ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಕರ್ನಾಟಕ

Piriyapattana News: ಅನಿಕೇತನ ಪದವಿ ಪೂರ್ವ ಕಾಲೇಜಿನಲ್ಲಿ ಆದಿ ಕವಿ ಪಂಪ ಕನ್ನಡ ಸಾಹಿತ್ಯ ಸಂಘ ಉದ್ಘಾಟನೆ

ಆದಿ ಕವಿ ಪಂಪ ಕನ್ನಡ ಸಾಹಿತ್ಯ ಸಂಘ ಉದ್ಘಾಟನೆ

ಜಾನಪದಗಳು ಉಳಿಯ ಬೇಕು. ವಿದ್ಯಾರ್ಥಿಗಳುಜ ಕೂಡ ಜಾನಪದ ಕಲೆಯನ್ನು ಉಳಿಸಿಬೆಳೆಸಬೇಕು. ಸ್ಥಳೀಯವಾಗಿ ನಡೆಯವ ಹಬ್ಬ, ಜಾತ್ರೆಗಳಲ್ಲಿ ಪಾಲ್ಗೊಂಡು ಅಲ್ಲಿನ ಜಾನಪದ ಸೊಗಡನ್ನು ನೋಡ ಬೇಕು. ಮನೆ ಮನೆಗೆ ತೆರಳಿ ಜಾನಪದ ಹಾಡುಗಳನ್ನು ಹಾಡುವ ಕಲಾವಿದರನ್ನು ಗೌರವಿಸಬೇಕು. ಅವರ ಹಾಡುಗಳನ್ನು ನಾವು ಹಾಡುವ ಮೂಲಕ ಅವರನ್ನು ಪ್ರೋತ್ಸಾಹಿಸಬೇಕು

Dr C N Manjunath: ಸುಧಾರಿತ ಹೃದಯದ ಆರೈಕೆಗೆ ಬೇಡಿಕೆ: ಎರಡನೇ ಕ್ಯಾಥ್ ಲ್ಯಾಬ್ ಸೇರ್ಪಡೆ, ವಾರ್ಷಿಕ ಹೆಚ್ಚುವರಿ 3,000 ರೋಗಿಗಳಿಗೆ ಚಿಕಿತ್ಸೆ

ಎರಡನೇ ಕ್ಯಾಥ್ ಲ್ಯಾಬ್ ಸೇರ್ಪಡೆ, ಹೆಚ್ಚುವರಿ 3,000 ರೋಗಿಗಳಿಗೆ ಚಿಕಿತ್ಸೆ

ಶೇಷಾದ್ರಿಪುರಂ ಅಪೋಲೋ ಆಸ್ಪತ್ರೆಯು ಪ್ರಸ್ತುತ ವಾರ್ಷಿಕ 4,000ಕ್ಕೂ ಹೆಚ್ಚು ಹೃದಯರೋಗದ ಪ್ರಕರಣಗಳನ್ನು ನಿರ್ವಹಿಸಬಲ್ಲದು. 2015ರಲ್ಲಿ ಅನುಷ್ಠಾನಗೊಳಿಸಲಾದ ಆಸ್ಪತ್ರೆಯ ಮೊದಲ ಕ್ಯಾಥ್ ಲ್ಯಾಬ್ 27,000ಕ್ಕೂ ಹೆಚ್ಚು ಪ್ರಕ್ರಿಯೆಗಳನ್ನು ನಿರ್ವಹಿಸುತ್ತಿದ್ದು ಅದು ತುರ್ತು ಹಾಗೂ ಯೋಜಿತ ಹೃದಯ ಚಿಕಿತ್ಸೆಗಳನ್ನು ದಿನಪೂರ್ತಿ ನೀಡುತ್ತಿದೆ.

ವಿಧಾನಪರಿಷತ್ ಚುನಾವಣೆಯಲ್ಲಿ ಅಡ್ಡಮತದಾನ ಕುರಿತು ಪರಿಶೀಲನೆ: ಬಿ.ವೈ. ವಿಜಯೇಂದ್ರ

ಅಡ್ಡಮತದಾನ ಕುರಿತು ಪರಿಶೀಲನೆ: ಬಿ.ವೈ. ವಿಜಯೇಂದ್ರ

B.Y. Vijayendra: ವಿಧಾನಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನವಾಗಿದ್ದರ ಬಗ್ಗೆ ಪಕ್ಷ ಪರಿಶೀಲನೆ ಮಾಡಲಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ಹೇಳಿದ್ದಾರೆ. ಇದನ್ನು ಯಾರು ಮಾಡಿದ್ದಾರೆ ಎಂಬುದು ಗೊತ್ತಾಗಲಿದೆ. ಪಕ್ಷಕ್ಕೆ ದ್ರೋಹ ಬಗೆದವರು ಸಿಕ್ಕಿಹಾಕಿಕೊಳ್ತಾರೆ ಎಂದು ವಿರೋಧಪಕ್ಷದ ನಾಯಕ ಆರ್. ಅಶೋಕ್ ಹೇಳಿದ್ದಾರೆ.

Karnataka Weather: ಇಂದು 4 ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆ; ಬೆಂಗಳೂರಿನಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ

ಇಂದು 4 ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆ

Karnataka Weather Report: ಶುಕ್ರವಾರ (ಜೂನ್‌ 19) ರಾಜ್ಯದ ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Vishwavani Club House Completes 5 Years: ಮಾತಿನ ಮಂಟಪ ವಿಶ್ವವಾಣಿ ಕ್ಲಬ್‌ʼಹೌಸ್ʼಗೆ 5 ವರ್ಷ

ಮಾತಿನ ಮಂಟಪ ವಿಶ್ವವಾಣಿ ಕ್ಲಬ್‌ʼಹೌಸ್ʼಗೆ 5 ವರ್ಷ

ಕರೋನಾ ಕಾಲದಲ್ಲಿ ಆರಂಭಗೊಂಡ ವಿಶ್ವವಾಣಿ ಕ್ಲಬ್‌ಹೌಸ್ (ಸಂವಾದದ APP) ಚರ್ಚೆಗೆ ಇದೀಗ ಐದು ವರ್ಷ ಭರ್ತಿಯಾಗಿದೆ. ‘ಆಡುಮುಟ್ಟದ ಸೊಪ್ಪಿಲ್ಲ; ವಿಶ್ವವಾಣಿ ಕ್ಲಬ್‌ಹೌಸ್‌ ನಲ್ಲಿ ನಡೆಯದ ಚರ್ಚೆಯಿಲ್ಲ’ ಎನ್ನುವಂತೆ ಸತತ 5 ವರ್ಷಗಳ ವಿಶ್ವವಾಣಿ ಕ್ಲಬ್‌ಹೌಸ್‌ನಲ್ಲಿ ನಿರಂತರ ಚರ್ಚೆಗಳು ನಡೆದಿವೆ. ವಿಶ್ವದಲ್ಲಿ ಯಾವುದೇ ಒಂದು ಕ್ಲಬ್‌ಹೌಸ್ ರೂಮ್ ಇಷ್ಟು ಸುದೀರ್ಘವಾಗಿ ನಡೆದ ಇತಿಹಾಸ ವಿಲ್ಲ

Gauribidanur News: ತೊಂಡೆಬಾವಿ ಹಾಲು ಡೇರಿಯ ಹಣ ದುರುಪಯೋಗ ಚಿಮುಲ್ ನಿರ್ದೇಶಕ ಜೆ.ಕಾಂತರಾಜು ಬೇಸರ

ತೊಂಡೆಬಾವಿ ಹಾಲು ಡೇರಿಯ ಹಣ ದುರುಪಯೋಗ: ಜೆ.ಕಾಂತರಾಜು ಬೇಸರ

ತಾಲೂಕಿನ ತೊಂಡೇಬಾವಿ ಹಾಲು ಉತ್ಪಾದಕರ ಸಹಕಾರ ಸಂಘದ ನಿರ್ದೇಶಕರೊಂದಿಗೆ ಹಮ್ಮಿ ಕೊಂಡಿದ್ದ ಸಾರ್ವಜನಿಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಡೇರಿಯಲ್ಲಿ ನಡೆದಿರುವ ಹಣದ ದುರುಪಯೋಗದ ಕುರಿತು ಸಮಗ್ರ ತನಿಖೆ ನಡೆಸಿ ಸತ್ಯಾಂಶ ಬಹಿರಂಗಪಡಿಸಬೇಕು. ತಪ್ಪಿತಸ್ಥರು ಯಾರೇ ಆಗಿದ್ದರೂ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು.

''ವಿಪಕ್ಷಗಳ ಗ್ಯಾರಂಟಿ ವಿರೋಧಿ ನೀತಿಗೆ ಅವರ ಶಾಸಕರಿಂದಲೇ ಉತ್ತರ'': ರಣದೀಪ್ ಸುರ್ಜೇವಾಲಾ

ಗ್ಯಾರಂಟಿ ವಿರೋಧಿ ನೀತಿಗೆ ವಿಪಕ್ಷ ಶಾಸಕರಿಂದಲೇ ಉತ್ತರ: ಸುರ್ಜೇವಾಲಾ

Randeep Surjewala: ಗ್ಯಾರಂಟಿ ಯೋಜನೆಗಳಿಗೆ ಜನ ಬೆಂಬಲ ನೀಡಿದ್ದಾರೆ. ‌ಪಕ್ಷಾತೀತವಾಗಿ ಶಾಸಕರು ನಮ್ಮ ಜತೆ ನಿಂತಿದ್ದಾರೆ. ಇದರ ಜತೆಗೆ ಕರ್ನಾಟಕ ವಿರೋಧಿಯಾಗಿ ನಡೆದುಕೊಳ್ಳುತ್ತಿರುವ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಬಿಜೆಪಿ ಸರ್ಕಾರಕ್ಕೆ ಕರ್ನಾಟಕದ ಶಾಸಕರು ಪಕ್ಷಾತೀತವಾಗಿ ಉತ್ತರ ನೀಡಿದ್ದಾರೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೇವಾಲಾ ಹೇಳಿದ್ದಾರೆ.

ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಪಕ್ಷಾತೀತ ಬೆಂಬಲ: ಸಿಎಂ ಡಿ.ಕೆ. ಶಿವಕುಮಾರ್ ಫುಲ್‌ ಖುಷ್‌

ಬೇರೆ ಪಕ್ಷದವರು ತೋರಿರುವ ವಿಶ್ವಾಸ ಉಳಿಸಿಕೊಳ್ಳುತ್ತೇವೆ: ಡಿಕೆಶಿ

CM DK Shivakumar: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ ಸರ್ಕಾರಕ್ಕೆ ಸಿಕ್ಕ ಶಾಸಕರ ಬೆಂಬಲ ನೋಡಿ ನನಗೆ ಆಶ್ಚರ್ಯವಾಗಿದೆ. ಇದು ನಮ್ಮ ಸರ್ಕಾರಕ್ಕೆ ಮಾತ್ರ ನೀಡಿರುವ ಬೆಂಬಲವಲ್ಲ. ರಾಜ್ಯದ ಜನತೆಯ ಹಿತಕ್ಕಾಗಿ ನಿಮ್ಮ ಜತೆ ಇದ್ದೇವೆ ಎಂದು ನೀಡಿರುವ ಬೆಂಬಲ ಎಂದು ಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

Lokayukta Raid: ಲಂಚ ಸ್ವೀಕರಿಸುತ್ತಿದ್ದ ಸಿಎಂ ಪದಕ ವಿಜೇತ ಅಧಿಕಾರಿ ಲೋಕಾಯುಕ್ತ ಬಲೆಗೆ

ಲಂಚ ಸ್ವೀಕರಿಸುತ್ತಿದ್ದ ಪಿಎಸ್‌ಐ, ಎಸ್‌ಬಿ ಸಿಬ್ಬಂದಿ ಲೋಕಾಯುಕ್ತ ಬಲೆಗೆ

ಅಕ್ಕಿ ವ್ಯಾಪಾರಕ್ಕೆ ಸಂಬಂಧಿಸಿದ ಪ್ರಕರಣವೊಂದರಲ್ಲಿ ಸಹಕಾರ ನೀಡಲು ಉದ್ಯಮಿಯೊಬ್ಬರಿಂದ ಲಂಚ ಸ್ವೀಕರಿಸುತ್ತಿದ್ದ ಯಡ್ರಾಮಿ ಪೊಲೀಸ್ ಠಾಣೆಯ ಪಿಎಸ್‌ಐ ಹಾಗೂ ವಿಶೇಷ ಶಾಖೆ (ಎಸ್‌ಬಿ) ಸಿಬ್ಬಂದಿ ಗುರುವಾರ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಅಚ್ಚರಿ ಎಂದರೆ ಲೋಕಾಯುಕ್ತ ಬಲೆಗೆ ಬಿದ್ದಿರುವ ಪಿಎಸ್‌ಐ ವಿಶ್ವನಾಥ ಮುದರೆಡ್ಡಿ ಈ ಹಿಂದೆ ಗಂಭೀರ ಪ್ರಕರಣಗಳ ತನಿಖೆ ಹಾಗೂ ಆರೋಪಿಗಳ ಬಂಧನದಲ್ಲಿ ಅತ್ಯುತ್ತಮ ಕಾರ್ಯಕ್ಷಮತೆ ತೋರ್ಪಡಿಸಿದ್ದರು.

ಜೂನ್‌ 21ರಂದು ಸಿದ್ದರಬೆಟ್ಟ ಶ್ರೀಮಠದ 20ನೇ ವರ್ಷದ ಮಹೋತ್ಸವ, ಧರ್ಮ ಜಾಗೃತಿ, ಉಚಿತ ಸಾಮೂಹಿಕ ವಿವಾಹ

ಜೂನ್‌ 21ರಂದು ಸಿದ್ದರಬೆಟ್ಟ ಶ್ರೀಮಠದ 20ನೇ ವರ್ಷದ ಮಹೋತ್ಸವ

Madhugiri News: ಸಸ್ಯಕಾಶಿ, ಸಿದ್ದರ ತಪೋಭೂಮಿಯಲ್ಲಿ ಜೂನ್‌ 21ರಂದು ನಡೆಯಲಿದರುವ ಬಾಳೆಹೊನ್ನೂರು ಖಾಸಾ ಶಾಖಾ ಮಠ, ಸಿದ್ದರಬೆಟ್ಟದ 20ನೇ ವಾರ್ಷಿಕೋತ್ಸವ, ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಹಾಗೂ ಜಗಜ್ಯೋತಿ ಬಸವೇಶ್ವರ ಜಯಂತೋತ್ಸವ ಕಾರ್ಯಕ್ರಮಕ್ಕೆ ಭರದ ಸಿದ್ಧತೆಗಳು ನಡೆಯುತ್ತಿವೆ ಎಂದು ವೀರಭದ್ರ ಶಿವಾಚಾರ್ಯ ಸ್ವಾಮೀಜಿ ತಿಳಿಸಿದ್ದಾರೆ.

ಮೊದಲ ಅಗ್ನಿ ಪರೀಕ್ಷೆಯಲ್ಲೇ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಪಾಸ್‌; ವಿಧಾನ ಪರಿಷತ್‌ನ 5 ಸ್ಥಾನಗಳನ್ನು ಕಾಂಗ್ರೆಸ್‌ ಗೆದ್ದಿದ್ದೇಗೆ?

ಕಾಂಗ್ರೆಸ್‌ ವಿಧಾನ ಪರಿಷತ್‌ನ 5 ಸ್ಥಾನಗಳನ್ನು ಗೆದ್ದಿದ್ದೇಗೆ?

Karnataka MLC Polls: ರಾಜ್ಯದ ವಿಧಾನ ಪರಿಷತ್‌ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ಅಚ್ಚರಿ ಎಂಬಂತೆ ಆಡಳಿತಾರೂಢ ಕಾಂಗ್ರೆಸ್‌ ಐದು ಸ್ಥಾನಗಳನ್ನು ಗೆದ್ದುಕೊಂಡಿದೆ. ಆ ಮೂಲಕ ಮುಖ್ಯಮಂತ್ರಿಯಾದ ಬಳಿಕ ಎದುರಾದ ಮೊದಲ ಅಗ್ನಿ ಪರೀಕ್ಷೆಯಲ್ಲೇ ಡಿ.ಕೆ. ಶಿವಕುಮಾರ್‌ ಕಮಾಲ್‌ ಮಾಡಿದ್ದಾರೆ. ಈ ಚುನಾವಣೆಯಲ್ಲಿ ಡಿಕೆಸಿ ರಣತಂತ್ರ ಹೆಣೆದ ರೀತಿ ಹೇಗಿತ್ತು ಎನ್ನುವ ವಿವರ ಇಲ್ಲಿದೆ.

ಮಾವು ಬೆಳೆಗಾರರಿಗೆ ನೆರವು ನೀಡಿ: ಕೃಷಿ ಸಚಿವರಿಗೆ ಪ್ರಲ್ಹಾದ್‌ ಜೋಶಿ ಪತ್ರ

ಮಾವು ಬೆಳೆಗಾರರಿಗೆ ನೆರವು ಕಲ್ಪಿಸಿ: ಕೃಷಿ ಸಚಿವರಿಗೆ ಜೋಶಿ ಪತ್ರ

Pralhad Joshi: ರಾಜ್ಯದ ಮಾವು ಬೆಳೆಗಾರರ ಬವಣೆ, ಸಂಕಷ್ಟ ಕುರಿತು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಗುರುವಾರ (ಜೂ.18) ಪತ್ರ ಬರೆದಿರುವ ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್‌ ಜೋಶಿ ರಾಜ್ಯದ ಮಾವು ಬೆಳೆಗಾರರ ಸಮಸ್ಯೆಗಳಿಗೆ ಶೀಘ್ರವೇ ಸ್ಪಂದಿಸುವಂತೆ ಮನವಿ ಮಾಡಿದ್ದಾರೆ.

ಮೇಕೆದಾಟು ಯೋಜನೆ; ಒಂದೇ ಒಂದು ಬಕೆಟ್ ನೀರನ್ನೂ ನೀರಾವರಿಗೆ ಬಳಸಲ್ಲ ಎಂದ ಸಿಎಂ ಡಿ.ಕೆ. ಶಿವಕುಮಾರ್

ಒಂದೇ ಒಂದು ಬಕೆಟ್ ನೀರನ್ನೂ ನೀರಾವರಿಗೆ ಬಳಸಲ್ಲ: ಡಿ.ಕೆ. ಶಿವಕುಮಾರ್

CM DK Shivakumar: ಮೇಕೆದಾಟು ಕೇವಲ ನನ್ನ ಹೃದಯಕ್ಕೆ ಮಾತ್ರ ಹತ್ತಿರವಾಗಿಲ್ಲ. ಮೇಕೆದಾಟು ಯೋಜನೆ ಕರ್ನಾಟಕ ರಾಜ್ಯಕ್ಕಿಂತ ತಮಿಳುನಾಡಿಗೆ ಹೆಚ್ಚು ಅನುಕೂಲ ನೀಡಲಿದೆ. ತಮಿಳುನಾಡು ಪಾಲಿನ 177 ಟಿಎಂಸಿ ನೀರನ್ನು ಬಿಡಲು ನಾವು ಸಿದ್ಧವಾಗಿದ್ದೇವೆ. ಈ ಬಗ್ಗೆ ಸುಪ್ರೀಂ ಕೋರ್ಟ್ ಆದೇಶವೂ ಇದೆ. ಈ ಯೋಜನೆ ತೀರ್ಮಾನವನ್ನು ಕೇಂದ್ರ ಜಲ ಆಯೋಗ ಮಾಡಬೇಕು ಎಂದು ಕೋರ್ಟ್ ತಿಳಿಸಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಆಹಾರದ ಜಾಗೃತಿಗಾಗಿ 'ಅನ್ನಬ್ರಹ್ಮ ಚಾತುರ್ಮಾಸ್ಯ': ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿ

ಆಹಾರದ ಜಾಗೃತಿಗಾಗಿ ಅನ್ನಬ್ರಹ್ಮ ಚಾತುರ್ಮಾಸ್ಯ: ರಾಮಚಂದ್ರಾಪುರ ಶ್ರೀ

Sri Raghaveshwara Bharathi Swamiji: ಚಾತುರ್ಮಾಸ್ಯ ವ್ರತ ಗುರುಗಳಿಗಾದರೆ, ಶಿಷ್ಯಭಕ್ತರಿಗೆ ಇದು ಹಬ್ಬ. ಈ ಹಿನ್ನೆಲೆಯಲ್ಲಿ ಜ್ಞಾನೋದ್ದೀಪನದ ಜತೆಗೆ ಆಹಾರದ ಕುರಿತಾದ ಋಷಿದರ್ಶನದ ಪ್ರಸ್ತುತಿಗೆ ಈ ಚಾತುರ್ಮಾಸ್ಯವನ್ನು ಬಳಸಿಕೊಳ್ಳಲಾಗುತ್ತಿದೆ. ಅನ್ನವನ್ನು ವ್ಯರ್ಥ ಮಾಡಬಾರದು. ಇಂದು ಶ್ರೀಮಂತಿಕೆ ಹೆಚ್ಚಾದಷ್ಟು ಅನ್ನವನ್ನು ವ್ಯರ್ಥಮಾಡುವ ದುರಾಚಾರ ಹೆಚ್ಚಾಗುತ್ತಿದೆ. ಇವೆಲ್ಲವುಗಳ ಹಿನ್ನೆಲೆಯಲ್ಲಿ ಆಹಾರದ ಕುರಿತಾದ ಜನಜಾಗೃತಿ ಮೂಡಿಸುವ ಕಾರ್ಯ ಇಲ್ಲಿ ನಡೆಯಲಿದೆ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ ತಿಳಿಸಿದ್ದಾರೆ.

ಆರ್‌ಎಸ್‌ಎಸ್‌ನ ಹಣಕಾಸಿನ ಬಗ್ಗೆ ಪ್ರಶ್ನಿಸಿದ ಗೃಹ ಸಚಿವ ಪ್ರಿಯಾಂಕ್ ಖರ್ಗೆಗೆ ಕಾಂಗ್ರೆಸ್ ಹಿರಿಯ ನಾಯಕ ಬೆಂಬಲ

ಆರ್‌ಎಸ್‌ಎಸ್‌ನ ಹಣಕಾಸಿನ ಬಗ್ಗೆ ಪ್ರಶ್ನಿಸಿದ ಕಾಂಗ್ರೆಸ್

Husain Dalwai: ಆರ್‌ಎಸ್‌ಎಸ್‌ನ ಕಾರ್ಯವೈಖರಿ ಮತ್ತು ಹಣಕಾಸಿನ ಬಗ್ಗೆ ಕಾಂಗ್ರೆಸ್ ಪದೇ ಪದೇ ಕಳವಳ ವ್ಯಕ್ತಪಡಿಸಿದೆ. ಈ ಪ್ರಶ್ನೆಗಳನ್ನು ಬಹಳ ಮೊದಲೇ ಎತ್ತಬೇಕಿತ್ತು. ಆದರೆ ಪ್ರಿಯಾಂಕ್ ಖರ್ಗೆ ಅವರು ಅವುಗಳನ್ನು ಸಾರ್ವಜನಿಕ ಚರ್ಚೆಗೆ ತರುವಲ್ಲಿ ಧೈರ್ಯವನ್ನು ತೋರಿಸಿದ್ದಾರೆ ಎಂದು ರಾಜ್ಯಸಭಾ ಮಾಜಿ ಸದಸ್ಯ ಹುಸೇನ್ ದಲ್‌ವಾಯಿ ಹೇಳಿದರು.

ವಿಧಾನ ಪರಿಷತ್‌ ಚುನಾವಣೆಯಲ್ಲಿ ಜೆಡಿಎಸ್‌ಗೆ ಭಾರಿ ಮುಖಭಂಗ; ಡಿ.ಕೆ. ಶಿವಕುಮಾರ್‌ ರಣತಂತ್ರದಿಂದ 5 ಸ್ಥಾನ ಗೆದ್ದ ಕಾಂಗ್ರೆಸ್‌

ವಿಧಾನ ಪರಿಷತ್‌ ಚುನಾವಣೆ: 5 ಸ್ಥಾನಗಳನ್ನು ಗೆದ್ದ ಕಾಂಗ್ರೆಸ್‌

Karnataka MLC Election Results 2026: ವಿಧಾನ ಪರಿಷತ್‌ ಚುನಾವಣೆಯ ಫಲಿತಾಂಶ ಹೊರ ಬಂದಿದ್ದು, ಕಾಂಗ್ರೆಸ್‌ 5 ಮತ್ತು ಬಿಜೆಪಿ 2 ಸ್ಥಾನಗಳಲ್ಲಿ ಜಯ ಗಳಿಸಿದೆ. ಕಾಂಗ್ರೆಸ್‌ನಿಂದ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್‌, ತಿಪ್ಪಣ್ಣಪ್ಪ ಕಮಕನೂರ, ಬಿ.ಎಸ್‌. ಶಿವಣ್ಣ, ಪಿ.ವಿ. ಮೋಹನ್, ವಿನಯ್ ಕಾರ್ತಿಕ್ ಹಾಗೂ ಬಿಜೆಪಿಯ ಲಿಂಗರಾಜ್‌ ಪಾಟೀಲ್‌ ಹಾಗೂ ಮೈಸೂರಿನ ರಘು ಕೌಟಿಲ್ಯ ವಿಜಯದ ನಗೆ ಬೀರಿದ್ದಾರೆ.

ವಿಧಾನ ಪರಿಷತ್‌ ಚುನಾವಣೆ; ಬಸನಗೌಡ ಪಾಟೀಲ್ ಯತ್ನಾಳ್ ಮತ ಅಸಿಂಧುವಾಗುತ್ತ? ಕಾಂಗ್ರೆಸ್‌ ವಾದವೇನು?

ವಿಧಾನ ಪರಿಷತ್‌ ಚುನಾವಣೆ; ಬಸನಗೌಡ ಪಾಟೀಲ್ ಯತ್ನಾಳ್ ಮತ ಅಸಿಂಧು?

Basanagouda Patil Yatnal: ರಾಜ್ಯದ ಕುತೂಹಲ ಕೆರಳಿಸಿದ ವಿಧಾನ ಪರಿಷತ್‌ ಚುನಾವಣೆಯ ಮತದಾನ ಮುಕ್ತಾಯಗೊಂಡಿದ್ದು, ಶೇಕಡಾ 100ರಷ್ಟು ಹಕ್ಕು ಚಲಾವಣೆಗೊಂಡಿದೆ. ಈ ಮಧ್ಯೆ ಮತ ಚಲಾಯಿಸಲು ಬಂದ ಬಿಜಾಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ ಅವರಿಗೆ ಕಾಂಗ್ರೆಸ್‌ ಆಕ್ಷೇಪ ವ್ಯಕ್ತಪಡಿಸಿದೆ.

ದ್ವಿಚಕ್ರ ವಾಹನ ಸವಾರರಿಗೆ ಗುಡ್ ನ್ಯೂಸ್: ಭಾರತದಲ್ಲೇ ಶುರುವಾಗಲಿದೆ 'ಬೈಕ್ ಎಬಿಎಸ್‌' ಉತ್ಪಾದನೆ

ಭಾರತದಲ್ಲೇ ಶುರುವಾಗಲಿದೆ 'ಬೈಕ್ ಎಬಿಎಸ್‌' ಉತ್ಪಾದನೆ

ಭಾರತೀಯ ಮಾರುಕಟ್ಟೆಗೆಂದೇ ವಿಶೇಷವಾಗಿ ಮೋಟಾರ್‌ಸೈಕಲ್ ಎಬಿಎಸ್ (ಆಂಟಿ-ಲಾಕ್ ಬ್ರೇಕಿಂಗ್ ಸಿಸ್ಟಮ್) ಗಳನ್ನು ಉತ್ಪಾದಿಸಲು ಜಾಗತಿಕ ಬ್ರೇಕಿಂಗ್ ತಂತ್ರಜ್ಞಾನದ ದೈತ್ಯ ಕಂಪನಿ 'ಬ್ರೆಂಬೊ' ಮತ್ತು ಚೀನಾದ ಖ್ಯಾತ ಕಂಪನಿ 'ನಿಂಗ್ಬೊ ಸೇಫ್ ಬ್ರೇಕ್ಸ್ ಸಿಸ್ಟಮ್ಸ್' ಈ ಎರಡೂ ಕಂಪನಿಗಳು ಒಪ್ಪಂದಕ್ಕೆ ಸಹಿ ಹಾಕಿದ್ದು, 'BRSF ಆಕ್ಟೀವ್ ಸೇಫ್ಟಿ ಸೊಲ್ಯೂಷನ್ಸ್' ಎಂಬ ಹೊಸ ಕಂಪನಿಯನ್ನು ಸ್ಥಾಪಿಸಿವೆ.

Bengaluru News: ಗೇಟ್ ಸಮೇತ ಕಾಂಪೌಂಡ್ ಗೋಡೆ ಕುಸಿದುಬಿದ್ದು 5 ವರ್ಷದ ಮಗು ಸಾವು

ಗೇಟ್ ಸಮೇತ ಕಾಂಪೌಂಡ್ ಗೋಡೆ ಕುಸಿದುಬಿದ್ದು 5 ವರ್ಷದ ಮಗು ಸಾವು

ಬೆಂಗಳೂರಿನ ಬಾಗಲೂರು ಪೊಲೀಸ್ ಠಾಣಾ ವ್ಯಾಪ್ತಿಯ ಮನೆಯೊಂದರ ಕಾಂಪೌಂಡ್ ಗೋಡೆ ಮತ್ತು ಗೇಟ್ ಮೈಮೇಲೆ ಬಿದ್ದು ಆಟವಾಡುತ್ತಿದ್ದ ಬಾಲಕ ಮೃತಪಟ್ಟಿದ್ದಾನೆ. ಘಟನೆಯಲ್ಲಿ ಮತ್ತೊಂದು ಮಗು ಗಂಭೀರವಾಗಿ ಗಾಯಗೊಂಡಿದೆ. ಮೃತ ಬಾಲಕನನ್ನು ಯಾದಗಿರಿ ಮೂಲದ ದಾವಲ್ ಸಾಬ್ ಅವರ ಪುತ್ರ ಅಫೀನ್ (5) ಎಂದು ಗುರುತಿಸಲಾಗಿದೆ.

ದಂತ ಚಿಕಿತ್ಸೆಗಾಗಿ ಲಂಡನ್‌ನಿಂದ ಬೆಂಗಳೂರಿಗೆ ಬಂದ ವ್ಯಕ್ತಿ; ಕೈಗೆಟುಕುವ ದರದ ಅತ್ಯಾಧುನಿಕ ಚಿಕಿತ್ಸೆಗೆ ಫಿದಾ

ಹಲ್ಲಿನ ಚಿಕಿತ್ಸೆಗಾಗಿ ಲಂಡನ್‌ನಿಂದ ಬೆಂಗಳೂರಿಗೆ ಬಂದ ವ್ಯಕ್ತಿ

Bengaluru News: ಹಲ್ಲಿನ ಗಂಭೀರ ಸಮಸ್ಯೆಯಿಂದ ಬಳಲುತ್ತಿದ್ದ ಲಂಡನ್‌ನ 42 ವರ್ಷದ ಜಾನ್ ಮಿಲ್ಲರ್ ಎಂಬುವವರು ಬರೋಬ್ಬರಿ 8,000 ಕಿಲೋ ಮೀಟರ್ ಪ್ರಯಾಣಿಸಿ ಬೆಂಗಳೂರಿಗೆ ಬಂದು ಯಶಸ್ವಿ ಚಿಕಿತ್ಸೆ ಪಡೆದು ಮರಳಿದ್ದಾರೆ. ಜತೆಗೆ ಬೆಂಗಳೂರಿನ ಚಿಕಿತ್ಸಾ ರೀತಿಗೆ ಫಿದಾ ಆಗಿದ್ದಾರೆ.

ತಾತಗಳಿಸಿದ್ದ ಆಸ್ತಿ ತಂದೆಯ ವೈಯಕ್ತಿಕ, ಪಿತ್ರಾರ್ಜಿತ ಅಲ್ಲ! ಮೊಮ್ಮಕ್ಕಳಿಗೆ ಹಕ್ಕಿಲ್ಲ

ತಾತಗಳಿಸಿದ್ದ ಆಸ್ತಿ ತಂದೆಯ ವೈಯಕ್ತಿಕ, ಪಿತ್ರಾರ್ಜಿತ ಅಲ್ಲ! ಹೈ ಕೋರ್ಟ್‌

ತಾತನು ತನ್ನ ಜೀವಿತಾವಧಿಯಲ್ಲಿ ಸಂಪಾದಿಸಿದ ಆಸ್ತಿಯು ವಿಭಜನೆಯ ನಂತರ ಅಪ್ಪನ ಕೈಸೇರಿದಾಗ ಅದು ತಂದೆಯ ವೈಯಕ್ತಿಕ ಆಸ್ತಿಯಾಗುತ್ತದೆಯೇ ವಿನಃ ಹಿಂದೂ ಅವಿಭಕ್ತ ಕುಟುಂಬದ ಆಸ್ತಿಯಾಗುವುದಿಲ್ಲ ಎಂದು ಹೈಕೋರ್ಟ್ ತಿಳಿಸಿದೆ. ಈ ರೀತಿ ವಿಭಜನೆಯಾದ ಆಸ್ತಿಯಲ್ಲಿ ಮೊಮ್ಮಗಳು ಪಾಲು ಕೇಳುವುದಕ್ಕೆ ಅವಕಾಶವಿಲ್ಲ ಎಂದು ಹೇಳಿದೆ.

ವಿಧಾನ ಪರಿಷತ್ ಚುನಾವಣೆ; ಅಡ್ಡ ಮತದಾನ ಮಾಡಿದ್ರಾ ಜಿ. ಟಿ ದೇವೇಗೌಡ?

ವಿಧಾನ ಪರಿಷತ್ ಚುನಾವಣೆ; ಅಡ್ಡ ಮತದಾನ ಮಾಡಿದ್ರಾ ಜಿ. ಟಿ ದೇವೇಗೌಡ?

ರಾಜ್ಯದಲ್ಲಿ ವಿಧಾನಪರಿಷತ್‌ನ 7 ಸ್ಥಾನಗಳಿಗೆ ಇಂದು ಚುನಾವಣೆ ನಡೆಯುತ್ತಿದ್ದು, ಈಗಾಗಲೇ ಮತದಾನ ಪ್ರಕ್ರಿಯೆ ಆರಂಭಗೊಂಡಿದೆ. 8 ಅಭ್ಯರ್ಥಿಗಳು ಕಣದಲ್ಲಿದ್ದಾರೆ. . ಈ ಮಧ್ಯೆ ಜೆಡಿಎಸ್‌ ಶಾಸಕ ಜಿ.ಟಿ ದೇವೇಗೌಡ ಅವರು ಪಕ್ಷಕ್ಕೆ ಶಾಕ್‌ ಕೊಟ್ಟಿದ್ದಾರೆ. ಜೆಡಿಎಸ್​ನ ಬಹುತೇಕ ಶಾಸಕರು ರೆಸಾರ್ಟ್​ಗೆ ಶಿಫ್ಟ್​ ಆಗಿದ್ದಾರೆ. ಆದರೆ ಜಿಟಿ ದೇವೇಗೌಡರು ಮಾತ್ರ ಯಾರ ಸಂಪರ್ಕಕ್ಕೂ ಸಿಕ್ಕಿಲ್ಲ ಎಂದು ಹೇಳಲಾಗಿತ್ತು.

ರಂಗೇರಿದ ವಿಧಾನ ಪರಿಷತ್ ಚುನಾವಣೆ; ಅಡ್ಡ ಮತದಾನದ ಭೀತಿ! 7ನೇ ಸ್ಥಾನಕ್ಕೆ ಭಾರೀ ಪೈಪೋಟಿ

ರಂಗೇರಿದ ವಿಧಾನ ಪರಿಷತ್ ಚುನಾವಣೆ; ಅಡ್ಡ ಮತದಾನದ ಭೀತಿ!

ವಿಧಾನ ಪರಿಷತ್‌ನಲ್ಲಿ ಇದೇ 30ರಂದು ತೆರವಾಗಲಿರುವ 7 ಸ್ಥಾನಗಳಿಗೆ ಗುರುವಾರ ಬೆಳಗ್ಗೆ 9ರಿಂದ ಸಂಜೆ 4ರವರೆಗೆ ಮತದಾನ ನಡೆಯಲಿದ್ದು, ಸಂಜೆ 5 ಗಂಟೆಗೆ ಮತ ಎಣಿಕೆ ಕಾರ್ಯ ನಡೆಯಲಿದೆ. ಕಾಂಗ್ರೆಸ್‌ 4 ಹಾಗೂ ಬಿಜೆಪಿ 2 ಸ್ಥಾನ ಗೆಲ್ಲಲಿದ್ದು, ಬಾಕಿ 1 ಸ್ಥಾನಕ್ಕೆ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ನಡುವೆ ಸ್ಪರ್ಧೆಯಿದೆ.

ಮುಂದಿನ ಮೂರು ದಿನಗಳಲ್ಲಿ ಕರ್ನಾಟಕದ ಕೆಲವೆಡೆ ಭಾರಿ ಮಳೆ: ಯೆಲ್ಲೋ ಅಲರ್ಟ್

ಕರ್ನಾಟಕದ ಕೆಲವೆಡೆ ಭಾರಿ ಮಳೆ ಸಾಧ್ಯತೆ: ಯೆಲ್ಲೋ ಅಲರ್ಟ್

Heavy Rain: ಈ ಬಾರಿ ಮುಂಗಾರು ತಡವಾಗಿ ಆಗಮಿಸಿದ್ದು, ಒಂದೆರಡು ದಿನ ಮಳೆ ಬಂದದ್ದು ಬಿಟ್ಟರೆ ಬಳಿಕ ಮಾಯವಾಗಿದೆ. ಎರಡ್ಮೂರು ದಿನಗಳಲ್ಲಿ ರಾಜ್ಯದ ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿದ್ದು, ಸಾಧಾರಣ ಮಳೆಯ ಸಾಧ್ಯತೆ ಇದೆ.

Loading...