ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ
ಕರ್ನಾಟಕ
Mango crop: ರಾಜ್ಯದ ಮಾವು ಬೆಳೆಗಾರರಿಗೆ ಗುಡ್‌ ನ್ಯೂಸ್:‌ 2.5 ಲಕ್ಷ ಮೆ.ಟನ್‌ ಮಾವು ಖರೀದಿಗೆ ಕೇಂದ್ರ ಅನುಮೋದನೆ

ಕರ್ನಾಟಕದಿಂದ 2.5 ಲಕ್ಷ ಮೆ.ಟನ್‌ ಮಾವು ಖರೀದಿಗೆ ಕೇಂದ್ರ ಅನುಮೋದನೆ

Mango crop: ರಾಜ್ಯದಲ್ಲಿ ಬೆಲೆ ಕುಸಿತದಿಂದ ಕಂಗಾಲಾಗಿರುವ ಮಾವು ಬೆಳೆಗಾರರ ಹಿತರಕ್ಷಣೆಗೆ ಕೇಂದ್ರ ಸರ್ಕಾರ ಮುಂದಾಗಿದ್ದು, ₹1616 ಕ್ವಿಂಟಲ್‌ ಬೆಂಬಲ ಬೆಲೆಯಲ್ಲಿ 2.5 ಲಕ್ಷ ಮೆಟ್ರಿಕ್‌ ಟನ್‌ ಮಾವು ಖರೀದಿಗೆ ಅನುಮೋದನೆ ನೀಡಿದೆ. ಈ ಕುರಿತ ವಿವರ ಇಲ್ಲಿದೆ.

Chikkaballapur News: ಅಪರಾಧ ಕೃತ್ಯಗಳನ್ನು ತಡೆಯಲು ಪೊಲೀಸ್ ಇಲಾಖೆಯೊಂದಿಗೆ ಆಟೋ ಚಾಲಕರು ಕೈ ಜೋಡಿಸಿ : ಎಸ್ಪಿ.ಕುಶಾಲ್ ಚೌಕ್ಸೆ

ಅಪರಾಧ ಕೃತ್ಯಕ್ಕೆ ತಡೆಗೆ ಕೈ ಜೋಡಿಸಿ

ಇದೇ ಮೊದಲ ಬಾರಿಗೆ ಆಟೊ ಚಾಲಕರ ಸಂಘದಿಂದ ಚಾಲಕರಿಗೆ ಗುರುತಿನ ಚೀಟಿ ನೀಡುತ್ತಿರುವುದು ಒಳ್ಳೆಯ ಬೆಳವಣಿಗೆ. ಚಾಲಕರ ಹಿಂಭಾಗದ ಸೀಟಿನಲ್ಲಿ ಚಾಲಕರ ಪೋಟೋ ಮಾಹಿತಿಯುಳ್ಳ ಕಾರ್ಡನ್ನು ಪ್ರಯಾಣಿಕರಿಗೆ ಕಾಣುವಂತೆ ಹಾಕಬೇಕು.ಕುತ್ತಿಗಯಲ್ಲಿ ಗುರುತಿನ ಚೀಟಿ ಧರಿಸುವುದರಿಂದ ಸಾರ್ವಜನಿಕ ರಲ್ಲಿ ನಿಮ್ಮ ಬಗ್ಗೆ ಒಳ್ಳೆಯ ಅಭಿಪ್ರಾಯ ಮೂಡಲಿದೆ.

ಗುಡಿಬಂಡೆಯ ವರ್ಲಕೊಂಡ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ: ಗ್ರಾಮಸ್ಥರಲ್ಲಿ ಆತಂಕ

ಗುಡಿಬಂಡೆಯ ವರ್ಲಕೊಂಡ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ

ವರ್ಲಕೊಂಡ ಬೆಟ್ಟದ ಸುತ್ತಮುತ್ತಲಿನಲ್ಲಿ ಚಿರತೆಗಳು ಕಾಣಿಸಿಕೊಂಡಿದೆ. ಈ ಭಾಗದಲ್ಲಿ ಜನರು ಕೃಷಿ ಚಟುವಟಿಕೆಗಳನ್ನು, ನರೇಗಾ ಕಾಮಗಾರಿಗಳನ್ನು ಮಾಡುತ್ತಿರುತ್ತಾರೆ. ಜೊತೆಗೆ ಕೆಲವು ಕುಟುಂಬಗಳು ತಮ್ಮ ಜಮೀನುಗಳಲ್ಲಿಯೇ ವಾಸವಿದ್ದಾರೆ. ಕುರಿ,ಮೇಕೆ, ಜಾನುವಾರುಗಳನ್ನು ಸಹ ಸಾಕಿದ್ದಾರೆ. ಇದೀಗ ಚಿರತೆಗಳು ಡ್ರೋನ್ ಕ್ಯಾಮೆರಾದಲ್ಲಿ ಕಾಣಿಸಿದ್ದು, ನಮಗೆ ತುಂಬಾನೆ ಭಯವಾಗಿದೆ.

Chikkaballapur News: ಕಾಗತಿ ಶಾಲಾ ಮಕ್ಕಳಿಗೆ ಶಬರಿ ಜನ ಸೇವಾ ಟ್ರಸ್ಟ್ ವತಿಯಿಂದ ಲೇಖನ ಸಾಮಗ್ರಿಗಳ ವಿತರಣೆ

ಶಬರಿ ಜನ ಸೇವಾ ಟ್ರಸ್ಟ್ ವತಿಯಿಂದ ಲೇಖನ ಸಾಮಗ್ರಿಗಳ ವಿತರಣೆ

ಸರ್ಕಾರಿ ಶಾಲೆಗಳ ಬಗ್ಗೆ ನಿರ್ಲಕ್ಷ್ಯ ಬೇಡ,ಏಕೆಂದರೆ ಅವುಗಳು ವಿದ್ಯಾರ್ಥಿಗಳಿಗೆ ಭವಿಷ್ಯದಲ್ಲಿ ಬದುಕು ಕಟ್ಟಿಕೊಳ್ಳಲು ಸಹಾಯ ಮಾಡುವ ಜೀವನದ ಪಾಠಗಳನ್ನು ಕಲಿಸುತ್ತವೆ.ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರು ತರಬೇತಿ ಪಡೆದವರಾಗಿರುತ್ತಾರೆ ಮತ್ತು ಅನೇಕ ಸೌಲಭ್ಯಗಳನ್ನು ಒದಗಿಸಲಾಗುತ್ತದೆ. ಪಾಲಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಸೇರಿಸಲು ಪ್ರೋತ್ಸಾಹಿಸಬೇಕು

ಆಧ್ಯಾತ್ಮ, ಯೋಗ ಎರಡೂ ಸಹ ಜೀವನದಲ್ಲಿ ಪ್ರಮುಖ ಪಾತ್ರ ಹೊಂದಿದೆ

ಆಧ್ಯಾತ್ಮ, ಯೋಗ ಎರಡೂ ಸಹ ಜೀವನದಲ್ಲಿ ಪ್ರಮುಖ ಪಾತ್ರ ಹೊಂದಿದೆ

ಆಧ್ಯಾತ್ಮ ವಿಚಾರವೇ ಇರಲಿ ಅಥವಾ ಇನ್ಯಾವುದೇ ಕಾರ್ಯವೇ ಆಗಲಿ ಸತಿ ಪತಿಯರು ಒಗ್ಗಟ್ಟಾಗಿ ಮಾಡಿದರೆ ಮಾತ್ರ ಅದಕ್ಕೆ ತಕ್ಕ ಫಲ ಸಿಗಲಿದೆ. ಆಧ್ಯಾತ್ಮ, ಯೋಗ ಎರಡೂ ಸಹ ಜೀವನದಲ್ಲಿ ಪ್ರಮುಖ ಪಾತ್ರ ಹೊಂದಿದ್ದು ಅದು ನಮಗೆಲ್ಲ ಅವಶ್ಯ ಮತ್ತು ಅನಿವಾರ್ಯವಾಗಿದೆ. ಆ ನಿಟ್ಟಿನಲ್ಲಿ ನಮ್ಮಲ್ಲಿ ಸಂಜೆ ಹಾಗೂ ಬೆಳಗ್ಗೆ ಯೊಇಗ ತರಗತಿಯೂ ಸಹ ನಡೆಯಲಿದೆ

ಹ್ಯಾಪಿಡೆಂಟ್ “ಚಮ್ಕಿಂಗ್ ಗಮ್: ಚಮ್ಕಾ ಮುಸ್ಕಾನ್, ಜಗ್‌ಮಗ್‌ ಜಹಾನ್” ಅಭಿಯಾನವು ವಿಶಿಷ್ಠ ಕಥಾನಕಕ್ಕೆ ಹೊಸ ರೂಪ

ಹ್ಯಾಪಿಡೆಂಟ್ “ಚಮ್ಕಿಂಗ್ ಗಮ್ ಅಭಿಯಾನ

ಹೊಸ ಕ್ಯಾಂಪೇನ್‌ನ ಹೆಸರು “ಚಮ್ಕಿಂಗ್ ಗಮ್: ಚಮ್ಕಾ ಮುಸ್ಕಾನ್, ಜಗ್‌ಮಗ್‌ ಜಹಾನ್” ಎಂಬುದಾ ಗಿದ್ದು, ಹೊಸತನದ ಸಿನಿಮೀಯ ಸನ್ನಿವೇಶಗಳನ್ನು ಮತ್ತೆ ನೆನಪಿಸುತ್ತದೆ. ಆಕರ್ಷಕ ನಗು ಮತ್ತು ಸ್ಫೂರ್ತಿ ನೀಡುವ ಅದರ ಶಕ್ತಿಯನ್ನೂ ಇದು ಪ್ರತಿಬಿಂಬಿಸುತ್ತಿದ್ದು, ದೃಶ್ಯಾತ್ಮಕವಾಗಿ ಅದ್ಭುತ ಜಗತ್ತನ್ನು ಇದು ಅನಾವರಣಗೊಳಿಸುತ್ತಿದೆ.

Pralhad Joshi: ಭ್ರಷ್ಟಾಚಾರದಲ್ಲಿ ಕರ್ನಾಟಕ ಅಗ್ರ ಸ್ಥಾನದಲ್ಲಿದೆ ಎಂದ ಪ್ರಲ್ಹಾದ್‌ ಜೋಶಿ

ಭ್ರಷ್ಟಾಚಾರದಲ್ಲಿ ಕರ್ನಾಟಕ ಅಗ್ರ ಸ್ಥಾನದಲ್ಲಿದೆ ಎಂದ ಪ್ರಲ್ಹಾದ್‌ ಜೋಶಿ

Pralhad Joshi: ತಾವೊಬ್ಬ ಆರ್ಥಿಕ ತಜ್ಞವೆಂದೇ ಬಿಂಬಿಸಿಕೊಳ್ಳುತ್ತಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಆರ್ಥಿಕ ಸುಭಿಕ್ಷವಾಗಿದ್ದ ಕರ್ನಾಟಕವನ್ನು ದಿವಾಳಿತನದತ್ತ ಕೊಂಡೊಯ್ಯುತ್ತಿದ್ದಾರೆ. ಎರಡನೇ ಬಾರಿ ಸಿಎಂ ಆಗಿ ಅಧಿಕಾರಕ್ಕೆ ಬರುತ್ತಲೇ ರಾಜ್ಯದ ಆರ್ಥಿಕತೆಯನ್ನು ಮಣ್ಣುಪಾಲು ಮಾಡಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಕಿಡಿಕಾರಿದ್ದಾರೆ.

CM Siddaramaiah: ಏಳು ಮಸೂದೆಗಳಿಗೆ ಅನುಮೋದನೆ ನೀಡಿ: ರಾಷ್ಟ್ರಪತಿಗಳಿಗೆ ಸಿಎಂ ಸಿದ್ದರಾಮಯ್ಯ ಮನವಿ

ಏಳು ಮಸೂದೆಗಳಿಗೆ ಅನುಮೋದನೆ ನೀಡಿ: ರಾಷ್ಟ್ರಪತಿಗಳಿಗೆ ಸಿಎಂ ಮನವಿ

CM Siddaramaiah: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ನವದೆಹಲಿಯಲ್ಲಿ ಸಿಎಂ ಸಿದ್ದರಾಮಯ್ಯ ಮಂಗಳವಾರ ಭೇಟಿ ಮಾಡಿ ಚರ್ಚಿಸಿದ್ದಾರೆ. ಏಳು ಮಸೂದೆಗಳ ಅನುಮೋದನೆ ನೀಡಲು ರಾಷ್ಟ್ರಪತಿ ಅವರಿಗೆ ಸಿಎಂ ಮನವಿ ಮಾಡಿದ್ದಾರೆ.

Mango Price Drop: ರಾಜ್ಯದ ಮಾವು ಬೆಳೆಗಾರರ ನೆರವಿಗೆ ಧಾವಿಸಿದ ಕೇಂದ್ರ; 2.5 ಲಕ್ಷ ಟನ್ ಮಾವು ಖರೀದಿಗೆ ನಿರ್ಧಾರ, ಬೆಲೆ ಎಷ್ಟು?

ಕರ್ನಾಟಕ ಮಾವು ಬೆಳೆಗಾರರ ನೆರವಿಗೆ ಧಾವಿಸಿದ ಕೇಂದ್ರ ಸರ್ಕಾರ

Mango Price Drop: ಕರ್ನಾಟಕ ರಾಜ್ಯದಲ್ಲಿ 2025-26ನೇ ಸಾಲಿನಲ್ಲಿ ಮಾರುಕಟ್ಟೆ ಮಧ್ಯಸ್ಥಿಕೆ ಯೋಜನೆಯಡಿ ಕ್ವಿಂಟಲ್‌ಗೆ 1,616 ರೂ.ಗಳಂತೆ ಗರಿಷ್ಠ 2,50,000 ಟನ್ ಮಾವು ಖರೀದಿಸಲು ಅನುಮೋದಿಸಲಾಗಿದೆ ಎಂದು ನಾನು ನಿಮಗೆ ತಿಳಿಸಲು ಬಯಸುತ್ತೇನೆ ಎಂದು ಶಿವರಾಜ್‌ ಸಿಂಗ್ ಚೌಹಾಣ್ ಅವರು ಕುಮಾರಸ್ವಾಮಿ ಅವರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

Bandi Devara Utsava: ಜೂ.25ರಿಂದ ಮೂರು ದಿನ ಬೆಂಗಳೂರು ಬಂಡಿದೇವರ ಉತ್ಸವ

ಜೂ.25ರಿಂದ ಮೂರು ದಿನ ಬೆಂಗಳೂರು ಬಂಡಿದೇವರ ಉತ್ಸವ

Bengaluru News: ನಾಡಪ್ರಭು ಕೆಂಪೇಗೌಡರ ಜಯಂತಿ ಪ್ರಯುಕ್ತ ಜೂ.25ರಿಂದ 27 ವರೆಗೆ ಮೂರು ದಿನಗಳ ಕಾಲ ಬಂಡಿ ದೇವರ ಉತ್ಸವವನ್ನು ನಗರದಲ್ಲಿ ಕೈಗೊಳ್ಳಲಾಗುವುದು ಎಂದು ಬೆಂಗಳೂರು ಬಂಡಿದೇವರ ಉತ್ಸವ ಸಮಿತಿಯ ಅಧ್ಯಕ್ಷ ಡಾ. ತಲಕಾಡು ಚಿಕ್ಕರಂಗೇಗೌಡ ತಿಳಿಸಿದ್ದಾರೆ.

Green Ammonia: ಹಸಿರು ಅಮೋನಿಯಾ ಉತ್ಪಾದನೆ ಗುರಿ ಸಾಧನೆಯತ್ತ ಭಾರತ; ಟೆಂಡರ್‌ಗೆ ಸಿದ್ಧತೆ

ಹಸಿರು ಅಮೋನಿಯಾ ಉತ್ಪಾದನೆ ಗುರಿ ಸಾಧನೆಯತ್ತ ಭಾರತ

Green Ammonia: 2070ರ ವೇಳೆಗೆ ನಿವ್ವಳ-ಶೂನ್ಯ ಇಂಗಾಲ ಹೊರಸೂಸುವಿಕೆ ಗುರಿ ಸಾಧನೆಯತ್ತ ಸಾಗಿರುವ ಕೇಂದ್ರ ಸರ್ಕಾರ, ಹಸಿರು ಅಮೋನಿಯಾ ಹೊರತೆಗೆಯಲು ಮಹತ್ವದ ಟೆಂಡರ್ ಸಹ ಬಿಡುಗಡೆ ಮಾಡಿದೆ. ಭಾರತದ ರಸಗೊಬ್ಬರ ವಲಯವನ್ನು ಇಂಗಾಲ ಮುಕ್ತಗೊಳಿಸಲು ಭಾರತೀಯ ಸೌರಶಕ್ತಿ ನಿಗಮ ಲಿಮಿಟೆಡ್ (SECI) ಗ್ರೀನ್ ಅಮೋನಿಯಾ ಟೆಂಡರ್ ಸಿದ್ಧಪಡಿಸಿದೆ.

Karnataka Rains: ನಾಳೆ ಕರಾವಳಿ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್;‌ ಕಾವೇರಿ ನದಿ ಪಾತ್ರದಲ್ಲಿ ಪ್ರವಾಹ ಎಚ್ಚರಿಕೆ!

ನಾಳೆ ಕರಾವಳಿ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್;‌ ಭಾರಿ ಮಳೆ ಸಾಧ್ಯತೆ

Karnataka Rains: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 28°C ಮತ್ತು 21°C ಇರುವ ಸಾಧ್ಯತೆ ಇದೆ.

Self Harming: ರೀಲ್ಸ್ ವಿಚಾರಕ್ಕೆ ಪ್ರೇಮಿಗಳ ಜಗಳ; ನೇಣಿಗೆ ಶರಣಾದ ಯುವತಿ!

ರೀಲ್ಸ್ ವಿಚಾರಕ್ಕೆ ಪ್ರೇಮಿಗಳ ಜಗಳ; ನೇಣಿಗೆ ಶರಣಾದ ಯುವತಿ

Self Harming: ಇನ್‌ಸ್ಟಾಗ್ರಾಮ್ ರೀಲ್ಸ್‌ ವಿಚಾರ ಆರಂಭವಾದ ಪ್ರೇಮಿಗಳ ಜಗಳ ಯುವತಿಯ ಆತ್ಮಹತ್ಯೆಯಲ್ಲಿ ಅಂತ್ಯವಾಗಿದೆ. ತುಮಕೂರಿನಲ್ಲಿ ಯುವತಿ ನೇಣಿಗೆ ಶರಣಾಗಿದ್ದಾಳೆ. ಈ ಸಂಬಂಧ ‌ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕೇಸ್‌ ದಾಖಲಿಸಲಾಗಿದ್ದು, ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

CM Siddaramaiah: ನಿರ್ಮಲಾ ಸೀತಾರಾಮನ್‌ ಭೇಟಿಯಾದ ಸಿಎಂ ಸಿದ್ದರಾಮಯ್ಯ; ರಾಜ್ಯಗಳ ಬೆಳವಣಿಗೆಗೆ ಪೂರಕವಾಗಿ ತೆರಿಗೆ ಹಂಚಿಕೆ ಮಾಡುವಂತೆ ಮನವಿ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಭೇಟಿಯಾದ ಸಿಎಂ ಸಿದ್ದರಾಮಯ್ಯ

CM Siddaramaiah: 15 ನೇ ಹಣಕಾಸು ಆಯೋಗವು ತನ್ನ ಶಿಫಾರಸಿನಲ್ಲಿ ಕರ್ನಾಟಕದ ತೆರಿಗೆ ಪಾಲನ್ನು ಶೇ. 4.713 ರಿಂದ ಶೇ.3.647 ಕ್ಕೆ ಇಳಿಕೆ ಮಾಡಿದ್ದರಿಂದ ರಾಜ್ಯದ ತೆರಿಗೆ ಪಾಲು 14ನೇ ಹಣಕಾಸು ಆಯೋಗಕ್ಕೆ ಹೋಲಿಸಿದರೆ 15ನೇ ಹಣಕಾಸು ಆಯೋಗದ ಅವಧಿಯಲ್ಲಿ ಶೇ.23ರಷ್ಟು ಕಡಿಮೆಯಾಗಿರುವುದರ ಕುರಿತು ಮುಖ್ಯಮಂತ್ರಿಗಳು ಕೇಂದ್ರ ಹಣಕಾಸು ಸಚಿವರಿಗೆ ವಿವರಿಸಿದ್ದಾರೆ.

HD Kumaraswamy: ಮಾವು ಬೆಳೆಗಾರರ ನೆರವಿಗೆ ಧಾವಿಸಿ: ಕೇಂದ್ರ ಕೃಷಿ ಸಚಿವರಿಗೆ ಎಚ್.ಡಿ.ಕುಮಾರಸ್ವಾಮಿ ಪತ್ರ

ಮಾವು ಬೆಳೆಗಾರರ ನೆರವಿಗೆ ಧಾವಿಸಿ: ಕೇಂದ್ರ ಕೃಷಿ ಸಚಿವರಿಗೆ ಎಚ್‌ಡಿಕೆ ಪತ್ರ

HD Kumaraswamy: ಬೆಲೆ ಕುಸಿತದಿಂದ ತೀವ್ರ ಕಂಗಾಲಾಗಿರುವ ರಾಜ್ಯದ ಮಾವು ಬೆಳೆಗಾರರ ನೆರವಾಗಬೇಕು. ಸದ್ಯಕ್ಕೆ ಕೇಂದ್ರ ಸರ್ಕಾರ ನೆರವಿಗೆ ಬಾರದಿದ್ದರೆ ಬೆಳೆಗಾರರಿಗೆ ಬೇರೆ ನೆರವಿನ ಖಾತರಿ ಇಲ್ಲ ಎಂದು ಕೇಂದ್ರ ಕೃಷಿ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್‌ ಅವರಿಗೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಪತ್ರ ಬರೆದಿದ್ದಾರೆ.

Bengaluru Power Cut: ಜೂ.25, 26ರಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ಕರೆಂಟ್‌ ಇರಲ್ಲ

ಜೂ.25, 26ರಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ಕರೆಂಟ್‌ ಇರಲ್ಲ

Bengaluru Power Cut: ಆಡುಗೋಡಿ ಮತ್ತು ಆಸ್ಟೀನ್ ಟೌನ್ ಉಪಕೇಂದ್ರದಲ್ಲಿ ನಿರ್ವಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ ಜೂ.25 ರಂದು ಬುಧವಾರ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ. ಈ ಕುರಿತ ವಿವರ ಇಲ್ಲಿದೆ.

Jamun Fruit: ಜಾಗತಿಕ ಮಾರುಕಟ್ಟೆಗೆ ಲಗ್ಗೆ ಇಟ್ಟ ಕರ್ನಾಟಕದ ನೇರಳೆ ಹಣ್ಣು; ಲಂಡನ್‌ಗೆ ರಫ್ತು

ಜಾಗತಿಕ ಮಾರುಕಟ್ಟೆಗೆ ಲಗ್ಗೆ ಇಟ್ಟ ಕರ್ನಾಟಕದ ನೇರಳೆ ಹಣ್ಣು!

Jamun Fruit: ನೇರಳೆ ಹಣ್ಣು ರಫ್ತು ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿ, ಮೊದಲ ಬಾರಿಗೆ ರಾಜ್ಯದ ನೇರಳೆ ಹಣ್ಣುಗಳು ಲಂಡನ್‌ಗೆ ರಫ್ತಾಗುತ್ತಿವೆ. ಇದು ರಾಜ್ಯದ ರೈತರಿಗೆ ಹೆಮ್ಮೆಯ ಮೈಲುಗಲ್ಲಾಗಿದ್ದು, ರೈತರ ಆದಾಯ ದ್ವಿಗುಣಗೊಳ್ಳಲು ನೆರವಾಗಲಿದೆ ಎಂದು ತಿಳಿಸಿದ್ದಾರೆ.

KR Puram railway station: ರೈಲಿನಡಿ ಬೀಳುತ್ತಿದ್ದ ಪ್ರಯಾಣಿಕನನ್ನು ದೇವರಂತೆ ಬಂದು ರಕ್ಷಿಸಿದ ರೈಲ್ವೆ ಸಿಬ್ಬಂದಿ, ಮಾಜಿ ಸೈನಿಕ!; ವಿಡಿಯೋ ವೈರಲ್‌

ರೈಲಿನಡಿ ಬೀಳುತ್ತಿದ್ದ ವ್ಯಕ್ತಿಯನ್ನು ದೇವರಂತೆ ಬಂದು ರಕ್ಷಿಸಿದ ಸಿಬ್ಬಂದಿ!

KR Puram railway station: ಬೆಂಗಳೂರಿನ ಕೆ.ಆರ.ಪುರಂ ರೈಲ್ವೆ ನಿಲ್ದಾಣದ ಪ್ಲಾಟ್ ಫಾರ್ಮ್ 2 ರಲ್ಲಿ ಸೋಮವಾರ ರಾತ್ರಿ ಘಟನೆ ನಡೆದಿದೆ. ರೈಲಿನಡಿ ಸಿಲುಕುವಷ್ಟರಲ್ಲಿ ಸ್ಥಳದಲ್ಲಿದ್ದ ಮಾಜಿ ಸೈನಿಕ ಮತ್ತು ರೈಲ್ವೆ ಇಲಾಖೆಯ ಸಿಬ್ಬಂದಿಯೊಬ್ಬರು ಪ್ರಯಾಣಿಕನನ್ನು ಪ್ಲಾಟ್‌ಫಾರ್ಮ್‌ನತ್ತ ಎಳೆದು ರಕ್ಷಣೆ ಮಾಡಿದ್ದಾರೆ.

Denta Water Groups: ಡೆಂಟಾ ವಾಟರ್‌ ಸಿಎಸ್ಆರ್ ಫಂಡ್‌ನಿಂದ ನಿರ್ಮಿತ ಶಾಲಾ ಕಟ್ಟಡ ಉದ್ಘಾಟಿಸಿದ ಸಚಿವ ಚಲುವರಾಯಸ್ವಾಮಿ

ಮಂಡ್ಯದಲ್ಲಿ ಶಾಲಾ ಕಟ್ಟಡ ಉದ್ಘಾಟಿಸಿದ ಸಚಿವ ಚಲುವರಾಯಸ್ವಾಮಿ

ತಾಲೂಕಿನ ಸಂತೆಬಾಚಹಳ್ಳಿ ಗ್ರಾಮದಲ್ಲಿ ಡೆಂಟಾ ವಾಟರ್ ಇನ್ಫ್ರಾ ಸೆಲ್ಯೂಷನ್ ಲಿಮಿಟೆಡ್ ಕಂಪನಿಯು ತನ್ನ ಸಿಎಸ್ ಆರ್ ಫಂಡ್ ಮೂಲಕ 1.13 ಕೋಟಿ ರೂ ವೆಚ್ಚದಲ್ಲಿ ನಿರ್ಮಿಸಿರುವ ಪದವಿ ಪೂರ್ವ ಕಾಲೇಜಿನ ಹೆಚ್ಚುವರಿ ಕಟ್ಟಡ ವನ್ನು ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯ ಸ್ವಾಮಿ ಅವರು ಉದ್ಘಾಟಿಸಿದರು.

Rupesh Rajanna: ಕನ್ನಡಪರ ಹೋರಾಟಗಾರ ರೂಪೇಶ್ ರಾಜಣ್ಣ ವಿರುದ್ಧ ಬ್ಲ್ಯಾಕ್‌ ಮೇಲ್‌ ಆರೋಪ; ಸಚಿವರ ನಿವಾಸಕ್ಕೆ ಮುತ್ತಿಗೆ ವೇಳೆ ವಶಕ್ಕೆ

ಸಚಿವ ಜಮೀರ್‌ ಅಹ್ಮದ್‌ ನಿವಾಸಕ್ಕೆ ಮುತ್ತಿಗೆ; ರೂಪೇಶ್ ರಾಜಣ್ಣ ವಶಕ್ಕೆ

Rupesh Rajanna: ಬೆಂಗಳೂರಿನ ಗಾಲ್ಫ್ ಕೋರ್ಸ್ ರಸ್ತೆಯ ಸಚಿವ ಜಮೀರ್‌ ಅಹ್ಮದ್‌ ಅವರ ಸರ್ಕಾರಿ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದಾಗ ಕನ್ನಡಪರ ಹೋರಾಟಗಾರ ರೂಪೇಶ್ ರಾಜಣ್ಣ ಹಾಗೂ ಬೆಂಬಲಿಗರನ್ನು ಪೊಲೀಸರು ಮಂಗಳವಾರ ವಶಕ್ಕೆ ಪಡೆದಿದ್ದಾರೆ.

Chit Fund Scam: ಚೀಟಿ ಹೆಸರಲ್ಲಿ ಬರೋಬ್ಬರಿ 10 ಕೋಟಿ ವಂಚಿಸಿದ ಮಹಿಳೆ; ಕೇಸ್‌ ಬೆನ್ನಲ್ಲೇ ಪರಾರಿ

ಚೀಟಿ ಹೆಸರಲ್ಲಿ ಬರೋಬ್ಬರಿ 10 ಕೋಟಿ ವಂಚಿಸಿದ ಮಹಿಳೆ!

Chit Fund Scam: ವಂಚನೆ ಸಂಬಂಧ ಬೆಂಗಳೂರಿನ ಜೆ.ಪಿ.ನಗರದ ಮಹಿಳೆಯೊಬ್ಬರು ನೀಡಿದ ದೂರಿನ ಮೇರೆಗೆ ನಾಲ್ವರು ಆರೋಪಿಗಳ ವಿರುದ್ಧ ಪುಟ್ಟೇನಹಳ್ಳಿ ಠಾಣೆ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ. ಇನ್ನು ಈ ಪ್ರಕರಣವನ್ನು ಸಿಐಡಿಗೆ ವರ್ಗಾವಣೆ ಮಾಡುವಂತೆ ಕೋರಲಾಗಿದೆ.

Bomb Threats: ಸಹೋದ್ಯೋಗಿ ಮದುವೆಯಾಗಲು ನಿರಾಕರಿಸಿದ್ದಕ್ಕೆ 11 ರಾಜ್ಯಗಳ ಶಾಲೆ, ಆಸ್ಪತ್ರೆ, ಏರ್‌ಪೋರ್ಟ್‌ಗಳಿಗೆ ಬಾಂಬ್‌ ಬೆದರಿಕೆ; ಯುವತಿ ಅರೆಸ್ಟ್!

ಶಾಲೆ, ಆಸ್ಪತ್ರೆಗಳಿಗೆ ಬಾಂಬ್‌ ಬೆದರಿಕೆ ಸಂದೇಶ ಕಳುಹಿಸಿದ್ದ ಯುವತಿ ಬಂಧನ

Bomb Threats: ಆರೋಪಿ ಯುವತಿ ಉಡುಪಿಯ ವಿದ್ಯೋದಯ ಪಬ್ಲಿಕ್ ಸ್ಕೂಲ್​ಗೂ ಇ-ಮೇಲ್ ಮೂಲಕ ಬಾಂಬ್ ಬೆದರಿಕೆಯೊಡ್ಡಿದ್ದಳು. ಹೀಗಾಗಿ ತನಿಖೆಗಾಗಿ ಆರೋಪಿಯನ್ನು ಅಹಮದಾಬಾದ್ ಪೊಲೀಸರಿಂದ ಉಡುಪಿ ಪೊಲೀಸರು ಕಸ್ಟಡಿಗೆ ಪಡೆಯುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

Chikkaballapur News: ರಾಶ್ಚೇರುವು ಗ್ರಾಮ ಪಂಚಾಯತಿ ಅಧ್ಯಕ್ಷರ ವಿರುದ್ದ ಸಲ್ಲಿಸಲಾಗಿದ್ದ ಅವಿಶ್ವಾಸ ಗೊತ್ತುವಳಿ ಮಂಡನೆ ಸಭೆ

ಅಧ್ಯಕ್ಷರ ವಿರುದ್ದ ಸಲ್ಲಿಸಲಾಗಿದ್ದ ಅವಿಶ್ವಾಸ  ಗೊತ್ತುವಳಿ ಮಂಡನೆ ಸಭೆ

ವಿಧಾನ ಪರಿಷತ್ ಚುನಾವಣೆ ಸಮಯದಲ್ಲಿ ಎಂಎಲ್‌ಸಿ ಅನಿಲ್ ಕುಮಾರ್, ಶಾಸಕ ಎಸ್.ಎನ್.ಸುಬ್ಬಾ ರೆಡ್ಡಿ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡು ಗ್ರಾ.ಪಂ. ಅಧ್ಯಕ್ಷೆ ಸ್ಥಾನವನ್ನು ಗಿಟ್ಟಿಸಿ ಕೊಂಡಿದ್ದ ಕಾಂಗ್ರೆಸ್ ಬೆಂಬಲಿತ ಅದ್ಯಕ್ಷೆ ರೇವತಿ ಶ್ರೀನಿವಾಸ್‌ರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಸಲು ಕಾಂಗ್ರೆಸ್ ಪಕ್ಷದ ಬೆಂಬಲಿತ ಸದಸ್ಯರ ಒಂದು ಬಣ ಹಾಗೂ ಎನ್‌ಡಿಎ ಬೆಂಬಲಿತ ಸದಸ್ಯರ ಬಣ ಸೇರಿ ೧೦ ಸದಸ್ಯರು ಹಾಲಿ ಅದ್ಯಕ್ಷರ ವಿರುದ್ದ ಅವಿಶ್ವಾಸ ಮಂಡನೆಗೆ ಮುಂದಾಗಿದ್ದಾರೆ,

Chikkaballapur News: ಉಪ್ಪಾರ ಸಮುದಾಯ ಶೈಕ್ಷಣಿವಾಗಿ ಮುಂದೆ ಬರಬೇಕಿದೆ: ತಾಲೂಕು ಉಪ್ಪಾರರ ಸಂಘದ ಅಧ್ಯಕ್ಷ ಸಜ್ಜಗಂಟರಾಯಪ್ಪ

ಉಪ್ಪಾರ ಸಮುದಾಯ ಶೈಕ್ಷಣಿವಾಗಿ ಮುಂದೆ ಬರಬೇಕಿದೆ

ಸಮುದಾಯದ ಮುಖಂಡರು ನಮ್ಮ ಸಮಾಜದ ಅಭಿವೃದ್ಧಿಗೆ ಕೈಜೋಡಿಸಬೇಕು, ಶೈಕ್ಷಣಿಕವಾಗಿ ವಂಚಿತರಾದವರಿಗೆ ಸಂಘದ ಕಡೆಯಿಂದ ಸಹಾಯ ಹಸ್ತ ನೀಡಬೇಕು ಮುಂದಿನ ದಿನಗಳಲ್ಲಿ ನಮ್ಮ ಸಮುದಾಯವು ಮುಂಚೂಣಿಗೆ ಬರಲು ಶಿಕ್ಷಣ ಕಡ್ಡಾಯ ಶಿಕ್ಷಣ ಹೊಂದಿದ್ದರೆ ಎಲ್ಲಾ ರೀತಿಯ ಅಭಿವೃದ್ಧಿಯಲ್ಲಿ ಮುಂಚೂಣಿಗೆ ಬರಲು ಸಹಕಾರಿಯಾಗುತ್ತೆ ಎಂದರು.