ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಕರ್ನಾಟಕ

ಭಾರತೀಯ ಜೀವ ವಿಮಾ ಪ್ರತಿನಿಧಿಗಳ ಒಕ್ಕೂಟದ ನೂತನ ಕಾರ್ಯಕಾರಿ ಸಮಿತಿಗೆ ಅವಿರೋಧ ಆಯ್ಕೆ

ಭಾರತೀಯ ಜೀವ ವಿಮಾ ಪ್ರತಿನಿಧಿಗಳ ಮಹಾಸಭೆ

ನಗರದ ಹೊರವಲಯದ ಚಿತ್ರಾವತಿ ಆರ್ಯ ವೈಶ್ಯ ಕಲ್ಯಾಣ ಮಂಟಪದಲ್ಲಿ ನಡೆದ ಸರ್ವ ಸದಸ್ಯರ ಭಾರತೀಯ ಜೀವ ವಿಮಾ ಪ್ರತಿನಿಧಿಗಳ ಮಹಾಸಭೆ ನಡೆಯಿತು. ಒಕ್ಕೂಟದ ಅಧ್ಯಕ್ಷ ಬಯ್ಯರೆಡ್ಡಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಲೆಕ್ಕಪತ್ರಗಳ ಪರಿಶೋಧನೆ ನಡೆಸಿ, ಅದನ್ನು ಸರ್ವಾನುಮತದಿಂದ ಅಂಗೀಕರಿಸಲಾಯಿತು. ನಂತರ ನಡೆದ ನೂತನ ಕಾರ್ಯಕಾರಿ ಸಮಿತಿಯ ಪದಾಧಿಕಾರಿಗಳನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.

ಆರ್‌ಎಸ್‌ಎಸ್‌ನಿಂದ ಯಾವುದೇ ಗಲಭೆಗಳಾಗಿಲ್ಲ ಎಂದ ಪ್ರಿಯಾಂಕ್‌ ಖರ್ಗೆ; ಕಾರಣವನ್ನೂ ವಿವರಿಸಿದ ಗೃಹ ಸಚಿವ ಬಿಜೆಪಿಗೆ ತಿರುಗೇಟು ಕೊಟ್ಟಿದ್ದೇಗೆ?

ಆರ್‌ಎಸ್‌ಎಸ್‌ನಿಂದ ಯಾವುದೇ ಗಲಭೆಗಳಾಗಿಲ್ಲ ಎಂದ ಪ್ರಿಯಾಂಕ್‌ ಖರ್ಗೆ

RSS v/s Priyank Kharge: ಆರ್‌ಎಸ್‌ಎಸ್‌ ಶಾಖೆ ಹಾಗೂ ಪಥ ಸಂಚಲನದಲ್ಲಿ ಇದುವರೆಗೆ ಯಾವುದೇ ಅಹಿತಕರ ಘಟನೆ ನಡೆದಿಲ್ಲ ಎಂದು ವಿಧಾನ ಪರಿಷತ್ತಿನಲ್ಲಿ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಉತ್ತರಿಸಿದ್ದಾರೆ. ಇದುವರೆಗೆ ಆರ್‌ಎಸ್‌ಎಸ್‌ ವಿರುದ್ಧ ಕಿಡಿಕಾರುತ್ತಿದ್ದ ಅವರು ಇದ್ದಕ್ಕಿದ್ದಂತೆ ಅದ್ಯಾಕೆ ಹೀಗಡ ಹೇಳಿದರು ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ಉತ್ತರ.

Chikkaballapur News: ಪಾರ್ಥೇನಿಯಂ ಮುಕ್ತ ಗ್ರಾಮ ನಿರ್ಮಾಣಕ್ಕೆ ಕೈಜೋಡಿಸಿ: ಡಾ. ಕೆ.ಎನ್.ಗೀತಾ

ಪಾರ್ಥೇನಿಯಂ ನಿಯಂತ್ರಣಕ್ಕೆ ವೈಜ್ಞಾನಿಕ ಕ್ರಮ ಅಗತ್ಯ

ತಾಲೂಕಿನ ಗಂಗರೇಕಾಲುವೆ ಗ್ರಾಮದಲ್ಲಿ ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ ಗಾಂಧಿ ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ಹಮ್ಮಿಕೊಂಡಿದ್ದ ಪಾರ್ಥೇನಿಯಂ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹೊಲದ ಬದು, ರಸ್ತೆ ಬದಿ ಹಾಗೂ ಖಾಲಿ ಜಾಗಗಳನ್ನು ಸ್ವಚ್ಛವಾಗಿಟ್ಟುಕೊಂಡು ಸೂಕ್ತ ಕಳೆ ನಿರ್ವಹಣಾ ಕ್ರಮಗಳನ್ನು ಅನುಸರಿಸುವ ಮೂಲಕ ಪಾರ್ಥೇನಿಯಂ ನಿಯಂತ್ರಣಕ್ಕೆ ಮುಂದಾಗಬೇಕು ಎಂದರು

ಮದುವೆಯಾಗುವುದಾಗಿ ನಂಬಿಸಿ ವಂಚನೆ ಆರೋಪ: ಕೆಎಸ್‌ಆರ್‌ಟಿಸಿ ಕಂಡಕ್ಟರ್ ವಿರುದ್ಧ ಮಹಿಳೆಯಿಂದ ದೂರು

ಕೆಎಸ್‌ಆರ್‌ಟಿಸಿ ಕಂಡಕ್ಟರ್ ವಿರುದ್ಧ ಮಹಿಳೆಯಿಂದ ದೂರು

ಚಿತ್ರದುರ್ಗ ಮೂಲದ ಕಾವೇರಿ ಬೆಂಗಳೂರಿನ ಆಸ್ಪತ್ರೆಯೊಂದರಲ್ಲಿ ದಾದಿಯಾಗಿ ಕೆಲಸ ಮಾಡು ತ್ತಿದ್ದು, ತರಬೇತಿಗಾಗಿ ಮೈಸೂರಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ಬಸ್‌ನಲ್ಲಿ ಬಾಗೇಪಲ್ಲಿ ಮೂಲದ ಕೆಎಸ್‌ಆರ್‌ ಟಿಸಿ ಕಂಡಕ್ಟರ್‌ ಶ್ರೀನಾಥ್ ಪರಿಚಯವಾಗಿದ್ದ. ಕಳೆದ ಒಂದು ವರ್ಷದಿಂದ ಮದುವೆ ಯಾಗುವುದಾಗಿ ನಂಬಿಸಿ ತನ್ನೊಂದಿಗೆ ಸಂಬಂಧ ಬೆಳೆಸಿದ್ದಲ್ಲದೆ, ಕಷ್ಟದಲ್ಲಿರುವುದಾಗಿ ಹೇಳಿ ಲಕ್ಷಾಂತರ ರೂಪಾಯಿ ಹಣ ಹಾಗೂ ಚಿನ್ನ ಪಡೆದಿದ್ದಾರೆ ಎಂದು ಕಾವೇರಿ ಆರೋಪಿಸಿದ್ದಾರೆ

ವಾಪಸಂದ್ರದಲ್ಲಿ ಶ್ರದ್ಧಾಭಕ್ತಿಯಿಂದ ಓಂ ಶಕ್ತಿ ಪೂರಂ ಗಂಜಿ ಮಹೋತ್ಸವ

ವಾಪಸಂದ್ರದಲ್ಲಿ ಶ್ರದ್ಧಾಭಕ್ತಿಯಿಂದ ಓಂ ಶಕ್ತಿ ಪೂರಂ ಗಂಜಿ ಮಹೋತ್ಸವ

ಚಂಡಿಕಾ ಹೋಮದಲ್ಲಿ ಸಹಸ್ರಾರು ಭಕ್ತರು ಪಾಲ್ಗೊಂಡರು. ಭಾನುವಾರ ಬೆಳಿಗ್ಗೆ ನೂರಾರು ಮಹಿಳೆಯರು ಗಂಜಿ ಮಡಿಕೆಗಳನ್ನು ಹೊತ್ತು ಮೆರವಣಿಗೆಯಲ್ಲಿ ಭಾಗವಹಿಸಿ ದರು. ಬಿಬಿ ರಸ್ತೆ, ಬಜಾರ್ ರಸ್ತೆ ಹಾಗೂ ಗಂಗಮ್ಮ ಗುಡಿ ರಸ್ತೆಯ ಮೂಲಕ ಸಾಗಿದ ಮೆರವಣಿಗೆಯಲ್ಲಿ ಭಕ್ತರು ದೇವಿಯ ನಾಮಸ್ಮರಣೆ, ಭಜನೆ ಹಾಗೂ ಧಾರ್ಮಿಕ ಆಚರಣೆಗಳ ಮೂಲಕ ಭಕ್ತಿಭಾವ ಮೆರೆದರು.

ಅಧಿಕಾರ ಇರಲಿ, ಇಲ್ಲದಿರಲಿ ಒಳ ಮೀಸಲಾತಿಯ ಪರ: ಮಾಜಿ ಸಿಎಂ ಸಿದ್ದರಾಮಯ್ಯ

ಅಧಿಕಾರ ಇರಲಿ, ಇಲ್ಲದಿರಲಿ ಒಳ ಮೀಸಲಾತಿಯ ಪರ: ಮಾಜಿ ಸಿಎಂ ಸಿದ್ದರಾಮಯ್ಯ

Former CM Siddaramaiah: ನಾನೀಗ ಸರ್ಕಾರದ ಮುಖ್ಯಸ್ಥನಲ್ಲ, ನನ್ನ ಬಳಿ ಅಧಿಕಾರವಿಲ್ಲ. ಆದರೆ ಒಳ ಮೀಸಲಾತಿಯ ಪರವಿರುವವನು, ಮೀಸಲಾತಿ ವ್ಯವಸ್ಥೆಯ ಪರ, ಸಾಮಾಜಿಕ ನ್ಯಾಯದ ಪರ ಇರುವವನು. ಈ ವಿಚಾರದಲ್ಲಿ ಹಿಂದೆಯೂ ರಾಜಿಯಾಗಿಲ್ಲ, ಮುಂದೆಯೂ ರಾಜಿಯಾಗಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

Chikkaballapur News: ಅತಿಕ್ರಮಣಕ್ಕೆ ಅವಕಾಶವಿಲ್ಲ ಎಂದ ಜಿಲ್ಲಾಡಳಿತ: ಆ.27ರಂದು ಸಾಗುವಳಿ ಭೂ ಪ್ರವೇಶ ಹೋರಾಟಕ್ಕೆ ರೈತ–ದಲಿತ ಸಂಘಟನೆಗಳ ಕರೆ

ಶಿಂಗಾಡಿಕದಿರೇನಹಳ್ಳಿ ಅರಣ್ಯ ಭೂಮಿ ವಿವಾದಕ್ಕೆ ಮತ್ತೆ ಕಾವು

ಶಿಂಗಾಡಿಕದಿರೇನಹಳ್ಳಿ ಗ್ರಾಮದ ಸರ್ವೆ ನಂ.67 ಕರ್ನಾಟಕ ಅರಣ್ಯ ಕಾಯ್ದೆ-1963ರ ಸೆಕ್ಷನ್-4ರಡಿ ಅರಣ್ಯ ಪ್ರದೇಶವಾಗಿದ್ದು, ಕಂದಾಯ ದಾಖಲೆಗಳ ಪಹಣಿಯಲ್ಲಿಯೂ ಅರಣ್ಯವೆಂದು ನಮೂದಾಗಿದೆ. ಅನುಮತಿಯಿಲ್ಲದೆ ಪ್ರದೇಶ ಪ್ರವೇಶಿಸುವುದು, ಸ್ವಾಧೀನಪಡಿಸಿಕೊಳ್ಳುವುದು ಅಥವಾ ಅತಿಕ್ರಮಿಸುವುದು ಕಾನೂನುಬಾಹಿರವಾಗಿದ್ದು, ನಿಯಮ ಉಲ್ಲಂಘಿಸಿದರೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಅರಣ್ಯ ಇಲಾಖೆ ಎಚ್ಚರಿಸಿದೆ.

7ನೇ ಅಂತಾರಾಷ್ಟ್ರೀಯ ಮಟ್ಟದ ಕರಾಟೆ ಕ್ರೀಡಾಕೂಟದಲ್ಲಿ ಚಿಕ್ಕಬಳ್ಳಾಪುರ ವಿದ್ಯಾರ್ಥಿಗಳ ಸಾಧನೆ

7ನೇ ಅಂತಾರಾಷ್ಟ್ರೀಯ ಮಟ್ಟದ ಕರಾಟೆ ಕ್ರೀಡಾಕೂಟ

ಶಿವಮೊಗ್ಗದಲ್ಲಿ ಆ.22 ಮತ್ತು 23ರಂದು ನಡೆದ 7ನೇ ಅಂತಾರಾಷ್ಟ್ರೀಯ ಮಟ್ಟದ ಕರಾಟೆ ಕ್ರೀಡಾಕೂಟ ದಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವಿದ್ಯಾರ್ಥಿಗಳು ಕಟಾ ಮತ್ತು ಕುಮಿಟೆ ವಿಭಾಗಗಳಲ್ಲಿ ಭಾಗವಹಿಸಿ ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನಗಳನ್ನು ಪಡೆದು ಜಿಲ್ಲೆಗೆ ಕೀರ್ತಿ ತಂದಿದ್ದಾರೆ.

ನಮ್ಮ ಆಸ್ಪತ್ರೆಗಳಲ್ಲಿ ಬಿಲ್ಲಿಂಗ್ ಕೌಂಟರ್‌ಗಳಿಲ್ಲ,  ಅನ್ನ, ಅಕ್ಷರ, ಆರೋಗ್ಯ ವಾಣಿಜ್ಯಕ್ಕೆ ಬಳಕೆಯಾಗದಿರಲಿ: ಸದ್ಗುರು ಶ್ರೀ ಮಧುಸೂದನ ಸಾಯಿ

ಕನ್ನಡಿಗರಂತಹ ಒಳ್ಳೆಯ ಜನರನ್ನು ಎಲ್ಲಿಯೂ ನೋಡಲಿಲ್ಲ: ಶ್ರೀ ಮಧುಸೂದನ ಸಾಯಿ

Sadguru Sri Madhusudan Sai: ನಮ್ಮ ಕೆಲಸ ಮಾತನಾಡಬೇಕೇ ಹೊರತು, ನಾವು ಮಾತನಾಡಬಾರದು ಎಂದು ಬಾಬಾ ಹೇಳಿಕೊಟ್ಟಿದ್ದರು. ಅದರಂತೆ ನಾವು ಕೆಲಸ ಮಾಡುತ್ತಾ ಸಾಗುತ್ತಿದ್ದೇವೆ. ನಮ್ಮ ಆಸ್ಪತ್ರೆಗಳಲ್ಲಿ ಬಿಲ್ಲಿಂಗ್ ಕೌಂಟರ್‌ಗಳು ಇಲ್ಲ. ದೇಶದಲ್ಲಿ ಅನ್ನ, ಅಕ್ಷರ ಮತ್ತು ಆರೋಗ್ಯ ಎಂದಿಗೂ ವಾಣಿಜ್ಯಕ್ಕೆ ಬಳಕೆಯಾಗಿರಲಿಲ್ಲ. ಆ ಕಾಲ ಮತ್ತೆ ಬರಬೇಕಿದೆ ಎಂದು ಒನ್‌ ವರ್ಲ್ಡ್‌ ಒನ್‌ ಫ್ಯಾಮಿಲಿ ಮಿಷನ್ ಸಂಸ್ಥಾಪಕರಾದ ಸದ್ಗುರು ಶ್ರೀ ಮಧುಸೂದನ ಸಾಯಿ ಹೇಳಿದ್ದಾರೆ.

ಯೋಗಿಯ ಸಮಾಧಿಸ್ಥಿತಿಯಲ್ಲಿ ಉಸಿರಾಟವಿಲ್ಲದೆಯೂ ಬದುಕಿರಬಹುದು: ರಾಘವೇಶ್ವರ ಭಾರತೀ ಶ್ರೀ

ಊಟವಿಲ್ಲದೆ ಬದುಕಬಹುದು, ಉಸಿರಿಲ್ಲದೆ ಸಾಧ್ಯವಿಲ್ಲ: ರಾಘವೇಶ್ವರ ಭಾರತೀ ಶ್ರೀ

Sri Raghaveshwara Bharathi Swamiji: ಸರಿಯಾದ ಉಸಿರಾಟವು ಮೂಲಾಧಾರ ಚಕ್ರದವರೆಗೆ ಸಂಚರಿಸಬೇಕು. ಉಸಿರಾಡುವಾಗ ಶ್ವಾಸಕೋಶದವರೆಗೆ ಗಾಳಿರೂಪದಲ್ಲಿ ಸಂಚರಿಸಿದರೆ, ಮುಂದೆ ಮೂಲಾಧಾರ ಚಕ್ರದವರೆಗೆ ಶ್ವಾಸವು ಚೈತನ್ಯದ ರೂಪದಲ್ಲಿ ಸಂಚರಿಸುತ್ತದೆ. ಉಸಿರಾಟದ ಗತಿಯು ಹಂಸದಂತೆ ಧಾವಂತ ಇಲ್ಲದೇ ಸರಾಗವಾಗಿ ಆದಾಗ ಸಮಾಧಾನವನ್ನು ಸಾಧಿಸಿಕೊಳ್ಳಲು ಸಾಧ್ಯ. ಸಮಾಧಾನದಿಂದ ಶರೀರ, ಮನಸ್ಸು, ಜೀವನಕ್ಕೆ ಅಪಾರವಾದ ಪ್ರಯೋಜನವನ್ನು ಪಡೆದುಕೊಳ್ಳಬಹುದು ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ ತಿಳಿಸಿದ್ದಾರೆ.

Hospet News: 'ನಾನು ಕರ್ನಾಟಕ ಆರಿಸಿಕೊಂಡಿಲ್ಲ, ಕನ್ನಡಾಂಬೆಯೇ ನನ್ನನ್ನು ಆರಿಸಿಕೊಂಡಿದ್ದಾರೆ': ಸದ್ಗುರು ಶ್ರೀ ಮಧುಸೂದನ ಸಾಯಿ ಪ್ರತಿಪಾದನೆ

ನಾನು ಕರ್ನಾಟಕ ಆರಿಸಿಕೊಂಡಿಲ್ಲ, ಕನ್ನಡಾಂಬೆಯೇ ನನ್ನನ್ನು ಆರಿಸಿಕೊಂಡಿದ್ದಾರೆ

ನಾನು ಭಗವಾನ್ ಸತ್ಯ ಸಾಯಿ ಬಾಬಾರವರ ಶಿಷ್ಯ. ಅವರ ಶಿಕ್ಷಣ ಸಂಸ್ಥೆಗಳಲ್ಲಿ ಓದಿ ಸೇವಾ ಚಟುವಟಿಕೆಗಳಿಗಾಗಿ ಅವರ ಮಾರ್ಗದರ್ಶನದ ನಿರೀಕ್ಷೆಯಲ್ಲಿದ್ದೆ. ಅವರ ಮಹಾಸಮಾಧಿಯ ನಂತರ ನನಗೆ ಆಧ್ಯಾತ್ಮಿಕ ಅನುಭವವಾಯಿತು. ಅದರಂತೆ ಅವರ ಸೂಚನೆಯಂತೆ ಕರ್ನಾಟಕದಲ್ಲಿ ಸೇವಾ ಚಟುವಟಿಕೆ ಆರಂಭಿಸಿದೆವು

ಅನ್ವೇಷಣಾ 2026ರಲ್ಲಿ 61 ಯುವ ಸಂಶೋಧಕರು 20 ಸ್ವತಂತ್ರ ಸಂಶೋಧನಾ ಯೋಜನೆಗಳ ಪ್ರದರ್ಶನ

ಅನ್ವೇಷಣಾ 2026ರಲ್ಲಿ ಸಂಶೋಧನಾ ಯೋಜನೆಗಳ ಪ್ರದರ್ಶನ

ಪ್ರಯೋಗದ ವಿದ್ಯಾರ್ಥಿ ಸಂಶೋಧನಾ ಕಾರ್ಯಕ್ರಮದ ಎರಡು ದಿನಗಳ ಸಮಾರೋಪವು ಕುತೂಹಲ, ವೈಜ್ಞಾನಿಕ ಅನ್ವೇಷಣೆ ಮತ್ತು ಮುಂದಿನ ಪೀಳಿಗೆಯ ಸಂಶೋಧಕರನ್ನು ಸಂಭ್ರಮಿಸಿತು. ಅನ್ವೇಷಣಾ 2026ರಲ್ಲಿ ಪ್ರಸ್ತುತಪಡಿಸಲಾದ 20 ಸಂಶೋಧನಾ ಯೋಜನೆಗಳಲ್ಲಿ ನಾಲ್ಕು ಯೋಜನೆಗಳು ಅತ್ಯುತ್ತಮ ಪ್ರದರ್ಶನ ನೀಡಿದ ಯೋಜನೆಗಳಾಗಿ ಹೊರಹೊಮ್ಮಿದವು.

ಬೆಂಗಳೂರಿನಲ್ಲಿ ಅದ್ದೂರಿಯಾಗಿ ನಡೆದ ಇಂಡಿಯಾ ಸ್ಟಾರ್ಟ್‌ ಅಪ್ ಸಪ್ತಾಹ 2026

ಅದ್ದೂರಿಯಾಗಿ ನಡೆದ ಇಂಡಿಯಾ ಸ್ಟಾರ್ಟ್‌ ಅಪ್ ಸಪ್ತಾಹ 2026

ಕೌಶಲ್ಯಾಭಿವೃದ್ಧಿ, ನೆಟ್‌ ವರ್ಕಿಂಗ್ ಮತ್ತು ಅನ್ವೇಷಣೆ ಎಂಬ ಆಶಯದೊಂದಿಗೆ ನಡೆದ ಈ ಕಾರ್ಯ ಕ್ರಮವು, ಕೇವಲ ಸಾಂಪ್ರದಾಯಿಕ ಉಪನ್ಯಾಸಗಳಿಗೆ ಸೀಮಿತವಾಗಿರದೆ ಸ್ಟಾರ್ಟ್‌ ಅಪ್ ಸಂಸ್ಥಾಪಕರು ಎದುರಿಸುತ್ತಿರುವ ಬಂಡವಾಳ ಹೂಡಿಕೆ, ಗ್ರಾಹಕರ ಸಂಪಾದನೆ, ನಾಯಕತ್ವ ನಿರ್ವಹಣೆ ಮತ್ತು ಜಾಗತಿಕ ವಿಸ್ತರಣೆಯಂತಹ ನೈಜ ಸವಾಲುಗಳ ಪರಿಹಾರದ ಕುರಿತು ಪ್ರಮುಖವಾಗಿ ಗಮನಹರಿಸಿತು.

ಬಂಧಿತ ಸರ್ಕಾರಿ ಅಧಿಕಾರಿ ಜೈಲಿನಲ್ಲಿರಬೇಕಾದ ಬದಲು ಗೆಳತಿಯೊಂದಿಗೆ ಆಸ್ಪತ್ರೆಯಲ್ಲಿ ಪತ್ತೆ: ನ್ಯಾಯಾಧೀಶರು ಗರಂ

ಬಂಧಿತ ಅಧಿಕಾರಿ ಗೆಳತಿಯೊಂದಿಗೆ ಆಸ್ಪತ್ರೆಯಲ್ಲಿ ಕಳ್ಳಾಟ

Government officer in hospital: ಕರ್ನಾಟಕ ಲೋಕಾಯುಕ್ತರಿಂದ ಬಂಧನಕ್ಕೊಳಗಾಗಿದ್ದ ಸರ್ಕಾರಿ ಅಧಿಕಾರಿಯೊಬ್ಬರಿಗೆ ಮಂಡ್ಯ ಜಿಲ್ಲೆಯ ಆಸ್ಪತ್ರೆಯೊಂದರಲ್ಲಿ ವಿಐಪಿ ಸೌಲಭ್ಯ ನೀಡಲಾಗುತ್ತಿರುವುದು ಪತ್ತೆಯಾಗಿದೆ. ಮಂಡ್ಯ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಸಿ. ಚಂದ್ರಶೇಖರ್ ಹಠಾತ್ ತಪಾಸಣೆ ನಡೆಸಿದಾಗ ಘಟನೆ ಬೆಳಕಿಗೆ ಬಂದಿದೆ.

ನೀವೂ ಬೆಂಗಳೂರಿನಲ್ಲಿ ಸಂಚಾರಿ ಪೊಲೀಸ್ ಆಗಬೇಕೆ? ಪರೀಕ್ಷೆ ಇಲ್ಲ, ಸಂದರ್ಶನ ಇಲ್ಲ, ಜಸ್ಟ್‌ ಹೆಸರು ನೋಂದಾಯಿಸಿದರೆ ಸಾಕು; ಏನಿದು ಹೊಸ ಅಭಿಯಾನ?

ಸಂಚಾರಿ ಪೊಲೀಸ್ ಆಗಬೇಕೆ? ಇನ್ಯಾಕೆ ತಡ ಈಗಲೇ ನೋಂದಾಯಿಸಿ!

Bengaluru Police Launch Cop for the Day: ಬೆಂಗಳೂರಿನಲ್ಲಿ ಸಂಚಾರಿ ಪೊಲೀಸರು ತಮ್ಮ ಕಾಪ್ ಫಾರ್ ದಿ ಡೇ (ಒಂದು ದಿನದ ಪೊಲೀಸ್) ಉಪಕ್ರಮವನ್ನು ಮರಳಿ ತಂದಿದ್ದಾರೆ. ಬೆಂಗಳೂರು ಸಂಚಾರ ಪೊಲೀಸರು ಎಕ್ಸ್‌ನಲ್ಲಿ ಈ ಉಪಕ್ರಮದ ಬಗ್ಗೆ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ನಗರದ ಸಂಚಾರವನ್ನು ನಿರ್ವಹಿಸುವಲ್ಲಿ ಎದುರಾಗುವ ಸವಾಲುಗಳನ್ನು ಅರ್ಥಮಾಡಿಕೊಳ್ಳಲು ಇದು ನೆರವಾಗುತ್ತದೆ.

ರಾಜ್ಯ ಸರ್ಕಾರದ ವಿರುದ್ಧ ಸಚಿವ ರಾಮಲಿಂಗಾರೆಡ್ಡಿ ಅಸಮಾಧಾನ; ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ಗೆ ಬರೆದ ಪತ್ರದಲ್ಲಿ ಏನಿದೆ?

ಪಾರ್ಕಿಂಗ್ ಶುಲ್ಕ ಪ್ರಸ್ತಾವನೆಗೆ ಸಚಿವ ರಾಮಲಿಂಗಾರೆಡ್ಡಿ ಅಸಮಾಧಾನ

CM DKS Proposes Parking Fee: ತಮ್ಮದೇ ಸರ್ಕಾರದ ಪ್ರಸ್ತಾವಿತ ಪಾರ್ಕಿಂಗ್ ನೀತಿಯ ಬಗ್ಗೆ, ವಿಶೇಷವಾಗಿ ವಾರ್ಷಿಕ ರಸ್ತೆಬದಿಯ ಪಾರ್ಕಿಂಗ್ ಶುಲ್ಕವನ್ನು ವಿಧಿಸುವ ಯೋಜನೆಯ ಬಗ್ಗೆ ಸಚಿವ ರಾಮಲಿಂಗಾರೆಡ್ಡಿ ಕಳವಳ ವ್ಯಕ್ತಪಡಿಸಿದ್ದಾರೆ. ಪ್ರಸ್ತಾವಿತ ವಾರ್ಷಿಕ ಶುಲ್ಕದಿಂದ ಮಧ್ಯಮ ವರ್ಗ ಮತ್ತು ಸಾಮಾನ್ಯ ಕುಟುಂಬಗಳ ಮೇಲೆ ಹೆಚ್ಚುವರಿ ಆರ್ಥಿಕ ಹೊರೆ ಬೀಳಬಹುದು ಎಂದು ಅವರು ಎಚ್ಚರಿಸಿದ್ದಾರೆ.

ಅಕ್ಕಿಯನ್ನು ಎಥೆನಾಲ್‌ ಉತ್ಪಾದಕರಿಗೆ ಶೇಕಡಾ 40ರಷ್ಟು ಕಡಿಮೆ ದರದಲ್ಲಿ ಮಾರಾಟ ಮಾಡುತಿದ್ಯಾ ಕೇಂದ್ರ? ಪ್ರಿಯಾಂಕ್‌ ಖರ್ಗೆ ಆರೋಪಿಸಿದ್ದೇಕೆ?

ಭಾರತದ ಎಥನಾಲ್‌ ಗಣಿತವೇ ಸರಿಯಾಗಿ ಹೊಂದಿಕೆಯಾಗುತ್ತಿಲ್ಲ: ಪ್ರಿಯಾಂಕ್‌ ಖರ್ಗೆ

Priyank Kharge: ಆಹಾರ ಭದ್ರತೆಗಾಗಿ ಮೀಸಲಿಟ್ಟಿರುವ ಧಾನ್ಯವನ್ನು ಎಥನಾಲ್‌ ಉತ್ಪಾದನೆಗೆ ಬಳಸುವ ನೀತಿಯ ಆರ್ಥಿಕ, ಸಾಮಾಜಿಕ ಮತ್ತು ಸಾರ್ವಜನಿಕ ಹಿತಾಸಕ್ತಿಯ ಪರಿಣಾಮಗಳ ಕುರಿತು ಕೇಂದ್ರ ಸರ್ಕಾರ ಪಾರದರ್ಶಕವಾಗಿ ಲೆಕ್ಕ ನೀಡಬೇಕು ಎಂದು ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಆಗ್ರಹಿಸಿದ್ದಾರೆ.

Yuva Samvada; ಯುಪಿಎಸ್‌ಸಿ ಆಕಾಂಕ್ಷಿಗಳಿಗೆ ಕಠಿಣ ಪರಿಶ್ರಮ ಅತ್ಯಗತ್ಯ: ಡಿಸಿ ಶುಭ ಕಲ್ಯಾಣ್

ಯುಪಿಎಸ್‌ಸಿ ಆಕಾಂಕ್ಷಿಗಳಿಗೆ ಕಠಿಣ ಪರಿಶ್ರಮ ಅತ್ಯಗತ್ಯ: ಡಿಸಿ ಶುಭ ಕಲ್ಯಾಣ್

Tumkur News: ತುಮಕೂರು ವಿಶ್ವವಿದ್ಯಾನಿಲಯದ ವಿಶ್ವೇಶ್ವರಯ್ಯ ಸಭಾಂಗಣದಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ತುಮಕೂರು ವಿವಿ ಕಲಾ ಕಾಲೇಜು, ಮಹಿಳಾ ಅಧ್ಯಯನ ಕೇಂದ್ರ ಹಾಗೂ ಪ್ರೆಸ್ ಕ್ಲಬ್ ವತಿಯಿಂದ ಜಿಲ್ಲಾಧಿಕಾರಿಗಳೊಂದಿಗೆ ಯುವ ಸಂವಾದ ಕಾರ್ಯಕ್ರಮವನ್ನು ತುಮಕೂರು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಉದ್ಘಾಟಿಸಿ, ಮಾತನಾಡಿದರು.

ಈರುಳ್ಳಿ ಬೆಲೆ ಏರಿಕೆಯಿಂದ ತತ್ತರಿಸಿದ ಗ್ರಾಹಕರ ಕಣ್ಣೋರೆಸಲು ಧಾವಿಸಿದ ಕೇಂದ್ರ ಸರ್ಕಾರ; 5 ಪ್ರಮುಖ ನಗರಗಳಿಗೆ 800 ಮೆಟ್ರಿಕ್ ಟನ್ ಪೂರೈಕೆ

5 ನಗರಗಳಿಗೆ 800 ಮೆಟ್ರಿಕ್ ಟನ್ ಈರುಳ್ಳಿ ಪೂರೈಕೆ: ಪ್ರಲ್ಹಾದ್‌ ಜೋಶಿ

Pralhad Joshi: ಮಾರುಕಟ್ಟೆಯಲ್ಲಿ ಈರುಳ್ಳಿ ಲಭ್ಯತೆಯನ್ನು ಹೆಚ್ಚಿಸಲು ಮತ್ತು ಬೆಲೆ ಸ್ಥಿರತೆ ಕಾಯ್ದುಕೊಳ್ಳಲು ಕೇಂದ್ರ ಸರ್ಕಾರ ನಿರಂತರವಾಗಿ ಸಮಯೋಚಿತ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ್‌ ಜೋಶಿ ತಿಳಿಸಿದ್ದಾರೆ.

ಈ ಬಾರಿಯ ಗಣೇಶ ಚತುರ್ಥಿಗೆ ಪಿಓಪಿ ಗಣಪತಿ ಮೂರ್ತಿಗಳ ಬದಲು ಪರಿಸರ ಸ್ನೇಹಿ ಮಣ್ಣಿನ ಮೂರ್ತಿ ಪ್ರತಿಷ್ಠಾಪಿಸಿ

ಮಣ್ಣಿನ ಗಣಪತಿ ಮೂರ್ತಿಗಳ ಪ್ರತಿಷ್ಠಾಪನೆಗೆ ಜಾಗೃತಿ ಮೂಡಲಿ

Ganesha Chaturthi 2026: ಈ ಬಾರಿಯ ಗಣೇಶ ಚತುರ್ಥಿಯಂದು ಮಣ್ಣಿನ ಗಣಪತಿಗೆ ಆದ್ಯತೆ ನೀಡುವ ಸಂಕಲ್ಪವನ್ನು ಸಾರ್ವಜನಿಕರು ಮಾಡಬೇಕಾಗಿದೆ. ಸರ್ಕಾರವೂ ಪಿಓಪಿ ಗಣಪತಿ ಮೂರ್ತಿಗಳ ನಿಯಂತ್ರಣಕ್ಕೆ ಸಂಬಂಧಿಸಿದ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಿ, ಪರಿಸರ ಸ್ನೇಹಿ ಗಣೇಶೋತ್ಸವಕ್ಕೆ ಉತ್ತೇಜನ ನೀಡಬೇಕಾಗಿದೆ.

‘'ಮದುವೆ ಎಂದರೆ ಪತ್ನಿಯ ಮೇಲಿನ ಅಧಿಕಾರವಲ್ಲʼ’: ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು

‘'ಮದುವೆ ಎಂದರೆ ಪತ್ನಿಯ ಮೇಲಿನ ಅಧಿಕಾರವಲ್ಲʼ’: ಕರ್ನಾಟಕ ಹೈಕೋರ್ಟ್

Karnataka High Court: ದಾಂಪತ್ಯ ಜೀವನದಲ್ಲಿ ಮಹಿಳೆಯ ಸ್ವಾತಂತ್ರ್ಯ, ಹಕ್ಕುಗಳು ಹಾಗೂ ಘನತೆಯನ್ನು ಎತ್ತಿಹಿಡಿಯುವ ಅತ್ಯಂತ ಪ್ರಮುಖ ತೀರ್ಪೊಂದನ್ನು ಕರ್ನಾಟಕ ಹೈಕೋರ್ಟ್ ನೀಡಿದೆ. ಮದುವೆಯ ನಂತರವೂ ಪತ್ನಿಯು ತನ್ನ ಸ್ವಂತ ನಿರ್ಧಾರಗಳನ್ನು ತೆಗೆದುಕೊಳ್ಳುವ ಸ್ವಾತಂತ್ರ‍್ಯವನ್ನು ಹೊಂದಿರುತ್ತಾಳೆ ಎಂದು ನ್ಯಾಯಪೀಠ ಸ್ಪಷ್ಟಪಡಿಸಿದೆ.

ಹತ್ತಿರದಿಂದ ಶೂಟ್, ಮುರಿದ ಪಕ್ಕೆಲುಬು...ಹನೂರು ಶೂಟೌಟ್‌ ವೇಳೆ ಹತರಾದ ತಮಿಳುನಾಡು ಬೇಟೆಗಾರರ ಮರಣೋತ್ತರ ಪರಿಕ್ಷೆಯ ವರದಿಯಲ್ಲಿ ಸ್ಪೋಟಕ ಮಾಹಿತಿ ಬಹಿರಂಗ

ಬೇಟೆಗಾರರ ಹತ್ಯೆ ಪ್ರಕರಣ: ಶವಪರೀಕ್ಷೆ ವರದಿ ಹೇಳುವುದೇನು?

hanuru shootout: ಚಾಮರಾಜನಗರ ಜಿಲ್ಲೆಯಲ್ಲಿ ಆಗಸ್ಟ್ 15ರಂದು ನಡೆದಿರುವ ತಮಿಳುನಾಡಿನ ಬೇಟೆಗಾರರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಇದೀಗ ಶವ ಪರೀಕ್ಷೆ ವರದಿ ಬಹಿರಂಗವಾಗಿದೆ. ಇದರಲ್ಲಿ ಹತ್ತಿರದಿಂದ ಶೂಟ್ ಮಾಡಿದ್ದು, ಪಕ್ಕೆಲುಬು ಮುರಿದಿರುವುದು ದೃಢಪಟ್ಟಿದೆ. ಈ ಕುರಿತು ರಾಜ್ಯ ಸರ್ಕಾರವು ವಿಷಯಗಳನ್ನು ಮುಚ್ಚಿಟ್ಟಿದೆ ಎಂಬುದಾಗಿ ಬಿಜೆಪಿ ಆರೋಪಿಸಿದೆ.

Onam Saree Fashion 2026: ಓಣಂ ಸೀರೆ ಸೆಲೆಕ್ಷನ್‌ಗೆ ಇಲ್ಲಿದೆ ಸಿಂಪಲ್ ಐಡಿಯಾ

ಓಣಂ ಸೀರೆ ಸೆಲೆಕ್ಷನ್‌ಗೆ ಇಲ್ಲಿದೆ ಸಿಂಪಲ್ ಐಡಿಯಾ

Onam Saree Fashion 2026: ಓಣಂ ಹಬ್ಬದಂದು ಸೀರೆ ಉಡುವಿರಾದಲ್ಲಿ ಯಾವ ರೀತಿಯ ಸೀರೆಗಳನ್ನು ಸೆಲೆಕ್ಟ್ ಮಾಡಬೇಕು? ಹೇಗಿರಬೇಕು? ಈ ಕುರಿತಂತೆ ಸೀರೆ ಎಕ್ಸ್‌ಪರ್ಟ್ಸ್ ಒಂದಿಷ್ಟು ಐಡಿಯಾ ನೀಡಿದ್ದಾರೆ. ಈ ಕುರಿತ ಡಿಟೇಲ್ಸ್‌ ಇಲ್ಲಿದೆ.

ವಾಹನ ಸವಾರರ ಗಮನಕ್ಕೆ: ಈದ್ ಮಿಲಾದ್ ಆಚರಣೆ ಪ್ರಯುಕ್ತ ನಾಳೆ ಬೆಂಗಳೂರಿನಲ್ಲಿ ಸಂಚಾರ ವ್ಯವಸ್ಥೆಯಲ್ಲಿ ಬದಲಾವಣೆ; ಪರ್ಯಾಯ ಮಾರ್ಗದ ವಿವರ ಇಲ್ಲಿದೆ

ನಾಳೆ ಬೆಂಗಳೂರಿನಲ್ಲಿ ಸಂಚಾರ ವ್ಯವಸ್ಥೆಯಲ್ಲಿ ಬದಲಾವಣೆ

Eid-e-Milad Celebrations: ದೇಶಾದ್ಯಂತ ಬುಧವಾರ (ಅಗಸ್ಟ್‌ 26) ಈದ್ ಮಿಲಾದ್ ಹಬ್ಬವನ್ನು ಮುಸ್ಲಿಮರು ಆಚರಿಸಲಿದ್ದು, ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಹಲವು ಭಾಗಗಳ ಸಂಚಾರ ವ್ಯವಸ್ಥೆಯಲ್ಲಿ ಬದಲಾವಣೆ ಮಾಡಲಾಗಿದೆ. ವಾಹನ ಸವಾರರು ಪರ್ಯಾಯ ಮಾರ್ಗ ಬಳಸುವಂತೆ ಟ್ರಾಫಿಕ್‌ ಪೊಲೀಸರು ಸೂಚಿಸಿದ್ದಾರೆ.

Loading...