ಫೋಟೋ ಗ್ಯಾಲರಿ ಬಜೆಟ್​ T20 ವಿಶ್ವಕಪ್​ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಕ್ರೈಂ ಧಾರ್ಮಿಕ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಕರ್ನಾಟಕ

ಲಾ ಸ್ಕೂಲ್‌ನಲ್ಲಿ ಅಣಕು ನ್ಯಾಯಾಲಯ ಸ್ಪರ್ಧೆಯಲ್ಲಿ ಆಲ್ ಅಮೀನ್ ಮತ್ತು ಸೇಂಟ್ ಜೋಸೆಫ್ ಲಾ ಕಾಲೇಜಿಗೆ ಪ್ರಶಸ್ತಿ

ಆಲ್ ಅಮೀನ್ ಮತ್ತು ಸೇಂಟ್ ಜೋಸೆಫ್ ಲಾ ಕಾಲೇಜಿಗೆ ಪ್ರಶಸ್ತಿ

ಉತ್ತಮ ಪುರುಷ ಮೂಟರ್ ಪ್ರಶಸ್ತಿಯನ್ನು ಎಸ್. ಯೋಗಿನಾಥ್ (ಕೆಎಲ್‌ಇ ಲಾ ಕಾಲೇಜು) ರೂ. 2,500 ನಗದು ಬಹುಮಾನ ಸಹಿತವಾಗಿ ಪಡೆದರು. ಉತ್ತಮ ಮಹಿಳಾ ಮೂಟರ್ ಪ್ರಶಸ್ತಿಯನ್ನು ಸೇಂಟ್ ಜೋಸೆಫ್ ಲಾ ಕಾಲೇಜಿನ ಸಾವನ್ನಾ ಮೇರಿ ಅಲೆಕ್ಸಾಂಡರ್ ಅವರಿಗೆ ರೂ. 2,500 ನಗದು ಬಹುಮಾನ ಸಹಿತವಾಗಿ ನೀಡಲಾಯಿತು.

Bangalore News: ಬಿಎಂಎಸ್.ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ ಪದವಿ ಪ್ರದಾನ ಸಮಾರಂಭ

ಬಿಎಂಎಸ್.ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ ಪದವಿ ಪ್ರದಾನ ಸಮಾರಂಭ

ದೇಶದಲ್ಲಿ ಇಂಜನಿಯರಿಂಗ್ ಪದವಿ ಪಡೆದವರು ಸಂಖ್ಯೆ ಹೆಚ್ಚಬೇಕು. ದೇಶ ಅಭಿವೃದ್ದಿಯಲ್ಲಿ ಇಂಜನಿಯರ್ ಗಳು ಮಹತ್ವಪೂರ್ಣ ಪಾತ್ರ ವಹಿಸುತ್ತಾರೆ. ದೇಶದಲ್ಲಿ ಇಂಜನಿಯರ್ʼಗಳಿಗೆ ಉತ್ತಮ ಅವಕಾಶವಿದೆ. ಉತ್ತಮ ಮನುಷ್ಯರಾಗಲು ಕಠಿಣ ಪರಿಶ್ರಮ ಪಡಬೇಕು. ಸಾಧನೆ ಮಾಡಲು ಗುರಿ ಇರಬೇಕು ಮತ್ತು ಗುರುಗಳ ಮಾರ್ಗದರ್ಶನದಲ್ಲಿ ನಡೆಯಬೇಕು.

Indi News: ರಾಷ್ಟ್ರಪ್ರೇಮದ ಅಲೆ ಜನತೆಯ ಹೃದಯದಲ್ಲಿ ಮೂಡಿಸಿದ ಶಿವಾಜಿ ಮಹಾರಾಜರು

ರಾಷ್ಟ್ರಪ್ರೇಮದ ಅಲೆ ಜನತೆಯ ಹೃದಯದಲ್ಲಿ ಮೂಡಿಸಿದ ಶಿವಾಜಿ ಮಹಾರಾಜರು

ಭಾರತೀಯರ ತುಂಬ ಆದರ ಅಭಿಮಾನ ಮತ್ತು ಗೌರವಗಳಿಗೆ ಪಾತ್ರನಾದ ರಾಜ ಶಿವಾಜಿಯವರು. ಅವರ ಹೆಸರು ಪಾವಿತ್ರ್ಯ ಸ್ವಾಭಿಮಾನ ಸಂಘಟನಾ ಬಲಗಳ ಸಂಕೇತವಾಗಿದೆ. ಸ್ವಾತಂತ್ರ್ಯಪ್ರಿಯತೆ ಕಷ್ಟ ಸಹಿ ಷ್ಣುತೆ ರಾಷ್ಟ್ರಪ್ರೇಮದ ಅಲೆಯನ್ನು ದೇಶದ ಜನತೆಯ ಹೃದಯ ದಲ್ಲಿ ಮೂಡಿಸಿದ ಶಿವಾಜಿ ಮಹಾ ರಾಜರ ವ್ಯಕ್ತಿತ್ವ ಸದಾ ಅಮರ.

ಎಲ್ಲಾ ಸಮಾಜಗಳಿಗೆ ನೆರಳು, ಆಶ್ರಯ ನೀಡುವ ಶಕ್ತಿ ವೀರಶೈವ ಲಿಂಗಾಯತ ಸಮಾಜಕ್ಕಿದೆ: ಬಿ.ವೈ ವಿಜಯೇಂದ್ರ

ಎಲ್ಲಾ ಸಮಾಜಗಳಿಗೆ ಆಶ್ರಯ ನೀಡುವ ಶಕ್ತಿ ವೀರಶೈವ ಲಿಂಗಾಯತ ಸಮಾಜಕ್ಕಿದೆ

ಚಿಕ್ಕಮಗಳೂರು ಜಿಲ್ಲೆ ಬಾಳೆಹೊನ್ನೂರಿನ ಶ್ರೀ ರಂಭಾಪುರಿ ವೀರ ಸಿಂಹಾಸನ ಮಹಾಸಂಸ್ಥಾನ ಮಠದಲ್ಲಿ ಜರುಗಿದ ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ ಹಾಗೂ ಕ್ಷೇತ್ರನಾಥ ಶ್ರೀ ವೀರಭದ್ರಸ್ವಾಮಿ‌ ಮಹಾ ರಥೋತ್ಸವ ಕಾರ್ಯಕ್ರಮದಲ್ಲಿ‌ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಮಾತನಾಡಿದ್ದಾರೆ.

Jyotibha Phule State Award: ಡಾ.ಕಾಂತು ಇಂಡಿ ಇವರಿಗೆ ಜ್ಯೋತಿಭಾ ಪುಲೆ ರಾಜ್ಯಪ್ರಶಸ್ತಿ

ಡಾ.ಕಾಂತು ಇಂಡಿ ಇವರಿಗೆ ಜ್ಯೋತಿಭಾ ಪುಲೆ ರಾಜ್ಯಪ್ರಶಸ್ತಿ

ರಾಜ್ಯ ಮಟ್ಟದ ಶೈಕ್ಷಣಿಕ ಮಹಾ ಸಮ್ಮೇಳನದಲ್ಲಿ ಜ್ಯೋತಿಭಾ ಫುಲೆ ರಾಜ್ಯ ಪ್ರಶಸ್ತಿಯನ್ನು ಡಾ.ಕಾಂತು ಇಂಡಿ ಇವರಿಗೆ ಲಭಿಸಿದೆ. ಇವರು ಕನ್ನಡ ಸಾಹಿತ್ಯ ಪರಿಷತ್ತು ಇಂಡಿ ಘಟಕದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. 8 ತಾಲೂಕು ಸಮ್ಮೇಳನ, 1 ಜಿಲ್ಲೆ ಸಮ್ಮೇಳ, 1 ಮಹಿಳಾ ಸಮ್ಮೇಳನ ಮಾಡಿದ್ದಾರೆ.

ದೇಶದಲ್ಲಿ ಮುಸ್ಲಿಂ ಲೀಗ್ ಸ್ಥಾನವನ್ನು ತುಂಬುತ್ತಿದೆ ಕಾಂಗ್ರೆಸ್ ಪಕ್ಷ: ಜೋಶಿ ಕಿಡಿ

ಮುಸ್ಲಿಂ ಲೀಗ್ ಸ್ಥಾನವನ್ನು ತುಂಬುತ್ತಿದೆ ಕಾಂಗ್ರೆಸ್ ಪಕ್ಷ: ಜೋಶಿ

ಧಾರವಾಡದಲ್ಲಿ ವಿದ್ಯಾರ್ಥಿಗಳ ಹೋರಾಟಕ್ಕೆ ಅನುಮತಿ ಕೊಟ್ಟಿಲ್ಲ. ಆನೆ ದಾಳಿ ಪ್ರಕರಣದಲ್ಲಿ ಶಾಶ್ವತ ಪರಿಹಾರ ಕಲ್ಪಿಸಲು ಆಗ್ರಹಿಸಿ ಪ್ರತಿಭಟನೆಗೆ ಇಳಿದವರ ಮೇಲೆ ಲಾಠಿ ಪ್ರಹಾರ ಮಾಡುತ್ತಾರೆ. ಇದನ್ನೆಲ್ಲಾ ನೋಡಿದರೆ ಈ ಸರ್ಕಾರ ಹೋರಾಟ ಹತ್ತಿಕ್ಕುವ ಇಂದಿರಾಗಾಂಧಿ ಮನಸ್ಥಿತಿಯಲ್ಲೇ ಇರುವುದು ಸ್ಪಷ್ಟವಾಗಿದೆ ಎಂದು ಸಚಿವ ಪ್ರಲ್ಹಾದ್‌ ಜೋಶಿ ಕಿಡಿಕಾರಿದ್ದಾರೆ.

Chikkaballapur News: ವಿದ್ಯಾರ್ಥಿಗಳ ಜೀವನ ರೂಪಿಸಿದ ಗುರುಗಳ ಋಣ ತೀರಿಸಲಾಗದು: ಕೆ.ವಿ.ನವೀನ್ ಕಿರಣ್

ವಿದ್ಯಾರ್ಥಿಗಳ ಜೀವನ ರೂಪಿಸಿದ ಗುರುಗಳ ಋಣ ತೀರಿಸಲಾಗದು

ಕೆ.ವಿ. ಮತ್ತು ಪಂಚಗಿರಿ ಶಿಕ್ಷಣ ದತ್ತಿಗಳ ಅಧ್ಯಕ್ಷನಾಗಿದ್ದರೂ ನಾನೂ ಸಹ ಶಿಕ್ಷಕರ ಶಿಷ್ಯನೇ ಆಗಿದ್ದೇನೆ. ಸಮಾಜದಿಂದ ನಾವು ಏನಾದರೂ ಪಡೆಯುವುದಕ್ಕಿಂತ ಮೊದಲು ಸಮಾಜಕ್ಕೆ ನಾನೇನು ಮಾಡಿದ್ದೇನೆ ಎಂಬುದನ್ನು ನಾವು ಮನದಟ್ಟು ಮಾಡಿಕೊಳ್ಳಬೇಕು. ಸಮಾಜಕ್ಕೆ ಒಳಿತಾಗುವ ಕಾರ್ಯ ಮಾಡಿ ಆದರ್ಶ ವ್ಯಕ್ತಿಗಳಾಗಿ ಬಾಳಬೇಕು ಎಂಬುದು ನಮ್ಮ ಶಿಕ್ಷಕರ ಆಶಯವಾಗಿತ್ತು

ಮಧ್ಯಪ್ರಾಚ್ಯದಿಂದ ಕನ್ನಡಿಗರು ಹಿಂದಿರುಗಲು ಅಗತ್ಯ ವ್ಯವಸ್ಥೆ ಕಲ್ಪಿಸಿ: ವಿಮಾನಯಾನ ಸಚಿವಾಲಯಕ್ಕೆ ಮುಖ್ಯ ಕಾರ್ಯದರ್ಶಿ ಪತ್ರ

ಮಧ್ಯಪ್ರಾಚ್ಯದಿಂದ ಕನ್ನಡಿಗರು ಹಿಂದಿರುಗಲು ಸಹಕರಿಸಿ: ಕೇಂದ್ರಕ್ಕೆ ಪತ್ರ

iran–israel war: ಅರಬ್‌ ರಾಷ್ಟ್ರಗಳಲ್ಲಿ ಸಿಲುಕಿರುವ ಕನ್ನಡಿಗರು ಸ್ವದೇಶಕ್ಕೆ ವಾಪಸ್‌ ಆಗಲು ಅಗತ್ಯ ವಿಮಾನಗಳ ವ್ಯವಸ್ಥೆ ಮಾಡಲು ವಿಮಾನಯಾನ ಸಂಸ್ಥೆಗಳೊಂದಿಗೆ ಸಮನ್ವಯ ಸಾಧಿಸಬೇಕು. ಟಿಕೆಟ್‌ಗಳನ್ನು ಕಾಯ್ದಿರಿಸಿ, ಹಿಂದಿರುಗಲು ಸಾಧ್ಯವಾಗದವರಿಗೆ ಅಗತ್ಯ ವಸತಿ ವ್ಯವಸ್ಥೆ ಕಲ್ಪಿಸಲು ಕ್ರಮ ಕೈಗೊಳ್ಳಬೇಕು ಎಂದು ನಾಗರಿಕ ವಿಮಾನಯಾನ ಸಚಿವಾಲಯಕ್ಕೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ ವಿನಂತಿಸಿದ್ದಾರೆ.

ಬೆಂಗಳೂರಿನ ತರಕಾರಿಯಲ್ಲಿ ವಿಷಕಾರಿ ಅಂಶಕ್ಕೆ ಅತಿಯಾದ ರಾಸಾಯನಿಕಗಳ ಬಳಕೆ ಕಾರಣ: ಸುತಾರಿಯಾ

ತರಕಾರಿಯಲ್ಲಿ ವಿಷಕಾರಿ ಅಂಶಕ್ಕೆ ಅತಿಯಾದ ರಾಸಾಯನಿಕಗಳ ಬಳಕೆ ಕಾರಣ

ಬೆಂಗಳೂರಿನ ಕುಮಾರ ಪಾರ್ಕ್‌ನ ಗಾಂಧಿಭವನದಲ್ಲಿ ದಿ ಫಾರ್ವರ್ಡ್ ಫೌಂಡೇಶನ್ ವತಿಯಿಂದ ಸಾವಯವ ಕೃಷಿಯಲ್ಲಿ ʼಗೋಕೃಪಾಮೃತ; ಮಹತ್ವ ಸಾರಲು ರೈತರೊಂದಿಗಿನ ಆಯೋಜಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಗುಜರಾತ್‌ನ ಪ್ರಸಿದ್ಧ ಬನ್ಸಿ ಗಿರ್ ಗೋಶಾಲಾ ಖ್ಯಾತಿಯ ಗೋಪಾಲ್ ಭಾಯ್ ಸುತಾರಿಯಾ ಅವರು ಮಾತನಾಡಿದ್ದಾರೆ.

9.34 ರುಪಾಯಿ ಬಾಕಿ ಕೇಳಿದ ಬ್ಯಾಂಕ್‌ಗೆ ಪಾಠ ಕಲಿಸಿದ ರೈತ: 10 ರುಪಾಯಿ ಕಟ್ಟಿ 66 ಪೈಸೆ ವಾಪಸ್ ನೀಡುವಂತೆ ಪಟ್ಟು

66 ಪೈಸೆಗಾಗಿ ಕೆನರಾ ಬ್ಯಾಂಕ್‌ನಲ್ಲಿ ಪಟ್ಟು ಹಿಡಿದ ರೈತ

Viral News: ಹಾಸನದಲ್ಲಿ ರೈತ ಮತ್ತು ಬ್ಯಾಂಕ್‌ ನಡುವೆ ವಿಚಿತ್ರ ವಿವಾದ ಉಂಟಾದ ಘಟನೆಯೊಂದು ನಡೆದಿದೆ.‌ 9 ರುಪಾಯಿ 34 ಪೈಸೆ ಸಾಲ ಕಟ್ಟುವಂತೆ ಕೆನರಾ ಬ್ಯಾಂಕ್‌ನಿಂದ ರೈತರೊಬ್ಬರಿಗೆ ಕರೆ ಬಂದಿತ್ತು.‌ ಈ ಹಿನ್ನೆಲೆಯಲ್ಲಿ 10 ರುಪಾಯಿ ಸಾಲ ಕಟ್ಟಿದ ರೈತ ಉಳಿದ 66 ಪೈಸೆ ವಾಪಸ್ ಕೊಡಿ ಎಂದು ಪಟ್ಟು ಹಿಡಿದಿದ್ದಾರೆ. ಈ ವಿಚಾರ ವೈರಲ್‌ ಆಗುತ್ತಿದ್ಧಂತೆ ನೆಟ್ಟಿಗರು ಬೆಂಬಲ ಸೂಚಿಸಿದ್ದಾರೆ.

Elephant attack in Madikeri: ಮಡಿಕೇರಿಯಲ್ಲಿ ಆನೆ ದಾಳಿಯಿಂದ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಸಾವು

ಮಡಿಕೇರಿಯಲ್ಲಿ ಆನೆ ದಾಳಿಯಿಂದ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಸಾವು

Elephant attack: ಮಡಿಕೇರಿಯ ಸಂತ ಮೈಕೆಲ್ ಶಾಲೆಯ ಪ್ರಥಮ ಪಿಯುಸಿ ವಿದ್ಯಾರ್ಥಿನಿ, ಕಾಲೇಜು ಮುಗಿಸಿ ಸಂಜೆ ಮನೆಗೆ ಹೋಗುವಾಗ ಕಾಡಾನೆ ದಾಳಿ ಮಾಡಿದೆ. ವಿದ್ಯಾರ್ಥಿನಿ ಗಂಭೀರವಾಗಿ ಗಾಯಗೊಂಡು ಮೃತಪಟ್ಟಿದ್ದಾಳೆ. ಮೃತ ಬಾಲಕಿ ಕುಟುಂಬಕ್ಕೆ ಪರಿಹಾರ ಕಲ್ಪಿಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಸೌರಭ 2026; ನಾಗಾರ್ಜುನ ಡಿಗ್ರಿ ಕಾಲೇಜಿಗೆ ಡಾ.ರಾಜಕುಮಾರ್ ಸರ್ವೋತ್ತಮ ಕಾಲೇಜು ಪರ್ಯಾಯ ಪಾರಿತೋಷಕ

ನಾಗಾರ್ಜುನ ಕಾಲೇಜಿಗೆ ರಾಜಕುಮಾರ್ ಸರ್ವೋತ್ತಮ ಕಾಲೇಜು ಪಾರಿತೋಷಕ

Sourabha 2026: ರಂಗ ಸೌರಭದಿಂದ ಆಯೋಜಿಸಿದ್ದ ಸೌರಭ 2026; ರಾಜ್ಯಮಟ್ಟದ ಅಂತರ ಕಾಲೇಜು ರಂಗ ಸ್ಪರ್ಧೆಯ ಬಹುಮಾನ ವಿತರಣೆ ಹಾಗೂ ಸಮಾರೋಪ ಸಮಾರಂಭವು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದ ಆವರಣದ ಸಂಸ ಬಯಲು ರಂಗ ಮಂದಿರದಲ್ಲಿ ಶನಿವಾರ ನೆರವೇರಿತು.

Iran–Israel war: ಗಲ್ಫ್‌ ರಾಷ್ಟ್ರಗಳಲ್ಲಿ ಸಿಲುಕಿದ ಕನ್ನಡಿಗರಿಗಾಗಿ ಸಹಾಯವಾಣಿ ಆರಂಭ

ಗಲ್ಫ್‌ ರಾಷ್ಟ್ರಗಳಲ್ಲಿ ಸಿಲುಕಿದ ಕನ್ನಡಿಗರಿಗಾಗಿ ಸಹಾಯವಾಣಿ ಆರಂಭ

Iran–Israel war: ಅರಬ್‌ ದೇಶಗಳಲ್ಲಿ ಸಿಲುಕಿರುವ ಕನ್ನಡಿಗರನ್ನು ಸುರಕ್ಷಿತಾಗಿ ಕರೆತರಲು ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದರು. ಇದೀಗ ಗಲ್ಫ್‌ ರಾಷ್ಟ್ರಗಳಲ್ಲಿ ಭಾರತೀಯರ ನೆರವಿಗಾಗಿ ಅಲ್ಲಿನ ಭಾರತೀಯ ರಾಯಭಾರ ಕಚೇರಿಗಳಿಂದ ಸಹಾಯವಾಣಿ ಆರಂಭಿಸಲಾಗಿದೆ.

Iran–Israel war: ಅರಬ್ ರಾಷ್ಟ್ರಗಳಲ್ಲಿ ಸಿಲುಕಿರುವ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲಾಗುವುದು: ಸಿಎಂ ಸಿದ್ದರಾಮಯ್ಯ

ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲಾಗುವುದು: ಸಿಎಂ

ದುಬೈ ಸೇರಿದಂತೆ ಯುದ್ಧಪೀಡಿತ ಪ್ರದೇಶಗಳಲ್ಲಿ ಸಿಲುಕಿರುವ ಕನ್ನಡಿಗರ ಸದ್ಯದ ಪರಿಸ್ಥಿತಿಯ ಕುರಿತು ಮಾಹಿತಿ ಪಡೆದು, ಬಳಿಕ ಅವರನ್ನು ತವರಿಗೆ ವಾಪಸ್ ಕರೆ ತರುವ ಸಂಬಂಧ ವಿದೇಶಾಂಗ ಇಲಾಖೆ ಅಧಿಕಾರಿಗಳ ಜೊತೆ ಸಂಪರ್ಕದಲ್ಲಿರುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಇರಾನ್ ಮೇಲೆ ಅಮೆರಿಕದಿಂದ ಅನಗತ್ಯ ದಾಳಿ; ಖಮೇನಿ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಎಂದ ಸಿಎಂ

ಖಮೇನಿ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಎಂದ ಸಿಎಂ ಸಿದ್ದರಾಮಯ್ಯ

ಅರಬ್ ದೇಶಗಳಲ್ಲಿ ವಾಸಿಸುತ್ತಿರುವ ಕನ್ನಡಿಗರ ಸುರಕ್ಷತೆಯ ಬಗ್ಗೆ ಮುಖ್ಯ ಕಾರ್ಯದರ್ಶಿ, ಸ್ಥಾನಿಕ ಆಯುಕ್ತರೊಂದಿಗೆ ಚರ್ಚಿಸಲಾಗಿದೆ. ದುಬೈ ವಿಮಾನ ನಿಲ್ದಾಣ ಬಂದ್ ಮಾಡಲಾಗಿದ್ದು, ಅದನ್ನು ತೆರೆದ ಮೇಲೆ ಅವರನ್ನು ಭಾರತಕ್ಕೆ ಸುರಕ್ಷಿತವಾಗಿ ಕರೆ ತರಲು ವ್ಯವಸ್ಥೆ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಖಮೇನಿ ಹತ್ಯೆ ಖಂಡಿಸಿ ಚಿಕ್ಕಬಳ್ಳಾಪುರದ ಅಲೀಪುರದಲ್ಲಿ ಬೃಹತ್‌ ಪ್ರತಿಭಟನೆ; ಕಣ್ಣೀರಿಟ್ಟ ಗ್ರಾಮಸ್ಥರು

ಖಮೇನಿ ಹತ್ಯೆ ಖಂಡಿಸಿ ಚಿಕ್ಕಬಳ್ಳಾಪುರದ ಅಲೀಪುರದಲ್ಲಿ ಬೃಹತ್‌ ಪ್ರತಿಭಟನೆ

ಇರಾನ್ ಮೇಲೆ ಅಮೆರಿಕ-ಇಸ್ರೇಲ್‌ ದಾಳಿ ಹಾಗೂ ಇಸ್ಲಾಂ ಧಾರ್ಮಿಕ ನಾಯಕ ಖಮೇನಿ ಹತ್ಯೆ ಖಂಡಿಸಿ ಅಲೀಪುರ ಗ್ರಾಮಸ್ಥರು ಭಾನುವಾರ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದ್ದು, ಕಪ್ಪು ಬಟ್ಟೆ ಧರಿಸಿ, ಕಪ್ಪು ಬಾವುಟ ಪ್ರದರ್ಶಿಸಿ ಆಕ್ರೋಶ ಹೊರಹಾಕಿದ್ದಾರೆ. ಈ ವೇಳೆ ತಮ್ಮ ನೆಚ್ಚಿನ ನಾಯಕನ ಸಾವಿಗೆ ಕಣ್ಣೀರಿಟ್ಟಿದ್ದಾರೆ.

ಶಿಗ್ಗಾಂವಿಯಲ್ಲಿ ಭೀಕರ ಅಪಘಾತ; ರಸ್ತೆಯಲ್ಲಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾಗಿ ನವದಂಪತಿ ದುರ್ಮರಣ

ಲಾರಿಗೆ ಕಾರು ಡಿಕ್ಕಿಯಾಗಿ 15 ಹಿಂದಷ್ಟೇ ಮದುವೆಯಾಗಿದ್ದ ದಂಪತಿ ಸಾವು

Haveri Accident: ಶಿಗ್ಗಾಂವಿ ಸಮೀಪದ ಅಂಬುಜಾ ಪ್ಯಾಕ್ಟರಿ ಬಳಿ ಭೀಕರ ಅಪಘಾತ ನಡೆದಿದೆ. ದೇವರ ದರ್ಶನ ಮುಗಿಸಿಕೊಂಡು ಹುಬ್ಬಳ್ಳಿಯಿಂದ ಹಾವೇರಿ ಕಡೆಗೆ ಹೋಗುವಾಗ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಭಾನುವಾರ ಮುಂಜಾನೆ ಹೋಗುತ್ತಿದ್ದಾಗ ದುರಂತ ಸಂಭವಿಸಿದ್ದು, 15 ಹಿಂದಷ್ಟೇ ಮದುವೆಯಾಗಿದ್ದ ನವ ದಂಪತಿ ಮೃತಪಟ್ಟಿದ್ದಾರೆ.

Nuclear power plant: ಕೈಗಾ 5&6 ನೇ ಘಟಕದ ಪ್ರಥಮ ಕಾಂಕ್ರೀಟೀಕರಣಕ್ಕೆ ಚಾಲನೆ

ಕೈಗಾ 5&6 ನೇ ಘಟಕದ ಪ್ರಥಮ ಕಾಂಕ್ರೀಟೀಕರಣಕ್ಕೆ ಚಾಲನೆ

ಕಾರವಾರ ತಾಲೂಕಿನ ಕೈಗಾದಲ್ಲಿ 2000 ರಲ್ಲಿ ಕೈಗಾ ಅಣು ವಿದ್ಯುತ್ ಉತ್ಪಾದನೆ ಕೇಂದ್ರ ಪ್ರಾರಂಭಗೊಂಡಿತ್ತು.ಪ್ರಸ್ತುತ 220 ಮೆಗಾವ್ಯಾಟ್ ಸಾಮರ್ಥ್ಯದ 4 ಅಣು ಘಟಕಗಳು ವಿದ್ಯುತ್ ಉತ್ಪಾದನೆ ನಡೆಸುತ್ತಿದೆ. ಈ ನಾಲ್ಕು ಘಟಕದಿಂದ 2,280 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ನಡೆಸುತ್ತಿದೆ.ವಿದ್ಯುತ್ ಉತ್ಪಾದನೆ ಬೇಡಿಕೆ ಹಿನ್ನಲೆಯಲ್ಲಿ ತಲಾ 700 ಮ್ಯಾಗಾ ವ್ಯಾಟ್ ನ ಗುರಿಯೊಂದಿಗೆ 2025 ರಲ್ಲಿ 5 ಮತ್ತು 6 ನೇ ಘಟಕ ಕಾಮಗಾರಿಗೆ ಚಾಲನೆ ನೀಡಲಾಗಿತ್ತು

M. B. Patil: ನಾಡಿನ ಶರಣರ ವಚನಗಳನ್ನು ಜಗತ್ತಿಗೆ ತಲುಪಿಸುವ ಕೆಲಸ ನಿರಂತರವಾಗಬೇಕು: ಸಚಿವ ಎಂ.ಬಿ. ಪಾಟೀಲ

ಶರಣರ ವಚನಗಳ ಜಗತ್ತಿಗೆ ತಲುಪಿಸುವ ಕೆಲಸ ನಿರಂತರವಾಗಬೇಕು

ಅಲ್ಲಮ ಪ್ರಭು ಶ್ರೇಷ್ಠ ವಚನಕಾರರು. ಅವರು ಎಲ್ಲಿಯೂ ನಿಲ್ಲದೇ, ಯಾವುದೇ ಪ್ರಭಾವಕ್ಕೂ ಒಳಗಾದೇ ದೇಶ ಸಂಚಾರ ಮಾಡಿದವರು. ಇಂತಹದ್ದನ್ನು ವಿಜಯಪುರದ ಸಿದ್ದೇಶ್ವರ ಮಹಾ ಸ್ವಾಮಿಗಳಲ್ಲಿ ಕಾಣಬಹುದಾಗಿದ್ದು, ಇವರು ಶತಮಾನದ ಸಂತರು. ಜಗತ್ತಿನ ಎಲ್ಲಾ ಚಿಂತಕರು, ಎಲ್ಲಾ ನಾಯಕರ ಬಗ್ಗೆ ತಿಳಿವಳಿಕೆ ಪಡೆದುಕೊಂಡವರು. ಅಲ್ಲಮ ಪ್ರಭುಗಳ ವಚನ ಸಂಕೀರ್ಣ ವಾದದ್ದು

Bangalore News: ಐಸಿಎಫ್ಐ ಲಾ ಸ್ಕೂಲ್. ನಲ್ಲಿ ಅಣಕು ನ್ಯಾಯಾಲಯ ಸ್ಪರ್ಧೆಗೆ ಹೈಕೋರ್ಟ್ ನ್ಯಾಯಮೂರ್ತಿ ರವಿ ಹೊಸಮನಿ ಚಾಲನೆ

ಅಣಕು ನ್ಯಾಯಾಲಯ ಸ್ಪರ್ಧೆಗೆ ನ್ಯಾ.ರವಿ ಹೊಸಮನಿ ಚಾಲನೆ

ವಿದ್ಯಾರ್ಥಿ ಸಮುದಾಯಕ್ಕೆ ಅಣಕು ನ್ಯಾಯಾಲಯಗಳು ಪ್ರೇರಣೆಯಾಗಬೇಕು. ನ್ಯಾಯಾಲಯ ಗಳು ಹೇಗೆ ಕಾರ್ಯನಿರ್ವಹಿಸುತ್ತವೆ ಎಂಬ ನೈಜ ಚಿತ್ರಣವನ್ನು ಕಟ್ಟಿಕೊಡುತ್ತವೆ. ವಿದ್ಯಾರ್ಥಿ ಸಮುದಾಯ ಇದನ್ನು ಸದುಪಯೋಗ ಪಡಿಸಿಕೊಳ್ಳಬೇಕು. ವಿದ್ಯಾರ್ಥಿಗಳಲ್ಲಿ ವಕಾಲತ್ತು ಕೌಶಲ್ಯ ಮತ್ತು ಅನುಭವಾಧಾರಿತ ಕಾನೂನು ಶಿಕ್ಷಣವನ್ನು ಉತ್ತೇಜಿಸುವಲ್ಲಿ ಇದು ಮಹತ್ವ ಹೆಜ್ಜೆ

ಕರ್ನಾಟಕದ ಈ ಗ್ರಾಮಕ್ಕಿತ್ತು ಖಮೇನಿ ನಂಟು; ಆಸ್ಪತ್ರೆಗೆ ಉದ್ಘಾಟನೆ ಕರೆಗೆ ಸ್ವತಃ ಬಂದಿದ್ದ ಸುಪ್ರೀಂ ಲೀಡರ್‌!

ಕರ್ನಾಟಕದ ಈ ಗ್ರಾಮಕ್ಕಿತ್ತು ಖಮೇನಿ ನಂಟು!

ಅಮೆರಿಕ ಇಸ್ರೇಲ್‌ ಹಾಗೂ ಇರಾನ್‌ ನಡುವಿನ ಸಂಘರ್ಷ ತಾರಕ್ಕೇರಿದ್ದು, ಇರಾನ್‌ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಹತರಾಗಿದ್ದಾರೆ. ಇರಾನ್‌ನಲ್ಲಿ ನಡೆಯುತ್ತಿರುವ ಯುದ್ಧದಿಂದ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲ್ಲೂಕಿನ ಅಲೀಪುರ ಗ್ರಾಮಸ್ಥರಲ್ಲಿ ದುಗುಡ ಹೆಚ್ಚಾಗುತ್ತದೆ.

ಅರವಿಂದ್ ಕೇಜ್ರಿವಾಲ್ ಮೇಲೆ ಅಬಕಾರಿ ನೀತಿ ಪ್ರಕರಣದಲ್ಲಿ ಕೇಂದ್ರ ಬಿಜೆಪಿಯ ಸುಳ್ಳು ಹಾಗೂ ರಾಜಕೀಯ ಪಿತೂರಿ ಬಯಲಿಗೆ ತಂದಿದೆ: ಬೈ ರೆಡ್ಡಿ

ಕೇಂದ್ರ ಬಿಜೆಪಿಯ ಸುಳ್ಳು ಹಾಗೂ ರಾಜಕೀಯ ಪಿತೂರಿ ಬಯಲಿಗೆ ತಂದಿದೆ

ಪಂಜಾಬ್‌ನಲ್ಲಿ ಆಮ್ ಆದ್ಮಿ ಪಕ್ಷ ಅಧಿಕಾರಕ್ಕೆ ಬಂದ ಬಳಿಕ ದೇಶಾ ದ್ಯಂತ ಪಕ್ಷದ ಪ್ರಭಾವ ಹೆಚ್ಚುತ್ತಿರುವುದನ್ನು ಸಹಿಸದೇ ಬಿಜೆಪಿ ಕೇಂದ್ರ ತನಿಖಾ ಸಂಸ್ಥೆಗಳನ್ನು ದುರುಪಯೋಗ ಪಡಿಸಿಕೊಂಡು ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹಾಗೂ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ವಿರುದ್ಧ ಸುಳ್ಳು ಆರೋಪಗಳನ್ನು ಹೊರೆಸಿತು

Chinthamani News: ತಂದೆ ತಾಯಿಯ ತ್ಯಾಗವೇ ನಮಗೆ ಪ್ರೇರಣೆ ಅವರೇ ನಿಜವಾದ ನಾಯಕರು

ತಂದೆ ತಾಯಿಯ ತ್ಯಾಗವೇ ನಮಗೆ ಪ್ರೇರಣೆ ಅವರೇ ನಿಜವಾದ ನಾಯಕರು

ತಂದೆ ತಾಯಿಗಳ ಕೊಡುಗೆ ಅಪಾರ ವಾಗಿದ್ದು ಅವರ ತ್ಯಾಗಕ್ಕೆ ಬೆಲೆ ಕಟ್ಟಲು ಸಾಧ್ಯವಿಲ್ಲ, ನಾವು ಜೀವನ ಪೂರ್ತಿ ಅವರ ಸೇವೆ ಮಾಡಿದರು ಸಾಲದು. ತಂದೆ ತಾಯಿಗೆ ನಾವು ಏನಾದರೂ ಕೊಡುಗೆ ನೀಡಬೇಕೆಂದರೆ ಸಮಾಜದಲ್ಲಿ ಸತ್ಪ್ರಜೆಗಳಾಗಿ ಏನಾದರೂ ಸಾಧನೆ ಮಾಡಿದರೆ ಅದೇ ನಾವು ಅವರಿಗೆ ಕೊಡುವ ಅಮೂಲ್ಯವಾದ ಕಾಣಿಕೆಯಾಗಿದೆಯೆಂದರು

Chintamani News: ಸಾಧನೆಗೈದ ಮೈಲಾಂಡ್ಲಹಳ್ಳಿಯ ಎಂ.ಸಿ.ವಿಜಯಕುಮಾರ್‌ಗೆ ಪಶುವೈದ್ಯಕೀಯ ಸ್ನಾತಕೋತ್ತರ ಪದವಿಯಲ್ಲಿ 6 ಚಿನ್ನದ ಪದಕ

ಪಶು ವೈದ್ಯಕೀಯ ವಿವಿಯಲ್ಲಿ 15ನೇ ಘಟಿಕೋತ್ಸವ

ಚಿಂತಾಮಣಿ ತಾಲ್ಲೂಕಿನ ಮೈಲಾಂಡ್ಲಹಳ್ಳಿ ರೈತ ಕುಟುಂಬದ ಹಿನ್ನಲೆಯಲ್ಲಿ ಬಂದಿರುವ ಎಂ.ಸಿ.ವಿಜಯಕುಮಾರ್ ಎಂಬಿಎಸ್‌ಸಿ ಸ್ನಾತಕೋತ್ತರ ಪದವಿಯಲ್ಲಿ ಅತಿ ಹೆಚ್ಚು 6 ಚಿನ್ನದ ಪದಕ ಪಡೆದಿದ್ದು ಈ ಮೂಲಕ ಸ್ನಾತಕೋತ್ತರ ಪದವಿಯಲ್ಲಿ ಅತಿಹೆಚ್ಚು ಚಿನ್ನದ ಪದಕವನ್ನು ಪಡೆದ ಕೀರ್ತಿಗೆ ಭಾಜನರಾಗಿದ್ದಾರೆ.

Loading...