ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಕರ್ನಾಟಕ

Hosatodaku: ಮಟನ್‌ ಬೆಲೆ 1500 ರೂ., ಆದರೂ ಹೊಸತೊಡಕಿಗಾಗಿ ಮಾಂಸದಂಗಡಿಗಳ ಮುಂದೆ ಕ್ಯೂ

ಮಟನ್‌ ಬೆಲೆ 1500 ರೂ., ಆದರೂ ಹೊಸತೊಡಕಿಗಾಗಿ ಮಾಂಸದಂಗಡಿಗಳ ಮುಂದೆ ಕ್ಯೂ

ಹೊಸತೊಡಕು ಹಿನ್ನೆಲೆ ಇಂದು ಬೆಳಗಿನ ಜಾವ 4 ಗಂಟೆಗೇ ಮಟನ್ ಸ್ಟಾಲ್ ಓಪನ್ ಆಗಿದ್ದು, ಮಾಂಸಪ್ರಿಯರು ನಸುಕಿನ ಜಾವದಲ್ಲೇ ಎದ್ದು ಬಂದು ಮಟನ್‌ ಖರೀದಿಗೆ ಮುಗಿಬಿದ್ದಿದ್ದಾರೆ. ನೂಕುನುಗ್ಗಲು ತಪ್ಪಿಸಲು ಮಾಲೀಕರು ಬರೋಬ್ಬರಿ ನಾಲ್ಕೈದು ಕೌಂಟರ್‌ಗಳನ್ನು ತೆರೆದು ಮಟನ್ ವಿತರಣೆ ಮಾಡುತ್ತಿದ್ದಾರೆ.

Lockup death: ಹುಳಿಯಾರು ಠಾಣೆಯಲ್ಲಿ ಲಾಕಪ್ ಡೆತ್: ತನಿಖೆಗೆ ಆಗ್ರಹ

ಹುಳಿಯಾರು ಠಾಣೆಯಲ್ಲಿ ಲಾಕಪ್ ಡೆತ್: ತನಿಖೆಗೆ ಆಗ್ರಹ

ಯಳನಾಡು ಗ್ರಾಮದಲ್ಲಿ ಇಸ್ಪೀಟ್ ಆಡುತ್ತಿದ್ದಾರೆಂಬ ಖಚಿತ ಮಾಹಿತಿಯ ಮೇರೆಗೆ ಹುಳಿಯಾರು ಪೊಲೀಸರು ದಾಳಿ ನಡೆಸಿದ್ದರು. ದಾಳಿ ವೇಳೆ ಕಾಂತರಾಜು (45) ಸೇರಿದಂತೆ ಆರು ಜನರನ್ನು ವಶಕ್ಕೆ ಪಡೆದ ಪೊಲೀಸರು ಠಾಣೆಗೆ ಕರೆತಂದಿದ್ದರು. ಆದರೆ, ಠಾಣೆಗೆ ಬಂದ ಕೆಲವೇ ಸಮಯದಲ್ಲಿ ಕಾಂತರಾಜು ಮೃತಪಟ್ಟಿದ್ದಾರೆ.

Tumkur news: ಪೊಲೀಸರ ವಶದಲ್ಲಿದ್ದಾಗ ವ್ಯಕ್ತಿಯ ಸಾವು, ಕೆರಳಿದ ಗ್ರಾಮಸ್ಥರಿಂದ ಪ್ರತಿಭಟನೆ

ಪೊಲೀಸರ ವಶದಲ್ಲಿದ್ದಾಗ ವ್ಯಕ್ತಿಯ ಸಾವು, ಕೆರಳಿದ ಗ್ರಾಮಸ್ಥರಿಂದ ಪ್ರತಿಭಟನೆ

ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಆಕ್ರೋಶಗೊಂಡ ಯಳನಾಡು ಗ್ರಾಮಸ್ಥರು ಠಾಣೆಗೆ ಮುತ್ತಿಗೆ ಹಾಕಿ, ಶವವನ್ನು ಠಾಣೆಯೊಳಗೇ ಇಟ್ಟು ಪೊಲೀಸರ ವಿರುದ್ಧ ಘೋಷಣೆ ಕೂಗಿದರು. ಘಟನಾ ಸ್ಥಳಕ್ಕೆ ಮಾಜಿ ಸಚಿವ ಮಾಧುಸ್ವಾಮಿ ಭೇಟಿ ನೀಡಿ ಗ್ರಾಮಸ್ಥರ ಅಹವಾಲು ಆಲಿಸಿದರು. ತುಮಕೂರು ಎಸ್ಪಿ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Zero development, Bogus bills: ಅಭಿವೃದ್ಧಿ ಶೂನ್ಯ, ಬೋಗಸ್ ಬಿಲ್‌ಗಳದ್ದೇ ಹವಾ

ಅಭಿವೃದ್ಧಿ ಶೂನ್ಯ, ಬೋಗಸ್ ಬಿಲ್‌ಗಳದ್ದೇ ಹವಾ

ತಾಲೂಕಿನ ವಿವಿಧ ಇಲಾಖೆಗಳಲ್ಲಿ ಅಭಿವೃದ್ಧಿ ಕೆಲಸಗಳು ಕೇವಲ ಕಾಗದದ ಮೇಲೆ ಸೀಮಿತ ವಾಗಿದ್ದು, ಯಾವುದೇ ಕೆಲಸ ಮಾಡದೆಯೇ ನೂರಕ್ಕೆ ನೂರರಷ್ಟು ಹಣ ಪಾವತಿ ಮಾಡಿ ಕೊಳ್ಳುವ ಮೂಲಕ ಕೋಟ್ಯಂತರ ರು. ಸಾರ್ವಜನಿಕ ಹಣ ದುರ್ಬಳಕೆಯಾಗುತ್ತಿದೆ. ಸರಕಾರಿ ಅನುದಾನದ ದುರ್ಬಳಕೆ ಮಿತಿ ಮೀರಿದ್ದು, ಪಂಚಾಯತ್ ರಾಜ್ ಇಲಾಖೆಯಿಂದ ಹಿಡಿದು ಶಿಕ್ಷಣ ಮತ್ತು ವಸತಿ ನಿಲಯಗಳವರೆಗೆ ಭ್ರಷ್ಟಾಚಾರದ ಜಾಲ ವ್ಯಾಪಿಸಿದೆ.

Water Crisis: 411 ಹಳ್ಳಿಗಳಲ್ಲಿ ಕುಡಿವ ನೀರಿನ ಅಭಾವ

411 ಹಳ್ಳಿಗಳಲ್ಲಿ ಕುಡಿವ ನೀರಿನ ಅಭಾವ

ಉತ್ತರಕನ್ನಡ ಜಿಲ್ಲೆ ಶೇ. 80ರಷ್ಟು ಅರಣ್ಯ ಪ್ರದೇಶ ಹೊಂದಿದ್ದು, ಜಿಲ್ಲೆಯ ಹಲವು ತಾಲೂಕು ಗಳಲ್ಲಿ ಬೇಸಿಗೆಯ ಆರಂಭದಲ್ಲೇ ನೀರಿನ ಅಭಾವ ತಲೆದೋರುತ್ತಿದೆ. ಜಿಲ್ಲೆಯ ಸುಮಾರು 411 ಹಳ್ಳಿಗಳು ಕುಡಿಯುವ ನೀರಿನ ತುಟಾಗ್ರತೆ ಎದುರಿಸುವ ಸಾಧ್ಯತೆಯಿದೆ ಎಂದು ಗುರುತಿಸಲಾಗಿದೆ.

Ramadan: ಸಂಭ್ರಮದ ರಂಜಾನ್‌ಗೆ ಮುಸ್ಲಿಮರಿಂದ ಭರ್ಜರಿ ಸಿದ್ದತೆ

ಸಂಭ್ರಮದ ರಂಜಾನ್‌ಗೆ ಮುಸ್ಲಿಮರಿಂದ ಭರ್ಜರಿ ಸಿದ್ದತೆ

ಹಗಲಿನಲ್ಲಿ ಸಾಕಷ್ಟು ಬಿಸಿಲಿರುವ ಕಾರಣ ಸಂಜೆ ಮಗರಿಬ್ ಪ್ರಾರ್ಥನೆ ಮುಗಿಸಿ ಉಪವಾಸ (ರೋಜಾ) ಅಂತ್ಯಗೊಳಿಸಿದ ನಂತರ ಮುಸ್ಲಿಂ ಬಾಂಧವರು ಕುಟುಂಬ ಸಮೇತ ಮಾರುಕಟ್ಟೆಗೆ ಆಗಮಿಸಿ, ಖರೀದಿಯಲ್ಲಿ ತೊಡಗುತ್ತಿದ್ದಾರೆ. ಗಾಂಧಿ ಚೌಕ್, ಕೆ.ಸಿ ಮಾರ್ಕೆಟ್ ಗಳಲ್ಲಿ ರಂಜಾನ್ ಶಾಪಿಂಗ್ಗಾಗಿ ಕೆಲ ಅಂಗಡಿಗಳು ತಲೆ ಎತ್ತಿವೆ.

Hubballi news: ಸ್ಟಂಟ್ & ಕ್ರ್ಯಾಶ್‌ ರೀಲ್ಸ್‌ ಹುಚ್ಚಾಟಕ್ಕೆ ಬಿಜೆಪಿ ಮುಖಂಡನ ಪುತ್ರ ಬಲಿ

ಸ್ಟಂಟ್ & ಕ್ರ್ಯಾಶ್‌ ರೀಲ್ಸ್‌ ಹುಚ್ಚಾಟಕ್ಕೆ ಬಿಜೆಪಿ ಮುಖಂಡನ ಪುತ್ರ ಬಲಿ

ಆಡಿ (AUDI) ಕಾರು ಮತ್ತು ಬೈಕ್‌ನಲ್ಲಿ ಅತೀ ವೇಗವಾಗಿ ರೈಡ್‌ ಮಾಡಿ ‘ಸ್ಟಂಟ್ ಹಾಗೂ ಕ್ರ್ಯಾಶ್’ ರೀಲ್ಸ್ ಚಿತ್ರೀಕರಿಸಲು ಈ ಬಾಲಕರು ಪ್ಲ್ಯಾನ್‌ ಮಾಡಿದ್ದರು. ವೇಗವಾಗಿ ಬಂದ ಕಾರು, ಬೈಕ್‌ನಲ್ಲಿದ್ದ ನಮೀಷ್‌ಗೆ ಬಲವಾಗಿ ಗುದ್ದಿದೆ. ಕಾರು ಬೈಕ್‌ಗೆ ಗುದ್ದಿದ ರಭಸಕ್ಕೆ ನಮೀಷ್ ಸುಮಾರು 30 ಅಡಿ ದೂರಕ್ಕೆ ಎಸೆಯಲ್ಪಟ್ಟು ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಅಭಿವೃದ್ಧಿ ಪಥದಲ್ಲಿ ಸಾಗುತ್ತಿರುವ ತಾಲೂಕು ಆಸ್ಪತ್ರೆ

ಅಭಿವೃದ್ಧಿ ಪಥದಲ್ಲಿ ಸಾಗುತ್ತಿರುವ ತಾಲೂಕು ಆಸ್ಪತ್ರೆ

ರಾಮದುರ್ಗ ತಾಲೂಕು ವೈದ್ಯಾಧಿಕಾರಿ ಡಾ.ನವೀನ ಕಾಶಿನಾಥ ನಿಜಗುಲಿ ಅವರು ಶಾಸಕ ಅಶೋಕ ಪಟ್ಟಣ ಅವರ ಮಾರ್ಗದರ್ಶನಲ್ಲಿ ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಹಾಗೂ ಮೇಲಾಧಿಕಾರಿಗಳು. ಸಿಬ್ಬಂದಿಗಳ ಸಹಕಾರದೊಂದಿಗೆ ಬಡ ರೋಗಿಗಳಿಗೆ ಉತ್ತಮ ಕೆಲಸ ಮಾಡುತ್ತಿದ್ದಾರೆ.

MLA Yashwant Rayagouda Patil: ಶಾಸಕ ಯಶವಂತರಾಯಗೌಡ್ರೀಗೆ ಸಚಿವ ಸ್ಥಾನ ನೀಡಿ: ಧರ್ಮರಾಜ ಅವುಜಿ ಆಗ್ರಹ

ಶಾಸಕ ಯಶವಂತರಾಯಗೌಡ್ರೀಗೆ ಸಚಿವ ಸ್ಥಾನ ನೀಡಿ

ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು ಹೈಕಮಾಂಡ ಪಕ್ಷದ ವರಿಷ್ಠರು ಸಾಕಷ್ಟು ಬಾರಿ ಭಾಷಣದಲ್ಲಿ ಶಾಸಕ ಪಾಟೀಲರಿಗೆ ಸಚಿವ ಸ್ಥಾನ ಸಿಗುತ್ತದೆ ಎಂದು ಹೇಳಿದ್ದೀರಿ ? ಸ್ವಾತಂತ್ರ್ಯ ಸಿಕ್ಕು 75 ವರ್ಷಗತಿಸಿದರೂ ಇಂಡಿ ಮತಕ್ಷೇತ್ರ ಸಚಿವ ಸ್ಥಾನ ಸಿಗದೆ ಇರುವುದು ದೌರ್ಭಾಗ್ಯ. ನಿಷ್ಕಲ್ಮಷ ರಾಜಕೀಯ ಸಂತನಿಗೆ ಸಚಿವ ಸ್ಥಾನ ನೀಡಿದರೆ ಮಾತ್ರ ಕಾಂಗ್ರೆಸ್ ಕೊಟ್ಟ ಮಾತು ಉಳಿಸಿದಂತಾಗುತ್ತದೆ

ಸಮವಸ್ತ್ರದಲ್ಲೇ ರಾಮಚಂದ್ರ ರಾವ್‌ ಮಹಿಳೆಯರೊಂದಿಗೆ ನಡೆಸಿದ ಸರಸದ ವಿಡಿಯೊ ಅಸಲಿ; ತನಿಖಾ ತಂಡದಿಂದ ಬಯಲಾಯ್ತು ಸತ್ಯ

ರಾಮಚಂದ್ರ ರಾವ್‌ ಸರಸದ ವಿಡಿಯೊ ಅಸಲಿ ಎಂದ ತನಿಖಾ ತಂಡ

DGP Ramachandra Rao Case: ಐಪಿಎಸ್‌ ಅಧಿಕಾರಿ ರಾಮಚಂದ್ರ ರಾವ್ ತಮ್ಮ ಕಚೇರಿಯಲ್ಲೇ ಸಮವಸ್ತ್ರ ಧರಿಸಿ ಮಹಿಳೆಯರೊಂದಿಗೆ ಸರಸವಾಡಿರುವ ವಿಡಿಯೊಗಳು ಅಸಲಿ ಎನ್ನುವುದು ಇದೀಗ ಸಾಬೀತಾಗಿದೆ. ನಡೆಸಿದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಆರ್. ಹಿತೇಂದ್ರ ನೇತೃತ್ವದ ಐಪಿಎಸ್​​ ಅಧಿಕಾರಿಗಳ ತಂಡದ 100 ಪುಟಗಳ ವರದಿಯಲ್ಲಿ ವಿಡಿಯೊದ ಸತ್ಯಾಸತ್ಯತೆ ಹೊರ ಬಿದ್ದಿದೆ.

Robbery Case: ಬುರ್ಖಾ ಧರಿಸಿ 80 ಲಕ್ಷ ರುಪಾಯಿ ಮೌಲ್ಯದ ಕಂಪ್ಯೂಟರ್‌ ಬಿಡಿಭಾಗಗಳನ್ನು ಕದ್ದ ಅಪ್ಪ-ಮಗ

80 ಲಕ್ಷ ರು. ಮೌಲ್ಯದ ಕಂಪ್ಯೂಟರ್‌ ಬಿಡಿಭಾಗ ಕದ್ದ ಅಪ್ಪ-ಮಗ

Bengaluru News: ಬುರ್ಖಾ ಧರಿಸಿ ಅಪ್ಪ-ಮಗನ ಜೋಡಿ ಬರೋಬ್ಬರಿ 80 ಲಕ್ಷ ರುಪಾಯಿ ಮೌಲ್ಯದ ಕಂಪ್ಯೂಟರ್‌ ಬಿಡಿ ಭಾಗಗಳನ್ನು ಕದ್ದ ಘಟನೆ ನಡೆದಿದೆ. ಸದ್ಯ ಇವರಿಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ನಾಗಾವರದಲ್ಲಿ ಈ ಘಟನೆ ನಡೆದಿದೆ.

ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಸಹೋದರಿ ಜವರಮ್ಮ ನಿಧನ

ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಸಹೋದರಿ ಇನ್ನಿಲ್ಲ

Former PM HD Deve Gowda: ಮಾಜಿ ಪ್ರಧಾನಮಂತ್ರಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಅವರ ಸಹೋದರಿ ಜವರಮ್ಮ (88) ವಯೋಸಹಜ ಕಾಯಿಲೆಯಿಂದ ನಿಧನ ಹೊಂದಿದರು. ಕೆಲವು ದಿನಗಳಿಂದ ವಯೋಸಹಜ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ ಜವರಮ್ಮ ಅವರನ್ನು ಹಾಸನದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗಲಿಲ್ಲ.

ಬೆಂಗಳೂರಿನ 2ನೇ ವಿಮಾನ ನಿಲ್ದಾಣದ ಬಗ್ಗೆ ಡಿ.ಕೆ. ಶಿವಕುಮಾರ್‌ ಕೊಟ್ರು ಬಿಗ್‌ ಅಪ್‌ಡೇಟ್‌ Video

ಉಪಚುನಾವಣೆ ಟಿಕೆಟ್‌ ಹಂಚಿಕೆ ಬಗ್ಗೆ ಡಿ.ಕೆ. ಶಿವಕುಮಾರ್‌ ಹೇಳಿದ್ದೇನು?

DK Shivakumar: ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಮಾತನಾಡಿದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌, ʼʼರಾಜ್ಯದ ಎಲ್ಲ ಸಂಸದರನ್ನು ನಿವಾಸದಲ್ಲಿ ನಡೆದ ಸಭೆಗೆ ಆಹ್ವಾನಿಸಿದ್ದೆ. 24 ಸಂಸದರು ಆಗಮಿಸಿದ್ದರು. ಜೆಡಿಎಸ್‌ ಬಿಟ್ಟು ಬಿಜೆಪಿ, ಕಾಂಗ್ರೆಸ್‌ ಸಂಸತ್‌ ಸದಸ್ಯರು, ಸ್ವತಂತ್ರರು ಹಾಜರಿದ್ದರು. ಅವರ ಜತೆ ರಾಜ್ಯದ ಅನೇಕ ನೀರಾವರಿ ಯೋಜನೆಗಳನ್ನು ಪ್ರಸ್ತಾವಿಸಿದ್ದೇನೆ. ಸದ್ಯದಲ್ಲೇ ಸರ್ವ ಪಕ್ಷ ಸಭೆ ನಡೆಸಲು ನಿರ್ಧರಿಸಿದ್ದೇವೆ. ಕೃಷ್ಣ ನದಿ ನೀರಿನ ವಿಚಾರದಲ್ಲಿ ಚರ್ಚೆ ನಡೆಸಿದ್ದೇನೆʼʼ ಎಂದರು. ಜತೆಗೆ ಮಾಧ್ಯಮದವರು ಕೇಳಿದ ವಿವಿಧ ಪ್ರಶ್ನೆಗಳಿಗೆ ಉತ್ತರಿಸಿದರು.

Self Hraming: ಮಠದಲ್ಲೇ ನೇಣು ಬಿಗಿದುಕೊಂಡು ದೇವೇಂದ್ರಪ್ಪ ಸ್ವಾಮೀಜಿ ಆತ್ಮಹತ್ಯೆ

ಮಠದಲ್ಲೇ ನೇಣು ಬಿಗಿದುಕೊಂಡು ದೇವೇಂದ್ರಪ್ಪ ಸ್ವಾಮೀಜಿ ಆತ್ಮಹತ್ಯೆ

ಸದಾ ಪ್ರವಚನ ನೀಡುತ್ತಾ ಇತರರಿಗೆ ದಾರಿ ದೀಪವಾಗಿದ್ದ ಸ್ವಾಮೀಜಿಯವರು ಇದ್ದಕ್ಕಿದ್ದಂತೆ ಮಠದಲ್ಲೇ ನೇಣಿಗೆ ಶರಣಾಗಿರುವುದು ಗ್ರಾಮಸ್ಥರಲ್ಲಿ ಹಾಗೂ ಅವರ ಭಕ್ತ ವಲಯದಲ್ಲಿ ತೀವ್ರ ಆಘಾತ ಮತ್ತು ಅನುಮಾನಗಳನ್ನು ಮೂಡಿಸಿದೆ. ಆತ್ಮಹತ್ಯೆಗೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ.

Moral policing: ದಕ್ಷಿಣ ಕನ್ನಡದಲ್ಲಿ ಮತ್ತೆ ನೈತಿಕ ಪೊಲೀಸ್‌ಗಿರಿ, ಹಿಂದೂ ಹುಡುಗಿಯರ ಜತೆ ಜಾತ್ರೆಗೆ ಬಂದ ಮುಸ್ಲಿಂ ಯುವಕನಿಗೆ ಹಲ್ಲೆ

ಹಿಂದೂ ಹುಡುಗಿಯರ ಜತೆ ಜಾತ್ರೆಗೆ ಬಂದ ಮುಸ್ಲಿಂ ಯುವಕನಿಗೆ ಹಲ್ಲೆ

ಮುಸ್ಲಿಂ ಬಾಲಕು ತನ್ನ ಹಿಂದೂ ಸ್ನೇಹಿತೆಯರೊಂದಿಗೆ ಜಾತ್ರೆ ವೀಕ್ಷಿಸುತ್ತಿದ್ದ. ಈ ವೇಳೆ ಸ್ಥಳಕ್ಕೆ ಬಂದ ಯುವಕರ ಗುಂಪು, “ಹಿಂದೂ ಹುಡುಗಿಯರನ್ನು ಲಾಡ್ಜ್‌ಗೆ ಕರೆದೊಯ್ಯುತ್ತಿದ್ದೀಯಾ?” ಎಂದು ಪ್ರಶ್ನಿಸಿ ಅವಾಚ್ಯ ಶಬ್ದಗಳಿಂದ ನಿಂದಿಸಿದೆ. ಅಲ್ಲದೆ, ಬಾಲಕನ ಮೇಲೆ ಮನಬಂದಂತೆ ಹಲ್ಲೆ ನಡೆಸಲಾಗಿದೆ.

CM Siddaramaiah: ದಿನಕ್ಕೆ 49 ಸಾವಿರ ಎಲ್‌ಪಿಜಿ ಸಿಲಿಂಡರ್‌ ಕೊರತೆ, ಸರಿಪಡಿಸಲು ಪೆಟ್ರೋಲಿಯಂ ಸಚಿವರಿಗೆ ಸಿಎಂ ಸಿದ್ದರಾಮಯ್ಯ ಆಗ್ರಹ

ಎಲ್‌ಪಿಜಿ ಕೊರತೆ ಸರಿಪಡಿಸಿ: ಪೆಟ್ರೋಲಿಯಂ ಸಚಿವರಿಗೆ ಸಿಎಂ ಸಿದ್ದರಾಮಯ್ಯ

ವಾಣಿಜ್ಯ LPG ಲಭ್ಯತೆಯ ಕೊರತೆಯಿಂದ ಅನೇಕ ಸಂಸ್ಥೆಗಳು ಮುಚ್ಚುವ ಪರಿಸ್ಥಿತಿ ಸ್ಪಷ್ಟವಾಗಿ ಹೆಚ್ಚುತ್ತಿದೆ. ಇದು ವಿದ್ಯಾರ್ಥಿಗಳು, ಐಟಿ ವೃತ್ತಿಪರರು, ರೈತರು, ಹಾಲು ಉತ್ಪಾದಕರು ಸೇರಿದಂತೆ ಆತಿಥ್ಯ ಕ್ಷೇತ್ರದ ಮೇಲೆ ಅವಲಂಬಿತವಾಗಿರುವ ಜನರ ದೊಡ್ಡ ವಲಯದ ಮೇಲೆ ಪರಿಣಾಮ ಬೀರುತ್ತಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.

Karnataka Assembly Bypoll: ವಿಧಾನಸಭೆ ಉಪಚುನಾವಣೆ: ಬಾಗಲಕೋಟೆಗೆ ವೀರಣ್ಣ, ದಾವಣಗೆರೆ ದಕ್ಷಿಣಕ್ಕೆ ಶ್ರೀನಿವಾಸ್ ಟಿ. ಬಿಜೆಪಿ ಅಭ್ಯರ್ಥಿ

ಬಾಗಲಕೋಟೆ, ದಾವಣಗೆರೆ ದಕ್ಷಿಣಕ್ಕೆ ಬಿಜೆಪಿ ಅಭ್ಯರ್ಥಿಗಳ ಘೋಷಣೆ

ಬಾಗಲಕೋಟೆಯಲ್ಲಿ ಲಿಂಗಾಯತ ಸಮುದಾಯದ ಪ್ರಭಾವಿ ನಾಯಕ ವೀರಣ್ಣ ಚರಂತಿಮಠ್ ಅವರಿಗೆ ಬಿಜೆಪಿ ಮತ್ತೆ ಮಣೆ ಹಾಕಿದೆ. ದಾವಣಗೆರೆ ದಕ್ಷಿಣ ಕ್ಷೇತ್ರ ಅಭ್ಯರ್ಥಿಯಾಗಿ ಬಿಜೆಪಿ ಶ್ರೀನಿವಾಸ್ ಟಿ. ದಾಸಕರಿಯಪ್ಪ ಅವರಿಗೆ ಟಿಕೆಟ್​ ನೀಡಿದೆ. ಆದರೆ ಕಾಂಗ್ರೆಸ್‌ನಲ್ಲಿ ಅಭ್ಯರ್ಥಿಗಳ ಹೆಸರು ಇನ್ನೂ ಅಂತಿಮವಾಗಿಲ್ಲ.

Road Accident: ಯುಗಾದಿಯಂದೇ ಭೀಕರ ಅಪಘಾತ, ದಂಪತಿ ಸಾವು

ಯುಗಾದಿಯಂದೇ ಭೀಕರ ಅಪಘಾತ, ದಂಪತಿ ಸಾವು

ಮೃತ ದಂಪತಿಗಳನ್ನು ಬಸವಕಲ್ಯಾಣ ನಗರದ ಖಡಿ ಝಂಡಾ ಕಾಲೋನಿಯ ನಿವಾಸಿ ಸೈಯದ್ ದಸ್ತಗೀರ್ (35) ಮತ್ತು ಅವರ ಪತ್ನಿ ಯಾಸ್ಮೀನ್ ದಸ್ತಗೀರ್ (33) ಎಂದು ಗುರುತಿಸಲಾಗಿದೆ. ತ್ರಿಪುರಾಂತ ಬಳಿಯ ಕಾಲೋನಿಯೊಂದರಲ್ಲಿ ವಾಸಿಸುತ್ತಿದ್ದ ಮೃತರು, ಬೈಕ್​ನಲ್ಲಿ ಬಸ್ ನಿಲ್ದಾಣ ಕಡೆಯಿಂದ ಖಡಿ ಝಂಡಾ ಕಾಲೋನಿಯತ್ತ ತೆರಳುತ್ತಿದ್ದಾಗ ಈ ಅವಘಡ ನಡೆದಿದೆ.

Bengaluru AQI : ತಂಪಾಯ್ತು ಸಿಟಿ, ವೃದ್ಧಿಯಾಯ್ತು ಗಾಳಿಯ ಗುಣಮಟ್ಟ: ಎಲ್ಲಾ ತುಂತುರು ಮಳೆಯ ಪರಿಣಾಮ

ತಂಪಾಯ್ತು ಸಿಟಿ, ವೃದ್ಧಿಯಾಯ್ತು ಗಾಳಿಯ ಗುಣಮಟ್ಟ: ಎಲ್ಲಾ ಮಳೆಯ ಪರಿಣಾಮ

ಇಂದಿನ ವಾಯು ಗುಣಮಟ್ಟ ಎಲ್ಲಾ ವಯಸ್ಸಿನವರಿಗೂ ಸುರಕ್ಷಿತವಾಗಿದೆ. ದೈಹಿಕ ವ್ಯಾಯಾಮ ಮತ್ತು ಹೊರಾಂಗಣ ಚಟುವಟಿಕೆಗಳಿಗೆ ಇದು ಸೂಕ್ತ ಸಮಯ. ಪೀಣ್ಯ ಮತ್ತು ಕೈಗಾರಿಕಾ ಪ್ರದೇಶಗಳಲ್ಲಿ ಸಣ್ಣ ಪ್ರಮಾಣದ ಮಾಲಿನ್ಯವಿದ್ದರೂ ಅದು ‘ತೃಪ್ತಿದಾಯಕ’ ಮಟ್ಟದಲ್ಲಿಯೇ ಇದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ವಾಯು ಮಾಲಿನ್ಯದ ಮಟ್ಟ ಪ್ರಸ್ತುತ ನಿಯಂತ್ರಣದಲ್ಲಿದೆ.

Ugadi Festival: ಬೆಲೆ ಏರಿಕೆಯ ನಡುವೆಯೂ ಯುಗಾದಿ ಸಂಭ್ರಮಕ್ಕೆ ಖರೀದಿ ಜೋರು

ಬೆಲೆ ಏರಿಕೆಯ ನಡುವೆಯೂ ಯುಗಾದಿ ಸಂಭ್ರಮಕ್ಕೆ ಖರೀದಿ ಜೋರು

ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಹಿನ್ನೆಲೆಯಲ್ಲಿ ಅಡುಗೆ ಎಣ್ಣೆಯ ಬೆಲೆಯಲ್ಲಿ ಏರಿಕೆ ಕಂಡಿದೆ. ಇದರೊಂದಿಗೆ ಹಬ್ಬದ ಪ್ರಮುಖ ಖಾದ್ಯವಾದ ‘ಹೋಳಿಗೆ’ಗೆ ಬೇಕಾದ ಬೆಲ್ಲ ಮತ್ತು ಮೈದಾ ಬೆಲೆಯೂ ಏರಿರುವುದು ಹಬ್ಬದೂಟದ ರುಚಿಗೆ ತುಸು ಕಹಿ ಉಣಿಸಿದಂತಾಗಿದೆ. ಬೆಲೆ ಏರಿಕೆಯ ನಡುವೆಯೂ ಜನರು ಸಂಪ್ರದಾಯದಂತೆ ಹಬ್ಬ ಆಚರಿಸಲು ಉತ್ಸುಕರಾಗಿದ್ದಾರೆ.

Karnataka Weather: ರಾಜ್ಯದಲ್ಲಿ ಮಾ. 25ರವರೆಗೆ ಅಕಾಲಿಕ ಬೇಸಿಗೆ ಮಳೆ: ಹವಾಮಾನ ಇಲಾಖೆ

ರಾಜ್ಯದಲ್ಲಿ ಮಾ. 25ರವರೆಗೆ ಅಕಾಲಿಕ ಬೇಸಿಗೆ ಮಳೆ: ಹವಾಮಾನ ಇಲಾಖೆ

ಕಳೆದ ಎರಡು ದಿನಗಳಿಂದ ರಾಜ್ಯದ ನಾನಾ ಕಡೆ ಮಳೆಯಾಗುತ್ತಿದೆ. ರಾಜ್ಯದಲ್ಲಿ ಮಳೆಯ ಅಬ್ಬರ ಇನ್ನೂ ಮುಗಿದಿಲ್ಲ. ಹವಾಮಾನ ಇಲಾಖೆಯ ವರದಿಯಂತೆ, ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಮಾರ್ಚ್ 25ರವರೆಗೆ ಗುಡುಗು, ಸಿಡಿಲು ಸಹಿತ ಮಳೆ ಮುಂದುವರಿಯುವ ಸಾಧ್ಯತೆಯಿದೆ.

ಸಂಕಷ್ಟದ ವೇಳೆ ಯುಎಇ ಪ್ರವಾಸಿಗರಿಗೆ ಆಪತ್ಬಾಂಧವನಾದ 'ಕನ್ನಡಿಗಾಸ್ ಹೆಲ್ಪ್ ಲೈನ್’

ಕನ್ನಡಿಗಾಸ್ ಹೆಲ್ಪ್ ಲೈನ್ ಗೆ ಅನಿವಾಸಿಗಳಿಂದ ಮೆಚ್ಚುಗೆ

ಅಮೆರಿಕ- ಇಸ್ರೇಲ್ ಹಾಗೂ ಇರಾನ್ ನಡುವಿನ ಸಂಘರ್ಷದ ಪರಿಣಾಮವಾಗಿ ಮಧ್ಯೆ ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಉಂಟಾಗಿರುವ ಬಿಕ್ಕಟ್ಟಿನ ಸಂದರ್ಭದಲ್ಲಿ ಯುಎಇಯಲ್ಲಿ ಸಂಕಷ್ಟಕ್ಕೀಡಾಗಿದ್ದ ಪ್ರವಾಸಿ ಕನ್ನಡಿಗರನ್ನು ರಕ್ಷಿಸಲು ಆಪತ್ಬಾಂಧವನಾಗಿ ಹಗಲಿರುಳು ಕಾರ್ಯನಿರ್ವಹಿಸಿದ 'ಕನ್ನಡಿಗಾಸ್ ಹೆಲ್ಪ್ ಲೈನ್’ ಗೆ ಅನಿವಾಸಿಗಳು ಭಾರಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ನಮ್ಮೊಂದಿಗೆ ಪ್ರೀತಿ, ಮೋದಿ ಜತೆ ಮದುವೆ ಎಂದಿದ್ದ ಖರ್ಗೆಗೆ ತೀಕ್ಷ್ಣ ಉತ್ತರ ಕೊಟ್ಟ ಎಚ್.ಡಿ. ದೇವೇಗೌಡರು

ಕಾಂಗ್ರೆಸ್‌ಗೆ ವಿಚ್ಛೇದನ ಕೊಟ್ಟಿದ್ದಕ್ಕೆ ಕಾರಣ ಕೊಟ್ಟ ಎಚ್‌.ಡಿ.ದೇವೇಗೌಡರು

HD Deve Gowda: ಕಾಂಗ್ರೆಸ್ ಪಕ್ಷದ ಜೊತೆಗಿನದ್ದು ಪ್ರೀತಿಯಲ್ಲ, ಅದು ಒಂದು ಬಲವಂತದ ಮದುವೆಯಾಗಿತ್ತು ಎಂದು ಕಿಡಿಕಾರಿರುವ ಮಾಜಿ ಪ್ರಧಾನಿಗಳು, ಆ ಅಂದಿನ ಸಂಬಂಧದಲ್ಲಿನ ಕಿರುಕುಳ ಹಾಗೂ ಹಿಂಸೆ ಇದ್ದ ಕಾರಣದಿಂದಲೇ ನಾನು ಅವರಿಗೆ ವಿಚ್ಛೇದನ ನೀಡಿದೆ ಎಂದು ಹೇಳಿದ್ದಾರೆ.

ಕಾಯಿನ್‌ಸ್ವಿಚ್‌ನಿಂದ ಭಾರತದ ಎಚ್‌ಎನ್‌ಐಗಳು ಮತ್ತು ಸಂಸ್ಥೆಗಳಿಗೆ ಸುರಕ್ಷಿತ ಕ್ರಿಪ್ಟೋ ಕಸ್ಟಡಿ ಪರಿಹಾರವಾದ ಡಿಜಿವಾಲ್ಟ್ ಬಿಡುಗಡೆ

ಭಾರತದ ಕ್ರಿಪ್ಟೋ ಪರಿಸರ ವ್ಯವಸ್ಥೆ ಪ್ರಬುದ್ಧ ಹಂತಕ್ಕೆ ತಲುಪಿದೆ

ಭಾರತೀಯ ನಿಯಮಗಳಿಗೆ ಪೂರಕವಾದ ಬಲವಾದ ಕಸ್ಟಡಿ ಮೂಲಸೌಕರ್ಯದ ಕೊರತೆಯು ಒಂದು ದೊಡ್ಡ ಸವಾಲಾಗಿತ್ತು. ಡಿಜಿವಾಲ್ಟ್ ಈ ಕೊರತೆಯನ್ನು ನೀಗಿಸಲಿದ್ದು, ಜಾಗತಿಕ ಮಟ್ಟದ ಭದ್ರತೆ, ಸ್ಥಳೀಯ ನಿಯಮಗಳಿಗೆ ಅನುಗುಣವಾದ ಆಡಳಿತ ಮತ್ತು ಟೋಕ ನೈಸೇಶನ್‌ಗೆ ಸಿದ್ಧವಾಗಿರುವ ಮೂಲ ಸೌಕರ್ಯವನ್ನು ಒದಗಿಸಲಿದೆ.

Loading...