: ವಿವಾದ ಬೆನ್ನಲ್ಲೇ ಯಕ್ಷಗಾನ ಕಲಾವಿದ ದಿನೇಶ್‌ ಸ್ಪಷ್ಟನೆ

Yakshagana Controversy: ದಕ್ಷಿಣ ಕನ್ನಡದ ಜನಪ್ರಿಯ ಬಪ್ಪನಾಡು ಮೇಳದ ತುಳು ಯಕ್ಷಗಾನ ಪ್ರದರ್ಶನದ ವೇಳೆ ಹಾಸ್ಯ ಕಲಾವಿದ ದಿನೇಶ್‌ ಕೋಡಪದವು ಹಿಂದೂಗಳ ಪವಿತ್ರ ಮಹಾಕಾವ್ಯ ʼರಾಮಾಯಣʼವನ್ನು ತಿರುಚಿದ್ದಲ್ಲದೆ ರಾಮನನ್ನು ಅವಮಾನಿಸಿದ್ದಾರೆ ಎನ್ನುವ ವಿಚಾರ ಸದ್ಯ ಸಂಚಲನ ಮೂಡಿಸಿದೆ. ಇದೀಗ ಅವರು ʼವಿಶ್ವವಾಣಿ ಟಿವಿʼ ಯೂಟ್ಯೂಬ್‌ ಚಾನೆಲ್‌ ಜತೆ ಮಾತನಾಡಿಸ್ಪಷ್ಟನೆ ನೀಡಿದ್ದಾರೆ.

Bengaluru grenade case: ಬೆಂಗಳೂರಿನಲ್ಲಿ ಸಜೀವ ಗ್ರೆನೇಡ್ ಪತ್ತೆ ಪ್ರಕರಣ; ಏಳು ಅಪರಾಧಿಗಳಿಗೆ 7 ವರ್ಷ ಜೈಲು ಶಿಕ್ಷೆ ಪ್ರಕಟ

ಸಜೀವ ಗ್ರೆನೇಡ್ ಪತ್ತೆ ಪ್ರಕರಣ; ಏಳು ಅಪರಾಧಿಗಳಿಗೆ 7 ವರ್ಷ ಜೈಲು ಶಿಕ್ಷೆ

ಬೆಂಗಳೂರಿನಲ್ಲಿ ಗ್ರೆನೇಡ್ ಪತ್ತೆ ಪ್ರಕರಣದಲ್ಲಿ ಏಳು ಅಪರಾಧಿಗಳಿಗೆ 7 ವರ್ಷ ಜೈಲು ಶಿಕ್ಷೆ ವಿಧಿಸಿ ಎನ್‌ಐಎ ಕೋರ್ಟ್‌ ತೀರ್ಪು ನೀಡಿದೆ. ಬೆಂಗಳೂರಿನ ಆರ್.ಟಿ ನಗರದ ಮನೆಯಲ್ಲಿ ಆರೋಪಿಗಳು ಸಜೀವ ಗ್ರೆನೇಡ್, ಪಿಸ್ತೂಲ್, ಗುಂಡುಗಳನ್ನು ಸಂಗ್ರಹಿಸಿ ಇಟ್ಟುಕೊಂಡಿದ್ದರು. ಖಚಿತ ಮಾಹಿತಿ ಮೇರೆಗೆ 2023ರಲ್ಲಿ ಸಿಸಿಬಿ ಪೊಲೀಸರು ಸ್ಫೋಟಕ ವಸ್ತುಗಳನ್ನು ವಶಪಡಿಸಿಕೊಂಡಿದ್ದರು.

Betting Case: ಗೃಹ ಸಚಿವ ಪರಮೇಶ್ವರ್‌ಗೆ ʼಬೆಟ್ಟಿಂಗ್‌ʼ ಸಂಕಷ್ಟ; FIR ದಾಖಲಿಸಿ ತನಿಖೆಗೆ ಕೋರ್ಟ್ ಆದೇಶ

ಗೃಹ ಸಚಿವ ಪರಮೇಶ್ವರ್‌ಗೆ ʼಬೆಟ್ಟಿಂಗ್‌ʼ ಸಂಕಷ್ಟ; ತನಿಖೆಗೆ ಕೋರ್ಟ್ ಆದೇಶ

ತುಮಕೂರಿನಲ್ಲಿ ನಡೆದಿದ್ದ ರಾಜ್ಯಮಟ್ಟದ ಹೊನಲು ಬೆಳಕಿನ ಕಬಡ್ಡಿ ಪಂದ್ಯಾವಳಿ ವೇಳೆ ಬೆಟ್ಟಿಂಗ್‌ ಕಟ್ಟುವ ಹೇಳಿಕೆ ನೀಡಿದ್ದರಿಂದ ಗೃಹ ಸಚಿವ ಜಿ.ಪರಮೇಶ್ವರ್‌ ಅವರಿಗೆ ಸಂಕಷ್ಟ ಎದುರಾಗಿದೆ. ಈ ಕುರಿತು ಎಫ್‌ಐಆರ್‌ ದಾಖಲಿಸಿ, ತನಿಖೆ ನಡೆಸಲು ಬೆಂಗಳೂರಿನ ಕೋರ್ಟ್‌ ಆದೇಶ ಹೊರಡಿಸಿದೆ.

ರಸ್ತೆಯ ಗುಂಡಿ ಮುಚ್ಚಲು ಕೋಟ್ಯಂತರ ರುಪಾಯಿಯ ಪೋರ್ಷೆ ಕಾರಿನ ಮೇಲೆ ಸಿಮೆಂಟ್ ಬೆರೆಸಿದ ಬೆಂಗಳೂರು ಉದ್ಯಮಿ: ವಿಡಿಯೊ ನೋಡಿ

ಪೋರ್ಷೆ ಕಾರಿನ ಮೇಲೆ ಸಿಮೆಂಟ್ ಮಿಶ್ರಣ ಮಾಡಿ ರಸ್ತೆ ಗುಂಡಿ ಮುಚ್ಚಿದ ಉದ್ಯಮಿ

Viral Video: ವಾಹನಗಳ ಸಂಖ್ಯೆ ಮಿತಿ ಮೀರಿದರೂ ಅಲ್ಲಲ್ಲಿ ರಸ್ತೆ ಮಧ್ಯೆ ಸಿಗುವ ಗುಂಡಿಗಳು ಪ್ರಯಾಣಿಕರನ್ನು ಆತಂಕಕ್ಕೆ ತಳ್ಳುತ್ತವೆ. ಇದೀಗ ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವಂತೆ ಖ್ಯಾತ ಉದ್ಯಮಿಯೊಬ್ಬರು ವಿಶಿಷ್ಟ ಪ್ರತಿಭಟನೆ ನಡೆಸಿದ್ದಾರೆ. ಅವರು ತಮ್ಮ ಐಷಾರಾಮಿ ಪೋರ್ಷೆ ಕಾರಿನ ಬಾನೆಟ್‌ನಲ್ಲಿ ಸಿಮೆಂಟ್‌ ಕಲೆಸಿ ರಸ್ತೆ ಗುಂಡಿಯನ್ನು ಮುಚ್ಚಿದ್ದಾರೆ. ಈ ವಿಡಿಯೊ ಇದೀಗ ವೈರಲ್‌ ಆಗಿದೆ.

Bengaluru Murder Case: ವೆಸ್ಟರ್ನ್ ಸ್ಟೈಲ್‌ನಲ್ಲಿ ಪ್ರಪೋಸ್ ಮಾಡ್ತೀನಿ ಎಂದು ಯುವಕನ ಕೈ-ಕಾಲು ಕಟ್ಟಿ, ಬೆಂಕಿ ಹಚ್ಚಿ ಕೊಂದ ಪ್ರೇಯಸಿ!

ಬೆಂಗಳೂರಿನಲ್ಲಿ ಯುವಕನ ಕೈ-ಕಾಲು ಕಟ್ಟಿ, ಬೆಂಕಿ ಹಚ್ಚಿ ಕೊಂದ ಪ್ರೇಯಸಿ!

ಬೆಂಗಳೂರಿನಲ್ಲಿ ನಡೆದ ಯುವಕನ ಆತ್ಮಹತ್ಯೆ ಪ್ರಕರಣಕ್ಕೆ ಸ್ಫೋಟಕ ತಿರುವು ಸಿಕ್ಕಿದೆ. ಆರಂಭದಲ್ಲಿ ಯುವಕ ತಾನಾಗಿಯೇ ಬೆಂಕಿ ಹಚ್ಚಿಕೊಂಡಿದ್ದ ಎಂದು ಪೊಲೀಸರಿಗೆ ಸುಳ್ಳು ಹೇಳಿದ್ದ ಯುವತಿಯ ಬಣ್ಣ ಸಿಸಿಟಿವಿ ದೃಶ್ಯಾವಳಿಗಳಿಂದ ಬಯಲಾಗಿದೆ. ಯುವಕನ ಕೈ-ಕಾಲು ಕಟ್ಟಿ, ಪೆಟ್ರೋಲ್‌ ಸುರಿದು ಪ್ರೇಯಸಿಯೇ ಬೆಂಕಿ ಹಚ್ಚಿದ್ದಾಳೆ ಎಂದು ತಿಳಿದುಬಂದಿದೆ.

ED Raid: ತಂದೆ-ತಾಯಿಗೆ ಒಬ್ಬ ಒಳ್ಳೆಯ ಮಗನಾಗಲು ಆಗಲೇ ಇಲ್ಲ: ನಲಪಾಡ್ ಹೀಗೆ ಹೇಳಿದ್ಯಾಕೆ?

ನಾನು ಒಬ್ಬ ಒಳ್ಳೆಯ ಮಗನಾಗಲು ಆಗಲೇ ಇಲ್ಲ: ನಲಪಾಡ್ ಬೇಸರ

Mohammed Haris Nalapad: ಬಿಟ್ ಕಾಯಿನ್ ಹಗರಣದ ಪ್ರಮುಖ ಆರೋಪಿ ಶ್ರೀಕೃಷ್ಣ ಅಲಿಯಾಸ್ ಶ್ರೀಕಿಯೊಂದಿಗೆ ಸಂಪರ್ಕ ಹೊಂದಿದ್ದಾರೆ ಎಂಬ ಆರೋಪದಲ್ಲಿ ಶಾಸಕ ಎನ್.ಎ. ಹ್ಯಾರಿಸ್ ಅವರ ಪುತ್ರ ಮೊಹಮ್ಮದ್ ನಲಪಾಡ್ ಅವರ ನಿವಾಸದ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ಬಗ್ಗೆ ಯುವ ಕಾಂಗ್ರೆಸ್‌ ನಾಯಕ ನಲಪಾಡ್‌ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದಾರೆ.

Women Reservation Bill: ಮಹಿಳಾ ಮೀಸಲಾತಿಯನ್ನು ಕಾಂಗ್ರೆಸ್ ಸದಾ ಬೆಂಬಲಿಸುತ್ತದೆ: ಸಿಎಂ ಸಿದ್ದರಾಮಯ್ಯ

ಮಹಿಳಾ ಮೀಸಲಾತಿಯನ್ನು ಕಾಂಗ್ರೆಸ್ ಸದಾ ಬೆಂಬಲಿಸುತ್ತದೆ: ಸಿಎಂ

CM Siddaramaiah: ಪ್ರಸ್ತುತ ಮಹಿಳಾ ಮೀಸಲಾತಿ ಬಿಲ್ ಅನ್ನು ಕಾಂಗ್ರೆಸ್ ವಿರೋಧಿಸಿತು ಎಂದು ಬಿಜೆಪಿ ಸುಳ್ಳುಪ್ರಚಾರ ಮಾಡುತ್ತಿದೆ. ಆದರೆ ಕಾಂಗ್ರೆಸ್ ಎಂದಿಗೂ ಮಹಿಳಾ ಮೀಸಲಾತಿಯನ್ನು ವಿರೋಧಿಸಿಲ್ಲ. ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳಾ ಮೀಸಲಾತಿಯನ್ನು ಜಾರಿಗೆ ತಂದಿದ್ದು ಕಾಂಗ್ರೆಸ್ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ನಾಸಿಕ್ ಟಿಸಿಎಸ್, ಹುಬ್ಬಳ್ಳಿ ಜಿಮ್ ಪ್ರಕರಣ; ಸಮಗ್ರ ತನಿಖೆಗೆ ಆಗ್ರಹಿಸಿ ಹಿಂದೂ ರಾಷ್ಟ್ರ ಸಮನ್ವಯ ಸಮಿತಿ ಮನವಿ

ನಾಸಿಕ್ ಟಿಸಿಎಸ್, ಹುಬ್ಬಳ್ಳಿ ಜಿಮ್ ಪ್ರಕರಣ; ಸಮಗ್ರ ತನಿಖೆಗೆ ಆಗ್ರಹ

ಮಹಾರಾಷ್ಟ್ರದ ನಾಸಿಕ್‌ನ ಐಟಿ ಕಂಪನಿಯಲ್ಲಿ ಬಹಿರಂಗಗೊಂಡಿರುವ ಗಂಭೀರ ಪ್ರಕರಣದ ಹಿನ್ನೆಲೆ ರಾಜ್ಯದ ವಿವಿಧ ಬಹುರಾಷ್ಟ್ರೀಯ ಕಂಪನಿಗಳಲ್ಲಿ ಮತ್ತು ಜಿಮ್‌ಗಳಲ್ಲಿ ಮಹಿಳಾ ಸುರಕ್ಷತೆ, ಧಾರ್ಮಿಕ ಒತ್ತಡ ಮತ್ತು ಕಾರ್ಯಸ್ಥಳದ ದುರ್ಬಳಕೆ ಕುರಿತಾಗಿ ಸಮಗ್ರ ತನಿಖೆ ನಡೆಸಬೇಕು ಎಂದು ಆಗ್ರಹಿಸಿ ಹಿಂದೂ ರಾಷ್ಟ್ರ ಸಮನ್ವಯ ಸಮಿತಿಯ ವತಿಯಿಂದ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳು, ಗೃಹ ಸಚಿವಾಲಯಕ್ಕೆ ಮನವಿ ಸಲ್ಲಿಸಲಾಯಿತು.

ಇಡಿ ದಾಳಿ: ಕೇಂದ್ರ ಸರ್ಕಾರ ಕಾಂಗ್ರೆಸ್‌ನವರನ್ನು ಟಾರ್ಗೆಟ್‌ ಮಾಡಿದೆ ಎಂದ ಸಿಎಂ

ಇಡಿ ದಾಳಿ: ಕೇಂದ್ರ ಸರ್ಕಾರ ಕಾಂಗ್ರೆಸ್‌ನವರನ್ನು ಗುರಿಯಾಗಿಸಿದೆ: ಸಿಎಂ

CM Siddaramaiah: ಬಿಜೆಪಿಯವರೇ ಮಹಿಳಾ ಮೀಸಲಾತಿ ವಿರೋಧಿಗಳು. ರಾಜೀವ್ ಗಾಂಧಿ ಪ್ರಧಾನಿಯಾಗಿದ್ದ ಸಂದರ್ಭದಲ್ಲಿ ಸಂವಿಧಾನಕ್ಕೆ 73, 74 ನೇ ತಿದ್ದುಪಡಿಗಳನ್ನು ತಂದು ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳಾ ಮೀಸಲಾತಿ ತಂದಿದ್ದು ಕಾಂಗ್ರೆಸ್. ಅದನ್ನು ರಾಜ್ಯಸಭೆಯಲ್ಲಿ ಕೆಡವಿದವರು ಎನ್.ಡಿ. ಎ ಈಗ ರಾಜಕೀಯಕ್ಕಾಗಿ ಕ್ಷೇತ್ರ ಮರು ವಿಂಗಡಣೆ ಸೇರಿಸಿ ಮಸೂದೆ ಮಂಡಿಸಿದ್ದಾರೆ. ನಮ್ಮದು ಕ್ಷೇತ್ರ ಮರು ವಿಂಗಡಣೆಗೆ ವಿರೋಧವೇ ಹೊರತು ಮಹಿಳಾ ಮೀಸಲಾತಿಗೆ ಅಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

AI-ಚಾಲಿತ ಸಾಧನಗಳಿಗಾಗಿ ಸರ್ಚ್ ಡಿಮ್ಯಾಂಡ್ ವರ್ಷದಿಂದ ವರ್ಷಕ್ಕೆ ಶೇ.60ರಷ್ಟು ಹೆಚ್ಚಳ: Amazon.in ಈಗ ವಿಶೇಷವಾದ 'AI ಸ್ಟೋರ್' ಪ್ರಾರಂಭ

Amazon.in ಈಗ ವಿಶೇಷವಾದ 'AI ಸ್ಟೋರ್' ಪ್ರಾರಂಭ

ವೇಗವಾಗಿ ಬದಲಾಗುತ್ತಿರುವ ತಂತ್ರಜ್ಞಾನದ ಜಗತ್ತನ್ನು ಗ್ರಾಹಕರು ಸುಲಭವಾಗಿ ಅರ್ಥಮಾಡಿಕೊಳ್ಳಲು ಮತ್ತು ತಾಂತ್ರಿಕ ಸಂಕೀರ್ಣತೆಗಳ ಬಗ್ಗೆ ಚಿಂತಿಸದೆ ಆತ್ಮವಿಶ್ವಾಸದ ನಿರ್ಧಾರಗಳನ್ನು ತೆಗೆದುಕೊಳ್ಳಲು ಸಹಾಯ ಮಾಡುವುದು ನಮ್ಮ ಉದ್ದೇಶವಾಗಿದೆ. ಈ AI ಸ್ಟೋರ್ ಎಲ್ಲಾ ಬುದ್ಧಿವಂತ ಸಾಧನಗಳನ್ನು ಒಂದೇ ಸೂರಿನಡಿ ತರುವ ಮೂಲಕ ಮತ್ತು ಪ್ರತಿ ಸಾಧನದ AI ವೈಶಿಷ್ಟ್ಯವು ಬಳಕೆದಾರರಿಗೆ ಹೇಗೆ ಸಹಕಾರಿ ಎಂಬುದನ್ನು ಸರಳವಾಗಿ ವಿವರಿಸುವ ಮೂಲಕ ಇದನ್ನು ಸಾಧ್ಯವಾಗಿಸುತ್ತದೆ.

ಮಾಲೀಕತ್ವ ವರ್ಗಾವಣೆ: ಮಾರಾಟಗಾರರ ಪ್ರೊಟೆಕ್ಷನ್ ಪಾಲಿಸಿಯೊಂದಿಗೆ ಸೇಫ್‌ಗಾರ್ಡ್ಸ್ ನೀಡಲಿದೆ ಸ್ಪಿನ್ನಿ

ಮಾಲೀಕತ್ವ ವರ್ಗಾವಣೆ: ಸೇಫ್‌ಗಾರ್ಡ್ಸ್ ನೀಡಲಿದೆ ಸ್ಪಿನ್ನಿ

ಕಾರನ್ನು ಖರೀದಿಸುವುದು ಮತ್ತು ಮಾರಾಟ ಮಾಡುವುದು ಸುಲಭ, ಆದರೆ ವಾಹನದ ಮಾಲೀಕತ್ವ ಬದಲಾವಣೆಯಲ್ಲಿನ ವಿಳಂಬಗಳು ಸಾಮಾನ್ಯವಾಗಿ ಕಾರು ಮಾರಾಟಗಾರರನ್ನು ದುರ್ಬಳಕೆಯ ಅಪಾಯಗಳು, ಅನಗತ್ಯ ಟ್ರಾಫಿಕ್ ಚಲನ್‌ಗಳು ಮತ್ತು ವಾಹನವನ್ನು ಹಸ್ತಾಂತರಿಸಿದ ನಂತರ ಕಾನೂನು ಸೂಚನೆಗಳಿಗೆ ಒಡ್ಡಿಕೊಳ್ಳುವಂತೆ ಮಾಡುತ್ತಿದೆ.

ಯಕ್ಷಗಾನದಲ್ಲಿ ʼರಾಮಾಯಣʼಕ್ಕೆ ಅವಮಾನ; ರಾವಣ ಸೀತೆಯನ್ನು ಅಪಹರಿಸಿದರೆ, ರಾಮ ರಾವಣನ ಪತ್ನಿಯನ್ನು ಕರೆತರಬೇಕಿತ್ತು ಎಂದ ಹಾಸ್ಯ ಕಲಾವಿದ

ಯಕ್ಷಗಾನದಲ್ಲೂ ʼರಾಮಾಯಣʼಕ್ಕೆ ಅವಮಾನ; ವಿಡಿಯೊ ವೈರಲ್‌

Viral Video: ತುಳು ಯಕ್ಷಗಾನ ಪ್ರದರ್ಶನದ ವೇಳೆ ಹಾಸ್ಯ ಕಲಾವಿದರೊಬ್ಬರು ಮಹಾಕಾವ್ಯ ʼರಾಮಾಯಣʼ ಕಥೆಯನ್ನು ತಿರುಚಿ ಹೇಳಿದ್ದು, ಇದಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಜತೆಗೆ ಇದೇ ವೇಷಧಾರಿ ʼರಾಮಾಯಣʼ ಕೃರ್ತ ವಾಲ್ಮೀಕಿ ಮಹರ್ಷಿಯನ್ನೂ ಅವಮಾನಿಸಿದ್ದಾರೆ. ಈ ಹಳೆಯ ವಿಡಿಯೊ ಸದ್ಯ ವಿಡಿಯೊ ವೈರಲ್‌ ಆಗಿದೆ.

Bengaluru News: ಬೆಂಗಳೂರಿನಲ್ಲಿ ಪ್ರೇಯಸಿ ಮನೆಯಲ್ಲೇ ಬೆಂಕಿ ಹಚ್ಚಿಕೊಂಡು ಯುವಕ ಆತ್ಮಹತ್ಯೆ!

ಪ್ರೇಯಸಿ ಮನೆಯಲ್ಲೇ ಬೆಂಕಿ ಹಚ್ಚಿಕೊಂಡು ಯುವಕ ಆತ್ಮಹತ್ಯೆ!

ಬೆಂಗಳೂರಿನ ಬ್ಯಾಡರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಅಂಜನಾಪುರದಲ್ಲಿ ಘಟನೆ ನಡೆದಿದೆ. ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಯುವಕ ಮತ್ತು ಯುವತಿ ನಡುವೆ ಸ್ನೇಹವಾಗಿ, ಅದು ನಂತರ ಪ್ರೀತಿಗೆ ತಿರುಗಿತ್ತು. ಯುವತಿಯನ್ನು ಮಾತನಾಡಲು ಮನೆಗೆ ತೆರಳಿದ್ದಾಗ, ಇಬ್ಬರ ನಡುವೆ ಜಗಳವಾಗಿದೆ. ಇದರಿಂದ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.

ಶೂನ್ಯ ನೇಮಕಾತಿ, ಶೂನ್ಯ ಹೊಸ ಬಸ್ಸುಗಳ ಸೇರ್ಪಡೆ ನಿಮ್ಮ ಸಾಧನೆ; ಬಿಜೆಪಿಗೆ ಸಚಿವ ರಾಮಲಿಂಗಾರೆಡ್ಡಿ ತಿರುಗೇಟು

ಶೂನ್ಯ ನೇಮಕಾತಿ, ಶೂನ್ಯ ಬಸ್ಸುಗಳ ಸೇರ್ಪಡೆ ಬಿಜೆಪಿ ಸಾಧನೆ

ನಾಲ್ಕು ಸಾರಿಗೆ ನಿಗಮಗಳು ನಷ್ಟದಲ್ಲಿದ್ದು, ಸಿಬ್ಬಂದಿಗೆ ಸಮರ್ಪಕ ಸಂಬಳವಿಲ್ಲ, ನೌಕರರಿಗೆ ವೇತನ ಹೆಚ್ಚಳ ಮಾಡಿಲ್ಲ. ಕೇವಲ ಬುರುಡೆ ಬಿಡುವ ರಾಮಲಿಂಗಾರೆಡ್ಡಿ ಅವರ ಸಾಧನೆ ಸಣ್ಣದಲ್ಲ. ಸಾರಿಗೆ ಇಲಾಖೆಯನ್ನು ಹಾಳುಬಾವಿಗೆ ತಳ್ಳಿ ನೆಮ್ಮದಿಯಾಗಿ ನಿದ್ರಿಸುತ್ತಿರುವ ಸಾಧಕರಾಗಿದ್ದಾರೆ ಎಂದು ರಾಜ್ಯ ಬಿಜೆಪಿ ಟೀಕಿಸಿತ್ತು. ಈ ಹಿನ್ನೆಲೆಯಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಪ್ರತಿಕ್ರಿಯೆ ನೀಡಿದ್ದಾರೆ.

Zameer Ahmed Khan: ಮತ್ತೆ ಜೆಡಿಎಸ್‌ಗೆ ಜಮೀರ್? ಊಹಾಪೋಹಕ್ಕೆ ಸಚಿವರ ಬ್ರೇಕ್‌

ಮತ್ತೆ ಜೆಡಿಎಸ್‌ಗೆ ಜಮೀರ್? ಊಹಾಪೋಹಕ್ಕೆ ಸಚಿವರ ಬ್ರೇಕ್‌

ದಾವಣಗೆರೆಯಲ್ಲಿ ನಡೆದ ಮುಸ್ಲಿಂ ನಾಯಕರ ಬಂಡಾಯ ಹಾಗೂ ಅದರ ಬಳಿಕ ಕಾಂಗ್ರೆಸ್​​ನಲ್ಲಿ (Congress) ಅಲ್ಪಸಂಖ್ಯಾತ ನಾಯಕರ ವಿರುದ್ಧ ಶಿಸ್ತು ಕ್ರಮ ತೆಗೆದುಕೊಂಡ ಬೆಳವಣಿಗೆಗೆ ಬೇಸತ್ತು ಸಚಿವ ಜಮೀರ್ ಅಹಮದ್‌ ಖಾನ್ ಪಕ್ಷ ತೊರೆಯುವ ಸಾಧ್ಯತೆ ಇದೆ ಎನ್ನಲಾಗಿತ್ತು. ಅದಕ್ಕೀಗ ಸ್ಪಷ್ಟನೆ ದೊರೆತಿದೆ.

Sirsi Doctor Murder Case: ಶಿರಸಿ ವೈದ್ಯನ ಕೊಲೆ ಪ್ರಕರಣದ ಆರೋಪಿ ಅರೆಸ್ಟ್: 15 ಲಕ್ಷ ರೂ.‌ ಮೌಲ್ಯದ ಚಿನ್ನಾಭರಣ, 50 ಸಾವಿರ ನಗದು ವಶಕ್ಕೆ

ಶಿರಸಿ ವೈದ್ಯನ ಕೊಲೆ ಆರೋಪಿ ಅರೆಸ್ಟ್: ಚಿನ್ನಾಭರಣ, ನಗದು ವಶಕ್ಕೆ

ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಗರದ ನ್ಯೂ ಕೆ.ಎಚ್.ಬಿ ಕಾಲೋನಿಯಲ್ಲಿ ಡಾ. ರಮೇಶ್ ಎಫ್. ಕಲ್ಗುಟ್ಕರ್ (51) ಎಂಬ ಆಯುರ್ವೇದ ವೈದ್ಯನ ಕೊಲೆಯಾಗಿತ್ತು. ಭಾನುವಾರ ಸಂಜೆ ಘಟನೆ ಬೆಳಕಿಗೆ ಬಂದಿತ್ತು‌. ಬಳಿಕ ಪ್ರಕರಣ ದಾಖಲಿಸಿಕೊಂಡ ಶಿರಸಿ ಹೊಸ ಮಾರುಕಟ್ಟೆ ಠಾಣೆ ಪೊಲೀಸರು ಶಂಕಿತ ಆರೋಪಿಯನ್ನು ಸೆರೆಹಿಡಿದಿದ್ದಾರೆ.

Road Accident: ವಧು ನೋಡಲು ಹೋಗುತ್ತಿದ್ದ ಗಂಡು, ಅಪ್ಪ- ಅಮ್ಮ ಅಪಘಾತದಲ್ಲಿ ದುರ್ಮರಣ

ವಧು ನೋಡಲು ಹೋಗುತ್ತಿದ್ದ ಗಂಡು, ಅಪ್ಪ- ಅಮ್ಮ ಅಪಘಾತದಲ್ಲಿ ದುರ್ಮರಣ

ಹಗರಿಬೊಮ್ಮನಹಳ್ಳಿ ತಾಲೂಕಿನ ಕಿತ್ನೂರು ಗ್ರಾಮದ ಕೊಟ್ರೇಶ್‌ಗೆ ಮದ್ವೆ ಮಾಡೋದಕ್ಕೆ ಮನೆಯವರು ಮುಂದಾಗಿದ್ದರು. ಕನ್ಯೆ ನೋಡುವ ಶಾಸ್ತ್ರವನ್ನೂ ಏರ್ಪಡಿಸಿದ್ದರು. ಕೊಟ್ರೇಶ್ ಬೈಕ್‌ನಲ್ಲಿ ತಂದೆ ತಾಯಿಯನ್ನು ಕೂರಿಸಿಕೊಂಡು ಹೆಣ್ಣಿನ ಮನೆಗೆ ತೆರಳುತ್ತಿದ್ದರು. ಇನ್ನೇನು ಸ್ವಲ್ಪವೇ ದೂರ ಹೋದರೆ ಹೆಣ್ಣಿನ ಮನೆ ಎಂಬಷ್ಟರಲ್ಲಿ ಜವರಾಯ ಬಂದೆರಗಿದ್ದಾನೆ.

Hindi in SSLC: ಎಸ್‌ಎಸ್‌ಎಲ್‌ಸಿಯಲ್ಲಿ ಹಿಂದಿ ಭಾಷೆಗೆ ಗ್ರೇಡ್‌ ಬೇಡ, ಅಂಕವನ್ನೇ ಕೊಡಿ: ಸರ್ಕಾರಕ್ಕೆ ಹೈಕೋರ್ಟ್‌ ಅಂತಿಮ ನಿರ್ದೇಶನ

ಹಿಂದಿಗೆ ಗ್ರೇಡ್‌ ಬೇಡ, ಅಂಕವನ್ನೇ ಕೊಡಿ: ಹೈಕೋರ್ಟ್‌ ಅಂತಿಮ ನಿರ್ದೇಶನ

ಎಸ್ಎಸ್ಎಲ್‌ಸಿಯಲ್ಲಿ ಹಿಂದಿ ಭಾಷೆಗೆ ಗ್ರೇಡ್ ಬದಲು ಅಂಕ ನೀಡುವಂತೆ ಈ ಹಿಂದೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಆದೇಶ ನೀಡಿತ್ತು. ಇದನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಹೈಕೋರ್ಟ್‌ಗೆ ಮರುಪರಿಶೀಲನ ಅರ್ಜಿ ಸಲ್ಲಿಸಿತ್ತು. ಇದೀಗ ಹೈಕೋರ್ಟ್ ಮರುಪರಿಶೀಲನೆ ಅರ್ಜಿಯನ್ನು ವಜಾಗೊಳಿಸಿ ಹಿಂದಿ ಭಾಷೆಗೆ ಗ್ರೇಡ್ ಬದಲು ಅಂಕಗಳನ್ನು ನೀಡಿ ಎಂದು ಮಹತ್ವದ ಆದೇಶ ಹೊರಡಿಸಿದೆ.

Zombie Drug: ಜೋಂಬಿ ಡ್ರಗ್ಸ್ ವಿಡಿಯೋ: ದುನಿಯಾ ವಿಜಿ, ಭಾಸ್ಕರ ರಾವ್‌ಗೆ ಎದುರಾಯ್ತು ಸಂಕಷ್ಟ

ಜೋಂಬಿ ಡ್ರಗ್ಸ್ ವಿಡಿಯೋ: ದುನಿಯಾ ವಿಜಿ, ಭಾಸ್ಕರ ರಾವ್‌ಗೆ ಬಂತು ಸಂಕಷ್ಟ

ವಿಡಿಯೋ ಕುರಿತಂತೆ ಸಮಾಜದ ಜಾಲತಾಣದಲ್ಲಿ ನಟ ವಿಜಯ್ ಮತ್ತು ಭಾಸ್ಕರ್ ರಾವ್ ವಿಡಿಯೋ ಅಪ್ಲೋಡ್ ಮಾಡಿದ್ದರು. ಪ್ರಕರಣ ಸಂಬಂಧ ಬಾಗಲೂರು ಪೊಲೀಸರು ತನಿಖೆ ಮುಂದುವರೆಸಿದ್ದಾರೆ. ಈಗಾಗಲೇ ಈ ವಿಡಿಯೋ ಹಂಚಿಕೊಂಡಿದ್ದ 15 ಜನರಿಗೆ ನೋಟಿಸ್ ನೀಡಿದ್ದಾರೆ. ಮಾಹಿತಿಯ ಬಗ್ಗೆ ದಾಖಲೆ ಒದಗಿಸುವಂತೆ ಸೂಚನೆ ನೀಡಿದ್ದಾರೆ.

Loading...