ಫೋಟೋ ಗ್ಯಾಲರಿ ಗುಜರಾತ್​ ವಿಮಾನ ಪತನ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ
ಕರ್ನಾಟಕ
Kantara: Chapter 1: 'ಕಾಂತಾರ: ಚಾಪ್ಟರ್‌ 1' ಚಿತ್ರತಂಡಕ್ಕೆ ತಪ್ಪುತ್ತಿಲ್ಲ ಸಂಕಷ್ಟ; ದೋಣಿ ಮಗುಚಿ ಕ್ಯಾಮೆರಾ ನೀರುಪಾಲು: ರಿಷಬ್‌ ಶೆಟ್ಟಿ, ಕಲಾವಿದರು ಪಾರು

'ಕಾಂತಾರ: ಚಾಪ್ಟರ್‌ 1' ಚಿತ್ರತಂಡಕ್ಕೆ ಎದುರಾಯ್ತು ಮತ್ತೊಂದು ಸಂಕಷ್ಟ

Rishab Shetty: ರಿಷಬ್‌ ಶೆಟ್ಟಿ ನಟಿಸಿ, ನಿರ್ದೇಶಿಸುತ್ತಿರುವ ಬಹು ನಿರೀಕ್ಷಿತ ʼಕಾಂತಾರ: ಚಾಪ್ಟರ್‌ 1ʼ ಚಿತ್ರಕ್ಕೆ ಮತ್ತೊಂದು ಸಂಕಷ್ಟ ಎದುರಾಗಿದೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನಲ್ಲಿ ಶೂಟಿಂಗ್‌ ನಡೆಸುತ್ತಿದ್ದಾಗ ಜಲಾಶಯದಲ್ಲಿ ದೋಣಿ ಮಗುಚಿದೆ. ಘಟನೆಯಲ್ಲಿ ಯಾರಿಗೂ ಅಪಾಯ ಸಂಭವಿಸಿಲ್ಲ. ಆದರೆ ಕ್ಯಾಮೆರಾಕ್ಕೆ ಹಾನಿಯಾಗಿದೆ ಎನ್ನಲಾಗಿದೆ.

Chikkaballapur News: ಜುವಾರಿ ಫಾರ್ಮಾ ಹಬ್ ಕಂಪನಿಯ ಶಾಲಾ ಮಕ್ಕಳಿಗೆ ಬ್ಯಾಗ್ ವಿತರಣೆ

ಜುವಾರಿ ಫಾರ್ಮಾ ಹಬ್ ಕಂಪನಿಯ ಶಾಲಾ ಮಕ್ಕಳಿಗೆ ಬ್ಯಾಗ್ ವಿತರಣೆ

ಕಾರ್ಪೋರೇಟ್ ಸಂಸ್ಥೆಗಳು ತಮ್ಮ ಲಾಭದ ಜೊತೆಗೆ ಸಾಮಾಜಿಕ ಹೊಣೆಗಾರಿಕೆಯನ್ನು ಹೊರ ಬೇಕಾಗಿದೆ. ಈ ಮೂಲಕ ಸಮಾಜಕ್ಕೆ ಒಳ್ಳೆಯದನ್ನು ಮಾಡಬೇಕಾಗಿದೆ. ನಮ್ಮ ಸಂಸ್ಥೆ ಇದನ್ನು ಮನ ಗಂಡು ಮಿಟ್ಟೇಮರಿ ಸರ್ಕಾರಿ ಶಾಲೆಯ ಮಕ್ಕಳಿಗೆ ಉಚಿತವಾಗಿ ಬ್ಯಾಗ್‌ಗಳನ್ನು ಕೊಡುಗೆಯಾಗಿ ನೀಡಲಾಗಿದೆ.

Ahmedabad Plane Crash: ಅಹಮದಾಬಾದ್ ವಿಮಾನ ದುರಂತ: ಗಾಯಾಳುಗಳ ಆರೋಗ್ಯ ವಿಚಾರಿಸಿದ ಕಾಂಗ್ರೆಸ್ ನಾಯಕರು

ವಿಮಾನ ದುರಂತ: ಗಾಯಾಳುಗಳ ಆರೋಗ್ಯ ವಿಚಾರಿಸಿದ ಕಾಂಗ್ರೆಸ್ ನಾಯಕರು

ಏರ್ ಇಂಡಿಯಾ ವಿಮಾನ ದುರಂತ ಹಿನ್ನೆಲೆಯಲ್ಲಿ ಅಹಮದಾಬಾದ್‌ನ ಜನರಲ್ ಆಸ್ಪತ್ರೆಗೆ ಕಾಂಗ್ರೆಸ್ ನಾಯಕರು ಭೇಟಿ ನೀಡಿ, ಗಾಯಗೊಂಡವರ ಆರೋಗ್ಯ ವಿಚಾರಿಸಿದರು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಡಿಸಿಎಂ ಡಿ.ಕೆ. ಶಿವಕುಮಾರ್, ಎಐಸಿಸಿ ಕಾರ್ಯದರ್ಶಿ ನಾಸಿರ್ ಹುಸೇನ್, ಎಐಸಿಸಿ ಮಾಧ್ಯಮ ಮತ್ತು ಪ್ರಚಾರ ಘಟಕದ ಅಧ್ಯಕ್ಷ ಪವನ್ ಖೇರಾ ಮತ್ತಿತರರು ಶನಿವಾರ ಸಂಜೆ ಭೇಟಿ ನೀಡಿ, ಆರೋಗ್ಯ ವಿಚಾರಿಸಿದರು.

Pralhad Joshi: ʼಒನ್‌ ನೇಷನ್‌ ಒನ್‌ ಎಲೆಕ್ಷನ್‌ʼ; ಇಂಡಿ ಒಕ್ಕೂಟ ವಿನಾಕಾರಣ ಭಯ ಬಿಟ್ಟು ಈಗಿಂದಲೇ ತಯಾರಿ ನಡೆಸಿಕೊಳ್ಳಲಿ: ಪ್ರಲ್ಹಾದ್‌ ಜೋಶಿ

ಒನ್‌ ನೇಷನ್‌ ಒನ್‌ ಎಲೆಕ್ಷನ್‌; ಕಾಂಗ್ರೆಸ್‌ನದ್ದು ಅರ್ಥವಿಲ್ಲದ ಆತಂಕ: ಜೋಶಿ

ಯಾವುದೇ ಸರ್ಕಾರ ವರ್ಷದ 12 ತಿಂಗಳೂ, ದಿನದ 24 ತಾಸೂ ಚುನಾವಣೆ ಮಾಡುತ್ತ ಕೂರಲು ಸಾಧ್ಯವಿಲ್ಲ. ಒಂದು ಎಂಎಲ್‌ಸಿ ಚುನಾವಣೆ ನಡೆದರೂ ಎಲ್ಲಾ ಬಂದ್‌ ಮಾಡುತ್ತೇವೆ. ಇದರಿಂದ ದೇಶಕ್ಕೇ ಆರ್ಥಿಕ ನಷ್ಟ. ಹಾಗಾಗಿ ಈ ವ್ಯವಸ್ಥೆ ಬದಲಿಸಲು ಕೇಂದ್ರ ಸರ್ಕಾರ ಭಾರತೀಯ ಸಂವಿಧಾನಕ್ಕೆ 129ನೇ ತಿದ್ದುಪಡಿ ಮೂಲಕ ಬದಲಾವಣೆ ತಂದು ಏಕ ಕಾಲಕ್ಕೆ ಚುನಾವಣೆ ನಡೆಸಲು ಯೋಜಿಸಿದೆ ಎಂದು ಕೇಂದ್ರ ಆಹಾರ ಮತ್ತು ನಾಗರೀಕ ಸರಬರಾಜು ಸಚಿವ ಪ್ರಲ್ಹಾದ್‌ ಜೋಶಿ ತಿಳಿಸಿದ್ದಾರೆ.

Chikkaballapur News: ಗ್ರಾಮೀಣ ಮತ್ತು ಬಡಜನತೆಗೆ ಆರೋಗ್ಯ ಸೇವೆ ನೀಡುವುದೇ ನಮ್ಮ ಉದ್ದೇಶ: ಸಿರಿ ಆಸ್ಪತ್ರೆ ಡಾ.ತರುಣ್

ಗ್ರಾಮೀಣ ಮತ್ತು ಬಡಜನತೆಗೆ ಆರೋಗ್ಯ ಸೇವೆ ನೀಡುವುದೇ ನಮ್ಮ ಉದ್ದೇಶ

ತಾಲೂಕಿನ ಗಡಿ ಭಾಗದ ಬಡಜನತೆಗೆ ಕಡಿಮೆ ದರದಲ್ಲಿ ಸುಸಜ್ಜಿತ, ಸ್ವಚ್ಛತೆ ಹಾಗೂ ಆರೋಗ್ಯ ಸೇವೆ ಒದಗಿಸಲು ಮುಂದಾಗಿದ್ದೇವೆ. ನಮ್ಮ ಆಸ್ಪತ್ರೆಯಲ್ಲಿ ಔಷಧಾಲಯ, ಪ್ರಯೋಗಾಲಯ, ಇಸಿಜಿ, ತುರ್ತು ಪ್ರಥಮ ಚಿಕಿತ್ಸೆ, ಲಸಿಕೆ, ಡಿಜಿಟಲ್ ಎಕ್ಸರೆ, ಒಳರೋಗಿಗಳ ಆರೈಕೆ, ಮೈನರ್ ಆಪರೇಷನ್ ಥಿಯೇಟರ್, ಆಂಬ್ಯುಲೆನ್ಸ್ ಮತ್ತಿತರೇ ಸೇವೆಗಳು ನಮ್ಮಲ್ಲಿ ಲಭ್ಯವಿದೆ.

Accident: ಭೀಕರ ಅಪಘಾತ ಇಬ್ಬರ ಸಾವು

ಭೀಕರ ಅಪಘಾತ ಇಬ್ಬರ ಸಾವು

ತುಮಕೂರು ಕಡೆಯಿಂದ ವೇಗವಾಗಿ ಮತ್ತು ಅಜಾಗರೂಕತೆಯಿಂದ ಬಂದ ಕಾರೊಂದು 4 ದ್ವಿಚಕ್ರ ವಾಹನಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಎರಡು ದ್ವಿಚಕ್ರ ವಾಹನ ಸವಾರರಾದ ಚನ್ನೇನ ಹಳ್ಳಿ ಗ್ರಾಮದ ನಂಜಪ್ಪ (60) ಮತ್ತು ಕೊಲ್ಕತ್ತಾ ಮೂಲದ ಸೌರವ್ (24) ಸ್ಥಳದಲ್ಲೇ ಮೃತಪಟ್ಟಿದ್ದಾರೆ, ಉಳಿದ ಎರಡು ದ್ವಿಚಕ್ರ ವಾಹನ ಸವಾರರ ಸ್ಥಿತಿ ಗಂಭೀರವಾಗಿದ್ದು, ಬೆಂಗಳೂರಿಗೆ ರವಾನಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

Chikkaballapur News: ಮಾನಸಿಕ ಅಸ್ವಸ್ಥತೆ ಕಾಯಿಲೆ ಅಲ್ಲ ಅದೊಂದು ಸಮಸ್ಯೆ: ಎನ್.ನಾಗರಾಜ್

ಮಾನಸಿಕ ಅಸ್ವಸ್ಥತೆ ಕಾಯಿಲೆ ಅಲ್ಲ ಅದೊಂದು ಸಮಸ್ಯೆ

ಮಾನಸಿಕ ಅಸ್ವಸ್ಥತೆಯನ್ನು ಲಘುವಾಗಿಯೂ ಪರಿಗಣಿಸಬಾರದು. ಈ ಸಮಸ್ಯೆಯು ವ್ಯಕ್ತಿಯನ್ನು ಅಲ್ಲದೆ ಸುತ್ತಮುತ್ತಲಿನ ಸಮಾಜಕ್ಕೂ ಸಮಸ್ಯೆ ತಂದೊತ್ತದೆ. ಆದ್ದರಿಂದ ಪ್ರಜ್ಞಾ ಟ್ರಸ್ಟ್ ವತಿಯಿಂದ ವಾರಕ್ಕೆ ಒಂದು ದಿನದಂತೆ ಪ್ರತಿ ಶನಿವಾರ ಆರು ತಿಂಗಳ ಅವಧಿಯ ತರಬೇತಿ ಮತ್ತು ಆಪ್ತ ಸಮಾ ಲೋಚನಾ ಕಾರ್ಯಕ್ರಮ ನಡೆಸಲಾಗುತ್ತದೆ. ಸಮಸ್ಯೆಯಿರುವವರು ಇಲ್ಲಿ ಬಂದು ಚಿಕಿತ್ಸೆ ಪಡೆಯ ಬಹುದು

Chikkaballapur News: ಖಾಸಗಿ ಕಾಲೇಜುಗಳಂತೆ ಸರಕಾರಿ ಪದವಿ ಕಾಲೇಜುಗಳ ಅಭಿವೃದ್ದಿ ಮಾಡಲಾಗುವುದು: ಡಾ.ಎಂ.ಸಿ.ಸುಧಾಕರ್

ಚಿಂತಾಮಣಿಯಲ್ಲಿ ಏಷಿಯನ್ ಡೆವಲಪ್‌ಮೆಂಟ್ ಬ್ಯಾಂಕ್ ಸದಸ್ಯರ ಸ್ವಾಗತಿಸಿ ಹೇಳಿಕೆ

ರಾಜ್ಯದ ಸರಕಾರಿ ಕಾಲೇಜುಗಳ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ, ತಂತ್ರಜ್ಞಾನ, ಕೌಶಲ್ಯಾಭಿವೃದ್ಧಿ ಹಾಗೂ ಹಲವು ಅಂಶಗಳ ವೃದ್ದಿಗೆ ಕರ್ನಾಟಕ ಉನ್ನತ ಶಿಕ್ಷಣ ಪರಿವರ್ತನಾ ಯೋಜನೆಯನ್ನು ಏಷ್ಯನ್ ಡೆವಲಪ್‌ಮೆಂಟ್ ಬ್ಯಾಂಕಿನ ಸಹಕಾರದೊಂದಿಗೆ ಸರಕಾರ ಕೈಗೆತ್ತಿಕೊಂಡಿದೆ. ಈ ಸಂಬಂಧ ಬ್ಯಾಂಕಿನ ಪದಾಧಿಕಾರಿಗಳು ರಾಜ್ಯದ ಪ್ರವಾಸದಲ್ಲಿದ್ದಾರೆ

SL Bhyrappa: ಜೀವಿತದ ಉಳಿತಾಯದ ಹಣ ಕನ್ನಡ- ಅಕ್ಷರ ಸೇವೆಗೆ ಮೀಸಲಿಟ್ಟ ಭೈರಪ್ಪ: ವಿಶ್ವೇಶ್ವರ ಭಟ್

ಜೀವಿತದ ಉಳಿತಾಯ ಕನ್ನಡ- ಅಕ್ಷರ ಸೇವೆಗೆ ಮೀಸಲಿಟ್ಟ ಭೈರಪ್ಪ: ವಿಶ್ವೇಶ್ವರ ಭಟ್

SL Bhyrappa: ತಮ್ಮ ಹೆಸರಿನ ಪ್ರತಿಷ್ಠಾನ ರಚಿಸಿ, ತಾವು ಜೀವಿತದಲ್ಲಿ ಬರಹದ ಮೂಲಕ ಉಳಿಸಿದ ಹಣವನ್ನು ಅದರ ಮೂಲಕ ಬಡ ವಿದ್ಯಾರ್ಥಿಗಳ ಕಲಿಕೆಗೆ, ವೈದ್ಯಕೀಯ ನೆರವಿಗೆ ಬಳಸಬೇಕು ಎಂಬುದು ಅವರ ಅಪರೂಪದ ಧ್ಯೇಯ, ಆಶಯವಾಗಿದೆ ಎಂದು ವಿಶ್ವೇಶ್ವರ ಭಟ್‌ ನುಡಿದರು.

Fraud case: ಮಗುವಿಗೆ ಜ್ವರ; ದೆವ್ವದ ಕಥೆ ಹೇಳಿ ಮಹಿಳೆಗೆ 17 ಲಕ್ಷ ವಂಚಿಸಿದ ಜ್ಯೋತಿಷಿ!

ಮಗುವಿಗೆ ಜ್ವರ; ದೆವ್ವದ ಕಥೆ ಹೇಳಿ ಮಹಿಳೆಗೆ 17 ಲಕ್ಷ ವಂಚಿಸಿದ ಜ್ಯೋತಿಷಿ!

Bagalkot News: ಮಗುವಿಗೆ ಜ್ವರ ಬರಲು ದೆವ್ವ ಕಾರಣ ಎಂದು ನಂಬಿಸಿ ಮಹಿಳೆಯೊಬ್ಬರಿಗೆ ಜ್ಯೋತಿಷಿ ಲಕ್ಷಾಂತರ ರೂಪಾಯಿ ವಂಚಿಸಿದ್ದಾರೆ. ಬಾಗಲಕೋಟೆ ಜಿಲ್ಲೆಯಲ್ಲಿ ಘಟನೆ ನಡೆದಿದ್ದು, ಈ ಬಗ್ಗೆ ಮೋಸ ಹೋದ ಮಹಿಳೆ, ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ.

SL Bhyrappa: ಭೈರಪ್ಪನವರದು ಶ್ರೀಮಂತ ಬದುಕು ಹಾಗೂ ಬರಹ: ಬಸವರಾಜ ಬೊಮ್ಮಾಯಿ

ಭೈರಪ್ಪನವರದು ಶ್ರೀಮಂತ ಬದುಕು ಹಾಗೂ ಬರಹ: ಬಸವರಾಜ ಬೊಮ್ಮಾಯಿ

SL Bhyrappa: ಬೆಂಗಳೂರಿನ ಬಸವನಗುಡಿಯ ಬಿಎಂಎಸ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ಸಾಹಿತಿ ಎಸ್.ಎಲ್. ಭೈರಪ್ಪ ಪ್ರತಿಷ್ಠಾನ ಉದ್ಘಾಟನಾ ಸಮಾರಂಭ ನಡೆಯಿತು. ಅದರಲ್ಲಿ ಪಾಲ್ಗೊಂಡು ಮಾತನಾಡಿದ ಸಂಸದ ಬಸವರಾಜ ಬೊಮ್ಮಾಯಿ ಅವರು ಭೈರಪ್ಪನವರ ಸಾಹಿತ್ಯಿಕ ಕೊಡುಗೆಯನ್ನು ಕೊಂಡಾಡಿದರು.

Laxmi Hebbalkar: ಮಹಿಳೆಯರ ಸಾಧನೆಗೆ ಪುರುಷರು ಹೆಗಲು ಕೊಡುತ್ತಿದ್ದಾರೆ: ಲಕ್ಷ್ಮಿ ಹೆಬ್ಬಾಳ್ಕರ್

ಮಹಿಳೆಯರ ಸಾಧನೆಗೆ ಪುರುಷರು ಹೆಗಲು ಕೊಡುತ್ತಿದ್ದಾರೆ: ಲಕ್ಷ್ಮಿ ಹೆಬ್ಬಾಳ್ಕರ್

Laxmi Hebbalkar: ಸಾಧನೆ ಮಾಡುವಾಗ ಮಹಿಳೆಯರು ಸಾಕಷ್ಟು ಆರೋಪಗಳನ್ನು ಎದುರಿಸಬೇಕಾಗುತ್ತದೆ. ಭಾರತದಲ್ಲಿ ಕಟ್ಟುಪಾಡುಗಳು ಎಷ್ಟಿವೆ ಅಂತ ಎಲ್ಲರಿಗೂ ಗೊತ್ತಿದೆ. ಅನಿಷ್ಟ ಪದ್ಧತಿಗಳು ಇನ್ನೂ ಕೆಲವೆಡೆ ನಡೆಯುತ್ತಿವೆ. ಈ ಮಧ್ಯೆ ವಿಶ್ವ ನೋಡುವ ಹಾಗೆ ಭಾರತೀಯ ಮಹಿಳೆಯರು ಸಾಧನೆ ಮಾಡುತ್ತಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.

DK Shivakumar: ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿ ಮೂಲಕ ಹೊಸ ಸಂದೇಶ ರವಾನೆ: ಡಿ.ಕೆ.ಶಿವಕುಮಾರ್

ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿ ಮೂಲಕ ಹೊಸ ಸಂದೇಶ ರವಾನೆ: ಡಿಕೆಶಿ

DK Shivakumar: ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿ ಮೂಲಕ ಹೊಸ ಸಂದೇಶ ರವಾನಿಸಲಾಗಿದೆ. ಶಿಕ್ಷಣ, ಆರೋಗ್ಯ, ರಸ್ತೆ, ಗ್ರಾಮೀಣಾಭಿವೃದ್ಧಿ, ಉದ್ಯೋಗ ಸೇರಿ ಎಲ್ಲಾ ರಂಗದಲ್ಲೂ ಅಭಿವೃದ್ಧಿ ಮಾಡಲಾಗುತ್ತಿದೆ. ಇಂದು ಆರೋಗ್ಯ ಕ್ಷೇತ್ರದಲ್ಲಿ ರೂ.416 ಕೋಟಿ ವೆಚ್ಚದ ವಿವಿಧ ಕಾಮಗಾರಿಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

Fathers Day Fashion 2025: ಅಪ್ಪಂದಿರ ದಿನಕ್ಕೂ ಬಂತು ಫ್ಯಾಷನ್ ಸ್ಟೇಟ್‌ಮೆಂಟ್ಸ್!

ಅಪ್ಪಂದಿರ ದಿನಕ್ಕೂ ಬಂತು ಫ್ಯಾಷನ್ ಸ್ಟೇಟ್‌ಮೆಂಟ್ಸ್!

Fathers Day Fashion 2025: ಈ ಸಾಲಿನಲ್ಲಿ ಜೂನ್ 15 ಭಾನುವಾರ ಅಪ್ಪಂದಿರ ದಿನ. ಆ ದಿನಕ್ಕೂ ನೀವು ಒಂದಿಷ್ಟು ಫ್ಯಾಷನ್ ಸ್ಟೇಟ್‌ಮೆಂಟ್ಸ್ ಫಾಲೋ ಮಾಡಬಹುದು ಎನ್ನುತ್ತಾರೆ ಫ್ಯಾಷನಿಸ್ಟಾಗಳು. ಈ ದಿನಕ್ಕೆ ಹೊಂದುವಂತಹ ಸ್ಟೈಲ್ ಸ್ಟೇಟ್‌ಮೆಂಟ್‌ಗಳನ್ನು ಸ್ಟೈಲಿಸ್ಟ್‌ಗಳು ಇಲ್ಲಿ ವಿವರಿಸಿದ್ದಾರೆ.

Pralhad Joshi: ಕಾಂಗ್ರೆಸ್‌ ಯಾವತ್ತೂ ಸಾಮಾಜಿಕ ಬದ್ಧತೆ ತೋರಿಲ್ಲ, ಜಾತಿ ಗಣತಿ ರಾಜಕೀಯ ನಾಟಕವಷ್ಟೇ: ಪ್ರಲ್ಹಾದ್‌ ಜೋಶಿ

ಕಾಂಗ್ರೆಸ್‌ ಯಾವತ್ತೂ ಸಾಮಾಜಿಕ ಬದ್ಧತೆ ತೋರಿಲ್ಲ: ಪ್ರಲ್ಹಾದ್‌ ಜೋಶಿ

Pralhad Joshi: ಕಾಂಗ್ರೆಸ್‌ ಮೀಸಲಾತಿ ವಿಚಾರದಲ್ಲಿ ಜನರ ಕಣ್ಣಿಗೆ ಮಣ್ಣೆರೆಚಲು ನೋಡುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸರ್ಕಾರದ ಆಡಳಿತ ವೈಫಲ್ಯವನ್ನು ಮರೆಮಾಚಲು ʼಜಾತಿ ಗಣತಿʼ ವಿಷಯ ಹರಿಬಿಡುತ್ತಿದ್ದಾರೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್‌ ಜೋಶಿ ಟೀಕಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

Bengaluru Rains: ಬೆಂಗಳೂರಿನಲ್ಲಿ ಮುಂದುವರಿದ ಮಳೆ; ವಾತಾವರಣ ಕೂಲ್‌ ಕೂಲ್

ಬೆಂಗಳೂರು ವಾತಾವರಣ ಕೂಲ್‌ ಕೂಲ್; ಹಲವೆಡೆ ಜಿಟಿಜಿಟಿ ಮಳೆ

Bengaluru Rains: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 29 ಮತ್ತು 21 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆ ಇದೆ.

Global Startup Index: ಜಾಗತಿಕ ನವೋದ್ಯಮ ಸೂಚ್ಯಂಕದಲ್ಲಿ 14ನೇ ಸ್ಥಾನಕ್ಕೆ ಜಿಗಿದ ಬೆಂಗಳೂರು!

ಜಾಗತಿಕ ನವೋದ್ಯಮ ಸೂಚ್ಯಂಕದಲ್ಲಿ 14ನೇ ಸ್ಥಾನಕ್ಕೆ ಜಿಗಿದ ಬೆಂಗಳೂರು!

Global Startup Ecosystem Report (GSER) 2025: ಪ್ಯಾರಿಸ್‌ನಲ್ಲಿ ನಡೆದ ವಿವಾಟೆಕ್ 2025 GSER ಸಮಾವೇಶದಲ್ಲಿ ಜಾಗತಿಕ ಸ್ಟಾರ್ಟ್ಅಪ್ ಇಕೋ ಸಿಸ್ಟಂ ವರದಿ 2025 ಬಿಡುಗಡೆ ಮಾಡಲಾಗಿದೆ. ಸ್ಟಾರ್ಟಪ್‌ ಎಕೋ ಸಿಸ್ಟಮ್ ಭವಿಷ್ಯ ಮತ್ತು AI-ಸ್ಥಳೀಯ ಆವಿಷ್ಕಾರ ಅವಕಾಶಗಳ ಏರಿಕೆಯ ಕುರಿತು ಉನ್ನತ ಮಟ್ಟದ ತಜ್ಞರ ಚರ್ಚೆಯಲ್ಲಿ ಸಚಿವ ಪ್ರಿಯಾಂಕ್‌ ಖರ್ಗೆ ಅವರೂ ಭಾಗವಹಸಿದ್ದರು.

Language Row: ಬೆಂಗಳೂರಲ್ಲಿ ಕನ್ನಡ ಮಾತಾಡೋದೇ ತಪ್ಪಾ?; ಪ್ರಶ್ನೆಗೆ ಕನ್ನಡದಲ್ಲಿ ಉತ್ತರಿಸಿದ ಉಪನ್ಯಾಸಕ ವಜಾ!

ಕನ್ನಡದಲ್ಲಿ ಮಾತನಾಡಿದ್ದಕ್ಕೆ ಬೆಂಗಳೂರಿನ ಕಾಲೇಜು ಉಪನ್ಯಾಸಕ ವಜಾ!

Language Row: ಬೆಂಗಳೂರಿನ ಆರ್‌ವಿ ಲರ್ನಿಂಗ್ ಹಬ್‌ ಕಾಲೇಜಿನಲ್ಲಿ ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ವಜಾ ಮಾಡಲಾಗಿದೆ. ಒಂದು ವೇಳೆ ರಾಜೀನಾಮೆಗೆ ಸಹಿ ಹಾಕದಿದ್ದರೆ ಕಾಲೇಜಿನ ಇನ್ನೊಂದು ಶಾಖೆಯಲ್ಲಿರುವ ನಿಮ್ಮ ಮಗಳ ಸರ್ಟಿಫಿಕೇಟ್‌ ಕೊಡಲ್ಲ ಎಂದು ಬೆದರಿಸಿ ರಾಜೀನಾಮೆ ಪಡೆದಿರುವ ಆರೋಪ ಕಾಲೇಜು ವಿರುದ್ಧ ಕೇಳಿಬಂದಿದೆ.

SSLC Exam 2 Result 2025: ಒಂದು ಅಂಕಕ್ಕಾಗಿ ಮತ್ತೊಮ್ಮೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದು ಟಾಪರ್‌ ಆದ ಶಿವಮೊಗ್ಗದ ವಿದ್ಯಾರ್ಥಿನಿ!

ಒಂದು ಅಂಕಕ್ಕಾಗಿ ಮತ್ತೊಮ್ಮೆ ಪರೀಕ್ಷೆ ಬರೆದು ಟಾಪರ್‌ ಆದ ವಿದ್ಯಾರ್ಥಿನಿ!

Shivamogga News: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ವಿಜ್ಞಾನ ವಿಷಯದಲ್ಲಿ ಒಂದು ಅಂಕ ಕಡಿತವಾಗಿತ್ತು. ಹೀಗಾಗಿ ಶಿವಮೊಗ್ಗದ ಸಂಜನಾ ಎಂಬ ವಿದ್ಯಾರ್ಥಿನಿ ಮತ್ತೊಮ್ಮೆ ಪರೀಕ್ಷೆ ಬರೆದು 625 ಕ್ಕೆ 625ಕ್ಕೆ ಅಂಕ ಪಡೆಯುವ ಮೂಲಕ ವಿಶೇಷ ಸಾಧನೆ ಮಾಡಿದ್ದಾಳೆ. ವಿದ್ಯಾರ್ಥಿನಿಯ ಸಾಧನೆಗೆ ಮೆಚ್ಚುಗೆ ವ್ಯಕ್ತವಾಗಿದೆ.

Agumbe Ghat Road: ಜೂ. 15ರಿಂದ ಆಗುಂಬೆ ಘಾಟ್‌ನಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧ; ಎಲ್ಲಿಯವರೆಗೆ ನಿರ್ಬಂಧ?

ಜೂ. 15ರಿಂದ ಆಗುಂಬೆ ಘಾಟ್‌ನಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧ

Agumbe Ghat Road: ಭಾರಿ ಮಳೆಯಿಂದಾಗಿ ಅಲ್ಲಲ್ಲಿ ರಸ್ತೆ ಬದಿಯಲ್ಲಿ ಭೂ ಕುಸಿತ ಆಗುವ ಸಂಭವ ಇರುವುದರಿಂದ ಜೂ.15ರಿಂದ ಸೆ.30ರವರೆಗೆ ಆಗುಂಬೆ ಘಾಟ್‌ನಲ್ಲಿ ಭಾರಿ ವಾಹನಗಳ ಸಂಚಾರವನ್ನು ನಿಷೇಧಿಸಿ ಶಿವಮೊಗ್ಗ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಭಾರಿ ವಾಹನಗಳಿಗೆ ಪರ್ಯಾಯ ಮಾರ್ಗ ಬಳಸಲು ಸೂಚಿಸಲಾಗಿದೆ.

BY Vijayendra: ಕಾಲ್ತುಳಿತದ ವಿಷಯಾಂತರಕ್ಕೆ ಜಾತಿ ಗಣತಿಯ ಪ್ರಸ್ತಾಪ- ಬಿ.ವೈ.ವಿಜಯೇಂದ್ರ

ಕಾಲ್ತುಳಿತದ ವಿಷಯಾಂತರಕ್ಕೆ ಜಾತಿ ಗಣತಿಯ ಪ್ರಸ್ತಾಪ-ಬಿ.ವೈ.ವಿಜಯೇಂದ್ರ

BY Vijayendra: ದೆಹಲಿ ಸಭೆಯಲ್ಲಿ ನಿನ್ನೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ್ದು ಸ್ವಾಗತಾರ್ಹ. ಆದರೆ, ಮುಖ್ಯಮಂತ್ರಿಗಳನ್ನು ನೋಡಿದರೆ ಪಾಪ ಅನಿಸುತ್ತದೆ. ಗ್ಯಾರಂಟಿಗಳ ಅನುಷ್ಠಾನಕ್ಕೆ ಹಣ ಕ್ರೋಡೀಕರಿಸಲು ಸಾಧ್ಯವಾಗುತ್ತಿಲ್ಲ. ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳೇ ನಡೆಯುತ್ತಿಲ್ಲ. ಹಾಗಾಗಿ ಕೇಂದ್ರದ ಮೇಲೆ ಆರೋಪ ಮಾಡುತ್ತಿದ್ದಾರೆ. ಕರ್ನಾಟಕವು 100 ರೂ. ಕೊಟ್ಟರೆ ಕೇವಲ 13 ರೂ. ಬರುತ್ತಿದೆ ಎಂದು ಅರ್ಧ ಸತ್ಯವನ್ನಷ್ಟೇ ಅವರು ಹೇಳುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಆರೋಪಿಸಿದ್ದಾರೆ.

BY Vijayendra: ರಾಜ್ಯ ಕಾಂಗ್ರೆಸ್‌ ಸರ್ಕಾರದಿಂದ ಕೇಂದ್ರದ ಯೋಜನೆಗಳಿಗೆ ಕಲ್ಲು ಹಾಕುವ ಕೆಲಸ: ಬಿ.ವೈ. ವಿಜಯೇಂದ್ರ

ರಾಜ್ಯ ಸರ್ಕಾರದಿಂದ ಕೇಂದ್ರದ ಯೋಜನೆಗಳಿಗೆ ಕಲ್ಲು ಹಾಕುವ ಕೆಲಸ: ವಿಜಯೇಂದ್ರ

BY Vijayendra: ಪುಕ್ಕಟೆ ಪ್ರಚಾರ ಗಿಟ್ಟಿಸುವ ಮುಖ್ಯಮಂತ್ರಿ- ಉಪ ಮುಖ್ಯಮಂತ್ರಿಗಳ ಹಪಾಹಪಿಯಿಂದ ಆರ್‌ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ 11 ಜನ ಅಮಾಯಕರು ಕಾಲ್ತುಳಿತಕ್ಕೆ ಬಲಿಯಾಗಿದ್ದಾರೆ ಎಂದು ಬಿ.ವೈ. ವಿಜಯೇಂದ್ರ ಆರೋಪಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

Basavaraj Bommai: ಪತ್ರಿಕೋದ್ಯಮ ಜನಪರ ಕೆಲಸ ಮಾಡುವುದು ಮುಖ್ಯ: ಬಸವರಾಜ ಬೊಮ್ಮಾಯಿ

ಪತ್ರಿಕೋದ್ಯಮ ಜನಪರ ಕೆಲಸ ಮಾಡುವುದು ಮುಖ್ಯ: ಬಸವರಾಜ ಬೊಮ್ಮಾಯಿ

Basavaraj Bommai: ಪತ್ರಕರ್ತರು ಮತ್ತು ರಾಜಕಾರಣಿಗಳ ನಡುವೆ ಅವಿನಾಭಾವ ಸಂಬಂಧ. ರಾಜಕೀಯ ಸುದ್ದಿ ಇಲ್ಲದೆ ಇದ್ದರೆ ಪತ್ರಿಕೆ ಆಕರ್ಷಣೆ ಇರುವುದಿಲ್ಲ. ಅದೇ ರೀತಿ ರಾಜಕಾರಣಿಯ ಸುದ್ದಿಗಳು ಪತ್ರಿಕೆಯಲ್ಲಿ ಬರದಿದ್ದರೇ ಆ ರಾಜಕಾರಣಿಗೆ ಅಸ್ತಿತ್ವವೇ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

Murder Case: ಪ್ರೇಯಸಿ ಮನೆಗೆ ಹೋಗಿ ಹೆಣವಾದ ಯುವಕ; 4 ತಿಂಗಳ ಬಳಿಕ ಪ್ರಕರಣ ಭೇದಿಸಿದ ಕಲಬುರಗಿ ಪೊಲೀಸರು

ಪ್ರೇಯಸಿ ಮನೆಗೆ ಹೋಗಿ ಹೆಣವಾದ ಯುವಕ; ಪ್ರಕರಣ ಭೇದಿಸಿದ ಪೊಲೀಸರು

Kalaburagi News: ಜನವರಿ 30 ರಂದು ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಆನೂರು ಗ್ರಾಮದಲ್ಲಿ ಖಜೂರಿ ಗ್ರಾಮದ ರಾಹುಲ್ ಎಂಬ ಯುವಕನ ಕೊಲೆಯಾಗಿತ್ತು. ಕೊಲೆ ಸಂಬಂಧ ಒಟ್ಟು 10 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ಈ ಬಗ್ಗೆ ಕಲಬುರಗಿ ಎಸ್​​ಪಿ ಅಡ್ಡೂರು ಶ್ರೀನಿವಾಸುಲು ಮಾಹಿತಿ ನೀಡಿದ್ದಾರೆ.