ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಕರ್ನಾಟಕ

ಎಂಎಸ್‌ಡಿಯು ವಿಸ್ತರಿತ ಹೈದರಾಬಾದ್ ತಂತ್ರಜ್ಞಾನ ಕೇಂದ್ರ ಉದ್ಘಾಟನೆ

ಎಂಎಸ್‌ಡಿಯು ವಿಸ್ತರಿತ ಹೈದರಾಬಾದ್ ತಂತ್ರಜ್ಞಾನ ಕೇಂದ್ರ ಉದ್ಘಾಟನೆ

MSDಯ ಡಿಜಿಟಲ್ ಹ್ಯೂಮನ್ ಹೆಲ್ತ್ ವಿಭಾಗದ ಹಿರಿಯ ಉಪಾಧ್ಯಕ್ಷರಾದ ಅಭಿಷೇಕ್ ನಾರಾ ಯಣ್ ಸಿಂಗ್ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಭಾರತದಲ್ಲಿ MSDಯ ದೀರ್ಘಕಾಲದ ಉಪಸ್ಥಿತಿಯ ಮುಂದುವರಿಕೆಯಾಗಿ, ವಿಸ್ತರಿಸಲಾದ ಈ ಕಚೇರಿಯು ಕಂಪನಿಯ ಜಾಗತಿಕ ತಂತ್ರಜ್ಞಾನ ಜಾಲವನ್ನು ಮತ್ತಷ್ಟು ಬಲಪಡಿಸುತ್ತದೆ ಮತ್ತು MSDಯ ಜೀವಗಳನ್ನು ಉಳಿಸುವ ಹಾಗೂ ಜೀವನವನ್ನು ಸುಧಾರಿಸುವ ಉದ್ದೇಶವನ್ನು ಮುನ್ನಡೆಸಲು ಸಹಾಯ ಮಾಡುವ, ವಿಸ್ತರಿಸ ಬಹುದಾದ ಡಿಜಿಟಲ್ ಪರಿಹಾರಗಳ ಅಭಿವೃದ್ಧಿಯತ್ತ ಗಮನಹರಿಸಿರುವ ತಂತ್ರಜ್ಞಾನ ಪ್ರತಿಭೆ ಗಳನ್ನು ಒಂದೆಡೆ ಸೇರಿಸುತ್ತದೆ.

Suttur Sri: ‘ದಾಸೋಹ ರತ್ನ’ ಮಧುಸೂದನ ಸಾಯಿ: ಕರ್ನಾಟಕದ ಕೀರ್ತಿ ಹೆಚ್ಚಿಸುವ ಸೇವಾ ಸಾಧನೆ

ಬಸವ ತತ್ತ್ವಗಳನ್ನು ಕೃತಿರೂಪಕ್ಕೆ ತರುತ್ತಿರುವ ಸದ್ದುಗದ್ದಲವಿಲ್ಲದ ಸಾಧನೆ

ಮಕ್ಕಳಿಗೆ ಪೌಷ್ಟಿಕ ಆಹಾರ, ಗ್ರಾಮೀಣ ಪ್ರದೇಶಗಳಿಗೆ ಕುಡಿಯುವ ನೀರು, ಗೋಶಾಲೆ, ಆಸ್ಪತ್ರೆ ಸೇರಿದಂತೆ ಹತ್ತಾರು ಸಮಾಜಮುಖಿ ಕಾರ್ಯಗಳನ್ನು ಮಧುಸೂದನ ಸಾಯಿ ಯಶಸ್ವಿಯಾಗಿ ಮುನ್ನಡೆಸುತ್ತಿದ್ದಾರೆ. ದೇಶ-ವಿದೇಶಗಳಲ್ಲಿ ಸೇವಾ ಕೇಂದ್ರಗಳನ್ನು ಸ್ಥಾಪಿಸಿ ಸಮಾಜದ ಒಳಿತಿಗಾಗಿ ಶ್ರಮಿಸುತ್ತಿರುವ ಅವರು, ಇಷ್ಟೆಲ್ಲ ಸಾಧನೆಗಳ ನಡುವೆಯೂ ವಿನಯದಿಂದ ಬದುಕುತ್ತಿರುವುದು ಶ್ಲಾಘನೀಯ

Chikkaballapur News: ಅಹವಾಲು ಆಲಿಕೆ, ಸ್ಥಳದಲ್ಲೇ ಸಮಸ್ಯೆ ಪರಿಹಾರಕ್ಕೆ ಒತ್ತು; ಸರ್ಕಾರದ ಯೋಜನೆಗಳ ಸೌಲಭ್ಯ ಪಡೆಯಲು ಅರ್ಜಿ ಸಲ್ಲಿಸಲು ಅವಕಾಶ

ಸೆ.12ರಂದು ಜಿಲ್ಲೆಯಾದ್ಯಂತ ‘ಪ್ರಜಾಸೇವೆ ಆಂದೋಲನ’

ಸಾರಿಗೆ ಸಚಿವರು ಹಾಗೂ ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವ ಬಿ.ಎಸ್. ಸುರೇಶ್ ಹಾಗೂ ಆಯಾ ವಿಧಾನಸಭಾ ಕ್ಷೇತ್ರಗಳ ಶಾಸಕರ ನೇತೃತ್ವದಲ್ಲಿ ನಡೆಯಲಿರುವ ಸಭೆಗಳಲ್ಲಿ ಸಾರ್ವಜನಿಕರು ತಮ್ಮ ಅಹವಾಲು, ಸಮಸ್ಯೆ ಹಾಗೂ ಬೇಡಿಕೆಗಳನ್ನು ಅಧಿಕಾರಿಗಳ ಗಮನಕ್ಕೆ ತರಬಹು ದಾಗಿದೆ. ಇದೇ ವೇಳೆ ಸರ್ಕಾರದ ವಿವಿಧ ಜನಪರ ಯೋಜನೆಗಳ ಸೌಲಭ್ಯ ಪಡೆಯಲು ಅರ್ಹ ಫಲಾನುಭವಿಗಳು ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ನೆಲಮಂಗಲದಲ್ಲಿ 3 ವರ್ಷದ ಬಾಲಕಿ ಅನುಮಾನಾಸ್ಪದ ಸಾವು; ಮಲ ತಾಯಿಯಿಂದ ಕೊಲೆ ಶಂಕೆ!

ನೆಲಮಂಗಲದಲ್ಲಿ 3 ವರ್ಷದ ಬಾಲಕಿ ಅನುಮಾನಾಸ್ಪದ ಸಾವು; ಕೊಲೆ ಶಂಕೆ!

Nelamangala News: ಬೆಂಗಳೂರು ಉತ್ತರ ತಾಲೂಕಿನ ತೋಟದಗುಡ್ಡಹಳ್ಳಿಯಲ್ಲಿ ಘಟನೆ ನಡೆದಿದೆ. ಬಾಲಕಿಯ ಸಾವಿನ ಹಿಂದೆ ಮಲತಾಯಿಯ ಕೈವಾಡವಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಮಾದನಾಯಕನಹಳ್ಳಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Chikkaballapur News: ಮುನ್ಸಿಪಲ್ ಬಡಾವಣೆಯ ಗಣೇಶೋತ್ಸವಕ್ಕೆ ‘ವರಾಹ ವೈಭವಹಾರ’ದ ವೈಭವ

29ನೇ ಮಹೋತ್ಸವದ ಅಂಗವಾಗಿ ವಿಶೇಷ ಧಾರ್ಮಿಕ ಕಾರ್ಯಕ್ರಮ

ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಘ್ನೇಶ್ವರನು ಸನಾತನ ಧರ್ಮದ ಪ್ರಥಮ ವಂದಿತ ದೇವತೆಯಾಗಿದ್ದು, ಗಣೇಶೋತ್ಸವವು ವಯಸ್ಸು, ಮತ-ಧರ್ಮದ ಭೇದವಿಲ್ಲದೆ ಜನರನ್ನು ಒಗ್ಗೂಡಿಸುವ ಭಕ್ತಿಯ ಹಬ್ಬ ವಾಗಿದೆ. ಈ ಪರಂಪರೆಯನ್ನು ಶ್ರದ್ಧೆ, ಭಕ್ತಿ ಹಾಗೂ ಸೌಹಾರ್ದತೆಯಿಂದ ಮುಂದುವರಿಸುವ ಉದ್ದೇಶ ದಿಂದ 29ನೇ ವರ್ಷದ ಗಣೇಶೋತ್ಸವವನ್ನು ಆಯೋಜಿಸಲಾಗಿದೆ

ಭ್ರಷ್ಟ ಕಾಂಗ್ರೆಸ್‌ ಸರ್ಕಾರ ಕಿತ್ತೆಸೆಯಲು ಬಳ್ಳಾರಿ ನೆಲದಲ್ಲೇ ಬಿಜೆಪಿ ಸಂಕಲ್ಪ: ಪ್ರಲ್ಹಾದ್‌ ಜೋಶಿ

ಕಾಂಗ್ರೆಸ್‌ ಸರ್ಕಾರ ಕಿತ್ತೆಸೆಯಲು ಬಳ್ಳಾರಿ ನೆಲದಲ್ಲೇ ಬಿಜೆಪಿ ಸಂಕಲ್ಪ

Pralhad Joshi: ಬಳ್ಳಾರಿಯಲ್ಲಿ ಗುರುವಾರ ಸಂಜೆ ಬಿಜೆಪಿ ಹಮ್ಮಿಕೊಂಡಿದ್ದ ʼಬಳ್ಳಾರಿ ಚಲೋʼ ಪಾದಯಾತ್ರೆ ಸಮಾರೋಪ ಸಮಾರಂಭ ಉದ್ದೇಶಿಸಿ ಮಾತನಾಡಿದ ಕೇಂದ್ರ ಶಿಕ್ಷಣ ಸಚಿವ ಪ್ರಲ್ಹಾದ್‌ ಜೋಶಿ, ಮಿತಿ ಮೀರಿದ ಭ್ರಷ್ಟಾಚಾರ, ತುಷ್ಟೀಕರಣದ ಕಾಂಗ್ರೆಸ್‌ ಪಕ್ಷಕ್ಕೆ ಈ ಬಳ್ಳಾರಿ ನೆಲದಿಂದಲೇ ಉತ್ತರ ಕೊಡುವ ಸಂಕಲ್ಪ ಮಾಡಿದೆ ಬಿಜೆಪಿ ಎಂದು ಹೇಳಿದ್ದಾರೆ.

‘ಬಳ್ಳಾರಿ ಚಲೋ’ ಪಾದಯಾತ್ರೆಗೆ ತೆರೆ; ಕಾಂಗ್ರೆಸ್ ಸರ್ಕಾರವನ್ನು ಮನೆಗೆ ಕಳುಹಿಸಲು ಜನರು ತೀರ್ಮಾನಿಸಿದ್ದಾರೆ ಎಂದ ವಿಜಯೇಂದ್ರ

ಕಾಂಗ್ರೆಸ್ ಸರ್ಕಾರವನ್ನು ಮನೆಗೆ ಕಳುಹಿಸಲು ಜನರು ತೀರ್ಮಾನಿಸಿದ್ದಾರೆ

Ballari Chalo Padayatra: ಕಾಂಗ್ರೆಸ್ ಸರ್ಕಾರವನ್ನು ಕೆಳಗಿಳಿಸಲು ರಾಜ್ಯದ ಜನರು ತೀರ್ಮಾನಿಸಿದ್ದಾರೆ ಎಂಬುದು ‘ಬಳ್ಳಾರಿ ಚಲೋ’ ಪಾದಯಾತ್ರೆಯ ಸಂದರ್ಭದಲ್ಲಿ ಕಂಡುಬಂದ ಜನಬೆಂಬಲದಿಂದ ಸ್ಪಷ್ಟವಾಗಿದೆ ಎಂದು ಬಿ.ವೈ.ವಿಜಯೇಂದ್ರ ಹೇಳಿದರು. ಬಳ್ಳಾರಿ ಚಲೋ ಸಮಾರೋಪ ಸಮಾವೇಶದಲ್ಲಿ ಅವರು ಮಾತನಾಡಿದ್ದಾರೆ.

ಡಿಕೆಶಿ ಸರ್ಕಾರಕ್ಕೆ ಶತದಿನದ ಸಂಭ್ರಮ: ವಿದ್ಯುತ್ ದೀಪಾಲಂಕಾರದಲ್ಲಿ ಕಂಗೊಳಿಸಿ‌ದ ಕಲಬುರಗಿ ಮಿನಿ ವಿಧಾನಸೌಧ, ಜಗತ್ ವೃತ್ತ

ವಿದ್ಯುತ್ ದೀಪಾಲಂಕಾರದಲ್ಲಿ ಕಂಗೊಳಿಸಿ‌ದ ಕಲಬುರಗಿ ಮಿನಿ ವಿಧಾನಸೌಧ

Kalaburagi News: ಸಿಎಂ ಡಿ.ಕೆ. ಶಿವಕುಮಾರ್‌ ನೇತೃತ್ವದ ರಾಜ್ಯ ಸರ್ಕಾರ 100 ದಿನ ಪೂರೈಸಿರುವ ಹಿನ್ನೆಲೆಯಲ್ಲಿ ಕಲಬುರಗಿ ನಗರದ ಮಿನಿ ವಿಧಾನ ಸೌಧ ಕಟ್ಟಡ ಮತ್ತು ಜಗತ್ ವೃತ್ತಗಳು‌ ಗುರುವಾರ ಸಂಜೆ ಹಳದಿ, ಕೆಂಪು ಬಣ್ಣದ ವಿದ್ಯುತ್ ದೀಪಾಲಂಕಾರದಲ್ಲಿ ಕಂಗೊಳಿಸಿದವು.

BJP Padayatra: ರಾಜ್ಯದಲ್ಲಿ ಎನ್‍ಡಿಎ ಸರ್ಕಾರ ಅಧಿಕಾರಕ್ಕೆ ತರುವವರೆಗೆ ಹೋರಾಟ ಮುಂದುವರಿಯಲಿದೆ: ವಿಜಯೇಂದ್ರ

ಎನ್‍ಡಿಎ ಸರ್ಕಾರ ಅಧಿಕಾರಕ್ಕೆ ತರುವವರೆಗೆ ಹೋರಾಟ: ವಿಜಯೇಂದ್ರ

BY Vijayendra: ಮುನ್ಸಿಪಲ್ ಮೈದಾನದಲ್ಲಿ ಬಿಜೆಪಿ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಸರ್ಕಾರವು ಅವಕಾಶ ನೀಡಿರಲಿಲ್ಲ. 15 ವರ್ಷಗಳ ಬಳಿಕ ನಮ್ಮ ಹೋರಾಟಕ್ಕೆ ಮಣಿದು ಅವಕಾಶ ಕೊಟ್ಟಿದೆ. ನಮ್ಮ ನಿಜವಾದ ಹೋರಾಟ ಇವತ್ತಿನಿಂದ ಆರಂಭ. ಎನ್‍ಡಿಎ ಸರ್ಕಾರವನ್ನು ಅಧಿಕಾರಕ್ಕೆ ತರುವವರೆಗೆ ಹೋರಾಟ ಮುಂದುವರೆಯಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ತಿಳಿಸಿದ್ದಾರೆ.

BJP Padayatra: ʼಬಳ್ಳಾರಿ ಚಲೋ' ಪಾದಯಾತ್ರೆ ಸಮಾರೋಪ; ಬಿಜೆಪಿಯಿಂದ 16 ನಿರ್ಣಯಗಳು

ʼಬಳ್ಳಾರಿ ಚಲೋ' ಪಾದಯಾತ್ರೆ ಸಮಾರೋಪ; ಬಿಜೆಪಿಯಿಂದ 16 ನಿರ್ಣಯಗಳು

ರಾಜ್ಯ ಸರ್ಕಾರದ ವೈಫಲ್ಯಗಳ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರ ನೇತೃತ್ವದಲ್ಲಿ 10 ದಿನಗಳ ಕಾಲ ನಡೆದ ಬಳ್ಳಾರಿ ಚಲೋ ಪಾದಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಶಂಖನಾದ ಮೊಳಗಿಸಿ ಕಾಂಗ್ರೆಸ್‌ ಮುಕ್ತ ಕರ್ನಾಟಕಕ್ಕೆ ಬಿಜೆಪಿ ನಾಯಕರು ಸಂಕಲ್ಪ ಮಾಡಿದರು.

ಹಣವಂತರಿಗಿಂತ ಶುದ್ಧ ನೀರು ಕುಡಿಯುವವನೇ ನಿಜವಾದ ಯೋಗವಂತ: ರಾಘವೇಶ್ವರ ಭಾರತೀ ಶ್ರೀ

ಹಣವಂತರಿಗಿಂತ ಶುದ್ಧ ನೀರು ಕುಡಿಯುವವನೇ ನಿಜವಾದ ಯೋಗವಂತ: ರಾಘವೇಶ್ವರ ಶ್ರೀ

Sri Raghaveshwara Bharathi Swamiji: ನಗರ ವಲಸೆಗೆ ಉದ್ಯೋಗದ ಜತೆಗೆ ನಗರದ ವ್ಯಾಮೋಹ ಹಾಗೂ ಹಳ್ಳಿಯ ಹುಡುಗರಿಗೆ ಹೆಣ್ಣು ಸಿಗುತ್ತಿಲ್ಲ ಎಂಬ ಕಾರಣವೂ ಮುಖ್ಯವಾಗಿದೆ. ಹಣಕ್ಕಿಂತ ಶುದ್ಧ ನೀರು ಮತ್ತು ನೆಮ್ಮದಿಯ ಜೀವನವಿರುವ ಹಳ್ಳಿ ವಾಸವೇ ಶ್ರೇಷ್ಠ ಎಂಬ ಸತ್ಯವನ್ನು ಯುವಜನರು ಅರಿಯಬೇಕಿದೆ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ ತಿಳಿಸಿದ್ದಾರೆ.

Kodi Mutt Swamiji: ದಕ್ಷಿಣ ಭಾರತದವೂ ನೇಪಾಳದಂತೆ ಆಗಲಿದೆ: ಕೋಡಿಮಠ ಶ್ರೀಗಳಿಂದ ಸ್ಫೋಟಕ ಭವಿಷ್ಯ!

ದಕ್ಷಿಣ ಭಾರತದವೂ ನೇಪಾಳದಂತೆ ಆಗಲಿದೆ: ಕೋಡಿಮಠ ಶ್ರೀಗಳಿಂದ ಸ್ಫೋಟಕ ಭವಿಷ್ಯ!

ಹಾಸನದಲ್ಲಿ ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಮಹಾಸ್ವಾಮೀಜಿ ಅವರು, ಈ ವರ್ಷದಲ್ಲಿ ನಡೆಯಬಹುದಾದ ವಿದ್ಯಮಾನಗಳ ಬಗ್ಗೆ ಮಾತನಾಡಿದ್ದಾರೆ. ಬರುವ ದಿನಗಳಲ್ಲಿ ದಕ್ಷಿಣ ಭಾರತದಲ್ಲೂ ಭೀಕರ ಪ್ರಕೃತಿ ವಿಕೋಪಗಳು ಸಂಭವಿಸುವ ಲಕ್ಷಣಗಳಿವೆ ಎಂದು ಶ್ರೀಗಳು ಭವಿಷ್ಯ ನುಡಿದಿದ್ದಾರೆ.

ಡಿಕೆಶಿ ಸರ್ಕಾರಕ್ಕೆ 100 ದಿನಗಳ ಸಂಭ್ರಮ; 2037ರ ವೇಳೆಗೆ ರಾಜ್ಯದ ಆರ್ಥಿಕತೆ 1 ಟ್ರಿಲಿಯನ್‌ಗೆ ಹೆಚ್ಚಿಸುವ ಮಹಾ ಸಂಕಲ್ಪ ಮಾಡಿದ ಸಿಎಂ

ರಾಜ್ಯದ ಆರ್ಥಿಕತೆ 1 ಟ್ರಿಲಿಯನ್‌ಗೆ ಹೆಚ್ಚಿಸುವ ಮಹಾ ಸಂಕಲ್ಪ ಮಾಡಿದ ಸಿಎಂ

CM DK Shivakumar: ಎಲ್ಲಾ 224 ಶಾಸಕರು, 75 ಪರಿಷತ್ ಸದಸ್ಯರು, 28 ಲೋಕಸಭೆ ಸದಸ್ಯರು ಹಾಗೂ 12 ರಾಜ್ಯಸಭೆ ಸದಸ್ಯರು ಒಟ್ಟಾಗಿ ರಾಜ್ಯದ ಪ್ರಗತಿಗೆ ದುಡಿಯಲು ಈ ಸರ್ಕಾರ ಕೆಲಸ ಮಾಡಲಿದೆ. ಯಾರು ಸಹಕಾರ ನೀಡಲಿ ಬಿಡಲಿ, ನಾವು ಸಂವಿಧಾನ ಬದ್ಧವಾಗಿ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಕೆಲಸ ಮಾಡುವುತ್ತೇವೆ ಎಂದು ಮಾತು ನೀಡುತ್ತೇನೆ. ರಾಗ, ದ್ವೇಷ, ಅಸೂಯೆ ಇಟ್ಟುಕೊಳ್ಳದೆ, ಸರ್ವರಿಗೂ ಸಮಪಾಲು, ಸಮಬಾಳು ಎಂದು ಕರ್ನಾಟಕದ ಪ್ರಗತಿಯ ರಥವನ್ನು ಮುನ್ನಡೆಸಲು ನಾನು ನಿಮ್ಮ ಮುಂದೆ ನಿಂತಿರುವೆ ಎಂದು ಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಅಪರೂಪದ ಕ್ಷಣಗಳಿಗೆ ಸಾಕ್ಷಿಯಾದ 100 ದಿನಗಳ ದೃಢ ಕರ್ನಾಟಕದ ಸಂಕಲ್ಪ ಸಮಾರಂಭ; ಗ್ಯಾರಂಟಿ ಫಲಾನುಭವಿಗಳೊಂದಿಗೆ ಭೋಜನ ಸವಿದ ಸಿಎಂ ಡಿಕೆಶಿ

ಅಪರೂಪದ ಕ್ಷಣಗಳಿಗೆ ಸಾಕ್ಷಿಯಾದ ದೃಢ ಕರ್ನಾಟಕದ ಸಂಕಲ್ಪ ಸಮಾರಂಭ

DK Shivakumar govt marks 100 days: ನಾಡಿನ ಜನರ ಬೆಂಬಲವೇ ನಮ್ಮ ಶಕ್ತಿ, ಜನರ ವಿಶ್ವಾಸವೇ ನಮ್ಮ ಬೆನ್ನೆಲುಬು. ಜನರ ಬದುಕಿನಲ್ಲಿ ಬದಲಾವಣೆ ತಂದು, ಕರ್ನಾಟಕವನ್ನು ಅಭಿವೃದ್ಧಿಯ ಉತ್ತುಂಗಕ್ಕೆ ಕೊಂಡೊಯ್ಯುವುದೇ ನಮ್ಮ ಧ್ಯೇಯ. ಪ್ರಜಾಸೇವಕನಾಗಿ ‘ಟೀಮ್‌ ಕರ್ನಾಟಕ’ದೊಂದಿಗೆ ನಿಮ್ಮ ಮುಂದಿದ್ದೇನೆ. ಕೃಷಿ, ಶಿಕ್ಷಣ, ಉದ್ಯೋಗ, ತಂತ್ರಜ್ಞಾನ, ಮೂಲಸೌಕರ್ಯ ಹಾಗೂ ಜೀವನಮಟ್ಟ ಸುಧಾರಣೆ ಸೇರಿದಂತೆ ಪ್ರತಿಯೊಂದು ಕ್ಷೇತ್ರದಲ್ಲೂ ಕರ್ನಾಟಕವನ್ನು ಅಭಿವೃದ್ಧಿಯತ್ತ ಕೊಂಡೊಯ್ಯಲು ನಾವು ನಿರಂತರವಾಗಿ ಕಾರ್ಯನಿರ್ವಹಿಸುತ್ತಿದ್ದೇವೆ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ.

Dasoha Ratna Award: ಬಸವ ಸಮಿತಿಯಿಂದ ಸದ್ಗುರು ಶ್ರೀ ಮಧುಸೂದನ ಸಾಯಿ ಅವರಿಗೆ 'ದಾಸೋಹ ರತ್ನ' ಪ್ರಶಸ್ತಿ ಪ್ರದಾನ

ಸದ್ಗುರು ಶ್ರೀ ಮಧುಸೂದನ ಸಾಯಿ ಅವರಿಗೆ 'ದಾಸೋಹ ರತ್ನ' ಪ್ರಶಸ್ತಿ ಪ್ರದಾನ

Sadguru Sri Madhusudan Sai: ಅಕ್ಷರ, ಆರೋಗ್ಯ ಮತ್ತು ಪೌಷ್ಟಿಕ ಆಹಾರ ಕ್ಷೇತ್ರದಲ್ಲಿ ಸಲ್ಲಿಸುತ್ತಿರುವ ಸೇವೆಯನ್ನು ಪರಿಗಣಿಸಿ ಒನ್ ವರ್ಲ್ಡ್ ಒನ್ ಫ್ಯಾಮಿಲಿ ಮಿಷನ್‌ನ ಸಂಸ್ಥಾಪಕರಾದ ಸದ್ಗುರು ಶ್ರೀ ಮಧುಸೂದನ ಸಾಯಿ ಅವರಿಗೆ ಬಸವ ಸಮಿತಿಯಿಂದ ಪ್ರತಿಷ್ಠಿತ ‘ದಾಸೋಹ ರತ್ನ’ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

ಡಿಕೆಶಿ ಸರ್ಕಾರ ಸರಿಯಾದ ಹಾದಿಯಲ್ಲಿ ಸಾಗುತ್ತಿದೆ; ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆಗಳನ್ನು ಈಡೇರಿಸಲು ಮಾಜಿ ಸಿಎಂ ಸಿದ್ದರಾಮಯ್ಯ ಕಿವಿಮಾತು

ಡಿಕೆಶಿ ಸರ್ಕಾರ ಸರಿಯಾದ ಹಾದಿಯಲ್ಲಿ ಸಾಗುತ್ತಿದೆ: ಸಿದ್ದರಾಮಯ್ಯ ಮೆಚ್ಚುಗೆ

ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಆಯೋಜಿಸಿದ್ದ "ದೃಢ ಕರ್ನಾಟಕದ ಸಂಕಲ್ಪ - 100 ದಿನಗಳ ಯಶಸ್ವಿ ಪೂರೈಕೆ" ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಡಿ.ಕೆ.ಶಿವಕುಮಾರ್‌ ಮಾತನಾಡಿದ್ದಾರೆ. ಪ್ರಣಾಳಿಕೆಯಲ್ಲಿ ಇರುವ ಭರವಸೆಗಳನ್ನು ಒಂದೇ ವರ್ಷದಲ್ಲಿ ಜಾರಿ ಮಾಡಬೇಕು ಎಂದೇನಿಲ್ಲ. 5 ವರ್ಷಗಳು ಅವಕಾಶವಿದೆ. ಅಷ್ಟರೊಳಗೆ ಎಲ್ಲ ಭರವಸೆಗಳನ್ನು ಈಡೇರಿಸುವಂತಹ ಕೆಲಸವನ್ನು ಮಾಡಬೇಕು ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ ಸಲಹೆ ನೀಡಿದ್ದಾರೆ.

ರಾಜಕೀಯ ರಂಗದಲ್ಲಿ ಆಧುನಿಕತೆ, ಹೋರಾಟಕ್ಕೆ ಇನ್ನೊಂದು ಹೆಸರೇ ಡಿ.ಕೆ. ಶಿವಕುಮಾರ್ ಎಂದ ಡಿಸಿಎಂ ಪರಮೇಶ್ವರ್

ರಾಜಕೀಯ ರಂಗದಲ್ಲಿ ಆಧುನಿಕತೆ, ಹೋರಾಟಕ್ಕೆ ಇನ್ನೊಂದು ಹೆಸರೇ ಡಿಕೆಶಿ

Dr G Parameshwara: ಇತ್ತೀಚಿನ ರಾಜಕೀಯ ರಂಗದಲ್ಲಿ ಬಹುಶಃ ಆಧುನಿಕತೆ ಮತ್ತು ಹೋರಾಟಕ್ಕೆ ಇನ್ನೊಂದು ಹೆಸರು ಇದ್ದರೆ ಅದು ನಮ್ಮ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು. ಅವರು ಅಧಿಕಾರ ವಹಿಸಿಕೊಂಡ ನಂತರ ಅನೇಕ ಜನಪರವಾದ ಕಾರ್ಯಕ್ರಮಗಳನ್ನು ಕೇವಲ ನೂರು ದಿನಗಳಲ್ಲಿ ರಾಜ್ಯದ ಜನರಿಗೆ ಕೊಡುವ ಕೆಲಸ ಮಾಡಿದ್ದಾರೆ ಎಂದು ಡಿಸಿಎಂ ಹಾಗೂ ಕಂದಾಯ ಸಚಿವ ಡಾ.ಜಿ. ಪರಮೇಶ್ವರ್ ಹೇಳಿದ್ದಾರೆ.

ಪೊಲೀಸ್ ವಾಹನ ವ್ಯವಸ್ಥೆ ಆಧುನೀಕರಣಕ್ಕೆ ರಾಜ್ಯ ಸರ್ಕಾರ ಹೊಸ ಚಿಂತನೆ; ಬಾಡಿಗೆ ಮಾದರಿಯ ಸಾಧ್ಯತೆ ಪರಿಶೀಲನೆ

ಪೊಲೀಸ್ ವಾಹನ ವ್ಯವಸ್ಥೆ ಆಧುನೀಕರಣಕ್ಕೆ ಹೊಸ ಚಿಂತನೆ: ಪ್ರಿಯಾಂಕ್ ಖರ್ಗೆ

Priyank Kharge: ವೇಗವಾಗಿ ಬದಲಾಗುತ್ತಿರುವ ಸಾಮಾಜಿಕ ಹಾಗೂ ಕಾನೂನು-ಸುವ್ಯವಸ್ಥೆಯ ಸವಾಲುಗಳಿಗೆ ಪೊಲೀಸ್ ಇಲಾಖೆ ಇನ್ನಷ್ಟು ಸಜ್ಜಾಗಬೇಕಿದೆ. ಅದಕ್ಕಾಗಿ ವಾಹನ ವ್ಯವಸ್ಥೆ ಸೇರಿದಂತೆ ಇಲಾಖೆಯ ಪ್ರತಿಯೊಂದು ಕಾರ್ಯಾಚರಣಾ ಮೂಲಸೌಕರ್ಯವನ್ನು ಆಧುನೀಕರಿಸುವ ನಿಟ್ಟಿನಲ್ಲಿ ಸರ್ಕಾರ ಕ್ರಮಬದ್ಧವಾಗಿ ಕೆಲಸ ಮಾಡುತ್ತಿದೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

Vande Mataram: ರಾಜ್ಯ ಸರ್ಕಾರದ ಕಾರ್ಯಕ್ರಮಗಳಲ್ಲಿ 'ವಂದೇ ಮಾತರಂ' ಗೀತೆಯ ಮೊದಲ ಎರಡು ಚರಣ ಮಾತ್ರ ಹಾಡಲು ಆದೇಶ

ರಾಜ್ಯದಲ್ಲಿ 'ವಂದೇ ಮಾತರಂ' ಗೀತೆಯ 2 ಚರಣ ಮಾತ್ರ ಹಾಡಲು ಆದೇಶ

ರಾಜ್ಯದಲ್ಲಿ ನಡೆಯುವ ವಿವಿಧ ಸರ್ಕಾರಿ ಕಾರ್ಯಕ್ರಮಗಳ ಸ್ವರೂಪ ಹಾಗೂ ಸಂದರ್ಭಕ್ಕೆ ಅನುಗುಣವಾಗಿ "ವಂದೇ ಮಾತರಂ" ರಾಷ್ಟ್ರೀಯ ಗೀತೆಯ ವಾದನ, ಗಾಯನಕ್ಕೆ ಸಂಬಂಧಿಸಿ ಏಕರೂಪತೆ, ಗೌರವ ಮತ್ತು ಸೂಕ್ತ ಶಿಷ್ಟಾಚಾರ ಕಾಯ್ದುಕೊಳ್ಳುವ ಅಗತ್ಯವನ್ನು ರಾಜ್ಯ ಸರ್ಕಾರವು ಪರಿಗಣಿಸಿ ಈ ನಿರ್ಧಾರವನ್ನು ಕೈಗೊಂಡಿದೆ.

ಭಾರತ್ ಜೋಡೋ ಯಾತ್ರೆ ಜನಸಾಮಾನ್ಯರ ಸಂಕಷ್ಟಕ್ಕೆ ಪರಿಹಾರದ ಅಡಿಪಾಯ: ಸಿಎಂ

ಭಾರತ್ ಜೋಡೋಗೆ 5ನೇ ವರ್ಷದ ಸಂಭ್ರಮ

ಕೆಪಿಸಿಸಿ ಕಚೇರಿಯ ಭಾರತ್ ಜೋಡೋ ಸಭಾಂಗಣದಲ್ಲಿ ಬುಧವಾರ ನಡೆದ ಭಾರತ್ ಜೋಡೋ ಪಾದಯಾತ್ರೆಯ ಐದನೇ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿ, ಕರ್ನಾಟಕದಲ್ಲಿ 21 ದಿನಗಳ ಕಾಲ 500 ಕಿ.ಮೀ. ಪಾದಯಾತ್ರೆ ನಡೆದಿದ್ದು, ರಾಷ್ಟ್ರಮಟ್ಟದಲ್ಲಿ ಕನ್ಯಾಕುಮಾರಿಯಿಂದ ಕಾಶ್ಮೀರದ ವರೆಗೆ ಸುಮಾರು 4 ಸಾವಿರ ಕಿ.ಮೀ.ಯಾತ್ರೆ ನಡೆದಿದೆ.

ಕೆಪಿಎಸ್‌ಸಿ: ಇಬ್ಬರ ಸಿಐಡಿ ತನಿಖೆ ಅಂತ್ಯ, ವಶಕ್ಕೆ ನೀಡಲು ಕೋರ್ಟ್‌ಗೆ ಇಡಿ ಅರ್ಜಿ

ಸಿಐಡಿ ಮುಗೀತು, ಇನ್ನು ಜ್ಞಾನೇಂದ್ರ, ಕನ್ನಾಳೆಗೆ ಇಡಿ ಬಿಸಿ

ಜಾಮೀನು ಅರ್ಜಿಯ ವಿಚಾರಣೆಯೂ ಗುರುವಾರ ನಡೆಯಲಿದೆ. ಶಾಂತ ಹೊಸಮನಿ ಮನೆಗಳಲ್ಲಿ ಸಿಐಡಿ ಶೋಧ ಕೆಪಿಎಸ್‌ಸಿ ನೇಮಕಾತಿ ಅಕ್ರಮ ಪ್ರಕರಣದ ಮತ್ತೊಬ್ಬ ಆರೋಪಿ ಶಾಂತ ಹೊಸಮನಿ ಅವರ ನಗರದ ಹೊಸಕೆರೆಹಳ್ಳಿ ಹಾಗೂ ನಾಗರಬಾವಿಯಲ್ಲಿರುವ ನಿವಾಸಗಳ ಮೇಲೆ ಸಿಐಡಿ ಅಧಿಕಾರಿಗಳು ಬುಧವಾರ ಶೋಧ ನಡೆಸಿದರು. ದಾಳಿ ಸಂದರ್ಭದಲ್ಲಿ ಶಾಂತ ಹೊಸಮನಿ ಮನೆಯಲ್ಲಿ ಇರಲಿಲ್ಲ.

ಬಡವರಿಗೆ ಡಿಕೆಶಿ‌ ಸರಕಾರದಿಂದ 15 ಲಕ್ಷ ಉಚಿತ ನಿವೇಶನ ಹಂಚಿಕೆ

ಬಡವರಿಗೆ ಡಿಕೆಶಿ‌ ಸರಕಾರದಿಂದ 15 ಲಕ್ಷ ಉಚಿತ ನಿವೇಶನ ಹಂಚಿಕೆ

ಸರಕಾರಕ್ಕೆ ಗುರುವಾರ 100 ದಿನಗಳು ತುಂಬುತ್ತಿರುವ ಹಿನ್ನೆಲೆಯಲ್ಲಿ ಸಚಿವ ಸಂಪುಟ ಸಭೆಯ ನಂತರ ಡಿಸಿಎಂ ಪರಮೇಶ್ವರ್ ಈ ಮಾಹಿತಿಯನ್ನು ಹಂಚಿಕೊಂಡರು. ಒಂದು ಕಾಲಕ್ಕೆ ವಿದ್ಯಾರ್ಥಿ ಗಳಲ್ಲಿ ಪ್ರತಿಷ್ಠೆಯ ಪ್ರಶ್ನೆಯಾಗಿದ್ದ ವಿದ್ಯಾರ್ಥಿ ಸಂಘದ ಚುನಾವಣೆಯನ್ನು 3 ದಶಕಗಳ ನಂತರ ನಡೆಸಲು ರಾಜ್ಯ ಸರಕಾರ ಅನುಮೋದನೆ ನೀಡಿದೆ.

Padayatra: ಇಂದು ಬಳ್ಳಾರಿಯಲ್ಲಿ ಸಮಾರೋಪ ಯಾತ್ರೆ

ಇಂದು ಬಳ್ಳಾರಿಯಲ್ಲಿ ಸಮಾರೋಪ ಯಾತ್ರೆ

ರಾಯಚೂರಿನ ಲಿಂಗಸೂಗೂರಿನಿಂದ ಆರಂಭವಾದ ಬಳ್ಳಾರಿ ಚಲೋ ಪಾದಯಾತ್ರೆಯಲ್ಲಿ ಬಿಜೆಪಿ ರಾಜ್ಯಾ ಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಜನರ ಸಮಸ್ಯೆಗಳನ್ನು ಆಲಿಸುತ್ತಾ ಸರಕಾರದ ವಿರುದ್ಧ ಹೋರಾಟ ರೂಪಿಸಿದ್ದಾರೆ. ಗುರುವಾರದ ಸಮಾರೋಪ ದಲ್ಲಿ ಕೇಂದ್ರ ಸಚಿವರಾದ ಪ್ರಲ್ಹಾದ ಜೋಶಿ, ವಿ.ಸೋಮಣ್ಣ, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಸೇರಿದಂತೆ ರಾಜ್ಯದ ಸಂಸದರು, ಶಾಸಕರು ಹಾಗೂ 1 ಲಕ್ಷಕ್ಕೂ ಅಧಿಕ ಕಾರ್ಯಕರ್ತರು ಭಾಗವಹಿಸ ಲಿದ್ದಾರೆ.

3 ಎಕರೆಗಿಂತ ಕಡಿಮೆ ಕೃಷಿ ಭೂಮಿ ಹೊಂದಿರುವ ರೈತರಿಗೆ ಸರ್ಕಾರದಿಂದಲೇ ಉಳುಮೆ; ಮುಖ್ಯಮಂತ್ರಿ ನೇಗಿಲಯೋಗಿ ಯೋಜನೆಗೆ ಸಚಿವ ಸಂಪುಟ ಅಸ್ತು

3 ಎಕರೆಗಿಂತ ಕಡಿಮೆ ಕೃಷಿ ಭೂಮಿ ಹೊಂದಿದ್ದರೆ ಸರ್ಕಾರದಿಂದಲೇ ಉಳುಮೆ

Karnataka Cabinet Meeting: ಮುಖ್ಯಮಂತ್ರಿ ನೇಗಿಲಯೋಗಿ ಯೋಜನೆಯಡಿ ಸರ್ಕಾರದ ವತಿಯಿಂದಲೇ ಟ್ರ್ಯಾಕ್ಟರ್‌ಗಳನ್ನು ಬಾಡಿಗೆಗೆ ಪಡೆದು ರೈತರ ಜಮೀನುಗಳಲ್ಲಿ ಉಚಿತವಾಗಿ ಉಳುಮೆ ಮಾಡಿಕೊಡಲಾಗುತ್ತದೆ. 3 ಎಕರೆ ಕಡಿಮೆ ಕೃಷಿ ಭೂಮಿ ಹೊಂದಿರುವ ಬಡ ರೈತರಿಗೆ ಈ ಯೋಜನೆಯಿಂದ ಅನುಕೂಲವಾಗಲಿದೆ.

Loading...